2ನೇ ರಾಜ್ಯಭಾಷೆಯಾಗಿ ತುಳು ಘೋಷಣೆಗೆ ಯತ್ನ

ಸುದ್ದಿಗಳು News

Posted by vidyamaana on 2024-07-23 07:07:38 |

Share: | | | | |


2ನೇ ರಾಜ್ಯಭಾಷೆಯಾಗಿ ತುಳು ಘೋಷಣೆಗೆ ಯತ್ನ

ಪುತ್ತೂರು: ರಾಜ್ಯದಲ್ಲಿ ತುಳು ಭಾಷೆಯನ್ನು ೨ನೇ ಅಧಿಕೃತ ರಾಜ್ಯಭಾಷೆಯಾಗಿ ಘೋಷಿಸುವ ನಿಟ್ಟಿನಲ್ಲಿ ಪ್ರಯತ್ನ ಮಾಡಲಾಗುತ್ತಿದೆ. ಶೀಘ್ರದಲ್ಲೇ ಈ ಪ್ರಯತ್ನ ಕೈಗೂಡುವ ವಿಶ್ವಾಸವಿದೆ ಎಂದು ಶಾಸಕ ಅಶೋಕ್ ರೈ ಹೇಳಿದರು.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪುತ್ತೂರು ತಾಲೂಕು ಘಟಕದ ನೇತೃತ್ವದಲ್ಲಿ, ಕನ್ನಡ ಸಾಹಿತ್ಯ ಪರಿಷತ್ ಪುತ್ತೂರು ತಾಲೂಕು ಘಟಕ ಮತ್ತು ರೋಟರಿ ಕ್ಲಬ್ ಪುತ್ತೂರು ಯುವ ಇವರ ಸಹಯೋಗದಲ್ಲಿ ಪುತ್ತೂರಿನ ರೋಟರಿ ಮನೀಷಾ ಸಭಾಂಗಣದಲ್ಲಿ ಶನಿವಾರ ನಡೆದ ಪತ್ರಿಕಾ ದಿನಾಚರಣೆ - ಉಪನ್ಯಾಸ- ಸನ್ಮಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಪಶ್ಚಿಮ ಬಂಗಾಳ ಸೇರಿದ ಅನೇಕ ರಾಜ್ಯಗಳಲ್ಲಿ ೨ನೇ ರಾಜ್ಯಭಾಷೆ ಘೋಷಣೆ ಸಂದರ್ಭ ಯಾವೆಲ್ಲ ಮಾನದಂಡ ಅನುಸರಿಸಲಾಗಿದೆ ಎಂಬುದರ ಅಧ್ಯಯನ ನಡೆಸಿ ವರದಿ ತಯಾರಿಸಲಾಗಿದೆ. ಇದನ್ನು ಸರಕಾರ ಪರಿಶೀಲಿಸಿ ಶೀಘ್ರದಲ್ಲೇ ತುಳು ಭಾಷೆಯನ್ನು ೨ನೇ ಅಧಿಕೃತ ರಾಜ್ಯಭಾಷೆಯನ್ನಾಗಿ ಘೋಷಣೆ ಮಾಡುವ ಸಂಬAಧ ಸಂಪುಟದಲ್ಲಿ ಚರ್ಚಿಸಿ ನಿರ್ಣಯ ಕೈಗೊಂಡ ಮೇಲೆ ಗೆಜೆಟ್ ನೋಟಿಫೀಕೇಶನ್ ಹೊರಡಿಸಲಾಗುವುದು. ಅದೇ ರೀತಿ ತುಳು ಭಾಷೆಯನ್ನು ಸಂವಿಧಾನದ ೮ನೇ ಪರಿಚ್ಛೇದದಲ್ಲಿ ಸೇರಿಸುವ ವಿಚಾರದಲ್ಲೂ ಕೇಂದ್ರದ ಮೇಲೆ ರಾಜ್ಯದಿಂದ ಒತ್ತಡ ತರುವ ಕೆಲಸ ಮಾಡಲಾಗುತ್ತದೆ. ಪುತ್ತೂರಿನಲ್ಲಿ ಸರಕಾರಿ ಮೆಡಿಕಲ್ ಕಾಲೇಜು ಸ್ಥಾಪನೆಗೆ ಸರಕಾರದ ಮೇಲೆ ಒತ್ತಡ ಹೇರುತ್ತಿದ್ದೇನೆ. ಮುಂದಿನ ಬಜೆಟ್‌ನಲ್ಲಿ ಘೋಷಣೆಯ ಆಶಾವಾದ ಇದೆ ಎಂದವರು ಹೇಳಿದರು.

ಸೋಷಿಯಲ್ ಮೀಡಿಯಾದ ಅಬ್ಬರದ ನಡುವೆಯೇ ಜನ ಪತ್ರಿಕೆ ಓದುವುದು ಕಡಿಮೆ ಮಾಡಿಲ್ಲ. ಪತ್ರಿಕಾ ರಂಗದಲ್ಲಿ ಪ್ರಾಮಾಣಿಕತೆ ಬೇಕು. ಅದಿರುವ ಕಾರಣವೇ ದಕ್ಷಿಣಕನ್ನಡದ ಪತ್ರಕರ್ತರು ಎಲ್ಲಿ ಹೋದರೂ ಛಾಪು ಮೂಡಿಸುತ್ತಾರೆ ಎಂದು ಹೇಳಿದರು.

ಮಾಜಿ ಶಾಸಕ ಸಂಜೀವ ಮಠಂದೂರು ಮಾತನಾಡಿ, ದೇಶದಲ್ಲಿ ತುರ್ತು ಪರಿಸ್ಥಿತಿಯ ಸಂದರ್ಭ ಅಭಿವ್ಯಕ್ತಿ ಸ್ವಾತಂತ್ರö್ಯ ಮತ್ತು ಪತ್ರಿಕಾ ಸ್ವಾತಂತ್ರö್ಯ ದಮನ ಮಾಡಲಾಗಿತ್ತು. ಆಗ ಧೀಮಂತ ಪತ್ರಿಕೆಗಳು ಭೂಗತರಾಗಿದ್ದುಕೊಂಡೇ ಪತ್ರಿಕೆ ನಡೆಸಿ ಜನಜಾಗೃತಿ ಮೂಡಿಸಿದ್ದರು. ದೇಶ ಕಟ್ಟುವಲ್ಲಿ ಪತ್ರಿಕೆಗಳ ಪಾತ್ರ ಬಹಳಷ್ಟು ದೊಡ್ಡದು. ಸೋಷಿಯಲ್ ಮೀಡಿಯಾದಿಂದ ಉಪಯೋಗವಿದೆಯಾದರೂ ಅಷ್ಟೇ ಕೆಟ್ಟದೂ ಇದೆ ಎಂದರು.


ಪುತ್ತೂರು ಸಹಾಯಕ ಆಯುಕ್ತರಾದ ಜುಬಿನ್ ಮೊಹಾಪಾತ್ರ ಉಪನ್ಯಾಸ ನೀಡಿದರು. ಮಾಧ್ಯಮ ವರದಿ ಇವತ್ತು ಪ್ರತಿಯೊಬ್ಬರ ಕೈಗೂ ಬಂದಿದೆ. ಜಗತ್ತಿನಲ್ಲಿ ಜೀವರಕ್ಷಕ ಔಷಧಿ ಮೊದಲ ಸ್ಥಾನದಲ್ಲಿದ್ದರೆ, ೨ನೇ ಸ್ಥಾನದಲ್ಲಿ ಮುದ್ರಣ ಮಾಧ್ಯಮಗಳಿವೆ. ಇಷ್ಟಾದರೂ ಮಾಧ್ಯಮಗಳು ಕೆಲವೊಂದು ಅಪವಾದಗಳನ್ನು ಕೂಡ ಎದುರಿಸುತ್ತಿವೆ. ಆರೋಪಿಯೊಬ್ಬನನ್ನು ನ್ಯಾಯಾಲಯ ವಿಚಾರಣೆ ನಡೆಸುವ ಮೊದಲೇ ಮಾಧ್ಯಮಗಳು ವಿಚಾರಣೆ ನಡೆಸಿ ತಪ್ಪಿತಸ್ಥನೆಂದು ಘೋಷಿಸುವುದು ಆತಂಕಕಾರಿ ಬೆಳವಣಿಗೆ. ಅದೇ ರೀತಿ ಪೀತ ಪತ್ರಿಕೋದ್ಯಮದ ಬಗ್ಗೆಯೂ ಜಾಗೃತಿ ಅಗತ್ಯ ಎಂದರು. ಪ್ರತಿಯೊಬ್ಬ ಪತ್ರಕರ್ತರಿಗೂ ವೃತ್ತಿಪರತೆ ಮತ್ತು ನೈತಿಕತೆ ಅಗತ್ಯವಾಗಿ ಬೇಕು ಎಂದವರು ನುಡಿದರು. ಮಾಹಿತಿ ಎಂಬುದು ನೀರಿನ ಥರ. ಕಡಿಮೆಯಾದರೂ ಕಷ್ಟ, ಜಾಸ್ತಿಯಾದರೂ ಕಷ್ಟ. ಇದನ್ನು ಪತ್ರಕರ್ತರು ಅರ್ಥಮಾಡಿಕೊಳ್ಳಬೇಕು ಎಂದು ಕಿವಿ ಮಾತು ಹೇಳಿದರು.


ಇದೇ ಸಂದರ್ಭದಲ್ಲಿ ಶೇಟ್ ಎಲೆಕ್ಟ್ರಾನಿಕ್ಸ್ ಸಂಸ್ಥೆ ಕೊಡುಗೆಯಾಗಿ ನೀಡಿದ ಸಿಸಿ ಕ್ಯಾಮೆರಾವನ್ನು ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಅವರು ಪತ್ರಕರ್ತರಿಗೆ ಹಸ್ತಾಂತರ ಮಾಡಿದರು.


ಪತ್ರಿಕಾ ವಿತರಕರಾದ ವಿಶ್ವನಾಥ್ ಪುತ್ತೂರು ಅವರನ್ನು ಶಾಸಕರು ಪತ್ರಕರ್ತರ ಸಂಘದ ಪರವಾಗಿ ಸನ್ಮಾನಿಸಿದರು. ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಉತ್ತಮ ಸಾಧನೆ ಮಾಡಿದ ಪತ್ರಕರ್ತರ ಸಂಘದ ಸದಸ್ಯರ ಮಕ್ಕಳಾದ ಹಷೇಂದ್ರ ಪ್ರಸಾದ್, ಮಹೇಶ್ ಪ್ರಸಾದ್, ದೀಪ್ತಿ ಭಟ್, ಎ.ಯು. ಅವನೀಶ್ ಕುಮಾರ್, ಸಮ್ಯಕ್, ಸಿಹಾ ಶಮ್ರಾ, ಪುಣ್ಯಶ್ರೀ ಪಿ. ಅವರನ್ನು ಸಂಘದ ಪರವಾಗಿ ಮಾಜಿ ಶಾಸಕ ಸಂಜೀವ ಮಠಂದೂರು ಸನ್ಮಾನಿಸಿದರು. 

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪುತ್ತೂರು ತಾಲೂಕು ಘಟಕದ ಅಧ್ಯಕ್ಷರಾದ ಸಿದ್ಧಿಕ್ ನೀರಾಜೆ, ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಅಧ್ಯಕ್ಷರಾದ ಪುತ್ತೂರು ಉಮೇಶ್ ನಾಯಕ್,ಮಾಜಿ ಶಾಸಕಿ ಶಕುಂತಲಾ ಟಿ ಶೆಟ್ಟಿ,ರೋಟರಿ ಕ್ಲಬ್ ಪುತ್ತೂರು ಯುವ ಅಧ್ಯಕ್ಷೆ ಅಶ್ವನಿಕೃಷ್ಣ, ಎಸೋಸಿಯೇಶನ್ ಆಫ್ ಸಿವಿಲ್ ಎಂಜಿನಿರ‍್ಸ್ (ಎಸಿಸಿಇ-ಐ) ಪುತ್ತೂರು ಸೆಂಟರ್ ಅಧ್ಯಕ್ಷರಾದ ಪ್ರಮೋದ್ ಕುಮಾರ್ ಕೆ.ಕೆ.ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಶ್ರೀನಿವಾಸ ನಾಯಕ್ ಇಂದಾಜೆ, ಸಂಘದ ಕಾರ್ಯಕಾರಿ ಸಮಿತಿ ಸದಸ್ಯ ಸುಧಾಕರ ಸುವರ್ಣ, ಕಾರ್ಯಕಾರಿ ಸಮಿತಿ ಸದಸ್ಯ ಮೇಘಾ ಪಾಲೆತ್ತಾಡಿ ಮತ್ತು ರೋಟರಿ ಯುವ ಸಂಸ್ಥೆಯ ಕಾರ್ಯದರ್ಶಿ ವಚನಾ ಜಯರಾಂ,ಪ್ರಧಾನ ಕಾರ್ಯದರ್ಶಿ ಶಶಿಧರ ರೈ ಕುತ್ಯಾಳ, ಕೋಶಾಧಿಕಾರಿ ಸಂಶುದ್ದೀನ್ ಸಂಪ್ಯ,ಕಾರ್ಯಕಾರಿ ಸಮಿತಿ ಸದಸ್ಯರಾದ ಐ. ಬಿ. ಸಂದೀಪ್,ಕುಮಾರ್,ಪ್ರಸಾದ್ ಬಲ್ನಾಡ್, ಸಂಘದ ಕಾರ್ಯದರ್ಶಿ ಅಜಿತ್ ಕುಮಾರ್, ಸದಸ್ಯರಾದ ಅನಿಶ್ ಕುಮಾರ್ ಮರೀಲ್,ಶರತ್, ರಾಜೇಶ್ ಪಟ್ಟೆ, ಪಾರೂಕ್ ಶೇಕ್ , ಮತ್ತಿತ್ತರರು ಉಪಸ್ಥಿತರಿದ್ದರು.

 Share: | | | | |


ತುಮಕೂರಿನಲ್ಲಿ ಕಾರಿಗೆ ಬೆಂಕಿ ಮೂವರ ಕೊಲೆ ಪ್ರಕರಣ - ಭರ್ಜರಿ ಚಿನ್ನದ ಆಮಿಷ ತೋರಿಸಿದ್ದ ಆರೋಪಿ

Posted by Vidyamaana on 2024-03-25 19:42:27 |

Share: | | | | |


ತುಮಕೂರಿನಲ್ಲಿ ಕಾರಿಗೆ ಬೆಂಕಿ ಮೂವರ ಕೊಲೆ ಪ್ರಕರಣ - ಭರ್ಜರಿ ಚಿನ್ನದ ಆಮಿಷ ತೋರಿಸಿದ್ದ ಆರೋಪಿ


ಬೆಳ್ತಂಗಡಿ : ತುಮಕೂರಿನಲ್ಲಿ  ಕಾರಿಗೆ ಬೆಂಕಿ ಹಚ್ಚಿ ಮೂವರನ್ನು ಕೊಲೆಗೈದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಸಂಪೂರ್ಣ ಮಾಹಿತಿ ಲಭ್ಯವಾಗಿದ್ದು. ಪ್ರಕರಣದ ಇಂಚಿಂಚೂ ಮಾಹಿತಿಯನ್ನು ವಿದ್ಯಾಮಾನ ನ್ಯೂಸ್ ನಿಮ್ಮ ಮುಂದೆ ಇಡುತ್ತಿದೆ.

ಈಗಾಗಲೇ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರಾ ಪೊಲೀಸರು ಒಟ್ಟು ಎರಡು ಜನರನ್ನು ಬಂಧಿಸಿದ್ದು ಉಳಿದ ಆರು ಜನರಿಗಾಗಿ ಬಲೆ ಬೀಸಿದ್ದಾರೆ. ಈ ಬಗ್ಗೆ ತುಮಕೂರು ಎಸ್ಪಿ ಅಶೋಕ್ ಕೆವಿ ಮಾ.25 ರಂದು ತುಮಕೂರು ಎಸ್ಪಿ ಕಚೇರಿಯಲ್ಲಿ ಕರೆದು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ.


ಪ್ರಕರಣ ಬೆಳಕಿಗೆ ಬಂದದ್ದು ಹೇಗೆ?

22-03-2024 ರಂದು ಮಧ್ಯಾಹ್ನ ಸುಮಾರು 1.15 ಗಂಟೆಗೆ ಕೋರಾ ಪೊಲೀಸ್ ಠಾಣಾವ್ಯಾಪ್ತಿಯ ಕುಚ್ಚಂಗಿ ಕೆರೆಯಲ್ಲಿ ಒಂದು ಕಾರಿನಲ್ಲಿ 3 ಮನುಷ್ಯರ ದೇಹಗಳು ಸುಟ್ಟ ಸ್ಥಿತಿಯಲ್ಲಿರುವ ಬಗ್ಗೆ ಬಂದ ಮಾಹಿತಿಯ ಮೇರೆಗೆ ಕೋರಾ ಪೊಲೀಸ್ ಠಾಣೆಯ ಪಿಎಸ್‌ಐ ರವರು ಸ್ಥಳಕ್ಕೆ ಹೋಗಿ ಪರಿಶೀಲಿಸಿದಾಗ  ಒಂದು ಮಾರುತಿ ಸುಜುಕಿ S-PRESSO ಕಾರಿನ ಹಿಂಭಾಗದ ಸೀಟಿನಲ್ಲಿ ಒಂದು ಮತ್ತು ಡಿಕ್ಕಿಯಲ್ಲಿ ಎರಡು ದೇಹಗಳು ಸುಟ್ಟು ಕರಕಲಾಗಿದ್ದು, ಯಾರೋ ದುಷ್ಕರ್ಮಿಗಳು ಯಾರೋ 3 ಜನರನ್ನು ಯಾವುದೋ ಕಾರಣಕ್ಕೆ ಕೊಲೆ ಮಾಡಿ ಸಾಕ್ಷ್ಯ ನಾಶಪಡಿಸುವ ಉದ್ದೇಶದಿಂದ ಕಾರಿನಲ್ಲಿ ಹಾಕಿ ಪೆಟ್ರೋಲ್ ಅಥವಾ ಬೇರಾವುದೋ ಇಂಧನ ಸುರಿದು ಬೆಂಕಿ ಹಚ್ಚಿ ಸುಟ್ಟಿರೋದು ಕಂಡು ಬಂದಿತ್ತು.

ಅದರಂತೆ ಕೋರಾ ಪೊಲೀಸ್ ಪ್ರಕರಣ ದಾಖಲಾಗಿತ್ತು.ನಂತರ ತುಮಕೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಅಶೋಕ್ ಕೆ.ವಿ, ಐ.ಪಿ.ಎಸ್ ರವರ ಹಾಗೂ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳಾದ ವಿ ಮರಿಯಪ್ಪ ಮತ್ತು ಬಿ.ಎಸ್ಅಬ್ದುಲ್ ಖಾದರ್ ಕೆ.ಎಸ್.ಪಿ.ಎಸ್ ರವರ ಸೂಚನೆ ಮತ್ತು ಮಾರ್ಗದರ್ಶನದಂತೆ ತುಮಕೂರಿನ ಪೊಲೀಸರ ತಂಡ ವಿಚಾರಣೆ ನಡೆಸಿದಾಗ ಕರಾಳ ದಂಧೆಯು ಬೆಳಕಿಗೆ ಬಂದಿದೆ.



ಇಬ್ಬರು ಆರೋಪಿಗಳ ಬಂಧನ, ಆರು ಜನರಿಗಾಗಿ ಶೋಧ

ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಪ್ರಮುಖ ಆರೋಪಿ ತುಮಕೂರಿನ

ಶಿರಾ ಗೇಟ್‌ನಲ್ಲಿ ವಾಸವಿರುವ 1) ಪಾತರಾಜು @ ರಾಜು @ ರಾಜಗುರು @ಕುಮಾರ್,  ಇನ್ನೊರ್ವ ಆರೋಪಿಸತ್ಯಮಂಗಲದ ವಾಸಿ ಗಂಗರಾಜು ಬಿನ್ ಹನುಮಂತರಾಯಪ್ಪ ಎಂಬಾತನನ್ನು ಬಂಧಿಸಿದ್ದಾರೆ. ಇನ್ನು ಆರು ಜನ ತಲೆಮರೆಸಿಕೊಂಡಿದ್ದು ಅವರಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ. 

ಮೃತರಿಗೂ ಪ್ರಮುಖ ಆರೋಪಿಗೂ ಹೇಗೆ ಪರಿಚಯ?

ಅಂದ್ಹಾಗೆ ಮೃತರಾದ ಬೆಳ್ತಂಗಡಿಯ ಬೆಳ್ತಂಗಡಿಯ  ಇಶಾಕ್ ಸೀಮಮ್,ಶಾಹುಲ್ ಹಮೀದ್, ಸಿದ್ದಿಕ್ ಇವರಿಗೆ ಪಾತರಾಜನ ಜೊತೆ ಸೇರಿ ಸುಮಾರು 6-7 ತಿಂಗಳಿನಿಂದ ಸಂಪರ್ಕವಿತ್ತು. ಇವರೆಲ್ಲಾ ನಿಧಿ ಹುಡುಕುವ ಕೆಲಸ ಮಾಡುತ್ತಿದ್ದು, ಪಾತರಾಜನಿಗೆ ಸುಮಾರು 6 ಲಕ್ಷ ರೂ ಹಣ ನೀಡಿದ್ದರು. ಹಣ ನೀಡಿ 6 ತಿಂಗಳು ಕಳೆದರೂ ನಿಧಿ ಹುಡುಕಿ ಕೊಟ್ಟಿಲ್ಲವಾದ್ದರಿಂದ ಹಣ ವಾಪಸ್ ಕೊಡುವಂತೆ ಇಲ್ಲವಾದರೆ ಪೊಲೀಸರಿಗೆ ದೂರು ನೀಡುವುದಾಗಿ ಮೃತರು ಪಾತರಾಜನ ಹಿಂದೆ ಬಿದ್ದಿದ್ದರಿಂದ ಅವರನ್ನು ಹೇಗಾದರೂ ಮಾಡಿ ಕೊಲೆ ಮಾಡಬೇಕೆಂದು ಪಾತರಾಜು ತನಗೆ ಪರಿಚಯದ ಸತ್ಯಮಂಗಲದ ವಾಸಿ ಗಂಗರಾಜು ಮತ್ತು ಅವನ 6 ಜನ  ಸಹಚರರಾದ ಪುಟ್ಟಸ್ವಾಮಯ್ಯನ ಪಾಳ್ಯದ ಮಧುಸೂಧನ್,  ನವೀನ್, ವೆಂಕಟೇಶಪುರದ ಕೃಷ್ಣ, ಹೊಂಬಯ್ಯನಪಾಳ್ಯದ ಗಣೇಶ, ನಾಗಣ್ಣನಪಾಳ್ಯದ ಕಿರಣ್, ಕಾಳಿದಾಸನಗರದ ಸೈಮನ್, ಸೇರಿಸಿಕೊಂಡು ಮೂರು ಜನರನ್ನು ಕೊಲೆ ಮಾಡು ಪ್ಲ್ಯಾನ್ ಮಾಡಿ ಕೊಲೈಗೈದಿದ್ದರು.

ಕೊಲೆಗಾರರಿಗೂ 3 ಕೆ ಜಿ ಚಿನ್ನ ಕೊಡೋದಾಗಿ ಹೇಳಿದ್ದ ಪ್ರಕರಣದ ಮಾಸ್ಟರ್ ಮೈಂಡ್ ಪಾತರಾಜು

ಇನ್ನು ಕೊಲೆ ಮಾಡುವ ಪ್ಲ್ಯಾನ್ ವೇಳೆ ಪ್ರಕರಣದ ಮಾಸ್ಟರ್ ಮೈಂಡ್ ಪಾತರಾಜು ಕೊಲೆಗಾರರಿಗೂ 3 ಕೆ.ಜಿ ಚಿನ್ನ ಕೊಡೋದಾಹಿ ಆಸೆ ತೋರಿಸಿದಂತೆ. ಇನ್ನು ಪ್ಲ್ಯಾನ್ ನಂತೆ ದಿನಾಂಕ: 22.03.2024 ರಂದು ಬೆಳಗಿನ ಜಾವ 12 ಗಂಟೆ ಸುಮಾರಿಗೆ ಮೃತರನ್ನು ಚಿನ್ನ ನೀಡುವುದಾಗಿ ಬೀರನಕಲ್ಲು ಬೆಟ್ಟದ ಸಮೀಪ ಕರೆಸಿಕೊಂಡುಅವರುಗಳನ್ನು ಮಚ್ಚು, ಲಾಂಗ್ ಮತ್ತು ಡ್ಯಾಗರ್‌ನಿಂದ ಹಲ್ಲೆ ಮಾಡಿ ಕೊಲೆ ಮಾಡಿ ಅವರದೇ ಕಾರಿನಲ್ಲಿ ಕುಚ್ಚಂಗಿ ಕೆರೆಗೆ ತೆಗೆದುಕೊಂಡು ಹೋಗಿ ಸಾಕ್ಷ್ಯ ನಾಶಪಡಿಸುವ ಉದ್ದೇಶದಿಂದ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಸುಟ್ಟು ಹಾಕಿದ್ದಾರೆ. ತನಿಖೆ ನಡೆಸಿದ ಪೊಲೀಸರು ಇಬ್ಬರನ್ನು ಬಂಧಿಸಿದ್ದು ಉಳಿದವರಿಗಾಗಿ ಶೋಧ ನಡೆಸುತ್ತಿದ್ದಾರೆ.


ಪರಾರಿಯಾದ ಆರು ಜನ ಆರೋಪಿಗಳು

ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಬ್ಬರನ್ನು ಅರೆಸ್ಟ್ ಮಾಡಲಾಗಿದ್ದು ಇನ್ನುಳಿದಂತೆ ಪುಟ್ಟಸ್ವಾಮಯ್ಯನ ಪಾಳ್ಯದ ಮಧುಸೂದನ್(24) , ಸಂತೇಪೇಟೆಯ ನವೀನ್(24) ,ವೆಂಕಟೇಶಪುರದ ಕೃಷ್ಣ(22), ಹೊಂಬಯ್ಯನಪಾಳ್ಯದ ಗಣೇಶ್(19), ನಾಗಣ್ಣನಪಾಳ್ಯದ ಕಿರಣ್(23) ,ಕಾಳಿದಾಸನಗರದ ಸೈಮನ್(18) ಪರಾರಿಯಾಗಿದ್ದು ಇವರಿಗಾಗಿ ಹುಡುಕಾಟ ನಡೆಸಲಾಗುತ್ತಿದೆ ..

ಮುಂಬೈ ಬಂಟರ ಸಂಘದಲ್ಲಿ ದ.ಕ. ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರಿಗೆ ಗೌರವ

Posted by Vidyamaana on 2024-04-11 07:34:41 |

Share: | | | | |


ಮುಂಬೈ ಬಂಟರ ಸಂಘದಲ್ಲಿ ದ.ಕ. ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರಿಗೆ ಗೌರವ

ಮುಂಬೈ ಕುರ್ಲಾ ದಲ್ಲಿರುವ ಬಂಟರ ಸಂಘದ ಕೇಂದ್ರ ಕಚೇರಿಗೆ ದಕ್ಷಿಣ ಕನ್ನಡ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್.‌ ಪೂಜಾರಿ ಭೇಟಿ ನೀಡಿದರು.

ಬಂಟರ ಸಂಘದ ಅಧ್ಯಕ್ಷ ಪ್ರವೀಣ್ ಬಿ ಶೆಟ್ಟಿ ಅವರು ಪದ್ಮರಾಜ್ ಆರ್. ಪೂಜಾರಿ ಅವರನ್ನು ಗೌರವಿಸಿ, ಹಾರೈಸಿದರು.

ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ 68 ನೇ ಕನ್ನಡ ರಾಜ್ಯೋತ್ಸವ

Posted by Vidyamaana on 2023-11-02 08:23:17 |

Share: | | | | |


ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ 68 ನೇ ಕನ್ನಡ ರಾಜ್ಯೋತ್ಸವ

ಪುತ್ತೂರು: ಕರ್ನಾಟಕ ಮರು ನಾಮಕರಣಗೊಂಡು 50ನೇ ವರ್ಷ ಪೂರ್ಣಗೊಂಡ ಹಿನ್ನಲೆಯಲ್ಲಿ ಪುತ್ತೂರಿನಲ್ಲಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಕನ್ನಡ ಭುವನೇಶ್ವರಿ ಮೆರವಣಿಗೆಯೊಂದಿಗೆ ಕನ್ನಡ ರಾಜ್ಯೋತ್ಸವವನ್ನು ವೈಭವದಿಂದ ಬುಧವಾರ ಆಚರಿಸಲಾಯಿತು.

ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ ಎಂಬ ಧೈಯ ವಾಕ್ಯದೊಂದಿಗೆ ನಡೆದ ಕನ್ನಡ ಭುವನೇಶ್ವರಿ ಮೆರವಣಿಗೆಗೆ ಶಾಸಕ ಅಶೋಕ್ ಕುಮಾರ್ ರೈ ದರ್ಬೆ ವೃತ್ತದ ಬಳಿ ಕನ್ನಡ ಭುವನೇಶ್ವರಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು ಉಪಸ್ಥಿತರಿದ್ದರು. ಬಳಿಕ ಮೆರವಣಿಗೆ ಮುಖ್ಯರಸ್ತೆಯಲ್ಲಿ ಸಾಗಿ ಕೊರ್ಟ್‌ ರಸ್ತೆ ಮೂಲಕ ಪುರಭವನಕ್ಕೆ ತೆರಳಿತು. ಕಿಲ್ಲೆ ಮೈದಾನದಲ್ಲಿರುವ ಮಂಗಲ್ ಪಾಂಡೆ ಚೌಕಿಯಲ್ಲಿ ಸಹಾಯಕ ಕಮೀಷನರ್ ಗಿರೀಶ್ ನಂದನ್ ರಾಷ್ಟ್ರ ಧ್ವಜಾರೋಹಣ ಮಾಡಿದರು. ಶಾಸಕ ಅಶೋಕ್ ಕುಮಾರ್ ರೈ ಕನ್ನಡ ಧ್ವಜಾರೋಹಣ ಮಾಡಿದರು.


ಬಳಿಕ ಪುರಭವನದಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ 10 ಮಂದಿ ವಿವಿಧ ಕ್ಷೇತ್ರದ ಸಾಧಕರಾದ ಹಿರಿಯ ಪ್ರಸೂತಿ ತಜ್ಞ ಡಾ.ಸುಬ್ರಾಯ ಭಟ್ (ವೈದ್ಯಕೀಯ), ಎ.ಪಿ.ನಾರಾಯಣ ಮರಿಕೆ (ಕೃಷಿ), ನಿರ್ಮಲಾ ಸುರತ್ಕಲ್ (ಸಾಹಿತ್ಯ), ನಾರಾಯಣ ಕೆ. (ಶಿಕ್ಷಣ), ದಯಾನಂದ ರೈ ಕೋರ್ಮಂಡ (ಕ್ರೀಡೆ), ಸುಂದರ ರೈ ಮಂದಾರ (ರಂಗಭೂಮಿ), ರೆ.ವಿಜಯ ಹಾರ್ವಿನ್ (ಶಿಕ್ಷಣ ಸಮನ್ವಯ), ಡಾ.ಅಜಯ್ (ಸಮಾಜ ಸೇವೆ), ನಾರಾಯಣ ಕುಂಬ್ರ (ಸಾಹಿತ್ಯ ಸಂಘಟನೆ), ಸಿದ್ದಿಕ್ ನಿರಾಜೆ (ಪತ್ರಿಕೋದ್ಯಮ) ಅವರನ್ನು ಕನ್ನಡ ಪೇಟ ತೊಡಿಸಿ, ಫಲಪುಷ್ಪ, ಸ್ಮರಣಿಕೆ ನೀಡಿ ಸನ್ಮಾನಿಸಲಾಯಿತು.ಬಳಿಕ ಮಾತನಾಡಿದ ಶಾಸಕ ಅಶೋಕ್ ಕುಮಾರ್ ರೈ, ಕನ್ನಡಕ್ಕಾಗಿ ನೀಡಿದ ಪೂರ್ವಜರ ಕೊಡುಗೆ ಅಪಾರವಾಗಿದ್ದು, ಅದನ್ನು ನೆನಪಿಸುವುದು ನಮ್ಮೆಲ್ಲರ ಕರ್ತವ್ಯ. ಕನ್ನಡ ರಾಜ್ಯೋತ್ಸವದ ಮೂಲಕ ಕನ್ನಡ ಭಾಷೆಯ ಅಭಿಮಾನ, ಪ್ರೀತಿಯನ್ನು ಮುಂದಿನ ಪೀಳಿಗೆಗೆ ತಲುಪಿಸುವ ಅಗತ್ಯವಿದೆ ಎಂದರು.ವೇದಿಕೆಯಲ್ಲಿ ಪುತ್ತೂರು ಸಹಾಯಕ ಆಯುಕ್ತ ಗಿರೀಶ್ ನಂದನ್, ತಹಶೀಲ್ದಾರ್ ಶಿವಶಂಕರ ಜೆ., ನಗರಸಭೆ ಪೌರಾಯುಕ್ತ ಮಧು ಎಸ್.ಮನೋಹರ್, ಉಪಸ್ಥಿತರಿದ್ದರು.


ಪವಿತ್ರಾ ರೂಪೇಶ್, ಸುಚಿತ್ರಾ ಹೊಳ್ಳ ಮತ್ತು ಬಳಗದವರು ಐದು ಕನ್ನಡದ ಹಾಡುಗಳನ್ನು ಪ್ರಸ್ತುತಪಡಿಸಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಎಸ್.ಆರ್. ಸ್ವಾಗತಿಸಿದರು. ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಪುತ್ತೂರು ಉಮೇಶ್ ನಾಯಕ್ ವಂದಿಸಿದರು. ಶಿಕ್ಷಕ ಬಾಲಕೃಷ್ಣ ಪೊರ್ದಾಳ್ ಕಾರ್ಯಕ್ರಮ ನಿರೂಪಿಸಿದರು.

ನೇಹಾ ತಂದೆಗೆ ಕಾಲ್ ಮಾಡಿದ ಸಿಎಂ -ನಾವು ನಿಮ್ಮ ಜೊತೆ ಇರ್ತೀವಿ ಎಂದು ಧೈರ್ಯ ತುಂಬಿದ ಸಿದ್ದರಾಮಯ್ಯ

Posted by Vidyamaana on 2024-04-24 03:39:44 |

Share: | | | | |


ನೇಹಾ ತಂದೆಗೆ ಕಾಲ್ ಮಾಡಿದ ಸಿಎಂ -ನಾವು ನಿಮ್ಮ ಜೊತೆ ಇರ್ತೀವಿ ಎಂದು ಧೈರ್ಯ ತುಂಬಿದ ಸಿದ್ದರಾಮಯ್ಯ

ಹುಬ್ಬಳ್ಳಿ , ಏ.23: ಇತ್ತೀಚೆಗೆ ಕೊಲೆಯಾದ ಕಾಲೇಜು ಯುವತಿ ನೇಹಾ ಅವರ ತಂದೆ ನಿರಂಜನ ಹಿರೇಮಠ ಜೊತೆ ಸಿಎಂ ಸಿದ್ದರಾಮಯ್ಯ ಫೋನ್ ಮೂಲಕ ಮಾತನಾಡಿ, "ವೆರಿ ಸ್ವಾರಿ. ನಾವು ನಿಮ್ಮ ಜೊತೆ ಇರ್ತೀವಿ" ಎಂದು ಧೈರ್ಯ ತುಂಬಿದ್ದಾರೆ. ಸಚಿವ ಎಚ್.ಕೆ.ಪಾಟೀಲ್ ಅವರು ನಿರಂಜನ ಹಿರೇಮಠ ಅವರ ಮನೆಗೆ ಭೇಟಿ ನೀಡಿದ ವೇಳೆ ಸಿಎಂ ಫೋನ್‌ ಮೂಲಕ ಮಾತನಾಡಿದ್ದಾರೆ.

ಬಳಿಕ ಪ್ರತಿಕ್ರಿಯಿಸಿದ ನಿರಂಜನ ಹಿರೇಮಠ, "ಪ್ರಕರಣವನ್ನು ಸಿಐಡಿಗೆ ಹಸ್ತಾಂತರಿಸಿದ್ದಕ್ಕೆ ಸಮಾಧಾನವಿದೆ. ಸ್ಪೆಷಲ್ ಕೋರ್ಟ್ ವಿಚಾರಕ್ಕೂ ಸಮಾಧಾನ ತರಿಸಿದೆ. ಸಿಎಂಗೆ ಧನ್ಯವಾದ" ಎಂದರು.

ಸಚಿವ ಎಚ್.ಕೆ.ಪಾಟೀಲ ಪ್ರತಿಕ್ರಿಯಿಸಿ, ನ್ಯಾಯದಾನ ವಿಳಂಬವಾಗಬಾರದೆಂದು ವಿಶೇಷ ನ್ಯಾಯಾಲಯ ಸ್ಥಾಪನೆಗೆ ತೀರ್ಮಾನಿಸಲಾಗಿದೆ. ಇವತ್ತು ಉಚ್ಛ ನ್ಯಾಯಾಲಯಕ್ಕೆ ವಿಶೇಷ ನ್ಯಾಯಾಲಯ ಸ್ಥಾಪನೆ ಪತ್ರ ತಲುಪುತ್ತದೆ. ತಪ್ಪಿತಸ್ಥರಿಗೆ ಸೂಕ್ತ ಶಿಕ್ಷೆ ಆಗಬೇಕಿದೆ. ಅನಿವಾರ್ಯ ಕಾರಣದಿಂದ ಸಿಎಂ ಇಲ್ಲಿಗೆ ಬರಲು ಆಗಿಲ್ಲ. ಹೀಗಾಗಿ, ನಿರಂಜನ್ ಹಿರೇಮಠ ಅವರೊಂದಿಗೆ ಫೋನ್‌ನಲ್ಲಿ ಮಾತನಾಡಿ ಸಾಂತ್ವನ ಹೇಳಿದ್ದಾರೆ ಎಂದು ತಿಳಿಸಿದರು.

ತಪ್ಪು ಮಾಹಿತಿಯಿಂದ ಮಾತನಾಡಿದ್ದೇನೆ ;

"ನನ್ನ ಮಗಳ ಕೊಲೆ ಪ್ರಕರಣದಲ್ಲಿ ಸರ್ಕಾರ ತಕ್ಷಣ ಸ್ಪಂದಿಸಿದೆ. ಮಾಹಿತಿ ಕೊರತೆಯಿಂದ ಸರ್ಕಾರದ ವಿರುದ್ಧ ಹೇಳಿಕೆ ಕೊಟ್ಟಿದ್ದೇವೆ. ಪೊಲೀಸ್ ಆಯುಕ್ತರ ವಿರುದ್ಧವೂ ಮಾತನಾಡಿದ್ದೇನೆ. ದುಃಖದಲ್ಲಿ ಮಾಹಿತಿ ಕೊರತೆಯಿಂದ ಮಾತನಾಡಿದ್ದೆ" ಎಂದು ತಂದೆ ನಿರಂಜನ ಹಿರೇಮಠ ಇದೇ ಸಂದರ್ಭದಲ್ಲಿ ಹೇಳಿದರು.

ರಾಜಕಾರಣಿ ಕೇವಲ ರಸ್ತೆ ಮತ್ತು ಅಭಿವೃದ್ದಿಗೆ ಸೀಮಿತವಾಗಬಾರದು - ಹೀಗ್ಯಾಕಂದ್ರು ಶಾಸಕ ಅಶೋಕ್ ರೈ

Posted by Vidyamaana on 2024-05-16 17:07:40 |

Share: | | | | |


ರಾಜಕಾರಣಿ ಕೇವಲ ರಸ್ತೆ ಮತ್ತು ಅಭಿವೃದ್ದಿಗೆ ಸೀಮಿತವಾಗಬಾರದು - ಹೀಗ್ಯಾಕಂದ್ರು ಶಾಸಕ ಅಶೋಕ್ ರೈ

ಪುತ್ತೂರು: ರಾಜಕಾರಣಿ ಕೇವಲ ರಸ್ತೆ ಮತ್ತು ಅಭಿವೃದ್ದಿಗೆ ಸೀಮಿತವಾಗಬಾರದು. ಅವೆಲ್ಲ ಯಾರು ಬರಲಿ ಬಾರದೆ ಇರಲಿ ತನ್ನಿಂದ ತಾನೆ ಆಗುತ್ತಾ ಇರುತ್ತದೆ. ಆದರೆ ನಮ್ಮ ದೇಶದ ಭವಿಷ್ಯ ವಿದ್ಯಾರ್ಥಿಗಳ ಕೈಯಲ್ಲಿದೆ. ಅವರ ಭವಿಷ್ಯಕ್ಕೆ ನಾವು ದಾರಿಯಾಗಬೇಕು. ಈ ನಿಟ್ಟಿನಲ್ಲಿ ಎಸ್‌ಎಸ್‌ಎಲ್‌ಸಿಯಲ್ಲಿ ಅತ್ಯಂತ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಗೌರವಿಸುತ್ತಿದ್ದೇನೆ ಎಂದು ಶಾಸಕ ಅಶೋಕ್‌ ಕುಮಾ‌ರ್ ರೈ ಹೇಳಿದರು.

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ತಾಲೂಕಿನ 6 ಮಂದಿ ವಿದ್ಯಾರ್ಥಿಗಳನ್ನು ಮೇ.16ರಂದು ಪುತ್ತೂರು ರೈ ಎಸ್ಟೇಟ್ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ಕಚೇರಿಯಲ್ಲಿ ಅವರು ಸನ್ಮಾನಿಸಿ ಗೌರವಿಸಿದರು. ರಾಜಕಾರಣಿ ಕೇವಲ ರಸ್ತೆ ಮಾತ್ರ ಮಾಡುವುದಲ್ಲ. ಇತರ ಸಾಮಾಜಿಕ ಕ್ಷೇತ್ರದಲ್ಲೂ ಕೆಲಸ ಮಾಡಬೇಕು. ಇಂತಹ ಸಂದರ್ಭ ನಮ್ಮ ಪುತ್ತೂರಿನ ಕೀರ್ತಿಗೆ ಭಾಜನರಾದ ವಿದ್ಯಾರ್ಥಿಗಳನ್ನು ಗೌರವಿಸುವುದು ಅವರಿಗೆ ಅವರ ಮುಂದಿನ ಶೈಕ್ಷಣಿಕ ಜೀವನದಲ್ಲಿ ಉತ್ತೇಜನ ನೀಡುವುದು ನನ್ನ ಕರ್ತವ್ಯ. ವಿದ್ಯಾರ್ಥಿಗಳು ನನ್ನನ್ನು ಯಾವತ್ತು ಬೇಕಾದರೂ ಭೇಟಿ ಮಾಡಬಹುದು. ಪ್ರತಿ ಸೋಮವಾರ ನಾನು ಕಚೇರಿಯಲ್ಲಿರುತ್ತೇನೆ. ನನ್ನಿಂದ ವೈಯುಕ್ತಿಕ ಸಹಾಯ ಮಾಡಬಲ್ಲೆ. ಅದರಲ್ಲೂ ಬೇಸಿಕ್ ಸಮಸ್ಯೆ ಇದ್ದವರಿಗೆ ಕಂಡಿತಾ ಸಹಾಯ ಮಾಡುತ್ತೇನೆ. ಇವತ್ತು ವಿದ್ಯಾರ್ಥಿಗಳ ಅಂಕ ಗಳಿಸುವಿಕೆಯಲ್ಲಿ ಪೋಷಕರ ಮತ್ತು ಶಿಕ್ಷಕರ ಪಾತ್ರವೂ ಇದೆ. ಅವರಿಗೂ ಅಭಿನಂದನೆ ಸಲ್ಲಿಸುತ್ತೇನೆ. ನನ್ನ ವಿಧಾನಸಭಾ ಕ್ಷೇತ್ರದಲ್ಲೂ ಉತ್ತಮ ಅಂಕ ಪಡೆದವರಿದ್ದಾರೆ ಎಂಬುದು ನನಗೂ ಹೆಮ್ಮೆಯಾಗಿದೆ ಎಂದರು.

ಆ.11ಕ್ಕೆ ಪುತ್ತೂರು ಬಿಲ್ಲವ ಮಹಿಳಾ ವೇದಿಕೆ ನೇತೃತ್ವದಲ್ಲಿ ಆಟಿದ ನೆಂಪುದ ಕೂಟ - ಸನ್ಮಾನ

Posted by Vidyamaana on 2024-08-10 22:18:07 |

Share: | | | | |


ಆ.11ಕ್ಕೆ  ಪುತ್ತೂರು ಬಿಲ್ಲವ ಮಹಿಳಾ ವೇದಿಕೆ ನೇತೃತ್ವದಲ್ಲಿ ಆಟಿದ ನೆಂಪುದ ಕೂಟ - ಸನ್ಮಾನ

ಪುತ್ತೂರು: ಸಾಧಕರನ್ನು ಸನ್ಮಾನಿಸುವಾಗ ಆ ಸನ್ಮಾನ ಅವರಿಗೆ ಮಾತ್ರವಲ್ಲ ಅವರ ಸಾಧನೆಗೆ ಕಾರಣಕರ್ತರಾದ ಇಡಿ ಕುಟುಂಬಕ್ಕೆ ಸಲ್ಲಬೇಕೆಂಬ ನಿಟ್ಟಿನಲ್ಲಿ ಸಾಧಕರ ಜೊತೆ ಅವರ ಕುಟುಂಬವನ್ನೂ ಸನ್ಮಾನಿಸುವ ವಿಶೇಷ ಕಾರ್ಯಕ್ರಮ ಪುತ್ತೂರು ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘದ ಮೂಲಕ ಬಿಲ್ಲವ ಮಹಿಳಾ ವೇದಿಕೆ ನೇತೃತ್ವದಲ್ಲಿ ಆ.11ರಂದು ಬಪ್ಪಳಿಗೆ ಬ್ರಹ್ಮಶ್ರೀ ನಾರಾಯಣ ಗುರು ಸಭಾಭವನದಲ್ಲಿ ನಡೆಯುವ ಆಟಿದ ನೆಂಪುದ ಕೂಟ ಕಾರ್ಯಕ್ರಮದಲ್ಲಿ ನಡೆಯಲಿದೆ ಕಾರ್ಯಕ್ರಮದಲ್ಲಿ ಕುಟುಂಬವನ್ನೇ ಸನ್ಮಾನಿಸುವ ಚಿಂತನೆಗೆ ಪ್ರಥಮ ಹೆಜ್ಜೆ ಬಿಲ್ಲವ ಸಂಘ ಇಟ್ಟಿದೆ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘದ ಅಧ್ಯಕ್ಷ ಸತೀಶ್ ಕುಮಾರ್ ಕೆಡೆಂಜಿ ಅವರು ಹೇಳಿದರು.

ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು ಆ.11ಕ್ಕೆ ವಿಶೇಷ ರೀತಿಯಲ್ಲಿ ಆಟಿದ ನೆಂಪುದ ಕೂಟ ಎಂಬ ಕಾರ್ಯಕ್ರಮದಲ್ಲಿ ಬೆಳಗ್ಗಿನಿಂದ ಮಧ್ಯಾಹ್ನದ ತನಕ ಕಾರ್ಯಕ್ರಮ ನಡೆಯಲಿದೆ. ಬ್ರಹ್ಮಶ್ರೀ ನಾರಾಯಣಗುರುಗಳು ವಿದ್ಯೆಗೆ ಆದ್ಯತೆ ನೀಡಿದಂತೆ ಸಂಘದ ವಿದ್ಯಾರ್ಥಿವೇತನ ಪಡೆದು ಉನ್ನತ ಉದ್ಯೋಗ ಪಡೆದದವರನ್ನು ಕುಟುಂಬ ಸಮೇತ ಸನ್ಮಾನಿಸಲಾಗುವುದು.

Recent News


Leave a Comment: