ಪುತ್ತೂರಿನ ಪ್ರತಿಷ್ಠಿತ ಕಲ್ಲೇಗ ಟೈಗರ್ಸ್ ಮುಖ್ಯಸ್ಥ ಅಕ್ಷಯ್ ಕಲ್ಲೇಗ ತಡರಾತ್ರಿ ಬರ್ಬರ ಹತ್ಯೆ

ಸುದ್ದಿಗಳು News

Posted by vidyamaana on 2023-11-07 04:42:13 |

Share: | | | | |


ಪುತ್ತೂರಿನ ಪ್ರತಿಷ್ಠಿತ ಕಲ್ಲೇಗ ಟೈಗರ್ಸ್ ಮುಖ್ಯಸ್ಥ ಅಕ್ಷಯ್ ಕಲ್ಲೇಗ ತಡರಾತ್ರಿ ಬರ್ಬರ ಹತ್ಯೆ

ಪುತ್ತೂರು: ಪುತ್ತೂರಿನ ನಗರದಲ್ಲಿ ತಲವಾರ್ ನಲ್ಲಿ ಕಡಿದು ಕಲ್ಲೇಗ ಟೈಗರ್ಸ್ ನ ಪ್ರಮುಖ ನಾಯಕನನ್ನು ಹತ್ಯೆ ಮಾಡಿದ ಘಟನೆ ಇದೀಗ ನಡೆದಿದೆ.


ಟೈಗರ್ಸ್ ನ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಅವರನ್ನು ಹತ್ಯೆಗೀಡಾದ ಯುವಕ. ಈತ ಪುತ್ತೂರಿನ ನಗರದಲ್ಲಿ ಇದ್ದಾಗ ತಂಡಯೊಂದು ಆಗಮಿಸಿ ಯದ್ವಾತದ್ವ ತಲವಾರ್ ನಲ್ಲಿ ದಾಳಿ ನಡೆಸಿ, ಹತ್ಯೆ ಮಾಡಿದೆ. ಸ್ಥಳಕ್ಕೆ ಆಗಮಿಸಿದ ಪುತ್ತೂರು ನಗರ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

 Share: | | | | |


ಪಂಜಿಮೊಗರು ಜೋಡಿ ಕೊಲೆಯಾಗಿದ್ದ ಮನೆ ಮಾಲೀಕನಿಗೆ ಇರಿತ, ಆರೋಪಿ ಜಾವೇದ್ ಪರಾರಿ

Posted by Vidyamaana on 2024-04-07 10:42:15 |

Share: | | | | |


ಪಂಜಿಮೊಗರು ಜೋಡಿ ಕೊಲೆಯಾಗಿದ್ದ ಮನೆ ಮಾಲೀಕನಿಗೆ ಇರಿತ, ಆರೋಪಿ ಜಾವೇದ್ ಪರಾರಿ

ಉಳ್ಳಾಲ, ಎ.7: ಗುಜರಿ ವ್ಯಾಪಾರಿಯೋರ್ವನನ್ನ ತನ್ನ ಬಾಡಿಗೆ ಮನೆಗೆ ಕರೆಸಿ ಇರಿದು ಕೊಲೆಗೆ ಯತ್ನಿಸಿದ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಮಹಾತ್ಮ ಗಾಂಧಿ ರಂಗಮಂದಿರ ಬಳಿ ಶನಿವಾರ ಸಂಜೆ ನಡೆದಿದೆ.


ಮಂಗಳೂರಿನ‌ ಕಾವೂರು ಪಂಜಿಮೊಗರು ನಿವಾಸಿ ಹಮೀದ್ ಇರಿತಕ್ಕೊಳಗಾದ ಗುಜರಿ ವ್ಯಾಪಾರಿ. ಮೂಲತಃ ತಣ್ಣೀರುಬಾವಿ ನಿವಾಸಿ ಸದ್ರಿ ಉಳ್ಳಾಲದ ಮಹಾತ್ಮಗಾಂಧಿ ರಂಗಮಂದಿರದ ಬಳಿಯ ಬಾಡಿಗೆ ಮನೆಯಲ್ಲಿ ವಾಸವಿರುವ ಮೊಹಮ್ಮದ್ ಜಾವೇದ್ ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿದ ಆರೋಪಿ.

ಜಾವೇದ್ ಇಂದು ಸಂಜೆ ಹಮೀದ್ ನನ್ನು ಹಣಕಾಸಿನ ವಿಚಾರದಲ್ಲಿ ಮಾತುಕತೆ ನಡೆಸಲು ಉಳ್ಳಾಲದ ತನ್ನ ಬಾಡಿಗೆ ಮನೆಗೆ ಕರೆಸಿಕೊಂಡಿದ್ದ. ಈ ವೇಳೆ ಹಮೀದ್ ಎದೆಯ ಭಾಗಕ್ಕೆ ಜಾವೇದ್ ಚೂರಿಯಿಂದ ಇರಿದಿದ್ದಾನೆ. ಗಂಭೀರ ಗಾಯಗೊಂಡ ಹಮೀದ್ ಹೇಗೋ ತಪ್ಪಿಸಿಕೊಂಡು ಉಳ್ಳಾಲದ ಖಾಸಗಿ ಆಸ್ಪತ್ರೆಗೆ ಹೋಗಿ ಪ್ರಥಮ ಚಿಕಿತ್ಸೆ ಪಡೆದಿದ್ದಾರೆ. ಹಮೀದ್ ಬಾಡಿಗೆ ಮನೆಯಿಂದ ತಪ್ಪಿಸಿ ಓಡಿದ ರಭಸಕ್ಕೆ ರಸ್ತೆಯಲ್ಲೆಲ್ಲಾ ರಕ್ತ ಹರಿದಿದೆ. ಗಂಭೀರ ಗಾಯಗೊಂಡಿದ್ದ ಹಮೀದ್ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಪುತ್ತೂರು: ಮೆಸ್ಕಾಂ ತುರ್ತು ಕಾಮಗಾರಿ ಇಂದು (ಅಕ್ಟೋಬರ್ 07) ವಿದ್ಯುತ್ ನಿಲುಗಡೆ

Posted by Vidyamaana on 2023-10-07 07:18:54 |

Share: | | | | |


ಪುತ್ತೂರು: ಮೆಸ್ಕಾಂ ತುರ್ತು ಕಾಮಗಾರಿ ಇಂದು (ಅಕ್ಟೋಬರ್ 07) ವಿದ್ಯುತ್ ನಿಲುಗಡೆ

ಪುತ್ತೂರು: 33ಕೆ.ವಿ ಪುತ್ತೂರು-ಕಡಬ-ಸುಬ್ರಹ್ಮಣ್ಯ ಹಾಗೂ 33ಕೆ.ವಿ ಪುತ್ತೂರು- ಸವಣೂರು- ನೆಲ್ಯಾಡಿ ವಿದ್ಯುತ್ ಮಾರ್ಗಗಳ ಪಾಲನಾ ಕಾರ್ಯ ಹಮ್ಮಿಕೊಂಡಿರುವುದರಿಂದ

ಹಾರ್ಟ್ ಅಟ್ಯಾಕ್ - ಹಾರ್ಟ್ ಫೈಲ್ಯೂರ್ - ಕಾರ್ಡಿಯಾಕ್ ಅರೆಸ್ಟ್: ಏನಿದೆ ವ್ಯತ್ಯಾಸ?


ಅ.7ರಂದು ಶನಿವಾರ ಪೂರ್ವಾಹ್ನ 10:00 ರಿಂದ ಸಾಯಂಕಾಲ 3:00 ಗಂಟೆಯವರೆಗೆ 33ಕೆ.ವಿ ಪುತ್ತೂರು- ಕಡಬ-ಸುಬ್ರಹ್ಮಣ್ಯ ಹಾಗೂ 33ಕೆ.ವಿ ಪುತ್ತೂರು-ಸವಣೂರು- ನೆಲ್ಯಾಡಿ ವಿದ್ಯುತ್ ಮಾರ್ಗಗಳ ವಿದ್ಯುತ್ ನಿಲುಗಡೆ ಮಾಡಲಾಗುವುದು. ಆದ್ದರಿಂದ 33/11ಕೆವಿ ಕಡಬ, ನೆಲ್ಯಾಡಿ, ಸವಣೂರು ಮತ್ತು ಬಿಂದು ವಿದ್ಯುತ್ ಉಪಕೇಂದ್ರದಿಂದ ಹೊರಡುವ ಎಲ್ಲಾ 11 ಕೆವಿ ಫೀಡರ್‌ಗಳಿಂದ ವಿದ್ಯುತ್ ಸರಬರಾಜಾಗುವ ವಿದ್ಯುತ್ ಬಳಕೆದಾರರು ಗಮನಿಸಿ ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಕಡಬದಲ್ಲಿ ಕಾಡಾನೆ ದಾಳಿ: ವ್ಯಕ್ತಿಗೆ ಗಂಭೀರ ಗಾಯ

Posted by Vidyamaana on 2023-09-28 21:01:17 |

Share: | | | | |


ಕಡಬದಲ್ಲಿ ಕಾಡಾನೆ ದಾಳಿ: ವ್ಯಕ್ತಿಗೆ ಗಂಭೀರ ಗಾಯ

ಕಡಬ: ಸಮೀಪದ ಮೀನಾಡಿಯಲ್ಲಿಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟು ಮೂರು ತಿಂಗಳು ಕಳೆಯುತ್ತಿದ್ದಂತೆಯೇ ಐತ್ತೂರು ಗ್ರಾಮದಲ್ಲಿ ಮತ್ತೊಂದು ಕಾಡಾನೆ ದಾಳಿಯಾಗಿದ್ದು, ವ್ಯಕ್ತಿಯೊಬ್ಬರು ಗಂಭೀರ ಗಾಯಗೊಂಡಿದ್ದಾರೆ.



ಐತ್ತೂರು ಗ್ರಾಮದ ಗೇರ್ತಿಲ‌ ನಿವಾಸಿ ಓಡಿ ಎಂಬವರ ಪುತ್ರ ಕೂಲಿ ಕಾರ್ಮಿಕ ಚೋಮ (56) ಗಾಯಗೊಂಡವರು.


ಅವರು ಗುರುವಾರ ಸಂಜೆ ಕೂಲಿ‌ ಕೆಲಸ ಬಿಟ್ಟು ಮನೆಯ ಕಡೆ ತೆರಳುತ್ತಿದ್ದ ಸಂದರ್ಭದಲ್ಲಿ ಗ್ರಾಮದ ನೆಲ್ಯಡ್ಕ ಶಾಲೆಗೆ ಹೊಂದಿಕೊಂಡಿರುವ ಕಾರ್ತಿಕೇಯ ಭಜನಾ ಮಂದಿರದ ಬಳಿ ಕಾಡಾನೆ ಹಠಾತ್ತಾಗಿ ಎದುರು ಬಂದು ಅವರನ್ನು‌ ಸೊಂಡಿಲಿನಿಂದ ಎತ್ತಿ ಬಿಸಾಕಿದೆ. ಪರಿಣಾಮವಾಗಿ ಚೋಮ‌ ಗಂಭೀರ ಗಾಯಗೊಂಡಿದ್ದಾರೆ. ಕೂಡಲೇ ಅವರನ್ನು ಕಡಬ ಸರಕಾರಿ ಆಸ್ಪತ್ರೆಗೆ ದಾಖಲಿಸಿ ಅಲ್ಲಿ ಪ್ರಥಮ‌ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರು ಖಾಸಗಿ ಅಸ್ಪತ್ರೆಗೆ ದಾಖಲಿಸಲಾಗಿದೆ.


ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ

ಬೊಳ್ಳಾಣ ಆಂಜನೇಯ ಭಜನಾಮಂದಿರ ಲೋಕಾರ್ಪಣಾ ಕಾರ್ಯಕ್ರಮ

Posted by Vidyamaana on 2024-01-23 08:46:16 |

Share: | | | | |


ಬೊಳ್ಳಾಣ ಆಂಜನೇಯ ಭಜನಾಮಂದಿರ ಲೋಕಾರ್ಪಣಾ ಕಾರ್ಯಕ್ರಮ

ಪುತ್ತೂರು: ರಾಜಕೀಯದವರು ತಮ್ಮ ಲಾಭಕ್ಕೋಸ್ಕರ ಯಾರದ್ದೋ ಮಕ್ಕಳನ್ನು ಬಲಿಪಶು ಮಾಡುವ ಚಾಲ್ತಿ ಇದ್ದು ಕೆಟ್ಟ ಚಟುವಟಿಕೆಯಲ್ಲಿ ನಿಮ್ಮ ಮಕ್ಕಳು ಭಾಗಿಗಳಾಗಿ ಅವರು ಜೀವನ ಪೂರ್ತಿ ಕೋರ್ಟು, ಕೇಸು ಅಲೆದಾಡದಂತೆ ನೋಡಿಕೊಳ್ಳಿ ಎಂದು ಪುತ್ತೂರು ಶಸಕರಾದ ಅಶೋಕ್ ರೈಯವರು ಪೋಷಕರಿಗೆ ಎಚ್ಚರಿಕೆ ಮಾತುಗಳನ್ನು ನೀಡಿದ್ದಾರೆ.


ರಾಜಕೀಯದವರು ತಮ್ಮ ಲಾಭಕ್ಕೆ ಏನು ಬೇಕಾದರೂ ಭಾಷಣ ಮಾಡಬಹುದು, ಅವರ ಭಾಷಣ ಕೇಳಿ ಯುವ ಸಮೂಹ ಹಾಳಾಗದಂತೆ ಎಚ್ಚರವಹಿಸಬೇಕು. ನೀವು ಒಂದು ಬಾರಿ ಕೇಸು ಮೈಮೇಲೆ ಹಾಕಿಕೊಂಡರೆ ಮತ್ತೆ ಜೀವನ ಪೂರ್ತಿ ನೀವಿ ಕೋರ್ಟಿಗೆ ಅಲೆದಾಡಬೇಕಾಗುತ್ತದೆ , ಸಮಾಜದಲ್ಲಿ ಎಲ್ಲರೊಂದಿಗೂ ಅನ್ಯೋನ್ಯತೆಯಿಂದ ಬಾಳಿ ಬದುಕುವ ಮೂಲಕ ಜೀವನ ರೂಪಿಸಿಕೊಳ್ಳಿ , ನೀವು ಜೀವನದಲ್ಲಿ ಸೋತಗ ನಿಮ್ಮ ಜೊತೆ ಯಾರೂ ಇರುವುದಿಲ್ಲ ಕೊನೆಯವರೆಗೂ ನಿಮ್ಮ ಜೊತೆ ಇರುವುದು ನಿಮ್ಮ ತಂದೆ ತಾಯಿ ಅವರ ಕಣ್ಣಲ್ಲಿ ನೀರು ಭರಿಸುವ ಕೆಲಸವನ್ನು ಯಾರೂ ಮಾಡಬರದು ಎಂದು ಹೇಳಿದರು.


ಅವರು ಬೊಳ್ಳಾಣ ಆಂಜನೇಯ ಭಜನಾಮಂದಿರದ ಲೋಕಾರ್ಪಣಾ ಕಾರ್ಯಕ್ರಮದಲ್ಲಿ ಮಾತನಾಡಿದರು.


ಭಾತದಲ್ಲಿ ಎಲ್ಲಾ ಜಾತಿ, ಧರ್ಮದ ಜನರಿದ್ದಾರೆ, ದೇಶದಲ್ಲಿರುವ ಎಲ್ಲಾ ಧರ್ಮದ ಜನರೂ ಪರಸ್ಪರ ಅಣ್ಣ ತಮ್ಮಂದಿರಂತೆ ಬಾಳಿದರೆ ಮಾತ್ರ ದೇಶ ಅಭಿವೃದ್ದಿಯಾಗಲು ಸಾಧ್ಯ, ಭಾರತ ವಿಶ್ವಗುರುವಾಗಲು ಸಾಧ್ಯ ಭಾಷಣದಿಂದ ಭಾರತ ವಿಶ್ವಗುರುವಾಗಲು ಸಾಧ್ಯವೇ ಇಲ್ಲ ಎಂದು ಹೇಳಿದರು.ಜ.೨೨ ರಂದು ಶ್ರೀರಾಮಮಂದಿರ ಲೋಕಾರ್ಪಣೆಯಾಗಿದೆ, ದೇಶದಲ್ಲಿ ಅದಾಗ್ತದೆ, ಇದಾಗ್ತದೆ ಎಂದು ಆತಂಕದ ಮಾತುಗಳನ್ನು ಕೆಲವರು ಹೇಳಿದ್ದರು. ಆದರೆ ರಾಮಮಂದಿರ ಲೋಕಾರ್ಪಣೆ ದಿನ ದೇಶದಲ್ಲಿ ಎಲ್ಲೂ ಯಾವುದೇ ಅಹಿತಕರ ಘಟನೆ ನಡೆದಿಲ್ಲ , ಅಹಿತಕರ ಘಟನೆ ನಡೆಯುವುದು ಯರಿಗೂ ಬೇಕಾಗಿಲ್ಲ, ಜನ ಪ್ರತೀ ದಿನವೂ ನೆಮ್ಮದಿಯನ್ನು ಬಯಸುತ್ತಾರೆ ಎಂದು ಹೇಳಿದರು. ದೇಶ ಅಭಿವೃದ್ದಿಯಗಬೇಕಾದರೆ ಇಲ್ಲಿರುವ ಪ್ರತೀಯೊಬ್ಬರೂ ಪರಸ್ಪರ ಸಾಹೋದರ್ಯತೆಯಿಂದ ಬಾಳಬೇಕಾದ ಅಗತ್ಯವಿದೆ ಎಂದು ಶಾಸಕರು ಹೇಳಿದರು.

ಬೆಳ್ತಂಗಡಿ : ಹರೀಶ್ ಪೂಂಜ ಬಂಧನ ಸಾಧ್ಯತೆ ಹಿನ್ನಲೆ ಹರೀಶ್ ಪೂಂಜ ನಿವಾಸಕ್ಕೆ ವಕೀಲರ ತಂಡ ಭೇಟಿ ನೀಡಿದೆ.

Posted by Vidyamaana on 2024-05-22 14:33:55 |

Share: | | | | |


ಬೆಳ್ತಂಗಡಿ : ಹರೀಶ್ ಪೂಂಜ ಬಂಧನ ಸಾಧ್ಯತೆ ಹಿನ್ನಲೆ ಹರೀಶ್ ಪೂಂಜ ನಿವಾಸಕ್ಕೆ ವಕೀಲರ ತಂಡ ಭೇಟಿ ನೀಡಿದೆ.

ಬೆಳ್ತಂಗಡಿ : ಹರೀಶ್ ಪೂಂಜ ಬಂಧನ ಸಾಧ್ಯತೆ ಹಿನ್ನಲೆ ಹರೀಶ್ ಪೂಂಜ ನಿವಾಸಕ್ಕೆ ವಕೀಲರ ತಂಡ ಭೇಟಿ ನೀಡಿದೆ.

ವಿಟ್ಲ : ಹಿಂ.ಜಾ.ವೇ ಕಾರ್ಯಾಚರಣೆ : ಅಕ್ರಮ ಗೋ ಸಾಗಾಟದ ವಾಹನ ಪೊಲೀಸ್ ವಶಕ್ಕೆ

Posted by Vidyamaana on 2023-05-21 11:14:43 |

Share: | | | | |


ವಿಟ್ಲ : ಹಿಂ.ಜಾ.ವೇ ಕಾರ್ಯಾಚರಣೆ : ಅಕ್ರಮ ಗೋ ಸಾಗಾಟದ ವಾಹನ ಪೊಲೀಸ್ ವಶಕ್ಕೆ

ವಿಟ್ಲ : ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಕಾರ್ಯಾಚರಣೆ ನಡೆಸಿ ಅಕ್ರಮ ಗೋ ಸಾಗಾಟ ಮಾಡುತ್ತಿದ್ದ ವಾಹನವನ್ನು ಪೊಲೀಸರಿಗೊಪ್ಪಿಸಿ ಎರಡು ಜಾನುವಾರುಗಳನ್ನು ರಕ್ಷಣೆ ಮಾಡಿದ ಘಟನೆ ವಿಟ್ಲ ಸಮೀಪದ ಸಾಲೆತ್ತೂರು ಎಂಬಲ್ಲಿ ನಡೆದಿದೆ.ಕಂಬಳ ಕೋಣ ಎಂದು ನೆಪವೊಡ್ಡಿ ಜಾನುವಾರುಗಳನ್ನು ಸಾಗಾಟ ಮಾಡುತ್ತಿದ್ದರು ಎನ್ನಲಾಗಿದೆ.

ಈ ಬಗ್ಗೆ ತಿಳಿದ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಪಿಕಪ್ ವಾಹನವನ್ನು ತಡೆದು ಪೊಲೀಸರಿಗೊಪ್ಪಿಸಿದ್ದಾರೆ ಎಂದು ತಿಳಿದು ಬಂದಿದೆ.



Leave a Comment: