ಉಪ್ಪಿನಂಗಡಿ : ಸ್ನಾನ ಮಾಡುತ್ತಿದ್ದ ಮಹಿಳೆಯ ವೀಡಿಯೋ ಚಿತ್ರೀಕರಣ :ಪೆರಿಯಡ್ಕ ನಿವಾಸಿ ರೆಹಮಾನ್ ಪೊಲೀಸ್ ವಶಕ್ಕೆ

ಸುದ್ದಿಗಳು News

Posted by vidyamaana on 2024-07-22 17:34:57 |

Share: | | | | |


ಉಪ್ಪಿನಂಗಡಿ : ಸ್ನಾನ ಮಾಡುತ್ತಿದ್ದ ಮಹಿಳೆಯ ವೀಡಿಯೋ ಚಿತ್ರೀಕರಣ :ಪೆರಿಯಡ್ಕ ನಿವಾಸಿ ರೆಹಮಾನ್ ಪೊಲೀಸ್ ವಶಕ್ಕೆ

ಉಪ್ಪಿನಂಗಡಿ: ಹಿಂದೂ ಯುವತಿ ಮನೆಯಲ್ಲಿ ಸ್ನಾನ ಮಾಡುತ್ತಿದ್ದಾಗ ವಿಡಿಯೋ ಮಾಡಿದ ರಹಿಮಾನ್ ಎಂಬಾತನ ಸ್ಥಳೀಯರು ಪೊಲೀಸರಿಗೆ ಹಿಡಿದು ಕೊಟ್ಟ ಘಟನೆ ಜು.21ರಂದು ಉಪ್ಪಿನಂಗಡಿಯಲ್ಲಿ ನಡೆದಿದೆ.

ಉಪ್ಪಿನಂಗಡಿಯ ಪೆರಿಯಡ್ಕದಲ್ಲಿ ಈ ಘಟನೆ ನಡೆದಿದ್ದು, ವಿಡಿಯೋ ಮಾಡುತ್ತಿದ್ದ ರಹಿಮಾನ್ ನನ್ನು ಸ್ಥಳೀಯರು ಹಿಡಿದು ಉಪ್ಪಿನಂಗಡಿ ಪೊಲೀಸರಿಗೆ ಒಪ್ಪಿಸಿದ್ದಾರೆ.ಉಪ್ಪಿನಂಗಡಿ ಪೊಲೀಸ್ ಠಾಣೆಗೆ ತೆರಳಿದ ಅರುಣ್ ಕುಮಾರ್ ಪುತ್ತಿಲ, ಆರೋಪಿಗೆ ಕಠಿಣ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದರು.

ಸಿಸಿಟಿವಿಗೆ ಒತ್ತಾಯ: ಈಗಾಗಲೇ ಉಪ್ಪಿನಂಗಡಿಯಲ್ಲಿ ಹಿಂದೂಗಳನ್ನು ಕೇಂದ್ರೀಕರಿಸಿ ಹಲವು ಘಟನೆಗಳು ನಡೆದಿದ್ದು, 2ವರ್ಷದ ಹಿಂದೆ ಮೀನು ಅಂಗಡಿಗೆ ಬೆಂಕಿ ಹಾಕಿದ್ದು ಇನ್ನೂ ಪತ್ತೆಯಾಗಿಲ್ಲ.

ಈ ಘಟನೆಯಲ್ಲಿ ಆರೋಪಿಯನ್ನು ಊರಾವರೇ ಹಿಡಿದುಕೊಟ್ಟಿದ್ದಾರೆ. ಪೆರಿಯಡ್ಕ ಜಂಕ್ವನ್ ನಲ್ಲಿ ಪೊಲೀಸ್ ಇಲಾಖೆಯ ಸಿಸಿಟಿವಿ ಅಗತ್ಯತೆ ಇದೆ ಎಂದು ಠಾಣಾಧಿಕಾರಿಯಲ್ಲಿ ಮನವಿ ಮಾಡಿದರು.

 Share: | | | | |


ಧರ್ಮಸ್ಥಳ ಸಿರಿ ಸಂಸ್ಥೆಯ ಹೊಸ ಉತ್ಪನ್ನಗಳ ಲೋಕಾರ್ಪಣೆ

Posted by Vidyamaana on 2023-10-17 07:26:33 |

Share: | | | | |


ಧರ್ಮಸ್ಥಳ ಸಿರಿ ಸಂಸ್ಥೆಯ ಹೊಸ ಉತ್ಪನ್ನಗಳ ಲೋಕಾರ್ಪಣೆ

ಧರ್ಮಸ್ಥಳ: ದಿನ ನಿತ್ಯದ ಪೂಜೆ, ದೇವರ ಧ್ಯಾನ ಹಾಗೂ ಪ್ರಾರ್ಥನೆ ಸಮಯದಲ್ಲಿ ದೀಪ ಮತ್ತು ಧೂಪ ಬಳಸುವುದು ನಮ್ಮ ಸಂಪ್ರದಾಯವಾಗಿದೆ. ಸಿರಿ ಸಂಸ್ಥೆಯ ನೂತನ ಉತ್ಪನ್ನಗಳಾದ ಶೃತಿ, ಸ್ತುತಿ, ಸಂಯಮ ಮತ್ತು ಶ್ರದ್ಧಾ ಎಂಬ ಹೊಸ ಅಗರ್ ಬತ್ತಿಗಳನ್ನು ಮೈಸೂರಿನ ಸೈಕಲ್ ಬ್ರಾಂಡ್ ಅಗರ್ ಬತ್ತಿ ಸಹಭಾಗಿತ್ವದಲ್ಲಿ ಧರ್ಮಸ್ಥಳದಲ್ಲಿ ಸೋಮವಾರ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಬಿಡುಗಡೆಗೊಳಿಸಿ ಶುಭ ಹಾರೈಸಿದರು.ನೂತನ ಉತ್ಪನ್ನಗಳು ಎಲ್ಲರ ಮನೆ-ಮನಗಳನ್ನು ಬೆಳಗಲಿ ಎಂದು ಹೆಗ್ಗಡೆಯವರು ಹಾರೈಸಿದರು.


ನೂತನ ಉತ್ಪನ್ನಗಳಿಂದ ಗ್ರಾಮೀಣ ಮಹಿಳೆಯರಿಗೆ ಹೆಚ್ಚಿನ ಉದ್ಯೋಗಾವಕಾಶ ಲಭಿಸಲಿದೆ ಎಂದು ಹೆಗ್ಗಡೆಯವರು ತಿಳಿಸಿದರು.ಸೈಕಲ್ ಬ್ರಾಂಡ್ ಅಗರ್ ಬತ್ತಿಯ ಸಿ.ಇ.ಒ. ಅರ್ಜುನ್‌ರಂಗ ಮತ್ತು ವಿಜಿರೋಮ್ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ವಿಜಯಲಕ್ಷ್ಮೀ ವಿಜಯ್ ಕುಮಾರ್ ಶುಭಾಶಂಸನೆ ಮಾಡಿದರು.


ಸಿರಿ ಸಂಸ್ಥೆಗೆ ನಾಲ್ಕು ಸಂಚಾರಿ ವಾಹನಗಳನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಹಸ್ತಾಂತರಿಸಲಾಯಿತು. ಸಿ.ಒ.ಒ. ಅನಿಲ್ ಕುಮಾರ್ ಉಪಸ್ಥಿತರಿದ್ದರು.ಸಿರಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೆ. ಎನ್. ಜನಾರ್ದನ್ ಸ್ವಾಗತಿಸಿದರು. ಆಡಳಿತ ನಿರ್ದೇಶಕ ಪ್ರಸನ್ನ ಯು. ಧನ್ಯವಾದವಿತ್ತರು. ಜೀವನ ಕುಮಾರ್ ಕಾರ್ಯಕ್ರಮ ನಿರ್ವಹಿಸಿದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ದರ್ಶನ ಪಡೆದ ಡಿ ಕೆ ಶಿವಕುಮಾರ್

Posted by Vidyamaana on 2024-03-26 17:06:54 |

Share: | | | | |


ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ದರ್ಶನ ಪಡೆದ ಡಿ ಕೆ ಶಿವಕುಮಾರ್

ಬೆಳ್ತಂಗಡಿ : ಲೋಕಸಭಾ ಚುನಾವಣೆಗೆ ದಿನಾಂಕ ಘೋಷಣೆಯಾಗಿದ್ದು ದೇಶಾದ್ಯಂತ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಒಂದೆಡೆ ಸೀಟ್ ಹಂಚಿಕೆ ಕಾರ್ಯದಲ್ಲಿ ಪಕ್ಷದ ಮುಖಂಡರು ಬ್ಯುಸಿಯಾ ಗಿದ್ದರೇ, ಮತ್ತೊಂದೆಡೆ ಪ್ರಚಾರ ಆರಂಭಕ್ಕೆ ಮುನ್ನಾ ಟೆಂಪಲ್ ರನ್ ನಡೆಸುತ್ತಿದ್ದಾರೆ.ಡಿಸಿಎಂ ಡಿ ಕೆ ಶಿವಕುಮಾರ್ ಅವರು ಮಂಗಳವಾರ ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ದರ್ಶನ ಪಡೆದ ಸಂದರ್ಭದಲ್ಲಿ ಧರ್ಮಾಧಿಕಾರಿ ಶ್ರೀ ವೀರೇಂದ್ರ ಹೆಗ್ಡೆ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.

ಅರ್ಜುನ ಪ್ರಶಸ್ತಿ ಪುರಸ್ಕೃತ ದಲ್ಬೀರ್‌ ಸಿಂಗ್ ಹತ್ಯೆ ರಹಸ್ಯ ಬಯಲು: ಕೊಲೆಗಾರ ಅರೆಸ್ಟ್

Posted by Vidyamaana on 2024-01-05 15:39:47 |

Share: | | | | |


ಅರ್ಜುನ ಪ್ರಶಸ್ತಿ ಪುರಸ್ಕೃತ ದಲ್ಬೀರ್‌ ಸಿಂಗ್ ಹತ್ಯೆ ರಹಸ್ಯ ಬಯಲು: ಕೊಲೆಗಾರ ಅರೆಸ್ಟ್

ಚಂಡೀಗಢ: ಪಂಜಾಬ್‌ನ ಜಲಂಧರ್‌ನಲ್ಲಿ ಅರ್ಜುನ ಪ್ರಶಸ್ತಿ ಪುರಸ್ಕೃತ, ಪೊಲೀಸ್‌ ಅಧಿಕಾರಿ ದಲ್ಬಿರ್‌ ಸಿಂಗ್‌ ಅವರ ಶವ ಪತ್ತೆಯಾಗಿದ್ದ ಪ್ರಕರಣವನ್ನು ಭೇದಿಸುವಲ್ಲಿ ಪೊಲೀಸರು ಯಶಸ್ಸಾಗಿದ್ದಾರೆ. ಸಿಂಗ್‌ ಅವರನ್ನು ಹತ್ಯೆಗೈದ ರಿಕ್ಷಾ ಚಾಲಕನನ್ನು ಬಂಧಿಸಿದ್ದಾರೆ.

ರಸ್ತೆ ಬದಿಯ ಕಾಲುವೆಯಲ್ಲಿ ದಲ್ಬಿರ್‌ ಸಿಂಗ್‌ ಅವರ ಶವ ಪತ್ತೆಯಾಗಿತ್ತು. ಪೊಲೀಸ್ ಅಧಿಕಾರಿಯೇ ಹೀಗೆ ಶವವಾಗಿ ಪತ್ತೆಯಾಗಿದ್ದು, ಪೊಲೀಸರಿಗೆ ಸವಾಲು ಒಡ್ಡುವಂತಿತ್ತು. ಆದರೆ 48 ಗಂಟೆಗಳ ಒಳಗೆ ಪೊಲೀಸರು ಕೊಲೆ ಆರೋಪಿಯನ್ನು ಸೆರೆ ಹಿಡಿದು ಕೊಲೆರಹಸ್ಯವನ್ನು ಭೇದಿಸಿದ್ದಾರೆ. ಹೊಸ ವರ್ಷದ ಹಿಂದಿನ ದಿನ ರಾತ್ರಿ ತಮ್ಮ ಹಳ್ಳಿಗೆ ತೆರಳಲೆಂದು ಸಿಂಗ್‌ ಆಟೋ ಹತ್ತಿದ್ದು, ಹಳ್ಳಿಯವರೆಗೆ ಡ್ರಾಪ್‌ ಮಾಡಲು ಚಾಲಕ ಒಪ್ಪದೇ ಇಬ್ಬರ ನಡುವೆ ವಾಗ್ವಾದ ನಡೆದಿದೆ. ಈ ವೇಳೆ ರಿಕ್ಷಾ ಚಾಲಕ ವಿಜಯ್‌ ಕುಮಾರ್‌ ಪೊಲೀಸ್ ಅಧಿಕಾರಿಯ ಅವರ ಪಿಸ್ತೂಲನ್ನೇ ಕಸಿದು, ಅವರನ್ನು ಗುಂಡಿಕ್ಕಿ ಹತ್ಯೆಗೈದಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ

ವಿದ್ಯಾರ್ಥಿ ಜೊತೆ ಅಸಭ್ಯವಾಗಿ ವರ್ತಿಸಿದ್ದ ಮುಖ್ಯ ಶಿಕ್ಷಕಿ ಅಮಾನತು

Posted by Vidyamaana on 2023-12-29 11:19:52 |

Share: | | | | |


ವಿದ್ಯಾರ್ಥಿ ಜೊತೆ ಅಸಭ್ಯವಾಗಿ ವರ್ತಿಸಿದ್ದ ಮುಖ್ಯ ಶಿಕ್ಷಕಿ ಅಮಾನತು

ಚಿಕ್ಕಬಳ್ಳಾಪುರ: ಶೈಕ್ಷಣಿಕ ಪ್ರವಾಸದ ವೇಳೆ ವಿದ್ಯಾರ್ಥಿಯೊಂದಿಗೆ ಅಸಭ್ಯವಾಗಿ ವರ್ತಿಸಿ ಸುದ್ದಿಯಾಗಿದ್ದ ಜಿಲ್ಲೆಯ ಚಿಂತಾಮಣಿ ತಾಲೂಕಿನ ಸರ್ಕಾರಿ ಪ್ರೌಢ ಶಾಲೆಯ ಪ್ರಭಾರಿ ಮುಖ್ಯ ಶಿಕ್ಷಕಿ ಪುಪ್ಪಲತಾರನ್ನು ಸೇವೆಯಿಂದ ಅನುಮಾನತುಗೊಳಿಸಿ ಶಿಕ್ಷಣ ಇಲಾಖೆ ಆದೇಶಿಸಿದೆ.ಶಿಕ್ಷಕ ಪುಪ್ಪಲತಾ, ಇತ್ತೀಚೆಗೆ ಶಾಲೆಯಿಂದ ಕೈಗೊಂಡಿದ್ದ ಶೈಕ್ಷಣಿಕ ಪ್ರವಾಸದ ವೇಳೆ ಶಾಲೆಯ ಅಪ್ರಾಪ್ತ ವಯಸ್ಸಿನ ಬಾಲಕನೊಂದಿಗೆ ತೆಂಗಿನ ತೋಟಗಳ ಮಧ್ಯೆ ಪರಸ್ಪರ ಕಿಸ್ ಕೊಡುವ ಪೋಟೋಗಳನ್ನು ತನ್ನ ಮೊಬೈಲ್ ಮೂಲಕ ಸೆರೆ ಹಿಡಿದುಕೊಂಡಿದ್ದರು. ಅವು ಶಿಕ್ಷಕಿಯ ಮೊಬೈಲ್‌ ನಿಂದ ಸೋರಿಕೆಯಾಗಿ ಜಾಲತಾಣಗಳಲ್ಲಿ ವೈರಲ್ ಆಗಿತ್ತು.


ಶಿಕ್ಷಕಿ ವಿರುದ್ದ ಗಂಭೀರ ಆರೋಪ ಕೇಳಿ ಬಂದ ಬೆನ್ನಲೇ ಶಾಲೆಗೆ ಚಿಂತಾಮಣಿ ಕ್ಷೇತ್ರ ಶಿಕ್ಷಣಾಧಿಕಾರಿ ಉಮಾದೇವಿ ಭೇಟಿ ನೀಡಿದ್ದರು

ಖಾಸಗಿ ಕ್ಷಣದ ಫೋಟೋ ತೋರಿಸಿ ವೈದ್ಯನಿಂದ ಮಹಿಳೆಗೆ ಬ್ಲ್ಯಾಕ್‌ಮೇಲ್..!

Posted by Vidyamaana on 2024-05-17 08:12:31 |

Share: | | | | |


ಖಾಸಗಿ ಕ್ಷಣದ ಫೋಟೋ ತೋರಿಸಿ ವೈದ್ಯನಿಂದ ಮಹಿಳೆಗೆ ಬ್ಲ್ಯಾಕ್‌ಮೇಲ್..!

ರಾಮನಗರ(ಮೇ.17): ಖಾಸಗಿ ಫೋಟೋ - ವಿಡಿಯೋಗಳನ್ನು ತೋರಿಸಿ ಹಣಕ್ಕೆ ಬೇಡಿಕೆ ಇಡುತ್ತಿರುವ ವೈದ್ಯನ ವಿರುದ್ಧ ಮಹಿಳೆಯೊಬ್ಬರು ಕುಂಬಳಗೂಡು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.ವಿನಾಯಕನಗರ ಬಡಾವಣೆ ನಿವಾಸಿ ಪರಸಪ್ಪ ಖಾಸಗಿ ಫೋಟೋ - ವಿಡಿಯೋಗಳನ್ನು ಇಟ್ಟುಕೊಂಡು ತನ್ನನ್ನು ತೇಜೋವಧೆ ಮಾಡಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದು, ಆತನ ವಿರುದ್ಧ ಕಾನೂನು ರೀತಿ ಕ್ರಮ ಜರುಗಿಸುವಂತೆ ಮಹಿಳೆ ಕೋರಿದ್ದಾರೆ.

ಪಕ್ಷದ ಪರ ಪ್ರಚಾರ ಮಾಡುತ್ತಿರುವ ಗ್ರಂಥ ಪಾಲಕರನ್ನು ಕೆಲಸದಿಂದ ವಜಾ ಮಾಡಿ: ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ ಆಗ್ರಹ.

Posted by Vidyamaana on 2023-05-31 07:40:17 |

Share: | | | | |


ಪಕ್ಷದ ಪರ ಪ್ರಚಾರ ಮಾಡುತ್ತಿರುವ ಗ್ರಂಥ ಪಾಲಕರನ್ನು ಕೆಲಸದಿಂದ ವಜಾ ಮಾಡಿ: ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ ಆಗ್ರಹ.

ಪುತ್ತೂರು: ಪುತ್ತೂರು ಸರಕಾರಿ ಪದವಿಪೂರ್ವ ಕಾಲೇಜಿನ ಗ್ರಂಥಪಾಲಕ ಪ್ರವೀಣ್ ವಗ್ಗ ಒಂದು ರಾಜಕೀಯ ಪಕ್ಷದ ಪರ ಸಾಮಾಜಿಕ ಜಾಲತಾಣಗಳಲ್ಲಿ ಪ್ರಚಾರ ಮಾಡುತ್ತಿದ್ದು ತಕ್ಷಣ ಅವರನ್ನು ಕೆಲಸದಿಂದ ವಜಾ ಮಾಡಬೇಕು ಎಂದು ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ ಆಗ್ರಹಿಸಿದೆ.

ಸರಕಾರಿ ಒದ್ಯೋಗಿಯಾಗಿದ್ದ ಈ ರೀತಿಯಾಗಿ ಒಂದು ಪಕ್ಷದ ಪರ ಸಾಮಾಜಿಕ ಜಾಲತಾಣಗಳಲ್ಲಿ ಪ್ರಚಾರ ಮಾಡುವುದು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ತಪ್ಪು. ಯಾವುದೇ ಪಕ್ಷದ ಪರ ಇರುವಂತಿಲ್ಲ. ಬೇರೆ ಬೇರೆ ಧರ್ಮ ಜಾತಿಗಳ ವಿದ್ಯಾರ್ಥಿಗಳರುವ ಈ ಕಾಲೇಜನಲ್ಲಿ ಒಬ್ಬರು ಅಧ್ಯಾಪಕರು ಈ ರೀತಿ ನಡೆದುಕೊಂಡಿರುವುದು ತಪ್ಪು ಇದನ್ನು ಗಂಭಿರವಾಗಿ ಪರಿಗಣಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒಕ್ಕೂಟ ಆಗ್ರಹಿಸಿದೆ.

ಈ ಕುರಿತು ಪುತ್ತೂರು ನಗರ ಠಾಣೆ ಹಾಗೂ ಪುತ್ತೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಿಗೆ ಮನವಿ ಮಾಡಿದೆ.



Leave a Comment: