Posted by vidyamaana on 2024-07-24 08:25:31 | Last Updated by Vidyamaana on 2024-07-24 08:25:31
ಪುತ್ತೂರು: ನೆಹರುನಗರ ಮಂಜಲ್ಪಡ್ಪು ಬಳಿಯ ಮಂಗಲ ಸ್ಟೋರ್ಸ್ ಮುಂಭಾಗ ಜು.23 ರಂದು ಲಾರಿ ಮತ್ತು ತ್ರಿವೀಲ್ಡರ್ ಸ್ಕೂಟರ್ ನಡುವೆ ಭೀಕರ ಅಪಘಾತ ಸಂಭವಿಸಿ ಮಿತ್ತೂರು ಏಮಾಜೆಯ ವಿಕಲಚೇತನ ಶಿವರಾಮ ನಾಯ್ಕ (50ವ) ಎಂಬವರು ಮೃತಪಟ್ಟ ಬಗ್ಗೆ ವರದಿಯಾಗಿದೆ
ಮಂಗಳೂರು ಕಡೆ ಹೋಗುತ್ತಿದ್ದ ಲಾರಿ ವೊಂದು ವಿಕಲಚೇತನ ಶಿವರಾಮ ಅವರು ಚಲಾಯಿಸುತ್ತಿದ್ದ ತ್ರಿವೀಲ್ಡರ್ ಸ್ಕೂಟರ್ ಗೆ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ತೀವ್ರ ಗಾಯಗೊಂಡ ಸವಾರ ಮೃತ ಪಟ್ಟಿದ್ದಾರೆಂದು ತಿಳಿದು ಬಂದಿದೆ.
Posted by Vidyamaana on 2024-03-01 19:43:09 |
ಪುತ್ತೂರು: ಮಾಜಿ ಶಾಸಕಿ ಶಕುಂತಳಾ ಟಿ. ಶೆಟ್ಟಿ ತನ್ನ ಹುಟ್ಟುಹಬ್ಬವನ್ನು ವಿಶೇಷವಾಗಿ ಆಚರಿಸಿಕೊಂಡರು.
ಪುತ್ತೂರು ಪ್ರಜ್ಞಾ ಆಶ್ರಮದ ವಿಶೇಷ ಚೇತನರೊಂದಿಗೆ ಬೆರೆತು, ಕೇಕ್ ಕತ್ತರಿಸಿ ಹುಟ್ಟುಹಬ್ಬ ಆಚರಿಸಿಕೊಂಡರು.
ಪುತ್ತೂರು ಕಾಂಗ್ರೆಸ್ ರಕ್ತನಿಧಿಯ ಅಧ್ಯಕ್ಷ ನವೀನ್ ಸಿಟಿಗುಡ್ಡೆ,ಕಲಾವಿದ ಕೃಷ್ಣಪ್ಪ,ಚಂದ್ರಶೇಖರ ನಾಯ್ಕ,ರಾಜೀವ ಗೌಡ,ರಾಮಚಂದ್ರ ನಾಯ್ಕ್ ಮಂಜಲ್ಪಡುಪು,ವಿಕ್ಟರ್ ಪಾಯಸ್,ದಿನೇಶ್ ಶೇವಿರೆ,ಪೂರ್ಣೇಶ್ ಕುಮಾರ್ ಭಂಡಾರಿ ಮೊದಲಾದವರು ಉಪಸ್ಥಿತರಿದ್ದರು.
Posted by Vidyamaana on 2024-04-03 16:35:43 |
ಈ ಬಾರಿ ದಕ್ಷಿಣ ಕನ್ನಡದಲ್ಲಿ ಮೂರುವರೆ ಲಕ್ಷಕ್ಕೂ ಅಧಿಕ ಮತಗಳ ಅಂತರದ ಗೆಲುವು : ಸಂಸದ ನಳಿನ್ ಕುಮಾರ್ ಕಟೀಲ್| ಪುತ್ತೂರು ಬಿಜೆಪಿ ಕಾರ್ಯಕರ್ತರ ಸಭೆ
ಪುತ್ತೂರು: ಜಗತ್ತಿನಲ್ಲಿ ಶ್ರೇಷ್ಠ ಭಾರತವನ್ನು ನಿರ್ಮಾಣ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಜಗತ್ತಿನ ನಾಯಕರಾಗಿ ಹೊರಹೊಮ್ಮಿದ್ದು, ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ 400 ಕ್ಕೂ ಅಧಿಕ ಸ್ಥಾನಗಳನ್ನು ಪಡೆಯುವ ಮೂಲಕ ಮತ್ತೊಮ್ಮೆ ನರೇಂದ್ರ ಮೋದಿ ಪ್ರಧಾನಿಯಾಗಲಿದ್ದಾರೆ ಎಂದು ಸಂಸದ, ರಾಜಜ್ಯ ಬಿಜೆಪಿ ಮಾಜಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
ಮಂಗಳವಾರ ಪುತ್ತೂರು ಬೈಪಾಸ್ ರಸ್ತೆಯಲ್ಲಿರುವ ಸ್ವಾಮಿ ಕಲಾಮಂದಿರದಲ್ಲಿ ಪುತ್ತೂರು ಬಿಜೆಪಿ ವಿಧಾನಸಭಾ ವತಿಯಿಂದ ನಡೆದ ಬಿಜೆಪಿ ಕಾರ್ಯಕರ್ತರ ಸಮಾವೇಶದಲ್ಲಿ ಅವರು ಮಾತನಾಡಿದರು.
ದೇಶದಲ್ಲಿ ಪರಿವರ್ತನೆಯ ಗಾಳಿ ಬೀಸುತ್ತಿದ್ದು, ಭಾರತೀಯ ಜನತಾ ಪಾರ್ಟಿಯ ಕನಸುಗಳು ನನಸಾಗುವ ಕಾಲಘಟ್ಟದಲ್ಲಿದ್ದು, ಮುಂದಿನ ಪ್ರಧಾನಿಯಾಗಿ ನರೇಂದ್ರ ಮೋದಿ ಶತಸಿದ್ಧ ಎಂದು ಹೇಳಿದ ಅವರು, ಕಳೆದ ಬಾರಿ 2.70 ಲಕ್ಷ ಮತಗಳಿಂದ ಸಂಸದನಾಗಿ ನಾನು ಆಯ್ಕೆಯಾಗಿದ್ದು, ಈ ಬಾರಿ ದಕ್ಷಿಣ ಕನ್ನಡದಲ್ಲಿ ಮೂರುವರೆ ಲಕ್ಷಕ್ಕೂ ಅಧಿಕ ಮತಗಳ ಜತೆಗೆ ಪುತ್ತೂರಿನಲ್ಲಿ 70 ಸಾವಿರ ಮತಗಳ ಅಂತರದಲ್ಲಿ ಬ್ರಿಜೇಶ್ ಚೌಟರನ್ನು ಗೆಲ್ಲಿಸಿಕೊಡುವ ಪ್ರಯತ್ನವನ್ನು ನಾವೆಲ್ಲರೂ ಒಟ್ಟಾಗಿ ಮಾಡೋಣ ಎಂದರು.
Posted by Vidyamaana on 2024-02-27 12:40:36 |
ಬೆಂಗಳೂರು : ಸರಣಿ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಉಮೇಶ್ ರೆಡ್ಡಿಗೆ ಪೆರೋಲ್ ನೀಡಲು ಹೈಕೋರ್ಟ್ ನಿರಾಕರಿಸಿದೆ.ಬೆಂಗಳೂರಿನ ಪರಪ್ಪನ ಅಗ್ರಹಾರದ ಕೇಂದ್ರ ಕಾರಾಗೃಹದಲ್ಲಿರುವ ಉಮೇಶ್ ರೆಡ್ಡಿ, ಅನಾರೋಗ್ಯಕ್ಕೆ ತುತ್ತಾಗಿರುವ ತಾಯಿಯೊಂದಿಗೆ ಇರಲು 30 ದಿನಗಳ ಕಾಲ ಪೆರೋಲ್ ನೀಡುವಂತೆ ಕೋರಿ ಅರ್ಜಿ ಸಲ್ಲಿಸಿದ್ದ.ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರಿದ್ದ ನ್ಯಾಯಪೀಠ ಪೆರೋಲ್ ನೀಡಲು ನಿರಾಕರಿಸಿದೆ.
ಆಸ್ಪಾಕ್ ವಿರುದ್ಧದ ರಾಜಸ್ಥಾನ ಸರ್ಕಾರದ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ನೀಡಿರುವ ತೀರ್ಪನ್ನು ಉಲ್ಲೇಖಿಸಿರುವ ನ್ಯಾಯಪೀಠ, ಪ್ರಸ್ತುತ ಪ್ರಕರಣದಲ್ಲಿ ಅರ್ಜಿದಾರರಿಗೆ ಪೆರೋಲ್ ನೀಡಬೇಕಾದಲ್ಲಿ ಸಾರ್ವಜನಿಕ ಹಿತಾಸಕ್ತಿ ಗಮನದಲ್ಲಿಟ್ಟುಕೊಳ್ಳಬೇಕು. ಆದ್ದರಿಂದ ಅರ್ಜಿದಾರರಿಗೆ ಪೆರೋಲ್ ನೀಡಿದಲ್ಲಿ ಮತ್ತೆ ಅಪರಾಧ ಪ್ರವೃತ್ತಿಯನ್ನು ಹೊಂದಿರಬಹುದು ಅಥವಾ ಕಾನೂನು ಸುವ್ಯವಸ್ಥೆಗೆ ಅಪಾಯವನ್ನುಂಟು ಮಾಡಬಹುದು ಎಂದು ಅಭಿಪ್ರಾಯ ಪಟ್ಟಿದೆ. ಅಲ್ಲದೇ, ಜೈಲು ಅಧಿಕಾರಿಗಳ ದಾಖಲೆಗಳನ್ನು ಪರಿಶೀಲಿಸಿರುವ ಸುಪ್ರೀಂಕೋರ್ಟ್ ಅರ್ಜಿದಾರರು ಜೈಲಿನಿಂದ ಹೊರ ಬಂದಲ್ಲಿ ಅವರ ಜೀವಕ್ಕೆ ಅಪಾಯವಿದೆ ಎಂದು ತಿಳಿಸಿದೆ ಎಂಬ ಅಂಶವನ್ನು ಉಲ್ಲೇಖಿಸಿರುವ ನ್ಯಾಯಪೀಠ ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿದೆ.ಮನೆ ದುರಸ್ತಿಯಲ್ಲಿದ್ದು ಅದನ್ನು ಸರಿಪಡಿಸುವುದಕ್ಕಾಗಿ ಪೆರೋಲ್ ನೀಡಬೇಕು ಎಂದು ಅರ್ಜಿದಾರರ ಮತ್ತೊಂದು ಮನವಿಯನ್ನು ತಿರಸ್ಕರಿಸಿದ ನ್ಯಾಯಪೀಠ, ಅರ್ಜಿದಾರರಿಗೆ ಇಬ್ಬರು ಸಹೋದರರಿದ್ದು, ತಾಯಿಯನ್ನು ನೋಡಿಕೊಳ್ಳುತ್ತಾರೆ. ಮನೆ ದುರಸ್ತಿಯನ್ನೂ ಮಾಡುತ್ತಾರೆ. ಅರ್ಜಿದಾರರ ನೀಡಿರುವ ಎರಡೂ ಕಾರಣಗಳಲ್ಲಿ ಸಮರ್ಥವಾಗಿಲ್ಲ ಎಂದು ತಿಳಿಸಿ ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿದೆ.
1998 ರ ಫೆ. 28 ರಂದು ಬೆಂಗಳೂರು ನಗರದಲ್ಲಿ ನಡೆದಿದ್ದ ಮಹಿಳೆ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿಉಮೇಶ್ ರೆಡ್ಡಿಗೆ ಮರಣ ದಂಡನೆ ಶಿಕ್ಷೆ ವಿಧಿಸಲಾಗಿತ್ತು. ಈ ಶಿಕ್ಷೆಯನ್ನು ಜೀವಾವಧಿ ಶಿಕ್ಷೆಯನ್ನಾಗಿ ಸುಪ್ರೀಂಕೋರ್ಟ್ ಮಾರ್ಪಾಡು ಮಾಡಿ ಆದೇಶಿಸಿತ್ತು. ಅಲ್ಲದೆ, ನ್ಯಾಯಾಲಯಕ್ಕೆ ಪೆರೋಲ್ ಸೇರಿದಂತೆ ಯಾವುದೇ ರೀತಿಯ ಅರ್ಜಿ ಸಲ್ಲಿಸಬೇಕು ಎಂದಾದರೆ ಕನಿಷ್ಟ 30 ವರ್ಷಗಳ ಕಾಲ ಶಿಕ್ಷೆ ಅನುಭವಿಸಬೇಕು ಎಂದು ಸುಪ್ರೀಂಕೋರ್ಟ್ ತಿಳಿಸಿತ್ತು.
Posted by Vidyamaana on 2024-05-18 07:25:22 |
ಉಡುಪಿ, ಮೇ 17 : ಮನೆಯಿಂದ ಕಾಲೇಜಿಗೆ ಹೋಗುತ್ತೇನೆ ಎಂದು ಹೋಗಿದ್ದ ವಿಧ್ಯಾರ್ಥಿನಿ ನಾಪತ್ತೆಯಾದ ಘಟನೆ ಹಿರಿಯಡ್ಕದಲ್ಲಿ ನಡೆದಿದ್ದು, ನಾಪತ್ತೆಯಾದ ವಿಧ್ಯಾರ್ಥಿನಿಯನ್ನು ಹಿರಿಯಡ್ಕ ನಿವಾಸಿ ವಿದ್ಯಾಲಕ್ಷ್ಮೀ(20) ಎಂದು ಗುರುತಿಸಲಾಗಿದ್ದು, ಎಪ್ರಿಲ್ 19 ರಂದು ಕಾಲೇಜಿಗೆಂದು ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.
Posted by Vidyamaana on 2024-02-04 09:58:00 |
ಬ್ರಝಿಲ್ :15 ವರ್ಷದ ಬಾಲಕಿಯನ್ನು ತನ್ನ ಕಾಮತೃಷೆಗೆ ಬಳಸಿಕೊಂಡ ಪತಿ ವಿರುದ್ಧ ಪತ್ನಿ ಮಾರಣಾಂತಿಕ ಹಲ್ಲೆ ಮಾಡಿದ್ದಾಳೆ. ಗಂಡನ ಕೈ ಕಾಲು ಕಟ್ಟಿ ಹಾಕಿದ ಪತ್ನಿ, ಒಂದೇ ಎಟಿನಲ್ಲಿ ಗಂಡನ ಮರ್ಮಾಂಗ ಕತ್ತರಿಸಿದ್ದಾಳೆ. ಬಳಿಕ ಟಾಯ್ಲೆಟ್ಗೆ ಹಾಕಿ ಫ್ಲಶ್ ಮಾಡಿಬಿಟ್ಟಿ ಘಟನೆ ಬ್ರೆಜಿಲ್ನಲ್ಲಿ ನಡೆದಿದೆ.ಆಯಟಿಬಯಾ ನಿವಾಸಿಯಾಗಿರುವ 39 ವರ್ಷದ ಪತಿಯ ಸ್ಥಿತಿ ಚಿಂತಾಜನಕವಾಗಿದೆ.ಇತ್ತ ಪತ್ನಿಯನ್ನು ಪೊಲೀಸರು ಬಂಧಿಸಿದ್ದಾರೆ.
ಪತಿ ಹಾಗೂ ಪತ್ನಿ ಇಬ್ಬರು ಉದ್ಯೋಗ ಮಾಡುತ್ತಿದ್ದರು. ಆದರೆ ಇತ್ತೀಚೆಗೆ ಪತಿಯ ವರ್ತನೆಗಳು ಅನುಮಾನ ತರಿಸಿತ್ತು. ಕೆಲ ವಿಚಾರಗಳನ್ನು ತನ್ನಿಂದ ಮುಚ್ಚಿಡುತ್ತಿರುವ ಕುರಿತು ಅನುಮಾನಪಟ್ಟಿದ್ದಾಳೆ. ಇತ್ತ ಪತಿ ಕೆಲದಿಂದ ಬೇಗನೆ ಮನೆಗೆ ಬರುವುದು, ಕೆಲ ದಿನ ಕಲಸಕ್ಕೆ ರಜೆ ಹಾಕುವುದು ಸಾಮಾನ್ಯವಾಗಿತ್ತು. ಬರು ಬರುತ್ತಾ ಪತಿಯ ನಡೆ ಅನುಮಾನ ಹೆಚ್ಚಿಸಿದೆ.
ಪತಿಯ ಅಸಲಿ ಕತೆ ಪತ್ತೆ ಹಚ್ಚಳು ಪತ್ನಿ ನಿರ್ಧರಿಸಿದ್ದಾಳೆ. ಕೆಲಸಕ್ಕೆಂದು ತೆರಳಿದ ಪತಿಯನ್ನು ಹಿಂಬಾಸಿದ ಪತ್ನಿಗೆ ಅಚ್ಚರಿಯಾಗಿದೆ. ತನ್ನ 15 ವರ್ಷದ ತಂಗಿಯನ್ನು ಪುಸಲಾಯಿಸಿ, ಬೆದರಿಸಿ ಕಾಮಕ್ಕೆ ಬಳಸಿಕೊಂಡಿರುವುದು ಪತಿಗೆ ಗೊತ್ತಾಗಿದೆ. ಒಂದು ದಿನ ರೆಡ್ ಹ್ಯಾಂಡ್ಗಿ ತನ್ನ 15 ವರ್ಷದ ತಂಗಿ ಜೊತೆ ಮಲಗಿರುವಾಗಲೇ ಪತಿಯ ಕಾಮದಾಟವನ್ನು ಬಯಲು ಮಾಡಿದ್ದಾಳೆ. ಪತಿಯ ಎರಡು ಕೈ ಹಾಗೂ ಕಾಲುಗಳನ್ನು ಕಟ್ಟಿಹಾಕಿದ ಪತಿ ಮನಬಂದಂತೆ ಥಳಿಸಲು ಆರಂಭಿಸಿದ್ದಾಳೆ. ಆದರೆ ಇಷ್ಟಕ್ಕೆ ಕೋಪ ತಣ್ಣಗಾಗಲಿಲ್ಲ. ನೇರವಾಗಿ ಅಡುಮನೆಯಿಂದ ಚಾಕು ತಂದ ಪತ್ನಿ, ಪತಿಯ ಮರ್ಮಾಂಗವನ್ನೇ ಒಂದೇ ಏಟಿನಲ್ಲಿ ಕತ್ತರಿಸಿದ್ದಾಳೆ. ಬಳಿಕ ಮರ್ಮಾಂಗವನ್ನು ಟಾಯ್ಲೆಟ್ನಲ್ಲಿ ಬಿಸಾಡಿ ನೀರು ಹಾಕಿದ್ದಾಳೆ.
ಈ ದಾಳಿ ಬಳಿಕ ಪತ್ನಿ ನೇರವಾಗಿ ಮನೆಯಿಂದ ಹೊರಟು ಹೋಗಿದ್ದಾಳೆ. ಇತ್ತ ಚೀರಾಟ ಕೇಳಿ ಕೆಲ ದೂರದಲ್ಲಿರವ ನೆರೆಮನೆಯವರು ಆಗಮಿಸಿ ಈತನನ್ನು ಆಸ್ಪತ್ರೆ ದಾಖಲಿಸಿದ್ದಾರೆ. ಇತ್ತ ಪತ್ನಿ ಪೊಲೀಸ್ ಠಾಣೆಗೆ ತೆರಳಿದ್ದಾಳೆ. ಪೊಲೀಸ್ ಠಾಣೆಗೆ ತೆರಳಿದ ಪತ್ನಿ, ಶುಭ ಸಂಜೆ ಆಫೀಸರ್, ನನ್ನ ಕುರಿತು ಹೇಳಿಕೊಳ್ಳಲು ಇಲ್ಲಿಗೆ ಆಗಮಿಸಿದ್ದೇನೆ. ನನ್ನ 15 ವರ್ಷದ ತಂಗಿ ಜೊತೆ ಮಲಗಿದ ಪತ್ನಿಯ ಮರ್ಮಾಂಗವನ್ನು ಕತ್ತರಿಸಿದ್ದೇನೆ ಎಂದಿದ್ದಾಳೆ. ಮಹಿಳೆಯನ್ನು ವಶಕ್ಕೆ ಪಡೆದು ಪೊಲೀಸರು ಈಕೆಯ ಪತಿಯ ಮಾಹಿತಿ ಪಡೆದು ಆಸ್ಪತ್ರೆಗೆ ತೆರಳಿದ್ದಾರೆ.ಪತಿ ಸ್ಥಿತಿ ಚಿಂತಾಜನಕವಾಗಿದೆ. ಪ್ರಕರಣ ದಾಖಲಿಸಿಕೊಂಡು ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ.