ಸೊಳ್ಳೆ ಕಚ್ಚಿದ ಎಷ್ಟು ದಿನದ ನಂತ್ರ ಡೆಂಗ್ಯೂ ಬರುತ್ತೆ.? ತಡೆಯುವುದು ಹೇಗೆ.? ಇಲ್ಲಿದೆ ಮಾಹಿತಿ

ಸುದ್ದಿಗಳು News

Posted by vidyamaana on 2024-07-01 19:31:51 |

Share: | | | | |


ಸೊಳ್ಳೆ ಕಚ್ಚಿದ ಎಷ್ಟು ದಿನದ ನಂತ್ರ ಡೆಂಗ್ಯೂ ಬರುತ್ತೆ.? ತಡೆಯುವುದು ಹೇಗೆ.? ಇಲ್ಲಿದೆ ಮಾಹಿತಿ

ಮಳೆಗಾಲ ಆರಂಭವಾಗಿದ್ದು, ಈ ಋತುವಿನಲ್ಲಿ ಆರೋಗ್ಯದ ಕಡೆ ಗಮನಹರಿಸುವುದು ಅಗತ್ಯವಾಗಿದೆ. ಋತುಮಾನದ ಕಾಯಿಲೆಗಳ ಜೊತೆಗೆ ಡೆಂಗ್ಯೂ ಅಪಾಯವಿದೆ. ಡೆಂಗ್ಯೂ ವಾಸ್ತವವಾಗಿ ಹೆಣ್ಣು ಈಜಿಪ್ಟಿ (ಈಡಿಸ್ ಸೊಳ್ಳೆ) ಸೊಳ್ಳೆಗಳಿಂದ ಹರಡುತ್ತದೆ.

ಈ ಸೊಳ್ಳೆಗಳ ಜೀವಿತಾವಧಿ ಕೇವಲ ಒಂದು ತಿಂಗಳು ಮಾತ್ರ. ಆದ್ರೆ, ಈ ಅವಧಿಯಲ್ಲಿ ಅವು 500 ರಿಂದ 1000 ಸೊಳ್ಳೆಗಳಿಗೆ ಜನ್ಮ ನೀಡುತ್ತವೆ. ಈ ಸೊಳ್ಳೆಗಳು ಕೇವಲ ಮೂರು ಅಡಿ ಮಾತ್ರ ಹಾರಬಲ್ಲವು. ಈ ಕಾರಣಕ್ಕಾಗಿ ಅವು ಕೇವಲ ಮನುಷ್ಯನ ಕೆಳಗಿನ ಅಂಗಗಳನ್ನ ಗುರಿಯಾಗಿಸುತ್ತಾರೆ. ಈ ಸೊಳ್ಳೆಗಳು ಕಚ್ಚಿದರೆ ತೀವ್ರ ಜ್ವರದ ಜೊತೆಗೆ ಅನೇಕ ಸಮಸ್ಯೆಗಳು ಎದುರಾಗುತ್ತವೆ.

ಡೆಂಗ್ಯೂ ಸೊಳ್ಳೆಗಳು ಕೂಲರ್‌, ಹೂವಿನ ಕುಂಡಗಳು, ಹಳೆಯ ಪಾತ್ರೆಗಳು ಅಥವಾ ಮನೆಯ ಛಾವಣಿಗಳು, ಟೈರ್‌ಗಳು, ಗುಂಡಿಗಳು ಇತ್ಯಾದಿಗಳಲ್ಲಿ ತಮ್ಮ ಮೊಟ್ಟೆಗಳನ್ನ ಇಡುತ್ತವೆ. ಡೆಂಗ್ಯೂ ಸೊಳ್ಳೆಗಳು ಒಮ್ಮೆಗೆ 100 ರಿಂದ 300 ಮೊಟ್ಟೆಗಳನ್ನ ಇಡುತ್ತವೆ. 4 ದಿನಗಳ ನಂತರ ಅವು ಸೊಳ್ಳೆಗಳಾಗಿ ರೂಪಾಂತರಗೊಳ್ಳುತ್ತವೆ. ಸೊಳ್ಳೆಗಳು ಹುಟ್ಟಿದ 2 ದಿನಗಳಲ್ಲಿ ಹಾರಲು ಪ್ರಾರಂಭಿಸುತ್ತವೆ.

ಡೆಂಗ್ಯೂ ಸೊಳ್ಳೆ ಕಚ್ಚಿದ ತಕ್ಷಣ ಡೆಂಗ್ಯೂ ಲಕ್ಷಣಗಳು ಕಾಣಿಸುವುದಿಲ್ಲ. ಆದ್ರೆ, ಕೆಲವು ದಿನಗಳ ನಂತರ ಅದರ ಪರಿಣಾಮಗಳು ಕಾಣಿಸಿಕೊಳ್ಳಲು ಪ್ರಾರಂಭಿಸುತ್ತವೆ. ಈಡಿಸ್ ಸೊಳ್ಳೆಗಳು ಕಚ್ಚಿದ 3 ರಿಂದ 5 ದಿನಗಳ ನಂತರ ಡೆಂಗ್ಯೂ ಜ್ವರ ಬರುತ್ತದೆ. ಈ ಸೊಳ್ಳೆಗಳು ಬೆಳಗ್ಗೆ ಮತ್ತು ಸಂಜೆಯ ವೇಳೆಯಲ್ಲಿ ಮಾತ್ರ ಸಂಚರಿಸುತ್ತಿದ್ದು, ಡೆಂಗ್ಯೂ ಸೊಳ್ಳೆಗಳು ಮನೆಗಳ ಮೂಲೆಗಳಲ್ಲಿ ಪರದೆಯ ಹಿಂದೆ, ಸೊಳ್ಳೆಗಳು ಇರುವ ಸ್ಥಳಗಳಲ್ಲಿ ಅಡಗಿಕೊಳ್ಳುತ್ತವೆ.

ಡೆಂಗ್ಯೂ ಜ್ವರದ ಲಕ್ಷಣಗಳು.!

ಡೆಂಗ್ಯೂ ಈಡಿಸ್ ಸೊಳ್ಳೆಯ ಕಚ್ಚುವಿಕೆಯಿಂದ ಉಂಟಾಗುವ ಗಂಭೀರ ಕಾಯಿಲೆಯಾಗಿದ್ದು, ಇದರ ಲಕ್ಷಣಗಳು ಸಾಮಾನ್ಯವಾಗಿ ಜ್ವರದಂತಿರುತ್ತವೆ. ಆದ್ರೆ, ಇದು ತೀವ್ರವಾದ ಹೆಮರಾಜಿಕ್ ಜ್ವರಕ್ಕೆ ಕಾರಣವಾಗಬಹುದು. ಸಕಾಲದಲ್ಲಿ ಚಿಕಿತ್ಸೆ ನೀಡದಿದ್ದರೆ ಜೀವಕ್ಕೆ ಅಪಾಯವಿದೆ ಎನ್ನುತ್ತಾರೆ ವೈದ್ಯರು.

ಲಕ್ಷಣಗಳೇನು.?

ತೀವ್ರವಾದ ಜ್ವರ, ತಲೆನೋವು, ಸ್ನಾಯು ನೋವು, ಚರ್ಮದ ಮೇಲೆ ಕೆಂಪು ಗುಳ್ಳೆಗಳು, ಕಣ್ಣುಗಳ ಕೆಳಗೆ ನೋವು, ಮೊಣಕಾಲು ನೋವು, ಊತ, ಹಲ್ಲು, ಮೂಗು, ಒಸಡುಗಳಿಂದ ರಕ್ತಸ್ರಾವ ಇತ್ಯಾದಿಗಳನ್ನ ಗಮನಿಸಿದರೆ ತಕ್ಷಣವೇ ಎಚ್ಚರಗೊಳ್ಳಿ.

ಡೆಂಗ್ಯೂ ತಡೆಗಟ್ಟುವುದು ಹೇಗೆ.?

* ವಿಶೇಷವಾಗಿ ಮಳೆಗಾಲದಲ್ಲಿ ದೇಹವನ್ನ ಸಂಪೂರ್ಣವಾಗಿ ಮುಚ್ಚುವ ಬಟ್ಟೆಗಳನ್ನ ಧರಿಸಿ.

* ಮಲಗುವಾಗ ಸೊಳ್ಳೆ ಪರದೆಗಳನ್ನ ಬಳಸಿ.

* ಸೊಳ್ಳೆ ಕಡಿತವನ್ನು ತಡೆಯಲು ದೇಹಕ್ಕೆ ಎಣ್ಣೆ ಅಥವಾ ಕ್ರೀಮ್ ಹಚ್ಚಿ.

* ನಿಮ್ಮ ಮನೆ ಮತ್ತು ಸುತ್ತಮುತ್ತ ಕೊಳಕು ನೀರು ಬರುವುದನ್ನ ತಪ್ಪಿಸಿ.

* ಅನಗತ್ಯ ವಸ್ತುಗಳು ಹಾಗೂ ಕೂಲರ್ ಕಾಲಕಾಲಕ್ಕೆ ಸ್ವಚ್ಛಗೊಳಿಸುತ್ತಿರಬೇಕು.

* ಡೆಂಗ್ಯೂ ಲಕ್ಷಣಗಳು ಕಾಣಿಸಿಕೊಂಡರೆ ತಕ್ಷಣ ವೈದ್ಯರನ್ನು ಸಂಪರ್ಕಿಸಿ.

 Share: | | | | |


ಉಡುಪಿಯಲ್ಲಿ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ: 11 ಮಂದಿಗೆ ನೋಟಿಸ್

Posted by Vidyamaana on 2023-12-11 21:13:30 |

Share: | | | | |


ಉಡುಪಿಯಲ್ಲಿ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ: 11 ಮಂದಿಗೆ ನೋಟಿಸ್

ಉಡುಪಿ : ಆರೋಪಿ ಪ್ರವೀಣ್ ಚೌಗಲೆಗೆ ಸೂಕ್ತ ಭದ್ರತೆ ನೀಡಲು ಕಷ್ಟವಾದ ಕಾರಣ, ಆತನನ್ನು ಉಡುಪಿ ಸಬ್ ಜೈಲಿನಿಂದ ಪರಪ್ಪನ ಅಗ್ರಹಾರಕ್ಕೆ ಸ್ಥಳಾಂತರ ಮಾಡಲಾಗಿತ್ತು. ವಿಡಿಯೋ ಕಾನ್ಫರೆನ್ಸ್ ಮೂಲಕವೇ ವಿಚಾರಣೆಗೂ ವ್ಯವಸ್ಥೆ ಮಾಡಲಾಗಿದೆ. ಪರಿಸ್ಥಿತಿ ಇಷ್ಟೊಂದು ಸೂಕ್ಷ್ಮವಾಗಿರುವಾಗ, ಜನರ ಸಂಯಮವನ್ನು ಗೌರವಿಸಬೇಕಾದ ಇಲಾಖೆ ನೊಟೀಸು ನೀಡಿ ಮತ್ತೊಂದು ತಲೆನೋವು ಎದುರು ಹಾಕಿಕೊಂಡಂತಿದೆ.ಉಡುಪಿಯ ನೇಜಾರಿನಲ್ಲಿ (Udupi, Nezari)ನಡೆದ ನಾಲ್ವರ ಅಮಾನುಷ ಹತ್ಯೆ (Murder) ಪ್ರಕರಣದಲ್ಲಿ ಅನಪೇಕ್ಷಿತ ಬೆಳವಣಿಗೆಯೊಂದು ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದೆ. ಆರೋಪಿ ಪ್ರವೀಣ್ ಚೌಗಲೆಯನ್ನು ಮಹಜರಿಗೆ ಕರೆತಂದಾಗ ಉಂಟಾದ ಗದ್ದಲ, ಲಾಠಿಚಾರ್ಜ್ ಸಂಬಂಧ 11 ಮಂದಿಗೆ ನೊಟೀಸು ನೀಡಿರುವ ಪೊಲೀಸ್ ಇಲಾಖೆ ನಡೆ ಗೊಂದಲ ಸೃಷ್ಟಿಸಿದೆ. ಈ ಪೈಕಿ ಕೊಲೆಯತ್ನ ಪ್ರಕರಣ ದಾಖಲಿಸಲು ಪೊಲೀಸ್ ಇಲಾಖೆ ಸಿದ್ದತೆ ನಡೆಸಿದೆ ಎಂಬ ವದಂತಿ ನೇಜಾರಿನ ಜನರನ್ನು (Villagers) ಮತ್ತಷ್ಟು ಆತಂಕಕ್ಕೆ (Angry) ತಳ್ಳಿದೆ.


ನೇಜಾರಿನ ಹತ್ಯಾಕಾಂಡ ಕುರಿತಂತೆ ಸಾರ್ವಜನಿಕರಲ್ಲಿ ಅದರಲ್ಲೂ ಮುಸ್ಲೀಂ ಸಮುದಾಯದಲ್ಲಿ ಇನ್ನಿಲ್ಲದ ಆಕ್ರೋಶ ಮಡುಗಟ್ಟಿದೆ. 15 ನಿಮಿಷದ ಅವಧಿಯಲ್ಲಿ ನಾಲ್ವರನ್ನು ಬಲಿ ಪಡೆದ ಪಾತಕಿ ಪ್ರವೀಣ್ ಚೌಗಲೆಗೆ ಗಲ್ಲು ಶಿಕ್ಷೆ ಆಗಬೇಕೆಂದು ಉಡುಪಿಯ ಜನತೆ ಒಕ್ಕೊರಲಿನಿಂದ ಒತ್ತಾಯಿಸುತ್ತಿದ್ದಾರೆ. ಘಟನೆ ನಡೆದು ಸಾಕಷ್ಟು ಸಮಯ ಕಳೆದರೂ ಜನರ ಕೋಪ ಮಾತ್ರ ತಣ್ಣಗಾಗಿಲ್ಲ.ಪ್ರಕರಣ ಇನ್ನೂ ಹಸಿಯಾಗಿರುವಾಗಲೇ, ಆರೋಪಿ ಪ್ರವೀಣನನ್ನು ನವೆಂಬರ್ 16 ರಂದುಸೂಕ್ತ ಭದ್ರತೆಗಳಿಲ್ಲದೆ ಘಟನೆ ನಡೆದ ಮನೆಗೆ ಪೊಲೀಸರು ಕರೆತಂದಿದ್ದರು. ಈ ವೇಳೆ ಉದ್ರಿಕ್ತ ಜನರು ಪ್ರವೀಣನ ಮೇಲೆ ಹಲ್ಲೆಗೆ ಮುಂದಾಗಿದ್ದರು. ಕೋಪಗೊಂಡಿದ್ದ ಜನರನ್ನು ಹಿಮ್ಮೆಟ್ಟಿಸಲು ಪೊಲೀಸರು ವಿಫಲರಾಗಿದ್ದರು. ನಂತರ ಲಾಠಿ ಚಾರ್ಜ್ ನಡೆಸಿದ್ದರು.


ಇದೀಗ ಈ ಘಟನೆ ಸಂಬಂಧ ಹಲ್ಲೆಗೆ ಮುಂದಾದ 11 ಮಂದಿಯನ್ನು ಗುರುತಿಸಿ ಮಲ್ಪೆ ಪೊಲೀಸರು ನೊಟೀಸು ನೀಡಿದ್ದಾರೆ. ಈ ಪೈಕಿ ಮೂವರ ಮೇಲೆ 307, ಅಂದರೆ ಆರೋಪಿಯ ಕೊಲೆ ಯತ್ನ ಸಂಬಂಧ ಪ್ರಕರಣ ದಾಖಲಿಸಲು ತಯಾರಿ ನಡೆಯುತ್ತಿದೆ ಎಂಬ ವದಂತಿ ಜನರ ಆಕ್ರೋಶಕ್ಕೆ ಕಾರಣವಾಗಿತ್ತು. ಆದರೆ ಸಂತ್ರಸ್ಥ ಕುಟುಂಬ ಮಧ್ಯಪ್ರವೇಶಿಸುವ ಮೂಲಕ ವಿವಾದ ತಿಳಿಗೊಂಡಿದೆ.ವಾಸ್ತವದಲ್ಲಿ ಪ್ರವೀಣ್ ಚೌಗಲೆಗೆ ಭದ್ರತೆ ನೀಡುವುದು ಪೊಲೀಸ್ ಇಲಾಖೆಗೆ ದೊಡ್ಡ ತಲೆನೋವಾಗಿತ್ತು. ಕೋರ್ಟ್ ಗೆ ಹಾಜರುಪಡಿಸುವಾಗಲೂ ಹತ್ತಾರು ಪೊಲೀಸರನ್ನು ನಿಯೋಜಿಸಲಾಗಿತ್ತು. ಆದರೆ ಮಹಜರು ವೇಳೆ ಮಾತ್ರ ಸೂಕ್ತ ರಕ್ಷಣೆ ಇಲ್ಲದೆ ಕರೆತರಲಾಗಿತ್ತು. ಸಹಜವಾಗಿಯೇ ಕೋಪದಲ್ಲಿದ್ದ ನಾಗರಿಕರು, ಆರೋಪಿಯತ್ತ ನುಗ್ಗಿ ದಾಳಿಗೆ ಮುಂದಾಗಿದ್ದರು.


ಈ ವೇಳೆ ಲಾಠಿಚಾರ್ಜ್ ನಡೆದು, ಬಳಿಕ ಸ್ಥಳೀಯರ ಪ್ರತಿಭಟನೆಯೂ ನಡೆದಿತ್ತು. ಲಾಠಿ ಚಾರ್ಜ್ ಮಾಡಿದ ಬಗ್ಗೆ ಜನರು ಕೋಪ ವ್ಯಕ್ತಪಡಿಸಿದ್ದರು. ಇದೀಗ ಈ ಗಲಾಟೆ ಸಂಬಂಧ ಹಲವರಿಗೆ ನೊಟೀಸು ನೀಡಲಾಗಿದೆ. ನಾಲ್ವರ ಹತ್ಯೆಯಾದರೂ ಸಂಯಮದಿಂದಿದ್ದ ಸ್ಥಳೀಯ ಜನತೆಯ ಬಗ್ಗೆ ವ್ಯಾಪಕ ಪ್ರಶಂಸೆ ವ್ಯಕ್ತವಾಗಿತ್ತು, ಇದೀಗ ಪೊಲೀಸರು ಮತ್ತೆ ಕೇಸ್ ಓಪನ್ ಮಾಡಿರೋದು, ಸಹಜವಾಗಿಯೇ ಇಲಾಖೆಯ ಮೇಲೆ ಕೋಪಕ್ಕೆ ಕಾರಣವಾಗಿದೆ. ಕೊನೆಯಲ್ಲಿ ಪೊಲೀಸರು ಜನರ ಆಕ್ರೋಶ ಅರಿತು, ವಿಚಾರಣೆ ನಡೆಸಿ ಠಾಣಾ ಜಾಮೀನಿನ ಮೂಲಕ ಬಿಡುಗಡೆಗೊಳಿಸಿದ್ದಾರೆ.ಏನೇ ಆದರೂ ಕಾನೂನು ಕ್ರಮ ಅನಿವಾರ್ಯ ಅನ್ನೋದು ಇಲಾಖೆಯ ಧೋರಣೆಯಾಗಿದೆ.

ಆಸ್ಪತ್ರೆಗೆ ತೆರಳಿ ಕುಮಾರಸ್ವಾಮಿ ಆರೋಗ್ಯ ವಿಚಾರಿಸಿದ ಸಿದ್ದರಾಮಯ್ಯ

Posted by Vidyamaana on 2023-09-01 01:50:24 |

Share: | | | | |


ಆಸ್ಪತ್ರೆಗೆ ತೆರಳಿ ಕುಮಾರಸ್ವಾಮಿ ಆರೋಗ್ಯ ವಿಚಾರಿಸಿದ ಸಿದ್ದರಾಮಯ್ಯ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಯನಗರದ ಅಪೋಲೋ ಆಸ್ಪತ್ರೆಗೆ ಭೇಟಿ ನೀಡಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರ ಆರೋಗ್ಯ ವಿಚಾರಿಸಿದರು.


ಸುಸ್ತು, ಬಳಲಿಕೆಯಿಂದಾಗಿ ಹೆಚ್‌ಡಿಕೆ ಮಂಗಳವಾರ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದರು. ಅವರ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ನಿನ್ನೆ ಐಸಿಯುವಿನಲ್ಲಿ ಚಿಕಿತ್ಸೆ ನೀಡಲಾಗಿತ್ತು. ಇಂದು ವಾರ್ಡ್‌ಗೆ ಶಿಫ್ಟ್‌ ಮಾಡಲಾಗಿದೆ. ಈ ವೇಳೆ ಸಿಎಂ ಸಿದ್ದರಾಮಯ್ಯ ಅವರು ಆಸ್ಪತ್ರೆಗೆ ತೆರಳಿ ಆರೋಗ್ಯ ವಿಚಾರಿಸಿದ್ದಾರೆ. ಕೃಷಿ ಸಚಿವ ಚೆಲುವರಾಯಸ್ವಾಮಿ ಕೂಡ ಸಿಎಂ ಜೊತೆಗಿದ್ದರು.


ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಸಿಎಂ ಕುಮಾರಸ್ವಾಮಿ ಆರೋಗ್ಯ ಸ್ಥಿರವಾಗಿದೆ. ಐಸಿಯುನಿಂದ ಜನರಲ್ ವಾರ್ಡ್‌ಗೆ ಶಿಫ್ಟ್ ಆಗಿದ್ದು, ನಾಳೆ ಅಥವಾ ನಾಡಿದ್ದು ಡಿಸ್ಚಾರ್ಜ್‌ ಆಗುವ ಸಾಧ್ಯತೆ ಇದೆ.


ತಂದೆ ಆರೋಗ್ಯ ಸ್ಥಿರವಾಗಿದ್ದು, ವಾರ್ಡ್‌ಗೆ ಶಿಫ್ಟ್ ಮಾಡಲಾಗಿದೆ. ಕೆಲ ದಿನಗಳು ವೈದ್ಯರು ವಿಶ್ರಾಂತಿ ಪಡೆಯಲು ಸಲಹೆ ನೀಡಿದ್ದು, ಯಾರೂ ಕೂಡ ಆತಂಕಕ್ಕೆ ಒಳಗಾಗೋದು ಬೇಡ ಅಂತ ನಿಖಿಲ್‌ ಕುಮಾರಸ್ವಾಮಿ ಮನವಿ ಮಾಡಿದ್ದಾರೆ.

ಪುತ್ತೂರಿನ ಫ್ಯಾಶನ್ ಲೋಕದ ಮಹಾಉತ್ಸವ ಆ 01 ರಿಂದ ಪ್ರಾರಂಭ

Posted by Vidyamaana on 2023-07-31 14:33:54 |

Share: | | | | |


ಪುತ್ತೂರಿನ ಫ್ಯಾಶನ್ ಲೋಕದ ಮಹಾಉತ್ಸವ  ಆ 01 ರಿಂದ ಪ್ರಾರಂಭ

ಪುತ್ತೂರು: ಫ್ಯಾಮಿಲಿ ಶೋರೂಂ ರಾಧಾಸ್’ನಲ್ಲಿ ಪುತ್ತೂರಿನ ಫ್ಯಾಶನ್ ಲೋಕದ ಮಹಾ ಉತ್ಸವ ಮಾನ್ಸೂನ್ ಮೇಳ ನಾಳೆಯಿಂದ (ಆಗಸ್ಟ್ 1) ಆರಂಭಗೊಳ್ಳಲಿದೆ.

ವಸ್ತ್ರ ಪ್ರಿಯರು ಕಾತರದಿಂದ ಕಾಯುತ್ತಿದ್ದ ಮಹಾ ಉತ್ಸವ ಕೊನೆಗೂ ಸಮೀಪಿಸಿದೆ. ದೊಡ್ಡ ಅವಕಾಶ, ಅತಿದೊಡ್ಡ ಸಂಗ್ರಹ, ಅತ್ಯಂತ ದೊಡ್ಡ ಉತ್ಸವ ಇದಾಗಿದ್ದು, ವೈವಿಧ್ಯಮಯ ವಸ್ತ್ರಗಳು ಗ್ರಾಹಕರ ಮುಂದೆ ತೆರೆದುಕೊಳ್ಳಲಿದೆ.

ಪ್ರತಿದಿನ ಹೊಸ ಸಂಗ್ರಹದೊಂದಿಗೆ ಬರುವುದಷ್ಟೇ ಅಲ್ಲ, ರಾಧಾ’ಸ್ ಮಾನ್ಸೂನ್ ಮೇಳದಲ್ಲಿ ಅತೀ ಕಡಿಮೆ ಬೆಲೆಗೆ ಗ್ರಾಹಕರನ್ನು ತಲುಪುವುದು ವಿಶೇಷ. ಈ ಮಾನ್ಸೂನ್ ಮೇಳದಲ್ಲಿ ವಸ್ತ್ರಗಳನ್ನು ಖರೀದಿಸಿ ನಂಬರ್ ವನ್ ಶಾಪಿಂಗ್ ಅನುಭವವನ್ನು ತಮ್ಮದಾಗಿಸಿಕೊಳ್ಳಬಹುದು.

ಸಿಲ್ಕ್ಸ್, ಟೆಕ್ಸ್’ಟೈಲ್, ರೆಡಿಮೇಡ್ ವಸ್ತ್ರಗಳಿಗೆ ಹೆಸರುವಾಸಿಯಾಗಿರುವ ಪುತ್ತೂರಿನ ಪ್ರತಿಷ್ಠಿತ ಫ್ಯಾಮಿಲಿ ಶೋರೂಂ ರಾಧಾ’ಸ್, ಗ್ರಾಹಕರಿಗೆ ಮಾನ್ಸೂನಿನ ರಸದೌತಣ ಉಣಬಡಿಸಲು ತಯಾರಾಗಿದೆ. ವಿಶಾಲವಾದ ಪಾರ್ಕಿಂಗ್ ವ್ಯವಸ್ಥೆ ಇರುವುದು ಗ್ರಾಹಕರ ದೃಷ್ಟಿಯಿಂದ ಅನುಕೂಲಕರ. ಗ್ರಾಹಕರಿಗಾಗಿ ಸಿದ್ಧವಾಗಿರುವ ಮಾನ್ಸೂನ್ ಮೇಳದ ಪ್ರಯೋಜನವನ್ನು ಪಡೆದುಕೊಳ್ಳುವಂತೆ ಪ್ರಕಟಣೆ ತಿಳಿಸಿದೆ.

ದ್ವಿತೀಯ ಪಿಯುಸಿಯಲ್ಲಿ ಮಾರ್ಕ್ಸ್‌ ಕಡಿಮೆ ಬಂದಿದ್ದಕ್ಕೆ ಮಗಳನ್ನೇ ಕೊಂದ ತಾಯಿ!

Posted by Vidyamaana on 2024-04-30 08:26:23 |

Share: | | | | |


ದ್ವಿತೀಯ ಪಿಯುಸಿಯಲ್ಲಿ ಮಾರ್ಕ್ಸ್‌ ಕಡಿಮೆ ಬಂದಿದ್ದಕ್ಕೆ   ಮಗಳನ್ನೇ ಕೊಂದ ತಾಯಿ!

ಬೆಂಗಳೂರು: ತಾಯಿಯೇ ಮಗಳನ್ನು ಕೊಲೆ ಮಾಡಿರುವ ಆಘಾತಕಾರಿ ಘಟನೆ ರಾಜ್ಯ ರಾಜಧಾನಿಯಲ್ಲಿ ನಡೆದಿದೆ. ತಾಯಿ ಮೇಲೆ ಮಗಳು ಕೂಡ ಚಾಕುವಿನಿಂದ ದಾಳಿ ಮಾಡಿದ್ದು, ಗಾಯಗೊಂಡ ತಾಯಿ ಆಸ್ಪತ್ರೆ ಪಾಲಾಗಿದ್ದಾರೆ. ಬನಶಂಕರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಸೆಕೆಂಡ್ ಪಿಯುಸಿ ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದಿದ್ದಕ್ಕೆ ತಾಯಿ ಮಗಳ ನಡುವೆ ಜಗಳ ನಡೆದಿದೆ. ಎಕ್ಸಾಂಗೆ ಕಾಲೇಜಿಗೆ ಹೋಗ್ತೀನಿ ಎಂದು ಮನೆಯಿಂದ ಹೊರಡುತ್ತಿದ್ದ ಮಗಳು ಪರೀಕ್ಷೆಗೆ ಗೈರು ಹಾಜರಾಗಿದ್ದ ವಿಚಾರ ಸೋಮವಾರ ತಾಯಿಗೆ ತಿಳಿದಿದ್ದು, ಜಗಳ ಶುರು ಆಗಿತ್ತು

ಕಡಬ: ಕಾಲೇಜು ಆವರಣದಲ್ಲಿ ಆ್ಯಸಿಡ್ ದಾಳಿ ಮೂವರು ವಿದ್ಯಾರ್ಥಿನಿಯರು ಗಂಭೀರ ಆರೋಪಿ ಅಬೀನ್ ಪೊಲೀಸ್ ವಶಕ್ಕೆ

Posted by Vidyamaana on 2024-03-04 11:14:41 |

Share: | | | | |


ಕಡಬ: ಕಾಲೇಜು ಆವರಣದಲ್ಲಿ ಆ್ಯಸಿಡ್ ದಾಳಿ  ಮೂವರು ವಿದ್ಯಾರ್ಥಿನಿಯರು ಗಂಭೀರ ಆರೋಪಿ ಅಬೀನ್ ಪೊಲೀಸ್ ವಶಕ್ಕೆ

ಕಡಬ, ಮಾ.04. ಕಾಲೇಜು ಆವರಣದಲ್ಲಿ ಓದುತ್ತಿದ್ದ ವಿದ್ಯಾರ್ಥಿನಿಯರ ಮೇಲೆ ಅಪರಿಚಿತ ವ್ಯಕ್ತಿಯಿಂದ ಆ್ಯಸಿಡ್‌ ದಾಳಿಯಾಗಿರುವ ಘಟನೆ ಕಡಬ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಸೋಮವಾರದಂದು ನಡೆದಿದೆ.

ಘಟನೆಯಲ್ಲಿ ಮೂವರು ವಿದ್ಯಾರ್ಥಿನಿಯರು ಗಂಭೀರವಾಗಿ ಗಾಯಗೊಂಡಿದ್ದು, ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆರೋಪಿಅಬೀನ್ ನನ್ನು ಪೊಲೀಸ್ ವಶಕ್ಕೆ ಪಡೆದಿದ್ದರೆ ಎಂದು ತಿಳಿದು ಬಂದಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ

ಪೊಲೀಸ್ ಪ್ರಕಟಣೆ

ದಿನಾಂಕ 04.03.2024  ರಂದು ಬೆಳಗಿನ ಸಮಯ, ಸರ್ಕಾರಿ ಪದವಿ ಪೂರ್ವ ಕಾಲೇಜು ಕಡಬ ಇದರ ವಿದ್ಯಾರ್ಥಿನಿಯೋರ್ವಳ ಮೇಲೆ ಕಾಲೇಜ್ ಆವರಣದಲ್ಲಿ ವ್ಯಕ್ತಿಯೊಬ್ಬ ಆಸಿಡ್ ಎರಚಿರುವ ಘಟನೆ ನಡೆದಿರುತ್ತದೆ. ಘಟನೆಯ ವೇಳೆ ವಿದ್ಯಾರ್ಥಿನಿಯ ಪಕ್ಕದಲ್ಲಿದ್ದ ಇಬ್ಬರು ವಿಧ್ಯಾರ್ಥಿನಿಯರಿಗೂ ಆಸಿಡ್ ತಗುಲಿ ಸಣ್ಣ ಪ್ರಮಾಣದ ಗಾಯಗಳಾಗಿರುತ್ತದೆ. ಈಗಾಗಲೇ ಆರೋಪಿ ಅಬೀನ್ (23) ಎಂಬಾತನನ್ನು ವಶಕ್ಕೆ ಪಡೆಯಲಾಗಿದ್ದು, ಆರೋಪಿ ಮತ್ತು ಆಸಿಡ್ ದಾಳಿಗೊಳಗಾದ ವಿದ್ಯಾರ್ಥಿನಿ ಒಂದೇ ಕೋಮಿಗೆ ಸೇರಿದವರಾಗಿರುತ್ತಾರೆ. ಪ್ರಾಥಮಿಕ ತನಿಖೆಯಲ್ಲಿ ಪ್ರೇಮ ವೈಫಲ್ಯದ ಹಿನ್ನಲೆಯಲ್ಲಿ ಆರೋಪಿ ಈ ಕೃತ್ಯ ನಡೆಸಿರುವುದಾಗಿ ತಿಳಿದುಬಂದಿದ್ದು, ಈ ಬಗ್ಗೆ ಪ್ರಕರಣದ ದಾಖಲಿಸಿಕೊಂಡು ತನಿಖೆ ನಡೆಸಲಾಗುವುದು. ತನಿಖೆಯ ಪ್ರಗತಿಯನ್ನು ಮುಂದಕ್ಕೆ ನೀಡಲಾಗುವುದು



ಬೆಳ್ಳುಳ್ಳಿ ಬೆಳೆ ಕಾಪಾಡಿಕೊಳ್ಳಲು ಸೂಪರ್ ಪ್ಲ್ಯಾನ್ ಮಾಡಿದ ಭೋಪಾಲ್ ನ ರಾಹುಲ್ಲಾ

Posted by Vidyamaana on 2024-02-23 14:23:21 |

Share: | | | | |


ಬೆಳ್ಳುಳ್ಳಿ ಬೆಳೆ ಕಾಪಾಡಿಕೊಳ್ಳಲು ಸೂಪರ್ ಪ್ಲ್ಯಾನ್ ಮಾಡಿದ ಭೋಪಾಲ್ ನ ರಾಹುಲ್ಲಾ

ಭೋಪಾಲ್: ಒಂದೆಡೆ ಸಿಲಿಂಡರ್ ಬೆಲೆ ಏರಿಕೆಯಿಂದ ಬೇಸತ್ತಿರುವ ಜನರು ಇದೀಗ ತರಕಾರಿ ಬೆಲೆ ಏರಿಕೆಯಿಂದ ಜೇಬು ಖಾಲಿ ಮಾಡಿಕೊಳ್ಳಲು ಆರಂಭಿಸಿದ್ದಾರೆ. ಈರುಳ್ಳಿ, ಆಲೂಗೆಡ್ಡೆ ಹೊರತುಪಡಿಸಿ ಉಳಿದ ತರಕಾರಿಗಳ ಬೆಲೆ ನಿಧಾನಕ್ಕೆ ಏರಿಕೆಯಾಗುತ್ತಿದೆ. ಅದರಲ್ಲಿ ಬೆಳ್ಳುಳ್ಳಿ ಬೆಲೆ ಗಗನಕ್ಕೆ ಏರಿದೆ.ಬೆಲೆ ಏರಿಕೆಯಾಗುತ್ತಿರುವಂತೆಯೇ ಬೆಳ್ಳುಳ್ಳು ಬೆಳೆದ ರೈತರು ಒಂದೆಡೆ ಖುಷಿ ಪಟ್ಟರೇ ಮತ್ತೊಂದೆಡೆ ಆತಂಕ ಪಡುತ್ತಿದ್ದಾರೆ. ಮಾರುಕಟ್ಟೆಯಲ್ಲಿ ಬೆಳ್ಳುಳ್ಳಿಯ ಬೆಲೆ ಕೆಜಿಗೆ 300, 400 ರೂಪಾಯಿಯಿಂದ 500 ರೂಪಾಯಿಗೆ ತಲುಪಿದ್ದು ರೈತರು ಉತ್ತಮ ಆದಾಯ ಪಡೆಯುತ್ತಿದ್ದಾರೆ.

ಇದರ ಬೆನ್ನಲ್ಲೆ ಬೆಳೆ ಕಳ್ಳತನವಾಗುವ ಭಯ ಕೂಡ ಅನೇಕ ರೈತರಲ್ಲಿ ಕಾಣುತ್ತಿದೆ. ಇದಕ್ಕಾಗಿ ವಿನೂತನ ಪರಿಹಾರಗಳನ್ನು ಕಂಡುಕೊಳ್ಳುತ್ತಿದ್ದಾರೆ. ಇದೇ ಕಾರಣಕ್ಕೆ ಮಧ್ಯಪ್ರದೇಶದ ರೈತರೊಬ್ಬರು ತಮ್ಮ ಹೊಲಕ್ಕೆ ಸಂಪೂರ್ಣವಾಗಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಿದ್ದಾರೆ. ಹೌದು.. ಮಧ್ಯಪ್ರದೇಶದ ರೈತ ರಾಹುಲ್ ದೇಶಮುಖ್ ತಮ್ಮ 13 ಎಕರೆ ಹೊಲದಲ್ಲಿ ಬೆಳ್ಳುಳ್ಳಿ ಬೆಳೆಯಲು 25 ಲಕ್ಷ ರೂಪಾಯಿ ಹೂಡಿಕೆ ಮಾಡಿದ್ದಾರೆ. ಮಾರುಕಟ್ಟೆಯಲ್ಲಿ ಈಗಾಗಲೇ ಬೆಳ್ಳುಳ್ಳಿ ಮಾರಾಟದಿಂದ ಸುಮಾರು 1 ಕೋಟಿ ರೂಪಾಯಿಗಳ ಗಮನಾರ್ಹ ಲಾಭವನ್ನು ಪಡೆದಿದ್ದಾರೆ.


ಹೀಗಾಗಿಯೇ ತಮ್ಮ ತಮ್ಮ ಬೆಳೆಯನ್ನು ರಕ್ಷಿಸಲು ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಿದ್ದಾರೆ. ತಮ್ಮ ಹೊಲದಲ್ಲಿ ರಾಹುಲ್ ದೇಶಮುಖ್ ಅವರು ಸೌರಶಕ್ತಿಯನ್ನು ಬಳಸಿಕೊಳ್ಳುವುದು ಮತ್ತು ಮೊಬೈಲ್ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸುವುದರ ಮೂಲಕ ತಮ್ಮ ಬೆಳೆಗಳನ್ನು ರಕ್ಷಿಸಿಕೊಳ್ಳುತ್ತಿದ್ದಾರೆ."ನಾಲ್ಕು ಎಕರೆ ಬೆಳ್ಳುಳ್ಳಿ ಬೆಳೆದ ಹೊಲದ ಮೇಲೆ ಮೂರು ಕ್ಯಾಮೆರಾಗಳನ್ನು ಅಳವಡಿಸಲಾಗಿದೆ" ಎಂದು ರಾಹುಲ್ ದೇಶಮುಖ್ ಹೇಳಿದ್ದಾರೆ. ಇನ್ನು, ಇವರಂತೆ ಬದ್ನೂರಿನ ಪವನ್ ಚೌಧರಿ ಎಂಬ ರೈತ ಕೂಡ 4 ಎಕರೆ ಬೆಳ್ಳುಳ್ಳಿ ಬೆಳೆಗೆ 4 ಲಕ್ಷ ಬಂಡವಾಳ ಹಾಕಿ 6 ಲಕ್ಷ ಲಾಭ ಗಳಿಸಿದ್ದು, ಭದ್ರತೆಗಾಗಿ ಮೂರು ಸಿಸಿಟಿವಿ ಕ್ಯಾಮೆರಾ ಅಳವಡಿಸಿದ್ದಾರೆ. "ನನ್ನ ಹೊಲದ ಮೇಲೆ ಕಣ್ಣಿಡಲು ನಾನು ಮೂರು ಸಿಸಿಟಿವಿ ಕ್ಯಾಮೆರಾಗಳನ್ನು ಹಾಕಿದ್ದೇನೆ. ಅವುಗಳಲ್ಲಿ ಎರಡು ನನಗೆ ಸೇರಿದ್ದು, ಒಂದು ಬಾಡಿಗೆಗೆ ಇದೆ. ನನ್ನ ಹೊಲಗಳಲ್ಲಿ ಬೆಳ್ಳುಳ್ಳಿ ಕಳ್ಳತನವಾಗುತ್ತಿದ್ದರಿಂದ ನಾನು ಈ ಕೆಲಸ ಮಾಡಬೇಕಾಯಿತು" ಎಂದು ತಿಳಿಸಿದ್ದಾರೆ.


ಸಾಮಾನ್ಯವಾಗಿ ಪ್ರತಿ ವರ್ಷ ಕೆ.ಜಿ.ಗೆ 80 ರೂ.ಗೆ ಮಾರಾಟವಾಗುತ್ತಿದ್ದ ಬೆಳ್ಳುಳ್ಳಿ ಈ ಋತುವಿನಲ್ಲಿ ಕೆಜಿಗೆ 300 ರೂಪಾಯಿಗಿಂತ ಹೆಚ್ಚು ಬೆಲೆ ಏರಿಕೆ ಕಂಡಿದೆ. ಬೆಲೆ ಏರಿಕೆಗೆ ಪ್ರಾಥಮಿಕ ಕಾರಣವೆಂದರೆ ಉತ್ಪಾದನೆ ಕಡಿಮೆಯಾಗಿರುವುದು. ಅಕ್ಟೋಬರ್ ಮತ್ತು ನವೆಂಬರ್‌ನಲ್ಲಿ ಹಲವಾರು ರಾಜ್ಯಗಳಲ್ಲಿ ಅಕಾಲಿಕ ಮಳೆಯಾಗಿದ್ದು ಕೂಡ ಬೆಲೆ ಏರಿಕೆಗೆ ಕಾರಣವಾಗಿದೆ.



Leave a Comment: