ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ

ಸುದ್ದಿಗಳು News

Posted by vidyamaana on 2024-07-03 08:24:56 |

Share: | | | | |


ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ

ಬೆಂಗಳೂರು : ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸೋ ಕೆಲಸ ಮಾಡಲಾಗಿದೆ. ನಾಲ್ವರು ಕೆಎಎಸ್ ಅಧಿಕಾರಿ ಹಾಗೂ 25 ಮಂದಿ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶಿಸಿದೆ.

ಕರ್ನಾಟಕ ಆಡಳಿತ ಸೇವೆಗೆ ಸೇರಿದ ಈ ಕೆಳಕಂಡ ಅಧಿಕಾರಿಗಳನ್ನು ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಠಿಯಿಂದ ಈ ಕೂಡಲೇ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅವರುಗಳ ಹೆಸರಿನ ಮುಂದೆ ನಮೂದಿಸಿರುವ ಹುದ್ದೆಗಳಿಗೆ ವರ್ಗಾಯಿಸಿ / ಸ್ಥಳನಿಯುಕ್ತಿಗೊಳಿಸಿ ಆದೇಶಿಸಿದೆ.

ವರ್ಗಾವಣೆಗೊಂಡ ಕೆಎಎಸ್‌ ಅಧಿಕಾರಿಗಳು

ಡಾ. ಜಗದೀಶ್‌ ಕೆ. ನಾಯಕ್‌

ರಘುನಂದನ್‌ ಎ.ಎನ್‌

ಪ್ರಸನ್ನ ಕುಮಾರ್‌ ವಿ.ಕೆ

ಹುಲ್ಲುಮನಿ ತಿಮ್ಮಣ್ಣ

ವರ್ಗಾವಣೆಗೊಂಡ ಐಪಿಎಸ್‌ ಅಧಿಕಾರಿಗಳು

ಬಿ. ರಮೇಶ -ಡಿಐಜಿಪಿ, ಪೂರ್ವ ವಲಯ, ದಾವಣಗೆರೆ

ಎನ್. ವಿಷ್ಣು ವರ್ಧನ್ -ಎಸ್.ಪಿ. ಮೈಸೂರು ಜಿಲ್ಲೆ

ಸೀಮಾ ಲಾಟ್ಕರ್ -ಪೊಲೀಸ್ ಆಯುಕ್ತರು, ಮೈಸೂರು ನಗರ

ರೇಣುಕಾ ಸುಕುಮಾರ -ಎಐಜಿಪಿ ಬೆಂಗಳೂರು ಡಿಜಿ ಕಚೇರಿ

ಸಿ.ಕೆ. ಬಾಬಾ -ಎಸ್.ಪಿ. ಬೆಂಗಳೂರು ಗ್ರಾಮಾಂತರ

ಸುಮನ್ ಡಿ. ಪೆನ್ನೇಕರ್ -ಎಸ್‌ ಪಿ, ಬಿಎಂಟಿಎಫ್

ಸಿ.ಬಿ. ರಿಷ್ಯಂತ್ -ಎಸ್.ಪಿ

ಚನ್ನಬಸವಣ್ಣ - ಎಐಜಿಪಿ, ಆಡಳಿತ, ಡಿಜಿ ಕಚೇರಿ

ಲಾಬೂ ರಾಮ್ -ಐಜಿಪಿ ಕೇಂದ್ರ ವಲಯ

ರವಿಕಾಂತೇಗೌಡ -ಐಜಿಪಿ ಕೇಂದ್ರ ಕಚೇರಿ- ಒಂದು ಬೆಂಗಳೂರು ಡಿಜಿ ಕಚೇರಿ

ಕೆ. ತ್ಯಾಗರಾಜನ್ -ಐಜಿಪಿ, ಐ.ಎಸ್.ಡಿ.

ಎನ್. ಶಶಿಕುಮಾರ್ -ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರ್

ಪ್ರದೀಪ್‌ ಗುಂಡಿ - ಎಸ್‌ ಪಿ. ಬೀದರ್‌ ಜಿಲ್ಲೆ

ಯತೀಶ್‌ ಎನ್. - ಎಸ್‌ ಪಿ ದಕ್ಷಿಣ ಕನ್ನಡ ಜಿಲ್ಲೆ

ಮಲ್ಲಿಕಾರ್ಜುನ ಬಾಲದಂಡ ಎಸ್‌ ಪಿ ಮಂಡ್ಯ ಜಿಲ್ಲೆ

ಡಾ.ಟಿ. ಕವಿತಾ ಎಸ್.ಪಿ. ಚಾಮರಾಜನಗರ ಜಿಲ್ಲೆ

ಬಿ. ನಿಖಿಲ್‌ ಎಸ್‌ ಪಿ ಕೋಲಾರ ಜಿಲ್ಲೆ

 Share: | | | | |


ಅಳಿಯನಿಂದ ಕೊಲೆಯಾದ ಪುತ್ರ, ಅಗಲಿಕೆ ಸಹಿಸದೆ ತಾಯಿ ಆತ್ಮಹತ್ಯೆ

Posted by Vidyamaana on 2024-07-03 07:49:39 |

Share: | | | | |


ಅಳಿಯನಿಂದ ಕೊಲೆಯಾದ ಪುತ್ರ, ಅಗಲಿಕೆ ಸಹಿಸದೆ ತಾಯಿ ಆತ್ಮಹತ್ಯೆ

ಮೈಸೂರು: ಕೊಲೆಯಾಗಿ (Murder Case) ಹೋದ ಪುತ್ರನ (Son) ಅಗಲಿಕೆಯ ನೋವು ಸಹಿಸದೆ ತಾಯಿಯೊಬ್ಬರು (Mother) ಆತ್ಮಹತ್ಯೆ (Self Harming) ಮಾಡಿಕೊಂಡ ಘಟನೆ ಮೈಸೂರಿನ (Mysore News) ಕೂರ್ಗಳ್ಳಿಯಲ್ಲಿ ನಡೆದಿದೆ.ಭಾಗ್ಯಮ್ಮ (46) ಪುತ್ರನ ಸಾವಿನ ನೋವು ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡವರು.ನಿನ್ನೆ ಅವರು ತಮ್ಮ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ. ಇವರ ಅಳಿಯ, ಅಂದರೆ ಮಗಳ ಗಂಡನಿಂದಲೇ ಮಗ ಅಭಿಷೇಕ್‌ ಕೊಲೆಯಾಗಿದ್ದ. ಈ ಕೊಲೆ ಮೈಸೂರಿನ ಕುವೆಂಪುನಗರದಲ್ಲಿ ಜೂನ್‌ 9ರಂದು ನಡೆದಿತ್ತು.

ಉಡುಪಿ: ವಾರದ ಬಳಿಕ ಪತ್ತೆಯಾಯ್ತು ಅರಶಿನಗುಂಡಿ ಜಲಪಾತಕ್ಕೆ ಬಿದ್ದ ಶರತ್ ಮೃತದೇಹ

Posted by Vidyamaana on 2023-07-30 07:59:14 |

Share: | | | | |


ಉಡುಪಿ: ವಾರದ ಬಳಿಕ ಪತ್ತೆಯಾಯ್ತು ಅರಶಿನಗುಂಡಿ ಜಲಪಾತಕ್ಕೆ ಬಿದ್ದ ಶರತ್ ಮೃತದೇಹ

ಕುಂದಾಪುರ: ಕೊಲ್ಲೂರಿನ ಅರಶಿನ ಗುಂಡಿ ಜಲಪಾತ ವೀಕ್ಷಣೆ ಮಾಡಲು ಹೋಗಿ ಜಾರಿ ಬಿದ್ದು ನೀರುಪಾಲಾಗಿದ್ದ ಭದ್ರಾವತಿ ಮೂಲದ ಯುವಕ ಶರತ್ ಮೃತದೇಹ ವಾರದ ಬಳಿಕ ಪತ್ತೆಯಾಗಿದೆ.

ಜುಲೈ 23ರಂದು ಕೊಲ್ಲೂರು ಸಮೀಪದ ಅರಣ್ಯ ಪ್ರದೇಶದಲ್ಲಿರುವ ಅರಶಿನ ಗುಂಡಿ ಜಲಪಾತ ನೋಡಲು 23 ವರ್ಷದ ಶರತ್ ಕುಮಾರ್ ಸ್ನೇಹಿತನೊಂದಿಗೆ ಹೋಗಿದ್ದರು. ಜಲಪಾತದ ಪಕ್ಕದ ಬಂಡೆ ಕಲ್ಲಿನ ಮೇಲೆ ನಿಂತಿದ್ದು ಅವರು ಜಾರಿ ನೀರಿಗೆ ಬಿದ್ದಿದ್ದರು.


ಶರತ್ ಹುಡುಕಾಟಕ್ಕೆ ಹಲವು ತಂಡಗಳು ವಾರಗಳ ಕಾಲ ಶ್ರಮ ವಹಿಸಿದ್ದವು. ಆದರೆ ತೀವ್ರ ಮಳೆ ಮತ್ತು ನೀರಿನ ರಭಸದ ಕಾರಣದಿಂದ ಕಾರ್ಯಾಚರಣೆಗೆ ಅಡ್ಡಿಯಾಗುತ್ತಿತ್ತು. ಇದೀಗ ವಾರದ ಬಳಿಕ ಜುಲೈ 30ರಂದು ಬಿದ್ದ ಜಾಗದಿಂದ ಹತ್ತು ಮೀಟರ್ ದೂರದಲ್ಲಿ ಶವ ಪತ್ತೆಯಾಗಿದೆ ಎಂದು ವರದಿಯಾಗಿದೆ.


ಕೊಲ್ಲೂರು ಪೊಲೀಸರು, ರಾಜ್ಯ ವಿಪತ್ತು ನಿರ್ವಹಣ ತಂಡ (ಎಸ್‌ಡಿಆರ್‌ಎಫ್‌), ಅರಣ್ಯ ಇಲಾಖೆ ಸಿಬಂದಿ, ಅಗ್ನಿ ಶಾಮಕ ದಳದ ಸಿಬಂದಿ, ಸ್ಥಳೀಯರು, ಶರತ್‌ ಅವರ ಸ್ನೇಹಿತರು, ಸಂಬಂಧಿಕರು ಪ್ರತೀ ದಿನ ಹಗಲಿಡೀ ನಿರಂತರ ಹುಡುಕಾಟ ನಡೆಸಿದ್ದರು. ಈಶ್ವರ್ ಮಲ್ಪೆ, ಜ್ಯೋತಿರಾಜ್ ತಂಡವೂ ಹುಡುಕಾಟ ನಡೆಸಿತ್ತುಶರತ್‌ ಪತ್ತೆಗಾಗಿ ಜಲಪಾತ ಹರಿದು ಬರುವ ಬೇರೆ ಬೇರೆ ಕಡೆಗಳಲ್ಲಿ ಸಾಗರ ಬಾರಕೂರು ಅವರ ನೇತೃತ್ವದಲ್ಲಿ ಡ್ರೋನ್‌ ಕೆಮರಾದ ಮೂಲಕ ಹುಡುಕುವ ಪ್ರಯತ್ನ ಮಾಡಲಾಗಿತ್ತು

ದೆಹಲಿಯಲ್ಲಿ ತುಲಾಭಾರದ ವೇಳೆ ಕಳಚಿ ಬಿದ್ದ ತಕ್ಕಡಿ ಹಗ್ಗ; ಚಿಕ್ಕ ಗಾಯದೊಂದಿಗೆ ಪಾರಾದ ಉಡುಪಿ ಪೇಜಾವರ ಶ್ರೀ

Posted by Vidyamaana on 2023-11-03 19:24:54 |

Share: | | | | |


ದೆಹಲಿಯಲ್ಲಿ ತುಲಾಭಾರದ ವೇಳೆ ಕಳಚಿ ಬಿದ್ದ ತಕ್ಕಡಿ ಹಗ್ಗ; ಚಿಕ್ಕ ಗಾಯದೊಂದಿಗೆ ಪಾರಾದ ಉಡುಪಿ ಪೇಜಾವರ ಶ್ರೀ

ಉಡುಪಿ, ನವೆಂಬರ್ 3: ಉಡುಪಿ ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಗಳಿಗೆ 60 ತುಂಬಿದ ಹಿನ್ನೆಲೆಯಲ್ಲಿ ನಡೆದ ಪ್ರಸನ್ನಾಭಿನಂದನ ಕಾರ್ಯಕ್ರಮದ ವೇಳೆ ಅಚಾತುರ್ಯ ಘಟನೆಯೊಂದು ನಡೆದಿದೆ. ಸುದೈವ ಹೆಚ್ಚಿನ ಅನಾಹುತವೇನೂ ಆಗಿಲ್ಲ. ಪ್ರಸ್ತುತ ಉಡುಪಿ ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ (Shri Vishwaprasanna Tirtha Swamiji of Shri Pejawar Math) ಅವರು ದೆಹಲಿ ಪ್ರವಾಸದಲ್ಲಿದ್ದಾರೆ. ದೆಹಲಿಯ ಪೇಜಾವರ ಮಠಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಮಹತ್ವದ ಧಾರ್ಮಿಕ ಆಚರಣೆಯಾದ ಚಾತುರ್ಮಾಸ್ಯ ಕಾರ್ಯಕ್ರಮ ಪೂರ್ಣಗೊಳಿಸಿ ಬಂದ ಹಿನ್ನೆಲೆಯಲ್ಲಿ ಪೇಜಾವರ ಶ್ರೀಗಳಿಗೆ ಭಕ್ತರು ತುಲಾಭಾರ ಸೇವೆ (thulabhara seva) ನಡೆಸುತ್ತಿದ್ದಾಗ ಈ ಅಚಾತುರ್ಯ ನಡೆದಿದೆ.


ಉಡುಪಿ ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಗಳಿಗೆ ತುಲಾಭಾರ ಮಾಡಲಾಗುತ್ತಿತ್ತು. ಆ ವೇಳೆ ತಕ್ಕಡಿಯ ಹಗ್ಗ ಕಳಚಿ ಬಿದ್ದಿದೆ. ತಕ್ಕಡಿಯ ಸರಳು ಪೇಜಾವರ ಶ್ರೀಗಳ ತಲೆಯ ಮೇಲೆ ಕಳಚಿ ಬಿದ್ದಿದೆ. ತಲೆಗೆ ಚಿಕ್ಕ ಗಾಯವಾಗಿದ್ದು, ಪೇಜಾವರ ಶ್ರೀಗಳು ಅನಾಹುತದಿಂದ ಪಾರಾಗಿದ್ದಾರೆ. ತರಚಿದ ಗಾಯದೊಂದಿಗೆ ಪೇಜಾವರ ಶ್ರೀಗಳು ಸುರಕ್ಷಿತವಾಗಿದ್ದಾರೆ ಎಂದು ಭಕ್ತರು ತಿಳಿಸಿದ್ದಾರೆ. ತಕ್ಕಡಿ ಕುಸಿದು ಬೀಳುತ್ತಿದ್ದಂತೆ ಭಕ್ತರು ಆತಂಕಗೊಂಡರು. ಆದರೆ ಕೈ ಸನ್ನೆಯ ಮೂಲಕ ತಮಗೆ ಏನೂ ಆಗಿಲ್ಲ ಎಂದು ಪೇಜಾವರ ಶ್ರೀ ನಗುಮುಖ ಸೂಸಿದ್ದಾರೆ.


ನಾನು ಆರಾಮವಾಗಿದ್ದೇನೆ. ಆತಂಕ ಪಡಬೇಡಿ – ಸ್ವಾಮೀಜಿ ಪ್ರತಿಕ್ರಿಯೆ


ಈ ಬಗ್ಗೆ ದೆಹಲಿಯಲ್ಲಿ ಪೇಜಾವರ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಪ್ರತಿಕ್ರಿಯೆ ನೀಡಿದ್ದು, ತುಲಾಭಾರ ಕಾರ್ಯಕ್ರಮದಲ್ಲಿ ತಕ್ಕಡಿ ಹಗ್ಗ ನನ್ನ ತಲೆಯ ಮೇಲೆ ಕಳಚಿ ಬಿತ್ತು. ಅದರಿಂದಾದ ಗಾಯ ಪೂರ್ಣ ಮಾಸಿಹೋಗಿದೆ. ಗಾಯದ ಕುರುಹು ಸಹ ಇಲ್ಲದಂತೆ ವಾಸಿಯಾಗಿದೆ. ದೊಡ್ಡ ಗಾಯ ಏನೂ ಆಗಿಲ್ಲ, ನಾನು ಆರಾಮವಾಗಿದ್ದೇನೆ. ಯಾರು ಗಾಬರಿಯಾಗಬೇಕಾಗಿಲ್ಲ, ಆತಂಕಕ್ಕೆ ಒಳಗಾಗಬೇಕಾಗಿಲ್ಲ ಎಂದು ಹೇಳಿದ್ದಾರೆ

ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆ

Posted by Vidyamaana on 2023-08-06 03:15:23 |

Share: | | | | |


ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆ

ಪುತ್ತೂರು: ಪಕ್ಷದ ಅಭಿವೃದ್ದಿಯಾಗಬೆಕಾದರೆ ಕಾರ್ಯಕರ್ತರು ಮುಖ್ಯ, ಪಕ್ಷದಲ್ಲಿ ಕಾರ್ಯಕರ್ತರ ನೋವು, ನಲಿವುಗಳಿಗೆ ಸ್ಪಂದನೆ ಮಾಡುವ ಮೂಲಕ ಅವರನ್ನು ಗೌರವಿಸುವ ಕೆಲಸ ಮಾಡಬೇಕು ಮತ್ತು ಕಾರ್ಯಕರ್ತರಿಗೆ ಪಕ್ಷದಲ್ಲಿ ಎಂದೆಂದೂ ಸ್ಥಾನಮಾನ ಇದ್ದೇ ಇದೆ ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಹೇಳಿದರು.

ಅವರು ಆ. ೫ ರಂದು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಮಾತನಾಡಿದರು.

ಕಾರ್ಯಕರ್ತರು ಕಳೆದ ಚುನಾವಣೆಯಲ್ಲಿ ಯಾವುದೇ ಪ್ರತಿಫಲಾಕ್ಷೆಯಿಲ್ಲದೆ ಹಗಲಿರುಳು ದುಡಿದ ಪರಿಣಾಮ ಪುತ್ತೂರಿನಲ್ಲಿ ಕಾಂಗ್ರೆಸ್ ಗೆದ್ದಿದೆ, ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ಕೇವಲ ನಾಯಕರಿಂದ ಮಾತ್ರ ಏನೂ ಮಾಡಲು ಸಾಧ್ಯವಿಲ್ಲ. ಪುತ್ತೂರಿನಲ್ಲಿ , ರಾಜ್ಯದಲ್ಲಿ ಕಾಂಗ್ರೆಸ್ ಇಂದು ಅಧಿಕಾರಕ್ಕೆ ಬಂದಿದ್ದರೆ ಅದರ ಹಿಂದೆ ಲಕ್ಷಾಂತರ ಕಾರ್ಯಕರ್ತರ ಬೆವರು ಇದೆ ಅದನ್ನು ನಾವು ಎಂದೂ ಮರೆಯಬಾರದು. ಪುತ್ತೂರು ಕ್ಷೇತ್ರದಲ್ಲಿ ಯಾವುದೇ ಅನುದಾನ ಅಥವಾ ಅಭಿವೃದ್ದಿ ಕೆಲಸಗಳನ್ನು ಮಾಡುವ ಮುನ್ನ ನಾನು ಬೂತ್ ಮತ್ತು ವಲಯ ಅಧ್ಯಕ್ಷರ ಜೊತೆ ಮಾತುಕತೆ ನಡೆಸಿ ಅಥವಾ ಅವರ ಅನುಮತಿಯಿಂದಲೇ ಅನುದಾನವನ್ನು ಇಡುವ ಕೆಲಸವನ್ನು ಮಾಡುತ್ತಿದ್ದೇನೆ. ಪಕ್ಷದ ವಿವಿಧ ಹುದ್ದೆಗಳು ಸೇರಿದಂತೆ ವಿವಿಧ ಸಮಿತಿಗಳಿಗೂ ಪಕ್ಷದ ನಿಷ್ಠಾವಂತ ಕಾರ್ಯಕರ್ತರಿಗೆ ಸ್ಥಾನವನ್ನು ನೀಡಲಾಗುವುದು ಇದರಲ್ಲಿ ಯವುದೇ ಅನುಮಾನ ಬೇಡ. ಪಕ್ಷಕ್ಕಾಗಿ ಯಾರು ಕೆಲಸ ಮಾಡಿದ್ದಾರೆ ಎಂಬುದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ಸಹಿತ ಎಲ್ಲರಿಗೂ ಗೊತ್ತಿದೆ ಅವರ ಮನಸ್ಸಿಗೆ ನೋವಾಗುವ ಕೆಲಸವನ್ನು ಪಕ್ಷ ಎಂದಿಗೂ ಮಾಡಬಾರದು ಎಂದು ಹೇಳಿದರು.

ಕಾರ್ಯಕರ್ತರೇ ಪಕ್ಷದ ಶಕ್ತಿ: ಎಂ ಬಿ ವಿಶ್ವನಾಥ ರೈ

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎಂ ಬಿ ವಿಶ್ವನಾಥ ರೈ ಮಾತನಾಡಿ ಪಕ್ಷದ ಕಾರ್ಯಕರ್ತರೇ ಪಕ್ಷದ ಶಕ್ತಿಯಾಗಿದ್ದಾರೆ. ಪಕ್ಷದ ಅಧಿಕಾರದಲ್ಲಿರಲಿ, ಇಲ್ಲದಿರಲಿ ಕಾರ್ಯಕರ್ತರು ಪಕ್ಷದಲ್ಲೇ ಇದ್ದುಕೊಂಡು ಪಕ್ಷವನ್ನು ಇನ್ನಷ್ಟು ಗಟ್ಟಿಗೊಳಿಸುವ ಕೆಲಸವನ್ನು ಮಾಡುತ್ತಲೇ ಇರುತ್ತಾರೆ ಎಂಬುದಕ್ಕೆ ಈ ಬಾರಿಯ ಪುತ್ತೂರು ಕಾಂಗ್ರೆಸ್ ಗೆಲವು ಸಾಕ್ಷಿಯಾಗಿದೆ. ಕಾರ್ಯಕರ್ತರ ಭಾವನೆಗೆ ಬೆಲೆ ಕೊಡುವ ಮೂಲಕ ಶಾಸಕರು ಅಭಿವೃದ್ದಿ ಕೆಲಸಗಳನ್ನು ಮಾಡುತ್ತಿರುವುದು ಅವರಿಗೆ ನೈತಿಕ ಶಕ್ತಿ ತುಂಬಿದಂತಾಗಿದೆ. ಪ್ರತೀ ಬೂತ್ ವಲಯ ಮಟ್ಟದಲ್ಲಿ ಪಕ್ಷದ ಕಾರ್ಯಕರ್ತರು ಸರಕಾರ ಗ್ಯಾರಂಟಿ ಯೋಜನೆಗಳನ್ನು ಮನೆ ಮನೆಗೆ ತಲುಪಿಸುವ ಕೆಲಸವನ್ನು ಮಾಡುತ್ತಿದ್ದು ಮುಂದಿನ ದಿನಗಳಲ್ಲಿ ಇದು ಪಕ್ಷಕ್ಕೆ ಹೆಚ್ಚಿನ ಬಲವನ್ನು ತಂದುಕೊಡಲಿದೆ ಎಂದು ಹೇಳಿದರು.


ಕೋಳಿಅಂಕಕ್ಕೆ ಪೊಲೀಸರು ಲಂಚ ಕೇಳುತ್ತಾರೆ

ಸಭೆಯಲ್ಲಿ ಮಾತನಾಡಿದ ಅರಿಯಡ್ಕ ವಲಯ ಕಾಂಗ್ರೆಸ್ ಅಧ್ಯಕ್ಷರಾದ ಇಕ್ಬಾಲ್ ಹುಸೇನ್ ಮಾತನಾಡಿ ಕೋಳಿ ಅಂಕ ಮಾಡಬೇಕಾದರೆ ಪೊಲೀಸರು ೩೦ ರಿಂದ ೪೦ ಸಾವಿರ ಲಂಚ ಕೇಳುತ್ತಾರೆ ಇದು ನಿಲ್ಲಬೇಕಾಗಿದೆ. ಕದ್ದ ಅಡಿಕೆಯನ್ನು ಖರೀದಿ ಮಾಡಿದ್ದಾರೆ ಎಂದು ಕೌಡಿಚ್ಚಾರಿನ ಅಂಗಡಿ ಮಾಲಕನಿಂದ ಸಂಪ್ಯ ಪೊಲೀಸರು ೫ ಸಾವಿರ ಲಂಚ ಪಡೆದುಕೊಂಡಿದ್ದಾರೆ, ಸಂಪ್ಯ ಪೊಲೀಸ್ ಪೇದೆಯೊಬ್ಬರು ಈ ಲಂಚವನ್ನು ಪಡೆದುಕೊಂಡಿದ್ದು ಅವರ ವಿರುದ್ದ ಕಾನೂನು ಕ್ರಮಕೈಗೊಳ್ಳಬೇಕು ಎಂದು ಸಭೆಯಲ್ಲಿ ಆಗ್ರಹಿಸಿದರು. ಈ ವೇಳೆ ಮಾತನಾಡಿದ ಶಾಸಕರು ಲಂಚ ಪಡೆದಿದ್ದೇ ಆದಲ್ಲಿ ಅಂಥವರ ವಿರುದ್ದ ಕಾನೂನು ಕ್ರಮಕೈಗೊಳ್ಳಲಾಗುವುದು ಎಂದು ಹೇಳಿದರು.


೨೫ ದಿನಾಂಕದ ನಂತರ ಹೋದರೆ ಅಕ್ಕಿ ಕೊಡುವುದಿಲ್ಲ

ಪ್ರತೀ ತಿಂಗಳ ೨೫ ನೇ ತಾರೀಕಿನ ನಂತರ ರೇಶನ್ ಅಂಗಡಿಗೆ ಹೋದರೆ ಅವರು ಅಕ್ಕಿ ಕೊಡುವುದಿಲ್ಲ ಎಂದು ಹೇಳುತ್ತಿದ್ದಾರೆ ಎಂದು ಪಾಣಾಜೆಯ ಕಾರ್ಯಕರ್ತರೋರ್ವರು ಶಾಸಕರಲ್ಲಿ ಸೂರು ನೀಡಿದರು. ಪಾಣಜೆ ಆರೋಗ್ಯ ಕೇಂದ್ರದಲ್ಲಿ ವೈದ್ಯರ ನೇಮಕ ಮಾಡುವಂತೆ ಆಗ್ರಹಿಸಲಾಯಿತು.ಸಭೆಯಲ್ಲಿ ವಿವಿಧ ವಿಷಯಗಳ ಬಗ್ಗೆ ಕಾರ್ಯಕರ್ತರು ಶಾಸಕರ ಜೊತೆ ಸಂವಾದ ನಡೆಸಿದರು. ಕಾಂಗ್ರೆಸ್ ಪಕ್ಷದ ಪ್ರಮುಖರು ಸಭೆಯಲ್ಲಿ ಉಪಸ್ಥಿತರಿದ್ದರು.

ಆಂಟಿಯನ್ನು ಪ್ರೀತಿಸಲು ಹೋಗಿ ಯುವಕನ ಬಿತ್ತು ಹೆಣ..

Posted by Vidyamaana on 2023-11-05 21:52:52 |

Share: | | | | |


ಆಂಟಿಯನ್ನು ಪ್ರೀತಿಸಲು ಹೋಗಿ ಯುವಕನ ಬಿತ್ತು ಹೆಣ..

ಬೆಂಗಳೂರು : ಆನೇಕಲ್ ಮುಗಳೂರು ಹೊಳೆಯಲ್ಲಿ ಅಪರಿಚಿತ ಶವ ಪತ್ತೆಯಾಗಿದ್ದು ಪ್ರಕರಣಕ್ಕೆ ಹಿಂದೆ ಬಿದ್ದ ಖಾಕಿ ಪಡೆಗೆ ಹೊಸ ಟ್ವಿಸ್ಟ್ ಸಿಕ್ಕಿದೆ. ಆಂಟಿಯ ಪ್ರೀತಿಸಲು ಹೋಗಿ ಯುವಕ ಹೆಣವಾಗಿ ಹೋಗಿದ್ದಾನೆ..ಈ ಕೇಸ್​ನಲ್ಲಿ ಮೃತನ ಪ್ರೇಯಸಿಯೇ ಆತನನ್ನು ಕೊಂದಿರುವ ಮಾಹಿತಿ ಲಭ್ಯವಾಗಿದೆ.ಬೆಂಗಳೂರು ಹೊರವಲಯ ಆನೇಕಲ್ ತಾಲ್ಲೂಕಿನ ಮುಗಳೂರು ಹೊಳೆಯಲ್ಲಿ ಅನಾಮಿಕ ವ್ಯಕ್ತಿಯ ಶವ ಸಿಕ್ಕಿದ್ದು, ಈ ಪ್ರಕರಣ ಆಸುಪಾಸಿನ ಜನರನ್ನು ಆತಂಕಕ್ಕೀಡು ಮಾಡಿತ್ತು. ಆದರೀಗ ಪೊಲೀಸರು ಈ ಪ್ರಕರಣವನ್ನು ಬೇಧಿಸಿದ್ದು, ಮೃತ ಯುವಕನನ್ನು ಕೋಲಾರ ಮಾಲೂರು ತಾಲೂಕಿನ ಅಯ್ಯಪ್ಪನಗರದ 28 ವರ್ಷದ ಚೇತನ್ ಎಂದು ಗುರುತಿಸಲಾಗಿದೆ. ಮಾಲೂರು ಸೊನ್ನಾಪುರ ಗ್ರಾಮದ ಸತೀಶ್(30), ಶಶಿ(29), ಶೋಭಾ(28) ಕೊಲೆ ಆರೋಪಿಗಳಾಗಿದ್ದಾರೆ.


ಕಳೆದ ತಿಂಗಳು 26ನೇ ತಾರೀಖು ದಕ್ಷಿಣ ಪಿನಾಕಿನಿ ಹೊಳೆಯಲ್ಲಿ ಯುವಕನ ಶವ ಪತ್ತೆಯಾಗಿತ್ತು. ಈ ವೇಳೆ ಸಮೀಪದ ಮುಗಳೂರು ಬ್ರಿಡ್ಜ್ ತಡೆಗೋಡೆ ಮೇಲೆ ರಕ್ತದ ಕಲೆಗಳಿರುವುದು ಪತ್ತೆಯಾಗಿತ್ತು. ಆದ್ರೆ ಅಂದು ಮೃತನ ಗುರುತು ಪತ್ತೆಯಾಗಿರಲಿಲ್ಲ. ಸರ್ಜಾಪುರ ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದು, ಇದಾದ ಬಳಿಕವೇ ಯುವಕನ ಮರ್ಡರ್ ಕಹಾನಿ ಬಯಲಿಗೆ ಬಂದಿದೆ.ಮೃತ ಚೇತನ್ ಗಂಡ ಬಿಟ್ಟಿದ್ದ ಮಹಿಳೆ ಜೊತೆ ಸಹಜೀವನ ಆರಂಭಿಸಿದ್ದು, ಕಳೆದ ಎಂಟು ತಿಂಗಳಿಂದ ಇಬ್ಬರೂ ಒಟ್ಟಿಗಿದ್ದರೆನ್ನಲಾಗಿದೆ. ಈ ನಡುವೆ ಚೇತನ್ ಮೂಲಕ ಸತೀಶ್ ಪರಿಚಯವಾಗಿದ್ದು, ಸಿರಿವಂತ ಸತೀಶ್ ಮೇಲೆ ಶೋಭಾ ಕಣ್ಣು ಬಿದ್ದಿದೆ. ಕೆಲವೇ ದಿನಗಳಲ್ಲಿ ಶೋಭಾಗಾಗಿ ಆತ ಲಕ್ಷ ಲಕ್ಷ ಖರ್ಚು ಮಾಡಿದ್ದ. 25 ಲಕ್ಷ ಖರ್ಚು ಮಾಡಿದ್ದ ಆತ ಶೋಭಗಾಗಿ ಬ್ಯೂಟಿ ಪಾರ್ಲರ್ ಆರಂಭ ಮಾಡಿದ್ದ. ಆದರೆ ಇಬ್ಬರ ನಡುವಿನ ಈ ಆಪ್ತತೆಗೆ ಚೇತನ್ ಅಡ್ಡಿಯಾಗಿದ್ದ.


ತಮ್ಮ ಈ ಸಂಬಂಧಕ್ಕೆ ಅಡ್ಡಿಯಾದ ಚೇತನ್​ ಆಟ ಮುಗಿಸಲು ಶೋಭಾ ಪ್ಲಾನ್ ಮಾಡಿದ್ದಾಳೆ. ನಂತರ ಒಂದು ದಿನ ಎಣ್ಣೆ ಪಾರ್ಟಿ ನಡೆದಿದೆ. ಹೊಸಕೋಟೆ ಐಶ್ವರ್ಯ ಬಾರ್ ನಲ್ಲಿ ಎಣ್ಣೆ ಪಾರ್ಟಿ ಮುಗಿಸಿ ಮಧ್ಯರಾತ್ರಿ 2 ಗಂಟೆಗೆ ಚೇತನ್‍ನನ್ನು ಮಚ್ಚಿನಿಂದ ಹೊಡೆದು ಮುಗಳೂರು ಹೊಳೆಗೆ ಎಸೆದಿರುವುದಾಗಿ ಆರೋಪಿಗಳು ಬಾಯ್ಬಿಟ್ಟಿದ್ದಾರೆ.ಈ ಹಿಂದೆ ಅತ್ತಿಬೆಲೆ ಕೊಲೆ ಪ್ರಕರಣದಲ್ಲಿ ಜೈಲಿಗೆ ಹೋಗಿದ್ದ ಆರೋಪಿ  ಶೋಭಾ, ಈ ಬಾರಿ ತನ್ನ ಮಾಸ್ಟರ್ ಪ್ಲಾನ್ ನಿಂದಾಗಿ ಇಬ್ಬರ ಭವಿಷ್ಯ ಹಾಳು ಮಾಡಿದ್ದಾಳೆ. ಪ್ರಕರಣ ಸಂಬಂಧ ಮತ್ತೊಬ್ಬ ಆರೋಪಿ ಪತ್ತೆಗಾಗಿ ಹುಡುಕಾಟ ನಡೆಸುತ್ತಿದ್ದಾರೆ.ಸರ್ಜಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಿಗ್​ಬಾಸ್​ ಸ್ಪರ್ಧಿ ಸಂತೋಷ್​ ಬಂಧಿಸಲು ನಾನೇ ಹೇಳಿದ್ದು: ಸಚಿವ ಈಶ್ವರ್ ಖಂಡ್ರೆ

Posted by Vidyamaana on 2023-10-24 07:36:47 |

Share: | | | | |


ಬಿಗ್​ಬಾಸ್​ ಸ್ಪರ್ಧಿ ಸಂತೋಷ್​ ಬಂಧಿಸಲು ನಾನೇ ಹೇಳಿದ್ದು: ಸಚಿವ ಈಶ್ವರ್ ಖಂಡ್ರೆ

ಬೆಂಗಳೂರು: ಬಿಗ್​ಬಾಸ್ ಸ್ಪರ್ಧಿ  ವರ್ತೂರು ಸಂತೋಷ್  ಅವರನ್ನು ಅರಣ್ಯಾಧಿಕಾರಿಗಳು ಬಂಧಿಸಿದ್ದು, ಇದೀಗ ನ್ಯಾಂಯಾಂಗ ಬಂಧನದಲ್ಲಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿದ ಅರಣ್ಯ ಸವಿವ ಈಶ್ವರ್ ಖಂಡ್ರೆ, ಸಂತೋಷ್ ಹುಲಿ ಉಗುರಿನ ಪೆಂಡೆಂಟ್​ ಧರಿಸಿರುವುದರ ಬಗ್ಗೆ ನಿನ್ನೆ ನಮ್ಮ ಅಧಿಕಾರಿಗಳು ದೂರವಾಣಿ ಕರೆ ಮಾಡಿ ಮಾಹಿತಿ ನೀಡಿದ್ದರು. ಯಾರೇ ಆದರೂ ಕಾನೂನು ರೀತಿಯ ಕ್ರಮ ಜರುಗಿಸಲು ನಾನು ಸೂಚನೆ ನೀಡಿದ್ದೇನೆ. ಈ ಬಗ್ಗೆ ಅಧಿಕಾರಿಗಳು ತನಿಖೆ ಮಾಡುತ್ತಾರೆ, ನಂತರ ಕಾನೂನು ರೀತಿಯ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.


ನಮ್ಮ ಅಧಿಕಾರಿಗಳು ಸ್ಥಳಕ್ಕೆ ಹೋಗಿ ಪರಿಶೀಲನೆ ನಡೆಸಿದ್ದಾರೆ. ವನ್ಯಜೀವಿ ಸಂರಕ್ಷಣೆ ಕಾಯ್ದೆ ಅಡಿ ಕಾನೂನಿನ ಕ್ರಮ ಜರುಗಿಸಿಲಾಗಿದೆ ಎಂದು ಖಂಡ್ರೆ ತಿಳಿಸಿದ್ದಾರೆ. ಈ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಕಾನೂನಿಗೆ ಎಲ್ಲರೂ ಸಮಾನರು. ರಾಜ್ಯದಲ್ಲಿ ಈ ರೀತಿಯ ಘಟನೆಗಳಿಗೆ ಸರ್ಕಾರ ನಮ್ಮ ಇಲಾಖೆ ಆಸ್ಪದ ನೀಡುವುದಿಲ್ಲ. ಹಲವು ಕಡೆ  ಕಳ್ಳ ಬೇಟೆ ನಡೆಯುತ್ತದೆ ಅನ್ನೋ ಮಾಹಿತಿ ಇದೆ. ಮೊನ್ನೆಯಸ್ಟೇ ದಾಂಡೇಲಿಯಲ್ಲಿ ಒಬ್ಬನನ್ನು ಬಂಧಿಸಲಾಗಿದೆ. ಈಗ ಕಾಡು ಪ್ರಾಣಿಗಳ ಭೇಟೆ ಸಾಕಷ್ಟು ಕಡಿಮೆಯಾಗಿದೆ. ರಾಜ್ಯದಲ್ಲಿ ಹಾಗೂ ರಾಷ್ಟ್ರದಲ್ಲಿ ಅರಣ್ಯ, ವನ್ಯಜೀವಿ, ಪರಿಸರ ಸಂರಕ್ಷಣೆ ಕಾಯ್ದೆ ಇದೆ. ಇವೆಲ್ಲಾ ಕಾಯ್ದೆಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರುವ ಕೆಲಸ ಹಾಗೂ ವನ್ಯಜೀವಿಗಳ ಸಂರಕ್ಷಣೆ ಮಾಡಬೇಕಿರುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಇದೇ ನಿಟ್ಟಿನಲ್ಲಿ ಸರ್ಕಾರ ಕಾನೂನು ಕ್ರಮ ಪಾಲಿಸುತ್ತದೆ ಎಂದು ಖಂಡ್ರೆ ತಿಳಿಸಿದ್ದಾರೆ. ಕಾನೂನಿನ ಅಡಿಯಲ್ಲಿ ಯಾರೇ ಆದರೂ ಕ್ರಮ ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ತಿಳಿಸಿದ್ದಾರೆ



Leave a Comment: