ಪುತ್ತೂರು :ಭೀಕರ ಅಪಘಾತ - 10 ಕ್ಕೂ ಹೆಚ್ಚು ವಾಹನಗಳು ಪುಡಿ ಪುಡಿ

ಸುದ್ದಿಗಳು News

Posted by vidyamaana on 2024-05-27 18:41:30 |

Share: | | | | |


ಪುತ್ತೂರು :ಭೀಕರ ಅಪಘಾತ - 10 ಕ್ಕೂ  ಹೆಚ್ಚು ವಾಹನಗಳು ಪುಡಿ ಪುಡಿ

ಪುತ್ತೂರು : ಪುತ್ತೂರಿನ ಹೊರ ವಲಯದ ಸಂಟ್ಯಾರಿನಲ್ಲಿ ಭೀಕರ ಅಪಘಾತ ನಡೆದು 10ಕ್ಕೂ ಹೆಚ್ಚು ವಾಹನಗಳು ಪುಡಿ ಪುಡಿಯಾದ ಘಟನೆ ಮೇ.27ರಂದು ಸಂಜೆ ನಡೆದಿದೆ. 

ಪಾಣಾಜೆ - ಸಂಟ್ಯಾರ್ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದೆ. ಸಂಟ್ಯಾರ್ ಜಂಕ್ಷನ್ ನಲ್ಲಿ ನಿಲ್ಲಿಸಿದ್ದ ಹತ್ತಕ್ಕೂ ಹೆಚ್ಚು ಬೈಕ್ ಗಳು ಪುಡಿ ಪುಡಿಯಾಗಿ ಚೆಲ್ಲಪಿಲ್ಲಿಯಾಗಿದೆ. 


ಪಾಣಾಜೆ ಕಡೆಯಿಂದ ಅತೀ ವೇಗದಲ್ಲಿ ಬರುತಿದ್ದ ಕಾರೊಂದು  ಈ ಹತ್ತಕ್ಕೂ ಹೆಚ್ಚು ದ್ವಿಚಕ್ರ ವಾಹನಗಳಿಗೆ ಡಿಕ್ಕಿಯಾಗಿದೆ. ಸಂಟ್ಯಾರ್ ಜಂಕ್ಷನ್ ನಲ್ಲಿ   ವಾಹನ ನಿಲ್ಲಿಸಿ ಬಸ್ ನಲ್ಲಿ ಉದ್ಯೋಗಕ್ಕೆ ತೆರಳುವವರ 10 ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳು ಪುಡಿ ಪುಡಿಯಾಗಿ ಚೆಲ್ಲಪಿಲ್ಲಿಯಾಗಿದೆ.

 Share: | | | | |


ನಗರಸಭೆಯಲ್ಲಿ ಸಾರ್ವಜನಿಕರ ಅರ್ಜಿಗಳ ವಿಲೇವಾರಿ ವಿಳಂಬಕ್ಕೆ ಕ್ರಮ !

Posted by Vidyamaana on 2023-01-12 09:34:36 |

Share: | | | | |


ನಗರಸಭೆಯಲ್ಲಿ ಸಾರ್ವಜನಿಕರ ಅರ್ಜಿಗಳ ವಿಲೇವಾರಿ ವಿಳಂಬಕ್ಕೆ ಕ್ರಮ !

ಪುತ್ತೂರು: ನಗರಸಭೆಯಲ್ಲಿ ಅರ್ಜಿಗಳು ಯಾವುದೇ ಪೆಂಡಿಂಗ್ ಇಲ್ಲ. ನಾನು ಪೌರಾಯುಕ್ತರು ಪ್ರತಿ ಸೋಮವಾರ ಅಧಿಕಾರಿ, ಸಿಬ್ಬಂದಿಗಳ ಸಭೆ ನಡೆಸಿ ಯಾವ ಯಾವ ಪೈಲ್ ಪೆಂಡಿಂಗ್ ಇದೆ. ಯಾಕೆ ಪೆಂಡಿಂಗ್ ಇದೆ ಎಂದು ಪರಿಶೀಲನೆ ನಡೆಸುತ್ತೇವೆ. ಒಂದು ವೇಳೆ ಅರ್ಜಿಗಳ ವಿಲೇವಾರಿ ವಿಳಂಬವಾದಲ್ಲಿ ಪೌರಾಯುಕ್ತರು ಕ್ರಮ ಕೈಗೊಳ್ಳಲಿದ್ದಾರೆ ಎಂದು ನಗರಸಭೆ ಅಧ್ಯಕ್ಷ ಕೆ.ಜೀವಂಧರ್ ಜೈನ್ ಅವರು ಹೇಳಿದರು.

 

 

ಸೆ 24 ಏಕಾದಶ ಕೋಟಿ ಮಹಾಲಿಂಗೇಶ್ವರ ಜಪಯಜ್ಞದ ಮಹಾಜಪ ಶತರುದ್ರಾಭಿಷೇಕ ಧಾರ್ಮಿಕ ಕಾರ್ಯಕ್ರಮ

Posted by Vidyamaana on 2023-09-23 14:33:09 |

Share: | | | | |


ಸೆ 24 ಏಕಾದಶ ಕೋಟಿ ಮಹಾಲಿಂಗೇಶ್ವರ ಜಪಯಜ್ಞದ ಮಹಾಜಪ ಶತರುದ್ರಾಭಿಷೇಕ ಧಾರ್ಮಿಕ ಕಾರ್ಯಕ್ರಮ

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಿಂದ ಸೆ.9ರಿಂದ ಸೀಮೆ, ಪರವೂರಿನಾದ್ಯ೦ತ ಮನೆ ಮನೆಯಲ್ಲಿ ಏಕಾದಶ ಕೋಟಿ ಮಹಾಲಿಂಗೇಶ್ವರ ಜಪಯಜ್ಞದ ಮಹಾಜಪ ಯಜ್ಞ ಮತ್ತು ಶತರುದ್ರಾಭಿಷೇಕ ಹಾಗು ಧಾರ್ಮಿಕ ಕಾರ್ಯಕ್ರಮ ಸೆ.24ರಂದು ಬೆಳಿಗ್ಗೆ ಗಂಟೆ 9ರಿಂದ ಶ್ರೀ ಮಹಾಲಿಂಗೇಶ್ವರ


ದೇವಸ್ಥಾನದಲ್ಲಿ ಜರುಗಲಿದೆ ಎಂದು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವಪ್ರಸಾದ್‌ ಮುಳಿಯ ತಿಳಿಸಿದ್ದಾರೆ.


ಅಂದು ಬೆಳಿಗ್ಗೆ ಮಹಾಜಪ ಮತ್ತು ಸಂಖ್ಯೆ ಸಮರ್ಪಣೆ ಕಾರ್ಯಕ್ರಮ ನಡೆಯಲಿದೆ.ದೇವಳದಲ್ಲಿ ಪ್ರತ್ಯೇಕವಾಗಿ ತೆರೆಯಲಾದ 1 ಸೇವಾ ಕೌಂಟರ್‌ನಲ್ಲಿ ಜಪಯಜ್ಞದಲ್ಲಿ ಸ್ವಯಂ ಭಾಗಿಗಳಾದ ಭಕ್ತರು ಮತ್ತು ತಂಡಗಳು ಕಾರ್ಡ್‌ಗಳನ್ನು ದಾಖಲಿಸಿ ಜಪಯಜ್ಞಕ್ಕೆ ಬಳಸಿದ ನಾಣ್ಯಗಳ ಮೊತ್ತವನ್ನು ತಿಳಿಸಿ ಸೇವಾ ರಶೀದಿ ಪಡೆಯಬೇಕು.ದೇವಳದ ರಾಜಗೋಪುರದಲ್ಲಿ ಜಪಯಜ್ಞ ಧಾರ್ಮಿಕ ವೇದಿಕೆ ನಿರ್ಮಾಣ ಮಾಡಲಾಗಿದ್ದು, ಅಲ್ಲಿ ವೈದಿಕರುಗಳಿಗೆ ಅಭಿಮುಖವಾಗಿ ಭಕ್ತರು ಕುಳಿತು 108 ಗುಣಕಗಳಲ್ಲಿ ಜಪಮಾಡುವುದು. ಕನಿಷ್ಟ 108 ಜಪಯಜ್ಞ ಪೂರ್ಣಗೊಳಿಸಿದ ಭಕ್ತರು ಸರತಿ ಸಾಲಿನಲ್ಲಿ ದೇವಳಕ್ಕೆ ಪ್ರವೇಶಿಸಿ ಪ್ರದಕ್ಷಿಣೆ ಬ0ದು ಒಳಾಂಗಣದಲ್ಲಿ ಸೂಚಿಸಿದ ಸಮರ್ಪಣೆ ಮಂಟಪದಲ್ಲಿ ಜಪಯಜ್ಞ ನಾಣ್ಯಗಳನ್ನು ಸಮರ್ಪಣೆ ಮಾಡಿ ಶ್ರೀ ದೇವರ ದರ್ಶನ ಪಡೆಯಬೇಕೆಂದು ಅವರು ಹೇಳಿದರು.


ಜಪಯಜ್ಞ ಪ್ರಸಾದ ವಿತರಣೆ: ಜಪಯಜ್ಞದ ಪ್ರಸಾದ ಕೌಂಟರ್ ಅನ್ನು ದೇವಳದ ಒಳಾಂಗಣದ ಗೋಪುರದಲ್ಲಿ ವ್ಯವಸ್ಥೆ ಮಡಲಾಗಿದ್ದು, ಪ್ರಸಾದ ಸ್ವೀಕರಿಸಿದವರು ದೇವಳದ ಎದುರು ಗದ್ದೆಯಲ್ಲಿರುವ ಸಾರ್ವಜನಿಕ ಗಣೇಶೋತ್ಸವ ಪೆಂಡಾಲ್‌ನಲ್ಲಿ ಭಕ್ತರಿಗೆ ಅನ್ನಪ್ರಸಾದ ವಿತರಣೆ ನಡೆಯಲಿದೆ ಎಂದು ಕೇಶವಪ್ರಸಾದ್‌ ಮುಳಿಯ ತಿಳಿಸಿದ್ದಾರೆ.

ಪುತ್ತೂರು ಸರಕಾರಿ ಆಸ್ಪತ್ರೆಗೆ ರೇಡಿಯಾಲಜಿಸ್ಟ್ ಮತ್ತು ಪ್ರಸೂತಿ ತಜ್ಞರ ನೇಮಕ

Posted by Vidyamaana on 2023-07-07 06:01:53 |

Share: | | | | |


ಪುತ್ತೂರು ಸರಕಾರಿ ಆಸ್ಪತ್ರೆಗೆ ರೇಡಿಯಾಲಜಿಸ್ಟ್ ಮತ್ತು ಪ್ರಸೂತಿ ತಜ್ಞರ ನೇಮಕ

ಪುತ್ತೂರು; ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ರೇಡಿಯಾಲಜಿಸ್ಟ್ ಮತ್ತು ಪ್ರಸೂತಿ ವೈದರನ್ನು ನೇಮಕ ಮಾಡುವಂತೆ ಆಗ್ರಹಿಸಿ ವಿಧಾನಸಭಾ ಅಧಿವೇಶನದಲ್ಲಿ ಪುತ್ತೂರು ಶಾಸಕರಾದ ಅಶೋಕ್ ರೈ ಯವರು ವಿಷಯ ಪ್ರಸ್ತಾಪಿಸಿದ್ದು ಸರಕಾರಿ ಆಸ್ಪತ್ರೆಯ ಸಮಸ್ಯೆಯಗಳ ಬಗ್ಗೆ ಸರಕಾರದ ಗಮನ ಸೆಳೆದಿದ್ದಾರೆ.

ಆಸ್ಪತ್ರೆಗೆ ರೇಡಿಯಾಲಜಿಸ್ಟ್ ಅಗತ್ಯವಾಗಿ ಬೇಕಾಗಿದ್ದು , ಆಸ್ಪತ್ರೆಯಲ್ಲಿ ಒಬ್ಬರು ಪ್ರಸೂತಿ ತಜ್ಞರಿದ್ದು ಅವರು ಹೆಸರಿಗೆ ರಜೆ ಮೆಲೆ ತೆರಳಿದ ಕಾರಣ ಹೆರಿಗೆ ಮಾಡಿಸಲುವೈದ್ಯರು ಇಲ್ಲದೆ ಸಾರ್ವಜನಿಕರಿಗೆ ತೊಂದರೆಯಾಗಿರುತ್ತದೆ. ಪುತ್ತೂರು ತಾಲೂಕು ವ್ಯಾಪ್ತಿಯಲ್ಲಿರುವ ಏಕೈಕ ದೊಡ್ಡ ಸರಕಾರಿ ಆಸ್ಪತ್ರೆಯಗಿರುವ ಕಾರಣ ಸರಕಾರಿ ಆಸ್ಪತ್ರೆಗೆ ಹೆರಿಗೆಗೆ ಹೆಚ್ಚಿನ ಸಂಖ್ಯೆಯಲ್ಲಿ ದಾಖಲಾಗುತ್ತಿದ್ದು ವೈದ್ಯರಿಲ್ಲದ ಕಾರಣ ಸಮಸ್ಯೆ ಉಂಟಾಗಿದೆ. ಸರಕಾರ ತಕ್ಷಣವೇ ನೇಮಕ ವೈದ್ಯರನ್ನು ನೇಮಕ ಮಾಡುವ ಮೂಲಕ ಬೇಡಿಕೆಯನ್ನು ಈಡೇರಿಸಬೇಕು ಎಂದು ಆಗ್ರಹಿಸಿದ್ದಾರೆ. ಅದಿವೇಶನ ಶೂನ್ಯ ವೇಳೆಯಲ್ಲಿ ಶಾಸಕರು ಈ ಪ್ರಸ್ತಾಪವನ್ನು ಮಾಡಿದ್ದರು.

ಎಚ್.ಡಿ.ಕೆ ಹುಟ್ಟುಹಬ್ಬ ಸರ್ಕಾರಿ ಆಸ್ಪತ್ರೆ ರೋಗಿಗಳಿಗೆ ಹಣ್ಣು ಹಂಪಲು ವಿತರಿಸಿದ ಜೆಡಿಎಸ್

Posted by Vidyamaana on 2022-12-17 07:33:16 |

Share: | | | | |


ಎಚ್.ಡಿ.ಕೆ ಹುಟ್ಟುಹಬ್ಬ  ಸರ್ಕಾರಿ ಆಸ್ಪತ್ರೆ ರೋಗಿಗಳಿಗೆ ಹಣ್ಣು ಹಂಪಲು ವಿತರಿಸಿದ ಜೆಡಿಎಸ್

ಎಚ್.ಡಿ.ಕೆ ಹುಟ್ಟುಹಬ್ಬ: ಸರ್ಕಾರಿ ಆಸ್ಪತ್ರೆ ರೋಗಿಗಳಿಗೆ ಹಣ್ಣು ಹಂಪಲು ವಿತರಿಸಿದ ಜೆಡಿಎಸ್


ಪುತ್ತೂರು: ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ೬೪ನೆಯ ಹುಟ್ಟು ಹಬ್ಬದ ಪ್ರಯುಕ್ತ ಶುಕ್ರವಾರ ಜೆಡಿಎಸ್ ಕಾರ್ಯಕರ್ತರು ಪುತ್ತೂರಿನ ಸರ್ಕಾರಿ ಆಸ್ಪತ್ರೆಯ ಒಳರೋಗಿಗಳಿಗೆ ಹಣ್ಣು ಹಂಪಲು ವಿತರಿಸಿದರು.

ಪುತ್ತೂರು ವಿಧಾನಸಭಾ ಕ್ಷೇತ್ರದ ಜೆಡಿಎಸ್ ಸಮಿತಿ ಅಧ್ಯಕ್ಷ ಅಶ್ರಫ್ ಕಲ್ಲೇಗ ಮಾತನಾಡಿ, ಜೆಡಿಎಸ್ ವರಿಷ್ಠಿರಾದ ಎಚ್.ಡಿ. ಕುಮಾರಸ್ವಾಮಿ ಅವರು ಎರಡು ಬಾರಿ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿಯೂ ಬಡವರ ಹಾಗೂ ರೋಗಿಗಳ ಬಗ್ಗೆ ಬಹಳಷ್ಟು ಕಾಳಜಿ ವಹಿಸಿದ್ದರು. ಇಂದು ಅವರ ೬೪ನೆಯ ಹುಟ್ಟು ಹಬ್ಬವಾಗಿದ್ದು, ಆ ಪ್ರಯುಕ್ತ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ ಮಾಡುತ್ತಿದ್ದೇವೆ ಎಂದರು.

ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ಆಶಾ ಪುತ್ತೂರಾಯ, ವೈದ್ಯ ಡಾ. ಯದುರಾಜ್ ಡಿ.ಕೆ., ಜೆಡಿಎಸ್‌ನ ಮುಖಂಡರಾದ ಇಬ್ರಾಹಿಂ ಗೋಳಿಕಟ್ಟೆ, ಐ.ಸಿ. ಕೈಲಾಸ್, ಅಬ್ದುಲ್ಲ ಕೆದುವಡ್ಕ, ನಝೀರ್ ಬಪ್ಪಳಿಗೆ, ಪದ್ಮಾ ಮಣಿಯನ್, ಜಯರಾಜ್ ಅಮೀನ್, ಶಿವು ಸಾಲ್ಯಾನ್ ಮೊದಲಾದವರು ಉಪಸ್ಥಿತರಿದ್ದರು.

ಚೆಸ್ ವಿಶ್ವಕಪ್ : ಪ್ರಜ್ಞಾನಂದಗೆ ವಿರೋಚಿತ ಸೋಲು

Posted by Vidyamaana on 2023-08-24 12:42:34 |

Share: | | | | |


ಚೆಸ್ ವಿಶ್ವಕಪ್ : ಪ್ರಜ್ಞಾನಂದಗೆ ವಿರೋಚಿತ ಸೋಲು

ವಿಶ್ವಕಪ್ ಚೆಸ್ ಫೈನಲ್ ಪಂದ್ಯದಲ್ಲಿ 2 ದಶಕಗಳ ಬಳಿಕ ಫೈನಲ್ ಪ್ರವೇಶಿಸಿದ ಭಾರತೀಯ ಗ್ರ್ಯಾಂಡ್ ಮಾಸ್ಟರ್ ಆರ್. ಪ್ರಜ್ಞಾನಂದ ವಿಶ್ವ ನಂ.1 ನಾರ್ವೆಯ ಮ್ಯಾಗ್ನಸ್ ಕಾರ್ಲ್ ಸನ್ವಿರುದ್ಧ ಸೋಲು ಕಂಡಿದ್ದಾರೆ.



ಆದರೆ ಸೋತರೂ ಕೊಟ್ಯಂತರ ಭಾರತೀಯ ಮನಗೆಲ್ಲುವಲ್ಲಿ ಯಶಸ್ವಿಯಾಗಿದ್ದಾರೆ.


ರಣರೋಚಕ ಪೈಪೋಟಿಗೆ ಸಾಕ್ಷಿಯಾಗಿದ್ದ ಈ ಪಂದ್ಯದಲ್ಲಿ ವಿಶ್ವದ ನಂಬರ್ 1 ಚೆಸ್ ತಾರೆಗೆ ಎಲ್ಲಾ ರೀತಿಯಲ್ಲೂ ಪೈಪೋಟಿ ನೀಡುವಲ್ಲಿ ಪ್ರಜ್ಞಾನಂದ ಯಶಸ್ವಿಯಾಗಿದ್ದರು. ಆದರೆ ಟೈಬ್ರೇಕ್ ನಲ್ಲಿ ಮೇಲುಗೈ ಸಾಧಿಸುವ ಮೂಲಕ ಕಾರ್ಲ್ ಸೆನ್ ವಿಶ್ವ ಚಾಂಪಿಯನ್ ಆಗಿ ಹೊರಹೊಮ್ಮಿದ್ದರು.



ಗುರುವಾರ ನಡೆದ ಟೈ ಬ್ರೇಕರ್ ಪಂದ್ಯದಲ್ಲಿ ಮೊದಲ ಸೆಟ್ ನಲ್ಲಿ ಹಿನ್ನಡೆ ಅನುಭವಿಸಿದ ಅವರು ಆ ಬಳಿಕದ ಸುತ್ತಿನಲ್ಲಿ ಡ್ರಾ ಸಾಧಿಸಿದರು. ಆದರೆ 1-0 ಮುನ್ನಡೆ ಕಾಯ್ದುಕೊಂಡ ಮ್ಯಾಗ್ನಸ್ ಕಾರ್ಲ್ ಸನ್ ಗೆದ್ದು 6ನೇ ಬಾರಿ ವಿಶ್ವ ಕಿರೀಟ ಗೆದ್ದರು. ಪ್ರಜ್ಞಾನಂದ ಅವರು ವಿಶ್ವನಾಥನ್ ಆನಂದ್ ಬಳಿಕ ಚೆಸ್ ವಿಶ್ವಕಪ್ನಲ್ಲಿ ಫೈನಲ್ ಪ್ರವೇಶಿಸಿದ ಕೇವಲ 2ನೇ ಭಾರತೀಯ ಎನಿಸಿಕೊಂಡಿದ್ದಾರೆ

ಕುಂದಾಪುರ : ಮದ್ಯದ ಅಮಲಿನಲ್ಲಿ ಪತ್ನಿಯ ಕತ್ತು ಕಡಿದು ಕುಣಿದು ಕುಪ್ಪಳಿಸಿದ ಪತಿ

Posted by Vidyamaana on 2024-08-04 15:34:47 |

Share: | | | | |


ಕುಂದಾಪುರ : ಮದ್ಯದ ಅಮಲಿನಲ್ಲಿ ಪತ್ನಿಯ ಕತ್ತು ಕಡಿದು ಕುಣಿದು ಕುಪ್ಪಳಿಸಿದ ಪತಿ

ಉಡುಪಿ,ಆ.4-ಮನೆಗೆ ಮದ್ಯಕುಡಿದ ಬಂದು ಪತ್ನಿಯ ಮೇಲೆರಗಿದ ಪಾಪಿ ಪತಿ ಮಚ್ಚಿನಿಂದ ದಾಳಿ ಕೊಲೆ ಮಾಡಿ ವಿಕೃತಿ ಮೆರೆದಿರುವ ಬೀಕರ ಘಟನೆ ಕುಂದಾಪುರ ತಾಲೂಕಿನ ಬಸ್ರೂರಿನಲ್ಲಿ ಕಳೆದ ರಾತ್ರಿ ನಡೆದಿದೆ.ಪತಿಯ ಕೌರ್ಯಕ್ಕೆ ಗಂಭೀರವಾಗಿ ಗಾಯಗೊಂಡು ಅನಿತಾ (38)ಅವರನ್ನು ನೆರೆಮನೆಯವರು ಮಣಿಪಾಲ ಆಸ್ಪತ್ರೆಗೆ ದಾಖಲಿಸಿದ್ದಾರೆ.ಆರೋಪಿ ಪತಿ ಲಕ್ಷ್ಮಣನನ್ನು ಕಂಡ್ಲೂರು ಪೊಲೀಸರು ಬಂದಿಸಿದ್ದಾರೆ.

ಬಸ್ರೂರು ಕಾಶಿ ಮಠ, ವಸತಿ ಪ್ರದೇಶದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಸೊರಬ ಮೂಲದ ದಂಪತಿ, ಕಾಶಿ ಮಠದ ತೋಟ ನೋಡಿಕೊಳ್ಳುತ್ತಿದ್ದರು. ನಾಲ್ಕು ತಿಂಗಳ ಹಿಂದಷ್ಟೇ ಇಲ್ಲಿಗೆ ಬಂದಿದ್ದರು.

ಕಳೆದ ರಾತ್ರಿ ಲಕ್ಷ್ಮಣ ಕುಡಿದ ಬಂದು ಪತ್ನಿಯೊಂದಿಗೆ ಜಗಳ ತೆಗೆದಿದ್ದಾನೆ ಈ ವೇಳೆ ಅಲ್ಲೇ ಇದ್ದ ಮಚ್ಚಿನಿಂದ ಆಕೆ ಕುತ್ತಿಗೆಗೆ ಹೊಡೆದು ಮಾರಣಾಂತಿಕವಾಗಿ ಗಾಯಗೊಳಿಸಿದ್ದಾನೆ.



Leave a Comment: