ವಿವಾಹಿತ ಯುವಕನ ಜತೆ ವಿದ್ಯಾರ್ಥಿನಿ ಲವ್, ಕೆರೆಗೆ ಹಾರಿ ಇಬ್ಬರೂ ಆತ್ಮಹತ್ಯೆ!

ಸುದ್ದಿಗಳು News

Posted by vidyamaana on 2024-07-03 13:36:16 |

Share: | | | | |


ವಿವಾಹಿತ ಯುವಕನ ಜತೆ ವಿದ್ಯಾರ್ಥಿನಿ ಲವ್, ಕೆರೆಗೆ ಹಾರಿ ಇಬ್ಬರೂ ಆತ್ಮಹತ್ಯೆ!

ಬೆಂಗಳೂರು (ಜು.3): ಇಲ್ಲಿನ ಹೊರವಲಯದ ನೈಸ್ ರಸ್ತೆ ಸಮೀಪದ ಕೆರೆಗೆ ಹಾರಿ ಯುವ ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಕಾಲೇಜು ವಿದ್ಯಾರ್ಥಿನಿ ಅಂಜನಾ(20) ಮತ್ತು ಶ್ರೀಕಾಂತ್(25) ಸಾವನ್ನಪ್ಪಿರುವ ದುರ್ದೈವಿಗಳಾಗಿದ್ದಾರೆ. ಜುಲೈ 1ರಂದು ಪ್ರೇಮಿಗಳು ನಾಪತ್ತೆಯಾಗಿದ್ದರು.

ಕಳೆದ ಕೆಲ ವರ್ಷಗಳಿಂದ ಇಬ್ಬರು ಪರಸ್ಪರ ಪ್ರೀತಿಸ್ತಿದ್ದರು. ಆದರೆ ಯುವಜೋಡಿಯ ಪ್ರೀತಿಗೆ ವಿದ್ಯಾರ್ಥಿನಿ ಪೋಷಕರಿಂದ ವಿರೋಧ ವ್ಯಕ್ತವಾಗಿತ್ತು. ವಿದ್ಯಾರ್ಥಿನಿ ತಲಘಟ್ಟಪುರ ಸಮೀಪದ ಅಂಜನಾಪುರ ಬಳಿ ವಾಸವಿದ್ದಳು. ಯುವಕ ಶ್ರೀಕಾಂತ್ ಕೋಣನಕುಂಟೆ ನಿವಾಸಿಯಾಗಿದ್ದ. ಇಬ್ಬರೂ ನಾಪತ್ತೆಯಾಗಿದ್ದರು. ನಾಪತ್ತೆ ಹಿನ್ನಲೆ ಎರಡೂ ಕಡೆಯವರ ಪೋಷಕರು ಕೋಣನಕುಂಟೆ ಮತ್ತು ತಲಘಟ್ಟಪುರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಇದೀಗ ಇಬ್ಬರೂ ಶವವಾಗಿ ಪತ್ತೆಯಾಗಿದ್ದಾರೆ. ನಮ್ಮ ಸಾವಿಗೆ ನಾವೇ ಕಾರಣ ಎಂದು ಡೆತ್ ನೋಟ್ ಬರೆದಿಟ್ಟು ಜೋಡಿ ಆತ್ಮಹತ್ಯೆ ಮಾಡಿಕೊಂಡಿದೆ.

ಮದುವೆಯಾಗಿದ್ದ ಶ್ರೀಕಾಂತ್!

ಶ್ರೀಕಾಂತ್ ಗೆ ಬೇರೊಬ್ಬರ ಜೊತೆಗೆ ವಿವಾಹವಾಗಿದೆ. ಆದರೂ ಅಂಜನಾಳನ್ನ ಪ್ರೀತಿ ಮಾಡ್ತಿದ್ದ. ಇಬ್ಬರು ಒಟ್ಟಿಗೆ ಬದುಕಲು ಅವಕಾಶ ಇಲ್ಲ ಎಂದು ಸಾಯೋ ನಿರ್ಧಾರ ಮಾಡಿದ್ದಾರೆ. ಮೊದಲು ಶ್ರೀಕಾಂತ್ ಮೃತದೇಹ ಕೆರೆಯಲ್ಲಿ ಕಾಣಿಸಿದೆ. ಆತನನ್ನ ಮೇಲೆತ್ತಿದ್ದ ನಂತರ ಅಂಜನಾ ಮೃತದೇಹ ಕೂಡ ಮೇಲೆ ಬಂದಿದೆ. ಅಂಜನಾ ಮೃತದೇಹದ ಬಗ್ಗೆ ಪೊಲೀಸರಿಗೂ ಮಾಹಿತಿ ಇರುದಿಲ್ಲ. ಇಬ್ಬರು ಕೈಗೆ ಹಗ್ಗ ಕಟ್ಟಿಕೊಂಡಿದ್ದರಿಂದ ಇಬ್ಬರ ಮೃತದೇಹ ಒಟ್ಟಿಗೆ ಸಿಕ್ಕಿದೆ. ಮೊಬೈಲ್ ನಲ್ಲಿ ವೀಡಿಯೊ ಮಾಡಿರುವ ಯುವತಿ ಅಂಜನಾ ಅದನ್ನ ಆಟೋದಲ್ಲಿ ಬಿಟ್ಟು ಶ್ರೀಕಾಂತ್ ಜೊತೆಗೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ನಮ್ಮ ಸಾವಿಗೆ ಯಾರು ಕಾರಣ ಅಲ್ಲ. ನಾವಿಬ್ಬರು ಒಟ್ಟಿಗೆ ಬದುಕಲು ಆಗಲ್ಲ. ಹಾಗಾಗಿ ಸಾಯ್ತಿದ್ದೇವೆ ಎಂದು ವಿಡಿಯೋ ಮಾಡಿದ್ದಾಳೆ. ಮೊಬೈಲ್ ವಶಕ್ಕೆ ಪಡೆದುಕೊಂಡಿರೊ ತಲಘಟ್ಟಪುರ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

 Share: | | | | |


ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಪುತ್ತೂರು, ಹನುಮಗಿರಿಗೆ ಭೇಟಿ ಹಿನ್ನಲೆ ಬಿಗಿ ಪೊಲೀಸ್ ಭದ್ರತೆ

Posted by Vidyamaana on 2023-02-11 03:21:47 |

Share: | | | | |


ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ  ಪುತ್ತೂರು, ಹನುಮಗಿರಿಗೆ ಭೇಟಿ ಹಿನ್ನಲೆ ಬಿಗಿ ಪೊಲೀಸ್ ಭದ್ರತೆ

ಪುತ್ತೂರು:ಪ್ರತಿಷ್ಠಿತ ಅಂತರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೋ ಸುವರ್ಣ ಮಹೋತ್ಸವ ಹಾಗೂ ಹನುಮಗಿರಿಯಲ್ಲಿ ಅಮರಗಿರಿ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳಲು ಕೇಂದ್ರ ಗೃಹ ಸಚಿವರು, ದೇಶದ ಪ್ರಥಮ ಸಹಕಾರ ಸಚಿವರೂ ಆಗಿರುವ ಅಮಿತ್‌ ಶಾ ಅವರು ಫೆ.11 ರಂದು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಪುತ್ತೂರು, ಹನುಮಗಿರಿ ಸುತ್ತಮುತ್ತ ಪೊಲೀಸರು ಬಿಗಿ ಭದ್ರತಾ ವ್ಯವಸ್ಥೆ ಕಲ್ಪಿಸಿದ್ದು ಎಲ್ಲಿ ನೋಡಿದರೂ ಪೊಲೀಸರೇ ಕಾಣುತ್ತಿದ್ದಾರೆ. ರಾಜ್ಯದ ನಾನಾ ಭಾಗದಿಂದ ಪೊಲೀಸರನ್ನು ಭದ್ರತೆಗೆ ನಿಯೋಜನೆ ಮಾಡಲಾಗಿದೆ.ಅಮಿತ್ ಶಾ ಅವರಲ್ಲದೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಹಿತ ರಾಜ್ಯದ ಹಲವು ಸಚಿವರು, ಜನಪ್ರತಿನಿಧಿಗಳು, ರಾಜಕೀಯ ನಾಯಕರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ಆಯಕಟ್ಟಿನ ಸ್ಥಳಗಳಲ್ಲಿ ಪೊಲೀಸರು ಹದ್ದಿನ ಕಣ್ಣಿರಿಸಿದ್ದಾರೆ.ಕೆಲವು ದಿನಗಳಿಂದ ಕೇರಳ ಗಡಿ ಸಹಿತ ವಿವಿಧೆಡೆ ಪೊಲೀಸರನ್ನು ನಿಯೋಜಿಸಿ ನಿಗಾ ಇರಿಸಲಾಗಿದೆ.ಗೃಹ ಸಚಿವ ಅಮಿತ್‌ ಶಾ ಅವರು ಪಾಲ್ಗೊಳ್ಳುವ ಹನುಮಗಿರಿಯಲ್ಲಿ ಮತ್ತು ಪುತ್ತೂರು ಕ್ಯಾಂಪ್ಕೋ ಸುವರ್ಣ ಮಹೋತ್ಸವ ಉದ್ಘಾಟನೆ ಹಾಗೂ ಸಮಾವೇಶ ನಡೆಯಲಿರುವ ವಿವೇಕಾನಂದ ವಿದ್ಯಾಸಂಸ್ಥೆಯ ಕ್ರೀಡಾಂಗಣದಲ್ಲಿ ಸಕಲ ಸಿದ್ಧತೆಗಳನ್ನು ಮಾಡಲಾಗುತ್ತಿದೆ.

ಉನ್ನತ ಭದ್ರತಾ ವ್ಯವಸ್ಥೆಯನ್ನು ಹೊಂದಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ದಕ್ಷಿಣ ಕನ್ನಡ ಜಿಲ್ಲೆಗೆ ಭೇಟಿ ಹಿನ್ನೆಲೆಯಲ್ಲಿ ಎಲ್ಲೆಡೆ ಪೊಲೀಸ್ ಕಟ್ಟೆಚ್ಚರ ವಹಿಸಲಾಗಿದೆ: ಸುಮಾರು ಮೂರು ಸಾವಿರ ಪೊಲೀಸರನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.ಈ ಮಧ್ಯೆ ಕೇಂದ್ರ ಗುಪ್ತಚರ ಇಲಾಖೆಯ ಅಧಿಕಾರಿಗಳೂ ಈ ಭಾಗದಲ್ಲಿ ಸಕ್ರಿಯರಾಗಿದ್ದಾರೆ.ಸಚಿವರು ಕೇರಳದ ಕಣ್ಣೂರುಗೆ ಬಂದು ಬಳಿಕ ಜಿಲ್ಲೆಯ ನಾನಾ ಕಡೆ ಪ್ರಯಾಣಿಸಲಿರುವ ಕಾರಣ ಜಿಲ್ಲಾಡಳಿತ ಸಚಿವರ ಭದ್ರತೆಗೆ ಗರಿಷ್ಠ ಆದ್ಯತೆ ನೀಡಿದೆ.

ಮೂರು ಹೆಲಿಪ್ಯಾಡ್: ಕೇಂದ್ರ ಗೃಹ ಸಚಿವ ಅಮಿತ್‌ ಶಾ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿ ಹಿನ್ನೆಲೆಯಲ್ಲಿ ಪುತ್ತೂರಿನಲ್ಲಿ ಮೂರು ಹೆಲಿಪ್ಯಾಡ್‌ ಗಳನ್ನು ನಿರ್ಮಿಸಲಾಗಿದೆ.

ಕೇರಳ ಗಡಿ ಭಾಗದಲ್ಲಿರುವ ಹನುಮಗಿರಿ ದೇವಾಲಯಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಬಳಿಕ ಅಮರಗಿರಿ ಭಾರತಮಾತಾ ಮಂದಿರವನ್ನು ಸಚಿವರು ಉದ್ಘಾಟಿಸಲಿದ್ದಾರೆ. ಕಣ್ಣೂರುನಿಂದ ಬರಲಿರುವ ಅಮಿತ್‌ ಶಾ ಅವರ ಹೆಲಿಕಾಪ್ಟರ್ ಲ್ಯಾಂಡಿಂಗ್ ಆಗಲು ಈಶ್ವರಮಂಗಲ ಗಜಾನನ ಶಾಲೆ ಮೈದಾನದಲ್ಲಿ ಹೆಲಿಪ್ಯಾಡ್ ನಿರ್ಮಿಸಲಾಗಿದ್ದು, ಈಗಾಗಲೇ ಇದರ ಉದ್ಘಾಟನೆ ನಡೆದಿದೆ.ಹೈದರಾಬಾದ್‌ನಿಂದ ಕಣ್ಣೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿದು ಅಲ್ಲಿಂದ ಬಿಎಸ್‌ಎಫ್ ಹೆಲಿಕಾಪ್ಟರ್‌ನಲ್ಲಿ ಬರುವ ಅಮಿತ್ ಶಾರವರು ಹನುಮಗಿರಿ ಹೆಲಿಪ್ಯಾಡ್‌ನಲ್ಲಿ ಬಂದಿಳಿಯಲಿದ್ದಾರೆ.ಹನುಮಗಿರಿ ಕಾರ್ಯಕ್ರಮ ಮುಗಿಸಿ ಹೆಲಿಕಾಪ್ಟರ್‌ನಲ್ಲಿ ಬರಲಿರುವ ಶಾ ಅವರು ಕೆಮ್ಮಿಂಜೆ ಗ್ರಾಮದ ಮೊಟ್ಟೆತಡ್ಕ ರಾಷ್ಟ್ರೀಯ ಗೇರು ಸಂಶೋಧನಾ ನಿರ್ದೇಶನಾಲಯದ ಎದುರಿನ ಮೈದಾನದಲ್ಲಿನಿರ್ಮಿಸಲಾಗಿರುವ ಹೆಲಿಪ್ಯಾಡ್ ಲ್ಲಿ ನಲ್ಲಿ ಬ೦ದಿಳಿಯಲಿದ್ದಾರೆ.ಮೊಟ್ಟೆತ್ತಡ್ಕದಲ್ಲಿ ಇದೀಗ ಶಾಶ್ವತವಾದ ಹೆಲಿಪ್ಯಾಡ್ ನಿರ್ಮಿಸಲಾಗಿದೆ.ಇದರ ಜತೆಗೆ ಪುತ್ತೂರು ಸಂತ ಫಿಲೋಮಿನಾ ಹೆಲಿಕಾಪ್ಟರ್ ಕಾಲೇಜಿನ ಮೈದಾನವನ್ನೂ ಹೆಚ್ಚುವರಿ ಹೆಲಿಪ್ಯಾಡ್ ಆಗಿ ಬಳಸಿಕೊಳ್ಳಲು ನಿರ್ಧರಿಸಲಾಗಿದೆ.ಇದು 3ನೇ ಮತ್ತು ತುರ್ತು ಹೆಲಿಪ್ಯಾಡ್ ಆಗಿ ಬಳಕೆಯಾಗಲಿದೆ.


ಕಂಗೊಳಿಸುತ್ತಿರುವ ಪುತ್ತೂರು ಪೇಟೆ:

ಕ್ಯಾಂಪ್ಕೋ ಸುವರ್ಣ ಮಹೋತ್ಸವ ಸಹಿತ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಆಗಮಿಸುತ್ತಿರುವ ಅಮಿತ್‌ ಶಾ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಹಿತ ವಿವಿಧ ಮಂತ್ರಿಗಳು, ಜನಪ್ರತಿನಿಧಿಗಳಿಗೆ ಸ್ವಾಗತ ಕೋರಿ ಪುತ್ತೂರು ಪೇಟೆಯಾದ್ಯಂತ ಬ್ಯಾನರ್, ಬಂಟಿಂಗ್ಸ್, ಕಟೌಟ್‌ಗಳನ್ನು ಅಳವಡಿಸಲಾಗಿದೆ. ಹನುಮಗಿರಿ ವ್ಯಾಪ್ತಿಯಲ್ಲಿಯೂ ಬ್ಯಾನರ್, ಕಟೌಟ್‌ಗಳು ರಾರಾಜಿಸುತ್ತಿವೆ.ಇತರ ಗ್ರಾಮಾಂತರ ಭಾಗಗಳಲ್ಲೂ ರಸ್ತೆ ಬದಿ ಸ್ವಾಗತದ ಬ್ಯಾನರ್‌ಗಳನ್ನು ಅಳವಡಿಸಲಾಗಿದೆ.


ಸಮಾವೇಶಕ್ಕೆ ಆಗಮಿಸುವವರಿಗೆ ಊಟದ ವ್ಯವಸ್ಥೆ: ಸುಳ್ಯ ಭಾಗದಿಂದ ಬರುವವರಿಗಾಗಿ ಕಾವು ಕ್ಯಾಂಪೋ ಬಳಿಯಲ್ಲಿ, ಬೆಳ್ಳಾರೆ ಭಾಗದಿಂದ ಬರುವವರಿಗೆ ಪರ್ಪುಂಜ ಶಿವಕೃಪಾ ಹಾಲ್ ಬಳಿ, ಸವಣೂರು ಮತ್ತು ಸುಬ್ರಹ್ಮಣ್ಯ ಭಾಗದಿಂದ ಬರುವವರಿಗೆ ನರಿಮೊಗರು ಮುಕ್ತ ಉಮಾಮಹೇಶ್ವರಿ ದೇವಸ್ಥಾನದ ಬಳಿ, ಬೆಳ್ತಂಗಡಿ ಹಾಗೂ ನೆಲ್ಯಾಡಿ ಭಾಗದಿಂದ ಬರುವವರಿಗೆ ಉಪ್ಪಿನಂಗಡಿ ಸಹಸ್ರಲಿಂಗೇಶ್ವರ ದೇವಸ್ಥಾನ, ಬಂಟ್ವಾಳ ಭಾಗದಿಂದ ಬರುವವರಿಗೆ ಮಾಣಿ-ಕಬಕ ರಸ್ತೆಯ ಮಿತ್ತೂರು ಪೆಟ್ರೋಲ್ ಪಂಪ್ ಬಳಿ, ವಿಟ್ಲ ಕನ್ಯಾನ ಭಾಗದಿಂದ ಬರುವವರಿಗೆ ಕಬಕ ವಿಟ್ಲ ರಸ್ತೆಯ ಅಳಕೆಮಜಲು ಭಜನಾ ಮಂದಿರ ಬಳಿ,

ಪಾಣಾಜೆ ಭಾಗದಿಂದ ಬರುವವರಿಗೆ ಉಪ್ಪಳಿಗೆ ಶಾಲಾ ವಠಾರದಲ್ಲಿ ಊಟದ ವ್ಯವಸ್ಥೆ ಮಾಡಲಾಗಿದೆ.


ವಾಹನಗಳ ಪಾರ್ಕಿಂಗ್ ಸ್ಥಳ, ಪಾರ್ಕಿಂಗ್ ಪ್ರಮುಖರು: ವಿವೇಕಾನಂದ ತೆಂಕಿಲ ಶಾಲಾ ಮೈದಾನದಲ್ಲಿ ಕ್ಯಾಂಪ್ರೋ ಸುವರ್ಣ ಮಹೋತ್ಸವ ಕಾರ್ಯಕ್ರಮಕ್ಕೆ ಆಗಮಿಸುವವರು ವಾಹನಗಳನ್ನು ಸ್ವಯಂ ಸೇವಕರು ಸೂಚಿಸಿದ ಸ್ಥಳದಲ್ಲೇ ಪಾರ್ಕ್ಮಾಡುವಂತೆ ವಾಹನ ಪಾರ್ಕಿಂಗ್ ವ್ಯವಸ್ಥೆಯ ಸಂಚಾಲಕ ಭಾಮಿ ಅಶೋಕ್ ಶೆಣೈ ಮತ್ತು ಮುರಳೀಕೃಷ್ಣ ಹಸಂತಡ್ಕ ತಿಳಿಸಿದ್ದಾರೆ.ಪ್ರತಿ ವಾಹನ ನಿಲುಗಡೆಯ ಸ್ಥಳಕ್ಕೂ ಪ್ರತ್ಯೇಕ ಹೆಸರು ಸೂಚಿಸಲಾಗಿದೆ.ಪ್ರಮುಖವಾಗಿ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯದ ಎದುರಿನ ಗದ್ದೆ, ಪುತ್ತೂರು ನಗರದ ಕಿಲ್ಲೆ ಮೈದಾನ, ಪುತ್ತೂರು ನಗರದ ಎಪಿಎಂಸಿ, ವಿಐಪಿಗಳಿಗೆ ತೆಂಕಿಲ ಬೈಪಾಸ್ ವ್ಯಾಪ್ತಿಯ 3-4 ಲೇ ಔಟ್‌ಗಳಲ್ಲಿ ಪಾರ್ಕಿಂಗ್ ವ್ಯವಸ್ಥೆ ಇದೆ.ಸುಳ್ಯದಿಂದ ಬರುವ ಬಸ್‌ಗಳಿಗೆ ಸುಭದ್ರ ಬಳಿ (ಸಿಂಧೂ) ಪಾರ್ಕಿಂಗ್‌ಗೆ ಅಜಿತ್‌ ಕೆಯೂರು(ಮೊ: 8970994039) ನಿಲುಗಡೆ ಪ್ರಮುಖ ಆಗಿದ್ದಾರೆ.ಕಾಣಿಯೂರಿನಿಂದ ಬರುವ ನಾಲ್ಕು ಚಕ್ರದ ವಾಹನಗಳಿಗೆ ಫಿಲೋಮಿನಾ ಹೈಸ್ಕೂಲ್ ಬಳಿ (ನರ್ಮದಾ) ಪಾರ್ಕಿಂಗ್‌ಗೆ ದಿನೇಶ್ ತಿಂಗಳಾಡಿ(ಮೊ:8431839614) ನಿಲುಗಡೆ ಪ್ರಮುಖರಾಗಿದ್ದಾರೆ.ಸುಳ್ಯದ ಕಡೆಯಿಂದ ಬರುವ ನಾಲ್ಕು ಚಕ್ರದ ವಾಹನಗಳಿಗೆ ಬೈಪಾಸ್ ಅಭಯ ಮಾರ್ಬಲ್ ಎದುರು (ಯಮುನಾ) ಪಾರ್ಕಿಂಗ್‌ಗೆ ಅನಿಲ್ ದರ್ಬೆ (9902813711 ಪ್ರಮುಖರಾಗಿದ್ದಾರೆ.ವಿಐಪಿ ವಾಹನಗಳಿಗೆ ತೆಂಕಿಲ ಬೈಪಾಸ್ ಸುರೇಶ್ ಟವರ್ ಬಳಿ (ತುಂಗಾ) ಮತ್ತು (ಭದ್ರ) ಪಾರ್ಕಿಂಗ್ ಗೆ ಚಂದ್ರ ತೆಂಕಿಲ(9591197706) ಪ್ರಮುಖರಾಗಿದ್ದಾರೆ.ತೆಂಕಿಲ ಗೌಡ ಸಮುದಾಯದ ಬಳಿ (ಶರಾವತಿ) ಪಾರ್ಕಿಂಗ್‌ಗೆ ರೂಪೇಶ್ ಮುರ (7019504836) ಪ್ರಮುಖರಾಗಿದ್ದಾರೆ. ಸರಕಾರಿ ವಾಹನಗಳಿಗೆ ತೆಂಕಿಲ ಸ್ವಾಮಿ ಕಲಾಮಂದಿರದ(ಕೃಷ್ಣಾ) ಪಾರ್ಕಿಂಗ್‌ಗೆ ನಿತೇಶ್ ನಗರ(8904221429)ಪ್ರಮುಖರಾಗಿದ್ದಾರೆ.ತೆಂಕಿಲ ಮಂಗಳಾ ಹಾರ್ಡ್ ವೇರ್ ಕಟ್ಟಡದ ಬಳಿ (ಫಲ್ಗುಣಿ)ಪಾರ್ಕಿಂಗ್‌ಗೆ ನಿತೇಶ್ ನಗರ, ನಗರ ಮತ್ತು ಬಲ್ನಾಡಿನಿಂದ ಬರುವ ನಾಲ್ಕು ಚಕ್ರದ ವಾಹನಗಳಿಗೆ ತೆಂಕಿಲ ದರ್ಶನ್ ಹಾಲ್‌ನ ಹಿಂಭಾಗ(ಶಾಂಭವಿ) ಪಾರ್ಕಿಂಗ್ ಚೇತನ್ ಬೊಳುವಾರು(ಮೊ: 8105895210) ಪ್ರಮುಖರಾಗಿದ್ದಾರೆ.ಅದೇ ಭಾಗದಿ೦ದ ಬರುವ ನಾಲ್ಕು ಚಕ್ರದ ವಾಹನಗಳಿಗೆ ಜೈನಭವನ (ಸರಯೂ) ಪಾರ್ಕಿಂಗ್ ಜೀವನ್ ಬಲ್ನಾಡು(ಮೊ:9483215377) ಪ್ರಮುಖರಾಗಿದ್ದಾರೆ.ಅದೇ ಭಾಗದಿಂದ ಬರುವ ದ್ವಿಚಕ್ರ ವಾಹನಗಳಿಗೆ ತೆಂಕಿಲ ಪಾದೆಯ (ನೇತ್ರಾವತಿ) ಪಾರ್ಕಿಂಗ್‌ನಲ್ಲಿ ಭವಿಷ್ಯತ್ (7026869493) ಪ್ರಮುಖರಾಗಿದ್ದಾರೆ: ವಿಟ್ಲ ಭಾಗದಿಂದ ಬರುವ ಬಸ್‌ಗಳಿಗೆ ಬೈಪಾಸ್‌ ರಸ್ತೆಯ ಅತ್ಮೀ ಕಂಫರ್ಟ್‌ ಬಳಿ (ಕಾವೇರಿ) ಪಾರ್ಕಿಂಗ್‌ನಲ್ಲಿ ಪ್ರವೀಣ್ ಕಲ್ಲೇಗ(ಮೊ: 9663885236)ಪ್ರಮುಖರಾಗಿದ್ದಾರೆ. ವಿಟ್ಲ ಭಾಗದಿಂದ ಬರುವ ನಾಲ್ಕು ಚಕ್ರದ ವಾಹನಗಳಿಗೆ ಸುಶ್ರುತ ಆಸ್ಪತ್ರೆಯ ಬಳಿ (ಗೋದಾವರಿ) ಪಾರ್ಕಿ೦ಗ್‌ನಲ್ಲಿ ರೂಪೇಶ್ ಬಲ್ನಾಡ್ (9632346192)ಪ್ರಮುಖರಾಗಿದ್ದಾರೆ.ಬೆಳಿ ಂಗಡಿ ಮತ್ತು ಉಪ್ಪಿನಂಗಡಿಯಿಂದ ಬರುವ ಬಸ್‌ಗಳಿಗೆ ಮಹಾಲಿಂಗೇಶ್ವರ ದೇವಸ್ಥಾನದ (ಗೋದಾವರಿ) ಪಾರ್ಕಿಂಗ್‌ನಲ್ಲಿ ಜಿತೇಶ್ (0:9606779737) ಪ್ರಮುಖರಾಗಿದ್ದಾರೆ.ಸುಳ್ಯ ರಸ್ತೆಯಿಂದ ಬರುವ ನಾಲ್ಕು ಚಕ್ರದ ವಾಹನಳಿಗೆ ಬೈಪಾಸ್‌ ಭಾರತ್ ಗ್ಯಾಸ್, ಎದುರುಗಡೆ (ಕುಮಾರಧಾರ) ಪಾರ್ಕಿಂಗ್‌ನಲ್ಲಿ ಹರೀಶ್ doces (in: 8310857491) ಪ್ರಮುಖರಾಗಿದ್ದಾರೆ.ಪಂಚವಟಿ ಬಳಿ ಸೀತಾ ಪಾರ್ಕಿಂಗ್, ಪರ್ಲಡ್ಕ ಶಾಲಾ ಮೈದಾನದಲ್ಲಿ ಭಾಗೀರಥಿ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. ಭದ್ರತೆಯ ದೃಷ್ಟಿಯಿಂದ ಎಲ್ಲಾ ವಾಹನಗಳು ಮಧ್ಯಾಹ್ನ ಗಂಟೆ 1.30ರ ಒಳಗಾಗಿ ಸೂಚಿಸಿದ ಸ್ಥಳದಲ್ಲಿ ನಿಲುಗಡೆಗೊಳಿಸಬೇಕೆಂದು ಪಾರ್ಕಿಂಗ್ ವಿಭಾಗದ ಸಂಚಾಲಕರು ಸೂಚಿಸಿದ್ದಾರೆ.

ಈ ರಸ್ತೆಯಲ್ಲಿ ವಾಹನ ಸಂಚಾರ ನಿಷೇಧ

ಅಮಿತ್ ಶಾ ಅವರು ಹನುಮಗಿರಿ ಕಾರ್ಯಕ್ರಮ ಮುಗಿಸಿ ಪುತ್ತೂರಿಗೆ ಹೊರಡುವ 1 ಗಂಟೆ ಮೊದಲು ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಪುತ್ತೂರು ತಾಲೂಕಿನ 2 ಕಡೆಗಳಲ್ಲಿ ಸಂಚಾರ ಸ್ಥಗಿತಗೊಳಿಸಲಾಗುತ್ತದೆ.ಮಧ್ಯಾಹ್ನ 2 ಗಂಟೆಯಿಂದ ಸಂಜೆ 5.30ರವರೆಗೆ ಲಿನೆಟ್ ಜಂಕ್ಷನ್‌ನಿಂದ ಮುಕ್ರಂಪಾಡಿ ತನಕ ವಾಹನ ಸಂಚಾರ ಸಂಪೂರ್ಣ ನಿಷೇಧಿಸಲಾಗುತ್ತದೆ.

1,600 ಪೊಲೀಸ್ ಸಿಬ್ಬಂದಿಗಳನ್ನು ಕರ್ತವ್ಯಕ್ಕೆ ನಿಯೋಜಿಸಲಾಗಿದೆ.7 ಮಂದಿ ಎಸ್‌ಪಿ, 22 ಮಂದಿ ಡಿವೈಎಸ್ಪಿ, 38 ಮಂದಿ ಇನ್‌ಸ್ಪೆಕ್ಟರ್, 80ಕ್ಕೂ ಅಧಿಕ ಪಿಎಸ್‌ಐಗಳು ಕರ್ತವ ನಿರ್ವಹಿಸಲಿದ್ದಾರೆ.ಇದರ ಜತೆಗೆ ಪ್ಯಾರಾ ಮಿಲಿಟರಿ ಫೋರ್ಸ್, ಅಮಿತ್ ಶಾ ಅವರಿಗೆ ಎಸ್‌ಪಿಜಿ ಭದ್ರತೆ ಇರಲಿದೆ.ಹನುಮಗಿರಿ, ಮೊಟ್ಟೆತ್ತಡ್ಕ ಹೆಲಿಪ್ಯಾಡ್, ತೆಂಕಿಲ ಸಮಾವೇಶ ಸ್ಥಳದಲ್ಲಿ ಬಿಗಿ ಭದ್ರತೆ ಮಾಡಲಾಗಿದೆ.ಫೆ.11ರಂದು ಪುತ್ತೂರು ನಗರದಲ್ಲಿ ವಾಹನ ಸಂಚಾರಕ್ಕೆ ಬದಲಿ ಮಾರ್ಗಸೂಚಿ ನಿಗದಿಪಡಿಸಲಾಗಿದೆ.

ಅಮಿತ್ ಶಾ ಕಾರ್ಯಕ್ರಮ....

ಫೆ.11ರಂದು ಅಪರಾಹ್ನ 2.50ಕ್ಕೆ ಕಣ್ಣೂರಿನಿಂದ ಹೆಲಿಕಾಪ್ಟರ್ ಮೂಲಕ ಆಗಮಿಸಲಿರುವ ಅಮಿತ್ ಶಾ ಅವರು 3.15ಕ್ಕೆ ಹನುಮಗಿರಿ ಹೆಲಿಪ್ಯಾಡ್‌ನಲ್ಲಿ ಇಳಿಯಲಿದ್ದಾರೆ. ಹನುಮಗಿರಿ, ಅಮರಗಿರಿ ಭೇಟಿ ಮುಗಿಸಿ 3.40ಕ್ಕೆ ಪುತ್ತೂರಿಗೆ ಹೊರಡಲಿದ್ದಾರೆ. ಸಾಯಂಕಾಲ 5.30ರವರೆಗೆ ಪುತ್ತೂರು ತೆಂಕಿಲ ಮೈದಾನದಲ್ಲಿ ಕ್ಯಾಂಪೋ ಸಂಸ್ಥೆಯ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.5.40ಕ್ಕೆ ಪುತ್ತೂರಿನಿಂದ ಹೊರಟು, 6 ಗಂಟೆಗೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಇಳಿಯಲಿದ್ದಾರೆ.6.15ರಿಂದ 8 ಗಂಟೆಯವರೆಗೆ ಮಂಗಳೂರಿನಲ್ಲಿ ಇರಲಿದ್ದಾರೆ.


ಬಸವರಾಜ ಬೊಮ್ಮಾಯಿ ಆರೋಗ್ಯ ವಿಚಾರಿಸಿದ ಸಿಎಂ ಸಿದ್ದರಾಮಯ್ಯ

Posted by Vidyamaana on 2023-10-21 11:34:00 |

Share: | | | | |


ಬಸವರಾಜ ಬೊಮ್ಮಾಯಿ ಆರೋಗ್ಯ ವಿಚಾರಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಜಿ.ಪರಮೇಶ್ವರ್ ಅವರು ಇಂದು ಬನ್ನೇರುಘಟ್ಟ ರಸ್ತೆಯ ಫೋರ್ಟಿಸ್ ಆಸ್ಪತ್ರೆಗೆ ಭೇಟಿ ನೀಡಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಆರೋಗ್ಯ ವಿಚಾರಿಸಿದರು. ಬೇಗ ಗುಣಮುಖರಾಗುವಂತೆ ಹಾರೈಸಿದರು.



ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್ ಅವರು ಜತೆಗಿದ್ದರು

ಪುತ್ತೂರು : ರೆಫ್ರಿಜರೇಟರ್ ಸ್ಪೋಟಗೊಂಡು ಅಗ್ನಿ ಅವಘಡ

Posted by Vidyamaana on 2024-06-18 14:27:29 |

Share: | | | | |


ಪುತ್ತೂರು : ರೆಫ್ರಿಜರೇಟರ್ ಸ್ಪೋಟಗೊಂಡು ಅಗ್ನಿ ಅವಘಡ

ಪುತ್ತೂರು: ನಗರದ ಹೊರವಲಯದ ಜಿಡೆಕಲ್ಲು ಕಾಲೇಜು ಸಮೀಪದ ಮನೆಯೊಂದರಲ್ಲಿ ರೆಫ್ರಿಜರೇಟರ್ ಸ್ಪೋಟಗೊಂಡ ಘಟನೆ ಸಂಭವಿಸಿದೆ.

ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾರನ್ನು ಬಂಧಿಸಿದ ಸಿಬಿಐ

Posted by Vidyamaana on 2023-02-26 15:38:10 |

Share: | | | | |


ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾರನ್ನು ಬಂಧಿಸಿದ ಸಿಬಿಐ

ಹೊಸದಿಲ್ಲಿ: ದಿಲ್ಲಿಯ ಮದ್ಯ ನೀತಿಯಲ್ಲಿನ ಭ್ರಷ್ಟಾಚಾರದ ಆರೋಪದ ಮೇಲೆ ದಿಲ್ಲಿಯ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಸಿಬಿಐ ಬಂಧಿಸಿದೆ.

ಬೆಳಗ್ಗೆಯಿಂದಲೇ ಒಂಬತ್ತು ಗಂಟೆಗೂ ಹೆಚ್ಚು ಕಾಲ ವಿಚಾರಣೆ ನಡೆಸಿದ ಬಳಿಕ ಬಂಧನ ನಡೆದಿದೆ.

“ದೇವರು ನಿಮ್ಮೊಂದಿಗಿದ್ದಾನೆ ಮನೀಶ್, ಲಕ್ಷಾಂತರ ಮಕ್ಕಳ ಮತ್ತು ಅವರ ಪೋಷಕರ ಆಶೀರ್ವಾದ ನಿಮ್ಮ ಮೇಲಿದೆ. ದೇಶ ಮತ್ತು ಸಮಾಜಕ್ಕಾಗಿ ಜೈಲಿಗೆ ಹೋದಾಗ ಜೈಲಿಗೆ ಹೋಗುವುದು ಶಾಪವಲ್ಲ, ಕೀರ್ತಿ, ನೀನು ಬೇಗ ಜೈಲಿನಿಂದ ಹಿಂತಿರುಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ. ಮಕ್ಕಳು, ಪೋಷಕರು ಮತ್ತು ದೆಹಲಿಯ ನಾವೆಲ್ಲರೂ ನಿಮಗಾಗಿ ಕಾಯುತ್ತಿದ್ದೇವೆ” ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಟ್ವೀಟ್ ಮಾಡಿದ್ದಾರೆ.



ಉಡುಪಿ ಹತ್ಯೆ ಪ್ರಕರಣ: ಮಹಜರು ವೇಳೆ ಆರೋಪಿಯ ಮೇಲೆ ದಾಳಿಗೆ ಯತ್ನ

Posted by Vidyamaana on 2023-11-16 17:52:07 |

Share: | | | | |


ಉಡುಪಿ ಹತ್ಯೆ ಪ್ರಕರಣ: ಮಹಜರು ವೇಳೆ ಆರೋಪಿಯ ಮೇಲೆ ದಾಳಿಗೆ ಯತ್ನ

ಉಡುಪಿ:  ಮಾತ್ರವಲ್ಲ ಇಡೀ ರಾಜ್ಯವೇ ಬೆಚ್ಚಿಬೀಳಿಸಿದ ಘಟನೆಯೇ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಎಲ್ಲೆಡೆ ಚರ್ಚೆಗೆ ಕಾರಣವಾಗಿದೆ. ಇದರ ನಡುವೆ, ನೇಜಾರು ಕುಟುಂಬದ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರ ತನಿಖೆ ವೇಳೆ ರೋಚಕ ಮಾಹಿತಿಗಳು ಹೊರಬಿದ್ದಿವೆ. ಇದರ ಬೆನ್ನಲ್ಲೇ ಆರೋಪಿಯನ್ನು ಸ್ಥಳ ಮಹಜರು ಮಾಡಲು ಹತ್ಯೆಗೈದ ಮನೆಗೆ ಕರೆತಂದಿದ್ದಾರೆ. ಬೆಳಗ್ಗೆಯಿಂದಲೇ ಘಟನಾ ಸ್ಥಳದಲ್ಲಿ ಜನ ಜಮಾಯಿಸಿದ್ದು, 11.30 ಗಂಟೆಗೆ ಆರೋಪಿಯನ್ನು ಸ್ಥಳ ಮಹಜರು ಸ್ಥಳಕ್ಕೆ ಬರುವುದಾಗಿ ಹೇಳಲಾಗಿತ್ತು. ಆದರೆ ಸಂಜೆ 4.30 ಕ್ಕೆ ಆರೋಪಿಯನ್ನು ಕರೆತರಲಾಗಿತ್ತು. ಈ ಎಲ್ಲಾ ಪ್ರಕ್ರಿಯೆ ನಡೆಯುವ ಸಂದರ್ಭ ಹಸೀನಾ ಅವರ ಪತಿ ಕುಸಿದು ಬಿದ್ದಿರುವ ಘಟನೆ ಕೂಡಾ ನಡೆಯಿತು. ಬೆಳಗ್ಗಿನಿಂದಲೇ ಜನ ಆರೋಪಿಯನ್ನು ನೋಡಲು ನಿಂತಿದ್ದರು.


ಚಾಕುವಿನಿಂದ ಇರಿದು ಒಂದೇ ಕುಟುಂಬದ ನಾಲ್ವರನ್ನು ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿ ಪ್ರವೀಣ್‌ ಚೌಗಲೆ ವಿಚಾರಣೆಯ ಸಂದರ್ಭ ತಪ್ಪೊಪ್ಪಿಕೊಂಡಿದ್ದಾನೆ ಎಂದು ಉಡುಪಿ ಪೊಲೀಸ್‌ ವರಿಷ್ಠಾಧಿಕಾರಿ ಡಾ.ಅರುಣ್‌ ತಿಳಿಸಿದ್ದಾರೆ.


ಈ ಹತ್ಯೆ ಪ್ರಕರಣದ ತನಿಖೆಸಂಬಂಧಿಸಿದಂತೆ ಆರೋಪಿಯನ್ನು ಸ್ಥಳ ಮಹಜರು ಮಾಡಲು ಕರೆತಂದ ಸಂದರ್ಭ ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಕೃತ್ಯದಲ್ಲಿ ಭಾಗಿಯಾದ ಆರೋಪಿ ಪ್ರವೀಣ್‌ ಚೌಗಲೆಯನ್ನು ಪೊಲೀಸರು ಬಿಗಿ ಬಂದೋ ಬಸ್ತ್ ನಲ್ಲಿ ಕಪ್ಪು ವಸ್ತ್ರದಲ್ಲಿ ಮುಖ ಕಾಣದಂತೆ ಹತ್ಯೆಗೈದ ಮನೆಗೆ ಕರೆತಂದಿದ್ದಾರೆ. ಪೊಲೀಸರು ಆರೋಪಿಯನ್ನು ಮಹಜರು ಮಾಡಲು ಕರೆತಂದ ಸಂದರ್ಭ ಆತನನ್ನು ನೋಡಲು ಜನರು ಕಿಕ್ಕಿರಿದು ತುಂಬಿದ್ದರು. ಘಟನಾ ಸ್ಥಳದಲ್ಲಿ ಸುಮಾರು 400 ಕ್ಕೂ ಅಧಿಕ ಜನ ಸೇರಿದ್ದರು.




ಆರೋಪಿಯನ್ನು ಮನೆಗೆ ಕರೆದೊಯ್ಯುತ್ತಿದ್ದ ಸಂದರ್ಭ ಕೆಲವರು ಬ್ಯಾರಿಕೇಡ್ ದಾಟಿ ಆರೋಪಿಯ ಮೇಲೆ ಹಲ್ಲೆ ನಡೆಸಲು ಯತ್ನಿಸಿದ ಘಟನೆ ನಡೆದಿದ್ದು, ಪೊಲೀಸರು ಈ ಸಂದರ್ಭ ಲಾಠಿ ಚಾರ್ಜ್ ಮಾಡಿ ಪರಿಸ್ಥಿತಿ ತಿಳಿಗೊಳಿಸಲು ಪ್ರಯತ್ನಿಸಿದ್ದಾರೆ.ಈ ಸಂದರ್ಭ ಸ್ಥಳೀಯರು ಪೊಲೀಸ್ ಸಿಬ್ಬಂದಿಗಳಲ್ಲಿ ಬೇಡಿಕೆಯಿಟ್ಟಿದ್ದು, ಕೇವಲ ಎರಡು ನಿಮಿಷಗಳ ಕಾಲ ಆರೋಪಿಯನ್ನು ತಮಗೆ ಒಪ್ಪಿಸುವಂತೆ ಮನವಿ ಮಾಡಿದ್ದಾರೆ. ಇದಲ್ಲದೆ, ಈ ಕೃತ್ಯ ಎಸಗಿದ ಆರೋಪಿಗೆ ಕಠಿಣ ಶಿಕ್ಷೆ ವಿಧಿಸಿ ಕ್ಷಿಪ್ರ ನ್ಯಾಯ ಒದಗಿಸುವಂತೆ ಪ್ರತಿಭಟನೆ ಕೂಡ ನಡೆಸಿದ್ದಾರೆ.

BREAKING: ಇರಾನ್ ಹಂಗಾಮಿ ಅಧ್ಯಕ್ಷರಾಗಿ ಮೊಹಮ್ಮದ್ ಮೊಕ್ಬರ್ ನೇಮಕ

Posted by Vidyamaana on 2024-05-20 14:47:58 |

Share: | | | | |


BREAKING: ಇರಾನ್ ಹಂಗಾಮಿ ಅಧ್ಯಕ್ಷರಾಗಿ ಮೊಹಮ್ಮದ್ ಮೊಕ್ಬರ್ ನೇಮಕ

ಇರಾನ್: ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಹೆಲಿಕಾಪ್ಟರ್ ಅಪಘಾತದಲ್ಲಿ ನಿಧನರಾದ ಹಿನ್ನೆಲೆಯಲ್ಲಿ ಅವರ ನಿಧನಕ್ಕೆ ಐದು ದಿನಗಳ ಸಾರ್ವಜನಿಕ ಶೋಕಾಚರಣೆಯನ್ನು ಇರಾನ್ನ ಸರ್ವೋಚ್ಚ ನಾಯಕ ಅಲಿ ಖಮೇನಿ ಘೋಷಿಸಿದ್ದಾರೆ. ಮೊದಲ ಉಪಾಧ್ಯಕ್ಷ ಮೊಹಮ್ಮದ್ ಮೊಖ್ಬರ್ ಅವರನ್ನು ದೇಶದ ಕಾರ್ಯನಿರ್ವಾಹಕ ಶಾಖೆಯ ಮಧ್ಯಂತರ ಮುಖ್ಯಸ್ಥರಾಗಿ ನೇಮಕ ಮಾಡಿರುವುದನ್ನು ದೃಢಪಡಿಸಿದ್ದಾರೆ.ರೈಸಿ ಅವರ ಉತ್ತರಾಧಿಕಾರಿಯನ್ನು ಆಯ್ಕೆ ಮಾಡಲು ಅಧ್ಯಕ್ಷೀಯ ಚುನಾವಣೆ ನಡೆಸಲು ಇರಾನ್ ಈಗ ಗರಿಷ್ಠ 50 ದಿನಗಳ ಅವಧಿಯನ್ನು ಹೊಂದಿದೆ.



Leave a Comment: