Posted by vidyamaana on 2023-06-29 12:19:28 |
ಪುತ್ತೂರು: ಹೊಸ ಉದ್ಯಮವೊಂದರ ಉದ್ಘಾಟನಾ ಕಾರ್ಯಕ್ರಮ ಮುಗಿಸಿ ಹಿಂದಿರುಗಿ ಬರುವಾಗ ಅರುಣ್ ಕುಮಾರ್ ಪುತ್ತಿಲ ಹೆರಿಗೆಗೆ ದಾಖಲಾಗಿದ್ದ ಗರ್ಭಿಣಿ ಮೃತಪಟ್ಟ ಮನೆಗೆ ತೆರಳಿ ಸಾಂತ್ವನ ಹೇಳಿದರು.
ಕಾರ್ಯಕ್ರಮ ಮುಗಿಸಿ ಬರುವಾಗ ರಸ್ತೆಯಲ್ಲಿ ಜನ ಸೇರಿದ್ದನ್ನು ನೋಡಿ ವಿಚಾರಿಸಿದಾಗ ಮೃತಪಟ್ಟ ಬಗ್ಗೆ ತಿಳಿದುಬಂದಿದ್ದು, ನಂತರ ಮನೆಗೆ ತೆರಳಿ ಸಾಂತ್ವನ ಹೇಳಿದರು.
ಶೇಕಮಲೆ ಬೊಳ್ಳಾಡಿ ಇಬ್ರಾಹಿಂ ಎಂಬವರ ಪತ್ನಿ 9 ತಿಂಗಳ ಗರ್ಭಿಣಿ ಹಸೀನಾ (29) ಮಂಗಳೂರಿನ ಎಜೆ ಆಸ್ಪತ್ರೆಗೆ ದಾಖಲಾಗಿದ್ದರು. ಜೂ.28 ರಂದು ಹೆರಿಗೆ ಸಂದರ್ಭ ಹೃದಯಾಘಾತದಿಂದ ನಿಧನರಾದರು.
ಹೆರಿಗೆಯಲ್ಲಿ ಮಗು ಜೀವಂತವಾಗಿದ್ದು, ಎಜೆ ಆಸ್ಪತ್ರೆಯ ವೈದ್ಯರಿಗೆ ಕರೆ ಮಾಡಿ ಅರುಣ್ ಪುತ್ತಿಲರು ಮಗುವಿನ ಆರೋಗ್ಯ ವಿಚಾರಿಸಿದರು.
ಈ ಹಿಂದೆಯೂ ಅಪಘಾತ ನಡೆದ ಸಂದರ್ಭ ಧರ್ಮ ನೋಡದೆ ತನ್ನದೇ ಕಾರಿನಲ್ಲಿ ರಕ್ತದ ಮಡುವಿನಲ್ಲಿದ್ದ ಗಾಯಳುಗಳನ್ನು ಹಾಕಿಕೊಂಡು ಹೋದ ಉದಾಹರಣೆಯೂ ಇದೆ. ಅವರ ಕಾರಿನಲ್ಲಿ ಅಪಘಾತಗೊಂಡ ಮುಸ್ಲಿಂ ಮಗುವೊಂದು ಮೃತಪಟ್ಟಿದೆ.
ಮೊನ್ನೆಯಷ್ಟೇ ಮಂಗಳೂರಿನಿಂದ ಬರುತಿದ್ದಾಗ ರಸ್ತೆ ಬದಿಯ ಚರಂಡಿಗೆ ಬಿದ್ದಿದ್ದ ಕಾರನ್ನು ಮೇಲೆತ್ತಲು ಸಹಾಯ ಮಾಡಿದ್ದರು.
Posted by Vidyamaana on 2023-10-14 13:11:58 |
ತುಮಕೂರು: ಸಾಮಾಜಿಕ ಜಾಲತಾಣದಲ್ಲಿ ಭಾರತದ ರಾಷ್ಟ್ರ ಧ್ವಜಕ್ಕೆ ಅವಮಾನವಾಗುವ ರೀತಿಯಲ್ಲಿ ಸುಳ್ಳು ಪೋಸ್ಟ್ ಹಾಕಿದ ತುಮಕೂರು ಮೂಲದ ಬಿಜೆಪಿ ಮಹಿಳಾ ಕಾರ್ಯಕರ್ತೆ ಶಕುಂತಲಾ ನಟರಾಜ್ ಎಂಬಾಕೆಯ ವಿರುದ್ಧ ಎಫ್ ಐಆರ್ ದಾಖಲಾಗಿದೆ.
ಜನರ ಭಾವನೆಗಳನ್ನು ಕೆರಳಿಸುವ ಕೆಲಸ ಮಾಡಿದ್ದಾರೆ ಎಂದು ಐಪಿಸಿ 153 (ಬಿ) ಅಡಿಯಲ್ಲಿ ಜಯನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಹಿಂದೆಯೂ ಮುಖ್ಯಮಂತ್ರಿ ಸಿದ್ದರಾಮಯ್ಯ ಕುಟುಂಬದ ವಿರುದ್ಧ ಹೇಳಿಕೆ ಆರೋಪದ ಮೇಲೆ ಶಕುಂತಲಾ ಅವರನ್ನು ವಶಕ್ಕೆ ತೆಗೆದುಕೊಳ್ಳಲಾಗಿತ್ತು.
ಟ್ವಿಟ್ಟರ್ ಎಕ್ಸ್ನಲ್ಲಿ ಶಕುಂತಲಾ ನಟರಾಜ್ ಸುಳ್ಳು ಪೋಸ್ಟ್ ಹಾಕಿದ್ದು, ಲುಲು ಶಾಪಿಂಗ್ ಮಾಲ್ನಲ್ಲಿ ಭಾರತದ ಬಾವುಟಕ್ಕಿಂತ ಎತ್ತರದಲ್ಲಿ ಪಾಕಿಸ್ತಾನ ಬಾವುಟ ಹಾರಿಸಿದ್ದಾರೆ ಎಂದು ಬಿಜೆಪಿ ಮಹಿಳಾ ಕಾರ್ಯಕರ್ತೆ ಶಕುಂತಲಾ ಪೋಸ್ಟ್ ಹಂಚಿಕೊಂಡಿದ್ದಳು.
Posted by Vidyamaana on 2024-06-08 17:26:58 |
ಮಾಲೆ: ರಾಜತಾಂತ್ರಿಕ ಬಿಕ್ಕಟ್ಟಿನ ನಡುವೆಯೂ ನರೇಂದ್ರ ಮೋದಿ ಅವರ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಝು ಅವರನ್ನು ಆಹ್ವಾನಿಸಲಾಗಿದೆ.
ಭಾರತ ಸರ್ಕಾರದ ಮಂತ್ರಿಗಳ ಪರಿಷತ್ ನೀಡಿದ ಆಹ್ವಾನವನ್ನು ಸ್ವೀಕರಿಸಲಾಗಿದೆ ಎಂದು ಮಾಲ್ಡೀವ್ಸ್ ಅಧ್ಯಕ್ಷರ ಕಚೇರಿ ಪ್ರಕಟಣೆ ಮೂಲಕ ತಿಳಿಸಿದೆ.
Posted by Vidyamaana on 2023-08-14 07:35:20 |
ಪುತ್ತೂರು: ನಾವು ವಿದ್ಯೆ ಕಲಿತು ಎಷ್ಟೇ ದೊಡ್ಡ ಉನ್ನತ ಪದವಿ ಪಡೆದು ಸಮಾಜದಲ್ಲಿ ದೊಡ್ಡ ವ್ಯಕ್ತಿಗಳಾಗಬಹುದು ಆದರೆ ನಮಗೆ ನಮ್ಮ ತಂದೆ ತಾಯಿಯ ಆಶೀರ್ವಾದ ಇಲ್ಲದೇ ಇದ್ದರೆ ನಾವು ಶೂನ್ಯ ವ್ಯಕ್ತಿಗಳಾಗುತ್ತೇವೆ ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಹೇಳಿದರು.
ಅವರು ಸಾಲ್ಮರ ಮೌಂಟನ್ ವ್ಯೂ ಆಂಗ್ಲ ಮಾಧ್ಯಮ ಹಾಗೂ ಪೌಢ ಶಾಲೆಯಲ್ಲಿ ನಡೆದ ರಕ್ಷಕ ಶಿಕ್ಷಕ ಸಂಘದ ಸಭೆಯಲ್ಲಿ ಮಾತನಾಡಿದರು. ನಮ್ಮನ್ನು ಕಷ್ಟದಿಂದ ಹೆತ್ತು ಹೊತ್ತು ಸಾಕಿದ ತಂದೆ ತಾಯಿಯನ್ನು ನಾವು ಯಾವುದೇ ಕಾರಣಕ್ಕೂ ಅಗೌರವದಿಂದ ಕಾಣಬಾರದು. ಅವರಿಗೆ ವಿದ್ಯೆ ಇಲ್ಲದೇ ಇದ್ದರೂ ನಮ್ಮನ್ನು ಅವರು ವಿದ್ಯಾವಂತರನ್ನಾಗಿ ಮಡಿದ್ದಾರೆ, ಎಷ್ಟೇ ಬಡತನವಿದ್ದರೂ ಮಕ್ಕಳನ್ನು ಹಸಿವಿನಿಂದ ಕೂರಿಸಲಿಲ್ಲ, ಅವರ ಹೊಟ್ಟೆಗೆ ಅನ್ನವಿಲ್ಲದೇ ಇದ್ದರೂ ಮಕ್ಕಳನ್ನು ಜೋಪಾನವಾಗಿ ಬೆಳೆಸಿದ್ದಾರೆ ಅದೇ ಮಕ್ಕಳು ವಿದ್ಯೆ ಕಲಿತು ತಂದೆ ತಾಯಿಯಿಂದ ದೂರವಾದರೆ ನಾವು ಎಷ್ಟೇ ದೊಡ್ಡ ವ್ಯಕ್ತಿಗಳಾದರೂ ಸಮಾಜದ ಮುಂದೆ ನಾವು ಶೂನ್ಯ ಎಂದು ಹೇಳಿದರು.
ವಿದ್ಯಾರ್ಥಿಗಳು ತಮ್ಮಲ್ಲಿರುವ ಪ್ರತಿಭೆಗಳನ್ನು ಪ್ರದರ್ಶನ ಮಾಡಬೇಕು, ನನ್ನಿಂದ ಏನೂ ಸಾಧ್ಯವಿಲ್ಲ ಎಂಬ ಚಿಂತೆಯನ್ನು ಬಿಟ್ಟು ಬಿಡಬೇಕು, ಉನ್ನತ ಶಿಕ್ಷಣದತ್ತ ನಾವು ನಿತ್ಯವೂ ಕನಸು ಕಾಣುವವರಾಗಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು.
ನ್ಯಾಯವಾದಿ ನೂರುದ್ದೀನ್ ಸಾಲ್ಮರ ಪ್ರಾಸ್ತಾವಿಕವಾಗಿ ಮಾತನಾಡಿದರು.
ಸಂಸ್ಥೆಯ ಸ್ಥಾಪಕಾಧ್ಯಕ್ಷರಾದ ಕೆ ಪಿ ಅಹ್ಮದ್ ಹಾಜಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ವೇದಿಕೆಯಲ್ಲಿ ಪ್ರಧಾನ ಕಾರ್ಯದರ್ಶಿ ಮಹಮ್ಮದ್ ಹಾಜಿ ಎಂ, ಟ್ರಸ್ಟಿ ಅಬ್ದುಲ್ಲ ಹಾಜಿ ಯು, ಉಪ್ಪಳಿಗೆ ಶಾಲೆಯ ನಿವೃತ್ತ ಶಿಕ್ಷಕ ನಾರಾಯಣ, ಸಾಲ್ಮರ ಮೌಂಟನ್ ವ್ಯೂ ಶಾಲೆಯ ಮುಖ್ಯ ಶಿಕ್ಷಕಿ ಮೋಹನಾಂಗಿ ಎನ್ ಡಿ ಉಪಸ್ಥಿತರಿದ್ದರು.
ಪೂರ್ವ ಪ್ರಾಥಮಿಕ ಕೊಠಡಿ ಉದ್ಘಾಟನೆ
ನೂತನವಾಗಿ ನಿರ್ಮಾಣಗೊಂಡ ಪೂರ್ವ ಶಿಕ್ಷಣ ಕೊಠಡಿಯನ್ನು ಶಾಸಕರು ರಿಬ್ಬನ್ ಕತ್ತರಿಸುವ ಮೂಲಕ ಉದ್ಘಾಟಿಸಿ ಸಂಸ್ಥೆಗೆ ಶುಭ ಕೋರಿದರು. ಕಾರ್ಯಕ್ರಮದಲ್ಲಿ ಸಂಸ್ಥೆಯ ವತಿಯಿಂದ ಶಾಲು ಹೊದಿಸಿ, ಸ್ಮರಣಿಕೆ ನೀಡಿ ಸನ್ಮಾನಿಸಲಾಯಿತು.
ಸಹಶಿಕ್ಷಕ ಮಂಜುನಾಥ ರೈ ಶಾಸಕರ ಪರಿಚಯ ಮಾಡಿದರು. ಕಾರ್ಯದರ್ಶಿ ಅಬ್ದುಲ್ರಹಿಮಾನ್ ಆಝಾದ್ ಸ್ವಾಗತಿಸಿದರು.ಸಹಶಿಕ್ಷಕ ರವೂಫ್ ಎ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.
Posted by Vidyamaana on 2023-12-20 09:53:04 |
ಮಂಗಳೂರು : ಸಿಟಿ ಬಸ್ ಚಾಲಕನೊಬ್ಬ ಸಮುದ್ರಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮೇಶ್ವರ ಸಮುದ್ರ ತೀರದಲ್ಲಿ ನಡೆದಿದೆ. ಮೃತರನನ್ನು ಕೊಂಡಾಣ ಬೆಳರಿಂಗೆ ನಿವಾಸಿ ವೆಂಕಪ್ಪ ಶೆಟ್ಟಿ ಎಂಬವರ ಪುತ್ರ ಜಗದೀಶ್ (39) ಎಂದು ಗುರುತಿಸಲಾಗಿದೆಇವರು ಸ್ಟೇಟ್ ಬ್ಯಾಂಕ್ ಕಿನ್ಯಾ ನಡುವೆ ಚಲಿಸುವ ಸಿಟಿ ಬಸ್ ನಲ್ಲಿ ಚಾಲಕರಾಗಿದ್ದ ಇವರು, ಇಂದು ನಸುಕಿನ ಜಾವ ಸೋಮೇಶ್ವರ ರುದ್ರಪಾದೆಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಕೃತ್ಯ ಎಸಗುವ ಮುನ್ನ ಸಮುದ್ರ ತೀರದಲ್ಲಿ ಬೈಕನ್ನು ಇಟ್ಟು ಟವಲೊಂದರಲ್ಲಿ ಬೈಕ್ ಕೀ, ಪರ್ಸ್ ಚಪ್ಪಲಿಗಳನ್ನು ಇಟ್ಟು ಸಮುದ್ರಕ್ಕೆ ಹಾರಿದ್ದಾರೆ. ಅವಿವಾಹಿತರಾಗಿರುವ ಜಗದೀಶ್ ಅವರ ಪಸ್೯ನಲ್ಲಿ ಚಿನ್ನ ಅಡವಿಟ್ಟ ಚೀಟಿ, ಬ್ಯಾಂಕ್ ಖಾತೆಗೆ ಹಣ ವರ್ಗಾಯಿಸಿದ ಚೀಟಿಗಳು ಪತ್ತೆಯಾಗಿವೆ.
Posted by Vidyamaana on 2024-02-17 02:45:19 |
ಪುತ್ತೂರು: ಪ್ರತಿಷ್ಠಿತ ಚಿನ್ನಾಭರಣಗಳ ಮಳಿಗೆ ಕೋರ್ಟ್ರಸ್ತೆ ಮುಳಿಯ ಜ್ಯುವೆಲ್ಸ್ನಲ್ಲಿ 15 ದಿನಗಳ ಕಾಲ ನಡೆಯಲಿರುವ `ಕರಿಮಣಿ ಉತ್ಸವಕ್ಕೆ ಫೆ.15ರಂದು ಚಾಲನೆ ದೊರೆಯಿತು. ಇಲ್ಲಿನ ಶ್ರೀಮಹಾಲಿಂಗೇಶ್ವರ ದೇವಸ್ಥಾನದ ಪ್ರಧಾನ ಅರ್ಚಕ ವಸಂತ ಕೆದಿಲಾಯವರು ಕರಿಮಣಿ ಉತ್ಸವವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಚಾಲನೆ ನೀಡಿದರು.ಬಳಿಕ ಮಾತನಾಡಿದ ಅವರು, "ಮಾಂಗಲ್ಯದಲ್ಲಿ ಮಂಗಳ ಶಬ್ದವಿದೆ. ಮಂಗಳವನ್ನು ಕರುಣಿಸುವಂತ ದ್ರವ್ಯದಿಂದ ತಯಾರಿಸಲ್ಪಟ್ಟ ವಿಶೇಷವಾಗಿ ಚಿನ್ನದಿಂದ ತಯಾರಿಸಿದ ಕರಿಮಣಿ ಧಾರಣೆ ಮಾಡಿದರೆ ಸೌಭಾಗ್ಯ, ಸಮೃದ್ಧಿ ಪ್ರಾಪ್ತಿಯಾಗುತ್ತದೆ. ಮಂಗಳ ಸೂತ್ರವನ್ನು ಧರಿಸದಾಗಲೇ ಮುತ್ತೈದೆ ಭಾಗ್ಯದ ಜೊತೆಗೆ ಗೃಹಣಿಗೆ ಸಂಸ್ಕಾರ ದೊರೆಯುತ್ತದೆ. ಇಂತಹ ಕರಿಮಣಿಗಳು ಮುಳಿಯದಲ್ಲಿ 2 ಗ್ರಾಂನಿಂದ ಪ್ರಾರಂಭಿಸಿ ಅತ್ಯಧಿಕ ಚಿನ್ನದ ತನಕ ಗ್ರಾಹಕರಿಗೆ ದೊರೆಯಲಿದೆ." ಎಂದರು.
ಕನಿಷ್ಠ 2 ಗ್ರಾಂನ ಕರಿಮಣಿಯ ಮೂಲಕ ಬೆಳ್ಳಿಯ ಕರಿಮಣಿ ಧರಿಸುವ ಬಡವರಿಗೂ ಚಿನ್ನದ ಧರಿಸುವಂತ ಅವಕಾಶ ಮುಳಿಯ ಜ್ಯುವೆಲ್ಸ್ ಮೂಲಕ ದೊರೆಯಲಿದೆ. ಸಂಸ್ಥೆಯ ಶಾಖೆಗಳು ಇನ್ನಷ್ಟು ಎತ್ತರಕ್ಕೆ ಬೆಳೆಯಲಿ . ಗ್ರಾಹಕರಿಗೆ ಇನ್ನಷ್ಟು ಉತ್ತಮ ಸೇವೆಗಳು ದೊರೆಯಲಿ ಎಂದರು.ಮುಳಿಯ ಜ್ಯುವೆಲ್ಸ್ನ, ಚೇರ್ಮೆನ್ ಮತ್ತು ಆಡಳಿತ ನಿರ್ದೇಶಕ ಕೇಶವ ಪ್ರಸಾದ್ ಮುಳಿಯ ಮಾತನಾಡಿ, " ಚಿನ್ನಾಭರಣಗಳ ಮಾರುಕಟ್ಟೆಯಲ್ಲಿ ಹಲವು ಹೊಸತನಗಳನ್ನು ಮುಳಿಯ ಜ್ಯುವೆಲ್ಸ್ ಸಂಸ್ಥೆ ಪರಿಚಯಿಸಿದೆ. 25 ವರ್ಷಗಳ ಹಿಂದೆ ಚಿನ್ನಾಭರಣಗಳ ಪ್ರದರ್ಶನ ಮತ್ತು ಮಾರಾಟ ಮೇಳವನ್ನು ಪ್ರಥಮ ಬಾರಿಗೆ ಪುತ್ತೂರಿನಲ್ಲಿ ಆಯೋಜಿಸಿದೆ. ಆಧುನಿಕತೆಯಲ್ಲಿ ಮಹಿಳೆಯರಿಗೆ ವಿವಿಧ ಕಾರ್ಯಕ್ರಗಳಿಗೆ ತಕ್ಕಂತೆ ಅವರವರ ಮನದಿಚ್ಚೆಯ ಕರಿಮಣಿಗಳನ್ನು ಧರಿಸಲು ಅವಕಾಶವಿದೆ ಎಂದರು.ಸುಮಾರು 1000 ರಕ್ಕೂ ಅಧಿಕ ಕರಿಮಣಿ ಸರಗಳ ಸಂಗ್ರಹ ಈ ಸಂದರ್ಭದಲ್ಲಿ ಲಭ್ಯವಾಗಲಿದ್ದು 50 ಕ್ಕೂ ಅಧಿಕ ಆಕರ್ಷಣೀಯ ವಿನ್ಯಾಸಗಳ ಕರಿಮಣಿಗಳು ಲಭ್ಯವಿದೆ. ಇದಕ್ಕಾಗಿ ಕರಿಮಣಿ ಉತ್ಸವದ ಮೂಲಕ ಹೊಸ ಹೊಸ ಶೈಲಿಯ, ಆಕರ್ಷಕ ವಿನ್ಯಾಸದ ಕರಿಮಣಿ ಉತ್ಸವದಲ್ಲಿ ಲಭ್ಯವಿದ್ದು ಫೆ.15ರಿಂದ ಪ್ರಾರಂಭಗೊಂಡು ಫೆ.29ರ ತನಕ ನಡೆಯಲಿದ್ದು ಗ್ರಾಹಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಅವರು ವಿನಂತಿಸಿದರು.ಮುಳಿಯ ಜ್ಯುವೆಲ್ಸ್ನ ಆಡಳಿತ ನಿರ್ದೇಶಕ ಕೃಷ್ಣ ನಾರಾಯಣ ಮುಳಿಯ, ಶೋರೂಂ ವ್ಯವಸ್ಥಾಪಕ ರಾಘವೇಂದ್ರ ಪಾಟೀಲ್, ಮಾರ್ಕೆಟಿಂಗ್ ಮ್ಯಾನೇಜರ್ ಸಂಜೀವ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಭವ್ಯಶ್ರೀ ಪ್ರಾರ್ಥಿಸಿದರು. ಯತೀಶ್ ಆಚಾರ್ಯ ಸ್ವಾಗತಿಸಿರು. ಆನಂದ ಕುಲಾಲ್ ವಂದಿಸಿದರು. ಪ್ರವೀಣ್ ಕಾರ್ಯಕ್ರಮ ನಿರೂಪಿಸಿದರು.
ಫೆ.16ರಿಂದ ಪ್ರಾರಂಭಗೊಂಡಿರುವ ಕರಿಮಣಿ ಉತ್ಸವವು ಫೆ.29ರ ತನಕ ನಡೆಯಲಿದ್ದು ಇದರಲ್ಲಿ ನವನವೀನ ಮಾದರಿಯ, ವಿವಿಧ ವಿನ್ಯಾಸ ಕರಿಮಣಿ ಸರಗಳು ಅತೀ ಕಡಿಮೆ ಸುಮಾರು 2 ಗ್ರಾಂ ನಿಂದ ಪ್ರಾರಂಭಿಸಿ ಗ್ರಾಹಕರ ಆವಶ್ಯಕತೆಗೆ ತಕ್ಕಂತೆ ಎಲ್ಲಾ ರೀತಿಯ ಕರಿಮಣಿ ಸರಗಳು ಲಭ್ಯವಿದೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.
Posted by Vidyamaana on 2023-11-28 11:45:29 |
ಬೆಳ್ತಂಗಡಿ : ಕುಟುಂಬವೊಂದು ತನ್ನ ಪತ್ನಿ ಮನೆಗೆ ಬಂದು ಉಜಿರೆ ಶಾಪಿಂಗ್ ಹೋಗಿ ವಾಪಸ್ ನೆರಿಯ ಪತ್ನಿ ಮನೆಗೆ ಹೋಗುವಾಗ ಒಂಟಿ ಸಲಗ ಕಾರಿಗೆ ಮೇಲೆ ದಾಳಿ ಮಾಡಿದ್ದು ಇಬ್ಬರಿಗೆ ಗಾಯವಾಗಿದ್ದು , ಮೂರು ಮಕ್ಕಳು ಸೇರಿ ಐದು ಜನ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದಲ್ಲಿ ನ.27 ರಂದು ರಾತ್ರಿ 8:30 ರ ಸಮಯಕ್ಕೆ ನಡೆದಿದೆ.
*ಗಂಭೀರ ಗಾಯಗೊಂಡ ಕಾರಿನಲ್ಲಿದ್ದ ಇಬ್ಬರು:* ಪುತ್ತೂರು ತಾಲೂಕಿನ ಕಬಕ ಗ್ರಾಮದ ವಿದ್ಯಾಪುರ ಮನೆಯ ಅಬ್ದುಲ್ ರಹಮಾನ್(40) ತಲೆಗೆ ಹಾಗೂ ಎಡಕಾಲು ಮುರಿದಿದ್ದು. ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದ ಹಿಟ್ಟಾಡಿ ಮನೆಯ ಅಬ್ದುಲ್ ರಹಮಾನ್ ಪತ್ನಿಯ ತಂಗಿ ನಾಸಿಯಾ(30) ಎಡಕಾಲು ಮುರಿದಿದ್ದು. ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
*ಆನೆ ದಾಳಿ ವೇಳೆ ಕಾರಿನದಲ್ಲಿದ್ದವರ ಮಾಹಿತಿ:* ಕಾರಿನಲ್ಲಿ ಅಬ್ದುಲ್ ರಹಮಾನ್ (40) ಪತ್ನಿ ಫೌಸಿಯಾ(35) , ನಾಸಿಯಾ ತಾಯಿ ಜುಬೈದಾ (50), ನಾಸಿಯಾ ಚಿಕ್ಕಮ್ಮ ಅಯಿಷಾ (45), ನಾಸಿಯಾ ಮಕ್ಕಳಾದ ಫಾತಿಮಾ ಅಲ್ಫಾ(1) , ಅಯಿಷಾ ವಾಫಾ(4) ,ಅಬ್ದುಲ್ ರಹಮಾನ್ ಮಗಳು ಮಹಮ್ಮದ್ ಮೋಹಜ್(4) ಸೇರಿ ಒಟ್ಟು 7 ಜನರು ಇದ್ದವರು ಎಂದು ಗಾಯಗೊಂಡ ಅಬ್ದುಲ್ ರಹಮಾನ್ ಮಾಹಿತಿ ನೀಡಿದ್ದಾರೆ.
*ಘಟನೆಯ ವಿವರ:* ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಿಂದ ನೆರಿಯ ಪತ್ನಿ ಮನೆಗೆ ಹೋಗಿ ಉಜಿರೆ ಶಾಪಿಂಗ್ ಮುಗಿಸಿಕೊಂಡು ನೆರಿಯ ಪತ್ನಿ ಮನೆಗೆ ಹೋಗುವಾಗ ಒಂಟಿ ಸಲಗ ಕಂಡಿದ್ದು ತಕ್ಷಣ ಕಾರನ್ನು ಬಯಲು ಬಳಿ ನಿಲ್ಲಿಸಿದ್ದು ಆನೆ ಕಾರಿನ ಮೇಲೆ ದಾಳಿ ಮಾಡಿ ಕಾರನ್ನು ಪಲ್ಟಿ ಮಾಡಿದ್ದು ಈ ವೇಳೆ ಕಾರಿನಲ್ಲಿದ್ದವರು ಜರಿದ್ದರಿಂದ ದಂತದಿಂದ ಕಾರಿನ ಡೋರ್ ಮತ್ತು ಚಾಲಕನ ಸೀಟ್ ಸಿಲಿ ಪ್ರಾಣ ಉಳಿದಿದ್ದು ಬಳಿಕ ಆನೆ ವಾಪಸ್ ಹೋಗಿದೆ ಇದರಿಂದ ಇಬ್ಬರ ಕಾಲು ಮುರಿದಿದ್ದು. ಮೂರು ಮಕ್ಕಳು ಯಾವುದೆ ಗಾಯವಾಗದೆ ಒಟ್ಟು ಐದು ಜನ ಪ್ರಾಣಾ ಉಳಿಸಿಕೊಂಡಿದ್ದಾರೆ. ತಕ್ಷಣ ಸಾರ್ವಜನಿಕರು ಸ್ಥಳಕ್ಕೆ ಬಂದು ಗಾಯಗೊಂಡ ಇಬ್ಬರನ್ನು ಕಕ್ಕಿಂಜೆ ಕೃಷ್ಣ ಆಸ್ಪತ್ರೆಗೆ ಸೇರಿಸಿದ್ದಾರೆ. ಇಬ್ಬರು ಕೂಡ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೆಳ್ತಂಗಡಿ ಅರಣ್ಯಾ ಇಲಾಖೆ ತಂಡ ಗಾಯಗೊಂಡವರನ್ನು ಭೇಟಿ ಮಾಡಿ ಘಟನಾ ಸ್ಥಳಕ್ಕೆ ಹೋಗಿ ಪರಿಶೀಲನೆ ನಡೆಸಿ ಆನೆ ಹೋದ ಸ್ಥಳಕ್ಕೆ ಹೋಗಿ ಮಾಹಿತಿ ಪಡೆದುಕೊಂಡಿದ್ದಾರೆ.
*ಒಂಟಿ ಸಲಗ ಬಗ್ಗೆ ಎಚ್ಚರಿಕೆ ನೀಡಿದ ಆರ್.ಎಫ್.ಓ:* ಒಂಟಿ ಸಲಗ ನೆರಿಯ ಸುತ್ತಮುತ್ತ ತಿರುಗಾಟ ನಡೆಸುತ್ತಿದ್ದು ಈ ಬಗ್ಗೆ ಸಾರ್ವಜನಿಕರಿಗೆ ಬೆಳ್ತಂಗಡಿ ಅರಣ್ಯಾಧಿಕಾರಿ ಮೋಹನ್ ಕುಮಾರ್ ಮತ್ತಿ ಸಿಬ್ಬಂದಿ ರಾತ್ರಿ ಹೊತ್ತು ಸಂಚಾರಿಸುವ ಎಚ್ಚರಿಕೆಯಿಂದ ಇರಲು ಸೂಚನೆ ನೀಡಿದ್ದಾರೆ. ಅರಣ್ಯ ಇಲಾಖೆಯ ಇಬ್ಬರು ಸಿಬ್ಬಂದಿಗಳನ್ನು ಒಂಟಿ ಸಲಗದ ಬಗ್ಗೆ ನಿಗಾ ಇಡಲು ನೇಮಿಸಲಾಗಿದೆ ಎಂದು ಅರಣ್ಯಾಧಿಕಾರಿ ಮೋಹನ್ ಕುಮಾರ್ ಮಾಹಿತಿ ನೀಡಿದ್ದಾರೆ.
ಬೆಳ್ತಂಗಡಿ ಅರಣ್ಯಾಧಿಕಾರಿ ಮೋಹನ್ ಕುಮಾರ್ , ಡಿ.ಆರ್.ಎಫ್.ಓ ಯತೀಂದ್ರ ಮತ್ತು ರಾಜ್ ಶೇಖರ್ , ಅರಣ್ಯ ಗಸ್ತು ಪಾಲಕ ಪಾಂಡುರಂಗ ಕಮತಿ ಮತ್ತು ಅಖಿಲೇಶ್, ಅರಣ್ಯ ಕವಾಲುಗಾರ ಕಿಟ್ಟಣ್ಣ ಮತ್ತು ವಿನಯಚಂದ್ರ ಘಟನಾ ಸ್ಥಳಕ್ಕೆ ಮತ್ತು ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.