ಪುತ್ತೂರಿನ ಪ್ರತಿಷ್ಠಿತ ಕಲ್ಲೇಗ ಟೈಗರ್ಸ್ ಮುಖ್ಯಸ್ಥ ಅಕ್ಷಯ್ ಕಲ್ಲೇಗ ತಡರಾತ್ರಿ ಬರ್ಬರ ಹತ್ಯೆ

ಸುದ್ದಿಗಳು News

Posted by vidyamaana on 2023-11-07 04:42:13 |

Share: | | | | |


ಪುತ್ತೂರಿನ ಪ್ರತಿಷ್ಠಿತ ಕಲ್ಲೇಗ ಟೈಗರ್ಸ್ ಮುಖ್ಯಸ್ಥ ಅಕ್ಷಯ್ ಕಲ್ಲೇಗ ತಡರಾತ್ರಿ ಬರ್ಬರ ಹತ್ಯೆ

ಪುತ್ತೂರು: ಪುತ್ತೂರಿನ ನಗರದಲ್ಲಿ ತಲವಾರ್ ನಲ್ಲಿ ಕಡಿದು ಕಲ್ಲೇಗ ಟೈಗರ್ಸ್ ನ ಪ್ರಮುಖ ನಾಯಕನನ್ನು ಹತ್ಯೆ ಮಾಡಿದ ಘಟನೆ ಇದೀಗ ನಡೆದಿದೆ.


ಟೈಗರ್ಸ್ ನ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಅವರನ್ನು ಹತ್ಯೆಗೀಡಾದ ಯುವಕ. ಈತ ಪುತ್ತೂರಿನ ನಗರದಲ್ಲಿ ಇದ್ದಾಗ ತಂಡಯೊಂದು ಆಗಮಿಸಿ ಯದ್ವಾತದ್ವ ತಲವಾರ್ ನಲ್ಲಿ ದಾಳಿ ನಡೆಸಿ, ಹತ್ಯೆ ಮಾಡಿದೆ. ಸ್ಥಳಕ್ಕೆ ಆಗಮಿಸಿದ ಪುತ್ತೂರು ನಗರ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

 Share: | | | | |


Miss World 2024; ಜೆಕ್‌ ಗಣರಾಜ್ಯದ ಚೆಲುವೆ ಕ್ರಿಸ್ಟಿನಾ ಸಿಸ್ಕೋವಾಗೆ ಪ್ರಶಸ್ತಿ ಮಂಗಳೂರು ಮೂಲದ ಸಿನಿ ಶೆಟ್ಟಿಗೆ ತಪ್ಪಿದ ಪಟ್ಟ

Posted by Vidyamaana on 2024-03-10 08:38:57 |

Share: | | | | |


Miss World 2024; ಜೆಕ್‌ ಗಣರಾಜ್ಯದ ಚೆಲುವೆ ಕ್ರಿಸ್ಟಿನಾ ಸಿಸ್ಕೋವಾಗೆ ಪ್ರಶಸ್ತಿ ಮಂಗಳೂರು ಮೂಲದ ಸಿನಿ ಶೆಟ್ಟಿಗೆ ತಪ್ಪಿದ ಪಟ್ಟ

ಮುಂಬೈ: ಮುಂಬೈನಲ್ಲಿ ಶನಿವಾರ ನಡೆದ 71ನೇ ವಿಶ್ವ ಸುಂದರಿ ಸ್ಪರ್ಧೆಯಲ್ಲಿ ಜೆಕ್‌ ಗಣರಾಜ್ಯದ ಕ್ರಿಸ್ಟಿನಾ ಸಿಸ್ಕೋವಾ ಪಟ್ಟ ಗೆದ್ದುಕೊಂಡರು.


28 ವರ್ಷಗಳ ನಂತರ ಭಾರತದಲ್ಲಿ ಈ ಸ್ಪರ್ಧೆ ನಡೆದಿದ್ದು, ಕ್ರಿಸ್ಟಿನಾ 111 ಸ್ಪರ್ಧಿಗಳನ್ನು ಹಿಮ್ಮೆಟ್ಟಿಸಿ ಗೆಲುವು ಸಾಧಿಸಿದ್ದಾರೆ. ಪೊಲೆಂಡ್‌ ಮೂಲದ 2022ನೇ ಸಾಲಿನ ವಿಶ್ವ ಸುಂದರಿ ಕರೋಲಿನಾ ಬಿಲಾವೆಸ್ಕಾ ಅವರು ಕ್ರಿಸ್ಟಿನಾಗೆ ವಿಶ್ವ ಸುಂದರಿ ಕಿರೀಟವನ್ನು ತೊಡಿಸಿದ್ದಾರೆ.

ಈ ಸಂದರ್ಭದಲ್ಲಿ ಜೆಕ್‌ ಸುಂದರಿ ಕ್ರಿಸ್ಟಿನಾ ಸಿಸ್ಕೋವಾ ಸಂತಸದ ಕಂಬನಿಗರೆದು ಹರ್ಷ ವ್ಯಕ್ತ ಪಡಿಸಿದ್ದಾರೆ.

ಸಿನಿ ಶೆಟ್ಟಿಗೆ ತಪ್ಪಿದ ಪಟ್ಟ:

ಪ್ರಶಸ್ತಿ ಗೆಲ್ಲಲು ಕರ್ನಾಟಕ ಮೂಲದ ಸಿನಿ ಶೆಟ್ಟಿ ವಿಫ‌ಲರಾಗಿದ್ದಾರೆ. ಅಂತಿಮ ಸುತ್ತಿನವರೆಗೂ ತೇರ್ಗಡೆಯಾಗುತ್ತಾ ಬಂದ ಅವರು, ಅಗ್ರ 8ರ ಸ್ಥಾನಕ್ಕೆ ತೃಪ್ತಿಪಟ್ಟುಕೊಳ್ಳಬೇಕಾಯಿತು. ಕೊನೆಗೆ ನಾಲ್ವರ ಆಯ್ಕೆ ವೇಳೆ ಸಿನಿ ಶೆಟ್ಟಿ ಸ್ಪರ್ಧೆಯಿಂದ ಹೊರಗುಳಿಯಬೇಕಾಯಿತು.

ಪುತ್ತೂರು ಉಪ ವಿಭಾಗದ ಸಹಾಯಕ ಆಯಕ್ತರಾಗಿ ಜುಬಿನ್ ಮಹಾಪಾತ್ರ

Posted by Vidyamaana on 2023-12-27 13:57:43 |

Share: | | | | |


ಪುತ್ತೂರು ಉಪ ವಿಭಾಗದ ಸಹಾಯಕ ಆಯಕ್ತರಾಗಿ ಜುಬಿನ್ ಮಹಾಪಾತ್ರ

ಪುತ್ತೂರು: ರಾಜ್ಯದ ಎಂಟು ಉಪ ವಿಭಾಗಗಳಿಗೆ ನೂತನ ಸಹಾಯಕ ಆಯಕ್ತರನ್ನು ನೇಮಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.

ದ.ಕ. ಜಿಲ್ಲೆಯ ಪುತ್ತೂರು ಉಪ ವಿಭಾಗದ ಸಹಾಯಕ ಆಯಕ್ತರಾಗಿ ಜುಬಿನ್ ಮಹಾಪಾತ್ರ,  ಕೊಡಗು ಜಿಲ್ಲೆಯ ಮಡಿಕೇರಿ ಉಪ ವಿಭಾಗದ ಸಹಾಯಕ ಆಯಕ್ತರಾಗಿ ನಾರ್ವಡೆ ವಿನಾಯಕ ಕರ್ಭರಿ ಅವರನ್ನು ನೇಮಕಗೊಳಿಸಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಉಪ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ. ಹೊಸದಾಗಿ ನೇಮಕಗೊಂಡ ಎಲ್ಲಾ ಎಂಟು ಸಹಾಯಕ ಆಯುಕ್ತರು 2021ನೇ ಬ್ಯಾಚ್ ನ ಐಎಎಸ್‌ ಅಧಿಕಾರಿಗಳಾಗಿದ್ದಾರೆ.

ಅಭಿರಾಮ್‌ ಫ್ರೆಂಡ್ಸ್‌ ವತಿಯಿಂದ ಚಿಕ್ಕಮುಡ್ನೂರು ಶಾಲೆಗೆ ಟೇಬಲ್‌ ಚಯರ್‌ ವಿತರಣೆ

Posted by Vidyamaana on 2023-08-19 14:25:24 |

Share: | | | | |


ಅಭಿರಾಮ್‌ ಫ್ರೆಂಡ್ಸ್‌ ವತಿಯಿಂದ ಚಿಕ್ಕಮುಡ್ನೂರು ಶಾಲೆಗೆ ಟೇಬಲ್‌ ಚಯರ್‌ ವಿತರಣೆ

ಪುತ್ತೂರು: ಅಭಿರಾಮ್‌ ಫ್ರೆಂಡ್ಸ್‌ (ರಿ.) ಪುತ್ತೂರು ಇದರ ವತಿಯಿಂದ ಹಿರಿಯ ಪ್ರಾ. ಶಾಲೆ ಕೃಷ್ಣನಗರ ಹಾಗೂ ಕೇಪುಳು, ನೆಲ್ಲಿಕಟ್ಟೆ, ರೋಟರಿಪುರ, ಕೆಮ್ಮಾಯಿ ಗುಂಡಿಜಾಲು, ಬೀರ್ನಹಿತ್ಲು ಅಂಗನವಾಡಿಯ ಮಕ್ಕಳಿಗೆ ಸ್ವಾತಂತ್ರ್ಯ ದಿನಾಚರಣೆಯಂದು ಸಿಹಿತಿಂಡಿ ವಿತರಿಸಿದರು.

ಚಿಕ್ಕಮುಡ್ನೂರು ಹಿ.ಪ್ರಾ ಶಾಲೆಗೆ ಚಯರ್‌, ಟೇಬಲ್‌ ವಿತರಣೆ:

ಚಿಕ್ಕಮುಡ್ನೂರು ಹಿ.ಪ್ರಾ ಶಾಲೆಯ ಮಕ್ಕಳಿಗೆ ನಲಿ-ಕಲಿಗೆ ಬೇಕಾದಂತಹ‌ ಮೂರು ಟೇಬಲ್‌ ಹಾಗೂ 15 ಚಯರ್ ಗಳನ್ನು ಅಭಿರಾಮ್‌ ಫ್ರೆಂಡ್ಸ್‌ (ರಿ.)ನ  ಅಧ್ಯಕ್ಷರು ಮತ್ತು ಸದಸ್ಯರು ಶಾಲಾ ಮುಖ್ಯೋಪಾಧ್ಯಾಯಿನಿ ಪುಷ್ಪಲತಾರವರಿಗೆ ಹಸ್ತಾಂತರಿಸಿದರು. ಅಭಿರಾಮ್‌ ಫ್ರೆಂಡ್ಸ್‌ (ರಿ.)ನ ಅಧ್ಯಕ್ಷ ತೇಜಕುಮಾರ್‌ ಕೆಮ್ಮಾಯಿ, ಕಾರ್ಯದರ್ಶಿ ಸನತ್‌ ಸುವರ್ಣ, ಉಪಾಧ್ಯಕ್ಷರಾದ ಪ್ರಜೀತ್ ಮಂಜಲ್ಪಡ್ಪು, ಹರ್ಷಿತ್‌ ರಾಮ್‌ ಬಳ್ಳಾಲ್‌, ಖಜಾಂಜಿ ಜಯೇಶ್‌ ಹಾಗೂ ಸದಸ್ಯರಾದ ಶರತ್‌ ಕೇಪುಳು, ರಮೇಶ್‌ ಬಂಡಾಜೆ, ಭರತ್‌, ಚಿದಾನಂದ ಕೇಪುಳು, ರಾಜೇಶ್‌ ಜಿಡೆಕಲ್ಲು, ಕಾರ್ತಿಕ್‌ ಊರಮಾಲು, ಕಿಶೋರ್‌ ತಾರಿಗುಡ್ಡೆ, ಪ್ರದೀಪ್‌ ಕೇಪುಳು, ಅವಿನಾಶ್‌ ಶೆಟ್ಟಿ, ಅಭಿಷೇಕ್‌ ಶೆಟ್ಟಿ, ಕಾರ್ತಿಕ್ ಚಿಕ್ಕಪುತ್ತೂರು, ಶಾಲಾ ಎಸ್‌ಡಿಎಂಸಿ ಸದಸ್ಯರು, ಬನ್ನೂರು ಗ್ರಾ, ಪಂ ತಿಮ್ಮಪ್ಪ ಪೂಜಾರಿ, ರಾಘವೇಂದ್ರ ಅಂದ್ರಟ ಮಕ್ಕಳ ಪೋಷಕರು, ಊರುವರು ಉಪಸ್ಥಿತರಿದ್ದರು.

ಪುತ್ತೂರಿನಲ್ಲಿ ಯುವತಿಗೆ ಚೂರಿ ಇರಿತ : ಯುವತಿ ಮೃತ್ಯು

Posted by Vidyamaana on 2023-08-24 10:32:19 |

Share: | | | | |


ಪುತ್ತೂರಿನಲ್ಲಿ ಯುವತಿಗೆ ಚೂರಿ ಇರಿತ :  ಯುವತಿ ಮೃತ್ಯು

ಪುತ್ತೂರು: ಚೂರಿ ಇರಿತಗೊಳಗಾಗಿ ಗಂಭೀರ ಗಾಯಗೊಂಡ ಯುವತಿ ಮೃತಪಟ್ಟಿದ್ದಾಳೆ ಎಂದು ತಿಳಿದುಬಂದಿದೆ.


ಯುವತಿಯನ್ನು ಅಳಿಕೆ ಮೂಲದ ಗೌರಿ ಎಂದು ಹೇಳಲಾಗಿದೆ.


ಆರೋಪಿ ಪದ್ಮರಾಜ್ ಎಂಬಾತನನ್ನು ಬಂಧಿಸುವಲ್ಲಿ‌ ಪೊಲೀಸರು ಯಶಸ್ವಿಯಾದ ಬೆನ್ನಲ್ಲೇ, ಯುವತಿ ಕೊನೆಯುಸಿರೆಳೆದಿದ್ದಾಳೆ.


ಪುತ್ತೂರು ಮಹಿಳಾ ಪೊಲೀಸ್ ಠಾಣೆಯ ಹಿಂಬದಿಯಲ್ಲಿ, ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಕೆರೆ ಬಳಿಯ ದ್ವಾರದಲ್ಲಿ ಘಟನೆ ನಡೆದಿದೆ.

ಪುತ್ತೂರಿನ ಬಲನಾಡು ನೆಟ್ ವರ್ಕಿಂದ ಹೊರನಾಡು

Posted by Vidyamaana on 2023-06-16 11:20:44 |

Share: | | | | |


ಪುತ್ತೂರಿನ ಬಲನಾಡು ನೆಟ್ ವರ್ಕಿಂದ ಹೊರನಾಡು

ಪುತ್ತೂರು: ಹೇಳಿಕೊಳ್ಳಲು ಪುತ್ತೂರು ಪೇಟೆಯ ತೀರಾ ಸಮೀಪದ ಗ್ರಾಮ. ಆದರೆ ಇಂದಿಗೆ ಅಗತ್ಯಾತಿ ಅಗತ್ಯ ಎನಿಸಿಕೊಳ್ಳುವ ನೆಟ್ ವರ್ಕೇ ಇಲ್ಲಿಲ್ಲ. ಹಾಗಾಗಿ ಇದು ನೆಟ್ ವರ್ಕ್ ವಿಚಾರದಲ್ಲಿ ಕುಗ್ರಾಮ ಎಂದೇ ಹೇಳಬಹುದು.

ಈ ಗ್ರಾಮದ ಹೆಸರು ಬಲ್ನಾಡು. ಒಂದು ಕಾಲದ ಬಲ ನಾಡು. ಅಂದರೆ ಬಲ್ಲಾಳರು ಅಧಿಕಾರ ನಡೆಸುತ್ತಿದ್ದ ಕೇಂದ್ರಸ್ಥಾನವಿದು. ಆದ್ದರಿಂದಲೇ ಇದು ಬಲಯುತವಾದ ನಾಡು. ಅಂದು ಅಧಿಕಾರದಲ್ಲಿ ಮೆರೆದ ನಾಡು, ಇಂದು ಮೂಲಸೌಕರ್ಯ ವಂಚಿತವಾಗಿದೆ.

ತುರ್ತು ಸಂದೇಶ ರವಾನಿಸಬೇಕಿದ್ದರೂ ಫೋನ್ ಮಾಡುವಂತಿಲ್ಲ. ರಾತ್ರಿ ಹೊತ್ತಾದರೂ ಸರಿ, ಮಾತನಾಡಬೇಕು ಎಂದರೆ ಬಾಂಬ್ ಸ್ಕ್ವಾಡ್ ನಂತೆ ಸಿಗ್ನಲ್ ಹುಡುಕುತ್ತಾ ಹೋಗಬೇಕು. ಆನ್ ಲೈನ್ ನಂಬಿಕೊಂಡು ಕ್ಲಾಸ್ ತೆಗೆದುಕೊಂಡರಂತೂ ನಾಪಾಸೇ ಗತಿ. ಪ್ರೇಮಿಗಳ ವಿರಹ ವೇದನೆಯಂತೂ ಹೇಳತೀರದು. ಹೀಗೇ ಇಲ್ಲಿನ ಜನರ ಕಷ್ಟ ಒಂದೇ ಎರಡೇ.

ಬಲ್ನಾಡು ಗ್ರಾಮದಲ್ಲಿ ಘಟಾನುಘಟಿ ನಾಯಕರಿದ್ದಾರೆ. ರಾಜಕೀಯದಲ್ಲೂ ಉನ್ನತ ಸ್ಥಾನ ಅಲಂಕರಿಸಿದವರಿದ್ದಾರೆ. ಆದರೆ ಇವರನ್ನು ಸಂಪರ್ಕಿಸಬೇಕಿದ್ದರೂ, ಹರಸಾಹಸ ಪಡಬೇಕು. ಎಲ್ಲದಕ್ಕೂ ಮೂಲಕಾರಣ ನೆಟ್ ವರ್ಕ್ ಸಮಸ್ಯೆ. ಹಾಗಾಗಿ ಬಲನಾಡಾದರೂ ನೆಟ್ ವರ್ಕಿಂದ ಹೊರನಾಡಾಗಿ ಪರಿಣಮಿಸಿದೆ. ಇದಕ್ಕೆ ಪರಿಹಾರ ನೀಡುವವರು ಯಾರು? ಸಂಬಂಧಪಟ್ಟವರು ನ ಹರಿಸುವಿರಾ.

ಜೆಡಿಎಸ್ ನಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ.! ಚುನಾವಣೆಯಲ್ಲಿ ಗೆದ್ದರೆ ಮುಂದೇನು..?

Posted by Vidyamaana on 2024-04-29 19:01:32 |

Share: | | | | |


ಜೆಡಿಎಸ್ ನಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ.! ಚುನಾವಣೆಯಲ್ಲಿ ಗೆದ್ದರೆ ಮುಂದೇನು..?

ಬೆಂಗಳೂರು : ಸತತ ಆರೋಪಗಳ ಹಿನ್ನೆಲೆಯಲ್ಲಿ ಸಂಸದ ಪ್ರಜ್ವಲ್ ರೇವಣ್ಣರನ್ನು (Prajwal Revanna) ಪಕ್ಷದಿಂದ ಅಮಾನತು ಮಾಡಲಾಗಿದೆ. ಈ ಸಂಬಂಧ ಮಾತನಾಡಿದ ಮಾಜಿ ಸಿಎಂ ಹೆಚ್‌.ಡಿ ಕುಮಾರಸ್ವಾಮಿ (HD Kumaraswamy), ಪ್ರಜ್ವಲ್‌ ಅಮಾನತಿಗೆ ನಿನ್ನೆಯೇ ನಿರ್ಧಾರ ಮಾಡಲಾಗಿದೆ.

ತಪ್ಪು ಯಾರೇ ಮಾಡಿದ್ರೂ ತಪ್ಪು. SIT ತನಿಖೆಯ ವರದಿ ಬಂದ ಬಳಿಕ ಎಲ್ಲವನ್ನೂ ಮಾತಾಡ್ತೀನಿ ಎಂದರು.

ಪೆನ್‍ಡ್ರೈವ್ ಸುಳಿಯಲ್ಲಿರುವ ಪ್ರಜ್ವಲ್ ರೇವಣ್ಣ ಬಂಧನಕ್ಕೆ ಆಗ್ರಹಿಸಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಗುತ್ತಿದೆ. ಹಾಸನ, ಹುಬ್ಬಳ್ಳಿ ಸೇರಿದಂತೆ ಹಲವೆಡೆ ಪ್ರತಿಭಟನೆ ನಡೆಯುತ್ತಿದೆ. ಆತ ಮನುಷ್ಯನಲ್ಲ, ಮನುಷ್ಯ ಕುಲದಲ್ಲಿ ಹುಟ್ಟಿಲ್ಲ. ದೇವೇಗೌಡರ ಮೊಮ್ಮಗ ಅಂತ ಬಿಡಬಾರದು. ಈ ಕೂಡಲೇ ಪ್ರಜ್ವಲ್ ಬಂಧಿಸುವಂತೆ ಘೋಷಣೆ ಕೂಗಿ ಆಕ್ರೋಶ ಹೊರಹಾಕುತ್ತಿದ್ದಾರೆ.



Leave a Comment: