Posted by vidyamaana on 2023-07-14 03:02:36 | Last Updated by Vidyamaana on 2023-09-05 09:08:10
ವಿಟ್ಲ: ಪರಿಯಲ್ಲಡ್ಕ – ಸಾರಡ್ಕ ರಸ್ತೆಯ ಕೂರೇಲು ಎಂಬಲ್ಲಿ ಪಿಕಪ್ ರಸ್ತೆಯಿಂದ ಮನೆಯ ಮೇಲೆ ಬಿದ್ದಿದ್ದು, ಮನೆಯ ಒಳಗೆ ಮಹಿಳೆ ಸಿಲುಕಿ ಹಾಕಿಕೊಂಡಿದ್ದಾರೆ.ಕೂರೇಲು ಮಧ್ಯದ ಅಂಗಡಿಯ ಸಮೀಪದಲ್ಲಿ ರಸ್ತೆಯಿಂದ ಕೆಳಗಿದ್ದ ಮನೆಗೆ ಜು.14 ರ ಬೆಳಗ್ಗಿನ ಜಾವ ಚಾಲಕ ನಿಯಂತ್ರಣ ತಪ್ಪಿದ ಪಿಕಪ್ ಮನೆಯ ಮೇಲೆ ಬಿದ್ದಿದೆಅಪಘಾತದಿಂದ ಹಂಚಿನ ಮನೆ ಸಂಪೂರ್ಣ ಹಾನಿಯಾಗಿದೆ. ಪಿಕಪ್ ಕೋಳಿ ಸಾಗಟ ನಡೆಸುತಿತ್ತು. ಅಪಘಾತದಿಂದ ನೂರಾರು ಕೋಳಿಗಳು ಸತ್ತಿದೆ. ಅಪಘಾತ ನಡೆದಾಗ ಮನೆಯ ಒಳಗೆ ಮಹಿಳೆ ಮಲಗಿದ್ದರು, ಮಹಿಳೆಗೆ ಗಂಭೀರ ಗಾಯವಾದ ಪರಿಸ್ಥಿಯಲಿದ್ದಾರೆ.ಪಿಕಪ್ ವಾಹನವನ್ನು ತೆರವು ಮಾಡಡೆ, ಮಹಿಳೆಯನ್ನು ಹೊರಗೆ ತೆಗೆಯಲು ಸಾಧ್ಯವಿಲ್ಲದ ಸ್ಥಿತಿ ನಿರ್ಮಾಣವಾಗಿದೆ.
ಸ್ಥಳದಲ್ಲಿ ವಿಟ್ಲ ಪೊಲೀಸರು, ತುರ್ತು ಸೇವಾ ವಾಹನ ಬೀಡು ಬಿಟ್ಟಿದ್ದು, ಕ್ರೇನ್ ಬಳಸಿ ವಾಹನ ಮೇಲೆತ್ತುವ ಕಾರ್ಯಾಚರಣೆ ನಡೆಯುತ್ತಿದೆ.
Posted by Vidyamaana on 2023-10-11 21:28:27 |
ಪುತ್ತೂರು: HMS ಗ್ರೂಪ್ಸ್ ನವರ ಉಪಯೋಗಿಸಿದ ಕಾರುಗಳು ಮತ್ತು ಗೂಡ್ಸ್ ವಾಹನಗಳ ಮಾರಾಟ, ಖರೀದಿ ಮತ್ತು ವಿನಿಮಯ ಕೇಂದ್ರ ಕಬಕ ಸಮೀಪದ ಮಿತ್ತೂರು ಮಸೀದಿ ಬಳಿ ಅ.30ರಂದು ಶುಭಾರಂಭಗೊಳ್ಳಲಿದೆ.
ಇನ್ಸೂರೆನ್ಸ್, ಕಾರ್ ಸರ್ವೀಸ್ ಘಟಕ ಹಾಗೂ ವೆಹಿಕಲ್ ಲೋನ್ ಸೌಲಭ್ಯ ಕೂಡಾ ಇರಲಿದೆ. ಶುಭಾರಂಭ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರದ ಹಲವಾರು ಗಣ್ಯರು ಭಾಗವಹಿಸಲಿದ್ದಾರೆ ಎಂದು ಭಾರತ್ ವೆಹಿಕಲ್ ಸಂಸ್ಥೆಯ ಮಾಲಕರು ತಿಳಿಸಿದ್ದಾರೆ.
Posted by Vidyamaana on 2024-03-04 04:38:01 |
ಉಡುಪಿ, ಮಾ 03: ಯುವಕನನ್ನ ಅಪರಿಚಿತ ದುಷ್ಕರ್ಮಿಗಳು ಗುಂಡಿಟ್ಟು ಕೊಂದ ಘಟನೆ ಬ್ರಹ್ಮಾವರ ಸಮೀಪದ ಬಾರ್ಕೂರಿನಿ ಹನೆಹಳ್ಳಿಯಲ್ಲಿ ನಡೆದಿದೆ.
ಮೃತ ವ್ಯಕ್ತಿಯನ್ನು ಕೃಷ್ಣ (36) ಎಂದು ಗುರುತಿಸಲಾಗಿದೆ.ಮೃತ ಕೃಷ್ಣ ಮಣಿಪಾಲದಲ್ಲಿ ಕೆಲಸ ಮಾಡಿಕೊಂಡಿದ್ದು ಶನಿವಾರ ರಾತ್ರಿ ಮನೆಗೆ ಬಂದಿದ್ದ, ಸುಮಾರು 9.30ರ ಸುಮಾರಿಗೆ ಊಟ ಮಾಡುತ್ತಿರುವಾಗ ಮನೆಗೆ ಎಂಟ್ರಿ ಕೊಟ್ಟ ದುಷ್ಕರ್ಮಿಗಳು ಯುವಕನನ್ನ ಶೂಟೌಟ್ ಮಾಡಿ ಪರಾರಿಯಾಗಿದ್ದಾರೆ.
ಸ್ಥಳೀಯರಿಗೆ ರಾತ್ರಿ ಫೈರಿಂಗ್ ಶಬ್ದ ಕೇಳಿ ಪಟಾಕಿ ಶಬ್ದ ಇರಬಹುದು ಅನ್ಕೊಂಡು ಸುಮ್ಮನಾಗಿದ್ದಾರೆ. ಆದ್ರೆ ಮುಂಜಾನೆ ಎದ್ದಾಗ ಅದು ಗುಂಡಿನ ಶಬ್ದ ಅಂತ ಗೊತ್ತಾಗಿ ಬೆಚ್ಚಿಬಿದ್ದಿದ್ದಾರ. ಕೊಲೆಗೆ ನಿಖರ ಕಾರಣ ಇನ್ನಷ್ಟೇ ತಿಳಿಯಬೇಕಾಗಿದೆ.
ಸ್ಥಳಕ್ಕೆ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ, ಕುಂದಾಪುರ ಡಿವೈಎಸ್ಪಿ ಬೆಳ್ಳಿಯಪ್ಪ, ಬ್ರಹ್ಮಾವರ ಪೊಲೀಸರು ಭೇಟಿ ನೀಡಿ ಪರಿಶೀಲ ನಡೆಸುತ್ತಿದ್ದು ದುಷ್ಕರ್ಮಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ
Posted by Vidyamaana on 2023-09-11 19:33:40 |
ಬೆಂಗಳೂರು: ಜೈಲಿನಿಂದಲೇ ಫೋನ್ ಮಾಡಿ ವಿವಾಹಿತೆಗೆ ಪ್ರೀತಿಸುವಂತೆ (Love Case) ಪ್ರೇಮಿಯೊಬ್ಬ ಕೊಲೆ ಬೆದರಿಕೆ (Blackmailing) ಹಾಕಿರುವ ಘಟನೆ ವರದಿ ಆಗಿದೆ. ಅಕ್ರಮಗಳ ಅಡ್ಡೆಯಾಗಿರುವ ಪರಪ್ಪನ ಅಗ್ರಹಾರ ಜೈಲಿನಲ್ಲಿ ಆರೋಪಿಗಳಿಗೆ ಸಲೀಸಾಗಿ ಮೊಬೈಲ್ ಸಿಗುತ್ತಿದೆ.ಶ್ರೀನಿವಾಸ ಎಂಬಾತ ಜೈಲು ಸೇರಿದ್ದರೂ, ಅಲ್ಲಿಂದಲೇ ಅಮಲಾ ಎಂಬಾಕೆಗೆ ಕೊಲೆ ಬೆದರಿಕೆ (Blackmail Case) ಹಾಕುತ್ತಿದ್ದಾನೆ.
ಜೈಲಿಗೆ ಕಳಿಸಿದ್ದೀಯಾ ಈಗ ನನ್ನ ನೋಡಲು ಜೈಲಿಗೆ ಬಾ, ಬರದಿದ್ದರೆ ಹೊರಗೆ ಬಂದು ಹತ್ಯೆ ಮಾಡುವುದಾಗಿ ಅಮಲಾಗೆ ಧಮ್ಕಿ ಹಾಕಿದ್ದಾನೆ. ಜೈಲಿನಲ್ಲಿ ತನ್ನೊಟ್ಟಿಗೆ ಇರುವಂತೆ ಹೇಳುತ್ತಿದ್ದಾನೆ ಎಂದು ಸಂತ್ರಸ್ಥೆ ಆರೋಪಿ ಶ್ರೀನಿವಾಸ ವಿರುದ್ಧ ಮತ್ತೊಮ್ಮೆ ದೂರು ನೀಡಿದ್ದಾರೆ.ಬ್ಯಾಟರಾಯನಪುರ ನಿವಾಸಿಯಾದ ಅಮಲಾ ಮದುವೆಯಾಗಿ ಪತಿಯಿಂದ ದೂರವಾಗಿದ್ದರು. ಇದನ್ನೇ ಬಂಡವಾಳ ಮಾಡಿಕೊಂಡ ಈ ಶ್ರೀನಿವಾಸ ಅಮಲಾಳನ್ನು ಮೋಹಿಸಿದ್ದ. ಆಕೆ ಹಿಂದೆ ಬಿದ್ದು ಪ್ರೀತಿಸು ಇಲ್ಲದಿದ್ದರೆ ಆಯಸಿಡ್ ಹಾಕುವೆ, ಚಾಕುವಿನಿಂದ ಚುಚ್ಚಿ ಕೊಲೆ ಮಾಡುವುದಾಗಿ ಆವಾಜ್ ಹಾಕುತ್ತಿದ್ದ.
ಆತನ ಹುಚ್ಚುತನಕ್ಕೆ ಮನಸೋತು ಅಮಲಾ ಶ್ರೀನಿವಾಸ್ ಪ್ರೀತಿಗೆ ಸಮ್ಮತಿಸಿದ್ದರು. ಕೆಲಕಾಲ ಇಬ್ಬರು ಪ್ರೀತಿಯ ಗುಂಗಲ್ಲಿ ತೇಲಾಡಿದ್ದರು. ಈ ನಡುವೆ ಅಮಲಾ ಮದುವೆ ವಿಚಾರ ಪ್ರಸ್ತಾಪ ಮಾಡಿದಾಗ ಶ್ರೀನಿವಾಸ ಉಲ್ಟಾ ಹೊಡೆಡಿದ್ದ. ನಿನ್ನನ್ನು ಮದುವೆ ಆಗಲ್ಲ, ಜತೆಯಲ್ಲೇ ಇರು ಸಾಕು ಎಂದಿದ್ದ. ಅಲ್ಲದೇ ಇದೇ ವಿಚಾರಕ್ಕೆ ಶ್ರೀನಿವಾಸ ಮತ್ತು ಆತನ ತಾಯಿ ಸೇರಿ ಅಮಲಾ ಮೇಲೆ ಹಲ್ಲೆ ನಡೆಸಿದ್ದರು.ಹೀಗಾಗಿ ಬ್ಯಾಟರಾಯನಪುರ ಪೊಲೀಸ್ ಠಾಣೆಯಲ್ಲಿ ಅಮಲಾ ಈ ಸಂಬಂಧ ದೂರು ದಾಖಲಿಸಿದ್ದರು. ಆರೋಪಿ ಶ್ರೀನಿವಾಸನನ್ನು ಬಂಧಿಸಿ ಜೈಲಿಗಟ್ಟಿದ್ದರು. ಜೈಲು ಸೇರಿದರೂ ಬುದ್ಧಿ ಕಲಿಯದ ಶ್ರೀನಿವಾಸ, ಅಲ್ಲಿಂದಲೇ ಅಮಲಾಗೆ ಕರೆ ಮಾಡಿ ಬೆದರಿಕೆ ಹಾಕುತ್ತಿದ್ದಾನೆ. ಹೀಗಾಗಿ ಸಂತ್ರಸ್ಥೆ ಮಹಿಳೆ ಶ್ರೀನಿವಾಸ್ ವಿರುದ್ಧ ಮತ್ತೊಂದು ದೂರು ದಾಖಲಿಸಿದ್ದಾರೆ.
Posted by Vidyamaana on 2024-03-06 13:27:03 |
ಮಂಗಳೂರು: ಕರ್ನಾಟಕದಲ್ಲಿ ನಡೆದ ಬಾಂಬ್ ದಾಳಿ ಭಯೋತ್ಪಾದಕ ಕೃತ್ಯಗಳನ್ನು ಖಂಡಿಸಿ ಭಯೋತ್ಪಾದನಾ ವಿರೋಧಿ ಹೋರಾಟ ಸಮಿತಿ ತುಮಕೂರಿನಲ್ಲಿ ನಡೆಯಲಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ತೆರಳುತ್ತಿದ್ದ ಬಜರಂಗದಳ ಪ್ರಾಂತ ಸಹ ಸಂಯೋಜಕರಾದ ಮುರಳಿಕೃಷ್ಣ ಹಸಂತಡ್ಕರವರನ್ನು ಕುಣಿಗಲ್ ನಲ್ಲಿ ಪೊಲೀಸರು ಬಂಧಿಸಿ, ಪ್ರತಿಭಟನೆಯಲ್ಲಿ ಪಾಲ್ಗೊಳ್ಳದಂತೆ ತಡೆದಿದ್ದಾರೆ.
ಕಾಂಗ್ರೆಸ್ ಸರಕಾರವು ಪೊಲೀಸ್ ಇಲಾಖೆಯ ಮುಖಾಂತರ ದೇಶಭಕ್ತ ಹಿಂದೂ ಮುಖಂಡರನ್ನು ಬಂಧಿಸಿ, ಪರೋಕ್ಷವಾಗಿ ದೇಶದ್ರೋಹಿಗಳ ಪರ ನಿಲ್ಲವಂತಹ ಕೆಲಸ ಮಾಡುತ್ತಿದೆ.
ಈ ದೇಶದ್ರೋಹಿ ಕೃತ್ಯವನ್ನು ಬಜರಂಗದಳ ಖಂಡಿಸುತ್ತದೆ. ಭಯೋತ್ಪಾದಕ ಚಟುವಟಿಕೆಯ ವಿರುದ್ಧ ಬಜರಂಗದಳ ನಿರಂತರವಾಗಿ ಹೋರಾಟ ನಡೆಸುತ್ತದೆ ನೀವು ನಮನ್ನು ಬಂಧಿಸಿದರು ನಮ್ಮ ಹೋರಾಟ ನಿಲ್ಲದು ಎಂದು ಬಜರಂಗದಳ ಮಂಗಳೂರು ಕಾಂಗ್ರೆಸ್ ಸರಕಾರಕ್ಕೆ ಎಚ್ಚರಿಸಿದೆ.
Posted by Vidyamaana on 2024-01-16 21:29:39 |
ವೈರಲ್ ವೈರಲ್ ವೈರಲ್.... ಸಾಮಾಜಿಕ ಜಾಲತಾಣದಲ್ಲಿ ಎಲ್ಲವೂ ವೈರಲ್ ಆಗಿಬಿಡುತ್ತವೆ. ಹೀಗಾಗಿ ಎಷ್ಟು ಜಾಗ್ರತೆಯಿಂದಿದ್ದರೂ ಕಡಿಮೆನೇ. ಅದರಲ್ಲೂ ಮೈಮರೆತು ವರ್ತಿಸುವ ಕೆಲ ಯುವ ಜೋಡಿಗಳ ವೀಡಿಯೋಗಳಂತೂ ಸಾಮಾಜಿಕ ಜಾಲತಾಣದಲ್ಲಿ ಕಾಡ್ಗಿಚ್ಚಿನಂತೆ ಎಲ್ಲೆಡೆ ಹರಡಿಬಿಡುತ್ತವೆ.ಹೀಗೊಂದು ವಿಡಿಯೋದಲ್ಲಿ ಯುವ ಜೋಡಿಯೊಂದು ನಡು ರೋಡಲ್ಲೇ ಚಲಿಸುವ ಗಾಡಿ ಮೇಲೆ ರೊಮ್ಯಾನ್ಸ್ ಮಾಡುವುದು ಕಂಡು ಬಂದಿದೆ
ನಡು ರೋಡಲ್ಲೇ ಚಲಿಸುವ ಗಾಡಿ ಮೇಲೆ ರೊಮ್ಯಾನ್ಸ್- ವೈರಲ್ ವಿಡಿಯೋ ನೋಡಲು ಕ್ಲಿಕ್ ಮಾಡಿ
ಹಿಂಬದಿ ಸವಾರರು ಈ ದೃಶ್ಯವನ್ನು ಸೆರೆಹಿಡಿದಿದ್ದು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ. ಈ ದೃಶ್ಯ ಮುಂಬೈನದ್ದು ಎಂದು ಹೇಳಲಾಗಿದೆ. ಇದು ನೋಡುಗರ ಕೋಪವನ್ನು ನೆತ್ತಿಗೇರಿಸಿದೆ. ಮುಂಬೈನ ನಡು ರಸ್ತೆಯಲ್ಲಿ ಯುವ ಜೋಡಿಯೊಂದು ತಮ್ಮ ಸ್ಕೂಟರ್ನಲ್ಲಿ ಅಪಾಯಕಾರಿ ಸಾಹಸ ಪ್ರದರ್ಶಿಸುತ್ತಿರುವುದು ಕ್ಯಾಮರಾದಲ್ಲಿ ಸೆರೆಯಾಗಿದೆ. ವೈರಲ್ ಆಗಿರುವ ವೀಡಿಯೊ ಬಾಂದ್ರಾ ರಿಕ್ಲಮೇಷನ್ ರಸ್ತೆಯಲ್ಲಿ ಸೆರೆಹಿಡಿದ ದೃಶ್ಯವಾಗಿದೆ. ಈ ವಿಡಿಯೋ ಜನರ ಆಕ್ರೋಶಕ್ಕೆ ಗುರಿಯಾಗಿದೆ. ಸ್ಕೂಟಿ ಮೇಲೆ ಕುಳಿತ ಹುಡುಗನ ಮೇಲೆ ಹುಡುಗಿ ಕುಳಿತಿದ್ದಾಳೆ. ಜೊತೆಗೆ ಅವರಿಬ್ಬರು ಶಾಲ್ ಅನ್ನು ಹೊದ್ದುಕೊಂಡಿದ್ದಾರೆ. ಹುಡುಗ ಸ್ಕೂಟಿ ಚಲಾಯಿಸುತ್ತಿದ್ದರೆ ಹುಡುಗಿ ಆತನನ್ನು ಗಟ್ಟಿಯಾಗಿ ಅಪ್ಪಿಕೊಂಡು ಕುಳಿತಿದ್ದಾಳೆ. ಇಬ್ಬರೂ ಶಾಲಿನ ಕೆಳಗೆ ಭಾಗಶಃ ಮರೆಯಾಗಿದ್ದಾರೆ. ಇವರಿಬ್ಬರೂ ಹೆಲ್ಮೆಟ್ ಕೂಡ ಧರಿಸಿಲ್ಲ. ಸಂಚಾರ ನಿಯಮವನ್ನು ಸಂಪೂರ್ಣವಾಗಿ ಉಲ್ಲಂಘಿಸಿದ್ದಾರೆ. ಈ ವಿಡಿಯೋವನ್ನು ಹಂಚಿಕೊಂಡವರು "ಈ ಧೈರ್ಯಶಾಲಿ ಜೋಡಿಯನ್ನು ಬಾಂದ್ರಾ ರಿಕ್ಲಮೇಷನ್ನಲ್ಲಿ ಗುರುತಿಸಲಾಯಿತು. ಅವರ ಅಸಾಂಪ್ರದಾಯಿಕ ಸ್ಕೂಟರ್ ರೈಡ್ ತಲೆ ತಿರುಗಿಸಿದೆ. @MumbaiPolice ರಸ್ತೆಗಳಲ್ಲಿ ಪ್ರತಿಯೊಬ್ಬರ ಸುರಕ್ಷತೆಯನ್ನು ಕಾಪಾಡಲು ನಿಮ್ಮ ಗಮನವನ್ನು ಇತ್ತ ಹರಿಸುವಂತೆ ವಿನಂತಿಸುತ್ತೇವೆ," ಎಂದು ಶೀರ್ಷಿಕೆಯಲ್ಲಿ ಬರೆದಿದ್ದಾರೆ. ಇನ್ನೂ ಸಹ ಪ್ರಯಾಣಿಕರಿಂದ ರೆಕಾರ್ಡ್ ಮಾಡಿದ ಈ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಕೋಲಾಹಲಕ್ಕೆ ಕಾರಣವಾಯಿತು. ಇದಕ್ಕೆ ನೆಟ್ಟಿಗರು ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ ಮತ್ತು ತಕ್ಷಣದ ಪೊಲೀಸ್ ಮಧ್ಯಸ್ಥಿಕೆಗೆ ಕರೆ ನೀಡಿದ್ದಾರೆ. ವಿಮಾನ ಹಾರಾಟ ತಡವಾಗಿದ್ದಕ್ಕೆ ಪೈಲಟ್ನನ್ನೇ ಥಳಿಸಿದ ಪ್ರಯಾಣಿಕ: ವಿಡಿಯೋ ವೈರಲ್ ನೆಟ್ಟಿಗರ ಕಾಮೆಂಟ್ ಹೀಗಿದೆ:- ಇವರು ಇತರ ಸವಾರರ ಪ್ರಾಣಕ್ಕೆ ಕುತ್ತು ತರುತ್ತಾರೆ. ಮುಂಬೈ ಪೊಲೀಸರು ಇಂತವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ನೆಟ್ಟಿಗರರೊಬ್ಬರು ಕಾಮೆಂಟ್ ಮಾಡಿದ್ದಾರೆ. ಮುಂಬೈನಲ್ಲಿ ತುಂಬಾ ಚಳಿಯಂತೆ, ಹೀಗಿರುವಾಗ ಮನೆ ಬಿಟ್ಟು ಹೊರಬರಲು ಆಗದವರು ಹೀಗೆ ಮಾಡೋದು ಅನಿಸುತ್ತೆ ಮತ್ತೊಬ್ಬರು ಕುಟುಕಿದ್ದಾರೆ. ಮುಂಬೈನಲ್ಲಿ ಚಳಿ ನಡುವೆ ಹೀಗೂ ಹೊರಬರಬಹುದಾ? ಎಂದು ಮಗದೊಬ್ಬರು ಕಾಮೆಂಟ್ ಮಾಡಿದ್ದಾರೆ. ಚಳಿಗಾಲ ಮುಗಿದ ಬಳಿಕ ಈ ದೃಶ್ಯ ನೋಡಲು ಇನ್ನೂ ಕೆಟ್ಟದಾಗಿರುತ್ತದೆ ಎಂದು ಮತ್ತೊಬ್ಬರು ಬರೆದಿದ್ದಾರೆ. ಜನನಿಬಿಡ ರಸ್ತೆಯಲ್ಲಿ ಇಂತಹ ಘಟನೆ ದಾಖಲಾಗಿರುವುದು ಇದೇ ಮೊದಲಲ್ಲ. ಕಳೆದ ವರ್ಷವೂ ದೆಹಲಿಯ ರಸ್ತೆಗಳಲ್ಲಿ ಸ್ಕೂಟರ್ ಸವಾರಿ ಮಾಡುವಾಗ ಜೋಡಿಯೊಂದು ಒಬ್ಬರನ್ನೊಬ್ಬರು ತಬ್ಬಿಕೊಳ್ಳುತ್ತಿರುವ ವಿಡಿಯೋವೊಂದು ವೈರಲ್ ಆಗಿತ್ತು.