ಕುತ್ತಾರು ಮದನಿ ನಗರ ದುರಂತ ಪ್ರಕರಣ: ಸಂಸದ ಕ್ಯಾ. ಬ್ರಿಜೇಶ್ ಚೌಟ ಭೇಟಿ; ಶೀಘ್ರ ಪರಿಹಾರ ಒದಗಿಸಲು ಸೂಚನೆ

ಸುದ್ದಿಗಳು News

Posted by vidyamaana on 2024-06-30 19:50:01 |

Share: | | | | |


ಕುತ್ತಾರು ಮದನಿ ನಗರ ದುರಂತ ಪ್ರಕರಣ: ಸಂಸದ ಕ್ಯಾ. ಬ್ರಿಜೇಶ್ ಚೌಟ ಭೇಟಿ; ಶೀಘ್ರ ಪರಿಹಾರ ಒದಗಿಸಲು ಸೂಚನೆ

ಮಂಗಳೂರು , ಜೂ. 30: ಕುತ್ತಾರು ಮದನಿ ನಗರದಲ್ಲಿ ಇತೀಚೆಗೆ ಪಕ್ಕದ ಮನೆಯ ಗೋಡೆ ಮನೆಯೊಂದರ ಮೇಲೆ ಕುಸಿದು ಒಂದೇ ಕುಟುಂಬದ ನಾಲ್ವರು ಮೃತಪಟ್ಟ ಪ್ರಕರಣದ ಘಟನಾ ಸ್ಥಳಕ್ಕೆ ರವಿವಾರ ಸಂಸದ ಕ್ಯಾ. ಬ್ರಿಜೇಶ್ ಚೌಟ ಭೇಟಿ ನೀಡಿ ಪರಿಶೀಲಿಸಿದರು.

ಸಂತ್ರಸ್ತರಿಗೆ ಶೀಘ್ರ ಪರಿಹಾರವನ್ನು ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ ಅವರು ಇದೇ ಸಂದರ್ಭ, ಉಳ್ಳಾಲ- ಸೋಮೇಶ್ವರ ಭಾಗದ ಕಡಲ್ಕೊರೆತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.

ಕಡಲ್ಕೊರೆತ ತೀವ್ರಗೊಂಡಿರುವ ಉಚ್ಚಿಲ, ಮೊಗವೀರಪಟ್ನ, ಬಟ್ಟಂಪಾಡಿ, ಸೀಗ್ರೌಂಡ್ ಪ್ರದೇಶಕ್ಕೆ ಭೇಟಿ ನೀಡಿದರು. 


ಸಮುದ್ರತೀರದ ಮನೆಗಳಲ್ಲಿ ವಾಸವಾಗಿರುವವರು ಎಚ್ಚರಿಕೆ ವಹಿಸುವಂತೆ ಸೂಚಿಸಿದ ಸಂಸದ ಕ್ಯಾ. ಬ್ರಿಜೇಶ್, ಅಪಾಯದಂಚಿನಲ್ಲಿ ಇರುವ ಮನೆಮಂದಿಗೆ ತಾತ್ಕಾಲಿಕ ವ್ಯವಸ್ಥೆ ಕಲ್ಪಿಸುವಂತೆ ಜಿಲ್ಲಾಧಿಕಾರಿಗೆ ಸೂಚಿಸಿದರು.

ಉಳ್ಳಾಲ ತಾಲೂಕು ತಹಶಿಲ್ದಾರರಾದ ಪ್ರದೀಪ್ ಕುರುಡೇಕರ್, ಬಂದರು ಇಲಾಖೆಯ ಇಂಜಿನಿಯರ್ ಪ್ರವೀಣ್, ಉಳ್ಳಾಲ ತಾಲೂಕು ಕಂದಾಯ ನಿರೀಕ್ಷಕರು ಪ್ರಮೋದ್, ಬಿಜೆಪಿ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ, ಸಂತೋಷ್ ಬೋಳಿಯಾರ್ ಮೊದಲಾದವರು ಉಪಸ್ಥಿತರಿದ್ದರು.

 Share: | | | | |


HSRP ನಂಬರ್ ಪ್ಲೇಟ್ ಅಳವಡಿಕೆ ದಿನಾಂಕದ ಬಿಗ್‌ ಅಪ್ಡೇಟ್ ಕೊಟ್ಟ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ

Posted by Vidyamaana on 2024-02-12 06:39:50 |

Share: | | | | |


HSRP ನಂಬರ್ ಪ್ಲೇಟ್ ಅಳವಡಿಕೆ ದಿನಾಂಕದ ಬಿಗ್‌ ಅಪ್ಡೇಟ್ ಕೊಟ್ಟ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು : ಹೈಸೆಕ್ಯೂರಿಟಿ ನಂಬರ್ ಪ್ಲೇಟ್ (High Security number plate-HSRP) ಕುರಿತು ಕರ್ನಾಟಕ ರಾಜ್ಯ ಸಾರಿಗೆ ಇಲಾಖೆ ಈಗಾಗಲೇ ಹಲವು ಗಡುವುಗಳನ್ನು ನೀಡಿ ವಿಸ್ತರಿಸಿದೆ. ಫೆಬ್ರವರಿ 17 ಕೊನಯ ದಿನವಾಗಿದೆ. ಆದರೂ, ಜನರು ಕೊನೇ ಅವಧಿಯಲ್ಲಿ ಹೆಚ್ಚೆಚ್ಚು ರಿಜಿಸ್ಟರ್ ಮಾಡಲು ಮುಂದಾಗುತ್ತಿದ್ದು, ಅಪ್ಲೋಡ್ ಸಮಸ್ಯೆಯಾಗಲಿದೆ.ಈಗ ಪುನಃ ದಿನಾಂಕ ವಿಸ್ತರಣೆಗೆ ಒತ್ತಡ ಕೇಳಿ ಬಂದಿದ್ದು, ಈ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.


ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ನಡೆದ ಸಾರಿಗೆ ಇಲಾಖೆ ಸಭೆಯ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅನೇಕ ಇಲಾಖೆಗಳನ್ನ ಸಿಎಂ ಸಭೆ ಕರೆದಿದ್ದರು. ಅದೇ ರೀತಿ ಸಾರಿಗೆ ಇಲಾಖೆಯವರು ಕೂಡ ಭಾಗಿಯಾಗಿದ್ದರು. ಆಟೋ ಟ್ಯಾಕ್ಸಿ, ಲಾರಿ ಅಸೋಷಿಯಷನ್ ಅವರು ಎಲ್ಲಾ ಬಂದಿದ್ದರು. ಅವರ ಬೇಡಿಕೆಗಳನ್ನ ಕೂಡ ಇಟ್ಟಿದ್ದಾರೆ. ಜೊತೆಗೆ, ನಮ್ಮ ಸರ್ಕಾರ ಬಂದಮೇಲೆ ಸಾಕಷ್ಟು ಬೇಡಿಕೆ ಈಡೇರಿಸಿದ್ದೇವೆ ಎಂದರು. ಇಂದು ಹೊಸ ಬೇಡಿಕೆಗಳನ್ನೂ ಸಹ ಇಟ್ಟಿದ್ದಾರೆ. ಮುಂದಿನದ್ದು ಬಜೆಟ್ ದಿನ ನೋಡೋಣ ಎಂದು ಹೇಳಿದ್ದೇವೆ ಎಂದು ಹೇಳಿದರು.


ಇನ್ನು ಹೈಸೆಕ್ಯೂರಿಟಿ ನಂಬರ್ ಪ್ಲೇಟ್ ಮಾಡಿಸಲು ಫೆ.17ನೇ ತಾರೀಕು ಲಾಸ್ಟ ಡೇಟ್ ಇದೆ. ಹಿಂದೆ ಒಂದು ಸರಿ ಮುಂದಕ್ಕೆ ಹಾಕಿದ್ದೆವು. ಈಗ ಮತ್ತೆ ಮುಂದಕ್ಕೆ ಹಾಕಿ ಅಂತಾ ಹೇಳ್ತ ಇದಾರೆ. ಇನ್ನು ಒಂದುವಾರ ಸಮಯ ಇದೆ. ಎಲ್ಲಾ ಕೊನೇನಲ್ಲಿ ಅರ್ಜಿ ಹಾಕೋಕೆ ಬರ್ತಾರೆ. ಒತ್ತಡ ಜಾಸ್ತಿ ಆಗಿ ಅಪ್ಲೋಡ್ ಆಗೋಲ್ಲ ಅದೊಂದು ಸಮಸ್ಯೆ ಇದೆ. ಇನ್ನು ಟೈಮ್ ಇದೆ ನೋಡೋಣ ಎಂದುಸಾರಿಗೆ ಸಚೊವ ರಾಮಲಿಂಗಾರೆಡ್ಡಿ ಅವರು ಬಿಗ್ ಅಪ್ಡೇಟ್ ನೀಡಿದರು.

ನಕಲಿ ಲೋಕಾಯುಕ್ತ ಅಧಿಕಾರಿ ಅಸಲಿ ಸಿಸಿಬಿ ಬಲೆಗೆ

Posted by Vidyamaana on 2024-01-04 11:44:54 |

Share: | | | | |


ನಕಲಿ ಲೋಕಾಯುಕ್ತ ಅಧಿಕಾರಿ ಅಸಲಿ ಸಿಸಿಬಿ ಬಲೆಗೆ

ಬೆಂಗಳೂರು,: ತಾನು ಲೋಕಾಯುಕ್ತ ಅಧಿಕಾರಿಯೆಂದು ಪೋಸು ಕೊಟ್ಟು 30ಕ್ಕೂ ಹೆಚ್ಚು ಸರ್ಕಾರಿ ಅಧಿಕಾರಿಗಳಿಗೆ ಮೋಸ ಮಾಡಿರುವ ಘಟನೆ ಬೆಳಕಿಗೆ ಬಂದಿದ್ದು ಬೆಂಗಳೂರು ಸಿಸಿಬಿ ಪೊಲೀಸರು ನಕಲಿ ಲೋಕಾಯುಕ್ತ ಅಧಿಕಾರಿಯನ್ನು ಬಂಧಿಸಿದ್ದಾರೆ. 


ಆರೋಪಿ ಶ್ರೀನಾಥ್ ರೆಡ್ಡಿ (34) ಆಂಧ್ರಪ್ರದೇಶ ಮೂಲದ ವ್ಯಕ್ತಿಯಾಗಿದ್ದು, 2007ರಿಂದಲೇ ಇದೇ ಮಾದರಿಯ ಕ್ರಿಮಿನಲ್ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದ. ಹಿಂದೆ ಬೀಗ ಹಾಕಿರುತ್ತಿದ್ದ ಮನೆಗಳಲ್ಲಿ ಕಳ್ಳತನ ಮಾಡುತ್ತಿದ್ದ ಶ್ರೀನಾಥ್ ಬಳಿಕ ಪೊಲೀಸ್ ಅಧಿಕಾರಿಯೆಂದು ಹೇಳಿ ಸರ್ಕಾರಿ ಅಧಿಕಾರಿಗಳನ್ನು ಯಾಮಾರಿಸಲು ತೊಡಗಿದ್ದ ಎಂದು ಪೊಲೀಸ್ ತನಿಖೆಯಲ್ಲಿ ತಿಳಿದುಬಂದಿದೆ. 


ತೆಲುಗು ಚಲನಚಿತ್ರಗಳಿಂದ ಸ್ಫೂರ್ತಿ ಪಡೆದು ಸರ್ಕಾರಿ ಅಧಿಕಾರಿಗಳನ್ನು ಗುರಿಯಾಗಿಸಿ ಕುಕೃತ್ಯ ಮುಂದುವರಿಸಿದ್ದ. ಕೇವಲ 10ನೇ ತರಗತಿ ಓದಿರುವ ಆರೋಪಿ 36 ಸರ್ಕಾರಿ ಅಧಿಕಾರಿಗಳಿಗೆ ವಂಚನೆ ಮಾಡಿರುವುದು ತನಿಖೆಯಲ್ಲಿ ಪತ್ತೆಯಾಗಿದೆ. ಆದರೆ ಒಬ್ಬರು ಮಾತ್ರ ಪೊಲೀಸರಿಗೆ ದೂರು ನೀಡಿದ್ದರು. ಅದನ್ನು ಆಧರಿಸಿ ತ‌ನಿಖೆ ನಡೆಸಿದಾಗ ಖದೀಮ ಸಿಕ್ಕಿಬಿದ್ದಿದ್ದಾನೆ. 


ಆರೋಪಿ ಶ್ರೀನಾಥ್ ರೆಡ್ಡಿ ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿಯೂ ಇದೇ ರೀತಿ ಸರ್ಕಾರಿ ಅಧಿಕಾರಿಗಳಿಗೆ ವಂಚಿಸಿದ್ದಾನೆ. ಈತನ ವಿರುದ್ಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪ್ರಕರಣದ ಹೆಚ್ಚಿನ ತನಿಖೆಗೆ ಸಿಸಿಬಿಗೆ ವರ್ಗಾಯಿಸಲಾಗಿತ್ತು. 


ಲೋಕಾಯುಕ್ತ ಇನ್ಸ್ ಪೆಕ್ಟರ್ ಚಂದ್ರಶೇಖರ್ ಎಂದು ತನ್ನನ್ನು ಪರಿಚಯಿಸಿಕೊಂಡು ರೆಡ್ಡಿ ಸರ್ಕಾರಿ ಅಧಿಕಾರಿಗಳಿಗೆ ದೂರವಾಣಿ ಕರೆ ಮಾಡುತ್ತಿದ್ದ ಮತ್ತು ಹಣ ವಸೂಲಿ ಮಾಡುತ್ತಿದ್ದ. ಪ್ರಕರಣ ದಾಖಲಾಗಿದೆ ಎಂದು ಹೇಳಿ ಮುಚ್ಚಿ ಹಾಕಲು ಹಣ ನೀಡುವಂತೆ ಬ್ಲಾಕ್ಮೇಲ್ ಮಾಡುತ್ತಿದ್ದ. ಹಣ ಸಿಕ್ಕರೆ ಲೋಕಾಯುಕ್ತದ ತಾಂತ್ರಿಕ ವಿಭಾಗ ಯಾವುದೇ ವಿಚಾರಣೆ ನಡೆಸದೆ ಬಿ ರಿಪೋರ್ಟ್ ಸಲ್ಲಿಸಲಿದೆ ಎಂದು ಭರವಸೆ ನೀಡುತ್ತಿದ್ದ. ಇದೇ ರೀತಿ ಕಿರುಕುಳಕ್ಕೆ ಒಳಗಾದ ಸರ್ಕಾರಿ ಅಧಿಕಾರಿ ರಾಮದಾಸ್ ಎಂಬವರು ದೂರು ದಾಖಲಿಸಿದ್ದರು.


ಕೆಲವು ಕಡೆ ಲೋಕಾಯುಕ್ತದಲ್ಲಿ ಎಡಿಜಿಪಿ ಶ್ರೇಣಿಯ ಅಧಿಕಾರಿ ಎಂದು ತನ್ನನ್ನು ಹೇಳಿಕೊಂಡಿದ್ದ. ಅಲ್ಲದೆ, ತನ್ನ ಹೆಸರನ್ನು ಕೇಶವ ರಾವ್ ಎಂದಿ ಮಾಡಿಕೊಂಡಿದ್ದ. ಈತನ ವಿರುದ್ಧ ಎಲೆಕ್ಟ್ರಾನಿಕ್ ಸಿಟಿ, ಬೇಗೂರು, ಹೆಬ್ಬಗೋಡಿ, ಅತ್ತಿಬೆಲೆ, ಜಿಗಣಿ ಸೇರಿದಂತೆ ಹಲವು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣಗಳಿವೆ.

ಅಪ್ರಾಪ್ತೆಯೊಂದಿಗೆ ದೈಹಿಕ ಸಂಪರ್ಕ : ರಹಿಮಾನ್ ಬಂಧನ

Posted by Vidyamaana on 2023-04-30 15:48:17 |

Share: | | | | |


ಅಪ್ರಾಪ್ತೆಯೊಂದಿಗೆ ದೈಹಿಕ ಸಂಪರ್ಕ :  ರಹಿಮಾನ್ ಬಂಧನ

ಪುತ್ತೂರು: ಅಪ್ರಾಪ್ತೆಯೊಂದಿಗೆ ದೈಹಿಕ ಸಂಪರ್ಕ ನಡೆಸಿದ ಆರೋಪಿ, ಮುಕ್ವೆ ನಿವಾಸಿ ಅಬ್ದುಲ್ ರಹಿಮಾನ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಬಾಲಕಿ ಹಾಗೂ ಅಬ್ದುಲ್ ರಹಿಮಾನ್ ಎಂಬಾತ ಕಳೆದ 5 ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಇದರ ನಡುವೆ 2021ರಲ್ಲಿ ಆರೋಪಿಯು ಬಾಲಕಿಯನ್ನು ಬಲವಂತಪಡಿಸಿ, ಮದುವೆಯಾಗುವುದಾಗಿ ನಂಬಿಸಿ, ಬಲವಂತವಾಗಿ ದೈಹಿಕ ಸಂಪರ್ಕ ಬೆಳೆಸಿರುತ್ತಾನೆ. ಇದೀಗ ಬಾಲಕಿ ಗರ್ಭವತಿಯಾಗಿದ್ದು, ಮನೆಯವರು ಸಂಶಯಗೊಂಡ ವೈದ್ಯಕೀಯ ತಪಾಸಣೆಗೆ ಒಳಪಡಿಸಿದ್ದು, ನೈಜ ವಿಷಯ ಬೆಳಕಿಗೆ ಬಂದಿದೆ.

ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.

ಕೋಟ್ಯಾಧೀಶೆ ಆಗಲು ಹೊರಟ ಚೈತ್ರ ಕುಂದಾಪುರ; ಬಡತನದಿಂದ ಇಲ್ಲಿಯವರೆಗಿನ ಸಂಪೂರ್ಣ ಮಾಹಿತಿ ಇಲ್ಲಿದೆ

Posted by Vidyamaana on 2023-09-14 12:10:51 |

Share: | | | | |


ಕೋಟ್ಯಾಧೀಶೆ ಆಗಲು ಹೊರಟ ಚೈತ್ರ ಕುಂದಾಪುರ; ಬಡತನದಿಂದ ಇಲ್ಲಿಯವರೆಗಿನ ಸಂಪೂರ್ಣ ಮಾಹಿತಿ ಇಲ್ಲಿದೆ

ಉಡುಪಿ: ಬೈಂದೂರು ವಿಧಾನಸಭಾ ಕ್ಷೇತ್ರದ ಟಿಕೆಟ್ ಕೊಡಿಸುವ ಭರವಸೆ ನೀಡಿ ಕೋಟಿ ಕೋಟಿ ದೋಚಿದ ಆರೋಪದ ಮೇಲೆ ಚೈತ್ರ ಕುಂದಾಪುರ ಬಂಧನವಾಗಿದೆ. ಚೈತ್ರ ಕುಂದಾಪುರ ಬಂಧನದ ಬಳಿಕ ಆಕೆಯ ಕ್ರಿಮಿನಲ್ ಪ್ಲಾನ್ ಜೊತೆ ಆಕೆಯ ಪೂರ್ವಪರ ಬೆಳಕಿಗೆ ಬರುತ್ತಿದೆ. ಸದ್ಯ ಚೈತ್ರ ಕುಂದಾಪುರ (Chaitra Kundapura), ಶ್ರೀಕಾಂತ್, ರಮೇಶ್, ಗಗನ್, ಪ್ರಜ್ವಲ್ ಹಾಗೂ ಧನರಾಜ್‌ನನ್ನು ಸೆಪ್ಟೆಂಬರ್ 23ರವರೆಗೆ ಸಿಸಿಬಿ ಕಸ್ಟಡಿಗೆ ನೀಡಿ ಬೆಂಗಳೂರಿನ 1ನೇ ಎಸಿಎಂಎಂ ಕೋರ್ಟ್​ ಆದೇಶ ಹೊರಡಿಸಿದೆ. ಅತ್ಯಂತ ಕಡು ಬಡತನದ ಕುಟುಂಬದಲ್ಲಿ ಹುಟ್ಟಿದ ಈಕೆ ಏಕಾಏಕಿ ಕೋಟ್ಯಾಧೀಶೆ ಆಗುವ ಕನಸು ಕಂಡ ಕಥೆ ಮಾತ್ರ ರೋಚಕ. ಮುಂದೆ ಓದಿ.ಚೈತ್ರ ಮೂಲತಃ ಉಡುಪಿ ಜಿಲ್ಲೆಯ ಕುಂದಾಪುರದವಳು. ಬಡ ಕುಟುಂಬದಲ್ಲಿ ಹುಟ್ಟಿದ ಇವಳ ತಂದೆ ತಾಯಿ ಹೈನುಗಾರಿಕೆ ಮಾಡಿಕೊಂಡಿದ್ದಾರೆ. ಚೈತ್ರ ಕುಂದಾಪುರ ತನ್ನ ಪದವಿ ಪೂರ್ವದವರೆಗಿನ ಶಿಕ್ಷಣವನ್ನು ಕುಂದಾಪುರದಲ್ಲಿಯೇ ಮುಗಿಸಿ, ಬಳಿಕ ಪದವಿ ಮತ್ತು ಸ್ನಾತಕೊತ್ತರ ಪದವಿಯನ್ನು ಪತ್ರಿಕೋದ್ಯಮ ವಿಭಾಗದಲ್ಲಿ ಮಂಗಳೂರಿನ ಕೊಣಾಜೆಯ ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಮುಗಿಸುತ್ತಾಳೆ.


ಎಬಿವಿಪಿ ಪ್ರತಿಭಟನೆಯಲ್ಲಿ ಮುಂಚೂಣಿ


ಆರಂಭದಲ್ಲಿಯೇ ಎಬಿವಿಪಿ ಹುಡಗರ ಜೊತೆ ಗುರುತಿಸಿಕೊಂಡಿದ್ದ ಇವಳು ಪದವಿ ಶಿಕ್ಷಣ ಪಡೆಯುವ ಸಮಯದಲ್ಲಿ ಪೂರ್ಣ ಪ್ರಮಾಣದಲ್ಲಿ ಎಬಿವಿಪಿಯಲ್ಲಿತೊಡಗಿಕೊಳ್ಳುತ್ತಾಳೆ. ಎಬಿವಿಪಿ ಪ್ರತಿಭಟನೆಯಲ್ಲಿ ಮುಂಚೂಣಿಯಲ್ಲಿ ಗುರುತಿಸಿಕೊಳ್ಳುತ್ತಾಳೆ. ಎಬಿವಿಪಿಯಲ್ಲಿ ವಿವಿಧ ಜವಾಬ್ದಾರಿಯನ್ನು ಕೂಡ ನಿರ್ವಹಿಸಿದ್ದಾಳೆ.


ಸ್ಥಳೀಯ ಸುದ್ದಿ ವಾಹಿನಿಗಳಲ್ಲಿ ಕೆಲಸ


ಕಾಲೇಜು ಮುಗಿದ ಬಳಿಕ ಸ್ಥಳೀಯ ಸುದ್ದಿ ವಾಹಿನಿಗಳಲ್ಲಿ ಕೆಲಸ ಮಾಡಿಕೊಂಡಿದ್ದ ಚೈತ್ರ ಕುಂದಾಪುರ, ಎಬಿವಿಪಿಯಿಂದ ಹಿಂದೆ ಸರಿಯುತ್ತಾಳೆ. ನಾಲ್ಕೈದು ವರ್ಷಗಳ ಕಾಲ ಸ್ಥಳೀಯ ಖಾಸಗಿ ವಾಹಿನಿಗಳಲ್ಲಿ ಕೆಲಸ ಮಾಡಿದ ಬಳಿಕ, ಮತ್ತೆ ಹಿಂದೂ ಸಂಘಟನೆಗಳಲ್ಲಿ ಗುರುತಿಸಿಕೊಳ್ಳುತ್ತಾಳೆ.ನಂತರ ಈ ಚೈತ್ರ ಹಿಂದೂ ಸಂಘಟನೆಯಲ್ಲಿ ಪೂರ್ಣ ಪ್ರಮಾಣದಲ್ಲಿ ತೊಡಗಿಕೊಳ್ಳುತ್ತಾಳೆ. ರಾಷ್ಟ್ರೀಯತೆ, ಹಿಂದೂ ಧರ್ಮ ಹೆಸರಿನಲ್ಲಿ ರಾಜ್ಯದ ಬೇರೆ ಬೇರೆ ಜಿಲ್ಲೆಯಲ್ಲಿ ಭಾಷಣಕಾರ್ತಿಯಾಗಿ ತೊಡಗಿಕೊಂಡಿದ್ದಳು. ಬಳಿಕ ಮಾಡಿದ್ದೆ‌ ಕೋಟಿ ಕೋಟಿ ಲೂಟಿಯ ಪ್ಲ್ಯಾನ್​.


ತನ್ನ ಉಗ್ರ ಭಾಷಣದಿಂದ ಸಾಕಷ್ಟು ಜನರ ವಿರೋಧಕ್ಕೆ ಗುರಿಯಾಗಿದ್ದ ಚೈತ್ರ ಕುಂದಾಪುರ, ಕೋಟಿ ಕೋಟಿ ದೋಚುವ ಮೂಲಕ ಮತ್ತೆ ಸುದ್ದಿಯಲ್ಲಿದ್ದಾಳೆ. ಪ್ರತಿ ಭಾರಿ ಇಂತಹ ವಿವಾದಗಳು ಪ್ರಕರಣಗಳು ನಡೆದಾಗ ತಪ್ಪಿಸಿಕೊಳ್ಳಲು ಏನೇನೋ ಕಾರಣ ಹೇಳುತ್ತಿದ್ದ ಚೈತ್ರ ಕುಂದಾಪುರ, ಈ ಬಾರಿ ಸಾಕ್ಷಿ ಸಮೇತ ಪೊಲೀಸರಿಗೆ ಲಾಕ್ ಆಗಿದ್ದಾಳೆ.

ಹಲವು ದಾಖಲೆ ವೈಶಿಷ್ಟ್ಯಗಳೊಂದಿಗೆ ಕೋಟಿ-ಚೆನ್ನಯ ಜೋಡುಕರೆ ಕಂಬಳ ಸಂಪನ್ನ

Posted by Vidyamaana on 2024-01-30 19:04:19 |

Share: | | | | |


ಹಲವು ದಾಖಲೆ  ವೈಶಿಷ್ಟ್ಯಗಳೊಂದಿಗೆ ಕೋಟಿ-ಚೆನ್ನಯ ಜೋಡುಕರೆ ಕಂಬಳ ಸಂಪನ್ನ

ಪುತ್ತೂರು: ಜ.೨೭ ರಂದು ಬೆಳಿಗ್ಗೆ ಆರಂಭಗೊಂಡಿದ್ದ ೩೧ನೇ ವರ್ಷದ ಪುತ್ತೂರಿನ ಐತಿಹಾಸಿಕ ಕೋಟಿ ಚೆನ್ನಯ ಜೋಡು ಕರೆ ಕಂಬಳ ಜ.೨೯ರಂದು ಬೆಳಗಿನ ಜಾವ ಸಂಪನ್ನಗೊಂಡಿದೆ. ಎರಡು ಹಗಲು ಎರಡು ರಾತ್ರಿ ಕಂಬಳ ನಡೆಯುವ ಮೂಲಕ ಇತಿಹಾಸ ನಿರ್ಮಿಸಿದೆ. ಒಟ್ಟು ೬ ವಿಭಾಗಗಳ ೧೮೭ ಜೊತೆ ಕೋಣಗಳು  ಭಾಗವಹಿಸಿದ್ದು ಜ.೨೯ರಂದು ಬೆಳಿಗ್ಗೆ ೫ ಗಂಟೆಯ ಸುಮಾರಿಗೆ ಅಂತಿಮ ಸ್ಪರ್ಧೆಯು ನಡೆಯಿತು. ಬಳಿಕ ಬಹುಮಾನ ವಿತರಣಾ ಕಾರ್ಯಕ್ರಮ ನಡೆಯಿತು. ಪುತ್ತೂರು ಕೋಟಿ ಚೆನ್ನಯ ಕಂಬಳ ಸಮಿತಿಯ ಅಧ್ಯಕ್ಷ ಎನ್ ಚಂದ್ರಹಾಸ ಶೆಟ್ಟಿ ಅವರು ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿ, ವರ್ಷಂಪ್ರತಿಯಂತೆ ಈ ಬಾರಿಯೂ ೩೧ನೇ ವರ್ಷದ ಕೋಟಿ ಚೆನ್ನಯ ಜೋಡು ಕರೆ ಕಂಬಳವು ಬಹಳ ಅದ್ದೂರಿಯಾಗಿ ವಿಜ್ರಂಭಣೆಯಿಂದ ನಡೆದು ಹೊಸ ಇತಿಹಾಸ ನಿರ್ಮಿಸಿದೆ. ಕಂಬಳವು ಯಶಸ್ವಿಯಾಗಿ ನೆರವೇರಲು ಹಲವಾರು ದಿನಗಳಿಂದ ಹಗಲು ರಾತ್ರಿ ದುಡಿದ ಕಂಬಳ ಸಮಿತಿಯ ವಿವಿಧ ಪದಾಧಿಕಾರಿಗಳಿಗೆ, ಸದಸ್ಯರಿಗೆ ಎಲ್ಲಾ ಸ್ವಯಂಸೇವಕರಿಗೆ ಕಂಬಳ ಅಭಿಮಾನಿಗಳಿಗೆ ಹಾಗೂ ಇದಕ್ಕಾಗಿ ತನು, ಮನ ,ಧನಗಳಿಂದ ಸಹಕರಿಸಿದ ಪ್ರತಿಯೊಬ್ಬರಿಗೂ ಕೃತಜ್ಞತೆ ಸಲ್ಲಿಸಿ ಮುಂದೆಯೂ ಕಂಬಳವು ಇದೇ ರೀತಿಯಾಗಿ ಯಶಸ್ವಿಯಾಗಿ ಮುಂದುವರಿಯಲು ತಮ್ಮೆಲ್ಲರ ಸಹಕಾರ ಅಗತ್ಯ ಎಂದರು.

ಇದಕ್ಕೂ ಮೊದಲು ನಡೆದ ಸಮಾರೋಪ ಸಮಾರಂಭದಲ್ಲಿ ಕರ್ನಾಟಕ ರಾಜ್ಯ ಧಾರ್ಮಿಕ ಪರಿಷತ್ ಸದಸ್ಯರಾದ ಮಲ್ಲಿಕಾ ಪಕ್ಕಳ ,ಚನಿಲ ತಿಮ್ಮಪ್ಪ ಶೆಟ್ಟಿ ,ರಾಧಾಕೃಷ್ಣ ಆಳ್ವ, ಲಕ್ಷ್ಮೀನಾರಾಯಣ ಶೆಟ್ಟಿ, ಆರಿಯಡ್ಕ ಜೈರಾಜ್ ಭಂಡಾರಿ, ಸಿದ್ದನಾಥ ಎಸ್.ಕೆ. ಮೂಕಾಂಬಿಕ ಗ್ಯಾಸ್ ಏಜೆನ್ಸಿನ ಮಾಲಕ ಸಂಜೀವ ಆಳ್ವ, ಪ್ರಶಾಂತ್ ಶೆಣೈ, ನಗರಸಭಾ ಸದಸ್ಯರಾದ ರಮೇಶ್ ರೈ ನೆಲ್ಲಿಕಟ್ಟೆ , ಮುಹಮ್ಮದ್ ರಿಯಾಜ್, ಯೂಸುಫ್ ಡ್ರೀಮ್, ಶೈಲಾ ಪೈ, ಬಾಲಚಂದ್ರ, ಕೋಡಿಂಬಾಡಿ  ಗ್ರಾ.ಪಂ. ಅಧ್ಯಕ್ಷೆ ಮಲ್ಲಿಕಾ ಪೂಜಾರಿ ಸೂರ್ಯನಾಥ ಆಳ್ವ, ದಯಾನಂದ ರೈ ಕೋರ್ಮಂಡ, ಸಂತೋಷ್ ಕುಮಾರ್ ರೈ ಕೈಕಾರ, ಬೆಳ್ಳಿಪ್ಪಾಡಿ ಕೈಪ ಕೇಶವ ಭಂಡಾರಿ, ಬಿ ಕೆ  ಶಿವಕುಮಾರ್, ನಗರಸಭಾ ನಿಕಟಪೂರ್ವಾಧ್ಯಕ್ಷ ಜೀವಂಧರ್ ಜೈನ್, ಅರಿಯಡ್ಕ ಚಿಕ್ಕಪ್ಪ ನಾಕ್, ಡಾ. ದೀಪಕ್ ರೈ, ಕೇಶವ ಯಂ, ನರಸಿಂಹ ಕಾಮತ್, ಕಿಶೋರ್ ಕುಮಾರ್  ಬೊಟ್ಯಾಡಿ, ಬವಿನ್ ಸವಜಾನಿ, ಶರತ್ ಕುಮಾರ್ ರೈ, ಬೆಟ್ಟ ಈಶ್ವರ ಭಟ್, ಭಾಸ್ಕರ ಗೌಡ ಕೋಡಿಂಬಾಳ, ಅರಿಯಡ್ಕ ಉದಯ ಶಂಕರ ಶೆಟ್ಟಿ,ಸಂತೋಷ್ ಶೆಟ್ಟಿ ಪ್ರಸಾದ್ ಪಾಣಾಜೆ, ದಯಾನಂದ ರೈ ಮನವಳಿಕೆ, ಬೂಡಿಯಾರ್ ಪುರುಷೋತ್ತಮ ರೈ ,ಜಗದೀಶ್ ಶೆಟ್ಟಿ ನೆಲ್ಲಿಕಟ್ಟೆ ಜಿಲ್ಲಾ ಯಂಗ್ ಬ್ರಿಗೇಡ್ ಸೇವಾದಳದ ಅಧ್ಯಕ್ಷ  ರಂಜಿತ್ ಬಂಗೇರ, ಪ್ರವೀಣ್ ಶೆಟ್ಟ ತಿಂಗಳಾಡಿ, ರೂಪ ರೇಖಾ ಆಳ್ವ, ಎಂ ಕುಶಲ ಪೆರಾಜೆ ,ಪ್ರವೀಣ್ ಕುಮಾರ್,  ನಿಹಾಲ್ ಪಿ. ಶೆಟ್ಟಿ, ಶಿವಪ್ರಸಾದ್ ಶೆಟ್ಟಿ ,ಜಗನ್ನಾಥ ರೈ ಜಿ, ಉಮಾನಾಥ್ ಶೆಟ್ಟಿ ಪೆರ್ನೆ,ತಿಂಗಳಾಡಿ ಬಾಲಯ ಲೋಹಿತ್ ಬಂಗೇರ,ದಯಾನಂದ ರೈ, ರಾಮನಾಥ್ ವಿಟ್ಲ ,ರೂಪೇಶ್ ರೈ ಆಲಿಮಾರ ,ದಿನಕರ ರೈ, ಸುಧೀರ್ ಶೆಟ್ಟಿ, ಗಂಗಾಧರ ಶೆಟ್ಟಿ ಕೈಕಾರ, ರಾಮಣ್ಣ ಪೂಜಾರಿ, ಅಬ್ದುಲ್ ರಜಾಕ್ ಬಿ ಎಚ್, ಹರಿಪ್ರಸಾದ್ ರೈ, ಬಾಲಕೃಷ್ಣ ಆಳ್ವ ಕೊಡಾಜೆ ,ಸತೀಶ್ ರೈ ಕಟಾವು ಶಿವರಾಮ ಭಟ್ ಬಿಕರ್ನ ಕಟ್ಟೆ,  ಆಕಾಶ್ ಐತಾಳ್, ಕೃಷ್ಣ ಪ್ರಸಾದ್ ಭಂಡಾರಿ, ರವಿ ಪ್ರೊವಿಜನ್ ಸ್ಟೋರ್ , ನವೀನ್ ಶೆಟ್ಟಿ, ಶಾಪಿ ಸುಳ್ಯ, ಮೋಹನ್ ನಾಯಕ್, ಚಂದ್ರಹಾಸ ಶೆಟ್ಟಿ, ಶೀನಪ್ಪ ಪೂಜಾರಿ ಎಂ .ಜಿ. ಅಬೂಬಕ್ಕರ್ ಉಪ್ಪಿನಂಗಡಿ, ಉಮೇಶ ನಾಯಕ್, ಗಿರಿಧರ ಹೆಗ್ಡೆ, ಹರ್ಷಕುಮಾರ್ ರೈ ಮಾಡಾವು, ಕೃಷ್ಣಪ್ಪ ಸಂಪ್ಯ, ಕೃಷ್ಣಲ್ ಸ್ಟೀಲ್ ಇಂಡಸ್ಟ್ರೀಸ್‌ನ ಮಾಲಕ ಕಿರಣ್ ಡಿಸೋಜಾ, ನಿರೀಕ್ಷಿತ್  ರೈ, ಮಂಜುನಾಥ ಗೌಡ, ಯೂಸುಫ್ ಗೌಸಿಯ, ಹಾಜಿ ಯೂಸುಫ್ ಕೈಕಾರ ನ್ಯಾಯವಾದಿ ರಾಕೇಶ್  ಮಸ್ಕರೇನಸ್, ಎಂ ಪಿ ಉಮ್ಮರ್ ,ಶರೂನ್  ಸಿಕ್ವೇರಾ, ಲೋಕೇಶ್ ಪಡ್ಡಾಯೂರು, ಹರೀಶ್  ವಾಲ್ತಾಜೆ ,ಆಯ್ಕೆ ಸಪ್ಲಾಯಿಸ್ ಮಾಲಕ ಇಮ್ರಾನ್ ಖಾನ್ ಮೊದಲಾದವರು ಅತಿಥಿಗಳಾಗಿ ಆಗಮಿಸಿದ್ದರು.

ಕಂಬಳದ ಸಮಾರೋಪ ಸಮಾರಂಭದ ಆರಂಭದಲ್ಲಿ ತೀರ್ಪುಗಾರರಿಗೆ ಆರೋಗ್ಯ ಇಲಾಖೆಯವರಿಗೆ, ಶಾಮಿಯಾನ ಬ್ಯಾಂಡ್ ಸಹಿತ ವಿವಿಧ ರೀತಿಯಲ್ಲಿ ಸಹಕರಿಸಿದವರನ್ನು ಗೌರವಿಸಲಾಯಿತು. ವಿಜಯಕುಮಾರ್ ಜೈನ್ ಕಂಚಿನ ಮನೆ ,ಅಪ್ಪು ಯಾನೆ ವಲೇರಿಯನ್ ಡೇಸಾ, ಅಲ್ಲಿಪಾದೆ , ರಾಜೀವ ಶೆಟ್ಟಿ ಹೆಡ್ತೂರು , ಸುದರ್ಶನ್ ನಾಯಕ್ ಕಂಪ, ರಾಜೇಶ್ ನಾಯಕ್ ನೆಲ್ಲಿಕಟ್ಟೆ, ನವೀನ್ ನಾಯಕ್ ಬೆದ್ರಾಳ, ಸದಾಶಿವ ಸಾಮಾನಿ ಸಂಪಿಗೆದಡಿ, ಸಚಿನ್ ಸರೋಳಿ, ಗೋಪಾಲ ಶೆಟ್ಟಿ, ಸುಮಿತ್ ಶೆಟ್ಟಿ, ಸುಜಿತ್ ಶೆಟ್ಟಿ, ರತ್ನಾಕರ ನಾಯಕ್, ಗಂಗಾಧರ, ಆಲಿಕುಂಞ, ಪ್ರವೀಣ್ ಸಚಿನ್ ಸರೋಳಿ ಉಮಾಶಂಕರ್ ನಾಯಕ್ ಪಾಂಗಳಾಯಿ ಮೊದಲಾದವರನ್ನು ಸನ್ಮಾನಿಸಲಾಯಿತು

 ಸಮಿತಿಯ ವಿವಿಧ ಪದಾಧಿಕಾರಿಗಳಾದ ಪ್ರಧಾನ ಕಾರ್ಯದರ್ಶಿ ದಿನೇಶ್ ಕುಲಾಲ್ ಪಿ.ವಿ .ಖಜಾಂಜಿ ಪಂಜಿಗುಡ್ಡೆ ಈಶ್ವರ ಭಟ್, ಸಂಚಾಲಕ ವಸಂತಕುಮಾರ್  ರೈ ದುಗ್ಗಲ, ಉಪಾಧ್ಯಕ್ಷರಾದ ಶಿವರಾಮ ಆಳ್ವ ಬಳ್ಳಮಜಲು, ಜಿನ್ನಪ್ಪ ಪೂಜಾರಿ ಮುರ, ರೋಶನ್ ರೈ ಬನ್ನೂರು, ಕಾರ್ಯದರ್ಶಿ ಕೃಷ್ಣಪ್ರಸಾದ್ ಆಳ್ವ, ಗೋಪಾಲ ಕಡಂಬು ಮೂಡಬಿದ್ರೆ, ಹಸೈನಾರ್ ಬನಾರಿ, ಖಾದರ್ ಪೊಳ್ಯ ,ಪ್ರಕಾಶ ನೆಕ್ಕಿಲಾಡಿ , ಶಶಿಕಿರಣ್ ರೈ ನೂಜಿ ಬೈಲು ಪೂರ್ಣೇಶ್ ಭಂಡಾರಿ, ಶಶಿ ನೆಲ್ಲಿಕಟ್ಟೆ, ಸುರೇಶ್ ಚಿಕ್ಕ ಪುತ್ತೂರು, ಮೊದಲಾದವರು ವಿವಿಧ ಕಾರ್ಯಕ್ರಮ ನಿರ್ವಹಿಸಿದರು. ಉಪಾಧ್ಯಕ್ಷ ನಿರಂಜನ ರೈ ಮಠಂತಬೆಟ್ಟು ಕಾರ್ಯಕ್ರಮ ನಿರ್ವಹಿಸಿದರು. ಸಂಚಾಲಕ ವಸಂತಕುಮಾರ್ ರೈ ದುಗ್ಗಳ ಸಹಕರಿಸಿದರು.


 ಕನಹಲಗೆ: ೦೬ ಜೊತೆ  ಅಡ್ಡಹಲಗೆ: ೦೪ ಜೊತೆ

 ಹಗ್ಗ ಹಿರಿಯ: ೧೫ ಜೊತೆ  ನೇಗಿಲು ಹಿರಿಯ: ೪೦ ಜೊತೆ

 ಹಗ್ಗ ಕಿರಿಯ: ೨೫ ಜೊತೆ  ನೇಗಿಲು ಕಿರಿಯ: ೯೭ ಜೊತೆ

ಒಟ್ಟು ಕೋಣಗಳ ಸಂಖ್ಯೆ: ೧೮೭ ಜೊತೆ

ಕನಹಲಗೆ:( ೬.೫ ಕೋಲು ನಿಶಾನೆಗೆ ನೀರು ಹಾಯಿಸಿದ್ದಾರೆ )

ಬೋಳಾರ ತ್ರಿಶಾಲ್ ಕೆ ಪೂಜಾರಿ

ಹಲಗೆ ಮೆಟ್ಟಿದವರು: ಬೈಂದೂರು ಮಹೇಶ್ ಪೂಜಾರಿ

ಅಡ್ಡ ಹಲಗೆ: ಪ್ರಥಮ: ನಾರಾವಿ ಯುವರಾಜ್ ಜೈನ್

ಹಲಗೆ ಮೆಟ್ಟಿದವರು: ಭಟ್ಕಳ ಹರೀಶ್

ದ್ವಿತೀಯ: ಬೋಳಾರ ತ್ರಿಶಾಲ್ ಕೆ ಪೂಜಾರಿ

ಹಲಗೆ ಮೆಟ್ಟಿದವರು: ಸಾವ್ಯ ಗಂಗಯ್ಯ ಪೂಜಾರಿ

ಹಗ್ಗ ಹಿರಿಯ: ಪ್ರಥಮ: ನಂದಳಿಕೆ ಶ್ರೀಕಾಂತ್ ಭಟ್ ಎ

ಓಡಿಸಿದವರು: ಬೈಂದೂರು ಮಂಜುನಾಥ ಗೌಡ

ದ್ವಿತೀಯ: ನೂಜಿಪ್ಪಾಡಿ ಡಾ.ಪ್ರವೀಣ್ ಹೊಳ್ಳ ಬಿ

ಓಡಿಸಿದವರು: ಬಾರಾಡಿ ಸತೀಶ್

ಹಗ್ಗ ಕಿರಿಯ:

ಪ್ರಥಮ: ಸುರತ್ಕಲ್ ಪಾಂಚಜನ್ಯ ಯೋಗಿಶ್ ಪೂಜಾರಿ ಬಿ

ಓಡಿಸಿದವರು: ಭಟ್ಕಳ ಶಂಕರ್

ದ್ವಿತೀಯ: ನೂಜಿಪ್ಪಾಡಿ ಚಂದ್ರಶೇಖರ ಹೊಳ್ಳ ಬಿ

ಓಡಿಸಿದವರು: ಬೈಂದೂರು ಮಂಜುನಾಥ ಗೌಡ

ನೇಗಿಲು ಹಿರಿಯ:

ಪ್ರಥಮ: ಇರುವೈಲು ಪಾನಿಲ ಬಾಡ ಪೂಜಾರಿ ಎ

ಓಡಿಸಿದವರು: ಬೈಂದೂರು ಮಂಜುನಾಥ ಗೌಡ

ದ್ವಿತೀಯ: ನಕ್ರೆ ಮಹೋಧರ ನಿವಾಸ ಇಶಾನಿ ತುಕ್ರ ಭಂಡಾರಿ

ಓಡಿಸಿದವರು: ಮಾಳ ಆಧೀಶ್ ಪೂಜಾರಿ

ನೇಗಿಲು ಕಿರಿಯ: ( ಸಮಾನ ಬಹುಮಾನ )

ಮುನಿಯಾಲ್ ಉದಯ ಕುಮಾರ್ ಶೆಟ್ಟಿ

ಓಡಿಸಿದವರು: ಮಾಸ್ತಿಕಟ್ಟೆ ಸ್ವರೂಪ್

ಉಡುಪಿ ಬ್ರಹ್ಮಗಿರಿ ಪ್ರಥಮ ಗಣನಾಥ ಹೆಗ್ಡೆ ಬಿ

ಓಡಿಸಿದವರು: ಉಜಿರೆ ಹೊಸಮನೆ ಸ್ಪಂದನ್ ಶೆಟ್ಟಿ

ಪುತ್ತೂರು ನಗರ ಠಾಣಾ ಪೊಲೀಸರ ಕಾರ್ಯಾಚರಣೆ

Posted by Vidyamaana on 2023-06-01 15:49:27 |

Share: | | | | |


ಪುತ್ತೂರು ನಗರ ಠಾಣಾ ಪೊಲೀಸರ ಕಾರ್ಯಾಚರಣೆ

ಪುತ್ತೂರು: ಮುಖ್ಯ ರಸ್ತೆಯ ಪ್ರಕಾಶ್ ಫೂಟ್‌ವೇರ್ ಅಂಗಡಿಗೆ ಕಳ್ಳರು ನುಗ್ಗಿ ಅಂಗಡಿಯಲ್ಲಿಟ್ಟಿದ್ದ ಲಕ್ಷಾಂತರ ರೂಪಾಯಿ ನಗದು ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪುತ್ತೂರು ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ.

ದಾವಣಗೆರೆ ದೇವರಾಜ ಅರಸ್ ಬಡವಾಣೆಯ ಸಮೀರ್ (ಕಪ್ಪ), ಹಾಸನ ಶಂಕರಿಪುರಂ ನ ಚಂದ್ರಶೇಖರ್ (ಚಂದು) ಬಂಧಿತರು.ಪುತ್ತೂರು ಬಸ್‌ ನಿಲ್ದಾಣದ ಬಳಿಯ ಮಾಯಿದೆ ದೇವುಸ್‌ ಚರ್ಚ್‌ ಎದುರುಗಡೆ ‘ಪ್ರಕಾಶ್ ಫೂಟ್‌ವೇರ್’ ಎಂಬ ಹೆಸರಿನ ಚಪ್ಪಲಿ ಅಂಗಡಿಯಿಂದ 2022 ಸೆ.16 ರಂದು ಸುಮಾರು 15 ಲಕ್ಷ ರೂ. ಯನ್ನು ಕಳವುಗೈದು ಆರೋಪಿಗಳು ಪರಾರಿಯಾಗಿದ್ದರು.

ಈ ಬಗ್ಗೆ ಪ್ರಕಾಶ್ ಫೂಟ್‌ವೇರ್ ಮಳಿಗೆಯ ಮಾಲಕ ಸಮೀರ್ ನೀಡಿದ ದೂರಿನ ಮೇರೆಗೆ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ಬೆನ್ನು ಹತ್ತಿದ ಪುತ್ತೂರು ನಗರ ಠಾಣಾ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.



Leave a Comment: