ಮೃತಪಟ್ಟ ಗರ್ಭಿಣಿ ಮನೆಗೆ ಭೇಟಿ ನೀಡಿದ ಪುತ್ತಿಲ

ಸುದ್ದಿಗಳು News

Posted by vidyamaana on 2023-06-29 12:19:28 |

Share: | | | | |


ಮೃತಪಟ್ಟ ಗರ್ಭಿಣಿ ಮನೆಗೆ ಭೇಟಿ ನೀಡಿದ ಪುತ್ತಿಲ

ಪುತ್ತೂರು: ಹೊಸ ಉದ್ಯಮವೊಂದರ ಉದ್ಘಾಟನಾ ಕಾರ್ಯಕ್ರಮ ಮುಗಿಸಿ ಹಿಂದಿರುಗಿ ಬರುವಾಗ ಅರುಣ್ ಕುಮಾರ್ ಪುತ್ತಿಲ ಹೆರಿಗೆಗೆ ದಾಖಲಾಗಿದ್ದ ಗರ್ಭಿಣಿ ಮೃತಪಟ್ಟ ಮನೆಗೆ ತೆರಳಿ ಸಾಂತ್ವನ ಹೇಳಿದರು.


ಕಾರ್ಯಕ್ರಮ ಮುಗಿಸಿ ಬರುವಾಗ ರಸ್ತೆಯಲ್ಲಿ ಜನ ಸೇರಿದ್ದನ್ನು ನೋಡಿ ವಿಚಾರಿಸಿದಾಗ ಮೃತಪಟ್ಟ ಬಗ್ಗೆ ತಿಳಿದುಬಂದಿದ್ದು,  ನಂತರ ಮನೆಗೆ ತೆರಳಿ ಸಾಂತ್ವನ ಹೇಳಿದರು. 

ಶೇಕಮಲೆ ಬೊಳ್ಳಾಡಿ ಇಬ್ರಾಹಿಂ ಎಂಬವರ ಪತ್ನಿ 9 ತಿಂಗಳ ಗರ್ಭಿಣಿ ಹಸೀನಾ (29) ಮಂಗಳೂರಿನ ಎಜೆ ಆಸ್ಪತ್ರೆಗೆ ದಾಖಲಾಗಿದ್ದರು.  ಜೂ.28 ರಂದು ಹೆರಿಗೆ ಸಂದರ್ಭ ಹೃದಯಾಘಾತದಿಂದ ನಿಧನರಾದರು. 

ಹೆರಿಗೆಯಲ್ಲಿ ಮಗು ಜೀವಂತವಾಗಿದ್ದು, ಎಜೆ ಆಸ್ಪತ್ರೆಯ ವೈದ್ಯರಿಗೆ ಕರೆ ಮಾಡಿ ಅರುಣ್ ಪುತ್ತಿಲರು ಮಗುವಿನ ಆರೋಗ್ಯ ವಿಚಾರಿಸಿದರು. 

ಈ ಹಿಂದೆಯೂ ಅಪಘಾತ ನಡೆದ ಸಂದರ್ಭ ಧರ್ಮ ನೋಡದೆ ತನ್ನದೇ  ಕಾರಿನಲ್ಲಿ ರಕ್ತದ ಮಡುವಿನಲ್ಲಿದ್ದ  ಗಾಯಳುಗಳನ್ನು ಹಾಕಿಕೊಂಡು ಹೋದ ಉದಾಹರಣೆಯೂ ಇದೆ. ಅವರ ಕಾರಿನಲ್ಲಿ ಅಪಘಾತಗೊಂಡ  ಮುಸ್ಲಿಂ ಮಗುವೊಂದು ಮೃತಪಟ್ಟಿದೆ. 

ಮೊನ್ನೆಯಷ್ಟೇ ಮಂಗಳೂರಿನಿಂದ ಬರುತಿದ್ದಾಗ ರಸ್ತೆ ಬದಿಯ ಚರಂಡಿಗೆ ಬಿದ್ದಿದ್ದ ಕಾರನ್ನು ಮೇಲೆತ್ತಲು ಸಹಾಯ ಮಾಡಿದ್ದರು.

 Share: | | | | |


ಅಡ್ಯನಡ್ಕ ಕರ್ಣಾಟಕ ಬ್ಯಾಂಕ್ ದರೋಡೆ ಪ್ರಕರಣ – ಮೂವರು ಆರೋಪಿಗಳ ಬಂಧನ

Posted by Vidyamaana on 2024-03-11 13:33:18 |

Share: | | | | |


ಅಡ್ಯನಡ್ಕ ಕರ್ಣಾಟಕ ಬ್ಯಾಂಕ್ ದರೋಡೆ ಪ್ರಕರಣ – ಮೂವರು ಆರೋಪಿಗಳ ಬಂಧನ

ವಿಟ್ಲ: ಅಡ್ಯನಡ್ಕ ಕರ್ಣಾಟಕ ಬ್ಯಾಂಕ್ ದರೋಡೆ ಪ್ರಕರಣ ಭೇದಿಸುವಲ್ಲಿ ಪೊಲೀಸರ ವಿಶೇಷ ತಂಡ ಮಹತ್ತರ ಯಶಸ್ಸು ಸಾಧಿಸಿದ್ದು ಪ್ರಮುಖ ಮೂವರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.


ವಶಕ್ಕೆ ಪಡೆದ ಆರೋಪಿಗಳಾದ ರಫೀಕ್‌ ಯಾನೆ ಗೂಡಿನ ಬಳಿ ರಫೀಕ್‌ , ಮೂಲತಃ ಸುಳ್ಯದ ಕೊಯಿಲ, ಕಾಸರಗೋಡಿನ ಚೌಕಿ ನಿವಾಸಿ ಖಲಂದರ್‌ ಹಾಗೂ ಬಾಯಾರು ನಿವಾಸಿ ದಯಾನಂದ ಎಂದು ಗುರುತಿಸಲಾಗಿದೆ.

ಫೆಬ್ರವರಿ 7 ರಂದು ರಾತ್ರಿ ಬ್ಯಾಂಕ್ ಕಟ್ಟಡದ ಹಿಂಬದಿ ಕಿಟಕಿಯ ಸರಳುಗಳನ್ನು ತುಂಡರಿಸಿ ಒಳನುಗ್ಗಿದ ಖದೀಮರು ಕೋಟ್ಯಾಂತರ ಮೌಲ್ಯದ ಚಿನ್ನಾಭರಣ ಹಾಗೂ ಹದಿನಾರು ಲಕ್ಷಕ್ಕೂ ಅಧಿಕ ಮೊತ್ತದ ನಗದು ಹಣ ದರೋಡೆಗೈದಿದ್ದರು.


ಒಟ್ಟು ಈ ಪ್ರಕರಣದಲ್ಲಿ ಐವರು ಆರೋಪಿಗಳಿದ್ದು 3 ಜನರನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಇನ್ನಿಬ್ಬರಿಗಾಗಿ ಶೋಧ ಕಾರ್ಯ ಮುಂದುವರೆದಿದೆ. ಇದೇ ತಂಡ ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಎರಡು ಕಳ್ಳತನ ಕೃತ್ಯ ಎಸಗಿ ತಲೆಮರೆಸಿಕೊಂಡಿದ್ದರು.


ಅಡ್ಯನಡ್ಕ ಕರ್ನಾಟಕ ಬ್ಯಾಂಕ್ ಕಳ್ಳತನ ಮಾಡಿದ ಈ ತಂಡ ಹಿಂದಿನ ದಿನ ಬಂದು ಸಂಚು ರೂಪಿಸಿರುತ್ತಾರೆ.ಮರುದಿನ ಬಂದ ಐವರ ತಂಡದಲ್ಲಿ 4 ಜನ ಬ್ಯಾಂಕಿನ ಕಿಟಕಿ ಮುರಿದು ಒಳ ನುಗ್ಗಿ ಕೃತ್ಯ ಎಸಗಿದ್ದಾರೆ. ಒಬ್ಬ ಹೊರಗಡೆಯಿಂದ ಸುಳಿವು ನೀಡುತ್ತಿದ್ದ ಎನ್ನಲಾಗಿದೆ.


ಬಂಧಿಸಿದ ಪ್ರಮುಖ ಆರೋಪಿಗಳಲ್ಲಿ ರಫೀಕ್‌ ಯಾನೆ ಗೂಡಿನ ಬಳಿ ರಫೀಕ್‌ ಈತನ ಮೇಲೆ ದರೋಡೆ, ಕಳ್ಳತನದ ಹಲವಾರು ಪ್ರಕರಣಗಳಿವೆ.ಖಲಂದರ್‌ ಎಂಬಾತನ ಮೇಲೆ ಕಣ್ನೂರು,ಪುತ್ತೂರು,ವಿಟ್ಲ,ಸಂಪ್ಯ ಠಾಣೆಗಳಲ್ಲಿ ಈ ಹಿಂದೆ ಅನೇಕ ಕಳ್ಳತನ ಪ್ರಕರಣಗಳಿವೆ.ಬಾಯಾರು ನಿವಾಸಿ ದಯಾನಂದ ಎಂಬವನು ವೆಲ್ಡಿಂಗ್‌ ಕೆಲಸ ಮಾಡುತ್ತಿದ್ದು, ಈತ ಹಣದ ಆಸೆಗೊಸ್ಕರ ಇದೇ ಮೊದಲ ಬಾರಿ ಈ ಖರ್ತನಾಕ್‌ ತಂಡದೊಂದಿಗೆ ಸೇರಿಕೊಂಡು ಸ್ಟ್ರಾಂಗ್ ರೂಮಿನ ಭಾರಿ ಭದ್ರತೆಯ ಕಬ್ಬಿಣದ ಬಾಗಿಲನ್ನು ಗ್ಯಾಸ್ ಕಟ್ಟರ್ ಮೂಲಕ ತುಂಡರಿಸುವಲ್ಲಿ ಈತನ ಪ್ರಮುಖ ಪಾತ್ರವಿದೆ.

ದ.ಕ. ಜಿಲ್ಲಾ ಎಸ್ಪಿ ರಿಷ್ಯಂತ್‌ ನೇತೃತ್ವದಲ್ಲಿ ಬೇರೆ ಬೇರೆ ವಿಶೇಷ ತಂಡಗಳನ್ನು ರಚಿಸಿ ಈ ಪ್ರಕರಣವನ್ನು ಬೇಧೀಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಬಂಟ್ವಾಳ: ದ್ವಿಚಕ್ರವಾಹನದಲ್ಲಿ ಇರಿಸಲಾಗಿದ್ದ ಹಣದಲ್ಲಿ ಲಕ್ಷ ರೂಪಾಯಿ ಮಾತ್ರ ಎಗರಿಸಿದ ಕಳ್ಳರು

Posted by Vidyamaana on 2023-10-07 20:22:31 |

Share: | | | | |


ಬಂಟ್ವಾಳ: ದ್ವಿಚಕ್ರವಾಹನದಲ್ಲಿ ಇರಿಸಲಾಗಿದ್ದ ಹಣದಲ್ಲಿ ಲಕ್ಷ ರೂಪಾಯಿ ಮಾತ್ರ ಎಗರಿಸಿದ ಕಳ್ಳರು

ಬಂಟ್ವಾಳ : ದ್ವಿಚಕ್ರ ವಾಹನದಲ್ಲಿ ಇರಿಸಲಾಗಿದ್ದ ಲಕ್ಷಾಂತರ ರೂ.ನಗದು ಕಳವಾಗಿರುವ ಬಗ್ಗೆ ಬಿಸಿರೋಡಿನಲ್ಲಿ ವರದಿಯಾಗಿದೆ.


    ನರಿಕೊಂಬು ನಿವಾಸಿ ಪ್ರಕಾಶ್ ಕೋಡಿಮಜಲು ಎಂಬವರ ರೂಪಾಯಿ ಒಂದು ಲಕ್ಷ ಹಣ ಕಳವಾಗಿದೆ ಎಂದು ಅವರು ನಗರ ಪೋಲೀಸ್ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ.


   ಅವರು ಶುಕ್ರವಾರ ಬೆಳಿಗ್ಗೆ ರೂ.1.40 ಲಕ್ಷ ಹಣವನ್ನು ಬ್ಯಾಂಕಿನಿಂದ ಡ್ರಾ ಮಾಡಿ ಬಳಿಕ ಬಿಸಿರೋಡಿನ ಮಿನಿವಿಧಾನ ಸೌಧದ ಕಚೇರಿಯ ಮುಂಭಾಗದಲ್ಲಿ ಇರಿಸಲಾಗಿದ್ದ, ದ್ವಿಚಕ್ರವಾಹನದ ಸೀಟಿನಡಿ ಇರುವ ಬಾಕ್ಸ್ ನಲ್ಲಿ ಇರಿಸಿದ್ದರು.


ಬಳಿಕ ಬೇರೆಬೇರೆ ಕೆಲಸ ನಿಮಿತ್ತ ಅಲ್ಲಿಂದ ತೆರಳಿದ್ದರು.


ಮಧ್ಯಾಹ್ನ ಬಳಿಕ ಬಂದು ಸೀಟು ಲಾಕ್ ತೆರೆದಾಗ ಅದರೊಳಗೆ ಇರಿಸಲಾಗಿದ್ದ 1.40 ಲಕ್ಷದಲ್ಲಿ 40 ಸಾವಿರ ಮಾತ್ರ ಇದ್ದು ಉಳಿದ 1ಲಕ್ಷ ಹಣ ಕಳವಾಗಿದೆ ಎಂದು ತಿಳಿಸಿದ್ದಾರೆ.


ಬಂಟ್ವಾಳ ನಗರ ಪೋಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ನಡೆಸುತ್ತಿದ್ದಾರೆ.

ನನ್ನ ಮೇಲೆ ಕೂಗಾಡ್ಬೇಡಿ : ಚುನಾವಣಾ ಬಾಂಡ್ ವಿಚಾರಣೆ ವೇಳೆ ವಕೀಲರ ಮೇಲೆ ಸಿಜೆಐ ಗರಂ ವಿಡಿಯೋ ವೈರಲ್

Posted by Vidyamaana on 2024-03-18 16:34:09 |

Share: | | | | |


ನನ್ನ ಮೇಲೆ ಕೂಗಾಡ್ಬೇಡಿ : ಚುನಾವಣಾ ಬಾಂಡ್ ವಿಚಾರಣೆ ವೇಳೆ ವಕೀಲರ ಮೇಲೆ ಸಿಜೆಐ ಗರಂ ವಿಡಿಯೋ ವೈರಲ್

ನವದೆಹಲಿ : ಸುಪ್ರೀಂಕೋರ್ಟ್ನಲ್ಲಿ ಚುನಾವಣಾ ಬಾಂಡ್ ಪ್ರಕರಣದ ವಿಚಾರಣೆ ವೇಳೆ ಸಿಜೆಐ ಡಿ.ವೈ.ಚಂದ್ರಚೂಡ್ ಮತ್ತು ವಕೀಲ ಮ್ಯಾಥ್ಯೂಸ್ ನೆಡುಂಪರಾ ನಡುವೆ ವಾಗ್ವಾದ ನಡೆಯಿತು. ಅವರ ಬಿಸಿಯಾದ ವಾಗ್ವಾದದ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ವಿಚಾರಣೆಯ ಸಮಯದಲ್ಲಿ, ವಕೀಲ ಮ್ಯಾಥ್ಯೂಸ್ ನೆಡುಂಪರಾ ಅವರು ಚುನಾವಣಾ ಬಾಂಡ್ ಪ್ರಕರಣದ ಸಂಪೂರ್ಣ ತೀರ್ಪನ್ನ ನಾಗರಿಕರ ಬೆನ್ನ ಹಿಂದೆ ನೀಡಲಾಗಿದೆ ಎಂದು ಹೇಳಿದರು.ಇದಕ್ಕೆ ಪ್ರತಿಕ್ರಿಯಿಸಿದ ಸಿಜೆಐ ಡಿ.ವೈ.ಚಂದ್ರಚೂಡ್, ನನ್ನ ಮೇಲೆ ಕೂಗಾಡಬೇಡಿ ಎಂದು ಹೇಳಿದರು.

ನನ್ನ ಮೇಲೆ ಕೂಗಾಡ್ಬೇಡಿ : ಚುನಾವಣಾ ಬಾಂಡ್ ವಿಚಾರಣೆ ವೇಳೆ ವಕೀಲರ ಮೇಲೆ ಸಿಜೆಐ ಗರಂ ವೈರಲ್ ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ

"ನನ್ನ ಮೇಲೆ ಕೂಗಾಡಬೇಡಿ. ನೀವು ಅರ್ಜಿಯನ್ನ ಸಲ್ಲಿಸಲು ಬಯಸಿದರೆ, ಸಲ್ಲಿಸಿ. ನಾವು ನಿಮ್ಮ ಮಾತನ್ನು ಕೇಳುವುದಿಲ್ಲ" ಎಂದು ಸಿಜೆಐ ಡಿ.ವೈ ಚಂದ್ರಚೂಡ್ ಹೇಳಿದರು. ಆದ್ರೆ, ಅದರ ನಂತ್ರವೂ ವಕೀಲರು ತಮ್ಮ ಮಾತು ಮುಂದುವರೆಸಿದ್ದು, ಆಗ ನ್ಯಾಯಾಮೂರ್ತಿಗಳು ನಿಮಗೆ ನ್ಯಾಯಾಂಗ ನಿಂದನೆ ನೋಟಿಸ್ ಬೇಕೇ.? ಎಂದು ಗರಂ ಆದರು. ಸಧ್ಯ ಈ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆಗಿದೆ.

ಕಡಬದಲ್ಲಿ ಡಯಾಲಿಸಿಸ್ ಕೇಂದ್ರವನ್ನು ಆರಂಭಿಸುವಂತೆ ಆರೋಗ್ಯ ಸಚಿವರಿಗೆ ಶಾಸಕ ಅಶೋಕ್ ರೈ ಮನವಿ

Posted by Vidyamaana on 2023-06-07 13:39:50 |

Share: | | | | |


ಕಡಬದಲ್ಲಿ ಡಯಾಲಿಸಿಸ್ ಕೇಂದ್ರವನ್ನು ಆರಂಭಿಸುವಂತೆ ಆರೋಗ್ಯ ಸಚಿವರಿಗೆ ಶಾಸಕ ಅಶೋಕ್ ರೈ ಮನವಿ

ಪುತ್ತೂರು: ತಾಲೂಕು ಕೇಂದ್ರವಾಗಿರುವ ಕಡಬದಲ್ಲಿ ಡಯಾಲಿಸಿಸ್ ಕೇಂದ್ರವನ್ನು ಆರಂಭಿಸುವಂತೆ ಪುತ್ತೂರು ಶಾಸಕರಾದ ಅಶೋಕ್ ರೈಯವರು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್‌ಗುಂಡೂರಾವ್ ರವರಿಗೆ ಮನವಿ ಮಾಡಿದ್ದಾರೆ.

ಜೂ. ೭ ರಂದು ಬೆಂಗಳೂರಿನಲ್ಲಿ ಸಚಿವರ ಬಳಿ ತೆರಳಿದ ಶಾಸಕರು ಸಚಿವರ ಜೊತೆ ಪುತ್ತೂರು ವಿಧಾನಸಭಾ ಕ್ಷೇತ್ರದ ವಿಚಾರಕ್ಕೆ ಸಂಬಂಧಿಸಿದಂತೆ ಸುದೀರ್ಘ ಮತುಕತೆ ನಡೆಸಿದರು. ತಾಲೂಕು ಕೇಂದ್ರವಾಗಿರುವ ಕಡಬದಲ್ಲಿ ಡಯಾಲಿಸ್ ಕೇಂದ್ರವನ್ನು ತಕ್ಷಣವೇ ಆರಂಭಿಸಬೇಕಿದೆ. ಕಡಬದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಈಗಾಗಲೇ ಡಯಾಲಿಸಿಸ್ ಕೇಂದ್ರವನ್ನು ಆರಂಭ ಮಾಡಿ, ಮೂರು ಡಯಾಲಿಸಿಸ್ ಯಂತ್ರವನ್ನು ನೀಡಲಗಿದೆ. ಆದರೆ ಡಯಾಲಿಸಿಸ್ ಕೇಂದ್ರಕ್ಕೆ ಆರ್‌ವೊ ಪ್ಲಾಂಟ್ ಆಳವಡಿಸಿ ಸೂಕ್ತವಾದ ಸಿಬಂದಿಗಳ ನೇಮಕ ಮಾಡದೇ ಇರುವ ಕಾರಣ ಡಯಾಲಿಸಿಸ್ ಕೇಂದ್ರ ಕಾರ್ಯಚರಣೆಯಲ್ಲಿಲ್ಲ. ಸರಕಾರ ತಕ್ಷಣವೇ ಕಡಬ ಸಮುದಾಯ ಕೇಂದ್ರದಲ್ಲಿರುವ ಡಯಾಲಿಸಿಸ್ ಕೇಂದ್ರಕ್ಕೆ ಆರ್‌ವೊ ಮತ್ತು ಸಿಬಂದಿಗಳನ್ನು ನೇಮಕ ಮಾಡಿ ಕೇಂದ್ರವನ್ನು ಆರಂಭಿಸಬೇಕು ಎಂದು ಮನವಿಯಲ್ಲಿ ತಿಳಿಸಿದ್ದಾರೆ. ಕಡಬ ತಾಲೂಕು ವ್ಯಾಪ್ತಿಯಲ್ಲಿನ ಜನರು ಡಯಾಲಿಸ್‌ಗಾಗಿ ೪೫ ಕಿ ಮೀರದ ಪುತ್ತೂರು ಅಥವಾ ಸುಳ್ಯಕ್ಕೆ ತೆರಳಿ ಡಯಾಲಿಸಿಸ್ ಮಾಡಬೇಕಾದ ಅನಿವಾರ್ಯತೆ ಇದ್ದು , ಸರದಿ ಸಾಲಿನಲ್ಲಿ ನಿಂತು ಡಯಾಲಿಸಿಸ್ ಮಾಡಬೇಕಾದ ಪರಿಸ್ಥಿತಿ ಇದೆ ಎಂದು ಶಾಸಕರು ಸಚಿವರ ಗಮನಕ್ಕೆ ತಂದರು. ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿರುವ ಡಯಾಲಿಸಿಸ್ ಕೇಂದ್ರವನ್ನು ತುರ್ತಾಗಿ ಆರಂಭಿಸುವಂತೆಯೂ ಮನವಿ ಮಾಡಿದರು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಾದ ಟಿ ಕೆ ಅನಿಲ್‌ಕುಮಾರ್ ಅವರನ್ನೂ ಭೇಟಿಯಾಗಿ ಶಾಸಕರು ಮನವಿ ಸಲ್ಲಿಸಿದ್ದಾರೆ.

ಗಮನಿಸಿ: ಸೊಳ್ಳೆ ಕಾಟದಿಂದ ತಪ್ಪಿಸಿಕೊಳ್ಳಲು ಸುಲಭವಾದ ಉಪಾಯ ಇಲ್ಲಿದೆ!

Posted by Vidyamaana on 2024-02-28 04:33:22 |

Share: | | | | |


ಗಮನಿಸಿ: ಸೊಳ್ಳೆ ಕಾಟದಿಂದ ತಪ್ಪಿಸಿಕೊಳ್ಳಲು ಸುಲಭವಾದ ಉಪಾಯ ಇಲ್ಲಿದೆ!

ಸೆಳ್ಳೆಗಳ ಕಾಟ ಅಷ್ಟಿಷ್ಟಲ್ಲ. ಸಂಜೆ ಆಯಿತೆಂದರೆ ಅದೆಲ್ಲಿಂದ ಬರುತ್ತವೆಯೋ ಮನೆಯೊಳಗೆ ನುಗ್ಗಿ ಮನೆಮಂದಿಗೆಲ್ಲ ಹಿಂಸೆ ನೀಡಲಾರಂಭಿಸುತ್ತವೆ. ಇವುಗಳಿಂದ ಆರೋಗ್ಯದಲ್ಲಿ ಏರುಪೇರಾಗುವ ಸಾಧ್ಯತೆ ಕೂಡ ಹೆಚ್ಚು. ಕೆಲವೊಮ್ಮೆ ಇವು ಮಾರಣಾಂತಿಕ ಕೂಡ ಹೌದು.ಇವುಗಳನ್ನು ನಿಯಂತ್ರಿಸಲು ಮಾರುಕಟ್ಟೆಯಲ್ಲಿ ಸಿಗುವ ಕೆಮಿಕಲ್‌ ಕ್ವಾಯಿಲ್‌ಗಳನ್ನು ಬಳಸಲಾಗುತ್ತದೆ. ಇದರಿಂದ ಸೊಳ್ಳೆಗಳು ನಿಯಂತ್ರಣಕ್ಕೇನೋ ಬರುತ್ತವೆ. ಆದರೆ ಈ ಕೆಮಿಕಲ್‌ ಹೊಗೆ ಅಥವಾ ವಾಸನೆ ಮನುಷ್ಯನ ಶ್ವಾಶಕೋಶಕ್ಕೆ ತುಂಬಾ ಡೇಂಜರ್‌. ಇದು ಮನುಷ್ಯನ ಆರೋಗ್ಯದ ಮೇಲೆ ತುಂಬಾ ಕೆಟ್ಟ ಪರಿಣಾಮ ಬೀರುತ್ತದೆ. ಹಾಗಾಗಿ ಯಾವುದೇ ಕೆಮಿಕಲ್‌ ಇಲ್ಲದೆ ನೈಸರ್ಗಿಕವಾಗಿ ಸೊಳ್ಳೆಗಳು ಮನೆಯೊಳಗೆ ಬರದಂತೆ ಕೆಲ ಉಪಾಯಗಳಿವೆ. ತಿಳಿದುಕೊಳ್ಳಿ.


ನಾವಿಂದು ಹೇಳುವ ಮನೆಮದ್ದು ಸೊಳ್ಳೆಗಳನ್ನು ನಿಯಂತ್ರಿಸಬಹುದು ಮತ್ತು ಇದರ ಹೊಗೆ ದೇಹಕ್ಕೆ ಯಾವುದೇ ತೊಂದರೆ ನೀಡದೇ ನಿಮ್ಮ ಉಸಿರಾಟಕ್ಕೂ ಔಷಧಿ ರೂಪದಲ್ಲಿ ಕೆಲಸ ಮಾಡುತ್ತದೆ. ಸೊಳ್ಳೆಗಳ ಕಾಟದಿಂದ ಮುಕ್ತಿಹೊಂದಲು ಬೇಕಾಗುವ ಸಾಮಗ್ರಿಗಳು

ಕರ್ಪೂರ, ಬೆಳ್ಳುಳ್ಳಿ, ತುಪ್ಪ, ಅಥವಾ ಕೊಬ್ಬರಿ ಎಣ್ಣೆ ಹಾಗು ಒಂದು ಮಣ್ಣಿನ ಬಟ್ಟಲು.

ಮೊದಲು ಒಂದು ಅರೆಯುವ ಕಲ್ಲಿಗೆ ಆರೇಳು ಎಸಳು ಬೆಳ್ಳುಳ್ಳು ಹಾಕಿಕೊಳ್ಳಿ, ಇದಕ್ಕೆ ಎರಡು ಕರ್ಪೂರ ಹಾಕಿ ಎರಡನ್ನೂ ಚೆನ್ನಾಗಿ ಜಜ್ಜಿಕೊಳ್ಳಿ. ಜಜ್ಜಿಕೊಂಡ ಈ ಮಿಶ್ರಣವನ್ನು ಒಂದು ಮಣ್ಣಿನ ಬಟ್ಟಲಿಗೆ ಹಾಕಿಕೊಳ್ಳಿ. ಇದಕ್ಕೆ ಸ್ವಲ್ಪ ಕೊಬ್ಬರಿ ಎಣ್ಣೆ ಅಥವಾ ತುಪ್ಪ ಹಾಕಿ ಬೇಕಿದ್ದರೆ ಇನ್ನಷ್ಟು ಕರ್ಪೂರ ಹಾಕಿ. ನಂತರ ಇದಕ್ಕೆ ಬೆಂಕಿ ಹಾಕಿ. ಬೆಂಕಿ ಹಾಕಿ ಹೊಗೆಯಾಡುತ್ತಿದ್ದಂತೆಯೇ ಮನೆಯಲ್ಲಾ ಈ ಹೊಗೆಯನ್ನು ಆಡಿಸಬೇಕು. ಮನೆಯ ಮೂಲೆ ಮೂಲೆಯಲ್ಲೂ ಇದರ ಹೋಗೆ ತಲುಪುವಂತೆ ನೋಡಿಕೊಳ್ಳಬೇಕು.ಸಂಜೆ ದೀಪ ಹಚ್ಚುವ ಸಮಯದಲ್ಲಿ ಹೀಗೆ ಮಾಡಿ. ಸೊಳ್ಳೆ ಬರುವ ಸಮಯದಲ್ಲಿ ಈ ಹೊಗೆಯಾಡಿಸಿದರೆ ಈ ಘಾಟಿನ ಹೊಗೆಗೆ ಸೊಳ್ಳೆ ಅಪ್ಪಿತಪ್ಪಿಯೂ ನಿಮ್ಮ ಮನೆಯೊಳಗೆ ನುಗ್ಗುವುದಿಲ್ಲ. ಇನ್ನು ಇದರ ಹೊಗೆ ನಿಮ್ಮ ಆರೋಗ್ಯಕ್ಕೂ ಒಳ್ಳೆಯದು. ಇದರಿಂದ ಯಾವುದೇ ಸೈಡ್‌ ಎಫೆಕ್ಟ್‌ ಇಲ್ಲ. ಒಮ್ಮೆ ಟ್ರೈ ಮಾಡಿ ನೋಡಿ.

ಸೂಚನೆ: ಆರೋಗ್ಯ ತಜ್ಞರು ಮತ್ತು ಅಧ್ಯಯನಗಳ ಪ್ರಕಾರ ಈ ವಿವರಗಳನ್ನು ಒದಗಿಸಲಾಗಿದೆ. ಈ ಲೇಖನವು ನಿಮ್ಮ ತಿಳುವಳಿಕೆಗಾಗಿ ಮಾತ್ರ. ಇವುಗಳನ್ನು ಅನುಸರಿಸುವ ಫಲಿತಾಂಶಗಳು ಕೇವಲ ವೈಯಕ್ತಿಕವಾಗಿವೆ. ಇವುಗಳನ್ನು ಅನುಸರಿಸುವ ಮೊದಲು ಸಂಬಂಧ ಪಟ್ಟ ವೈದ್ಯರು, ತಜ್ಞರನ್ನು ಸಂಪರ್ಕಿಸುವುದು ಉತ್ತಮ ಮಾರ್ಗವಾಗಿದೆ. ನೀವು ಗಮನಿಸಬಹುದು.

ಬ್ಯಾಂಕ್‌ನಿಂದ ಕಿರುಕುಳ ಆರೋಪ; ವಿಕಾಸಸೌಧದೆದುರು ದಂಪತಿಯಿಂದ ಆತ್ಮಹತ್ಯೆ ಹೈಡ್ರಾಮಾ

Posted by Vidyamaana on 2024-01-10 20:26:23 |

Share: | | | | |


ಬ್ಯಾಂಕ್‌ನಿಂದ ಕಿರುಕುಳ ಆರೋಪ; ವಿಕಾಸಸೌಧದೆದುರು ದಂಪತಿಯಿಂದ ಆತ್ಮಹತ್ಯೆ ಹೈಡ್ರಾಮಾ

ಬೆಂಗಳೂರು: ಖಾಸಗಿ ಬ್ಯಾಂಕ್‌ನಲ್ಲಿ (Private Bank) ಪಡೆದುಕೊಂಡಿದ್ದ ಸಾಲಕ್ಕೆ ದುಪ್ಪಟ್ಟು ಹಣ ಕಟ್ಟಿದರೂ ಕಿರುಕುಳ ನಿಂತಿಲ್ಲ ಎಂದು ಆರೋಪಿಸಿ ಕುಟುಂಬವೊಂದು ವಿಕಾಸಸೌಧದ ಮುಂದೆ ಆತ್ಮಹತ್ಯೆಗೆ (Self Harming) ಯತ್ನಿಸಿದೆ. ಕೂಡಲೇ ಅವರನ್ನು ಸ್ಥಳದಲ್ಲಿದ್ದ ಪೊಲೀಸರು ತಡೆದಿದ್ದಾರೆ.ವಿಕಾಸಸೌಧದ ಮುಂದೆ ಬಂದಿದ್ದ ಶಾಯಿಸ್ತಾ ಬಾನು ಹಾಗೂ ಮೊಹಮದ್ ಮುನಾಯಿದ್ ಉಲ್ಲಾ ದಂಪತಿ ಏಕಾಏಕಿ ಸೀಮೆಎಣ್ಣೆಯನ್ನು ಮೈಮೇಲೆ ಸುರಿದುಕೊಂಡಿದ್ದಾರೆ.

ತಮಗೆ ಅನ್ಯಾಯವಾಗಿದೆ, ಹೀಗಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇವೆ ಎಂದು ಕೂಗಿಕೊಡಿದ್ದಾರೆ. ಆದರೆ, ಅಷ್ಟರಲ್ಲಿ ವಿಕಾಸಸೌಧದ ಕಾವಲಿಗೆ ಇದ್ದ ಪೊಲೀಸರು ಅವರನ್ನು ತಡೆದಿದ್ದು, ರಕ್ಷಣೆ ಮಾಡಿದ್ದಾರೆ.


ಏನಿದು ಪ್ರಕರಣ?

ಜೆಜೆ ನಗರದಲ್ಲಿ ಶಾಯಿಸ್ತಾ ಬಾನು ಹಾಗೂ ಮೊಹಮದ್ ಮುನಾಯಿದ್ ಉಲ್ಲಾ ದಂಪತಿಯ ಮನೆಯ ಇದೆ. ಈ ಮನೆ ಮೇಲೆ 50 ಲಕ್ಷ ರೂಪಾಯಿ ಸಾಲವನ್ನು ಈ ಕುಟುಂಬವು ಪಡೆದಿದೆ ಎನ್ನಲಾಗಿದೆ. ಈ ಸಾಲಕ್ಕೆ ಈಗ ಬಡ್ಡಿ ಸೇರಿ ಒಟ್ಟು 97 ಲಕ್ಷ ರೂಪಾಯಿಯನ್ನು ಕಟ್ಟಿದರೂ ಬ್ಯಾಂಕ್‌ನಿಂದ ಕಿರುಕುಳ ತಪ್ಪಿಲ್ಲ ಎಂದು ಆರೋಪ ಮಾಡಿದ್ದಾರೆ. ಹೀಗಾಗಿ ತಮಗೆ ಬೇರೆ ದಾರಿ ಇಲ್ಲದೆ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇವೆ ಎಂದು ಹೇಳಿದ್ದಾರೆ.ಆತ್ಮಹತ್ಯೆಗೆ ಯತ್ನಿಸಿದ ದಂಪತಿ ಮೇಲೆ ಕೇಸ್ ದಾಖಲು

ಆತ್ಮಹತ್ಯೆಗೆ ಯತ್ನಿಸಿದ ದಂಪತಿ ಮೇಲೆ ಈಗ ಪೊಲೀಸರು ಕೇಸ್ ದಾಖಲು ಮಾಡಿದ್ದಾರೆ. ಐಪಿಸಿ 309 (ಆತ್ಮಹತ್ಯೆಗೆ ಯತ್ನ) ಹಾಗೂ ಐಪಿಸಿ 290 (ಸಾರ್ವಜನಿಕ ಸ್ಥಳಗಳಲ್ಲಿ ದುರ್ವರ್ತನೆ ) ಅಡಿ ಕೇಸ್ ದಾಖಲಾಗಿದೆ. ಶಾಯಿಸ್ತಾ ಬಾನು ಹಾಗು ಮೊಹಮದ್ ಮುನಾಯಿದ್ ಉಲ್ಲಾ ಇಬ್ಬರ ಮೇಲೂ ಪ್ರಕರಣ ದಾಖಲಾಗಿದೆ. ಆ ಬಳಿಕ ಮುಚ್ಚಳಿಕೆ ಬರೆಸಿಕೊಂಡು ಠಾಣಾ ಜಾಮೀನಿನ ಮೇಲೆ ಅವರನ್ನು ಪೊಲೀಸರು ಬಿಡುಗಡೆ ಮಾಡಿ ಕಳುಹಿಸಿದ್ದಾರೆ



Leave a Comment: