ಕಾರು ಚಾಲನೆಯ ತರಬೇತಿ ನೀಡುವ ವೇಳೆ ಅಸಭ್ಯವಾಗಿ ವರ್ತಿಸಿದ್ದ ಆರೋಪ:ಅಣ್ಣಪ್ಪ ಮಾಲಕತ್ವದ ಮಾರುತಿ ಡ್ರೈವಿಂಗ್ ಸ್ಕೂಲ್‌ನ ಪರವಾನಗಿ ರದ್ದು

ಸುದ್ದಿಗಳು News

Posted by vidyamaana on 2024-07-23 21:09:49 |

Share: | | | | |


ಕಾರು ಚಾಲನೆಯ ತರಬೇತಿ ನೀಡುವ ವೇಳೆ ಅಸಭ್ಯವಾಗಿ ವರ್ತಿಸಿದ್ದ ಆರೋಪ:ಅಣ್ಣಪ್ಪ ಮಾಲಕತ್ವದ  ಮಾರುತಿ ಡ್ರೈವಿಂಗ್ ಸ್ಕೂಲ್‌ನ ಪರವಾನಗಿ ರದ್ದು

ಬೆಂಗಳೂರು : ಬಸವೇಶ್ವರನಗರದ ಮಾರುತಿ ಡ್ರೈವಿಂಗ್‌ ಸ್ಕೂಲ್‌ನ ಪರವಾನಗಿ ಹಾಗೂ ಅದೇ ಶಾಲೆಯ ತರಬೇತುದಾರನ ಚಾಲನಾ ಪರವಾನಗಿಯನ್ನು (ಡಿಎಲ್‌) ಸಾರಿಗೆ ಮತ್ತು ರಸ್ತೆ ಸುರಕ್ಷತಾ ಇಲಾಖೆ ರದ್ದುಗೊಳಿಸಿದೆ. 

ಯುವತಿಗೆ ಕಾರು ಚಾಲನೆಯ ತರಬೇತಿ ನೀಡುವ ವೇಳೆ ಅಸಭ್ಯವಾಗಿ ವರ್ತಿಸಿದ್ದ ಆರೋಪದ ಅಡಿ ಕಾರು ತರಬೇತಿದಾರನ ವಿರುದ್ಧ ಬಸವೇಶ್ವರನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣ ದಾಖಲಾದ ಬೆನ್ನಲ್ಲೇ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರ ಸೂಚನೆಯಂತೆ ಸಾರಿಗೆ ಇಲಾಖೆ ಕ್ರಮ ಕೈಗೊಂಡಿದೆ.

ನಗರದ ಯಾವುದೇ ಡ್ರೈವಿಂಗ್ ಶಾಲೆಯಲ್ಲೂ ಈ ರೀತಿಯ ಘಟನೆಗಳು ನಡೆಯಬಾರದು. ಈ ನಿಟ್ಟಿನಲ್ಲಿ ಬಿಗಿ ಕ್ರಮ ಕೈಗೊಳ್ಳಬೇಕು ಎಂದು ಸಚಿವರು ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಮಹಾಲಕ್ಷ್ಮೀಪುರದ 18 ವರ್ಷದ ಯುವತಿ ನೀಡಿದ್ದ ದೂರು ಆಧರಿಸಿ, ಬಸವೇಶ್ವರನಗರದ ಮಾರುತಿ ಡ್ರೈವಿಂಗ್‌ ಸ್ಕೂಲ್‌ನ ತರಬೇತುದಾರ ಅಣ್ಣಪ್ಪ ಅವರ ವಿರುದ್ಧ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಏನಿದು ಪ್ರಕರಣ?:‌

ದೂರು ನೀಡಿದ್ದ ಯುವತಿ ಕಾರು ಚಾಲನೆ ಕಲಿಯಲು ಮಾರುತಿ ಡ್ರೈವಿಂಗ್‌ ಸ್ಕೂಲ್‌ಗೆ ಸೇರಿದ್ದರು. ಅಣ್ಣಪ್ಪ ಎಂಬಾತ ಕಾರು ಚಾಲನೆ ಬಗ್ಗೆ ತರಬೇತಿ ನೀಡಿದ್ದರು. ಒಂದು ತಿಂಗಳ ಕೋರ್ಸ್‌ ಮುಕ್ತಾಯವಾದ ಮೇಲೆ ಅಣ್ಣಪ್ಪ, ನಿಮ್ಮ ಮನೆಯ ಕಾರಿನಲ್ಲೇ ಪರಿಪೂರ್ಣವಾಗಿ ಚಾಲನೆ ಬಗ್ಗೆ ಹೇಳಿಕೊಡುತ್ತೇನೆ. ಒಂದು ಗಂಟೆಯ ವಿಶೇಷ ಕ್ಲಾಸ್‌ಗೆ ₹750 ಕೊಡಬೇಕು ಎಂದು ಯುವತಿಯನ್ನು ಕೇಳಿಕೊಂಡಿದ್ದರು. ಯುವತಿ 15 ದಿನಗಳ ವಿಶೇಷ ಕ್ಲಾಸ್‌ಗೆ ಅಣ್ಣಪ್ಪ ಅವರಿಗೆ ₹10,500 ಪಾವತಿಸಿದ್ದರು. ಅದರಂತೆ ಅಣ್ಣಪ್ಪ ವಿಶೇಷ ತರಬೇತಿ ಆರಂಭಿಸಿದ್ದರು ಎಂದು ಪೊಲೀಸರು ಹೇಳಿದರು.

ಪ್ರತಿದಿನ ಯುವತಿಯ ಮನೆ ಬಳಿ ಬಂದು ಆಕೆಯ ಕಾರಿನಲ್ಲೇ ಅಣ್ಣಪ್ಪ ಚಾಲನೆ ತರಬೇತಿ ನೀಡುತ್ತಿದ್ದರು. ಜುಲೈ 7ರಂದು ಬೆಳಿಗ್ಗೆ 6 ಗಂಟೆ ಸುಮಾರಿಗೆ ಯುವತಿ ಮನೆ ಬಳಿ ಬಂದಿದ್ದ ಅಣ್ಣಪ್ಪ, ಯುವತಿಯನ್ನು ಕಾರಿನಲ್ಲಿ ಕರೆದುಕೊಂಡು ಚಾಲನೆ ಬಗ್ಗೆ ಹೇಳಿಕೊಡಲು ಮುಂದಾಗಿದ್ದರು. ಬಸವೇಶ್ವರ ನಗರದ ನ್ಯಾಷನಲ್‌ ಶಾಲೆಯ ಮೇಲ್ಸೇತುವೆಯಲ್ಲಿ ತೆರಳುವಾಗ, ಯುವತಿ ಕಾರು ಚಾಲನೆ ಮಾಡುತ್ತಿದ್ದರು. ಆಗ ಅಣ್ಣಪ್ಪ ಅಸಭ್ಯವಾಗಿ ವರ್ತಿಸಿದ್ದರು ಎಂದು ಪೊಲೀಸರು ತಿಳಿಸಿದರು.

ತರಬೇತುದಾರನ ಅಸಭ್ಯ ವರ್ತನೆಯಿಂದ ಗಾಬರಿಗೊಂಡಿದ್ದ ಯುವತಿ ಕಾರನ್ನು ಮನೆಯತ್ತ ತಿರುಗಿಸಿದ್ದರು. ಅದಾದ ಮೇಲೆ ತರಬೇತುದಾರ ಸುಮ್ಮನಾಗಿದ್ದರು. ಅಣ್ಣಪ್ಪ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಯುವತಿ ಪೊಲೀಸರಿಗೆ ದೂರು ನೀಡಿದ್ದರು.

 Share: | | | | |


ರಾಜ್ಯ ಸರ್ಕಾರದ ಬೊಕ್ಕಸಕ್ಕೂ ಭರ್ಜರಿ ಕಿಕ್ ಕೊಟ್ಟ ಮದ್ಯಪ್ರಿಯರು

Posted by Vidyamaana on 2024-01-01 17:15:10 |

Share: | | | | |


ರಾಜ್ಯ ಸರ್ಕಾರದ ಬೊಕ್ಕಸಕ್ಕೂ ಭರ್ಜರಿ ಕಿಕ್ ಕೊಟ್ಟ ಮದ್ಯಪ್ರಿಯರು

ಬೆಂಗಳೂರು : ಹೊಸ ವರ್ಷವನ್ನು ಸಂಭ್ರಮದಿಂದ ಬರಮಾಡಿಕೊಂಡಿರುವ ಮದ್ಯಪ್ರಿಯರು ರಾಜ್ಯ ಸರ್ಕಾರದ ಬೊಕ್ಕಸಕ್ಕೂ ಭರ್ಜರಿ ಕಿಕ್ ಕೊಟ್ಟಿದ್ದಾರೆ. 2023ರ ಕೊನೇ ದಿನ ಡಿ.31ರಂದು ರಾಜ್ಯಾದ್ಯಂತ ಮದ್ಯ ಮಾರಾಟದಿಂದ ಸರ್ಕಾರದ ಬೊಕ್ಕಸಕ್ಕೆ ಬರೋಬ್ಬರಿ 193 ಕೋಟಿ ರೂಪಾಯಿ ಹರಿದು ಬಂದಿದೆ.ಮಾಮೂಲಿ ದಿನದಲ್ಲಿ ಒಂದು ದಿನಕ್ಕೆ ರಾಜ್ಯದ ಅಬಕಾರಿ ಇಲಾಖೆಗೆ ಸುಮಾರು 90 ಕೋಟಿ ಆದಾಯ ಬರುತ್ತಾ ಇತ್ತು. ಆದರೆ ನ್ಯೂ ಇಯರ್ ಸೆಲೆಬ್ರೇಷನ್ ಹಿನ್ನೆಲೆಯಲ್ಲಿ ಒಂದೇ ದಿನದಲ್ಲಿ ಅಬಕಾರಿ ಇಲಾಖೆ ಆದಾಯ ದುಪ್ಪಟ್ಟು ಏರಿಕೆಯಾಗಿದೆ.


ಕಳೆದ ಡಿಸೆಂಬರ್ 23ರಿಂದ ಡಿಸೆಂಬರ್ 31ರವರೆಗೆ 1072 ಕೋಟಿ ರೂಪಾಯಿ ಆದಾಯ ರಾಜ್ಯ ಸರ್ಕಾರಕ್ಕೆ ಬಂದಿದೆ. ಡಿಸೆಂಬರ್ 23ರಿಂದ ಡಿಸೆಂಬರ್ 31ರವರೆಗೂ IML ಲಿಕ್ಕರ್‌ನಲ್ಲಿ ಒಟ್ಟು 22.2 ಲಕ್ಷದ ಬಾಕ್ಸ್ ಮಾರಾಟವಾಗಿದೆ. 22.2 ಲಕ್ಷ ಬಾಕ್ಸ್ ಸೆಲ್ ಆಗಿರುವುದರಿಂದ ಒಟ್ಟು 900 ಕೋಟಿ ರೂಪಾಯಿ ಆದಾಯ‌ ಬಂದಿದೆ. ನ್ಯೂ ಇಯರ್ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಬಿಯರ್ 14.೦7 ಲಕ್ಷ ಬಾಕ್ಸ್ ಸೇಲ್ ಮಾಡಲಾಗಿದೆ. ಬಿಯರ್ ಮಾರಾಟದಿಂದಲೇ ಸುಮಾರು 170 ಕೋಟಿರೂಪಾಯಿ ಆದಾಯ ಸರ್ಕಾರದ ಬೊಕ್ಕಸಕ್ಕೆ ಬಂದಿದೆ.ಇನ್ನು ಕಳೆದ ವರ್ಷಕ್ಕೆ ಹೋಲಿಕೆ ಮಾಡಿದ್ರೆ ಬರೋಬ್ಬರಿ 2900 ಕೋಟಿ ರೂಪಾಯಿ ಹೆಚ್ಚುವರಿ ಆದಾಯ ಅಬಕಾರಿ ಇಲಾಖೆಗೆ ಬಂದಿದೆ. ಅಂದ್ರೆ ಡಿಸೆಂಬರ್ ತಿಂಗಳಲ್ಲಿ ಬರೋಬ್ಬರಿ ಮೂರು ಸಾವಿರ ಕೋಟಿ ರೂಪಾಯಿ ಆದಾಯ ಬಂದಿದ್ದು, ಕಳೆದ ವರ್ಷಕ್ಕೆ ಹೋಲಿಸಿದ್ರೆ ಬಿಯರ್ ಮಾರಾಟದಲ್ಲಿ 15 ಪರ್ಸೆಂಟ್ ಏರಿಕೆ ಕಂಡಿದೆ.

ವಿದ್ಯಾಮಾತಾ ಅಕಾಡೆಮಿಯ ಮುಕುಟಕ್ಕೆ ಮತ್ತೊಂದು ರಾಜ್ಯ ಪ್ರಶಸ್ತಿಯ ಗರಿ

Posted by Vidyamaana on 2024-01-22 21:36:16 |

Share: | | | | |


ವಿದ್ಯಾಮಾತಾ ಅಕಾಡೆಮಿಯ ಮುಕುಟಕ್ಕೆ ಮತ್ತೊಂದು ರಾಜ್ಯ ಪ್ರಶಸ್ತಿಯ ಗರಿ

ಪುತ್ತೂರು /ಸುಳ್ಯ :ಕರಾವಳಿ ಭಾಗದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಮತ್ತು ಗ್ರಾಮೀಣ ವಿದ್ಯಾರ್ಥಿಗಳಿಗೆ ಉದ್ಯೋಗ ಕೌಶಲ್ಯತೆಗಳ ತರಬೇತಿಗಳ ಮೂಲಕ ಸಾವಿರಾರು ವಿದ್ಯಾರ್ಥಿಗಳ ಬಾಳಿಗೆ ಬೆಳಕಾದ ಪ್ರತಿಷ್ಠಿತ ತರಬೇತಿ ಸಂಸ್ಥೆಯಾದ ವಿದ್ಯಾಮಾತಾ ಅಕಾಡೆಮಿಗೆ 2024ರ ಸಾಲಿನ ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ವತಿಯಿಂದ ಕೊಡಲ್ಪಡುವ "ರಾಜ್ಯ ಯುವ ಸಾಂಘಿಕ" ಪ್ರಶಸ್ತಿಯು ಲಭಿಸಿದೆ.

ಸವಣೂರಿನಲ್ಲಿ ನಡೆಯುತ್ತಿರುವ ಯುವಜನ ಮೇಳದಲ್ಲಿ ಸಂಸದರಾದ ನಳಿನ್ ಕುಮಾರ್ ಕಟೀಲ್ ಮತ್ತು ಸುಳ್ಯ ಶಾಸಕಿ ಕುಮಾರಿ ಭಾಗೀರತಿ ಮುರುಳ್ಯ ರವರು ಪ್ರಶಸ್ತಿಯನ್ನು ವಿದ್ಯಾಮಾತಾ ಅಕಾಡೆಮಿಯ ಆಡಳಿತ ನಿರ್ದೇಶಕರಾದ ಭಾಗ್ಯೇಶ್ ರೈ ರವರಿಗೆ ಪ್ರಧಾನ ಮಾಡಿದರು. ಹತ್ತು ಹಲವಾರು ಪ್ರಶಸ್ತಿಗಳೊಂದಿಗೆ ಕಳೆದ 2023ರ ಸಾಲಿನ "ರಾಜ್ಯ ಶಿಕ್ಷಣ ಸೇವಾ ರತ್ನ", "ಮಂದಾರ", ಪ್ರಶಸ್ತಿಗಳೊಂದಿಗೆ ರಾಜ್ಯಮಟ್ಟದ "ರಾಜ್ಯ ಯುವ  ಸಾಂಘಿಕ" ಪ್ರಶಸ್ತಿಯನ್ನು ವಿದ್ಯಾಮಾತಾ ಅಕಾಡೆಮಿಯು ಮುಡಿಗೇರಿಸಿಕೊಂಡಿದೆ. ಕರಾವಳಿ ಭಾಗದಲ್ಲಿ 5 ವರ್ಷದಿಂದ 40 ವರ್ಷದ ವರೆಗಿನವರಿಗೆ ಉದ್ಯೋಗ ಕೌಶಲ್ಯತೆ,  ಶಿಕ್ಷಣ ಮೌಲ್ಯ, ವಿವಿಧ ನೇಮಕಾತಿಗಳಿಗೆ ತರಬೇತಿ,  ಖಾಸಗಿ ಉದ್ಯೋಗಗಳ ನೇರ ಸಂದರ್ಶನಗಳನ್ನು ಒಂದೇ ಸೂರಿನಡಿಯಲ್ಲಿ ಕೊಡುವ ಏಕೈಕ ಸಂಸ್ಥೆ ಎಂಬ ಗರಿಮೆ ವಿದ್ಯಾಮಾತಾ ಅಕಾಡೆಮಿಗೆ ಇದೆ. "ಅತ್ಯಂತ ಕಷ್ಟಪಟ್ಟು ಬೆಳೆಸಿದ ಸಂಸ್ಥೆಯನ್ನು ಸಾಮಾಜಿಕವಾಗಿ ಗುರುತಿಸುತ್ತಿರುವುದು ಅತ್ಯಂತ ಖುಷಿ ಕೊಟ್ಟಿದೆ" ಎಂದು ಭಾಗ್ಯೇಶ್ ರೈ ಅವರು ಸಂತಸವನ್ನು ಹಂಚಿಕೊಂಡಿದ್ದಾರೆ.

ಕೇರಳ ರಾಜ್ಯ ಲಾಟರಿ ಮಾರಾಟ: ಇಬ್ಬರ ಬಂಧನ

Posted by Vidyamaana on 2024-09-02 07:48:04 |

Share: | | | | |


ಕೇರಳ ರಾಜ್ಯ ಲಾಟರಿ ಮಾರಾಟ: ಇಬ್ಬರ ಬಂಧನ

ಚನ್ನಪಟ್ಟಣ: ಕೇರಳ ರಾಜ್ಯ ಲಾಟರಿ ಟಿಕೆಟ್ ಮಾರಾಟ ಮಾಡುತ್ತಿದ್ದ ಇಬ್ಬರನ್ನು ನಗರದ ಪೂರ್ವ ಪೊಲೀಸ್ ಠಾಣೆ ಪೊಲೀಸರು ಶನಿವಾರ ಬಂಧಿಸಿ ಸಾವಿರಾರು ರೂಪಾಯಿ ಮೌಲ್ಯದ ಲಾಟರಿ ಟಿಕೆಟ್ ವಶಪಡಿಸಿಕೊಂಡಿದ್ದಾರೆ.

ನಗರದ ಎಂ.ಜಿ.ರಸ್ತೆ ನಿವಾಸಿ ನಾಗೇಶ್(50) ಹಾಗೂ ಬಿ.ಎಂ.ಸ್ಟ್ರೀಟ್ ನಿವಾಸಿ ಸೈಯದ್ ಮುನಾವರ್(35) ಬಂಧಿತ ಆರೋಪಿಗಳು.

ಬೆಂಗಳೂರಿನಲ್ಲಿ ಖತರ್ನಾಕ್ ಹ್ಯಾಕರ್ ಲಕ್ಷ್ಮೀಪತಿ ಬಂಧನ; 4.16 ಕೋಟಿ ರೂ. ಮೌಲ್ಯದ ವಸ್ತುಗಳು ವಶಕ್ಕೆ

Posted by Vidyamaana on 2023-09-12 20:31:24 |

Share: | | | | |


ಬೆಂಗಳೂರಿನಲ್ಲಿ ಖತರ್ನಾಕ್ ಹ್ಯಾಕರ್ ಲಕ್ಷ್ಮೀಪತಿ ಬಂಧನ; 4.16 ಕೋಟಿ ರೂ. ಮೌಲ್ಯದ ವಸ್ತುಗಳು ವಶಕ್ಕೆ

ಬೆಂಗಳೂರು: ಗಿಫ್ಟ್‌ ವೋಚರ್‌ ವೆಬ್‌ಸೈಟ್‌ ಹ್ಯಾಕ್ ಮಾಡಿ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನ, ಬೆಳ್ಳಿ ಹಾಗೂ ನಗದನ್ನು ಲಪಟಾಯಿಸಿದ್ದ (cyber crime) ಹ್ಯಾಕರ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಗ್ರಾಹಕರಿಗೆ ಕೊಡುವ ಆನ್‌ಲೈನ್‌ ಗಿಫ್ಟ್‌ ವೋಚರ್‌ಗಳನ್ನು ಹ್ಯಾಕ್‌ ಮಾಡಿ ತನ್ನ ಖಾತೆಗೆ ವರ್ಗಾವಣೆ ಮಾಡಿಕೊಂಡು ಮೋಸ ಮಾಡುತ್ತಿದ್ದ ಯುವಕ ಸೆರೆಯಾಗಿದ್ದು, ಆತನಿಂದ 11 ಲಕ್ಷ ನಗದು, ಚಿನ್ನ, ಬೆಳ್ಳಿ ಗಟ್ಟಿ, ಏಳು ಬೈಕ್‌ ಸೇರಿ 4.16 ಕೋಟಿ ರೂ.ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ.


ಸೀಮಾಂಧ್ರದ ಚಿತ್ತೂರು ಮೂಲದ ಲಕ್ಷ್ಮೀಪತಿ ಬಂಧಿತ ಆರೋಪಿ. ಒಂಗೋಲು ಐಐಐಟಿ (IIIT Ongole) ಸಂಸ್ಥೆಯ ಬಿ.ಟೆಕ್ ಪದವೀಧರನಾಗಿರುವ ಈತ ತನ್ನ ನೈಪುಣ್ಯವನ್ನು ವಂಚನೆಗೆ ಬಳಸಿದ್ದಾನೆ. ಗ್ರಾಹಕರಿಗೆ ಕೊಡುವ ವೋಚರ್‌ಗಳು ಹ್ಯಾಕ್ ಆಗಿರುವ ಬಗ್ಗೆ ರಿವಾರ್ಡ್‌ 360 ಸಂಸ್ಥೆಯಿಂದ ಆಗ್ನೇಯ ಸೈಬರ್ ಸೆನ್ ಪೊಲೀಸ್‌ ಠಾಣೆಗೆ ದೂರು ನೀಡಲಾಗಿತ್ತು.


ತನಿಖೆ ವೇಳೆ ಆಂಧ್ರ ಮೂಲದ ವ್ಯಕ್ತಿ ಕೃತ್ಯ ಎಸಗಿರುವುದು ತಿಳಿದುಬಂದಿತ್ತು. ಹೀಗಾಗಿ ಆರೋಪಿ ಲಕ್ಷ್ಮೀಪತಿಯನ್ನು ಪೊಲೀಸರು ಬಂಧಿಸಿ, ಆತನಿಂದ 3.40 ಕೋಟಿ ರೂ. ಮೌಲ್ಯದ 5 ಕೆ.ಜಿ ಚಿನ್ನ, 21.80 ಲಕ್ಷ ರೂ. ಮೌಲ್ಯದ 27.250 ಕೆ.ಜಿ ಬೆಳ್ಳಿ, 11 ಲಕ್ಷ ರೂ., ಪ್ಲಿಫ್ ಕಾರ್ಟ್ ವ್ಯಾಲೆಟ್‌ನ 26 ಲಕ್ಷ ರೂ., ಅಮೆಜಾನ್ ವ್ಯಾಲೆಟ್‌ನ 3.50 ಲಕ್ಷ ರೂ., 7 ದ್ವಿಚಕ್ರ ವಾಹನ ಸೇರಿ ಒಟ್ಟು 4.16 ಕೋಟಿ ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ. ಈ ಬಗ್ಗೆ ಆಗ್ನೇಯ ಸಿಇಎನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೊಬೈಲ್​​ ಫೋನ್​​ ಕಳೆದು ಹೋದ್ರೆ ಗಾಬರಿ ಆಗ್ಬೇಡಿ

Posted by Vidyamaana on 2023-09-21 20:47:54 |

Share: | | | | |


ಮೊಬೈಲ್​​ ಫೋನ್​​ ಕಳೆದು ಹೋದ್ರೆ ಗಾಬರಿ ಆಗ್ಬೇಡಿ

   ಮೊಬೈಲ್​​ ಕಳೆದು ಹೋದ ತಕ್ಷಣ ನಮಗಾಗುವ ಗಾಬರಿ ಅಷ್ಟಿಷ್ಟಲ್ಲ. ಕೇವಲ ದುಬಾರಿ ಬೆಲೆ ವಸ್ತು ಎನ್ನುವುದಕ್ಕಿಂತಲೂ ಅದರಲ್ಲಿರುವ ಸಂಪರ್ಕ ಸಂಖ್ಯೆಗಳು, ಒಡನಾಡಿಗಳ ಜೊತೆಗಿರುವ ಫೋಟೋಗಳು ಮತ್ತು ಖಾಸಗಿ ಮಾಹಿತಿಗಳು ಸೋರಿಕೆಯಾಗುವ ಭಯ ಸಾಕಷ್ಟು ಕಾಡುತ್ತಿರುತ್ತದೆ.ಮೊಬೈಲ್ ಕಳವಾದಾಗ ಅತ್ಯಂತ ಮುಖ್ಯ ಮಾಹಿತಿ ಮತ್ತು ನಮ್ಮ ಮೊಬೈಲ್​ ಡೇಟಾ ಸೋರಿಕೆಯಾಗುವ ಟೆನ್ಶನ್​ ತುಂಬಾನೆ ಇರುತ್ತೆ.ಆದ್ರೆ ಇನ್ಮುಂದೆ ನಿಮ್ಮ ಸ್ಮಾರ್ಟ್​ಫೋನ್ ಕಳೆದುಹೋದರೆ ಅಥವಾ ಕಳ್ಳತನವಾದರೆ ಮೊಬೈಲ್‌ ಅನ್ನು ಬ್ಲಾಕ್‌ ಮಾಡಲು ಕರ್ನಾಟಕ ಪೊಲೀಸ್‌ ಇಲಾಖೆ ಆರಂಭಿಸಿರುವ ಕರ್ನಾಟಕ ರಾಜ್ಯ ಪೊಲೀಸ್‌ ಆಯಪ್( KSP Application ) ಸಹಾಯ ಮಾಡಲಿದೆ. 


ನಿಮ್ಮ ಬಳಿ ಇನ್ನೊಂದು ಮೊಬೈಲ್‌ ಇದ್ದರೆ ಅಥವಾ ಮನೆಯವರದ್ದು, ಸ್ನೇಹಿತರ ಮೊಬೈಲ್‌ನಲ್ಲಿ ಈ ಆಯಪ್ ಅನ್ನು ಇನ್​ಸ್ಟಾಲ್ ಮಾಡಿ ಬ್ಲಾಕ್‌ ಮಾಡಿ ದೂರು ದಾಖಲಿಸಬಹುದು.

ಗಳೂರು ನಗರ ಪೊಲೀಸರು ತಮ್ಮ ಎಕ್ಸ್ (ಟ್ವಿಟ್ಟರ್) ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಜೊತೆಗೆ ಯಾವರೀತಿ ನೋಂದಣಿ ಮಾಡಬೇಕು ಎಂಬ ಬಗ್ಗೆ ವಿವರವಾಗಿ ತಿಳಿಸಿದ್ದಾರೆ.ಕೇಂದ್ರ ಸರ್ಕಾರ ಕೂಡ ಜನರ ಫೋನ್ ಮತ್ತು ಡೇಟಾ ಕಳ್ಳತನಕ್ಕೆ ಪರಿಹಾರ ಕಂಡುಹಿಡಿದಿದೆ. ಕೇಂದ್ರ ಸರ್ಕಾರ ಇತ್ತೀಚೆಗಷ್ಟೆ ಸಂಚಾರ್ ಸಾಥಿ ಪೋರ್ಟಲ್ ಅನ್ನು ಪ್ರಾರಂಭಿಸಸಿದದೆ. ಸಂಚಾರ್ ಸಾಥಿ ಪೋರ್ಟಲ್ ಅಡಿಯಲ್ಲಿ, ಬಳಕೆದಾರರು ತಮ್ಮ ಫೋನ್ ಅನ್ನು ಎಲ್ಲಿದೆ ಎಂದು ಹುಡುಕಬಹುದು ಅಥವಾ ಸ್ವಿಚ್ ಆಫ್ ಮಾಡಬಹುದು. ಆಯಪಲ್‌ ಐಫೋನ್​ನಲ್ಲಿರುವ ಫೈಂಡ್ ಮೈ ಫೋನ್ ವೈಶಿಷ್ಟ್ಯದಂತೆ ಇದು ಆಂಡ್ರಾಯ್ಡ್ ಫೋನ್​ನಲ್ಲಿ ಕಾರ್ಯನಿರ್ವಹಿಸಲಿದೆ.

ಚಿನ್ನದ ಹಬ್ಬ ಮುಳಿಯ ಚಿನ್ನೋತ್ಸವಕ್ಕೆ ಚಾಲನೆ

Posted by Vidyamaana on 2024-04-24 04:30:45 |

Share: | | | | |


ಚಿನ್ನದ ಹಬ್ಬ ಮುಳಿಯ ಚಿನ್ನೋತ್ಸವಕ್ಕೆ ಚಾಲನೆ

ಪುತ್ತೂರು : 24 ವರ್ಷಗಳ ಹಿಂದೆ ವಜ್ರರತ್ನಗಳ ಪ್ರದರ್ಶನ ಹಬ್ಬದ ಮೂಲಕ ಗ್ರಾಹಕರಿಗೆ ಹತ್ತಿರವಾದ ಪ್ರಸಿದ್ದ ಚಿನ್ನಾಭರಣ ಮಳಿಗೆಯಾದ ಪುತ್ತೂರಿನ ಮುಳಿಯ ಜ್ಯುವೆಲ್ಸ್ ನಲ್ಲಿ ಪ್ರತಿ ವರ್ಷ ನಡೆಯುವ ಚಿನ್ನೋತ್ಸವಕ್ಕೆ ಈ ಬಾರಿ ಚಿನ್ನದ ಹಬ್ಬ ” ಮುಳಿಯ ಚಿನ್ನೋತ್ಸವ” ಕ್ಕೆ ಎ.22 ರಂದು ಚಾಲನೆ ನೀಡಲಾಯಿತು.

ಮೇ.20ರ ತನಕ ನಡೆಯುವ ಈ ಚಿನ್ನೋತ್ಸವವನ್ನು ಪುತ್ತೂರು ವಿವೇಕಾನಂದ ಇಂಜಿನಿಯರಿಂಗ್ ಆಫ್ ಸಯನ್ಸ್ನ ಪ್ರೊ. ಡಾ. ಸೌಮ್ಯ ಅವರು ಉದ್ಘಾಟಿಸಿ ಚಾಲನೆ ನೀಡಿದರು. ಬಳಿಕ ಚಿನ್ನಾಭರಣದ ಹೊಸ ವಿನ್ಯಾಸಗಳನ್ನು ಅನಾವರಣಗೊಳಿಸಿದರು.

ಆಭರಣದಲ್ಲಿ ಹೊಸ ವಿನ್ಯಾಸದ ಆಕಾಂಕ್ಷೆಯನ್ನು ಮುಳಿಯ ಪೂರೈಸುತ್ತಿದೆ :


ಮುಳಿಯ ಚಿನ್ನೋತ್ಸವವನ್ನು ಉದ್ಘಾಟಿಸಿದ ವಿವೇಕಾನಂದ ಇಂಜಿನಿಯರಿಂಗ್ ಆಫ್ ಸಯನ್ಸ್ ಇದರ ಪ್ರೊ. ಡಾ. ಸೌಮ್ಯ ಅವರು ಮಾತನಾಡಿ ನನ್ನ ಸುಮಾರು 30 ವರ್ಷದ ಅನುಭವದಲ್ಲಿ ಮುಳಿಯ ಜ್ಯುವೆಲ್ಸ್ನೊಂದಿಗೆ ಉತ್ತಮ ಸಂಬಂಧವಿದೆ. ಯಾಕೆಂದರೆ ನಮ್ಮ ಕಟುಂಬ ಸಮೇತ ಇಲ್ಲಿನ ಗ್ರಾಹಕರಾಗಿದ್ದೇವೆ. ಇದಕ್ಕೆ ಕಾರಣ ಮುಳಿಯ ನಂಬಿಕೆಯನ್ನು ಉಳಿಸಿಕೊಂಡಿದೆ. ಇದರೊಂದಿಗೆ ಪ್ರತಿಯೊಬ್ಬರಿಗೂ ನನ್ನ ಆಭರಣ ಇತರರಿಗಿಂತ ಭಿನ್ನ ಹೊಸತನ ಹೊಸ ಶೈಲಿಯಲ್ಲಿರಬೇಕೆಂಬ ಆಸೆ ಇರುತ್ತದೆ. ಅದಕ್ಕೆ ತಕ್ಕಂತೆ ಮುಳಿಯ ಜ್ಯುವೆಲ್ಸ್ ಆ ಹೊಸತನದ ಆಕಾಂಕ್ಷೆಯನ್ನು ಪೂರೈಸುತ್ತಿದೆ ಎಂದ ಅವರು ಇದರ ಜೊತೆಗೆ ಸಿಬ್ಬಂದಿಗಳ ನಗುಮೊಗದ ಸೇವೆ ನಾವು ಚಿನ್ನಾಭರಣ ನೋಡಲು ಬಂದವರು ಖರೀದಿಸುವಷ್ಟರ ಮಟ್ಟಿಗೆ ಹೋಗುತ್ತೇವೆ ಎಂದರು



Leave a Comment: