ತುಳುವನ್ನು ರಾಜ್ಯದ ಎರಡನೇ ಅಧಿಕೃತ ಭಾಷೆಯನ್ನಾಗಿ ಘೋಷಣೆ ಮಾಡಿ ಸದನದಲ್ಲಿ ತುಳುವಿನಲ್ಲೇ ವಿಚಾರಮಂಡಿಸಿದ ಶಾಸಕ ಅಶೋಕ್ ರೈ

ಸುದ್ದಿಗಳು News

Posted by vidyamaana on 2024-07-24 16:44:22 |

Share: | | | | |


ತುಳುವನ್ನು ರಾಜ್ಯದ ಎರಡನೇ ಅಧಿಕೃತ ಭಾಷೆಯನ್ನಾಗಿ ಘೋಷಣೆ ಮಾಡಿ ಸದನದಲ್ಲಿ ತುಳುವಿನಲ್ಲೇ ವಿಚಾರಮಂಡಿಸಿದ ಶಾಸಕ ಅಶೋಕ್ ರೈ

ಪುತ್ತೂರು: ತುಳು ಭಾಷೆಯನ್ನು ಕರ್ನಾಟಕದ ಎರಡನೇ ಅಧಿಕೃತ ಭಾಷೆಯನ್ನಾಗಿ ಸೇರಿಸಬೇಕು ಎಂದು ಆಗ್ರಹಿಸಿ ಪುತ್ತೂರು ಶಾಸಕರಾದ ಅಶೋಕ್ ರೈಯವರು ತುಳು ಭಾಷೆಯಲ್ಲೇ ವಿಧಾನಸಭಾ ಅಧಿವೇಶನದಲ್ಲಿ ವಿಚಾರವನ್ನು ಮಂಡಿಸಿದ್ದು , ಶಾಸಕರ ಬೇಡಿಕೆಗೆ ಸರಕಾರದಿಂದ ಗಟ್ಟಿ ಭರವಸೆ ದೊರೆತಿದ್ದು ಮುಂದಿನ ದಿನಗಳಲ್ಲಿ ನಿಮ್ಮ ಬೇಡಿಕೆ ಈಡೇರಲಿದೆ ಎಂದು ಸರಕಾರ ಭರವಸೆಯನ್ನು ನೀಡಿದೆ.

ತುಳುವಿಗೆ ೨೦೦೦ ವರ್ಷದ ಇತಿಹಾಸವಿದೆ

ತುಳುಭಾಷೆಗೆ ಎರಡು ಸಾವಿರ ವರ್ಷದ ಇತಿಹಾಸವಿದೆ. ತುಳು ಮಾತನಾಡುವ ಮಂದಿ ವಿಶ್ವದೆಲ್ಲೆಡೆ ಇದ್ದಾರೆ. ತುಳು ಭಾಷೆಗೆ ಮಾನ್ಯತೆ ಸಿಗಬೇಕು ಎಂದು ಅನೇಕ ವರ್ಷಗಳಿಂದ ಹೋರಾಟಗಳು ನಡೆಯುತ್ತಿದೆ. ಎಟಂನೇ ಪರಿಚ್ಚೇಧಕ್ಕೆ ಸೇರ್ಪಡೆ ಮಾಡಬೇಕು ಎಂಬ ಬೇಡಿಕೆ ಇನ್ನೊಂದು ಕಡೆ ಇದೆ ಇದೆಲ್ಲದರ ನಡುವೆ ತುಳುವನ್ನು ರಾಜ್ಯದ ಎರಡನೇ ಅಧಿಕೃತ ಭಾಷೆಯನ್ನಾಗಿ ಘೋಷಣೆ ಮಾಡಬೇಕು ಎಂಬ ಆಗ್ರಹವನ್ನು ಶಾಸಕನಾಗಿ ಕಳೆದ ಒಂದು ವರ್ಷದಿಂದ ಮಾಡುತ್ತಿದ್ದೇನೆ.

೧೯೯೪ ರಲ್ಲಿ ವೀರಪ್ಪ ಮೊಯಿಲಿಯವರು ಮುಖ್ಯಮಂತ್ರಿಯಾಗಿದ್ದ ವೇಳೆ ತುಳು ಅಕಾಡೆಮಿಯನ್ನು ಸ್ಥಾಪನೆ ಮಾಡಿದ್ದಾರೆ, ೨೦೦೭ ರಲ್ಲಿ ಕೇರಳ ಸರಕಾರ ತುಳು ಅಕಾಡೆಮಿಯನ್ನು ಸ್ಥಾಪನೆ ಮಾಡಿದೆ, ಆಕಾಶವಾಣಿಯಲ್ಲಿ ೧೯೭೬ ರಿಂದ ಆಕಾಶವಾಣಿಯಲ್ಲಿ ತುಳು ಕಾರ್ಯಕ್ರಮ ಪ್ರಸಾರವಾಗುತ್ತಿದೆ, ಅಮೇರಿಕಾದಲ್ಲಿ ಸಿಆರ್ ಎಕ್ಸಾಮ್‌ಗೆ ಅರ್ಜಿ ನಮೂನೆಯಲ್ಲೂ ವಿಶ್ವದ ೧೨೨ ಭಾಷೆಯ ಜೊತೆಗೆ ತುಳುವಿಗೆ ಮಾನ್ಯತೆ ನೀಡಲಾಗಿದೆ, ಗೂಗಲ್ ಸಂಸ್ಥೆಯವರು ತರ್ಜುಮೆ ಮಾಡಬಲ್ಲ ಭಾಷೆಗಳ ಪಟ್ಟಿಯಲ್ಲಿ ತುಳುವನ್ನು ಸೇರ್ಪಡೆ ಮಾಡಿದ್ದಾರೆ. ಇಷ್ಟೆಲ್ಲಾ ಇರುವಾಗ ನಮ್ಮ ರಾಜ್ಯದಲ್ಲಿ ತುಳುವನ್ನು ಅದಿಕೃತ ಭಾಷೆಯನ್ನಾಗಿ ಘೋಷಣೆ ಮಾಡಬೇಕು ಎಂದು ಮನವಿ ಮಾಡಿದರು.

ಮೂರು ರಾಜ್ಯಗಳಿಗೆ ಅಧ್ಯಯನ ತಂಡ ಕಳಿಸಿದ್ದೇನೆ

ಬಿಹಾರ, ಪಶ್ಚಿಮಬಂಗಾಳ ಮತ್ತು ಆಂದ್ರಕ್ಕೆ ವಿಶೇಷ ಪ್ರತಿನಿಧಿಯನ್ನು ತನ್ನ ಸ್ವಂತ ಖರ್ಚಿನಲ್ಲಿ ಕಳಿಸಿದ್ದೇನೆ. ಈ ಮೂರು ರಾಜ್ಯಗಳಲ್ಲಿ ಸ್ಥಳೀಯ ಭಾಷೆಯನ್ನು ಎರಡನೇ ಅಧಿಕೃತ ಭಾಷೆಯನ್ನಾಗಿ ಯಾವ ಆಧಾರದಲ್ಲಿ ಘೋಷಣೆ ಮಾಡಿದ್ದಾರೆ ಎಂಬುದನ್ನು ಅಧ್ಯಯನ ನಡೆಲಲಾಗಿದೆ. ಆಂದ್ರದಿಂದ ವರದಿಯನ್ನು ತರಿಸಿದ್ದೇನೆ.. ಈ ವರದಿಯನ್ನು ಸರಕಾರದ ಮುಂದೆ ಇಡಲಿದ್ದು ಅದರ ಆಧಾರದಲ್ಲಿ ಕರ್ನಾಟಕದಲ್ಲಿ ತುಳುವನ್ನು ಅಧಿಕೃತ ಭಾಷೆಯನ್ನಾಗಿ ಘೋಷಣೆ ಮಾಡಲು ಸಹಕಾರಿಯಾಗಲಿದೆ ಎಂಬ ಕಾರಣಕ್ಕೆ ನಾನು ಸ್ವಂತ ಖರ್ಚಿನಲ್ಲೇ ಅಧ್ಯಯನ ತಂಡವನ್ನು ಮೂರು ರಾಜ್ಯಗಳಿಗೆ ಕಳಿಸಿದ್ದೇನೆ ಎಂದು ಶಾಸಕ ಅಶೋಕ್ ರೈ ತಿಳಿಸಿದರು.

ವಿಶ್ವದಲ್ಲೇ ತುಳವರಿದ್ದಾರೆ, ತುಳುವರು ಎಲ್ಲರನ್ನೂ ಪ್ರೀತಿಯಿಂದ ಕಾಣುತ್ತಾರೆ.


ನಿಕ್ಲು ಗಲಾಟೆ ಮಲ್ಪೊಡ್ಚಿ ಕುಲ್ಲುಲೆ ಮಾರ್ರೆ

ಪುತ್ತೂರು ಶಾಸಕ ಅಶೋಕ್ ರೈಯವರು ಸದನದಲ್ಲಿ ತುಳು ಭಾಷೆಯಲ್ಲಿ ಮಾತನಾಡುವ ವೇಳೆ ಮಧ್ಯದಲ್ಲಿ ಮಾತನಾಡಿದ ಮಂಗಳೂರು ಶಾಸಕ ವೇದವ್ಯಾಸ ಕಾಮತ್‌ರಲ್ಲಿ ಈರ್ ಬೊಕ್ಕ ಪಾತೆರ‍್ಲೆ , ಇತ್ತೆ ಯಾನ್ ಪಾತರೊಂದುಲ್ಲೆ ಎಂದು ಶಾಸಕ ಅಶೋಕ್ ರೈ ವೇದವ್ಯಾಸ ಕಾಮತರಿಗೆ ಹೇಳಿದಾಗ ಮಧ್ಯಪ್ರವೇಶ ಮಾಡಿದ ಸಭಾಪತಿ ಯು ಟಿ ಖಾದರ್ ನಿಕ್ಲು ಗಲಾಟೆ ಮಲ್ಪೊಡ್ಚಿ ಮಾರ್ರೆ ಈರ್ ಕುಲ್ಲುಲೆ ಎಂದು ಶಾಸಕ ವೇದವ್ಯಾಸ ಕಾಮತರಿಗೆ ಕುಳಿತುಕೊಳ್ಳಲು ಹೇಳಿದರು.

 ಇದೇನು ಮಂಗಳೂರು ಅಧಿವೇಶನವಾ: ಆರ್ ಅಶೋಕ್

ಸದನದಲ್ಲಿ ಶಾಸಕ ಅಶೋಕ್ ರೈ ಮತ್ತು ಸಭಾಪತಿ ಯು ಟಿ ಖಾದರ್ ರವರು ತುಳುವಿನಲ್ಲಿ ಮಾತನಾಡುತ್ತಿದ್ದ ವೇಳೆ ಎದ್ದು ನಿಂತ ವಿರೋಧ ಪಕ್ಷದ ನಾಯಕ ಆರ್ ಆಶೋಕ್ ಇದೇನು ಮಂಗಳೂರು ಅಧಿವೇಶಧನವಾ? ಎಂದು ನಗುತ್ತಲೇ ಹೇಳಿದರು. ಈ ವೇಳೆ ಮಾತನಾಡಿದ ಶಾಸಕ ಅಶೋಕ್ ರೈಯವರು ವಿರೋಧ ಪಕ್ಷದ ನಾಯಕರಾದ ಆರ್ ಆಶೋಕ್ ರವರೇ ನಾವು ತುಳುವಿನಲ್ಲಿ ಮಾತನಾಡಿದ್ದನ್ನು ಕನ್ನಡದಲ್ಲಿ ಹೇಳುತ್ತೇನೆ. ನೀವು ನಮ್ಮ ಹೋರಾಟಕ್ಕೆ , ನಮ್ಮ ಬೇಡಿಕೆಗೆ ಬೆಂಬಲವನ್ನು ನೀಡಬೇಕು, ಇಡೀ ಸದನ ನಮ್ಮ ನಿಲುವಿಗೆ ಬೆಂಬಲ ನೀಡಬೇಕು ಅ ಮೂಲಕ ತುಳು ಭಾಷೆಗೆ ಸರಕಾರದಿಂದ ಮಾನ್ಯತೆ ದೊರೆಯುವಂತಾಗಲಿ ಇದಕ್ಕೆ ಎಲ್ಲರ ಸಹಕಾರವನ್ನು ಕೋರಿದರು. ತುಳುವಿಗೆ ಲಿಪಿ ಇದೆ, ವಿಶ್ವದಲ್ಲೆಡೆ ತುಳು ಮಾತನಾಡುವ ಮಂದಿ ಇದ್ದಾರೆ ಎಂದು ಹೇಳಿದ ಶಾಸಕ ಅಶೋಕ್ ರೈಯವರು ಸಭಾಧ್ಯಕ್ಷೆರೇ ಈರ್ ಸಪೋರ್ಟು ಮಲ್ಪೊಡು, ಈರ್‌ನ ಸಹಕಾರ ಎಂಕ್ಲೆಗ್ ಬೋಡು ಎಂದು ಮನವಿ ಮಾಡಿದರು.

ಅಶೋಕ್ ರೈಗೆ ಅಭಿನಂದನೆ ಸಲ್ಲಿಸಿದ ವೇದವ್ಯಾಸ ಕಾಮತ್

ಸದನದಲ್ಲಿ ಮಾತನಾಡಿದ ಮಂಗಳೂರು ಶಾಸಕ ವೇದವ್ಯಾಸ ಕಾಮತ್ ತುಳು ವಿಚಾರದಲ್ಲಿ ಪ್ರಾರಂಭದಿಂದಲೇ ಸರಕರದ ಗಮನಸೆಳೆದ ಪುತ್ತೂರು ಶಾಸಕರಾದ ಅಶೋಕ್ ರೈಯವರಿಗೆ ಅಭಿನಂದನೆ ಸಲ್ಲಿಸುವುದಾಗಿ ಸಭೆಯಲ್ಲಿ ತಿಳಿಸಿದರು.

ನಿಮ್ಮ ಕಾಳಜಿಗೆ ಅಭಿನಂದನೆ; ಸಚಿವ ಖರ್ಗೆ

ತನ್ನ ಸ್ವಂತ ಖರ್ಚಿನಲ್ಲಿ ಅಧ್ಯಯನ ತಂಢವನ್ನು ಮೂರು ರಾಜ್ಯಕ್ಕೆ ಕಳುಹಿಸುವ ಮೂಲಕ ತನ್ನ ಊರಿನ ಮಾತೃಭಾಷೆಯನ್ನು ರಾಜ್ಯದ ಅಧಿಕೃತ ಭಾಷೆಯನ್ನಾಗಿ ಮಡಬೇಕು ಎನ್ನುವ ನಿಮ್ಮ ಕಾಳಜಿಗೆ ಅಭಿನಂದನೆ ಸಲ್ಲಿಸುವುದಾಗಿ ಸಚಿವ ಪ್ರಿಯಾಂಕ ಖರ್ಗೆ ಶಾಸಕ ಅಶೋಕ್ ರೈಯವರಿಗೆ ಅಭಿನಂದನೆ ಸಲ್ಲಿಸಿದರು. ಮಾತೃಭಷೆಯ ಮೇಲೆ ಎಲ್ಲರಿಗೂ ಪ್ರೀತಿ ಇರುತ್ತದೆ ಆದರಲ್ಲೂ ಅಶೋಕ್ ರೈಯವರು ಈವಿಚಾರದಲ್ಲಿ ಒಂದು ಹಜ್ಜೆ ಮುಂದೆ ಇದ್ದಾರೆ ಇದು ಅಭಿನಂದನಾರ್ಹ ಎಂದು ಸಚಿವರು ಸಭೆಯಲ್ಲಿ ಹೇಳಿದರು.

 ಖಂಡಿತವಾಗಿಯೂ ಬೇಡಿಕೆ ಈಡೇರಲಿದೆ: ಪ್ರಿಯಾಂಕ ಖರ್ಗೆ

ಡಾ. ಮೋಹನ್ ಆಳ್ವರ ನೇತೃತ್ವದ ಸಮಿತಿಯ ವರದಿಯಲ್ಲಿ ಸಾಧ್ಯವಿದೆ ಎಂಬುದರ ಬಗ್ಗೆ ವರದಿ ನೀಡಲಾಗಿದೆ.. ತನ್ನ ಸ್ವಂತ ಖರ್ಚಿನಲ್ಲಿ ತಂಡವನ್ನು ಕಳುಹಿಸಿ ಅಧ್ಯಯನ ನಡೆಸಿದ ಶಾಸಕ ಅಶೋಕ್ ರೈಯವರ ಕಾಳಜಿಯನ್ನು ಮೆಚ್ಚಲೇಬೇಕು. ತುಳು ಭಾಷೆ, ಅದರ ಸಂಸ್ಕೃತಿ, ಅದರ ಸೌಂದರ್ಯ, ಪ್ರಾಚೀನತೆ, ಎಲ್ಲವೂ ಗೌರವದಿಂದ ಕೂಡಿದೆ. ಸರಕಾರದ ಮುಂದೆ ಈ ಪ್ರಸ್ತಾಪ ಇದೆ. ತುಳುವಿಗೆ ರಾಜ್ಯದಲ್ಲಿ ಎರಡನೇ ಅಧಿಕೃತ ಭಾಷೆಯನ್ನಾಗಿ ಘೋಷಣೆ ಮಾಡುವಲ್ಲಿ ಸರಕಾರಕ್ಕೆ ಮುತುವರ್ಜಿ ಇದೆ.ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರ ಪರವಾಗಿ ಮಾತನಾಡಿದ ಸಚಿವ ಪ್ರಿಯಾಂಕ ಖರ್ಗೆ ಸಭೆಗೆ ತಿಳಿಸಿದರು. ವೈಯುಕ್ತಿಕವಾಗಿಯೂ ಈ ಪ್ರಸ್ತಾಪಕ್ಕೆ ನನ್ನ ಬೆಂಬಲ ಇದೆ ಎಂದು ಸಚಿವರು ಹೇಳಿದರು.

ಸಚಿವರ ಸಭೆ ಕರೆದು ತೀರ್ಮಾನಿಸಿ: ಸಭಾಪತಿ

ಈ ವಿಚಾರದಲ್ಲಿ ಸರಕಾರ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚಿಸಲು ಸಚಿವರನ್ನೊಳಗೊಂಡಂತೆ ಆ ಭಾಗದ ಶಾಸಕರ ಸಭೆಯನ್ನು ಕರೆದು ತೀರ್ಮಾನ ಕೈಗೊಳ್ಳುವಂತೆ ಸಭಾಪತಿ ಯು ಟಿ ಖಾದರ್ ರವರು ಸಚಿವ ಪ್ರಿಯಾಂಕ ಖರ್ಗೆ ಅವರಿಗೆ ಸೂಚನೆಯನ್ನು ನೀಡಿದರು.

ಎರಡನೇ ಬಾರಿಗೆ ತುಳುವಿನಲ್ಲಿ ಮಾತು

ಶಾಸಕ ಅಶೋಕ್ ರೈಯವರು ತಾನು ಶಾಸಕನಾಗಿ ಮೊದಲ ಅಧಿವೇಶನದಲ್ಲೇ ತುಳುವಿನಲ್ಲಿ ಮಾತನಾಡಿದ್ದರು. ಈ ವಿಚಾರ ಅತೀ ಹೆಚ್ಚು ವೈರಲ್ ಆಗಿತ್ತು. ಅಧಿವೇಶನದ ಇತಿಹಾಸದಲ್ಲೇ ಮೊದಲ ಬಾರಿಗೆ ತುಳುವಿನಲ್ಲಿ ಮಾತನಾಡುವ ಮೂಲಕ ತುಳುವನ್ನು ವಿಶ್ವಕ್ಕೆ ಪರಿಚಯಿಸುವ ಕೆಲಸವನ್ನು ಮಾಡಿದ್ದರು. ಇದೀಗ ಎರಡನೇ ಬಾರಿಗೆ ತುಳುವಿನಲ್ಲಿ ಅಧಿವೇಶನದಲ್ಲಿ ಮಾತನಾಡಿರುವುದು ತುಳು ಭಾಷೆಗೆ ಸಿಕ್ಕ ಮಾನ್ಯತೆ ಎಂದೇ ಹೇಳಬಹುದು

 Share: | | | | |


ಪ್ರಜ್ವಲ್ ಬೆನ್ನಲ್ಲೇ ಈಗ ಅಣ್ಣ ಸೂರಜ್​ನಿಂದ ಯುವಕನ ಮೇಲೆ ಅಸಹಜ ಲೈಂಗಿಕ ಕ್ರಿಯೆ ಆರೋಪ

Posted by Vidyamaana on 2024-06-21 20:26:33 |

Share: | | | | |


ಪ್ರಜ್ವಲ್ ಬೆನ್ನಲ್ಲೇ ಈಗ ಅಣ್ಣ ಸೂರಜ್​ನಿಂದ ಯುವಕನ ಮೇಲೆ ಅಸಹಜ ಲೈಂಗಿಕ ಕ್ರಿಯೆ ಆರೋಪ

ಹಾಸನ, (ಜೂನ್ 21): ಮಾಜಿ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ವಿರುದ್ಧದ ಅತ್ಯಾಚಾರ ಆರೋಪ ಪ್ರಕರಣ ಬಳಿಕ ಎಚ್​​ಡಿ ರೇವಣ್ಣ ಕುಟುಂಬಕ್ಕೆ ಮತ್ತೊಂದು ಶಾಕ್. ಪ್ರಜ್ವಲ್ ಅಣ್ಣ, ಎಚ್​ಡಿ ರೇವಣ್ಣ ಅವರ ಪುತ್ರ ವಿಧಾನಪರಿಷತ್ ಸದಸ್ಯ ಡಾ ಸೂರಜ್​ ರೇವಣ್ಣ (Suraj Revanna) ವಿರುದ್ಧವೂ ಸಹ ಲೈಂಗಿಕ ದೌರ್ಜನ್ಯ (sexual assault ) ಆರೋಪ ಕೇಳಿಬಂದಿದೆ. ಅರಕಲಗೂಡು ಜೆಡಿಎಸ್​ ಕಾರ್ಯಕರ್ತನ ಮೇಲೆ ಸೂರಜ್​ ರೇವಣ್ಣ, ತಮ್ಮ ಪಕ್ಷದ ಕಾರ್ಯಕರ್ತನ ಮೇಲೆ ಅಸಹಜ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ. ಈ ವಿಲಕ್ಷಣ ಆರೋಪದಿಂದ ರೇವಣ್ಣ ಕುಟುಂಬ ಮತ್ತೆ ಮುಜುಗರಕ್ಕೀಡಾದಂತಾಗಿದೆ.

ಸೂರಜ್ ರೇವಣ್ಣ ಅವರು ಜೂನ್ 16ರ ರಾತ್ರಿ ತಮ್ಮ ಪಕ್ಷದ ಕಾರ್ಯಕರ್ತನನ್ನು ಸಹಾಯ ಮಾಡುವುದಾಗಿ ಚನ್ನಪಟ್ಟಣ ತಾಲ್ಲೂಕಿನ ಗನ್ನಿಕಡದ ತೋಟದ ಮನೆಗೆ ಕರೆಯಿಸಿಕೊಂಡು ಬಲವಂತವಾಗಿ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎನ್ನಲಾಗಿದೆ. ಬಲವಂತವಾಗಿ ತನ್ನ ಮೇಲೆ ದೌರ್ಜನ್ಯ ನಡೆಸಿರುವ ಬಗ್ಗೆ ಜೆಡಿಎಸ್​ ಕಾರ್ಯಕರ್ತ, ಸಿಎಂ, ಗೃಹ ಸಚಿವರು, ಡಿಜಿ ಮತ್ತು ಐಜಿಪಿ ಮತ್ತು ಹಾಸನ ಎಸ್ಪಿಗೆ ದೂರು ನೀಡಿದ್ದಾರೆ ಎಂದು ತಿಳಿದುಬಂದಿದೆ.

ಪಾರ್ಕಿನ ಬಳಿ ನಿಂತಿದ್ದ ಕಾರು ಶೇಕ್ ಆಗ್ತಿತ್ತು – ಕಾರಿನ ಒಳಗೆ ಏನೋ ನಡೀತಿತ್ತು

Posted by Vidyamaana on 2024-01-26 04:16:30 |

Share: | | | | |


ಪಾರ್ಕಿನ ಬಳಿ ನಿಂತಿದ್ದ ಕಾರು ಶೇಕ್ ಆಗ್ತಿತ್ತು – ಕಾರಿನ ಒಳಗೆ ಏನೋ ನಡೀತಿತ್ತು

ಬೆಂಗಳೂರು : ನಮ್ಮ ರಾಜ್ಯದ ರಾಜಧಾನಿ ಎಷ್ಟೇ ಅಂತಾರಾಷ್ಟ್ರೀಯ ಮಟ್ಟಕ್ಕೆ ಬೆಳೆದರೂ ಫಾರಿನ್‌ ಸಿಟಿಯಾಗಲು ಸಾಧ್ಯವಿಲ್ಲ. ಪಬ್ಲಿಕ್ ಪಾರ್ಕ್‌, ರಸ್ತೆ ಹಾಗೂ ಬಸ್‌ ನಿಲ್ದಾಣದಲ್ಲಿಯೇ ಕಿಸ್ಸಿಂಗ್, ಹಗ್ಗಿಂಗ್, ರೊಮ್ಯಾನ್ಸಿಂಗ್ ಮಾಡುವುದಕ್ಕೆ ಕಡಿವಾಣವಿದೆ. ಆದರೆ, ಇಲ್ಲೊಂದು ಜೋಡಿ ಪಾರ್ಕ್‌ ಪಕ್ಕದ ರಸ್ತೆಯಲ್ಲಿಯೇ ಕಾರು ನಿಲ್ಲಿಸಿ ಮಟ ಮಟ ಮದ್ಯಾಹ್ನವೇ ಕಾಮತೃಷೆ ತೀರಿಸಿಕೊಳ್ಳುತ್ತಿದ್ದಾರೆ.ಇದನ್ನು ನೋಡಿದ ಪೊಲೀಸಪ್ಪ ಬುದ್ಧಿ ಹೇಳಲು ಮುಂದಾದರೆ ಅವರಿಗೆ ಕಾರು ಗುದ್ದಿಸಿ ಪರಾರಿ ಆಗಿರುವ ಘಟನೆ ಜ್ಞಾನಭಾರತಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.


ಹೌದು, ಬೆಂಗಳೂರು ಸೇಫ್‌ ಸಿಟಿ, ಸಂಸ್ಕೃತಿಯೂ ಇರುವಂತಹ ಸಿಟಿ ಎಂದು ನಾವು ನಂಬಿದ್ದೇವೆ. ಇಲ್ಲಿ ಕೆಲವು ವಿದೇಶಗಳಲ್ಲಿರುವಂತೆ ಬಯಲಿನಲ್ಲಿಯೇ ದೈಹಿಕ ಕಾಮನೆಗಳನ್ನು ತೀರಿಸಿಕೊಳ್ಳಲು ಅವಕಾಶವಿಲ್ಲ. ಇಷ್ಟಿದ್ದರೂ ಅಲ್ಲೊಂದು, ಇಲ್ಲೊಂದು ಸಾರ್ವಜನಿಕ ಸ್ಥಳದಲ್ಲಿಯೇ ಕಿಸ್ ಮಾಡುವ ದೃಶ್ಯಗಳು ಕಂಡುಬರುತ್ತಿದೆ. ಇಂಥಹ ಘಟನೆಗಳಿಗೆ ಸಾರ್ವಜನಿಕರು ಹಾಗೂ ಸ್ಥಳೀಯ ಪೊಲೀಸರು ಬುದ್ಧಿ ಹೇಳಿ ಅಂತಹ ಜೋಡಿಗಳನ್ನು ಅಲ್ಲಿಂದ ಕಳಿಸುತ್ತಾರೆ. ಇಂತಹ ದೃಶ್ಯಗಳಿಂದ ಚಿಕ್ಕ ಮಕ್ಕಳ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ ಎಂಬುದು ನಮ್ಮ ವಾದವಾಗಿದೆ.ಬೆಂಗಳೂರಿನ ಜ್ಞಾನಭಾರತಿ ಪೊಲೀಸ್‌ ಠಾಣೆ ಪಿಎಸ್‌ಐ ಮಹೇಶ್ ಅವರು ಜ.20ರ ಮಧ್ಯಾಹ್ನ 3.30ರ ವೇಳೆಗೆ ಮನೆಗೆ ಬಂದು ಊಟ ಮಾಡಿ ಹೊರಗೆ ಬಂದಾಗ ಪಾರ್ಕಿನ ಬಳಿ ಒಂದು ಕಾರು ನಿಂತುಕೊಂಡು ಅಲುಗಾಡುತ್ತಿತ್ತು. ಇನ್ನು ಅದನ್ನು ಗಮನಿಸದೇ ಮುಂದಕ್ಕೆ ಹೋಗಿ ಹಿಂದಕ್ಕೆ ತಿರುಗಿ ನೋಡಿದರೆ ಯುವಕ ಹಾಗೂ ಯುವತಿ ಇಬ್ಬರೂ ಕಾರಿನ ಹಿಂಬದಿ ಸೀಟಿನಲ್ಲಿ ಕಾಮತೃಷೆ ತೀರಿಸಿಕೊಳ್ಳುವುದು ಕಣ್ಣಿಗೆ ಬಿದ್ದಿದೆ. ಇದೇ ರಸ್ತೆಯಲ್ಲಿ ಶಾಲಾ ಮಕ್ಕಳು, ಮಹಿಳೆಯರು ಅಡ್ಡಾಡುವ ರಸ್ತೆಯಾಗಿದ್ದು, ಅವರಿಗೆ ಮುಜುಗರ ಉಂಟಾಗುವುದನ್ನು ತಪ್ಪಿಸುವ ಉದ್ದೇಶದಿಂದ ಪಿಎಸ್‌ಐ ಮಹೇಶ್ ಅವರು ಕಾರಿನಲ್ಲಿದ್ದವರಿಗೆ ಬುದ್ಧಿ ಹೇಳಲು ಮುಂದಾಗಿದ್ದಾರೆ. ಈ ವೇಳೆ ಕಾರಿನ ನಂಬರ್ ನೋಟ್ ಮಾಡಿಕೊಂಡು ಅವರಿಗೆ ಬುದ್ಧಿ ಹೇಳಬೇಕು ಎನ್ನುವಷ್ಟರಲ್ಲಿ ಯುವಕ ಕಾರನ್ನು ಸ್ಟಾರ್ಟ್‌ ಮಾಡಿದ್ದಾನೆ.ಕಾರು ಸ್ಟಾರ್ಟ್ ಆದ ಕೂಡಲೇ ಪೊಲೀಸಪ್ಪನಿಗೆ ಎಲ್ಲಿಯೂ ಅಕ್ಕ ಪಕ್ಕದಲ್ಲಿ ಸರಿದುಕೊಳ್ಳಲು ಜಾಗವೇ ಇರಲಿಲ್ಲ. ಆದ್ದರಿಂದ ಕಾರಿನಲ್ಲಿದ್ದ ಯುವಕ ನೇರವಾಗಿ ಕಾರನ್ನು ಪಿಎಸ್‌ಐ ಮೇಲೆಯೇ ಹರಿಸಲು ಮುಂದಾಗಿದ್ದಾನೆ. ಈ ವೇಳೆ ಪಿಎಸ್‌ಐ ಮಹೇಶ್ ಕಾರಿನ ಬಾನೆಟ್ ಮೇಲೆ ಬಿದ್ದಿದ್ದಾರೆ. ಹಾಗೆಯೇ ಕಾರನ್ನು ತುಸು ದೂರು ಓಡಿಸಿದ ಯುವಕ ನಂತರ ರಿವರ್ಸ್‌ ಗೇರ್ ಹಾಕಿ ಒಮ್ಮೆಲೆ ಚಲಾಯಿಸಿದ್ದಾನೆ. ಆಗ ಬಾನೆಟ್ ಮೇಲಿಂದ ಪಿಎಸ್‌ಐ ಕೆಳಗೆ ಬಿದ್ದು ತಲೆಗೆ ಗಾಯವಾಗಿ ಮೂರ್ಛೆ ತಪ್ಪಿ ಬಿದ್ದಿದ್ದಾರೆ. ಅಲ್ಲಿದ್ದ ಸ್ಥಳೀಯರು ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ನಂತರವೇ ಅವರಿಗೆ ಎಚ್ಚರವಾಗಿದೆ.ಕಾಮತೃಷೆ ತೀರಿಸಿಕೊಳ್ಳುತ್ತಿದ್ದ ಜೋಡಿಗೆ ಬುದ್ಧಿ ಹೇಳಲು ಮುಂದಾದ ಪಿಎಸ್‌ಐ ಮಹೇಶ್ ಆಸ್ಪತ್ರೆಯಿಂದ ಬಂದು ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಹಿಟ್‌ ಅಂಡ್ ರನ್ ಪ್ರಕರಣವನ್ನು ದಾಖಲಿಸಿದ್ದಾರೆ. ಇನ್ನೂ ಗಾಯಗಳಿಂದ ಪೂರ್ಣ ಪ್ರಮಾಣದಲ್ಲಿ ಚೇತರಿಕೆ ಕಾಣದೇ ವಿಶ್ರಾಂತಿ ಪಡೆಯುತ್ತಿದ್ದಾರೆ. ಇಂತಹ ಘಟನೆಗಳಿಗೆ ಕಡಿವಾಣ ಬೀಳಬೇಕಿದೆ ಎಂದು ಹೇಳಿದ್ದಾರೆ.

ಕಿಂಗ್ ಪಿನ್ ಆರ್ ಡಿ ಪಾಟೀಲ್ ಗೆ ಸಲಾಂ: ಪೊಲೀಸ್ ಕಾನ್ಸ್‌ ಟೇಬಲ್‌ ಅಮಾನತು

Posted by Vidyamaana on 2023-11-19 07:49:44 |

Share: | | | | |


ಕಿಂಗ್ ಪಿನ್ ಆರ್ ಡಿ ಪಾಟೀಲ್ ಗೆ ಸಲಾಂ: ಪೊಲೀಸ್ ಕಾನ್ಸ್‌ ಟೇಬಲ್‌ ಅಮಾನತು

ಕಲಬುರಗಿ: ಕೆಇಎ ನಡೆಸಿದ ಎಫ್ ಡಿಎ ನೇಮಕಾತಿ ಪರೀಕ್ಷೆ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಕಿಂಗ್ ಪಿನ್ ಆಗಿರುವ ಆರ್ ಡಿ ಪಾಟೀಲ್ ಅವರನ್ನು ಜಿಮ್ಸ್ ಆಸ್ಪತ್ರೆಗೆ ವೈದ್ಯಕೀಯ ತಪಾಸಣೆಗೆ ಕರೆತಂದಾಗ ಓರ್ವ ಕಾನ್ಸ್‌ ಟೇಬಲ್‌ ನಮಸ್ಕಾರ ಮಾಡಿದ ಹಿನ್ನಲೆ ಅಮಾನತು ಮಾಡಲಾಗಿದೆ.


ಆರ್ ಡಿ ಪಾಟೀಲ್ ಗೆ ಸಲಾಂ ಎಂದಿದ್ದ ನಗರದ ಬ್ರಹ್ಮಪೂರ ಪೊಲೀಸ್ ಠಾಣೆಯ ಕಾನ್ಸ್‌ ಟೇಬಲ್‌ ಮಾಳಪ್ಪ ಭಾಸಗಿ ಎಂಬುವವರನ್ನು ಕಲಬುರಗಿ ನಗರ ಪೊಲೀಸ್ ಆಯುಕ್ತ ಆರ್.ಚೇತನರವರು ಅಮಾನತಗೊಳಿಸಿ ಆದೇಶಿಸಿದ್ದಾರೆ.

ಹಾವು ಕಡಿದಾಗ ಬಾಯಲ್ಲಿ ಕಚ್ಚಿ ವಿಷ ಹೀರದಿರಿ | ಎಚ್ಚರೆಚ್ಚರ, ಕೆಯ್ಯೂರು ಘಟನೆಯ ಅನುಕರಣೆ ಬೇಡ | ವೈದ್ಯರ ಎಚ್ಚರಿಕೆ ಮಾತು ಇಲ್ಲಿದೆ ಓದಿ

Posted by Vidyamaana on 2023-03-22 17:49:05 |

Share: | | | | |


ಹಾವು ಕಡಿದಾಗ ಬಾಯಲ್ಲಿ ಕಚ್ಚಿ ವಿಷ ಹೀರದಿರಿ | ಎಚ್ಚರೆಚ್ಚರ, ಕೆಯ್ಯೂರು ಘಟನೆಯ ಅನುಕರಣೆ ಬೇಡ | ವೈದ್ಯರ ಎಚ್ಚರಿಕೆ ಮಾತು ಇಲ್ಲಿದೆ ಓದಿ

ಪುತ್ತೂರು: ಹಾವು ಕಡಿದಾಕ್ಷಣ ಏನು ಮಾಡಬೇಕು? ಹೆಚ್ಚಾಗಿ ಯಾರಿಗೂ ತಿಳಿದಿಲ್ಲ. ಆದ್ದರಿಂದ ನೇರವಾಗಿ ಆಸ್ಪತ್ರೆಗೋ, ಉರಗ ತಜ್ಞರಲ್ಲಿಗೋ ಕರೆದೊಯ್ಯುತ್ತಾರೆ. ಇವೆರಡನ್ನು ಬಿಟ್ಟು, ಸ್ವತಃ ಪ್ರಥಮ ಚಿಕಿತ್ಸೆ ನೀಡುವ ಸಾಹಸಕ್ಕೂ ಕೆಲವರು ಮುಂದಾಗುತ್ತಾರೆ.

ದಯವಿಟ್ಟು ಗಮನಿಸಿ! ಇಂತಹ ತಪ್ಪೊಂದನ್ನು ಅಪ್ಪಿತಪ್ಪಿಯೂ ಮಾಡಬೇಡಿ.

ಹಿಂದಿನ ಕಾಲದಲ್ಲಿ ನಾಟಿ ವೈದ್ಯರು ಹಾವು ಕಡಿತಕ್ಕೆ ಚಿಕಿತ್ಸೆ ನೀಡುತ್ತಿದ್ದರು. ತೀರಾ ವಿಕೋಪಕ್ಕೆ ಹೋದ ಸಂದರ್ಭಗಳಲ್ಲೂ, ರೋಗಿಗಳು ಹುಷಾರಾಗಿದ್ದ ನಿದರ್ಶನಗಳನ್ನು ನಾವು ಕೇಳಿದ್ದೇವೆ. ಆದರೆ, ಅವರು ಯಾವ ರೀತಿ ಚಿಕಿತ್ಸೆ ನೀಡುತ್ತಿದ್ದರು ಎನ್ನುವುದು ನಮಗೆ ತಿಳಿದಿದೆಯೇ? ಖಂಡಿತಾ ಇಲ್ಲ.

ಉರಗ ತಜ್ಞರು ಅಥವಾ ನಾಟಿ ವೈದ್ಯರು, ಹಾವು ಕಡಿತಕ್ಕೆ ಚಿಕಿತ್ಸೆ ನೀಡುವಾಗ ಸಾಕಷ್ಟು ಮುಂಜಾಗ್ರತೆ ಕೈಗೊಳ್ಳುತ್ತಿದ್ದರು. ಇಂದು ವೈದ್ಯರ ಬಳಿಗೆ ಹೋದರೂ, ಅವರು ಮುಂಜಾಗ್ರತಾ ಕ್ರಮ ಕೈಗೊಂಡೇ ಚಿಕಿತ್ಸೆ ನೀಡುತ್ತಾರೆ. ರೋಗಿಯನ್ನು ದಾಖಲು ಮಾಡಿಸಿಕೊಂಡು, ಸಂಬಂಧಿಸಿದ ಇಂಜೆಕ್ಷನ್ ನೀಡುತ್ತಾರೆ. ಸೂಕ್ತ ಚಿಕಿತ್ಸೆ ನೀಡಿ, ರೋಗಿಯನ್ನು ವಿಷದಿಂದ ಮುಕ್ತರನ್ನಾಗಿ ಮಾಡುತ್ತಾರೆ.

ಬಾಯಲ್ಲಿ ವಿಷ ಹೀರಿದರೆ ಏನಾಗುತ್ತೆ?

  ಕೆಯ್ಯೂರು ಘಟನೆಯ ಅನುಕರಣೆ ಬೇಡ,ಹಾವಿನ ವಿಷ ನಮ್ಮ ರಕ್ತಕ್ಕೆ ಸೇರಿದರೆ ಸಾವು ಗ್ಯಾರೆಂಟಿ. ಹಾವು ಕಚ್ಚಿದಾಗ, ಬಾಯಲ್ಲಿ ಕಚ್ಚಿ ಆ ಭಾಗದಿಂದ ರಕ್ತ ಹೀರಿ ತೆಗೆಯಲೇಬಾರದು. ಒಂದು ವೇಳೆ ತೆಗೆದರೆ, ಬಾಯಲ್ಲಿ ಹುಣ್ಣು ಅಥವಾ ಸಣ್ಣ ಗಾಯ ಅಥವಾ ಹಲ್ಲಿನ ವಸಡಿನಲ್ಲಿ ಗಾಯಗಳಿದ್ದರೆ, ವಿಷ ನೇರವಾಗಿ ರಕ್ತಕ್ಕೆ ಸೇರಿಕೊಳ್ಳುತ್ತದೆ. ಅದರಲ್ಲೂ ತಲೆಗೇರುವುದೇ ಹೆಚ್ಚು. ಇದರಿಂದ ಹಾವು ಕಚ್ಚಿದ ವ್ಯಕ್ತಿಗಿಂತಲೂ, ವಿಷವನ್ನು ಹೀರಿದ ವ್ಯಕ್ತಿಯೇ ಬೇಗ ಮೃತಪಡುವ ಸಾಧ್ಯತೆ ಅಧಿಕ ಎನ್ನುತ್ತಾರೆ ಪುತ್ತೂರು ಡಾಕ್ಟರ್ಸ್ ಫಾರಂ  ಅಧ್ಯಕ್ಷ ಡಾ. ಸುರೇಶ್ ಪುತ್ತೂರಾಯ ಅವರು.

ಬಾಲಕಿಗೆ ಪ್ರಶಂಸೆ:

ತಾಯ ಪ್ರಾಣ ಉಳಿಸಲು ಕೆಯ್ಯೂರಿನ ವಿದ್ಯಾರ್ಥಿನಿಗೆ ಅನ್ಯ ದಾರಿ ಕಾಣಲಿಲ್ಲ.  ನಾನು ಕೆಲವು ಸಿನಿಮಾಗಳಲ್ಲಿ ಈ ರೀತಿಯ ಚಿತ್ರಣ ನೋಡಿದ್ದೆ ಅದರಂತೆ ಹಾವು ಕಚ್ಚಿದ ಜಾಗಕ್ಕೆ ಬಾಯಿ ಇಟ್ಟು ರಕ್ತವನ್ನು ಹೀರಿ  ತೆಗೆದಿದ್ದೇನೆ. ಆಕೆಯ ಧೈರ್ಯಕ್ಕೆ ಶಹಬ್ಬಾಶ್ ಹೇಳಲೇಬೇಕು. ಹಾಗೆಂದು, ಇದನ್ನೇ ಇತರರು ಅನುಕರಿಸುವುದು ತಪ್ಪು.

ಕೆಯ್ಯೂರಿನ ಶ್ರಮ್ಯ ಅವರು ಅಪಾಯದಿಂದ ಪಾರಾಗಿದ್ದಾರೆ. ಇದಕ್ಕೆ ಕಾರಣಗಳು ಏನೇ ಇರಬಹುದು. ಆದರೆ, ಇದನ್ನು ಇತರರು ಅನುಸರಿಸಿದರೆ, ಅಪಾಯ ಕಟ್ಟಿಟ್ಟ ಬುತ್ತಿ ಎನ್ನುವುದನ್ನು ಮರೆಯದಿರಿ.

ಬಿಜೆಪಿ ಯುವಮೋರ್ಚಾ ವತಿಯಿಂದ ಬೈಕ್ ಜಾಥಾ

Posted by Vidyamaana on 2023-03-27 04:24:25 |

Share: | | | | |


ಬಿಜೆಪಿ ಯುವಮೋರ್ಚಾ   ವತಿಯಿಂದ ಬೈಕ್ ಜಾಥಾ

ಪುತ್ತೂರು : ಯುವಕರಿಗೆ ಉದ್ಯೋಗಾವಕಾಶ ಕಲ್ಪಿಸುವ ನಿಟ್ಟಿನಲ್ಲಿ ಇಂಡಸ್ಟ್ರೀಯಲ್ ಏರಿಯಾಕ್ಕೆ 100 ಎಕ್ರೆ ಜಾಗ ಮಂಜೂರು ಮಾಡಲಾಗಿದೆ ಎಂದು ಶಾಸಕ ಸಂಜೀವ ಮಠಂದೂರು ಹೇಳಿದರು.

ಬಿಜೆಪಿ ಯುವ ಮೋರ್ಚಾ ವತಿಯಿಂದ ಭಾನುವಾರ ಹಮ್ಮಿಕೊಂಡ ಬೈಕ್ ಜಾಥಾದ ಅಂಗವಾಗಿ ಕಲ್ಲೇಗ ಸಭಾ ವೇದಿಕೆಯಲ್ಲಿ ನಡೆದ ಜಾಥಾದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.

ಕ್ರೀಡೆಗೆ ಪೂರಕವಾಗಿ ಪುತ್ತೂರಿನ ತೆಂಕಿದಲ್ಲಿ ಈಗಾಲೇ ಜಾಗ ಖರೀದಿ ಮಾಡಲಾಗಿದೆ ಎಂದ ಅವರು, ಪುತ್ತೂರಿನಲ್ಲಿ ಮತ್ತೊಮ್ಮೆ ಕಮಲ ಅರಳಿಸುವ ಸಂದೇಶವನ್ನು ಬೈಕ್ ಜಾಥಾ ಮೂಲಕ ಆಯೋಜಿಸಿದ ಯುವ ಮೋರ್ಚಾ ಕಾರ್ಯಕರ್ತರಿಗೆ ಅಭಿನಂದನೆ ಸಲ್ಲಿಸಿದರು.ಡಾ.ಎಂ.ಕೆ.ಪ್ರಸಾದ್ ಮಾತನಾಡಿ, ಮುಂದಿನ ಅವಧಿಯಲ್ಲಿ ಶಾಸಕರು ಮತ್ತಷ್ಟು ಅನುದಾನ ತರುವ ಪ್ರಯತ್ನ ಮಾಡಬೇಕು. ಜತೆಗೆ ಮುಂಬರುವ ಚುನಾವಣೆಯಲ್ಲಿ ಡಬಲ್ ಇಂಜಿನ್ ಬದಲು ತ್ರಿಬಲ್ ಇಂಜಿನ್ ಸರಕಾರ ಮಾಡಬೇಕು ಎಂದು ಹೇಳಿದರು.

ಬಿಜೆಪಿ ಯುವಮೋರ್ಚಾ ಅಧ್ಯಕ್ಷ ನವೀನ್ ಪಡ್ನೂರು ಮಾತನಾಡಿ, ಮುಂಬರುವ ಚುನಾವಣೆ ಎದುರಿಸಲು ಯುವಕರ ತಂಡ ಸಜ್ಜಾಗಿದೆ ಎಂದರು.

ಬೈಕ್ ಜಾಥಾ ಕುಂಬ್ರದಿಂದ ಹೊರಟು ಬೈಪಾಸ್ ರಸ್ತೆಯಾಗಿ ಕಲ್ಲೇಗದಲ್ಲಿ ಸಮಾಪನಗೊಂಡಿತು.

ವೇದಿಕೆಯಲ್ಲಿ ನಗರಸಭೆ ಅಧ್ಯಕ್ಷ ಜೀವಂಧರ್ ಜೈನ್, ಪುಡಾ ಅಧ್ಯಕ್ಷ ಭಾಮಿ ಅಶೋಕ್ ಶೆಣೈ, ಬಿಜೆಪಿ ನಗರ ಮಂಡಲ ಅಧ್ಯಕ್ಷ ಪಿ.ಜಿ.ಜಗನ್ನಿವಾಸ ರಾವ್, ಗ್ರಾಮಾಂತರ ಮಂಡಲ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ಬಿಜೆಪಿ ಜಿಲ್ಲಾ ಸಹಪ್ರಭಾರಿ ಗೋಪಾಲಕೃಷ್ಣ ಹೇರಳೆ, ಮತ್ತಿತರರು ಉಪಸ್ಥಿತರಿದ್ದರು

ತಮಿಳುನಾಡು: ದರ್ಶನ ಮುಗಿಸಿ ಹೊರಟಿದ್ದ ಭಕ್ತರ ಕಾರು ಬಸ್​​ಗೆ ಡಿಕ್ಕಿ ಸ್ಥಳದಲ್ಲೇ ಏಳು ಮಂದಿ ಸಾವು

Posted by Vidyamaana on 2023-10-25 15:06:16 |

Share: | | | | |


ತಮಿಳುನಾಡು: ದರ್ಶನ ಮುಗಿಸಿ ಹೊರಟಿದ್ದ ಭಕ್ತರ ಕಾರು ಬಸ್​​ಗೆ ಡಿಕ್ಕಿ  ಸ್ಥಳದಲ್ಲೇ ಏಳು ಮಂದಿ ಸಾವು

ತಮಿಳುನಾಡು, ಅ 24: ಅಣ್ಣಾಮಲೈಯರ್​ ದೇವಾಲಯದಲ್ಲಿ ದರ್ಶನ ಮುಗಿಸಿ ಹೊರಟಿದ್ದ ಭಕ್ತರ ಕಾರು ಬಸ್​​ಗೆ ಡಿಕ್ಕಿ ಹೊಡೆದ ಪರಿಣಾಮ ಏಳು ಮಂದಿ ಸಾವನ್ನಪ್ಪಿರುವ ಘಟನೆ ತಮಿಳುನಾಡಿನ ತಿರುವಣ್ಣಾಮಲೈನಲ್ಲಿ ನಡೆದಿದೆ.


ಮೃತರೆಲ್ಲರೂ ಅಸ್ಸಾಂ ಮೂಲದವರಾಗಿದ್ದು, ಬೆಂಗಳೂರಿನಲ್ಲಿ ಕೆಲಸ ಮಾಡಿಕೊಂಡಿದ್ದಾರೆ. ಇವರು ತಿರುವಣ್ಣಾಮಲೈ ಅಣ್ಣಾಮಲೈಯರ್​ ದೇವಸ್ಥಾನದಲ್ಲಿ ದರ್ಶನ ಮುಗಿಸಿ ಹಿಂತಿರುಗುವಾಗ ಅಪಘಾತದ ಸಂಭವಿಸಿದೆ.


ಇಲ್ಲಿನ ಚೆಂಗಾಮ್​ನ ಪಕ್ಕಿರಿಪಾಲಯಂ​ ಬಳಿ ಧರ್ಮಪುರಿಯಿಂದ ತಿರುವಣ್ಣಾಮಲೈಗೆ ತೆರಳುತ್ತಿದ್ದ ಸರ್ಕಾರಿ ಬಸ್​ ಮತ್ತು ತಿರುವಣ್ಣಾಮಲೈನಿಂದ ಬೆಂಗಳೂರಿಗೆ ತೆರಳುತ್ತಿದ್ದ ಟಾಟಾ ಸುಮೋ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಈ ವೇಳೆ, ಕಾರಿನಲ್ಲಿದ್ದ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಟಾಟಾ ಸುಮೋದಲ್ಲಿ ಒಟ್ಟು 10 ಜನ ಪ್ರಯಾಣಿಸುತ್ತಿದ್ದರು ಎಂದು ತಿಳಿದು ಬಂದಿದೆ. ಅಪಘಾತ ನಡೆದ ತಕ್ಷಣ ಸ್ಥಳಕ್ಕೆ ಆಗಮಿಸಿದ ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ಅಪಘಾತದಲ್ಲಿ ಗಾಯಗೊಂಡವರನ್ನು ತಕ್ಷಣ ತಿರುವಣ್ಣಾಮಲೈ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಕಾರಿನಲ್ಲಿದ್ದ 4 ಮಂದಿ ಮತ್ತು ಬಸ್​ನಲ್ಲಿದ್ದ 10 ಮಂದಿ ಸೇರಿ ಒಟ್ಟು 14 ಮಂದಿ ಗಾಯಗೊಂಡಿದ್ದು, ಎಲ್ಲರನ್ನೂ ತಿರುವಣ್ಣಾಮಲೈ ಸರ್ಕಾರಿ ಆಸ್ಪತ್ರೆ ಮತ್ತು ಚೆಂಗಾಮ್​ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.


ಕಾರಿನಲ್ಲಿದ್ದ ಇಬ್ಬರಲ್ಲಿ ಓರ್ವ ಚೆಂಗಾಮ್​ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದು, ಇನ್ನೋರ್ವ ತಿರುವಣ್ಣಾಮಲೈ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ಮೃತಪಟ್ಟಿದ್ದಾನರೆ .

Recent News


Leave a Comment: