ಮೃತಪಟ್ಟ ಗರ್ಭಿಣಿ ಮನೆಗೆ ಭೇಟಿ ನೀಡಿದ ಪುತ್ತಿಲ

ಸುದ್ದಿಗಳು News

Posted by vidyamaana on 2023-06-29 12:19:28 |

Share: | | | | |


ಮೃತಪಟ್ಟ ಗರ್ಭಿಣಿ ಮನೆಗೆ ಭೇಟಿ ನೀಡಿದ ಪುತ್ತಿಲ

ಪುತ್ತೂರು: ಹೊಸ ಉದ್ಯಮವೊಂದರ ಉದ್ಘಾಟನಾ ಕಾರ್ಯಕ್ರಮ ಮುಗಿಸಿ ಹಿಂದಿರುಗಿ ಬರುವಾಗ ಅರುಣ್ ಕುಮಾರ್ ಪುತ್ತಿಲ ಹೆರಿಗೆಗೆ ದಾಖಲಾಗಿದ್ದ ಗರ್ಭಿಣಿ ಮೃತಪಟ್ಟ ಮನೆಗೆ ತೆರಳಿ ಸಾಂತ್ವನ ಹೇಳಿದರು.


ಕಾರ್ಯಕ್ರಮ ಮುಗಿಸಿ ಬರುವಾಗ ರಸ್ತೆಯಲ್ಲಿ ಜನ ಸೇರಿದ್ದನ್ನು ನೋಡಿ ವಿಚಾರಿಸಿದಾಗ ಮೃತಪಟ್ಟ ಬಗ್ಗೆ ತಿಳಿದುಬಂದಿದ್ದು,  ನಂತರ ಮನೆಗೆ ತೆರಳಿ ಸಾಂತ್ವನ ಹೇಳಿದರು. 

ಶೇಕಮಲೆ ಬೊಳ್ಳಾಡಿ ಇಬ್ರಾಹಿಂ ಎಂಬವರ ಪತ್ನಿ 9 ತಿಂಗಳ ಗರ್ಭಿಣಿ ಹಸೀನಾ (29) ಮಂಗಳೂರಿನ ಎಜೆ ಆಸ್ಪತ್ರೆಗೆ ದಾಖಲಾಗಿದ್ದರು.  ಜೂ.28 ರಂದು ಹೆರಿಗೆ ಸಂದರ್ಭ ಹೃದಯಾಘಾತದಿಂದ ನಿಧನರಾದರು. 

ಹೆರಿಗೆಯಲ್ಲಿ ಮಗು ಜೀವಂತವಾಗಿದ್ದು, ಎಜೆ ಆಸ್ಪತ್ರೆಯ ವೈದ್ಯರಿಗೆ ಕರೆ ಮಾಡಿ ಅರುಣ್ ಪುತ್ತಿಲರು ಮಗುವಿನ ಆರೋಗ್ಯ ವಿಚಾರಿಸಿದರು. 

ಈ ಹಿಂದೆಯೂ ಅಪಘಾತ ನಡೆದ ಸಂದರ್ಭ ಧರ್ಮ ನೋಡದೆ ತನ್ನದೇ  ಕಾರಿನಲ್ಲಿ ರಕ್ತದ ಮಡುವಿನಲ್ಲಿದ್ದ  ಗಾಯಳುಗಳನ್ನು ಹಾಕಿಕೊಂಡು ಹೋದ ಉದಾಹರಣೆಯೂ ಇದೆ. ಅವರ ಕಾರಿನಲ್ಲಿ ಅಪಘಾತಗೊಂಡ  ಮುಸ್ಲಿಂ ಮಗುವೊಂದು ಮೃತಪಟ್ಟಿದೆ. 

ಮೊನ್ನೆಯಷ್ಟೇ ಮಂಗಳೂರಿನಿಂದ ಬರುತಿದ್ದಾಗ ರಸ್ತೆ ಬದಿಯ ಚರಂಡಿಗೆ ಬಿದ್ದಿದ್ದ ಕಾರನ್ನು ಮೇಲೆತ್ತಲು ಸಹಾಯ ಮಾಡಿದ್ದರು.

 Share: | | | | |


ಯುವನಿಧಿ ಯೋಜನೆ ಇಂದಿನಿಂದ ಜಾರಿ : ಅರ್ಜಿ ಸಲ್ಲಿಸುವುದು ಹೇಗೆ ? ಯಾರೆಲ್ಲ ಅರ್ಹರು ?

Posted by Vidyamaana on 2023-12-26 11:53:42 |

Share: | | | | |


ಯುವನಿಧಿ ಯೋಜನೆ ಇಂದಿನಿಂದ ಜಾರಿ : ಅರ್ಜಿ ಸಲ್ಲಿಸುವುದು ಹೇಗೆ ? ಯಾರೆಲ್ಲ ಅರ್ಹರು ?

ಬೆಂಗಳೂರು : ಕರ್ನಾಟಕಸರಕಾರ ಪಂಚ ಗ್ಯಾರಂಟಿ ಯೋಜನೆಯ ಪೈಕಿ ಕೊನೆಯ ಗ್ಯಾರಂಟಿ ಯುವನಿಧಿ ಯೋಜನೆಯನ್ನು ಇಂದಿನಿಂದ ಜಾರಿಗೊಳಿಸಲಿದೆ. ಗೃಹಲಕ್ಷ್ಮೀ, ಗೃಹಜ್ಯೋತಿ, ಶಕ್ತಿ ಹಾಗೂ ಅನಭಾಗ್ಯ ಯೋಜನೆಯನ್ನು ಜಾರಿಗೊಳಿಸಿರುವ ಸರಕಾರ ಇದೀಗ ಯುವನಿಧಿ ಯೋಜನೆ ಜಾರಿಗೆ ಮುಂದಾಗಿದೆ.ಡಿಸೆಂಬರ್‌ 26 ರಿಂದ ಯುವನಿಧಿ ಯೋಜನೆ ಕರ್ನಾಟಕ ರಾಜ್ಯದಲ್ಲಿ ಅಧಿಕೃತವಾಗಿ ಜಾರಿಗೆ ಬರಲಿದೆ. ಪದವೀಧರರು ಹಾಗೂ ಡಿಪ್ಲೊಮಾ ಶಿಕ್ಷಣ ಪಡೆದವರು ಈ ಯೋಜನೆಯ ಲಾಭವನ್ನು ಪಡೆಯಲು ಅರ್ಹರಾಗಿದ್ದಾರೆ. ಶಿಕ್ಷಣ ಪಡೆದು ಉದ್ಯೋಗ ಸಿಗದೇ ಇರುವ ನಿರುದ್ಯೋಗಿಗಳಿಗೆ ಆರ್ಥಿಕ ನೆರವು ನೀಡುವುದು ಯುವನಿಧಿ ಯೋಜನೆಯ ಉದ್ದೇಶವಾಗಿದೆ.ಯುವನಿಧಿ ಯೋಜನೆಗೆ ಆನ್‌ಲೈನ್‌ ಹಾಗೂ ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. sevasindhugs.Karnataka.gov.in ವೆಬ್‌ಸೈಟ್‌ಗೆ ಲಾಗಿನ್‌ ಮಾಡುವ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಪದವಿ/ಡಿಪ್ಲೋಮಾ ತೇರ್ಗಡೆಯಾದ ಅಭ್ಯರ್ಥಿಗಳ ಶೈಕ್ಷಣಿಕ ಪ್ರಮಾಣ ಪತ್ರವನ್ನು ಎನ್ ಎಡಿ ಪೋರ್ಟಲ್ ಸಂಬಂಧಪಟ್ಟ ವಿವಿಗಳು, ಶೈಕ್ಷಣಿಕ ಸಂಸ್ಥೆಗಳು ಮಂಡಳಿಗಳು ಧೃಡಿಕರಿಸಲು n

non

.karnataka.gov.in/#/YuvaNidhi ಜಾಲತಾಣದಲ್ಲಿ ಲಾಗಿನ್ ಮಾಡಬೇಕು.


ಯುವನಿಧಿ ಯೋಜನೆಗೆ (Yuva Nidhi Scheme) ಯಾರೆಲ್ಲಾ ಅರ್ಹರು ?


ಕಳೆದ ಆರು ವರ್ಷಗಳಿಂದ ಕರ್ನಾಟಕದಲ್ಲಿ ವಾಸವಾಗಿರಬೇಕು

ಕರ್ನಾಟಕದಲ್ಲಿಯೇ ಪದವಿ ಅಥವಾ ಡಿಪ್ಲೋಮಾ ಹಾಗೂ ತತ್ಸಮಾನ ಶಿಕ್ಷಣವನ್ನು ಪಡೆದಿರಬೇಕು.

ಕರ್ನಾಟಕ ನಿವಾಸಿ ಪ್ರಮಾಣ ಪತ್ರಕ್ಕಾಗಿ ಎಸ್‌ಎಸ್‌ಎಲ್‌ಸಿ, ಪಿಯುಸಿ, ಸಿಇಟಿ ನೋಂದಣಿ ಸಂಖ್ಯೆ ಅಥವಾ ಪಡಿತರ ಚೀಟಿ ಹೊಂದಿರಬೇಕು.

ಡಿಪ್ಲೊಮಾ ಅಭ್ಯರ್ಥಿಗಳು ಎಸ್‌ಎಸ್‌ಎಲ್‌ಸಿ, ೮ ಅಥವಾ ೯ನೇ ತರಗತಿ ಅಂಕಪಟ್ಟಿ ಅಥವಾ ರೇಷನ್‌ ಕಾರ್ಡ್‌ ಹೊಂದಿರಬೇಕು.

ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ಅಂಕಪಟ್ಟಿ ಕಡ್ಡಾಯ


Yuva Nidhi Scheme : ಎಲ್ಲಿ ಅರ್ಜಿ ಸಲ್ಲಿಸಬಹುದು ?


ಯುವನಿಧಿ ಯೋಜನೆಗೆ ಇಂದಿನಿಂದ ಅರ್ಜಿ ಸಲ್ಲಿಸಲು ಕರ್ನಾಟಕ ಸರಕಾರ ಅವಕಾಶವನ್ನು ಕಲ್ಪಿಸಿದೆ. ಕರ್ನಾಟಕ ಒನ್‌, ಬಾಪೂಜಿ ಸೇವಾ ಕೇಂದ್ರ, ಗ್ರಾಮ ಒನ್‌ ಕೇಂದ್ರಗಳಲ್ಲಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಸೇವಾ ಸಿಂಧು ಪೋರ್ಟಲ್‌ ಮೂಲಕವೂ ಯುವನಿಧಿ ಯೋಜನೆ ಅರ್ಜಿ ಸಲ್ಲಿಸಲು ಅವಕಾಶವಿದೆ.


Yuva Nidhi Scheme : ಏನಿದು ಯುವನಿಧಿ ಯೋಜನೆ ?


ಸಿಎಂ ಸಿದ್ದರಾಮಯ್ಯ ಸರಕಾರ ನೇತೃತ್ವದ ಕಾಂಗ್ರೆಸ್‌ ಸರಕಾರ 5ನೇ ಗ್ಯಾರಂಟಿ ಯೋಜನೆಯನ್ನು ಜಾರಿಗೊಳಿಸಿದೆ. ಯುವನಿಧಿ ಯೋಜನೆ ಡಿಸೆಂಬರ್‌ ೨೬ರಿಂದ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಈ ಯೋಜನೆಯ ಮೂಲಕ ಪದವೀಧರರಿಗೆ ಮಾಸಿಕ 3,000 ರೂಪಾಯಿ ಹಾಗೂ ಡಿಪ್ಲೋಮಾ ಪದವೀಧರರಿಗೆ ಮಾಸಿಕ 1,500 ರೂಪಾಯಿಯನ್ನು ನೀಡಲಾಗುತ್ತದೆ.


ಡಿಪ್ಲೋಮಾ ಅಥವಾ ಪದವಿ ಶಿಕ್ಷಣವನ್ನು ಪಡೆದು 180 ದಿನಗಳು ಕಳೆದರೂ ಕೂಡ ಉದ್ಯೋಗ ಸಿಗದೇ ಇರುವವರು ಮಾತ್ರವೇ ಯುವನಿಧಿ ಯೋಜನೆಗೆ ಅರ್ಜಿಯನ್ನು ಸಲ್ಲಿಸಲು ಅರ್ಹರಾಗಿರುತ್ತಾರೆ. ಅಭ್ಯರ್ಥಿಗಳು ಉತೀರ್ಣರಾದ ದಿನದಿಂದ 6 ತಿಂಗಳವರೆಗಿನ ತಮ್ಮ ಬ್ಯಾಂಕ್ ಖಾತೆಯ ವಹಿವಾಟು ಪ್ರತಿ ನೀಡಬೇಕು. ಒಂದೊಮ್ಮೆ ಪದವಿ, ಡಿಪ್ಲೊಮಾ ಶಿಕ್ಷಣ ಪಡೆದ ಬಳಿಕ ಉನ್ನತ ಶಿಕ್ಷಣ ಮುಂದುವರಿಸಿದ್ರೆ ಅಂತಹ ಅಭ್ಯರ್ಥಿಗಳು ಯೋಜನೆಗೆ ಅರ್ಹತೆ ಪಡೆಯುವುದಿಲ್ಲ.


ಯೋಜನೆಗೆ ಅರ್ಹತೆಯನ್ನು ಪಡೆದಿರುವ ಅಭ್ಯರ್ಥಿಗಳಿಗೆ ಉದ್ಯೋಗ ಸಿಗುವವರೆಗೆ ಮಾತ್ರವೇ ಈ ಯೋಜನೆಯ ಲಾಭ ದೊರೆಯಲಿದೆ. ಅಲ್ಲದೇ ಅರ್ಜಿ ಸಲ್ಲಿಸಿದ ದಿನದಿಂದ ಗರಿಷ್ಠ 2 ವರ್ಷಗಳ ಅವಧಿಗೆ ಮಾತ್ರವೇ ಯುವನಿಧಿ ಯೋಜನೆಯ ಭತ್ಯೆ ದೊರೆಯಲಿದೆ.

ವಿಧಾನ ಸೌಧ ವಾಸ್ತುದೋಷ: ಐದು ವರ್ಷಗಳಿಂದ ಮುಚ್ಚಿದ್ದ ಬಾಗಿಲು ಓಪನ್

Posted by Vidyamaana on 2023-06-24 16:06:21 |

Share: | | | | |


ವಿಧಾನ ಸೌಧ ವಾಸ್ತುದೋಷ: ಐದು ವರ್ಷಗಳಿಂದ ಮುಚ್ಚಿದ್ದ ಬಾಗಿಲು ಓಪನ್

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಕಳೆದ ಐದು ವರ್ಷಗಳಿಂದ ಮುಚ್ಚಲಾಗಿದ್ದ ವಿಧಾನಸೌಧದ ಮುಖ್ಯಮಂತ್ರಿಗಳ ಕಚೇರಿಯ ದಕ್ಷಿಣ ದ್ವಾರವನ್ನು ತೆರೆಸಿ ಶನಿವಾರ ಒಳ ಪವೇಶಿಸಿ ಮೌಢ್ಯದ ವಿರುದ್ಧ ತಮ್ಮ ನಿಲುವನ್ನು ಮತ್ತೆ ಸಾಬೀತುಪಡಿಸಿದ್ದಾರೆ.ಜನರ ಬಗ್ಗೆ ಕಾಳಜಿ,ನಡತೆಯಲ್ಲಿ ಪ್ರಾಮಾಣಿಕತೆ, ಕರ್ತವ್ಯದಲ್ಲಿ ನಿಷ್ಠೆ ನಮ್ಮೊಳಗಿದ್ದರೆ ದಿಕ್ಕು, ಘಳಿಗೆ, ಮುಹೂರ್ತ ಎಲ್ಲವೂ ನಗಣ್ಯ.ವಾಸ್ತುದೋಷದ ಕಾರಣಕ್ಕಾಗಿ ಕಳೆದ ಐದು ವರ್ಷಗಳಿಂದ ಮುಚ್ಚಲಾಗಿದ್ದ ವಿಧಾನಸೌಧದ ಮುಖ್ಯಮಂತ್ರಿಗಳ ಕಚೇರಿಯ ದಕ್ಷಿಣ ದ್ವಾರವನ್ನು ತೆರೆಸಿ,ಅದೇ ಬಾಗಿಲಿನಿಂದ ಕಚೇರಿ ಪ್ರವೇಶ ಮಾಡಿದೆ.ಕೊಠಡಿಯೊಳಗೆ ಒಳ್ಳೆಯ ಗಾಳಿ, ಬೆಳಕು ಬರುವಂತಿದ್ದರೆ ಅದಕ್ಕಿಂತ ಉತ್ತಮ ವಾಸ್ತು ಬೇರಿಲ್ಲ.ನಡೆ – ನುಡಿ ಶುದ್ಧವಿದ್ದರೆ ಮತ್ತೆಲ್ಲವೂ ಶುಭದಾಯಕವಾಗಿರಲಿದೆ.ಜನತೆಯ ಆಶೀರ್ವಾದ ಇರಲಿ.” ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.ಅನ್ನಭಾಗ್ಯ ಯೋಜನೆ ಕುರಿತು ಅಧಿಕಾರಿಗಳೊಂದಿಗೆ ನಡೆಸಿದ ಸಭೆ ವೇಳೆ ಸಿಎಂ ಬಾಗಿಲು ತೆರೆಸುವ ನಿರ್ಧಾರ ಕೈಗೊಂಡಿದ್ದಾರೆ. ಲಿಫ್ಟ್ ನಲ್ಲಿ ವಿಧಾನಸೌಧದ ಮೂರನೇ ಮಹಡಿಗೆ ಬಂದ ಸಿಎಂ ದಕ್ಷಿಣ ದ್ವಾರ ಬಂದ್‌ ಆಗಿರುವುದನ್ನು ಗಮನಿಸಿ ಜತೆಗಿದ್ದ ಅಧಿಕಾರಿಗಳಿಗೆ ಬಾಗಿಲು ಏಕೆ ಮುಚ್ಚಿದೆ ಎಂದು ಪ್ರಶ್ನಿಸಿದ್ದಾರೆ. ಸಿಬಂದಿ ಪಶ್ಚಿಮ ದ್ವಾರ ಮುಖೇನ ಒಳ ಹೋಗಿ ದಕ್ಷಿಣ ಬಾಗಿಲು ತೆರೆದ ಬಳಿಕ ಸಿದ್ದರಾಮಯ್ಯ ಅದೇ ದಾರಿಯಲ್ಲಿ ಒಳ ಪ್ರವೇಶಿಸಿ ಸಭೆ ನಡೆಸಿದರು. 2013ರಲ್ಲಿ ಸಿದ್ದರಾಮಯ್ಯ ಸಿಎಂ ಆಗಿದ್ದಾಗಲೂ ಮುಚ್ಚಿದ್ದ ದಕ್ಷಿಣ ದ್ವಾರವನ್ನು ಅಧಿಕಾರಿಗಳಿಗೆ ಸೂಚನೆ ನೀಡಿ ತೆರೆಸಿದ್ದರು.

ಉಡುಪಿ ವಿಶಾಲ ಗಾಣಿಗ ಕೊಲೆ ಕೇಸ್

Posted by Vidyamaana on 2024-02-03 17:52:10 |

Share: | | | | |


ಉಡುಪಿ ವಿಶಾಲ ಗಾಣಿಗ ಕೊಲೆ ಕೇಸ್

ಉಡುಪಿ, ಫೆ 03: ಸುಮಾರು ಮೂರು ವರ್ಷಗಳ ಹಿಂದೆ ಕರಾವಳಿಯಲ್ಲಿ ಸಂಚಲನ ಮೂಡಿಸಿದ್ದ ಬ್ರಹ್ಮಾವರದ ವಿಶಾಲ ಗಾಣಿಗ ಕೊಲೆ ಪ್ರಕರಣದಲ್ಲಿ ತಲೆಮರೆಸಿಕೊಂಡ ಆರೊಪಿಯನ್ನು ಕೊನೆಗೂ ಬಂಧಿಸಲಾಗಿದೆ.


ತಲೆ ಮರೆಸಿಕೊಂಡಿದ್ದ ಧರ್ಮೇಂದ್ರ ಕುಮಾರ್ ಸುಹಾನಿ ಎಂಬ ಆರೋಪಿಯನ್ನು ಬ್ರಹ್ಮಾವರ ಪೊಲೀಸರು ಲಕ್ನೋದಲ್ಲಿ ಬಂಧಿಸಿದ್ದಾರೆ.

2021ನೇ ಜುಲೈ ತಿಂಗಳಿನಲ್ಲಿ ಬ್ರಹ್ಮಾವರ ಠಾಣಾ ವ್ಯಾಪ್ತಿಯ ಕುಮ್ರಗೋಡುವಿನಲ್ಲಿರುವ ಮಿಲನ ರೆಸಿಡೆನ್ಸಿಯಲ್ಲಿ ವಿಶಾಲ ಗಾಣಿಗ ಅವರ ಕೊಲೆಯಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ಆಕೆಯ ಗಂಡ ರಾಮಕೃಷ್ಣ, ಸ್ವಾಮಿನಾಥನ್ ನಿಷಾದ್, ರೋಹಿತ್ ರಾಣಾ ಪ್ರತಾಪ್ ಎಂಬವರನ್ನು ಈಗಾಗಲೇ ಬಂಧಿಸಲಾಗಿತ್ತು.




ವಿಶಾಲ ಕೊಲೆ ಪ್ರಕರಣದಲ್ಲಿ ಆಕೆಯ ಗಂಡ ರಾಮಕೃಷ್ಣ ಪ್ರಮುಖ ಆರೋಪಿಯಾಗಿದ್ದಾನೆ. ರಾಮಕೃಷ್ಣನಿಗೂ ಸುಪಾರಿ ಕಿಲ್ಲರ್ ಸ್ವಾಮಿನಾಥನ್ ನಿಶಾದ್‌ನಿಗೂ ಪರಿಚಯ ಮಾಡಿಸಿ ಕೊಲೆಗೆ ಸಹಕರಿಸಿದ ಇನ್ನೋರ್ವ ಆರೋಪಿ ಧರ್ಮೇಂದ್ರ ಕುಮಾರ್ 


ಈತನಿಗೆ ಬಲೆ ಬೀಸಿದ್ದ ಬ್ರಹ್ಮಾವರ ಠಾಣಾ ಪೊಲೀಸರು ಪಿಎಸ್ಐ ಮಧು ಬಿ. ಇ ಹಾಗೂ ಠಾಣಾ ಸಿಬ್ಬಂದಿಗಳಾದ ಶಾಂತರಾಜ್ ಎಎಸ್‌ಐ, ಸುರೇಶ ಬಾಬುರವರ ತಂಡವು ದಿನಾಂಕ ಫೆ.02 ರಂದು ಲಕ್ನೋ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆದು ದಿನಾಂಕ ಫೆ.03 ರಂದು ನ್ಯಾಯಾಲಯದ ಮುಂದೆ ಹಾಜರುಪಡಿಸಿ ನ್ಯಾಯಾಂಗ ಬಂಧನದಲ್ಲಿರಿಸಲಾಗಿದೆ.

ಮಾರ್ಚ್‌ನಲ್ಲಿ ಸರಕಾರದಿಂದ 3೦೦೦ ಪವರ್‌ಮ್ಯಾನ್‌ಗಳ ನೇಮಕಾತಿ

Posted by Vidyamaana on 2024-02-06 07:20:05 |

Share: | | | | |


ಮಾರ್ಚ್‌ನಲ್ಲಿ  ಸರಕಾರದಿಂದ 3೦೦೦ ಪವರ್‌ಮ್ಯಾನ್‌ಗಳ ನೇಮಕಾತಿ

ಪುತ್ತೂರು: ಮಾರ್ಚ್ ತಿಂಗಳಲ್ಲಿ ೩೦೦೦ ಮೆಸ್ಕಾಂ ಪವರ್‌ಮ್ಯಾನ್‌ಗಳ ನೇಮಕಾತಿ ನಡೆಯಲಿದ್ದು ಇದಕ್ಕಾಗಿ ಅಭ್ಯರ್ಥಿಗಳಿಗೆ ತರಬೇತಿ ಸಜ್ಜುಗೊಳಿಸುವ ವ್ಯವಸ್ಥೆ ಮಾಡುವಂತೆ ಇಂಧನ ಸಚಿವ ಕೆ ಜೆ ಜಾರ್ಜ್ ರವರು ಪುತ್ತೂರು ಶಾಸಕರಾದ ಅಶೋಕ್ ರಐಯವರಲ್ಲಿ ವಿನಂತಿಸಿದ್ದಾರೆ.


ಮಂಗಳೂರು ಮೆಸ್ಕಾಂ ಭವನದಲ್ಲಿ ಫೆ. ೫ ರಂದು ನಡೆದ ಸಭೆಯಲ್ಲಿ ಸಚಿವರು ಈ ಸೂಚನೆಯನ್ನು ನೀಡಿದ್ದಾರೆ.


ಪವರ್‌ಮ್ಯಾನ್‌ಗಳ ಕೊರತೆಯ ಬಗ್ಗೆ ಸಚಿವರ ಗಮನಸೆಳೆದ ಪುತ್ತೂರು ಶಾಸಕರಾದ ಅಶೋಕ್ ರೈಯವರು ದ ಕ ಜಿಲ್ಲೆಯಲ್ಲಿ ಅದರಲ್ಲೂ ವಿಶೇಷವಾಗಿ ಪುತ್ತೂರಿನಲ್ಲಿಯೂ ಪವರ್‌ಮ್ಯಾನ್‌ಗಳ ಕೊರತೆ ಇದೆ. ಪವರ್ ಮ್ಯಾನ್ ಕೆಲಸ ಪಡೆದುಕೊಂಡ ಘಟ್ಟದವರು ಇಲ್ಲಿ ಬಂದು ಎರಡರಿಂದ ಮೂರು ವರ್ಷ ಕೆಲಸ ಮಾಡಿ ಬಳಿಕ ಅವರ ಊರಿನ ಶಾಸಕರಿಂದ ಪತ್ರವನ್ನು ಪಡೆದು ಅವರ ಊರಿಗೆ ಮರಳುತ್ತಾರೆ. ಹೆಚ್ಚಿನವರು ಇದೇ ರೀತಿ ಮಾಡುವುದರಿಂದ ಈ ಭಾಗದಲ್ಲಿ ಪವರ್ ಮ್ಯಾನ್ ಕೊರತೆ ಉಂಟಾಗುತ್ತಿದೆ. ದ ಕ ಜಿಲ್ಲೆಯವರು ಪವರ್‌ಮ್ಯಾನ್ ಕೆಲಸಕ್ಕೆ ಅರ್ಜಿ ಹಾಕುವುದೇ ಕಡಿಮೆಯಾಗಿದೆ. ಈ ಕಾರಣಕ್ಕೆ ಅವರಿಗೆ ತರಬೇತಿ ನೀಡಿ ಅವರನ್ನು ಪವರ್ ಮ್ಯಾನ್ ಹುದ್ದಗೆ ನೇಮಕಾತಿ ಮಾಡಿಕೊಳ್ಳಬೇಕಿದೆ. ಆಸಕ್ತಿ ಇರುವ ಅಭ್ಯರ್ಥಿಗಳಿಗೆ ನಾನು ನನ್ನ ಟ್ರಸ್ಟ್ ಮೂಲಕ ತರಬೇತಿ ನೀಡುತ್ತೇನೆ ಇಲಾಖೆಯಿಂದ ತರಬೇತಿಗೆ ಬೇಕಾದ ವ್ಯವಸ್ಥೆಗಳನ್ನು ಜೋಡನೆ ಮಾಡಬೇಕು ಎಂದು ಸಚಿವರಲ್ಲಿ ಕೇಳಿಕೊಂಡರು. ಇದಕ್ಕೆ ಉತ್ತರಿಸಿದ ಸಚಿವರು ಒಟ್ಟು ೬ ಸಾವಿರ ಪವರ್‌ಮ್ಯಾನ್‌ಗಳ ಬೇಡಿಕೆ ಇದೆ ಆದರೆ ಒಮ್ಮೆಲೆ ೬ ಸಾವಿರ ಮಂದಿಯನ್ನು ನೇಮಕಾತಿ ಮಾಡಲು ಕಾನೂನಿನ ತೊಡಕು ಇದೆ ಆರಂಭದಲ್ಲಿ ಮೂರು ಸಾವಿರ ಮಂದಿಯನ್ನು ನೇಮಕಾತಿ ಮಡುತ್ತೇವೆ, ನಿಮ್ಮ ಮೂಲಕವೇ ಕರಾವಳಿ ಯ ಅಭ್ಯರ್ಥಿಗಳಿಗೆ ತರಬೇತಿ ನೀಡಿ ಆ ಮೂಲಕ ನಿಮ್ಮ ಊರಿನವರನ್ನೇ ಇಲ್ಲಿಗೆ ಪವರ್ ಮ್ಯಾನ್‌ಗಳಾಗಿ ನೇಮಕ ಮಾಡೋಣ ಎಂದು ಸೂಚಿಸಿದರು.


 


ಶಾಸಕರಿಗೆ ಶಹಬ್ಬಾಸ್ ಎಂದ ಸಚಿವರು


ಇದೇ ಮೊದಲ ಬಾರಿಗೆ ಪವರ್‌ಮ್ಯಾನ್‌ಗಳಿಗೆ ಕಂಬ ಹತ್ತುವ ಮತ್ತು ಇತರೆ ಕೆಲಸಗಳಿಗೆ ತಮ್ಮ ಟ್ರಸ್ಟ್ ಮೂಲಕ ಉಚಿತ ತರಬೇತಿ ನೀಡಿ ಅವರಿಗೆ ಉದ್ಯೋಗ ನೀಡಲು ಮುಂದಾಗಿದ್ದೀರಿ ನಿಮ್ಮ ಈ ಉತ್ಸಾಹಕ್ಕೆ ಅಭಿನಂದನೆ ಸಲ್ಲಿಸುವುದಾಗಿ ಸಚಿವ ಕೆ ಜೆ ಜಾರ್ಜ್ ಹೇಳಿದರು. ನೀವು ಈಗಾಗಲೇ ಕೆಎಸ್‌ಆರ್‌ಟಿಸಿಯಲ್ಲಿ ಅನೇಕ ಮಂದಿಗೆ ತಾತ್ಕಾಲಿಕ ಚಾಲಕ ಕೆಲಸ ಕೊಡಿಸಿದ್ದೀರಿ ಎಂಬುದನ್ನು ತಿಳಿದುಕೊಂಡೆ ನಿಮ್ಮ ಕ್ಷೇತ್ರದ ಯುವಕರಿಗೆ ಉದ್ಯೋಗ ಕೊಡಿಸುವಲ್ಲಿ ನಿಮ್ಮ ಮುತುವರ್ಜಿಗೆ ಶಹಬ್ಬಾಸ್ ಎಂದು ಸಚಿವರು ಹೇಳಿದರು.


 


 


ಉಪ್ಪಿನಂಗಡಿಯ ಕರ್ವೆಲ್ ಮತ್ತು ಕೊಯಿಲದಲ್ಲಿ ಸಬ್‌ಸ್ಟೇಷನ್ ಗೆ ಸೂಚನೆ


ಉಪ್ಪಿನಂಗಡಿಯ ಕರ್ವೆಲ್ ಮತ್ತು ಕೊಯಿಲದಲ್ಲಿ ಸಬ್‌ಸ್ಟೇಷನ್ ನಿರ್ಮಾಣ ಮಾಡಲು ಜಾಗ ಮಂಜೂರು ಮಾಡಿಸಿಕೊಟ್ಟಿದ್ದೇನೆ, ಕಳೇದ ಎಂಟು ತಿಂಗಳಿನಿಂದ ಇಲಾಖೆಯ ಅಧಿಕಾರಿಗಳಿಗೆ ಕರೆ ಮಾಡಿ ಸಬ್‌ಸ್ಟೇಷನ್ ಶೀಘ್ರಗತಿಯಲ್ಲಿ ಮಾಡಿ ಎಂದು ಹೇಳಿದ್ದರೂ ಕೆಲಸ ಮಾತ್ರ ನಿಧಾನಗತಿಯಲ್ಲಿ ಸಾಗುತ್ತಿದೆ ಎಂದು ಸಚಿವರ ಗಮನಕ್ಕೆ ತಂದರು. ಇದಕ್ಕೆ ಅಧಿಕಾರಿಗಳು ಉತ್ತರ ನೀಡಲು ಮುಂದಾದಾಗ ಶಾಸಕರು ನೀವು ಕಥೆ ಹೇಳುವುದು ಬೇಡ ಯಾಕೆ ತಡವಾಗಿದೆ ಎಂಬುದಕ್ಕೆ ಉತ್ತರ ಕೊಡಿ. ನಿಮ್ಮ ಕಥೆ ಕೇಳಲು ನಾನು ಪ್ರಶ್ನೆ ಕೇಳಿದ್ದಲ್ಲ ಎಂದು ಶಸಕರು ಖಾರವಾಗಿಯೇ ಪ್ರಶ್ನಿಸಿದರು. ಇದಕ್ಕೆ ಉತ್ತರ ನೀಡಿದ ಸಚಿವರು ವಾರದೊಳಗೆ ಸಬ್‌ಸ್ಟೇಷನ್ ಕಾಮಗಾರಿಯನ್ನು ಪೂರ್ಣಗೊಳಿಸಲು ಪ್ರಯತ್ನ ಮಾಡಿ, ಅಶೋಕ್ ರೈ ಏನೇ ಹೇಳಿದರೂ ತಕ್ಷಣ ಸ್ಪಂದಿಸಿ ಎಂದು ಅಧಿಕಾರಿಗಳಿಗೆ ಸಚಿವರು ಸೂಚನೆಯನ್ನು ನೀಡಿದರು.


 


 


ಬಡವರ ಮನೆ ಮೇಲಿರುವ ತಂತಿ ತೆರವು ಮಾಡಿ


ಅನೇಕ ಕಡೆಗಳಲ್ಲಿ ಬಡವರ ಮನೆಯ ಮೇಲೆ ವಿದ್ಯುತ್ ತಂತಿಗಳನ್ನು ಹಾಕಿದ್ದೀರಿ ಅದನ್ನು ತೆರವು ಮಾಡಬೇಕು. ಈಗಾಗಲೇ ಹಲವು ಮಂದಿ ಇಲಾಖೆಗೆ ಅರ್ಜಿ ಹಾಕಿದರೂ ನಿಮ್ಮ ಸ್ವಯಂ ಖರ್ಚಿನಿಂದ ತೆರವು ಮಡಿ ಎಂದು ಮೆಸ್ಕಾಂ ತಿಳಿಸಿದೆ. ಲೈನ್ ತೆರವು ಮಾಡಲು ಬಡವರ ಬಳಿ ಹಣವಿಲ್ಲ. ಮೂರು ಸೆಂಟ್ಸ್ ಜಾಗದಲ್ಲಿ ಮನೆ ಮಾಡಿಕೊಂಡು ಬಡತನದಿಂದ ಕಾಲ ಕಳೆಯುವ ಕುಟುಂಬಗಳಲ್ಲಿ ಲೈನ್ ಬದಲಾಯಿಸಿಕೊಳ್ಳಲು ಆರ್ಥಿಕಶಕ್ತಿಯಿಲ್ಲ. ಇಲಾಖೆಯೇ ಸ್ವಯಂ ಖರ್ಚು ಮಡಿ ಬಡವರ ಮನೆಯ ಮೇಲಿನ ಲೈನ್ ತೆಗೆಯಬೇಕು ಎಂದು ಸಚಿವರಲ್ಲಿ ಶಾಸಕರು ಮನವಿ ಮಾಡಿದರು. ಇದಕ್ಕೆ ಉತ್ತರಿಸಿದ ಕೆಪಿಟಿಸಿಎಲ್ ಎಂ ಡಿ ಪಂಕಜ್ ಪಾಂಡೆ ಕೆಲವರು ತಂತಿಯ ಅಡಿಯಲ್ಲೇ ಮನೆ ಕಟ್ಟಿಕೊಂಡಿದ್ದಾರೆ, ತಂತಿ ಮೊದಲೇ ಇತ್ತು. ಮನೆ ಕಟ್ಟಿದ ಮೇಲೆ ನಾವು ತಂತಿ ಎಳೆದಿಲ್ಲ ಎಂದು ಸ್ಪಷ್ಟನೆ ನೀಡಿದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಶಾಸಕರು ನೀವು ಬಡವರ ಜಾಗದ ಮೇಲೆ ಯಾಕೆ ತಂತಿ ಎಳೆದಿದ್ದೀರಿ, ಅವರಿಗೆ ಇರುವ ಮೂರರಿಂದ ೫ ಸೆಂಟ್ಸ್ ಜಾಗದಲ್ಲಿ ತಂತಿ ಎಳೆದರೆ ಅವರು ಎಲ್ಲಿ ಮನೆ ಕಟ್ಟುವುದು? ಮನೆ ಕಟ್ಟಲು ಜಾಗವಿಲ್ಲದೆ ತಂತಿಯ ಅಡಿಯಲ್ಲೇ ಮನೆ ಕಟ್ಟಿದ್ದಾರೆ. ನಮಗೆ ಯಾವುದೇ ಕಾರಣ ಹೇಳಬೇಡಿ ತಂತಿಯನ್ನು ತೆರವು ಮಾಡಿ ಬಡವರಿಗೆ ನೆರವಾಗಬೇಕು ಎಂದು ಮನವಿ ಮಾಡಿದರು. ಇದಕ್ಕೆ ಸ್ಪಂದಿಸಿದ ಸಚಿವರು ಕೂಡಲೇ ಇಂಥಹ ಮನೆಗಳ ಪಟ್ಟಿ ಮಾಡಿ ಅವುಗಳನ್ನು ತೆರವು ಮಾಡಿ ಎಂದು ಅಧಿಕರಿಗಳಿಗೆ ಸೂಚನೆ ನೀಡಿದರು.


 


 


ಜೋತು ಬಿದ್ದ ತಂತಿ ತೆರವು ಮಾಡಿ


ಪುತ್ತೂರು ನಗರ ಸೇರಿದಂತೆ ಗ್ರಾಮಾಂತರ ಭಾಗದಲ್ಲಿ ಹಳೆಯ ಕಾಲದ ವಿದ್ಯುತ್ ತಂತಿಗಳು ಜೋತು ಬೀಳುತ್ತಿದೆ ಅವುಗಳನ್ನು ತೆರವು ಮಾಡಿ ಹೊಸ ತಂತಿಗಳನ್ನು ಅಳವಡಿಸುವಂತೆಯೂ ಶಾಸಕರು ಸಚಿವರಲ್ಲಿ ಮನವಿ ಮಾಡಿದರು.


ವೇದಿಕೆಯಲ್ಲಿ ಕೆಪಿಟಿಸಿಎಲ್ ಎಂ ಡಿ ಪಂಕಜಕುಮಾರ್ ಪಾಂಡೆ, ಮೆಸ್ಕಾಂ ಎಂ ಡಿ ಪದ್ಮಾವತಿ ಉಪಸ್ಥಿತರಿದ್ದರು.

ಮಾಜಿ ಸಿಎಂ ಡಿ.ವಿ. ಇಂದು ಪುತ್ತೂರಿಗೆ

Posted by Vidyamaana on 2023-05-02 02:27:38 |

Share: | | | | |


ಮಾಜಿ ಸಿಎಂ ಡಿ.ವಿ. ಇಂದು ಪುತ್ತೂರಿಗೆ

ಪುತ್ತೂರು:ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಅವರ ಪರ ಮತಯಾಚನೆಗೆ ಮಾಜಿ ಮುಖ್ಯಮಂತ್ರಿ, ಮಾಜಿ ಕೇಂದ್ರ ಸಚಿವರೂ ಆಗಿರುವ ಸಂಸದ, ಪುತ್ತೂರಿನ ಮಾಜಿ ಶಾಸಕ ಡಿ.ವಿ.ಸದಾನಂದ ಗೌಡ ಅವರು ಮೇ 2ರಂದು ಪುತ್ತೂರುಗೆ ಭೇಟಿ ನೀಡಲಿದ್ದಾರೆ.

ಬೆಳಿಗ್ಗೆ ಪುತ್ತೂರು ಬಿಜೆಪಿ ಚುನಾವಣಾ ಕಾರ್ಯಾಲಯಕ್ಕೆ ಭೇಟಿ ನೀಡಿ ಅಲ್ಲಿ ಪತ್ರಿಕಾಗೋಷ್ಠಿ ನಡೆಸಲಿದ್ದಾರೆ.ಬಳಿಕ ಬಿಜೆಪಿ ಅಭ್ಯರ್ಥಿ ಆಶಾತಿಮ್ಮಪ್ಪ ಅವರ ಪರವಾಗಿ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಲಿದ್ದಾರೆ.ಸಂಜೆ ಸುಳ್ಯಕ್ಕೆ ತೆರಳಲಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ.

ಬನ್ನೂರು: ರೈ ಚಾರಿಟೇಬಲ್‌ಟ್ರಸ್ಟ್ ಫಲಾನುಭವಿಗಳ ಸಭೆ

Posted by Vidyamaana on 2023-11-02 18:15:15 |

Share: | | | | |


ಬನ್ನೂರು: ರೈ ಚಾರಿಟೇಬಲ್‌ಟ್ರಸ್ಟ್ ಫಲಾನುಭವಿಗಳ ಸಭೆ

ಪುತ್ತೂರು: ಕಳೆದ ಹತ್ತು ವರ್ಷಗಳ ಹಿಂದೆ ರೈ ಎಸ್ಟೇಟ್ ಎಜುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟನ್ನು ಸ್ತಾಪನೆ ಮಾಡಿದ್ದೇ ಬಡವರ ಸೇವೆಗಾಗಿ, ಇದರಲ್ಲಿ ಯಾವುದೇ ರಾಜಕೀಯವಿಲ್ಲ, ಅಶೋಕ್ ರೈಯವರು ಶಾಸಕರಾಗುವ ಮೊದಲೇ ಟ್ರಸ್ಟ್‌ನಿಂದ ಸಮಾಜ ಸೇವೆ ನಡೆಯುತ್ತಲೇ ಇದೆ ಎಂದು ಟ್ರಸ್ಟ್‌ನ ಪ್ರಮುಖರಾದ ನಿಹಾಲ್ ಶೆಟ್ಟಿ ಹೇಳಿದರು.


ಅವರು ಬನ್ನೂರು ನವೋದಯ ಯುವಕ ಮಂಡಲದ ಸಭಾಂಗಣದಲ್ಲಿ ನಡೆದ ರೈ ಚಾರಿಟೇಬಲ್ ಟ್ರಸ್ಟ್ ಫಲಾನುಭವಿಗಳ ಸಭೆಯಲ್ಲಿ ಮಾತನಾಡಿದರು.


ಕಳೆದ ಹತ್ತು ವರ್ಷಗಳಿಂದ ವಿವಿಧ ಸೇವೆಗಳನ್ನು ಟ್ರಸ್ಟ್ ನೀಡುತ್ತಾ ಬಂದಿದೆ. ಬಡ ಮಹಿಳೆಯರಿಗೆ ಹೊಲಿಗೆ ತರಬೇತಿ , ಚಾಲನಾ ತರಬೇತಿ, ಮೆಡಿಕಲ್ ಕ್ಯಾಂಪ್, ಬಡವರಿಗೆ ಆರ್ಥಿಕ ನೆರವು ಸೇರಿದಂತೆ ಅನೇಕ ಬಡವರ ಸಮಾಜಮುಖಿ ಕೆಲಸಗಳನ್ನು ಮಾಡಿಕೊಂಡು ಬರುತ್ತಿದೆ. ಟ್ರಸ್ಟ್ ಮೂಲಕ ತರಬೇತಿ ಪಡೆದ ಅನೇಕ ಮಂದಿ ಸ್ವ ಉದ್ಯೋಗದಲ್ಲಿ ತೊಡಗಿಸಿಕೊಂಡು ಸ್ವಾಭಿಮಾನಿಗಳಾಗಿದ್ದು ಅತ್ಯಂತ ಸಂತೋಷದ ವಿಚಾರವಾಗಿದೆ. ಬಡವರ ಮಕ್ಕಳ ವಿದ್ಯಾಬ್ಯಾಸಕ್ಕೆ ಟ್ರಸ್ಟ್‌ನಿಂದ ಆರ್ಥಿಕ ನೆರವು ನೀಡಲಾಗುತ್ತಿದೆ. ಈ ಬಾರಿಯ ದೀಪಾವಳಿಯಲ್ಲೂ ಬಡವರಿಗೆ ವಸ್ತ್ರ ವಿತರಣೆ ಹಾಗೂ ಸಹಭೋಜನ ಕಾರ್ಯಕ್ರಮ ನಡೆಯಲಿದ್ದು ಎಲ್ಲಾ ಗ್ರಾಮಸ್ಥರು ಇದರಲ್ಲಿ ಭಾಗವಹಿಸುವಂತೆ ಮನವಿ ಮಾಡಿದರು.


ವೇದಿಕೆಯಲ್ಲಿ ಟ್ರಸ್ಟ್‌ನ ಕಾರ್ಯಾಧ್ಯಕ್ಷರಾದ ಸುದೇಶ್ ಶೆಟ್ಟಿ, ಬನ್ನೂರು ನವೋದಯ ಯುವಕಮಂಡಲದ ಅಧ್ಯಕ್ಷರಾದ ರಾಧಾಕೃಷ್ಣ ರೈ, ಕಾರ್ಯದರ್ಶಿ ರೋಹಿತ್ ರೈ, ಚಂಧ್ರಾಕ್ಷ, ದಿನೇಶ್ ಸಾಲಿಯಾನ್, ಸಾಹಿರಾ ಬಾನು ಸೇರಿದಂತೆ ಟ್ರಸ್ಟ್‌ನ ಸದಸ್ಯರು ಹಾಗೂ ಗ್ರಾಮಸ್ಥರು ಉಪಸ್ತಿತರಿದ್ದರು.



Leave a Comment: