ಬಂಟ್ವಾಳ : ವಗ್ಗ ಬಳಿ ಅಂಬುಲೆನ್ಸ್ ನಿಯಂತ್ರಣ ತಪ್ಪಿ ಪಲ್ಟಿ

ಸುದ್ದಿಗಳು News

Posted by vidyamaana on 2023-08-18 08:29:00 |

Share: | | | | |


ಬಂಟ್ವಾಳ : ವಗ್ಗ ಬಳಿ ಅಂಬುಲೆನ್ಸ್  ನಿಯಂತ್ರಣ ತಪ್ಪಿ ಪಲ್ಟಿ

ಬೆಳ್ತಂಗಡಿ: ರೋಗಿಯೊಬ್ಬರನ್ನು  ಕೊಂಡುಹೋಗುತ್ತಿರುವ ವೇಳೆ ಟುಫಾನ್ ಅಂಬುಲೆನ್ಸ್ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಚಾಲಕ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಘಟನೆ ವಗ್ಗ ಬಳಿ ಆಗಸ್ಟ್ 18 ರಂದು ನಡೆದಿದೆ.



ಬೆಳ್ತಂಗಡಿಯಿಂದ ಮಂಗಳೂರಿಗೆ ರೋಗಿಯೊಬ್ಬರನ್ನು ಕೊಂಡೊಯ್ಯುತ್ತಿರುವ ವೇಳೆ ಬಂಟ್ವಾಳದ ವಗ್ಗ ಬಳಿ ಅಂಬುಲೆನ್ಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಈ ವೇಳೆ ಚಾಲಕ ಮಡಂತ್ಯಾರ್ ಮಾಲಾಡಿ ನಿವಾಸಿ ಶಬೀರ್ ಎಂಬವರು ಗಂಭೀರ ಗಾಯಗೊಂಡಿದ್ದು ತಕ್ಷಣ ಅವರನ್ನು ತುಂಬೆ ಖಾಸಗಿ ಆಸ್ಪತ್ರೆಗೆ ಕೊಂಡು ಹೋದರೂ ಅಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದೇ  ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

 Share: | | | | |


ನಟಿ ನೂರ್ ಮಾಲಾಬಿಕಾ ದಾಸ್ ಆತ್ಮಹತ್ಯೆ

Posted by Vidyamaana on 2024-06-10 19:13:11 |

Share: | | | | |


ನಟಿ ನೂರ್ ಮಾಲಾಬಿಕಾ ದಾಸ್ ಆತ್ಮಹತ್ಯೆ

ಮುಂಬೈ: ಬಾಲಿವುಡ್ ನಟಿ ನೂರ್ ಮಾಲಾಬಿಕಾ ದಾಸ್ ಮುಂಬೈನ ಅಪಾರ್ಟ್ ಮೆಂಟ್ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

2023ರಲ್ಲಿ ಬಿಡುಗಡೆಗೊಂಡಿದ್ದ ದಿ ಟ್ರಯಲ್ ವೆಬ್ ಸರಣಿಯಲ್ಲಿ ನಟಿ ಕಾಜೋಲ್ ಜತೆ ಮಾಲಾಬಿಕಾ ದಾಸ್ ನಟಿಸಿದ್ದರು.

ವೃದ್ದೆಯ ಮನೆಯಲ್ಲಿದ್ದ ಚಿನ್ನ ದಿಡೀರನೆ ನಾಪತ್ತೆ ಪೊಲೀಸರಿಗೆ ಕರೆ ಮಾಡಿದಾಗ ತಲೆದಿಂಬಿನಡಿಯಲ್ಲಿ ಪತ್ತೆ

Posted by Vidyamaana on 2023-06-14 12:18:39 |

Share: | | | | |


ವೃದ್ದೆಯ ಮನೆಯಲ್ಲಿದ್ದ ಚಿನ್ನ ದಿಡೀರನೆ ನಾಪತ್ತೆ ಪೊಲೀಸರಿಗೆ ಕರೆ ಮಾಡಿದಾಗ ತಲೆದಿಂಬಿನಡಿಯಲ್ಲಿ ಪತ್ತೆ

ಪುತ್ತೂರು: ವೃದ್ದೆಯರಿಬ್ಬರೇ ವಾಸ ಮಾಡುತ್ತಿದ್ದ ಮನೆಯಲ್ಲಿದ್ದ ಚಿನ್ನಾಭರಣ ದಿಡೀರನೆ ನಾಪತ್ತೆಯಾಗಿದ್ದು ಹುಡುಕಾಡಿದರೂ ಪತ್ತೆಯಾಗಿರಲಿಲ್ಲ ಕೊನೆಗೆ ಪೊಲೀಸರಿಗೆ ಕರೆ ಮಾಡಿ ಮಾಹಿತಿ ನೀಡಲಗಿದ್ದು ಪೊಲೀಸರು ಬರುವುದರೊಳಗೆ ಬೆಡ್‌ನ ತಲೆದಿಂಬಿನಡಿಯಲ್ಲಿ ಪತ್ತೆಯಾದ ಘಟನೆ ನಗರದ ದರ್ಬೆಯಲ್ಲಿ ನಡೆದಿದೆ.

ದರ್ಬೆ ಆಸ್ಪತ್ರೆಯ ಬಳಿ ಮನೆಯೊಂದರಲ್ಲಿ ನಿವೃತ್ತ ವೃದ್ದ ಶಿಕ್ಷಕಿಯರಿಬ್ಬರು ವಾಸ ಮಾಡುತ್ತಿದ್ದಾರೆ. ಇವರಿಬ್ಬರು ಮಾತ್ರ ಮನೆಯಲ್ಲಿದ್ದು ಮನೆಯಲ್ಲಿ ಬೇರೆ ಯಾರೂ ಇಲ್ಲ. ಕಳೆದ ಎರಡು ದಿನಗಳ ಹಿಂದೆ ಇವರು ಕಪಾಟಿನಲ್ಲಿಟ್ಟಿದ್ದ ಚಿನ್ನದ ಅರವೊಂದು ದಿಡೀರನೆ ನಾಪತ್ತೆಯಾಗಿತ್ತು. ಇಬ್ಬರು ವೃದ್ದೆ ಮತ್ತು ಕೆಲಸದಾಳು ಸೇರಿ ಮನೆಯಲ್ಲೆಲ್ಲಾ ಇಡೀ ದಿನ ಹುಡುಕಾಡಿದ್ದಾರೆ. ಎಲ್ಲಿ ಹುಡಕಿದರೂ ಚಿನ್ನದ ಸರ ಪತ್ತೆಯಾಗಲಿಲ್ಲ. ಮಾರನೇ ದಿನವೂ ಇಡೀ ಮನೆಯನ್ನೇ ಗುಡಿಸಿ ಹುಡುಕಿದ್ದಾರೆ ಆದರೂ ಪತ್ತೆಯಾಗಲಿಲ್ಲ. ಕೊನೆಗೆ ವೃದ್ದೆಯರಿಬ್ಬರು ಸಮಾಜ ಸೇವಕರೋರ್ವರಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ. ಅವರು ಮನೆಗೆ ಬಂದು ಹುಡುಕಾಟ ನಡೆಸಿದ್ದಾರೆ ಆದರೂ ಚಿನ್ನ ಸಿಗಲಿಲ್ಲ. ಕೊನೆಗೆ ಪೊಲಿಸರಿಗೆ ಕರೆ ಮಾಡಿ ವಿಷಯ ತಿಳಿಸಲಾಯ್ತು . ಪೊಲೀಸರು ಬರುವಿಕೆಯನ್ನು ಕಾಯುತ್ತಾ ಮನೆಯೊರಗೆ ವೃದ್ದೆಯರಿಬ್ಬರು ಕೂತಿದ್ದರು. ಆ ವೇಳೆ ಮನೆಯೊಳಗಿದ್ದ ಕೆಲಸದಾಳು ಚಿನ್ನ ಸಿಕ್ಕಿದೆ ಬೆಡ್‌ರೂಂನ ತಲೆದಿಂಬಿನಡಿಯಲ್ಲಿ ಇತ್ತು ಎಂದು ವೃದ್ದೆಯ ಕೈಗೆ ಕೊಟ್ಟರು. ಅಷ್ಟು ಹುಡುಕಾಡಿದರೂ ಸಿಗದ ಚಿನ್ನ ಏಕಾಏಕಿ ತಲೆದಿಂಬಿನಡಿಯಲ್ಲಿ ಹೇಗೆ ಬಂತು ಎಂಬುದು ಕುತೂಹಲಕ್ಕೆ ಕಾರಣವಾಗಿದೆ. ಪೊಲೀಸರು ವಿಚಾರಣೆ ನಡೆಸಿದ್ದಾರೆ ಎಂಬ ಮಾಹಿತಿಯೂ ಇದೆ.

ಕರಾವಳಿಯ ಪ್ರಖ್ಯಾತ ಆಭರಣ ಸಂಸ್ಥೆ ಮೇಲೆ ಐಟಿ ಶಾಕ್

Posted by Vidyamaana on 2023-10-31 11:30:09 |

Share: | | | | |


ಕರಾವಳಿಯ ಪ್ರಖ್ಯಾತ ಆಭರಣ ಸಂಸ್ಥೆ ಮೇಲೆ ಐಟಿ ಶಾಕ್

ಮಂಗಳೂರು, ಅ.31: ಕರಾವಳಿಯ ಪ್ರಖ್ಯಾತ "ಆಭರಣ" ಸಂಸ್ಥೆಯ ಮೇಲೆ ಬೆಳ್ಳಂಬೆಳಗ್ಗೆ ಐಟಿ ಅಧಿಕಾರಿಗಳು ಶಾಕ್ ನೀಡಿದ್ದಾರೆ. ಉಡುಪಿ, ಮಂಗಳೂರು, ಬೆಳ್ತಂಗಡಿ, ಪಡುಬಿದ್ರಿ, ಬ್ರಹ್ಮಾವರ ಸೇರಿದಂತೆ ಸಂಸ್ಥೆಯ ಮಳಿಗೆಗಳಲ್ಲಿ ದಾಳಿ ನಡೆಸಿದ್ದಾರೆ.‌ 


ಇಂದು ಬೆಳ್ಳಂಬೆಳಗ್ಗೆ ಐಟಿ ಅಧಿಕಾರಿಗಳು ಸಂಸ್ಥೆಯ ಎಲ್ಲ ಆಭರಣ ಮಳಿಗೆಗಳ ಒಳಹೊಕ್ಕಿದ್ದು ಪರಿಶೀಲನೆಯಲ್ಲಿ ತೊಡಗಿದ್ದಾರೆ. ಉಡುಪಿ ಮತ್ತು ಬೆಂಗಳೂರಿನಲ್ಲಿ ಪ್ರಧಾನ ಕಚೇರಿ ಹೊಂದಿರುವ ಆಭರಣ ಜುವೆಲ್ಲರಿ ಸಂಸ್ಥೆ ಹದಿನೈದು ವರ್ಷಗಳ ಮೊದಲಿಗೆ ಉಡುಪಿಯಲ್ಲಿ ಆರಂಭಗೊಂಡಿತ್ತು. ಗುಜ್ಜಾಡಿ ನರಸಿಂಹ ನಾಯಕ್ ಸೋದರರು ಮಳಿಗೆಯನ್ನು ಸ್ಥಾಪಿಸಿದ್ದು ಆನಂತರದ ವರ್ಷಗಳಲ್ಲಿ ರಾಜ್ಯಾದ್ಯಂತ ಮಳಿಗೆಯನ್ನು ಆರಂಭಿಸಿದ್ದರು. ಉಡುಪಿ ಜಿಲ್ಲೆಯ ಉಡುಪಿ, ಪಡುಬಿದ್ರಿ, ಬ್ರಹ್ಮಾವರ, ಕಾರ್ಕಳ, ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ಮೂರು ಕಡೆ ಜುವೆಲ್ಲರಿ ಇದೆ.‌ ಬಂಟ್ವಾಳ, ಬೆಳ್ತಂಗಡಿಯಲ್ಲೂ ಶಾಖೆ ಇದೆ. ಆಬಳಿಕ ಬೆಂಗಳೂರು, ಶಿವಮೊಗ್ಗದಲ್ಲಿಯೂ ಮಳಿಗೆ ಸ್ಥಾಪನೆಯಾಗಿತ್ತು. 


 ಅಧಿಕಾರಿಗಳು ಜುವೆಲ್ಲರಿ ಸಂಸ್ಥೆಯ ವಹಿವಾಟು, ಆಸ್ತಿ, ತೆರಿಗೆ ಸಂಗ್ರಹ ವಿಚಾರದಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ.‌


ಮಂಗಳೂರಿನ ಕದ್ರಿಯ ಶಿವಭಾಗ್ ನಲ್ಲಿ ಆಭರಣ ಜ್ಯುವೆಲ್ಲರಿಗೂ ಐಟಿ ದಾಳಿಯಾಗಿದ್ದು ಐಟಿ ಅಧಿಕಾರಿಗಳು ಟ್ಯಾಕ್ಸಿ ಇನೋವಾ ವಾಹನಗಳಲ್ಲಿ ದಾಳಿಗೆ ಬಂದಿದ್ದರು.‌ ಐದಾರು ಮಂದಿ ಅಧಿಕಾರಿಗಳು ತಪಾಸಣೆಯಲ್ಲಿ ತೊಡಗಿದ್ದು ಬಿಲ್ಲಿಂಗ್ ವಿವರ, ಚಿನ್ನದ ಬೇರೆ ಬೇರೆ ದಾಖಲೆಗಳನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ. ರಾಜ್ಯದಲ್ಲಿ 14 ಹಾಗೂ ಗೋವಾದಲ್ಲಿ ಒಂದು ಆಭರಣ ಜ್ಯುವೆಲ್ಲರಿ ಮಳಿಗೆಗಳಿವೆ ಎನ್ನುವ ಮಾಹಿತಿಯಿದ್ದು ಎಲ್ಲ ಕಡೆಯೂ ದಾಳಿ ಆಗಿದೆ ಎನ್ನಲಾಗುತ್ತಿದೆ.

ಶಾಲೆಗೆ ಬಾಂಬ್ ಬೆದರಿಕೆ: ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದ ಡಿ.ಕೆ ಶಿವಕುಮಾರ್

Posted by Vidyamaana on 2023-12-01 12:44:28 |

Share: | | | | |


ಶಾಲೆಗೆ ಬಾಂಬ್ ಬೆದರಿಕೆ: ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದ ಡಿ.ಕೆ ಶಿವಕುಮಾರ್

ಬೆಂಗಳೂರು: ತಮ್ಮ ನಿವಾಸದ ಎದುರು ರಸ್ತೆಯಿಂದಾಚೆಯಿರುವ ಬೇಬಿ ಸಿಟ್ಟಿಂಗ್ ಗೆ ಬಾಂಬ್ ಬೆದರಿಕೆ ಕೇಳಿಬಂದ ಹಿನ್ನೆಲೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಖುದ್ದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


ನೀವ್ ಬೇಬಿ ಸಿಟ್ಟಿಂಗ್ಗೆ ಇ-ಮೇಲ್ ಬಾಂಬ್ ಬೆದರಿಕೆ ಬಂದ ಹಿನ್ನೆಲೆಯಲ್ಲಿ ಸ್ಥಳ ಪರಿಶೀಲನೆ ನಡೆಸಿ, ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡಿದ್ದಾರೆ. ಜೊತೆಗೆ ಸೂಕ್ತ ತನಿಖೆ ನಡೆಸಲು ಸೂಚಿಸಿದ್ದಾರೆ.


ಬಳಿಕ ಪ್ರತಿಕ್ರಿಯಿಸಿ, ಪೊಲೀಸರು ತಪಾಸಣೆ ನಡೆಸುತ್ತಿದ್ದಾರೆ, ಟಿವಿಯಲ್ಲಿ ವಿಷಯ ತಿಳಿದು ಗಾಬರಿ ಆದೆ. ಇದೊಂದು ಹುಸಿ ಕರೆ ಅಂತ ಮೇಲ್ನೋಟಕ್ಕೆ ಗೊತ್ತಾಗ್ತಿದೆ. 8-10 ಬಾರಿ ಹೀಗೆ ಹುಸಿ ಕರೆ ಮಾಡ್ತಾರೆ ಯಾವಗಲಾದರೂ ನಿಜವಾಗಿಯೂ ಬಾಂಬ್ ಇಡಬಹುದು ಯಾವುದನ್ನೂ ಕಡೆಗಣಿಸೋಕೆ ಆಗಲ್ಲ ಎಂದು ಹೇಳಿದ್ದಾರೆ.

ಜೂ.17-18 : ಪುತ್ತೂರು ಜೈನಭವನದಲ್ಲಿ ಹಲಸು ಮತ್ತು ಹಣ್ಣುಗಳ ಮೇಳ-2023

Posted by Vidyamaana on 2023-06-15 15:59:55 |

Share: | | | | |


ಜೂ.17-18 : ಪುತ್ತೂರು ಜೈನಭವನದಲ್ಲಿ ಹಲಸು ಮತ್ತು ಹಣ್ಣುಗಳ ಮೇಳ-2023

ಪುತ್ತೂರು: ಪುತ್ತೂರು ನವತೇಜ ಟ್ರಸ್ಟ್, ಬೆಂಗಳೂರಿನ ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆ ಹಾಗೂ ಪುತ್ತೂರು ಜೆಸಿಐ ಸಂಯುಕ್ತ ಆಶ್ರಯದಲ್ಲಿ6ನೇ  “ಹಲಸು ಮತ್ತು ಹಣ್ಣುಗಳ ಮೇಳ-2023” ಜೂ.17 ಹಾಗೂ 18 ರಂದು ಪುತ್ತೂರು ಬೈಪಾಸ್ ರಸ್ತೆಯಲ್ಲಿರುವ ಜೈನ ಭವನದಲ್ಲಿ ನಡೆಯಲಿದೆ ಎಂದು ನವತೇಜ ಟ್ರಸ್ಟ್ ಅಧ್ಯಕ್ಷ ಅನಂತಪ್ರಸಾದ್ ನೈತ್ತಡ್ಕ ತಿಳಿಸಿದ್ದಾರೆ.

ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಮೇಳದಲ್ಲಿ ಸುಮಾರು 30 ಕ್ಕೂ ಅಧಿಕ ಮಿಕ್ಕಿ ಹಲಸಿನ ಉತ್ಪನ್ನಗಳ ಪ್ರದರ್ಶನ ಹಾಗೂ ಮಾರಾಟಗಳ ಮಳಿಗೆಗಳಿವೆ. ಸ್ಥಳದಲ್ಲೇ ತಯಾರಿಸುವ ಹಲವು ಪಾರಂಪರಿಕ ತಿಂಡಿಗಳು ಜೊತೆಗೆ ಹಲಸಿನ ತಳಿಗಳನ್ನು ಅಭಿವೃದ್ಧಿಪಡಿಸಿದ ಪ್ರಸಿದ್ಧ ನರ್ಸರಿಗಳ ಗಿಡಗಳು, ಸ್ಥಳೀಯ ಹಾಗೂ ಅಂತರಾಷ್ಟ್ರೀಯ ಮಟ್ಟದ ವಿವಿಧ ಹಣ್ಣುಗಳ ಪ್ರದರ್ಶನ ಮತ್ತು ಮಾರಾಟ, ಹಲಸುಗಳನ್ನು ಸುಲಭವಾಗಿ ಕಟ್ಟ ಮಾಡುವ ಮೆಷಿನ್‍ಗಳ ಪ್ರದರ್ಶನವನ್ನೂ ಏರ್ಪಡಿಸಲಾಗಿದೆ ಎಂದು ತಿಳಿಸಿದರುಮೇಳದಲ್ಲಿ ಹಲಸಿನ ಹಣ್ಣಿನಿಂದ ತಯಾರಿಸಿದ ಹಲಸಿನ ಉಂಡ್ಲಕಾಳು, ಚಿಪ್ಸ್ , ಹಪ್ಪಳ, ದೋಸೆ, ಮಂಚೂರಿ, ಕಬಾಬ್, ಮುಳುಕ್ಕ, ಜ್ಯೂಸ್, ಸೊಳೆ ರೊಟ್ಟಿ, ಕೇಕ್, ಹಲ್ವ, ಅತಿರಸ, ಸೇಮಿಗೆ, ಬನ್ಸ್, ಪವಾಲ್, ಪಾಯಸ, ಸೋಂಟೆ, ಕೊಟ್ಟಿಗೆ, ಗೆಣಸಲೆ, ಪೋಡಿ, ಮಾಂಬಳ, ಐಸ್ ಕ್ರೀಂ, ಹಲಸಿನ ಬೀಜದ ಹೋಳಿಗೆ, ಹಣ್ಣಿನ ಹೋಳಿಗೆ ಹೀಗೆ ಹತ್ತು ಹಲಸು ಬಗೆಯ ಖಾದ್ಯಗಳನ್ನು ಸವಿಯುವ ಅವಕಾಶವನ್ನು ಹಲಸು ಪ್ರಿಯರಿಗೆ ಒಂದೇ ಸೂರಿನಡಿ ಒದಗಿಸಲಾಗುವುದು ಎಂದು ಅವರು ತಿಳಿಸಿದರು.ಜೂ.17 ಶನಿವಾರ ಬೆಳಿಗ್ಗೆ 8.30 ಕ್ಕೆ ಮೇಳದಲ್ಲಿ ತೆರೆಯುವ ಮಳಿಗೆಗಳನ್ನು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಪ್ರಸಾದ ಮುಳಿಯ ಉದ್ಘಾಟಿಸಲಿದ್ದು, 10 ಗಂಟೆಗೆ ಬೆಂಗಳೂರು ಐಐಎಚ್ ಆರ್ ನಿರ್ದೇಶಕ ಡಾ.ಸಂಜಯ ಕುಮಾರ್ ಸಿಂಗ್ ಮೇಳಕ್ಕೆ ಚಾಲನೆ ನೀಡಲಿದ್ದಾರೆ. ಪುತ್ತೂರು ಸುದಾನ ಶಾಲಾ ಸಂಚಾಲಕ ರೆ.ವಿಜಯ ಹಾರ್ವಿನ್ ಅಧ್ಯಕ್ಷತೆ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಬೆಂಗಳೂರು ಐಐಎಚ್ ಆರ್ ಪ್ರಾಜೆಕ್ಟ್ ಕೋಆರ್ಡಿನೇಟರ್ ಡಾ.ಪಿ.ಸಿ.ಪಾಟೇಲ್, ಪುತ್ತೂರು ನ್ಯಾಯವಾದಿ ಫಝ್ಲುಲ್ ರಹಿಮಾನ್, ವಲಯ ಜೆಸಿಐ ಕಾರ್ಯಕ್ರಮ ನಿರ್ದೇಶಕಿ ಜೇಸಿ ಅಕ್ಷತಾ ಗಿರೀಶ್, ರೋಟರಿ ಕ್ಲಬ್ ಪುತ್ತೂರು ಯುವ ನಿಯೋಜಿತ ಅಧ್ಯಕ್ಷ ಪಶುಪತಿ ಶರ್ಮ ಪಾಲ್ಗೊಳ್ಳಲಿದ್ದು, ಪುತ್ತೂರು ಜೆಸಿಐ ಅಧ್ಯಕ್ಷ ಸುಹಾಸ್ ಮರಿಕೆ ಉಪಸ್ಥಿತರಿರುವರು ಎಂದು ತಿಳಿಸಿದರು.

ಬಳಿಕ 11 ಗಂಟೆಗೆ ನಡೆಯುವ ಹಲಸು-ಸಂವಹನ ಸಮಾವೇಶದಲ್ಲಿ ಬೆಂಗಳೂರು ಐಐಎಚ್ ಆರ್ ವಿಜ್ಞಾನಿ ಡಾ.ಕರುಣಾಕರ್, ಬೆಂಗಳೂರು ಮಾ ಇಂಟಿಗ್ರೇಟರ್ಸ್ ನ ಅಶೋಕ್ ಕುಮಾರ್ ಕರಿಕ್ಕಳ, ಭಟ್ & ಭಟ್ ಯೂಟ್ಯೂಬ್ ಚಾನೆಲ್‍ನ ಸುದರ್ಶನ ಭಟ್ ಬೆದ್ರಾಡಿ, ಬೆಳ್ಳಾರೆ ಕುರಿಯಾಜೆ ಫಾರ್ಮ್ಸ್ ನ ಕುರಿಯಾಜೆ ತಿರುಮಲೇಶ್ವರ ಭಟ್, ಆಲಂಗಾರು ರಾಘವೇಂದ್ರ ನರ್ಸರಿಯ ಕೃಷ್ಣ ಕೆದಿಲಾಯ ಪಾಲ್ಗೊಳ್ಳಲಿದ್ದಾರೆ. ಸಮನ್ವಯಕಾರರಾಗಿ ವೇಣುಗೋಪಾಲ್ ಎಸ್‍.ಜಿ. ಪಾಲ್ಗೊಳ್ಳಲಿದ್ದಾರೆ ಎಂದು ಅವರು ತಿಳಿಸಿದರು.


ಜೂ.18 ಭಾನುವಾರ ಸಂಜೆ 4 ಕ್ಕೆ ನಡೆಯುವ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಪಾಲ್ಗೊಳ್ಳಲಿದ್ದು, ಸಾವಯವ ಕೃಷಿಕ ಎ.ಪಿ.ಸದಾಶಿವ ಮರಿಕೆ ಸಮಾರೋಪ ಭಾಷಣ ಮಾಡುವರು. ಅನಂತಪ್ರಸಾದ್ ಅಧ್ಯಕ್ಷತೆ ವಹಿಸುವರು ಎಂದು ತಿಳಿಸಿದರು.

ಜೇಸಿಐ ಅಧ್ಯಕ್ಷ ಸುಹಾಸ್ ಮರಿಕೆ ಮಾತನಾಡಿ, ಕಾರ್ಯಕ್ರಮದಲ್ಲಿ ಹಲಸಿನ ಹಣ್ಣಿನ ಮೌಲ್ಯವರ್ಧನೆ ಕುರಿತು ಬಹಳಷ್ಟು ಚರ್ಚೆಗಳು ನಡೆಯಲಿವೆ. ಮೇಳದಲ್ಲಿ ಮುಖ್ಯವಾಗಿ ಕಾರ್ಕಳದ ಹಲಸಿನ ವಿವಿಧ ಖಾದ್ಯ ಸಹಿತ ಮಂಚೂರಿ ತಯಾರಿಕೆ ತಂಡ, ರಾಮಚಂದ್ರಾಪುರ ಮಠದಿಂದ ಹಲಸಿನ ಖಾದ್ಯ ತಯಾರಿಸುವ ಮಹಿಳೆಯರ ತಂಡವೊಂದು ಆಗಮಿಸಲಿದೆ. ಮೇಳದಲ್ಲಿ ಹಲಸಿನ ಕುರಿತು ಚಿತ್ರಕಲೆ, ಪ್ರಬಂಧ ಮುಂತಾದ ಹತ್ತು ಹಲವು ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಿ ಸ್ಥಳದಲ್ಲೇ ಬಹುಮಾನ ನೀಡಲಾಗುವುದು. ಒಟ್ಟಾರೆಯಾಗಿ ಹಲಸು ಮನೆ ಮನೆಯಲ್ಲಿ ಬಳಕೆ ಆಗಬೇಕು ಎಂಬ ನಿಟ್ಟಿನಲ್ಲಿ ಮೇಳ ಆಯೋಜಿಸಲಾಗಿದೆ ಎಂದು ತಿಳಿಸಿದರು.

ಸಹಕಾರ ನೀಡುವ ಸಂಸ್ಥೆಗಳು :

ಕಾರ್ಯಕ್ರಮಕ್ಕೆ ಮಂಗಳೂರು ಭಾರತ ಅಟೋಕಾರ್ಸ್ ಪ್ರೈ.ಲಿ., ವಿಟ್ಲ ಪಿಂಗಾರ ರೈತೋತ್ಪಾದನಾ ಸಂಸ್ಥೆ,  ಪುತ್ತೂರು ಎಸ್‍ ಆರ್‍ ಕೆ. ಲ್ಯಾಡರ್ಸ್, ಸಾಯ ಎಂಟರ್ ಪ್ರೈಸಸ್‍, ಉಪ್ಪಿನಂಗಡಿ ಅಕ್ಷ ಕಾಟೇಜ್ ಇಂಡಸ್ಟ್ರೀಸ್, ಪುತ್ತೂರು ನವನೀತ ಫಾರ್ಮ್ ನರ್ಸರಿ, ಏಳ್ಮುಡಿ ಮರಿಕೆ ಸಾವಯವ ಮಳಿಗೆ ಹಾಗೂ ಪುತ್ತೂರು ಯುವ ರೋಟರಿ ಕ್ಲಬ್ ಸಹಕಾರ ನೀಡಲಿದೆ.

ಪತ್ರಿಕಾಗೋಷ್ಠಿಯಲ್ಲಿ ನವನೀತ್ ಫಾರ್ಮ್ ನರ್ಸರಿಯ ವೇಣುಗೋಪಾಲ್ ಉಪಸ್ಥಿತರಿದ್ದರು.

ನಡು ರೋಡಲ್ಲೇ ಚಲಿಸುವ ಗಾಡಿ ಮೇಲೆ ರೊಮ್ಯಾನ್ಸ್- ವಿಡಿಯೋ ವೈರಲ್

Posted by Vidyamaana on 2024-01-16 21:29:39 |

Share: | | | | |


ನಡು ರೋಡಲ್ಲೇ ಚಲಿಸುವ ಗಾಡಿ ಮೇಲೆ ರೊಮ್ಯಾನ್ಸ್- ವಿಡಿಯೋ ವೈರಲ್

ವೈರಲ್ ವೈರಲ್ ವೈರಲ್.... ಸಾಮಾಜಿಕ ಜಾಲತಾಣದಲ್ಲಿ ಎಲ್ಲವೂ ವೈರಲ್ ಆಗಿಬಿಡುತ್ತವೆ. ಹೀಗಾಗಿ ಎಷ್ಟು ಜಾಗ್ರತೆಯಿಂದಿದ್ದರೂ ಕಡಿಮೆನೇ. ಅದರಲ್ಲೂ ಮೈಮರೆತು ವರ್ತಿಸುವ ಕೆಲ ಯುವ ಜೋಡಿಗಳ ವೀಡಿಯೋಗಳಂತೂ ಸಾಮಾಜಿಕ ಜಾಲತಾಣದಲ್ಲಿ ಕಾಡ್ಗಿಚ್ಚಿನಂತೆ ಎಲ್ಲೆಡೆ ಹರಡಿಬಿಡುತ್ತವೆ.ಹೀಗೊಂದು ವಿಡಿಯೋದಲ್ಲಿ ಯುವ ಜೋಡಿಯೊಂದು ನಡು ರೋಡಲ್ಲೇ ಚಲಿಸುವ ಗಾಡಿ ಮೇಲೆ ರೊಮ್ಯಾನ್ಸ್ ಮಾಡುವುದು ಕಂಡು ಬಂದಿದೆ

ನಡು ರೋಡಲ್ಲೇ ಚಲಿಸುವ ಗಾಡಿ ಮೇಲೆ ರೊಮ್ಯಾನ್ಸ್- ವೈರಲ್ ವಿಡಿಯೋ ನೋಡಲು ಕ್ಲಿಕ್ ಮಾಡಿ



ಹಿಂಬದಿ ಸವಾರರು ಈ ದೃಶ್ಯವನ್ನು ಸೆರೆಹಿಡಿದಿದ್ದು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ. ಈ ದೃಶ್ಯ ಮುಂಬೈನದ್ದು ಎಂದು ಹೇಳಲಾಗಿದೆ. ಇದು ನೋಡುಗರ ಕೋಪವನ್ನು ನೆತ್ತಿಗೇರಿಸಿದೆ. ಮುಂಬೈನ ನಡು ರಸ್ತೆಯಲ್ಲಿ ಯುವ ಜೋಡಿಯೊಂದು ತಮ್ಮ ಸ್ಕೂಟರ್‌ನಲ್ಲಿ ಅಪಾಯಕಾರಿ ಸಾಹಸ ಪ್ರದರ್ಶಿಸುತ್ತಿರುವುದು ಕ್ಯಾಮರಾದಲ್ಲಿ ಸೆರೆಯಾಗಿದೆ. ವೈರಲ್ ಆಗಿರುವ ವೀಡಿಯೊ ಬಾಂದ್ರಾ ರಿಕ್ಲಮೇಷನ್ ರಸ್ತೆಯಲ್ಲಿ ಸೆರೆಹಿಡಿದ ದೃಶ್ಯವಾಗಿದೆ. ಈ ವಿಡಿಯೋ ಜನರ ಆಕ್ರೋಶಕ್ಕೆ ಗುರಿಯಾಗಿದೆ. ಸ್ಕೂಟಿ ಮೇಲೆ ಕುಳಿತ ಹುಡುಗನ ಮೇಲೆ ಹುಡುಗಿ ಕುಳಿತಿದ್ದಾಳೆ. ಜೊತೆಗೆ ಅವರಿಬ್ಬರು ಶಾಲ್ ಅನ್ನು ಹೊದ್ದುಕೊಂಡಿದ್ದಾರೆ. ಹುಡುಗ ಸ್ಕೂಟಿ ಚಲಾಯಿಸುತ್ತಿದ್ದರೆ ಹುಡುಗಿ ಆತನನ್ನು ಗಟ್ಟಿಯಾಗಿ ಅಪ್ಪಿಕೊಂಡು ಕುಳಿತಿದ್ದಾಳೆ. ಇಬ್ಬರೂ ಶಾಲಿನ ಕೆಳಗೆ ಭಾಗಶಃ ಮರೆಯಾಗಿದ್ದಾರೆ. ಇವರಿಬ್ಬರೂ ಹೆಲ್ಮೆಟ್ ಕೂಡ ಧರಿಸಿಲ್ಲ. ಸಂಚಾರ ನಿಯಮವನ್ನು ಸಂಪೂರ್ಣವಾಗಿ ಉಲ್ಲಂಘಿಸಿದ್ದಾರೆ. ಈ ವಿಡಿಯೋವನ್ನು ಹಂಚಿಕೊಂಡವರು "ಈ ಧೈರ್ಯಶಾಲಿ ಜೋಡಿಯನ್ನು ಬಾಂದ್ರಾ ರಿಕ್ಲಮೇಷನ್‌ನಲ್ಲಿ ಗುರುತಿಸಲಾಯಿತು. ಅವರ ಅಸಾಂಪ್ರದಾಯಿಕ ಸ್ಕೂಟರ್ ರೈಡ್‌ ತಲೆ ತಿರುಗಿಸಿದೆ. @MumbaiPolice ರಸ್ತೆಗಳಲ್ಲಿ ಪ್ರತಿಯೊಬ್ಬರ ಸುರಕ್ಷತೆಯನ್ನು ಕಾಪಾಡಲು ನಿಮ್ಮ ಗಮನವನ್ನು ಇತ್ತ ಹರಿಸುವಂತೆ ವಿನಂತಿಸುತ್ತೇವೆ," ಎಂದು ಶೀರ್ಷಿಕೆಯಲ್ಲಿ ಬರೆದಿದ್ದಾರೆ. ಇನ್ನೂ ಸಹ ಪ್ರಯಾಣಿಕರಿಂದ ರೆಕಾರ್ಡ್ ಮಾಡಿದ ಈ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಕೋಲಾಹಲಕ್ಕೆ ಕಾರಣವಾಯಿತು. ಇದಕ್ಕೆ ನೆಟ್ಟಿಗರು ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ ಮತ್ತು ತಕ್ಷಣದ ಪೊಲೀಸ್ ಮಧ್ಯಸ್ಥಿಕೆಗೆ ಕರೆ ನೀಡಿದ್ದಾರೆ. ವಿಮಾನ ಹಾರಾಟ ತಡವಾಗಿದ್ದಕ್ಕೆ ಪೈಲಟ್‌ನನ್ನೇ ಥಳಿಸಿದ ಪ್ರಯಾಣಿಕ: ವಿಡಿಯೋ ವೈರಲ್ ನೆಟ್ಟಿಗರ ಕಾಮೆಂಟ್ ಹೀಗಿದೆ:- ಇವರು ಇತರ ಸವಾರರ ಪ್ರಾಣಕ್ಕೆ ಕುತ್ತು ತರುತ್ತಾರೆ. ಮುಂಬೈ ಪೊಲೀಸರು ಇಂತವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ನೆಟ್ಟಿಗರರೊಬ್ಬರು ಕಾಮೆಂಟ್ ಮಾಡಿದ್ದಾರೆ. ಮುಂಬೈನಲ್ಲಿ ತುಂಬಾ ಚಳಿಯಂತೆ, ಹೀಗಿರುವಾಗ ಮನೆ ಬಿಟ್ಟು ಹೊರಬರಲು ಆಗದವರು ಹೀಗೆ ಮಾಡೋದು ಅನಿಸುತ್ತೆ ಮತ್ತೊಬ್ಬರು ಕುಟುಕಿದ್ದಾರೆ. ಮುಂಬೈನಲ್ಲಿ ಚಳಿ ನಡುವೆ ಹೀಗೂ ಹೊರಬರಬಹುದಾ? ಎಂದು ಮಗದೊಬ್ಬರು ಕಾಮೆಂಟ್ ಮಾಡಿದ್ದಾರೆ. ಚಳಿಗಾಲ ಮುಗಿದ ಬಳಿಕ ಈ ದೃಶ್ಯ ನೋಡಲು ಇನ್ನೂ ಕೆಟ್ಟದಾಗಿರುತ್ತದೆ ಎಂದು ಮತ್ತೊಬ್ಬರು ಬರೆದಿದ್ದಾರೆ. ಜನನಿಬಿಡ ರಸ್ತೆಯಲ್ಲಿ ಇಂತಹ ಘಟನೆ ದಾಖಲಾಗಿರುವುದು ಇದೇ ಮೊದಲಲ್ಲ. ಕಳೆದ ವರ್ಷವೂ ದೆಹಲಿಯ ರಸ್ತೆಗಳಲ್ಲಿ ಸ್ಕೂಟರ್ ಸವಾರಿ ಮಾಡುವಾಗ ಜೋಡಿಯೊಂದು ಒಬ್ಬರನ್ನೊಬ್ಬರು ತಬ್ಬಿಕೊಳ್ಳುತ್ತಿರುವ ವಿಡಿಯೋವೊಂದು ವೈರಲ್ ಆಗಿತ್ತು.



Leave a Comment: