Posted by vidyamaana on 2024-07-01 19:16:06 |
ಬೆಂಗಳೂರು : ಫೇಕ್ ನ್ಯೂಸ್ ಗಳ ಬಗ್ಗೆ ಇಡೀ ಸಮಾಜ ಬಹಳ ಎಚ್ಚರದಿಂದ ಇರಬೇಕು. ಪತ್ರಿಕಾ, ಮಾಧ್ಯಮ ಸಂಘಟನೆಗಳು ಈ ಬಗ್ಗೆ ಗಂಭೀರವಾಗಿ ಯೋಚಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು.
ಬೆಂಗಳೂರು ಪ್ರೆಸ್ ಕ್ಲಬ್, ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ವಾರ್ತಾ ಮತ್ತು ಪ್ರಚಾರ ಇಲಾಖೆ ಸಂಯುಕ್ತಾಶ್ರಯದಲ್ಲಿ ನಡೆದ ಪತ್ರಿಕಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಸಾಮಾಜಿಕ ಮಾಧ್ಯಮಗಳ ಮೂಲಕ ಹರಡುವ ಸುಳ್ಳು ಸುದ್ದಿಗಳು ಸಮಾಜಕ್ಕೆ ಅನಾಹುತಕಾರಿ. ಸುಳ್ಳು ಸುದ್ದಿಗಳ ಮೇಲೆ ತೀವ್ರ ನಿಗಾ ಇಡಲು ಪ್ರತೀ ಜಿಲ್ಲೆಗಳಲ್ಲೂ ವಿಶೇಷ ಘಟಕ ಸ್ಥಾಪಿಸಲಾಗಿದ್ದು ಸುಳ್ಳು ಸುದ್ದಿಗಳನ್ನು ಪತ್ತೆ ಹಚ್ಚಲಾಗುತ್ತಿದೆ ಎಂದರು.
ಫೇಕ್ ನ್ಯೂಸ್ ಗಳ ಪತ್ತೆಗೆ, ನಿಯಂತ್ರಣಕ್ಕೆ, ಈ ಬಗ್ಗೆ ಕ್ರಮಕ್ಕಾಗಿ ಎಲ್ಲಾ ಜಿಲ್ಲೆಗಳಲ್ಲಿ Fact check ಘಟಕಗಳನ್ನು ಕ್ರಿಯಾಶೀಲಗೊಳಿಸಲಾಗಿದೆ ಎಂದರು
ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಸರ್ಕಾರದ ಕಾರ್ಯದರ್ಶಿ ಕೆ.ವಿ.ತ್ರಿಲೋಕಚಂದ್ರ, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್, ವಾರ್ತಾ ಇಲಾಖೆ ಆಯುಕ್ತರಾದ ಸೂರಳ್ಕರ್ ವಿಕಾಸ್ ಕಿಶೋರ್, ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಶಿವಾನಂದ ತಗಡೂರು, ವಿಧಾನ ಪರಿಷತ್ ಸದಸ್ಯರಾದ ಯು.ಬಿ.ವೆಂಕಟೇಶ್, ಪ್ರೆಸ್ ಕ್ಲಬ್ ಅಧ್ಯಕ್ಷರಾದ ಆರ್.ಶ್ರೀಧರ್, ಪ್ರಧಾನ ಕಾರ್ಯದರ್ಶಿ ಮಲ್ಲಪ್ಪ ಅವರು ಉಪಸ್ಥಿತರಿದ್ದರು.
ಹಿರಿಯ ಪತ್ರಕರ್ತರಾದ ಕೃಷ್ಣಪ್ರಸಾದ್ ಅವರು ಪ್ರಧಾನ ಭಾಷಣದಲ್ಲಿ ಪತ್ರಿಕೋದ್ಯಮದ ಈ ಕ್ಷಣದ ಸ್ಥಿತಿಗತಿಯನ್ನು ವಿವರಿಸಿದರು.
Posted by Vidyamaana on 2023-12-01 12:44:28 |
ಬೆಂಗಳೂರು: ತಮ್ಮ ನಿವಾಸದ ಎದುರು ರಸ್ತೆಯಿಂದಾಚೆಯಿರುವ ಬೇಬಿ ಸಿಟ್ಟಿಂಗ್ ಗೆ ಬಾಂಬ್ ಬೆದರಿಕೆ ಕೇಳಿಬಂದ ಹಿನ್ನೆಲೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಖುದ್ದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ನೀವ್ ಬೇಬಿ ಸಿಟ್ಟಿಂಗ್ಗೆ ಇ-ಮೇಲ್ ಬಾಂಬ್ ಬೆದರಿಕೆ ಬಂದ ಹಿನ್ನೆಲೆಯಲ್ಲಿ ಸ್ಥಳ ಪರಿಶೀಲನೆ ನಡೆಸಿ, ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡಿದ್ದಾರೆ. ಜೊತೆಗೆ ಸೂಕ್ತ ತನಿಖೆ ನಡೆಸಲು ಸೂಚಿಸಿದ್ದಾರೆ.
ಬಳಿಕ ಪ್ರತಿಕ್ರಿಯಿಸಿ, ಪೊಲೀಸರು ತಪಾಸಣೆ ನಡೆಸುತ್ತಿದ್ದಾರೆ, ಟಿವಿಯಲ್ಲಿ ವಿಷಯ ತಿಳಿದು ಗಾಬರಿ ಆದೆ. ಇದೊಂದು ಹುಸಿ ಕರೆ ಅಂತ ಮೇಲ್ನೋಟಕ್ಕೆ ಗೊತ್ತಾಗ್ತಿದೆ. 8-10 ಬಾರಿ ಹೀಗೆ ಹುಸಿ ಕರೆ ಮಾಡ್ತಾರೆ ಯಾವಗಲಾದರೂ ನಿಜವಾಗಿಯೂ ಬಾಂಬ್ ಇಡಬಹುದು ಯಾವುದನ್ನೂ ಕಡೆಗಣಿಸೋಕೆ ಆಗಲ್ಲ ಎಂದು ಹೇಳಿದ್ದಾರೆ.
Posted by Vidyamaana on 2024-06-23 21:03:09 |
ಬೆ ಳ್ತಂಗಡಿ: ಕನ್ಯಾಡಿ ಗ್ರಾಮದ ಗುರಿಪಳ್ಳದ ಕೊಡ್ಡೋಳು ಸಮೀಪ ಚಲಿಸುತ್ತಿದ್ದ ರಿಕ್ಷಾದ ಚಕ್ರಕ್ಕೆ ರಸ್ತೆ ಬದಿ ಕಟ್ಟಲಾಗಿದ್ದ ಜಾನುವಾರಿನ ಹಗ್ಗ ಸಿಲುಕಿ ರಿಕ್ಷಾ ಪಲ್ಟಿಯಾದ ಘಟನೆ ರವಿವಾರ ನಡೆದಿದೆ.
ರಿಕ್ಷಾ ಚಾಲಕ ಸ್ಥಳೀಯ ರಾಮಣ್ಣಗೌಡ ಗಂಭೀರ ಗಾಯಗೊಂಡಿದ್ದು ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದಾರೆ.
Posted by Vidyamaana on 2024-06-16 08:13:42 |
ಕುಂಬಳೆ : ಸರೋವರ ಕ್ಷೇತ್ರವೆಂದೇ ಖ್ಯಾತಿ ಪಡೆದ ಶ್ರೀ ಅನಂತಪುರದಲ್ಲಿ ತಿಂಗಳುಗಳ ಹಿಂದೆ ಪ್ರತ್ಯಕ್ಷಗೊಂಡ ನೂತನ ಮೊಸಳೆ ಮರಿ (ಬಬಿಯಾ – 3) ಇದೇ ಮೊದಲ ಬಾರಿಗೆ ಶುಕ್ರವಾರ ಸಂಜೆ ಕ್ಷೇತ್ರ ಪ್ರಾಂಗಣ ಏರುವ ಮೂಲಕ ತನ್ನ ಪೂರ್ಣ ದರ್ಶನ ತೋರಿದೆ.
ಸುಮಾರು 80 ವರ್ಷಗಳಿಂದ ಕ್ಷೇತ್ರದ ಕೊಳದಲ್ಲಿ ನೆಲೆಸಿದ್ದ ಮೊಸಳೆಯು 2022ರ ಅಕ್ಟೋಬರ್ 9ರಂದು ರಾತ್ರಿ ಈ ಹಿಂದೆ ಇದ್ದ ಮೊಸಳೆ (ಬಬಿಯಾ) ಮೃತಪಟ್ಟಿತ್ತು
Posted by Vidyamaana on 2023-02-16 15:37:25 |
ಯಕ್ಷ ರಂಗದ ಭೀಷ್ಮ, ಭಾಗವತಿಕೆಯಲ್ಲಿ ತನ್ನದೇ ಮೇರು ಶೈಲಿಯಾದ ‘ಬಲಿಪ ಹಾಡುಗಾರಿಕೆ’ಯನ್ನು ಆರು ದಶಕಗಳಿಂದ ಉಣ ಬಡಿಸಿದ ಯಕ್ಷಗಾನದ ಸರ್ವಶ್ರೇಷ್ಟ ಭಾಗವತರಲ್ಲಿ ಒಬ್ಬರಾದ ಬಲಿಪ ನಾರಾಯಣ ಭಾಗವತರು ( 84) ಇಂದು ಇಹಲೋಕ ತ್ಯಜಿಸಿದ್ದಾರೆ. ಈ ಮೂಲಕ ಯಕ್ಷ ಪ್ರಿಯರನ್ನು ತನ್ನ ಭಾಗವತಿಕೆಯ ಮೂಲಕ ಸೆಳೆಯುತ್ತಿದ್ದ ಕಂಚಿನ ಕಂಠ ಮೌನವಾಗಿದೆ. ಭಾಗವತಿಕೆಯ ರಂಗದಲ್ಲಿ ಅಗ್ರಜರೆನಿಸಿದ ಬಲಿಪ ನಾರಾಯಣ ಭಾಗವತರು ಬಲಿಪ ಪರಂಪರೆಯ ಕೊಂಡಿ. ತನ್ನ ಕೊನೆಯ ದಿನಗಳಲ್ಲಿ ಅವರು ಮೂಡುಬಿದಿರೆ ನೂಯಿಯಲ್ಲಿ ವಾಸಿಸುತ್ತಿದ್ದರುತೆಂಕುತಿಟ್ಟು ಯಕ್ಷಗಾನದ ಪ್ರಾತಿನಿಧಿಕ ಶೈಲಿಯ ಮೇರು ಭಾಗವತರಾದ ಬಲಿಪ ಭಾಗವತರ ಅಜ್ಜನ ಹೆಸರು ಕೂಡಾ ಬಲಿಪ ನಾರಾಯಣ ಭಾಗವತರೆಂದೇ. ಅವರು ಸ್ವಾತಂತ್ರ್ಯ ಪೂರ್ವದಲ್ಲೇ ಯಕ್ಷಗಾನದ ತಾರಾ ವರ್ಚಸ್ಸಿನ ಸುವಿಖ್ಯಾತ ಭಾಗವತರು. ರಂಗದ ಒಳ ಹೊರಗಿನ ವ್ಯವಹಾರ ಮತ್ತು ಜನ್ಮದಾತ ಸಿದ್ಧಿಯಿಂದ ಅಕ್ಷರಶಃ ‘ಹುಲಿ’ಯಂತೆ ಮೆರೆದು ಆ ಕಾಲದ ಕೀರ್ತಿ ಪಡೆದವರು.ಅಂತಹಾ ಅಜ್ಜನ ಹಿನ್ನೆಲೆಯಲ್ಲಿ ಅದೇ ಶೈಲಿಯನ್ನು ಅನುಸರಿಸಿ, ಕೈದಾಟಿಸಿದ ಈಗಿನ ಬಲಿಪ ನಾರಾಯಣ ಭಾಗವತರು ಸುಮಾರು 63ವರ್ಷಗಳಷ್ಟು ಕಾಲ ಸಕ್ರಿಯವಾಗಿ ಹಾಡಿ ಯಕ್ಷರಾತ್ರಿಗಳನ್ನು ಬೆಳಗಿಸಿದವರು.ಅನೇಕ ಕಲಾವಿದರನ್ನು ರೂಪಿಸಿದ್ದಾರೆ. ಸುಮಾರು 70ರಷ್ಟು ಪ್ರಸಂಗಕಾವ್ಯಗಳು ಮತ್ತದರ ಪ್ರಸ್ತುತಿಯ ರಂಗನಡೆ-ಮಾಹಿತಿ ಅವರಿಗೆ ಕಂಠಸ್ಥ.
“ನೋಡಿ ನಿರ್ಮಲ ಜಲ ಸಮೀಪದಿ…”, “ಜಗವು ನಿನ್ನಾಧೀನ ಖಗಪತಿ ವಾಹನ…”, “ರಾಮಕೃಷ್ಣರು ಮನೆಗೆ ಬಂದರು ಬಾಗಿಲು ತೆರೆಯಿರೊ”, “ಎಲವೋ ಕುಂತೀ ಸುತನೇ” ಎಂಬಿತ್ಯಾದಿ ವಿವಿಧ ಸ್ವರ ಏರಿಳಿತದ ಸಮ್ಮಿಲನ-ಸಮತೋಲನ ಹೊಂದಿದ್ದ ‘ಬಲಿಪ’ ಶೈಲಿಗೆ ಅದರದ್ದೇ ಆದ ತೂಕ-ಸ್ಥರ…ಬಲಿಪ ನಾರಾಯಣ ಭಾಗವತರು ಮೂಲತಃ ಕಾಸರಗೋಡು ಜಿಲ್ಲೆಯ ಪಡ್ರೆ ಗ್ರಾಮದವರು. ಇವರು ಪ್ರಸ್ತುತ ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯ ಸಮೀಪದ ನೂಯಿ ಎಂಬಲ್ಲಿ ವಾಸವಾಗಿದ್ದಾರೆ. ಇವರು ತೆಂಕುತಿಟ್ಟಿನ ಪ್ರಸಿದ್ಧ ಮತ್ತು ಹಿರಿಯ ಭಾಗವತರು. ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಮೇಳದಲ್ಲಿ ಹಲವಾರು ವರ್ಷ ಭಾಗವತರಾಗಿ ಸೇವೆ ಸಲ್ಲಿಸಿದ್ದಾರೆ. ಇವರು ಯಕ್ಷಗಾನದ ಹಲವಾರು ಪ್ರಸಂಗಗಳನ್ನು ರಚಿಸಿದ್ದಾರೆ. ಯಕ್ಷಗಾನ ಹಾಡುಗಳ ಅನೇಕ ಕೃತಿಗಳನ್ನೂ ರಚಿಸಿದ್ದಾರೆ
ವೈಯಕ್ತಿಕ ಜೀವನ
ಬಲಿಪರು ಕಾಸರಗೋಡಿನ ಪಡ್ರೆ ಗ್ರಾಮದಲ್ಲಿ ಮಾರ್ಚ್ 13, 1938 ರಂದು ಜನಿಸಿದರು. ಇವರ ತಂದೆ ಬಲಿಪ ಮಾಧವ ಭಟ್ ಮತ್ತು ತಾಯಿ ಸರಸ್ವತಿ. ಇವರು 7ನೇ ತರಗತಿಯವರೆಗೆ ವಿದ್ಯಾಭ್ಯಾಸ ಮಾಡಿದ್ದಾರೆ. ತಮ್ಮ ಅಜ್ಜ ದಿ.ಬಲಿಪ ನಾರಾಯಣ ಭಾಗವತರಿಂದ ಭಾಗವತಿಕೆ ಕಲಿತು 13ನೇ ವರ್ಷದಲ್ಲಿ ರಂಗ ಪ್ರವೇಶಗೈದರು. ಇವರ ಪತ್ನಿ ಶ್ರೀಮತಿ ಜಯಲಕ್ಷ್ಮಿ. ಇವರ ನಾಲ್ವರು ಪುತ್ರರ ಪೈಕಿ, ಮಾಧವ ಬಲಿಪರಿಗೆ ಹಿಮ್ಮೇಳವಾದನ ತಿಳಿದಿದ್ದು, ಶಿವಶಂಕರ ಬಲಿಪ ಮತ್ತು ಪ್ರಸಾದ ಬಲಿಪರು ಉತ್ತಮ ಭಾಗವತರು, ಪ್ರಸಾದ ಬಲಿಪರು ಕಟೀಲು ಮೇಳದಲ್ಲಿ ಮುಖ್ಯ ಭಾಗವತರಾಗಿ ಸೇವೆ ಸಲ್ಲಿಸುತ್ತಿದ್ದು ಕಳೆದ ವರ್ಷ ನಿಧನ ಹೊಂದಿದ್ದರು. ಇನ್ನೋರ್ವ ಪುತ್ರ ಶಶಿಧರ್ ಬಲಿಪ ಕೃಷಿಕರು.
ಯಕ್ಷಗಾನ ಕ್ಷೇತ್ರಕ್ಕೆ ಕೊಡುಗೆ
ಬಲಿಪ ನಾರಾಯಣ ಭಾಗವತರು 60 ವರ್ಷಗಳ ಕಾಲ ಯಕ್ಷಗಾನ ಕಲಾ ಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಪಡ್ರೆ ಜಠಾಧಾರಿ ಮೇಳವನ್ನು ಇವರು ಮೊದಲಿಗೆ ಆರಂಭಿಸಿದರು. ಯಕ್ಷಗಾನದ 50ಕ್ಕೂ ಹೆಚ್ಚು ಪ್ರಸಂಗಗಳ ಕಂಠಪಾಠ ಬಲಿಪರಿಗಿದೆ. 30 ಪ್ರಕಟಿತ ಮತ್ತು 15 ಅಪ್ರಕಟಿತ ಯಕ್ಷಗಾನ ಪ್ರಸಂಗಗಳನ್ನು ರಚಿಸಿದ್ದಾರೆ. ಕಪ್ಪು ಮೂರು, ಬಿಳಿ ಐದರ ಸ್ವರದಲ್ಲಿ ಬಲಿಪರು ಹಾಡುತ್ತಾರೆ. ಇವರನ್ನು ತೆಂಕು ತಿಟ್ಟು ಯಕ್ಷ ರಂಗದ ಭೀಷ್ಮ ಎಂದು ಕರೆಯುತ್ತಾರೆ. ಇವರ ಯಕ್ಷಗಾನದ ಸುದೀರ್ಘ ಸೇವೆಗಾಗಿ ಯಕ್ಷಾಭಿಮಾನಿಗಳು ಬಲಿಪ ಅಮೃತ ಭವನವನ್ನು ಕಟ್ಟಿಸಿಕೊಟ್ಟಿದ್ದಾರೆ.ಬಲಿಪ ನಾರಾಯಣ ಭಾಗವತರು ಐದು ದಿನದ ದೇವೀ ಮಹಾತ್ಮೆ ಎಂಬ ಮಹಾಪ್ರಸಂಗವನ್ನು ರಚಿಸಿದ್ದು ವೇಣೂರಿನ ಕಜೆ ಸುಬ್ರಹ್ಮಣ್ಯ ಭಟ್ ಮತ್ತು ಅವರ ಸ್ನೇಹಿತರು ಇದನ್ನು ಪ್ರಕಟಿಸಿದ್ದು ಯಕ್ಷಗಾನದ ಇತಿಹಾಸದಲ್ಲೇ ಇದೊಂದು ಮಹತ್ವದ ಕೃತಿಯಾಗಿದೆ.
ಪ್ರಶಸ್ತಿಗಳು
ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ 2010
ಸಾಮಗ ಪ್ರಶಸ್ತಿ 2012
ಕರ್ನಾಟಕ ಜಾನಪದ ಮತ್ತು ಯಕ್ಷಗಾನ ಅಕಾಡೆಮಿಯ `ಜ್ಞಾನ ಪ್ರಶಸ್ತಿ’ 2003
ಕರ್ನಾಟಕ ಜಾನಪದ ಪರಿಷತ್ತು ದೊಡ್ಡಮನೆ ಲಿಂಗೇಗೌಡ ಪ್ರಶಸ್ತಿ 2002
71ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ `ಕರ್ನಾಟಕ ಶ್ರೀ ‘ಪ್ರಶಸ್ತಿ, 2003
ಪದವೀಧರ ಯಕ್ಷಗಾನ ಮಂಡಳಿ ಮುಂಬಯಿ `ಅಗರಿ ಪ್ರಶಸ್ತಿ’ 2002
ಶೇಣಿ ಪ್ರಶಸ್ತಿ, 2002
ಕವಿ ಮುದ್ದಣ ಪುರಸ್ಕಾರ, 2003ಕೂಡ್ಲು ಸುಬ್ರಾಯ ಶ್ಯಾನುಭೋಗ ಪ್ರಶಸ್ತಿ, 2003
ಸ್ಟೇಟ್ ಬ್ಯಾಂಕ್ ಆಫ್ ಮೈಸೂರು ವತಿಯಿಂದ ಬೆಂಗಳೂರಿನ ರಾಜ್ಯಮಟ್ಟದ ಸನ್ಮಾನ,2003
ಕರ್ನಾಟಕ ಸಂಘ ದುಬೈಯಲ್ಲಿ ಸನ್ಮಾನ, 2003
ಪಾರ್ತಿಸುಬ್ಬ ಪ್ರಶಸ್ತಿ
ಆಳ್ವಾಸ್ ನುಡಿಸಿರಿ ಪ್ರಶಸ್ತಿ
Posted by Vidyamaana on 2024-02-20 07:33:57 |
ಪುತ್ತೂರು: ಮಾಯಿದೆ ದೇವುಸ್ ಚರ್ಚ್ ಸಮೂಹ ಶಿಕ್ಷಣ ಸಂಸ್ಥೆಗಳಲ್ಲೊಂದಾದ ಸಂತ ಫಿಲೋಮಿನಾ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಎಲ್ಯಾಸ್ ಪಿಂಟೋರವರಿಗೆ ರಾಜಸ್ಥಾನ ಜೆ.ಜೆ.ಟಿ ವಿಶ್ವವಿದ್ಯಾನಿಲಯವು ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ.
ದೈಹಿಕ ಶಿಕ್ಷಣ ನಿರ್ದೇಶಕ ಎಲ್ಯಾಸ್ ಪಿಂಟೊರವರು ಡಾ.ಬಾಪು ನರಸಿಂಗ ಚೌಗುಲೆರವರ ಮಾರ್ಗದರ್ಶನದಲ್ಲಿ ದ.ಕ ಜಿಲ್ಲೆಯ ಜನರ ಮನರಂಜನಾ ಚಟುವಟಿಕೆಗಳು ಮತ್ತು ಕೋವಿಡ್ 19 ಸಾಂಕ್ರಾಮಿಕ ಸಮಯದಲ್ಲಿ ಅವರ ಬಿಡುವಿನ ವೇಳೆಯ ಚಟುವಟಿಕೆಗಳು (A Study on the Recreational Activities of People In Dakshina Kann
non
a District and their leisure time activities during Covid-19 Pandamic)"ಕುರಿತಾಗಿ ಮಂಡಿಸಿದ ಮಹಾ ಅಧ್ಯಯನ ಪ್ರಬಂಧಕ್ಕೆ ಡಾಕ್ಟರೇಟ್ ಪದವಿ ಲಭಿಸಿದೆ. ಎಲ್ಯಾಸ್ ಪಿಂಟೋರವರು ಅಣ್ಣಾಮಲೈ ವಿಶ್ವವಿದ್ಯಾಲಯದಲ್ಲಿ ಎಂ.ಫಿಲ್ ಪದವಿಯನ್ನು, ಮೈಸೂರು ವಿಶ್ವವಿದ್ಯಾಲಯದಲ್ಲಿ ದ್ವಿತೀಯ ರ್ಯಾಂಕಿನೊಂದಿಗೆ ಎಂ.ಪಿ.ಎಡ್ ಪದವಿಯನ್ನು ಗಳಿಸಿದ್ದು ಮಾತ್ರವಲ್ಲ ಪ್ರತಿಷ್ಠಿತ ಕೆ.ಎಸ್.ಇ.ಟಿ ಪರೀಕ್ಷೆಯನ್ನು ಪೂರ್ಣಗೊಳಿಸಿರುತ್ತಾರೆ. ಎಲ್ಯಾಸ್ ಪಿಂಟೋರವರು ಯೋಗದ ಆಯಾಮಗಳು ಮತ್ತು ಆರೋಗ್ಯಕರ ಜೀವನ ಎಂಬ ಬಗ್ಗೆ ಪುಸ್ತಕವನ್ನು ಬರೆದಿದ್ದಾರೆ ಜೊತೆಗೆ ಖಿನ್ನತೆಗೆ ಯೋಗ ಹಾಗೂ ಮಾನಸಿಕ ಆರೋಗ್ಯಕ್ಕಾಗಿ ಯೋಗ ಎಂಬ ಪುಸ್ತಕವೂ ಪ್ರಕಟವಾಗಿದೆ. ಇದರೊಂದಿಗೆ 3 ಅಂತರಾಷ್ಟ್ರೀಯ ಸೆಮಿನಾರ್ ಗಳು 4 ರಾಷ್ಟ್ರೀಯ ವಿಚಾರ ಸಂಕಿರಣಗಳು, ಹಲವಾರು ಕಾರ್ಯಾಗಾರಗಳಲ್ಲಿ ಭಾಗವಹಿಸಿರುತ್ತಾರೆ.ಎಲ್ಯಾಸ್ ಪಿಂಟೋರವರು ಪೂರ್ವ ಮತ್ತು ಪಾಶ್ಚಿಮಾತ್ಯ ನೃತ್ಯ ಸ್ಪರ್ಧೆಯಲ್ಲಿ 5 ಬಾರಿ ರಾಜ್ಯ ಮಟ್ಟದ ವಿಜೇತರಾಗಿ, ಜಿಲ್ಲಾ ಮಟ್ಟದ ಫಿಲ್ಮ ಡ್ಯಾನ್ಸ್ ಸ್ಪರ್ಧೆಯಲ್ಲಿ 10 ಬಾರಿ ವಿಜೇತರಾಗಿ, ಜಿಲ್ಲೆಯಲ್ಲಿ 1990 ರಿಂದ 2000ರ ವರಗೆ ನಂಬರ್ವನ್ ಡ್ಯಾನ್ಸ್ ಗ್ರೂಪ್ ಪಿಂಟೋ ಬ್ರದರ್ಸ್ ಇದರ ಸಂಯೋಜಕರಾಗಿ ಮನ ಸೆಳೆದಿದ್ದರು.
Posted by Vidyamaana on 2024-01-18 13:07:07 |
ಪುತ್ತೂರು:ಮನೆಯಿಂದ ಪೇಟೆಗೆಂದು ಬಂದ ಬಾಲಕ ದಿಡೀರನೆ ನಾಪತ್ತೆಯಾಗಿದ್ದು ಮನೆಯವರ ಹುಡುಕಾಟದ ಬಳಿಕ ಬೆಂಗಳೂರಿನಲ್ಲಿ ಪತ್ತೆಯಾದ ಘಟನೆ ಉಪ್ಪಿನಂಗಡಿ ಆದರ್ಶ ನಗರದಲ್ಲಿ ನಡೆದಿದೆ.
ಆದರ್ಶ ನಗರ ನಿವಾಸಿ ಪ್ರಥಮ ಪಿಯುಸಿ ಬಾಲಕ ಜ.೧೭ ರಂದು ಸಂಜೆ ಸುಮಾರು ಏಳು ಗಂಟೆಗೆ ಮನೆಯಿಂದ ಉಪ್ಪಿನಂಗಡಿ ಹೋಗಿ ಬರುವುದಾಗಿ ಬಂದಿದ್ದಾನೆ. ಆ ಬಳಿಕ ರಾತ್ರಿ ಸುಮಾರು ೧೧ ಗಂಟೆಯವರೆಗೂ ಮನೆಗೆ ಮರಳಿ ಬಂದಿರಲಿಲ್ಲ. ಇದರಿಂದ ಆತಂಕಗೊಂಡ ಮನೆಯವರು ರಾತ್ರಿ ಉಪ್ಪಿನಂಗಡಿಯಲ್ಲಿ ಹುಡುಕಾಟ ನಡೆಸಿದ್ದಾರೆ, ಬಾಲಕ ಎಲ್ಲಿಯೂ ಪತ್ತೆಯಾಗದ ವಿಚಾರ ತಿಳಿದು ರಾತ್ರಿ ಶಾಸಕರಾದ ಅಶೋಕ್ ರೈ ಯವರಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ. ಶಾಸಕರು ಪೊಲೀಸ್ ಅಧಿಕಾರಿಗಳಿಗೆ ಮಾಹಿತಿ ನೀಡಿ ನಾಪತ್ತೆಯಾದ ಬಾಲಕನ ವಿವರಣೆಯನ್ನು ನೀಡಿದ್ದರು. ಶಾಸಕರ ಸೂಚನೆಯಂತೆ ಪೊಲೀಸರು ವಿವಿಧ ಬಸ್ ನಿಲ್ದಾಣ ಮತ್ತು ರೈಲು ನಿಲ್ದಾಣಗಳಿಗೆ ಮಾಹಿತಿ ರವಾನೆ ಮಾಡಿದ್ದರು. ಹುಡುಕಾಟದ ವೇಳೆ ನಾಪತ್ತೆಯಾದ ಬಾಲಕ ಬೆಳಿಗ್ಗಿನ ಜಾವ ಬೆಂಗಳೂರಿನ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ಪತ್ತೆಯಾಗಿದ್ದಾನೆ. ಆತನನ್ನು ಕರೆದುಕೊಂಡು ಬರಲು ಪೋಷಕರು ಬೆಂಗಳೂರಿಗೆ ತೆರಳಿದ್ದಾರೆ. ತಡ ರಾತ್ರಿ ಕರೆ ಮಾಡಿದಾಗಲೂ ತುರ್ತು ಸ್ಪಂದನೆ ನೀಡುವ ಮೂಲಕ ಬಾಲಕನ ಪತ್ತೆಗೆ ನೆರವು ನೀಡಿದ ಸಸಕರಿಗೆ ಕುಟುಂಬಸ್ಥರು ಕೃತಜ್ಞತೆ ಸಲ್ಲಿಸಿದ್ದಾರೆ.