ಕಾಲೇಜು ವಿದ್ಯಾರ್ಥಿಯಿಂದ ಸೆಕ್ಯೂರಿಟಿ ಗಾರ್ಡ್ ಬರ್ಬರ ಹತ್ಯೆ

ಸುದ್ದಿಗಳು News

Posted by vidyamaana on 2024-07-03 18:55:10 | Last Updated by Vidyamaana on 2024-07-03 18:55:10

Share: | | | | |


ಕಾಲೇಜು ವಿದ್ಯಾರ್ಥಿಯಿಂದ ಸೆಕ್ಯೂರಿಟಿ ಗಾರ್ಡ್ ಬರ್ಬರ ಹತ್ಯೆ

ಬೆಂಗಳೂರು : ಕಾಲೇಜು ವಿದ್ಯಾರ್ಥಿಯೊಬ್ಬ ಸೆಕ್ಯೂರಿಟಿ ಗಾರ್ಡ್ ಓರ್ವರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ಅಮೃತಹಳ್ಳಿಯಲ್ಲಿ ನಡೆದಿದೆ.

ಅಮೃತಹಳ್ಳಿಯ ಸಿಂಧಿ ಕಾಲೇಜಿನಲ್ಲಿ ಈ ಘಟನೆ ನಡೆದಿದ್ದು, ಜೈಕಿಸನ್ ರಾಯ್ ಕೊಲೆಯಾದ ಸೆಕ್ಯೂರಿಟಿ ಗಾರ್ಡ್. ಭಾರ್ಗವ್ ಎಂಬ ವಿದ್ಯಾರ್ಥಿ ಚಾಕುವಿನಿಂದ ಇರಿದು ಸೆಕ್ಯೂರಿಟಿ ಗಾರ್ಡ್ ನನ್ನು ಹತ್ಯೆ ಮಾಡಿದ್ದಾನೆ.

ಸ್ಥಳದಲ್ಲೇ ಸೆಕ್ಯೂರಿಟಿ ಗಾರ್ಡ್ ಮೃತಪಟ್ಟಿದ್ದಾರೆ.

ಕೊಲೆಗೆ ಕಾರಣವೇನು?


ಇಂದು ಸಿಂಧಿ ಕಾಲೇಜಿನಲ್ಲಿ ಕಾರ್ಯಕ್ರಮ ಇತ್ತು. ಈ ವೇಳೆ ಆರೋಪಿ ವಿದ್ಯಾರ್ಥಿ ಭಾರ್ಗವ್, ಕಾಲೇಜಿಗೆ ಕುಡಿದು ಬಂದಿದ್ದಾನೆ. ಈ ಹಿನ್ನಲೆ ಸೆಕ್ಯೂರಿಟಿಗಾರ್ಡ್, ಭಾರ್ಗವ್​​​ನನ್ನು ಕಾಲೇಜಿನ ಒಳಗೆ ಬಿಡಲು ನಿರಾಕರಿಸಿದ್ದಾರೆ. ಇದರಿಂದ ಸೆಕ್ಯೂರಿಟಿ ಗಾರ್ಡ್​ ಹಾಗೂ ವಿದ್ಯಾರ್ಥಿ ಮಧ್ಯೆ ಗಲಾಟೆ ಆಗಿದೆ. ಬಳಿಕ ಅಂಗಡಿಗೆ ಹೋಗಿ ಚಾಕು ಖರೀದಿಸಿದ್ದ ಭಾರ್ಗವ್, ನೇರವಾಗಿ ಬಂದು ಸೆಕ್ಯೂರಿಟಿ ಗಾರ್ಡ್ ಎದೆಗೆ ಐದಾರು ಬಾರಿ ಇರಿದಿದ್ದಾನೆ. ಅದು ಹೃದಯಕ್ಕೆ ಹೊಕ್ಕು, ಸ್ಥಳದಲ್ಲೇ ಕೊನೆಯುಸಿರೆಳೆದಿದ್ದ.

 Share: | | | | |


ಪುತ್ತೂರು : ಶಾಸಕರ ಇಂದಿನ ಕಾರ್ಯಕ್ರಮ ಸೆ 12

Posted by Vidyamaana on 2023-09-12 07:19:35 |

Share: | | | | |


ಪುತ್ತೂರು : ಶಾಸಕರ ಇಂದಿನ ಕಾರ್ಯಕ್ರಮ ಸೆ 12

ಪುತ್ತೂರು ಶಾಸಕ ಅಶೋಕ್ ಕುಮಾರ್ ಅವರು ಸೆ 12 ರಂದು


ಬೆಳಿಗ್ಗೆ 10.30 ಕ್ಕೆ ವಿಟ್ಲ ಶಾಲೆಯಲ್ಲಿ ಕೊಠಡಿ ಉದ್ಘಾಟನೆ



12.ಗಂಟೆಗೆ ಉಪ್ಪಿನಂಗಡಿ ಸರಕಾರಿ ಆರೋಗ್ಯ ಕೇಂದ್ರದಲ್ಲಿ ಸಭೆ


3 ಗಂಟೆಗೆ ಮೇನಾಲ ಶಾಲೆಯಲ್ಲಿ ಕೊಠಡಿ ಉದ್ಘಾಟನೆ


 ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ

ಬಂಟ್ವಾಳ : ವಗ್ಗ ಮನೆಯವರಿಗೆ ಬೆದರಿಸಿ ದರೋಡೆಗೈದ ಪ್ರಕರಣ

Posted by Vidyamaana on 2024-01-22 21:54:00 |

Share: | | | | |


ಬಂಟ್ವಾಳ : ವಗ್ಗ ಮನೆಯವರಿಗೆ ಬೆದರಿಸಿ ದರೋಡೆಗೈದ ಪ್ರಕರಣ

ಬಂಟ್ವಾಳ: ದರೋಡೆಕೋರರ ತಂಡವೊಂದು ಮಾರಾಕಾಸ್ತ್ರಗಳೊಂದಿಗೆ ನುಗ್ಗಿ ಮನೆಯವರನ್ನು ಬೆದರಿಸಿ ಸುಮಾರು ರೂ.3,15,000 ಮೌಲ್ಯದ ಚಿನ್ನಾಭರಣಗಳನ್ನು ದರೋಡೆ ಮಾಡಿ ಪರಾರಿಯಾಗಿದ್ದ ಘಟನೆ ದ.ಕ.ಜಿಲ್ಲೆಯ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ವಗ್ರ ಸಮೀಪದ ಮೇನಾಡು ಎಂಬಲ್ಲಿ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ಏಳು ಜನ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.


ಬಂಟ್ವಾಳದ ಮರಿಟಾ ಸಿಂಥಿಯಾ ಪಿಂಟೋ ಎಂಬವರ ವಾಸದ ಮನೆಗೆ ದಿನಾಂಕ 11-01-2024 ರಂದು ಮುಂಜಾನೆ 6-15 ಗಂಟೆಗೆ ದರೋಡೆಕೋರರ ತಂಡವೊಂದು ಮಾರಾಕಾಸ್ತ್ರಗಳೊಂದಿಗೆ ನುಗ್ಗಿ ಮನೆಯವರನ್ನು ಬೆದರಿಸಿ ಸುಮಾರು ರೂ.3,15,000 ಮೌಲ್ಯದ ಚಿನ್ನಾಭರಣಗಳನ್ನು ದರೋಡೆ ಮಾಡಿ ಪರಾರಿಯಾಗಿದ್ದರು. ಈ ಕುರಿತಂತೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ๒.:03/2024 : 395, 397, 411 ... ರಂತೆ ಪುಕರಣ ದಾಖಲಾಗಿತ್ತು.ಯಾವುದೇ ಸಣ್ಣ ಸುಳಿವುಗಳೇ ಇಲ್ಲದ ಈ ದರೋಡೆ ಪ್ರಕರಣವು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಗೆ ಒಂದು ಸವಾಲು ಆಗಿತ್ತು. ಪ್ರಕರಣದ ಗಂಭೀರತೆಯನ್ನು ಮನಗಂಡು ಶ್ರೀ ರಿಷ್ಯಂತ್, ಐಪಿಎಸ್. ಪೊಲೀಸ್ ಅಧೀಕ್ಷಕರು, ದ.ಕ.ಜಿಲ್ಲೆ ರವರು ಶ್ರೀ ಧರ್ಮಪ್ಪ, ಮತ್ತು ಶ್ರೀ ರಾಜೇಂದ್ರ, ಹೆಚ್ಚುವರಿ ಪೊಲೀಸ್ ಅಧೀಕ್ಷಕರವರುಗಳ ಸಹಭಾಗಿತ್ವದಲ್ಲಿ, ಶ್ರೀ. ಎಸ್. ವಿಜಯ ಪ್ರಸಾದ್, ಡಿ.ವೈ.ಎಸ್.ಪಿ. ಬಂಟ್ವಾಳ ರವರ ನೇತೃತ್ವದಲ್ಲಿ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ಪೊಲೀಸ್‌ ನಿರೀಕ್ಷಕರಾದ ಶ್ರೀ ಶಿವಕುಮಾರ ಬಿ, ಶ್ರೀ ನಂದಕುಮಾ‌ರ್, ಪಿ.ಎಸ್.ಐ. ಪುಂಜಾಲಕಟ್ಟೆ, ಶ್ರೀ ಹರೀಶ ಎಂ.ಆರ್. ಪಿ.ಎಸ್.ಐ. ಬಂಟ್ವಾಳ ಗ್ರಾಮಾಂತರ ಠಾಣೆರವರ 3 ವಿಶೇಷ ಪತ್ತೆ ತಂಡಗಳನ್ನು ರಚಿಸಿ ಸದ್ರಿ ತಂಡಕ್ಕೆ ದಕ್ಷಿಣ ಕನ್ನಡ ಜಿಲ್ಲೆಯ, ನುರಿತ ಅಪರಾಧ ವಿಭಾಗದ ಸಿಬ್ಬಂದಿಗಳಾದ ಎ.ಎಸ್.ಐ. ಗಿರೀಶ್, ಹೆಚ್.ಸಿ. ಗಳಾದ ಸುಜು, ರಾಧಾಕೃಷ್ಣ, ಉದಯ ರೈ, ಅದ್ರಾಮ, ಪ್ರವೀಣ್ ರೈ, ಪ್ರವೀಣ್, ಸಂದೀಪ್, ರಾಹುಲ್, ಇರ್ಷಾದ್, ರಾಜೇಶ್, ಹರಿಶ್ಚಂದ್ರ, ಪಿ.ಸಿ.ಗಳಾದ ಪುನೀತ್, ರಮ್ಯಾನ್, ಯೋಗೇಶ್ ಡಿ.ಎಲ್, ಕುಮಾರ್ ಹೆಚ್. ಕೆ., ವಿನಾಯಕ ಬಾರ್ಕಿ, ಜಗದೀಶ ಅತ್ತಾಜೆ, ಜಮೀ‌ರ್ ಕಲಾರಿ, ಎ.ಹೆಚ್.ಸಿ.ಗಳಾದ ಕುಮಾ‌ರ್, ಮಹಾಂತೇಶ್‌, ಜಿಲ್ಲಾ ಪೊಲೀಸ್ ಕಚೇರಿಯ ಗಣಕಯಂತ್ರ ವಿಭಾಗದ ದಿವಾಕರ್, ಸಂಪತ್ ರವರನ್ನು ನೇಮಕ ಮಾಡಿದ್ದರು.ಇಲಾಖಾ ಮೇಲಾಧಿಕಾರಿಗಳ ಅತ್ಯಂತ ಅನುಭವಿ ಹಾಗು ಸಮಯೋಚಿತ ಮಾರ್ಗದರ್ಶನ, ಸಲಹೆ ಸೂಚನೆ ಮತ್ತು ನಿರಂತರ ನಿಗಾವಣೆಯಲ್ಲಿ ಸದ್ರಿ ವಿಶೇಷ ಪತ್ತೆ ತಂಡವು ತನ್ನ ನಿರಂತರ ಹಾಗು ಶ್ರಮಭರಿತ ಪ್ರಯತ್ನದಿಂದ ಸದ್ರಿ ದರೋಡೆ ಪ್ರಕರಣವನ್ನು ಭೇಧಿಸಿ ದರೋಡೆಕೋರರನ್ನು ಬಂಧಿಸಿ ದರೋಡೆಗೊಳಗಾದ ರೂ.3,15,000 ಮೌಲ್ಯದ ಚಿನ್ನಾಭರಣ ಹಾಗು ದರೋಡೆಗೆ ಬಳಸಿದ ಒಂದು ಇನ್ನೋವಾ ಕಾರು ಅಂದಾಜು ಮೌಲ್ಯ ರೂ.8 ಲಕ್ಷ ಹಾಗು ಟಾಟಾ ಇಂಡಿಕಾ ಕಾರು ಅಂದಾಜು ಮೌಲ್ಯ ರೂ.2 ಲಕ್ಷ ಇವುಗಳನ್ನು ಸ್ವಾಧೀನಪಡಿಸಿಕೊಳ್ಳುವಲ್ಲಿ ಯಶಸ್ವಿ ಆಗಿರುತ್ತಾರೆ.


ದರೋಡೆಕೋರರನ್ನು ಕಾರ್ಕಳ ತಾಲೂಕಿನ ಮಾಳ ಗ್ರಾಮದ ಸುರೇಶ ನಾಯ್ಕ ಅವರ ಮಗ ಗಣೇಶ ನಾಯ್ಕ (26) ದಿನೇಶ್ ನಾಯ್ಕ (22), ಮಂಗಳೂರು ತಾಲೂಕು, ಐಕಳ ಗ್ರಾಮದ ಜಯರಾಜ್ ಶೆಟ್ಟಿ ಅವರ ಮಗ ಸಾಗರ ಶೆಟ್ಟಿ (21), ಕಡಬ ತಾಲೂಕು, ಬೆಳಂದೂ ಗ್ರಾಮದ, ವಿನ್ಸಿ ಲ್ಯಾನ್ಸಿ ಪಿಂಟೋ ಅವರ ಮಗ ರಾಕೇಶ್ ಎಲ್. ಪಿಂಟೋ (29), ವಾಸು ಸಾಲ್ಯಾನ್ ಅವರ ಮಗ ಪ್ರವೀಣ್ (36), ಅಣ್ಣಿ ಪೂಜಾರಿ ಅವರ ಮಗ ಸುಧೀರ್ (29) ಎಂದು ಗುರುತಿಸಲಾಗಿದೆ.ಇನ್ನು ದರೋಡೆಗೈದ ಚಿನ್ನಾಭರಣವನ್ನು ಸ್ವೀಕರಿಸಿದಾತ


ಮೂಲತ: ಬಂಟ್ವಾಳ ತಾಲೂಕಿನ, ಇರಾ ಗ್ರಾಮದವನಾದ ಪ್ರಸ್ತುತ ಗೌರಿ ಕಾಲುವೆ, ಚಿಕ್ಕಮಗಳೂರು ಜಿಲ್ಲೆ ವಾಸಿ ಮಹಮ್ಮದ್ ಹನೀಫ್ (49). ಸದ್ರಿ ಆರೋಪಿಗಳ ಪೈಕಿ ಗಣೇಶ ನಾಯ್ಕ ಈತನು 2023ನೇ ಸಾಲಿನಲ್ಲಿ ಮಂಗಳೂರು 

ನಗರ ವ್ಯಾಪ್ತಿಯ ಮುಲ್ಕಿ, ಐಕಳ ಹರೀಶ್ ಶೆಟ್ಟಿರವರ ಮನೆಯಿಂದ ಅಪಾರ ಮೊತ್ತದ ನಗದು, ಚಿನ್ನಾಭರಣ, ವಜ್ರ ಕಳವು ಮಾಡಿದ ಮುಖ್ಯ ಆರೋಪಿಯಾಗಿದ್ದು, ಉಳಿದಂತೆ 

ಸೀತಾರಾಮ, ಪ್ರವೀಣ್, ಸುಧೀರ್ ಹಾಗು ಮಹಮ್ಮದ್ ಹನೀಫ್ ರವರ ವಿರುದ್ಧ ದ.ಕ.ಜಿಲ್ಲೆ ಹಾಗು ಇನ್ನಿತರ ಜಿಲ್ಲೆಗಳಲ್ಲಿ ವಿವಿಧ ಪ್ರಕರಣಗಳು ದಾಖಲಾಗಿರುವ ಬಗ್ಗೆ ತನಿಖೆಯಿಂದ ತಿಳಿದು ಬಂದಿರುತ್ತದೆ.


ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರ ಈ ಪತ್ತೆ ಕಾರ್ಯಕ್ಕೆ ಇಲಾಖಾ ಮೇಲಾಧಿಕಾರಿಗಳು ಮೆಚ್ಚುಗೆಯನ್ನು ಸೂಚಿಸಿ ಬಹುಮಾನವನ್ನು ಘೋಷಿಸಿರುತ್ತಾರೆ ಹಾಗು ಈ ಬಗ್ಗೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಪ್ರಶಂಸೆಗೆ ಪಾತ್ರವಾಗಿರುತ್ತದೆ

ಕಾಲೇಜು ವಿದ್ಯಾರ್ಥಿಯಿಂದ ಸೆಕ್ಯೂರಿಟಿ ಗಾರ್ಡ್ ಬರ್ಬರ ಹತ್ಯೆ

Posted by Vidyamaana on 2024-07-03 18:55:10 |

Share: | | | | |


ಕಾಲೇಜು ವಿದ್ಯಾರ್ಥಿಯಿಂದ ಸೆಕ್ಯೂರಿಟಿ ಗಾರ್ಡ್ ಬರ್ಬರ ಹತ್ಯೆ

ಬೆಂಗಳೂರು : ಕಾಲೇಜು ವಿದ್ಯಾರ್ಥಿಯೊಬ್ಬ ಸೆಕ್ಯೂರಿಟಿ ಗಾರ್ಡ್ ಓರ್ವರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ಅಮೃತಹಳ್ಳಿಯಲ್ಲಿ ನಡೆದಿದೆ.

ಅಮೃತಹಳ್ಳಿಯ ಸಿಂಧಿ ಕಾಲೇಜಿನಲ್ಲಿ ಈ ಘಟನೆ ನಡೆದಿದ್ದು, ಜೈಕಿಸನ್ ರಾಯ್ ಕೊಲೆಯಾದ ಸೆಕ್ಯೂರಿಟಿ ಗಾರ್ಡ್. ಭಾರ್ಗವ್ ಎಂಬ ವಿದ್ಯಾರ್ಥಿ ಚಾಕುವಿನಿಂದ ಇರಿದು ಸೆಕ್ಯೂರಿಟಿ ಗಾರ್ಡ್ ನನ್ನು ಹತ್ಯೆ ಮಾಡಿದ್ದಾನೆ.

ಬಾಲಕನೊಂದಿಗೆ ಲವ್ ! 16 ವರ್ಷದ ಅಪ್ರಾಪ್ತನೊಂದಿಗೆ 28 ವರ್ಷದ ವಿವಾಹಿತ ಮಹಿಳೆ ಎಸ್ಕೆಪ್!

Posted by Vidyamaana on 2024-06-19 13:46:52 |

Share: | | | | |


ಬಾಲಕನೊಂದಿಗೆ ಲವ್ ! 16 ವರ್ಷದ ಅಪ್ರಾಪ್ತನೊಂದಿಗೆ 28 ವರ್ಷದ ವಿವಾಹಿತ ಮಹಿಳೆ ಎಸ್ಕೆಪ್!

ವಿಜಯಪುರ: 16ವರ್ಷದ ಬಾಲಕನೊಂದಿಗೆ 28ವರ್ಷದ ವಿವಾಹಿತ ಮಹಿಳೆ ಎಸ್ಕೇಪ್‌ ಆಗಿರುವ ಘಟನೆ ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿಯಲ್ಲಿ ತಡವಾಗಿ ಬೆಳಕಿಗೆ ಬಂದಿದೆ. 4ವರ್ಷದ ಮಗುವಿನೊಂದಿಗೆ ಅಪ್ರಾಪ್ತ ಬಾಲಕನೊಂದಿಗೆ ವಿವಾಹಿತ ಮಹಿಳೆ ಎಸ್ಕೇಪ್ ಆಗಿದ್ದು, ವಿವಾಹಿತ ಮಹಿಳೆ ನನ್ನ ಮಗನನ್ನು ಅಪರಹಿಸಿಕೊಂಡು ಹೋಗಿದ್ದಾಳೆ ಎಂದು ತಾಯಿ ಅಕ್ಕಮಹಾದೇವಿ ಆರೋಪ ಮಾಡಿದ್ದಾರೆ.

ಪುತ್ತೂರ್ದ ಪಿಲಿ ಯ ಊದು ಪೂಜೆ ಡೇಟ್ ಇಲ್ಲಿದೆ ನೋಡಿ!

Posted by Vidyamaana on 2023-10-15 08:24:18 |

Share: | | | | |


ಪುತ್ತೂರ್ದ ಪಿಲಿ ಯ ಊದು ಪೂಜೆ ಡೇಟ್ ಇಲ್ಲಿದೆ ನೋಡಿ!

ಪುತ್ತೂರು: ಪಿಲಿ ರಾಧಣ್ಣ ಮತ್ತು ಬಳಗದ ಪುತ್ತೂರ್ದ ಪಿಲಿ ಇದರ ಊದು ಪೂಜೆ ಕಾರ್ಯಕ್ರಮ ಅ. 23ರಂದು ಸಂಜೆ 7:30ಕ್ಕೆ ಕಿಲ್ಲೆ ಮೈದಾನದಲ್ಲಿ ನಡೆಯಲಿದೆ.

ಪಿಲಿ ರಾಧಣ್ಣ ಮತ್ತು ಬಳಗದ 47ನೇ ವರ್ಷದ ಹುಲಿ ಕುಣಿತ ಕಾರ್ಯಕ್ರಮವು ಅ. 24 ರಂದು ಬೆಳಗ್ಗೆ 10 ಗಂಟೆಯಿಂದ ಹಲವು ಕಡೆಗಳಲ್ಲಿ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

ಸುಮಾರು 47 ವರುಷಗಳಿಂದ ಹುಲಿ ವೇಷ ಹಾಕಿ ಜನರನ್ನು ಮನರಂಜಿಸುತ್ತಿರುವ ಪಿಲಿ ರಾಧಣ್ಣ ಮತ್ತು ಬಳಗವು ಪುತ್ತೂರು ಮಾತ್ರವಲ್ಲದೇ ಜಿಲ್ಲೆಯ ಇನ್ನೂ ಹಲವು ಕಡೆಗಳಲ್ಲಿ ಅಭಿಮಾನಿಗಳನ್ನು ಹೊಂದಿದ್ದಾರೆ.

ಜ. 20 ಮತ್ತು 21 ಸವಣೂರಿನಲ್ಲಿ ಜಿಲ್ಲಾ ಯುವ ಜನಮೇಳ

Posted by Vidyamaana on 2024-01-16 09:30:37 |

Share: | | | | |


ಜ. 20 ಮತ್ತು 21 ಸವಣೂರಿನಲ್ಲಿ ಜಿಲ್ಲಾ ಯುವ ಜನಮೇಳ

ಪುತ್ತೂರು : ಸವಣೂರಿನಲ್ಲಿ   ಜ. 20 ಮತ್ತು‌ 21 ರಂದು ಅದ್ದೂರಿಯಾಗಿ  ನಡೆಯಲಿರುವ ದ.ಕ.ಜಿಲ್ಲಾ ಮಟ್ಟದ ಯುವಜನ ಮೇಳ       ನಡೆಯಲಿದ್ದು, ಇದರ ಸಿದ್ಧತೆ ಮತ್ತು ಕಾರ್ಯಕ್ರಮದ ಬಗ್ಗೆ ಈ ತನಕ ನಡೆದ ಎಲ್ಲಾ ವಿವರಗಳನ್ನು  ಸಂಸದರಾದ ನಳಿನ್ ಕುಮಾರ್ ಕಟೀಲ್ ರವರಿಗೆ ದ.ಕ.ಜಿಲ್ಲಾ ಯುವ ಜನ ಒಕ್ಕೂಟದ ಅಧ್ಯಕ್ಷ ಸುರೇಶ್ ರೈ ಸೂಡಿಮುಳ್ಳುರವರು ವಿವರಿಸಿದರು.

ಪಂಜ ಸಮೀಪದ ಬಲ್ಪದಲ್ಲಿ ಜರಗಿದ ಕಾರ್ಯಕ್ರಮವೊಂದರಲ್ಲಿ ಸಂಸದರನ್ನು ಭೇಟಿಯಾಗಿ ಕಾರ್ಯಕ್ರಮ ಅತ್ಯಂತ ಯಶಸ್ವಿಯಾಗಿ ನಡೆಯುವಲ್ಲಿ ಸಂಸದರ ಪೂರ್ಣ ಸಹಕಾರವನ್ನು    ಸುರೇಶ್ ರೈ ರವರು ಕೋರಿದರು. ಈ ಬಗ್ಗೆ  ಮಾತನಾಡಿದ ನಳಿನ್ ಕುಮಾರ್ ಕಟೀಲ್ ರವರು‌ ಸವಣೂರಿನ ನಡೆಯುವ ಜಿಲ್ಲಾ ಮಟ್ಟದ ಯುವ ಜನ ಮೇಳ ಯುವ ಪ್ರತಿಭೆಗಳ ಪ್ರದರ್ಶನಕ್ಕೆ ವೇದಿಕೆಯಾಗಿದೆ. ಈ ಕಾರ್ಯಕ್ರಮ  ‌ ಮಾದರಿ ಕಾರ್ಯಕ್ರಮವಾಗಿ ಹೆಸರನ್ನು ತರಲಿ  ಎಂದು ಹಾರೈಸಿ, ಕಾರ್ಯಕ್ರಮದಲ್ಲಿ ಪೂರ್ಣ ರೀತಿಯಲ್ಲಿ ಭಾಗಿಯಾಗುತ್ತೇನೆ ಎಂದು ತಿಳಿಸಿದರು.

ಈ  ಸಂದರ್ಭದಲ್ಲಿ ದ.ಕ.ಜಿಲ್ಲಾ ಯುವ ಜನ ಒಕ್ಕೂಟದ ನಿರ್ದೇಶಕ ರಾಕೇಶ್ ರೈ ಕೆಡೆಂಜಿ, ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ  ಸದಸ್ಯ   ಉಮಾಪ್ರಸಾದ್ ರೈ ನಡುಬೈಲುರವರುಗಳು ಉಪಸ್ಥಿತರಿದ್ದರು*



Leave a Comment: