ಜುಂಬಾ ಡ್ಯಾನ್ಸ್‌ ಮಾಡುತ್ತಲೇ ಹೃದಯಾಘಾತಕ್ಕೆ ಖ್ಯಾತ ಉದ್ಯಮಿ ಬಲಿ,ಸಾವಿನ ಕೊನೆ ಕ್ಷಣ ಸೆರೆ!

ಸುದ್ದಿಗಳು News

Posted by vidyamaana on 2024-07-23 06:33:29 | Last Updated by Vidyamaana on 2024-07-23 06:33:29

Share: | | | | |


ಜುಂಬಾ ಡ್ಯಾನ್ಸ್‌ ಮಾಡುತ್ತಲೇ ಹೃದಯಾಘಾತಕ್ಕೆ ಖ್ಯಾತ ಉದ್ಯಮಿ ಬಲಿ,ಸಾವಿನ ಕೊನೆ ಕ್ಷಣ ಸೆರೆ!

ಮುಂಬೈ :ಫಿಟ್ನೆಸ್ ಕಾಪಾಡಿಕೊಳ್ಳಲು ಹಲವರು ಜುಂಬಾ ಡ್ಯಾನ್ಸ್ ಮೊರೆ ಹೋಗುತ್ತಾರೆ. ಪ್ರತಿ ದಿನ ಜುಂಬಾ ಡ್ಯಾನ್ಸ್ ಕ್ಲಾಸ್‌ಗೆ ತೆರಳಿ ಬೆವರು ಹರಿಸುತ್ತಾರೆ. ಹೀಗೆ ಮಹಾರಾಷ್ಟ್ರದ ಉದ್ಯಮಿ ಕವಲ್ಜಿತ್ ಸಿಂಗ್ ಬಗ್ಗಾ ಫಿಟ್ನೆಸ್‌ಗಾಗಿ ಪ್ರತಿ ದಿನ ಜುಂಬಾ ಕ್ಲಾಸ್‌ಗೆ ತೆರಳಿ ಡ್ಯಾನ್ಸ್ ಮಾಡುತ್ತಾ ಬೆವರು ಹರಿಸುತ್ತಾರೆ.

ಇಂದು ಬೆಳಗ್ಗೆ ಜುಂಬಾ ಡ್ಯಾನ್ಸ್ ಮಾಡುತ್ತಿದ್ದಂತೆ ಉದ್ಯಮಿ ಕವಲ್ಜಿತ್ ಸಿಂಗ್ ಬಗ್ಗಾ ಹೃದಯಾಘಾತದಿಂದ ಕುಸಿದು ಬಿದ್ದಿದ್ದಾರೆ. ತಕ್ಷಣವೇ ಆಸ್ಪತ್ರೆ ದಾಖಲಿಸಿದರೂ ಉದ್ಯಮಿ ಬದುಕುಳಿಯಲಿಲ್ಲ.


ಛತ್ರಪತಿ ಸಂಭಾಜಿನಗರದ ನಿವಾಸಿಯಾಗಿರುವ ಅವಲ್ಜಿತ್ ಸಿಂಗ್ ಬಾಗ್ಗಾ ಪ್ರತಿದಿನ ಜುಂಬಾ ಡ್ಯಾನ್ಸ್ ಮಾಡುತ್ತಾರೆ. ಎಂದಿನಂತೆ ಇಂದೂ ಕೂಡ ಅವಲ್ಜಿತ್ ಸಿಂಗ್ ಬಾಗ್ಗಾ ಜುಂಬಾ ಡ್ಯಾನ್ಸ್‌ಗೆ ತೆರಳಿದ್ದಾರೆ. ಅವಲ್ಜಿತ್ ಸಿಂಗ್ ರೀತಿಯಲ್ಲಿ ಇತರ ಕೆಲವರು ಜುಂಬಾ ಡ್ಯಾನ್ಸ್ ಮಾಡುತ್ತಿದ್ದಾರೆ. ಜುಂಬಾ ಕ್ಲಾಸ್ ತೆರಳಿ 15 ನಿಮಿಷಗಳ ಕಾಲ ಡ್ಯಾನ್ಸ್ ಮಾಡಿದ್ದಾರೆ. ಹಲವರು ಇದೇ ಕ್ಲಾಸ್‌ನಲ್ಲಿ ಅವಲ್ಜಿತ್ ಸಿಂಗ್ ಜೊತೆ ಡ್ಯಾನ್ಸ್ ಮಾಡಿದ್ದಾರೆ.

ಕೊನೆಯ ಸಾಲಿನ ಬದಿಯಲ್ಲಿದ್ದ ಅವಲ್ಜಿತ್ ಸಿಂಗ್ ಡ್ಯಾನ್ಸ್ ಮಾಡುತ್ತಿದ್ದಂತೆ ಹೃದಯಾಘಾತವಾಗಿದೆ. ಡ್ಯಾನ್ಸ್ ಮಾಡಲು ಸಾಧ್ಯವಾಗದೆ ನಿಂತಿದ್ದಾರೆ. ಚೇತರಿಸಿಕೊಳ್ಳಲು ಕೆಲ ಕ್ಷಣ ನಿಂತಿದ್ದಾರೆ. ಇತರರು ಡ್ಯಾನ್ಸ್‌ನಲ್ಲಿ ತಲ್ಲೀನರಾಗಿದ್ದರು. ಆದರೆ ಅವಲ್ಜಿತ್ ಸಿಂಗ್ ಚೇತರಿಸಿಕೊಳ್ಳಲಿಲ್ಲ. ಕಾರಣ ತೀವ್ರ ಹೃದಯಾಘಾತದಿಂದ ಅವಲ್ಜಿತ್ ಕುಸಿದಿದ್ದಾರೆ. ಈ ವೇಳೆ ಮೆಲ್ಲನೆ ಕುಳಿತುಕೊಳ್ಳಲು ಪ್ರಯತ್ನಿಸಿದ್ದಾರೆ. ಆದರೆ ಸಾಧ್ಯವಾಗಿಲ್ಲ. ಅವಲ್ಜಿತ್ ಸಿಂಗ್ ಕುಸಿದು ಬೀಳುತ್ತಿದ್ದಂತೆ ಇತರರು ತಕ್ಷಣವೇ ನೆರವಿಗೆ ಧಾವಿಸಿದ್ದಾರೆ. ನೀರು ತಂದು ಕುಡಿಸುವ ಪ್ರಯತ್ನ ಮಾಡಿದ್ದಾರೆ. ಆದರೆ ಯಾವುದಕ್ಕೂ ಅವಲ್ಜಿತ್ ಸಿಂಗ್ ಸ್ಪಂದಿಸಿಲ್ಲ.

ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ

ಅವಲ್ಜಿತ್ ಎತ್ತಿಕೊಂಡು ವಾಹನದ ಮೂಲಕ ಆಸ್ಪತ್ರೆ ದಾಖಲಿಸಿದ್ದಾರೆ. ಆಸ್ಪತ್ರೆ ದಾಖಲಿಸುವ ಮೊದಲೇ ಅವಲ್ಜಿತ್ ಸಿಂಗ್ ಬಾಗ್ಗಾ ಪ್ರಾಣ ಪಕ್ಷಿ ಹಾರಿಹೋಗಿದೆ. ತಪಾಸಣೆ ನಡೆಸಿದ ವೈದ್ಯರು ಅವಲ್ಜಿತ್ ಸಿಂಗ್ ಮೃತಪಟ್ಟಿರುವುದಾಗಿ ಖಚಿತಪಡಿಸಿದ್ದಾರೆ.

ಜಿಮ್ ಅಭ್ಯಾಸದ ವೇಳೆ ಈ ರೀತಿ ಹೃದಯಾಘಾತಕ್ಕೆ ಕೆಲವರು ಪ್ರಾಣ ಕಳೆದುಕೊಂಡಿದ್ದಾರೆ. ಇತ್ತೀಚಗೆ ಹೃದಯಾಘಾತದ ಪ್ರಮಾಣ ಹೆಚ್ಚಾಗುತ್ತಿದೆ ಅನ್ನೋ ಮಾತುಗಳು ಕೇಳಿಬರುತ್ತಿದೆ. ಈ ಬೆಳವಣಿಗೆ ನಡುವೆ ಇದೀಗ ಉದ್ಯಮಿ ಅವಲ್ಜಿತ್ ಸಿಂಗ್ ಬಾಗ್ಗಾ ನಿಧನ ಸುದ್ದಿ ಆತಂಕ ಹೆಚ್ಚಿಸಿದೆ. ಉತ್ತಮ ಆರೋಗ್ಯ ಕಾಪಾಡಿಕೊಂಡಿದ್ದ ಕವಲ್ಜಿತ್ ಸಿಂಗ್ ದಿಢೀರ್ ನಿಧನ ಇದೀಗ ಮತ್ತೆ ಹಲವು ಚರ್ಚೆಗಳಿಗೆ ಗ್ರಾಸವಾಗಿದೆ.

 Share: | | | | |


ಪಿಡಿಓ ನೇಮಕಾತಿಗೆ ಅರ್ಜಿ ಆಹ್ವಾನಿಸಿದ ಪಂಚಾಯತ್ ರಾಜ್ ಇಲಾಖೆ- ವಿದ್ಯಾಮಾತಾ ಅಕಾಡೆಮಿಯಲ್ಲಿ ತರಬೇತಿ ಪ್ರಾರಂಭ

Posted by Vidyamaana on 2024-03-18 16:52:23 |

Share: | | | | |


ಪಿಡಿಓ ನೇಮಕಾತಿಗೆ ಅರ್ಜಿ ಆಹ್ವಾನಿಸಿದ ಪಂಚಾಯತ್ ರಾಜ್ ಇಲಾಖೆ- ವಿದ್ಯಾಮಾತಾ ಅಕಾಡೆಮಿಯಲ್ಲಿ ತರಬೇತಿ ಪ್ರಾರಂಭ

ಪುತ್ತೂರು  ಕರ್ನಾಟಕ ಸರಕಾರವು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಓ) 150 ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಪ್ರಾರಂಭಿಸಿದ್ದು ಅರ್ಜಿ ಆಹ್ವಾನಿಸಲಾಗಿದೆ. ಪ್ರತಿಷ್ಠಿತ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರವಾದ ವಿದ್ಯಾಮಾತಾ ಅಕಾಡೆಮಿಯಲ್ಲಿ ನೇರ ಮತ್ತು ಆನ್ಲೈನ್ ಮೂಲಕ ಲಿಖಿತ ಪರೀಕ್ಷಾ ತರಬೇತಿಯನ್ನು ಪ್ರಾರಂಭಿಸಲಿದ್ದು 18/03/2024 ಸೋಮವಾರದಿಂದ ಪ್ರವೇಶಾತಿ ಪ್ರಾರಂಭಗೊಳ್ಳಲಿದೆ.


ತರಬೇತಿ ಅವಧಿ ಎರಡುವರೆ ತಿಂಗಳು. ಕಳೆದ ಎರಡುವರೆ ವರ್ಷದಿಂದ ಪೊಲೀಸ್ ,ಅರಣ್ಯ ಇಲಾಖೆ, ಬ್ಯಾಂಕಿಂಗ್, ಕೆ.ಎಂ.ಎಫ್ ,ಶಿಕ್ಷಕರ ನೇಮಕಾತಿ ಸೇರಿದಂತೆ 116 ಎಷ್ಟು ಅಭ್ಯರ್ಥಿಗಳು ವಿದ್ಯಾಮಾತಾ ಅಕಾಡೆಮಿಯಲ್ಲಿ ತರಬೇತಿ ಪಡೆದು ಸರಕಾರಿ ಹುದ್ದೆಗಳನ್ನು ಏರಿರುತ್ತಾರೆ. ಕರ್ನಾಟಕ ಸರಕಾರವು ಇತ್ತೀಚೆಗೆ ನೇಮಕಾತಿ ಪ್ರಕ್ರಿಯೆಯನ್ನು ಆರಂಭಿಸಿರುವ ಗ್ರಾಮ ಆಡಳಿತ ಅಧಿಕಾರಿ(VAO) ಹುದ್ದೆಗಳಿಗೂ ಅಕಾಡೆಮಿಯಲ್ಲಿ ತರಬೇತಿ ಪ್ರಾರಂಭವಾಗಿದ್ದು, ಸದ್ಯ ಕರೆದಿರುವ ಪಿಡಿಓ ಹುದ್ದೆಗಳಿಗೆ ತರಬೇತಿಯನ್ನು ಪ್ರಾರಂಭಿಸಲಾಗುತ್ತಿದೆ.


ನೇರ ತರಗತಿಗಳು – ಬೆಳಗ್ಗೆ 9:30 ರಿಂದ ಮಧ್ಯಾಹ್ನ 1:00 ರವರೆಗೆ (ವಾರದ 5 ದಿನ) ಆನ್ಲೈನ್ ತರಗತಿಗಳು – ರಾತ್ರಿ 7:00 ರಿಂದ 8:00 ರವರೆಗೆ (ವಾರದ ಎಲ್ಲಾ ದಿನ) ಉದ್ಯೋಗಸ್ಥರಿಗೆ, ವಿದ್ಯಾರ್ಥಿಗಳಿಗೆ , ಗೃಹಿಣಿಯರಿಗಾಗಿ ಅನುಕೂಲವಾಗುವಂತೆ ನಡೆಯುತ್ತವೆ.


ಪಿಡಿಓ ನೇಮಕಾತಿಯ ಅರ್ಹತೆಗಳು :-

ವಿದ್ಯಾರ್ಹತೆ : ಯಾವುದೇ ಪದವಿ

ವೇತನ : 70,000 ವರೆಗೆ

ಹುದ್ದೆಗಳು :150

ವಯಸ್ಸಿನ ಮಿತಿ :18 ರಿಂದ 40 (ಸಾಮಾನ್ಯ 35 , ಒ.ಬಿ.ಸಿ 38 , SC,ST 40)

ನೇಮಕಾತಿ ಪ್ರಕ್ರಿಯೆ : ಸ್ಪರ್ಧಾತ್ಮಕ ಪರೀಕ್ಷೆಗಳ ಮೂಲಕ

ಅರ್ಜಿ ಪ್ರಾರಂಭ ದಿನಾಂಕ : 15/04/2024 ರಿಂದ 15/05/2024

ಅರ್ಜಿ ಸಲ್ಲಿಸಲು ಅವಶ್ಯಕ ದಾಖಲೆಗಳು: ಫೋಟೋ ,ಅಂಕಪಟ್ಟಿ ,ಆಧಾರ್ ಕಾರ್ಡ್, ಜಾತಿ ಪ್ರಮಾಣ ಪತ್ರ ,ಕನ್ನಡ ಮಾಧ್ಯಮ ಮತ್ತು ಗ್ರಾಮೀಣ ಅಭ್ಯರ್ಥಿ ಪ್ರಮಾಣ ಪತ್ರ.


ತರಬೇತಿಗಾಗಿ ಪ್ರವೇಶಾತಿ ಪಡೆಯಲು ಇಚ್ಛಿಸುವವರು ಹೆಚ್ಚಿನ ಮಾಹಿತಿಗಾಗಿ :

ವಿದ್ಯಾಮಾತಾ ಅಕಾಡೆಮಿ – ಹಿಂದೂಸ್ತಾನ್ ಕಾಂಪ್ಲೆಕ್ಸ್,1 ನೇ ಮಹಡಿ ,ಎ.ಪಿ.ಎಂ.ಸಿ ರಸ್ತೆ ಪುತ್ತೂರು.

9620468869/ 9148935808

ಸುಳ್ಯ ಶಾಖೆ : TAPCMS ಬಿಲ್ಡಿಂಗ್ ,ಕಾರ್ ಸ್ಟ್ರೀಟ್

9448527606

ಢಿಕ್ಕಿ ಹೊಡೆದು ಓಡಿ ಹೋದ ನಂಬರ್ ಪ್ಲೇಟ್ ಬಿಟ್ಟು ಹೋದ ಸುಲಭದಲ್ಲಿ ಸಿಕ್ಕಿ ಬಿದ್ದ

Posted by Vidyamaana on 2023-05-29 04:35:05 |

Share: | | | | |


ಢಿಕ್ಕಿ ಹೊಡೆದು ಓಡಿ ಹೋದ ನಂಬರ್ ಪ್ಲೇಟ್ ಬಿಟ್ಟು ಹೋದ ಸುಲಭದಲ್ಲಿ ಸಿಕ್ಕಿ ಬಿದ್ದ

ಬೆಳ್ಳಾರೆ : ತಾನು ಓಡಿಸುವ ವಾಹನ ಇನ್ನೊಂದು ವಾಹನಕ್ಕೆ ಢಿಕ್ಕಿ ಹೊಡೆಯಿತು ಎಂದಾಕ್ಷಣ ನಿಂತು ವಿಚಾರಿಸಬೇಕು ತಾನೇ? ವಿಚಾರಿಸದೇ ಹೋದರೆ ಏನಾಗುತ್ತದೆ ಎನ್ನುವುದಕ್ಕೆ ಪಾಲ್ತಾಡಿನಲ್ಲಿ ನಡೆದ ಘಟನೆಯೇ ಸಾಕ್ಷಿ.

ಅಂಕತ್ತಡ್ಕದಿಂದ ಪಾಲ್ತಾಡು ರಸ್ತೆಯ ಬದಿಯಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನಕ್ಕೆ ಹಿಂಬದಿಯಿಂದ ಬರುತ್ತಿದ್ದ ಕಾರು ಢಿಕ್ಕಿ ಹೊಡೆದಿದೆ. ದ್ವಿಚಕ್ರ ವಾಹನ ಸವಾರ, ಪಾಲ್ತಾಡು ನಿವಾಸಿ ಸಿ. ಇಸಾಕ್ ಸಾಹೇಬ್ ಅವರು ರಸ್ತೆಗೆ ಎಸೆಯಲ್ಪಟ್ಟು, ಗಾಯಗೊಂಡರು. ಸ್ಥಳೀಯರ ಸಹಕಾರದಿಂದ ಗಾಯಾಳುವನ್ನು ಪುತ್ತೂರಿನ ಪ್ರಗತಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಕಾರು ಚಾಲಕ ಮಾತ್ರ, ಢಿಕ್ಕಿ ಹೊಡೆದು ಸೀದಾ ಪರಾರಿಯಾಗಿದ್ದ.

ಆರೋಪಿ ಕಾರು ಚಾಲಕನಿಗೆ ಎಲ್ಲರೂ ಹಿಡಿಶಾಪ ಹಾಕುವವರೇ. ಆದರೆ ಅವರ ಜಾಡನ್ನು ಹಿಡಿದದ್ದೇ ಭಾರೀ ಕುತೂಹಲದ ವಿಷಯ.

ಢಿಕ್ಕಿ ಹೊಡೆದ ರಭಸಕ್ಕೆ ಕಾರಿನ ನಂಬರ್ ಪ್ಲೇಟ್ ರಸ್ತೆಯಲ್ಲೇ ಬಿದ್ದಿತ್ತು. ಇದನ್ನು ಗಮನಿಸಿದ ಸ್ಥಳೀಯರೋರ್ವರು ನಂಬರ್ ದಾಖಲಿಸಿಕೊಂಡು, ಕಾರಿನ ಚಾಲಕನನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾದರು. ಅಪಘಾತ ನಡೆಸಿ ಪರಾರಿಯಾದ ಕಾರು ಚಾಲಕನ ಮೇಲೆ ಭಾರೀ ಕೋಪ - ಆಕ್ರೋಶದ ನಡುವೆಯೂ ಆತನ ಎಡವಟ್ಟಿಗೆ ಎಲ್ಲರೂ  ಮುಸಿಮುಸಿ ನಕ್ಕರು.

ಮೇ 26ರಂದು ರಾತ್ರಿ 8 ಗಂಟೆಗೆ ಘಟನೆ ನಡೆದಿದ್ದು, ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಲುಲು ಗ್ರೂಪ್ ಇಂಟರ್‌ನ್ಯಾಶನಲ್‌ನ ಅಧ್ಯಕ್ಷ ಖ್ಯಾತ ಅನಿವಾಸಿ ಉದ್ಯಮಿ ಯೂಸುಫ್ ಅಲಿಗೆ ED ಸಮನ್ಸ್

Posted by Vidyamaana on 2023-03-14 08:29:22 |

Share: | | | | |


ಲುಲು ಗ್ರೂಪ್ ಇಂಟರ್‌ನ್ಯಾಶನಲ್‌ನ ಅಧ್ಯಕ್ಷ ಖ್ಯಾತ ಅನಿವಾಸಿ ಉದ್ಯಮಿ ಯೂಸುಫ್ ಅಲಿಗೆ ED ಸಮನ್ಸ್

ನವದೆಹಲಿ: ಲುಲು ಮಾಲ್ ಗುಂಪುಗಳ ಒಡೆಯ, ಯುಎಇ ನೆಲೆಯ ಉದ್ಯಮಿ ಎಂ. ಎ. ಯೂಸುಫ್ ಅಲಿ ಅವರಿಗೆ ಜಾರಿ ನಿರ್ದೇಶನಾಲಯ-ಇಡಿ ಅಕ್ರಮ ಹಣ ವರ್ಗಾವಣೆ ಸಂಬಂಧ ಸಮನ್ಸ್ ಜಾರಿ ಮಾಡಿದೆ.

ರೂ. 300 ಕೋಟಿಗಳಷ್ಟು ಹಣ ವರ್ಗಾವಣೆ ಮಾಡಿರುವುದಾಗಿ ಇ.ಡಿ. ಆರೋಪಿಸಿದೆ. ಯುನೈಟೆಡ್ ಅರಬ್’ನಲ್ಲಿದ್ದುಕೊಂಡು ಖಾಸಗಿ ಸಂಸ್ಥೆಗಳ ಮೂಲಕ ಕೇರಳ ಸರಕಾರದೊಂದಿಗೆ ಜಂಟಿ ಯೋಜನೆಯಾಗಿ ಲೈಫ್ ಮಿಶನ್ ಎಂಬ ಜನ ಮನೆ ನಿರ್ಮಾಣದಲ್ಲಿ ಅಲಿ ಅಕ್ರಮ ಎಸಗಿದ್ದಾರೆ ಎಂದು ಇ.ಡಿ.ಹೇಳಿದೆ.

ಮಾರ್ಚ್ 1ರಂದು ಹಾಜರಾಗುವಂತೆ ಜಾರಿ ನಿರ್ದೇಶನಾಲಯದ ಕೊಚ್ಚಿ ಕಚೇರಿಯು ಯೂಸುಫ್ ಅಲಿಯವರಿಗೆ ಹಿಂದೆ ನೋಟಿಸ್ ನೀಡಿತ್ತು. ಯುಎಇಯಲ್ಲಿರುವ ಅಲಿಯವರಿಗೆ ಬರಲಾಗಿಲ್ಲ. ಮಾರ್ಚ್ 16ರಂದು ಕೊಚ್ಚಿ ಇಡಿ ಕಚೇರಿಗೆ ವಿಚಾರಣೆಗೆ ಬರುವಂತೆ ಅಕ್ರಮ ಹಣ ವರ್ಗಾವಣೆ ತಡೆ ಏಜೆನ್ಸಿಯು ಆಲಿಯವರಿಗೆ ಸಮನ್ಸ್ ನೀಡಿದೆ. ಚಿನ್ನದ ಅಕ್ರಮ ಸಾಗಣೆ ಸಂಬಂಧ ಬಂಧಿಸಲಾಗಿರುವ ತಿರುವನಂತಪುರದ ಯುಎಇ ರಾಯಭಾರಿ ಕಚೇರಿಯ ಹಿಂದಿನ ಉದ್ಯೋಗಿ ಸ್ವಪ್ನ ಸುರೇಶ್ ಪ್ರಕರಣದಲ್ಲಿ ಇತ್ತೀಚೆಗೆ ಅಲಿ ಹೆಸರು ಕೇಳಿ ಬಂದಿತ್ತು. ಹಿಂದೆ ಈಗಿನ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಮುಖ್ಯ ಕಾರ್ಯದರ್ಶಿಯಾಗಿದ್ದ ಐಎಎಸ್ ಅಧಿಕಾರಿ ಶಿವಶಂಕರನ್ ಕೂಡ ಈ ಚಿನ್ನದ ಕಳ್ಳ ಸಾಗಣೆ ವ್ಯವಹಾರದಲ್ಲಿ ಹುದ್ದೆ ದುರುಪಯೋಗಿಸಿಕೊಂಡುದಕ್ಕಾಗಿ ಬಂಧಿಸಲ್ಪಟ್ಟಿದ್ದಾರೆ.

ಶಿವಶಂಕರನ್ ಅವರು ಮನೆ ನಿರ್ಮಾಣದ ಕೇರಳದ ಲೈಫ್ ಮಿಶನ್ ಕಾರ್ಯಕ್ರಮದಲ್ಲಿ ಅಕ್ರಮ ಎಸಗಿರುವುದು ಸಹ ತಿಳಿದು ಬಂದಿದೆ. ಈ ವಿವಾದದ ಮನೆ ಯೋಜನೆಯನ್ನು ಖಾಸಗಿಯವರ ಪಾಲುದಾರಿಕೆಯಲ್ಲಿ ಮಾಡಲಾಗಿದೆ. ಈ ಖಾಸಗಿ ಪಾಲುದಾರ ಕಂಪೆನಿಗಳು ಯುಎಇ ಮೂಲದವಾಗಿದ್ದು, ಅವುಗಳಲ್ಲಿ ಕೆಲವು ಯೂಸುಫ್ ಅಲಿ ಒಡೆತನದವು ಎಂದು ಹೇಳಲಾಗಿದೆ. ಈ ಲೈಫ್ ಮಿಶನ್ ಯೋಜನೆಯಡಿ ಯೂಸುಫ್ ಅಲಿ 300 ಕೋಟಿ ರೂಪಾಯಿ ಅಕ್ರಮ ವರ್ಗಾವಣೆ ಮಾಡಿದ್ದಾರೆ ಎನ್ನುವುದು ಇಡಿ ಆರೋಪ.

ಕಳೆದ 30 ವರ್ಷಗಳಿಂದ ಯುಎಇಯಲ್ಲಿ ಉದ್ಯಮಿಯಾಗಿರುವ ಕೇರಳ ಮೂಲದ ಯೂಸುಫ್ ಅಲಿಯವರು ಲುಲು ಮಾಲ್’ಗಳ ಸರಣಿಗಳನ್ನು ಸಾಕಷ್ಟು ಹೊಂದಿದ್ದಾರೆ. ಕೇರಳದ ಕಾಂಗ್ರೆಸ್ ಮತ್ತು ಸಿಪಿಎಂ ನಾಯಕರೊಂದಿಗೆ ಅಲಿಯವರಿಗೆ ಉತ್ತಮ ಸಂಬಂಧವಿದೆ. 2014ರಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಅಲಿಯವರು ಕಾಂಗ್ರೆಸ್, ಎಡ ಪಕ್ಷಗಳ ಜೊತೆಗಿರುವಂತೆಯೇ ಬಿಜೆಪಿ ನಾಯಕರ ಸಂಗಡವೂ ಸಂಬಂಧ ಕುದುರಿಸಿಕೊಂಡಿದ್ದಾರೆ.

ಯೂಸುಫ್ ಅಲಿಯವರ ಕಂಪೆನಿಗಳು 94% ಷೇರುಗಳು ಕೇಮನ್ ದ್ವೀಪದ ಸಂಸ್ಥೆಗಳೊಡನೆ ಸಂಬಂಧ ಹೊಂದಿದೆ. ಉಳಿಕೆ 6% ಷೇರುಗಳು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರ ಕಿರಿಯ ಮಗ ವಿವೇಕ್ ದೋವಲ್ ಹೆಸರಿನಲ್ಲಿವೆ. 2018ರಲ್ಲಿ ಯೂಸುಫ್ ಅಲಿಯವರು ತನ್ನ ಯುಎಇ ಮನೆಯಲ್ಲಿ ರಾಹುಲ್ ಗಾಂಧಿಯವರಿಗೆ ಆತಿಥ್ಯ ನೀಡಿದ್ದರು.

ಗಾಳಿಪಟ ಹಾರಿಸುತ್ತಿದ್ದಾಗ ವಿದ್ಯುತ್ ತಂತಿ ಸ್ಪರ್ಶಿಸಿ ಬಾಲಕ ಸಾವು

Posted by Vidyamaana on 2024-01-14 08:28:15 |

Share: | | | | |


ಗಾಳಿಪಟ ಹಾರಿಸುತ್ತಿದ್ದಾಗ ವಿದ್ಯುತ್ ತಂತಿ ಸ್ಪರ್ಶಿಸಿ ಬಾಲಕ ಸಾವು

ಹೈದರಾಬಾದ್: ಮನೆಯ ಟೆರೇಸ್ ಮೇಲೆ ಗಾಳಿಪಟ ಹಾರಿಸುತ್ತಿದ್ದಾಗ ವಿದ್ಯುತ್ ತಂತಿ ಸ್ಪರ್ಶಿಸಿ ಬಾಲಕ ತನಿಷ್ಕ್ (11) ಮೃತಪಟ್ಟಿರುವ ಘಟನೆ ಅತ್ತಾಪುರ ಪ್ರದೇಶದಲ್ಲಿ ನಡೆದಿದೆ.


ತನಿಷ್ಕ್ ತಮ್ಮ ಮನೆಯ ಮಹಡಿ ಮೇಲೆ ನಿಂತು ಗಾಳಿ ಪಟ ಹಾರಿಸುವ ವೇಳೆ ಗಾಳಿ ಪಟದ ದಾರ ವಿದ್ಯುತ್​ ತಂತಿಗೆ ಸಿಲುಕಿಕೊಂಡಿದೆ. ಅದನ್ನು ಬಿಡಿಸಲು ಹೋದಾಗ ದೇಹಕ್ಕೆ ವಿದ್ಯುತ್​ ಪ್ರವಹಿಸಿದೆ.


ತಕ್ಷಣ ಬಾಲಕ ಕಿರುಚಿಕೊಂಡಿದ್ದು, ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದರೂ ಪ್ರಯೋಜನವಾಗಲಿಲ್ಲ. ಪೋಷಕರ ರೋದನ ಮುಗಿಳುಮುಟ್ಟಿದ್ದು, ಮಕ್ಕಳ ಚಲನವಲನ ಬಗ್ಗೆ ಹೆಚ್ಚಿನ ನಿಗಾ ಅಗತ್ಯ ಎಂದು ಪೊಲೀಸರು ನಾಗರಿಕರಿಗೆ ಸಲಹೆ ನೀಡಿದ್ದಾರೆ.

ಜೀವ ಹಾನಿ ತಡೆಗಟ್ಟಲು ಜಿಲ್ಲಾಡಳಿತ ಸನ್ನದ್ಧ: ದ.ಕ ಜಿಲ್ಲಾಧಿಕಾರಿ ಮುಲೈ ಮುಗಿಲನ್

Posted by Vidyamaana on 2023-07-29 03:29:43 |

Share: | | | | |


ಜೀವ ಹಾನಿ ತಡೆಗಟ್ಟಲು ಜಿಲ್ಲಾಡಳಿತ ಸನ್ನದ್ಧ: ದ.ಕ ಜಿಲ್ಲಾಧಿಕಾರಿ ಮುಲೈ ಮುಗಿಲನ್

ಮಂಗಳೂರು: ಮಳೆಗಾಲದಲ್ಲಿ ಸಂಭವಿಸುವ ಪ್ರಾಕೃತಿಕ ವಿಕೋಪಗಳಿಂದ ಜೀವ ಹಾನಿಯನ್ನು ತಡೆಗಟ್ಟಲು ಜಿಲ್ಲಾಡಳಿತ ಸರ್ವ ರೀತಿಯಲ್ಲಿ ಸನ್ನದ್ದವಾಗಿದ್ದು, ಹಲವಾರು ಸುರಕ್ಷತಾ ಕ್ರಮಗಳನ್ನು ಕೈಗೊಂಡಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ತಿಳಿಸಿದರು.


ಅವರು ಜು.28ರ ಶುಕ್ರವಾರ ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. 


 ಮಳೆಗಾಲದಲ್ಲಿ ಜನರ ಜೀವ ರಕ್ಷಿಸಲು ಜಿಲ್ಲೆಯಲ್ಲಿ ನಿರ್ಬಂಧ ಹೇರಲಾದ ಪ್ರದೇಶಗಳಿಗೆ ಪ್ರವಾಸಿಗರು ಸೇರಿದಂತೆ ಸಾರ್ವಜನಿಕರು ತೆರಳಬಾರದು, ಈಗಾಗಲೇ ಜಿಲ್ಲೆಯ ಸಮುದ್ರ ಕಿನಾರೆಗಳು, ದೇವಸ್ಥಾನದ ಹತ್ತಿರದ ನದಿಗಳು, ಸ್ನಾನ ಘಟ್ಟಗಳು, ಚಾರಣ ತಾಣಗಳಿಗೆ ತೆರಳದಂತೆ ನಿರ್ಬಂಧಿಸಲಾಗಿದೆ, ಅದನ್ನ ಉಲ್ಲಂಘಿಸಿದ್ದಲ್ಲೀ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಈಗಾಗಲೇ ಜಿಲ್ಲೆಯ ದೇವಸ್ಥಾನಗಳ ಆಡಳಿತ ಮಂಡಳಿಗಳಿಗೆ ನೀರು ಹರಿಯುತ್ತಿರುವ ಸ್ಥಳಗಳಿಗೆ ಪ್ರವೇಶ ನಿಬರ್ಂಧದ ಬಗ್ಗೆ ಸೂಚನೆ ನೀಡುವಂತೆ ತಿಳಿಸಿದ್ದು, ಅದನ್ನು ಮೀರುವಂತಿಲ್ಲ. ಚಾರಣೀಗರು ನಿಷೇಧಿತ ಸ್ಥಳಗಳಲ್ಲಿ ಕಂಡುಬಂದಲ್ಲಿ ಅಂತವರ ವಿರುದ್ಧ ಸೂಕ್ತ ಕಾನೂನು ಕ್ರಮ ಜುರುಗಿಸಲಾಗುವುದು ಎಂದು ಎಚ್ಚರಿಸಿದರು.


ಜಿಲ್ಲೆಯಲ್ಲಿ ಸಾಕಷ್ಟು ಪ್ರದೇಶಗಳನ್ನು ಪ್ರಾಕೃತಿಕ ವಿಕೋಪಕ್ಕೆ ಒಳಗಾಗುವ ಅಪಾಯಕಾರಿ ಪ್ರದೇಶಗಳು ಎಂದು ಗುರುತಿಸಲಾಗಿದ್ದು, ಅದರೊಂದಿಗೆ ಜಿಲ್ಲೆಯೊಳಗೆ ರಾಜ್ಯ ಮತ್ತು ರಾಷ್ಟ್ರೀಯ ಹೆದ್ದಾರಿಗಳಲ್ಲಿ 87 ಸ್ಥಳಗಳನ್ನು ಅಪಾಯ ಸ್ಥಳಗಳೆಂದು ಗುರುತಿಸಲಾಗಿದೆ,  ಚಾರ್ಮಾಡಿ ಘಾಟಿಯಲ್ಲಿಗೆ 34 ಕಡೆಗಳಲ್ಲಿ ಅಪಾಯ ಸ್ಥಳಗಳನ್ನು ಗುರುತಿಸಲಾಗಿದೆ, ಅಪಾಯಕಾರಿ ಸಂದರ್ಭ ಎದುರಾಗುವಾಗ ಅಲ್ಲಿ ಸಾರ್ವಜನಿಕರು, ಪ್ರಯಾಣಿಕರು ತೆರಳಬಾರದು ಎಂದರು.


ಜಿಲ್ಲೆಯಲ್ಲಿ ಈಗಾಗಲೇ 25 ಎನ್‍ಡಿಆರ್‍ಎಫ್, 38 ಎಸ್‍ಡಿಆರ್‍ಎಫ್, 190 ಅಗ್ನಿಶಾಮಕ ದಳ ಹಾಗೂ 76 ಜನ ಗೃಹ ರಕ್ಷಕ ದಳ ಸಿಬ್ಬಂದಿಯನ್ನು ರಕ್ಷಣೆಗಾಗಿ ನಿಯೋಜಿಸಲಾಗಿದೆ, ಜಿಲ್ಲೆಯಲ್ಲಿ ಪ್ರತೀ ಗ್ರಾಮ ಮಂಚಾಯತ್ ಹಾಗೂ ನಗರ ಸ್ಥಳೀಯ ಸಂಸ್ಥೆಗಳು, ಮಹಾನಗರ ಪಾಲಿಕೆಯಲ್ಲಿ ವಾರ್ಡ್ ಮಟ್ಟದಲ್ಲಿ ಪ್ರಾಕೃತಿಕ ವಿಕೋಪ ಕೇಂದ್ರಗಳನ್ನು ತೆರೆಯಲಾಗಿದೆ. ಅದಕ್ಕೆ ಓರ್ವ ನೋಡಲ್ ಅಧಿಕಾರಿಯನ್ನು ನೇಮಿಸಲಾಗಿದೆ. ಅಲ್ಲಿ ಏನಾದರೂ ಅಪಾಯ ಸಂಭವಿಸಿದಲ್ಲಿ ನೋಡಲ್ ಅಧಿಕಾರಿಗಳಿಗೆ ತಿಳಿಸಿದರೆ ಅವರು ಕ್ರಮ ಕೈಗೊಳ್ಳಲಿದ್ದಾರೆ. ಹೆಚ್ಚಿನ ಕ್ರಮ ಜರುಗಬೇಕಾಗಿದ್ದಲ್ಲಿ ತಹಶೀಲ್ದಾರರ್‍ಗೆ ಅವರು  ತಿಳಿಸಲಿದ್ದಾರೆ. ಇದಕ್ಕಾಗಿ ಜಿಲ್ಲೆಯಾಧ್ಯಂತ 34 ಕಂಟ್ರೋಲ್ ರೂಂ. ತೆರೆಯಲಾಗಿದ್ದು, ಅವರಿಗೆ ಕರೆ ಮಾಡುವಂತೆ ಕೋರಿದರು.


ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷ್ಯಂತ್ ಸಿ.ಬಿ. ಅವರು ಮಾತನಾಡಿ, ಹೊರಗಿನಿಂದ ಜಿಲ್ಲೆಯ ದೇವಸ್ಥಾನಕ್ಕೆ ಬರುವವರು ಸಾಕಷ್ಟು ಜಾಗೃತಿ ವಹಿಸಬೇಕಾಗಿದೆ. ಅಗತ್ಯವಿದ್ದರೆ ಮಾತ್ರ ಬರುವುದು ಸೂಕ್ತ. ಈಗಾಗಲೇ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಬರುವಂತಹ 2 ರಸ್ತೆಗಳು ಮುಚ್ಚಲಾಗಿದೆ. ರಸ್ತೆ ತಡೆ ಉಂಟಾದಲ್ಲಿ ಸಮಸ್ಯೆಯಾಗಲಿದೆ. ಹೊರಗಿನಿಂದ ಬರುವವರು ನೀರಿಗೆ ಇಳಿಯುವುದು, ಅಪಾಯಕಾರಿ ಸ್ಥಳಗಳಲ್ಲಿ ಸೆಲ್ಫಿ ತೆಗೆಯುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು. 


ನಗರ ಪೊಲೀಸ್ ಆಯುಕ್ತ ಕುಲ್‍ ದೀಪ್ ಕುಮಾರ್ ಜೈನ್ ಮಾತನಾಡಿ, ಹೊರ ಜಿಲ್ಲೆಯಿಂದ ಇಲ್ಲಿಗೆ ಬರುವವರು ಮಳೆ ಸಂದರ್ಭದಲ್ಲಿ ಗೂಗಲ್ ಮ್ಯಾಪ್ ಬಳಸುವುದು ಸೂಕ್ತ. ಯಾವ ರಸ್ತೆಯನ್ನು ಮುಚ್ಚಿದೆ, ಎಷ್ಟು ಗಂಟೆಯಿಂದ ಎಷ್ಟು ಗಂಟೆಯ ತನಕ ಮುಚ್ಚಲಾಗುವುದು ಎಂಬ ಮಾಹಿತಿ ಲಭಿಸಲಿದೆ, ಇದರಿಂದ ಅವರ ಪ್ರಯಾಣಕ್ಕೆ ಅನುಕೂಲವಾಗುವುದು ಎಂದರು.

ಹುಚ್ಚ ಅವನು ಎತ್ತಿಕೊಂಡು ಹೊರಗೆ ಹಾಕ್ರೀ... ಶಾಸಕ ವೇದವ್ಯಾಸ್ ಕಾಮತ್ ಬಗ್ಗೆ ಕಾಂಗ್ರೆಸ್ ಸದಸ್ಯರ ಆಕ್ರೋಶ

Posted by Vidyamaana on 2024-02-21 13:12:27 |

Share: | | | | |


ಹುಚ್ಚ ಅವನು  ಎತ್ತಿಕೊಂಡು ಹೊರಗೆ ಹಾಕ್ರೀ... ಶಾಸಕ ವೇದವ್ಯಾಸ್ ಕಾಮತ್ ಬಗ್ಗೆ ಕಾಂಗ್ರೆಸ್ ಸದಸ್ಯರ ಆಕ್ರೋಶ

ಬೆಂಗಳೂರು, ಫೆ.20: ವಿಧಾನಸಭೆ ಅಧಿವೇಶನದಲ್ಲಿ ಕೇಂದ್ರ ಸರಕಾರ ಅನುದಾನ ತಾರತಮ್ಯ ಮಾಡ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿವರಣೆ ಕೊಡುತ್ತಿದ್ದಾಗ, ಎದ್ದು ನಿಂತು ವಿರೋಧಿಸಿದ್ದಕ್ಕೆ ಮಂಗಳೂರಿನ ಬಿಜೆಪಿ ಶಾಸಕ ವೇದವ್ಯಾಸ ಕಾಮತ್ ಅವರನ್ನು ಕಾಂಗ್ರೆಸ್ ಶಾಸಕರು ಹುಚ್ಚ ಎಂದು ರೇಗಿಸಿದ ಘಟನೆ ನಡೆದಿದೆ.


ಫುಡ್ ಕಾರ್ಪೊರೇಶನ್ ಕಡೆಯಿಂದ ನಾವು ಅಕ್ಕಿ ಕೇಳಿದ್ದೆವು. ಅದರ ಮ್ಯಾನೇಜರ್ ಓಕೆಯೆಂದು ಹೇಳಿದ್ದೂ ಆಗಿತ್ತು. ಆದರೆ ಕೇಂದ್ರ ಸರಕಾರದವರು ರಾಜಕೀಯ ಕಾರಣಕ್ಕೆ ರಾಜ್ಯಕ್ಕೆ ಅಕ್ಕಿ ಕೊಡಲಿಲ್ಲ ಎಂದು ಸಿದ್ದರಾಮಯ್ಯ ಹೇಳಿದಾಗ, ವಿರೋಧಿಸಿದ ವಿಪಕ್ಷ ನಾಯಕ ಅಶೋಕ್, ನೀವು ಗ್ಯಾರಂಟಿ ಘೋಷಣೆ ಮಾಡಿದಾಗ ಕೇಂದ್ರವನ್ನು ಕೇಳಿದ್ರಾ.. ಆನಂತರ ಕೇಂದ್ರ ಅಕ್ಕಿ ಕೊಡಲಿಲ್ಲ ಎಂದರೆ ಹೇಗೆ. ಅಕ್ಕಿಯನ್ನು ಮ್ಯಾನೇಜರ್ ಕೊಡೋದಾ ಎಂದು ಛೇಡಿಸಿದರು.


ಪ್ರತಿಕ್ರಿಯಿಸಿದ ಸ್ಪೀಕರ್ ಯುಟಿ ಖಾದರ್, ಆಹಾರ ಭದ್ರತಾ ನಿಗಮ ಅನ್ನೋದು ಸ್ವತಂತ್ರ ಸಂಸ್ಥೆ ಎಂದು ಹೇಳಲು ಹೊರಟಾಗ ಎದ್ದು ನಿಂತ ವೇದವ್ಯಾಸ ಕಾಮತ್, ಸ್ವತಂತ್ರ ಸಂಸ್ಥೆಯಲ್ಲ. ಕೇಂದ್ರಕ್ಕೆ ಅಧಿಕಾರ ಇದೆಯೆಂದು ಹೇಳಲು ಹೊರಟರು. ಕಾಂಗ್ರೆಸ್ ಶಾಸಕರು ಅದಕ್ಕೆ ವಿರೋಧಿಸಿ ಗದ್ದಲ ಎಬ್ಬಿಸಿದ್ದಾರೆ. ಏಯ್ ಹುಚ್ಚಾ ಅವನು. ಹೊರಗೆ ಹಾಕಿ ಎಂದು ಕೂಗಿದ್ದಾರೆ. ಇದರಿಂದ ಕುಪಿತರಾದ ವೇದವ್ಯಾಸ್ ಅವರನ್ನು ಖಾದರ್ ಕುಳಿತುಕೊಳ್ಳುವಂತೆ ಮನವಿ ಮಾಡಿದ್ದಾರೆ. ಹುಚ್ಚ ನೀವು ಎಂದು ವೇದವ್ಯಾಸ್ ಹೇಳಿದ್ದಕ್ಕೆ ಖಾದರ್ ಗರಂ ಆಗಿದ್ದು ನೀವೊಮ್ಮೆ ಕೂತ್ಕೊಳ್ಳಿ ಮಾರ್ರೆ, ಸರಿಯಾಗಿ ತಿಳಿದುಕೊಳ್ಳದೆ ಮಾತಾಡಬೇಡಿ ಎಂದಿದ್ದಾರೆ.


ಇದನ್ನು ಕೇಳಿದ ಆಡಳಿತ ಪಕ್ಷದ ಸದಸ್ಯರು, ವೇದವ್ಯಾಸ ಗುರಿಯಾಗಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಭಾಧ್ಯಕ್ಷ ಪೀಠಕ್ಕೆ ಗೌರವ ಕೊಡಬೇಕಲ್ಲ. ಹುಚ್ಚ ಅಂತಾನೆ, ಅವನನ್ನು ಎತ್ತಿ ಹೊರಗೆ ಹಾಕ್ರೀ ಎಂದು ಗದ್ದಲ ಎಬ್ಬಿಸಿದ್ದಾರೆ. ಮುಖ್ಯಮಂತ್ರಿ ಮಾತಾಡೋವಾಗ ನಡುವೆ ಬಾಯಿ ಹಾಕ್ತಾನೆ ಎಂದು ಆಕ್ರೋಶ ಹೊರಹಾಕಿದ್ದಾರೆ. ಹುಚ್ಚ ಅವನು ಎಂದು ಹೇಳಿದ ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿದೆ.

Recent News


Leave a Comment: