Posted by vidyamaana on 2023-08-18 08:29:00 |
ಬೆಳ್ತಂಗಡಿ: ರೋಗಿಯೊಬ್ಬರನ್ನು ಕೊಂಡುಹೋಗುತ್ತಿರುವ ವೇಳೆ ಟುಫಾನ್ ಅಂಬುಲೆನ್ಸ್ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಚಾಲಕ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಘಟನೆ ವಗ್ಗ ಬಳಿ ಆಗಸ್ಟ್ 18 ರಂದು ನಡೆದಿದೆ.
ಬೆಳ್ತಂಗಡಿಯಿಂದ ಮಂಗಳೂರಿಗೆ ರೋಗಿಯೊಬ್ಬರನ್ನು ಕೊಂಡೊಯ್ಯುತ್ತಿರುವ ವೇಳೆ ಬಂಟ್ವಾಳದ ವಗ್ಗ ಬಳಿ ಅಂಬುಲೆನ್ಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಈ ವೇಳೆ ಚಾಲಕ ಮಡಂತ್ಯಾರ್ ಮಾಲಾಡಿ ನಿವಾಸಿ ಶಬೀರ್ ಎಂಬವರು ಗಂಭೀರ ಗಾಯಗೊಂಡಿದ್ದು ತಕ್ಷಣ ಅವರನ್ನು ತುಂಬೆ ಖಾಸಗಿ ಆಸ್ಪತ್ರೆಗೆ ಕೊಂಡು ಹೋದರೂ ಅಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದೇ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.
Posted by Vidyamaana on 2024-03-08 12:49:54 |
ಬೆಂಗಳೂರು : ಮಹಿಳೆಯರಿಗೆ ಸಿಹಿಸುದ್ದಿ ಸಿಕ್ಕಿದ್ದು, ಗೃಹಲಕ್ಷ್ಮಿ ಯೋಜನೆಯ ಇನ್ನೊಂದು ಬಿಗ್ ಅಪ್ಡೇಟ್ ಸುದ್ದಿ ಮಿಸ್ ಏನಾಪ್ಪಾ ಅಂದ್ರೆ ಗೃಹ ಲಕ್ಷ್ಮಿ ಯೋಜನೆಯ ಹಣ ಯಾರ ಖಾತೆಗೆ ಜಮಾ ಆಗುತ್ತಿಲ್ಲವೋ ಅವರ ಸಮಸ್ಯೆಯನ್ನು ಪರಿಹರಿಸಲು ಅಧಿಕಾರಿಗಳು ಜಿಲ್ಲೆಗಳಿಗೆ ಭೇಟಿ ನೀಡಲಿದ್ದಾರೆ.ಬ್ಯಾಂಕ್ ಖಾತೆಯಲ್ಲಿ ಸಮಸ್ಯೆ ಇದ್ದರೆ ಅಂತವರಿಗೆ ಅಂಚೆ ಇಲಾಖೆಯಲ್ಲಿ ಖಾತೆ ತೆರೆಸಿ ಆ ಖಾತೆಗೆ ಹಣ ಜಮಾ ಮಾಡಲು ಅಧಿಕಾರಿಗಳು ನಿರ್ಧರಿಸಿದ್ದಾರೆ.
ಇನ್ನು ಗೃಹಿಣಿಯ ಸಮಸ್ಯೆಯ ಪರಿಹಾರಕ್ಕೆ ಅಧಿಕಾರಿಗಳನ್ನು ನೇಮಿಸಿರುವುದರ ಜೊತೆಗೆ ಆಶಾ ಕಾರ್ಯಕರ್ತೆಯರು ಹಾಗೂ ಅಂಗನವಾಡಿ ಸಹಾಯಕಿಯರು ಗೃಹಿಣಿಯರ ಜೊತೆ ನಿಂತು ಅವರ ಸಮಸ್ಯೆ ನಿವಾರಿಸಿ ಹಣ ಜಮಾ ಮಾಡಿಕೊಡುವಂತೆ ಸರ್ಕಾರ ಸೂಚಿಸಿದೆ. ಆಯಾ ಜಿಲ್ಲೆಯ ಆಶಾ ಕಾರ್ಯಕರ್ತೆಯರು ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಸಮಸ್ಯೆ ಇದ್ದವರ ಜೊತೆಗೆ ಹೋಗಿ ಸಮಸ್ಯೆ ಪರಿಹರಿಸಲಿದ್ದಾರೆ.
ಆದಷ್ಟು ಬೇಗ ಗೃಹ ಲಕ್ಷ್ಮಿ ಯೋಜನೆಯ ಎಲ್ಲ ಲೋಪದೋಷಗಳು ನಿವಾರಣೆ ಆಗಲಿದೆ. ಫಲಾನುಭವಿಗಳ ಸಮಸ್ಯೆಯನ್ನು ಪರಿಹರಿಸಲು ಸದ್ಯ ಸರ್ಕಾರವೇ ಮುಂದೆ ಬಂದಿದೆ. ಫಲಾನುಭವಿಗಳ ಸಮಸ್ಯೆ ಪರಿಹಾರವಾದ ಎಲ್ಲ ಕಂತುಗಳ ಹಣವನ್ನು ಸರ್ಕಾರ ಒಂದೇ ಬಾರಿಗೆ ಜಮಾ ಮಾಡಲಿದೆ ಎನ್ನಲಾಗುತ್ತಿದೆ.
Posted by Vidyamaana on 2023-10-24 20:22:36 |
ಬಂಟ್ವಾಳ, ಅ.24: ಕೆಲಸದ ಆಳುವಿನ ಬಗ್ಗೆ ಇರಿಸಿದ್ದ ಅತಿಯಾದ ನಂಬಿಕೆಯೇ ಮಾಲಕನಿಗೆ ಮುಳುವಾಗಿದೆ. ಬಿಲ್ಡರ್ ಆಗಿದ್ದ ವ್ಯಕ್ತಿಯೊಬ್ಬರ ಮನೆಯಲ್ಲಿ ಕೆಲಸಕ್ಕಿದ್ದ ವ್ಯಕ್ತಿಯೇ ಲಕ್ಷಾಂತರ ರೂಪಾಯಿ ನಗದು ಹಾಗೂ ಅಪಾರ ಪ್ರಮಾಣದ ಚಿನ್ನಾಭರಣ ಕಳವುಗೈದ ಘಟನೆ ನಡೆದಿದೆ.
ಬಂಟ್ವಾಳ ತಾಲೂಕಿನ ಪುದು ಗ್ರಾಮದ ಕೋಡಿಮಜಲು ನಿವಾಸಿ ಇಮಾದ್ ಬಿಲ್ಡರ್ ಸಂಸ್ಥೆಯ ಮಾಲಕ ಮೊಹಮ್ಮದ್ ಝಫರುಲ್ಲಾ ಎಂಬವರ ಮನೆಯ ಕಪಾಟಿನಲ್ಲಿ ಇರಿಸಲಾಗಿದ್ದ ಚಿನ್ನಾಭರಣ ಸಹಿತ ಲಕ್ಷಾಂತರ ರೂ. ಹಣವನ್ನು ಮನೆಯ ಕೆಲಸದಾತನೇ ಕದ್ದುಕೊಂಡು ಹೋಗಿರುವುದಾಗಿ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ಸುಮಾರು 27,50,000 ರೂ. ನಗದು ಹಾಗೂ 4,96,000 ರೂ. ಮೌಲ್ಯದ ವಿವಿಧ ಬಗೆಯ ಚಿನ್ನಾಭರಣಗಳನ್ನು ಕಳವು ಮಾಡಿದ್ದಾರೆ ಎಂದು ಝಫರುಲ್ಲಾ ತಿಳಿಸಿದ್ದಾರೆ.
ಇಮಾದ್ ಬಿಲ್ಡರ್ ಮಾಲಕ ಮೊಹಮ್ಮದ್ ಝಫರುಲ್ಲಾ ಎಂಬವರ ಜೊತೆ ಸುಮಾರು 8 ತಿಂಗಳ ಹಿಂದೆ ಕಟ್ಟಡ ಕಾಮಗಾರಿಯ ಕೆಲಸಕ್ಕೆ ಸೇರಿಕೊಂಡಿದ್ದ ಮಂಜೇಶ್ವರ ಮೂಲದ ಆಲಿ ಎಂಬಾತನ ಬಗ್ಗೆ ಸಂಶಯ ಉಂಟಾಗಿದೆ. ಆಲಿಗೆ ಫರಂಗಿಪೇಟೆ ಎಂಬಲ್ಲಿನ ಹುಡುಗಿಯ ಜೊತೆ ವಿವಾಹವಾಗಿದ್ದು, ಮಾಲಕರ ವಿಶ್ವಾಸ ಗಳಿಸಿ ಮನೆಗೇ ಬಂದು ಹೋಗುತ್ತಿದ್ದ. ಅಲ್ಲದೆ, ಝಫರುಲ್ಲಾ ಅವರ ಸಹಾಯಕನಾಗಿ ದುಡಿಯುತ್ತಿದ್ದ. ಹೀಗಾಗಿ ಆಲಿಯಲ್ಲಿ ಮನೆಗೆ ಅಗತ್ಯ ಸಾಮಾಗ್ರಿಗಳನ್ನು ಕಳುಹಿಸಿಕೊಡುತ್ತಿದ್ದರು. ಆದರೆ ಈತನ ಮೇಲಿರಿಸಿದ್ದ ಅತೀ ವಿಶ್ವಾಸವೇ ಮಾಲಕರಿಗೆ ಮುಳುವಾಗಿ ಪರಿಣಮಿಸಿದೆ.
ಅ.18 ರಂದು ಮನೆ ಮಂದಿ ಎಲ್ಲರೂ ಮನೆಗೆ ಬೀಗ ಹಾಕಿ ಮಂಗಳೂರಿನ ಜಪ್ಪುವಿನ ತಮ್ಮನ ಮನೆಗೆ ಹೋಗಿದ್ದರು. ಮನೆಗೆ ಬೀಗ ಹಾಕಿದ ನಂತರ, ತನ್ನ ವಿಶ್ವಾಸದ ಕೆಲಸದಾಳು ಬಳಿ ಕೀಯನ್ನು ನೀಡಿದ್ದರು. ಮರುದಿನ 19ರಂದು ಕಟ್ಟಡ ಕಾಮಗಾರಿ ವಿಚಾರಕ್ಕೆ ಮಾಲಕ ಮೊಹಮ್ಮದ್ ಅವರು ಈತನಿಗೆ ಪೋನ್ ಮಾಡಿದಾಗ ಪೋನ್ ಸ್ವಿಚ್ ಆಫ್ ಆಗಿತ್ತು.
ಆದರೆ ಈ ವಿಚಾರವನ್ನು ಸೀರಿಯಸ್ ಆಗಿ ತೆಗೆದುಕೊಂಡಿರದ ಮಾಲಕರು ಅ.20 ರಂದು ಅಗತ್ಯ ಕೆಲಸಕ್ಕಾಗಿ ಬೆಂಗಳೂರಿಗೆ ತೆರಳಿದ್ದರು.
ಕೆಲಸದ ಒತ್ತಡದ ನಡುವೆ ಅ.23 ರಂದು ಊರಿಗೆ ವಾಪಾಸು ಆಗಿದ್ದು ರಾತ್ರಿ ಸುಮಾರು 8 ಗಂಟೆಗೆ ಕೋಡಿಮಜಲಿನ ಮನೆಗೆ ಬಂದಿದ್ದರು. ಕೀ ಕೊಡುವಂತೆ ಆತನಿಗೆ ಪೋನ್ ಮಾಡಿದಾಗ ಆಲಿ ಫೋನ್ ಆಫ್ ಆಗಿಯೇ ಇತ್ತು. ಸಂಶಯದಿಂದ ಮನೆಯ ಹಿಂಬದಿಯ ಕಿಟಕಿಯಲ್ಲಿ ಇಣುಕಿ ನೋಡಿದಾಗ ಕೋಣೆಯ ಬಾಗಿಲು ತೆರದುಕೊಂಡಿತ್ತು, ಕಪಾಟಿನ ಲಾಕರ್ ಮುರಿದು ಅದರಲ್ಲಿದ್ದ ಸೊತ್ತುಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿರುವುದು ಕಂಡುಬಂದಿತ್ತು.
ಕೂಡಲೇ ಗ್ರಾಮಾಂತರ ಪೋಲಿಸರಿಗೆ ದೂರು ನೀಡಿದ್ದು ಪೋಲೀಸರ ಸಮಕ್ಷಮದಲ್ಲಿ ಮನೆಯ ಬಾಗಿಲು ಮುರಿದು ನೋಡಿದಾಗ ಮೊಹಮ್ಮದ್ ಅವರು ಕಪಾಟಿನಲ್ಲಿರಿಸಿದ್ದ ರೂ. 25 ಲಕ್ಷ ಹಾಗೂ ಅವರ ತಂದೆಯ ಕಪಾಟಿನಲ್ಲಿರಿಸಿದ್ದ ರೂ.2,50,000 ಹಾಗೂ 4,96,000 ರೂ. ಮೌಲ್ಯದ 24 ಗ್ರಾಂ ತೂಕದ ಬ್ರಾಸ್ಲೆಟ್, 16 ಗ್ರಾಂ ತೂಕದ ಎರಡು ಚಿನ್ನದ ಉಂಗುರ, 40 ಗ್ರಾಂ ತೂಕದ ಚಿನ್ನದ ಬಲೆಗಳು, 8 ಗ್ರಾಂ ತೂಕದ ಚಿನ್ನದ ಬೆಂಡೋಲೆ, 32 ಗ್ರಾಂ ತೂಕದ ಚಿನ್ನದ ಮಾಲೆ, 4 ಗ್ರಾಂ ತೂಕದ ಚಿನ್ನದ ಸರ ಕಳವು ಮಾಡಿದ್ದಾರೆ. ಘಟನಾ ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಇನ್ಸ್ ಪೆಕ್ಟರ್ ಶಿವಕುಮಾರ್, ಎಸ್.ಐ ಹರೀಶ್ ಹಾಗೂ ಬೆರಳಚ್ಚು ತಜ್ಞರು, ಶ್ವಾನದಳದವರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
Posted by Vidyamaana on 2023-09-23 07:45:36 |
ಉಳ್ಳಾಲ: ಕೋಟೆಕಾರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಜ್ವರಕ್ಕೆ ಚಿಕಿತ್ಸೆಗೆಂದು ತೆರಳಿದ್ದ ತಾಯಿ, ಮಗಳಿಗೆ ಶಿಲೀಂದ್ರ ಲೇಪಿತ ಮಾತ್ರೆಗಳನ್ನು ನೀಡಿದ ಘಟನೆ ನಡೆದಿದ್ದು, ದೂರಿಗೆ ಸ್ಪಂದಿಸಿದ ಜಿಲ್ಲಾ ಆರೋಗ್ಯಾಧಿಕಾರಿ ತಕ್ಷಣ ಅಲ್ಲಿಗೆ ನೀಡಿರುವ ಪ್ಯಾರಾ ಸಿಟಮಾಲ್ ಮಾತ್ರೆಗಳನ್ನ ಹಿಂಪಡೆದಿದ್ದಾರೆ.
ಕೋಟೆಕಾರು, ಬೀರಿ ಬಳಿ ಇರುವ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ನಿನ್ನೆ ಮಧ್ಯಾಹ್ನ ಕೆ.ಸಿ ನಗರ ನಿವಾಸಿ ಮಹಿಳೆಯೊಬ್ಬರು ತನ್ನ ಆರನೇ ತರಗತಿಯ ಮಗಳು ರಾಫಿಯಾ ಜೊತೆ ಜ್ವರಕ್ಕೆ ಚಿಕಿತ್ಸೆ ಪಡೆಯಲು ತೆರಳಿದ್ದರು. ಇಬ್ಬರನ್ನೂ ಪರೀಕ್ಷೆ ನಡೆಸಿದ ವೈದ್ಯರು ಎರಡು ದಿವಸಗಳ ಔಷಧಿಗಳನ್ನ ನೀಡಿದ್ದಾರೆ. ಪ್ರಾಥಮಿಕ ಆರೋಗ್ಯ ಕೇಂದ್ರದೊಳಗೆ ಔಷಧಿ ಸೇವಿಸಲು ಮುಂದಾದಾಗ ಪ್ಯಾರಾ ಸಿಟಮಾಲ್ ಮಾತ್ರೆಯ ಬಣ್ಣ ಬದಲಾಗಿ ಶಿಲೀಂದ್ರ ಆವರಿಸಿತ್ತು. ಈ ಬಗ್ಗೆ ವಿಚಾರಿಸಿದಾಗ ಆರೋಗ್ಯ ಕೇಂದ್ರದ ಸಿಬ್ಬಂದಿ ಎಲ್ಲಾ ಮಾತ್ರೆಗಳು ಹೀಗೇ ಇವೆ, ಏನಾಗುವುದಿಲ್ಲವೆಂದು ಬಾಲಿಶ ಉತ್ತರ ನೀಡಿದ್ದರಂತೆ.
ಆನಂತರ ಮಾಜಿ ಗ್ರಾಮ ಪಂಚಾಯತ್ ಸದಸ್ಯರೋರ್ವರು ಶಿಲೀಂದ್ರ ಆವರಿಸಿದ್ದ ಮಾತ್ರೆಯ ವೀಡಿಯೋ ತೆಗೆದು ಜಿಲ್ಲಾ ಆರೋಗ್ಯಾಧಿಕಾರಿಯ ವಾಟ್ಸಪ್ ಕಳಿಸಿದ್ದಾರೆ. ತಕ್ಷಣ ಸ್ಪಂದನೆ ನೀಡಿದ ಜಿಲ್ಲಾ ಆರೋಗ್ಯಾಧಿಕಾರಿ ಎಚ್.ಆರ್ ತಿಮ್ಮಯ್ಯ, ಕೋಟೆಕಾರು ಆರೋಗ್ಯ ಕೇಂದ್ರಕ್ಕೆ ನೀಡಿರುವ ಪ್ಯಾರಸೆಟಮೋಲ್ ಮಾತ್ರೆಗಳನ್ನು ಹಿಂದಕ್ಕೆ ತರಿಸಿಕೊಂಡಿದ್ದಾರೆ.
ಹೆಡ್ ಲೈನ್ ಕರ್ನಾಟಕಕ್ಕೆ ಪ್ರತಿಕ್ರಿಯೆ ನೀಡಿದ ಅವರು ಎರಡು ಬ್ಯಾಚ್ ನ ಪ್ಯಾರಾಸೆಟಮೋಲ್ ಮಾತ್ರೆಗಳಲ್ಲಿ ಕೆಲವು ಸ್ಟ್ರಿಪ್ ಗಳ ಮಾತ್ರೆಗಳಿಗೆ ಶಿಲೀಂದ್ರ ಆವರಿಸಿದೆ. 2025 ರ ಜನವರಿ ತಿಂಗಳ ವರೆಗೆ ಮಾತ್ರೆಗಳು ಬಳಕೆಗೆ ಯೋಗ್ಯವಾಗಿದ್ದರೂ ಮಾತ್ರೆಗಳ ವಿತರಣೆಯನ್ನ ನಿಲ್ಲಿಸಿ ಎಲ್ಲವನ್ನು ಹಿಂಪಡೆದಿದ್ದು ಅದನ್ನ ಬೆಂಗಳೂರಿಗೆ ಪರೀಕ್ಷೆಗೆ ಕಳಿಸಲಾಗುವುದು. ಜಿಲ್ಲೆಯ ಉಳಿದ ಪ್ರಾಥಮಿಕ ಆರೋಗ್ಯ ಕೇಂದ್ರದ ಪ್ಯಾರ ಸೆಟಮೋಲ್ ಮಾತ್ರೆಗಳನ್ನ ಹಿಂಪಡೆದು ಪರಿಶೀಲನೆ ನಡೆಸಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ತಿಳಿಸಿದ್ದಾರೆ.
Posted by Vidyamaana on 2023-12-29 11:19:52 |
ಚಿಕ್ಕಬಳ್ಳಾಪುರ: ಶೈಕ್ಷಣಿಕ ಪ್ರವಾಸದ ವೇಳೆ ವಿದ್ಯಾರ್ಥಿಯೊಂದಿಗೆ ಅಸಭ್ಯವಾಗಿ ವರ್ತಿಸಿ ಸುದ್ದಿಯಾಗಿದ್ದ ಜಿಲ್ಲೆಯ ಚಿಂತಾಮಣಿ ತಾಲೂಕಿನ ಸರ್ಕಾರಿ ಪ್ರೌಢ ಶಾಲೆಯ ಪ್ರಭಾರಿ ಮುಖ್ಯ ಶಿಕ್ಷಕಿ ಪುಪ್ಪಲತಾರನ್ನು ಸೇವೆಯಿಂದ ಅನುಮಾನತುಗೊಳಿಸಿ ಶಿಕ್ಷಣ ಇಲಾಖೆ ಆದೇಶಿಸಿದೆ.ಶಿಕ್ಷಕ ಪುಪ್ಪಲತಾ, ಇತ್ತೀಚೆಗೆ ಶಾಲೆಯಿಂದ ಕೈಗೊಂಡಿದ್ದ ಶೈಕ್ಷಣಿಕ ಪ್ರವಾಸದ ವೇಳೆ ಶಾಲೆಯ ಅಪ್ರಾಪ್ತ ವಯಸ್ಸಿನ ಬಾಲಕನೊಂದಿಗೆ ತೆಂಗಿನ ತೋಟಗಳ ಮಧ್ಯೆ ಪರಸ್ಪರ ಕಿಸ್ ಕೊಡುವ ಪೋಟೋಗಳನ್ನು ತನ್ನ ಮೊಬೈಲ್ ಮೂಲಕ ಸೆರೆ ಹಿಡಿದುಕೊಂಡಿದ್ದರು. ಅವು ಶಿಕ್ಷಕಿಯ ಮೊಬೈಲ್ ನಿಂದ ಸೋರಿಕೆಯಾಗಿ ಜಾಲತಾಣಗಳಲ್ಲಿ ವೈರಲ್ ಆಗಿತ್ತು.
ಶಿಕ್ಷಕಿ ವಿರುದ್ದ ಗಂಭೀರ ಆರೋಪ ಕೇಳಿ ಬಂದ ಬೆನ್ನಲೇ ಶಾಲೆಗೆ ಚಿಂತಾಮಣಿ ಕ್ಷೇತ್ರ ಶಿಕ್ಷಣಾಧಿಕಾರಿ ಉಮಾದೇವಿ ಭೇಟಿ ನೀಡಿದ್ದರು
Posted by Vidyamaana on 2023-09-15 16:11:05 |
ಬೆಂಗಳೂರು : ಪ್ರೇಮಿಗಳ ಖಾಸಗಿ ವಿಡಿಯೊ ಇಟ್ಟುಕೊಂಡು ಬ್ಲಾಕ್ಮೇಲ್ ಮಾಡಿದ ಜೋಡಿಯನ್ನು ಬಂಧಿಸಲಾಗಿದೆ.
ಎಂಬಿಎ ಪದವೀಧರೆ ವಿದ್ಯಾರ್ಥಿನಿಯೊಬ್ಬರಿಗೆ ಇವರೇ ರೂಮ್ ನೀಡಿ ಬ್ಲಾಕ್ಮೇಲ್ ಮಾಡಿರುವುದು ಪತ್ತೆಯಾಗಿದೆ.ನಯನಾ ಹಾಗೂ ಕಿರಣ್ ಬಂಧಿತರು. ಇವರಿಬ್ಬರೂ ಕೆಂಚನಾಪುರದಲ್ಲಿ ಶೆಟ್ಟಿ ಲಂಚ್ ಹೋಮ್ ಎಂಬ ಹೋಟೆಲ್ ನಡೆಸುತ್ತಿದ್ದರು.ಕೆಂಗೇರಿ ಮುಖ್ಯರಸ್ತೆಯಲ್ಲಿರುವ ಶೆಟ್ಟಿ ಲಂಚ್ ಹೋಮ್ ಹೋಟೆಲ್ ನಲ್ಲಿ ಪ್ರೇಮಿಗಳಿಗೆ ರೂಮ್ ನೀಡಲಾಗಿತ್ತು. ಆದ್ರೆ, ರೂಮ್ನಲ್ಲಿ ರಹಸ್ಯವಾಗಿ ಕ್ಯಾಮೆರಾ ಅಡಗಿಸಿ ಇಟ್ಟಿದ್ದರು. ಬಳಿಕ ನಯನಾ ಹಾಗೂ ಪಾರ್ಟರ್ ಕಿರಣ್ ಎನ್ನುವರು ಯುವತಿಗೆ ಬ್ಲ್ಯಾಕ್ ಮೇಲ್ ಮಾಡಿ ಹಣಕ್ಕೆ ಪೀಡಿಸುತ್ತಿದ್ದರು.ಒಂದು ಲಕ್ಷ ಹಣಕ್ಕೆ ನೀಡಬೇಕು. ಹಣ ಕೊಡದಿದ್ರೆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡ್ತೀನಿ. ನಿಮ್ಮ ಸಂಬಂಧಿಕರು ಹಾಗೂ ಸ್ನೇಹಿತರಿಗೆ ಕಳುಹಿಸುತ್ತೇನೆ ಎಂದು ಕಿರಣ್ ಬೆದರಿಕೆ ಹಾಕಿದ್ದ.
ನಯನಾ ಹಾಗೂ ಕಿರಣ್ ಜೊತೆಯಾಗಿ ಕೆಂಗೇರಿ ಮುಖ್ಯರಸ್ತೆಯಲ್ಲಿರುವ ಕೆಂಚನಾಪುರದಲ್ಲಿ ಶೆಟ್ಟಿ ಲಂಚ್ ಹೋಮ್ ಹೋಟೆಲ್ ಆರಂಭಿಸಿದ್ದರು. ಅದೇ ಹೋಟೆಲ್ಗೆ ನಯನಾ ಸಂಬಂಧಿ ಯುವತಿ(ಬ್ಲ್ಯಾಕ್ ಮೇಲ್ ಪ್ರಕರಣದ ಸಂತ್ರಸ್ಥೆ) ಆಗಾಗ ತನ್ನ ಪ್ರಿಯಕರ ಜೊತೆ ಬರುತ್ತಿದ್ದಳು. ವೇಳೆ ಹೋಟೆಲ್ ರೂಮ್ ನಲ್ಲಿ ಇರುವಂತೆ ಹೇಳಿದ್ದ ನಯನಾ, ಬಳಿಕ ಇಬ್ಬರ ಖಾಸಗಿ ವಿಡಿಯೋ ಚಿತ್ರೀಕರಣ ಮಾಡಿಕೊಂಡಿದ್ದಳು. ನಂತರ ಅವರೇ ರೂಮ್ ಕೊಟ್ಟು ಅವರೆ ಬೀಸಿದ್ದು, ಅಶ್ಲೀಲವಾಗಿ ಎಡಿಟ್ ಮಾಡಿ ಯುವತಿಗೆ ಆರೋಪಿ ಕಿರಣ್, ವಾಟ್ಸಪ್ ಮಾಡಿ ಒಂದು ಲಕ್ಷ ರೂಪಾಯಿಗೆ ಬೇಡಿಕೆ ಇಟ್ಟಿದ್ದ. ಹಣ ಕೊಡದಿದ್ದರೆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹಾಕೋದಾಗಿ ಬೆದರಿಸುತ್ತಿದ್ದ.ಇದರಿಂದ ಯುವತಿ ಹೆದರಿಕೊಂಡು ಚಂದ್ರಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಳು.
ಇದೀಗ ಈ ದೂರಿನ ಆಧಾರ ಮೇಲೆ ಪೊಲೀಸರು ನಯನಾ ಹಾಗೂ ಕಿರಣ್ನನ್ನು ಬಂಧಿಸಿದ್ದಾರೆ. ಅಲ್ಲದೇ ಮೊಬೈಲ್ ವಶಕ್ಕೆ ಪಡೆದು ಯುವತಿಯ ವಿಡಿಯೋ ಡಿಲೀಟ್ ಮಾಡಿದ್ದಾರೆ.
Posted by Vidyamaana on 2023-04-09 10:24:06 |
ಉಪ್ಪಿನಂಗಡಿ: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಉಪ್ಪಿನಂಗಡಿ ಬ್ಲಾಕ್ ಸಮಿತಿ ವತಿಯಿಂದ ಎಚ್.ಎಂ ಹಾಲ್ ನಲ್ಲಿ ಏ 09 ರಂದು ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್.ಡಿ.ಪಿ.ಐ ಉಪ್ಪಿನಂಗಡಿ ಬ್ಲಾಕ್ ಸಮಿತಿ ಅಧ್ಯಕ್ಷರಾದ ಮುಸ್ತಫಾ ಲತೀಫಿ ವಹಿಸಿದರು. ಎಸ್.ಡಿ.ಪಿ.ಐ ಪುತ್ತೂರು ವಿಧಾನ ಸಭಾ ಕ್ಷೇತ್ರ ಸಮಿತಿ ಅದ್ಯಕ್ಷರಾದ ಇಬ್ರಾಹಿಮ್ ಸಾಗರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಎಸ್.ಡಿ.ಪಿ.ಐ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿ ಚುನಾವಣ ಉಸ್ತುವಾರಿಯಾದ ಸಿದ್ದೀಕ್ ಕೆಎ ಚುನಾವಣ ರಣತಂತ್ರಗಳ ಬಗ್ಗೆ ವಿವರಿಸಿದರು. ಝಕರಿಯಾ ಕೊಡಿಪ್ಪಾಡಿ ಕಾರ್ಯಕ್ರಮ ನಿರೂಪಿಸಿದರು.