Posted by vidyamaana on 2024-05-27 18:41:30 |
ಪುತ್ತೂರು : ಪುತ್ತೂರಿನ ಹೊರ ವಲಯದ ಸಂಟ್ಯಾರಿನಲ್ಲಿ ಭೀಕರ ಅಪಘಾತ ನಡೆದು 10ಕ್ಕೂ ಹೆಚ್ಚು ವಾಹನಗಳು ಪುಡಿ ಪುಡಿಯಾದ ಘಟನೆ ಮೇ.27ರಂದು ಸಂಜೆ ನಡೆದಿದೆ.
ಪಾಣಾಜೆ - ಸಂಟ್ಯಾರ್ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದೆ. ಸಂಟ್ಯಾರ್ ಜಂಕ್ಷನ್ ನಲ್ಲಿ ನಿಲ್ಲಿಸಿದ್ದ ಹತ್ತಕ್ಕೂ ಹೆಚ್ಚು ಬೈಕ್ ಗಳು ಪುಡಿ ಪುಡಿಯಾಗಿ ಚೆಲ್ಲಪಿಲ್ಲಿಯಾಗಿದೆ.
ಪಾಣಾಜೆ ಕಡೆಯಿಂದ ಅತೀ ವೇಗದಲ್ಲಿ ಬರುತಿದ್ದ ಕಾರೊಂದು ಈ ಹತ್ತಕ್ಕೂ ಹೆಚ್ಚು ದ್ವಿಚಕ್ರ ವಾಹನಗಳಿಗೆ ಡಿಕ್ಕಿಯಾಗಿದೆ. ಸಂಟ್ಯಾರ್ ಜಂಕ್ಷನ್ ನಲ್ಲಿ ವಾಹನ ನಿಲ್ಲಿಸಿ ಬಸ್ ನಲ್ಲಿ ಉದ್ಯೋಗಕ್ಕೆ ತೆರಳುವವರ 10 ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳು ಪುಡಿ ಪುಡಿಯಾಗಿ ಚೆಲ್ಲಪಿಲ್ಲಿಯಾಗಿದೆ.
Posted by Vidyamaana on 2024-01-05 16:39:03 |
ಮಂಗಳೂರು: ಮದುವೆ ನಡೆಯುತ್ತಿದ್ದ ವೇಳೆ ಏಕಾಏಕಿ ಕಲ್ಯಾಣ ಮಂಟಪಕ್ಕೆ (Wedding Function) ಬಂದ ಯುವತಿಯೊಬ್ಬಳು ವರ ತನಗೆ ಮದುವೆಯಾಗುವುದಾಗಿ ಮೋಸ ಮಾಡಿದ್ದಾನೆ ಎಂದು ಜಗಳವಾಡಿದ ಘಟನೆ ಮಂಗಳೂರಿನಲ್ಲಿ (Mangaluru) ನಡೆದಿದೆ.ಕಲ್ಯಾಣ ಮಂಟಪಕ್ಕೆ ಬಂದು ಗಲಾಟೆ ಮಾಡಿದ ಯುವತಿಯನ್ನು ಇಂದು ಮದುವೆಯಾಗುತ್ತಿರುವ ವರನ ಮಾಜಿ ಪ್ರೇಯಸಿ ಎಂದು ಹೇಳಲಾಗ್ತಿದ್ದು, ತನ್ನನ್ನು ಬಿಟ್ಟು ಬೇರೊಬ್ಬ ಯುವತಿಯ ಜೊತೆಗೆ ಮದುವೆಯಾಗುತ್ತಿರುವುದನ್ನು ಪ್ರಶ್ನಿಸಿ ಆಕೆ ಗಲಾಟೆ ಮಾಡಿದ್ದಾಳೆ ಎಂದು ತಿಳಿದು ಬಂದಿದೆ.ಅಂದ ಹಾಗೆ ಈ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನ ಬೀರಿ ಬಳಿ ನಡೆದಿದ್ದು, ಕೇರಳ ಮೂಲದ ಅಕ್ಷಯ್ ಎಂಬಾತನ ಮದುವೆ ಮಂಗಳೂರು ಮೂಲದ ಯುವತಿ ಜೊತೆ ನಡೆಯುತ್ತಿದ್ದಾಗ ಮೈಸೂರು ಮೂಲದ ಮಾಜಿ ಪ್ರೇಯಸಿ ಕಲ್ಯಾಣ ಮಂಟಪಕ್ಕೆ ಎಂಟ್ರಿಕೊಟ್ಟು ತನಗೆ ಅನ್ಯಾಯವಾಗಿದೆ, ನ್ಯಾಯ ಬೇಕು ಎಂದು ಆಗ್ರಹ ಮಾಡಿದ್ದಾಳೆ.ಕೇರಳದ ಕೊಝಿಕ್ಕೋಡ್ ಮೂಲದ ಅಕ್ಷಯ್ ಒಂದೂವರೆ ವರ್ಷದ ಹಿಂದೆ ಮೈಸೂರಿನ ಯುವತಿಯನ್ನು ಶಾದಿ ಡಾಟ್ ಕಾಮ್ ಮೂಲಕ ಪರಿಚಯ ಮಾಡಿಕೊಂಡಿದ್ದನು. ನಂತರ ವಿವಾಹವಾಗುವುದಾಗಿ ನಂಬಿಸಿ ಆಕೆಯನ್ನು ಅಲ್ಲಿಲ್ಲಿ ಸುತ್ತಾಡಿಸಿ ದೈಹಿಕ ಸಂಪರ್ಕ ನಡೆಸಿದ್ದಾನೆ. ನಂತರ ಆತ ವರಸೆ ಬದಲಾಯಿಸಿದ್ದು, ಆಕೆಯನ್ನು ಬಿಟ್ಟು ಬೇರೊಬ್ಬ ಯುವತಿಯ ಜೊತೆ ಮದುವೆಗೆ ಮುಂದಾಗಿದ್ದಾನೆ.ಅಂದಹಾಗೆ ಸಂತ್ರಸ್ತ ಯುವತಿ ಕಳೆದ ಡಿಸೆಂಬರ್ 26 ರಂದು ಅಕ್ಷಯ್ ವಿರುದ್ಧ ಕೇರಳದ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರದ ದೂರು ದಾಖಲಿಸಿದ್ದಾಳೆ. ಪ್ರಕರಣ ಸಂಬಂಧ ಅರೋಪಿ ಅಕ್ಷಯ್ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ನ್ಯಾಯಾಲಯವು ವಜಾಗೊಳಿಸಿತ್ತು. ಈ ನಡುವೆ ಮಂಗಳೂರನ ಯುವತಿ ಜೊತೆ ಅಕ್ಷಯ್ಗೆ ವಿವಾಹ ನಿಶ್ಚಯವಾಗಿದೆ.ಅಕ್ಷಯ್ಗೆ ಕರ್ನಾಟಕ-ಕೇರಳ ಗಡಿಭಾಗ ಬೀರಿಯ ಖಾಸಗಿ ಹಾಲ್ನಲ್ಲಿ ಮದುವೆ ನಡೆಯುತ್ತಿರುವ ವಿಚಾರ ತಿಳಿದ ಬೆನ್ನಲ್ಲೇ ಉಳ್ಳಾಲ ಪೊಲೀಸರೊಂದಿಗೆ ಹಾಲ್ಗೆ ಆಗಮಿಸಿದ ಯುವತಿ ಕಲ್ಯಾಣ ಮಂಟಪದ ಮುಂಭಾಗದಲ್ಲಿ ಹೈಡ್ರಾಮ ನಡೆಸಿದ್ದಾಳೆ. ನಂತರ ಪೊಲೀಸರೇ ಆಕೆಯನ್ನು ಹಾಲ್ ಬಳಿಯಿಂದ ಕೇರಳದ ಮಂಜೇಶ್ವರ ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗಿದ್ದಾರೆ.ಈ
ಮಧ್ಯೆ, ಆರೋಪಿಯನ್ನು ಅರೆಸ್ಟ್ ಮಾಡಿ ಅಂದರೆ ನನ್ನನ್ನೇ ಕರೆದುಕೊಂಡು ಹೋಗುತ್ತಿದ್ದಾರೆ ಎಂದು ಯುವತಿ ಆಕ್ರೋಶ ಹೊರಹಾಕಿದ್ದಾಳೆ. ನಂತರ ಅಕ್ಷಯ್ ಮಂಗಳೂರು ಯುವತಿಗೆ ತಾಳಿ ಕಟ್ಟಿದ್ದಾನೆ ಎಂದು ತಿಳಿದು ಬಂದಿದೆ.
Posted by Vidyamaana on 2023-07-28 10:14:00 |
ಪುತ್ತೂರು: ಆಂಗ್ಲ ಭಾಷೆಯ ಹೆಸರಾಂತ ಅಮೆರಿಕ ಲೇಖಕ ಪೀಟರ್ ಕೊಲ್ಲಿಯರ್ ಹಾಗೂ ಡೇವಿಡ್ ಹೊರೋವಿಟ್ಸ್ ಇವರಿಬ್ಬರು ಜಂಟಿಯಾಗಿ ರಚಿಸಿದ ‘ದಿ ಕೆನ್ನೆಡಿಸ್ ಏನ್ ಅಮೇರಿಕನ್ ಡ್ರಾಮಾ’ ಕೃತಿಯ ಕನ್ನಡ ಅನುವಾದ ‘ಕೆನ್ನೆಡಿಗಳು, ಒಂದು ಕಥಾನಕ’ ಕೃತಿ ಲೋಕಾರ್ಪಣೆ ಜುಲೈ 29 ಶನಿವಾರ ಮಧ್ಯಾಹ್ನ 2:30ಕ್ಕೆ ಪುತ್ತೂರು ಕೋ ಆಪರೇಟಿವ್ ಟೌನ್ ಬ್ಯಾಂಕ್ ಸಭಾಂಗಣದಲ್ಲಿ ನಡೆಯಲಿದೆ.
ಹಿರಿಯ ಸಾಹಿತಿ ಡಾ. ತಾಳ್ತಜೆ ವಸಂತ ಕುಮಾರ್ ಕೃತಿ ಲೊಕಾರ್ಪಣೆಗೊಳಿಸಲಿದ್ದಾರೆ. ಶಾಸಕ ಅಶೋಕ್ ಕುಮಾರ್ ರೈ, ಸಹಾಯಕ ಆಯುಕ್ತ ಗಿರೀಶ್ ನಂದನ್, ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಎಸ್.ಆರ್., ಮಿತ್ರಂಪಾಡಿ ಜಯರಾಮ ರೈ, ಕಸಾಪ ಜಿಲ್ಲಾ ಕೋಶಾಧ್ಯಕ್ಷ ಐತಪ್ಪ ನಾಯ್ಕ್ ಭಾಗವಹಿಸಲಿದ್ದಾರೆ. ಕಸಾಪ ಪುತ್ತೂರು ಅಧ್ಯಕ್ಷ ಪುತ್ತೂರು ಉಮೇಶ್ ನಾಯಕ್ ಅಧ್ಯಕ್ಷತೆ ವಹಿಸಲಿದ್ದಾರೆ.
ಕರ್ತೃ ಎಂ. ಶಾಂತರಾಮ್ ರಾವ್:
ಆಂಗ್ಲ ಕೃತಿಯನ್ನು ಕನ್ನಡಕ್ಕೆ ಅನುವಾದಿಸಿದವರು ಎಂ. ಶಾಂತರಾಮ್ ರಾವ್. ಇವರು ಭಾರತ ಸರಕಾರದ ವಾಣಿಜ್ಯ ಇಲಾಖೆಯ ಅಡಿಯ ಎಕ್ಸ್ಪೋರ್ಟ್ ಕ್ರೆಡಿಟ್ ಗ್ಯಾರೆಂಟ್ ಕಾರ್ಪೋರೇಷನ್ ಇಂಡಿಯಾ ಲಿ. (ಇಸಿಜಿಸಿ)ನ ನಿವೃತ್ತ ಅಧಿಕಾರಿ. ಕನ್ನಡದ ಪ್ರಸಿದ್ಧ ಸಾಹಿತಿ ಹಾಗೂ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಡಾ.ಶಿವರಾಮ ಕಾರಂತರ ಸಹೋದರಿ ಶ್ರೀದೇವಿ ಹಾಗೂ ಪುತ್ತೂರಿನ ಖ್ಯಾತ ವಕೀಲರಾಗಿದ್ದ ದಿ. ಸದಾಶಿವರಾಯರ 4ನೆಯ ಪುತ್ರ ಎಂ. ಶಾಂತರಾಮ್ ರಾವ್. ಪುತ್ತೂರಿನ ಹಿರಿಯ ವಕೀಲ ರಾಮ್ ಮೋಹನ್ ರಾವ್ ಅವರ ಸಹೋದರ.
ಕೃತಿ ಕುರಿತು:
ಅಮೆರಿಕ ದೇಶದಲ್ಲಿ ಅತಿ ಕಿರಿಯ ವಯಸ್ಸಿನಲ್ಲಿಯೇ ಚುನಾಯಿತ ಹಾಗೂ ಪ್ರಥಮ ಕೆಥೋಲಿಕ್ ಪಂಗಡದ ಅಧ್ಯಕ್ಷನೆಂಬ ಹೆಗ್ಗಳಿಕೆ ಹಾಗೂ ಪ್ರಸಿದ್ಧಿ ಪಡೆದ ಮಹಾನ್ ನಾಯಕ ಜಾನ್.ಎಫ್ ಕೆನ್ನಡಿ. ಇವರ ಕುಟುಂಬ ಅಮೆರಿಕಾದಲ್ಲಿ ನೆಲೆಯಾಗಿ ಯಶಸ್ಸನ್ನು ಕಂಡ ರೋಚಕ ಕಥೆ ಈ ಕೃತಿಯಲ್ಲಿ ಸೊಗಸಾಗಿ ನಿರೂಪಣೆಗೊಂಡಿದೆ. ಅವರ ಕುಟುಂಬ ರಾಜಕೀಯವಾಗಿ ಹಾಗೂ ವ್ಯಾವಹಾರಿಕವಾಗಿ ಯಶಸ್ವಿಯಾದ ವಿವರ, ಅವರ ರಾಜಕೀಯದಲ್ಲಿನ ಏಳು ಬೀಳುಗಳು, ಕುಟುಂಬದಲ್ಲಿ ನಡೆದ ಅಚ್ಚರಿಯ ಘಟನೆಗಳು, ಅವರ ಯಶಸ್ಸು, ಅನುಭವಿಸಿದ ನೋವು - ನಲಿವು, ಅವರೊಳಗಿನ ಸ್ಪರ್ಧೆ, ಪ್ರಣಯ ಪ್ರಸಂಗಗಳು, ಭೂಗತ ಜಗತ್ತಿನೊಂದಿಗಿನ ಸಂಬಂಧಗಳು, ಮಾದಕ ವ್ಯಸನಕ್ಕೆ ದಾಸರಾದ ವಿಚಾರ, ಷೇರು ವ್ಯವಹಾರದಲ್ಲಿ ಜೋ. ಕೆನ್ನೆಡಿಯು (ಜಾನ್. ಎಫ್. ಕೆನ್ನಡಿಯ ತಂದೆ) ನಡೆಸಿದ ಅವ್ಯವಹಾರ, ಅವರ ಪ್ರತಿಷ್ಠೆಗಾಗಿ ಬುದ್ದಿಮಾಂದ್ಯ ಮಗುವನ್ನು ಪ್ರಪಂಚದಿಂದ ದೂರವಿರಿಸಿದ ಮನಕಲುಕುವ ವಿಚಾರ, ಮುಂದಿನ ಜನಾಂಗವು ಪೇಚಿಗೆ ಸಿಲುಕಿದ ಘಟನೆಗಳ ವಿಸ್ತೃತ ವಿವರಣೆಯೇ ಈ ‘ಕೆನ್ನಡಿಗಳು ಒಂದು ಕಥಾನಕ’ ಕೃತಿಯ ಕಥಾ ವಸ್ತುವಾಗಿದೆ.
ಈ ಕೃತಿಯನ್ನು ಓದುತ್ತ ಹೋದಂತೆ ರೋಚಕತೆ ಹಾಗೂ ಓದುವ ಹಂಬಲ ಹೆಚ್ಚುತ್ತ ಹೋಗುತ್ತದೆ. ಕೆನ್ನಡಿ ಕುಟುಂಬವು ರಾಜಕೀಯವಾಗಿ ಬೆಳೆದು ಬಂದ ಪರಿ ಹೇಗೆ? ಇತ್ಯಾದಿಗಳು ಇದರಲ್ಲಿ ಸುಂದರವಾಗಿ ಬಿಂಬಿತವಾಗಿದೆ.
ಸುಮಾರು 771 ಪುಟ ಇರುವ ಈ ಕೃತಿಗೆ ಮುನ್ನುಡಿಯನ್ನು ಕ.ಸಾ.ಪ – ಪುತ್ತೂರು ಅಧ್ಯಕ್ಷ ಪುತ್ತೂರು ಉಮೇಶ್ ನಾಯಕ್ ಅವರು ಬರೆದಿದ್ದಾರೆ.
Posted by Vidyamaana on 2024-07-06 16:17:31 |
ಬೆಂಗಳೂರು : ಪ್ರತೀ SP-DCP-IG ಗಳು ಪೊಲೀಸ್ ಮ್ಯಾನ್ಯುಯಲ್ ತಮ್ಮ ವ್ಯಾಪ್ತಿಯ ಪ್ರಕಾರ ಪ್ರತಿ ಠಾಣೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುವುದು ಕಡ್ಡಾಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟ ಸೂಚನೆ ನೀಡಿದರು. ರಾಜ್ಯ ಪೊಲೀಸ್ ಮಹಾ ನಿರ್ದೇಶಕರ ಕಚೇರಿಯಲ್ಲಿ 2024ರ ಹಿರಿಯ ಪೊಲೀಸ್ ಅಧಿಕಾರಿಗಳ ಸಮಾವೇಷವನ್ನು ಉದ್ಘಾಟಿಸಿ, ನೂತನ ತಂತ್ರಾಂಶಗಳನ್ನು ಬಿಡುಗಡೆಗೊಳಿಸಿ ಮಾತನಾಡಿದರು.
ನಿಮ್ಮ ವ್ಯಾಪ್ತಿಯಲ್ಲಿ ಕ್ಲಬ್ ಗಳು, ಇಸ್ಪೀಟ್, ಬೆಟ್ಟಿಂಗ್, ಡ್ರಗ್ಸ್ ಗಳನ್ನು ನಿಲ್ಲಿಸದಿದ್ದರೆ SP ಮತ್ತು IG ಮಟ್ಟದ ಅಧಿಕಾರಿಗಳನ್ನೂ ನೇರ ಹೊಣೆ ಮಾಡಿ ಕ್ರಮ ತೆಗೆದುಕೊಳ್ಳಲಾಗುವುದು. SP-IG ಗಳು ಪ್ರತಿ ಠಾಣೆಗಳಿಗೆ ಹೋಗಿ ಪರಿಶೀಲನೆ ನಡೆಸಿದರೆ ಇವನ್ನೆಲ್ಲಾ ತಪ್ಪಿಸಬಹುದು ಎಂದು ಎಚ್ಚರಿಸಿದರು.
ನಾಳೆಯಿಂದಲೇ SP, IG ಗಳು ಠಾಣೆಗಳಿಗೆ ಭೇಟಿ ನೀಡಬೇಕು. ಭೇಟಿ ನೀಡಿ ಅರ್ಧಗಂಟೆಯಲ್ಲಿ ಶಾಸ್ತ್ರ ಮುಗಿಸಬಾರದು. ಕೂಲಂಕುಶ ಪರಿಶೀಲನೆ ನಡೆಸಬೇಕು ಎಂದು ಎಚ್ಚರಿಸಿದರು.
ಫೇಕ್ ನ್ಯೂಸ್ ಪ್ರಸಾರ ತಡೆಗಟ್ಟಿ: ಇಲ್ಲಾಂದ್ರೆ ಕ್ರಮ ಎದುರಿಸಿ: ಫೇಕ್ ನ್ಯೂಸ್ ಗಳು ಸಮಾಜದ ನೆಮ್ಮದಿಗೆ ಕಂಟಕವಾಗಿವೆ. ಇವು ವಿಪರೀತ ಹೆಚ್ಚಾಗುತ್ತಿವೆ. ಇವುಗಳ ತಡೆಗೆ fact check ಘಟಕಗಳನ್ನು ಮಾಡಿದ್ದೇವೆ. ಆದರೂ ಫೇಕ್ ನ್ಯೂಸ್ ಗಳು ಹೆಚ್ಚಾಗುತ್ತಿವೆ. ಇದನ್ನು ಸಹಿಸಲು ಸಾಧ್ಯವಿಲ್ಲ. ಸದ್ಯ ಫೇಕ್ ನ್ಯೂಸ್ ತಡೆಯಲು ಆಗುತ್ತಿರುವ ಕೆಲಸ ಸಾಲುತ್ತಿಲ್ಲ ಎಂದು ಎಚ್ಚರಿಸಿದರು.
Posted by Vidyamaana on 2023-08-07 12:43:44 |
ದೊಡ್ಡಬಳ್ಳಾಪುರ: ಜಮೀನು ಖರೀದಿಸಿದವರು ನೀಡಿದ್ದ₹5 ಲಕ್ಷ ಮೊತ್ತದ ಚೆಕ್ನಲ್ಲಿ ₹65 ಲಕ್ಷ ಎಂದು ತಿದ್ದಿ ಹಣ ಪಡೆಯಲು ಹೋಗಿದ್ದ ರಿಯಲ್ ಎಸ್ಟೇಟ್ ಮಧ್ಯವರ್ತಿಯೊಬ್ಬರು ಬ್ಯಾಂಕ್ ಸಿಬ್ಬಂದಿ ಕೈಗೆ ಸಿಕ್ಕಿಹಾಕಿಕೊಂಡ ಘಟನೆ ನಗರದಲ್ಲಿ ನಡೆದಿದೆ.
ಚೆಕ್ ತಿದ್ದಿದ ಆರೋಪದ ಮೇಲೆ ಕಳೆದ ವಾರ ಗ್ರಾಮಾಂತರ ಪೊಲೀಸ್ ಠಾಣೆ ಪೊಲೀಸರು ಬಂಧಿಸಿದ್ದ ನಗರದ ರಿಯಲ್ ಎಸ್ಟೇಟ್ ಮಧ್ಯವರ್ತಿ ಎಂ.ಸಿ.ಚಂದ್ರಶೇಖರ್ ಶನಿವಾರ ಜಾಮೀನಿನ ಮೇಲೆ ಹೊರಗೆ ಬಂದಿದ್ದಾರೆ.ಎರಡು ಎಕರೆ ಜಮೀನು ವ್ಯವಹಾರದಲ್ಲಿ ಮಧ್ಯವರ್ತಿಯಾಗಿದ್ದ ಎಂ.ಸಿ.ಚಂದ್ರಶೇಖರ್ ಅವರಿಗೆ ಕಮಿಷನ್ ರೂಪದಲ್ಲಿ ಆಂಜಿನಪ್ಪ ಎಂಬುವರು ತಲಾ ₹5 ಲಕ್ಷದ ಎರಡು ಚೆಕ್ ನೀಡಿದ್ದರು. ಮೊದಲ ಚೆಕ್ ಡ್ರಾ ಮಾಡಿಕೊಂಡಿದ್ದ ಚಂದ್ರಶೇಖರ್, ಎರಡನೇ ಚೆಕ್ ಡ್ರಾ ಮಾಡಿಕೊಳ್ಳುವಾಗ ₹5 ಲಕ್ಷವನ್ನು ₹65 ಲಕ್ಷ ಎಂದು ತಿದ್ದಿದ್ದರು.
ಚೆಕ್ ನೋಡಿ ಅನುಮಾನಗೊಂಡ ಬ್ಯಾಂಕ್ ಸಿಬ್ಬಂದಿ, ಚೆಕ್ ನೀಡಿದ್ದ ಆಂಜಿನಪ್ಪ ಅವರಿಗೆ ಕರೆ ಮಾಡಿ ಕೇಳಿದಾಗ ವಿಷಯ ಬೆಳಕಿಗೆ ಬಂದಿದೆ. ಚಂದ್ರಶೇಖರ್ ವಿರುದ್ಧ ಗ್ರಾಮಾಂತರ ಠಾಣೆಯಲ್ಲಿ ಆಂಜಿನಪ್ಪ ದೂರು ದಾಖಲಿಸಿದ್ದಾರೆ.
ಪೊಲೀಸರು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಚೆಕ್ ಕಳಿಸಿ ವರದಿ ಕೋರಿದ್ದರು. ಚೆಕ್ ತಿದ್ದಿರುವುದು ಸಾಬೀತಾದ ಕಾರಣ ಪೊಲೀಸರು ಆರೋಪಿಯನ್ನು ಬಂಧಿಸಿದ್ದರು.
Posted by Vidyamaana on 2024-06-21 16:09:00 |
ಪುತ್ತೂರು: 16ನೇ ವರ್ಷದೆಡೆಗೆ ಸ್ವಾಭಿಮಾನಿ ಮತ್ತು ಜನಪರ ರಾಜಕೀಯದ ದಿಟ್ಟ ಹೆಜ್ಜೆಗಳೊಂದಿಗೆ ಪಯಣಿಸುತ್ತಿರುವ ಪಕ್ಷದ ಸಂಸ್ಥಾಪನಾ ದಿನದ ಅಂಗವಾಗಿ ಜೂನ್ 21 2024 ರಂದು ಧ್ವಜಾರೋಹಣ ಕಾರ್ಯಕ್ರಮವು SDPI ಸಂಟ್ಯಾರ್ ಬೂತ್ ಸಮಿತಿ ವತಿಯಿಂದ ಸಂಟ್ಯಾರಿನಲ್ಲಿ ನಡೆಯಿತು.
ಧ್ವಜಾರೋಹಣ ವನ್ನು SDPI ದ.ಕ ಜಿಲ್ಲಾ ಸಮಿತಿ ಸದಸ್ಯರಾದ ಸಿದ್ದೀಕ್ ಕೆ ಎ ರವರು ನೆರವೇರಿಸಿದರು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು SDPI ಸಂಟ್ಯಾರ್ ಬೂತ್ ಸಮಿತಿ ಅಧ್ಯಕ್ಷರಾದ ಮಸೂದ್ ಸಂಟ್ಯಾರ್ ವಹಿಸಿದರು.
Posted by Vidyamaana on 2023-10-31 17:32:07 |
ಮಂಗಳೂರು, ಅ.31: ಪುತ್ತೂರು ವಿಧಾನಸಭೆ ಕ್ಷೇತ್ರದ ಇತಿಹಾಸದಲ್ಲೇ ಮೊದಲ ಬಾರಿಗೆ ಕುಡಿಯುವ ನೀರಿನ ಯೋಜನೆ ಅನುಷ್ಠಾನಕ್ಕಾಗಿ ಒಂದು ಸಾವಿರದ ಹತ್ತು ಕೋಟಿ ಅನುದಾನ ಬಂದಿದೆ. ಅದರ ಟೆಂಡರ್ ಆಗಿದ್ದು, ಶೀಘ್ರದಲ್ಲೇ ಕಾಮಗಾರಿ ಶುರು ಮಾಡುತ್ತೇವೆ. ಕೊಯ್ಲದಲ್ಲಿ ಪಶು ವೈದ್ಯಕೀಯ ಕಾಲೇಜಿಗೆ 24 ಕೋಟಿ ಅನುದಾನ ಬಂದಿದ್ದು, ಮುಂದಿನ ವರ್ಷದಿಂದಲೇ ಕಾಲೇಜು ಆರಂಭಿಸುತ್ತೇವೆ ಎಂದು ಪುತ್ತೂರು ಶಾಸಕ ಅಶೋಕ್ ರೈ ಹೇಳಿದ್ದಾರೆ.
ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿದ ಅವರು, ಕಳೆದು ಐದು ವರ್ಷಗಳಲ್ಲಿ ಬಿಜೆಪಿ ಸರಕಾರ ಇತ್ತು. ಪಶು ವೈದ್ಯಕೀಯ ಕಾಲೇಜಿಗೆ ಕಳೆದ ಸಿದ್ದರಾಮಯ್ಯ ಸರಕಾರ ಇದ್ದಾಗಲೇ ಅನುದಾನ ಬಿಡುಗಡೆಗೊಂಡು ಕಟ್ಟಡ ರೆಡಿಯಾಗಿತ್ತು. ಐದು ವರ್ಷ ಕಾಲ ಅದನ್ನು ಆರಂಭಿಸಲು ಆಗಿರಲಿಲ್ಲ. ಧೂಳು ತಿನ್ನುತ್ತಿದ್ದ ಕಟ್ಟಡದಲ್ಲಿ ನವೀಕರಣ ಕೈಗೊಂಡು ಮುಂದಿನ ವರ್ಷದಲ್ಲೇ ಕಾಲೇಜು ಆರಂಭಿಸಲಾಗುವುದು ಎಂದು ಹೇಳಿದರು.
ಸುಳ್ಯ, ಪುತ್ತೂರಿನಿಂದ ಹಾಲನ್ನು ಮಂಗಳೂರಿಗೆ ತಂದು ಸಂಸ್ಕರಣೆ ಮಾಡುವುದರ ಬದಲು ಕೆಎಂಎಫ್ ಸಂಸ್ಥೆಯ ಇನ್ನೊಂದು ಪ್ಲಾಂಟನ್ನು ಪುತ್ತೂರಿನಲ್ಲೇ ಸ್ಥಾಪಿಸಲು ಯೋಜನೆ ಹಾಕಿದ್ದೇವೆ. ಅದಕ್ಕಾಗಿ ಹತ್ತು ಎಕರೆ ಜಾಗ ನೋಡಿದ್ದು ಹಾಲು ಸಂಸ್ಕರಣಾ ಕೇಂದ್ರ ಮಾಡುತ್ತೇವೆ ಎಂದು ಅಶೋಕ್ ರೈ ಹೇಳಿದರು. ಇದಲ್ಲದೆ, ಬೆಂಗಳೂರಿನಲ್ಲಿ ತುಳು ಭವನ ನಿರ್ಮಿಸಲಾಗುವುದು. ಕರಾವಳಿ ಭಾಗದ ಬಹಳಷ್ಟು ಮಂದಿ ಬೆಂಗಳೂರಿನಲ್ಲಿದ್ದಾರೆ. ಇಲ್ಲಿನವರು ತತ್ಕಾಲಕ್ಕೆ ಉಳಿದುಕೊಳ್ಳಲು ತುಳು ಭವನ ಸ್ಥಾಪನೆ ಮಾಡಲಾಗುವುದು. ತುಳು ಭಾಷೆಯನ್ನು ದ್ವಿತೀಯ ರಾಜ್ಯಭಾಷೆಯನ್ನಾಗಿ ಮಾನ್ಯತೆ ಕೊಡಲು ಯಾವುದೇ ಅನುದಾನ ಬೇಕಿಲ್ಲ. ನಮ್ಮವರ ಇಚ್ಛಾಶಕ್ತಿ ತೋರದೆ ಇರುವುದೇ ಸಮಸ್ಯೆ ಆಗಿದ್ದು. ತುಳು ಭಾಷೆಯ ಬಗ್ಗೆ ಮುತುವರ್ಜಿ ವಹಿಸಿದ್ದು, ಇನ್ನು ನಾಲ್ಕು ಇಲಾಖೆಗಳ ಎನ್ಓಸಿ ಬರಬೇಕಿದೆ. ನಾಲ್ಕೈದು ತಿಂಗಳಲ್ಲಿ ತುಳುವನ್ನು ದ್ವಿತೀಯ ಭಾಷೆಯನ್ನಾಗಿ ಮಾಡಿಸುತ್ತೇನೆ ಎಂದು ಹೇಳಿದರು.
ಬಿಜೆಪಿಯವರಿಗೆ ಕಾಂಗ್ರೆಸ್ ಸರಕಾರದ ಗ್ಯಾರಂಟಿ ಯೋಜನೆಗಳನ್ನು ತಡೆದುಕೊಳ್ಳಲು ಆಗುತ್ತಿಲ್ಲ. ಇದಕ್ಕಾಗಿ ಏನೇನು ಇಲ್ಲ ಸಲ್ಲದ ಆರೋಪಗಳನ್ನು ಮಾಡುತ್ತಿದ್ದಾರೆ. ರಾಷ್ಟ್ರೀಯ ಹೆದ್ದಾರಿಯ ಚತುಷ್ಪಥ ರಸ್ತೆಯಿಂದ 15 ಕಿಮೀ ಆಸುಪಾಸಿನ ನಗರಗಳಿಗೆ ಆ ರಸ್ತೆ ವಿಸ್ತರಣೆ ಮಾಡಲು ಅವಕಾಶ ಇದೆ. ಮಾಣಿಯಿಂದ 18 ಕಿಮೀ ದೂರ ಇರುವ ಪುತ್ತೂರಿಗೆ ಚತುಷ್ಪಥ ರಸ್ತೆ ಮಾಡಬೇಕಿದೆ. ಅದಕ್ಕಾಗಿ ಕೇಂದ್ರ ಹೆದ್ದಾರಿ ಇಲಾಖೆಯ ಜೊತೆಗೆ ಪ್ರಸ್ತಾಪ ಕೊಟ್ಟಿದ್ದು, ಅದನ್ನು ಮಾಡಿಸುತ್ತೇನೆ ಎಂದರು.
ಕಲ್ಲಡ್ಕ- ಉಪ್ಪಿನಂಗಡಿ ಹೆದ್ದಾರಿ ದುರವಸ್ಥೆ ಬಗ್ಗೆ ಕೇಳಿದ ಪ್ರಶ್ನೆಗೆ, ಅದನ್ನು ರಾಷ್ಟ್ರೀಯ ಹೆದ್ದಾರಿ ಇಲಾಖೆಯವರು ಮಾಡೋದು. ರಾಜ್ಯ ಸರಕಾರಕ್ಕೆ ಯಾವುದೇ ಹಸ್ತಕ್ಷೇಪ ಮಾಡಲಾಗದು. ಆದರೂ ಹೆದ್ದಾರಿ ಕೆಲಸ ಶೀಘ್ರಗೊಳಿಸಲು ಅಧಿಕಾರಿಗಳಿಗೆ ಒತ್ತಡ ಹೇರಲಾಗಿದೆ. ಇದನ್ನೆಲ್ಲ ಆಯಾ ಭಾಗದ ಸಂಸದರು ಮಾಡಬೇಕು. ಕೇರಳದಲ್ಲಿ ಒಳ್ಳೆಯ ರಸ್ತೆ ಆಗ್ತಾ ಇದೆ, ಅದಕ್ಕಾಗಿ ಅಭಿನಂದಿಸಬೇಕು. ಇಲ್ಲಿನ ಸಂಸದರು ಮುತುವರ್ಜಿ ವಹಿಸಿದರೆ ಹೆದ್ದಾರಿ ದುರವಸ್ಥೆ ಆಗುತ್ತಿರಲಿಲ್ಲ ಎಂದರು