Posted by vidyamaana on 2023-11-07 04:42:13 |
ಪುತ್ತೂರು: ಪುತ್ತೂರಿನ ನಗರದಲ್ಲಿ ತಲವಾರ್ ನಲ್ಲಿ ಕಡಿದು ಕಲ್ಲೇಗ ಟೈಗರ್ಸ್ ನ ಪ್ರಮುಖ ನಾಯಕನನ್ನು ಹತ್ಯೆ ಮಾಡಿದ ಘಟನೆ ಇದೀಗ ನಡೆದಿದೆ.
ಟೈಗರ್ಸ್ ನ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಅವರನ್ನು ಹತ್ಯೆಗೀಡಾದ ಯುವಕ. ಈತ ಪುತ್ತೂರಿನ ನಗರದಲ್ಲಿ ಇದ್ದಾಗ ತಂಡಯೊಂದು ಆಗಮಿಸಿ ಯದ್ವಾತದ್ವ ತಲವಾರ್ ನಲ್ಲಿ ದಾಳಿ ನಡೆಸಿ, ಹತ್ಯೆ ಮಾಡಿದೆ. ಸ್ಥಳಕ್ಕೆ ಆಗಮಿಸಿದ ಪುತ್ತೂರು ನಗರ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.
Posted by Vidyamaana on 2024-05-31 07:57:34 |
ಕುಂದಾಪುರ : ನಾನು ಹಿಜಾಬ್ನ್ನು ಸಮವಸ್ತ್ರ ಆಧಾರಿತವಾಗಿ ನೋಡಿದ್ದೇ ಹೊರತು ಧರ್ಮಾಧಾರಿತವಾಗಿ ಮಾಡಿಲ್ಲ ಎಂದು ಹಿಜಾಬ್ ಪರ ಹೋರಾಟಗಾರ್ತಿ ಅಲಿಯಾ ಅಸ್ಸಾದಿಗೆ ಮಾಜಿ ಶಾಸಕ ರಘುಪತಿ ಭಟ್ ತಿರುಗೇಟು ನೀಡಿದ್ದಾರೆ.ಕುಂದಾಪುರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ಶಾಸಕನಾಗುವ ಮೊದಲು ಆ ಕಾಲೇಜಿನಲ್ಲಿ ವಸ್ತ್ರಸಂಹಿತೆ ಜಾರಿಯಲ್ಲಿತ್ತು.
Posted by Vidyamaana on 2023-07-26 12:59:51 |
ಬೆಂಗಳೂರು: ವ್ಯಾಪಕ ಮಳೆ ಹಿನ್ನೆಲೆಯಲ್ಲಿ ಸೋಮವಾರ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಿಗೆ ಭೇಟಿ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಇಂದು ಮಾತನಾಡಿದ ಸಿಎಂ, ಜುಲೈ 31 ಕ್ಕೆ ವಿವಿಧ ಜಿಲ್ಲೆಗಳ ಪ್ರವಾಸ ಕೈಗೊಂಡು ಮಳೆ ಹಾನಿ ಬಗ್ಗೆ ಪರಿಶೀಲನೆ ನಡೆಸುವುದಾಗಿ ತಿಳಿಸಿದ್ದಾರೆ.
ಮಳೆಯಿಂದ ಹಾನಿಗೊಳಗಾಗಿರುವ ಪ್ರದೇಶಗಳ ಜನರನ್ನು ಭೇಟಿಯಾಗಿ ಅವರ ಕಷ್ಟಗಳನ್ನು ಆಲಿಸಲಾಗುವುದು ಎಂದು ತಿಳಿಸಿರುವ ಸಿದ್ದರಾಮಯ್ಯ, ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿದ್ದು, ಬಿತ್ತನೆ ಚುರುಕಾಗಿ ನಡೆಯುತ್ತಿದೆ. ಕೆಲವೇ ದಿನಗಳಲ್ಲಿ ಶೇಕಡಾ 100 ರಷ್ಟು ಬಿತ್ತನೆಯಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ
Posted by Vidyamaana on 2023-04-20 20:51:39 |
ಪುತ್ತೂರು : ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ ರವರು ಚುನಾವಣಾಧಿಕಾರಿ ಗಿರೀಶ್ ನಂದನ್ ರವರಿಗೆ ನಾಮಪತ್ರ ಸಲ್ಲಿಸಿದರು.
ಈ ವೇಳೆ ಹಾಲಿ ಶಾಸಕ ಸಂಜೀವ ಮಠಂದೂರು, ಕರಾವಳಿ ಪ್ರಾಧಿಕಾರದ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ ಸಹಿತ ಪ್ರಮುಖರು ಉಪಸ್ಥಿತರಿದ್ದರು
ಬೃಹತ್ ಸಂಖ್ಯೆಯ ಕಾರ್ಯಕರ್ತರೊಂದಿಗೆ ಪಾದಯಾತ್ರೆ ಮೂಲಕ ತಾಲೂಕು ಆಡಳಿತ ಸೌಧಕ್ಕೆ ತೆರಳಿ ನಾಮಪತ್ರ ಸಲ್ಲಿಸಲಾಯಿತು.
ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ಚಲನಚಿತ್ರ ನಟಿ ಶೃತಿ, ಸಂಸದ ತೇಜಸ್ವಿ ಸೂರ್ಯ, ಬಿಜೆಪಿ ಜಿಲ್ಲಾಧ್ಯಕ್ಷ ಸಹಿತ ಹಲವಾರು ಮಂದಿ ಕೇಂದ್ರ ಮತ್ತು ರಾಜ್ಯದ ನಾಯಕರು, ಸಾವಿರಾರು ಮಂದಿ ಕಾರ್ಯಕರ್ತರು ಪಾದಯಾತ್ರೆಯಲ್ಲಿ ಭಾಗವಹಿಸಿದ್ದರು.
ಗೊಂಬೆ ಕುಣಿತ, ಚೆಂಡೆ, ಶಲ್ಯ ಧರಿಸಿದ ಕಾರ್ಯಕರ್ತರು, ಮಹಿಳೆಯರು, ನಾಸಿಕ್ ಬ್ಯಾಂಡ್ ವಿಶೇಷ ಆಕರ್ಷಣೆಯಾಗಿತ್ತು..
Posted by Vidyamaana on 2023-10-29 15:09:40 |
ಪುತ್ತೂರು: ಪರಿಶಿಷ್ಡ ಪಂಗಡದ ಕುಟುಂಬಗಳ ಅಭಿವೃದ್ದಿಗಾಗಿ ಸರಕಾರ ಅನೇಕ ಯೋಜನೆಗಳನ್ನು ಜಾರಿ ಮಾಡಿದ್ದು ಮಾಹಿತಿ ಕೊರತೆಯ ಕಾರಣಕ್ಕೆ ಹಲವರು ಸೌಲಭ್ಯ ವಂಚಿತರಾಗುತ್ತಿದ್ದಾರೆ ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಹೇಳಿದರು.
ಪುತ್ತೂರು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಬ್ಲಾಕ್ ಎಸ್ ಟಿ ಘಟಕದ ಮಾಸಿಕ ಸಭೆಯಲ್ಲಿ ಮಾತನಾಡಿದರು.
ದಲಿತ ಕುಟುಂಬಗಳನ್ನು ಮೇಲಕ್ಕೆತ್ತಲು ಕಾಂಗ್ರೆಸ್ ಸರಕಾರ ಸ್ವಾತಂತ್ರ್ಯ ನಂತರ ಹಲವಾರು ಯೋಜನೆಗಳನ್ನು ಜಾರಿಗೆ ತರುವ ಮೂಲಕ ಅವರನ್ನು ಸಮಾಜದ ಮುಖ್ಯ ವಾಹಿನಿಯಲ್ಲಿ ತರುವ ಕೆಲಸವನ್ನು ಮಾಡಿದೆ. ಪ್ರತೀಯೊಂದು ಕುಟುಂಬವೂ ಯೋಜನೆಯ ಲಾಭವನ್ನು ಪಡೆದುಕೊಳ್ಳಬೇಕು. ಮಾಹಿತಿ ಕೊರತೆ ಇದ್ದವರು ಶಾಸಕರ ಕಚೇರಿಯನ್ನು ಸಂಪರ್ಕಿಸಿ ಸಹಾಯ ಪಡೆದುಕೊಳ್ಳಬಹುದು ಎಂದು ಹೇಳಿದರು.
ಸಭೆಯಲ್ಲಿಮಾತನಾಡಿದ ಎಸ್ ಟಿ ಘಟಕದ ಬ್ಲಾಕ್ ಅಧ್ಯಕ್ಷ ಮಹಾಲಿಂಗ ನಾಯ್ಕರವರು ಮಾತನಾಡಿ ಎಸ್ ಟಿ ಕುಟುಂಬದ ಮತ್ತು ಕನ್ವಶರ್ನ್ ಸಮಸ್ಯೆಯ ಬಗ್ಗೆ ಸಭೆಯಲಿ ವಿವರಿಸಿದರು. ಬ್ಲಾಕ್ ಉಪಾಧ್ಯಕ್ಷರಾದ ಮೌರಿಶ್ ಮಸ್ಕರೇನಸ್ ರವರು ವಾಲ್ಮೀಕಿ ಜಯಂತಿ ಬಗ್ಗೆ ಮಾತನಾಡಿದರು.
.ಕಾರ್ಯಕ್ತಮದಲ್ಲಿ ಬ್ಲಾಕ್ ಪ್ರಧಾನ ಕಾರ್ಯದರ್ಶಿ ಅಮಲರಾಮಚಂದ್ರ, ಪಾಣಾಜೆ ಗ್ರಾಪಂ ಸದಸ್ಯೆ ವಿಮಲಾ, ಎಸ್ ಟಿ ಘಟಕದ ಉಪಾಧ್ಯಕ್ಷ ಸದಾನಂದ ನಾಯ್ಕ, ರಾಮನಾಯ್ಕ, ಯು ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಪ್ರಸಾದ್ ಪಾಣಾಜೆ, ಗ್ರಾಪಂ ಸದಸ್ಯ ಮಹಾಲಿಂಗ ನಾಯ್ಕ, ಸುಬ್ರಾಯ ನಾಯ್ಕ ನಿಡ್ಪಳ್ಳಿ,ಐತಪ್ಪ ನಾಯ್ಕ ನಿಡ್ಪಳ್ಳಿ, ನಾಗೇಶ್ ನಾಯ್ಕ ನಿಡ್ಪಳ್ಳಿ, ಸೀತಾರಾಮ ನಾಯ್ಕ, ಗೋಪಾಲ ನಾಯ್ಕ ಪಡುಮಲೆ, ಮೋಹಿನಿ ನರಿಮೊಗರು, ಕರುಣಾಕರ ಪಾಂಗಲಾಯಿ, ಗೋವಿಂದ ನಾಯ್ಕ ಮೊಟ್ಟೆತ್ತಡ್ಕ, ಸವಿತಾ ದೇವಸ್ಯ,ಚಂದ್ರಾವತಿ ಒಳಮೊಗ್ರು,ಮಾದವ ನಾಯ್ಕ ಬೊಳಿಂಜ, ,ಶಶಿಕಲಾ ಬೊಳಿಂಜ,
ಗಿರಿಧರ್ ಗೌಡ, ಯೋಗೀಶ್ ಸಾಮಾನಿ, ರಾಘವ ಖಂಡಿಗ ಮತ್ತಿತರರು ಉಪಸ್ಥಿತರಿದ್ದರು.
ಸಂತೋಷ್ ಭಂಡಾರಿ ಚಿಲ್ಮೆತ್ತಾರು ಸ್ವಾಗತಿಸಿ ವಂದಿಸಿದರು.
ಕಾರ್ಯಕ್ರಮದಲ್ಲಿ ಘಟಕದ ವತಿಯಿಂದ ಶಾಸಕರನ್ನು ಸನ್ಮಾನಿಸಲಾಯಿತು
Posted by Vidyamaana on 2023-04-25 12:40:04 |
ಚಿಕ್ಕಮಗಳೂರು: ಚುನಾವಣೆ ನಡೆಯುವ ಮೊದಲೇ ರಾಜಕೀಯ ಪಕ್ಷಗಳಲ್ಲಿ ಮುಂದಿನ ಸಿಎಂ ಚರ್ಚೆ ಜೋರಾಗಿದೆ. ಅಧಿಕಾರಕ್ಕೇರುವ ಮುನ್ನವೇ ಸಿಎಂ ಕೂಗು ಕೇಳಿ ಬರುತ್ತಿದೆ. ಮಾಜಿ ಸಚಿವ ಕೆ.ಎಸ್. ಈಶ್ವರಪ್ಪನವರು ಸಿಟಿ ರವಿ ಅವರು ಮುಂದಿನ ಸಿಎಂ ಆಗಲಿ ಎಂದು ಹೇಳಿದ್ದಾರೆ.
ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದ ನಿಡಘಟ್ಟದಲ್ಲಿ ನಡೆದ, ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಈ ಚುನಾವಣೆಯಲ್ಲಿ ಸಿಟಿ ರವಿ ಅವರನ್ನು ದೊಡ್ಡ ಅಂತರದಿಂದ ಗೆಲ್ಲಿಸಿ ಅವರನ್ನು ಕರ್ನಾಟಕದ ಮುಂದಿನ ಸಿಎಂಯನ್ನಾಗಿ ಮಾಡಬೇಕೆಂದಿದ್ದಾರೆ.ಕಾಂಗ್ರೆಸ್ ನಲ್ಲಿ ಓಡಾಡುತ್ತಿದ್ದ ಸಿಎಂ ಕೂಗು ಇದೀಗ ಬಿಜೆಪಿಯಲ್ಲೂ ಕೇಳಿ ಬಂದಿದೆ. ಬಹಿರಂಗ ಸಭೆಯಲ್ಲೇ ಸಿ.ಟಿ.ರವಿ ಪರ ಈಶ್ವರಪ್ಪ ಅವರು ಒಲವು ತೋರಿದ್ದು, ಇದೀಗ ಈ ಸಂಬಂಧಿತ ವಿಡಿಯೋ ಸದ್ದು ಮಾಡುತ್ತಿದೆ.ನಿನ್ನೆಯಷ್ಟೇ ಸಿಟಿ ರವಿ ಅವರು ಮೈಸೂರಿನಲ್ಲಿ ಮಾತನಾಡುವ ವೇಳೆ ಸಿಎಂ ಆಗುವ ಇಂಗಿತವನ್ನು ವ್ಯಕ್ತಪಡಿಸಿದ್ದರು.ಈಶ್ವರಪ್ಪ ಅವರ ಈ ಹೇಳಿಕೆ ರಾಜ್ಯ ರಾಜಕಾರಣದಲ್ಲಿ ಸಾಕಷ್ಟು ಮಹತ್ವ ಪಡೆದುಕೊಂಡಿದೆ
Posted by Vidyamaana on 2023-09-17 20:06:36 |
ಸುರತ್ಕಲ್: ಖಾಸಗಿ ಎಕ್ಸ್ ಪ್ರೆಸ್ ಬಸ್ಸನ ಚಾಲಕ ಅತಿವೇಗ ಮತ್ತು ಅಜಾಗರೂಕತೆಯಿಂದ ಚಲಾಯಿಸಿ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಗಂಭೀರ ಗಾಯಗೊಂಡಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಹೊಸಬೆಟ್ಟು ಎಂಬಲ್ಲಿ ರವಿವಾರ ನಡೆದಿದೆ.
ಗಾಯಗೊಂಡವರನ್ನು ಹಳೆಯಂಗಡಿ ಇಂದಿರಾ ನಗರ ನಿವಾಸಿ ಪುತ್ತುಮೋನು ಎಂಬವರಮಗ ಮುಹಮ್ಮದ್ ಸಾಹಿಲ್ ಮತ್ತು ಪಕ್ಷಿಕೆರೆ ಹೊಸಕಾಡು ನಿವಾಸಿ ಇಮ್ಮಿಯಾಝ್ ಎಂಬವರ ಮಗ ಅರಾಫತ್ ಎಂದು ತಿಳಿದು ಬಂದಿದೆ.
ಘಟನೆಯ ವಿವರ
ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಹೊಸಬೆಟ್ಟು ಎಂಬಲ್ಲಿ ಮಂಗಳೂರಿಂದ ಉಡುಪಿ ಕಡೆಗೆ ಬರುತ್ತಿದ್ದ ಎಕ್ಸ್ ಪ್ರೆಸ್ ಬಸ್ ವಿರುದ್ಧ ದಿಕ್ಕಿನಲ್ಲಿ ಸಂಚರಿಸಿ ರಸ್ತೆ ಬದಿ ಬೈಕ್ ನೊಂದಿಗೆ ನಿಂತಿದ್ದ ಯುವಕರಿಗೆ ಡಿಕ್ಕಿ
ಹೊಡೆಯಿತೆನ್ನಲಾಗಿದೆ.
ಘಟನೆಯಲ್ಲಿ ಇಬ್ಬರೂ ಗಂಭೀರವಾಗಿ ಗಾಯಗೊಂಡು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಇದೇ ಸಂಸ್ಥೆಗೆ ಸೇರಿದ ಬಸ್ಸಿನ ಚಾಲಕ ನಿರ್ವಾಹಕ ಇತ್ತೀಚಿಗೆ ಹೊಸಬೆಟ್ಟು ಸಮೀಪ ಬೈಕ್ ಸವಾರರ ಜೊತೆಗೆ ಹೊಡೆದಾಟಕ್ಕಿಳಿದಿದ್ದು ವೈರಲ್ ಆಗಿತ್ತು. ಪೊಲೀಸ್ ಇಲಾಖೆ ಈ ಬಸ್ಸಿನ ಸಿಬ್ಬಂದಿಯ ಆಟಾಟೋಪ ನಿಲ್ಲಿಸಲು ವಿಫಲವಾಗಿದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.