ಯು ಕೆ ಎಲೆಕ್ಷನ್ ನಲ್ಲಿ ಹೀನಾಯ ಸೋಲು; ರಿಶಿ ಸುನಕ್ ಫಸ್ಟ್ ರಿಯಾಕ್ಷನ್

ಸುದ್ದಿಗಳು News

Posted by vidyamaana on 2024-07-05 12:01:03 |

Share: | | | | |


ಯು ಕೆ ಎಲೆಕ್ಷನ್ ನಲ್ಲಿ ಹೀನಾಯ ಸೋಲು; ರಿಶಿ ಸುನಕ್ ಫಸ್ಟ್ ರಿಯಾಕ್ಷನ್

ಲಂಡನ್ : ಬ್ರಿಟನ್‌ನಲ್ಲಿ ಸಾರ್ವತ್ರಿಕ ಚುನಾವಣೆ(UK Election) ಫಲಿತಾಂಶ ಹೊರಬಿದ್ದಿದ್ದು, ಬರೋಬ್ಬರಿ 14ವರ್ಷಗಳ ಬಳಿಕ ಲೇಬರ್ ಪಕ್ಷ ಜಯಭೇರಿ ಭಾರಿಸಿದೆ. ಲೇಬರ್‌ ಪಕ್ಷ 360 ಸ್ಥಾನಗಳನ್ನು ಗಳಿಸಿ ಮ್ಯಾಜಿಕ್‌ ನಂಬರ್‌ 320 ಅನ್ನು ದಾಟುವ ಮೂಲಕ ಸರ್ಕಾರ ರಚನೆಗೆ ಮುಂದಾಗಿದೆ.

ಹಾಲಿ ಪ್ರಧಾನಿ ರಿಷಿ ಸುನಕ್‌(Rishi Sunak) ಅವರ ಪಕ್ಷ ಕನ್ಸರ್ವೇಟಿವ್‌ ಪಕ್ಷ ಭಾರೀ ಹಿನ್ನಡೆ ಅನುಭವಿಸಿದ್ದು, ಲೇಬರ್‌ ಪಕ್ಷದ ಕೀರ್‌ ಸ್ಟಾರ್ಮರ್‌(Keir Starmer) ಅವರಿಗೆ ಪ್ರಧಾನಿ ಗಿಟ್ಟಿದೆ. ಇನ್ನು


ಫಲಿತಾಂಶ ಹೊರ ಬೀಳುತ್ತಿದ್ದಂತೆ ರಿಶಿ ಸುನಕ್‌ ಪ್ರತಿಕ್ರಿಯಿಸಿದ್ದು, ಈ ಸೋಲಿನ ಜವಾಬ್ದಾರಿಯನ್ನು ತಾವು ಹೊತ್ತುಕೊಳ್ಳುವುದಾಗಿ ಹೇಳಿದ್ದಾರೆ. ಅಲ್ಲದೇ ಲೇಬರ್‌ ಪಕ್ಷದ ಗೆಲುವಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಲೇಬರ್ ಪಕ್ಷವು ಈ ಸಾರ್ವತ್ರಿಕ ಚುನಾವಣೆಯಲ್ಲಿ ಗೆದ್ದಿದೆ ಮತ್ತು ಅವರ ವಿಜಯಕ್ಕಾಗಿ ಅಭಿನಂದಿಸಲು ನಾನು ಸರ್ ಕೀರ್ ಸ್ಟಾರ್ಮರ್‌ಗೆ ಕರೆ ಮಾಡಿದ್ದೇನೆ. ಇಂದು, ಅಧಿಕಾರವು ಶಾಂತಿಯುತವಾಗಿ ಮತ್ತು ಕ್ರಮಬದ್ಧವಾಗಿ ಅಧಿಕಾರ ಹಸ್ತಾಂತರಗೊಂಡಿದೆ. ಎಲ್ಲಾ ಕಡೆಯಿಂದಲೂ ಸದ್ಭಾವನೆ ಇರುತ್ತದೆ. ಇದು ನಮ್ಮ ದೇಶದ ಸ್ಥಿರತೆ ಮತ್ತು ಭವಿಷ್ಯದ ಬಗ್ಗೆ ನಮಗೆಲ್ಲರಿಗೂ ವಿಶ್ವಾಸವನ್ನು ನೀಡುವ ವಿಷಯವಾಗಿದೆ ಎಂದು ಹೇಳಿದ್ದಾರೆ.

ಪಕ್ಷಗಳ ಬಲಾಬಲ ಹೇಗಿದೆ?

ಇನ್ನು ಕಣದಲ್ಲಿರುವ ಪಕ್ಷಗಳ ಬಲಾಬಲ ಹೇಗಿದೆ ಎಂದು ನೋಡುವುದಾದರೆ,

ಕನ್ಸರ್ವೇಟಿವ್‌ ಪಕ್ಷ ಕೇವಲ – 81

ಲೇಬರ್ ಪಾರ್ಟಿ - 360

ಸ್ಕಾಟಿಷ್ ನ್ಯಾಶನಲಿಸ್ಟ್ ಪಾರ್ಟಿ (SNP) - 3

ಲಿಬರಲ್ ಡೆಮೋಕ್ರಾಟ್‌ಗಳು - 49

ರಿಫಾರ್ಮ್‌ ಯುಕೆ - 3

ಇತರೆ - 1

ಎಕ್ಸಿಟ್‌ ಪೋಲ್‌ ಭವಿಷ್ಯ ಏನು?


ಇನ್ನು ಚುನಾವಣಾ ಪೂರ್ವ ಸಮೀಕ್ಷೆಗಳು ಕನ್ಸರ್ವೇಟಿವ್‌ ಪಕ್ಷ ಈ ಬಾರಿ ಸೋಲುವುದು ಖಚಿತ ಎಂಬ ಭವಿಷ್ಯ ನುಡಿದಿತ್ತು. ಈ ಬಾರಿ ಕನ್ಸರ್ವೇಟಿಕವ್‌ ಪಕ್ದ್ ಸ್ಥಾನ 131ಕ್ಕೆ ಇಳಿಯಲಿದ್ದು, ಲೇಬರ್‌ ಪಕ್ಷ ಅಭೂತಪೂರ್ವ ಗೆಲುವಿನೊಂದಿಗೆ ಅಧಿಕಾಕ್ಕೆ ಬರಲಿದೆ ಎಂದು ಹೇಳಿದೆ. ಹಾಗಿದ್ದರೆ ಎಕ್ಸಿಟ್‌ ಪೋಲ್‌ ಪ್ರಕಾರ ಯಾವ ಪಕ್ಷಕ್ಕೆ ಎಷ್ಟು ಸ್ಥಾನಗಳು ದೊರೆಯಲಿದೆ ನೋಡೋಣ.


ಕನ್ಸರ್ವೇಟಿವ್‌: 131

ಲೇಬರ್ ಪಕ್ಷ: 410

ಲಿಬರಲ್ ಡೆಮೋಕ್ರಾಟ್‌ಗಳು: 61

ಸ್ಕಾಟಿಷ್ ನ್ಯಾಶನಲಿಸ್ಟ್ ಪಾರ್ಟಿ (SNP): 10

ರಿಫಾರ್ಮ್ ಯುಕೆ: 13

ಪ್ಲೈಡ್ ಸಿಮ್ರು: 4

ಗ್ರೀನ್ಸ್: 2

ರಿಷಿ ಸುನಕ್‌ಗೆ ಆಡಳಿತ ವಿರೋಧಿ ಅಲೆ

44 ವರ್ಷದ ರಿಷಿ ಸುನಕ್ ಅವರ ಕನ್ಸರ್ವೇಟಿವ್ ಪಕ್ಷ ಆಡಳಿತ ವಿರೋಧಿ ಅಲೆ ಎದುರಿಸುತ್ತಿದ್ದು, 61 ವರ್ಷದ ಕೀರ್ ಸ್ಟಾರ್ಮರ್ ನೇತೃತ್ವದ ಲೇಬರ್ ಪಾರ್ಟಿಗಿಂತ ಕಳೆದ 6 ವಾರಗಳ ಪ್ರಚಾರದಲ್ಲಿ ಅತ್ಯಂತ ಹಿಂದುಳಿದಿದ್ದಾರೆ. ಇಂಗ್ಲೆಂಡ್, ಸ್ಕಾಟ್‌ಲ್ಯಾಂಡ್, ವೇಲ್ಸ್ ಮತ್ತು ಉತ್ತರ ಐರ್ಲೆಂಡ್‌ನಾದ್ಯಂತ 650 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗಿದೆ, ಮೊದಲ ಬಾರಿಗೆ ಪೋಸ್ಟ್ ಸಿಸ್ಟಮ್‌ನಲ್ಲಿ ಬಹುಮತಕ್ಕೆ 326 ಮತಗಳ ಅಗತ್ಯವಿದೆ.

 Share: | | | | |


ಅನ್ಯ ಜಾತಿಯ ಯುವತಿಯನ್ನು ವಿವಾಹವಾಗಿದ್ದ ಯುವಕನ ಹತ್ಯೆ

Posted by Vidyamaana on 2024-02-25 18:23:41 |

Share: | | | | |


ಅನ್ಯ ಜಾತಿಯ ಯುವತಿಯನ್ನು ವಿವಾಹವಾಗಿದ್ದ ಯುವಕನ ಹತ್ಯೆ

ಚೆನ್ನೈ: ಅನ್ಯ ಜಾತಿಯ ಯುವತಿಯನ್ನು ವಿವಾಹವಾಗಿದ್ದ ಯುವಕನ ಮೇಲೆ ಹಲ್ಲೆಗೈದು ಹತ್ಯೆ ಮಾಡಿರುವ ಘಟನೆ ಚೆನ್ನೈನಲ್ಲಿ ನಡೆದಿರುವುದು ಬೆಳಕಿಗೆ ಬಂದಿದೆ.


ಹಲ್ಲೆಗೊಳಗಾಗಿ ಮೃತಪಟ್ಟಿರುವ ಯುವಕನನ್ನು ಪ್ರವೀಣ್(26) ಎಂದು ಗುರುತಿಸಲಾಗಿದೆ. ಈತ ಮೆಕ್ಯಾನಿಕ್ ಆಗಿ ಕೆಲಸ ಮಾಡುತ್ತಿದ್ದ. ನಗರದ ಪಲ್ಲಿಕರಣೈ ಬಳಿ ಶನಿವಾರ ಈ ಘಟನೆ ನಡೆದಿದೆ.

ನಾಲ್ಕು ತಿಂಗಳ ಹಿಂದಷ್ಟೇ ಪ್ರವೀಣ್‌ ಪ್ರೀತಿಸಿದ ಯುವತಿ ಜೊತೆ ವಿವಾಹವಾಗಿದ್ದ. ಯುವತಿ ಶರ್ಮಿಳಾ ಅನ್ಯ ಜಾತಿಯವಳಾಗಿದ್ದು, ಮನೆಯವರ ವಿರೋಧದ ನಡುವೆಯೂ ವಿವಾಹವಾಗಿದ್ದರು.

ಶನಿವಾರ(ಫೆ.24 ರಂದು‌  )ಪ್ರವೀಣ್ ಆಹಾರ ತರಲು ಹೊಟೇಲ್‌ ಗೆ ತೆರಳಿದ್ದ, ಈ ವೇಳೆ ಶರ್ಮಿಳಾ ಅವರ ಸಹೋದರ ದಿನೇಶ್‌ ಹಾಗೂ ಇತರ ನಾಲ್ವರು ಆರೋಪಿಗಳು ಪ್ರವೀಣ್‌ ನನ್ನು ಸುತ್ತುವರೆದು ಆತನ ಮೇಲೆ ಹಲ್ಲೆ ಮಾಡಿದ್ದಾರೆ. ತೀವ್ರ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ.ಈ ಸಂಬಂಧ ಪೊಲೀಸರು ಆರೋಪಿಗಳ ಬಂಧನಕ್ಕೆ ವಿಶೇಷ ತಂಡ ರಚಿಸಿ, ಐವರು ಆರೋಪಿಗಳಾದ ಸ್ಟೀಫನ್ ಕುಮಾರ್, ಜೋತಿಲಿಂಗಂ, ಶ್ರೀರಾಮ್, ಅಶೋಕ್, ವಿಷ್ಣು ರಾಜ್ ಮತ್ತು ದಿನೇಶ್ ನನ್ನು ಬಂಧಿಸಲಾಗಿದೆ.

ಲಡಾಖ್ ಗೆ ಬೈಕ್ ಸವಾರಿ ಹೊರಟ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ

Posted by Vidyamaana on 2023-08-19 12:39:01 |

Share: | | | | |


ಲಡಾಖ್ ಗೆ ಬೈಕ್ ಸವಾರಿ ಹೊರಟ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ

ನವದೆಹಲಿ: ಆಗಸ್ಟ್ 20 ರಂದು ತಮ್ಮ ತಂದೆ ಮತ್ತು ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಜನ್ಮದಿನವನ್ನು ಆಚರಿಸಲಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಲಡಾಖ್ ನ ಪ್ಯಾಂಗಾಂಗ್ ಸರೋವರಕ್ಕೆ ಬೈಕ್ ನಲ್ಲಿ ತೆರಳಿದ್ದಾರೆ.

ರಾಹುಲ್ ಗಾಂಧಿಯವರು ತಮ್ಮ ಅಧಿಕೃತ ಇನ್ಸ್ಟಾಗ್ರಾಮ್ ಹ್ಯಾಂಡಲ್ ಮೂಲಕ ಫೋಟೋಗಳನ್ನು ಹಂಚಿಕೊಂಡಿದ್ದು, ಜಗತ್ತಿನ ಅತ್ಯಂತ ಸುಂದರ ಸ್ಥಳಗಳಲ್ಲೊಂದು ಎಂದು ನನ್ನ ತಂದೆ ಹೇಳುತ್ತಿದ್ದ ಪಂಗೊಂಗ್‌ ಲೇಕ್‌ನತ್ತ ನಾವು ಸಾಗುತ್ತಿದ್ದೇವೆ ಎಂದು ಅವರು ಬರೆದುಕೊಂಡಿದ್ದಾರೆ.


ರಾಹುಲ್ ಗಾಂಧಿಯವರು KTM 390 ಅಡ್ವೆಂಚರ್ ನಲ್ಲಿ ಸವಾರಿ ಮಾಡುತ್ತಿದ್ದು, ಇತರ ಸವಾರರು ಅವರನ್ನು ಅನುಸರಿಸುತ್ತಿದ್ದಾರೆ. ಸಂಪೂರ್ಣ ಬೈಕಿಂಗ್ ಗೇರ್ ನಲ್ಲಿ ಹೆಲ್ಮೆಟ್, ಕೈಗವಸುಗಳು, ಸವಾರಿ ಬೂಟುಗಳು ಮತ್ತು ಜಾಕೆಟ್ ನೊಂದಿಗೆ ಲಡಾಖ್ ನ ಸುಂದರವಾದ ಪರ್ವತಗಳ ಮೂಲಕ ತಮ್ಮ ಸವಾರಿಯನ್ನು ಆನಂದಿಸುತ್ತಾರೆ.

ರಾಹುಲ್ ಗಾಂಧಿ ಪ್ರಸ್ತುತ ಲಡಾಖ್ ಪ್ರವಾಸದಲ್ಲಿದ್ದು, ಇದು ಆಗಸ್ಟ್ 25 ರವರೆಗೆ ಅಲ್ಲಿ ಸಮಯ ಕಳೆಯಲಿದ್ದಾರೆ ಎಂದು ತಿಳಿದು ಬಂದಿದೆ

ಸಿದ್ದರಾಮಯ್ಯ ಎಂಬ ಹೆಸರಿನ ನಾನು.. 24ನೇ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಪ್ರಮಾಣ ವಚನ

Posted by Vidyamaana on 2023-05-20 07:30:03 |

Share: | | | | |


ಸಿದ್ದರಾಮಯ್ಯ ಎಂಬ ಹೆಸರಿನ ನಾನು.. 24ನೇ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಪ್ರಮಾಣ ವಚನ

ಬೆಂಗಳೂರು: “ಸಿದ್ದರಾಮಯ್ಯ ಎಂಬ ಹೆಸರಿನ ನಾನು…… “ ಸಿದ್ದರಾಮನಹುಂಡಿಯ ಬಡ ರೈತ ಕುಟುಂಬದಿಂದ ಬಂದು ರಾಜ್ಯ ರಾಜಕಾರಣದಲ್ಲಿ ತನ್ನದೇ ಛಾಪು ಮೂಡಿಸಿರುವ ಸಿದ್ದರಾಮಯ್ಯ ಅವರು ಎರಡನೇ ಬಾರಿ ಕರ್ನಾಟಕದ ಮುಖ್ಯಮಂತ್ರಿಯಾಗಿ ಇಂದು ಪ್ರಮಾಣ ವಚನ ಸ್ವೀಕರಿಸಿದರು.

ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ಸೇರಿದ್ದ ಸಾವಿರಾರು ಜನರ ಸಮ್ಮುಖದಲ್ಲಿ ಸಿದ್ದರಾಮಯ್ಯ ಅವರು ರಾಜ್ಯದ 24ನೇ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡರು. ರಾಜ್ಯಪಾಲ ಥಾವರ್ ಚಾಂದ್ ಗೆಹ್ಲೋಟ್ ಅವರು ಪ್ರತಿಜ್ಞಾ ವಿಧಿ ಬೋಧಿಸಿದರು. ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ನಿತೀಶ್ ಕುಮಾರ್ ಸೇರಿದಂತೆ ರಾಷ್ಟ್ರೀಯ ನಾಯಕರು ಈ ಸಮಾರಂಭಕ್ಕೆ ಸಾಕ್ಷಿಯಾದರು.ಸಿದ್ದರಾಮಯ್ಯ ಅವರು ದೇವರ ಹೆಸರಿನಲ್ಲಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಡಿಕೆ ಶಿವಕುಮಾರ್ ಅವರು ಶ್ರೀ ಗಂಗಾಧರ ಅಜ್ಜನ ಹೆಸರಿನಲ್ಲಿ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಪುತೂರು ತಾಲೂಕಿನಾದ್ಯಂತ ಸಂಭ್ರಮದ ಈದ್ ಮಿಲಾದ್ ಆಚರಣೆ

Posted by Vidyamaana on 2023-09-28 22:20:38 |

Share: | | | | |


ಪುತೂರು ತಾಲೂಕಿನಾದ್ಯಂತ ಸಂಭ್ರಮದ ಈದ್ ಮಿಲಾದ್ ಆಚರಣೆ

ಪುತ್ತೂರು: ಪುತ್ತೂರು ತಾಲೂಕಿನಾದ್ಯಂತ ಈದ್ ಮಿಲಾದ್ ಹಬ್ಬವನ್ನು ಸಂಭ್ರಮದಿಂದ ಸೆ 28 ಗುರುವಾರದಂದು ಮುಸ್ಲಿಂ ಬಾಂಧವರು ಆಚರಿಸಿದರು.


ಬೆಳಿಗ್ಗೆ ಮುಸ್ಲಿಂ ಬಾಂಧವರು ಪ್ರಾರ್ಥನಾ ಮಂದಿರಗಳಿಗೆ ತೆರಳಿ ಪರಸ್ಪರ ಶುಭಾಶಯ ಕೋರಿದರು.


ಈದ್ ಮಿಲಾದ್ ಅಂಗವಾಗಿ ತಾ ದ.ಕ. ಜಿಲ್ಲಾ ಯುವಜನ ಪರಿಷತ್ ಪುತ್ತೂರು ತಾಲೂಕು ಹಾಗೂ ಈದ್ ಮಿಲಾದ್ ಸಮಿತಿ ವತಿಯಿಂದ 31ನೇ ವರ್ಷದ ಬೃಹತ್ ಮಿಲಾದ್ ಸಮಾವೇಶ ಹಾಗೂ ಬುರ್ಧಾ ಮಜ್ಜಿಸ್ ಗುರುವಾರ ನಗರದ ಕಿಲ್ಲೆ ಮೈದಾನದಲ್ಲಿ ಹಮ್ಮಿಕೊಂಡಿತು.ಸಂಜೆ ಕಬಕ ವೃತ್ತದಲ್ಲಿ ಜಾಥಾ ಕ್ಕೆ  ಕಬಕ ಟೈಲರ್ ಇಸ್ಮಾಯಿಲ್ ಸಾಹೇಬ್ ಚಾಲನೆ ನೀಡಿದರು. ಈಸ್ಟರ್ನ್ ಗ್ರೂಪ್ ಮಾಲಕ ಜ.ಕಲಂದರ್ ಧ್ವಜ ಸ್ವೀಕಾರ ಮಾಡಿದರು. ಬಳಿಕ ಹೊರಟ ಬೃಹತ್ ವಾಹನ ಜಾಥಾ ಮುಖ್ಯರಸ್ತೆಯಾಗಿ ಬೊಳುವಾರು, ದರ್ಬೆಯಿಂದಾಗಿ ಸಂಜೆ ಕಿಲ್ಲೆ ಮೈದಾನಕ್ಕೆ ತೆರಳಿ ಸಮಾಪನ ಗೊಂಡಿತು.


ಸಂಜೆ ಕಿಲ್ಲೆ ಮೈದಾನದಲ್ಲಿ ನಡೆದ ಸಮಾವೇಶವನ್ನು ಬಹು ಎಂ.ಎಂ. ಮಹ್ ರೂಫ್ ಸುಲ್ತಾನಿ ಅಲ್ಪುರ್ಖಾನಿ ಆತೂರು ಉದ್ಘಾಟಿದರು. ಕೇಂದ್ರ ಜುಮ್ಮಾ ಮಸೀದಿ ಮುದಗ್ರಿಸ್ ಬಹು.ಅಸ್ಸಯ್ಯದ್ ಅಹ್ಮದ್ ಪೊಕೋಯ ತಂಙಳ್     ದುವಾಶೀರ್ವಚನ ನೀಡಿದರು. ಪುತ್ತೂರು ಅನ್ಸಾರುದ್ದೀನ್ ಜಮಾಅತ್ ಕಮಿಟಿ ಅಧ್ಯಕ್ಷ ಎಲ್.ಟಿ.ಅಬ್ದುಲ್ ರಝಾಕ್ ಹಾಜಿ ಅಧ್ಯಕ್ಷತೆ ವಹಿಸಿದ್ದರು. ಬಹು.ಆಶಿಕ್ ದಾರಿಮಿ ಅಲಂಪುಝ ಪ್ರಭಾಷಣ ಮಾಡಿದರು. ರಾತ್ರಿ ಬಹು. ಫಕ್ರೆ ಆಲಂ ಮುಂಬೈಯವರಿಂದ ನಾತೇ ಶರೀಫ್ ನಡೆಯಿತು. ಸಭಾ ಕಾರ್ಯಕ್ರಮದ ಬಳಿಕ ರಾತ್ರಿ ಅನ್ನದಾನ ನಡೆಯಿತು. ನೂರಾರು ಮಂದಿ ಮುಸ್ಲಿಂ ಬಾಂಧವರು ಕಾರ್ಯಕ್ರಮದಲ್ಲಿ ಪಾಲ್ಗೊಂಡರುಸಮಾರಂಭದಲ್ಲಿ ತಾಲೂಕು ಯುವಜನ ಪರಿಷತ್ ಅಧ್ಯಕ್ಷ ಅಶ್ರಫ್ ಕಲ್ಲೇಗ, ತಾಲೂಕು ಮುಸ್ಲಿಂ ಸಂಯುಕ್ತ ಜಮಾಅತ್ ಅಧ್ಯಕ್ಷ ಕೆ.ಪಿ.ಮಹಮ್ಮದ್ ಹಾಜಿ, ಉದ್ಯಮಿ ರಿಯಾಝ್, ಈದ್ ಮಿಲಾದ್ ಸಮಿತಿ ಅಧ್ಯಕ್ಷ ಬಶೀರ್ ಪರ್ಲಡ್ಕ, ಪ್ರಧಾನ ಕಾರ್ಯದರ್ಶಿ ಇಫಾಝ್ ಬನ್ನೂರು, ಮುಸ್ಲಿಂ ಯುವಜನ ಪರಿಷತ್ ಕೋಶಾಧಿಕಾರಿ, ನ್ಯಾಯವಾದಿ ಶಾಕಿರ್ ಹಾಜಿ, ನೌಷದ್ ಹಾಜಿ ಬೊಳ್ವಾರ್, ಹಸೈನಾರ್ ಬನಾರಿ, ಅಶ್ರಫ್ ಬಾವ, ಧಾರ್ಮಿಕ ಮುಖಂಡರು ಉಪಸ್ಥಿತರಿದ್ದರು.

ಹಾಲಿ ಶಾಸಕರು ಮಾಜಿ ಶಾಸಕರ ಬಗ್ಗೆ ಅವಹೇಳನಕಾರಿಯಾಗಿ ಮಾತಾನಾಡುವುದು, ಜನತೆಗೆ ಸುಳ್ಳು ಮಾಹಿತಿ ನೀಡುವುದು ಘನತೆಗೆ ತಕ್ಕುದಲ್ಲ’ – ರಾಧಾಕೃಷ್ಣ ಆಳ್ವ

Posted by Vidyamaana on 2024-01-13 21:27:38 |

Share: | | | | |


ಹಾಲಿ ಶಾಸಕರು ಮಾಜಿ ಶಾಸಕರ ಬಗ್ಗೆ ಅವಹೇಳನಕಾರಿಯಾಗಿ ಮಾತಾನಾಡುವುದು, ಜನತೆಗೆ ಸುಳ್ಳು ಮಾಹಿತಿ ನೀಡುವುದು ಘನತೆಗೆ ತಕ್ಕುದಲ್ಲ’ – ರಾಧಾಕೃಷ್ಣ ಆಳ್ವ

ಪುತ್ತೂರು : ಆರಂಭದ ಒಂದು ಮಳೆಗೆ ಕೊಡೆ ಹರಿದಂತೆ ಎಂಬ ಗಾದೆಯಂತೆ ಶಾಸಕರಾಗಿ ಮೊದಲ ಅರ್ಧ ವರ್ಷದಲ್ಲಿಯೇ ಈ ಹಿಂದಿನ ಶಾಸಕರು ತಂದಿರುವ ಅನುದಾನದ ಕಾಮಗಾರಿಯು ಶಿಲಾನ್ಯಾಸವಾಗಿ ಕೆಲಸ ಪ್ರಗತಿಯಲ್ಲಿರುವಾಗಲೇ ಹಾಲಿ ಶಾಸಕರು ಮತ್ತೊಮ್ಮೆ ಶಂಕುಸ್ಥಾಪನೆ ಮಾಡುತ್ತಾ ಇರುವುದು ಜನಸಾಮಾನ್ಯರ ನಡುವಿನಲ್ಲಿ ನಗೆಪಾಟಲಿಗೀಡಾಗಿರುವುದಂತು ಸತ್ಯ ಎಂದು ಪುತ್ತೂರು ಗ್ರಾಮಾಂತರ ಮಂಡಲದ ಪದಾಧಿಕಾರಿಗಳ ಸಭೆಯಲ್ಲಿ ಅಧ್ಯಕ್ಷರಾದ ರಾಧಕೃಷ್ಣ ಆಳ್ವ ಹೇಳಿದರು.


ಪುತ್ತೂರು ಕ್ಷೇತ್ರಾದ್ಯಂತ ಈಗ ನಡೆಯುತ್ತಿರುವ ಎಲ್ಲಾ ಕಾಮಗಾರಿಗಳು ಅದರಲ್ಲಿಯೂ ಉಪ್ಪಿನಂಗಡಿಯ ದ್ವಿಪದ ರಸ್ತೆಯಾಗಿರಲಿ., ಬಿಳಿಯೂರುಕಟ್ಟೆ-ಸಾಜ-ಕುದ್ದುಪದವು ರಸ್ತೆಯ ಕಾಮಗಾರಿಯಾಗಿರಲಿ.., ಎಲ್ಲವೂ ಕೂಡ ಬಿಜೆಪಿ ಸರಕಾರ ಇರುವಾಗ ಬಂದಿರುವಂತ ಅನುದಾನಗಳು ಆದರೆ ಹಾಲಿ ಶಾಸಕರು ಹೋದಲ್ಲಿ ಎಲ್ಲಾ ಮಾಜಿ ಶಾಸಕರನ್ನು ಅವಹೇಳನಕಾರಿಯಾಗಿ ಮಾತಾನಾಡುವುದು ಮತ್ತು ಜನರಿಗೆ ಸುಳ್ಳು ಮಾಹಿತಿಯನ್ನು ನೀಡುವುದು ಘನತೆಗೆ ತಕ್ಕುದಲ್ಲ ಎಂದು ಹೇಳಿದರು.ಅಯೋಧ್ಯೆಯಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಠೆಯ ಅಂಗವಾಗಿ ಜನವರಿ14ರಿಂದ 21ರವರೆಗೆ ದೇವಸ್ಥಾನ, ದೈವಸ್ಥಾನ, ಮಠ ಮಂದಿರಗಳ ಸ್ವಚ್ಛತೆಯಲ್ಲಿ ಕಾರ್ಯಕರ್ತರು ,ಪದಾಧಿಕಾರಿಗಳು ಭಾಗವಹಿಸಬೇಕು ಮತ್ತು ಜ.22 ಪ್ರತಿಷ್ಠಾ ದಿನದಂದು ಎಲ್ಲಾ ಹಿಂದೂ ಮನೆಗಳಲ್ಲಿ ಪ್ರಧಾನಿಯವರ ಆಶಯದಂತೆ ದೀಪ ಬೆಳಗಿಸುವಂತೆ ಈ ಸಂದರ್ಭದಲ್ಲಿ ವಿನಂತಿಸಿದರು.


ಮಂಡಲದ ಪ್ರ.ಕಾರ್ಯದರ್ಶಿ ನಿತೀಶ್ ಶಾಂತಿವನ ಸ್ವಾಗತಿಸಿದರು.


ಮಂಡಲ ಉಪಾಧ್ಯಕ್ಷರಾದ ಹರಿಪ್ರಸಾದ್ ಯಾದವ್ , ಮುಕುಂದ ಬಜತ್ತೂರು, ಅರುಣ್ ವಿಟ್ಲ, ಮೀನಾಕ್ಷಿ ಮಂಜುನಾಥ್,ಉಷಾ ಮುಳಿಯ,ವಿಜಯ ಕೋರಂಗ, ಖಜಾಂಜಿ ರಮೇಶ್ ಭಟ್, ಕಾರ್ಯದರ್ಶಿ ರಮಣಿ ಗಾಣಿಗ, ಲೋಹಿತ್ ಅಮ್ಚಿನಡ್ಕ, ವಿವಿಧ ಮೋರ್ಚಾ ಅಧ್ಯಕ್ಷ ಕಾರ್ಯದರ್ಶಿಗಳಾದ ಯಶಸ್ವಿನಿ ಶಾಸ್ತ್ರಿ, ಯಶೋಧ ಗೌಡ, ಸುರೇಶ್ ಕಣ್ಣರಾಯ, ಪುನೀತ್ ಮಾಡತ್ತಾರು, ನವೀನ್ ಪಡ್ನೂರು,ಸುನೀಲ್ ದಡ್ಡು, ಮಹಾಶಕ್ತಿ ಕಾರ್ಯದರ್ಶಿಗಳಾದ ಸುರೇಶ್ ಅತ್ರಮಜಲು, ದಯಾನಂದ ಶೆಟ್ಟಿ ಉಜ್ರೆಮಾರು ಮೊದಲಾದವರು ಉಪಸ್ಥಿತರಿದ್ದರು.ಮಂಡಲ ಪ್ರ.ಕಾರ್ಯದರ್ಶಿ ಪುರುಷೋತ್ತಮ ಮಂಗ್ಲಿಮನೆ ಧನ್ಯವಾದ ಸಲ್ಲಿಸಿದರು.

ಬಬಿಯಾ ನಿರ್ಗಮನದ ಕೊರತೆ ತುಂಬಿದ ಹೊಸ ಮೊಸಳೆ!

Posted by Vidyamaana on 2023-11-11 21:27:11 |

Share: | | | | |


ಬಬಿಯಾ ನಿರ್ಗಮನದ ಕೊರತೆ ತುಂಬಿದ ಹೊಸ ಮೊಸಳೆ!

ಕಾಸರಗೋಡು:ಅನಂತಪುರ ದೇವಸ್ಥಾನದಲ್ಲಿ ದೇವರ ಪ್ರತಿಬಿಂಬ ಎಂದೇ ಕರೆಯಲ್ಪಟ್ಟಿದ್ದ ಮೊಸಳೆ ಬಬಿಯಾ ಹರಿಪಾದ ಸೇರಿದ ಬಳಿಕ ಭಕ್ತರಲ್ಲಿ ಬೇಸರದ ಛಾಯೆ ಮೂಡಿತ್ತು. ಎಲ್ಲರೂ ದೇವರಲ್ಲಿ ಇನ್ನೊಂದು ಬಬಿಯಾದ ಪ್ರತಿಬಿಂಬವನ್ನು ಕಾಣಲು ಕಾತುರದಿಂದ ಕಾಯುತ್ತಿದ್ದರು.


ಇದೀಗ ಭಕ್ತಾದಿಗಳ ಆಸೆಯಂತೆ ಅನಂತಪುರ ಕ್ಷೇತ್ರದಲ್ಲಿ ಮತ್ತೊಂದು ಮೊಸಳೆ ಕಾಣ ಸಿಕ್ಕಿದೆ. ಒಂದು ವಾರದ ಹಿಂದೆ ಭಕ್ತಾದಿಯೊಬ್ಬರು ಮೊಸಳೆ ಕಂಡಂತೆ ಆಯಿತು ಅಂದರೂ ಸಾಕ್ಷ್ಯಾಧಾರ ಇಲ್ಲದಿದ್ದರಿಂದ ನಂಬಲು ಅಸಾಧ್ಯವಾಗಿತ್ತು. ಇದೀಗ ಕ್ಷೇತ್ರದ ಆಡಳಿತ ಮಂಡಳಿ ಮೊಸಳೆ ಇರುವುದನ್ನು ಖಚಿತಪಡಿಸಿದೆ. ದೇವರ ಪ್ರತಿ ಬಿಂಬ ಎಂದೇ ಹೇಳಲ್ಪಡುತ್ತಿರುವ ಮೊಸಳೆ ಈಗ ಕಾಣಿಸುತ್ತಿರುವುದು ಭಕ್ತಾದಿಗಳಲ್ಲಿ ಖುಷಿ ತಂದಿದೆ. ದೇವರ ಪವಾಡವೋ, ಕಾರಣಿಕ ಶಕ್ತಿಯೋ ಎಂಬಂತೆ ಕ್ಷೇತ್ರದ ಕೆರೆಯಲ್ಲಿ ಮೊಸಳೆ ಪತ್ತೆಯಾಗಿದ್ದು ಕ್ಷೇತ್ರಕ್ಕೆ ಮತ್ತಷ್ಟು ಆಸ್ತಿಕರನ್ನು ಆಹ್ವಾನಿಸಲಿದೆ.

Recent News


Leave a Comment: