ವಿವಾಹಿತ ಯುವಕನ ಜತೆ ವಿದ್ಯಾರ್ಥಿನಿ ಲವ್, ಕೆರೆಗೆ ಹಾರಿ ಇಬ್ಬರೂ ಆತ್ಮಹತ್ಯೆ!

ಸುದ್ದಿಗಳು News

Posted by vidyamaana on 2024-07-03 13:36:16 |

Share: | | | | |


ವಿವಾಹಿತ ಯುವಕನ ಜತೆ ವಿದ್ಯಾರ್ಥಿನಿ ಲವ್, ಕೆರೆಗೆ ಹಾರಿ ಇಬ್ಬರೂ ಆತ್ಮಹತ್ಯೆ!

ಬೆಂಗಳೂರು (ಜು.3): ಇಲ್ಲಿನ ಹೊರವಲಯದ ನೈಸ್ ರಸ್ತೆ ಸಮೀಪದ ಕೆರೆಗೆ ಹಾರಿ ಯುವ ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಕಾಲೇಜು ವಿದ್ಯಾರ್ಥಿನಿ ಅಂಜನಾ(20) ಮತ್ತು ಶ್ರೀಕಾಂತ್(25) ಸಾವನ್ನಪ್ಪಿರುವ ದುರ್ದೈವಿಗಳಾಗಿದ್ದಾರೆ. ಜುಲೈ 1ರಂದು ಪ್ರೇಮಿಗಳು ನಾಪತ್ತೆಯಾಗಿದ್ದರು.

ಕಳೆದ ಕೆಲ ವರ್ಷಗಳಿಂದ ಇಬ್ಬರು ಪರಸ್ಪರ ಪ್ರೀತಿಸ್ತಿದ್ದರು. ಆದರೆ ಯುವಜೋಡಿಯ ಪ್ರೀತಿಗೆ ವಿದ್ಯಾರ್ಥಿನಿ ಪೋಷಕರಿಂದ ವಿರೋಧ ವ್ಯಕ್ತವಾಗಿತ್ತು. ವಿದ್ಯಾರ್ಥಿನಿ ತಲಘಟ್ಟಪುರ ಸಮೀಪದ ಅಂಜನಾಪುರ ಬಳಿ ವಾಸವಿದ್ದಳು. ಯುವಕ ಶ್ರೀಕಾಂತ್ ಕೋಣನಕುಂಟೆ ನಿವಾಸಿಯಾಗಿದ್ದ. ಇಬ್ಬರೂ ನಾಪತ್ತೆಯಾಗಿದ್ದರು. ನಾಪತ್ತೆ ಹಿನ್ನಲೆ ಎರಡೂ ಕಡೆಯವರ ಪೋಷಕರು ಕೋಣನಕುಂಟೆ ಮತ್ತು ತಲಘಟ್ಟಪುರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಇದೀಗ ಇಬ್ಬರೂ ಶವವಾಗಿ ಪತ್ತೆಯಾಗಿದ್ದಾರೆ. ನಮ್ಮ ಸಾವಿಗೆ ನಾವೇ ಕಾರಣ ಎಂದು ಡೆತ್ ನೋಟ್ ಬರೆದಿಟ್ಟು ಜೋಡಿ ಆತ್ಮಹತ್ಯೆ ಮಾಡಿಕೊಂಡಿದೆ.

ಮದುವೆಯಾಗಿದ್ದ ಶ್ರೀಕಾಂತ್!

ಶ್ರೀಕಾಂತ್ ಗೆ ಬೇರೊಬ್ಬರ ಜೊತೆಗೆ ವಿವಾಹವಾಗಿದೆ. ಆದರೂ ಅಂಜನಾಳನ್ನ ಪ್ರೀತಿ ಮಾಡ್ತಿದ್ದ. ಇಬ್ಬರು ಒಟ್ಟಿಗೆ ಬದುಕಲು ಅವಕಾಶ ಇಲ್ಲ ಎಂದು ಸಾಯೋ ನಿರ್ಧಾರ ಮಾಡಿದ್ದಾರೆ. ಮೊದಲು ಶ್ರೀಕಾಂತ್ ಮೃತದೇಹ ಕೆರೆಯಲ್ಲಿ ಕಾಣಿಸಿದೆ. ಆತನನ್ನ ಮೇಲೆತ್ತಿದ್ದ ನಂತರ ಅಂಜನಾ ಮೃತದೇಹ ಕೂಡ ಮೇಲೆ ಬಂದಿದೆ. ಅಂಜನಾ ಮೃತದೇಹದ ಬಗ್ಗೆ ಪೊಲೀಸರಿಗೂ ಮಾಹಿತಿ ಇರುದಿಲ್ಲ. ಇಬ್ಬರು ಕೈಗೆ ಹಗ್ಗ ಕಟ್ಟಿಕೊಂಡಿದ್ದರಿಂದ ಇಬ್ಬರ ಮೃತದೇಹ ಒಟ್ಟಿಗೆ ಸಿಕ್ಕಿದೆ. ಮೊಬೈಲ್ ನಲ್ಲಿ ವೀಡಿಯೊ ಮಾಡಿರುವ ಯುವತಿ ಅಂಜನಾ ಅದನ್ನ ಆಟೋದಲ್ಲಿ ಬಿಟ್ಟು ಶ್ರೀಕಾಂತ್ ಜೊತೆಗೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ನಮ್ಮ ಸಾವಿಗೆ ಯಾರು ಕಾರಣ ಅಲ್ಲ. ನಾವಿಬ್ಬರು ಒಟ್ಟಿಗೆ ಬದುಕಲು ಆಗಲ್ಲ. ಹಾಗಾಗಿ ಸಾಯ್ತಿದ್ದೇವೆ ಎಂದು ವಿಡಿಯೋ ಮಾಡಿದ್ದಾಳೆ. ಮೊಬೈಲ್ ವಶಕ್ಕೆ ಪಡೆದುಕೊಂಡಿರೊ ತಲಘಟ್ಟಪುರ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

 Share: | | | | |


ಸುಳ್ಯ; ಖ್ಯಾತ ಐಸ್ ಕ್ರೀಂ ಉದ್ಯಮಿ ಕಾಪಿಲ ಗಿರಿಯಪ್ಪ ಗೌಡರ ಸೊಸೆ ಐಶ್ವರ್ಯ ಆತ್ಮಹತ್ಯೆಗೆ ಶರಣು

Posted by Vidyamaana on 2023-10-27 12:05:25 |

Share: | | | | |


ಸುಳ್ಯ; ಖ್ಯಾತ ಐಸ್ ಕ್ರೀಂ ಉದ್ಯಮಿ ಕಾಪಿಲ ಗಿರಿಯಪ್ಪ ಗೌಡರ ಸೊಸೆ ಐಶ್ವರ್ಯ ಆತ್ಮಹತ್ಯೆಗೆ ಶರಣು

ಸುಳ್ಯ ;ಡೈರಿ ರಿಚ್ ಐಸ್ ಕ್ರೀಂನ ಉದ್ಯಮಿ ಕನಕಮಜಲಿನ ಕಾಪಿಲ ಗಿರಿಯಪ್ಪ ಗೌಡರ ಸೊಸೆ ಬೆಂಗಳೂರಿನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಗಿರಿಯಪ್ಪ ಗೌಡ ಅವರ ಪುತ್ರ ರಾಜೇಶ್ ಇವರ ಪತ್ನಿ ಐಶ್ವರ್ಯ(26) ಆತ್ಮಹತ್ಯೆಗೆ ಶರಣಾದವರು.


ಉಬರಡ್ಕ ಮಿತ್ತೂರು ಗ್ರಾಮದ ಮದುವೆಗದ್ದೆ ಸುಬ್ರಹ್ಮಣ್ಯ ಗೌಡ ಹಾಗೂ ಉಷಾ ದಂಪತಿಯ ಪುತ್ರಿಯಾದ ಐಶ್ವರ್ಯ ನಾಲ್ಕು ವರ್ಷಗಳ ಹಿಂದೆ ರಾಜೇಶ್ ಅವರನ್ನು ವಿವಾಹವಾಗಿದ್ದರು. ಐಶ್ವರ್ಯ ರವರು ಬೆಂಗಳೂರಿನಲ್ಲಿ ಕಂಪೆನಿಯೊಂದರಲ್ಲಿ ಉದ್ಯೋಗಿಯಾಗಿದ್ದು, ಪತಿ ರಾಜೇಶ್ ಸ್ವಂತ ಐಸ್ ಕ್ರೀಮ್ ಪಾರ್ಲರ್ ನಡೆಸಿಕೊಂಡು ಬೆಂಗಳೂರಿನಲ್ಲೇ ವಾಸವಾಗಿದ್ದರು.


ಐಶ್ವರ್ಯಳ ತಂದೆ ತಾಯಿ ಕೊಡ ಬೆಂಗಳೂರಿನಲ್ಲೇ ನೆಲೆಸಿದ್ದು, ಕೆಲ ಸಮಯಗಳಿಂದ ಐಶ್ವರ್ಯ ತನ್ನ ತಾಯಿ ಮನೆಗೆ ಬಂದಿದ್ದು ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ.

ಪೋಕ್ಸೊ ಕೇಸ್: ಜಾಮೀನಿನ ಮೇಲೆ ಬಿಡುಗಡೆಯಾದ 4 ದಿನಗಳಲ್ಲೇ ಮುರುಘಾ ಶ್ರೀ ಮರು ಬಂಧನ

Posted by Vidyamaana on 2023-11-20 15:51:04 |

Share: | | | | |


ಪೋಕ್ಸೊ ಕೇಸ್: ಜಾಮೀನಿನ ಮೇಲೆ ಬಿಡುಗಡೆಯಾದ 4 ದಿನಗಳಲ್ಲೇ ಮುರುಘಾ ಶ್ರೀ ಮರು ಬಂಧನ

ದಾವಣಗೆರೆ: ನವೆಂಬರ್.16ರಂದು ಪೋಕ್ಸೊ ಮೊದಲನೇ ಪ್ರಕರಣದಲ್ಲಿ ಚಿತ್ರದುರ್ಗದ ಮುರುಘಾ ಶ್ರೀಗಳಿಗೆ ಹೈಕೋರ್ಟ್ ಶರತ್ತು ಬದ್ಧ ಜಾಮೀನು ಮಂಜೂರು ಮಾಡಿತ್ತು. ಈ ಜಾಮೀನಿನ ಮೇಲೆ ಬಿಡುಗಡೆ ಕೂಡ ಆಗಿದ್ದರು. ಆದ್ರೇ 2ನೇ ಪೋಕ್ಸೊ ಪ್ರಕರಣದಲ್ಲಿ ಜಾಮೀನು ಪಡೆಯೋ ಮುನ್ನವೇ ಬಿಡುಗಡೆ ಆಗಿದ್ದ ಕಾರಣ, ಅವರನ್ನು ಇಂದು ಜಾಮೀನು ಪಡೆದ 4 ದಿನಗಳಲ್ಲೇ ಮತ್ತೆ ಬಂಧಿಸಲಾಗಿದೆ.ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಚಿತ್ರದುರ್ಗದ ಮುರುಘಾ ಶ್ರೀ ವಿರುದ್ಧ ಪೋಕ್ಸೊ ಕೇಸ್ ದಾಖಲಾಗಿತ್ತು. ಈ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿ ಕಳೆದ 14 ತಿಂಗಳುಗಳ ಕಾಲ ಜೈಲು ಸೇರಿದ್ದರು. ಚಿತ್ರದುರ್ಗ ಜಿಲ್ಲಾ ಕಾರಾಗೃಹದಲ್ಲಿ ಬಂಧನದಲ್ಲಿದ್ದಂತ ಅವರಿಗೆ ಕೆಲ ದಿನಗಳ ಹಿಂದಷ್ಟೇ ಹೈಕೋರ್ಟ್ ಷರತ್ತು ಬದ್ಧ ಜಾಮೀನು ನೀಡಿತ್ತು. ಆ ಜಾಮೀನಿನ ಮೇಲೆ ಬಿಡುಗಡೆ ಕೂಡ ಆಗಿದ್ದರು.


ಜಾಮೀನಿನ ಮೇಲೆ ಬಿಡುಗಡೆಗೊಂಡಿರುವಂತ ಮುರುಘಾ ಶ್ರೀಗಳು 2ನೇ ಪೋಕ್ಸೊ ಪ್ರಕರಣದಲ್ಲಿ ಚಿತ್ರದುರ್ಗ ಜಿಲ್ಲಾ ನ್ಯಾಯಾಲಯಕ್ಕೆ ಖುದ್ದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿತ್ತು. ಆದ್ರೇ ಈ ಆದೇಶವನ್ನು ಪಾಲಿಸದೇ ವೀಡಿಯೋ ಕಾನ್ಫೆರೆನ್ಸ್ ಮೂಲಕ ಹಾಜರಾಗಿದ್ದರು. ಇದನ್ನು ಸರ್ಕಾರಿ ವಕೀಲರು ಪ್ರಶ್ನಿಸಿದ್ದರು. ಜೊತೆಗೆ ಆದೇಶ ಉಲ್ಲಂಘನೆ ಸಂಬಂಧ ಅವರ ವಿರುದ್ಧ ಕಾನೂನು ಕ್ರಮಕ್ಕೆ ಮನವಿ ಮಾಡಿದ್ದರು.ಸರ್ಕಾರಿ ವಕೀಲರ ಆಕ್ಷೇಪದ ನಂತ್ರ ಚಿತ್ರದುರ್ಗ ಜಿಲ್ಲಾ ನ್ಯಾಯಾಲಯವು ಮುರುಘಾ ಶ್ರೀ ವಿರುದ್ಧ ಜಾಮೀನು ರಹಿತ ಬಂಧನದ ವಾರೆಂಟ್ ಜಾರಿಗೊಳಿಸಿದೆ. ಈ ಹಿನ್ನಲೆಯಲ್ಲಿ ಇಂದು ದಾವಣಗೆರೆಯ ವಿರಕ್ತ ಮಠಕ್ಕೆ ತೆರಳಿದಂತ ಚಿತ್ರದುರ್ಗ ಜಿಲ್ಲೆಯ ಗ್ರಾಮಾಂತರ ಠಾಣೆಯ ಪೊಲೀಸರು, ಮುರುಘಾ ಶ್ರೀಗಳನ್ನು 2ನೇ ಪೊಕ್ಸೊ ಪ್ರಕರಣದಲ್ಲಿ ಬಂಧಿಸಿದ್ದಾರೆ.

ಫೆ.27: ಉಡುಪಿಗೆ ಭೇಟಿ ನೀಡಲಿರುವ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ

Posted by Vidyamaana on 2023-02-26 16:07:56 |

Share: | | | | |


ಫೆ.27: ಉಡುಪಿಗೆ ಭೇಟಿ ನೀಡಲಿರುವ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ

ಉಡುಪಿ: ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಫೆ.27ರ ಬೆಳಗ್ಗೆ 9:30ಕ್ಕೆ ಉಡುಪಿ ಜಿಲ್ಲಾ ಬಿಜೆಪಿ ಕಚೇರಿಗೆ ಆಗಮಿಸಲಿದ್ದು, ಉಡುಪಿಯ 5 ವಿಧಾನಸಭಾ ಕ್ಷೇತ್ರದಾದ್ಯಂತ ಸಂಚರಿಸಲಿರುವ 5 ಪ್ರಗತಿ ರಥಗಳಿಗೆ ಚಾಲನೆ ನೀಡಲಿದ್ದಾರೆ.

ಅಪರಾಹ್ನ 3:00 ಗಂಟೆಗೆ ಕಾರ್ಕಳದಲ್ಲಿ ನಡೆಯುವ ಬೃಹತ್ ಬೈಕ್ ಜಾಥಾದಲ್ಲಿ ಭಾಗವಹಿಸಿ, ಸಂಜೆ 4:00 ಗಂಟೆಗೆ ಅಜೆಕಾರಿನಲ್ಲಿ ನಡೆಯುವ ಉಡುಪಿ ಜಿಲ್ಲಾ ಮಟ್ಟದ ಯುವ ಮೋರ್ಚಾ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ.

ಸಚಿವ ವಿ.ಸುನೀಲ್ ಕುಮಾರ್, ಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ, ಯುವ ಮೋರ್ಚಾ ರಾಜ್ಯಾಧ್ಯಕ್ಷ ಡಾ.ಸಂದೀಪ್ ಕೆ.ಸಿ. ಸಹಿತ ರಾಜ್ಯ ಮತ್ತು ಜಿಲ್ಲಾ ನಾಯಕರು ಇದರಲ್ಲಿ ಭಾಗವಹಿಸಲಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

ಕರಾವಳಿಯಲ್ಲಿ ಮಳೆ ಅಬ್ಬರ: ಉಭಯ ಜಿಲ್ಲೆಗಳಲ್ಲಿ ಜುಲೈ 27 ರಂದು ಶಾಲೆಗಳಿಗೆ ರಜೆ

Posted by Vidyamaana on 2023-07-26 15:17:13 |

Share: | | | | |


ಕರಾವಳಿಯಲ್ಲಿ ಮಳೆ ಅಬ್ಬರ: ಉಭಯ ಜಿಲ್ಲೆಗಳಲ್ಲಿ ಜುಲೈ 27 ರಂದು ಶಾಲೆಗಳಿಗೆ ರಜೆ

ಮಂಗಳೂರು/ಉಡುಪಿ : ಕರಾವಳಿಯಲ್ಲಿ ಕಳೆದ ಕೆಲ ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಮಳೆ ಮುಂದುವರಿದ ಕಾರಣ ಜುಲೈ 27 ರಂದು (ಗುರುವಾರ) ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಅಂಗನವಾಡಿ, ಶಾಲೆಗಳಿಗೆ ರಜೆ ಘೋಷಿಸಲಾಗಿದೆ.



ಉಡುಪಿ ಜಿಲ್ಲೆಯಲ್ಲಿ ಅಂಗನವಾಡಿ, ಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ರಜೆ ಘೋಷಿಸಲಾಗಿದೆ. ದಕ್ಷಿಣ ಕನ್ನಡದಲ್ಲಿ ಪ್ರೌಢ ಶಾಲೆಗಳವರೆಗೆ ವಿದ್ಯಾರ್ಥಿಗಳಿಗೆ ರಜೆ ಘೋಷಿಸಲಾಗಿದೆ.


ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಹೆಚ್ಚು ಮಳೆಯಾಗುತ್ತಿರುವುದರಿಂದ ಜುಲೈ 27 ರಂದು ದ್ಯಾರ್ಥಿಗಳಿಗೆ ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.ಮಂಗಳೂರು/ಉಡುಪಿ : ಕರಾವಳಿಯಲ್ಲಿ ಕಳೆದ ಕೆಲ ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಮಳೆ ಮುಂದುವರಿದ ಕಾರಣ ಜುಲೈ 27 ರಂದು (ಗುರುವಾರ) ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಅಂಗನವಾಡಿ, ಶಾಲೆಗಳಿಗೆ ರಜೆ ಘೋಷಿಸಲಾಗಿದೆ.


ಉಡುಪಿ ಜಿಲ್ಲೆಯಲ್ಲಿ ಅಂಗನವಾಡಿ, ಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ರಜೆ ಘೋಷಿಸಲಾಗಿದೆ. ದಕ್ಷಿಣ ಕನ್ನಡದಲ್ಲಿ ಪ್ರೌಢ ಶಾಲೆಗಳವರೆಗೆ ವಿದ್ಯಾರ್ಥಿಗಳಿಗೆ ರಜೆ ಘೋಷಿಸಲಾಗಿದೆ.


ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಹೆಚ್ಚು ಮಳೆಯಾಗುತ್ತಿರುವುದರಿಂದ ಜುಲೈ 27 ರಂದು ದ್ಯಾರ್ಥಿಗಳಿಗೆ ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.

ರಾಜ್ಯದಲ್ಲಿ ನಡೆಯುತ್ತಿದೆ ಭಾರತೀಯ ಸೇನಾ ದಿನಾಚರಣೆ : ಬೆಂಗಳೂರಿನಲ್ಲಿ ನಡೆಯಲಿದೆ ಪಥ ಸಂಚಲನ

Posted by Vidyamaana on 2023-01-19 03:44:43 |

Share: | | | | |


ರಾಜ್ಯದಲ್ಲಿ ನಡೆಯುತ್ತಿದೆ ಭಾರತೀಯ ಸೇನಾ ದಿನಾಚರಣೆ : ಬೆಂಗಳೂರಿನಲ್ಲಿ ನಡೆಯಲಿದೆ ಪಥ ಸಂಚಲನ

ಭಾರತದ ಗೌರವದ ಪ್ರತೀಕ ಭಾರತೀಯ ಸೇನೆ. ವಿಶ್ವದ ಬಲಿಷ್ಠ ಸೈನ್ಯಗಳ ಪೈಕಿ ಭಾರತವೂ ಅಗ್ರಪಂಕ್ತಿಯಲ್ಲಿ ಗುರುತಿಸಿಕೊಂಡಿದೆ. ಆದ್ದರಿಂದ ಸೇನಾ ದಿನಾಚರಣೆ ಎಂದರೆ ಎಲ್ಲರಿಗೂ ಪುಳಕ. ಈ ವರ್ಷ ಬೆಂಗಳೂರಿನಲ್ಲಿ ಭಾರತೀಯ ಸೇನಾ ದಿನ ಆಯೋಜನೆಗೊಳ್ಳುತ್ತಿದೆ ಎನ್ನುವುದೇ ಹೆಮ್ಮೆಯ ವಿಷಯ.

     ಪ್ರತೀ ವರ್ಷವೂ ಜನವರಿ 15ರಂದು ಆಯೋಜನೆಗೊಳ್ಳುವ ಭಾರತೀಯ ಸೇನಾ ದಿನಾಚರಣೆ ಈ ವರ್ಷ ಇದೇ ಮೊದಲ ಬಾರಿಗೆ ಬೆಂಗಳೂರಿನಲ್ಲಿ ಆಯೋಜನೆಗೊಳ್ಳಲಿದೆ. ವಿಶೇಷವಾಗಿ, ಈ ವರ್ಷ ಭಾರತೀಯ ಸೇನಾ ದಿನಾಚರಣೆಯ 75ನೇ ವರ್ಷಾಚರಣೆ ರಾಷ್ಟ್ರ ರಾಜಧಾನಿ ದಿಲ್ಲಿಯಿಂದ ಹೊರಗಡೆ ನಡೆಯುತ್ತಿದೆ.

       ಕರ್ನಾಟಕ ಮತ್ತು ಕೇರಳ ಉಪ ಪ್ರಾಂತದ ಜನರಲ್ ಆಫೀಸರ್ ಕಮಾಂಡಿಂಗ್ (ಜಿಒಸಿ) ಆಗಿರುವ ಮೇಜರ್ ಜನರಲ್ ರವಿ ಮುರುಗನ್ ಅವರು ಮದ್ರಾಸ್ ಇಂಜಿನಿಯರಿಂಗ್ ಗ್ರೂಪ್ (ಎಂಇಜಿ) ಕೇಂದ್ರ ಬೆಂಗಳೂರಿನಲ್ಲಿ ಮಾತನಾಡುತ್ತಾ, ಈ ಸಮಾರಂಭದಲ್ಲಿ ಕೇಂದ್ರ ರಕ್ಷಣಾ ಸಚಿವರಾದ ರಾಜನಾಥ್ ಸಿಂಗ್ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ ಎಂದಿದ್ದಾರೆ. ಎಂಇಜಿ ಕೇಂದ್ರ ಸೇನಾ ದಿನಾಚರಣೆಯ ಪರೇಡಿನ ಸ್ಥಳವಾಗಿರಲಿದ್ದು, ಪೂರ್ಣ ಸಾಮರ್ಥ್ಯದಲ್ಲಿ ಕಾರ್ಯಾಚರಿಸಲಿದೆ ಎನ್ನುತ್ತಾರವರು.

      ಪಥ ಸಂಚಲನದಲ್ಲಿ ಒಟ್ಟು ಎಂಟು ವಿಭಾಗಗಳಿರಲಿದ್ದು, ಅವುಗಳಲ್ಲಿ ಒಂದು ಆರ್ಮಿ ಸರ್ವಿಸ್ ಕಾರ್ಪ್ಸ್ನ ಅಶ್ವದಳವೂ ಸೇರಿದೆ. ಅದರೊಡನೆ, ಐದು ರೆಜಿಮೆಂಟುಗಳ ಬ್ರಾಸ್ ಬ್ಯಾಂಡ್ಗಳ ಸಮ್ಮಿಲಿತವಾದ ಮಿಲಿಟರಿ ಬ್ಯಾಂಡ್ ಸಹ ಕಾರ್ಯಾಚರಿಸಲಿದೆ. ಈ ಎಂಟರಲ್ಲಿ ಪ್ರತಿಯೊಂದು ವಿಭಾಗವೂ ಬೇರೆ ಬೇರೆ ರೆಜಿಮೆಂಟ್ಗಳನ್ನು ಪ್ರತಿನಿಧಿಸಲಿದೆ. ಪ್ರತಿಯೊಂದು ರೆಜಿಮೆಂಟಿಗೂ ಅದರದೇ ಆದ ಸುಪ್ರಸಿದ್ಧ ಇತಿಹಾಸ ಮತ್ತು ಪರಂಪರೆಗಳಿವೆ. ಸೇನಾ ದಿನದ ಪಥಸಂಚಲನಕ್ಕೆ ಬೆಂಬಲವಾಗಿ, ಆರ್ಮಿ ಏವಿಯೇಷನ್ನ ಧ್ರುವ್ ಹಾಗೂ ರುದ್ರ ಹೆಲಿಕಾಪ್ಟರ್ಗಳು ಫ್ಲೈ ಬೈ ಹಾರಾಟ ಪ್ರದರ್ಶಿಸಲಿವೆ.


ಸೇನಾ ದಿನಾಚರಣೆಯ ಬಗ್ಗೆ ಒಂದಿಷ್ಟು...

       ಜನವರಿ 15, 1949ರಂದು ಫೀಲ್ಡ್ ಮಾರ್ಷಲ್ ಕೊಡಂದೇರ ಎಂ. ಕಾರ್ಯಪ್ಪ ಅವರು ಕೊನೆಯ ಬ್ರಿಟಿಷ್ ಜನರಲ್ ಫ್ರಾನ್ಸಿಸ್ ಬುಚರ್ ಅವರಿಂದ ಸೇನಾ ಮಹಾದಂಡನಾಯಕರಾಗಿ ಅಧಿಕಾರ ಸ್ವೀಕರಿಸಿದರು. ಈ ಭಡ್ತಿಯ ಬಳಿಕ ಫೀಲ್ಡ್ ಮಾರ್ಷಲ್ ಕಾರ್ಯಪ್ಪಅವರು ಭಾರತೀಯ ಸೇನೆಯ ಪ್ರಥಮ ಕಮಾಂಡರ್ ಇನ್ ಚೀಫ್ ಆಗಿ ನೇಮಕಗೊಂಡರು. ಈ ದಿನವನ್ನು ಸ್ಮರಿಸಲು ಪ್ರತಿವರ್ಷ ಜನವರಿ 15ರಂದು ಸೇನಾ ದಿನವನ್ನು ಆಚರಿಸಲಾಗುತ್ತದೆ.

ಪಥ ಸಂಚಲನ, ಪದಕ ಪ್ರದಾನ, ಮಿಲಿಟರಿ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಈ ದಿನ ಹೊಸದಿಲ್ಲಿ ಮತ್ತು ಇತರ ಆರ್ಮಿ ಕಮಾಂಡ್ ಮುಖ್ಯ ಕಚೇರಿಗಳಲ್ಲಿ ನಡೆಯುತ್ತವೆ.

1947ರಲ್ಲಿ ಭಾರತ ಸಾರ್ವಭೌಮತ್ವವನ್ನು ಪಡೆದುಕೊಂಡಿತು. ಬಹುತೇಕ ಎರಡು ಶತಮಾನಗಳ ಬ್ರಿಟಿಷ್ ಆಡಳಿತದಿಂದ ಭಾರತ ಮುಕ್ತವಾಯಿತು. ಆ ಸಂದರ್ಭದಲ್ಲಿ ದೇಶ ವಿಭಜನೆ ನಡೆದು, ಪಾಕಿಸ್ತಾನದಿಂದ ಸಾಕಷ್ಟು ನಿರಾಶ್ರಿತರು ಭಾರತಕ್ಕೆ ಬರುತ್ತಿದ್ದರು. ಆಗ ದೇಶಾದ್ಯಂತ ಅಸ್ಥಿರತೆ ಎದುರಾಗಿತ್ತು.

ಆಡಳಿತ ಅಸ್ಥಿರತೆಯ ಕಾರಣದಿಂದ ಪರಿಸ್ಥಿತಿಯನ್ನು ನಿಯಂತ್ರಿಸಲು, ಶಾಂತಿ ಸ್ಥಾಪಿಸಲು ಸೇನೆ ಮಧ್ಯ ಪ್ರವೇಶಿಸಬೇಕಾಗಿತ್ತು. ಈ ಸಂದರ್ಭದಲ್ಲಿ ಕೆ.ಎಂ. ಕಾರ್ಯಪ್ಪನವರನ್ನು ಸೇನಾ ಮುಖ್ಯಸ್ಥರಾಗಿ ನೇಮಿಸಲಾಯಿತು.


ಕಾರ್ಯಪ್ಪನವರು 1899ರಲ್ಲಿ ಕರ್ನಾಟಕದ ಕೊಡಗಿನಲ್ಲಿ ಜನಿಸಿದರು. ಅವರ ತಂದೆ ಮಾದಪ್ಪಕಂದಾಯ ಇಲಾಖೆಯಲ್ಲಿ ಅಧಿಕಾರಿಯಾಗಿದ್ದರು. ಸ್ಯಾಮ್ ಮಾಣಿಕ್ ಶಾ ಅವರೊಡನೆ ಐದು ಸ್ಟಾರ್ಗಳ ಫೀಲ್ಡ್ ಮಾರ್ಷಲ್ ಹುದ್ದೆಗೆ ನೇಮಕಗೊಂಡರು. ಅವರು ಭಾರತದ ಪ್ರಥಮ ಸೇನಾ ಮಹಾದಂಡನಾಯಕರಾಗಿ ನೇಮಕಗೊಳ್ಳುವ ಮತ್ತು ಫೈವ್ ಸ್ಟಾರ್ ಜನರಲ್ ಆಗಿರುವುದನ್ನು ಹೊರತುಪಡಿಸಿ, ಅವರು ಭಾರತೀಯ ಸೇನೆ ಆರಂಭಗೊಂಡ ಅವಧಿಯಲ್ಲಿ ಸೇರ್ಪಡೆಗೊಂಡಿದ್ದವರಲ್ಲಿ ಒಬ್ಬರಾಗಿದ್ದರು.


ಫೀಲ್ಡ್ ಮಾರ್ಷಲ್ ಕಾರ್ಯಪ್ಪ

ಫೀಲ್ಡ್ ಮಾರ್ಷಲ್ ಕಾರ್ಯಪ್ಪನವರು ಪದವಿ ಗಳಿಸಿದ ಬಳಿಕ ಡಿಸೆಂಬರ್ 1, 1919ರಂದು ತಾತ್ಕಾಲಿಕ ಸೇನಾ ಸೇರ್ಪಡೆ ಪಡೆದುಕೊಂಡರು. ಅವರನ್ನು ಸೇನೆಗೆ ಸೆಪ್ಟಂಬರ್ 9, 1922ರಂದು, ಜುಲೈ 17, 1920ರಿಂದ ಜಾರಿಗೆ ಬರುವಂತೆ ಶಾಶ್ವತ ಸೇರ್ಪಡೆಗೊಳಿಸಲಾಯಿತು. ಇದನ್ನು ಫೀಲ್ಡ್ ಮಾರ್ಷಲ್ ಕಾರ್ಯಪ್ಪಅವರು ತನ್ನೊಡನೆ ಜುಲೈ 16, 1920ರಂದು ಪದವಿ ಪಡೆದ ಬ್ರಿಟಿಷ್ ಅಧಿಕಾರಿಗಳಿಂದ ಕೆಳಗಿನ ರ್ಯಾಂಕಿಂಗ್ ಪಡೆಯುವಂತೆ ಮಾಡುವ ಉದ್ದೇಶದಿಂದ ಮಾಡಲಾಗಿತ್ತು. ಮೇ 1920ರಲ್ಲಿ ಕಾರ್ಯಪ್ಪನವರನ್ನು 2/125 ನೇಪಿಯರ್ ರೈಫಲ್ಸ್ ಗೆ ವರ್ಗಾಯಿಸಲಾಯಿತು. ಆ ಪಡೆಯನ್ನು ಮೆಸಪೊಟಾಮಿಯಾಗೆ (ಇಂದಿನ ಇರಾಕ್) ಸ್ಥಳಾಂತರಿಸಲಾಯಿತು. ಫೀಲ್ಡ್ ಮಾರ್ಷಲ್ ಕಾರ್ಯಪ್ಪನವರು ಭಾರತಕ್ಕೆ ಬಂದ ಬಳಿಕ ಜೂನ್ 1922ರಲ್ಲಿ 7ನೇ ಪ್ರಿನ್ಸ್ ಆಫ್ ವೇಲ್ಸ್ ಡೋಗ್ರಾ ರೆಜಿಮೆಂಟಿಗೆ ನೇಮಿಸಲಾಯಿತು. ಜೂನ್ 1923ರಲ್ಲಿ ಅವರು 1/7 ರಜಪೂತ್ ರೆಜಿಮೆಂಟಿಗೆ ನೇಮಕಗೊಂಡರು. ಅದು ಅವರ ಶಾಶ್ವತ ರೆಜಿಮೆಂಟ್ ಆಯಿತು.

1925ರಲ್ಲಿ ಕಾರ್ಯಪ್ಪನವರು ಯುರೋಪ್, ಅಮೆರಿಕ, ಜಪಾನ್, ಚೀನಾ ಹಾಗೂ ಇತರ ದೇಶಗಳ ಪ್ರವಾಸ ನಡೆಸಿದರು. ಅವರು ಈ ಪ್ರವಾಸದಲ್ಲಿ ಹಲವು ದೇಶಗಳ ಸೈನಿಕರು ಮತ್ತು ನಾಗರಿಕರನ್ನು ಭೇಟಿ ಮಾಡಿದ್ದು, ಅವರಿಗೆ ಹೊಸ ಜ್ಞಾನ ನೀಡಿತ್ತು. ಅವರು ಫತೇಗರ್ನಲ್ಲಿ ಕಾರ್ಯ ನಿರ್ವಹಿಸುವಾಗ ಓರ್ವ ಬ್ರಿಟಿಷ್ ಅಧಿಕಾರಿಯ ಪತ್ನಿ ಅವರಿಗೆ ‘ಕಿಪ್ಪರ್’ ಎಂಬ ಅಡ್ಡ ಹೆಸರು ನೀಡಿದರು. 1927ರಲ್ಲಿ ಅವರು ಕ್ಯಾಪ್ಟನ್ ಆಗಿ ಪದೋನ್ನತಿ ಪಡೆದರೂ, ಅದನ್ನು ಸಾರ್ವಜನಿಕವಾಗಿ 1931ರ ತನಕ ಪ್ರಕಟಿಸಿರಲಿಲ್ಲ.

1947ರಲ್ಲಿ ಕಾರ್ಯಪ್ಪ ಯುನೈಟೆಡ್ ಕಿಂಗ್ಡಮ್ನ ಇಂಪೀರಿಯಲ್ ಡಿಫೆನ್ಸ್ ಕಾಲೇಜ್ನಲ್ಲಿ ತರಬೇತಿಗೆ ದಾಖಲಾದ ಪ್ರಥಮ ಭಾರತೀಯ ಎನಿಸಿಕೊಂಡರು. ಭಾರತ ಸ್ವತಂತ್ರಗೊಂಡ ಬಳಿಕ, ಕಾರ್ಯಪ್ಪನವರನ್ನು ಮೇಜರ್ ಜನರಲ್ ರ್ಯಾಂಕ್ನೊಂದಿಗೆ ಡೆಪ್ಯುಟಿ ಚೀಫ್ ಆಫ್ ಜನರಲ್ ಸ್ಟಾಫ್ ಆಗಿ ನೇಮಿಸಲಾಯಿತು. ಪಾಕಿಸ್ತಾನದೊಡನೆ ಯುದ್ಧ ಆರಂಭವಾದ ಬಳಿಕ, ಅವರನ್ನು ಈಸ್ಟರ್ನ್ ಆರ್ಮಿ ಕಮಾಂಡರ್ ಹಾಗೂ ಜನರಲ್ ಆಫೀಸರ್ ಕಮಾಂಡಿಂಗ್ ಇನ್ ಚೀಫ್, ವೆಸ್ಟರ್ನ್ ಕಮಾಂಡ್ ಆಗಿ ಭಡ್ತಿಗೊಳಿಸಲಾಯಿತು.

1947ರ ಭಾರತ ಪಾಕ್ ಯುದ್ಧದಲ್ಲಿ ಕಾರ್ಯಪ್ಪನವರು ಭಾರತದ ಪಶ್ಚಿಮ ಪಡೆಗಳನ್ನು ಮುನ್ನಡೆಸಿದರು. ಬಳಿಕ ಅವರನ್ನು ಸೇನಾ ಮುಖ್ಯಸ್ಥರಾಗಿ ನೇಮಿಸಲಾಯಿತು. ಅವರು ಕಾರ್ಗಿಲ್ ಪ್ರಾಂತವನ್ನು ಮರುವಶಪಡಿಸಿಕೊಳ್ಳುವಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ್ದರು. ಅದೊಂದು ಮಹತ್ತರ ಸಾಧನೆಯಾಗಿತ್ತು.

ಕಾರ್ಯಪ್ಪನವರು ಕಮಾಂಡರ್ ಇನ್ ಚೀಫ್ ಹುದ್ದೆಯಲ್ಲಿ ನಾಲ್ಕು ವರ್ಷಗಳ ಕಾಲ ಸೇವೆ ಸಲ್ಲಿಸಿ, ಜನವರಿ 14, 1953ರಂದು ನಿವೃತ್ತರಾದರು. ಅವರು ನಿವೃತ್ತಿ ಪಡೆಯುವ ಮುನ್ನ, ಅವರ ಮೊದಲ ರೆಜಿಮೆಂಟ್ ಆಗಿದ್ದ ರಜಪೂತ್ ರೆಜಿಮೆಂಟಲ್ ಕೇಂದ್ರಕ್ಕೆ ಬೀಳ್ಕೊಡುಗೆ ಭೇಟಿ ನೀಡಿದರು. ಅವರು ನಿವೃತ್ತರಾದ ಬಳಿಕ 1956ರ ತನಕ ಆಸ್ಟ್ರೇಲಿಯಾ ಹಾಗೂ ನ್ಯೂಝಿಲ್ಯಾಂಡ್ ಗಳಲ್ಲಿ ಭಾರತೀಯ ಹೈಕಮಿಷನರ್ ಆಗಿ ಕಾರ್ಯನಿರ್ವಹಿಸಿದರು.


ವೈಯಕ್ತಿಕ ಜೀವನ

ಮಾರ್ಚ್ 1937ರಲ್ಲಿ ಕಾರ್ಯಪ್ಪನವರು ಅರಣ್ಯ ಇಲಾಖೆಯ ಅಧಿಕಾರಿಯೊಬ್ಬರ ಮಗಳಾದ ಮುತ್ತು ಮಾಚಯ್ಯನವರನ್ನು ವಿವಾಹವಾದರು. ಅವರಿಗೆ ಒಬ್ಬ ಮಗ ಮತ್ತು ಒಬ್ಬಳು ಮಗಳಿದ್ದು, ಅವರ ಮಗ ಏರ್ ಮಾರ್ಷಲ್ ಕೆ.ಸಿ. ನಂದಾ ಕಾರ್ಯಪ್ಪಸಹ ಭಾರತೀಯ ವಾಯುಪಡೆಯ ನಿವೃತ್ತ ಅಧಿಕಾರಿಯಾಗಿದ್ದರು.

ಅವರಿಗೆ ಗೌರವಾರ್ಥವಾಗಿ ‘ಆರ್ಡರ್ ಆಫ್ ದ ಕಮಾಂಡರ್ ಇನ್ ಚೀಫ್ ಆಫ್ ದ ಲೀಜನ್ ಆಫ್ ಮೆರಿಟ್’ ನೀಡಲಾಯಿತು. 1993ನೇ ಇಸವಿಯಲ್ಲಿ, ತನ್ನ 94ನೇ ವಯಸ್ಸಿನಲ್ಲಿ ಕಾರ್ಯಪ್ಪನವರು ಬೆಂಗಳೂರಿನಲ್ಲಿ ವಿಧಿವಶರಾದರು. ಶಿಸ್ತಿನ ವ್ಯಕ್ತಿಯಾಗಿದ್ದ ಅವರ ಕೊಡುಗೆಗಳನ್ನು ಸೇನಾ ದಿನಾಚರಣೆಯ ಮೂಲಕ ನೆನಪಿಸಿ, ಗೌರವಿಸಲಾಗುತ್ತದೆ. ಅವರು ತನ್ನ ದೇಶಭಕ್ತಿಯ ಕಾರ್ಯಗಳಿಂದ ತಲೆಮಾರುಗಳ ಕಾಲ ಆದರ್ಶವಾಗಿ ಉಳಿದಿದ್ದಾರೆ.

ಭ್ರೂಣಹತ್ಯೆ ಪ್ರಕರಣ ದಲ್ಲಿ ಇಬ್ಬರು ಅಧಿಕಾರಿಗಳ ತಲೆದಂಡ: ಮೈಸೂರು DHO THO ಅಮಾನತು

Posted by Vidyamaana on 2023-12-02 08:23:14 |

Share: | | | | |


ಭ್ರೂಣಹತ್ಯೆ ಪ್ರಕರಣ ದಲ್ಲಿ ಇಬ್ಬರು ಅಧಿಕಾರಿಗಳ ತಲೆದಂಡ: ಮೈಸೂರು DHO THO ಅಮಾನತು

ಬೆಂಗಳೂರು : ಮೈಸೂರು ಜಿಲ್ಲೆಯಲ್ಲಿ ನಡೆದಿದ್ದಂತ ಭ್ರೂಣ ಹತ್ಯೆ ಪ್ರಕರಣ ಸಂಬಂಧ, ಇಬ್ಬರು ಅಧಿಕಾರಿಗಳ ತಲೆದಂಡವಾಗಿದೆ. ಮೈಸೂರು ಜಿಲ್ಲೆಯ ಈ ಹಿಂದಿನ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಹಾಗೂ ತಾಲೂಕು ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ.ಈ ಕುರಿತಂತೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತ ರಂದೀಪ್ ಅವರು ಆದೇಶ ಹೊರಡಿಸಿದ್ದು, ಮೈಸೂರು ಜಿಲ್ಲೆಯ ಹಿಂದಿನ ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ರವಿ.ಪಿ ಹಾಗೂ ಹಾಲಿ ಮೈಸೂರು ತಾಲೂಕಿನ ತಾಲೂಕು ಆರೋಗ್ಯ ಅಧಿಕಾರಿ ಡಾ.ರಾಜೇಶ್ವರಿ.ಎಸ್ ಅವರುಗಳ ವಿರುದ್ಧ ಕರ್ತವ್ಯಲೋಪ ಆರೋಪದ ಬಗ್ಗೆ ಶಿಸ್ತುಕ್ರಮ ಬಾಕಿ ಇರಿಸಿ, ಈ ತಕ್ಷಣದಿಂದ ಜಾರಿಗೆ ಬರುವಂತೆ ಸರ್ಕಾರಿ ಸೇವೆಯಿಂದ ಅಮಾತನುಗೊಳಿಸಿ ಆದೇಶಿಸಿದ್ದಾರೆ.


ಇನ್ನೂ ಡಾ.ರವಿ. ಪಿ ಹಾಗೂ ಡಾ.ರಾಜೇಶ್ವರಿ.ಪಿ ಇವರುಗಳಿಗೆ ಅಮಾನತ್ತಿನ ಅವಧಿಯಲ್ಲಿ ಜೀವನಾಂಶ ಭತ್ಯೆಯನ್ನು ಪಡೆಯುವ ಸಲುವಾಗಿ ಲೀನ್ ಅನ್ನು ರಾಮನಗ ಜಿಲ್ಲಾ ಆಸ್ಪತ್ರೆ ಇಲ್ಲಿನ ಖಾಲಿ ಇರುವ ಹುದ್ದೆಗೆ ಸ್ಥಳಾಂತರಿಸಲಾಗಿದೆ ಎಂದು ಆದೇಶದಲ್ಲಿ ಹೇಳಿದ್ದಾರೆ. ಈ ಮೂಲಕ ಭ್ರೂಣಹತ್ಯೆ ಪ್ರಕರಣದಲ್ಲಿ ಇಬ್ಬರು ಅಧಿಕಾರಿಗಳ ತಲೆದಂಡವಾಗಿದೆ.



Leave a Comment: