ಫೇಕ್ ನ್ಯೂಸ್ ಗಳ ಪತ್ತೆಗೆ, ನಿಯಂತ್ರಣಕ್ಕೆ, ಎಲ್ಲಾ ಜಿಲ್ಲೆಗಳಲ್ಲಿ Fact check ಘಟಕ ಆರಂಭ: ಸಿಎಂ ಸಿದ್ದರಾಮಯ್ಯ

ಸುದ್ದಿಗಳು News

Posted by vidyamaana on 2024-07-01 19:16:06 |

Share: | | | | |


ಫೇಕ್ ನ್ಯೂಸ್ ಗಳ ಪತ್ತೆಗೆ, ನಿಯಂತ್ರಣಕ್ಕೆ, ಎಲ್ಲಾ ಜಿಲ್ಲೆಗಳಲ್ಲಿ Fact check ಘಟಕ ಆರಂಭ: ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಫೇಕ್ ನ್ಯೂಸ್ ಗಳ ಬಗ್ಗೆ ಇಡೀ ಸಮಾಜ ಬಹಳ ಎಚ್ಚರದಿಂದ ಇರಬೇಕು. ಪತ್ರಿಕಾ, ಮಾಧ್ಯಮ ಸಂಘಟನೆಗಳು ಈ ಬಗ್ಗೆ ಗಂಭೀರವಾಗಿ ಯೋಚಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು.

ಬೆಂಗಳೂರು ಪ್ರೆಸ್ ಕ್ಲಬ್, ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ವಾರ್ತಾ ಮತ್ತು ಪ್ರಚಾರ ಇಲಾಖೆ ಸಂಯುಕ್ತಾಶ್ರಯದಲ್ಲಿ ನಡೆದ ಪತ್ರಿಕಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಸಾಮಾಜಿಕ‌ ಮಾಧ್ಯಮಗಳ ಮೂಲಕ ಹರಡುವ ಸುಳ್ಳು ಸುದ್ದಿಗಳು ಸಮಾಜಕ್ಕೆ ಅನಾಹುತಕಾರಿ. ಸುಳ್ಳು ಸುದ್ದಿಗಳ ಮೇಲೆ ತೀವ್ರ ನಿಗಾ ಇಡಲು ಪ್ರತೀ ಜಿಲ್ಲೆಗಳಲ್ಲೂ ವಿಶೇಷ ಘಟಕ ಸ್ಥಾಪಿಸಲಾಗಿದ್ದು ಸುಳ್ಳು ಸುದ್ದಿಗಳನ್ನು ಪತ್ತೆ ಹಚ್ಚಲಾಗುತ್ತಿದೆ ಎಂದರು.

ಫೇಕ್ ನ್ಯೂಸ್ ಗಳ ಪತ್ತೆಗೆ, ನಿಯಂತ್ರಣಕ್ಕೆ, ಈ ಬಗ್ಗೆ ಕ್ರಮಕ್ಕಾಗಿ ಎಲ್ಲಾ ಜಿಲ್ಲೆಗಳಲ್ಲಿ Fact check ಘಟಕಗಳನ್ನು ಕ್ರಿಯಾಶೀಲಗೊಳಿಸಲಾಗಿದೆ ಎಂದರು

ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಸರ್ಕಾರದ ಕಾರ್ಯದರ್ಶಿ ಕೆ.ವಿ.ತ್ರಿಲೋಕಚಂದ್ರ, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್, ವಾರ್ತಾ ಇಲಾಖೆ ಆಯುಕ್ತರಾದ ಸೂರಳ್ಕರ್ ವಿಕಾಸ್ ಕಿಶೋರ್, ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಶಿವಾನಂದ ತಗಡೂರು, ವಿಧಾನ ಪರಿಷತ್ ಸದಸ್ಯರಾದ ಯು.ಬಿ.ವೆಂಕಟೇಶ್, ಪ್ರೆಸ್ ಕ್ಲಬ್ ಅಧ್ಯಕ್ಷರಾದ ಆರ್.ಶ್ರೀಧರ್, ಪ್ರಧಾನ ಕಾರ್ಯದರ್ಶಿ ಮಲ್ಲಪ್ಪ ಅವರು ಉಪಸ್ಥಿತರಿದ್ದರು.

ಹಿರಿಯ ಪತ್ರಕರ್ತರಾದ ಕೃಷ್ಣಪ್ರಸಾದ್ ಅವರು ಪ್ರಧಾನ ಭಾಷಣದಲ್ಲಿ ಪತ್ರಿಕೋದ್ಯಮದ ಈ ಕ್ಷಣದ ಸ್ಥಿತಿಗತಿಯನ್ನು ವಿವರಿಸಿದರು.

 Share: | | | | |


ಪ್ರೀತಿಸಿದ ಹುಡುಗಿಗೆ ಬೇರೊಬ್ಬನ ಜೊತೆ ಅಕ್ರಮ ಸಂಬಂಧ - ನೊಂದು ಯುವಕ ಆತ್ಮಹತ್ಯೆ

Posted by Vidyamaana on 2024-02-09 07:27:56 |

Share: | | | | |


ಪ್ರೀತಿಸಿದ ಹುಡುಗಿಗೆ ಬೇರೊಬ್ಬನ ಜೊತೆ ಅಕ್ರಮ ಸಂಬಂಧ - ನೊಂದು ಯುವಕ ಆತ್ಮಹತ್ಯೆ

ಬೆಂಗಳೂರು :ಪ್ರೀತಿಸಿದ ಯುವಕನೋರ್ವ ತಾನು ಪ್ರೀತಿಸಿದ ಹುಡುಗಿಗೆ ಬೇರೊಬ್ಬನ ಜೊತೆ ಅಕ್ರಮ ಸಂಬಂಧವಿದೆ ಎಂದು ತಿಳಿದು ನೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆಯೊಂದು ನಡೆದಿದೆ. ಈ ಘಟನೆ ಕುರಿತು ಮೃತನ ಕುಟುಂಬಸ್ಥರು ಪರಪ್ಪನ ಅಗ್ರಹಾರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲು ಮಾಡಿದ್ದಾರೆ.


ಅನ್ಬರಾಸನ್‌ ಎಂಬಾತನೇ ಆತ್ಮಹತ್ಯೆ ಮಾಡಿಕೊಂಡ ಯುವಕ. ವಿದ್ಯಾ ಎಂಬಾಕೆಗೆ ಈ ಹಿಂದೆ ಮದುವೆಯಾಗಿದ್ದು, ವಿಚ್ಛೇದನ ಪಡೆದಿದ್ದು. ನಂತರ ಅನ್ಬರಾಸನ್‌ ಜೊತೆ ಪ್ರೀತಿಯಾಗಿತ್ತು. ಇಬ್ಬರೂ ಆರು ತಿಂಗಳಿನಿಂದ ಲಿವಿಂಗ್‌ ರಿಲೇಷನ್‌ಶಿಪ್‌ನಲ್ಲಿದ್ದರು. ಇಬ್ಬರೂ ತಾವು ಪತಿ ಪತ್ನಿ ಎಂದು ಹೇಳಿ ಚಿಕ್ಕನಾಗಮಂಗಲದ ಬಾಡಿಗೆ ಮನೆಯಲ್ಲಿದ್ದರು.ವಿದ್ಯಾ ಐಟಿ ಕಂಪನಿ ಉದ್ಯೋಗಿ. ಅನ್ಬರಾಸನ್‌ ಪ್ಲಿಪ್‌ ಕಾರ್ಟ್‌ನಲ್ಲಿ ಮ್ಯಾನೇಜರ್‌ ಆಗಿ ಕೆಲಸ ಮಾಡುತ್ತಿದ್ದ. ಆದರೆ ವಿದ್ಯಾ ಅನ್ಬರಾಸನ್‌ ಜೊತೆ ಪ್ರೀತಿಯಲ್ಲಿರುವಾಗಲೇ ಇನ್ನೋರ್ವನ ಸಹವಾಸಕ್ಕೆ ಬಿದ್ದಿದ್ದಾಳೆ. ಸಂತೋಷ್‌ ಎಂಬಾತನ ಜೊತೆ ವಿದ್ಯಾ ಅಕ್ರಮ ಸಂಬಂಧ ಹೊಂದಿದ್ದಳು. ಅನ್ಬರಾಸನ್‌ ತನ್ನ ಕಣ್ಣಾರೆ ಸಂತೋಷ್‌ ಮತ್ತು ವಿದ್ಯಾ ಜೊತೆಯಲ್ಲಿರುವುದನ್ನು ಕಂಡಿದ್ದ. ಇದರಿಂದ ನೊಂದ ಅನ್ಬರಾಸನ್‌ ವಿದ್ಯಾಗೆ ಬುದ್ಧಿವಾದ ಹೇಳಿದರೂ ಕ್ಯಾರೆ ಎನ್ನದ ವಿದ್ಯಾ ತನ್ನ ಚಾಳಿ ಮುಂದುವರಿಸಿದ್ದಾಳೆ. ಇದರಿಂದ ನೊಂದ ಅನ್ಬರಸನ್‌ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಆರೋಪ ಮಾಡಿದ್ದಾರೆ.


ಅನ್ಬರಸನ್‌ ತಂದೆ ತಾಯಿ ಯುಡಿಆರ್‌ ಪ್ರಕರಣವನ್ನು ದಾಖಲು ಮಾಡಿದ್ದರು. ಆದರೆ ವಿದ್ಯಾ ಜೊತೆ ಮಾತನಾಡಿರುವ ಕಾಲ್‌ರೆಕಾರ್ಡ್‌ ಲಭ್ಯವಾಗಿದ್ದು, ಅದರ ಆಧಾರದ ಮೇಲೆ ಆತ್ಮಹತ್ಯೆಗೆ ಪ್ರಚೋದನೆ ನೀಡಲಾಗಿದೆ ಎಂದು ಪ್ರಕರಣ ದಾಖಲು ಮಾಡಿದ್ದು, ವಿದ್ಯಾ, ಸಂತೋಷ್‌ ವಿರುದ್ಧ ಪರಪ್ಪನ ಅಗ್ರಹಾರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಳ್ತಂಗಡಿ : ಸರಕಾರಿ ಬಸ್ ನಲ್ಲಿ ಯುವತಿಗೆ ಕಿರುಕುಳ

Posted by Vidyamaana on 2023-07-30 04:28:23 |

Share: | | | | |


ಬೆಳ್ತಂಗಡಿ  : ಸರಕಾರಿ ಬಸ್ ನಲ್ಲಿ ಯುವತಿಗೆ ಕಿರುಕುಳ

ಬೆಳ್ತಂಗಡಿ : ಸರಕಾರಿ ಬಸ್ ನಲ್ಲಿ ಸಂಪಾದಿಸುತ್ತಿದ್ದಾಗ ಯುವತಿಗೆ ಕಿರುಕುಳ ನೀಡಿದ್ದ ಆರೋಪಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದು ಆರೋಪಿಯನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ ಘಟನೆ ಉಜಿರೆಯಲ್ಲಿ ನಡೆದಿದೆ.


ಮಂಗಳೂರಿನಿಂದ ಚಿಕ್ಕಮಗಳೂರಿಗೆ ಸಂಚಾರಿಸುತ್ತಿದ್ದ ಸರಕಾರಿ ಬಸ್ ನಲ್ಲಿ ಜುಲೈ 29 ರಂದು ಮಧ್ಯಾಹ್ನ 2:15 ರ ಸುಮಾರಿಗೆ‌ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ‌ ಕೊಟ್ಟಿಗೆಹಾರ ನಿವಾಸಿ 19 ವರ್ಷದ ಯುವತಿ ತನ್ನ ಬ್ಯಾಗ್ ಹಿಡಿದುಕೊಂಡು ನಿದ್ರೆ ಮಾಡಿಕೊಂಡು ಸಂಚಾರಿಸುತ್ತಿದ್ದಾಗ ಬಸ್ ಮಡಂತ್ಯಾರ್ ತಲುಪಿದಾಗ ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲು  ಕಬೀರ್(35) ಎಂಬಾತ ಹಿಂಬದಿಯಲ್ಲಿ ಕುಳಿತಿದ್ದವd ಯುವತಿ ಇದ್ದ ಸೀಟಿಗೆ ಬಂದು ಕಿರುಕುಳ ನೀಡಿದ್ದು ಇದನ್ನು ವಿರೋಧಿಸಿದರೂ ಮತ್ತೆ ಮತ್ತೆ ತನ್ನ ಕೃತ್ಯ ಮುಂದುವರಿಸಿದ್ದು ಈ ವೇಳೆ ನೊಂದ ಯುವತಿ ತನ್ನ ತಂದೆಗೆ ಹಾಗೂ ಉಜಿರೆಯ ಗೆಳೆಯನಿಗೆ ಮಾಹಿತಿ ನೀಡಿದ್ದು ಬಸ್ ಉಜಿರೆ ತಲುಪುತ್ತಿದ್ದಂತೆ ಆರೋಪಿ ಕಬೀರ್ ನನ್ನು ಹಿಡಿದು ಬೆಳ್ತಂಗಡಿ ಪೊಲೀಸರಿಗೆ ಮಾಹಿತಿ ನೀಡಿದ್ದು ತಕ್ಷಣ ಪೊಲೀಸರಿಗೆ ಸ್ಥಳಕ್ಕೆ ಬಂದು ಆರೋಪಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.


ನೊಂದ ಯುವತಿ ನೀಡಿದ ದೂರಿನ ಮೇರೆಗೆ ಕಾಮುಕ ಕಬೀರ್ ಮೇಲೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಕಬ್ಬಿನ ಸಿಪ್ಪೆ ತುಂಬಿದ್ದ ಲಾರಿಗೆ ವಿದ್ಯುತ್‌ ತಂತಿ ತಗುಲಿ ಬೆಂಕಿ; ಸಿಪ್ಪೆ ಭಸ್ಮ

Posted by Vidyamaana on 2023-12-20 08:28:53 |

Share: | | | | |


ಕಬ್ಬಿನ ಸಿಪ್ಪೆ ತುಂಬಿದ್ದ ಲಾರಿಗೆ ವಿದ್ಯುತ್‌ ತಂತಿ ತಗುಲಿ ಬೆಂಕಿ; ಸಿಪ್ಪೆ ಭಸ್ಮ

ಹುಣಸೂರು: ಕಬ್ಬಿನ ಸಿಪ್ಪೆ ಹೊತ್ತೊಯ್ಯುತ್ತಿದ್ದ ಲಾರಿಗೆ ವಿದ್ಯುತ್‌ ತಂತಿ ತಗುಲಿ ಕಬ್ಬಿನ ಸಿಪ್ಪೆ ಸಂಪೂರ್ಣ ಭಸ್ಮವಾಗಿದ್ದರೆ, ಸ್ಥಳೀಯರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಶ್ರಮದಿಂದ ಲಾರಿಗೆ ಯಾವುದೇ ಅಪಾಯವಾಗಿಲ್ಲ.ಹುಣಸೂರು ನಗರಕ್ಕೆ ಸಮೀಪದ ಎಚ್‌.ಡಿ.ಕೋಟೆ ರಸ್ತೆಯ ಹಂಚ್ಯಾ ಗ್ರಾಮದ ಬಳಿ ಮಂಗಳವಾರ ಮಧ್ಯಾಹ್ನ ಘಟನೆ ಸಂಭವಿಸಿದ್ದು, ಲಾರಿಯಲ್ಲಿ ಎತ್ತರವಾಗಿ ಕಬ್ಬಿನ ಸಿಪ್ಪೆ ತುಂಬಿದ್ದರಿಂದಾಗಿ ಹಂಚ್ಯಾ ಬಳಿಯ ರಸ್ತೆಗೆ ಅಡ್ಡಲಾಗಿ ಹಾಕಿದ್ದ ವಿದ್ಯುತ್‌ ತಂತಿಗೆ ಸಿಲುಕಿ ಒಮ್ಮೆಲೆ ಬೆಂಕಿ ಹತ್ತಿಕೊಂಡಿದೆ.ತಕ್ಷಣವೇ ಪಕ್ಕದ ಜಮೀನಿನವರು ತಮ್ಮ ಬೋರ್‌ವೆಲ್‌ ನಿಂದ ಪೈಪ್‌ ಮೂಲಕ ನೀರು ಹಾಯಿಸಿದರಾದರೂ ದಟ್ಟ ಹೊಗೆ ಆವರಿಸಿದೆ. ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ ಮೇರೆಗೆ ಸ್ಥಳಕ್ಕಾಗಮಿಸಿದ ಸಿಬ್ಬಂದಿ ಬೆಂಕಿ ನಂದಿಸಿದ್ದರಿಂದ ಲಾರಿಗೆ ಹಾನಿಯಾಗಿಲ್ಲ

ಯುವತಿಯ Instagram ಐಡಿ ಹ್ಯಾಕ್ ಮದುವೆಗೆ ಮುನ್ನ ಆಕೆಯ ಅಶ್ಲೀಲ ಫೋಟೋ ವಿಡಿಯೋ ಪೋಸ್ಟ್

Posted by Vidyamaana on 2023-12-25 12:18:58 |

Share: | | | | |


ಯುವತಿಯ Instagram ಐಡಿ ಹ್ಯಾಕ್ ಮದುವೆಗೆ ಮುನ್ನ ಆಕೆಯ ಅಶ್ಲೀಲ ಫೋಟೋ ವಿಡಿಯೋ ಪೋಸ್ಟ್

ಭದೋಹಿ: ಮದುವೆಗೂ ಮುನ್ನ ಯುವತಿಯೊಬ್ಬಳ ಇನ್‌ಸ್ಟಾಗ್ರಾಂ ಐಡಿಯನ್ನು ಹ್ಯಾಕ್ ಮಾಡಿ ಆಕೆಯ ಚಿತ್ರವನ್ನು ಎಡಿಟ್ ಮಾಡಿ ಅಶ್ಲೀಲ ಫೋಟೋಗಳು ಮತ್ತು ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಸಾರ್ವಜನಿಕವಾಗಿ ಪ್ರಕಟಿಸಿದ ಪ್ರಕರಣ ಭಾನುವಾರ ಬೆಳಕಿಗೆ ಬಂದಿದೆ.ಔರೈ ಪೊಲೀಸ್ ಠಾಣೆಯ ಎಸ್‌ಎಚ್‌ಒ ಮದನ್‌ಲಾಲ್ ಮಾತನಾಡಿ, ಖಮಾರಿಯಾ ಪೊಲೀಸ್ ಔಟ್‌ಪೋಸ್ಟ್ ಬಳಿ ವಾಸಿಸುವ 28 ವರ್ಷದ ವ್ಯಕ್ತಿ ಡಿಸೆಂಬರ್ 20 ರಂದು ಪೊಲೀಸ್ ಅಧೀಕ್ಷಕ (ಎಸ್‌ಪಿ) ಅವರನ್ನು ಭೇಟಿಯಾಗಿ ಅವರು ಯುವತಿಯ ಇನ್‌ಸ್ಟಾಗ್ರಾಮ್ ಫೋಟೋ ಎಂದು ದೂರು ನೀಡಿದ್ದಾರೆ.ಸಾಮಾಜಿಕ ಮಾಧ್ಯಮದಲ್ಲಿ ಆಕೆ ಅಶ್ಲೀಲ ಫೋಟೋವನ್ನು ಎಡಿಟ್ ಮಾಡಲಾಗಿದೆ ಎಂದು ಅವರು ಆರೋಪಿಸಿದ್ದಾರೆ.


ಇನ್‌ಸ್ಟಾಗ್ರಾಮ್‌ನಲ್ಲಿ ನಿರ್ದಿಷ್ಟ ಖಾತೆಗೆ 500 ರೂಪಾಯಿ ಕಳುಹಿಸುವ ಮೂಲಕ ವೀಡಿಯೊವನ್ನು ನೋಡಬಹುದು ಎಂದು ಸಂದೇಶವನ್ನು ಪೋಸ್ಟ್ ಮಾಡಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.


ತನ್ನ ಭವಿಷ್ಯದ ಪತ್ನಿಯನ್ನು ನಿಂದಿಸಲು ಮತ್ತು ಕಿರುಕುಳ ನೀಡಲು ಉದ್ದೇಶಪೂರ್ವಕವಾಗಿ ಈ ಕೃತ್ಯ ಎಸಗಲಾಗಿದೆ ಎಂದು ದೂರುದಾರರು ಆರೋಪಿಸಿದ್ದಾರೆ. ಐಟಿ ಕಾಯ್ದೆಯಡಿ ಅಪರಿಚಿತ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ

ಪುತ್ತೂರು ಐಎಂಎ ಅಧ್ಯಕ್ಷ ಕಾನಾವು ಸ್ಕಿನ್ ಕ್ಲಿನಿಕ್ ವೈದ್ಯ ಡಾ. ನರಸಿಂಹ ಶರ್ಮಾ ಕಾನಾವು ರವರಿಗೆ ಪಿತೃ ವಿಯೋಗ.

Posted by Vidyamaana on 2023-04-19 04:11:13 |

Share: | | | | |


ಪುತ್ತೂರು ಐಎಂಎ ಅಧ್ಯಕ್ಷ ಕಾನಾವು ಸ್ಕಿನ್ ಕ್ಲಿನಿಕ್ ವೈದ್ಯ ಡಾ. ನರಸಿಂಹ ಶರ್ಮಾ ಕಾನಾವು ರವರಿಗೆ ಪಿತೃ ವಿಯೋಗ.

ಪುತ್ತೂರು: ಪ್ರಗತಿಪರ ಕೃಷಿಕ, ಮುಕ್ಕೂರು ಹಾಲು ಉತ್ಪಾದಕರ ಸಹಕಾರ ಸಂಘದ ಮಾಜಿ ನಿರ್ದೇಶಕರಾದ ಗೋಪಾಲಕೃಷ್ಣ ಭಟ್ ಕಾನಾವು ( 79) ಎ.18 ರಂದು ರಾತ್ರಿ ನಿಧನರಾದರು.ಮೃತರು ಪೆರುವೋಡಿ ಶ್ರೀ ವಿಷ್ಣುಮೂರ್ತಿ ದೇವಾಲಯದ ಮೊಕ್ತೇಸರರಾಗಿ ಸೇರಿದಂತೆ ಕ್ಷೇತ್ರದ ಜೀರ್ಣೋದ್ಧಾರ ಕಾರ್ಯದಲ್ಲಿ ಸೇವೆ ಸಲ್ಲಿಸಿದ್ದರು.

ಮೃತರು ಪತ್ನಿ, ಪುತ್ರಿ, ಪುತ್ರರಾಗಿರುವ ಕಾನಾವು ಕ್ಲಿನಿಕ್ ನ ವೈದ್ಯ ಡಾ.ನರಸಿಂಹ ಶರ್ಮಾ ಕಾನಾವು ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

ಮೃತರ ಪಾರ್ಥಿವ ಶರೀರದ ಸಾರ್ವಜನಿಕ ದರ್ಶನಕ್ಕೆ ಎ.19 ರಂದು ಬೆಳಗ್ಗಿನಿಂದ ಅವಕಾಶ ಕಲ್ಪಿಸಲಾಗಿದೆ ಎಂದು ಮನೆಯವರು ತಿಳಿಸಿದ್ದಾರೆ.

ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ದೌರ್ಜನ್ಯ ಮುರುಘಾಶ್ರೀ ಗೆ ಜಾಮೀನು

Posted by Vidyamaana on 2023-11-08 18:18:21 |

Share: | | | | |


ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ದೌರ್ಜನ್ಯ  ಮುರುಘಾಶ್ರೀ ಗೆ ಜಾಮೀನು

ಬೆಂಗಳೂರು, ನ.8: ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ದೌರ್ಜನ್ಯ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗದ ಮುರುಘಾ ಮಠದ ಡಾ. ಶಿವಮೂರ್ತಿ ಶ್ರೀಗೆ ಜಾಮೀನು ಸಿಕ್ಕಿದೆ. ಒಂದು ಪ್ರಕರಣದಲ್ಲಿ ಮಾತ್ರ ಮುರುಘಾ ಶ್ರೀಗೆ ಜಾಮೀನು ಸಿಕ್ಕಿದ್ದು, ಈ ಹಿನ್ನೆಲೆಯಲ್ಲಿ ಅವರಿಗೆ ಬಿಡುಗಡೆ ಭಾಗ್ಯ ಇಲ್ಲ. ಜಾಮೀನ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿರುವ ಕೋರ್ಟ್​, ಚಿತ್ರದುರ್ಗ ಜಿಲ್ಲೆ ಪ್ರವೇಶಿಸುವಂತಿಲ್ಲ ಎಂದು ಹೇಳುವ ಮೂಲಕ ಚಿತ್ರದುರ್ಗ ಹೋಗದಂತೆ ಷರತ್ತು ವಿಧಿಸಿದೆ. ಮೊದಲು ದಾಖಲಾಗಿದ್ದ ಒಂದು ಪ್ರಕರಣದಲ್ಲಿ ಜಾಮೀನು ಲಭ್ಯವಾಗಿದ್ದು, ಪೋಕ್ಸೋ ಕಾಯ್ದೆ ಅಡಿ ದಾಖಲಾಗಿರುವ ಪ್ರಕರಣದಲ್ಲಿ ಅವರು ಜೈಲಿನಲ್ಲಿ ಉಳಿದುಕೊಳ್ಳಲಿದ್ದಾರೆ.


ವಕೀಲರು ಹೇಳಿದ್ದೇನು?


ಈ ಬಗ್ಗೆ ಮಾಹಿತಿ ನೀಡಿರುವ ಮುರುಘಾಶ್ರೀ ಪರ ವಕೀಲಸ್ವಾಮೀನಿ ಗಣೇಶ್, ಏಳು ಷರತ್ತುಗಳ ಮೇಲೆ ಮುರುಘಾಶ್ರೀ ಜಾಮೀನು ಲಭ್ಯವಾಗಿದೆ. ಪಾಸ್‌ಪೋರ್ಟ್ ಸರೆಂಡರ್‌ ಮಾಡಬೇಕು. ವಿಟ್ನೆಸ್ ಗಳ ಮೇಲೆ ಪ್ರಭಾವ ಬೀರಬಾರದು. ಚಿತ್ರದುರ್ಗ ಜಿಲ್ಲೆ ಪ್ರವೇಶಿಸುವಂತಿಲ್ಲ. ಎರಡು ಲಕ್ಷ ಬಾಂಡ್ ಹಾಗೂ ಇಬ್ಬರು ವ್ಯಕ್ತಿಗಳ ಶ್ಯೂರಿಟಿ ಮೇರೆಗೆ ಜಾಮೀನು ಮಂಜೂರು ಮಾಡಲಾಗಿದೆ ಎಂಬ ವಿವರಿಸಿದ್ದಾರೆ.

ಚಿತ್ರದುರ್ಗದ ಬೃಹನ್ಮಠದ ಆಡಳಿತದಲ್ಲಿರುವ ವಿದ್ಯಾರ್ಥಿ ನಿಲಯದ ಹಲವು ವಿದ್ಯಾರ್ಥಿನಿಯರಿಗೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುರುಘಾ ಮಠದ ಮುರುಘಾ ಶ್ರೀ ಜಾಮೀನು ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ನಡೆಸಿದ್ದು, ಇದೀಗ ನ್ಯಾಯಾಲಯ ಮುರುಘಾ ಶ್ರೀಗೆ ಜಾಮೀನು  ಮಾಡಿದೆ. 


2022ರ ಸೆಪ್ಟೆಂಬರ್ 1ರಿಂದ ಜೈಲುವಾಸ ಅನುಭವಿಸುತ್ತಿರುವ ಮುರುಘಾ ಶ್ರೀಯ ಜಾಮೀನು ಅರ್ಜಿಯನ್ನು ಚಿತ್ರದುರ್ಗ 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ತಿರಸ್ಕರಿಸಿತ್ತು. ನಂತರ ಜಾಮೀನಿಗಾಗಿ ಮುರುಘಾ ಶ್ರೀ ಪರ ವಕೀಲರು ಹೈಕೋರ್ಟ್​ ಮೆಟ್ಟಲೇರಿದ್ದರು. ಈ ಜಾಮೀನು ಅರ್ಜಿಯ ತೀರ್ಪನ್ನು ಇಂದು ಕರ್ನಾಟಕ ಹೈಕೋರ್ಟ್ ಪ್ರಕಟಿಸಿದೆ.


ಚಿತ್ರದುರ್ಗದ ಬೃಹನ್ಮಠದ ಆಡಳಿತದಲ್ಲಿರುವ ವಿದ್ಯಾರ್ಥಿ ನಿಲಯದ ಹಲವು ವಿದ್ಯಾರ್ಥಿನಿಯರಿಗೆ ಮುರುಘಾ ಶ್ರೀ ಲೈಂಗಿಕ ದೌರ್ಜನ್ಯವೆಸಗಿದ್ದಾರೆ ಎಂದು ವಿದ್ಯಾರ್ಥಿನಿಯರು ಮೈಸೂರಿನ ಒಡನಾಡಿ ಸೇವಾ ಸಂಸ್ಥೆಯ ಕದ ತಟ್ಟಿದ್ದರು. ಚಿತ್ರದುರ್ಗದ ಮುರುಘಾ ಮಠದ ವಿದ್ಯಾರ್ಥಿ ನಿಲಯದಲ್ಲಿರುವ ನಮ್ಮನ್ನು ಮುರುಘಾ ಶ್ರೀ ಲೈಂಗಿಕವಾಗಿ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದ್ದರು.


ಅಲ್ಲದೇ, ಮುರುಘಾ ಶ್ರೀಗಳಿಗೆ ಹಣ್ಣು ತೆಗೆದುಕೊಂಡು ಹೋಗಿ ಎಂದು ಮಹಿಳಾ ವಾರ್ಡನ್ ಅವರೇ ನಮ್ಮನ್ನು ಕಳುಹಿಸುತ್ತಿದ್ದರು. ಸ್ವಾಮೀಜಿ ಇದ್ದ ಸ್ಥಳಕ್ಕೆ ತೆರಳಿದರೆ ಅಲ್ಲಿ ನಮಗೆ ನಶೆ ಬರುವಂತೆ ಮಾಡಿ ದುರ್ಬಳಕೆ ಮಾಡಿಕೊಳ್ಳುತ್ತಿದ್ದರು ಎಂದು ಆರೋಪಿಸಿ ಮುರುಘಾ ಶರಣರ ವಿರುದ್ಧ ಮೈಸೂರಿನ ನಜರಾಬಾದ್‌ ಪೊಲೀಸ್‌ ಠಾಣೆಯಲ್ಲಿ ಇಬ್ಬರು ವಿದ್ಯಾರ್ಥಿನಿಯರು ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಿಸಿದ್ದರು.



Leave a Comment: