ಪುತ್ತೂರು: ಲಾರಿ ಟಯರ್ ಜೋಡಣೆ ವೇಳೆ ಅಪಘಾತ- ಟಯರ್‌ ಸಮೇತ ಎಸೆಯಲ್ಪಟ್ಟ ಕರಾಯ ಜನತಾ ಕಾಲೋನಿ ರಶೀದ್ ಗಂಭೀರ

ಸುದ್ದಿಗಳು News

Posted by vidyamaana on 2024-07-22 23:30:36 |

Share: | | | | |


ಪುತ್ತೂರು: ಲಾರಿ ಟಯರ್ ಜೋಡಣೆ ವೇಳೆ ಅಪಘಾತ- ಟಯರ್‌ ಸಮೇತ ಎಸೆಯಲ್ಪಟ್ಟ   ಕರಾಯ ಜನತಾ ಕಾಲೋನಿ ರಶೀದ್ ಗಂಭೀರ

ಪುತ್ತೂರು: ಲಾರಿಯೊಂದರ ಟಯರ್ ಜೋಡಣೆ ವೇಳೆ ಟಯ‌ರ್ ರಿಂಗ್ ಚಿಮ್ಮಿ ಟಯರ್ ಸಮೇತ ಎಸೆಯಲ್ಪಟ್ಟ ಕಾರ್ಮಿಕರೊಬ್ಬರು ಗಂಭೀರ ಗಾಯಗೊಂಡ ಘಟನೆ ಪುತ್ತೂರು ಪರ್ಲಡ್ಕ ಗೋಳಿಕಟ್ಟೆ ಮಸೀದಿ ಬಳಿ ಜು.22ರಂದು ರಾತ್ರಿ ನಡೆದಿದೆ.

ಲಾರಿಯೊಂದು ಟಯರ್ ಪಂಚರ್ ಆಗಿ ಪರ್ಲಡ್ಕ ಗೋಳಿಕಟ್ಟೆ ಮಸೀದಿ ಬಳಿ ನಿಲ್ಲಿಸಲಾಗಿತ್ತು. ಅದರ ಚಾಲಕ ಕರಾಯಕ್ಕೆ ಹೋಗಿ ಟಯರ್ ಪಂಚರ್ ಮಾಡಿಸಿಕೊಂಡು ಆಟೋ ರಿಕ್ಷಾದಲ್ಲಿ ಟಯ‌ರ್ ತಂದಿದ್ದರು. ಟಯರ್ ಜೋಡಣೆ ಮಾಡಲು ಕರಾಯದಿಂದಲೇ ಬಂದ ಟಯರ್ ಕಾರ್ಮಿಕ ಜೋಡಣೆ ವೇಳೆ ಟಯರ್‌ನ ರಿಂಗ್ ಹೊರಚಿಮ್ಮಿದ ರಭಸಕ್ಕೆ ಟಯರ್‌ ಸಮೇತ  ಕರಾಯ ಜನತಾ ಕಾಲೋನಿ ಕರೀಂ ರವರ ಮಗ ರಶೀದ್ ತುಸು ದೂರ ಎಸೆಯಲ್ಪಟ್ಟಿದ್ದಾರೆ. ತಕ್ಷಣ ತೀವ್ರ ಗಾಯಗೊಂಡ ಕಾರ್ಮಿಕನನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ಕರೆತಂದು ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದು ಬಂದಿದೆ.

 Share: | | | | |


ಜ 27 : ಕರ್ನಾಟಕ ಜರ್ನಲಿಸ್ಟ್ ಯೂನಿಯನ್ (ರಿ) ಪುತ್ತೂರು ತಾಲೂಕು ವತಿಯಿಂದ ಪತ್ರಿಕಾ ದಿನಾಚರಣೆ, ಉಪನ್ಯಾಸ - ಸನ್ಮಾನ ಕಾರ್ಯಕ್ರಮ

Posted by Vidyamaana on 2024-07-26 08:10:52 |

Share: | | | | |


ಜ 27 : ಕರ್ನಾಟಕ ಜರ್ನಲಿಸ್ಟ್ ಯೂನಿಯನ್ (ರಿ) ಪುತ್ತೂರು ತಾಲೂಕು ವತಿಯಿಂದ ಪತ್ರಿಕಾ ದಿನಾಚರಣೆ, ಉಪನ್ಯಾಸ - ಸನ್ಮಾನ ಕಾರ್ಯಕ್ರಮ

ಪುತ್ತೂರು : ಕರ್ನಾಟಕ ಜರ್ನಲಿಸ್ಟ್ ಯೂನಿಯನ್ (ರಿ) ಪುತ್ತೂರು ತಾಲೂಕು ವತಿಯಿಂದ ವಿವೇಕಾನಂದ ಕಾಲೇಜು(ಸ್ವಾಯತ್ತ) ಪುತ್ತೂರು ಹಾಗೂ ಪತ್ರಿಕೋದ್ಯಮ ವಿಭಾಗ ಇದರ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ, ಉಪನ್ಯಾಸ - ಸನ್ಮಾನ ಕಾರ್ಯಕ್ರಮವು ಜ 27 ಶನಿವಾರ ಅಪರಾಹ್ನ ಗಂಟೆ 2:00ರಿಂದ ಪುತ್ತೂರು ನೆಹರೂ ನಗರ ವಿವೇಕಾನಂದ ಮಹಾವಿದ್ಯಾಲಯದ ಸುವರ್ಣ ಮಹೋತ್ಸವ ಸಭಾಭವನದಲ್ಲಿ ನಡೆಯಲಿದೆ.

ಈ ಕಾರ್ಯಕ್ರಮದ ಉದ್ಘಾಟನೆಯನ್ನು ಅಶೋಕ್ ಕುಮಾರ್ ರೈ ಶಾಸಕರು ಪುತ್ತೂರು ವಿಧಾನಸಭಾ ಕ್ಷೇತ್ರ ಇವರು ನಡೆಸಲಿದ್ದಾರೆ. ರಾಮದಾಸ್‌ ಶೆಟ್ಟಿ ವಿಟ್ಲ ಅಧ್ಯಕ್ಷರು ಕರ್ನಾಟಕ ಜರ್ನಲಿಸ್ಟ್ ಯೂನಿಯನ್(ರಿ.) ಪುತ್ತೂರು ತಾಲೂಕು ಇವರ ಅಧ್ಯಕ್ಷತೆಯಲ್ಲಿ ಜರಗುವ ಈ ಕಾರ್ಯಕ್ರಮದಲ್ಲಿ ಡಾ. ಆಶಾಲತಾ. ಪಿ. ಸಹಾಯಕ ಪ್ರಾಧ್ಯಾಪಕರು, ರಾಜ್ಯಶಾಸ್ತ್ರ ವಿಭಾಗ, ಗೋವಿಂದದಾಸ ಕಾಲೇಜು ಸುರತ್ಕಲ್ ಇವರು ಉಪನ್ಯಾಸ ನೀಡಲಿದ್ದಾರೆ

ರಾಜ್ಯದಲ್ಲಿ ಮೂರು ದಿನ ಹಗುರ ಮಳೆ ಸಾಧ್ಯತೆ

Posted by Vidyamaana on 2023-08-19 06:20:40 |

Share: | | | | |


ರಾಜ್ಯದಲ್ಲಿ ಮೂರು ದಿನ ಹಗುರ ಮಳೆ ಸಾಧ್ಯತೆ

ಬೆಂಗಳೂರು :-ನಿನ್ನೆಯಿಂದ ರಾಜ್ಯದ ಒಳನಾಡಿನಲ್ಲಿ ಮೋಡ ಕವಿದ ವಾತಾವರಣವಿದ್ದು ಆಗಾಗ್ಗೆ ತುಂತುರು ಮಳೆಯಾಗುತ್ತಿದೆ. ಇದರಿಂದ ತಾಪಮಾನ ಇಳಿಕೆಯಾಗಿದ್ದು, ತಂಪಾದ ವಾತಾವರಣ ಕಂಡುಬರುತ್ತಿದೆ. ಕಳೆದ ಮೂರು ವಾರಗಳಿಂದ ಮಳೆಯಿಲ್ಲದೆ ಒಣಹವೆ ಮುಂದುವರೆದಿದ್ದರಿಂದ ಗರಿಷ್ಟ ತಾಪಮಾನ 30 ಡಿಗ್ರಿ ಸೆಲ್ಸಿಯಸ್ ದಾಟಿತ್ತು.ಇದರಿಂದ ಬೇಸಿಗೆಯ ವಾತಾವರಣವನ್ನು ನೆನಪಿಸುವಂತಾಗಿತ್ತು.


ವಾತಾವರಣದಲ್ಲಿ ಬದಲಾವಣೆಯಾಗಿದ್ದು, ನಿನ್ನೆಯಿಂದ ಮೋಡ ಕವಿದ ವಾತಾವರಣ ಹಾಗು ತಂಪಾದ ಗಾಳಿ ಬೀಸುತ್ತಿದೆ. ಇದೇ ರೀತಿಯ ವಾತಾವರಣ ಆ.21ರವರೆಗೂ ಮುಂದುವರೆಯಲಿದ್ದು, ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗಬಹುದೆಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಸಂಸ್ಥಾಪಕ ಹಾಗೂ ನಿವೃತ್ತ ವಿಶೇಷ ನಿರ್ದೇಶಕ ವಿ.ಎಸ್.ಪ್ರಕಾಶ್ ತಿಳಿಸಿದರು.ಸದ್ಯಕ್ಕೆ ರಾಜ್ಯದಲ್ಲಿ ಉತ್ತಮ ಮಳೆಯಾಗುವ ಯಾವುದೇ ಮುನ್ಸೂಚನೆಗಳು ಕಂಡುಬರುತ್ತಿಲ್ಲ. ಮೋಡ ಮುಸುಕಿದ ವಾತಾವರಣ ಇರುವುದರಿಂದ ತಾಪಮಾನದಲ್ಲಿ ಇಳಿಕೆಯಾಗಿದೆ.  ಗಾಳಿ ಹಾಗು ತುಂತುರು ಮಳೆ ಸೋಮವಾರದವರೆಗೂ ಮುಂದುವರೆಯುವ ಲಕ್ಷಣಗಳಿವೆ. ಮತ್ತೆ ಮಂಗಳವಾರದಿಂದ ಒಣಹವೆ ಮುಂದುವರೆಯಲಿದೆ ಎಂದರು.


ಆ.23ರಿಂದ ಮತ್ತೆ ಗರಿಷ್ಠ ತಾಪಮಾನದಲ್ಲಿ ಏರಿಕೆಯಾಗಲಿದೆ. ಆನಂತರ ಗರಿಷ್ಠ ತಾಪಮಾನ 30 ಡಿಗ್ರಿ ಸೆಲ್ಸಿಯಸ್ ಗಡಿ ದಾಟಲಿದೆ ಎಂದು ಹೇಳಿದರು.

ಮಾ.28 : ಪುತ್ತೂರಿನಲ್ಲಿ ಮಂಗಳೂರು ಶ್ರೀ ಭಗವತೀ ಸಹಕಾರ ಬ್ಯಾಂಕ್‌ನ 8ನೇ ಶಾಖೆ ಉದ್ಘಾಟನೆ

Posted by Vidyamaana on 2024-03-25 14:07:45 |

Share: | | | | |


ಮಾ.28 : ಪುತ್ತೂರಿನಲ್ಲಿ ಮಂಗಳೂರು ಶ್ರೀ ಭಗವತೀ ಸಹಕಾರ ಬ್ಯಾಂಕ್‌ನ 8ನೇ ಶಾಖೆ ಉದ್ಘಾಟನೆ

ಪುತ್ತೂರು: ಕಳೆದ 48 ವರ್ಷಗಳಿಂದ ಸಹಕಾರಿ ಬ್ಯಾಂಕಿಂಗ್  ಕ್ಷೇತ್ರದಲ್ಲಿ ಯಶಸ್ವಿಯಾಗಿ ಮುನ್ನಡೆಯುತ್ತಾ ಬಂದಿರುವ ಶ್ರೀ ಭಗವತೀ ಸಹಕಾರ ಬ್ಯಾಂಕ್‌ನ ಪುತ್ತೂರು ಶಾಖೆ ಮಾ.28ರಂದು ಪುತ್ತೂರು ಏಳ್ಳುಡಿಯಲ್ಲಿರುವ ಮಹಾದೇವಿ ಸಂಕೀರ್ಣದ ಪ್ರಥಮ ಮಹಡಿಯಲ್ಲಿ ಉದ್ಘಾಟನೆಗೊಳ್ಳಲಿದೆ ಎಂದು ಬ್ಯಾಂಕ್‌ನ ಅಧ್ಯಕ್ಷ ಮಾಧವ ಬಿ.ಎಮ್ ಅವರು ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.


1977ರಲ್ಲಿ ಶ್ರೀ ಭಗವತೀ ಶ್ರೇಯೋಭಿವೃದ್ಧಿ ಸಹಕಾರ ಸಂಘ ನೋಂದಣಿ ಮಾಡಿಕೊಂಡು 1984ರಲ್ಲಿ ಭಾರತೀಯ ರಿಸರ್ವ್ ಬ್ಯಾಂಕ್‌ನ ಕಾನೂನು ಪ್ರಕಾರ ಶ್ರೀ ಭಗವತೀ ಶ್ರೇಯೋಭಿವೃದ್ಧಿ ಸಹಕಾರ ಸಂಘವು ಒಂದು ಬ್ಯಾಂಕ್ ಆಗಿ ಪರಿವರ್ತನೆಗೊಂಡಿತ್ತು. ನಂತರದ ಬೆಳವಣಿಗೆಯಲ್ಲಿ ಬ್ಯಾಂಕಿನ ಶಾಖೆಗಳು ವಿಸ್ತರಣೆಗೊಂಡು 2ಸಾವಿರ ಇಸವಿಯಲ್ಲಿ ವಿಟ್ಲದಲ್ಲಿ 7ನೇ ಶಾಖೆಯನ್ನು ಇದೀಗ ಪುತ್ತೂರನಲ್ಲಿ 8ನೇ ಶಾಖೆಯನ್ನು ಆರಂಭಿಸಲಾಗುತ್ತಿದೆ. ನೂತನ ಬ್ಯಾಂಕ್‌ನ ಉದ್ಘಾಟನೆ ಕಾರ್ಯಕ್ರಮ ನಿಶ್ಚಯ ಮಾಡಿ ಆಮಂತ್ರಣ ಪತ್ರ ನೀಡುವ ಸಂದರ್ಭದಲ್ಲಿ ಲೋಕಸಭಾ ಚುನಾವಣೆ ನೀತಿ ಸಂಹಿತೆ ಇರಲಿಲ್ಲ. ಹಾಗಾಗಿ ಜನಪ್ರತಿನಿಧಿಗಳನ್ನು ಆಹ್ವಾನಿಸಿದ್ದೆವು. ಬಳಿಕದ ಬೆಳವಣಿಗೆಯಲ್ಲಿ ನೀತಿ ಸಂಹಿತೆ ಬಂದಿರುವ ಹಿನ್ನೆಲೆಯಲ್ಲಿ ಜನಪ್ರತಿನಿಧಿಗಳಿಗೆ ಭಾಗವಹಿಸಲು ಅನಾನುಕೂಲ ಆಗಿದೆ. ಈ ನಿಟ್ಟಿನಲ್ಲಿ ಪುತ್ತೂರು ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ವಾಮನ್ ಪೈ, ಉದ್ಯಮಿ ಕಿಶೋರ್ ಕುಮಾರ್, ವಕೀಲರಾದ ಪಾಝೀಲ್, ಪಿ.ಕೆ.ಸತೀಶನ್, ಸುದಾನ ವಸತಿಯುತ ಶಾಲೆಯ ಸಂಚಾಲಕ ರೇ ವಿಜಯ ಹಾರ್ವೀನ್, ಉಳ್ಳಾಲದ ಚಂದ್ರಹಾಸ ಸಹಿತ ಹಲವಾರು ಮಂದಿ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದವರು ಹೇಳಿದರು.


ಶ್ರೀ ಭವತೀ ಸಹಕಾರ ಬ್ಯಾಂಕ್ ಎಲ್ಲಾ ವರ್ಷಗಳಲ್ಲಿ ಲಾಭಗಳಿಸುತ್ತಾ ಬಂದಿದ್ದು, 2024ಲ್ಲಿ ಪಸ್ತುತ 29,840 ಮಂದಿ ಸದಸ್ಯರಿದ್ದು, ಭಾರತೀಯ ರಿಸರ್ವ್ ಬ್ಯಾಂಕಿನ ಪರಿವೀಕ್ಷಣೆಯಲ್ಲಿ ಬ್ಯಾಂಕ ಅನ್ನು 2ನೇ ಟಯರ್‌ನಲ್ಲಿ ವರ್ಗೀಕರಿಸಲಾಗಿದೆ ಮಾತ್ರವಲ್ಲ ಉತ್ತಮ ಆರ್ಥಕ ಸಂಸ್ಥೆ ಎಂದು ಪರಿಗಣಿಸಲಾಗಿದೆ ಎಂದು ಮಾಧವ ಬಿ.ಎಮ್ ಹೇಳಿದರು.


ಬ್ಯಾಂಕಿನಲ್ಲಿ ಇರುವ ಠೇವಣಿಗಳಿಗೆ ಶೇ.3 ರಿಂದ 8.60 ಬಡ್ಡಿ ನೀಡಲಾಗುತ್ತದೆ. ಹಿರಿಯ ನಾಗರಿಕರಿಗೆ 0.5 ಅಧಿಕ ಬಡ್ಡಿ ನೀಡಲಾಗುತ್ತದೆ. ಮಹಿಳೆಯರಿಗೆ 3 ವರ್ಷಗಳಿಗಿಂತ ಹೆಚ್ಚಿನ ಅವಧಿಯ ಠೇವಣಿಗಳಿಗೆ ಕೂಡಾ 0.5 ಅಧಿಕ ಬಡ್ಡಿ ನೀಡಲಾಗುತ್ತದೆ. ಪಾಲು ಬಂಡವಾಳಕ್ಕೆ ಬ್ಯಾಂಕಿನ ಲಾಭದಲ್ಲಿ ಡಿವಿಡೆಂಡ್ ನೀಡಲಾಗುತ್ತದೆ. ಗೃಹ ಸಾಲ, ಅಡವು ಸಾಲ, ವಾಹನ ಸಾಲ, ಚಿನ್ನಾಭರಣ ಅಡವು ಸಾಲ ಹಾಗು ಸಂಬಳದ ಆಧಾರದಲ್ಲಿ ಸಾಲಗಳನ್ನು ಶೀಘ್ರವಾಗಿ ನೀಡಲಾಗುತ್ತದೆ. ಗ್ರಾಹಕರಿಗೆ ಸನ್ಮಾನ, ವಿದ್ಯಾರ್ಥಿವೇತನ ಸಹಿತ ಇತರ ಸೌಲಭ್ಯಗಳನ್ನು ಬ್ಯಾಂಕ್‌ನಿಂದ ನೀಡಲಾಗುವುದು ಎಂದು ಮಾಧವ ಬಿ.ಎಮ್ ಹೇಳಿದರು.


ಪತ್ರಿಕಾಗೋಷ್ಟಿಯಲ್ಲಿ ಬ್ಯಾಂಕ್‌ನ ಉಪಾಧ್ಯಕ್ಷ ದೇವದಾಸ್‌ ಕೊಲ್ಯ, ಪ್ರಧಾನ ವ್ಯವಸ್ಥಾಪಕಿ ಸುಷ್ಮಾ ರಾಜೇಶ್, ನಿರ್ದೇಶಕ ಕಿರಣ್, ಬ್ಯಾಂಕ್‌ನ ಶಾಖಾ ವ್ಯವಸ್ಥಾಪಕ ರಾಘವ, ಪುತ್ತೂರು ನೂತನ ಶಾಖೆಯ ಮೆನೇಜ‌ರ್ ರಮೇಶ್ ಉಪಸ್ಥಿತರಿದ್ದರು.

ಮಳೆಗಾಲದಲ್ಲಿ ಕಟ್ಟಡ ನಿರ್ಮಾಣ ಕಾರ್ಯಗಳಿಗೆ ಭೂಮಿ ಅಗೆತಕ್ಕೆ ಅವಕಾಶ ಇಲ್ಲ: ಸಚಿವ ದಿನೇಶ್ ಗುಂಡೂರಾವ್

Posted by Vidyamaana on 2024-08-02 21:32:16 |

Share: | | | | |


ಮಳೆಗಾಲದಲ್ಲಿ ಕಟ್ಟಡ ನಿರ್ಮಾಣ ಕಾರ್ಯಗಳಿಗೆ ಭೂಮಿ ಅಗೆತಕ್ಕೆ ಅವಕಾಶ ಇಲ್ಲ: ಸಚಿವ ದಿನೇಶ್ ಗುಂಡೂರಾವ್

ಮಂಗಳೂರು : ಮಳೆಗಾಲದಲ್ಲಿ ನಿರ್ಮಾಣ ಚಟುವಟಿಕೆಗಳಿಗೆ ಭೂಮಿ ಅಗೆಯುವುದರಿಂದ ಭೂಕುಸಿತ ಸಾಧ್ಯತೆ ಗಳಿರುವುದರಿಂದ ತಾತ್ಕಾಲಿಕವಾಗಿ ನಿಲ್ಲಿಸಲು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸೂಚಿಸಿದ್ದಾರೆ.ಅವರು ಶುಕ್ರವಾರ ನಗರದಲ್ಲಿ ಅಧಿಕಾರಿಗಳ ಸಭೆ ನಡೆಸಿ, ಈ ರೀತಿಯ ಕಾಮಗಾರಿಯಿಂದ ಸಾರ್ವಜನಿಕ ಸಮಸ್ಯೆ ಯಾಗುತ್ತಿರುವ ಬಗ್ಗೆ ದೂರುಗಳು ಬಂದಿವೆ.

ಶವದ ಮೆರವಣಿಗೆಯಾಗಿ ಬದಲಾಯ್ತು ಮದುವೆ ಮೆರವಣಿಗೆ

Posted by Vidyamaana on 2024-03-08 16:58:37 |

Share: | | | | |


ಶವದ ಮೆರವಣಿಗೆಯಾಗಿ ಬದಲಾಯ್ತು ಮದುವೆ ಮೆರವಣಿಗೆ

ನವದೆಹಲಿ: ತಾನೇ ಮುಂದೆ ನಿಂತು ತನ್ನ ಮಗನಿಗೆ ಮದುವೆ ಮಾಡಿ ಸೊಸೆಯನ್ನು ಮನೆಯೊಳಗೆ ಕರೆಸಿಕೊಳ್ಳಬೇಕಿದ್ದ ತಂದೆಯೊಬ್ಬ ಮದುವೆಗೆ ಕೆಲವೇ ಗಂಟೆಗಳಿಗೂ ಮುನ್ನ ತನ್ನ ಮದುವೆಗೆ ಸಜ್ಜಾಗಿದ್ದ ಮಗನನ್ನೇ (Murder Case) ಚಾಕುವಿನಿಂದ 15 ಬಾರಿ ಇರಿದು ಕೊಲೆ ಮಾಡಿರುವ ಆಘಾತಕಾರಿ ಘಟನೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ (New delhi) ನಡೆದಿದೆ.ಮೃತ ಯುವಕನನ್ನು ಗೌರವ್ ಸಿಂಘಾಲ್ ಎಂದು ಗುರುತಿಸಲಾಗಿದೆ. ಈತ ದೆಹಲಿಯಲ್ಲಿ ಜಿಮ್ ನಡೆಸುತ್ತಿದ್ದ. ಆದರೆ ಈತನ ಮದುವೆಯ ಹಿಂದಿನ ದಿನ ರಾತ್ರಿ ತಂದೆಯೇ ತನ್ನ ಮಗನನ್ನು ಕೊಂದಿರುವ ಘಟನೆ ದೆಹಲಿಯ ಡಿಯೋಲಿ ಪ್ರದೇಶದಲ್ಲಿ ನಡೆದಿದ್ದು, ಘಟನೆಯ ನಂತರ ತಂದೆ ಪರಾರಿಯಾಗಿದ್ದಾನೆ. ಆದರೆ ಗುರುವಾರ ರಾತ್ರಿ ಜೈಪುರದಲ್ಲಿ ಪೊಲೀಸರು ಆತನನ್ನು ಸೆರೆ ಹಿಡಿದಿದ್ದಾರೆ ಎಂದು ತಿಳಿದು ಬಂದಿದೆ.


ದೆಹಲಿ ಪೊಲೀಸರ ಪ್ರಕಾರ, ಮಾರ್ಚ್ 7 ರ ಮಧ್ಯರಾತ್ರಿ 12:30 ರ ಸುಮಾರಿಗೆ ದೇವ್ಲಿ ಎಕ್ಸ್‌ಟೆನ್ಶನ್‌ನಲ್ಲಿರುವ ರಾಜು ಪಾರ್ಕ್‌ನಿಂದ ಕೊಲೆಯ ಬಗ್ಗೆ ಮಾಹಿತಿ ಬಂದಿದೆ. ಮಾಹಿತಿ ತಿಳಿದ ತಕ್ಷಣ ತಿಗ್ರಿ ಪೊಲೀಸ್ ಠಾಣೆ ಹಾಗೂ ಪಿಸಿಆರ್ ವ್ಯಾನ್ ಸ್ಥಳಕ್ಕೆ ಆಗಮಿಸಿದೆ. ಈ ವೇಳೆ ಗೌರವ್ ಸಿಂಘಾಲ್ ಎಂಬ 29 ವರ್ಷದ ಯುವಕನ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿರುವುದು ಪೊಲೀಸರಿಗೆ ತಿಳಿದು ಬಂದಿದೆ. ಮನೆಯವರು ಆತನನ್ನು ಮ್ಯಾಕ್ಸ್ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಇದಾದ ಬಳಿಕ ಪೊಲೀಸ್ ತಂಡ ಆಸ್ಪತ್ರೆಗೆ ತಲುಪಿದಾಗ ಗೌರವ್ ಆಸ್ಪತ್ರೆತಲುಪುವಷ್ಟರಲ್ಲಿ ಮೃತಪಟ್ಟಿರುವುದು ಕಂಡುಬಂದಿದೆ.


ಬಳಿಕ ಪೊಲೀಸರು ಸ್ಥಳ ಪರಿಶೀಲನೆ ನಡೆಸಿದಾಗ ಅಲ್ಲಲ್ಲಿ ರಕ್ತದ ಕಲೆ ಬಿದ್ದಿತ್ತು. ಗೌರವ್‌ನ ದೇಹವನ್ನು ಚಾಕುವಿನಿಂದ ಇರಿದ ನಂತರ ಎಳೆದುಕೊಂಡು ಹೋದಂತೆ ತೋರುತ್ತಿದೆ. ಗೌರವ್‌ನ ಶವವನ್ನು ತಕ್ಷಣ ತನ್ನ ಕುಟುಂಬ ಸದಸ್ಯರಿಗೆ ಹಸ್ತಾಂತರಿಸುವುದು ಹಂತಕನಿಗೆ ಇಷ್ಟವಿಲ್ಲದಿರುವುದೇ ಇದಕ್ಕೆ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ.


ಗೌರವ್ ಸಿಂಘಾಲ್‌ಗೆ ಇತ್ತೀಚೆಗೆ ವಿವಾಹ ನಿಶ್ಚಯವಾಗಿತ್ತು. ಘಟನೆ ವೇಳೆ ಕುಟುಂಬಸ್ಥರು ಪಕ್ಕದ ಮನೆಯಲ್ಲಿ ಮದುವೆ ಸಮಾರಂಭದಲ್ಲಿ ಪಾಲ್ಗೊಂಡಿದ್ದರು. ಅಲ್ಲಿ ನೃತ್ಯ ಮತ್ತು ಸಂಗೀತ ನಡೆಯುತ್ತಿತ್ತು. ಈ ವೇಳೆ ತಂದೆ ಮೂವರು ಸಹಚರರೊಂದಿಗೆ ಸೇರಿ ತನ್ನ ಮಗ ಗೌರವ್‌ನನ್ನು ಮನೆಯೊಳಗೆ ಕೊಲೆ ಮಾಡಿದ್ದಾನೆ ಎಂದು ಪೊಲೀಸರು ಶಂಕಿಸಿದ್ದಾರೆ.

ಘಟನೆ ಬಗ್ಗೆ ದಕ್ಷಿಣ ಜಿಲ್ಲೆಯ ಡಿಸಿಪಿ ಹೇಳಿದ್ದೇನು?


ಕೊಲೆ ಮಾಡಿದ ಬಳಿಕ ಗೌರವ್ ತಂದೆ ರಂಗಲಾಲ್ ಸಿಂಘಾಲ್ ಮನೆಯಿಂದ ಓಡಿ ಹೋಗಿದ್ದು, ಈ ವೇಳೆ 50 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ಮತ್ತು 15 ಲಕ್ಷ ರೂಪಾಯಿ ನಗದು ತೆಗೆದುಕೊಂಡಿದ್ದಾನೆ ಎಂದು ದಕ್ಷಿಣ ಜಿಲ್ಲೆಯ ಡಿಸಿಪಿ ಅಂಕಿತ್ ಚೌಹಾಣ್ ಹೇಳುತ್ತಾರೆ. ಪೊಲೀಸರು ಪ್ರತಿಯೊಂದು ಕೋನದಿಂದ ಪ್ರಕರಣದ ತನಿಖೆ ನಡೆಸುತ್ತಿದ್ದಾರೆ. ಯಾವುದೋ ವಿಚಾರಕ್ಕೆ ಮಗ ಗೌರವ್ ಜೊತೆ ತಂದೆ ಜಗಳ ಮಾಡಿಕೊಂಡಿದ್ದ ಎಂದು ಪೊಲೀಸರು ಶಂಕಿಸಿದ್ದಾರೆ. ಈ ವೇಳೆ ಗೌರವ್ ತನ್ನ ತಂದೆ ರಂಗ್‌ಲಾಲ್‌ಗೆ ಕಪಾಳಮೋಕ್ಷ ಮಾಡಿದ್ದು, ನಂತರ ರಂಗಲಾಲ್ ತನ್ನ ಮೂವರು ಸಹಚರರೊಂದಿಗೆ ಸೇರಿ ಗೌರವ್‌ನನ್ನು ಕೊಂದು ನಗದು ಮತ್ತು ಚಿನ್ನಾಭರಣಗಳೊಂದಿಗೆ ಮನೆಯಿಂದ ಪರಾರಿಯಾಗಿದ್ದಾನೆ.

ಈ ಘಟನೆಯಲ್ಲಿ ಮತ್ತೊಂದು ಕೋನ ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಗೌರವ್ ಸಿಂಘಾಲ್‌ಗೆ ಮನೆಯವರು ತೋರಿಸಿದ ಹುಡುಗಿಯನ್ನು ಮದುವೆಯಾಗಲು ಇಷ್ಟವಿರಲಿಲ್ಲ. ಬೇರೆ ಹುಡುಗಿಯನ್ನು ಮದುವೆಯಾಗಲು ಬಯಸಿದ್ದ ಆತ ಮನೆಯವರ ಒತ್ತಡಕ್ಕೆ ಮಣಿದು ಮದುವೆಗೆ ಒಪ್ಪಿಗೆ ಸೂಚಿಸಿದ್ದ. ಈ ವಿಚಾರವಾಗಿ ತಂದೆ ಮಗನ ನಡುವೆ ಆಗಾಗ ಜಗಳ ನಡೆಯುತ್ತಿತ್ತು ಎನ್ನಲಾಗಿದೆ.


ಇನ್ನು ರಂಗ್‌ಲಾಲ್ ಮೈಗ್ರೇನ್‌ನಿಂದ ಬಳಲುತ್ತಿದ್ದು, ಸಾಕಷ್ಟು ಔಷಧಗಳನ್ನೂ ಸೇವಿಸುತ್ತಿದ್ದ ಎಂಬ ಮಾಹಿತಿಯೂ ಪೊಲೀಸರಿಗೆ ಲಭಿಸಿದೆ.

ಗ್ರಾಪಂ ಎನ್.ಓ.ಸಿ. ತಿದ್ದುಪಡಿ ಮಾಡಿದ ವಿಚಾರಕ್ಕೆ ಅರ್ಜಿ ತಿರಸ್ಕೃತ ಮೆಸ್ಕಾಂ ಎಇಇಗೆ ಕೊಲೆ ಬೆದರಿಕೆ: ಆರೋಪಿ ನಿಸಾರ್ ವಿರುದ್ಧ ಪ್ರಕರಣ ದಾಖಲು

Posted by Vidyamaana on 2023-06-14 16:35:35 |

Share: | | | | |


ಗ್ರಾಪಂ ಎನ್.ಓ.ಸಿ. ತಿದ್ದುಪಡಿ ಮಾಡಿದ ವಿಚಾರಕ್ಕೆ ಅರ್ಜಿ ತಿರಸ್ಕೃತ  ಮೆಸ್ಕಾಂ ಎಇಇಗೆ ಕೊಲೆ ಬೆದರಿಕೆ: ಆರೋಪಿ ನಿಸಾರ್ ವಿರುದ್ಧ ಪ್ರಕರಣ ದಾಖಲು

ಪುತ್ತೂರು: ವಿದ್ಯುತ್ ಗುತ್ತಿಗೆದಾರನೊಬ್ಬ ಪುತ್ತೂರಿನ  ಬನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಗೆ ತೆರಳಿ ಅವಾಚ್ಯವಾಗಿ ನಿಂಧಿಸಿ ಕೊಲೆ ಬೆದರಿಕೆ ಹಾಕುವ ಜತೆಗೆ ಸರ್ಕಾರಿ ಕರ್ತವ್ಯಕ್ಕೆ ಅಡ್ಡಿ ಉಂಟು ಮಾಡಿದ ಬಗ್ಗೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಪುತ್ತೂರು ಸನಾ ಇಲೆಕ್ಟ್ರಿಕಲ್ಸ್ ಮಾಲೀಕ ಮಹಮ್ಮದ್ ನಿಸಾರ್ ಆರೋಪಿ. ಮೆಸ್ಕಾಂ ಸಹಾಯಕ ಕಾರ್ಯ ನಿರ್ವಾಹಕ ಅಭಿಯಂತರ (ಎಇಇ) ರಾಮಚಂದ್ರ ಅವರಿಗೆ ಕೊಲೆ ಬೆದರಿಕೆ ಹಾಕಿದ್ದು, ದೂರು ನೀಡಿದ್ದಾರೆ.


ಜೂ.14ರಂದು ಮಧ್ಯಾಹ್ನ 3 ಗಂಟೆ ಸುಮಾರಿಗೆ ಮಹಮ್ಮದ್ ನಿಸಾರ್ ಕಛೇರಿಗೆ ಆಗಮಿಸಿ ಮುಂಡೂರು ಗ್ರಾಮದ ರಮೇಶ್ ಎಂಬವರ ಕೃಷಿ ನೀರಾವರಿ ಪಂಪ್ ಸೆಟ್ ಗೆ ನೀಡಿದ ಅರ್ಜಿಯನ್ನು ತಿರಸ್ಕಾರ ಮಾಡಿದ್ದೇಕೆ ಎಂದು ಅವಾಚ್ಯವಾಗಿ ನಿಂದಿಸಿದ್ದಾರೆ. ಅಲ್ಲದೇ, ಅರ್ಜಿಯನ್ನು ಮಂಜೂರು ಮಾಡದೇ ಹೋದಲ್ಲಿ ನಿನ್ನನ್ನು ನೋಡಿಕೊಳ್ಳಬೇಕಾಗುತ್ತದೆ ಎಂದು ಕೊಲೆ ಬೆದರಿಕೆ ಹಾಕಿದ್ದಾರೆ.

ಇಲಾಖೆಯ ನಿಯಮದ ತೊಡಕಿನಿಂದ ಅರ್ಜಿಯನ್ನು ತಿರಸ್ಕಾರ ಮಾಡಿದ್ದಾಗಿದೆ ಎಂದು ದಾಖಲೆ ಸಮೇತ ದೂರಿನಲ್ಲಿ ರಾಮಚಂದ್ರ ಅವರು ತಿಳಿಸಿದ್ದಾರೆ.

ತಿರಸ್ಕೃತ ಅರ್ಜಿಯನ್ನೇ ಮುಂದುವರಿಸಲು ಒತ್ತಡ, ಬೆದರಿಕೆ: ಮೆಸ್ಕಾಂ ಎಇಇ ರಾಮಚಂದ್ರ

ಗ್ರಾಮ ಪಂಚಾಯತ್ ಎನ್.ಓ.ಸಿ.ಯಲ್ಲಿ ಕೆರೆ ಎಂಬ ಶಬ್ದವನ್ನು‌ ತಿದ್ದುಪಡಿ ಮಾಡಿ, ಕೊಳವೆ ಬಾವಿ ಎಂದು ನಮೂದು ಮಾಡಲಾಗಿತ್ತು. ಇದರ ಬಗ್ಗೆ ಗ್ರಾಮ ಪಂಚಾಯತ್ ಸ್ಪಷ್ಟೀಕರಣ ನೀಡಿದ್ದು, ತಿದ್ದುಪಡಿ ಮಾಡಿಲ್ಲ ಎಂದು ತಿಳಿಸಿದೆ. ಈ ಹಿನ್ನೆಲೆಯಲ್ಲಿ ಕಾನೂನು ಪ್ರಕಾರ ರದ್ದು ಮಾಡಿದ್ದೇವೆ. ಈ ವಿಚಾರವನ್ನು ಗ್ರಾಹಕರಿಗೆ ತಿಳಿಸಿದ್ದು, ಅವರು ಒಪ್ಪಿಕೊಂಡು ಬೇರೆಯೇ ಅರ್ಜಿ ನೀಡುತ್ತೇವೆ ಎಂದು ತಿಳಿಸಿದ್ದಾರೆ. ಆದರೆ ನಿಸಾರ್ ಎಂಬವರು ನನ್ನ ಕಚೇರಿಗೆ ಬಂದು, ಅದೇ ಫೈಲನ್ನು ಮುಂದುವರಿಸುವಂತೆ ಹೇಳಿ ಬೆದರಿಕೆ ಹಾಕಿದ್ದಾರೆ. ಈ‌ ಹಿನ್ನೆಲೆಯಲ್ಲಿ‌ ದೂರು ನೀಡಿದ್ದೇನೆ.






Leave a Comment: