ತುಮಕೂರಿನಲ್ಲಿ ಮೂವರಿದ್ದ ಕಾರಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೊಂದು ರೋಚಕ ಟ್ವಿಸ್ಟ್!

ಸುದ್ದಿಗಳು News

Posted by vidyamaana on 2024-03-23 15:52:34 | Last Updated by Vidyamaana on 2024-03-23 15:52:34

Share: | | | | |


ತುಮಕೂರಿನಲ್ಲಿ ಮೂವರಿದ್ದ ಕಾರಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೊಂದು ರೋಚಕ ಟ್ವಿಸ್ಟ್!

ಬೆಳ್ತಂಗಡಿ : ತುಮಕೂರಿನಲ್ಲಿ ಕಾರಿಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ ಕಾರಿನೊಳಗಿದ್ದ ಮೂವರು ಸಾವನ್ನಪ್ಪಿದ ಸಂಬಂಧಿಸಿದಂತೆ ಮೂವರು ಸೇರಿ 50 ಲಕ್ಷ ಮಿಕ್ಕಿ ಹಣ ತುಮಕೂರು ಹೋಗುವಾಗ ತೆಗೆದುಕೊಂಡು ಹೋಗಿದ್ದರು ಎಂದು ಕುಟುಂಬ ಸದಸ್ಯರು ಕೋರಾ ಪೊಲೀಸರ ವಿಚಾರಣೆ ವೇಳೆ ಮಾಹಿತಿ ನೀಡಿದ್ದಾರೆ.

*💥Whats App Group ಗೆ ಸೇರಲು ಕ್ಲಿಕ್ ಮಾಡಿ

*ಹಣ ತೆಗೆದುಕೊಂಡು ಹೋದ ವಿಚಾರ*:  ಇನ್ನೂ ಕಾರಿನಲ್ಲಿ ಹೋಗುವಾಗ ಮದಡ್ಕದ ಇಸಾಕ್ ಉಜಿರೆಯಲ್ಲಿದ್ದ ಸ್ವಂತ ಮನೆಯನ್ನು ಮಾರಾಟ ಮಾಡಿದ ಹಣ ಮತ್ತು ಮಗಳ ಚಿನ್ನವನ್ನು ಅಡವಿಟ್ಟು ಸುಮಾರು 35 ಲಕ್ಷ ಹಣವನ್ನು ತೆಗೆದುಕೊಂಡು ಹೋಗಿದ್ದರು ಎಂದು ಇಸಾಕ್ ಪತ್ನಿ ಕೋರಾ ಪೊಲೀಸ್ ಠಾಣೆಯಲ್ಲಿ ಮಾ.23 ರಂದು ಪೊಲೀಸ್ ವಿಚಾರಣೆ ವೇಳೆ ಹೇಳಿಕೆಯನ್ನು ನೀಡಿದ್ದಾರೆ. ಇನ್ನೂ ಶಿರ್ಲಾಲು ಸಿದ್ದಿಕ್ ಮತ್ತು ಟಿ.ಬಿ.ಕ್ರಾಸ್ ಸಾಹುಲ್ ಹಮೀದ್ ಕೂಡ ಸ್ನೇಹಿತರ ಮೂಲಕ ಪಡೆದ ಸುಮಾರು 15 ಲಕ್ಷಕ್ಕೂ ಮಿಕ್ಕಿ ಹಣ ತುಮಕೂರು ಹೋಗುವಾಗ ತೆಗೆದುಕೊಂಡು ಹೋಗಿದ್ದರು ಎಂದು ಮನೆಯವರು ಹೇಳಿಕೆ ನೀಡಿದ್ದಾರೆ. ಒಟ್ಟು ಮೂವರ ಬಳಿ 50 ಲಕ್ಷಕ್ಕೂ ಮಿಕ್ಕಿ ಹಣ ತುಮಕೂರು ಹೋಗುವಾಗ ಇತ್ತು ಎನ್ನಲಾಗಿದೆ.

ತುಮಕೂರಿಗೆ ಕಳೆದ ಹನ್ನೊಂದು ದಿನದ ಹಿಂದೆ ವ್ಯವಹಾರ ಸಂಬಂಧ ಮದಡ್ಕದ ರಫೀಕ್ ಎಂಬವರ ಮಾಲೀಕತ್ವದ ಎಸ್ ಪ್ರೆಸ್ ಕಾರಿನಲ್ಲಿ ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಟಿ.ಬಿ.ಕ್ರಾಸ್ ನಿವಾಸಿ ಆಟೋ ಚಾಲಕ ಸಾಹುಲ್ ಹಮೀದ್(45) , ಕುವೆಟ್ಟು ಗ್ರಾಮದ ಮದಡ್ಕ ನಿವಾಸಿ ಇಸಾಕ್(56) , ಶಿರ್ಲಾಲು ಗ್ರಾಮದ ಸಿದ್ದಿಕ್(34) ಮೂವರು ಬಾಡಿಗೆ ಮಾಡಿಕೊಂಡು ಹೋಗಿದ್ದರು ಎಂದು ಹೇಳಲಾಗಿದೆ.

ಮೂವರು ಕೂಡ ನಕಲಿ ಚಿನ‌್ನದ ದಂಧೆಯ ಆಸೆಗೆ ಬಲಿಯಾಗಿದ್ದಾರೆ ಅನ್ನೋದು ಪ್ರಾಥಮಿಕ ವಿಚಾರಣೆ ವೇಳೆ ಗೊತ್ತಾಗಿದೆ. ನಮ್ಮ ಜಾಗದಲ್ಲಿ ಕೃಷಿ ಮಾಡುವಾಗ ಚಿನ್ನದ ಹಂಡೆ ಸಿಕ್ಕಿದೆ ಕಡಿಮೆ ಚಿನ್ನವನ್ನು ಬೆಲೆಗೆ ನೀಡುತ್ತೇವೆ ಎಂದು ಸುಳ್ಳು ಹೇಳಿ ಮೂವರನ್ನು ಕರೆಸಿ ಹಣ ದೋಚುವ  ಪ್ಲ್ಯಾನ್ ಮಾಡಿ ಕರೆಸಿಕೊಂಡು ಮಾ.21 ರಂದು ರಾತ್ರಿ ನಂತರ ಕೈಕಾಲು ಕಟ್ಟಿ ಹಾಕಿ ಕಾರಿಗೆ ಬೆಂಕಿ ಹಚ್ಚಿ ಕೊಲೆ ಮಾಡಿ ನಂತರ ಹಣವನ್ನು ದೋಚಿದ್ದಾರೆ ಎನ್ನಲಾಗಿದೆ. ಇನ್ನೂ ಪ್ರಕರಣ ಸಂಬಂಧ ಪ್ರಮುಖ ರೂವಾರಿ ತುಮಕೂರಿನ ಸ್ವಾಮಿ ಸೇರಿ ಆರು ಜನರನ್ನು ಮೊಬೈಲ್ ಕಾಲ್ ಡಿಟೈಲ್ಸ್ ಮೂಲಕ  ಕಾರ್ಯಾಚರಣೆ ನಡೆಸಿ ಮಾ.22 ರಂದು ರಾತ್ರಿ ವಶಕ್ಕೆ ಪಡೆದು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.

ಕೋರಾ ಪೊಲೀಸ್ ಠಾಣೆಯಲ್ಲಿ ಮಾ.22 ರಂದು ಸುಮೊಟೋ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಬೆಂಕಿಗಾಹುತಿಯಾದ ಕಾರನ್ನು ಕೋರಾ ಪೊಲೀಸ್ ಠಾಣೆಗೆ ತೆಗೆದುಕೊಂಡು ಬಂದಿದ್ದು. ಮೂವರ ಶವ ಸರಕಾರಿ ಆಸ್ಪತ್ರೆಯಲ್ಲಿ ಡಿಎನ್ಎ ಪರೀಕ್ಷೆ ಮಾಡಿದ ಬಳಿಕ ಮುಂದಿನ ಗುರುವಾರ ಅಥವಾ ಶುಕ್ರವಾರ ಮೃತದೇಹವನ್ನು ಗುರುತು ಪತ್ತೆಯಾದ ಬಳಿಕ ಅವರ ಕಟುಂಬ ಸದಸ್ಯರಿಗೆ ನೀಡಲಾಗುವುದು ಎಂದು ವೈದ್ಯರು ತಿಳಿಸಿದ್ದಾರೆ.


 Share: | | | | |


ಮಿತ್ತೂರು : ಇನ್ನೋವಾ - ಟಿಪ್ಪರ್ ನಡುವೆ ಅಪಘಾತ: ನಾಲ್ವರು ಆಸ್ಪತ್ರೆಗೆ

Posted by Vidyamaana on 2023-07-25 08:33:03 |

Share: | | | | |


ಮಿತ್ತೂರು : ಇನ್ನೋವಾ - ಟಿಪ್ಪರ್ ನಡುವೆ ಅಪಘಾತ: ನಾಲ್ವರು ಆಸ್ಪತ್ರೆಗೆ

ವಿಟ್ಲ: ಇನ್ನೋವಾ ಕಾರು ಹಾಗೂ ಟಿಪ್ಪರ್ ನಡುವೆ ಅಪಘಾತ ಸಂಭವಿಸಿ, ಕಾರಿನಲ್ಲಿದ್ದ ನಾಲ್ವರು ಗಂಭೀರ ಗಾಯಗೊಂಡ ಘಟನೆ ಮಾಣಿ ಮೈಸೂರು ರಾಜ್ಯ ಹೆದ್ದಾರಿಯ ಮಿತ್ತೂರಿನ ಪರ್ಲೋಟ್ಟು ಎಂಬಲ್ಲಿ ನಡೆದಿದೆ.

ಕಾರಿನಲ್ಲಿದ್ದ ಇಬ್ಬರು ಮಹಿಳೆಯರು ಸಹಿತ ನಾಲ್ವರು ಗಾಯಗೊಂಡಿದ್ದು, ಪುತ್ತೂರಿನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. 

ಮುಂಬೈ ಮೂಲದ ಪ್ರಯಾಣಿಕರು ಮಂಗಳೂರಿನಿಂದ ಮೈಸೂರಿಗೆ ತೆರಳುತ್ತಿದ್ದಾಗ ಪುತ್ತೂರು ಕಡೆಯಿಂದ ಮಂಗಳೂರಿಗೆ ತೆರಳುತ್ತಿದ್ದ ಟಿಪ್ಪರ್ ಲಾರಿ ನಡುವೆ ಅಪಘಾತ ಸಂಭವಿಸಿದೆ. ಇನ್ನೋವಾ ಕಾರಿನ ಮುಂಭಾಗ ನಜ್ಜುಗುಜ್ಜಾಗಿದೆ.

ಘಟನೆಯಿಂದಾಗಿ ರಾಜ್ಯ ಹೆದ್ದಾರಿಯಲ್ಲಿ ವಾಹನ ಸಂಚಾರ ಅಸ್ತವ್ಯಸ್ತಗೊಂಡಿದೆ.ಈ ಭಾಗದಲ್ಲಿ ನಿನ್ನೆ ರಾತ್ರಿಯಿಂದ ನಿರಂತರ ಮಳೆ ಸುರಿಯುತ್ತಿದೆ. ಇದರಿಂದ ರಸ್ತೆಯಲ್ಲಿ ನೀರು ಹರಿಯುತ್ತಿದ್ದು, ಇದೇ ಅಪಘಾತಕ್ಕೆ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ

ಕಾಲೇಜಿನ ಶೌಚಾಲಯದಲ್ಲಿ ಮಗುವಿಗೆ ಜನ್ಮ ನೀಡಿದ ವಿದ್ಯಾರ್ಥಿನಿ; ಆರೋಪಿ ಮುಳಬಾಗಿಲಿನ ಅನಿಲ್ ಬಂಧನ

Posted by Vidyamaana on 2024-07-03 07:52:29 |

Share: | | | | |


ಕಾಲೇಜಿನ ಶೌಚಾಲಯದಲ್ಲಿ ಮಗುವಿಗೆ ಜನ್ಮ ನೀಡಿದ ವಿದ್ಯಾರ್ಥಿನಿ; ಆರೋಪಿ ಮುಳಬಾಗಿಲಿನ ಅನಿಲ್ ಬಂಧನ

ಕೋಲಾರ: ನಗರ ಹೊರವಲಯದ ಖಾಸಗಿ ಕಾಲೇಜುವೊಂದರಲ್ಲಿ ಪ್ರಥಮ ಪಿಯುಸಿ ಓದುತ್ತಿದ್ದ ಬಾಲಕಿಯೊಬ್ಬಳು (17) ಅದೇ ಕಾಲೇಜಿನ ಶೌಚಾಲಯದಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ. ಈ ಸಂಬಂಧ ಪೋಕ್ಸೊ ಪ್ರಕರಣ ದಾಖಲಾಗಿದ್ದು, ಯುವಕನನ್ನು ಬಂಧಿಸಲಾಗಿದೆ.ಮುಳಬಾಗಿಲಿನ ಅನಿಲ್‌ ಕುಮಾರ್‌ (21) ಬಂಧಿತ ಯುವಕ.ಕೋಲಾರ ಮಹಿಳಾ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಉಡುಪಿ: ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ - ಕೊಲೆ ಶಂಕೆ

Posted by Vidyamaana on 2023-10-17 20:26:45 |

Share: | | | | |


ಉಡುಪಿ: ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ - ಕೊಲೆ ಶಂಕೆ

ಉಡುಪಿ :ಕರಾವಳಿ ಹೋಟೆಲಿನ ಆವರಣದಲ್ಲಿ ವ್ಯಕ್ತಿಯೊಬ್ಬ ಮೃತಪಟ್ಟಿದ್ದು ಮೇಲ್ನೋಟಕ್ಕೆ ಕೊಲೆಯಾಗಿರುವ ಶಂಕೆ ವ್ಯಕ್ತವಾಗಿದೆ.

ಮಾಹಿತಿ ಪಡೆದ ಸಮಾಜ ಸೇವಕ ವಿಶು ಶೆಟ್ಟಿ ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸ್ ಅಧಿಕಾರಿ ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ. ಕೆಎಂಸಿ ಮಣಿಪಾಲ ಹಾಗೂ ಮಂಗಳೂರಿನ ನ್ಯಾಯ ವಿಜ್ಞಾನ ಪ್ರಯೋಗಾಲಯದವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


ಹರಿತವಾದ ಆಯುಧದಿಂದ ವ್ಯಕ್ತಿಯ ಬಲ ಕೈ ಕಡಿದಿದ್ದು ತೀವ್ರ ರಕ್ತಸ್ರಾವವೇ ಸಾವಿಗೆ ಕಾರಣವಿರಬಹುದು ಎಂದು ಮೇಲ್ನೋಟಕ್ಕೆ ಕಂಡುಬಂದಿದೆ.


ಉಡುಪಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ವಿಶು ಶೆಟ್ಟಿಯವರು ಕೆಎಂಸಿ ಶವಾಗಾರದಲ್ಲಿ ಶವ ಇಡಲು ಪೊಲೀಸರಿಗೆ ಸಹಕರಿಸಿದ್ದಾರೆ. ಸಾಮಾಜಿಕ ಕಾರ್ಯಕರ್ತ ನಿತ್ಯಾನಂದ ಒಳಕಾಡು, ವಿಶು ಶೆಟ್ಟಿ ಹಾಗೂ ರಾಮದಾಸ್ ಪಾಲನ್ ಕಾನೂನು ಪ್ರಕ್ರಿಯೆಗೆ ಸಹಕರಿಸಿದ್ದಾರೆ. ಸಂಬಂಧಿಕರು ಅಥವಾ ಸಂಬಂಧ ಪಟ್ಟವರು ಠಾಣೆಗೆ ಸಂಪರ್ಕಿಸುವಂತೆ ಕೋರಲಾಗಿದೆ.

ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಭೇಟಿ ಮಾಡಿದ ದ.ಕ. ನೂತನ ಸಂಸದ ಬ್ರಿಜೇಶ್ ಚೌಟ

Posted by Vidyamaana on 2024-06-06 12:38:36 |

Share: | | | | |


ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಭೇಟಿ ಮಾಡಿದ ದ.ಕ. ನೂತನ ಸಂಸದ ಬ್ರಿಜೇಶ್ ಚೌಟ

ಬೆಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ನೂತನ ಸಂಸದರಾಗಿ ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಇಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರನ್ನು ಭೇಟಿ ಮಾಡಿದರು.

ಬೆಂಗಳೂರಿನಲ್ಲಿ ಇಂದು ವಿಜಯೇಂದ್ರ ಭೇಟಿ ಮಾಡಿದ

ಉಡುಪಿಯ ಸರಕಳ್ಳನನ್ನು ಬಂಧಿಸಿದ ಮೂಡುಬಿದ್ರೆ ಪೊಲೀಸರು, ಕದ್ದ ಚಿನ್ನದ ಸರ, ಮೊಬೈಲ್ ವಶ.

Posted by Vidyamaana on 2024-01-13 21:05:21 |

Share: | | | | |


ಉಡುಪಿಯ ಸರಕಳ್ಳನನ್ನು ಬಂಧಿಸಿದ ಮೂಡುಬಿದ್ರೆ ಪೊಲೀಸರು, ಕದ್ದ ಚಿನ್ನದ ಸರ, ಮೊಬೈಲ್ ವಶ.

ಮೂಡುಬಿದಿರೆ: ಉಡುಪಿ ಜಿಲ್ಲೆ ಮಣಿಪಾಲ ಮತ್ತು ಬ್ರಹ್ಮಾವರದಲ್ಲಿ ನಡೆದ ಪ್ರತ್ಯೇಕ ಕಳವು ಪ್ರಕರಣದ ಆರೋಪಿಯನ್ನು ಮೂಡುಬಿದಿರೆ ಪೊಲೀಸರು ಬಂಧಿಸಿದ್ದಾರೆ.ಬ್ರಹ್ಮಾವರಬೆಳ್ಮಾರು ಆರೂರುಬೈಲು ಮನೆಯ ದೀಕ್ಷಿತ್(27) ಬಂಧಿತ ಆರೋಪಿಯಾಗಿದ್ದಾನೆ. ಬಂಧಿತನಿಂದ ಕಳವಾದ ಕಳುವಾದ ಸುಮಾರು ರೂ 50,000 ಮೌಲ್ಯದ ಬಂಗಾರದ ತಾಳಿ ಸರ ಮತ್ತು ಮೊಬೈಲ್ ಫೋನ್ ವಶ ಪಡಿಸಿಕೊಂಡಿದ್ದು, ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.ಆರೋಪಿಯ ವಿರುದ್ಧ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಅಕ್ರ:121/2016 ಕಲಂ:454, 380 ಐಪಿಸಿ ಅಕ್ರ:71/2023 ಕಲಂ:457,380,511 ಐಪಿಸಿ ಮತ್ತು ಮಣಿಪಾಲ ಪೊಲೀಸ್ ಠಾಣೆಯಲ್ಲಿ ಅಕ್ರ:310/2023 ಕಲಂ:380 ಐಪಿಸಿ ಯಂತೆ ಪ್ರಕರಣಗಳು ದಾಖಲಾಗಿವೆ.ಕಾರ್ಯಚರಣೆಯಲ್ಲಿ ಮೂಡಬಿದ್ರೆ ಠಾಣಾ ಪೊಲೀಸ್ ನಿರೀಕ್ಷಕರಾದ ಸಂದೇಶ್ ಪಿ.ಜಿ ಮತ್ತು ದಿವಾಕರ್ ರೈ , ಸಿದ್ದಪ್ಪ ನರನೂರು ಪೊಲೀಸ್ ಉಪ ನಿರೀಕ್ಷಕರು ಹಾಗೂ ಠಾಣಾ ಅಪರಾಧ ವಿಭಾಗದ ಸಿಬ್ಬಂಧಿಯವರಾದ ಮೊಹಮ್ಮದ್ ಇಕ್ಬಾಲ್, ನಾಗರಾಜ್ ಲಮಾಣಿ, ಅಕೀಲ್ ಅಹಮ್ಮದ್, ಚಂದ್ರಹಾಸ ರೈ ಮತ್ತು ವೆಂಕಟೇಶ್ ರವರುಗಳು ಕಾರ್ಯಚರಣೆಯಲ್ಲಿ ಪಾಲ್ಗೊಂಡಿರುತ್ತಾರೆ.

ರಾತ್ರಿ ಪತ್ನಿ ಕಳುಹಿಸು ಎಂದಿದ್ದಕ್ಕೆ ಉದ್ಯಮಿಗೆ 14 ಸಲ ಇರಿದು ಹತ್ಯೆ

Posted by Vidyamaana on 2024-03-16 14:26:00 |

Share: | | | | |


ರಾತ್ರಿ ಪತ್ನಿ ಕಳುಹಿಸು ಎಂದಿದ್ದಕ್ಕೆ ಉದ್ಯಮಿಗೆ 14 ಸಲ ಇರಿದು ಹತ್ಯೆ

 ಬೆಂಗಳೂರು : ಪತ್ನಿಯನ್ನು ತನ್ನೊಂದಿಗೆ ಒಂದು ರಾತ್ರಿ ಕಳುಹಿಸಿಕೊಂಡು ಎಂದ ರಿಯಲ್‌ ಎಸ್ಟೇಟ್‌ ಉದ್ಯಮಿಯನ್ನು ಕಾರಿನಲ್ಲಿ 14 ಬಾರಿ ಇರಿದು ಕೊಲೆಗೈದಿದ್ದ ಬಟ್ಟೆ ವ್ಯಾಪಾರಿಯನ್ನು ಯಲಹಂಕ ಠಾಣೆ ಪೊಲೀಸರು ಬಂಧಿಸಿದ್ದಾರೆ.ದಾಸರಹಳ್ಳಿ ಮರಿಯಣ್ಣಪಾಳ್ಯ ನಿವಾಸಿ ಸಂತೋಷ್‌ ಕುಮಾರ್‌(39) ಬಂಧಿತ ಆರೋಪಿ.ಮಾ .12ರಂದು ಈತ ಮಾರುತಿನಗರ ನಿವಾಸಿ ಕೃಷ್ಣಯಾದವ್‌(55) ಎಂಬಾತನನ್ನು ಕೊಲೆಗೈದು, ಮೃತದೇಹವನ್ನು ಕಾರಿನಲ್ಲಿ ಇರಿಸಿ ಪರಾರಿಯಾಗಿದ್ದ. ಬಟ್ಟೆ ಅಂಗಡಿಗೆ ಲಕ್ಷಾಂತರ ರೂ. ಹೂಡಿಕೆ ಮಾಡಲು ಪತ್ನಿಯನ್ನು ಒಂದು ರಾತ್ರಿ ತನ್ನೊಂದಿಗೆ ಕಳುಹಿಸುವಂತೆ ಕೇಳಿದಕ್ಕೆ ಆರೋಪಿ ಉದ್ಯಮಿಯನ್ನು ಕೊಲೆಗೈದಿದ್ದಾನೆ ಎಂದು ಪೊಲೀಸರು ಹೇಳಿದರು.


ಆಂಧ್ರಪ್ರದೇಶ ಮೂಲದ ಕೃಷ್ಣಯಾದವ್‌ ನಗರದಲ್ಲಿ ರಿಯಲ್‌ ಎಸ್ಟೇಟ್‌ ವ್ಯವಹಾರ ಮಾಡಿಕೊಂಡಿದ್ದ. ಈತನ ಸ್ನೇಹಿತ ತಮಿಳುನಾಡು ಮೂಲದ ಸಂತೋಷ್‌ ಮೊಬೈಲ್‌ ಅಂಗಡಿ ಮುಂಭಾಗದ ಫ‌ುಟ್‌ಪಾತ್‌ನಲ್ಲಿ ಬಟ್ಟೆ ವ್ಯಾಪಾರ ಮಾಡಿಕೊಂಡಿದ್ದ. ಒಂದೆರಡು ಬಾರಿ ಆರೋಪಿಯ ಅಂಗಡಿಯಲ್ಲಿ ಬಟ್ಟೆ ಖರೀದಿಸಿದ್ದ ಕೃಷ್ಣಯಾದವ್‌, “ಉತ್ತಮ ಗುಣಮಟ್ಟದ ಬಟ್ಟೆ ಮಾರಾಟ ಮಾಡುತ್ತಿಯಾ, ಹೊಸ ಬಟ್ಟೆ ಅಂಗಡಿಗೆ ನಾನು ಹಣ ಹೂಡಿಕೆ ಮಾಡುತ್ತೇನೆ” ಎಂದು ಭರವಸೆ ನೀಡಿದ್ದ. ಆದರೆ, ನಾಲ್ಕೈದು ತಿಂಗಳಾದರೂ ಹಣ ಹೂಡಿಕೆ ಮಾಡಿರಲಿಲ್ಲ.

14 ಬಾರಿ ಇರಿತಕ್ಕೊಳಗಾದ ಉದ್ಯಮಿ: ಈ ಮಧ್ಯೆ ಉದ್ಯಮಿ ಕೃಷ್ಣಯಾದವ್‌ಗೆ ಹೆಣ್ಣಿನ ಮೇಲೆ ಹೆಚ್ಚಿನ ವ್ಯಾಮೋಹ ಇತ್ತು ಎಂದು ಹೇಳಲಾಗಿದೆ. ಮಾ.11ರಂದು ಆರೋಪಿ ಸಂತೋಷ್‌ ಜತೆ ಕಾರಿನಲ್ಲಿ ಯಲಹಂಕದ ಬಾರ್‌ನಲ್ಲಿ ಮದ್ಯ ಸೇವಿಸಿ ವಿವಿಧೆಡೆ ಸುತ್ತಾಡಿದ್ದ ಕೃಷ್ಣಯಾದವ್‌ಗೆ ಆರೋಪಿ ಸಂತೋಷ್‌ ಕುಮಾರ್‌, ತನ್ನ ಮೊಬೈಲ್‌ನಲ್ಲಿದ್ದ 2ನೇ ಪತ್ನಿಯ ಫೋಟೋವನ್ನು ತೋರಿಸಿದ್ದಾನೆ. ಅದರಿಂದ ವ್ಯಾಮೋಹಕ್ಕೊಳಗಾದ ಕೃಷ್ಣಯಾದವ್‌, “ಬಟ್ಟೆ ಅಂಗಡಿಗೆ ಒಂದೆರಡು ದಿನದಲ್ಲೇ ಲಕ್ಷಾಂತರ ರೂ. ಹೂಡಿಕೆ ಮಾಡುತ್ತೇನೆ. ಇಂದು ರಾತ್ರಿ ನಿನ್ನ ಪತ್ನಿಯನ್ನು ನನ್ನೊಂದಿಗೆ ಕಳುಹಿಸು’ ಎಂದು ಕೇಳಿದ್ದಾನೆ. ಅದರಿಂದ ಕೋಪಗೊಂಡು ಆರೋಪಿ, ಉದ್ಯಮಿ ಕೃಷ್ಣಯಾದವ್‌ ಜತೆ ಜಗಳ ಆರಂಭಿಸಿದ್ದಾನೆ. ಅದು ವಿಕೋಪಕ್ಕೆ ಹೋದಾಗ ಆರೋಪಿ ಕಾರಿನಲ್ಲಿದ್ದ ಚಾಕುವಿನಿಂದ ಕೃಷ್ಣಯಾದವ್‌ನ ದೇಹದ ವಿವಿಧೆಡೆ 14 ಬಾರಿ ಇರಿದು ಪರಾರಿಯಾಗಿದ್ದ. ಇತ್ತ ಕೃಷ್ಣಯಾದವ್‌ ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ಮೃತಪಟ್ಟಿದ್ದ.ಬಳಿಕ ಪ್ರಕರಣ ದಾಖಲಿಸಿಕೊಂಡು ಎಲ್ಲಾ ಆಯಾಮಗಳಲ್ಲಿ ತನಿಖೆ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.


ಏನಿದು ಪ್ರಕರಣ? : 


ಆರೋಪಿ ಸಂತೋಷ್‌ ಜತೆ ಉದ್ಯಮಿ ಕೃಷ್ಣಯಾದವ್‌ ಸೋಮವಾರ ಸಂಜೆ ತನ್ನ ಸ್ವಿಫ್ಟ್‌ ಕಾರಿನಲ್ಲಿ ಹೊರಗಡೆ ಹೋಗಿದ್ದಾನೆ. ರಾತ್ರಿಯಾದರೂ ಮನೆಗೆ ವಾಪಸ್‌ ಬಂದಿರಲಿಲ್ಲ. ಈ ಸಂಬಂಧ ಕುಟುಂಬ ಸದಸ್ಯರು ಠಾಣೆಗೆ ದೂರು ನೀಡಿದ್ದರು. ಮಂಗಳವಾರ ಬೆಳಗ್ಗೆ ಬಾಗಲೂರು ಕ್ರಾಸ್‌ನ ಪಾದಚಾರಿ ಮಾರ್ಗದಲ್ಲಿ ಅನುಮಾನ ಸ್ಪದ ರೀತಿ ಯಲ್ಲಿ ಕಾರಿನಲ್ಲಿ ಕೃಷ್ಣ ಯಾದವ್‌ ಮೃತದೇಹ ಪತ್ತೆಯಾಗಿತ್ತು. ಈ ಸಂಬಂಧ ಯಲಹಂಕ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.



Leave a Comment: