ಪರೀಕ್ಷೆಯಲ್ಲಿ ಗೈಡ್ ಇಟ್ಟುಕೊಂಡು ಸಾಮೂಹಿಕ ನಕಲು ಮಾಡಿದ ವಿದ್ಯಾರ್ಥಿಗಳು, ವಿಡಿಯೋ ವೈರಲ್

ಸುದ್ದಿಗಳು News

Posted by vidyamaana on 2024-07-08 08:41:02 |

Share: | | | | |


ಪರೀಕ್ಷೆಯಲ್ಲಿ ಗೈಡ್ ಇಟ್ಟುಕೊಂಡು ಸಾಮೂಹಿಕ ನಕಲು ಮಾಡಿದ ವಿದ್ಯಾರ್ಥಿಗಳು, ವಿಡಿಯೋ ವೈರಲ್

ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಗೈಡ್​ ಹಾಗೂ ಪುಸ್ತಕಗಳನ್ನಿಟ್ಟುಕೊಂಡು ಸಾಮೂಹಿಕ ನಕಲು ಮಾಡಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಕೇವಲ ಮಕ್ಕಳಲ್ಲ ಶಿಕ್ಷಕರೂ ಅವರಿಗೆ ನೆರವಾಗುತ್ತಿರುವುದು ಸಿಸಿಟಿವಿ ದೃಶ್ಯದಲ್ಲಿ ಕಂಡುಬಂದಿದೆ. ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಗೈಡ್​ ಇಟ್ಟುಕೊಂಡು ಸಾಮೂಹಿಕ ನಕಲು(Mass Cheating) ಮಾಡಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.

ಘಟನೆ ಸಿಸಿಟಿವಿಯಲ್ಲಿ ಬಯಲಾಗಿದೆ. ಜುಲೈ 5 ರಂದು ಪರೀಕ್ಷಾ ಕೇಂದ್ರದಲ್ಲಿ ಸಾಮೂಹಿಕ ನಕಲು ಮಾಡಿರುವ ಬಗ್ಗೆ ಮಾಹಿತಿ ಸಿಕ್ಕಿತ್ತು ಎಂದು ಎಸ್ ಡಿಎಂ ವಿಜಯ್ ಸಿಂಗ್ ಮಾಹಿತಿ ನೀಡಿದ್ದಾರೆ. ಅವರು ತನಿಖೆಗಾಗಿ ಸ್ಥಳಕ್ಕೆ ಬಂದರು ಆದರೆ ಅಲ್ಲಿ ಎಲ್ಲವೂ ಸಾಮಾನ್ಯವಾಗಿತ್ತು. ಇದಾದ ಬಳಿಕ ವಿಡಿಯೋವೊಂದು ಹೊರಬಿದ್ದಿದ್ದು, ನಂತರ ವಿಷಯ ಬೆಳಕಿಗೆ ಬಂದಿದೆ.

ಪರೀಕ್ಷಾ ಪತ್ರಿಕೆಗಳಲ್ಲಿನ ಅಕ್ರಮಗಳು ಮತ್ತು ಸೋರಿಕೆಗಳ ಬಗ್ಗೆ ದೇಶದಲ್ಲಿ ಕೋಲಾಹಲವಿದೆ, ಈ ನಡುವೆ ಈ ಘಟನೆ ಮತ್ತಷ್ಟು ಆಕ್ರೋಶಕ್ಕೆ ಕಾರಣವಾಗಿದೆ. ತರಗತಿ ಕೊಠಡಿಯಲ್ಲಿ ಪರೀಕ್ಷೆ ನಡೆಯುವಾಗ ಹಲವು ಮಕ್ಕಳು ಗುಂಪು ಕಟ್ಟಿಕೊಂಡು ಬಹಿರಂಗವಾಗಿ ನಕಲು ಮಾಡುತ್ತಿದ್ದರು. ಅಲ್ಲಿ ಶಿಕ್ಷಕರೂ ಇದ್ದರು. ಆದರೆ ನಕಲು ನಿಲ್ಲಿಸುವ ಬದಲು ವಿದ್ಯಾರ್ಥಿಗಳಿಗೆ ಸಹಾಯ ಮಾಡುತ್ತಿರುವುದು ಕಂಡುಬಂದಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.


ಬಿಎ ಮತ್ತು ಬಿಎಸ್ಸಿ ಪರೀಕ್ಷೆಗಳು ಅಲ್ಲಿ ನಡೆಯುತ್ತಿತ್ತು, ಈ ಪರೀಕ್ಷೆಗಳ ಕೇಂದ್ರವನ್ನು ದಾಮೋಹ್ ಪ್ರದೇಶದ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯಲ್ಲಿ ನಡೆಸಲಾಗಿತ್ತು. ಸಿಸಿಟಿವಿ ದೃಶ್ಯಾವಳಿಗಳು ಅದೇ ಶಾಲೆಯ ತರಗತಿ ಕೊಠಡಿಯಲ್ಲಿದೆ ಎಂದು ಹೇಳಲಾಗಿದೆ.

ವಿದ್ಯಾರ್ಥಿಗಳು ಗೈಡ್​ ಹಾಗೂ ಪುಸ್ತಕಗಳನ್ನು ತೆರೆದು ನಕಲು ಮಾಡುತ್ತಿರುವುದನ್ನು ಕಾಣಬಹುದು. ಈ ಬಗ್ಗೆ ಎಸ್‌ಡಿಎಂ ಭಿಂಡ್ ಕಲೆಕ್ಟರ್ ಸಂದೀಪ್ ಶ್ರೀವಾಸ್ತವ ಅವರಿಗೆ ಪತ್ರ ಬರೆದಿದ್ದಾರೆ. ಕೇಂದ್ರದ ಅಧ್ಯಕ್ಷರು ಹಾಗೂ ಪ್ರಾಂಶುಪಾಲರ ಶಾಮೀಲಾಗಿರುವುದನ್ನು ಇದರಲ್ಲಿ ಉಲ್ಲೇಖಿಸಲಾಗಿದೆ. ಅಲ್ಲದೆ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವ ಬಗ್ಗೆಯೂ ಮಾತನಾಡಿದರು. ಇದೀಗ ಆಲಂಪುರದ ಹೈಯರ್ ಸೆಕೆಂಡರಿ ಶಾಲೆಯನ್ನು ಪರೀಕ್ಷಾ ಕೇಂದ್ರವನ್ನಾಗಿ ಮಾಡಲಾಗಿದೆ.

ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ

ದುರ್ಗಾಪ್ರಸಾದ್ ಸರಾಫ್, ಡಾ.ಬಿ.ಆರ್.ಅಂಬೇಡ್ಕರ್ ಮತ್ತು ಸ್ವಯಂ ಪ್ರಭಾ ಕಾಲೇಜಿನ ವಿದ್ಯಾರ್ಥಿಗಳೂ ದಾಮೋಹ್ ಕೇಂದ್ರದಲ್ಲಿ ನಕಲು ಮಾಡುತ್ತಿದ್ದು ಸಿಕ್ಕಿಬಿದ್ದಿದ್ದಾರೆ ಎಂದು ವರದಿಯಾಗಿದೆ.

 Share: | | | | |


ಪುತ್ತೂರಿನಲ್ಲಿ ಫೈರ್ ಬ್ರಾಂಡ್ ನಾಯಕ ಯತ್ನಾಳ್ ಗೆ ಸ್ವಾಗತ

Posted by Vidyamaana on 2023-05-19 05:55:31 |

Share: | | | | |


ಪುತ್ತೂರಿನಲ್ಲಿ ಫೈರ್ ಬ್ರಾಂಡ್ ನಾಯಕ ಯತ್ನಾಳ್ ಗೆ ಸ್ವಾಗತ

ಪುತ್ತೂರು: ಬಿಜೆಪಿ ಫೈರ್ ಬ್ರಾಂಡ್ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಪುತ್ತೂರಿನಲ್ಲಿ ಸ್ವಾಗತ ಕೋರಲಾಯಿತು.

ಪುತ್ತೂರಿಗೆ ಆಗಮಿಸಿದ ಯತ್ನಾಳ್ ಅವರು ನೇರವಾಗಿ ಬಿಜೆಪಿ ಕಚೇರಿಗೆ ತೆರಳಿದರು. ಬಳಿಕ ಪಂಚವಟಿಗೆ ಭೇಟಿ ನೀಡಿದರು.

ಮೆಡಿಕಲ್ ಕಾಲೇಜು ಸೀಟ್ ಕೊಡಿಸುವುದಾಗಿ ಹೇಳಿ ವಂಚನೆ

Posted by Vidyamaana on 2023-11-01 17:08:34 |

Share: | | | | |


ಮೆಡಿಕಲ್ ಕಾಲೇಜು ಸೀಟ್ ಕೊಡಿಸುವುದಾಗಿ ಹೇಳಿ ವಂಚನೆ

ಬೆಂಗಳೂರು, ನ 01: ಮೆಡಿಕಲ್‌ ಸೀಟು ಆಕಾಂಕ್ಷಿಗಳಿಗೆ ಅತೀ ಕಡಿಮೆ ಮೊತ್ತದಲ್ಲಿ ನೆರೆ ರಾಜ್ಯದಲ್ಲಿ ಸೀಟ್ ಕೊಡಿಸುವುದಾಗಿ ಹೇಳಿ ವಂಚಿಸಿದ್ದ ಹೈದ್ರಾಬಾದ್‌ ಮೂಲದ ಆರೋಪಿ ಈಗ ಸಂಜಯನಗರ ಪೊಲೀಸರ ಬಲೆಗೆ ಬಿದ್ದಿದ್ದಾನೆ.


ಶರತ್‌ಗೌಡ್‌(45) ಬಂಧಿತ ಆರೋಪಿಯಾಗಿದ್ದು ಪೊಲೀಸರು ಸುಮಾರು 47 ಲಕ್ಷ ರೂ. ನಗದು ವಶಕ್ಕೆ ಪಡೆದುಕೊಂಡಿದ್ದಾರೆ. ಆರೋಪಿ ಸಂಜಯನಗರದ ನ್ಯೂಬಿಇಎಲ್‌ ರಸ್ತೆಯಲ್ಲಿ "ನೆಕ್ಸಸ್‌ ಎಡು" ಎಂಬ ಸಂಸ್ಥೆ ತೆರೆದು ವಿದ್ಯಾರ್ಥಿಗಳನ್ನು ವಂಚಿಸುವ ಕಾರ್ಯದಲ್ಲಿ ತೊಡಗಿಕೊಂಡಿದ್ದ. 


ಆ್ಯಪ್‌ನಲ್ಲಿ ಅಭ್ಯರ್ಥಿಗಳ ಪಟ್ಟಿ:


ಹೈದ್ರಾಬಾದ್‌ ಮೂಲದ ಶರತ್‌ಗೌಡ ಎಂಬಿಎ ಪದವೀಧರನಾಗಿದ್ದು, ಎರಡು ವರ್ಷಗಳ ಹಿಂದೆ ಬೆಂಗಳೂರಿಗೆ ಬಂದಿದ್ದಾನೆ. ನ್ಯೂಬಿಇಎಲ್‌ ರಸ್ತೆಯಲ್ಲಿ ನೆಕ್ಸಸ್‌ ಎಡು ಎಂಬ ಸಂಸ್ಥೆ ನಡೆಸುತ್ತಿದ್ದ. ಅದರಲ್ಲಿ ಕೆಲ ಯುವತಿಯರಿಗೆ ಉದ್ಯೋಗ ನೀಡಿದ್ದ. ಏಜೆನ್ಸಿಯೊಂದು ಸಿದ್ಧಪಡಿಸಿರುವ ಆ್ಯಪ್‌ನಲ್ಲಿ ರಾಜ್ಯ ಹಾಗೂ ನೆರೆರಾಜ್ಯದ ವೈದ್ಯಕೀಯ ಸೀಟು ಆಕಾಂಕ್ಷಿಗಳ ಪಟ್ಟಿ ದಾಖಲಾಗಿತ್ತು.


ಇತ್ತೀಚೆಗೆ ತಿಮ್ಮೇಗೌಡ ಎಂಬವರ ಪುತ್ರನಿಗೆ ಕೇರಳದ ಪಿ.ಕೆ.ದಾಸ್‌ ಇನ್‌ಸ್ಟಿಟ್ಯೂಟ್‌ ಆಫ್ ಮೆಡಿಕಲ್‌ಸೈನ್ಸ್‌ನಲ್ಲಿ ಸೀಟು ಕೊಡಿಸುವುದಾಗಿ ನಂಬಿಸಿ 10 ಲಕ್ಷ ರೂ. ಪಡೆದುಕೊಂಡು ವಂಚಿಸಿದ್ದ. ಈ ಸಂಬಂಧ ತಿಮ್ಮೇಗೌಡ ನೀಡಿದ ದೂರಿನ ಮೇರೆಗೆ ವಂಚನೆ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ತೆಲಂಗಾಣದ ಹೈದರಾಬಾದ್‌ನ ಆತನ ಅಪಾರ್ಟ್‌ಮೆಂಟ್‌ನಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.


18 ಮಂದಿಗೆ 62 ಲಕ್ಷ ರೂ. ವಂಚನೆ:


ಆರೋಪಿ ವಿಚಾರಣೆ ವೇಳೆ ಇದುವರೆಗೂ 18 ಮಂದಿಗೆ 62 ಲಕ್ಷ ರೂ. ವಂಚಿಸಿದ್ದಾನೆ ಎಂಬುದು ಗೊತ್ತಾಗಿದೆ. ಈ ಪೈಕಿ 47.80 ಲಕ್ಷ ರೂ. ಜಪ್ತಿ ಮಾಡಲಾಗಿದೆ. ಬಾಕಿ ಹಣವನ್ನು ಆರೋಪಿ ಬಳಸಿಕೊಂಡಿದ್ದಾನೆ ಎಂದು ಪೊಲೀಸರು ಹೇಳಿದರು.


ಉತ್ತರವಿಭಾಗ ಡಿಸಿಪಿ ಸೈದುಲು ಅಡಾವತ್‌, ಜೆ.ಸಿ.ನಗರ ಉಪವಿಭಾಗದ ಎಸಿಪಿ ಮನೋಜ್‌ಕುಮಾರ್‌ ನೇತೃತ್ವದಲ್ಲಿ ಸಂಜಯನಗರ ಠಾಣೆ ಇನ್‌ಸ್ಪೆಕ್ಟರ್‌ ಭಾಗ್ಯವತಿ ಜೆ.ಬಂಟಿ ಮತ್ತು ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದಾರೆ.

ಸಬ್ ರಿಜಿಸ್ಟ್ರಾರ್ ಕಚೇರಿಯಿಂದ ಆಧಾರ್ ಸೋರಿಕೆ ಪ್ರಕರಣ

Posted by Vidyamaana on 2023-10-29 17:18:52 |

Share: | | | | |


ಸಬ್ ರಿಜಿಸ್ಟ್ರಾರ್ ಕಚೇರಿಯಿಂದ ಆಧಾರ್ ಸೋರಿಕೆ ಪ್ರಕರಣ

ಮಂಗಳೂರು, ಅ.29: ಸಬ್ ರಿಜಿಸ್ಟ್ರಾರ್ ಕಚೇರಿಯಿಂದ ಆಧಾರ್ ಕಾರ್ಡ್ ಮತ್ತು ಬೆರಳಚ್ಚು ನಕಲಿ ಮಾಡಿಸಿ ವಂಚನೆಗೈದ ಪ್ರಕರಣದಲ್ಲಿ ಮಂಗಳೂರು ಪೊಲೀಸರು ಮೂವರು ಬಿಹಾರ ಮೂಲದ ಆರೋಪಿಗಳನ್ನು ಬಂಧಿಸಿದ್ದಾರೆ.‌


ದೀಪಕ್ ಕುಮಾರ್ ಹೆಂಬ್ರಮ್ (33), ವಿವೇಕ್ ಕುಮಾರ್ ಬಿಶ್ವಾಸ್ (24) ಮತ್ತು ಮದನ್ ಕುಮಾರ್ (24) ಬಂಧಿತರು. ಇವರನ್ನು ಬಿಹಾರ ರಾಜ್ಯದ ಪೂರ್ನಿಯಾ ಜಿಲ್ಲೆಯಿಂದ ವಶಕ್ಕೆ ಪಡೆಯಲಾಗಿದೆ. ಮಂಗಳೂರು ಕಮಿಷನರ್ ಅನುಪಮ್ ಅಗರ್ವಾಲ್ ಸೂಚನೆಯಂತೆ ಸೈಬರ್ ಅಪರಾಧ ಬಗ್ಗೆ ವಿಶೇಷ ತನಿಖಾ ತಂಡ ರಚಿಸಲಾಗಿತ್ತು. ತಾಂತ್ರಿಕ ಸಾಕ್ಷ್ಯ ಆಧರಿಸಿ ಕಾರ್ಯಾಚರಣೆ ನಡೆಸಿದ ಪೊಲೀಸರು ಬಿಹಾರದಲ್ಲಿ ಅಡಗಿಕೊಂಡಿದ್ದ ಮೂವರನ್ನು ಬಂಧಿಸಿ ಕರೆತಂದಿದ್ದಾರೆ.‌


ಆರೋಪಿಗಳಿಗೆ ಸಂಬಂಧಪಟ್ಟ ಹತ್ತು ಬ್ಯಾಂಕ್ ಖಾತೆಗಳಿಂದ 3,60,242 ರುಪಾಯಿಗಳನ್ನು ಸೀಜ್ ಮಾಡಲಾಗಿದೆ. ಮೊಬೈಲ್ ಫೋನ್ ಗಳನ್ನು ವಶಕ್ಕೆ ಪಡೆದು ತಾಂತ್ರಿಕ ಸಾಕ್ಷ್ಯಗಳ ತನಿಖೆ ನಡೆಸಲಾಗುತ್ತಿದೆ. ಕರ್ನಾಟಕ ರಾಜ್ಯಕ್ಕೆ ಸಂಬಂಧಿಸಿ ಒಂದು ಸಾವಿರಕ್ಕೂ ಹೆಚ್ಚು ಪಿಡಿಎಫ್ ದಾಖಲಾತಿ ಪ್ರತಿಗಳನ್ನು ಹಾಗೂ ಆಂಧ್ರಪ್ರದೇಶ ಸೇರಿ ಇತರ ರಾಜ್ಯಗಳಿಗೆ ಸಂಬಂಧಪಟ್ಟ 300 ಕ್ಕೂ ಹೆಚ್ಚು ಪಿಡಿಎಫ್ ದಾಖಲಾತಿಗಳನ್ನು ವಶಕ್ಕೆ ಪಡೆಯಲಾಗಿದೆ. ಇವರು ಮಂಗಳೂರಿನಲ್ಲಿ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಕಾವೇರಿ 2.0 ವೆಬ್ ಸೈಟ್ ನಿಂದ ಹ್ಯಾಕ್ ಮಾಡಿ, ಗ್ರಾಹಕರ ಆಧಾರ್ ಮಾಹಿತಿಗಳನ್ನು ಸಂಗ್ರಹಿಸಿ ಅವರ ಬ್ಯಾಂಕ್ ಖಾತೆಗಳಿಂದ ಹಣವನ್ನು ಅಕ್ರಮವಾಗಿ ಪಡೆದುಕೊಂಡಿದ್ದರು.


ಈ ಬಗ್ಗೆ ಮಂಗಳೂರಿನ ಸೈಬರ್ ಠಾಣೆಯಲ್ಲಿ 15ಕ್ಕೂ ಹೆಚ್ಚು ಪ್ರಕರಣ ದಾಖಲಾಗಿದ್ದವು. ವಿಶೇಷ ತನಿಖೆಗಾಗಿ ಸಾರ್ವಜನಿಕರ ಒತ್ತಾಯ ಕೇಳಿಬರುತ್ತಿದ್ದಂತೆ ಪೊಲೀಸರು ಅಲರ್ಟ್ ಆಗಿದ್ದರು. ಇತ್ತೀಚೆಗೆ ಎಎಸ್ಐ ಒಬ್ಬರ ಖಾತೆಯಿಂದಲೂ ಸಬ್ ರಿಜಿಸ್ಟ್ರಾರ್ ಕಚೇರಿಯಿಂದಲೇ ಆಧಾರ್ ಮಾಹಿತಿ ಸೋರಿಕೆಯಾಗಿ ಹಣ ಕಳೆದುಹೋಗಿತ್ತು. ಇದೇ ರೀತಿಯ ಅಕ್ರಮ ಬೆಂಗಳೂರು, ಹೈದರಾಬಾದ್ ಸೇರಿದಂತೆ ಹಲವು ಕಡೆ ಆಗಿದ್ದು ಪ್ರಕರಣ ದಾಖಲಾಗಿತ್ತು.

ಸರಕಾರಿ ಹುದ್ದೆಗಳ ಪರೀಕ್ಷೆಗೆ ತರಬೇತಿ ಆರಂಭ

Posted by Vidyamaana on 2023-07-29 23:32:30 |

Share: | | | | |


ಸರಕಾರಿ ಹುದ್ದೆಗಳ ಪರೀಕ್ಷೆಗೆ ತರಬೇತಿ ಆರಂಭ

ಪುತ್ತೂರು: ಇಲ್ಲಿನ IRCMD ಸ್ಪರ್ಧಾತ್ಮಕ ತರಬೇತಿ ಸಂಸ್ಥೆಯಿಂದ ಮುಂಬರುವ ಸರಕಾರಿ ಹುದ್ದೆಗಳಿಗೆ ತರಬೇತಿ ಆರಂಭಗೊಂಡಿದೆ.

ಕೆ.ಡಿ. ಸಿಂಧೆ ವಿಜಯಪುರ ಇವರ ಸಾರಥ್ಯದಲ್ಲಿ FDA, SDA, PSI, PC, PDO ಮೊದಲಾದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನಡೆಯಲಿದೆ. 4 ತಿಂಗಳು ನಡೆಯುವ ಈ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಗೆ ಕೇವಲ 3500 ರೂ. ಶುಲ್ಕ ನಿಗದಿ ಪಡಿಸಲಾಗಿದೆ.

250ಕ್ಕೂ ಅಧಿಕ ಗಂಟೆಗಳ ಪೂರ್ವಭಾವಿ ಪರೀಕ್ಷೆಯ ತೀವ್ರ ಕಲಿಕಾ ತರಗತಿ, ವಾರದಲ್ಲಿ ಒಂದು ಬಾರಿ ಅಧಿಕಾರಿಗಳಿಂದ ಸ್ಪರ್ಧಾರ್ಥಿಗಳ ಜೊತೆ ಚರ್ಚೆ, ಅತೀ ಕಡಿಮೆ ಶುಲ್ಕದಲ್ಲಿ ಅತ್ಯುನ್ನತ ತರಬೇತಿ, 15 ದಿನಗಳಿಗೊಮ್ಮೆ ಮಾದರಿ ಪರೀಕ್ಷೆ, ಸಾಮಾನ್ಯ ಜ್ಞಾನ, ಸಾಮಾನ್ಯ ಕನ್ನಡ / ಇಂಗ್ಲೀಷ್ ಅಣುಕು ಪರೀಕ್ಷೆಗಳು, ಸುಸಜ್ಜತವಾದ ತರಗತಿ ಕೋಣೆಗಳನ್ನು IRCMD ಸಂಸ್ಥೆ ಹೊಂದಿದೆ.

PGCET, AMCAT ಮತ್ತು ಬ್ಯಾಂಕಿಂಗ್ ಪ್ರವೇಶ ಪರೀಕ್ಷೆಯಲ್ಲಿ ವರ್ಷದಲ್ಲಿ 200ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಜೀವನ ರೂಪಿಸಿ ಕೊಡುವಲ್ಲಿ ಯಶಸ್ವಿಯಾಗಿರುವ ಹೆಸರಾಂತ ಸಂಸ್ಥೆಯಾಗಿರುವ IRCMD, ಅನುಭವಿ ಮತ್ತು ತಜ್ಞ ವ್ಯಕ್ತಿಗಳಿಂದ ಬೋಧನೆಯ ಕೆಲಸ ನಿರ್ವಹಿಸುತ್ತಿದೆ. ಇದೀಗ ಮುಂಬರುವ ಸರಕಾರಿ ಹುದ್ದೆಗಳಿಗೆ ತರಬೇತಿ ನೀಡಿ, ಗ್ರಾಮೀಣ ಭಾಗದ ವಿದ್ಯಾರ್ಥಿಗಳನ್ನು ವಿವಿಧ ಹುದ್ದೆಗಳಿಗೆ ತಯಾರಿಗೊಳಿಸುವ ನಿಟ್ಟಿನಲ್ಲಿ IRCMD ಸಂಸ್ಥೆ ಯೋಜನೆ ರೂಪಿಸಿದೆ. ಈ ತರಬೇತಿಯ ಸದುಪಯೋಗ ಪಡೆಯಲಿಚ್ಚಿಸುವವರು 9632320477, 9945988118 ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ಶಾಂತಿ ಕದಡಿದರೆ ಬಜರಂಗದಳ ನಿಷೇಧ:ಪ್ರಿಯಾಂಕ್ ಖರ್ಗೆ

Posted by Vidyamaana on 2023-05-24 11:23:35 |

Share: | | | | |


ಶಾಂತಿ ಕದಡಿದರೆ ಬಜರಂಗದಳ  ನಿಷೇಧ:ಪ್ರಿಯಾಂಕ್ ಖರ್ಗೆ

ಬೆಂಗಳೂರು: ರಾಜ್ಯದಲ್ಲಿ ಶಾಂತಿ ಕದಡಿದರೆ ಬಜರಂಗದಳ ಮತ್ತು ಆರ್‌ಎಸ್‌ಎಸ್‌ನಂತಹ ಸಂಘಟನೆಗಳನ್ನು ತಮ್ಮ ಸರಕಾರ ನಿಷೇಧಿಸುತ್ತದೆ ಮತ್ತು ಬಿಜೆಪಿ ನಾಯಕತ್ವವು ಅದನ್ನು ಒಪ್ಪಿಕೊಳ್ಳಲು ಸಾಧ್ಯವಾಗದಿದ್ದರೆ ಪಾಕಿಸ್ತಾನಕ್ಕೆ ಹೋಗಬಹುದು ಎಂದು ಕರ್ನಾಟಕ ಸಚಿವ ಪ್ರಿಯಾಂಕ್ ಖರ್ಗೆ ಬುಧವಾರ ಪುನರುಚ್ಚರಿಸಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಪ್ರಿಯಾಂಕ್, ”ಕರ್ನಾಟಕವನ್ನು ಸ್ವರ್ಗವನ್ನಾಗಿ ಮಾಡುತ್ತೇವೆ ಎಂದು ಭರವಸೆ ನೀಡಿದ್ದೇವೆ, ಶಾಂತಿ ಕದಡಿದರೆ ಅದು ಬಜರಂಗದಳ ಅಥವಾ ಆರ್‌ಎಸ್‌ಎಸ್ ಎಂದು ಪರಿಗಣಿಸುವುದಿಲ್ಲ, ಕಾನೂನು ಕೈಗೆತ್ತಿಕೊಂಡಾಗ ನಿಷೇಧ ಹೇರಲಾಗುವುದು” ಎಂದು ಖರ್ಗೆ ಹೇಳಿದ್ದಾರೆ.ಹಿಜಾಬ್, ಹಲಾಲ್ ಕಟ್ ಮತ್ತು ಗೋಹತ್ಯೆ ಕಾನೂನುಗಳ ಮೇಲಿನ ನಿಷೇಧವನ್ನು ಸರಕಾರ ಹಿಂಪಡೆಯಲಿದೆ. ಸಮಾಜದಲ್ಲಿ ಕಾನೂನು ಮತ್ತು ಪೊಲೀಸರ ಭಯವಿಲ್ಲದೆ ಕೆಲವು ಅಂಶಗಳು ಮುಕ್ತವಾಗಿ ವಿಹರಿಸುತ್ತಿವೆ. ಮೂರು ವರ್ಷಗಳಿಂದ ಈ ಪ್ರವೃತ್ತಿ ನಡೆಯುತ್ತಿದೆ” ಎಂದರು.

”ಜನರು ವಿರೋಧ ಪಕ್ಷದಲ್ಲಿ ಕೂರಿಸಲು ಕಾರಣವೇನು ಎಂಬುದನ್ನು ಬಿಜೆಪಿ ಅರ್ಥ ಮಾಡಿಕೊಳ್ಳಬೇಕು. ಕೇಸರಿಕರಣ ತಪ್ಪು ಎಂದು ಹೇಳಿದ್ದೇವೆ, ಎಲ್ಲರೂ ಅನುಸರಿಸಬಹುದಾದ ಬಸವಣ್ಣನವರ ತತ್ವಗಳನ್ನು ಕಾಂಗ್ರೆಸ್ ಅನುಸರಿಸುತ್ತದೆ” ಎಂದರು.

ರಾಮ ಮಂದಿರ ಉದ್ಘಾಟನಾ ಸಮಾರಂಭಕ್ಕೆ ಸೋನಿಯಾ ಮತ್ತು ಖರ್ಗೆಗೆ ಆಹ್ವಾನ

Posted by Vidyamaana on 2023-12-21 08:01:49 |

Share: | | | | |


ರಾಮ ಮಂದಿರ ಉದ್ಘಾಟನಾ ಸಮಾರಂಭಕ್ಕೆ ಸೋನಿಯಾ ಮತ್ತು ಖರ್ಗೆಗೆ ಆಹ್ವಾನ

ನವದೆಹಲಿ: ಜನವರಿ 22 ರಂದು ಅಯೋಧ್ಯೆಯ ರಾಮಮಂದಿರದ ಪ್ರಾಣ ಪ್ರತಿಷ್ಠಾ ಸಮಾರಂಭ ನಡೆಯಲಿದ್ದು, ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಪರವಾಗಿ ನಿಯೋಗವೊಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಪಕ್ಷದ ಹಿರಿಯ ನಾಯಕಿ ಸೋನಿಯಾ ಗಾಂಧಿಗೆ ಖುದ್ದು ಆಹ್ವಾನ ನೀಡಲಾಗಿದೆ.

 

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಅನಾರೋಗ್ಯದಿಂದ ಸಂದರ್ಶಕರನ್ನು ಭೇಟಿ ಮಾಡುತ್ತಿಲ್ಲ. ಈ ಕಾರಣ ಅವರಿಗೆ ಆಹ್ವಾನವನ್ನು ತಲುಪಿಸಲಾಗಿದೆ.


ರಾಮಮಂದಿರ ನಿರ್ಮಾಣ ಸಮಿತಿ ಅಧ್ಯಕ್ಷ ನೃಪೇಂದ್ರ ಮಿಶ್ರಾ, ಟ್ರಸ್ಟ್‌ನ ಪದನಿಮಿತ್ತ ಸದಸ್ಯ, ಆರ್‌ಎಸ್‌ಎಸ್ ಅಖಿಲ ಭಾರತೀಯ ಸಂಪರ್ಕ್ ಪ್ರಮುಖ್ ರಾಮ್ ಲಾಲ್ ಮತ್ತು ವಿಎಚ್‌ಪಿ ಅಂತಾರಾಷ್ಟ್ರೀಯ ಕಾರ್ಯಾಧ್ಯಕ್ಷ ಅಲೋಕ್ ಕುಮಾರ್ ಅವರು ಸೋನಿಯಾ ಗಾಂಧಿ ಮತ್ತು ಖರ್ಗೆ ಅವರನ್ನು ಭೇಟಿ ಮಾಡಿ ಸಮಾರಂಭಕ್ಕೆ ಆಹ್ವಾನಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.ನಿಯೋಗವು ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಮತ್ತು ಮಾಜಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್, ಮಾಜಿ ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಅಲ್ಲದೆ, ಎಲ್ಲ ರಾಜಕೀಯ ಪಕ್ಷಗಳ ಮುಖ್ಯಸ್ಥರಿಗೂ ಆಹ್ವಾನ ನೀಡಲಾಗಿದೆ ಎಂದು ತಿಳಿದು ಬಂದಿದೆ.

Recent News


Leave a Comment: