ಬಂಟ್ವಾಳ : ವಗ್ಗ ಬಳಿ ಅಂಬುಲೆನ್ಸ್ ನಿಯಂತ್ರಣ ತಪ್ಪಿ ಪಲ್ಟಿ

ಸುದ್ದಿಗಳು News

Posted by vidyamaana on 2023-08-18 08:29:00 |

Share: | | | | |


ಬಂಟ್ವಾಳ : ವಗ್ಗ ಬಳಿ ಅಂಬುಲೆನ್ಸ್  ನಿಯಂತ್ರಣ ತಪ್ಪಿ ಪಲ್ಟಿ

ಬೆಳ್ತಂಗಡಿ: ರೋಗಿಯೊಬ್ಬರನ್ನು  ಕೊಂಡುಹೋಗುತ್ತಿರುವ ವೇಳೆ ಟುಫಾನ್ ಅಂಬುಲೆನ್ಸ್ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಚಾಲಕ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಘಟನೆ ವಗ್ಗ ಬಳಿ ಆಗಸ್ಟ್ 18 ರಂದು ನಡೆದಿದೆ.



ಬೆಳ್ತಂಗಡಿಯಿಂದ ಮಂಗಳೂರಿಗೆ ರೋಗಿಯೊಬ್ಬರನ್ನು ಕೊಂಡೊಯ್ಯುತ್ತಿರುವ ವೇಳೆ ಬಂಟ್ವಾಳದ ವಗ್ಗ ಬಳಿ ಅಂಬುಲೆನ್ಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಈ ವೇಳೆ ಚಾಲಕ ಮಡಂತ್ಯಾರ್ ಮಾಲಾಡಿ ನಿವಾಸಿ ಶಬೀರ್ ಎಂಬವರು ಗಂಭೀರ ಗಾಯಗೊಂಡಿದ್ದು ತಕ್ಷಣ ಅವರನ್ನು ತುಂಬೆ ಖಾಸಗಿ ಆಸ್ಪತ್ರೆಗೆ ಕೊಂಡು ಹೋದರೂ ಅಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದೇ  ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

 Share: | | | | |


ಟೊಮೆಟೊ ಮಾರಾಟ ಮಾಡಿ 45 ದಿನಗಳಲ್ಲಿ 4 ಕೋಟಿ ರೂ.ಗಳಿಸಿದ ಆಂಧ್ರದ ರೈತ

Posted by Vidyamaana on 2023-07-30 11:38:24 |

Share: | | | | |


ಟೊಮೆಟೊ ಮಾರಾಟ ಮಾಡಿ 45 ದಿನಗಳಲ್ಲಿ 4 ಕೋಟಿ ರೂ.ಗಳಿಸಿದ ಆಂಧ್ರದ ರೈತ

ಅಮರಾವತಿ: ಟೊಮೆಟೊಗಳ ಬೆಲೆ ಗಗನಕ್ಕೇರುತ್ತಿರುವ ಮಧ್ಯೆ ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ರೈತ ದಂಪತಿ 40,000 ಪೆಟ್ಟಿಗೆಗಳ ಟೊಮೆಟೊಗಳನ್ನು ಮಾರಾಟ ಮಾಡಿ 45 ದಿನಗಳ ಅವಧಿಯಲ್ಲಿ 4 ಕೋಟಿ ರೂ. ಗಳಿಸಿದ್ದಾರೆ.


ಟೊಮೆಟೊ ರೈತ ಚಂದ್ರಮೌಳಿ, 22 ಎಕರೆ ಕೃಷಿ ಭೂಮಿಯನ್ನು ಹೊಂದಿದ್ದು, ಎಪ್ರಿಲ್ ಮೊದಲ ವಾರದಲ್ಲಿ ಅಪರೂಪದ ವೈವಿಧ್ಯಮಯ ಟೊಮೆಟೊ ಬಿತ್ತನೆ ಮಾಡಿದರು. ಇಳುವರಿಯನ್ನು ವೇಗವಾಗಿ ಪಡೆಯಲು ಅವರು ಹಸಿಗೊಬ್ಬರ ಹಾಗೂ ಸೂಕ್ಷ್ಮ ನೀರಾವರಿಯಂತಹ ಸುಧಾರಿತ ತಂತ್ರಗಳನ್ನು ಜಾರಿಗೆ ತಂದರು. ಜೂನ್ ಅಂತ್ಯದ ವೇಳೆಗೆ ಟೊಮೆಟೊ ಇಳುವರಿಯನ್ನು ಪಡೆದಾಗ ಅವರು ತಮ್ಮ ಪ್ರಯತ್ನಗಳಲ್ಲಿ ಯಶಸ್ವಿಯಾದರು.ಅವರು ತಮ್ಮ ಉತ್ಪನ್ನಗಳನ್ನು ಕರ್ನಾಟಕದ ಕೋಲಾರ ಮಾರುಕಟ್ಟೆಯಲ್ಲಿ ಮಾರಿದ್ದರು, ಅದು ಅವರ ಊರಿಗೆ ಹತ್ತಿರದಲ್ಲಿದೆ. ಮಾರುಕಟ್ಟೆಯಲ್ಲಿ ಕಳೆದ 45 ದಿನಗಳಲ್ಲಿ 40,000 ಪೆಟ್ಟಿಗೆಗಳ ಟೊಮೆಟೊ ಮಾರಾಟ ಮಾಡಿದರು.


ಟೊಮೆಟೊ ಬೆಲೆ ಏರಿಕೆಯಾಗುತ್ತಿರುವ ಬಗ್ಗೆ ಸಂತಸ ವ್ಯಕ್ತಪಡಿಸಿದ ಚಂದ್ರಮೌಳಿ, ಟೊಮೆಟೊ ಮಾರಾಟದಿಂದ ನಾನು ಈ ತನಕ 4 ಕೋಟಿ ರೂ.ಗಳಿಸಿದ್ದೇನೆ. 22 ಎಕರೆ ಭೂಮಿಯಲ್ಲಿ ಬೆಳೆ ತೆಗೆಯಲು ಒಟ್ಟು 1 ಕೋ.ರೂ. ಖರ್ಚು ಮಾಡಿದ್ದೇನೆ. ಇದರಲ್ಲಿ ಕಮಿಶನ್ ಹಾಗೂ ಸಾರಿಗೆ ವೆಚ್ಚವೂ ಸೇರಿದೆ. ಹೀಗಾಗಿ ನನಗೆ 3 ಕೋ.ರೂ. ಲಾಭವಾಗಿದೆ"ಎಂದು ಹೇಳಿದ್ದಾರೆ.

ಬೆಳ್ತಂಗಡಿ : ಸೌಜನ್ಯ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್

Posted by Vidyamaana on 2023-11-07 21:53:20 |

Share: | | | | |


ಬೆಳ್ತಂಗಡಿ : ಸೌಜನ್ಯ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್

ಬೆಳ್ತಂಗಡಿ : 11 ವರ್ಷಗಳ ಹಿಂದೆ ಕೊಲೆಯಾದ ಕಾಲೇಜ್ ವಿದ್ಯಾರ್ಥಿ ಸೌಜನ್ಯ ಪ್ರಕರಣ ಆರೋಪಿಗೆ ನಿರ್ದೋಷಿ ಎಂದು ತೀರ್ಪು ನೀಡಿದ ಹಲವು ತಿಂಗಳ ಬಳಿಕ ಇದೀಗ ಸಿಬಿಐ ಅಧಿಕಾರಿಗಳು ಹೈಕೋರ್ಟ್‌ ಗೆ ಮೇಲ್ಮನವಿ ಸಲ್ಲಿಸಿದ್ದಾರೆ.


ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ವಿದ್ಯಾರ್ಥಿನಿ ಸೌಜನ್ಯ ಕೊಲೆ ಪ್ರಕರಣದಲ್ಲಿ ಸಿಬಿಐ ನ್ಯಾಯಾಲಯ ಆರೋಪಿ ಸಂತೋಷ್ ರಾವ್ ಗೆ ಸಾಕ್ಷದಾರ ಕೊರತೆಯಿಂದ ನಿರ್ದೋಷಿ ಎಂದು ತೀರ್ಪು ನೀಡಿದ್ದು ಇದೀಗ ನ.5 ಶನಿವಾರದಂದು ಸಿಬಿಐ ತನಿಖಾಧಿಕಾರಿಗಳು ಹೈ ಕೋರ್ಟ್‌ ಗೆ ಮೇಲ್ಮನವಿ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ. ಇದರ ಬಗ್ಗೆ ಕೆಲವೇ ದಿನಗಳಲ್ಲಿ ಹೈಕೋರ್ಟ್ ಪ್ರಕರಣ ದಾಖಲಿಸಿದ ದಾವೆಯ CC ಹೊರಡಿಸಲಿದೆ.


ಇನ್ನೂ ಸೌಜನ್ಯ ಪ್ರಕರಣದಲ್ಲಿ ನಕಲಿ ಹೋರಾಟ ಮಾಡುವವರಿಗೆ ನಡುಕ ಹುಟ್ಟಿಸಿದೆ. ಈವರೆಗೆ ನಕಲಿ ಹೋರಾಟ ಮಾಡುವವರಿಗೆ ಕರ್ನಾಟಕದಲ್ಲಿ ಇನ್ನೂ ಮುಂದೆ ಹೋರಾಟ ನಿರ್ಬಂಧ ಹೇರಲಾಗುತ್ತೆ ಎನ್ನಲಾಗಿದೆ. ಅದಲ್ಲದೇ ಪ್ರಕರಣ ಯಾವ ರೀತಿಯಲ್ಲಿ ಮುಂದುವರಿಯತ್ತದೆ ಎಂದು ಕಾದು ನೋಡಬೇಕಾಗಿದೆ.

BREAKING : ಕೌಟುಂಬಿಕ ಕಲಹದ ಹಿನ್ನೆಲೆ ಬಾಮೈದನನ್ನು ಭೀಕರವಾಗಿ ಹತ್ಯೆಗೈದ ಭಾವ

Posted by Vidyamaana on 2024-04-09 22:58:30 |

Share: | | | | |


BREAKING : ಕೌಟುಂಬಿಕ ಕಲಹದ ಹಿನ್ನೆಲೆ ಬಾಮೈದನನ್ನು ಭೀಕರವಾಗಿ ಹತ್ಯೆಗೈದ ಭಾವ

ಬೆಂಗಳೂರು : ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಭಾವನಿಂದ ಭಾಮೈದನ ಹತ್ಯೆಗೆ ಈಡಗಿರುವ ಘಟನೆ ಬೆಂಗಳೂರಿನ ವೆಂಕಟೇಶಪುರದಲ್ಲಿ ನಡೆದಿದೆ.ಹೌದು ಕಿರಣ್ ಕುಮಾರ್ (32) ಹತ್ಯೆಗೆ ಈಡಾದ ವ್ಯಕ್ತಿಯಾಗಿದ್ದಾನೆ.ಚಾಕುವಿನಿಂದ ಇರಿದು ಭಾಮೈದನನ್ನು ಭಾವ ಲಕ್ಷ್ಮಣ ಎನ್ನುವವರು ಭೀಕರವಾಗಿ ಹತ್ಯೆಗೈದಿದ್ದಾರೆ.

ಮಂಗಳೂರಿನಲ್ಲಿ ಪತ್ರಕರ್ತನ ಮೇಲೆ ನೈತಿಕ ಪೊಲೀಸ್ ಗಿರಿ - ಇಬ್ಬರ ಬಂಧನ

Posted by Vidyamaana on 2023-07-31 13:11:07 |

Share: | | | | |


ಮಂಗಳೂರಿನಲ್ಲಿ ಪತ್ರಕರ್ತನ ಮೇಲೆ ನೈತಿಕ ಪೊಲೀಸ್ ಗಿರಿ - ಇಬ್ಬರ ಬಂಧನ

ಮಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ಅನೈತಿಕ ಪೊಲೀಸ್‌ಗಿರಿ ಅಂಕೆ ಮೀರಿ ಬೆಳೆಯುತ್ತಿದ್ದು, ವಿಟ್ಲದಲ್ಲಿ ಪೊಲೀಸ್ ಸಿಬ್ಬಂದಿಯನ್ನು ಅಡ್ಡಗಟ್ಟಿ ನಿಂದಿಸಿದ ಪ್ರಕರಣದ ಸಂದರ್ಭದಲ್ಲೇ ನಗರದ ಯುವ ವರದಿಗಾರನನ್ನು ತಡೆದು ಧರ್ಮದ ಹೆಸರೆತ್ತಿ ಅವಾಚ್ಯವಾಗಿ ನಿಂದಿಸಿದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.


ನಗರದ ವೆಬ್‌ಸೈಟ್‌ ಒಂದರ ಯುವ ವರದಿಗಾರ ಅಭಿಜಿತ್ ಅವರು, ಜು. 26ರಂದು ಮಧ್ಯಾಹ್ನ 3 ಗಂಟೆಯ ಸುಮಾರಿಗೆ ಕಾವೂರು ಜಂಕ್ಷನ್ ಬಳಿಯ ಹೊಟೇಲೊಂದರಲ್ಲಿ ತನ್ನ ಕಾಲೇಜಿನ ಸಹಪಾಠಿಯಾಗಿದ್ದ ಯುವತಿ ಜತೆ ಊಟ ಮುಗಿಸಿ ಹೊರ ಬರುತ್ತಿದ್ದಾಗ ಅಪರಿಚಿತ ವ್ಯಕ್ತಿಯೊಬ್ಬ ಬಂದು ನೀನು ಬ್ಯಾರಿಯೊಂದಿಗೆ ಏನು ಮಾತನಾಡುತ್ತಿ, ನೀನು ಬ್ಯಾರಿಯ ಇಲ್ಲಿಂದ ಹೊರಡು ಎಂದು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ. ಈ ಸಂದರ್ಭ ಅಭಿಜಿತ್ ಅವರು ತಾನು ದೈಜಿವರ್ಲ್ಡ್ ವರದಿಗಾರ ಎಂದು ತನ್ನ ಐಡಿ ಕಾರ್ಡ್ ತೋರಿಸಿದರೂ ಮತ್ತೆ ಅವಾಚ್ಯ ಶಬ್ದಗಳಿಂದ ಆ ಅಪರಿಚಿತ ವ್ಯಕ್ತಿಈ ಬಗ್ಗೆ ಅಭಿಜಿತ್ ಅದೇ ದಿನ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಆ ಸಂದರ್ಭದಲ್ಲಿ ಆ ವ್ಯಕ್ತಿಯ ಕಾರಿನ ನಂಬರ್ ನೋಟ್ ಮಾಡಿದ್ದರು. ಪೊಲೀಸ್ ಆಯುಕ್ತ ಕುಲದೀಪ್ ಆರ್. ಜೈನ್ ಅವರು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದರಿಂದ ಅವರ ನಿರ್ದೇಶನದ ಮೇರೆಗೆ ಆರೋಪಿ ಚೇತನ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಗೊಳಪಡಿಸಿದ್ದಾರೆ. ಜು. 28ರಂದು ಎಫ್‌ಐಆರ್ ದಾಖಲಾಗಿದ್ದು, ಬಳಿಕ ಪ್ರಕರಣದ ಆರೋಪಿ, ಕೋಟೆಕಾರ್ ನಿವಾಸಿ ಚೇತನ್ ಎಂಬಾತನನ್ನು ಬಂಧಿಸಿ, ಜಾಮೀನಿನ ಮೇಲೆ ಬಿಡುಗಡೆಗೊಳಿಸಲಾಗಿದೆ

ಹೈದರಾಬಾದ್ ಮೂಲದ ಮಹಿಳೆಯ ಶವ ಆಸ್ಟ್ರೇಲಿಯಾದ ಕಸದ ತೊಟ್ಟಿಯಲ್ಲಿ ಪತ್ತೆ

Posted by Vidyamaana on 2024-03-11 09:37:04 |

Share: | | | | |


ಹೈದರಾಬಾದ್ ಮೂಲದ ಮಹಿಳೆಯ ಶವ ಆಸ್ಟ್ರೇಲಿಯಾದ ಕಸದ ತೊಟ್ಟಿಯಲ್ಲಿ ಪತ್ತೆ

ಹೈದರಾಬಾದ್: ಹೈದರಾಬಾದ್ ಮೂಲದ ಮಹಿಳೆಯೊಬ್ಬರ ಶವವೊಂದು ಆಸ್ಟ್ರೇಲಿಯಾದ ಕಸದ ತೊಟ್ಟಿಯಲ್ಲಿ ಪತ್ತೆಯಾಗಿರುವ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ.


ಮೃತ ಮಹಿಳೆಯನ್ನು ಹೈದರಾಬಾದ್ ಮೂಲದ ಚೈತನ್ಯ ಮದಗಣಿ (೩೬) ಎನ್ನಲಾಗಿದ್ದು ಈಕೆಯ ಶವ ಶನಿವಾರ ಆಸ್ಟ್ರೇಲಿಯಾದ ಬಕ್ಲಿಯ ರಸ್ತೆಯ ಬದಿಯಲ್ಲಿ ಕಸದ ತೊಟ್ಟಿಯಲ್ಲಿ ಪತ್ತೆಯಾಗಿದೆ.

ಚೈತನ್ಯ ಅವರು ಅವರು ಹಲವು ವರ್ಷಗಳಿಂದ ತನ್ನ ಪತಿ ಅಶೋಕ್ ಅವರೊಂದಿಗೆ ಆಸ್ಟ್ರೇಲಿಯಾದ ಪಾಯಿಂಟ್​ ಕುಕ್ಕ್​ ಎಂಬಲ್ಲಿ ವಾಸವಾಗಿದ್ದರು ಇವರಿಗೆ ಒಂದು ಗಂಡು ಮಗು ಇದೆ.

ಕಳೆದ ಶನಿವಾರ ಆಸ್ಟ್ರೇಲಿಯಾದ ಪೊಲೀಸರು ಮಹಿಳೆಯ ಶವವನ್ನು ಪತ್ತೆಹಚ್ಚಿದ್ದು ತನಿಖೆ ಕೈಗೆತ್ತಿಕೊಂಡಿದ್ದಾರೆ ಆದರೆ ಪೊಲೀಸರ ಪ್ರಾಥಮಿಕ ತನಿಖೆ ಪ್ರಕಾರ ಪತಿಯೇ ಮಹಿಳೆಯ ಕತ್ಯೆಗೈದು ಬಳಿಕ ಕಸದ ತೊಟ್ಟಿಗೆ ಎಸೆದು ಭಾರತಕ್ಕೆ ಪರಾರಿಯಾಗಿರುವ ಶಂಕೆ ವ್ಯಕ್ತವಾಗಿದೆ ಎನ್ನಲಾಗಿದೆ.ಅಶೋಕ್ ಮೇಲೆ ಅನುಮಾನ ವ್ಯಕ್ತಪಡಿಸಿದ ಕುಟುಂಬ:

ಚೈತನ್ಯ ಸಾವಿನ ಸುದ್ದಿ ಗೊತ್ತಾಗುತ್ತಿದ್ದಂತೆ ಚೈತನ್ಯ ಪೋಷಕರು ಅಳಿಯನ ವಿರುದ್ಧವೇ ಅನುಮಾನ ಇದೆ ಎಂದು ಶಂಕೆ ವ್ಯಕ್ತಪಡಿಸಿದ್ದಾರೆ, ಅಲ್ಲದೆ ಪತ್ನಿ ಸಾವಿನ ಬಳಿಕ ಪತಿ ಭಾರತಕ್ಕೆ ಓಡಿ ಬಂದಿರುವ ವಿಚಾರದಲ್ಲಿ ಪತಿಯೇ ಈ ಕೃತ್ಯ ಎಸಗಿ ಪರಾರಿಯಾಗಿದ್ದಾನೆ ಎಂದು ಆರೋಪ ಮಾಡಲಾಗಿದೆ.

ಘಟನೆ ಸಂಬಂಧ ಉಪ್ಪಳ ಶಾಸಕ ಬಂಡಾರಿ ಲಕ್ಷ್ಮ ರೆಡ್ಡಿ ಮಾತನಾಡಿ, ಮಹಿಳೆ ತನ್ನ ಕ್ಷೇತ್ರದವಳಾದ ಕಾರಣ, ವಿಷಯ ತಿಳಿದ ನಂತರ ಇಂದು ಆಕೆಯ ಪೋಷಕರನ್ನು ಭೇಟಿ ಮಾಡಿದ್ದೇನೆ ಮಹಿಳೆಯ ಪೋಷಕರ ಕೋರಿಕೆಯ ಮೇರೆಗೆ ಮಹಿಳೆಯ ಮೃತದೇಹವನ್ನು ಹೈದರಾಬಾದ್‌ಗೆ ತರಲು ವಿದೇಶಾಂಗ ಕಚೇರಿಗೆ ಪತ್ರ ಬರೆದಿರುವುದಾಗಿ ತಿಳಿಸಿದ್ದಾರೆ. ಅಲ್ಲದೆ ಈ ಬಗ್ಗೆ ಕೇಂದ್ರ ಸಚಿವ ಜಿ ಕಿಶನ್ ರೆಡ್ಡಿ ಅವರ ಕಚೇರಿಗೂ ತಿಳಿಸಿರುವುದಾಗಿ ಶಾಸಕರು ಹೇಳಿದ್ದಾರೆ.

ಸದ್ಯ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಯಾರನ್ನೂ ಬಂಧಿಸಿಲ್ಲ, ತನಿಖೆ ನಡೆಯುತ್ತಿದೆ.

ರಮ್ಯ ಪೋಯೆರಿಗೆ.. ಸುದ್ದಿ ಫೇಕ್ ಮಾರ್ರೆ – ನಟಿ ರಮ್ಯಾ ಯುರೋಪ್ ನಲ್ಲಿದ್ದಾರೆ

Posted by Vidyamaana on 2023-09-06 14:55:10 |

Share: | | | | |


ರಮ್ಯ ಪೋಯೆರಿಗೆ.. ಸುದ್ದಿ ಫೇಕ್ ಮಾರ್ರೆ  – ನಟಿ ರಮ್ಯಾ ಯುರೋಪ್ ನಲ್ಲಿದ್ದಾರೆ

ಬೆಂಗಳೂರು: ಮೋಹಕ ತಾರೆ ರಮ್ಯಾ ಅಭಿಮಾನಿಗಳು ಬುಧವಾರ (ಸೆ.6 ರಂದು) ಶಾಕ್ ಗೆ ಒಳಗಾಗಿದ್ದಾರೆ. ನಟಿ ರಮ್ಯಾ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎನ್ನುವ ಸುದ್ದಿ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ರಮ್ಯಾ ಇದ್ದಕ್ಕಿದ್ದಂತೆ ಟ್ರೆಂಡ್ ಆಗಿದ್ದಾರೆ.


ಮೋಹಕ ತಾರೆ ರಮ್ಯಾ ಕಳೆದ ಕೆಲ ಸಮಯದಿಂದ ಚಿತ್ರರಂಗದಿಂದ ದೂರವಾಗಿದ್ದಾರೆ. ಇತ್ತೀಚೆಗೆ ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದಾರು. ಡಾಲಿ ಧನಂಜಯ ಅವರ ಸಿನಿಮಾದಲ್ಲಿ ರಮ್ಯಾ ಕಾಣಿಸಿಕೊಳ್ಳಲಿದ್ದಾರೆ. ಇದರೊಂದಿಗೆ ತಮ್ಮ ಬ್ಯಾನರ್ ನಡಿಯಲ್ಲಿ ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದಾರೆ.


ಈ ನಡುವೆ ಬುಧವಾರ ಅವರು ಹಠಾರ್ ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ತಮಿಳು ಸೋಶಿಯಲ್ ‌ಮೀಡಿಯಾದ ಕೆಲ ಪೇಜ್ ಗಳಲ್ಲಿ ಸುದ್ದಿ ಹರಿದಾಡಿದೆ.ಇದನ್ನು ಕೇಳಿ ಇತ್ತ ಕರ್ನಾಟಕದಲ್ಲಿ ರಮ್ಯಾ ಅಭಿಮಾನಿಗಳು ಆಘಾತ ವ್ಯಕ್ತಪಡಿಸಿದ್ದರು. ಈ ಸುದ್ದಿ ವೈರಲ್ ಆಗುತ್ತಿದ್ದಂತೆ ಇದಕ್ಕೆ ಸ್ಪಷ್ಟನೆ ಸಿಕ್ಕಿದೆ.


ಇದೊಂದು ಸುಳ್ಳು ಸುದ್ದಿ ರಮ್ಯಾ ಅವರು ಆರಾಮವಾಗಿ ಯೂರೋಪ್ ನಲ್ಲಿದ್ದಾರೆ ಎಂದು ಆಪ್ತ ಮೂಲಗಳಿಂದ ತಿಳಿದುಬಂದಿದೆ.

ಸುಳ್ಳು ಸುದ್ದಿ ಹಬ್ಬಿದ್ದೇಗೆ?:


ಕಾಲಿವುಡ್ ಸಿನಿಮಾರಂಗ ನಟಿ ರಮ್ಯಾ ಎನ್ನುವವರು ನಿಧನರಾಗಿದ್ದಾರೆ. ಇದೇ ಹೆಸರಿನೊಂದಿಗೆ ಕೆಲವರು ಕನ್ನಡದ ನಟಿ ರಮ್ಯಾ ಅವರ ಫೋಟೋವನ್ನು ಬಳಸಿಕೊಂಡು ಅವರು ‌ನಿಧನರಾಗಿದ್ದಾರೆ ಎಂದು ಕೆಲವರು ಟ್ವೀಟ್ ಮಾಡಿದ್ದಾರೆ. ಎಲ್ಲಿಯವರೆಗೆ ಅಂದರೆ ಸಿನಿಮಾರಂಗದ ಟ್ವಿಟರ್ ಪೇಜ್ ಗಳಾದ ಎಸ್ಎಸ್ ಸಂಗೀತ ಮತ್ತು ದಿನಕರನ್ ಅವರು ಕೂಡ ರಮ್ಯಾ ಅವರ ಫೋಟೋ ಹಂಚಿಕೊಂಡಿದ್ದರು.


ಈ ಸುಳ್ಳು ಸುದ್ದಿಯನ್ನು ಹಬ್ಬಿಸಿದ ತಮಿಳು ಮೀಡಿಯಾಗಳ ವಿರುದ್ದ ರಮ್ಯಾ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಮ್ಯಾ ಸದ್ಯ ಸ್ವಿಜರ್ಲ್ಯಾಂಡ್ ನಲ್ಲಿದ್ದಾರೆ.



Leave a Comment: