Posted by vidyamaana on 2024-06-30 21:58:04 |
ಉಪ್ಪಿನಂಗಡಿ: ಕಡಬ ತಾಲ್ಲೂಕು ಕೊಯಿಲ ಗ್ರಾಮದ ಕೆಮ್ಮಾರ ಎಂಬಲ್ಲಿ ಭಾನುವಾರ ಮನೆಯೊಳಗೆ ಬೆಂಕಿ ಹೊತ್ತಿಕೊಂಡು ಮನೆಯ ಒಳ ಭಾಗ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಮನೆ ಭಾಗಶಃ ಹಾನಿಗೊಂಡಿದ್ದು, ಮನೆಯವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಕೆಮ್ಮಾರ ಶಾಲೆ ಬಳಿಯ ನಿವಾಸಿ ದಿ.ಇಬ್ರಾಹಿಂ ಎಂಬುವರ ಪುತ್ರ ಅಬ್ದುಲ್ ರಹಿಮಾನ್ ಅವರ ಮನೆಯಲ್ಲಿ ಅವಘಡ ಸಂಭವಿಸಿದೆ.
ಮನೆಯ ಮಾಸ್ಟರ್ ಬೆಡ್ ರೂಂನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಮನೆಯೊಳಗೆ ಆವರಿಸಿದೆ. ಮನೆಯೊಳಗೆ ಇದ್ದ ಕಪಾಟು, ಮಂಚ, ಕಿಟಕಿ, ಬಾಗಿಲು, ಫ್ರಿಜ್, ವಾಷಿಂಗ್ ಮೆಸಿಷಿನ್, ಬಟ್ಟೆಗಳು, ಗೃಹೋಪಯೋಗಿ ವಸ್ತುಗಳು, ಆಹಾರ ಸಾಮಗ್ರಿ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ.
ಬೆಂಕಿಯ ತಾಪಕ್ಕೆ 2 ಕಡೆ ಗೋಡೆ ಬಿರುಕು ಬಿಟ್ಟಿದೆ. ಬೆಂಕಿ ಕಾಣಿಸಿಕೊಂಡ ಕೋಣೆಯಲ್ಲಿ ಗ್ರಾನೈಟ್ ಮತ್ತು ಅಡುಗೆ ಕೋಣೆಯಲ್ಲಿ ನೆಲದ ಟೈಲ್ಸ್ ಸಿಡಿದಿದೆ. ಇದರಿಂದಾಗಿ ಸುಮಾರು ₹ 35 ಲಕ್ಷ ನಷ್ಟ ಉಂಟಾಗಿದೆ ಎಂದು ಅಬ್ದುಲ್ ರಹಿಮಾನ್ ಅವರು ಕಂದಾಯ ಇಲಾಖೆಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.
ಮನೆಯಲ್ಲಿ ಅಬ್ದುಲ್ ರಹಿಮಾನ್ ಅವರ ತಾಯಿ ಸಕೀನ ಮಾತ್ರ ಇದ್ದು, ಮನೆಯೊಳಗೆ ಹೊಗೆ ತುಂಬುವುದನ್ನು ಗಮನಿಸಿ ಮನೆಯಿಂದ ಹೊರ ಬಂದು ಬೊಬ್ಬೆ ಹಾಕಿ ಪಕ್ಕದ ಮನೆಯವರನ್ನು ಕರೆದಿದ್ದಾರೆ. ಪಕ್ಕದ ಮನೆಯವರು ಸ್ಥಳೀಯರಿಗೆ ಕರೆ ಮಾಡಿದ್ದಾರೆ. ಅಬ್ದುಲ್ ರಹಿಮಾನ್, ಪತ್ನಿ, ಮಕ್ಕಳು ಪತ್ನಿಯ ತವರು ಮನೆಗೆ ಹೋಗಿದ್ದರು. ವರ್ಷದ ಹಿಂದೆ ಮನೆ ನಿರ್ಮಿಸಲಾಗಿತ್ತು.
ಬೆಂಕಿ ಅವಘಡದ ಮಾಹಿತಿ ತಿಳಿದ ಸಾಮಾಜಿಕ ಕಾರ್ಯಕರ್ತರಾದ ಸಲೀಕತ್, ಅಬೂಬಕ್ಕರ್, ರಿಯಾಝ್, ಜುನೈದ್ ಮನೆಯೊಳಗೆ ಪ್ರವೇಶಿಸಿ
ವಿದ್ಯುತ್ ಸಂಪರ್ಕ, ಗ್ಯಾಸ್ ಸಂಕರ್ಪ ಕಡಿತಗೊಳಿಸಿದರು. ಪುತ್ತೂರಿನಿಂದ ಬಂದ ಅಗ್ನಿ ಶಾಮಕ ಸಿಬ್ಬಂದಿ ಬೆಂಕಿಯನ್ನು ಸಂಪೂರ್ಣವಾಗಿ ನಂದಿಸಿದರು.
ಘಟನಾ ಸ್ಥಳಕ್ಕೆ ಕೊಯಿಲ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪುಷ್ಪಾ ಸುಭಾಸ್, ಸದಸ್ಯ ನಝೀರ್ ಪೂರಿಂಗ, ಆತೂರು ಬದ್ರಿಯಾ ಮಸೀದಿ ಖತೀಬ್ ಜುನೈದ್ ಜಿಫ್ರಿ ತಂಙಳ್ ಭೇಟಿ ನೀಡಿದರು. ಕೊಯಿಲ ಗ್ರಾಮಕರಣಿಕ ಶೇಷಾದ್ರಿ ಪರಿಶೀಲನೆ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸಿದ್ದಾರೆ.
ನಾನು ಕೋಣೆಯೊಂದರಲ್ಲಿ ಕೆಲಸದಲ್ಲಿ ನಿರತಳಾಗಿದ್ದೆ. ತುಂತುರು ಮಳೆಯಾಗುತ್ತಿತ್ತು. ಭಾರಿ ಸಿಡಿಲಿನ ಶಬ್ದ ಕೇಳಿಸಿತ್ತು. ಸ್ವಲ್ಪ ಹೊತ್ತಿನ ಬಳಿಕ ಮನೆಯೊಳಗೆ ಹೊಗೆ ತುಂಬತೊಡಗಿತು. ಮನೆಯಿಂದ ಹೊರ ಬರುವುದಕ್ಕೂ ದಾರಿ ಕಾಣುತ್ತಿರಲಿಲ್ಲ ಎಂದು ಅಬ್ದುಲ್ ರಹಿಮಾನ್ ಅವರ ತಾಯಿ ಸಕೀನ ತಿಳಿಸಿದರು.
ಉಪ್ಪಿನಂಗಡಿ ಸಮೀಪದ ಕೆಮ್ಮಾರದಲ್ಲಿ ಮನೆ ಭಾಗಶಃ ಬೆಂಕಿಗೆ ಆಹುತಿಯಾಗಿದ್ದು ಕಂದಾಯ ಇಲಾಖೆ ಅಧಿಕಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದರು
Posted by Vidyamaana on 2024-01-08 21:09:48 |
ಬೆಂಗಳೂರು : ನಿತ್ಯ ಪತ್ನಿಗೆ ನಿದ್ರೆ ಮಾತ್ರೆ ಹಾಕಿ ಮಲಗಿಸಿ ಬಳಿಕ ಕೆಲಸದವಳ ಜೊತೆ ಸರಸದಲ್ಲಿ ತೊಡಗುತ್ತಿದ್ದ ಪತಿಯ ವಿರುದ್ದ ಪತ್ನಿ ಕೊಲೆಯತ್ನ ಪ್ರಕರಣ ದಾಖಲಿಸಿರುವ ಘಟನೆ ನಡೆದಿದೆ.ಪತಿ ಸುನೀಲ್, ವಿರುದ್ದ ಚಂದ್ರಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.ಆರೋಪಿ ಪತಿ ವಿಪರೀತ ಬೆಟ್ಟಿಂಗ್ ಚಟಕ್ಕೆ ಬಿದ್ದು ನಿತ್ಯ ಕುಡಿದು ಬಂದು ಮನಸೋ ಇಚ್ಚೆ ಪತ್ನಿಯ ಮೇಲೆ ಹಲ್ಲೆ ಮಾಡುತ್ತಿದ್ದ ಅಷ್ಟೆ ಅಲ್ಲದೆ ಕೆಲಸದವಳೊಂದಿಗೆ ಸೇರಿ ಊಟದಲ್ಲಿ ನಿದ್ದೆ ಮಾತ್ರೆಯನ್ನು ಬೆರೆಸಿ ತಿನ್ನಿಸಿ ಮಲಗಿಸುತ್ತಿದ್ದ. ಬಳಿಕ ಕೆಲಸದವಳೊಂದಿಗೆ ರಾಸಲೀಲೆಯಲ್ಲಿ ತೊಡಗುತ್ತಿದ್ದ ಈ ದೃಶ್ಯಗಳನ್ನು ತಾನೇ ಕಣ್ಣಾರೆ ಕಂಡಿರುವುದಾಗಿ ಪತ್ನಿ ದೂರಿನಲ್ಲಿ ಉಲ್ಲೇಖಿಸಿದ್ದಾಳೆ.ಜ.3 ರಂದು ಪತಿ ಊಟದಲ್ಲಿ ನಿದ್ದೆ ಮಾತ್ರೆ ಬೆರೆಸಿ ತಿನ್ನಿಸಿದ್ದಾರೆ. ಪ್ರಜ್ಞೆ ಬಂದು ಎದ್ದು ನೋಡಿದಾಗ ಪತಿ ಹಾಗೂ ಮನೆಕೆಲಸದವಳು ಒಂದೇ ಹಾಸಿಗೆಯಲ್ಲಿ ಅಶ್ಲೀಲವಾಗಿದ್ದನ್ನ ಕಂಡಿದ್ದಾರೆ. ಇದನ್ನು ಪ್ರಶ್ನಿಸಿದ್ದಕ್ಕೆ ಪತಿ ಕೆಲಸದವಳೊಂದಿಗೆ ಸೇರಿ ಅಮಾನಷವಾಗಿ ಹಲ್ಲೆ ಮಾಡಿದ್ದಾರೆ. ಭಯದಿಂದ ಇಲ್ಲಿನ ಚಂದ್ರಾ ಲೇಔಟ್ ಪೊಲೀಸ್ ಠಾಣೆಗೆ ಬಂದು ದೂರು ನೀಡಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿ ಪತಿಯ ವಿರುದ್ದ ವರದಕ್ಷಿಣೆ ಕಿರುಕುಳ, ಕೊಲೆಯತ್ನ ಹಾಗು ಮನೆ ಕೆಲಸದಾಕೆ ವಿರುದ್ದ ಜೀವಬೆದರಿಕೆ ಅರಿ ಪತ್ನಿ FIR ದಾಖಲಿಸಲಾಗಿದೆ.
Posted by Vidyamaana on 2024-03-20 19:44:20 |
ಹೊಳಲ್ಕೆರೆ: ಬೆಟ್ಟಿಂಗ್ ದಂಧೆ ಮೋಸಕ್ಕೆ ಸಿಲುಕಿದ್ದ ಗಂಡನಿಗೆ ಸಾಲಗಾರರು ನೀಡುತ್ತಿದ್ದ ಹಿಂಸೆಗೆ ಬೇಸತ್ತು ಪತ್ನಿ ಅತ್ಮಹತ್ಯೆ ಮಾಡಿಕೊಂಡ ಘಟನೆ ಪಟ್ಟಣದಲ್ಲಿ ಸೋಮವಾರ ರಾತ್ರಿ ನಡೆದಿದೆ.ಪಟ್ಟಣದಲ್ಲಿ ಶಿವಮೊಗ್ಗ ರಸ್ತೆಯ ಬಸವ ಲೇಔಟ್ ನಿವಾಸಿ ರಂಚಿತಾ (23) ಆತ್ಮಹತ್ಯೆ ಮಾಡಿಕೊಂಡ ಗೃಹಿಣಿ. ಬೆಟ್ಟಿಂಗ್ ದಂಧೆಗೆ ಪ್ರೇರಣೆ ನೀಡಿ ಸಾಲ ಕೊಟ್ಟವರ ಕಾಟ ದಿನದಿಂದ ದಿನಕ್ಕೆ ಹೆಚ್ಚಾದ ಹಿನ್ನಲೆಯಲ್ಲಿ ತೀವ್ರ ಮನನೊಂದ ಮಗಳು ಅತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಮೃತ ರಂಚಿತಾ ತಂದೆ ವೆಂಕಟೇಶ್ ಅವರು ಹೊಳಲ್ಕೆರೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ರಂಚಿತಾ ಐದು ವರ್ಷಗಳ ಹಿಂದೆ ಪಟ್ಟಣದ ಮುಖಂಡ ಬಾಲು ಪ್ರಕಾಶ ಹಾಗೂ ಪಟ್ಟಣ ಪಂಚಾಯತ್ ಮಾಜಿ ಅಧ್ಯಕ್ಷೆ ಚಂದ್ರಕಲಾ ದಂಪತಿಯ ಪುತ್ರನಾದ ಇಂಜಿನಿಯರ್ ವೃತ್ತಿ ಮಾಡಿಕೊಂಡಿದ್ದ ದರ್ಶನ್ ಬಾಲು ನನ್ನು ವಿವಾಹವಾಗಿದ್ದು, ನಾಲ್ಕು ವರ್ಷ ಗಂಡು ಮಗುವಿದೆ.
ಹೊಳಲ್ಕೆರೆ ಪಟ್ಟಣದ ನಿವಾಸಿಗಳಾದ ಗಿರೀಶ್, ರಾಘು, ಚಿತ್ರದುರ್ಗ ಸುದೀಪ್, ತಿಪ್ಪೇಸ್ವಾಮಿ, ವೆಂಕಟೇಶ್, ಗುರು, ವಾಗೀಶ್, ರಾಕೇಶ್, ಪಾವಗಡದ ಪೊತರೆಡ್ಡಿ, ಅಜ್ಜಂಪುರ ಕಂಟ್ರಾಕ್ಟರ್ ಹೊನ್ನಪ್ಪ, ಹಿರಿಯೂರು ಮಹಾಂತೇಶ್, ಕಂಟ್ರಾಕ್ಟರ್ ಜಗನ್ನಾಥಶಿರಾ ಮತ್ತಿತರರು ಆಳಿಯ ದರ್ಶನ್ ಇವರಿಗೆ ಐಪಿಎಲ್ ಬೆಟ್ಟಿಂಗ್ ನಿಂದ ಕೋಟಿ ಕೋಟಿ ಸಂಪಾದಿಸಬಹುದು ಎಂದು ಪುಸಲಾಯಿಸಿದ್ದು, ಹಣವಿಲ್ಲ ಎಂದು ಹೇಳಿದರೂ ಖಾಲಿ ಚೆಕ್ ಪಡೆದು ಬೆಟ್ಟಿಂಗ್ ಗೆ ಹಣ ಕಟ್ಟಿಸಿದ್ದಾರೆ. ದಂಧೆಯಲ್ಲಿ ಸೊಲಾದ ಬಳಿಕ ಹಣಕೊಡದಿದ್ದರೆ ಚೆಕ್ ಗಳನ್ನು ಕೋರ್ಟಿಗೆ ಹಾಕಿ ಜೈಲಿಗೆ ಕಳುಸಿವುದಾಗಿ ಬೇದರಿಸಿದ್ದಾರೆ. ಹಣವನ್ನು ದರ್ಶನ್ ತಂದೆ ಪ್ರಕಾಶ್ ಅವರು ತೀರಿಸುವ ಭರವಸೆ ನೀಡಿದ್ದರೂ, ಪದೆಪದೆ ಮನೆಗೆ ಪೋನ್ ಮಾಡಿ, ಬೆದರಿಕೆ ಹಾಕಿ, ಮಾನಸಿಕ ಕಿರಿಕುಳ, ಹಿಂಸೆ ನೀಡಿದ್ದು, ಇದನ್ನು ಸಹಿಸಿಕೊಳ್ಳದೆ ಮಗಳು ರಂಚಿತಾ ಸೋಮವಾರ ಸಂಜೆ ಮನೆಯಲ್ಲಿ ನೇಣುಹಾಕಿಕೊಂಡಿದ್ದಾಳೆ. ನಾವು ತತ್ ಕ್ಷಣವೇ ನೋಡಿ ಅಸ್ಪತ್ಸೆಗೆ ಕರೆದುಕೊಂಡು ಹೋದರೂ ಫಲಕಾರಿಯಾಗಿಲ್ಲ. ನಮ್ಮ ಮಗಳ ಸಾವಿಗೆ ಬೆಟ್ಟಿಂಗ್ ದಂಧೆದಾರರೆ ಕಾರಣವಾಗಿದ್ದು ಅವರ ವಿರುದ್ದ ಕಾನೂನು ಕ್ರಮ ಕೈಗೊಳ್ಳಬೇಕೆಂದು ರಂಚಿತಾ ತಂದೆ ವೆಂಕಟೇಶ್ ದೂರಿನಲ್ಲಿ ಹೇಳಿಕೊಂಡಿದ್ದಾರೆ. ಈ ಸಂಬಂಧ ಶಿವ ಮತ್ತು ಗಿರೀಶ್ ಎಂಬವರನ್ನು ಬಂಧಿಸಲಾಗಿದೆ ಎಂದು ಪಿಎಸ್ಐ ಸುರೇಶ್ ತಿಳಿಸಿದ್ದಾರೆ.
Posted by Vidyamaana on 2024-03-12 20:36:12 |
ಬೆಂಗಳೂರು : ಆನೆ ನಡೆದದ್ದೇ ದಾರಿ. ಮಾಧ್ಯಮದವರು ಏನು ಬರೆದುಕೊಂಡು ಅದು ನಡೆದು ಹೋಗುತ್ತೆ. ನಾಯಿ ಬೊಗಳುತ್ತೆ ಎಂಬುದಾಗಿ ಮಾದ್ಯಮದವರನ್ನು ನಾಯಿಗೆ ಹೋಲಿಕೆ ಮಾಡಿದಂತ ಬಿಜೆಪಿ ಸಂಸದ ಅನಂತ್ ಕುಮಾರ್ ಹೆಗಡೆ ವಿರುದ್ಧ ಕ್ರಮ ಕೈಗೊಳ್ಳುವಂತೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು ಬಿಜೆಪಿ ಹೈಕಮಾಂಡ್ ಗೆ ದೂರು ನೀಡಿದೆ.ಈ ಕುರಿತಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರಿಗೆ ಪತ್ರದ ಮೂಲಕ ಟ್ವಿಟ್ ಮಾಡಿ ದೂರು ನೀಡಿರುವಂತ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು, ಅದರಲ್ಲಿ ಉತ್ತರ ಕನ್ನಡದ ಸಂಸದ ಅನಂತ ಕುಮಾರ ಹೆಗಡೆ ಅವರು ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲ್ಲೂಕಿನ ಹಿಲ್ಲೂರು ಗ್ರಾಮದಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನ್ನಾಡುತ್ತಾ ಆನೆ ಹೋಗಿದ್ದೇ ದಾರಿ ಎಂಬಂತೆ ನಾವು ಇರಬೇಕು. ಮಾಧ್ಯಮಗಳು ಏನು ಬೇಕಾದರೂ ಬರೆದುಕೊಳ್ಳಲಿ. ಆನೆಗಳು ಹೋಗುವಾಗ ನಾಯಿಗಳು ಬೊಗಳುವುದು ಸಹಜ ಎಂದು ಮಾಧ್ಯಮದವರನ್ನು ಹೀಯಾಳಿಸಿರುವುದು ಖಂಡನೀಯ. ಕೂಡಲೇ ಅವರು ಬೇಷರತ್ತಾಗಿ ಬಹಿರಂಗವಾಗಿ ಕ್ಷಮೆ ಯಾಚಿಸಬೇಕು ಎಂದು ಕೆಯುಡಬ್ಲ್ಯು ಜೆ ಆಗ್ರಹಿಸಿದೆ.
ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಮಾಧ್ಯಮಕ್ಕೆ ತನ್ನದೇ ಆದ ಮಹತ್ವದ ಸ್ಥಾನವಿದೆ. ತಮಗೆ ಬೇಕಾದಾಗ ಮಾಧ್ಯಮವನ್ನು ಹೊಗಳುವುದು ಬೇಡವೆನಿಸಿದಾಗ ತೆಗಳುವುದು ಕೆಲ ರಾಜಕಾರಣಿಗಳಿಗೆ ಪರಿಪಾಠವಾಗಿದೆ. ಅನಂತ ಕುಮಾರ ಹೆಗಡೆ ಅವರು ಜವಾಬ್ದಾರಿಯುತ ಸಂಸದರಾಗಿದ್ದು, ಆಗಿಂದ್ದಾಗೆ ಮನಸೋ ಇಚ್ಛೆ ಮಾತನಾಡುತ್ತಿರುವುದಲ್ಲದೆ ಮಾಧ್ಯಮವನ್ನು ಗುರಿಯಾಗಿಸಿಕೊಂಡು ಹೇಳಿಕೆ ನೀಡಿರುವುದನ್ನು ಬಿಜೆಪಿ ಗಂಭೀರವಾಗಿ ಪರಿಗಣಿಸಿ ಕ್ರಮ ಜರುಗಿಸಬೇಕು ಮತ್ತು ನಾಲಿಗೆ ಹಿಡಿತವಿಲ್ಲದ ಇಂತವರನ್ನು ಸಾರ್ವಜನಿಕ ಚುನಾವಣೆಗಳಿಂದ ದೂರ ಇಡಬೇಕು ಎಂದು ಕೆಯುಡಬ್ಲ್ಯು ಜೆ ಒತ್ತಾಯಿಸಿದೆ.
Posted by Vidyamaana on 2024-01-29 14:54:31 |
ಪುತ್ತೂರು; ಗ್ರಾಮೀಣ ಭಾಗದ ಬಡವರು ಸರಕಾರಿ ಜಾಗದಲ್ಲಿಮನೆ ಕಟ್ಟಿಕೊಂಡಿದ್ದರೆ ಅವರಿಗೆ ಹಕ್ಕು ಪತ್ರ ಕೊಡಬೇಕು, 94 ಸಿ ಅರ್ಜಿ ಜೊತೆಗೆ ಗ್ರಾಮದ ಪಿಡಿಒಗಳಿಂದ ದೃಡೀಕರಣ ಪತ್ರ ಬೇಕು ಎಂದು ತಹಶಿಲ್ದಾರ್ ಹೇಳುತ್ತಿದ್ದು ಯಾವುದೇ ಕಾರಣಕ್ಕೂ ಪಿಡಿಒಗಳಿಂದ ದೃಡೀಕರಣ ಪತ್ರ ಕೇಳಬೇಡಿಎಂದುಶಾಸಕರಾದ ಅಶೋಕ್ ರೈ ತಹಶಿಲ್ದಾರ್ ಗೆ ಸೂಚನೆ ನೀಡಿದರು.
ತಾಪಂ ಕಚೇರಿಯಲ್ಲಿ ನಡೆದ ಕೆಡಿಪಿ ಸಭೆಯಲ್ಲಿಮಾತನಾಡಿದ ಶಾಸಕರು ಈ ಸೂಚನೆಯನ್ನು ನೀಡಿದ್ದಾರೆ.
ಹಕವಾರು 94 ಸಿ ಅರ್ಜಿಗಳು ಪಿಡಿಒ ದೃಡೀಕರಣ ಪತ್ರವಿಲ್ಲದ ಕಾರಣಕ್ಕೆ ವಿಲೇವಾರಿಯಾಗಿಲ್ಲ ಎಂದು ಸಭೆಗೆ ತಹಶಿಲ್ದಾರ್ ತಿಳಿಸಿದರು. ಇದಕ್ಕೆ ಪ್ರತಿಕ್ರಿಯೆ ನೀಡಿದ ಶಾಸಕರು ಎರಡು ವರ್ಷದ ಹಿಂದೆ ಬಂದ ಪಿಡಿಒಗೆ ಹತ್ತು ವರ್ಷಗಳಿಂದ ಆ ಮನೆ ಅಲ್ಲಿದೆ ಎಂಬ ಮಾಹಿತಿ ಇರ್ಲಿಕ್ಕಿಲ್ಲ.ಅಕ್ಕಪಕ್ಕದ ಮನೆಯವರಲ್ಲಿ ಕೇಳಿ ದೃಡೀಕರಣ ಮಾಡಿ ದೃಡೀಕರಣ ಪತ್ರವಿಲ್ಲದೆ ಬಾಕಿ ಇರುವ ಎಲ್ಲಾ ಅರ್ಜಿಗಳನ್ನು ವಿಲೇವಾರಿಮಾಡಬೇಕು. ಬಡವರು ಮನೆ ಕಟ್ಟಿರುವ ಜಾಗಕ್ಕೆ ಅರ್ಜಿ ಹಾಕಿದ್ದಾರೆ, ಅವರಿಗೆ ಮನೆ ಕಟ್ಟಿಕೊಂಡ ಜಾಗ ಬಿಟ್ಟು ಬೇರೆ ಜಾಗ ಇಲ್ಲ.ಬಡವರಿಗೆ ತೊಂದರೆ ನೀಡುವ ಕೆಲಸವನ್ನು ಯಾರೂ ಮಾಡಬಾರದು. 94 ಸಿ ಯ ಎಷ್ಟು ಅರ್ಜಿ ಯಾವ ಕಾರಣಕ್ಕೆ ಬಾಕಿಯಾಗಿದೆ ಎಂಬುದನ್ನು ನನ್ನಗಮನಕ್ಕೆ ತರಬೇಕು ಎಂದುಶಾಸಕರು ಸೂಚನೆ ನೀಡಿದರು.
Posted by Vidyamaana on 2023-06-07 03:58:50 |
ಕಾಸರಗೋಡು: ರಸ್ತೆಗಳಲ್ಲಿ ಸಾರಿಗೆ ಕಾನೂನು ಉಲ್ಲಂಘನೆ ನಡೆಸುತ್ತಿರುವವರನ್ನು ಗುರುತಿಸಿ ಕಾನೂನು ಕ್ರಮ ಕೈಗೊಳ್ಳಲು ರಸ್ತೆ ಬದಿಯಲ್ಲಿ ಸ್ಥಾಪಿಸಲಾದ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ (ಎಐ) ಕೆಮರಾಗಳು ಕಾರ್ಯಾಚರಣೆ ಆರಂಭಿಸಿದ್ದು, ಮೊದಲ ದಿನ ಜೂ. 5ರಂದು ಬೆಳಗ್ಗೆ 8ರಿಂದ ರಾತ್ರಿ 8 ಗಂಟೆಯ ವರೆಗಿನ ಅವಧಿಯಲ್ಲಿ ಕಾಸರಗೋಡು ಜಿಲ್ಲೆಯಲ್ಲಿ 1,040 ಸಾರಿಗೆ ಉಲ್ಲಂಘನೆ ಪ್ರಕರಣಗಳು ಪತ್ತೆಯಾಗಿವೆ.ಕೇರಳ ರಾಜ್ಯದಲ್ಲಿ ಒಟ್ಟು 38,520 ಸಾರಿಗೆ ಕಾನೂನು ಉಲ್ಲಂಘನೆ ಪತ್ತೆಯಾಗಿವೆ. 250ರಿಂದ 3 ಸಾವಿರ ರೂ. ತನಕ ದಂಡ ವಸೂಲು ಮಾಡಲಾಗುವುದು ಎಂದು ಸಾರಿಗೆ ಇಲಾಖೆ ತಿಳಿಸಿದೆ. ಸಾರಿಗೆ ನಿಯಮ ಉಲ್ಲಂ ಸಿದವರಿಗೆ ಶೀಘ್ರದಲ್ಲೇ ನೋಟಿಸ್ ಬರಲಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಜನರನ್ನು ಹಿಂಡುವ ಯೋಜನೆ: ಕಾಂಗ್ರೆಸ್
ಹದಗೆಟ್ಟ ರಸ್ತೆಗಳು ಮತ್ತು ಸುರಕ್ಷಿತ ಚಾಲನೆಗೆ ಪೂರಕ ಸೌಲಭ್ಯಗಳನ್ನು ಒದಗಿಸದೇ ಇರುವುದು ಸಂಚಾರ ಉಲ್ಲಂಘನೆಗೆ ಕಾರಣ. ರಾಜ್ಯದ ಪಿಣರಾಯಿ ಸರಕಾರವು ರಸ್ತೆಗಳಲ್ಲಿ ಮೂಲಸೌಲಭ್ಯಗಳನ್ನು ಕಲ್ಪಿಸುವ ಬದಲು ಎಐ ಕೆಮರಾದ ಮೂಲಕ ಜನರನ್ನು ಹಿಂಡಿ ಬೊಕ್ಕಸ ತುಂಬಿಸಿಕೊಳ್ಳುವ ಕೆಲಸ ಮಾಡುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಕೆ. ಸುಧಾಕರನ್ ಇದೇವೇಳೆ ಆರೋಪಿಸಿದ್ದಾರೆ.ರಾಜ್ಯದಲ್ಲಿ ಮೊದಲ ದಿನವೇ 38,520 ಸಂಚಾರ ನಿಯಮ ಉಲ್ಲಂಘನೆಗಳನ್ನು ಪತ್ತೆಹಚ್ಚುವ ಮೂಲಕ ಸರಾಸರಿ 1,000 ರೂ.ಗಳಂತೆ ಜನರಿಂದ ಸುಮಾರು 4 ಕೋಟಿ ಸಂಗ್ರಹಿಸಲಾಗಿದೆ. ಮಾಸಿಕ 115 ಕೋಟಿ ರೂ.ಗಳನ್ನು ಸಂಗ್ರಹಿಸುವ ನಿರೀಕ್ಷೆಯನ್ನು ಸರಕಾರ ಹೊಂದಿದೆ. ಇದು ಮದ್ಯದ ಅನಂತರದ ಎರಡನೇ ಅತಿ ಹೆಚ್ಚು ಆದಾಯವಾಗಿದೆ ಮತ್ತು ಲಾಟರಿ ಆದಾಯಕ್ಕಿಂತಲೂ ಹೆಚ್ಚು. ಎಐ ಕೆಮರಾ ಯೋಜನೆಯಲ್ಲಿನ ಭ್ರಷ್ಟಾಚಾರದ ವಿರುದ್ಧ ಕಾಂಗ್ರೆಸ್ ಹೋರಾಟವನ್ನು ಮುಂದುವರಿಸಲಿದೆ ಎಂದು ತಿಳಿಸಿದ್ದಾರೆ.
Posted by Vidyamaana on 2024-07-01 08:03:28 |
ನವದೆಹಲಿ: ಬ್ರಿಟಿಷ್ ವಸಾಹತು ಕಾಲದ ಕ್ರಿಮಿನಲ್ ಕಾನೂನುಗಳನ್ನು (New Criminal Laws) ಕೇಂದ್ರ ಸರ್ಕಾರ ತಿದ್ದು ಮಾಡಿದೆ. ಭಾರತೀಯ ದಂಡ ಸಂಹಿತೆ (IPC-1860), ಭಾರತೀಯ ಅಪರಾಧ ಪ್ರಕ್ರಿಯಾ ಸಂಹಿತೆ (CrPC-1973) ಹಾಗೂ ಭಾರತೀಯ ಸಾಕ್ಷ್ಯ ಕಾಯ್ದೆಗಳನ್ನು (Indian Evidence Act-1872) ತಿದ್ದುಪಡಿಗೆ ಒಳಪಡಿಸಲಾಗಿದೆ.
ಹೊಸ ಕ್ರಿಮಿನಲ್ ಕಾನೂನುಗಳು ಯಾವವು?
ಮೂರು ಹೊಸ ಕ್ರಿಮಿನಲ್ ಕಾನೂನುಗಳಾದ ಭಾರತೀಯ ನ್ಯಾಯ ಸಂಹಿತಾ (Indian Code), ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ (Indian Civil Protection Code) ಮತ್ತು ಭಾರತೀಯ ಸಾಕ್ಷಿ ಕಾಯಿದೆಯು (Indian Evidence Act) ಜುಲೈ 1ರಿಂದ ಜಾರಿಗೆ ಬರಲಿವೆ. ಬ್ರಿಟಿಷರ ಕಾಲದ ಭಾರತೀಯ ದಂಡ ಸಂಹಿತೆ, ಕ್ರಿಮಿನಲ್ ಪ್ರಕ್ರಿಯಾ ಸಂಹಿತೆ ಮತ್ತು 1872ರ ಭಾರತೀಯ ಸಾಕ್ಷಿ ಕಾಯಿದೆಗೆ ತಿದ್ದುಪಡಿ ಮಾಡಿ ಭಾರತೀಯ ನ್ಯಾಯ ಸಂಹಿತಾ, ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ ಮತ್ತು ಭಾರತೀಯ ಸಾಕ್ಷಿ ಕಾಯಿದೆ ಎಂದು ಬದಲಿಸಲಾಗಿದೆ.
ಭಯೋತ್ಪಾದಕರ ಆಸ್ತಿ ಮುಟ್ಟುಗೋಲು
ಭಯೋತ್ಪಾದನೆಯನ್ನು ಮೊದಲ ಬಾರಿಗೆ ಭಾರತೀಯ ನ್ಯಾಯ ಸಂಹಿತೆಯಲ್ಲಿ ಸೆಕ್ಷನ್ 113 (1) ಅಡಿಯಲ್ಲಿ ಶಿಕ್ಷಾರ್ಹ ಅಪರಾಧ ಎಂದು ವ್ಯಾಖ್ಯಾನಿಸಲಾಗಿದೆ. ಭಾರತದಲ್ಲಿ ಅಥವಾ ಯಾವುದೇ ವಿದೇಶದಲ್ಲಿ ಭಾರತದ ಏಕತೆ, ಸಮಗ್ರತೆ ಮತ್ತು ಭದ್ರತೆಗೆ ಧಕ್ಕೆ ತರುವ ಉದ್ದೇಶದಿಂದ ಯಾವುದೇ ಕೃತ್ಯವನ್ನು ಎಸಗುವ ವ್ಯಕ್ತಿಯನ್ನು ಈ ಕಾನೂನಿನಲ್ಲಿ ಭಯೋತ್ಪಾದಕ ಎಂದು ವ್ಯಾಖ್ಯಾನಿಸಲಾಗುತ್ತದೆ. ಸಾಮಾನ್ಯ ಸಾರ್ವಜನಿಕರನ್ನು ಅಥವಾ ಅದರ ಒಂದು ಭಾಗವನ್ನು ಬೆದರಿಸಲು ಅಥವಾ ಸಾರ್ವಜನಿಕ ಸುವ್ಯವಸ್ಥೆಗೆ ಭಂಗ ತರುವ ಭಯೋತ್ಪಾದಕರ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳುವ ಅವಕಾಶವೂ ಈ ಕಾನೂನಿನ ಅಡಿಯಲ್ಲಿ ಇದೆ. ಭಯೋತ್ಪಾದನೆಗೆ ಸಂಬಂಧಿಸಿದ ಕೃತ್ಯಗಳನ್ನು ಮರಣದಂಡನೆ ಅಥವಾ ಪೆರೋಲ್ ಇಲ್ಲದೆ ಜೀವಾವಧಿ ಶಿಕ್ಷೆಗೆ ಒಳಪಡಿಸಲಾಗಿದೆ. ‘ಆಸ್ತಿಗೆ ಹಾನಿ, ಅಥವಾ ಕರೆನ್ಸಿಯ ತಯಾರಿಕೆ ಅಥವಾ ಕಳ್ಳಸಾಗಣೆಯನ್ನು ಇದು ಒಳಗೊಂಡಿದೆ.