ವಿ.ಹಿಂ.ಪರಿಷದ್ ನ ಪುತ್ತೂರು ನಗರ ಘಟಕದ ಅಧ್ಯಕ್ಷರಾಗಿ ಎಸ್.ದಾಮೋದರ ಪಾಟಾಳಿ ನೇಮಕ

ಸುದ್ದಿಗಳು News

Posted by vidyamaana on 2024-07-03 11:16:18 |

Share: | | | | |


ವಿ.ಹಿಂ.ಪರಿಷದ್ ನ ಪುತ್ತೂರು ನಗರ ಘಟಕದ ಅಧ್ಯಕ್ಷರಾಗಿ ಎಸ್.ದಾಮೋದರ ಪಾಟಾಳಿ ನೇಮಕ

ಪುತ್ತೂರು : ವಿಶ್ವ ಹಿಂದೂ ಪರಿಷದ್ ನ ಪುತ್ತೂರು ನಗರ ಘಟಕದ ಅಧ್ಯಕ್ಷರಾಗಿ ಎಸ್.ದಾಮೋದರ ಪಾಟಾಳಿಯವರನ್ನು ನೇಮಕ ಮಾಡಲಾಗಿದೆ.ವಿಶ್ವ ಹಿಂದೂ ಪರಿಷದ್ ನ ಜಿಲ್ಲೆಯ ಕಾರ್ಯಾಲಯದಲ್ಲಿ ನಡೆದ ಬೈಠಕ್ ನಲ್ಲಿ ಜಿಲ್ಲಾಧ್ಯಕ್ಷ ಡಾ.ಕೃಷ್ಣ ಪ್ರಸನ್ನ ಘೋಷಿಸಿದರು.

ವಿಶ್ವ ಹಿಂದೂ ಪರಿದ್ ನ ಜಿಲ್ಲಾ ಉಪಾಧ್ಯಕ್ಷ ಸತೀಶ್ ಬಿ.ಎಸ್., ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ, ಜಿಲ್ಲಾ ಸೇವಾ ಪ್ರಮುಖ್ ಸೀತಾರಾಮ ಭಟ್, ಜಿಲ್ಲಾ ಸಹ ಕಾರ್ಯದರ್ಶಿ ಶ್ರೀಧರ್ ತೆಂಕಿಲ ಮತ್ತಿತರರು ಈ ವೇಳೆ ಉಪಸ್ಥಿತರಿದ್ದರು.

 Share: | | | | |


ಪುತ್ತೂರು :ನಾರಿಶಕ್ತಿ ಮಹಿಳಾ ಕಾರ್ಯಕರ್ತರ ಸಮಾವೇಶ

Posted by Vidyamaana on 2024-04-10 11:38:40 |

Share: | | | | |


ಪುತ್ತೂರು :ನಾರಿಶಕ್ತಿ ಮಹಿಳಾ ಕಾರ್ಯಕರ್ತರ ಸಮಾವೇಶ

ಪುತ್ತೂರು, ಎ.9: ನಿಮ್ಮೆಲ್ಲರ ಕೈ ಕೊಯ್ದರೆ ರಕ್ತ ಕೆಂಪಿನದ್ದಿಲ್ಲ, ಕೇಸರಿ ಇರೋದು ಅಂತ ಗೊತ್ತಿದೆ. ನಿಮ್ಮವರಿಗೆ ಬಿಜೆಪಿ ಬಗ್ಗೆ, ಹಿಂದುತ್ವದ ಬಗ್ಗೆ ಪಾಠ ಹೇಳಲು ಬಂದಿಲ್ಲ. ಆದರೆ ನಾಡಿದ್ದು ಎಪ್ರಿಲ್ 26ರಂದು ಮದುವೆ ಇದೆ, ಮೋದಿ ಹೇಗೂ ಗೆಲ್ಲುತ್ತಾರೆಂದು ನಿರ್ಲಕ್ಷ್ಯ ಮಾಡಬೇಡಿ. ಮೋದಿಯವರು ಈ ದೇಶದ ಮಹಿಳೆಯರಿಗೆ ಶಕ್ತಿ ಕೊಟ್ಟಿದ್ದಾರೆ. ಮಹಿಳೆಯರ ಸಬಲೀಕರಣಕ್ಕಾಗಿ ಎಷ್ಟೆಲ್ಲಾ ಯೋಜನೆ ಮಾಡಿದ್ದಾರೆ. ಅದಕ್ಕಾಗಿ ನಾವು ಹಿಂತಿರುಗಿ ಕೊಡೋದು, ಒಂದು ಮತವಷ್ಟೇ. ಅದನ್ನು ತಪ್ಪದೆ ಮಾಡಬೇಕು ಎಂದು ಬಿಜೆಪಿ ನಾಯಕಿ, ಚಿತ್ರನಟಿ ಮಾಳವಿಕಾ ಅವಿನಾಶ್ ಹೇಳಿದ್ದಾರೆ.

ಪುತ್ತೂರಿನಲ್ಲಿ ನಾರಿಶಕ್ತಿ ಮಹಿಳಾ ಕಾರ್ಯಕರ್ತರ ಸಮಾವೇಶದಲ್ಲಿ ಅವರು ಮಾತನಾಡಿದರು. ನಮಗೆ ಮೋದಿ ಗೆಲ್ಲುವ ಬಗ್ಗೆ ಸಂಶಯ ಇಲ್ಲ. ಇಲ್ಲಿ ಬೃಜೇಶ್ ಗೆಲ್ಲುವುದರಲ್ಲೂ ಸಂಶಯ ಇಲ್ಲ. ಗೆಲ್ಲೋದು ಖಚಿತ. ಆದರೆ ಇಲ್ಲಿ ಎಷ್ಟು ಅಂತರದಿಂದ ಗೆಲ್ಲಿಸಿ ಕಳಿಸುತ್ತೇವೆ ಅನ್ನುವುದು ಮುಖ್ಯ. ಮೂರು ಲಕ್ಷನಾ, ನಾಲ್ಕು ಲಕ್ಷನಾ ಎಂದು ನಾವು ಈಗಲೇ ಸಂಕಲ್ಪ ಮಾಡಬೇಕು. ನಿಮಗೆಲ್ಲ ಗೊತ್ತಿದೆ, ಪರೀಕ್ಷೆಯಲ್ಲಿ ರಿವಿಶನ್ ಮಾಡೋದಕ್ಕಷ್ಟೇ ನಾನು ಬಂದಿದ್ದೇನೆ ಎಂದರು.

ಪುತ್ತೂರು :ಮತದಾರರಿಗೆ ಕಾಂಗ್ರೆಸ್ ಕಾರ್ಯಕರ್ತರಿಗೆ ಅಭಿನಂದನೆ- ಕೃತಜ್ಞತಾ ಸಮರ್ಪಣಾ ಸಮಾರಂಭ

Posted by Vidyamaana on 2023-06-03 17:23:57 |

Share: | | | | |


ಪುತ್ತೂರು :ಮತದಾರರಿಗೆ ಕಾಂಗ್ರೆಸ್ ಕಾರ್ಯಕರ್ತರಿಗೆ ಅಭಿನಂದನೆ- ಕೃತಜ್ಞತಾ ಸಮರ್ಪಣಾ ಸಮಾರಂಭ

ಪುತ್ತೂರು: ಭ್ರಷ್ಟಾಚಾರ ಇಟ್ಟುಕೊಂಡು ಪುತ್ತೂರಿಗೆ ಬರುವ ಯಾವುದೇ ಅಧಿಕಾರಿಗಳು ಜನಸಾಮಾನ್ಯರಲ್ಲಿ ಹಣಕ್ಕಾಗಿ ಕೈಯೊಡ್ಡಿದರೆ ಅವರನ್ನು ಒಂದೇ ವಾರದಲ್ಲಿ ಇಲ್ಲಿಂದ ಎತ್ತಂಗಡಿ ಮಾಡುವ ಕೆಲಸ ಮಾಡಲಿದ್ದೇನೆ.

ಪುತ್ತೂರಿನಲ್ಲಿ ಕಾಂಗ್ರೆಸ್ ವತಿಯಿಂದ ನಗರದ ಪುರಭವನದಲ್ಲಿ ಶನಿವಾರ ನಡೆದ ಶಾಸಕರಿಗೆ ಅಭಿನಂದನಾ ಸಮಾರಂಭದಲ್ಲಿ ಅಭಿನಂದನೆ ಸ್ವೀಕರಿಸಿ ಮಾತನಾಡಿದರು.ಪುತ್ತೂರು ಕ್ಷೇತ್ರದಲ್ಲಿ ಯಾವುದೇ ಅಧಿಕಾರಿಗಳಿಂದ ನಾವು ಅಪೇಕ್ಷೆ ಪಡುವುದು ಬಡವರಿಗೆ ಸೇವೆ ನೀಡುವುದನ್ನು. ಅದನ್ನು ಬಿಟ್ಟು ಬಡವರನ್ನು, ಜನಸಾಮಾನ್ಯರ ಕೆಲಸಕ್ಕಾಗಿ ಅಲೆದಾಡಿಸುವ ಪ್ರವೃತ್ತಿ ಇಟ್ಟುಕೊಂಡರೆ ಅವರನ್ನು ತಕ್ಷಣ ಈ ಕ್ಷೇತ್ರದಿಂದ ಕಳುಹಿಸುವ ಕೆಲಸ ಮಾಡಲಾಗುವುದು ಎಂದು ಖಾರವಾಗಿ ಹೇಳಿದರು.

ಮುಂದಿನ ದಿನಗಳಲ್ಲಿ ಲೋಕಸಭೆ, ತಾಪಂ, ಜಿಲ್ಲಾ ಪಂ ಚುನಾವಣೆ ಬರಲಿದ್ದು, ಬೂತ್ ಮಟ್ಟದಿಂದಲೇ ಪಕ್ಷವನ್ನು ಕಟ್ಟಿ ಚುನಾವಣೆಯಲ್ಲಿ ಗೆಲುವು ಸಾಧಿಸುವ ಕಾರ್ಯಕ್ಕೆ ಈಗಿನಿಂದಲೇ ತೊಡಗಿಸಿಕೊಳ್ಳಬೇಕಾಗಿದೆ. ಈ ನಿಟ್ಟಿನಲ್ಲಿ ಪ್ರತೀ ಬೂತ್ ಅಧ್ಯಕ್ಷರು ತಮ್ಮ ಜವಾಬ್ದಾರಿ ವಹಿಸಿಕೊಂಡು ಸರಕಾರ ಈಗಾಗಲೇ ನೀಡಿರುವ ಪಂಚ ಗ್ಯಾರಂಟಿಗಳನ್ನು ಜತೆಗೆ 94ಸಿ, 94ಸಿಸಿ, ಅಕ್ರಮ-ಸಕ್ರಮದಲ್ಲಿ ಯಾರಿಗೆಲ್ಲಾ ಇನ್ನೂ ಹಕ್ಕುಪತ್ರ ಸಿಕ್ಕಿಲ್ಲ ಅದರ ಬಗ್ಗೆ ಗಮನ ನೀಡಿ ಅರ್ಜಿಗಳನ್ನು ಪಡೆದು, ಸರಕಾರದ ಗ್ಯಾರಂಟಿಗಳನ್ನು ಪ್ರತೀ ಮನೆಗೆ ತಲುಪಿಸುವ ಕಾರ್ಯ ಭರದಿಂದ ಮಾಡಬೇಕಾಗಿದೆ. ಈ ಮೂಲಕ ಪಕ್ಷವನ್ನು ಬೂತ್ ಮಟ್ಟದಿಂದಲೇ ಭದ್ರವಾಗಿ ಕಟ್ಟಿ ಮುಂದಿನ 25 ವರ್ಷಗಳ ವರೆಗೂ ಕಾಂಗ್ರೆಸ್ ಆಡಳಿತದಲ್ಲಿರುವಂತೆ ಮಾಡಬೇಕಾದ ಅಗತ್ಯವಿದೆ ಎಂದು ಹೇಳಿದರು.

ಈಗಾಗಲೇ ಬಿಜೆಪಿಯವರು ಇಲ್ಲ ಸಲ್ಲದ ಆರೋಪಗಳನ್ನು ಮಾಡುತ್ತಿದ್ದು, ಸುಳ್ಳು ಹೇಳುವುದನ್ನು ಬಿಟ್ಟು ಅಭಿವೃದ್ಧಿಯಲ್ಲಿ ನಮ್ಮ ಜತೆ ಕೈಜೋಡಿಸಲಿ ಎಂದ ಅವರು, ಮುಂದಿನ ಮೂರು ವರ್ಷದೊಳಗೆ ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಯಾರಿಗೂ ಕುಡಿಯುವ ನೀರಿನ ಕೊರತೆ ಕಂಡು ಬರಬಾರದು. ಈ ನಿಟ್ಟಿನಲ್ಲಿ 1400 ಕೋಟಿ ಕುಡಿಯುವ ನೀರಿನ ಕೊರತೆ ನೀಗಿಸಲು ವ್ಯಯಿಸಲಾಗುವುದು. ಜತೆಗೆ ಯುವಕರ ಮನಸ್ಸು ಬದಲಾಯಿಸಲು ಉದ್ಯೋಗ ಸೃಷ್ಟಿಗಾಗಿ ಪ್ರತೀ ವರ್ಷ ಉದ್ಯೋಗ ಮೇಳವನ್ನು ಪುತ್ತೂರಿನಲ್ಲಿ ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದ ಅವರು, ಇಂದಿನ ಈ ಅಭಿನಂದನಾ ಸಭೆ ಚುನಾವಣೆ ಸಂದರ್ಭದಲ್ಲಿ ಬಿಸಿಲು, ಮಳೆ ಎನ್ನದೆ ತೊಡಗಿಸಿಕೊಂಡ ಕಾರ್ಯಕರ್ತ ಬಂಧುಗಳಿಗೆ ಎಂದು ಹೇಳಿದರು.

ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ, ಕೆಪಿಸಿಸಿ ವಕ್ತಾರ ಕಾವು ಹೇಮನಾಥ ಶೆಟ್ಟಿ ಮಾತನಾಡಿ,

 ಬಿಜೆಪಿ ಭದ್ರಕೋಟೆ ಎನ್ನಿಸಿರುವ ದ.ಕ. ಹಾಗೂ ಉಡುಪಿ ಜಿಲ್ಲೆಗಳು ಸೇರಿ ಕಾಂಗ್ರೆಸ್ ಎರಡು ಸ್ಥಾನಗಳನ್ನು ಗೆದ್ದಿದೆ. ಪುತ್ತೂರಿನಲ್ಲಿ ಈ ಬಾರಿ ಕಾಂಗ್ರೆಸ್ ಪಕ್ಷದಿಂದ ಶಾಸಕರ ಆಯ್ಕೆಯಾಗಿ ಜನಸಾಮಾನ್ಯರ ಧ್ವನಿಯಾಗಬೇಕು ಎಂಬ ನಿಟ್ಟಿನಲ್ಲಿ ಎಲ್ಲಾ ನಾಯಕರು ಒಟ್ಟಾಗಿ ಕೆಲಸ ಮಾಡುವ ಯೋಜನೆ, ಬೆಳೆಸಿಕೊಂಡಿದ್ದಾರೆ.  ಇದರ ಫಲವಾಗಿ ಇಂದು ಅಶೋಕ್ ಕುಮಾರ್ ರೈ ಅವರು ಶಾಸಕರಾಗಿದ್ದು, ಮೊದಲ ಆಶ್ವಾಸನೆ ಎಂಬಂತೆ ಮೆಡಿಕಲ್ ಕಾಲೇಜು ಸ್ಥಾಪನೆಯ ಎಲ್ಲಾ ಚಟುವಟಿಕೆಗಳಿಗೆ ಚಾಲನೆ ನೀಡಿದ್ದು, ಮುಂದಿನ ದಿನಗಳಲ್ಲಿ ಎಲ್ಲರ ಪ್ರೀತಿ ವಿಶ್ವಾಸ ಗಳಿಸಿ, ಅಭಿವೃದ್ಧಿ ಮಾಡುವ ನಿಟ್ಟಿನಲ್ಲಿ ಮಾದರಿ ಶಾಸಕರಾಗಿ ಬೆಳೆದು ಬರಲಿದ್ದಾರೆ ಎಂದು ಹೇಳಿದರು.

ಕಾಂಗ್ರೆಸ್ ಜಿಲ್ಲಾ ವಕ್ತಾರ ಮಹಮ್ಮದ್ ಬಡಗನ್ನೂರು ಮಾತನಾಡಿ, ಶಾಂತಿ-ಸೌಹಾರ್ದತೆಗೆ ಕಾಂಗ್ರೆಸ್ ಪಕ್ಷ ಆಡಳಿತಕ್ಕೆ ಬರಬೇಕು ಎಂಬುದು ಜನರ ಆಶಯ ಇತ್ತು. ಅದು ಸಾಕಾರಗೊಂಡಿದೆ. ಕಾಂಗ್ರೆಸ್ ಮುಕ್ತ ಕರ್ನಾಟಕ ಎಂಬ ಬಿಜೆಪಿಯವರ ಕನಸಿಗೆ ತಿಲಾಂಜಲಿ ಹಾಕಲಾಗಿದೆ ಎಂದ ಅವರು, ಮುಂದಿನ 25 ವರ್ಷಗಳ ಸುದೀರ್ಘ ಪ್ರಯಾಣಕ್ಕೆ ಅಡಿಪಾಯ ಹಾಕಲು ಮುಂದಿ ಬಂದ ಧ್ರುವತಾರೆ ಅಶೋಕ್ ರೈ ಎಂದರು.

ಈ ಸಂದರ್ಭದಲ್ಲಿ ಹಿಂದೂ ಜಾಗರಣ ವೇದಿಕೆಯ ರಮೇಶ್ ರೈ ಡಿಂಬ್ರಿ ಹಾಗೂ ಗಿರಿಧರ ಅವರು ಶಾಸಕರಿಂದ ಪಕ್ಷದ ಬಾವುಟ ಪಡೆದುಕೊಳ್ಳುವ ಮೂಲಕ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು. ಶಾಸಕ ಅಶೋಕ್ ರೈಯವರನ್ನು ವಿವಿಧ ಸಂಘಟನೆ, ಕಾರ್ಯಕರ್ತರು, ಪ್ರಮುಖರು ಪೇಟ ತೊಡಿಸಿ, ಹೂಹಾರ ಹಾಕಿ, ಫಲಪುಷ್ಪ ನೀಡಿ ಅಭಿನಂದಿಸಿದರು.

ಸಭೆಯನ್ನುದ್ದೇಶಿಸಿ ವಿಟ್ಲ-ಉಪ್ಪಿನಂಗಡಿ ಬ್ಲಾಕ್‍ ಅಧ್ಯಕ್ಷ ಡಾ.ರಾಜಾರಾಮ ಕೆ.ಬಿ., ಜಿಪಂ ಮಾಜಿ ಸದಸ್ಯ ಎಂ.ಎಸ್.ಮಹಮ್ಮದ್ ಮಾತನಾಡಿದರು. ಜಿಪಂ ಮಾಜಿ ಸದಸ್ಯೆ ಅನಿತಾ ಹೇಮನಾಥ ಶೆಟ್ಟಿ, ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಬಿ.ವಿಶ್ವನಾಥ ರೈ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಹಿರಿಯ ಕಾಂಗ್ರೆಸ್ ಮುಖಂಡ ಎನ್.ಸುಧಾಕರ ಶೆಟ್ಟಿ,  ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಫಝ್ಲಲ್ ರಹೀಮ್, ಮುರಳೀಧರ ರೈ ಮಠಂತಬೆಟ್ಟು, ಉಲ್ಲಾಸ್ ಕೋಟ್ಯಾನ್, ಪ್ರಸನ್ನ ಕುಮಾರ್ ಶೆಟ್ಟಿ, ಜಗದೀಶ್ ಶೆಟ್ಟಿ ನೆಲ್ಲಿಕಟ್ಟೆ, ಕುಂಬ್ರ ದುರ್ಗಾಪ್ರಸಾದ್ ರೈ, ನಗರ ಕಾಂಗ್ರೆಸ್ ಅಧ್ಯಕ್ಷ ಮಹಮ್ಮದ್ ಆಲಿ, ಅಲ್ಪಸಂಖ್ಯಾತ ಘಟಕದ ಶಕೂರ್ ಹಾಜಿ, ಯುವ ಕಾಂಗ್ರೆಸ್ ಅಧ್ಯಕ್ಷ ಪ್ರಸಾದ್ ಪಾಣಾಜೆ, ಸುಭಾಶ್ಚಂದ್ರ ಶೆಟ್ಟಿ, ಕೋಟಿ ಚೆನ್ನಯ ಕಂಬಳ ಸಮಿತಿ ಅಧ್ಯಕ್ಷ ಚಂದ್ರಹಾಸ ರೈ, ಪ್ರಸಾದ್ ಕೌಶಲ್ ಶೆಟ್ಟಿ, ವೇದನಾಥ ಸುವರ್ಣ ಮತ್ತಿತರರು ಉಪಸ್ಥಿತರಿದ್ದರು.  ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ  ಅಮಲ ರಾಮಚಂದ್ರ ಪ್ರಾಸ್ತಾವಿಕವಾಗಿ ಮಾತನಾಡಿದರು. ಸೇವಾದಳದ ಅಧ್ಯಕ್ಷ ಜೋಕಿಂ ಡಿ’ಸೋಜಾ ವಂದೇ ಮಾತರಂ ಹಾಡಿದರು. ಚುನಾವಣಾ ಏಜೆಂಟ್ ಭಾಸ್ಕರ ಕೋಡಿಂಬಾಳ ಸ್ವಾಗತಿಸಿದರು. ಸಿದ್ದಿಕ್ ಸುಲ್ತಾನ್ ಕಾರ್ಯಕ್ರಮ ನಿರೂಪಿಸಿದರು.

ಮಗನ ಸಾವಿನ ನೋವಲ್ಲಿ ತಾಯಿ ಸಹೋದರಿ ಆತ್ಮಹತ್ಯೆ ; ದೀಪಾವಳಿ ಮಧ್ಯೆ ಕುಟುಂಬಕ್ಕೆ ಆಘಾತ

Posted by Vidyamaana on 2023-11-15 05:50:17 |

Share: | | | | |


ಮಗನ ಸಾವಿನ ನೋವಲ್ಲಿ ತಾಯಿ ಸಹೋದರಿ ಆತ್ಮಹತ್ಯೆ ; ದೀಪಾವಳಿ ಮಧ್ಯೆ ಕುಟುಂಬಕ್ಕೆ ಆಘಾತ

ಕಾರವಾರ, ನ.15: ದೀಪಾವಳಿ ಸಂಭ್ರಮದ ನಡುವೆ ಒಂದೇ ಮನೆಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಪುತ್ರನ ಸಾವಿನ ನೋವಿನಲ್ಲಿ ತಾಯಿ ಹಾಗೂ ಸಹೋದರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿರಸಿ ತಾಲೂಕಿನ ತಾರಗೋಡು ಬೆಳಲೆ ಗ್ರಾಮದಲ್ಲಿ ನಡೆದಿದೆ. 


ಅನಾರೋಗ್ಯದ ಹಿನ್ನೆಲೆ ಉದಯ ಬಾಲಚಂದ್ರ ಹೆಗಡೆ (22) ಎಂಬ ಯುವಕ ಮನೆಯಲ್ಲೇ ಮೃತಪಟ್ಟಿದ್ದರು.‌ ಪುತ್ರನ ಮೃತದೇಹದ ಪಕ್ಕದಲ್ಲೇ ಕುಳಿತು ಕಣ್ಣೀರು ಹಾಕುತ್ತಿದ್ದ ಆತನ ತಾಯಿ ಹಾಗೂ ಸಹೋದರಿ ಬಳಿಕ ತಾವು ಕೂಡ ಸಾವಿಗೆ ಶರಣಾಗಿದ್ದಾರೆ.‌‌ ತಾಯಿ ನರ್ಮದಾ ಬಾಲಚಂದ್ರ ಹೆಗಡೆ (50) ಹಾಗೂ ಸಹೋದರಿ ದಿವ್ಯಾ ಬಾಲಚಂದ್ರ ಹೆಗಡೆ (25) ಆತ್ಮಹತ್ಯೆ ಮಾಡಿಕೊಂಡವರು.‌


ಕೊರೊನಾ ಸಂದರ್ಭದಲ್ಲಿ ಆನಾರೋಗ್ಯ ಕಾಡಿದ್ದರಿಂದ ಊರಿಗೆ ಹಿಂತಿರುಗಿದ್ದ ಉದಯ ಬಾಲಚಂದ್ರ ಹೆಗಡೆ ಮನೆಯಲ್ಲಿದ್ದಕೊಂಡೇ ಚಿಕಿತ್ಸೆ ಪಡೆಯುತ್ತಿದ್ದರು. ಬಳಿಕ ಮಗನ ಚಿಕಿತ್ಸೆಗಾಗಿ ಆಸ್ಪತ್ರೆ- ಮನೆ ಅಂತ ಅಲೆದಾಡುತ್ತಿದ್ದರು. ಅನಾರೋಗ್ಯ ತೀವ್ರಗೊಂಡ ಹಿನ್ನೆಲೆ‌ ಮಂಗಳವಾರ ಬೆಳಗ್ಗೆ ಮಗ ಸಾವಿಗೀಡಾಗಿದ್ದ.‌ ಮನೆ ಮಗನ ಸಾವಿನ ನೋವಿನಿಂದ ತಾಯಿ ಹಾಗೂ ಸಹೋದರಿ ಆತ್ಮಹತ್ಯೆಗೆ ಶರಣಾಗಿದ್ದಾರೆ. 


ಸ್ಥಳಕ್ಕೆ ಶಿರಸಿ ಗ್ರಾಮೀಣ ಠಾಣಾ ಪೊಲೀಸರು ಭೇಟಿ ನೀಡಿ ತನಿಖೆ ನಡೆಸಿದ್ದಾರೆ.

ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಗಳನ್ನು ಬೆಂಗಳೂರಿನಲ್ಲಿ ಬಂಧಿಸಿದ ಬಂಟ್ವಾಳ ಪೊಲೀಸರು

Posted by Vidyamaana on 2024-02-13 11:08:34 |

Share: | | | | |


ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಗಳನ್ನು ಬೆಂಗಳೂರಿನಲ್ಲಿ ಬಂಧಿಸಿದ ಬಂಟ್ವಾಳ ಪೊಲೀಸರು

ಬಂಟ್ವಾಳ : ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಗಳನ್ನು ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು ಬಂಧಿಸಿದ್ದಾರೆ.


ಮಂಚಿ ಗ್ರಾಮ ಕುಕ್ಕಾಜೆ ನಿವಾಸಿ ಮಹಮ್ಮದ್ ಸಮೀವುಲ್ಲಾ, ಮಂಚಿ ಗ್ರಾಮ ಕಂಚಿಲ ನಿವಾಸಿ ಇಬ್ರಾಹಿಂ ಬಂಧಿತರು.ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಅ.ಕ್ರ 04/2004 ಕಲಂ: 147,148,504,447,427, 435, 324,326,307,506 r/w 149 ಐಪಿಸಿ ಪ್ರಕರಣದಲ್ಲಿ ಆರೋಪಿಗಳಾದ ಮಹಮ್ಮದ್ ಸಮೀವುಲ್ಲಾ (34) ಹಾಗೂ ಇಬ್ರಾಹಿಂ (35) ಎಂಬವರುಗಳು ವಿಚಾರಣೆಗಾಗಿ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದು, ಅವರನ್ನು ಫೆ.12 ರಂದು ಪೊಲೀಸ್ ಉಪನಿರೀಕ್ಷರಾದ ಮೂರ್ತಿ, ಸಿಬ್ಬಂದಿಗಳಾದ ಹೆಚ್ ಸಿ ಕೃಷ್ಣ ಮತ್ತು ಪಿ ಸಿ ಯೋಗೇಶ್ ಡಿ ಎಲ್ , ಪುನೀತ್ ರವರು ಬೆಂಗಳೂರಿನಲ್ಲಿ ದಸ್ತಗಿರಿ ಮಾಡಿ, ನ್ಯಾಯಾಲಯಕ್ಕೆ ಹಾಜರುಪಡಿಸಿರುತ್ತಾರೆ.


ನ್ಯಾಯಾಲಯವು ಸದ್ರಿ ಆರೋಪಿಗಳಿಗೆ ನ್ಯಾಯಾಂಗ ಬಂಧನದ ವಿಧಿಸಿರುತ್ತದೆ.

ಶಾರ್ಜಾಕ್ಕೆ 154 ಪ್ರಯಾಣಿಕರನ್ನು ಹೊತ್ತ ವಿಮಾನ ತಿರುವನಂತಪುರದಲ್ಲಿ ತುರ್ತು ಭೂಸ್ಪರ್ಶ

Posted by Vidyamaana on 2023-07-31 08:10:48 |

Share: | | | | |


ಶಾರ್ಜಾಕ್ಕೆ 154 ಪ್ರಯಾಣಿಕರನ್ನು ಹೊತ್ತ ವಿಮಾನ ತಿರುವನಂತಪುರದಲ್ಲಿ ತುರ್ತು ಭೂಸ್ಪರ್ಶ

ತಿರುವನಂತಪುರಂ: 154 ಪ್ರಯಾಣಿಕರನ್ನು ಹೊತ್ತು ತಿರುಚ್ಚಿಯಿಂದ – ಶಾರ್ಜಾಕ್ಕೆ ಹೊರಟಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನ ಟೇಕ್ ಆಫ್ ಆದ ಕೆಲವೇ ಹೊತ್ತಿನಲ್ಲಿ ತಿರುವನಂತಪುರಂ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.


ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನ 613 ತಮಿಳುನಾಡಿನ ತಿರುಚಿರಾಪಳ್ಳಿ ವಿಮಾನ ನಿಲ್ದಾಣದಿಂದ ಶಾರ್ಜಾಕ್ಕೆ ಬೆಳಿಗ್ಗೆ 10:45 ಕ್ಕೆ ಹೊರಟಿತು. ಟೇಕ್ ಆಫ್ ಆದ ಕೆಲವೇ ಹೊತ್ತಿನಲ್ಲಿ ವಿಮಾನದಲ್ಲಿ ತಾಂತ್ರಿಕ ದೋಷ ಕಂಡುಬಂದಿದ್ದು 12.03ಕ್ಕೆ ವಿಮಾನವನ್ನು ತಿರುವನಂತಪುರಂ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಲಾಯಿತು ಎಂದು ಅಧಿಕಾರಿಗಳು ಹೇಳಿದ್ದಾರೆ.


ತುರ್ತು ಭೂಸ್ಪರ್ಶದಿಂದ ವಿಮಾನ ನಿಲ್ದಾಣದಲ್ಲಿ ಭಯದ ವಾತಾವರಣ ನಿರ್ಮಾಣವಾಗಿತ್ತು. ಅಲ್ಲದೆ ಪ್ರಯಾಣಿಕರು ಪರದಾಡುವಂತಾಯಿತು. ಸದ್ಯ ವಿಮಾನದಲ್ಲಿದ್ದ ಎಲ್ಲ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ ಎಂದು ವಿಮಾನಯಾನ ಪ್ರಾಧಿಕಾರ ಹೇಳಿಕೆ ನೀಡಿದೆ.

ಲೋಕಸಮರ: ಮಾದರಿ ನೀತಿ ಸಂಹಿತೆ ಜಾರಿ : ಚುನಾವಣೆ ಘೋಷಣೆ ಬಳಿಕ ಯಾವುದಕ್ಕೆಲ್ಲಾ ನಿರ್ಬಂಧ ಗೊತ್ತಾ?

Posted by Vidyamaana on 2024-03-16 17:11:08 |

Share: | | | | |


ಲೋಕಸಮರ: ಮಾದರಿ ನೀತಿ ಸಂಹಿತೆ ಜಾರಿ : ಚುನಾವಣೆ ಘೋಷಣೆ ಬಳಿಕ ಯಾವುದಕ್ಕೆಲ್ಲಾ ನಿರ್ಬಂಧ ಗೊತ್ತಾ?

ನವದೆಹಲಿ(ಮಾ.16): 2024ರ ಲೋಕಸಭಾ ಚುನಾವಣೆಗೆ(Lok Sabha Election 2024) ಇಂದು ದಿನಾಂಕ ನಿಗದಿಯಾಗಿದೆ. ಭಾರತದಲ್ಲಿ ಒಟ್ಟು 543 ಲೋಕಸಭಾ ಕ್ಷೇತ್ರಗಳಿಗೆ 7 ಹಂತಗಳಲ್ಲಿ(Seven Phase) ಚುನಾವಣೆ ನಡೆಯಲಿದೆ. ಏಪ್ರಿಲ್ 19ರಿಂದ ಮತದಾನ(Voting) ಆರಂಭವಾಗಲಿದ್ದು, ಜೂನ್ 1ಕ್ಕೆ ಮುಕ್ತಾಯಗೊಳ್ಳಲಿದೆ.ಕರ್ನಾಟಕದಲ್ಲಿ 2 ಹಂತದಲ್ಲಿ ಲೋಕಸಭಾ ಚುನಾವಣೆ ನಡೆಯಲಿದೆ. ಏಪ್ರಿಲ್ 26 ರಂದು ಮೊದಲ ಹಂತದ ಚುನಾವಣೆ ನಡೆಯಲಿದೆ. ಮೇ 7 ರಂದು 2ನೇ ಹಂತದ ಚುನಾವಣೆ ನಡೆಯಲಿದೆ.


ಇಂದು ಬಹು ನಿರೀಕ್ಷಿತ ಚುನಾವಣೆ ದಿನಾಂಕ ಘೋಷಣೆ ಆಗಿದೆ. ಜೊತೆಗೆ ಇಂದಿನಿಂದಲೇ ದೇಶಾದ್ಯಂತ ಚುನಾವಣಾ ನೀತಿ ಸಂಹಿತೆ ಜಾರಿಯಾಗಿದೆ. ಇದಕ್ಕೂ ಮುನ್ನ ನಾವೆಲ್ಲರೂ ತಿಳಿದುಕೊಳ್ಳಬೇಕಾದ ಬಹುಮುಖ್ಯ ವಿಷಯವೊಂದಿದೆ. ಅದೇನೆಂದರೆ, ಚುನಾವಣೆ ದಿನಾಂಕ ಘೋಷಣೆಯಾದ ಬಳಿಕ ಯಾವುದಕ್ಕೆಲ್ಲಾ ನಿರ್ಬಂಧ ಹೇರಲಾಗುತ್ತದೆ ಎಂಬುದು

ಮಾದರಿ ನೀತಿ ಸಂಹಿತೆ ಎಂದರೇನು?

ಮಾದರಿ ನೀತಿ ಸಂಹಿತೆಯು ರಾಜಕೀಯ ಪಕ್ಷಗಳು ಮತ್ತು ಅಭ್ಯರ್ಥಿಗಳು ತಮ್ಮ ಪ್ರಚಾರದಲ್ಲಿ ಸಭ್ಯತೆಯನ್ನು ಕಾಪಾಡಿಕೊಳ್ಳಲು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮಾರ್ಗಸೂಚಿಗಳ ಗುಂಪನ್ನು ಉಲ್ಲೇಖಿಸುತ್ತದೆ. ಚುನಾವಣಾ ಆಯೋಗವು ಮಾದರಿ ನೀತಿ ಸಂಹಿತೆಯನ್ನು ಉಲ್ಲಂಘಿಸಿದ ಪಕ್ಷ ಅಥವಾ ಅಭ್ಯರ್ಥಿಯನ್ನು ಕಂಡುಹಿಡಿದರೆ, ನೈತಿಕ ಮಾನದಂಡಗಳು ಮತ್ತು ಸೂಕ್ತ ನಡವಳಿಕೆಯನ್ನು ಕಾಪಾಡಿಕೊಳ್ಳಲು ಸಂಬಂಧಿಸಿದ ಪಕ್ಷ ಅಥವಾ ಅಭ್ಯರ್ಥಿಯ ವಿರುದ್ಧ ಎಫ್‌ಐಆರ್‌ಗೆ ಆದೇಶ ನೀಡುವ ಎಚ್ಚರಿಕೆಯನ್ನು ನೀಡುವ ಮೂಲಕ ಕ್ರಮಗಳನ್ನು ತೆಗೆದುಕೊಳ್ಳಬಹುದು. ಚುನಾವಣಾ ಆಯೋಗದ ಪ್ರಕಾರ, "ಕೇಂದ್ರ ಮತ್ತು ರಾಜ್ಯಗಳಲ್ಲಿ ಅಧಿಕಾರದಲ್ಲಿರುವ ಪಕ್ಷವು ತನ್ನ ಅಧಿಕೃತ ಸ್ಥಾನವನ್ನು ಪ್ರಚಾರಕ್ಕಾಗಿ ಬಳಸದಂತೆ ನೋಡಿಕೊಳ್ಳಬೇಕು ಎಂದು MCC ಹೇಳುತ್ತದೆ"

1)ಚುನಾವಣೆ ಘೋಷಣೆಯಾದ ನಂತರ, ಸಚಿವರು ಮತ್ತು ಇತರ ಅಧಿಕಾರಿಗಳು ಯಾವುದೇ ಹಣಕಾಸಿನ ಅನುದಾನವನ್ನು ಘೋಷಿಸುವುದನ್ನು ಅಥವಾ ಅದರ ಭರವಸೆಗಳನ್ನು ನೀಡುವುದನ್ನು ನಿಷೇಧಿಸಲಾಗಿದೆ ಎಂದು ಚುನಾವಣಾ ಸಮಿತಿಯ ಮಾರ್ಗಸೂಚಿಗಳು ಹೇಳುತ್ತವೆ.

2. ಲೋಕಸಭೆ ಚುನಾವಣೆ ದಿನಾಂಕ ಘೋಷಣೆಯಾದ ಬಳಿಕ, ನಾಗರಿಕರನ್ನು ಹೊರತುಪಡಿಸಿ, ಸಚಿವರು ಅಥವಾ ಇತರೆ ಅಧಿಕಾರಿಗಳು ಯಾವುದೇ ರೀತಿಯ ಯೋಜನೆಗಳು ಅಥವಾ ಯೋಜನೆಗಳಿಗೆ ಶಂಕುಸ್ಥಾಪನೆ ಮಾಡುವುದು ಅಥವಾ ಪ್ರಾರಂಭಿಸುವುದನ್ನು ನಿರ್ಬಂಧಿಸಲಾಗಿದೆ.


3. ಅಧಿಕಾರದಲ್ಲಿರುವ ಪಕ್ಷದ ಪರವಾಗಿ ಮತದಾರರ ಮೇಲೆ ಪ್ರಭಾವ ಬೀರುವ ಯಾವುದೇ ಯೋಜನೆಯನ್ನು ಘೋಷಿಸುವಂತಿಲ್ಲ. ಪ್ರಚಾರದ ಉದ್ದೇಶಗಳಿಗಾಗಿ ಮಂತ್ರಿಗಳು ಅಧಿಕೃತ ಯಂತ್ರೋಪಕರಣಗಳನ್ನು ಬಳಸುವಂತಿಲ್ಲ.

4.ಮಾದರಿ ನೀತಿ ಸಂಹಿತೆಯ ಜಾರಿಯ ನಂತರ, ಅಧಿಕೃತ ಭೇಟಿಗಳನ್ನು ಯಾವುದೇ ಚುನಾವಣಾ ಚಟುವಟಿಕೆಗಳೊಂದಿಗೆ ಸಂಯೋಜಿಸಲಾಗುವುದಿಲ್ಲ. ಇದಲ್ಲದೆ, ಚುನಾವಣಾ ಉದ್ದೇಶಗಳಿಗಾಗಿ ಅಧಿಕೃತ ಯಂತ್ರೋಪಕರಣಗಳು ಅಥವಾ ಸಿಬ್ಬಂದಿಯನ್ನು ಬಳಸಿಕೊಳ್ಳುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ.

5 ಚುನಾವಣೆ ಘೋಷಣೆಯಾದ ನಂತರ ಸಚಿವರು ಮತ್ತು ಇತರ ಅಧಿಕಾರಿಗಳು ವಿವೇಚನಾ ನಿಧಿಯಿಂದ ಅನುದಾನ ಅಥವಾ ಪಾವತಿಗಳನ್ನು ಮಂಜೂರು ಮಾಡುವಂತಿಲ್ಲ.

6 ಚುನಾವಣಾ ಪ್ರಚಾರಕ್ಕಾಗಿ ಅಧಿಕೃತ ಯಂತ್ರೋಪಕರಣಗಳು ಅಥವಾ ಸಿಬ್ಬಂದಿಯನ್ನು ಬಳಸುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ ಎಂದು ಇಸಿಐ(ECI) ಮಾರ್ಗಸೂಚಿಗಳು ಹೇಳುತ್ತವೆ.

7)ಸರ್ಕಾರಿ ವಸತಿಗಳನ್ನು ಚುನಾವಣಾ ಪ್ರಚಾರ ಕಚೇರಿಗಳಾಗಿ ಬಳಸಿಕೊಳ್ಳುವಂತಿಲ್ಲ. ಯಾವುದೇ ಪಕ್ಷದಿಂದ ಚುನಾವಣಾ ಪ್ರಚಾರಕ್ಕಾಗಿ ಸಾರ್ವಜನಿಕ ಸಭೆಗಳನ್ನು ನಡೆಸುವುದನ್ನು ನಿಷೇಧಿಸಲಾಗಿದೆ ಎಂದು ಚುನಾವಣಾ ಸಂಸ್ಥೆ ಹೇಳುತ್ತದೆ.

8.ಭಾರತೀಯ ಚುನಾವಣಾ ಆಯೋಗ (ಇಸಿಐ) ಚುನಾವಣಾ ಅವಧಿಯಲ್ಲಿ ಪತ್ರಿಕೆಗಳು ಮತ್ತು ಇತರ ಮಾಧ್ಯಮಗಳಲ್ಲಿ ಸಾರ್ವಜನಿಕ ಖಜಾನೆಯ ವೆಚ್ಚದಲ್ಲಿ ಜಾಹೀರಾತುಗಳನ್ನು ನೀಡುವುದನ್ನು ನಿಷೇಧಿಸುತ್ತದೆ.

9. ರಾಜಕೀಯ ಸುದ್ದಿಗಳ ಪಕ್ಷಪಾತದ ಪ್ರಸಾರಕ್ಕಾಗಿ, ಅಧಿಕೃತ ಸಮೂಹ ಮಾಧ್ಯಮಗಳ ದುರುಪಯೋಗ ಮತ್ತು ಆಡಳಿತ ಪಕ್ಷದ ಪರವಾಗಿ ಸಾಧನೆಗಳ ಬಗ್ಗೆ ಪ್ರಚಾರವನ್ನು ಕಟ್ಟುನಿಟ್ಟಾಗಿ ತಪ್ಪಿಸಬೇಕು ಎಂದು ಚುನಾವಣಾ ಸಮಿತಿಯ ಮಾರ್ಗಸೂಚಿಗಳು ಹೇಳುತ್ತವೆ.



Leave a Comment: