ನಕಲಿ ಚಿನ್ನ ದ ಆಸೆಗೆ ತುಮಕೂರಿನಲ್ಲಿ ಬಲಿಯಾದರೇ ಬೆಳ್ತಂಗಡಿಯ ಮೂವರು?

ಸುದ್ದಿಗಳು News

Posted by vidyamaana on 2024-03-23 10:38:46 |

Share: | | | | |


ನಕಲಿ ಚಿನ್ನ ದ ಆಸೆಗೆ ತುಮಕೂರಿನಲ್ಲಿ ಬಲಿಯಾದರೇ ಬೆಳ್ತಂಗಡಿಯ ಮೂವರು?

ಬೆಳ್ತಂಗಡಿ : ತುಮಕೂರಿನಲ್ಲಿ ಕಾರಿಗೆ ಬೆಂಕಿ ಹಚ್ಚಿ ಕೆರೆಗೆ ತಳ್ಳಿದ ಪ್ರಕರಣದಲ್ಲಿ ಮೂವರು ಸಾವನ್ನಪ್ಪಿದ ಸಂಬಂಧಪಟ್ಟಂತೆ ಆರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.ಪ್ರಕರಣದ‌ ಪ್ರಮುಖ ರೂವಾರಿ ತುಮಕೂರಿನ ಸ್ವಾಮಿ ಮತ್ತು ಐದು ಜನರನ್ನು ಕೋರಾ ಪೊಲೀಸರು ಮಾ.22 ರಂದು ರಾತ್ರಿ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ತುಮಕೂರಿಗೆ ಕಳೆದ ಹನ್ನೊಂದು ದಿನದ ಹಿಂದೆ ವ್ಯವಹಾರ ಸಂಬಂಧ ಮದಡ್ಕದ ರಫೀಕ್ ಎಂಬವರ ಮಾಲೀಕತ್ವದ ಎಸ್ ಪ್ರೆಸ್ ಕಾರಿನಲ್ಲಿ ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಟಿ.ಬಿ.ಕ್ರಾಸ್ ನಿವಾಸಿ ಆಟೋ ಚಾಲಕ ಸಾಹುಲ್ ಹಮೀದ್(45) , ಕುವೆಟ್ಟು ಗ್ರಾಮದ ಮದಡ್ಕ ನಿವಾಸಿ ಇಸಾಕ್(56) , ಶಿರ್ಲಾಲು ಗ್ರಾಮದ ಸಿದ್ದಿಕ್(34) ಮೂವರು ಬಾಡಿಗೆ ಮಾಡಿಕೊಂಡು ಹೋಗಿದ್ದರು ಎಂದು ಗುರುತಿಸಿದ್ದಾರೆ.

ಇನ್ನು ಮೂರು ಜನ ಮೃತರೆಲ್ಲಾ ನಕಲಿ ಚಿನ‌್ನದ ದಂಧೆಯ ಆಸೆಗೆ ಬಲಿಯಾಗಿದ್ದಾರೆ ಅನ್ನೋದು ಪ್ರಾಥಮಿಕ ವಿಚಾರಣೆ ವೇಳೆ ಗೊತ್ತಾಗಿದೆ. ನಮ್ಮ ಜಾಗದಲ್ಲಿ ಕೃಷಿ ಮಾಡುವಾಗ ಚಿನ್ನದ ಹಂಡೆ ಸಿಕ್ಕಿದೆ ಕಡಿಮೆ ಚಿನ್ನವನ್ನು ಬೆಲೆಗೆ ನೀಡುತ್ತೇವೆ ಎಂದು ಸುಳ್ಳು ಹೇಳಿ ಮೂವರನ್ನು ಕರೆಸಿ ಹಣ ದೋಚುವ ಪ್ಲ್ಯಾನ್ ಮಾಡಿ ಕರೆಸಿಕೊಂಡು ನಂತರ ಕೈಕಾಲು ಕಟ್ಟಿ ಹಾಕಿ ಕಾರಿಗೆ ಬೆಂಕಿ ಹಚ್ಚಿ ಕೊಲೆ ಮಾಡಲಾಗಿದೆ ಎನ್ನಲಾಗಿದೆ.

ಪ್ರಕರಣದ ಪ್ರಮುಖ ರೂವಾರಿ ತುಮಕೂರಿನ ಸ್ವಾಮಿ ಮತ್ತು ಇತರ ಐದು ಜನ ಸೇರಿ ಒಟ್ಟು ಆರು ಜನರನ್ನು ವಶಕ್ಕೆ ಪಡೆದಿರುವ ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ. 


ಕೋರಾ ಪೊಲೀಸ್ ಠಾಣೆಯಲ್ಲಿ ಮಾ.22 ರಂದು ಸುಮೊಟೋ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದು. ಇನ್ನು ಮೂವರ ಶವ ಸಂಪೂರ್ಣವಾಗಿ ಸುಟ್ಟಿರುವ ಕಾರಣ ಗುರುತು ಪತ್ತೆಹಚ್ಚಲು ಡಿಎನ್ಎ ಪರೀಕ್ಷೆ ಬಳಿಕ ಮನೆಮಂದಿಗೆ ಶವ ಬಿಟ್ಟು ಕೊಡಲಿದ್ದಾರೆ. ಡಿಎನ್ಎ ವರದಿ ಬರಲು ಸುಮಾರು ಒಂದು ವಾರ ಬೇಕಾಗುತ್ತದೆ ಎಂದು ಪೊಲೀಸರು ಮನೆಯವರಿಗೆ ತಿಳಸಿದ್ದಾರೆ.

 Share: | | | | |


ಅಡಿಕೆ ಕಳ್ಳತನ ಲಕ್ಷಾಂತರ ರೂ. ಮೌಲ್ಯದ ಆಡು ಕೋಳಿ ಶೆಡ್ ನಾಶ ಪ್ರಕರಣ

Posted by Vidyamaana on 2023-08-05 15:29:18 |

Share: | | | | |


ಅಡಿಕೆ ಕಳ್ಳತನ ಲಕ್ಷಾಂತರ ರೂ. ಮೌಲ್ಯದ ಆಡು ಕೋಳಿ ಶೆಡ್ ನಾಶ ಪ್ರಕರಣ

ಪುತ್ತೂರು: 81 ವರ್ಷ ಪ್ರಾಯದ ಹಿರಿಯ ನಾಗರಿಕರ ಜಮೀನನ್ನು ಲೀಸಿಗೆ ಕೊಡಲು ಒತ್ತಾಯಿಸಿ, ಕೊಡದೇ ಇದ್ದರೆ ಕೊಲೆ ಮಾಡುವುದಾಗಿ ಬೆದರಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸುವಂತೆ ನ್ಯಾಯಾಲಯ ಬೆಳ್ಳಾರೆ ಪೊಲೀಸ್ ಠಾಣೆಗೆ ಆದೇಶಿಸಿದೆ.

ಕುರಿಯ ಗ್ರಾಮದ ದೇರ್ಕಜೆ ವೆಂಕಟ್ರಮಣ ಭಟ್, ಸವಣೂರು ಗ್ರಾಮದ ಪಣೆಮಜಲು ನಿವಾಸಿ ಜಾಫರ್, ಬಪ್ಪಳಿಗೆ ನಿವಾಸಿ ಸುಭಾಶ್ ರೈ ಆರೋಪಿಗಳು. ಇವರು ಹಿರಿಯ ನಾಗರಿಕೆ, ಕಡಬ ತಾಲೂಕಿನ ಸವಣೂರು ಗ್ರಾಮದ ಸೋಂಪಾಡಿ ನಿವಾಸಿ ನಾಗರತ್ನಮ್ಮ (81 ವರ್ಷ) ಅವರಿಗೆ ಕೊಲೆ ಬೆದರಿಕೆ ಹಾಕಿದ್ದಲ್ಲದೇ, ಅಲ್ಲಿದ್ದ 2 ಕ್ವಿಂಟಾಲ್ ಅಡಿಕೆಯನ್ನು ಕಳ್ಳತನ ಮಾಡಿದ್ದರು. ಮಾತ್ರವಲ್ಲ ಕೋಳಿ ಹಾಗೂ ಆಡು ಸಾಕಿಕೊಂಡಿದ್ದ ದೊಡ್ಡ ಶೆಡ್ಡನ್ನು ಜೆಸಿಬಿಯಲ್ಲಿ ಕೆಡವಿ ಹಾಕಿದ್ದರು ಎಂದು ಆರೋಪಿಸಲಾಗಿದೆ.

ಪ್ರಕರಣದ ಬಗ್ಗೆ ಬೆಳ್ಳಾರೆ ಪೊಲೀಸ್ ಠಾಣೆಗೆ ದೂರು ನೀಡಿದಾಗ, ದೂರು ಸ್ವೀಕರಿಸಿಲ್ಲ ಎಂಬ ಕಾರಣಕ್ಕೆ ನಾಗರತ್ನಮ್ಮ ಅವರು ನ್ಯಾಯಾಲಯದ ಕದ ತಟ್ಟಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ ಪ್ರಕರಣ ದಾಖಲಿಸುವಂತೆ ಆದೇಶ ನೀಡಿದೆ.

ಏನಿದು ಪ್ರಕರಣ?

ನಾಗರತ್ನಮ್ಮ ಅವರು ಪುಣ್ಚಪ್ಪಾಡಿಯಲ್ಲಿ ಜಮೀನು ಹೊಂದಿದ್ದು, ಅದನ್ನು ಲೀಸಿಗೆ ಕೊಡುವಂತೆ ಆರೋಪಿಗಳು ಒತ್ತಾಯಿಸಿದ್ದರು. ಕೊಡದೇ ಇದ್ದಾಗ ಮೇ 30ರಂದು ನಾಗರತ್ನಮ್ಮ ಅವರ ಜಮೀನಿಗೆ ಅಕ್ರಮ ಪ್ರವೇಶ ಮಾಡಿದ ಆರೋಪಿಗಳು, ಹಿರಿಯ ನಾಗರಿಕೆ ನಾಗರತ್ನಮ್ಮ ಅವರಿಗೆ ಬೆದರಿಕೆ ಹಾಕಿದ್ದರು. ಜಮೀನು ಕೊಡದೇ ಇದ್ದರೆ ನಾಗರತ್ನಮ್ಮ ಅವರ ಮಗಳನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದರು. ಇದನ್ನು ನಾಗರತ್ನಮ್ಮ ಅವರ ಅಳಿಯ ಆಕ್ಷೇಪಿಸಿದಾಗ, ಅವರಿಗೂ ಹಲ್ಲೆ ನಡೆಸಿದ್ದರು ಎಂದು ಆರೋಪಿಸಲಾಗಿದೆ.

ಇದೇ ಸಂದರ್ಭ ಗೋಣಿಯಲ್ಲಿ ಕಟ್ಟಿಟ್ಟಿದ್ದ 2 ಕ್ವಿಂಟಾಲ್ ಅಡಿಕೆಯನ್ನು ಹೊತ್ತೊಯ್ದಿದ್ದು ಮಾತ್ರವಲ್ಲ, ಆಡು ಹಾಗೂ ಕೋಳಿ ಸಾಕಿಕೊಂಡಿದ್ದ ಬೃಹತ್ ಶೆಡ್ಡನ್ನು ಜೆಸಿಬಿಯಿಂದ ಮುರಿದು ಹಾಕಿದ್ದರು ಎಂದು ದೂರಿನಲ್ಲಿ ತಿಳಿಸಿದ್ದಾರೆ. ಇದರ ಬಗ್ಗೆ ಬೆಳ್ಳಾರೆ ಪೊಲೀಸ್ ಠಾಣೆಗೆ ದೂರು ನೀಡಿದಾಗ, ಯಾವುದೇ ಕ್ರಮ ಕೈಗೊಂಡಿಲ್ಲ. ಆದ್ದರಿಂದ ನ್ಯಾಯಾಲಯದ ಮೊರೆ ಹೋಗಲಾಗಿತ್ತು ಎಂದು ಹೇಳಲಾಗಿದೆ.

ಆನ್ಲೈನ್ ಮೋಸ : ಪುತ್ತೂರಿನ ಪ್ರಖ್ಯಾತ ಡಾಕ್ಟರನ್ನೇ ಯಾಮಾರಿಸಿದ ದುಷ್ಕರ್ಮಿಗಳು

Posted by Vidyamaana on 2024-03-30 04:52:56 |

Share: | | | | |


ಆನ್ಲೈನ್ ಮೋಸ : ಪುತ್ತೂರಿನ ಪ್ರಖ್ಯಾತ ಡಾಕ್ಟರನ್ನೇ ಯಾಮಾರಿಸಿದ ದುಷ್ಕರ್ಮಿಗಳು

ಪುತ್ತೂರು: ಪ್ರಖ್ಯಾತ ಡಾಕ್ಟರ್ ಒಬ್ಬರಿಗೆ ಕರೆ ಮಾಡಿ ಆನ್ಲೈನ್ ಮೂಲಕ 16 ಲಕ್ಷಕ್ಕೂ ಅಧಿಕ ಹಣ ದೋಚಿದ ಘಟನೆ ಪುತ್ತೂರಿನಲ್ಲಿ ಬೆಳಕಿಗೆ ಬಂದಿದೆ.ಪುತ್ತೂರಿನ ಬೊಳ್ವಾರು ನಿವಾಸಿ ಡಾ.ಚಿದಂಬರ ಅಡಿಗ ವಂಚನೆಗೊಳದವರು.ಅವರು ನೀಡಿದ ದೂರಿನಂತೆ ಪುತ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಶೋರೂಂನಿಂದ ತರುತ್ತಿದ್ದ ಹೊಸ ಫಾರ್ಚೂನರ್ ಕಾರು ಬಸ್ ಗೆ ಡಿಕ್ಕಿ

Posted by Vidyamaana on 2024-06-27 12:46:15 |

Share: | | | | |


ಶೋರೂಂನಿಂದ ತರುತ್ತಿದ್ದ ಹೊಸ ಫಾರ್ಚೂನರ್ ಕಾರು ಬಸ್ ಗೆ ಡಿಕ್ಕಿ

ಉಡುಪಿ: ಕುಂದಾಪುರ ಶೋರೂಂನಿಂದ ಮಂಗಳೂರು ಶೋರೂಂನತ್ತ ಹೊಸ ಫಾರ್ಚೂನರ್ ಕಾರನ್ನು ಕೊಂಡೊಯ್ಯುತ್ತಿದ್ದಾಗ ಕಾರು ಚಾಲಕ ನಿಲ್ಲಿಸಿದ ಬಸ್ ಗೆ ಡಿಕ್ಕಿ ಹೊಡೆದ ಘಟನೆ ಉಡುಪಿಯ ನಿಟ್ಟೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಗುರುವಾರ ಸಂಭವಿಸಿದೆ.ಢಿಕ್ಕಿ ಹೊಡೆದ ರಭಸಕ್ಕೆ ಹೊಚ್ಚ ಹೊಸ ಫಾರ್ಚೂನ‌ರ್ ಕಾರು ನಜ್ಜುಗುಜ್ಜಾಗಿದೆ.

ಕಾಪು : ರಂಗ ಕಲಾವಿದ ಲೀಲಾಧರ ಶೆಟ್ಟಿ ದಂಪತಿ ಆತ್ಮಹತ್ಯೆಗೆ ಶರಣು

Posted by Vidyamaana on 2023-12-13 09:16:32 |

Share: | | | | |


ಕಾಪು : ರಂಗ ಕಲಾವಿದ  ಲೀಲಾಧರ ಶೆಟ್ಟಿ ದಂಪತಿ ಆತ್ಮಹತ್ಯೆಗೆ ಶರಣು

ಕಾಪು: ಸಮಾಜ ಸೇವಕ, ಹಿರಿಯ ರಂಗ ಕಲಾವಿದ, ಧಾರ್ಮಿಕ ಮತ್ತು ಸಾಮಾಜಿಕ ಮುಂದಾಳು, ಧರಣಿ ಸಮಾಜ ಸೇವಾ ಸಂಸ್ಥೆಯ ಅಧ್ಯಕ್ಷ, ಕಾಪು ಬಂಟರ ಸಂಘದ ಪ್ರಧಾನ ಕಾರ್ಯದರ್ಶಿ ಕೆ. ಲೀಲಾಧರ ಶೆಟ್ಟಿ (68) ಅವರು ಪತ್ನಿ ವಸುಂಧರಾ ಶೆಟ್ಟಿ (58) ಸಮೇತರಾಗಿ ಮಂಗಳವಾರ ಮಧ್ಯರಾತ್ರಿ ಆತ್ಮಹತ್ಯೆಗೆ ಶರಣಾಗಿದ್ದಾರೆ.



ಲೀಲಾಧರ ಶೆಟ್ಟಿ ಮತ್ತು ವಸುಂಧರಾ ಶೆಟ್ಟಿ ದಂಪತಿ ಮಂಗಳವಾರ ಮಧ್ಯರಾತ್ರಿ 11.20 ರಿಂದ 12.30 ರ ನಡುವಿನ‌ ಅವಧಿಯಲ್ಲಿ ತಮ್ಮ ಮನೆಯ ಪಕ್ಕಾಸಿಗೆ‌ ಒಂದೇ ಸೀರೆಯನ್ನು ಬಿಗಿದು, ಅದರ ಎರಡೂ ತುದಿಗೆ ನೇಣು ಹಾಕಿಕೊಂಡು ಸಾವಿಗೆ ಶರಣಾಗಿರುವುದಾಗಿ ತಿಳಿದು ಬಂದಿದೆ.


ಸಾವಿನ ಬಗ್ಗೆ ಮನೆಯಲ್ಲಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಸ್ಥಳೀಯರು ತಿಳಿಸಿದ್ದು ಈ ಬಗ್ಗೆ ಹೆಚ್ಚಿನ ಮಾಹಿತಿಗಳು ಇನ್ನಷ್ಟೇ ಲಭ್ಯವಾಗಬೇಕಿವೆ. ಕಾಪು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು ತನಿಖೆ ಮುಂದುವರಿಸಿದ್ದಾರೆ.


 ಎಲ್.ಐ.ಸಿ. ಏಜಂಟರಾಗಿ, ಕಲಾ ಸಂಘಟಕ, ಕಲಾಪೋಷಕರಾಗಿದ್ದ ಅವರು ವಿವಿಧ ಕಾರ್ಯಕ್ರಮಗಳ ಆಯೋಜಕರಾಗಿ ಕಲೆ, ಸಂಸ್ಕೃತಿ, ಸಂಸ್ಕಾರ, ಧಾರ್ಮಿಕ, ಜನಪದ, ಶೈಕ್ಷಣಿಕ ಕ್ಷೇತ್ರಗಳ ಪೋಷಕರಾಗಿ ಸ್ಚಾರ್ಥವಿಲ್ಲದೇ, ಕಳಂಕ ರಹಿತರಾಗಿ ಸಮಾಜದಲ್ಲಿ ಗುರುತಿಸಲ್ಪಟ್ಟಿದ್ದರು. ಅವರ ಸೇವೆಗಾಗಿ ಎಲ್ಲರೂ ಅವರನ್ನು ಆತ್ಮೀಯವಾಗಿ ಲೀಲಣ್ಣ ಎಂದೇ ಕರೆಯುತ್ತಿದ್ದರು.

ಮಾ.10 : ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಾಲಯದ ವಾರ್ಷಿಕ ಜಾತ್ರೆ ಹಾಗೂ ಬ್ರಹ್ಮರಥೋತ್ಸವದ ಲೆಕ್ಕಪತ್ರ ಮಂಡನೆ ಸಭೆ

Posted by Vidyamaana on 2024-03-07 18:06:31 |

Share: | | | | |


ಮಾ.10 : ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಾಲಯದ ವಾರ್ಷಿಕ ಜಾತ್ರೆ ಹಾಗೂ ಬ್ರಹ್ಮರಥೋತ್ಸವದ ಲೆಕ್ಕಪತ್ರ ಮಂಡನೆ ಸಭೆ

ಪೆರುವಾಜೆ : ಇತಿಹಾಸ ಪ್ರಸಿದ್ಧ ಮಾಗಣೆ ಕ್ಷೇತ್ರ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಾಲಯದ ವಾರ್ಷಿಕ ಜಾತ್ರೆ ಹಾಗೂ ಬ್ರಹ್ಮರಥೋತ್ಸವವು ಜ.15 ರಿಂದ 21 ರ ತನಕ ಭಕ್ತವೃಂದದ ಪೂರ್ಣ ಸಹಕಾರದೊಂದಿಗೆ ಅತ್ಯಂತ ವಿಜೃಂಭಣೆಯಿಂದ ನಡೆದಿರುವುದು ನಿಮ್ಮೆಲ್ಲರಿಗೂ ತಿಳಿದ ವಿಚಾರ. ಶ್ರೀ ಕ್ಷೇತ್ರದ ವಾರ್ಷಿಕ ಜಾತ್ರೆ, ಬ್ರಹ್ಮರಥೋತ್ಸವದ ಲೆಕ್ಕಪತ್ರದ ಮಂಡನೆಯು‌10-03-2024 ರಂದು ಬೆಳಿಗ್ಗೆ 9 ಕ್ಕೆ ಶ್ರೀ ಕ್ಷೇತ್ರದಲ್ಲಿ ನಡೆಯಲಿದ್ದು ಈ ಸಂದರ್ಭ ಎಲ್ಲ ಭಗವದ್ಭಕ್ತರು ಪಾಲ್ಗೊಳ್ಳಬೇಕಾಗಿ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಾಲಯದ ವ್ಯವಸ್ಥಾಪನ ಸಮಿತಿ‌ ಮಾಜಿ‌ ಅಧ್ಯಕ್ಷ ಪಿ.ಪದ್ಮನಾಭ ಶೆಟ್ಟಿ ತಿಳಿಸಿದ್ದಾರೆ.

ಶೆಟ್ಟರ್ ಬಿಜೆಪಿ ಸೇರ್ಪಡೆ ಬೆನ್ನಲ್ಲೇ ಕಾಂಗ್ರೆಸ್‌ ಅಲರ್ಟ್ ಲಕ್ಷ್ಮಣ ಸವದಿ ಪಕ್ಷ ತೊರೆಯದಂತೆ ಪ್ಲಾನ್

Posted by Vidyamaana on 2024-02-03 22:30:51 |

Share: | | | | |


ಶೆಟ್ಟರ್ ಬಿಜೆಪಿ ಸೇರ್ಪಡೆ ಬೆನ್ನಲ್ಲೇ ಕಾಂಗ್ರೆಸ್‌ ಅಲರ್ಟ್ ಲಕ್ಷ್ಮಣ ಸವದಿ ಪಕ್ಷ ತೊರೆಯದಂತೆ ಪ್ಲಾನ್

ಬೆಳಗಾವಿ: ಕಳೆದ ವಿಧಾನಸಭಾ ಚುನಾವಣೆ ವೇಳೆ ಬಿಜೆಪಿಯಿಂದ ಟಿಕೆಟ್ ಸಿಗದೆ ಮುನಿಸಿಕೊಂಡು ಕಾಂಗ್ರೆಸ್‌ ಸೇರಿದ್ದ ಮಾಜಿ ಸಿಎಂ ಜಗದೀಶ್ ಶೆಟ್ಟರ್‌ (Jag

non

ish Shettar) ಕೊನೆಗೂ ಬಿಜೆಪಿ ಸೇರಿದ್ದಾರೆ. ಇನ್ನೊಂದೆಡೆ ಶೆಟ್ಟರ್ ಬಿಜೆಪಿ ಸೇರುತ್ತಿದ್ದಂತೆ ಇತ್ತ ಕಾಂಗ್ರೆಸ್ (Congress) ಅಲರ್ಟ್ ಆಗಿದೆ.ಹೌದು.. ಲೋಕಸಭಾ ಚುನಾವಣೆ ಹತ್ತಿರ ಬರುತ್ತಿದ್ದಂತೆ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಲರ್ಟ್ ಆಗಿದ್ದು, ಮಾಜಿ ಸಿಎಂ ಜಗದೀಶ್ ಶೆಟ್ಟರ್ ಬಿಜೆಪಿಗೆ ವಾಪಸ್ ಸೇರ್ಪಡೆಯಾದ ಬೆನ್ನಲ್ಲೇ ಮತ್ತೆ ಯಾವುದೇ ನಾಯಕರು ಬಿಜೆಪಿಯತ್ತ ಮುಖ ಮಾಡದಂತೆ ನೋಡಿಕೊಳ್ಳಲು ಪ್ಲಾನ್ ರೂಪಿಸಿದೆ. ಆ ಮೂಲಕ ಬಿಜೆಪಿ ಬಿಟ್ಟು ಕಾಂಗ್ರೆಸ್‌ ಸೇರಿದವರನ್ನು ಪಕ್ಷದಲ್ಲಿಯೇ ಉಳಿಸಿಕೊಳ್ಳಲು ಪ್ಲಾನ್ ಮಾಡಲಾಗಿದೆ.


ಈ ಹಿನ್ನೆಲೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಪಕ್ಷ ಗೆಲ್ಲಲು ಶ್ರಮಿಸಿದ ಶಾಸಕ ಲಕ್ಷ್ಮಣ ಸವದಿ ಅವರನ್ನು ಕಾಂಗ್ರೆಸ್‌ನಲ್ಲಿಯೇ ಉಳಿಸಿಕೊಳ್ಳಲು ಕಾಂಗ್ರೆಸ್‌ ನಾಯಕರು ಪ್ಲಾನ್ ರೂಪಿಸಿದ್ದು, ಈಗಾಗಲೇ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಲಕ್ಷ್ಮಣ ಸವದಿ ಅವರಿಗೆ ಪಕ್ಷ ಬಿಡದಂತೆ ಸೂಚಿಸಿದ್ದಾರೆ. ಸಿಎಂ, ಡಿಸಿಎಂ ಸೇರಿದಂತೆ ಕೆಲ ಸಚಿವರು ಲಕ್ಷ್ಮಣ ಸವದಿ ಪಕ್ಷ ಬಿಡದಂತೆ ಎಚ್ಚರಿಕೆ ವಹಿಸಿದ್ದಾರೆ.ಎಲ್ಲಾ ಬೆಳವಣಿಗೆಗಳ ಮಧ್ಯೆ ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಅವರು ಲಕ್ಷ್ಮಣ ಸವದಿಗೆ ಕರೆ ಮಾಡಿ ಮಾತನಾಡಿದ್ದು, ಕಾಂಗ್ರೆಸ್ ಪಕ್ಷ ಬಿಡದಂತೆ ಮತ್ತು ಪಕ್ಷದಲ್ಲಿ ಸೂಕ್ತ ಸ್ಥಾನಮಾನ ನೀಡುವುದಾಗಿ ಭರವಸೆ ನೀಡಿದ್ದಾರೆ. ರಣದೀಪ್ ಸಿಂಗ್ ಸುರ್ಜೇವಾಲಾ ಮಾತಿನಿಂದ ಸಂತಸಗೊಂಡಿರುವ ಶಾಸಕ ಲಕ್ಷ್ಮಣ ಸವದಿ, ಮುಂದಿನ ವಾರ ರಣದೀಪ್ ಸಿಂಗ್ ಸುರ್ಜೇವಾಲಾರನ್ನು ಭೇಟಿಯಾಗಿ ಮಾತುಕತೆ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ.


ಈಗಾಗಲೇ ದೆಹಲಿ ಮಟ್ಟದಿಂದಲೇ ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ ಅವರನ್ನು ಬಿಜೆಪಿ ನಾಯಕರು ಸಂಪರ್ಕ ಮಾಡಿದ್ದು, ಲೋಕಸಭಾ ಚುನಾವಣೆಗೂ ಮುನ್ನವೇ ಅವರನ್ನು ಬಿಜೆಪಿಗೆ ಕರೆತರಿಸಿ ಮತ್ತೆ ಸೂಕ್ತ ಸ್ಥಾನಮಾನ ನೀಡೋದು ಮತ್ತು ಲೋಕಸಭಾ ಚುನಾವಣೆಯಲ್ಲಿ ಹೆಚ್ಚು ಸ್ಥಾನಗಳನ್ನು ಗೆಲ್ಲಲು ಬಿಜೆಪಿ ಪ್ಲಾನ್ ರೂಪಿಸಿದೆ. ಇದರ ಬೆನ್ನಲ್ಲೇ ಕಾಂಗ್ರೆಸ್‌ ಹೈಕಮಾಂಡ್ ಮತ್ತು ರಾಜ್ಯ ನಾಯಕರು ಕೂಡ ಎಚ್ಚರಿಕೆ ವಹಿಸಿದ್ದಾರೆ.ಇನ್ನು ಮುಂದಿನ ವಾರ ದೆಹಲಿಯಲ್ಲಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರ ಜೊತೆಗೆ ಲಕ್ಷ್ಮಣ ಸವದಿ ಮಾತುಕತೆ ನಡೆಸುವ ವೇಳೆ ಕೆಲವು ಬೇಡಿಕೆಗಳನ್ನು ಈಡೇರಿಸಲು ಲಕ್ಷ್ಮಣ ಸವದಿ ಸಿದ್ಧತೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.



Leave a Comment: