ಹತ್ತೂರ ಒಡೆಯನ ನೆಲಕ್ಕೆ ಕಾಲಿಟ್ಟ MRPL ತೆಂಕಿಲದಲ್ಲಿ ಮಹೇಶ್ವರ ಪೆಟ್ರೋಲಿಯಂ ಶುಭಾರಂಭ

ಸುದ್ದಿಗಳು News

Posted by vidyamaana on 2024-07-23 21:30:52 |

Share: | | | | |


ಹತ್ತೂರ ಒಡೆಯನ ನೆಲಕ್ಕೆ ಕಾಲಿಟ್ಟ MRPL ತೆಂಕಿಲದಲ್ಲಿ ಮಹೇಶ್ವರ ಪೆಟ್ರೋಲಿಯಂ ಶುಭಾರಂಭ

ಪುತ್ತೂರು: ಪೆಟ್ರೋಲಿಯಂ ಉತ್ಪನ್ನಗಳ ತಯಾರಿಕಾ ಸಂಸ್ಥೆ ಒ.ಎನ್.ಜಿ.ಸಿ.ಯ ಅಂಗ ಸಂಸ್ಥೆಯಾಗಿರುವ ಎಂ.ಆರ್.ಪಿ.ಎಲ್.ನ ಹೈಕ್ಯೂ ರಿಟೇಲ್ ಔಟ್ ಲೆಟ್ ಮಹೇಶ್ವರ ಪೆಟ್ರೋಲಿಯಂ ಜು.21ರಂದು ಮಾಣಿ-ಮೈಸೂರು ರಾಷ್ಟಿಯ ಹೆದ್ದಾರಿಯ ಪುತ್ತೂರಿನ ಬೈಪಾಸ್ ರಸ್ತೆಯ ತೆಂಕಿಲದಲ್ಲಿ ವಿವಿಧ ಗಣ್ಯರ ಸಮ್ಮುಖದಲ್ಲಿ ಶುಭಾರಂಭ ಗೊಂಡಿತ್ತು . ಸಭಾ ಕಾರ್ಯಕ್ರಮಕ್ಕೂ ಮೊದಲು ಅತಿಥಿ ಗಣ್ಯರ ಉಪಸ್ಥಿತಿಯಲ್ಲಿ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಹಾಗೂ ಮಾಜಿ ಶಾಸಕ ಸಂಜೀವ ಮಠಂದೂರು ಅವರು ಸಂಸ್ಥೆಯ ಕಚೇರಿಯನ್ನು ರಿಬ್ಬನ್ ಕತ್ತರಿಸುವ ಮೂಲಕ ಉದ್ಘಾಟಿಸಿದರು. ಸವಣೂರು ವಿದ್ಯಾಸಂಸ್ಥೆಗಳ ಸಂಚಾಲಕರಾಗಿರುವ ಸವಣೂರು ಸೀತಾರಾಮ ರೈ, ಸ್ಥಳೀಯ ನಗರ ಸಭಾ ಸದಸ್ಯೆ ಯಶೋಧಾ ಪೂಜಾರಿ ಮತ್ತು ಬಂಟರ ಸಂಘದ ಅಧ್ಯಕ್ಷ ಕಾವು ಹೇಮನಾಥ ಶೆಟ್ಟಿ ಪೆಟ್ರೋಲ್ ಹಾಕುವ ಯಂತ್ರಗಳ ರಿಬ್ಬನ್ ಕತ್ತರಿಸುವ ಮೂಲಕ ಸಾಂಕೇತಿಕವಾಗಿ ತೈಲ ತುಂಬುವ ಕಾರ್ಯಕ್ಕೆ ಚಾಲನೆಯನ್ನು ನೀಡಿದರು. ಪುತ್ತೂರು ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷರಾಗಿರುವ ವಾಮನ್ ಪೈ ಅವರು ಉಚಿತ ನೈಟ್ರೋಜನ್ ಪೂರೈಕ್ ವ್ಯವಸ್ಥೆಯನ್ನು ಉದ್ಘಾಟಿಸಿದರು.

ಬಳಿಕ, ಎವಿಜಿ ಇಂಗ್ಲಿಷ್ ಮೀಡಿಯಂ ಶಾಲೆಯ ಪ್ರಾಂಶುಪಾಲೆ ಅವರ ಪ್ರಾರ್ಥನೆಯೊಂದಿಗೆ ಸಭಾ ಕಾರ್ಯಕ್ರಮ ಪ್ರಾರಂಭ ಗೊಂಡಿತ್ತು . ಮಹೇಶ್ವರ ಪೆಟ್ರೋಲಿಯಂ ಸಂಸ್ಥೆಯ ಮಾಲಕರಾಗಿರುವ ಶಿವಪ್ರಸಾದ್ ಶೆಟ್ಟಿ ಕಿನಾರ ಅವರು ಅತಿಥಿ ಗಣ್ಯರನ್ನು ಕಾರ್ಯಕ್ರಮಕ್ಕೆ ಆತ್ಮೀಯವಾಗಿ ಸ್ವಾಗತಿಸಿದರು. ಶಾಸಕ ಅಶೋಕ್ ಕುಮಾರ್ ರೈ, ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಮತ್ತು ಮಾಜಿ ಶಾಸಕ ಸಂಜೀವ ಮಠಂದೂರು ಸಹಿತ ವೇದಿಕೆಯಲ್ಲಿದ್ದ ಅತಿಥಿ ಗಣ್ಯರು ದೀಪ ಪ್ರಜ್ವಲಿಸುವ ಮೂಲಕ ಮಹೇಶ್ವರ ಪೆಟ್ರೋಲಿಯಂ ಸಂಸ್ಥೆಯ ಕಾರ್ಯಾಚರಣೆಗೆ ಅಧಿಕೃತ ಚಾಲನೆಯನ್ನು ನೀಡಿದರು.

ತಲಪಾಡಿ ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರದ ಆನುವಂಶಿಕ ಅರ್ಚಕರಾಗಿರುವ ಗಣೇಶ್ ಭಟ್ ಅವರು ಮಾತನಾಡಿ, ತಲಪಾಡಿಯ ದುರ್ಗಾಪರಮೇಶ್ವರಿ ದೇವರು ಈ ಸಂಸ್ಥೆಯ ಮಾಲಕರಾಗಿರುವ ಶಿವಪ್ರಸಾದ್ ಶೆಟ್ಟಿ ಅವರಿಗೆ ಕುಲದೇವರಾಗಿರುವ ಕಾರಣ ತಲಪಾಡಿ ಕ್ಷೇತ್ರöಕ್ಕೂ ಪುತ್ತೂರಿಗೂ ವಿಶೇಷ ನಂಟಿದೆ ಎಂದು ಹೇಳಿದರು. ಶಿವಪ್ರಸಾದ್ ಶೆಟ್ಟಿ ಅವರು ದೈವಭಕ್ತರಾಗಿದ್ದು ಅವರ ಸತ್ಕರ್ಮ ಮತ್ತು ದೇವರ ಮೇಲೆ ಅವರಿಟ್ಟ ಭಕ್ತಿ ಹಾಗೂ ಗುರು-ಹಿರಿಯರ ಮೇಲಿನ ಗೌರವ ಅವರನ್ನು ಇಂದು ಈ ಮಟ್ಟಕ್ಕೆ ತಂದು ನಿಲ್ಲಿಸಿದೆ. ದೈವ-ದೇವರ ಅನುಗ್ರಹದೊಂದಿಗೆ ಈ ನೂತನ ಸಂಸ್ಥೆಯು ಉತ್ತಮ ಸೇವೆಯ ಮೂಲಕ ಗ್ರಾಹಕರ ಮೆಚ್ಚುಗೆಗೆ ಪಾತ್ರವಾಗಿ ಇನ್ನಷ್ಟು ಹೆಸರುವಾಸಿಯಾಗಲಿ ಎಂದು ಅವರು ಶುಭಾಶೀರ್ವಾದ ನೀಡಿದರು.

Additional Image

ದ.ಕ. ಲೋಕಸಭಾ ಕ್ಷೇತ್ರದ ಮಾಜಿ ಸಂಸದರಾಗಿರುವ ನಳಿನ್ ಕುಮಾರ್ ಕಟೀಲ್ ಅವರು ಮಾತನಾಡಿ, ಭಾರತೀಯ ಸಂಸ್ಕೃತಿಯಲ್ಲಿ ಭಗವಂತನನ್ನು ತೋರಿಸುವವ ಗುರು, ಜ್ಞಾನವನ್ನು ಕೊಡುವವ ಗುರು ಎಂಬ ಮಾತನ್ನು ನಮ್ಮ ಹಿರಿಯತು ಹೇಳಿದ್ದಾರೆ. ಅಂತಹ ಗುರುವಿನ ಪ್ರೇರಣೆ ಇರತಕ್ಕಂತಹ ವೇದವ್ಯಾಸ ಮಹರ್ಷಿಗಳ ಜನ್ಮದಿನದ ಪುಣ್ಯಸಂದರ್ಭವಾಗಿರುವ ಈ ಗುರುಪೂರ್ಣಮಿಯ ದಿನದಂದು ಈ ಪುತ್ತೂರಿನ ಪುಣ್ಯ ನೆಲದಲ್ಲಿ ಮಹೇಶ್ವರ ಪೆಟ್ರೋಲಿಯಂ ಸಂಸ್ಥೆ ಉದ್ಘಾಟನೆಗೊಂಡಿರುವುದು ಈ ಸಂಸ್ಥೆಗೆ ಗುರುಹಿರಿಯರ ಆಶೀರ್ವಾದ ಇದೆ ಎಂಬುದಕ್ಕೆ ಸ್ಪಷ್ಟ ನಿದರ್ಶನ ಎಂದು ಹೇಳಿದರು. ಈ ಸಂಸ್ಥೆಯು ಎಂ.ಆರ್.ಪಿ.ಎಲ್.ನ ಒಂದಹ ಅತ್ಯುನ್ನತ ಸಂಸ್ಥೆಯಾಗಿ ಬೆಳೆಯುತ್ತದೆ, ಮಾತ್ರವಲ್ಲದೇ ಶಿವಪ್ರಸಾದ್ ಶೆಟ್ಟಿ ಅವರು ಓರ್ವ ಯಸಸ್ವಿ ಪೆಟ್ರೋಲಿಯಂ ಉದ್ಯಮಿಯಾಗಿ ಬೆಳೆಯುತ್ತಾರೆ ಎಂಬ ವಿಶ್ವಾಸವನ್ನು ಕಟೀಲ್ ಅವರು ಇದೇ ಸಂದರ್ಭದಲ್ಲಿ ವ್ಯಕ್ತಪಡಿಸಿದರು. ಶಿವಪ್ರಸಾದ್ ಅವರು ಭೂವ್ಯವಹಾರದಲ್ಲಿ ಓರ್ವ ಯಶಸ್ವಿ ಉದ್ಯಮಿಯಾಗಿ ಪುತ್ತೂರಿನ ಮಟ್ಟಿಗೆ ಉತ್ತಮ ಸಾಧನೆಯನ್ನು ಮಾಡಿದ್ದಾರೆ. ಶ್ರೀಮಂತಿಕೆ ಬಂದಾಗ ಕೆಲವರಿಗೆ ಎಲ್ಲವೂ ಮರೀತದೆ, ಆದರೆ ಶಿವಪ್ರಸಾದ್ ಅವರು ತಮ್ಮಲ್ಲಿರುವ ಹೃದಯ ಶ್ರೀಮಂತಿಕೆಯಿAದ ತಮ್ಮ ವ್ಯವಹಾರದ ಜೊತೆಗೆ ಸಾಮಾಜಿಕ ಕಾರ್ಯದಲ್ಲೂ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಇನ್ನು ಶಿವಪ್ರಸಾದ್ ಅವರು ಓರ್ವ ಧಾರ್ಮಿಕ ಮನೋಭಾವದ ವ್ಯಕ್ತಿ ಎಂಬುದಕ್ಕೆ ಉದಾಹರಣೆಯಾಗಿ, ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯದ ಸಂದರ್ಭದಲ್ಲಿ ಒಂದು ಗುಡಿ ನಿರ್ಮಾಣದ ಸಂಪೂರ್ಣ ಜವಾಬ್ದಾರಿ ತನ್ನದು ಎಂದು ಮಾತುಕೊಟ್ಟು ಅದರಂತೆ ನಡೆದುಕೊಂಡ ವಿಚಾರವನ್ನು ಕಟೀಲ್ ಅವರು ಸಭೆಯ ಮುಂದೆ ಬಿಚ್ಚಿಟ್ಟರು. ತೈಲೋದ್ಯಮ ಕ್ಷೇತ್ರದಲ್ಲಿ ಕಳೆದ ಹತ್ತು ವರ್ಷಗಳಲ್ಲಿ ದೇಶಾದ್ಯಂತ ಕ್ರಾಂತಿಕಾರಿ ಬದಲಾವಣೆಗಳಾಗಿದ್ದು ಎಂ.ಆರ್.ಪಿ.ಎಲ್, ಭಾರತ್ ಪೆಟ್ರೋಲಿಯಂ ಸಹಿತ ಎಲ್ಲಾ ಸಂಸ್ಥೆಗಳೂ ಸ್ಪರ್ಧಾತ್ಮಕ ವ್ಯವಹಾರದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದು ಇದು ಈ ಕ್ಷೇತ್ರದಲ್ಲಿ ಅಪರಿಮಿತ ಅವಕಾಶಕ್ಕೆ ಕಾರಣವಾಗಿದೆ ಎಂದು ಅವರು ಹೇಳಿದರು. ಪುತ್ತೂರು ಪರಿಸರದಲ್ಲಿ ಎಂ.ಆರ್.ಪಿ.ಎಲ್.ನ ಪ್ರಥಮ ಔಟ್ ಲೆಟ್ ಪ್ರಾರಂಭಿಸುವ ಅವಕಾಶ ಶಿವಪ್ರಸಾದ್ ಅವರಿಗೆ ಸಿಕ್ಕಿರುವುದಕ್ಕೆ ಅವರನ್ನು ಈ ಸಂದರ್ಭದಲ್ಲಿ ಅಭಿನಂದಿಸುವುದಾಗಿ ಮತ್ತು ಈ ಉದ್ಯಮದಲ್ಲಿ ಶಿವಪ್ರಸಾದ್ ಅವರಿಗೆ ಯಶಸ್ಸು ಲಭಿಸಲಿ ಎಂಬ ಸದಾಶಯದ ನುಡಿಗಳನ್ನು ನಳಿನ್ ಕುಮಾರ್ ಕಟೀಲ್ ನೀಡಿದರು. 

Additional Image


Additional Image

ವ್ಯಕ್ತಿಯೊಬ್ಬರು ಉದ್ಯಮದಲ್ಲಿ ಬೆಳೆದರೂ ಕೂಡ ಹೇಗೆ ತನ್ನ ಪಾಡಿಗೆ ತನ್ನ ವ್ಯವಹಾರವನ್ನು ನಡೆಸಿಕೊಂಡು ಸಾಮಾಜಿಕವಾಗಿಯೂ, ಧಾರ್ಮಿಕವಾಗಿಯೂ ತನ್ನನ್ನು ತೊಡಗಿಸಕೊಳ್ಳುತ್ತಾರೆ ಎಂಬುದಕ್ಕೆ ಶಿವಪ್ರಸಾದ್ ಅವರು ಉತ್ತಮ ಉದಾಹರಣೆಯಾಗಿದ್ದಾರೆ ಎಂದು ಅಶೋಕ್ ಕುಮಾರ್ ರೈ ಹೇಳಿದರು. ಕಳೆದ ಸಲ ಮಹಾಲಿಂಗೇಶ್ವರ ದೇವರಿಗೆ ಒಂದಷ್ಟು ಜನರ ಸಹಕಾರದೊಂದಿಗೆ ಬಂಗಾರದ ಮಾಲೆಯನ್ನು ಒಪ್ಪಿಸುವಲ್ಲಿ ಮುಂದಾಳತ್ವವನ್ನು ಶಿವಪ್ರಸಾದ್ ಅವರು ವಹಿಸಿಕೊಂಡಿರುವುದು ಅವರಲ್ಲಿರುವ ಧಾರ್ಮಿಲ ಪ್ರಜ್ಞೆಗೆ ಸಾಕ್ಷಿ ಎಂಬ ವಿಚಾರವನ್ನು ಶಾಸಕರು ಈ ಸಂದರ್ಬದಲ್ಲಿ ವಿಶೇಷವಾಗಿ ಶ್ಲಾಘಿಸಿದರು.

 Share: | | | | |


9/11 ಸಮಸ್ಯೆ ಶೀಘ್ರವೇ ಇತ್ಯರ್ಥ: ಶಾಸಕ ಅಶೋಕ್ ರೈಗೆ ಭರವಸೆ ನೀಡಿದ ಸಚಿವ ಖರ್ಗೆ*

Posted by Vidyamaana on 2024-07-12 07:48:56 |

Share: | | | | |


9/11 ಸಮಸ್ಯೆ ಶೀಘ್ರವೇ ಇತ್ಯರ್ಥ: ಶಾಸಕ ಅಶೋಕ್ ರೈಗೆ ಭರವಸೆ ನೀಡಿದ ಸಚಿವ ಖರ್ಗೆ*

ಪುತ್ತೂರು: ೯/೧೧ ಸಮಸ್ಯೆಯಿಂದ ಜನರಿಗೆ ತುಂಬಾ ಕಷ್ಟವಾಗಿದ್ದು ಅದರಲ್ಲೂ ಗ್ರಾಮೀಣ ಭಾಗದ ಬಡವರಿಗೆ ತೀವ್ರ ಸಂಕಷ್ಟ ಎದುರಾಗಿದ್ದು ಈ ಸಮಸ್ಯೆಯನ್ನು ಶೀಘ್ರವೇ ಬಗೆಹರಿಸಬೇಕು ಎಂದು ಪುತ್ತೂರು ಶಾಸಕರಾದ ಅಶೋಕ್ ರೈಯವರು ಗ್ರಾಮೀಣಾಭಿವೃದ್ದಿ ಹಾಗೂ ಪಂಚಾಯತ್ ರಾಜ್ ಸಚಿವರಾದ ಪ್ರಿಯಾಂಕ ಖರ್ಗೆಅವರಿಗೆ ಮನವಿ ಮಾಡಿದ್ದು ಸಮಸ್ಯೆಯನ್ನು ಶೀಘ್ರವೇ ಇತ್ಯರ್ಥಪಡಿಸುವ ಭರವಸೆ ನೀಡಿದ್ದಾರೆ.

ಗುರುವಾರ ಬೆಂಗಳೂರಿನಲ್ಲಿ ಸಚಿವರ ಕಚೇರಿಗೆ ಭೇಟಿ ನೀಡಿದ ಶಾಸಕ ಅಶೋಕ್ ರೈಯವರು ೯/೧೧ ಸಮಸ್ಯೆ ಗಂಭೀರವಾಗಿದೆ. ಮನೆ ಕಟ್ಟುವಲ್ಲಿ ಅಗತ್ಯವಾಗಿ ಬೇಕಾದ ಈ ಪತ್ರಕ್ಕಾಗಿ ಜನ ಪರದಾಟ ನಡೆಸುವಂತಾಗಿದೆ. ಈ ಹಿಂದೆ ಗ್ರಾಪಂ ಕಚೇರಿಯಲ್ಲೇ ೯/೧೧ ಪತ್ರವನ್ನು ನೀಡಲಾಗುತ್ತಿತ್ತು. ಅಧಿಕಾರ ಅವಧಿಯ ಕೊನೇ ಗಳಿಗೆಯಲ್ಲಿ ಕಳೆದ ಅವಧಿಯ ಬಿಜೆಪಿ ಸರಕಾರ ಈ ವ್ಯವಸ್ಥೆಯನ್ನು ಗ್ರಾಪಂ ನಿಂದ ಮೂಡಾಕ್ಕೆ ವರ್ಗಾವಣೆ ಮಾಡಿತ್ತು. ಆ ಬಳಿಕ ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಸ್ತಿತ್ವಕ್ಕೆ ಬಂದರೂ ಅದೇ ಸಮಸ್ಯೆ ಮುಂದುವರೆದಿದೆ. ಜನರಿಗೆ ತೊಂದರೆ ನೀಡುವ ಯಾವುದೇ ಕಾನೂನು ಇಲ್ಲಿ ಬೇಡ. ೯/೧೧ ಗ್ರಾಮದ ಕಟ್ಟಕಡೇಯ ವ್ಯಕ್ತಿಗೂ ಅಗತ್ಯವಾಗಿ ಬೇಕಾಗಿದೆ. ಮನೆ ಕಟ್ಟುವ ವೇಳೆ ಈ ದಾಖಲೆ ಪತ್ರಕ್ಕಾಗಿ ಮಂಗಳೂರಿನ ಮುಡಾ ಕಚೇರಿಗೆ ತೆರಳಬೇಕಾಗಿದೆ. ಕಚೇರಿ ಅಲೆದಾಟ ಬಗ್ಗೆ ಪರಿಜ್ಞಾನವಿಲ್ಲದ ಬಡವರು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ಸರಕಾರ ಕೂಡಲೇ ಎಚ್ಚೆತ್ತು ೯/೧೧ ಸಮಸ್ಯೆಯನ್ನು ಇತ್ಯರ್ಥ ಮಾಡಬೇಕು ಎಂದು ಶಾಸಕರು ಸಚಿವರಲ್ಲಿ ಮನವಿ ಮಾಡಿದ್ದಾರೆ.

ಸಿಟಿ ಸ್ಕ್ಯಾನ್‌ ಕೊಠಡಿಯಲ್ಲಿ 13ರ ಬಾಲಕಿಗೆ ಕಿರುಕುಳ; ಆಪರೇಟರ್‌ ಅಮನ್ ರಾಜ್ ಅರೆಸ್ಟ್

Posted by Vidyamaana on 2024-09-01 16:01:46 |

Share: | | | | |


ಸಿಟಿ ಸ್ಕ್ಯಾನ್‌ ಕೊಠಡಿಯಲ್ಲಿ 13ರ ಬಾಲಕಿಗೆ ಕಿರುಕುಳ; ಆಪರೇಟರ್‌ ಅಮನ್ ರಾಜ್ ಅರೆಸ್ಟ್

ಕೋಲ್ಕತ್ತಾ: ತರಬೇತಿ ನಿರತ ವೈದ್ಯೆಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ದೇಶದೆಲ್ಲೆಡೆ ಸುದ್ದಿಯಾಗಿ ಮರೆಯಾಗುವ ಮುನ್ನವೇ ಪಶ್ಚಿಮ ಬಂಗಾಳದ ಆಸ್ಪತ್ರೆಯಲ್ಲೇ ಮತ್ತೊಂದು ಹೇಯ ಘಟನೆ ನಡೆದಿರುವುದು ವರದಿಯಾಗಿದೆ.

ಆಸ್ಪತ್ರೆಯ ಉದ್ಯೋಗಿಯೊಬ್ಬರು ಸಿಟಿ ಸ್ಕ್ಯಾನ್ ಕೊಠಡಿಯಲ್ಲಿ 13 ವರ್ಷದ ಬಾಲಕಿಗೆ ಕಿರುಕುಳ ನೀಡಿದ ಪ್ರಕರಣ ಹೌರಾ ಆಸ್ಪತ್ರೆಯಲ್ಲಿ ನಡೆದಿರುವುದು ವರದಿಯಾಗಿದೆ.

ಕಾಂಗ್ರೆಸ್ ನಿರ್ನಾಮ ಮಾಡಬೇಕೆಂದ ಶೆಟ್ಟರ್ - ಡಿಕೆಶಿ ಮಾತಲ್ಲೇ ಕೊಟ್ರೂ ಟಕ್ಕರ್

Posted by Vidyamaana on 2024-01-28 17:37:05 |

Share: | | | | |


ಕಾಂಗ್ರೆಸ್ ನಿರ್ನಾಮ ಮಾಡಬೇಕೆಂದ ಶೆಟ್ಟರ್ - ಡಿಕೆಶಿ ಮಾತಲ್ಲೇ ಕೊಟ್ರೂ ಟಕ್ಕರ್

ಬೆಂಗಳೂರು :- ಕಾಂಗ್ರೆಸ್ ಪಕ್ಷವನ್ನು ನಿರ್ನಾಮ ಮಾಡಬೇಕು ಎಂಬ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿಕೆಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.ಈ ಸಂಬಂಧ ಮಾತನಾಡಿದ ಅವರು,ಶೆಟ್ಟರ್ ಅವರು ಇಲ್ಲಿದ್ದಾಲೂ ಹಾಗೆಯೇ ಮಾತಾಡುತ್ತಿದ್ದರು, ಬಿಜೆಪಿಯನ್ನು ನಿರ್ನಾಮಗೊಳಿಸಬೇಕು ಅನ್ನುತ್ತಿದ್ದರು ಎಂದು ನಗುತ್ತಾ ಹೇಳಿದರು.ಆರ್ ಅಶೋಕ್ ವಿರೋಧ ಪಕ್ಷದ ನಾಯಕನಾದಾಗ, ಬಿವೈ ವಿಜಯೇಂದ್ರ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷನಾದಾಗ ಅವರ ಕಟು ಟೀಕೆಗಳನ್ನು ಮಾಡಿದ್ದರು. ವಿಪಕ್ಷ ನಾಯಕನ ಆಯ್ಕೆ ನಡೆಯುವ ಮೊದಲು ಅವರು ಹೊಸ ಸರ್ಕಾರ ರಚನೆನಯಾಗಿ 7 ತಿಂಗಳಾದರೂ ಬಿಜೆಪಿ ನಾಯಕರಿಗೆ ಒಬ್ಬ ವಿರೋಧ ಪಕ್ಷನನ್ನು ಆಯ್ಕೆ ಮಾಡಿವುದು ಸಾಧ್ಯವಾಗಿಲ್ಲ ಅಂತ ಮೂದಲಿಸುತ್ತಿದ್ದರು. ಬಿಜೆಪಿಗೆ ವಾಪಸ್ಸು ಹೋದ ಕೇವಲ ಎರಡ ದಿನಗಳ ಬಳಿಕ ಅಂಥ ಟೀಕೆಗಳನ್ನು ಕಾಂಗ್ರೆಸ್ ಮತ್ತು ಅದರ ನಾಯಕರ ಮಾಡುತ್ತಿದ್ದಾರೆ.ಇವತ್ತು ನಡೆದ ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಅವರು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಎಲ್ಲ 28 ಸ್ಥಾನಗಳನ್ನು ಗೆದ್ದು ಕಾಂಗ್ರೆಸ್ ಪಕ್ಷವನ್ನು ನಿರ್ನಾಮ ಮಾಡಬೇಕು ಅಂದರಂತೆ. ಅದನ್ನು ಕೆಪಿಸಿಸಿ ಆಧ್ಯಕ್ಷ ಡಿಕೆ ಶಿವಕುಮಾರ್ ಅವರಿಗೆ ತಿಳಿಸಿದಾಗ, ಶೆಟ್ಟರ್ ಅವರು ಇಲ್ಲಿದ್ದಾಲೂ ಹಾಗೆಯೇ ಮಾತಾಡುತ್ತಿದ್ದರು, ಬಿಜೆಪಿಯನ್ನು ನಿರ್ನಾಮಗೊಳಿಸಬೇಕು ಅನ್ನುತ್ತಿದ್ದರು ಎಂದು ನಗುತ್ತಾ ಹೇಳಿದರು.

BIG NEWS : ಒಪ್ಪಿಗೆ ಇಲ್ಲದೇ ಪತ್ನಿಯೊಂದಿಗೆ ಪತಿ ನಡೆಸುವ ಲೈಂಗಿಕ ಕ್ರಿಯೆ ಅತ್ಯಾಚಾರವಲ್ಲ : ಹೈಕೋರ್ಟ್‌ ಮಹತ್ವದ ತೀರ್ಪು

Posted by Vidyamaana on 2024-06-09 09:24:27 |

Share: | | | | |


BIG NEWS : ಒಪ್ಪಿಗೆ ಇಲ್ಲದೇ  ಪತ್ನಿಯೊಂದಿಗೆ ಪತಿ ನಡೆಸುವ ಲೈಂಗಿಕ ಕ್ರಿಯೆ ಅತ್ಯಾಚಾರವಲ್ಲ : ಹೈಕೋರ್ಟ್‌ ಮಹತ್ವದ ತೀರ್ಪು

Endooru: ಹೆಂಡತಿಯೊಂದಿಗೆ ಒಪ್ಪಿಗೆ ಇಲ್ಲದೇ ಪತಿ ನಡೆಸುವ ಯಾವುದೇ ಲೈಂಗಿಕ ಸಂಭೋಗ ಅಥವಾ ಕೃತ್ಯವು ಮದುವೆಯ ಜೀವನೋಪಾಯದ ಸಮಯದಲ್ಲಿ ಅತ್ಯಾಚಾರವಲ್ಲ ಮತ್ತು ಆದ್ದರಿಂದ ಒಪ್ಪಿಗೆ ಮುಖ್ಯವಲ್ಲ ಎಂದು ಮಧ್ಯಪ್ರದೇಶ ಹೈಕೋರ್ಟ್ ಪುನರುಚ್ಚರಿಸಿದೆ.

ತನ್ನೊಂದಿಗೆ ಅಸ್ವಾಭಾವಿಕ ಲೈಂಗಿಕ ಕ್ರಿಯೆ ನಡೆಸಿದ್ದಾನೆ ಎಂದು ಆರೋಪಿಸಿ ಪತ್ನಿ ದಾಖಲಿಸಿದ್ದ ಪತಿಯ ವಿರುದ್ಧ ಎಫ್‌ಐಆರ್ ರದ್ದುಗೊಳಿಸಿದ ನ್ಯಾಯಮೂರ್ತಿ ಪ್ರೇಮ್ ನಾರಾಯಣ್ ಸಿಂಗ್ ಅವರ ಏಕಸದಸ್ಯ ಪೀಠ ಈ ಅಭಿಪ್ರಾಯ ವ್ಯಕ್ತಪಡಿಸಿದೆ.

ಪತಿ ಅಸ್ವಾಭಾವಿಕ ಲೈಂಗಿಕ ಕ್ರಿಯೆ ನಡೆಸಿದ್ದರಿಂದ ಸೋಂಕು ತಗುಲಿದೆ ಎಂದು ಪತ್ನಿ ಹೇಳಿದ್ದಾರೆ. ತನ್ನ ಪತಿ ತನ್ನೊಂದಿಗೆ ಅಸ್ವಾಭಾವಿಕ ಲೈಂಗಿಕ ಕ್ರಿಯೆ ನಡೆಸಿದ್ದಾನೆ, ಇದರ ಪರಿಣಾಮವಾಗಿ ತನಗೆ ಸೋಂಕು ತಗುಲಿದೆ ಎಂದು ಪತ್ನಿ ಆರೋಪಿಸಿದ್ದಾರೆ. 20 ಲಕ್ಷ ರೂ.ಗಳ ವರದಕ್ಷಿಣೆಗಾಗಿ ಪತಿ ಮತ್ತು ಅವನ ಕುಟುಂಬವು ತನ್ನನ್ನು ದೈಹಿಕವಾಗಿ ಮತ್ತು ಮಾನಸಿಕವಾಗಿ ಹಿಂಸಿಸುತ್ತಿದೆ ಎಂದು ಪತ್ನಿ ಆರೋಪಿಸಿದ್ದರು.

ಸುರತ್ಕಲ್ ಬೀಚ್ ಗೆ ತೆರಳಿದ ವಿಟ್ಲ ಮೂಲದ ವಿದ್ಯಾರ್ಥಿನಿ ನಿಶಾ ನೀರಿನಲ್ಲಿ ಮುಳುಗಿ ಮೃತ್ಯು..!!!

Posted by Vidyamaana on 2023-10-19 21:09:46 |

Share: | | | | |


ಸುರತ್ಕಲ್ ಬೀಚ್ ಗೆ ತೆರಳಿದ ವಿಟ್ಲ ಮೂಲದ ವಿದ್ಯಾರ್ಥಿನಿ ನಿಶಾ ನೀರಿನಲ್ಲಿ ಮುಳುಗಿ ಮೃತ್ಯು..!!!

ವಿಟ್ಲ : ರಜಾ ಹಿನ್ನೆಲೆ ಬೀಚ್ ಗೆ ತೆರಳಿದ್ದ ಅಪ್ರಾಪ್ತ ವಿದ್ಯಾರ್ಥಿ-ವಿದ್ಯಾರ್ಥಿನಿಯರು ನೀರಿನಲ್ಲಿ ಮುಳುಗಿದ್ದು, ಓರ್ವ ವಿದ್ಯಾರ್ಥಿನಿ ಸಾವನ್ನಪ್ಪಿದ ಘಟನೆ ಸುರತ್ಕಲ್ ಸಮೀಪದ ಚಿತ್ರಾಪುರ ಬೀಚ್ ನಲ್ಲಿ ನಡೆದಿದೆ.


ವಿಟ್ಲ ಮೂಲದ ದಿಗಂತ (15) ದಿವ್ಯರಾಜ್ (15) ತೇಜಸ್ (14) ಕೀರ್ತನ್ (16) ಅಶ್ಮಿತಾ (15) ನಿಶಾ (15) ಇವರೆಲ್ಲರೂ ಕುಳಾಯಿ ಚಿತ್ರಾಪುರ ಬೀಚ್ ಗೆ ನೀರಲ್ಲಿ ಆಟ ಆಡಲು ತೆರಳಿದಾಗ ನೀರಿನ ಅಲೆಯ ರಭಸಕ್ಕೆ ನೀರಿನಲ್ಲಿ ಮುಳುಗಿದ್ದು, ಇವರನ್ನು ಹತ್ತಿರದ ಮೀನುಗಾರರು ಮತ್ತು ಸ್ಥಳೀಯರು ರಕ್ಷಣೆ ಮಾಡಿದ್ದು, ನಾಲ್ಕು ಜನ ಆರೋಗ್ಯವಾಗಿದ್ದು, ತೇಜಸ್ ಎಂಬ ಬಾಲಕನನ್ನು ಮುಕ್ಕ ಖಾಸಗಿ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗೆ ದಾಖಲಿಸಲಾಗಿದೆ.


ಘಟನೆಯಲ್ಲಿ ನಿಶಾ ಎಂಬ ಬಾಲಕಿಯು ಮೃತಪಟ್ಟಿರುತ್ತಾರೆ.

ನಿಶಾ ಮತ್ತು ಅಶ್ವಿತಾ ನೇಪಾಳ ಮೂಲದವರು ಎಂದು ವರದಿಯಾಗಿದೆ.

ಪುತ್ತೂರು : ಬಾವಿಗೆ ಹಾರಿ ಜೀವಾಂತ್ಯ ಮಾಡಿಕೊಂಡ ವಿವಾಹಿತ ಮುಸ್ಲಿಂ ಮಹಿಳೆ

Posted by Vidyamaana on 2023-10-26 12:17:12 |

Share: | | | | |


ಪುತ್ತೂರು : ಬಾವಿಗೆ ಹಾರಿ ಜೀವಾಂತ್ಯ ಮಾಡಿಕೊಂಡ ವಿವಾಹಿತ ಮುಸ್ಲಿಂ ಮಹಿಳೆ

ಪುತ್ತೂರು: ಮಹಿಳೆಯೋರ್ವರು ಬಾವಿಗೆ ಹಾರಿ ಆತ್ಮಹ ತ್ಯೆ ಮಾಡಿಕೊಂಡಿರುವ ಘಟನೆ ಅ.25ರಂದು ರಾತ್ರಿ ಕಾವು ಸಮೀಪದ ಅಮ್ಮಿನಡ್ಕದಿಂದ ವರದಿಯಾಗಿದೆ.ವಿವಾಹಿತ ಮಹಿಳೆಯ ಮೃತದೇಹ ಮನೆಯ ಬಾವಿಯಲ್ಲಿ ಪತ್ತೆಯಾಗಿದ್ದು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂ ಡಿರುವುದಾಗಿ ತಿಳಿದು ಬಂದಿದೆ.

ಮೃತರನ್ನು ಮುಖಾರಿಮೂಲೆ ಜೈನುದ್ದೀನ್ ಎಂಬವರ ಪುತ್ರಿ ಆಯಿಷಾ ಎಂದು ತಿಳಿದು ಬಂದಿದೆ


ಆಯಿಷಾರವರನ್ನು ವಳಾಲಿನ ಸಲೀಂ ಎಂಬವರಿಗೆ ವಿವಾಹ ಮಾಡಿಕೊಡಲಾಗಿತ್ತು. ಸಲೀಂರವರು ಬೆಂಗಳೂರಿನಲ್ಲಿ ಸೂಪರ್ ಮಾರ್ಕೆಟ್‌ನಲ್ಲಿ ಕೆಲಸ ಮಾ ಡಿಕೊಂಡಿದ್ದು ಆಯಿಷಾರವರು ಒಂದು ತಿಂಗಳ ಹಿಂದೆ ತ ನ್ನ ತಂದೆಯ ಮನೆಗೆ ಬಂದಿದ್ದರು ಎನ್ನಲಾಗಿದೆ. ಈ ಸಾವಿಆಯಿಷಾಳ ಗಂಡ ಮಾನಸಿಕ, ದೈಹಿಕ ಕಿರುಕುಳ ಹಿಂಸೆ ನೀಡಿದ್ದೇ ಕಾರಣವಾಗಿದ್ದು, ಈ ಬಗ್ಗೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಯಿಷಾಳ ತಂದೆ ಜೈನುದ್ದೀನ್‌ರವರು ದೂರಿನಲ್ಲಿ ತಿಳಿಸಿದ್ದಾರೆ.

Recent News


Leave a Comment: