ಇಂದು (ಜು.O6) ದಕ್ಷಿಣ ಕನ್ನಡ ಜಿಲ್ಲೆಯ ಶಾಲೆ, ಕಾಲೇಜಿಗೆ ರಜೆ

ಸುದ್ದಿಗಳು News

Posted by vidyamaana on 2024-07-06 04:30:03 |

Share: | | | | |


ಇಂದು (ಜು.O6) ದಕ್ಷಿಣ ಕನ್ನಡ ಜಿಲ್ಲೆಯ ಶಾಲೆ, ಕಾಲೇಜಿಗೆ ರಜೆ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆ ಹಿನ್ನೆಲೆಯಲ್ಲಿ ಶನಿವಾರ (ನಾಳೆ, ಜು.6) ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢಶಾಲೆ ಹಾಗೂ

ಪದವಿ ಪೂರ್ವ ಕಾಲೇಜುಗಳಿಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ರಜೆ ಘೋಷಿಸಿ ಆದೇಶಿಸಿದ್ದಾರೆ.

 Share: | | | | |


ಬಿಜೆಪಿ ಯುವಮೋರ್ಚಾ ವತಿಯಿಂದ ಬೈಕ್ ಜಾಥಾ

Posted by Vidyamaana on 2023-03-27 04:24:25 |

Share: | | | | |


ಬಿಜೆಪಿ ಯುವಮೋರ್ಚಾ   ವತಿಯಿಂದ ಬೈಕ್ ಜಾಥಾ

ಪುತ್ತೂರು : ಯುವಕರಿಗೆ ಉದ್ಯೋಗಾವಕಾಶ ಕಲ್ಪಿಸುವ ನಿಟ್ಟಿನಲ್ಲಿ ಇಂಡಸ್ಟ್ರೀಯಲ್ ಏರಿಯಾಕ್ಕೆ 100 ಎಕ್ರೆ ಜಾಗ ಮಂಜೂರು ಮಾಡಲಾಗಿದೆ ಎಂದು ಶಾಸಕ ಸಂಜೀವ ಮಠಂದೂರು ಹೇಳಿದರು.

ಬಿಜೆಪಿ ಯುವ ಮೋರ್ಚಾ ವತಿಯಿಂದ ಭಾನುವಾರ ಹಮ್ಮಿಕೊಂಡ ಬೈಕ್ ಜಾಥಾದ ಅಂಗವಾಗಿ ಕಲ್ಲೇಗ ಸಭಾ ವೇದಿಕೆಯಲ್ಲಿ ನಡೆದ ಜಾಥಾದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.

ಕ್ರೀಡೆಗೆ ಪೂರಕವಾಗಿ ಪುತ್ತೂರಿನ ತೆಂಕಿದಲ್ಲಿ ಈಗಾಲೇ ಜಾಗ ಖರೀದಿ ಮಾಡಲಾಗಿದೆ ಎಂದ ಅವರು, ಪುತ್ತೂರಿನಲ್ಲಿ ಮತ್ತೊಮ್ಮೆ ಕಮಲ ಅರಳಿಸುವ ಸಂದೇಶವನ್ನು ಬೈಕ್ ಜಾಥಾ ಮೂಲಕ ಆಯೋಜಿಸಿದ ಯುವ ಮೋರ್ಚಾ ಕಾರ್ಯಕರ್ತರಿಗೆ ಅಭಿನಂದನೆ ಸಲ್ಲಿಸಿದರು.ಡಾ.ಎಂ.ಕೆ.ಪ್ರಸಾದ್ ಮಾತನಾಡಿ, ಮುಂದಿನ ಅವಧಿಯಲ್ಲಿ ಶಾಸಕರು ಮತ್ತಷ್ಟು ಅನುದಾನ ತರುವ ಪ್ರಯತ್ನ ಮಾಡಬೇಕು. ಜತೆಗೆ ಮುಂಬರುವ ಚುನಾವಣೆಯಲ್ಲಿ ಡಬಲ್ ಇಂಜಿನ್ ಬದಲು ತ್ರಿಬಲ್ ಇಂಜಿನ್ ಸರಕಾರ ಮಾಡಬೇಕು ಎಂದು ಹೇಳಿದರು.

ಬಿಜೆಪಿ ಯುವಮೋರ್ಚಾ ಅಧ್ಯಕ್ಷ ನವೀನ್ ಪಡ್ನೂರು ಮಾತನಾಡಿ, ಮುಂಬರುವ ಚುನಾವಣೆ ಎದುರಿಸಲು ಯುವಕರ ತಂಡ ಸಜ್ಜಾಗಿದೆ ಎಂದರು.

ಬೈಕ್ ಜಾಥಾ ಕುಂಬ್ರದಿಂದ ಹೊರಟು ಬೈಪಾಸ್ ರಸ್ತೆಯಾಗಿ ಕಲ್ಲೇಗದಲ್ಲಿ ಸಮಾಪನಗೊಂಡಿತು.

ವೇದಿಕೆಯಲ್ಲಿ ನಗರಸಭೆ ಅಧ್ಯಕ್ಷ ಜೀವಂಧರ್ ಜೈನ್, ಪುಡಾ ಅಧ್ಯಕ್ಷ ಭಾಮಿ ಅಶೋಕ್ ಶೆಣೈ, ಬಿಜೆಪಿ ನಗರ ಮಂಡಲ ಅಧ್ಯಕ್ಷ ಪಿ.ಜಿ.ಜಗನ್ನಿವಾಸ ರಾವ್, ಗ್ರಾಮಾಂತರ ಮಂಡಲ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ಬಿಜೆಪಿ ಜಿಲ್ಲಾ ಸಹಪ್ರಭಾರಿ ಗೋಪಾಲಕೃಷ್ಣ ಹೇರಳೆ, ಮತ್ತಿತರರು ಉಪಸ್ಥಿತರಿದ್ದರು

ಖರ್ಗೆ ಸಮ್ಮುಖದಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾದ ಮಾಜಿ ಸಿಎಂ ಜಗದೀಶ್‌ ಶೆಟ್ಟರ್

Posted by Vidyamaana on 2023-04-17 04:18:37 |

Share: | | | | |


ಖರ್ಗೆ ಸಮ್ಮುಖದಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾದ ಮಾಜಿ ಸಿಎಂ ಜಗದೀಶ್‌ ಶೆಟ್ಟರ್

ಬೆಂಗಳೂರು: ಬಿಜೆಪಿ ಟಿಕೆಟ್‌ ನಿರಾಕರಣೆಯಿಂದ ತೀವ್ರ ಅಸಮಾಧಾನಗೊಂಡು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌ ಸೋಮವಾರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್‌ ಖರ್ಗೆ ಅವರ ಸಮ್ಮುಖದಲ್ಲಿ ಅಧಿಕೃತವಾಗಿ ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾದರು.ಖರ್ಗೆ ಅವರು ಶೆಟ್ಟರ್‌ ಅವರಿಗೆ ಕಾಂಗ್ರೆಸ್‌ ಪಕ್ಷದ ಶಾಲು ಹೊದಿಸಿ, ಬಾವುಟ ನೀಡಿ ಪಕ್ಷಕ್ಕೆ ಬರಮಾಡಿಕೊಂಡರು.ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷರಾದ ಡಿಕೆ ಶಿವಕುಮಾರ್‌, ಶೆಟ್ಟರ್‌ ಒಬ್ಬರ ಶ್ರೇಷ್ಠ, ಹಾಗೂ ಸರಳ, ಸಜ್ಜನಿಕೆಯ ರಾಜಕಾರಣಿ, ಒಂದೇ ಒಂದು ಕಪ್ಪು ಚುಕ್ಕೆ ಇಲ್ಲದೆ ಕೆಲಸ ಮಾಡಿಕೊಂಡು ಬಂದಿದ್ದಾರೆ. ರಾಜ್ಯದ ಸಿಎಂ ಆಗಿ, ಸ್ಪೀಕರ್‌ ಆಗಿ ಕೆಲಸ ಮಾಡಿದ್ದಾರೆ ಎಂದರು.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್‌ ಖರ್ಗೆ ಅವರು ಮಾತನಾಡಿ, ಜಗದೀಶ್‌ ಶೆಟ್ಟರ್‌ ಯೊಬ್ಬ ಉತ್ತಮ ನಾಯಕ. ಅವರು ನಮ್ಮ ಪಕ್ಷದ ತತ್ವ ಸಿದ್ದಾಂತ ಒಪ್ಪಿ ಶೆಟ್ಟರ್‌ ಕಾಂಗ್ರೆಸ್‌ ಸೇರುತ್ತಿದ್ದಾರೆ. ಶೆಟ್ಟರ್‌ ಪಕ್ಷ ಸೆರ್ಪಡೆಯಿಂದ ಉತ್ತರ ಕರ್ನಾಟಕದ ಭಾಗಕ್ಕೆ ಶಕ್ತಿ. ಶೆಟ್ಟರ್‌ ಅಭಯ್‌ ಸಿಂಗ್‌ ಪಾಟೀಲ್‌ ಸೇರಿ, ಹಲವು ನಾಯಕರು ಕಾಂಗ್ರೆಸ್‌ ಸೆರ್ಪಡೆಯಾಗುತ್ತಿದ್ದಾರೆ. ಶೆಟ್ಟರ್‌ ಬಿಜೆಪಿ ಪಕ್ಷವನ್ನು ಕಟ್ಟಿ ಬೆಳೆಸಿದ್ದಾರೆ. ಅದೇ ರೀತಿ ನಮ್ಮ ಪಕ್ಷದಲ್ಲೂ ಕೆಲಸ ಮಾಡುತ್ತಾರೆ ಎನ್ನುವ ವಿಶ್ವಾಸವಿದೆ.  ಕರ್ನಾಟಕದಲ್ಲಿ ನಾವು 150 ಸ್ಥಾನವನ್ನು ಗೆದ್ದೇ ಗೆಲ್ಲುತ್ತೇವೆ. ಕಾಂಗ್ರೆಸ್‌ ಪಕ್ಷಕ್ಕೆ ಜಗದೀಶ್‌ ಶೆಟ್ಟರ್‌ ಅವರನ್ನು ಸ್ವಾಗತಿಸುತ್ತೇನೆ ಎಂದರು.ಪಕ್ಷ ಸೇರ್ಪಡೆಯಾದ ಬಳಿಕ ಮಾತನಾಡಿದ ಜಗದೀಶ್‌ ಶೆಟ್ಟರ್‌,  ನಾನು ಬಿಜೆಪಿ ಬಿಟ್ಟು, ಕಾಂಗ್ರೆಸ್‌ ಸೇರಿರುವುದು ಬಹಳ ಜನಕ್ಕೆ ಅಚ್ಚರಿಯಾಗಿದೆ. ನಾನು ಬಿಜೆಪಿಯನ್ನು ಕಟ್ಟಿ ಬೆಳೆಸಿದ ವ್ಯಕ್ತಿ.  ಬಿಜೆಪಿ ನನಗೆ ಎಲ್ಲ ರೀತಿಯ ಗೌರವವನ್ನು ಕೊಟ್ಟಿದೆ. ಅದಕ್ಕೆ ಪ್ರತಿಯಾಗಿ ಪಕ್ಷ ಕೊಟ್ಟ ಜವಾಬ್ದಾರಿಯನ್ನು ನಾನು ನಿಭಾಯಿಸಿದ್ದೇನೆ. ಹಿರಿಯ ನಾಯಕನನ್ನು ಪಕ್ಷ ನಡೆಸಿಕೊಂಡ ರೀತಿಯಿಂದ ನೋವಾಗಿದೆ. ಜನರ ಆರ್ಶೀವಾದದಿಂದ ನಿರಂತರವಾಗಿ ಗೆಲ್ಲುತ್ತಾ ಬಂದಿದ್ದೇನೆ. ಈ ಬಾರಿ ಟಿಕೆಟ್‌ ಸಿಗುವ ವಿಶ್ವಾಸವಿತ್ತು. ಆದರೆ ಟಿಕೆಟ್‌ ಇಲ್ಲ ಎಂದಾಗ ತುಂಬಾ ಬೇಸರವಾಯಿತು. ಮೊದಲೇ ಟಿಕೆಟ್‌ ಇಲ್ಲ ಎಂದಿದ್ದರೆ, ಬೇಜಾರ್‌ ಆಗುತ್ತಿರಲಿಲ್ಲ. ಹಿರಿಯ ನಾಯಕನನ್ನು ಪಕ್ಷ ನಡೆಸಿಕೊಂಡ ರೀತಿಯಿಂದ ಬೇಸರವಾಗಿದೆ. ಬಿಜೆಪಿ ಪಕ್ಷ ಕಟ್ಟಿದ ನಾಯಕನಿಗೆ ಬೆಲೆ ಸಿಗಲಿಲ್ಲ. ಕಳೆದ 6 ತಿಂಗಳಿನಿಂದ ಪಕ್ಷ ನನ್ನನು ಕಡೆಗಣನೆ ಮಾಡಿದೆ. ಪಕ್ಷ ನನ್ನನು ಒತ್ತಾಯಪೂರ್ವಕವಾಗಿ ಹೊರ ಹಾಕಿದೆ. ಹಾಗಾಗಿ ನಾನು ಕಾಂಗ್ರೆಸ್‌ ನ ತತ್ವ ಸಿದ್ದಾಂತವನ್ನು ಒಪ್ಪಿ, ಕಾಂಗ್ರೆಸ್‌ ಸೇರ್ಪಡೆಯಾಗಿದ್ದೇನೆ ಎಂದರು.

ಕಲಬುರಗಿ: ಹಣೆಗೆ ಕುಂಕುಮ ಇಡಲು ನಿರಾಕರಿಸಿದ ವಿಪಕ್ಷ ನಾಯಕ ಆರ್.ಅಶೋಕ

Posted by Vidyamaana on 2024-03-25 11:54:53 |

Share: | | | | |


ಕಲಬುರಗಿ: ಹಣೆಗೆ ಕುಂಕುಮ ಇಡಲು ನಿರಾಕರಿಸಿದ ವಿಪಕ್ಷ ನಾಯಕ ಆರ್.ಅಶೋಕ

ಕಲಬುರಗಿ, ಮಾ.24: ವಿಪಕ್ಷ ನಾಯಕ ಆರ್.ಅಶೋಕ(R Ashoka) ಅವರು ತಮ್ಮ ಹಣೆಗೆ ಕುಂಕುಮ ಹಾಕಲು ನಿರಾಕರಿಸಿದ ಘಟನೆ ನಡೆದಿದೆ. ಕಲಬುರಗಿ (Kalaburagi) ಜಿಲ್ಲೆಯ ಚಿಂಚೋಳಿ ತಾಲೂಕಿನ ಸುಲೆಪೇಟ್ ಬಿಜೆಪಿ ಕಚೇರಿಗೆ ಭೇಟಿ ನೀಡಿದಾಗ ಹಿರಿಯ ಮುಖಂಡರೊಬ್ಬರು ಕುಂಕುಮ ಹಚ್ಚಲು ಮುಂದಾದಾಗ ನಿರಾಕರಿಸಿದ್ದಾರೆ. ಸಿದ್ದರಾಮಯ್ಯ (Siddaramaiah) ಹಿಂದೂ ವಿರೋಧಿ, ಕೇಸರಿ ಕಂಡರೆ ಆಗಲ್ಲ, ಕೇಸರಿ ಶಲ್ಯ ಧರಿಸಲ್ಲ, ಕುಂಕುಮ ಹಾಕಲ್ಲ ಎಂದೆಲ್ಲಾ ಟೀಕಿಸುವ ರಾಜ್ಯದ ಬಿಜೆಪಿ ನಾಯಕರು ತಮ್ಮ ನಾಯಕನ ಈ ನಡೆಗೆ ಏನು ಹೇಳುತ್ತಾರೆ?


ಈ ಹಿಂದೆ ಸದನದಲ್ಲಿ ತಮ್ಮನ್ನು ಹೊಗಳುವ ಭರದಲ್ಲಿ ಬಿಜೆಪಿಯನ್ನು ಬೆಂಬಲಿಸುವ ಬಜರಂಗದಳದ ಕಾರ್ಯಕರ್ತರ ವಿರುದ್ಧ “ನಾನು ಗೃಹಸಚಿವ ಆಗಿದ್ದಾಗ ಪಬ್‌ನಲ್ಲಿ ಗಲಾಟೆ ಆದಾಗ ಗೂಂಡಾ ಕಾಯ್ದೆ ಹಾಕಿದ್ದೆ”ಎಂದು ಹೇಳಿದ್ದರು. ಆ ಮೂಲಕ ಹಿಂದೂ ಸಂಘಟನೆಗಳ ಕೆಂಗಣ್ಣಿಗೆ ಗುರಿಯಾಗಿದ್ದರು. ವ್ಯಾಪಕ ಖಂಡನೆ ವ್ಯಕ್ತವಾಗುತ್ತಿದ್ದಂತೆ ಎಚ್ಚೆತ್ತಿದ್ದ ಅವರು ಬಜರಂಗದಳ ಕಾರ್ಯಕರ್ತರ ಕ್ಷಮೆ ಕೇಳಿದ್ದರು. ಇದೀಗ ಕುಂಕುಮ ಹಣೆಗೆ ಇಡಲು ನಿರಾಕರಿಸಿರುವುದು ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.ಕಚೇರಿಗೆ ಆಗಮಿಸಿದ ಅಶೋಕ್ ಅವರಿಗೆ ಬಿಜೆಪಿ ಮುಖಂಡರು ಹಾರ ಹಾಕಿ ಸ್ವಾಗತಿಸಲು ಮುಂದಾದರು. ಈ ವೇಳೆ ಎರಡು ಹಾರಗಳನ್ನು ತಾವು ಹಾಕಿಕೊಳ್ಳದೆ ಬಿಜೆಪಿ ಹಿರಿಯ ಮುಖಂಡ ಡಾ ವಿಶ್ವನಾಥ್ ಪವಾರ್ ಮತ್ತು ಇನ್ನೊಬ್ಬರಿಗೆ ಹಾಕಿ ಗೌರವಿಸಿದರು. ಈ ನಡುವೆ ಡಾ ವಿಶ್ವನಾಥ್ ಪವಾರ್ ಅವರು ಅಶೋಕ ಅವರ ಹಣೆಗೆ ಕುಂಕುಮ ಇಡಲು ಮುಂದಾಗಿದ್ದಾರೆ. ಆದರೆ ಅಶೋಕ ಅವರು ಕುಂಕುಮ ಹಚ್ಚದಂತೆ ತಡೆದಿದ್ದಾರೆ. ಬಳಿಕ ವಿಶ್ವನಾಥ್ ಶಾಲು ಹಾಕಿ ಸನ್ಮಾನಿಸಿದರು.

ಕೋಡಿಂಬಾಡಿ ಗ್ರಾಪಂ; ನೂತನ ಅಧ್ಯಕ್ಷ ಉಪಾಧ್ಯಕ್ಷರ ಪದಗ್ರಹಣ ಸಮಾರಂಭ

Posted by Vidyamaana on 2023-08-23 13:22:01 |

Share: | | | | |


ಕೋಡಿಂಬಾಡಿ ಗ್ರಾಪಂ; ನೂತನ ಅಧ್ಯಕ್ಷ ಉಪಾಧ್ಯಕ್ಷರ ಪದಗ್ರಹಣ ಸಮಾರಂಭ

ಪುತ್ತೂರು: ಕೋಡಿಂಬಾಡಿ ಗ್ರಾಪಂ ಆಡಳಿತ ಹಲವು ವರ್ಷಗಳ ಕಾಲ ಬಿಜೆಪಿ ಆಡಳಿತದ ತೆಕ್ಕೆಯಲ್ಲಿತ್ತು, ಜನತೆ ಬದಲಾವಣೆ ಬಯಸಿದ್ದರು ನಾವು ಬದಲಾವಣೆಯನ್ನು ಮಾಡಿದ್ದೇವೆ, ಗ್ರಾಮದ ಅಭಿವೃದ್ದಿಗಾಗಿ ಕೋಡಿಂಬಾಡಿಯಲ್ಲಿ ಕಾಂಗ್ರೆಸ್ ಆಡಳಿತದ ಪಂಚಾಯತ್ ಬಂದಿದೆ, ಉತ್ತಮ ಆಡಳಿತ ನಡೆಸುವ ಮೂಲಕ ನನ್ನ ಹುಟ್ಟೂರ ಗ್ರಾಪಂ ಕ್ಷೇತ್ರದ ಎಲ್ಲಾ ಗ್ರಾಪಂಗಳಿಗೂ ಮಾಡದರಿಯಾಗಬೇಕು ಎಂದು ಶಾಸಕರಾದ ಅಶೋಕ್ ರೈ ಹೇಳಿದರು.

ಅವರು ತನ್ನ ಹುಟ್ಟೂರಿನ ಕೋಡಿಂಬಾಡಿ ಗ್ರಾಮಪಂಚಾಯತ್‌ನಲ್ಲಿ ನೂತನ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಪದಗ್ರಹಣ ಸಮಾರಂಭದಲ್ಲಿ ಮಾತನಾಡಿದರು.

ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಹೆಚ್ಚುವರಿ ನಾಲ್ಕು ಗ್ರಾಪಂ ಕಾಂಗ್ರೆಸ್ ತೆಕ್ಕೆಗೆ ಬಂದಿದೆ, ಸುಭದ್ರ ಮತ್ತು ಭೃಷ್ಟಾಚಾರ ಮುಕ್ತ ಆಡಳಿತಕ್ಕಾಗಿ ಇತರೆ ಪಕ್ಷದ ಸದಸ್ಯರು ನಮ್ಮ ಜೊತೆ ಕೈ ಜೋಡಿಸಿದ್ದಾರೆ. ನಾವು ಯಾರಿಗೂ ಬಲವಂತ ಮಾಡಿಲ್ಲ, ಕಾಂಗ್ರೆಸ್‌ನ ತತ್ವ ಸಿದ್ದಾಂತವನ್ನು ಮೆಚ್ಚಿ ಬಿಜೆಪಿಯಲ್ಲಿದ್ದವರು ನಮ್ಮ ಜೊತೆ ಸೇರಿಕೊಳ್ಳುತ್ತಿರುವುದು ಉತ್ತಮ ವಿಚಾರವಾಗಿದೆ. ನನ್ನ ಹುಟ್ಟೂರ ಗ್ರಾಪಂ ನಲ್ಲಿ ಬಿಜೆಪಿ ಆಡಳಿತವಿತ್ತು ಅದನ್ನು ಬದಲಾವಣೆ ಮಾಡಲಾಗಿದೆ. ಗ್ರಾಪಂ ಸದಸ್ಯರು ಸೇರಿದಂತೆ ಅನೇಕ ಮಂದಿ ಇತರೆ ಪಕ್ಷದ ಸದಸ್ಯರು ಕಾಂಗ್ರೆಸ್ ಪಕ್ಷವನ್ನು ಸೇರುತ್ತಿದ್ದಾರೆ,ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಮಂದಿ ಪಕ್ಷವನ್ನು ಸೇರಿಕೊಳ್ಳಲಿದ್ದಾರೆ.


ನೂತನ ಆಡಳಿತ ಇತಿಹಾಸವನ್ನು ನಿರ್ಮಿಸಬೇಕು

ನೂತನವಾಗಿ ಅಧಿಕಾರಕ್ಕೆ ಬಂದ ಆಡಳಿತ ಇತಿಹಾಸವನ್ನು ನಿರ್ಮಿಸಬೇಕು. ಈ ಹಿಂದಿನ ಆಡಳಿತದಿಂದ ಬೇಸತ್ತ ಜನ ಬದಲಾವಣೆ ಬಯಸಿದ್ದರು ಈ ಕಾರಣಕ್ಕೆ ಹಿಂದಿನ ಮಾದರಿಯಲ್ಲಿ ಆಡಳಿತ ನಡೆಸಬಾರದು ಗ್ರಾಮದ ಪ್ರತೀಯೊಬ್ಬ ಪ್ರಜೆಗೂ ಪಂಚಾಯತ್ ಆಡಳಿತದ ಬಗ್ಗೆ ಉತ್ತಮ ಭಾವನೆ ಬರುವ ರೀತಿಯಲ್ಲಿ ಕೆಲಸ ಮಾಡಬೇಕು. ಗ್ರಾಮದಲ್ಲಿ ಬಡವರಿಗೆ ಮನೆ ನಿರ್ಮಾಣಕ್ಕೆ ಸೈಟ್ ಮಾಡಿಕೊಡಬೇಕು. ಗ್ರಾಮದಲ್ಲಿ ಯಾರಿಗೂ ಮನೆ ಇಲ್ಲ, ಕುಡಿಯುವ ನೀರಿಲ್ಲ, ವಾಸಕ್ಕೆ ಮನೆ ಇಲ್ಲ ಎಂಬ ದೂರು ಬರಲೇಬಾರದು ಎಲ್ಲರಿಗೂ ಮೂಲಭೂತ ವ್ಯವಸ್ಥೆಯನ್ನು ಕಲ್ಪಿಸಬೇಕು. ಅಧಿಕಾರಗಳು ಹೇಳಿದ್ದನ್ನೇ ಕೇಳುವುದಲ್ಲ ಸರಕಾರದ ಸುತ್ತೋಲೆ ಯನ್ನು ನಾವು ಅಧ್ಯಯನ ನಡೆಸಬೇಕು, ಬಡವರಿಗೆ ನೆರವಾಗುವ ಯೋಜನೆಗಳನ್ನು ಗ್ರಾಪಂ ಜಾರಿಗೆ ತರಬೇಕು ಎಂದು ಹೇಳಿದರು. ಬಡವರ ಕೆಲಸವನ್ನು ಚಾಚೂ ತಪ್ಪದೆ ಮಾಡಬೇಕು, ಭೃಷ್ಟಾಚಾರ ಮುಕ್ತ ಆಡಳಿತ ನಡೆಸುವ ಮೂಲಕ ನಾವು ನೊಂದವರ ಕಣ್ಣೀರೊರೆಸುವ ಕೆಲಸವನ್ನು ಮಾಡಬೇಕು ಎಂದು ಹೇಳಿದರು.


ಡಿಜಿಟಲ್ ಪಂಚಾಯತ್ ಮಾಡುವ ಕನಸು ಇದೆ ಗ್ರಾಮಸ್ಥರ ಸಹಕಾರ ಬೇಕು: ಜಯಪ್ರಕಾಶ್ ಬದಿನಾರ್

ನೂತನವಾಗಿ ಅಧಿಕಾರ ಸ್ವೀಕರಿಸಿದ ಗ್ರಾಪಂ ಉಪಾಧ್ಯಕ್ಷರಾದ ಜಯಪ್ರಕಾಶ್ ಬದಿನಾರ್ ರವರು ಮಾತನಾಡಿ ನೂತನವಾಗಿ ಅಸ್ತಿತ್ವಕ್ಕೆ ಬಂದ ಗ್ರಾಪಂ ಆಡಳಿತದಲ್ಲಿ ಯಾವುದೇ ತಾರತಮ್ಯವಿಲ್ಲದೆ ಎಲ್ಲರನ್ನೂ ಸಮಾನ ರೀತಿಯಲ್ಲಿ ನೋಡಿಕೊಳ್ಳುತ್ತೇವೆ, ಪಂಚಾಯತ್‌ನ ಎಲ್ಲಾ ಸದಸ್ಯರನ್ನು ವಿಸ್ವಾಸಕ್ಕೆ ತೆಗೆದುಕೊಂಡು ನಾವು ಮುಂದಕ್ಕೆ ಕೆಲಸ ಮಾಡಲಿದ್ದೇವೆ. ಶಾಸಕರ ನಿರ್ದೇಶನದಂತೆ ಭೃಷ್ಟಾಚಾರ ರಹಿತ ಆಡಳಿತವನ್ನು ನೀಡಲಿದ್ದು ಗ್ರಾಪಂ ನ್ನು ಡಿಜಿಟಲ್ ಪಂಚಾಯತನ್ನಾಗಿ ಪರಿವರ್ತನೆ ಮಾಡುತ್ತೇವೆ ಎಲ್ಲದಕ್ಕೂ ಗ್ರಾಮಸ್ಥರ ಮತ್ತು ಗ್ರಾಪಂ ಸದಸ್ಯರ ಸಹಕಾರ ಅಗತ್ಯವಾಗಿದೆ ಎಂದು ಹೇಳಿದರು.

ಗ್ರಾಮದಲ್ಲಿ ಮೂಲಬೂತ ಸೌಕರ್ಯಕ್ಕೆ ಮೊದಲ ಅಧ್ಯತೆಯನ್ನು ನೀಡಲಿದ್ದೇವೆ, ಕುಡಿಯುವ ನೀರು, ರಸ್ತೆ ಮತ್ತು ನಿವೇಶನ ರಹಿತರಿಗೆ ನಿವೇಶನವನ್ನು ನೀಡುವ ಯೋಜನೆ ನಮ್ಮ ಮುಂದೆ ಇದ್ದು ಇದಕ್ಕಾಗಿ ಶಾಸಕರ ನೆರವನ್ನು ನಾವು ಪಡೆಯಲಿದ್ದೇವೆ. ಅನೇಕ ವರ್ಷಗಳಿಂದ ಪೆಂಡಿಂಗ್ ಇರುವ ನಿವೇಶನ ಹಂಚಿಕೆಯನ್ನು ಈ ಬಾರಿ ಮಾಡಲಿದ್ದೇವೆರ, ಗ್ರಾಮದಲ್ಲಿ ಸೂರಿಲ್ಲದವರಿಗೆ ಸೂರು ಕಲ್ಪಿಸುವ ಯೋಚನೆಯೂ ನಮ್ಮ ಮುಂದಿದ್ದು ಕೋಡಿಂಬಾಡಿ ಗ್ರಾಮವನ್ನು ಮಾದರಿ ಗ್ರಾಮವನ್ನಾಗಿ ರೂಪಿಸಲಿದ್ದೇವೆ ಎಂದು ಹೇಳಿದರು.


ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ; ಮಲ್ಲಿಕಾ ಅಶೋಕ್ ಪುಜಾರಿ

ಅಧಿಕಾರ ಸ್ವೀಕರಿಸಿದ ನೂತನ ಅಧ್ಯಕ್ಷೆ ಮಲ್ಲಿಕಾ ಅಶೋಕ್ ಪೂಜಾರಿ ಮಾತನಾಡಿ ನಾವು ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡುತ್ತೇವೆ, ಗ್ರಾಪಂ ನ ಎಲ್ಲಾ ಸದಸ್ಯರು, ಪಕ್ಷದ ಮುಖಂಡರು , ಶಾಸಕರ ಮಾರ್ಗದರ್ಶನದಂತೆ ಕೆಲಸವನ್ನು ಮಾಡಲಿದ್ದು ಪಂಚಾಯತ್‌ನಲ್ಲಿ ಬಾಕಿ ಇರುವ ಮತ್ತು ಆಗಬೇಕಾದ ಅಭಿವೃದ್ದಿ ಕೆಲಸಗಳನ್ನು ಎಲ್ಲರ ಸಹಕಾರದಿಂದ ಮಾಡಲಿದ್ದೇವೆ ಎಂದು ಹೇಳಿದರು. ಕಳೆದ ಹಲವು ವರ್ಷಗಳಿಂದ ಅನೇಕ ಕೆಲಸಗಳು ನೆನೆಗುದಿಗೆ ಬಿದ್ದಿದೆ ಅವುಗಳಿಗೆ ವೇಗವನ್ನು ನೀಡುವ ಕೆಲಸವನ್ನು ಮಾಡಲಿದ್ದೇವೆ ಎಂದು ಹೇಳಿದರು.


ಕೈವಶ ಮಾಡಿಕೊಂಡಿದ್ದೇವೆ: ಮುರಳೀಧರ್ ರೈ

ವಿಟ್ಲ ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷರಾದ ಮುರಳೀದರ್ ರೈ ಮಠಂತಬೆಟ್ಟು ಮಾತನಾಡಿ ಬಿಜೆಪಿಯ ವಶದಲ್ಲಿದ್ದ ಕೋಡಿಂಬಡಿ ಗ್ರಾಪಂ ನ್ನು ಈ ಬಾರಿ ಕೈ ವಶ ಮಾಡಿಕೊಂಡಿದ್ದೇವೆ, ವಿಟ್ಲ ಉಪ್ಪಿನಂಗಡಿ ಬ್ಲಾಕ್ ವ್ಯಾಪ್ತಿಯಲ್ಲಿ ಬಿಜೆಪಿ ತೆಕ್ಕೆಯಲ್ಲಿದ್ದ ನಾಲ್ಕು ಪಂಛಾಯತ್ ಕಾಂಗ್ರೆಸ್ ವಶ ಮಾಡಿಕೊಂಡಿದ್ದೇವೆ. ರಾಜ್ಯ ಸರಕಾರದ ಐದು ಗ್ಯಾರಂಟಿ ಯೋಜನೆ ಮತ್ತು ಸುಭದ್ರ ಆಳಿತವನ್ನು ಮೆಚ್ಚಿ ನಮ್ಮ ಜೊತೆ ಗ್ರಾಪಂ ಸದಸ್ಯರುಗಳು ಕೈ ಜೋಡಿಸುತ್ತಿದ್ದಾರೆ, ಶಶಕರ ನೆರವಿನಿಂದ ನಾವು ನಾಲ್ಕು ಪಂಚಾಯತ್‌ಗಳಲ್ಲಿ ಅಧಿಕಾರ ಪಡೆದುಕೊಂಡಿದ್ದೇವೆ. ಉತ್ತಮ ಆಡಳಿತ ನೀಡುವ ಮೂಲಕ ಗ್ರಾಮದ ಬಡವರ ಸೇವೆಯೊಂದೇ ನಮ್ಮ ಉದ್ದೇಶವಾಗಿದೆ ವಿನಾ ಇದರಲ್ಲಿ ಯಾವುದೇ ರಾಜಕೀಯವಿಲ್ಲ. ಕಾಂಗ್ರೆಸ್ ಪಂಚಾಯತ್ ಬರಬೇಕೆಂಬುದು ಗ್ರಾಮಸ್ಥರ ಆಶಯವಾಗಿತ್ತು ಅದರಂತೆ ನಾವು ಕೆಲಸವನ್ನು ಮಾಡಲಿದ್ದೇವೆ ಎಂದು ಹೇಳಿದರು.


ಉತ್ತಮ ಆಡಳಿತ ನೀಡಲಿದ್ದೇವೆ: ಡಾ. ರಾಜಾರಾಂ ಕೆ ಬಿ

ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಅಧ್ಯಕ್ಷರಾದ ಡಾ. ರಾಜಾರಾಂ ಕೆ ಬಿ ಮಾತನಾಡಿ ಅಧಿಕಾರಕ್ಕೆ ಬಂದ ನೂತನ ಅಧ್ಯಕ್ಷ ಉಪಾಧ್ಯಕ್ಷರು ಗ್ರಾಮದ ಜನತೆಗೆ ಉತ್ತಮ ಆಡಳಿತವನ್ನು ನೀಡಲಿದ್ದಾರೆ. ಶಸಕರ ತವರು ಗ್ರಾಮವಾದ ಕಾರಣ ಜನರ ನೋಟ ಕೋಡಿಂಬಾಡಿಯತ್ತ ಇರುತ್ತದೆ ಈ ಕಾರಣಕ್ಕೆ ನಮ್ಮ ಗ್ರಾಪಂ ಎಲ್ಲರಿಗೂ ಮಾದರಿಯಾಗಿ ಕೆಲಸವನ್ನು ಮಾಡಬೇಕಿದೆ. ಬಡವರ ಕೆಲಸಗಳು ಸುಸೂತ್ರವಾಗಿ ನಡೆಯಬೇಕು, ಗ್ರಾಮದ ಪ್ರತೀಯೊಬ್ಬ ಪ್ರಜೆಗೂ ಸಂತಸವನ್ನು ನೀಡುವ ಆಡಳಿತ ನಮ್ಮದಾಗಬೇಕು ಎಂಬ ಭಾವನೆ ಪ್ರತೀಯೊಬ್ಬ ಗ್ರಾಪಂ ಸದಸ್ಯರಲ್ಲಿ ಇರಬೇಕು, ಜನರ ಸೇವೆಯನ್ನೇ ಗುರಿಯಗಿಟ್ಟು ಎಲ್ಲರೂ ಒಟ್ಟಾಗಿ ಪಕ್ಷ ಬೇದವಿಲ್ಲದೆ ಕೆಲಸ ಮಾಡಿದರೆ ಗ್ರಾಪಂ ಆಡಳಿತ ಉತ್ತಮವಾಗಿರಲು ಸಾಧ್ಯ ಎಂದು ಹೇಳಿದರು.

ವೇದಿಕೆಯಲ್ಲಿ ತಾಪಂ ಕಾರ್ಯನಿರ್ವಹಣಾಧಿಕಾರಿ ನವೀನ್ ಭಂಡಾರಿ, ಗ್ರಾಪಂ ಪಿಡಿಒ ರೀಹಿತ್, ಗ್ರಾಪಂ ಸದಸ್ಯರುಗಳಾದ ಜಗನ್ನಾಥ ಶೆಟ್ಟಿ ನಡುಮನೆ,  ಪೂರ್ಣಿಮಾ ಯತೀಶ್ ಶೆಟ್ಟಿ , ಗೀತಾ ಉಪಸ್ಥಿತರಿದ್ದರು. ಸಭೆಯಲ್ಲಿ ಜಿಪಂ ಮಾಜಿ ಸದಸ್ಯ ಎಂ ಎಸ್ ಮಹಮ್ಮದ್ ಕಾಂಗ್ರೆಸ್ ಮುಖಂಡರುಗಳಾದ ಕ್ಲೆಮಿನ್ ಮಸ್ಕರೇನಸ್, ಪ್ರವೀಣ್ ಚಂದ್ರ ಆಳ್ವ, ಕಂಬಳ ಸಮಿತಿ ಅಧ್ಯಕ್ಷ ಚಂದ್ರಹಾಸ ಶೆಟ್ಟಿ, ಉಲ್ಲಾಸ್ ಕೋಟ್ಯಾನ್, ರಾಜಶೇಖರ ಜೈನ್, ಬನ್ನೂರು ಸೊಸೈಟಿ ಅಧ್ಯಕ್ಷರಾದ ಪಂಜಿಗುಡ್ಡೆ ಈಶ್ವರಭಟ್, ಜಾನ್ ಕೆನೋಟ್, ಕೇಶವ ಭಂಡಾರಿ, ಸೀತಾರಾಮ ಶೆಟ್ಟಿ, ಶಿವಪ್ರಸಾದ್, ಉದ್ಯಮಿ ಸುದೇಶ್ ಶೆಟ್ಟಿ ಶಾಂತಿನಗರ, ಯೋಗೀಶ್ ಸಾಮಾನಿ, ಪ್ರೇಮಲತಾ, ವಿನುತಾ, ರೇಣುಖಾ, ಅಲ್ಪಸಂಖ್ಯಾತ ಜಿಲ್ಲಾ ಘಟಕದ ಮುಖಂಡರಾದ ನಝೀತ್ ಮಠ, ಅಬ್ದುಲ್ ರಹಿಮಾನ್ ಯೂನಿಕ್, , ಡಿಸಿಸಿ ಸದಸ್ಯೆ ಅಸ್ಮಾ ಗಟ್ಟಮನೆ, ವಿಜಯಲಕ್ಷ್ಮಿ, ಸುಬ್ಬಣ್ಣ ಶೆಟ್ಟಿ, ಪದ್ಮನಾಭ ಶೆಟ್ಟಿ, ಪ್ರಭಾಕರ ಸಾಮಾನಿ, ಸಿಲ್ವೆಸ್ಟರ್, ಪ್ರಕಾಶ್ ಗೌಡ ನೆಕ್ಕಿಲಾಡಿ, ಆಶಾ ಕಾರ್ಯಕರ್ತೆಯವರು, ಅಂಗನವಾಡಿ ಕಾರ್ಯಕತೆಯರು ಗ್ರಾಮಸ್ಥರು ಉಪಸ್ಥಿತರಿದ್ದರು.

ವಲಯಾಧ್ಯಕ್ಷರಾದ ಮೋನಪ್ಪ ಗೌಡ ಸ್ವಾಗತಿಸಿದರು.ನಿರಂಜನ್ ರೈ ಮಠಂತಬೆಟ್ಟು ಕಾರ್ಯಕ್ರಮ ನಿರೂಪಿಸಿ ವಂದಿಸಿದರು.


ಉಪಾಧ್ಯಕ್ಷರ ಪರಿಚಯ

ನೂತನವಾಗಿ ಅದಿಕಾರ ಸ್ವೀಕರಿಸಿದ ಉಪಾಧ್ಯಕ್ಷರಾದ ಜಯಪ್ರಕಾಶ್ ಬದಿನಾರ್‌ರವರು ಪುತ್ತೂರು ವಿಧಾನಸಭಾ ಕ್ಷೇತ್ರ ಇಂಟಕ್ ಅಧ್ಯಕ್ಷರಾಗಿ, ಸೇಡಿಯಾಪು ಫ್ರೆಂಡ್ಸ್ ಕ್ಲಬ್ ಗೌರವಾಧ್ಯಕ್ಷರಾಗಿ, ಕೋಡಿಂಬಾಡಿ ಸಾರ್ವಜನಿಕ ಗಣೇಶೋತ್ಸವ ಉಪಾಧ್ಯಕ್ಷರಾಗಿ ಕೋಡಿಂಬಾಡಿ ಬಿಲ್ಲವ ಗ್ರಾಮ ಸಮಿತಿ ಅಧ್ಯಕ್ಷರಾಗಿ, ಜಿಲ್ಲಾ ಕಾಂಗ್ರೆಸ್ ಸಮಿತಿ ಸದಸ್ಯರಾಗಿ, ಕಾಸರಗೋಡು ಚಿಪ್ಪಾರು ಕೋಟಿಚೆನ್ನಯ ಗರಡಿ ಜೀರ್ಣೋದ್ದಾರ ಸಮಿತಿ ಅಧ್ಯಕ್ಷ ಸೇರಿದಂತೆ ಹಲವು ಸಂಘ ಸಂಸ್ಥೆಗಳಲ್ಲಿ ತನ್ನನ್ನು ಸಕ್ರೀಯವಾಗಿ ತೊಡಗಿಸಿಕೊಂಡಿದ್ದಾರೆ.

ಶಾಸಕ ಸಮ್ಮುಖದಲ್ಲೇ ಅಧಿಕಾರ ಸ್ವೀಕಾರ

ಶಸಕರಾದ ಅಶೋಕ್ ರೈಯವರನ್ನು ಕೊಠಡಿಗೆ ಕರೆಸಿಕೊಂಡ ನೂತನ ಅಧ್ಯಕ್ಷ ಉಪಾಧ್ಯಕ್ಷರು ಶಾಸಕರ ಸಮ್ಮುಖದಲ್ಲೇ ಅಧಿಕಾರ ಸ್ವೀಕಾರ ಮಾಡಿದರು. ಶಾಸಕರು ನೂತನ ಸಾರಥಿಗಳಿಗೆ ಹಾರಾರ್ಪಣೆ ಮಾಡಿ ಗೌರವಿಸಿದರು. ಗ್ರಾಪಂ ಸಿಬಂದಿಗಳು ಮತ್ತು ನೂತನ ಆಡಳಿತ ಸಮಿತಿ ಪರವಾಗಿ ಶಾಕರನ್ನು ಶಾಲು ಹಾಕಿ ಪೇಟ ತೊಡಿಸಿ ಸನ್ಮಾನಿಸಿದರು.


ಪಟಾಕಿ ಸಿಡಿಸಿ ಸಂಭ್ರಮ

ಅಧಿಕಾರ ಸ್ವೀಕಾರ ಮಾಡುತ್ತಿದ್ದಂತೆಯೇ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮವನ್ನು ವ್ಯ್ಕತಪಡಿಸಿದರು. ಸುಮಾರು ೧೦ ವರ್ಷಗಳ ಬಳಿಕ ಕೋಡಿಂಬಾಡಿ ಗ್ರಾಪಂ ನಲ್ಲಿ ಕಾಂಗ್ರೆಸ್ ಬೆಂಬಲಿತರು ಅಧಿಕಾರಕ್ಕೆ ಬಂದಿದ್ದು ಕಾರ್ಯಕರ್ತರ ಸಂತೋಷಕ್ಕೆ ಪಾರವೇ ಇರಲಿಲ್ಲ.

ಅಲ್ಪಸಂಖ್ಯಾತ ಇಲಾಖೆಯ ಕಂಕನಾಡಿ ಹಾಸ್ಟೆಲ್ ಗೆ ಸಚಿವ ಜಮೀರ್ ಅಹ್ಮದ್ ದಿಢೀರ್ ಭೇಟಿ

Posted by Vidyamaana on 2023-09-06 13:22:24 |

Share: | | | | |


ಅಲ್ಪಸಂಖ್ಯಾತ ಇಲಾಖೆಯ ಕಂಕನಾಡಿ ಹಾಸ್ಟೆಲ್ ಗೆ ಸಚಿವ ಜಮೀರ್ ಅಹ್ಮದ್ ದಿಢೀರ್ ಭೇಟಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಪ್ರವಾಸದಲ್ಲಿರುವ ವಸತಿ, ವಕ್ಪ್ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ಅವರು ನಗರದ ವೆಲೆನ್ಸಿಯಾದಲ್ಲಿರುವ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ಹಾಸ್ಟೆಲ್ ಗೆ ಭೇಟಿ ನೀಡಿ ಅಲ್ಲಿನ ಅವ್ಯವಸ್ಥೆ ಕಂಡು ಅಧಿಕಾರಿಗಳ ವಿರುದ್ಧ ಕೆಂಡಾಮಂಡಲ ಆಗಿದ್ದಾರೆ. 


ಮಂಗಳವಾರ ಸಂಜೆ ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ  ನಜೀರ್ ಅಹಮದ್ ಅವರ ಜೊತೆಗೆ ಸಚಿವರು ವೆಲೆನ್ಸಿಯಾ ರಸ್ತೆಯ ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಬಾಲಕರ ಹಾಸ್ಟೆಲ್ ಗೆ   ದಿಢೀರ್ ಭೇಟಿ ನೀಡಿದರು. ಈ ವೇಳೆ ಹಾಸ್ಟೆಲ್ ನಲ್ಲಿ ಶುಚಿತ್ವ ಕಾಪಾಡದಿರುವುದು, ಶೌಚಾಲಯ ನಿರ್ವಹಣೆ ಸರಿ ಇಲ್ಲದಿರುವುದು ಕಂಡು ಬಂದಿರುತ್ತದೆ.

ಇದೇ ವೇಳೆ ಅಲ್ಲಿನ ವಿದ್ಯಾರ್ಥಿಗಳು ಗುಣಮಟ್ಟದ ಆಹಾರ ಕೊಡುತ್ತಿಲ್ಲ, ವಾರಕ್ಕೊಮ್ಮೆ ಚಿಕನ್ ನೀಡದೇ  ಹದಿನೈದು ದಿನಕ್ಕೆ ಚಿಕನ್ ನೀಡಲಾಗುತ್ತಿದೆ. ಚಾರ್ಟ್ ಪ್ರಕಾರ ಆಹಾರ ಪೊರೈಕೆ ಮಾಡುತ್ತಿಲ್ಲ ಎಂದು ದೂರಿದರು. ಐದು ವರ್ಷ ಆದರೂ ಬೆಡ್ ಶೀಟ್ ಕೊಟ್ಟಿಲ್ಲ, ತಲೆದಿಂಬು ಇಲ್ಲ, ನಮ್ಮ ಬಗ್ಗೆ ಯಾರೂ ತಲೆಕೆಡಿಸಿಕೊಳ್ಳುವುದಿಲ್ಲ ಎಂದು ಸಚಿವರ ಸಮ್ಮುಖದಲ್ಲೇ ಆರೋಪಿಸಿದರು.


ತಕ್ಷಣ ಸಚಿವರು ತಾಲೂಕು ವಿಸ್ತರಣಾ ಅಧಿಕಾರಿ ಮಂಜುನಾಥ್ ಅವರನ್ನು ಸ್ಥಳದಲ್ಲೇ ತರಾಟೆಗೆತ್ತಿಕೊಂಡಿದ್ದಲ್ಲದೆ, ನಿರ್ಲಕ್ಷ್ಯ ಮಾಡಿದ್ದಕ್ಕಾಗಿ ಅಧಿಕಾರಿಯನ್ನು ಅಮಾನತು ಮಾಡುವಂತೆ ಜಿಲ್ಲಾಧಿಕಾರಿಗೆ ಸೂಚನೆ ನೀಡಿದರು.‌ ಅಲ್ಲದೆ, ಹಾಸ್ಟೆಲ್ ಉಸ್ತುವಾರಿ ಹೊಂದಿರುವ ಡಿ.ಎಂ.ಒ ಜಿನೇಂದ್ರ ಹಾಗೂ ವಾರ್ಡನ್ ಅಶೋಕ್ ಗೆ ಶೋಕಾಸ್ ನೋಟಿಸ್ ನೀಡಲು ಸಚಿವರು ಸೂಚಿಸಿದರು.

ರಾಜಧರ್ಮ ಪಾಲಿಸಿದ ಶಾಸಕ ಅಶೋಕ್ ಕುಮಾರ್ ರೈ

Posted by Vidyamaana on 2023-09-30 22:09:16 |

Share: | | | | |


ರಾಜಧರ್ಮ ಪಾಲಿಸಿದ ಶಾಸಕ ಅಶೋಕ್ ಕುಮಾರ್ ರೈ

ಪುತ್ತೂರು; ಅಧಿಕಾರದಲ್ಲಿರುವವರು ನ್ಯಾಯ ಪಾಲಿಸಬೇಕು, ರಾಜಧರ್ಮ ಪಾಲಿಸಬೇಕಾಗಿರುವುದು ಕರ್ತವ್ಯವೂ ಆಗಿದೆ ಆದರೆ ಕೆಲವರು ಆ ಕರ್ತವ್ಯವನ್ನು ಮರೆತು ಅಧಿಕಾರ ಅನುಭವಿಸಿದವರೂ ಇದ್ದಾರೆ . ಆದರೆ ಪುತ್ತೂರು ಶಾಸಕರು ಈ ವಿಚಾರದಲ್ಲಿ ತಮ್ಮ ಕರ್ತವ್ಯವನ್ನು ಮರೆತಿಲ್ಲ. ತನ್ನ ಸಹೋದರಿ ನಳಿನಿ ಶೆಟ್ಟಿ ಶನಿವಾರದಂದು ಶಾಸಕರನ್ನು ಭೇಟಿಯಾಗಲು ಶಾಸಕರ ಕಚೇರಿಗೆ ಬಂದಿದ್ದರು. ಶಾಸಕರನ್ನು ಭೇಟಿಯಾಗಲು ಬಂದಿರುವ ಸಾರ್ವಜನಿಕರ ಸಂಖ್ಯೆಯೂ ಅಪಾರವಾಗಿತ್ತು. ತನ್ನ ಸಹೋದರಿ ತನಗಾಗಿ ಕಾಯುತ್ತಿದ್ದಾರೆ ಎಂಬ ವಿಚಾರ ಶಾಸಕರಿಗೆ ಗೊತ್ತಿತ್ತು. ಆದರೆ ಶಾಸಕರು ತನ್ನ ಸಹೋದರಿಯನ್ನು ಕರೆಯಲಿಲ್ಲ.‌ಸರತಿ ಸಾಲಿನಲ್ಲೇ ಬಂದ ನಳಿನಿ ಶೆಟ್ಟಿಯವರು ಅರ್ಜಿ ಸಲ್ಲಿಸಿ ಅಲ್ಲಿಂದ ತೆರಳಿದರು.‌ಶಾಸಕರ ಈ ನ್ಯಾಯದ ನಡೆ ಅಲ್ಲಿದ್ದವರಿಗೆ ಶಾಸಕರ ಬಗ್ಗೆ ಗೌರವ ಹೆಚ್ಚಾಗುವಂತೆ ಮಾಡಿತು

Recent News


Leave a Comment: