Posted by vidyamaana on 2023-09-23 20:22:34 | Last Updated by Vidyamaana on 2023-09-23 20:22:34
ಪುತ್ತೂರು: ಮಧ್ಯಾಹ್ನ ಕೆಯ್ಯೂರಿನಲ್ಲಿ ನಡೆದ ಕಾರು ಅಪಘಾತದಲ್ಲಿ ಕೆಯ್ಯೂರು ಕರ್ನಾಟಕ ಪಬ್ಲಿಕ್ ಸ್ಕೂಲ್ ನ ಯುಕೆಜಿ ವಿದ್ಯಾರ್ಥಿ,ನುಸ್ರತುಲ್ ಇಸ್ಲಾಂ ಮದ್ರಸದ 1ನೇ ತರಗತಿ ವಿದ್ಯಾರ್ಥಿ ಮೃತಪಟ್ಟಿರುವುದಾಗಿ ವರದಿಯಾಗಿದೆ.
ಮೃತನನ್ನು 5 ವರ್ಷ ಪ್ರಾಯದ ಮುಹಮ್ಮದ್ ಆದಿಲ್ ಎಂದು ಗುರುತಿಸಲಾಗಿದೆ. ಕೆಯ್ಯೂರು ನಿವಾಸಿ ಹಾರೀಸ್ ದಾರಿಮಿ ಅವರ ಪುತ್ರ.
ಪುತ್ತೂರು ಕಡೆ ಬರುತ್ತಿದ್ದ ಈಕೋ ಕಾರು ಬಾಲಕನಿಗೆ ಢಿಕ್ಕಿ ಹೊಡೆದಿದ್ದು, ಬಾಲಕ ಗಂಭೀರ ಗಾಯಗೊಂಡಿದ್ದ. ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಫಲಕಾರಿಯಾಗದೇ ಸಂಜೆ ವೇಳೆ ಮೃತಪಟ್ಟ ಬಗ್ಗೆ ವರದಿಯಾಗಿದೆ.
Posted by Vidyamaana on 2023-05-27 15:51:17 |
ಬೆಂಗಳೂರು : ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಪತ್ನಿಯನ್ನು ಗ್ರೂಪ್ ಸಿ ಹುದ್ದೆಗೆ ಮರು ನೇಮಕ ಮಾಡಿಕೊಳ್ಳುವುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಘೋಷಿಸಿದ್ದಾರೆ.ಈ ಕುರಿತಂತೆ ಇಂದು ಟ್ವಿಟ್ ಮಾಡಿರುವಂತ ಅವರು, ಹೊಸ ಸರ್ಕಾರ ಬಂದ ನಂತರ ಹಿಂದಿನ ಸರ್ಕಾರ ನೇಮಕ ಮಾಡಿಕೊಂಡಿದ್ದ ತಾತ್ಕಾಲಿಕ ನೌಕರರನ್ನು ಸರ್ಕಾರಿ ಸೇವೆಯಿಂದ ವಜಾ ಮಾಡುವುದು ಒಂದು ಸಹಜ ಪ್ರಕ್ರಿಯೆ ಎಂದಿದ್ದಾರೆ.ಪ್ರವೀಣ್ ನೆಟ್ಟಾರು ಅವರ ಪತ್ನಿ ಮಾತ್ರವಲ್ಲ ಸುಮಾರು 150ಕ್ಕೂ ಹೆಚ್ಚು ಗುತ್ತಿಗೆ ನೌಕರರನ್ನು ಈಗಾಗಲೇ ಸೇವೆಯಿಂದ ವಜಾ ಮಾಡಲಾಗಿದೆ. ಇದರಲ್ಲಿ ಸರ್ಕಾರದ ಯಾವುದೇ ಹಸ್ತಕ್ಷೇಪವಿಲ್ಲ. ಇದನ್ನು ವಿಶೇಷ ಪ್ರಕರಣವೆಂದು ಪರಿಗಣಿಸಿ ಮಾನವೀಯತೆ ಆಧಾರದಲ್ಲಿ ನೂತನ ಕುಮಾರಿ ಅವರ ಮರು ನೇಮಕ ಮಾಡಲಾಗುವುದು ಎಂಬುದಾಗಿ ತಿಳಿಸಿದ್ದಾರೆ.
Posted by Vidyamaana on 2024-05-01 20:56:24 |
ಹುಬ್ಬಳ್ಳಿ: ಲೋಕಸಭಾ ಚುನಾವಣೆ ಕಾರಣಕ್ಕಾಗಿ ನಾವು ಜೆಡಿಎಸ್ ಜೊತೆಗೆ ಮೈತ್ರಿ ಮಾಡಿಕೊಂಡಿದ್ದೇವೆ. ನಾವು ಮಹಿಳೆಯರ ಜೊತೆಗೆ ದೌರ್ಜನ್ಯ ಎಸಗುವವರೊಂದಿಗೆ ಅಲ್ಲ. ಪ್ರಜ್ವಲ್ ರೇವಣ್ಣ ಅವರಿಗೆ ಕಠೋರ ಶಿಕ್ಷೆಯಾಗಬೇಕು. ಅದಕ್ಕೆ ನಾವು ಬೆಂಬಲಿಸುತ್ತೇವೆ ಎಂಬುದಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.ನಗರದಲ್ಲಿ ನಡೆದಂತ ಬಿಜೆಪಿ ಸಮಾವೇಶದಲ್ಲಿ ಭಾಗಿಯಾಗಿ ಮಾತನಾಡಿದಂತ ಅವರು, ಲೋಕಸಭಾ ಚುನಾವಣೆಗಾಗಿ ಜೆಡಿಎಸ್ ಜೊತೆಗೆ ಮೈತ್ರಿ ಮಾಡಿಕೊಳ್ಳಲಾಯಿತು. ಮೈತ್ರಿ ಮಾಡಿಕೊಂಡ ನಂತ್ರ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಕೇಸ್ ಹೊರ ಬಂದಿದೆ ಎಂದರು.
Posted by Vidyamaana on 2024-01-18 20:24:06 |
ಬೆಳ್ತಂಗಡಿ: ಅಳದಂಗಡಿ ಸಮೀಪದ ಕುಬಲಾಜೆ ಮನೆ ನಿವಾಸಿ ಉದ್ಯಮಿ ಸುನಿಲ್ ಅವರ ಪತ್ನಿ ಕಾವ್ಯ(32) ಎಂಬವರು ಮನೆಯಲ್ಲಿಯೇ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾದ ಘಟನೆ ಗುರುವಾರ ಮಧ್ಯಾಹ್ನ ನಡೆದಿದೆ.
ಮೃತರಿಗೆ ಪತಿ, ಓರ್ವ ಪುತ್ರ, ಪುತ್ರಿ ಇದ್ದಾರೆ. ಆತ್ಮಹತ್ಯೆಗೆ ಕಾರಣವೇನು ಎಂದು ತಿಳಿದು ಬಂದಿಲ್ಲ. ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದು, ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
Posted by Vidyamaana on 2024-04-19 12:54:03 |
ಚಿಕ್ಕಬಳ್ಳಾಪುರ, (ಏಪ್ರಿಲ್ 19): ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಇಂದು(ಏಪ್ರಿಲ್ 18) ಚಿಕ್ಕಬಳ್ಳಾಪುರ ಲೋಕಸಭಾ (Chikkaballapur Loksabha Election) ಕ್ಷೇತ್ರದ ಅಖಾಡಕ್ಕಿಳಿದಿದ್ದು, ತಮ್ಮ ಪಕ್ಷದ ಅಭ್ಯರ್ಥಿ ರಕ್ಷಾ ರಾಮಯ್ಯ (Raksha Ramaiah) ಪರ ಭರ್ಜರಿ ಮತಬೇಟೆ ನಡೆಸಿದರು. ಚಿಕ್ಕಬಳ್ಳಾಪುರ(Chikkaballapur) ವಿಧಾನಸಭಾ ವ್ಯಾಪ್ತಿಯಿಂದಲೇ ಪ್ರಚಾರ ಆರಂಭಿಸಿದ ಸಿದ್ದರಾಮಯ್ಯ, ಭರ್ಜರಿ ರೋಡ್ ಶೋ ನಡೆಸಿದರು. ಈ ವೇಳೆ ಎನ್ಡಿಎ ಅಭ್ಯರ್ಥಿ ಡಾ ಕೆ ಸುಧಾಕರ್ ವಿರುದ್ಧ ವಾಗ್ದಾಳಿ ನಡೆಸಿದರು. ಬಳಿಕ ಚಿಕ್ಕಬಳ್ಳಾಪುರದ ಬಾಗೆಪಲ್ಲಿಯಲ್ಲಿ ಆಯೋಜಿಸಲಾಗಿದ್ದ ಕಾರ್ಯಕರ್ತರ ಸಮಾವೇಶದಲ್ಲಿ ಭಾಗವಹಿಸಿದರು
Posted by Vidyamaana on 2023-11-12 07:38:42 |
ಪುತ್ತೂರು : ಶಾಸಕ ಅಶೋಕ್ ಕುಮಾರ್ ಅವರು ನವಂಬರ್ 12 ರಂದು
ಬೆಳಿಗ್ಗೆ 10 ಗಂಟೆಗೆ ಕೋಡಿಂಬಾಡಿಮಹಿಷಮರ್ಧಿನಿದೇವಸ್ಥಾನಕ್ಕೆ ಭೇಟಿ,ಪೂಜಾ ಕಾರ್ಯಕ್ರಮ
12._ಗಂಟೆಗೆ ಕೊಡಿಪ್ಪಾಡಿ ಅಂಗನವಾಡಿ ಕೇಂದ್ರದಲ್ಲಿ ಬಾಲಮೇಳ
1 ಗಂಟೆಗೆ ಮುಳಿಯ ಹಾಲ್ ನಲ್ಲಿ ಗೂಡುದೀಪ ಸ್ಪರ್ದೆಯಲ್ಲಿ ಭಾಗವಹಿಸುವುದು
ಸಂಜೆ 3 ಗಂಟೆಗೆ ಕೊಂಬೆಟ್ಟು ಮೈದಾನದಲ್ಲಿರೈ ಚಾರಿಟೇಬಲ್ ಟ್ರಸ್ಟ್ ಸಭೆ ಯಲ್ಲಿ ಭಾಗವಹಿಸಲಿದ್ದಾರೆ
Posted by Vidyamaana on 2023-10-24 20:27:34 |
ಬೀಜಿಂಗ್: ರಕ್ಷಣಾ ಸಚಿವ ಜನರಲ್ ಲಿ ಶಾಂಗ್ ಫು ಅವರನ್ನು ಚೀನಾ ಸರ್ಕಾರ ತೆಗೆದುಹಾಕಿದೆ. ಇದಕ್ಕೆ ಯಾವುದೇ ವಿವರಣೆಯನ್ನು ನೀಡಲಾಗಿಲ್ಲ. ಚೀನಾ ರಾಜ್ಯ ಪ್ರಸಾರಕ ಸಿಸಿಟಿವಿ ವರದಿ ಮಾಡಿದ್ದು, ಎರಡು ತಿಂಗಳಿಂದ ನಾಪತ್ತೆಯಾಗಿದ್ದ ಸಚಿವರನ್ನು ಸರಕಾರ ವಜಾ ಮಾಡಿದೆ ಎಂದಿದೆ.
ಯಾವುದೇ ವಿವರಣೆಯನ್ನು ನೀಡದೆ ಜುಲೈನಲ್ಲಿ ಅಧಿಕಾರದಿಂದ ತೆಗೆದುಹಾಕಲ್ಪಟ್ಟ ಮಾಜಿ ವಿದೇಶಾಂಗ ಸಚಿವ ಕಿನ್ ಗ್ಯಾಂಗ್ ಬಳಿಕ ಅದೇ ರೀತಿಯ ಕ್ರಮ ಎದುರಿಸಿದ ಎರಡನೇ ವ್ಯಕ್ತಿ ಲಿ ಅವರಾಗಿದ್ದಾರೆ.
ಮಾರ್ಚ್ನಲ್ಲಿ ಕ್ಯಾಬಿನೆಟ್ ಪುನರ್ರಚನೆಯ ಸಮಯದಲ್ಲಿ ರಕ್ಷಣಾ ಸಚಿವ ಆದ ಲಿ ಆಗಸ್ಟ್ 29 ರಂದು ಭಾಷಣವೊಂದನ್ನು ಮಾಡಿದ ನಂತರ ಜನರ ಜೊತೆ ಕಾಣಿಸಿಕೊಂಡಿರಲಿಲ್ಲ. ಆವರು ಕಾಣೆಯಾಗಿರುವ ಬಗ್ಗೆ ಊಹಾಪೋಹಗಳು ಹರಿದಾಡುತ್ತಿದ್ದು, ಅವರ ಎಲ್ಲಿದ್ದಾರೆ ಏನ್ ಮಾಡ್ತಿದಾರೆ ಅಂತ ತಿಳುದು ಬಂದಿರಲಿಲ್ಲ.ಅಧ್ಯಕ್ಷ ಮತ್ತು ಆಡಳಿತಾರೂಢ ಕಮ್ಯುನಿಸ್ಟ್ ಪಕ್ಷದ ನಾಯಕ ಕ್ಸಿ ಜಿನ್ಪಿಂಗ್ ಅವರ ಅಧಿಕಾರ ಮುಂದುವರಿಯುವ ಬಗ್ಗೆ ಪ್ರಶ್ನೆಗಳನ್ನು ಲಿ ಎತ್ತಿದ್ದರು. ಅಪಾರ ದೇಶ ನಿಷ್ಠೆ ತೋರುತ್ತಿದ್ದ ಆವರು ಸಾರ್ವಜನಿಕ ಮತ್ತು ಖಾಸಗಿ ಭ್ರಷ್ಟಾಚಾರದ ವಿರುದ್ಧ ಪಟ್ಟುಬಿಡದೆ ದನಿ ಎತ್ತುತ್ತಿದ್ದರು.
ಇದು ಜಿನ್ಪಿಂಗ್ ಅವರಿಗೆ ಮುಜುಗರ ತರುತ್ತಿತ್ತು. ರಾಜಕೀಯ ಪ್ರತಿಸ್ಪರ್ಧಿಗಳನ್ನು ಮಟ್ಟ ಹಾಕಬೇಕು, ಹದಗೆಡುತ್ತಿರುವ ಆರ್ಥಿಕತೆಯ ನಡುವೆ ಅಮೆರಿಕಾದೊಂದಿಗೆ ಹೆಚ್ಚುತ್ತಿರುವ ಉದ್ವಿಗ್ನತೆಯನ್ನು ಕಡಿಮೆ ಮಾಡುವ ಉದ್ದೇಶದಿಂದ ತಮ್ಮ ಮಾತು ಕೇಳುವವರನ್ನು ಆ ಸ್ಥಾನಕ್ಕೆ ತರಬೇಕೆಂಬುದು ಅಧ್ಯಕ್ಷ ಜಿನ್ಪಿಂಗ್ ಯೋಚಿಸುತ್ತಿದ್ದರು ಎನ್ನಲಾಗಿದೆ.