ಕಾಲೇಜಿನ ಶೌಚಾಲಯದಲ್ಲಿ ಮಗುವಿಗೆ ಜನ್ಮ ನೀಡಿದ ವಿದ್ಯಾರ್ಥಿನಿ; ಆರೋಪಿ ಮುಳಬಾಗಿಲಿನ ಅನಿಲ್ ಬಂಧನ

ಸುದ್ದಿಗಳು News

Posted by vidyamaana on 2024-07-03 07:52:29 |

Share: | | | | |


ಕಾಲೇಜಿನ ಶೌಚಾಲಯದಲ್ಲಿ ಮಗುವಿಗೆ ಜನ್ಮ ನೀಡಿದ ವಿದ್ಯಾರ್ಥಿನಿ; ಆರೋಪಿ ಮುಳಬಾಗಿಲಿನ ಅನಿಲ್ ಬಂಧನ

ಕೋಲಾರ: ನಗರ ಹೊರವಲಯದ ಖಾಸಗಿ ಕಾಲೇಜುವೊಂದರಲ್ಲಿ ಪ್ರಥಮ ಪಿಯುಸಿ ಓದುತ್ತಿದ್ದ ಬಾಲಕಿಯೊಬ್ಬಳು (17) ಅದೇ ಕಾಲೇಜಿನ ಶೌಚಾಲಯದಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ. ಈ ಸಂಬಂಧ ಪೋಕ್ಸೊ ಪ್ರಕರಣ ದಾಖಲಾಗಿದ್ದು, ಯುವಕನನ್ನು ಬಂಧಿಸಲಾಗಿದೆ.ಮುಳಬಾಗಿಲಿನ ಅನಿಲ್‌ ಕುಮಾರ್‌ (21) ಬಂಧಿತ ಯುವಕ.ಕೋಲಾರ ಮಹಿಳಾ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಾಲಕಿಯು ಶ್ರೀನಿವಾಸಪುರ ತಾಲ್ಲೂಕಿನಿಂದ ಕಾಲೇಜಿಗೆ ಬರುತ್ತಿದ್ದಳು. ಸೋಮವಾರ ಹೊಟ್ಟೆನೋವಿನಿಂದ ಬಳಲುತ್ತಿದ್ದ ಆಕೆ ಶೌಚಾಲಯಕ್ಕೆ ಹೋಗಿದ್ದಾಳೆ. ಈ ಸಮಯದಲ್ಲಿ ಮಗು ಜನನವಾಗಿದೆ. ಮಗುವಿನ ಅಳು ಸದ್ದು ಕೇಳಿ ಕಕ್ಕಾಬಿಕ್ಕಿಯಾದ ಕಾಲೇಜಿನ ಉಪನ್ಯಾಸಕಿಯರು, ಸಿಬ್ಬಂದಿ ಸ್ಥಳಕ್ಕೆ ಓಡಿ ಹೋಗಿದ್ದಾರೆ. ತಕ್ಷಣವೇ ಸಮೀಪದ ಆರ್‌.ಎಲ್‌.ಜಾಲಪ್ಪ ಆಸ್ಪತ್ರೆಗೆ ತಾಯಿ ಹಾಗೂ ಮಗುವನ್ನು ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಉಪನ್ಯಾಸಕರು ಬಾಲಕಿಯ ಪೋಷಕರಿಗೆ ವಿಚಾರ ಮುಟ್ಟಿಸಿದ್ದು, ಅವರೂ ಆಸ್ಪತ್ರೆಗೆ ಬಂದಿದ್ದಾರೆ. ಮಗು ಹಾಗೂ ತಾಯಿ ಆರೋಗ್ಯವಾಗಿದ್ದಾರೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ. ಬಲವಂತವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಬಾಲಕಿ ನೀಡಿದ ದೂರಿನ ಮೇರೆಗೆ ಮಹಿಳಾ ಪೊಲೀಸ್‌ ಠಾಣೆಯಲ್ಲಿ ಪೋಕ್ಸೊ ಪ್ರಕರಣ ದಾಖಲಾಗಿದೆ.

ಸ್ಥಳಕ್ಕೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ.

 Share: | | | | |


ಬ್ಯಾಂಕ್‌ನಿಂದ ಕಿರುಕುಳ ಆರೋಪ; ವಿಕಾಸಸೌಧದೆದುರು ದಂಪತಿಯಿಂದ ಆತ್ಮಹತ್ಯೆ ಹೈಡ್ರಾಮಾ

Posted by Vidyamaana on 2024-01-10 20:26:23 |

Share: | | | | |


ಬ್ಯಾಂಕ್‌ನಿಂದ ಕಿರುಕುಳ ಆರೋಪ; ವಿಕಾಸಸೌಧದೆದುರು ದಂಪತಿಯಿಂದ ಆತ್ಮಹತ್ಯೆ ಹೈಡ್ರಾಮಾ

ಬೆಂಗಳೂರು: ಖಾಸಗಿ ಬ್ಯಾಂಕ್‌ನಲ್ಲಿ (Private Bank) ಪಡೆದುಕೊಂಡಿದ್ದ ಸಾಲಕ್ಕೆ ದುಪ್ಪಟ್ಟು ಹಣ ಕಟ್ಟಿದರೂ ಕಿರುಕುಳ ನಿಂತಿಲ್ಲ ಎಂದು ಆರೋಪಿಸಿ ಕುಟುಂಬವೊಂದು ವಿಕಾಸಸೌಧದ ಮುಂದೆ ಆತ್ಮಹತ್ಯೆಗೆ (Self Harming) ಯತ್ನಿಸಿದೆ. ಕೂಡಲೇ ಅವರನ್ನು ಸ್ಥಳದಲ್ಲಿದ್ದ ಪೊಲೀಸರು ತಡೆದಿದ್ದಾರೆ.ವಿಕಾಸಸೌಧದ ಮುಂದೆ ಬಂದಿದ್ದ ಶಾಯಿಸ್ತಾ ಬಾನು ಹಾಗೂ ಮೊಹಮದ್ ಮುನಾಯಿದ್ ಉಲ್ಲಾ ದಂಪತಿ ಏಕಾಏಕಿ ಸೀಮೆಎಣ್ಣೆಯನ್ನು ಮೈಮೇಲೆ ಸುರಿದುಕೊಂಡಿದ್ದಾರೆ.

ತಮಗೆ ಅನ್ಯಾಯವಾಗಿದೆ, ಹೀಗಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇವೆ ಎಂದು ಕೂಗಿಕೊಡಿದ್ದಾರೆ. ಆದರೆ, ಅಷ್ಟರಲ್ಲಿ ವಿಕಾಸಸೌಧದ ಕಾವಲಿಗೆ ಇದ್ದ ಪೊಲೀಸರು ಅವರನ್ನು ತಡೆದಿದ್ದು, ರಕ್ಷಣೆ ಮಾಡಿದ್ದಾರೆ.


ಏನಿದು ಪ್ರಕರಣ?

ಜೆಜೆ ನಗರದಲ್ಲಿ ಶಾಯಿಸ್ತಾ ಬಾನು ಹಾಗೂ ಮೊಹಮದ್ ಮುನಾಯಿದ್ ಉಲ್ಲಾ ದಂಪತಿಯ ಮನೆಯ ಇದೆ. ಈ ಮನೆ ಮೇಲೆ 50 ಲಕ್ಷ ರೂಪಾಯಿ ಸಾಲವನ್ನು ಈ ಕುಟುಂಬವು ಪಡೆದಿದೆ ಎನ್ನಲಾಗಿದೆ. ಈ ಸಾಲಕ್ಕೆ ಈಗ ಬಡ್ಡಿ ಸೇರಿ ಒಟ್ಟು 97 ಲಕ್ಷ ರೂಪಾಯಿಯನ್ನು ಕಟ್ಟಿದರೂ ಬ್ಯಾಂಕ್‌ನಿಂದ ಕಿರುಕುಳ ತಪ್ಪಿಲ್ಲ ಎಂದು ಆರೋಪ ಮಾಡಿದ್ದಾರೆ. ಹೀಗಾಗಿ ತಮಗೆ ಬೇರೆ ದಾರಿ ಇಲ್ಲದೆ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇವೆ ಎಂದು ಹೇಳಿದ್ದಾರೆ.ಆತ್ಮಹತ್ಯೆಗೆ ಯತ್ನಿಸಿದ ದಂಪತಿ ಮೇಲೆ ಕೇಸ್ ದಾಖಲು

ಆತ್ಮಹತ್ಯೆಗೆ ಯತ್ನಿಸಿದ ದಂಪತಿ ಮೇಲೆ ಈಗ ಪೊಲೀಸರು ಕೇಸ್ ದಾಖಲು ಮಾಡಿದ್ದಾರೆ. ಐಪಿಸಿ 309 (ಆತ್ಮಹತ್ಯೆಗೆ ಯತ್ನ) ಹಾಗೂ ಐಪಿಸಿ 290 (ಸಾರ್ವಜನಿಕ ಸ್ಥಳಗಳಲ್ಲಿ ದುರ್ವರ್ತನೆ ) ಅಡಿ ಕೇಸ್ ದಾಖಲಾಗಿದೆ. ಶಾಯಿಸ್ತಾ ಬಾನು ಹಾಗು ಮೊಹಮದ್ ಮುನಾಯಿದ್ ಉಲ್ಲಾ ಇಬ್ಬರ ಮೇಲೂ ಪ್ರಕರಣ ದಾಖಲಾಗಿದೆ. ಆ ಬಳಿಕ ಮುಚ್ಚಳಿಕೆ ಬರೆಸಿಕೊಂಡು ಠಾಣಾ ಜಾಮೀನಿನ ಮೇಲೆ ಅವರನ್ನು ಪೊಲೀಸರು ಬಿಡುಗಡೆ ಮಾಡಿ ಕಳುಹಿಸಿದ್ದಾರೆ

ವ್ಯಾಲೆಂಟೈನ್ಸ್ ಡೇ ದಿನ ಕಿಸ್, ಬಟ್ಟೆಗಿಂತ ಇದನ್ನು ಕೇಳಿದ್ದಾರೆ ಬಹುತೇಕ ಜನ

Posted by Vidyamaana on 2024-02-13 13:28:42 |

Share: | | | | |


ವ್ಯಾಲೆಂಟೈನ್ಸ್ ಡೇ ದಿನ ಕಿಸ್, ಬಟ್ಟೆಗಿಂತ ಇದನ್ನು ಕೇಳಿದ್ದಾರೆ ಬಹುತೇಕ ಜನ

ಪ್ರೇಮಿಗಳ ದಿನಕ್ಕೆ ಇನ್ನು ಒಂದೇ ದಿನ ಬಾಕಿ ಇದೆ. ಫೆಬ್ರವರಿ 14ರಂದು ಪ್ರೇಮಿಗಳ ದಿನ ಆಚರಿಸಲಾಗುವುದು. ಭಾರತದಲ್ಲಿ ಪ್ರೇಮಿಗಳು ಪರಸ್ಪರ ಬಟ್ಟೆ, ಹೂ, ಚಾಕೋಲೇಟ್‌, ಗ್ಯಾಜೆಟ್‌, ಮನೆ ವಸ್ತು ಸೇರಿದಂತೆ ಅನೇಕ ರೀತಿಯ ವಸ್ತುಗಳನ್ನು ನೀಡಿ ವ್ಯಾಲಂಟೈನ್ಸ್‌ ಡೇ ಆಚರಣೆ ಮಾಡುತ್ತಾರೆ.ಆದ್ರೆ ಎಲ್ಲ ದೇಶದಲ್ಲೂ ಬರೀ ವಸ್ತುಗಳೇ ಉಡುಗೊರೆಯಾಗಿ ಸಿಗಬೇಕು ಎಂದೇನಿಲ್ಲ. ಹಣವನ್ನು ಕೂಡ ಉಡುಗೊರೆ ರೂಪದಲ್ಲಿ ನೀವು ದೇಶವಿದೆ. ಯಸ್.‌ ನಾವು ಫಿಲಿಪೈನ್ಸ್‌ ಬಗ್ಗೆ ಹೇಳ್ತಿದ್ದೇವೆ.


ಪ್ರೇಮಿಗಳ ದಿನಕ್ಕೂ ಮುನ್ನ ಅಲ್ಲೊಂದು ಸಮೀಕ್ಷೆ ನಡೆದಿದೆ. ಸಮೀಕ್ಷೆಯಲ್ಲಿ ಬೇರೆ ಬೇರೆ ರಾಜ್ಯದ 1,200 ಜನರು ಪಾಲ್ಗೊಂಡಿದ್ದರು. ಈ ವೇಳೆ ವ್ಯಾಲಂಟೈನ್ಸ್‌ ಡೇ ಸಮಯದಲ್ಲಿ ಯಾವ ಉಡುಗೊರೆ ಬಯಸ್ತೀರಿ ಎಂದು ಪ್ರಶ್ನೆ ಕೇಳಲಾಗಿದೆ. ಅದಕ್ಕೆ ಅನೇಕರು ನೀಡಿದ ಉತ್ತರ ಹಣ. ‌ ಫಿಲಿಪೈನ್ಸ್‌ನ ಸಾಮಾಜಿಕ ಹವಾಮಾನ ಕೇಂದ್ರ ಸಮೀಕ್ಷೆ ನಡೆಸಿದ್ದು, ಎಷ್ಟು ಮಂದಿ ಯಾವ ಉಡುಗೊರೆ ಬಯಸಿದ್ದಾರೆ ಎಂಬುದನ್ನು ಅದು ಅಂಕಿ ಮೂಲಕ ವಿವರಿಸಿದೆ.ಸಮೀಕ್ಷೆಯಲ್ಲಿ ಪಾಲ್ಗೊಂಡಿದ್ದ ಶೇಕಡಾ 16ರಷ್ಟು ಮಂದಿ ಹಣ ನಿರೀಕ್ಷೆ ಮಾಡಿದ್ರೆ ಶೇಕಡಾ 11 ಮಂದಿ ಪ್ರೀತಿ ಒಡನಾಟ ಎಂದಿದ್ದಾರೆ. ಶೇಕಡಾ 10 ಮಂದಿ ಹೂವಾದ್ರೆ ಶೇಕಡಾ 9 ಮಂದಿ ಬಟ್ಟೆ ಆಯ್ಕೆ ಮಾಡಿದ್ದಾರೆ.


ಬೈಕ್‌, ವಾಹನ, ಗ್ರೀಟಿಂಗ್‌ ಕಾರ್ಡ್‌, ಕಿಸ್‌ ಕೇಳಿದವರ ಸಂಖ್ಯೆ ಶೇಕಡಾ ಒಂದಷ್ಟಿದೆ. ಸಮೀಕ್ಷೆಯಲ್ಲಿ ಇನ್ನೂ ಅನೇಕ ವಿಷ್ಯವನ್ನು ತಿಳಿಯುವ ಪ್ರಯತ್ನ ನಡೆಸಲಾಗಿದೆ. ಯಾರು ಖುಷಿಯಾಗಿದ್ದಾರೆ ಎಂಬುದನ್ನೂ ಇದ್ರಲ್ಲಿ ಪತ್ತೆ ಮಾಡಲಾಗಿದೆ. ಸಮೀಕ್ಷೆ ಪ್ರಕಾರ, ಮದುವೆಯಾದ ಶೇಕಡಾ 76ರಷ್ಟು ಪುರುಷರು ಖುಷಿಯಾಗಿದ್ರೆ ಮಹಿಳೆಯರ ಸಂಖ್ಯೆ ಶೇಕಡಾ 67ರಷ್ಟಿದೆ. ಉಡುಗೊರೆ ರೂಪದಲ್ಲಿ ಹಣ ಕೇಳಿದವರಲ್ಲಿ ಮಹಿಳೆಯರು ಮುಂದಿದ್ದಾರೆ.

ಪುತ್ತೂರಿನಲ್ಲಿ ಮತ್ತೆ ಮೊಳಗಲಿದೆ ‘ಅಲೆ ಬುಡಿಯೆರ್..’ ಸ್ವರ

Posted by Vidyamaana on 2024-01-25 16:52:35 |

Share: | | | | |


ಪುತ್ತೂರಿನಲ್ಲಿ ಮತ್ತೆ ಮೊಳಗಲಿದೆ ‘ಅಲೆ ಬುಡಿಯೆರ್..’ ಸ್ವರ

ಪುತ್ತೂರು: 31ನೇ ವರ್ಷದ ಹೊನಲು ಬೆಳಕಿನ ಪುತ್ತೂರು ಕೋಟಿ-ಚೆನ್ನಯ ಜೋಡುಕರೆ ಕಂಬಳ ಜ.27 ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಎದುರಿನ ದೇವರಮಾರು ಗದ್ದೆಯಲ್ಲಿ ನಡೆಯಲಿದೆ ಎಂದು ಕಂಬಳ ಸಮಿತಿ ಅಧ್ಯಕ್ಷ ಎನ್. ಚಂದ್ರಹಾಸ ಶೆಟ್ಟಿ ತಿಳಿಸಿದ್ದಾರೆ.ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ದಿ.ಜಯಂತ ರೈ ಹಾಗೂ ದಿ.ಎನ್. ಮುತ್ತಪ್ಪ ರೈ ಅವರ ನೇತೃತ್ವದಲ್ಲಿ ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಗೌರವಾಧ್ಯಕ್ಷತೆಯಲ್ಲಿ ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಅವರ ಗೌರವ ಉಪಸ್ಥಿತಿಯಲ್ಲಿ ಕಳೆದ ಮೂವತ್ತು ವರ್ಷಗಳಿಂದ ನಡೆದುಕೊಂಡು ಬಂದಿರುವ ಪುತ್ತೂರು ಕೋಟಿ-ಚೆನ್ನಯ ಕಂಬಳಕ್ಕೆ ಭಾರೀ ಮಹತ್ವವಿದೆ. ಈ ಮೂಲಕ ಪುತ್ತೂರಿನ ಸಂಸ್ಕೃತಿ, ಘನತೆಯನ್ನು ಎತ್ತಿ ಹಿಡಿದಿದೆ ಎಂದು ಹೇಳಿದರು.


ಜ.27 ರಂದು ಬೆಳಿಗ್ಗೆ ಉದ್ಘಾಟನಾ ಸಮಾರಂಭವನ್ನು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಪ್ರಸಾದ್‌ ಮುಳಿಯ ಉದ್ಘಾಟಿಸಲಿದ್ದು, ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ಸಂಚಾಲಕ ಕೆ.ಸೀತಾರಾಮ ರೈ ಸವಣೂರು ಸಮಾರಂಭದ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಸಂತ ಫಿಲೋಮಿನಾ ಕಾಲೇಜು ಪ್ರಾಂಶುಪಾಲ ರೆ.ಫಾ.ಆಂಟನಿ ಪ್ರಕಾಶ್ ಮೊಂತೆರೋ, ಡಾ.ಸುರೇಶ್ ಪುತ್ತೂರಾಯ, ತಾಪಂ ಕಾರ್ಯನಿರ್ವಹಣಾಧಿಕಾರಿ ನವೀನ್ ಭಂಡಾರಿ, ನಗರಸಭೆ ಪೌರಾಯುಕ್ತ ಮಧು ಎಸ್.ಮನೋಹರ್ ಸೇರಿದಂತೆ ಹಲವಾರು ಗಣ್ಯರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.

ಸಂಜೆ 6.00 ಗಂಟೆಗೆ ನಡೆಯುವ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕ ಅಶೋಕ್ ಕುಮಾರ್ ರೈ ವಹಿಸಲಿದ್ದು, ವಿಧಾನ ಸಭಾಧ್ಯಕ್ಷ ಯು.ಟಿ.ಖಾದರ್ ಉಪಸ್ಥಿತರಿರುವರು. ಮುಖ್ಯ ಅತಿಥಿಗಳಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್, ಸಂಸದ ನಳಿನ್ ಕುಮಾರ್ ಕಟೀಲ್, ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ, ಕೇಂದ್ರ ನಹಕಾರಿ ಬ್ಯಾಂಕ್‌ ಅಧ್ಯಕ್ಷ ಎಂ.ಎನ್.ರಾಜೇಂದ್ರ ಕುಮಾರ್ ಶಾಸಕರಾದ ಪ್ರದೀಪ್ ಈಶ್ವರ್, ಮಂಥರ್ ಗೌಡ, ಉಮಾನಾಥ ಕೋಟ್ಯಾನ್, ವೇದವ್ಯಾಸ ಕಾಮತ್, ರಾಜೇಶ್ ನಾಯ್ಡ್, ಭರತ್ ಶೆಟ್ಟಿ, ಹರೀಶ್ ಪೂಂಜಾ, ಭಾಗೀರಥಿ ಮುರುಳ್ಯ, ವಿಧಾನಪರಿಷತ್ ಸದಸ್ಯ ಹರೀಶ್‌ ಕುಮಾರತ್ತಿತರರು ರಾಜಕೀಯ ನೇತಾರರು, ಉದ್ಯಮಿಗಳು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.


ವಿಶೇಷ ಆಕರ್ಷಣೆಯಾಗಿ ನಾಯಕ ನಟರಾದ ಪ್ರಜ್ವಲ್ ದೇವರಾಜ್, ಕಾರ್ತಿಕ್ ಜಯರಾಮ್, ನಟಿಯರಾದ ಸೋನು ಗೌಡ, ನೇಹಾ ಗೌಡ, ನಟರಾದ ಗುರುನಂದನ್, ಅರವಿಂದ ಬೋಳಾರ್, ಅರ್ಜುನ್ ಕಾಪಿಕಾಡ್, ರೂಪೇಶ್ ಶೆಟ್ಟಿ, ಚಂದನ್ ಗೌಡ ಪಾಲ್ಗೊಳ್ಳಲಿದ್ದಾರೆ. ಸಮಾರಂಭದಲ್ಲಿ ಮಾಣಿಸಾಗು ಉಮೇಶ್ ಶೆಟ್ಟಿ (ಕಂಬಳ), ಕೇಶವ ಗೌಡ (ಉದ್ಯಮ), ರವೀಂದ್ರ ಶೆಟ್ಟಿ ನುಳಿಯಾಲು (ಧಾರ್ಮಿಕ), ದೀಪಕ್ ರೈ ಪಾಣಾಜೆ (ನಟ), ಜೈಗುರು ಆಚಾರ್ ಹಿಂದಾರ್ (ಹೈನುಗಾರಿಕೆ), ಕಡಬ ಶ್ರೀನಿವಾಸ ರೈ (ಯಕ್ಷಗಾನ) ಕ್ಷೇತ್ರದ ಸಾಧಕರನ್ನು ಸನ್ಮಾನಿಸಲಾಗುವುದು ಎಂದು ಅವರು ತಿಳಿಸಿದರು.


ಜ.28 ರಂದು ಬೆಳಿಗ್ಗೆ 11 ಗಂಟೆಗೆ ನಡೆಯುವ ಬಹುಮಾನ ವಿತರಣಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ರಾಜ್ಯ ಧಾರ್ಮಿಕ ಪರಿಷತ್‌ ಸದಸ್ಯೆ ಮಲ್ಲಿಕಾ ಪಕ್ಕಳ ವಹಿಸಲಿದ್ದು ಮುಖ್ಯ ಅತಿಥಿಗಳಾಗಿ ಹಲವಾರು ಗಣ್ಯರು ಪಾಲ್ಗೊಳ್ಳಲಿದ್ದಾರೆ.ಪತ್ರಿಕಾಗೋಷ್ಠಿಯಲ್ಲಿ ಸಮಿತಿ ಸಂಚಾಲಕ ವಸಂತ ಕುಮಾರ್ ರೈ, ಕೋಶಾಧಿಕಾರಿ ಈಶ್ವರ ಭಟ್‌ ಪಂಜಿಗುಡ್ಡೆ, ಪ್ರಧಾನ ಕಾರ್ಯದರ್ಶಿ ದಿನೇಶ್ ಕುಲಾಲ್ ಪಿ.ವಿ., ಉಪಾಧ್ಯಕ್ಷ ನಿರಂಜನ ರೈ ಮಠಂತಬೆಟ್ಟು ಉಪಸ್ಥಿತರಿದ್ದರು.

ಅಂಚೆ ಮತ ಎಣಿಕೆ: ಅಶೋಕ್ ಕುಮಾರ್ ರೈ ಮುನ್ನಡೆ

Posted by Vidyamaana on 2023-05-13 02:57:54 |

Share: | | | | |


ಅಂಚೆ ಮತ ಎಣಿಕೆ: ಅಶೋಕ್ ಕುಮಾರ್ ರೈ ಮುನ್ನಡೆ

ಪುತ್ತೂರು: ಮತಗಟ್ಟೆ ಕೊಠಡಿಯ ಬೀಗ ಮರೆತು ಬಂದದ್ದರಿಂದ ಮತಗಟ್ಟೆ ಕೊಠಡಿಯ ಬೀಗವನ್ನು ಒಡೆದು ಒಳಪ್ರವೇಶಿಸಿದ ವಿಲಕ್ಷಣ ಘಟನೆಗೆ ಮಂಗಳೂರು ಸಾಕ್ಷಿಯಾಯಿತು ಎಂದು ತಿಳಿದುಬಂದಿದೆ,


ಬಳಿಕ ನಡೆದ ಮತ ಎಣಿಕೆಯ ಆರಂಭದಲ್ಲಿ ಅರುಣ್ ಕುಮಾರ್ ಪುತ್ತಿಲ ಮುನ್ನಡೆ ಕಾಯ್ದುಕೊಂಡರೆ, ನಂತರ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಮುನ್ನಡೆ ಕಾಯ್ದುಕೊಂಡಿದ್ದಾರೆ.


ಸುರತ್ಕಲ್ ಎನ್.ಐ.ಟಿ.ಕೆ. ಆವರಣದಲ್ಲಿ ನಡೆಯುತ್ತಿರುವ ಮತ ಎಣಿಕೆಗಾಗಿ ಎಲ್ಲರೂ ಬಂದು ಸೇರಿದ್ದರು. ಅಷ್ಟರಲ್ಲಿ ಅಧಿಕಾರಿಯೋರ್ವರು ಕೀ ಮರೆತು ಬಂದಿರುವುದು ಬೆಳಕಿಗೆ ಬಂದಿತು. ಪುನಃ ಹಿಂದಿರುಗಿ ಕೀ ತರುವಷ್ಟು ಸಮಯ ಇಲ್ಲದೇ ಇರುವುದರಿಂದ ಬಾಗಿಲಿನ ಕೀಯನ್ನು ಮುರಿದು ಒಳಪ್ರವೇಶಿಸಲಾಯಿತು. ಬಳಿಕ ಮತ ಎಣಿಕೆ ಪ್ರಕ್ರಿಯೆಗೆ ಚಾಲನೆ ನೀಡಲಾಯಿತು ಎಂದು ಹೇಳಲಾಗಿದೆ. ಬಳಿಕ ನಡೆದ ಅಂಚೆ ಮತ ಎಣಿಕೆಯಲ್ಲಿ ಕಾಂಗ್ರೆಸ್  ಅಭ್ಯರ್ಥಿ ಅಶೋಕ್ ರೈ ಮುನ್ನಡೆ ಕಾಯ್ದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಅಂತೂ ಮತ ಎಣಿಕೆ ಪ್ರಕ್ರಿಯೆಗೆ ಯಾವುದೇ ತೊಂದರೆ ಆಗದಂತೆ ಅಧಿಕಾರಿಗಳು ಕಾರ್ಯಕ್ಷಮತೆ ಮೆರೆದರು.

ಸಾರ್ವಜನಿಕರ ಗಮನಕ್ಕೆ : ಲೋಕಸಭೆ ಚುನಾವಣೆಯಲ್ಲಿ ಅಕ್ರಮ ಕಂಡುಬಂದ್ರೆ ಈ ಸಂಖ್ಯೆಗೆ ಕರೆ ಮಾಡಿ ದೂರು ಸಲ್ಲಿಸಿ!

Posted by Vidyamaana on 2024-03-17 19:47:44 |

Share: | | | | |


ಸಾರ್ವಜನಿಕರ ಗಮನಕ್ಕೆ : ಲೋಕಸಭೆ ಚುನಾವಣೆಯಲ್ಲಿ ಅಕ್ರಮ ಕಂಡುಬಂದ್ರೆ ಈ ಸಂಖ್ಯೆಗೆ ಕರೆ ಮಾಡಿ ದೂರು ಸಲ್ಲಿಸಿ!

ಬೆಂಗಳೂರು : ಭಾರತ ಚುನಾವಣಾ ಆಯೋಗವು ಸಾರ್ವತ್ರಿಕ ಲೋಕಸಭೆ ಚುನಾವಣೆ ಘೋಷಣೆ ಮಾಡಿದ್ದು, ಏಳು ಹಂತಗಳಲ್ಲಿ ಮತದಾನ ನಡೆಯಲಿದೆ. ಅದ್ರಂತೆ, ಏಪ್ರಿಲ್ 19ರಿಂದ ಲೋಕಸಭೆ ಚುನಾವಣೆ ಆರಂಭವಾಗಿದೆ. ಇನ್ನು ಜೂನ್ 4ಕ್ಕೆ ಫಲಿತಾಂಶ ಪ್ರಕಟವಾಗಲಿದೆ.ಕರ್ನಾಟಕದಲ್ಲಿ ಮೊದಲ ಹಂತದಲ್ಲಿ 14 ಕ್ಷೇತ್ರಗಳಿಗೆ ಹಾಗೂ ಎರಡನೇ ಹಂತದಲ್ಲಿ 14 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ.ಹಾಗಾದರೆ ಮೊದಲ ಹಂತದಲ್ಲಿ ಯಾವ ಕ್ಷೇತ್ರಗಳಿಗೆ ಹಾಗೂ ಎರಡನೇ ಹಂತದಲ್ಲಿ ಯಾವ ಕ್ಷೇತ್ರಗಳಿಗೆ ಮತದಾನ ನಡೆಯಲಿದೆ.


ಕರ್ನಾಟಕದಲ್ಲಿ ಏಪ್ರಿಲ್ 26ರಂದು ಹಾಗೂ ಮೇ 7ರಂದು ಮತದಾನ ನಡೆಯಲಿದೆ. ಜೂನ್ 4ರಂದು ಮತ ಎಣಿಕೆ, ಫಲಿತಾಂಶ ಪ್ರಕಟವಾಗಲಿದೆ. ದಕ್ಷಿಣ ಕರ್ನಾಟಕ ಎರಡನೇ ಹಂತದಲ್ಲಿ ಮತದಾನ ನಡೆದರೆ, ಉತ್ತರ ಕರ್ನಾಟಕ ಪ್ರದೇಶಗಳಲ್ಲಿ ಮೂರನೇ ಹಂತದಲ್ಲಿ ಮತದಾನ ನಡೆಯಲಿದೆ.

ಸಿ-ವಿಜಿಲ್‍ನಲ್ಲಿ ದೂರು ಕೊಡಿ:

ಚುನಾವಣಾ ಅಕ್ರಮ, ಎಂ.ಸಿ.ಸಿ. ಉಲ್ಲಂಘನೆ ಸೇರಿದಂತೆ ಚುನಾವಣೆಗೆ ಸಂಬಂಧಿಸಿದ ಏನೇ ದೂರುಗಳಿದಲ್ಲಿ ಸಿ-ವಿಜಿಲ್ ತಂತ್ರಾಂಶ ಮತ್ತು 1950 ಟೋಲ್ ಫ್ರೀ ಸಂಖ್ಯೆಗೆ ಕರೆ ಮಾಡಿ ದೂರು ಸಲ್ಲಿಸಬಹುದಾಗಿದೆ.


ವಿವಿಧ ತಂಡಗಳು ತಪಾಸಣೆ ಸಂದರ್ಭದಲ್ಲಿ ವಶಕ್ಕೆ ಪಡೆಯಲಾದ ಹಣ, ಇತರೆ ಬೆಲೆ ಬಾಳುವ ವಸ್ತುಗಳ ಪರಿಶೀಲನೆಗೆ ಜಿಲ್ಲಾ ಪಂಚಾಯತ್ ಸಿ.ಇ.ಓ ನೇತೃತ್ವದಲ್ಲಿ ಕ್ಯಾಶ್ ರಿಡ್ರೆಸಲ್ ಸಮಿತಿ ರಚಿಸಲಾಗಿದೆ.

ಬೇಗ ಬನ್ನಿ.. ಮೋದಿ 3,000 ಕೊಡ್ತಾರಂತೆ! : ಅಂಚೆ ಕಚೇರಿಯಲ್ಲಿ ಮಹಿಳೆಯರ ನೂಕುನುಗ್ಗಲು

Posted by Vidyamaana on 2024-03-19 20:13:24 |

Share: | | | | |


ಬೇಗ ಬನ್ನಿ.. ಮೋದಿ 3,000 ಕೊಡ್ತಾರಂತೆ! : ಅಂಚೆ ಕಚೇರಿಯಲ್ಲಿ ಮಹಿಳೆಯರ ನೂಕುನುಗ್ಗಲು

ಹುಬ್ಬಳ್ಳಿ : ಪ್ರಧಾನಿ ನರೇಂದ್ರ ಮೋದಿ ಅವರು ಒಬ್ಬೊಬ್ಬರಿಗೆ 3,000 ರೂ. ಕೊಡ್ತಾರೆ ಎಂಬ ವದಂತಿ ನಂಬಿ ಮಹಿಳೆಯರು ಅಂಚೆ ಕಚೇರಿಗೆ ದೌಡಾಯಿಸಿದ್ದಾರೆ.


ಕೇಂದ್ರ ಸರ್ಕಾರದ ಮೋದಿ ಗ್ಯಾರಂಟಿ ಯೋಜನೆಯಡಿ ಅಂಚೆ ಇಲಾಖೆಯಲ್ಲಿ ಉಳಿತಾಯ ಖಾತೆ ತೆರೆದ ಬಿಪಿಎಲ್‌ ಕಾರ್ಡ್ ಕುಟುಂಬದ ಮಹಿಳೆಯರಿಗೆ 3 ಸಾವಿರ ಜಮಾ ಮಾಡಲಾಗುವುದು ಎಂಬ ವದಂತಿಗೆ ಮಹಿಳೆಯರು ಮುಗಿಬಿದ್ದಿದ್ದಾರೆ.ಬೆಳಗ್ಗೆ 8 ರಿಂದ ನಗರದ ವಿವಿಧ ಅಂಚೆ ಕಚೇರಿಗಳ ಎದುರು ಮಹಿಳೆಯರು ಸಾಲುಗಟ್ಟಿ ನಿಂತಿದ್ದು ಕಂಡು ಬಂದಿತು. ಸ್ಟೇಷನ್‌ ರಸ್ತೆಯಲ್ಲಿರುವ ಮುಖ್ಯ ಅಂಚೆ ಕಚೇರಿ ಎದುರು ರಾತ್ರಿ 8 ರವರೆಗೆ ಸರದಿ ಸಾಲಿನಲ್ಲಿ ನಿಂತುಕೊಂಡಿರುವ ದೃಶ್ಯ ಗಳು ಕಂಡು ಬಂದಿತು. ಹಳೇಹುಬ್ಬಳ್ಳಿ, ಗಿರಣಿಚಾಳ, ಉದ್ಯಮನಗರ, ನವಗರ, ಟ್ರಾಫಿಕ್‌ ಐಲ್ಯಾಂಡ್‌ ಉಪ ಅಂಚೆ ಕಚೇರಿಗಳ ಎದುರು ಸಹ ಇದೇ ವಾತಾವರಣ ಕಂಡು ಬಂದಿತು.ಮಹಿಳೆಯರು ನಮ್ಮ ಮಾತು ಒಪ್ಪುತ್ತಿಲ್ಲ


ಪ್ರಧಾನ ಅಂಚೆ ಕಚೇರಿಯ ಹಿರಿಯ ಪೋಸ್ಟ್‌ಮಾಸ್ಟರ್ ಎಂ. ಕುಮಾರಸ್ವಾಮಿ ಮಾತನಾಡಿ, ಅಂಚೆ ಕಚೇರಿಯಲ್ಲಿ ಮಹಿಳೆಯರು ಮೋದಿ ಖಾತೆ ತೆರೆದರೆ ಮೂರು ತಿಂಗಳಿಗೊಮ್ಮೆ 3 ಸಾವಿರ ಖಾತೆಗೆ ಜಮಾ ಆಗುವುದು ಎಂದು ಯಾರೋ ಕಿಡಿಗೇಡಿಗಳು ಸುಳ್ಳು ಸುದ್ದಿ ಹಬ್ಬಿಸಿದ್ದಾರೆ. ಅದನ್ನು ನಂಬಿದ ಮಹಿಳೆಯರು ಬೆಳಿಗ್ಗೆಯಿಂದ ಅಂಚೆ ಕಚೇರಿಗಳ ಎದುರು ಜಮಾಯಿಸಿದ್ದಾರೆ. ಅಂಚೆ ಕಚೇರಿಗಳ ಎದುರು ನೋಟಿಸ್‌ ಅಂಟಿಸಿ, ಸುಳ್ಳು ಸುದ್ದಿ ನಂಬಬೇಡಿ ಎಂದಿದ್ದೇವೆ. ಆದರೂ, ಮಹಿಳೆಯರು ನಮ್ಮ ಮಾತು ಒಪ್ಪುತ್ತಿಲ್ಲ ಎಂದು ತಿಳಿಸಿದರು.



Leave a Comment: