Posted by vidyamaana on 2024-03-23 15:52:34 | Last Updated by Vidyamaana on 2024-03-23 15:52:34
ಬೆಳ್ತಂಗಡಿ : ತುಮಕೂರಿನಲ್ಲಿ ಕಾರಿಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ ಕಾರಿನೊಳಗಿದ್ದ ಮೂವರು ಸಾವನ್ನಪ್ಪಿದ ಸಂಬಂಧಿಸಿದಂತೆ ಮೂವರು ಸೇರಿ 50 ಲಕ್ಷ ಮಿಕ್ಕಿ ಹಣ ತುಮಕೂರು ಹೋಗುವಾಗ ತೆಗೆದುಕೊಂಡು ಹೋಗಿದ್ದರು ಎಂದು ಕುಟುಂಬ ಸದಸ್ಯರು ಕೋರಾ ಪೊಲೀಸರ ವಿಚಾರಣೆ ವೇಳೆ ಮಾಹಿತಿ ನೀಡಿದ್ದಾರೆ.
*💥Whats App Group ಗೆ ಸೇರಲು ಕ್ಲಿಕ್ ಮಾಡಿ
*ಹಣ ತೆಗೆದುಕೊಂಡು ಹೋದ ವಿಚಾರ*: ಇನ್ನೂ ಕಾರಿನಲ್ಲಿ ಹೋಗುವಾಗ ಮದಡ್ಕದ ಇಸಾಕ್ ಉಜಿರೆಯಲ್ಲಿದ್ದ ಸ್ವಂತ ಮನೆಯನ್ನು ಮಾರಾಟ ಮಾಡಿದ ಹಣ ಮತ್ತು ಮಗಳ ಚಿನ್ನವನ್ನು ಅಡವಿಟ್ಟು ಸುಮಾರು 35 ಲಕ್ಷ ಹಣವನ್ನು ತೆಗೆದುಕೊಂಡು ಹೋಗಿದ್ದರು ಎಂದು ಇಸಾಕ್ ಪತ್ನಿ ಕೋರಾ ಪೊಲೀಸ್ ಠಾಣೆಯಲ್ಲಿ ಮಾ.23 ರಂದು ಪೊಲೀಸ್ ವಿಚಾರಣೆ ವೇಳೆ ಹೇಳಿಕೆಯನ್ನು ನೀಡಿದ್ದಾರೆ. ಇನ್ನೂ ಶಿರ್ಲಾಲು ಸಿದ್ದಿಕ್ ಮತ್ತು ಟಿ.ಬಿ.ಕ್ರಾಸ್ ಸಾಹುಲ್ ಹಮೀದ್ ಕೂಡ ಸ್ನೇಹಿತರ ಮೂಲಕ ಪಡೆದ ಸುಮಾರು 15 ಲಕ್ಷಕ್ಕೂ ಮಿಕ್ಕಿ ಹಣ ತುಮಕೂರು ಹೋಗುವಾಗ ತೆಗೆದುಕೊಂಡು ಹೋಗಿದ್ದರು ಎಂದು ಮನೆಯವರು ಹೇಳಿಕೆ ನೀಡಿದ್ದಾರೆ. ಒಟ್ಟು ಮೂವರ ಬಳಿ 50 ಲಕ್ಷಕ್ಕೂ ಮಿಕ್ಕಿ ಹಣ ತುಮಕೂರು ಹೋಗುವಾಗ ಇತ್ತು ಎನ್ನಲಾಗಿದೆ.
ತುಮಕೂರಿಗೆ ಕಳೆದ ಹನ್ನೊಂದು ದಿನದ ಹಿಂದೆ ವ್ಯವಹಾರ ಸಂಬಂಧ ಮದಡ್ಕದ ರಫೀಕ್ ಎಂಬವರ ಮಾಲೀಕತ್ವದ ಎಸ್ ಪ್ರೆಸ್ ಕಾರಿನಲ್ಲಿ ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಟಿ.ಬಿ.ಕ್ರಾಸ್ ನಿವಾಸಿ ಆಟೋ ಚಾಲಕ ಸಾಹುಲ್ ಹಮೀದ್(45) , ಕುವೆಟ್ಟು ಗ್ರಾಮದ ಮದಡ್ಕ ನಿವಾಸಿ ಇಸಾಕ್(56) , ಶಿರ್ಲಾಲು ಗ್ರಾಮದ ಸಿದ್ದಿಕ್(34) ಮೂವರು ಬಾಡಿಗೆ ಮಾಡಿಕೊಂಡು ಹೋಗಿದ್ದರು ಎಂದು ಹೇಳಲಾಗಿದೆ.
ಮೂವರು ಕೂಡ ನಕಲಿ ಚಿನ್ನದ ದಂಧೆಯ ಆಸೆಗೆ ಬಲಿಯಾಗಿದ್ದಾರೆ ಅನ್ನೋದು ಪ್ರಾಥಮಿಕ ವಿಚಾರಣೆ ವೇಳೆ ಗೊತ್ತಾಗಿದೆ. ನಮ್ಮ ಜಾಗದಲ್ಲಿ ಕೃಷಿ ಮಾಡುವಾಗ ಚಿನ್ನದ ಹಂಡೆ ಸಿಕ್ಕಿದೆ ಕಡಿಮೆ ಚಿನ್ನವನ್ನು ಬೆಲೆಗೆ ನೀಡುತ್ತೇವೆ ಎಂದು ಸುಳ್ಳು ಹೇಳಿ ಮೂವರನ್ನು ಕರೆಸಿ ಹಣ ದೋಚುವ ಪ್ಲ್ಯಾನ್ ಮಾಡಿ ಕರೆಸಿಕೊಂಡು ಮಾ.21 ರಂದು ರಾತ್ರಿ ನಂತರ ಕೈಕಾಲು ಕಟ್ಟಿ ಹಾಕಿ ಕಾರಿಗೆ ಬೆಂಕಿ ಹಚ್ಚಿ ಕೊಲೆ ಮಾಡಿ ನಂತರ ಹಣವನ್ನು ದೋಚಿದ್ದಾರೆ ಎನ್ನಲಾಗಿದೆ. ಇನ್ನೂ ಪ್ರಕರಣ ಸಂಬಂಧ ಪ್ರಮುಖ ರೂವಾರಿ ತುಮಕೂರಿನ ಸ್ವಾಮಿ ಸೇರಿ ಆರು ಜನರನ್ನು ಮೊಬೈಲ್ ಕಾಲ್ ಡಿಟೈಲ್ಸ್ ಮೂಲಕ ಕಾರ್ಯಾಚರಣೆ ನಡೆಸಿ ಮಾ.22 ರಂದು ರಾತ್ರಿ ವಶಕ್ಕೆ ಪಡೆದು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.
ಕೋರಾ ಪೊಲೀಸ್ ಠಾಣೆಯಲ್ಲಿ ಮಾ.22 ರಂದು ಸುಮೊಟೋ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಬೆಂಕಿಗಾಹುತಿಯಾದ ಕಾರನ್ನು ಕೋರಾ ಪೊಲೀಸ್ ಠಾಣೆಗೆ ತೆಗೆದುಕೊಂಡು ಬಂದಿದ್ದು. ಮೂವರ ಶವ ಸರಕಾರಿ ಆಸ್ಪತ್ರೆಯಲ್ಲಿ ಡಿಎನ್ಎ ಪರೀಕ್ಷೆ ಮಾಡಿದ ಬಳಿಕ ಮುಂದಿನ ಗುರುವಾರ ಅಥವಾ ಶುಕ್ರವಾರ ಮೃತದೇಹವನ್ನು ಗುರುತು ಪತ್ತೆಯಾದ ಬಳಿಕ ಅವರ ಕಟುಂಬ ಸದಸ್ಯರಿಗೆ ನೀಡಲಾಗುವುದು ಎಂದು ವೈದ್ಯರು ತಿಳಿಸಿದ್ದಾರೆ.
Posted by Vidyamaana on 2023-09-08 11:12:06 |
ಭಾರತದ ನವದೆಹಲಿಯಲ್ಲಿ ಸೆಪ್ಟೆಂಬರ್ 9-10 ರವರೆಗೆ G20 ಶೃಂಗಸಭೆಯನ್ನು ಆಯೋಜಿಸಲಾಗಿದೆ. ಇದರಲ್ಲಿ ಭಾಗವಹಿಸುವುದಕ್ಕೆ ವಿಶ್ವ ನಾಯಕರೆಲ್ಲಾ ನವದೆಹಲಿಗೆ ಬರುತ್ತಿದ್ದಾರೆ. ಇದಕ್ಕೆ ಅಮೆರಿಕದ ಅಧ್ಯಕ್ಷ ಜೋ ಬಿಡನ್ ಕೂಡ ಬರಲಿದ್ದು, ಭಾರತದಲ್ಲಿ ಮೂರು ದಿನಗಳ ಕಾಲ ಪ್ರಮುಖ ಸಭೆಗಳು ಮತ್ತು ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ ಎಂದು ಶ್ವೇತಭವನ ತಿಳಿಸಿದೆ.ಹೌದು, ಅಮೆರಿಕದ ಅಧ್ಯಕ್ಷ ಜೋ ಬಿಡನ್ G20 ಶೃಂಗ ಸಭೆಯಲ್ಲಿ ಭಾಗವಹಿಸಲು ಭಾರತಕ್ಕೆ ಬರುತ್ತಿದ್ದಾರೆ. ಇದೇ ಸಮಯದಲ್ಲಿ ಜೋ ಬಿಡನ್ ಅವರ ವಿಶೇಷ ಐಫೋನ್ ಬಗ್ಗೆ ಕುತೂಹಲಕರ ಮಾಹಿತಿ ಹೊರಬಿದ್ದಿದೆ.
ಅಮೆರಿಕ ಅಧ್ಯಕ್ಷರ ಐಫೋನ್ ಹೇಗಿದೆ? ಅದರ ವಿವರಗಳೇನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.
ಅಮೆರಿಕ ಅಧ್ಯಕ್ಷರ ವಿಶೇಷ ಐಫೋನ್ ವಿವರ ಇಲ್ಲಿದೆ
ಅಮೆರಿಕ ಅಧ್ಯಕ್ಷರ ಐಫೋನ್ ಸಾಕಷ್ಟು ವಿಶೇಷವಾಗಿದೆ. ಅಮರಿಕ ಅಧ್ಯಕ್ಷರ ಫೋನ್ ವಿಚಾರದಲ್ಲಿಯೂ ಕೂಡ ಸಾಕಷ್ಟು ಸುರಕ್ಷತೆಗೆ ಅಧ್ಯತೆಯನ್ನು ನೀಡಲಾಗುತ್ತದೆ. ಸಾಮಾನ್ಯವಾಗಿ ವಿಶ್ವ ನಾಯಕರೊಂದಿಗಿನ ಪ್ರಮುಖ ಕರೆಗಳನ್ನು ಸುರಕ್ಷಿತವಾಗಿ ಮಾಡಲಾಗುತ್ತದೆ. ಇದರಿಂದ ಕರೆಯ ಇನ್ನೊಂದು ತುದಿಯಲ್ಲಿ ಯಾರಿದ್ದಾರೆ ಎಂಬುದರ ಬಗ್ಗೆ ಯಾರಿಗೂ ಕೂಡ ಮಾಹಿತಿ ಇರುವುದಿಲ್ಲ. ಸದ್ಯ ಅಮೆರಿಕ ಅಧ್ಯಕ್ಷರ ಐಫೋನ್ ಹಿಂಭಾಗದಲ್ಲಿ ವಿಶೇಷ ಚಿನ್ನದ ಅಧ್ಯಕ್ಷೀಯ ಮುದ್ರೆಯಿದೆ. ಈ ಸೀಲ್ನಲ್ಲಿ ಸೀಲ್ ಆಫ್ ದಿ ಪ್ರೆಸಿಡೆಂಟ್ ಆಫ್ ಅಮೇರಿಕಾ ಎಂದು ಬರೆಯಲಾಗಿದೆ.
ಈ ಸೀಲ್ ಅನ್ನು ಕೇವಲ ಲುಕ್ಗಾಗಿ ಅಳವಡಿಸಿರಬಹುದು. ಆದರೆ ನಿರ್ದಿಷ್ಟ ಡಿವೈಸ್ POTUS ಬಳಸುವ ಅಗತ್ಯ ಭದ್ರತಾ ಮಾನದಂಡಗಳನ್ನು ಹೊಂದಿದೆ ಎಂದು ಹೇಳಲಾಗಿದೆ. ಏಕೆಂದರೆ ಡೌಗ್ ಎಂಹಾಫ್, ಉಪಾಧ್ಯಕ್ಷ (ವಿಪಿ) ಹ್ಯಾರಿಸ್ ಅವರ ಪತಿ ಭದ್ರತಾ ಕಾರಣಗಳಿಂದಾಗಿ ಅವನ ಹೆಂಡತಿಗೆ ಕೂಡ ಸಂದೇಶಗಳನ್ನು ಕಳುಹಿಸುವುದನ್ನು ತಡೆಯುತ್ತದೆ ಎಂದು ಹೇಳಲಾಗಿದೆ. ಅಂದರೆ ಸರ್ಕಾರವು ಸಂವಹನವನ್ನು ಎಷ್ಟು ಗಂಭೀರವಾಗಿ ತೆಗೆದುಕೊಳ್ಳುತ್ತದೆ ಎಂಬುದನ್ನು ನೀವು ಅರ್ಥಮಾಡಿಕೊಳ್ಳಬಹುದು.
ಭಾರತಕ್ಕೆ ಬಂದಿಳಿದ ಅಮೆರಿಕ ಅಧ್ಯಕ್ಷರ ಕಾರು
ಭಾರತದಲ್ಲಿ ನಡೆಯುತ್ತಿರುವ G20 ಶೃಂಗಸಭೆಗೆ ಅಮೆರಿಕ ಅಧ್ಯಕ ಜೋ ಬಿಡೆನ್ ಶುಕ್ರವಾರ ಆಗಮಿಸುತ್ತಿದ್ದಾರೆ. ಆದರೆ ಅಮೆರಿಕ ಅಧ್ಯಕರು ಬಳಸುವ ಕಾರು ಬೀಸ್ಟ್ ಭಾರತಕ್ಕೆ ಎಂಟ್ರಿ ನೀಡಿದೆ. ಇದು ಯುಎಸ್ ಅಧ್ಯಕ್ಷರಅಧಿಕೃತ ಕಾರಾಗಿದ್ದು, US ನಿಂದ ಭಾರತಕ್ಕೆ ಬೋಯಿಂಗ್ C-17 Globemaster III ಎಂಬ ಮಿಲಿಟರಿ ಸಾರಿಗೆ ವಿಮಾನದಲ್ಲಿ ಬಂದಿದೆ.
ಇನ್ನು ಜೋ ಬಿಡೆನ್ ಅವರ ದೆಹಲಿ ಭೇಟಿಗೆ ಮೂರು ಹಂತದ ಭದ್ರತೆಯನ್ನು ಏರ್ಪಡಿಸಲಾಗಿದೆ. ಮೊದಲನೆಯದ್ದು ಹೊರಗೆ ಅರೆಸೇನಾ ಪಡೆಯ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದರೆ, ಎರಡು ಭಾರತದ ವಿಶೇಷ ರಕ್ಷಣಾ ಗುಂಪಿನ ಕಮಾಂಡೋಗಳನ್ನು ಮತ್ತು ಮೂರು ಒಳಗೆ ರಹಸ್ಯ ಸೇವಾ ಏಜೆಂಟ್ಗಳ ಭದ್ರತೆಯನ್ನು ಹೊಂದಿರುತ್ತಾರೆ
Posted by Vidyamaana on 2023-02-28 10:45:53 |
ಪುತ್ತೂರು: ಯಶಸ್ವಿನಿ ಯೋಜನೆಯಲ್ಲಿ ಚಿಕಿತ್ಸಾ ದರ ಪರಿಷ್ಕರಿಸುವ ಸಹಿತ ವಿವಿಧ ಬೇಡಿಕೆಗಳನ್ನು ಸರಕಾರದ ಗಮನ ಸೆಳೆಯಲು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸುವ ನಿರ್ಧಾರವನ್ನು ಮೆಡಿಕಲ್ ಅಸೋಸಿಯೇಶನ್ ಕೈಗೊಂಡಿದೆ ಎಂದು ಅಸೋಸಿಯೇಶನ್ ಅಧ್ಯಕ್ಷ ಡಾ.ಶ್ರೀಪತಿ ರಾವ್ ತಿಳಿಸಿದ್ದಾರೆ..
ಅವರು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಹಿಂದಿನ ಎಲ್ಲಾ ಹಣವನ್ನು ಕೂಡಲೇ ಸಂದಾಯ ಮಾಡಬೇಕು, ರೋಗಿಗಳು ಆಸ್ಪತ್ರೆಗೆ ಸೇರುವಾಗ ಇರುವ ನಿಬಂಧನೆಗಳನ್ನು ಸಡಿಲಿಕರಣಗೊಳಿಸಬೇಕು ಎಂಬ ವಿವಿಧ ಬೇಡಿಕೆಗಳನ್ನು ಮನವಿಯಲ್ಲಿ ಉಲ್ಲೇಖಿಸಲಾಗಿದೆ ಎಂದು ಅವರು ತಿಳಿಸಿದರು.
ಪುತ್ತೂರಿನ ಆಸ್ಪತ್ರೆಗಳಲ್ಲಿ ಸರಕಾರಿ ಯೋಜನೆಗಳಾದ ಇಎಸ್ಐ, ಯಶಸ್ವಿನಿ ಸಹಿತ ಹಲವಾರು ಯೋಜನೆಗಳನ್ನು ಉತ್ತಮವಾಗಿ ನಿಭಾಯಿಸುತ್ತಿವೆ. ಆದರೆ ಇದೀಗ ಸ್ಥಗಿತಗೊಳಿಸಿದ ಯಶಸ್ವಿ ಯೋಜನೆ ಮರು ಪ್ರಾಂಭಿಸುವಾಗ ಹಲವಾರು ನಿಬಂಧನೆ ಮತ್ತು ರೋಗಿಗಳ ಚಿಕಿತ್ಸಾ ದರವನ್ನು ಕಡಿಮೆ ಗೊಳಿಸಿದ್ದರಿಂದ ನ್ಯಾಯುತವಾಗಿ ಚಿಕಿತ್ಸೆ ಕೊಡಲು ಸಾಧ್ಯವಿಲ್ಲ. ಕೇಂದ್ರ ಸಿ.ಜಿ.ಎಸ್.ಹೆಚ್.ಎಸ್ ನಂತೆ 2014ರ ಇಸವಿಯ ಚಿಕಿತ್ಸಾ ದರವೇ ಈಗಲೂ ಚಾಲ್ತಿಯಲ್ಲಿದೆ. 2014ರ ಚಿಕಿತ್ಸಾ ದರ 2017 ಮತ್ತು 2020ರಲ್ಲಿ ಹಾಗೂ 2023ರಲ್ಲಾದರೂ ಪರಿಷ್ಕರಣೆ ಆಗಬೇಕಾಗಿತ್ತು. ಆದರೆ ಅದನ್ನು ಮಾಡಿಲ್ಲ. ಈ ಹಿಂದೆ ಇದ್ದ ಯಶಸ್ವಿನಿ ಯೋಜನೆ ಉತ್ತಮವಾಗಿತ್ತು. ಆದರೆ ಅದರಲ್ಲೂ ಹಲವು ಆಸ್ಪತ್ರೆಗಳಿಗೆ ಹಣ ಸಂದಾಯ ಬಾಕಿ ಇದೆ. ಈ ನಿಟ್ಟಿನಲ್ಲಿ ಯಸ್ವಿನಿ ಯೋಜನೆಗೆ ಬಹುತೇಕ ಆಸ್ಪತ್ರೆಗೆಳು ಸೇರ್ಪಡೆಗೊಂಡಿಲ್ಲ.ಇತ್ತೀಚೆಗೆ ಜಿಲ್ಲಾಧಿಕಾರಿ ಗ್ರಾಮ ವಾಸ್ತವ್ಯದ ಸಂದರ್ಭ ಬಂದಿರುವ ಪ್ರಶ್ನೆಗೆ ಜಿಲ್ಲಾಧಿಕಾರಿಗಳು ನಮಗೆ ನೋಟೀಸ್ ನೀಡಿದ್ದಾರೆ. ಈ ನೋಟೀಸ್ಗೆ ಸಂಬಂಧಿಸಿ ನಾವು ಯಶಸ್ವಿನಿ ಆರೋಗ್ಯ ರಕ್ಷಾ ಯೋಜನೆಯಲ್ಲಿ ಸೇರಬೇಕಾದರೆ ನಮ್ಮ ಕೆಲವೊಂದು ಬೇಡಿಕೆಗಳಿವೆ. ಅದನ್ನು ಈಡೇರಿಸವಂತೆ ಮನವಿ ಮಾಡಲಿದ್ದೇವೆ. ಖಾಸಗಿ ಕೊಠಡಿಗಳಿಗೂ ರೋಗಿಗಳಿಗೆ ಅನುಮತಿ ನೀಡಬೇಕೆಂದು ಮನವಿ ನೀಡಲಿದ್ದೇವೆ ಎಂದು ತಿಳಿಸಿದ ಅವರು, ಒಟ್ಟಿನಲ್ಲಿ ಉಳುವ ರೈತರ ಹೈನುಗಾರರ ಆರೋಗ್ಯದ ಮೇಲೆ ಕಾಳಜಿ ವಹಿಸಿ ಅವರಿಗೆ ಖಾಸಗಿ ಆಸ್ಪತ್ರೆಗಳಲ್ಲಿ ಉತ್ತಮ ಸೇವೆ ಸಿಗುವಂತೆ ಮಾಡುವ ಜವಾಬ್ದಾರಿ ಸರಕಾರಕ್ಕೂ ಮತ್ತು ಖಾಸಗಿ ಆಸ್ಪತ್ರೆಗಳ ಮೇಲೆ ಇದೆಯೆಂದು ತಿಳಿದು ಸರಕಾರ ಉತ್ತಮ ಕ್ರಮ ಕೈಗೊಳ್ಳುವಂತೆ ವಿನಂತಿಸುತ್ತೇವೆ ಎಂದರು.
ಯಶಸ್ವಿನಿ ಆರೋಗ್ಯ ರಕ್ಷಾ ಯೋಜನೆಯಡಿ ಪುತ್ತೂರಿನ ನಾಲ್ಕು ಆಸ್ಪತ್ರೆಗಳಿಗೆ ಹಣ ಸಂದಾಯ ಬಾಕಿ ಇದೆ. ಹಿಂದೆ ಸರಕಾರದಿಂದ ಯೋಜನೆ ಚಾಲ್ತಿಯಲ್ಲಿತ್ತು. ಬಳಿಕ ಅದನ್ನು ಇನ್ಶ್ಯುರೆನ್ಸ್ ಕಂಪೆನಿಗೆ ವರ್ಗಾಯಿಸಲಾಯಿತು. ಈ ಸಂದರ್ಭ ಆಸ್ಪತ್ರೆಗಳಿಗೆ ಚಿಕಿತ್ಸಾ ದರ ಪಾವತಿ ಬಾಕಿಯಾಗುತ್ತಿತ್ತು. ಈ ಕುರಿತು ಹಲವು ಬಾರಿ ಪತ್ರ ಬರೆಯಲಾಗಿದೆ. ಯಾವುದೇ ಸ್ಪಂದನೆ ಸಿಕ್ಕಿಲ್ಲ. ಒಟ್ಟು ನಾಲ್ಕು ಆಸ್ಪತ್ರೆಗೆಳಿಗೆ ಸುಮಾರು ರೂ. 22ಲಕ್ಷ ಬಾಕಿ ಇದೆ. ಎಂದು ಅಸೋಸಿಯೇಶನ್ ಉಪಾಧ್ಯಕ್ಷ ಡಾ.ಭಾಸ್ಕರ್ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಅಸೋಸಿಯೇಶನ್ನ ಕಾರ್ಯದರ್ಶಿ ಡಾ. ಎಸ್.ಎಸ್ ಜೋಶಿ, ಕೋಶಾಧಿಕಾರಿ ಡಾ. ಅಶೋಕ್ ಪಡಿವಾಳ್, ಸದಸ್ಯರಾದ ಡಾ. ಜೆ.ಸಿ.ಅಡಿಗ, ಡಾ. ರವೀಂದ್ರ ಉಪಸ್ಥಿತರಿದ್ದರು.
Posted by Vidyamaana on 2023-10-21 04:58:27 |
ಬೆಂಗಳೂರು : ಏನಾದರೊಂದು ಹೇಳುವುದು, ಅದು ಇನ್ನೇನೋ ಆಗಿ ಅರ್ಥೈಸಲ್ಪಡುವುದು, ಬಳಿಕ ಅದಕ್ಕೊಂದು ಸಮಜಾಯಿಷಿ, ಸಮರ್ಥನೆ ಇಲ್ಲವೇ ಸ್ಪಷ್ಟನೆ ಕೊಡುವುದು ರಾಜಕಾರಣದಲ್ಲಿ ಸರ್ವೇಸಾಮಾನ್ಯ. ಅಂಥದ್ದೇ ಒಂದು ಸಂದರ್ಭವನ್ನು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಕೂಡ ಎದುರಿಸುವಂತಾಗಿದೆ.ತಮ್ಮ ಹೇಳಿಕೆಯೊಂದನ್ನು ತಪ್ಪಾಗಿ ಅರ್ಥೈಸಿಕೊಳ್ಳಲಾಗಿದೆ ಎಂದು ಹೇಳಿರುವ ದೇವೇಗೌಡರು, ಆ ರೀತಿ ನಾನು ಹೇಳಿಲ್ಲ ಎಂಬುದರ ಜತೆಗೆ, ತಾವು ಹೇಳಿದ್ದೇನು ಎಂಬುದನ್ನೂ ಸ್ಪಷ್ಟಪಡಿಸಿದ್ದಾರೆ. ಆ ಮೂಲಕ ಕೇರಳದವರಿಗೆ ಒಂದು ವಿಷಯಕ್ಕೆ ಸಂಬಂಧಿಸಿದಂತೆ ಆಗಿರುವ ಗೊಂದಲವನ್ನು ನಿವಾರಿಸಲು ಯತ್ನಿಸಿದ್ದಾರೆ.ಸಿಪಿಎಂ ಕುರಿತ ನನ್ನ ಹೇಳಿಕೆಯೊಂದಕ್ಕೆ ಸಂಬಂಧಿಸಿದಂತೆ ಗೊಂದಲವೊಂದು ಉಂಟಾಗಿದೆ. ನಾನು ಯಾವ ಅರ್ಥದಲ್ಲಿ ಮಾತನಾಡಿದ್ದೇನೆ ಎಂಬುದನ್ನು ನನ್ನ ಕಮ್ಯುನಿಷ್ಟ್ ಗೆಳೆಯರು ಅರ್ಥ ಮಾಡಿಕೊಂಡಂತಿಲ್ಲ. ಬಿಜೆಪಿ-ಜೆಡಿಎಸ್ ಮೈತ್ರಿಯನ್ನು ಕೇರಳದಲ್ಲಿ ಸಿಪಿಎಂ ಬೆಂಬಲಿಸುತ್ತದೆ ಎಂದು ನಾನು ಹೇಳೇ ಇಲ್ಲ ಎಂದಿದ್ದಾರೆ.
ಬಿಜೆಪಿಯೊಂದಿಗಿನ ನಮ್ಮ ಮೈತ್ರಿ ನಂತರ ಕರ್ನಾಟಕದ ಹೊರಗಿನ ನನ್ನ ಪಕ್ಷದ ಘಟಕಗಳಲ್ಲಿನ ವಿಷಯಗಳು ಇತ್ಯರ್ಥವಾಗದ ಕಾರಣ ಕೇರಳದಲ್ಲಿ ನನ್ನ ಪಕ್ಷದ ಘಟಕವು ಎಲ್ಡಿಎಫ್ ಸರ್ಕಾರದೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುತ್ತಿದೆ ಎಂದಷ್ಟೇ ನಾನು ಹೇಳಿದ್ದೇನೆ ಎಂಬುದಾಗಿ ದೇವೇಗೌಡರು ಸ್ಪಷ್ಟನೆ ನೀಡಿದ್ದಾರೆ.
Posted by Vidyamaana on 2023-10-10 15:30:58 |
ವಿಟ್ಲ : ನಂದಿಕೂರಿನಿಂದ ಕಾಸರಗೋಡಿಗೆ ಹೋಗುವ 400ಕೆ.ವಿ ಹೈ ಟೆನ್ಶನ್ ಮಾರ್ಗವನ್ನು ಪುಣಚ ಗ್ರಾಮದ ಬೈರಿಕಟ್ಟೆಯಿಂದ ಕಾಮಗಾರಿ ಆರಂಭ ಮಾಡಲು ಮುಂದಾದಾಗ ಪರಿಸರದ ರೈತ ವರ್ಗದವರು ಪ್ರತಿಭಟಿಸಿದ ಘಟನೆ ನಡೆದಿದೆ.
ವಿಷಯ ತಿಳಿದು ಪುತ್ತೂರು ಮಾಜಿ ಶಾಸಕರಾದ ಸಂಜೀವ ಮಠಂದೂರು ಸ್ಥಳಕ್ಕೆ ಭೇಟಿ ನೀಡಿ ಜಿಲ್ಲಾಧಿಕಾರಿಗಳನ್ನು ಸಂಪರ್ಕಿಸಿ ತಕ್ಷಣ ಕಾಮಗಾರಿಗಳನ್ನು ನಿಲ್ಲಿಸಬೇಕು ಮತ್ತು ಈ ಭಾಗದ ರೈತರ ಸಭೆ ಕರೆದು ಚರ್ಚಿಸಬೇಕು ಎಂದರು.
ಇದಕ್ಕೆ ಸ್ಪಂದಿಸಿದ ಡಿ.ಸಿಯವರು ಕಾಮಗಾರಿಯನ್ನು ಈ ಕೂಡಲೇ ನಿಲ್ಲಿಸುವಂತೆ ಬಂಟ್ವಾಳ ತಹಶೀಲ್ದಾರ್ ರವರಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಪುತ್ತೂರು ಮಂಡಲ ಬಿಜೆಪಿ ಉಪಾಧ್ಯಕ್ಷರಾದ ಹರಿಪ್ರಸಾದ್ ಯಾದವ್,ವಿಟ್ಲ ಬಿಜೆಪಿ ಪ್ರಮುಖರಾದ ಕರುಣಾಕರ ನಾಯ್ತೊಟ್ಟು,ಪುಣಚ ಪಂಚಾಯತ್ ಸದಸ್ಯರಾದ ಅಶೋಕ್ ಮೂಡಂಬೈಲು, ತೀರ್ಥರಾಮ್, ರೈತ ಮುಖಂಡರಾದ ಸಂಜೀವ ಗೌಡ ಮೊದಲಾದವರು ಉಪಸ್ಥಿತರಿದ್ದರು.
Posted by Vidyamaana on 2023-03-25 05:57:07 |
ಹೊಸದಿಲ್ಲಿ: ಆಧಾರ್ ಮತ್ತು ಪ್ಯಾನ್ ಕಾರ್ಡ್ ನಂಬರ್ ಅನ್ನು ಜೋಡಣೆ ಮಾಡಲು ಮಾ.31 ಕಡೆಯ ದಿನವಾಗಿದೆ. ಗಡುವಿಗೆ ಕೆಲವೇ ದಿನಗಳಷ್ಟೇ ಜೋಡಣೆ ಮಾಡದಿದ್ದರೆ ಏ.1ರಿಂದ ಪ್ಯಾನ್ ಕಾರ್ಡ್ ನಿಷ್ಕ್ರಿಯವಾಗಲಿದೆ ಎಂದು ಆದಾಯ ತೆರಿಗೆ ಇಲಾಖೆ ಎಚ್ಚರಿಸಿದೆ.
ಈ ಆದೇಶದ ಲಾಭ ಪಡೆಯುತ್ತಿರುವ ಸೈಬರ್ ಸೆಂಟರ್ ಗಳು , ಗ್ರಾಹಕರಿಂದ ಹಗಲು ದರೋಡೆಗಿಳಿದಿವೆ. ಗ್ರಾಹಕರು ಬಂದೊಡನೆ ಆಧಾರ್ – ಪ್ಯಾನ್ ಕಾರ್ಡ್ ಲಿಂಕ್ ಆಗಿದೆಯೇ ಎಂದು ಪರಿಶೀಲನೆಗೆ ಮುಂದಾಗುತ್ತಾರೆ. ಆಗಿದ್ದರೂ, ಆಗದೇ ಇದ್ದರೂ – ಲಿಂಕ್ ಆಗಿಲ್ಲ ಎಂದು ಗ್ರಾಹಕರಿಂದ 1300 ರೂ. ಪಡೆದುಕೊಳ್ಳುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಆದಾಯ ತೆರಿಗೆ ಕಾಯಿದೆ 1961ರ ಪ್ರಕಾರ, ಪ್ಯಾನ್ ಕಾರ್ಡ್ ಹೊಂದಿರುವ ಎಲ್ಲರೂ ತಮ್ಮ ಪ್ಯಾನ್ ಅನ್ನು ಆಧಾರ್ನೊಂದಿಗೆ ಲಿಂಕ್ ಮಾಡುವುದು ಕಡ್ಡಾಯ, ಒಂದು ವೇಳೆ ಲಿಂಕ್ ಮಾಡದೇ ಹೋದರೆ, ಪ್ಯಾನ್ ಕಾರ್ಡ್ ನಿಷ್ಕ್ರಿಯವಾಗುತ್ತದೆ. ಆಗ ಅದನ್ನು ವಿವಿಧ ಉದ್ದೇಶಗಳಿಗೆ ಬಳಸಲು ಸಾಧ್ಯವಾಗುವುದಿಲ್ಲ. ಬ್ಯಾಂಕ್ ವ್ಯವಹಾರಗಳೂ ಸೇರಿದಂತೆ ವಿವಿಧಡ ಈಗ ಪ್ಯಾನ್ ಬಳಕೆ ಕಡ್ಡಾಯವಾಗಿದೆ.
ಪ್ಯಾನ್ ಅನ್ನು ಆಧಾರ್ ನೊಂದಿಗೆ ಲಿಂಕ್ ಮಾಡಲು ಗಡುವನ್ನು ಈ ಹಿಂದೆ ಹಲವಾರು ಬಾರಿ -ಪ್ಯಾನ್ ಲಿಂಕ್ನ ಸ್ಟೇಟಸ್ ಪರಿಶೀಲಿಸಬಹುದು. ವಿಸ್ತರಿಸಲಾಗಿತ್ತು. ಈಗ ಕೊನೆಯದಾಗಿ ಮಾರ್ಚ್ 31ರ ಗಡುವನ್ನು ಆದಾಯ ತೆರಿಗೆ ಇಲಾಖೆ ನೀಡಿದೆ.
ಲಿಂಕ್ ಆಗಿದೆಯೇ ಎಂದು ಚೆಕ್ ಮಾಡುವುದು ಹೇಗೆ?:
ಆದಾಯ ತಂಗ ಇಲಾಖೆಯ ಪೋರ್ಟಲ್ https://eportal.incometax gov.in/ ಜಾಲತಾಣಕ್ಕೆ ಭೇಟಿ ನೀಡಿ, ಆಧಾರ್ ಹಾಗೂ ಪ್ಯಾನ್ ಸಂಖ್ಯೆಯನ್ನು ನಮೂದಿಸಿ ಲಿಂಕ್ ಆಗಿದೆಯೇ ಎಂದು ಚೆಕ್ ಮಾಡಬಹುದು.
ಅದೇ ರೀತಿ, ಈ ವೆಬ್, ವಿಳಾಸಕ್ಕೂ ತೆರಳಿ https://www.pan.utitsl.com/ ಆಧಾರ್ – ಪ್ಯಾನ್ ಲಿಂಕಿನ ಸ್ಟೇಟಸ್ ಪರಿಶೀಲಿಸಬಹುದು.
ಎಸ್ಎಂಎಸ್ ಮೂಲಕವೂ ಲಿಂಕ್ ಮಾಡಿ!
1.) ಮೊದಲು, UIDPAN ಫಾರ್ಮ್ಯಾಟ್ನಲ್ಲಿ ಸಂದೇಶವನ್ನು ಟೈಪ್ ಮಾಡಿ, ಅಂದರೆ, UIDPAN (ಸ್ಪೇಸ್) 12-ಅಂಕಿಯ ಆಧಾರ್ ನೊಂದಿಗೆ ನಿಮ್ಮ ಪ್ಯಾನ್ ಅನ್ನು ಲಿಂಕ್ ಸಂಖ್ಯೆ (ಸ್ಪೇಸ್) 10-ಅಂಕಿಯ PAN ಸಂಖ್ಯೆ.
2. )ನಿಮ್ಮ ನೋಂದಾಯಿತ ಸಂಖ್ಯೆಯಿಂದ 567678 ಅಥವಾ 56161 ಗೆ ಮಾತ್ರ SMS ಕಳುಹಿಸಿ.
3.) ಬಳಿಕ ಆಧಾರ್ ಮತ್ತು ಪ್ಯಾನ್ ಕಾರ್ಡ್ ಲಿಂಕ್ ಕುರಿತು ನೀವು ದೃಢೀಕರಣ ಸಂದೇಶವನ್ನು ಪಡೆಯುವಿರಿ.
.ಲಿಂಕ್ ಮಾಡಲು ಎಷ್ಟು ಶುಲ್ಕ?
ನೀವು ಇನ್ನೂ ನಿಮ್ಮ ಆಧಾರ್ ಮಾಡದೇ ಇದ್ದಲ್ಲಿ ಈಗ ನೀವು www.inco- metax.gov.in ಜಾಲತಾಣಕ್ಕೆ ಹೋಗಿ, ಅಲ್ಲಿ ಲಿಂಕ್ ಆಧಾರ್ ಎನ್ನುವ ಆಯ್ಕೆ ಯನ್ನು ಕ್ಲಿಕ್ ಮಾಡಿದರೆ, ಮಾಹಿತಿ ತೆರೆದುಕೊಳ್ಳುತ್ತದೆ. 1,000 ರೂ. ಶುಲ್ಕವನ್ನು ಪಡೆಯುವಿರಿ. ಪಾವತಿಸಿ ಲಿಂಕ್ ಮಾಡಬಹುದು.
Posted by Vidyamaana on 2024-02-06 14:26:13 |
ಮಂಗಳೂರು, : ಚುನಾವಣೆ ಸಂದರ್ಭದಲ್ಲಿ ಯುಟಿ ಖಾದರ್ ಗೆಲುವಿಗಾಗಿ ಹೇಳಿಕೊಂಡ ಹರಕೆ ಕೋಲವನ್ನು ಪಣೋಲಿಬೈಲು ಕ್ಷೇತ್ರದಲ್ಲಿ ವಿಧಾನ ಸಭಾಧ್ಯಕ್ಷ ಯು.ಟಿ ಖಾದರ್ ಸಮ್ಮುಖದಲ್ಲಿ ನೆರವೇರಿಸಲಾಗಿದೆ.
ಬಂಟ್ವಾಳ ತಾಲೂಕಿನ ಕಾರಣಿಕದ ಸ್ಥಳ ಪಣೋಲಿಬೈಲು ಕಲ್ಲುರ್ಟಿ, ಕಲ್ಕುಡ ಕ್ಷೇತ್ರದಲ್ಲಿ ಮುಡಿಪು ಬ್ಲಾಕ್ ಕಾಂಗ್ರೆಸ್ ವತಿಯಿಂದ ಭಾನುವಾರ ರಾತ್ರಿ ಹರಕೆ ಕೋಲ ನೆರವೇರಿಸಲಾಗಿದೆ. ಚುನಾವಣೆ ಸಂದರ್ಭದಲ್ಲಿ ಖಾದರ್ ಗೆಲುವಿಗಾಗಿ ಮುಡಿಪು ಕಾಂಗ್ರೆಸ್ ನಾಯಕರು ಹರಕೆ ಹೇಳಿಕೊಂಡಿದ್ದರು.
ಭಾನುವಾರ ರಾತ್ರಿ ಕಲ್ಲುರ್ಟಿ, ಕಲ್ಕುಡ ದೈವಗಳಿಗೆ ಹರಕೆ ಕೋಲ ನೆರವೇರಿಸಿದ್ದು ಯು.ಟಿ ಖಾದರ್ ದೈವಗಳ ಕೊರಳಿಗೆ ಹೂಮಾಲೆ ಹಾಕಿ ನಮಿಸಿದ್ದಾರೆ. ಆಮೂಲಕ ಖಾದರ್ ಕಲ್ಲುರ್ಟಿ, ಕಲ್ಕುಡ ದೈವಗಳ ಆಶೀರ್ವಾದ ಪಡೆದಿದ್ದಾರೆ. ಸ್ಪೀಕರ್ ಯು.ಟಿ ಖಾದರ್ ಜೊತೆಗೆ ಮುಡಿಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಶಾಂತ್ ಕಾಜವ ಮತ್ತಿತರರು ಭಾಗಿಯಾಗಿದ್ದರು.
ಹರಕೆ ಕೋಲ ನೆರವೇರಿಸಿದ ಯುಟಿ ಖಾದರ್ ವಿರುದ್ಧ ಮುಸ್ಲಿಂ ಧಾರ್ಮಿಕ ಮುಖಂಡನ ಆಕ್ರೋಶ : ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್
ಬಂಟ್ವಾಳ ತಾಲೂಕಿನ ಶ್ರೀ ಕ್ಷೇತ್ರ ಪಣೋಲಿಬೈಲ್ನಲ್ಲಿ ನಡೆದ ತುಳುನಾಡಿನ ಕಾರ್ಣಿಕ ದೈವಗಳಾದ ಕಲ್ಲುರ್ಟಿ ಕಲ್ಕುಡ ದೈವಗಳ ಹರಕೆ ಕೋಲದಲ್ಲಿ ವಿಧಾನ ಸಭಾಧ್ಯಕ್ಷ ಯುಟಿ ಖಾದರ್ ಅವರು ಭಾಗವಹಿಸಿ ಕಲ್ಲುರ್ಟಿ ಕಲ್ಕುಡ ದೈವಗಳ ಆಶೀರ್ವಾದ ಪಡೆದರು. ದೈವಗಳ ಹರಕೆ ಕೋಲ ನೆರವೇರಿಸಿದ ಯು.ಟಿ ಖಾದರ್ ವಿರುದ್ಧ ಮುಸ್ಲಿಂ ಮುಖಂಡನೋರ್ವ ವಿರೋಧ ವ್ಯಕ್ತಪಡಿಸಿದ್ದಾರೆ.
ಮುಸ್ಲಿಂ ಧಾರ್ಮಿಕ ಮುಖಂಡ ಸಾಲೆತ್ತೂರು ಫೈಝಿ ಎಂಬುವವರು ಯು.ಟಿ. ಖಾದರ್ ಬಗ್ಗೆ ಆಕ್ಷೇಪಿಸಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದಾರೆ.
‘ಕೊರಗಜ್ಜನ ಭಕ್ತ ಯು.ಟಿ ಖಾದರ್ ನನ್ನು ಮುಸ್ಲಿಮರು ಬರೀ ರಾಜಕಾರಣಿಯಾಗಿ ಕಂಡರೆ ಸಾಕು. ಧಾರ್ಮಿಕ ಮುಖಂಡರಾಗಿ ಕಾಣುವುದು ಬೇಡ. ಉಲೆಮಾ, ಸಾತ್ವಿಕರು ತುಂಬಿದ ಧಾರ್ಮಿಕ ವೇದಿಕೆಗೆ ಮುಸ್ಲಿಂ ನಾಯಕನಾಗಿ ಹತ್ತಿಸುವುದು ತರವಲ್ಲ. ಅದು ಆತನ ಭೂತಾರಾಧನೆಗೆ ನಾವು ಕೊಡುವ ಅಂಗೀಕಾರವಾಗುತ್ತೆ. ಖಾದರ್ ಕೊರಗಜ್ಜನಿಗೂ ಕಲ್ಲುರ್ಟಿ, ಪಂಜುರ್ಲಿಗೂ ಆರಾಧಿಸಲಿ. ಪ್ರಸಾದ ಪಡೆದು ತಲೆಗೆ ಮತ್ತಿಕೊಂಡು ನರಕಕ್ಕೆ ಹೋಗಲಿ. ಅದು ಆತನ ವೈಯಕ್ತಿಕ ಸ್ವತಂತ್ರ. ಅದು ಭಾರತದಲ್ಲಿ ಎಲ್ಲರಿಗೂ ಇರುವ ಸಂವಿಧಾನಿಕ ಸ್ವಾತಂತ್ರ. ಅದನ್ನು ತಡೆಯುವ ಹಕ್ಕು ನನಗಿಲ್ಲ. ಆದರೆ ಧಾರ್ಮಿಕ ನಾಯಕನಾಗಿ ನಾವು ಅಂಗೀಕರಿಸುವುದು, ಆತನ ಭೂತಾರಾಧನೆಯನ್ನು ನಾವು ಒಪ್ಪಿಕೊಂಡಂತಾಗುತ್ತದೆ. ಉಲಮಾಗಳು ಅವನಿಗೆ ಗೌರವ ಕೊಡುವುದು ಮುಸ್ಲಿಂ ಸಮುದಾಯಕ್ಕೆ ಕೆಟ್ಟ ಸಂದೇಶವಾಗಿ ಪರಿಣಮಿಸುತ್ತದೆ’ ಎಂದು ಯು.ಟಿ.ಖಾದರ್ ನಡವಳಿಕೆ ಆಕ್ಷೇಪಿಸಿ ಸಾಲೆತ್ತೂರು ಫೈಝಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.
ಯಾರೋ ಒಬ್ಬ ಗೀಚಿದ್ರೆ , ನೂರು ಜನ ಒಪ್ಪಿಕೊಳ್ಳಲ್ಲ. ಅದಕ್ಕೆಲ್ಲ ನಾವು ಇಂಪಾರ್ಟೆಂಟ್ ಕೊಡಬಾರದು: ಯು ಟಿ ಖಾದರ್
ಹರಕೆ ಕೋಲದಲ್ಲಿ ಭಾಗಿಯಾದ ಸ್ಪೀಕರ್ ಯುಟಿ ಖಾದರ್ ವಿರುದ್ಧ ಮುಸ್ಲಿಂ ಧಾರ್ಮಿಕ ಮುಖಂಡ ಸಾಲೆತ್ತೂರು ಫೈಝಿ ಆಕ್ಷೇಪ ವ್ಯಕ್ತಪಡಿಸಿದ್ದರು. ಸಾಮಾಜಿಕ ಜಾಲತಾಣದಲ್ಲಿ ಅವರ ವಿರುದ್ಧ ಬರೆದು ಹಾಕಿದ್ದರು. ಆದರೀಗ ಈ ವಿಚಾರವಾಗಿ ವಿಧಾನಸಭಾ ಅಧ್ಯಕ್ಷ ಸ್ಪಷ್ಟನೆ ಕೊಟ್ಟಿದ್ದಾರೆ.
ಯು.ಟಿ ಖಾದರ್ ಈ ಬಗ್ಗೆ ಸ್ಪಷ್ಟನೆ ನೀಡಿದ್ದು, ಸೋಷಿಯಲ್ ಮೀಡಿಯಾದಲ್ಲಿ ಗೀಚುವವರನ್ನು ಇತಿಹಾಸ ನೆನಪಿಟ್ಟುಕೊಳ್ಳಲ್ಲ. ಪ್ರಶ್ನೆ ಕೇಳುವವರನ್ನ ಇತಿಹಾಸ ನೆನಪಿಗೆ ಇಟ್ಟುಕೊಳ್ಳಲ್ಲ. ಯಾರು ಕೆಲ್ಸ ಮಾಡ್ತಾರೆ, ಯಾರು ಉತ್ತರ ಕೊಡ್ತಾರೆ ಅವರನ್ನು ಇತಿಹಾಸ ನೆನಪಿಟ್ಟುಕೊಳ್ಳುತ್ತೆ. ನಮ್ಮ ಪ್ರಾಚೀನ ಆಚರಣೆ ಅನುಗುಣವಾಗಿ ಅವರು ಹರಕೆ ಇಟ್ಟುಕೊಂಡಿದ್ರು. ಅದಕ್ಕೆ ಹೋಗುವುದು, ಗೌರವ ಕೊಡುವುದು ನಮ್ಮ ಸಂಸ್ಕೃತಿ. ಹೀಗಾಗಿ ನಾನು ಹೋಗಿದ್ದೆ. ಯಾರೋ ಒಬ್ಬ ಗೀಚಿದ್ರೆ , ನೂರು ಜನ ಒಪ್ಪಿಕೊಳ್ಳಲ್ಲ. ಅದಕ್ಕೆಲ್ಲ ನಾವು ಇಂಪಾರ್ಟೆಂಟ್ ಕೊಡಬಾರದು ಎಂದು ಹೇಳಿದ್ದಾರೆ.