2ನೇ ರಾಜ್ಯಭಾಷೆಯಾಗಿ ತುಳು ಘೋಷಣೆಗೆ ಯತ್ನ

ಸುದ್ದಿಗಳು News

Posted by vidyamaana on 2024-07-23 07:07:38 |

Share: | | | | |


2ನೇ ರಾಜ್ಯಭಾಷೆಯಾಗಿ ತುಳು ಘೋಷಣೆಗೆ ಯತ್ನ

ಪುತ್ತೂರು: ರಾಜ್ಯದಲ್ಲಿ ತುಳು ಭಾಷೆಯನ್ನು ೨ನೇ ಅಧಿಕೃತ ರಾಜ್ಯಭಾಷೆಯಾಗಿ ಘೋಷಿಸುವ ನಿಟ್ಟಿನಲ್ಲಿ ಪ್ರಯತ್ನ ಮಾಡಲಾಗುತ್ತಿದೆ. ಶೀಘ್ರದಲ್ಲೇ ಈ ಪ್ರಯತ್ನ ಕೈಗೂಡುವ ವಿಶ್ವಾಸವಿದೆ ಎಂದು ಶಾಸಕ ಅಶೋಕ್ ರೈ ಹೇಳಿದರು.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪುತ್ತೂರು ತಾಲೂಕು ಘಟಕದ ನೇತೃತ್ವದಲ್ಲಿ, ಕನ್ನಡ ಸಾಹಿತ್ಯ ಪರಿಷತ್ ಪುತ್ತೂರು ತಾಲೂಕು ಘಟಕ ಮತ್ತು ರೋಟರಿ ಕ್ಲಬ್ ಪುತ್ತೂರು ಯುವ ಇವರ ಸಹಯೋಗದಲ್ಲಿ ಪುತ್ತೂರಿನ ರೋಟರಿ ಮನೀಷಾ ಸಭಾಂಗಣದಲ್ಲಿ ಶನಿವಾರ ನಡೆದ ಪತ್ರಿಕಾ ದಿನಾಚರಣೆ - ಉಪನ್ಯಾಸ- ಸನ್ಮಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಪಶ್ಚಿಮ ಬಂಗಾಳ ಸೇರಿದ ಅನೇಕ ರಾಜ್ಯಗಳಲ್ಲಿ ೨ನೇ ರಾಜ್ಯಭಾಷೆ ಘೋಷಣೆ ಸಂದರ್ಭ ಯಾವೆಲ್ಲ ಮಾನದಂಡ ಅನುಸರಿಸಲಾಗಿದೆ ಎಂಬುದರ ಅಧ್ಯಯನ ನಡೆಸಿ ವರದಿ ತಯಾರಿಸಲಾಗಿದೆ. ಇದನ್ನು ಸರಕಾರ ಪರಿಶೀಲಿಸಿ ಶೀಘ್ರದಲ್ಲೇ ತುಳು ಭಾಷೆಯನ್ನು ೨ನೇ ಅಧಿಕೃತ ರಾಜ್ಯಭಾಷೆಯನ್ನಾಗಿ ಘೋಷಣೆ ಮಾಡುವ ಸಂಬAಧ ಸಂಪುಟದಲ್ಲಿ ಚರ್ಚಿಸಿ ನಿರ್ಣಯ ಕೈಗೊಂಡ ಮೇಲೆ ಗೆಜೆಟ್ ನೋಟಿಫೀಕೇಶನ್ ಹೊರಡಿಸಲಾಗುವುದು. ಅದೇ ರೀತಿ ತುಳು ಭಾಷೆಯನ್ನು ಸಂವಿಧಾನದ ೮ನೇ ಪರಿಚ್ಛೇದದಲ್ಲಿ ಸೇರಿಸುವ ವಿಚಾರದಲ್ಲೂ ಕೇಂದ್ರದ ಮೇಲೆ ರಾಜ್ಯದಿಂದ ಒತ್ತಡ ತರುವ ಕೆಲಸ ಮಾಡಲಾಗುತ್ತದೆ. ಪುತ್ತೂರಿನಲ್ಲಿ ಸರಕಾರಿ ಮೆಡಿಕಲ್ ಕಾಲೇಜು ಸ್ಥಾಪನೆಗೆ ಸರಕಾರದ ಮೇಲೆ ಒತ್ತಡ ಹೇರುತ್ತಿದ್ದೇನೆ. ಮುಂದಿನ ಬಜೆಟ್‌ನಲ್ಲಿ ಘೋಷಣೆಯ ಆಶಾವಾದ ಇದೆ ಎಂದವರು ಹೇಳಿದರು.

ಸೋಷಿಯಲ್ ಮೀಡಿಯಾದ ಅಬ್ಬರದ ನಡುವೆಯೇ ಜನ ಪತ್ರಿಕೆ ಓದುವುದು ಕಡಿಮೆ ಮಾಡಿಲ್ಲ. ಪತ್ರಿಕಾ ರಂಗದಲ್ಲಿ ಪ್ರಾಮಾಣಿಕತೆ ಬೇಕು. ಅದಿರುವ ಕಾರಣವೇ ದಕ್ಷಿಣಕನ್ನಡದ ಪತ್ರಕರ್ತರು ಎಲ್ಲಿ ಹೋದರೂ ಛಾಪು ಮೂಡಿಸುತ್ತಾರೆ ಎಂದು ಹೇಳಿದರು.

ಮಾಜಿ ಶಾಸಕ ಸಂಜೀವ ಮಠಂದೂರು ಮಾತನಾಡಿ, ದೇಶದಲ್ಲಿ ತುರ್ತು ಪರಿಸ್ಥಿತಿಯ ಸಂದರ್ಭ ಅಭಿವ್ಯಕ್ತಿ ಸ್ವಾತಂತ್ರö್ಯ ಮತ್ತು ಪತ್ರಿಕಾ ಸ್ವಾತಂತ್ರö್ಯ ದಮನ ಮಾಡಲಾಗಿತ್ತು. ಆಗ ಧೀಮಂತ ಪತ್ರಿಕೆಗಳು ಭೂಗತರಾಗಿದ್ದುಕೊಂಡೇ ಪತ್ರಿಕೆ ನಡೆಸಿ ಜನಜಾಗೃತಿ ಮೂಡಿಸಿದ್ದರು. ದೇಶ ಕಟ್ಟುವಲ್ಲಿ ಪತ್ರಿಕೆಗಳ ಪಾತ್ರ ಬಹಳಷ್ಟು ದೊಡ್ಡದು. ಸೋಷಿಯಲ್ ಮೀಡಿಯಾದಿಂದ ಉಪಯೋಗವಿದೆಯಾದರೂ ಅಷ್ಟೇ ಕೆಟ್ಟದೂ ಇದೆ ಎಂದರು.


ಪುತ್ತೂರು ಸಹಾಯಕ ಆಯುಕ್ತರಾದ ಜುಬಿನ್ ಮೊಹಾಪಾತ್ರ ಉಪನ್ಯಾಸ ನೀಡಿದರು. ಮಾಧ್ಯಮ ವರದಿ ಇವತ್ತು ಪ್ರತಿಯೊಬ್ಬರ ಕೈಗೂ ಬಂದಿದೆ. ಜಗತ್ತಿನಲ್ಲಿ ಜೀವರಕ್ಷಕ ಔಷಧಿ ಮೊದಲ ಸ್ಥಾನದಲ್ಲಿದ್ದರೆ, ೨ನೇ ಸ್ಥಾನದಲ್ಲಿ ಮುದ್ರಣ ಮಾಧ್ಯಮಗಳಿವೆ. ಇಷ್ಟಾದರೂ ಮಾಧ್ಯಮಗಳು ಕೆಲವೊಂದು ಅಪವಾದಗಳನ್ನು ಕೂಡ ಎದುರಿಸುತ್ತಿವೆ. ಆರೋಪಿಯೊಬ್ಬನನ್ನು ನ್ಯಾಯಾಲಯ ವಿಚಾರಣೆ ನಡೆಸುವ ಮೊದಲೇ ಮಾಧ್ಯಮಗಳು ವಿಚಾರಣೆ ನಡೆಸಿ ತಪ್ಪಿತಸ್ಥನೆಂದು ಘೋಷಿಸುವುದು ಆತಂಕಕಾರಿ ಬೆಳವಣಿಗೆ. ಅದೇ ರೀತಿ ಪೀತ ಪತ್ರಿಕೋದ್ಯಮದ ಬಗ್ಗೆಯೂ ಜಾಗೃತಿ ಅಗತ್ಯ ಎಂದರು. ಪ್ರತಿಯೊಬ್ಬ ಪತ್ರಕರ್ತರಿಗೂ ವೃತ್ತಿಪರತೆ ಮತ್ತು ನೈತಿಕತೆ ಅಗತ್ಯವಾಗಿ ಬೇಕು ಎಂದವರು ನುಡಿದರು. ಮಾಹಿತಿ ಎಂಬುದು ನೀರಿನ ಥರ. ಕಡಿಮೆಯಾದರೂ ಕಷ್ಟ, ಜಾಸ್ತಿಯಾದರೂ ಕಷ್ಟ. ಇದನ್ನು ಪತ್ರಕರ್ತರು ಅರ್ಥಮಾಡಿಕೊಳ್ಳಬೇಕು ಎಂದು ಕಿವಿ ಮಾತು ಹೇಳಿದರು.


ಇದೇ ಸಂದರ್ಭದಲ್ಲಿ ಶೇಟ್ ಎಲೆಕ್ಟ್ರಾನಿಕ್ಸ್ ಸಂಸ್ಥೆ ಕೊಡುಗೆಯಾಗಿ ನೀಡಿದ ಸಿಸಿ ಕ್ಯಾಮೆರಾವನ್ನು ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಅವರು ಪತ್ರಕರ್ತರಿಗೆ ಹಸ್ತಾಂತರ ಮಾಡಿದರು.


ಪತ್ರಿಕಾ ವಿತರಕರಾದ ವಿಶ್ವನಾಥ್ ಪುತ್ತೂರು ಅವರನ್ನು ಶಾಸಕರು ಪತ್ರಕರ್ತರ ಸಂಘದ ಪರವಾಗಿ ಸನ್ಮಾನಿಸಿದರು. ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಉತ್ತಮ ಸಾಧನೆ ಮಾಡಿದ ಪತ್ರಕರ್ತರ ಸಂಘದ ಸದಸ್ಯರ ಮಕ್ಕಳಾದ ಹಷೇಂದ್ರ ಪ್ರಸಾದ್, ಮಹೇಶ್ ಪ್ರಸಾದ್, ದೀಪ್ತಿ ಭಟ್, ಎ.ಯು. ಅವನೀಶ್ ಕುಮಾರ್, ಸಮ್ಯಕ್, ಸಿಹಾ ಶಮ್ರಾ, ಪುಣ್ಯಶ್ರೀ ಪಿ. ಅವರನ್ನು ಸಂಘದ ಪರವಾಗಿ ಮಾಜಿ ಶಾಸಕ ಸಂಜೀವ ಮಠಂದೂರು ಸನ್ಮಾನಿಸಿದರು. 

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪುತ್ತೂರು ತಾಲೂಕು ಘಟಕದ ಅಧ್ಯಕ್ಷರಾದ ಸಿದ್ಧಿಕ್ ನೀರಾಜೆ, ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಅಧ್ಯಕ್ಷರಾದ ಪುತ್ತೂರು ಉಮೇಶ್ ನಾಯಕ್,ಮಾಜಿ ಶಾಸಕಿ ಶಕುಂತಲಾ ಟಿ ಶೆಟ್ಟಿ,ರೋಟರಿ ಕ್ಲಬ್ ಪುತ್ತೂರು ಯುವ ಅಧ್ಯಕ್ಷೆ ಅಶ್ವನಿಕೃಷ್ಣ, ಎಸೋಸಿಯೇಶನ್ ಆಫ್ ಸಿವಿಲ್ ಎಂಜಿನಿರ‍್ಸ್ (ಎಸಿಸಿಇ-ಐ) ಪುತ್ತೂರು ಸೆಂಟರ್ ಅಧ್ಯಕ್ಷರಾದ ಪ್ರಮೋದ್ ಕುಮಾರ್ ಕೆ.ಕೆ.ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಶ್ರೀನಿವಾಸ ನಾಯಕ್ ಇಂದಾಜೆ, ಸಂಘದ ಕಾರ್ಯಕಾರಿ ಸಮಿತಿ ಸದಸ್ಯ ಸುಧಾಕರ ಸುವರ್ಣ, ಕಾರ್ಯಕಾರಿ ಸಮಿತಿ ಸದಸ್ಯ ಮೇಘಾ ಪಾಲೆತ್ತಾಡಿ ಮತ್ತು ರೋಟರಿ ಯುವ ಸಂಸ್ಥೆಯ ಕಾರ್ಯದರ್ಶಿ ವಚನಾ ಜಯರಾಂ,ಪ್ರಧಾನ ಕಾರ್ಯದರ್ಶಿ ಶಶಿಧರ ರೈ ಕುತ್ಯಾಳ, ಕೋಶಾಧಿಕಾರಿ ಸಂಶುದ್ದೀನ್ ಸಂಪ್ಯ,ಕಾರ್ಯಕಾರಿ ಸಮಿತಿ ಸದಸ್ಯರಾದ ಐ. ಬಿ. ಸಂದೀಪ್,ಕುಮಾರ್,ಪ್ರಸಾದ್ ಬಲ್ನಾಡ್, ಸಂಘದ ಕಾರ್ಯದರ್ಶಿ ಅಜಿತ್ ಕುಮಾರ್, ಸದಸ್ಯರಾದ ಅನಿಶ್ ಕುಮಾರ್ ಮರೀಲ್,ಶರತ್, ರಾಜೇಶ್ ಪಟ್ಟೆ, ಪಾರೂಕ್ ಶೇಕ್ , ಮತ್ತಿತ್ತರರು ಉಪಸ್ಥಿತರಿದ್ದರು.

 Share: | | | | |


ಸಂಚಾರ ಠಾಣೆಯ ಪೋಲಿಸ್ ಕಾನ್ಸ್‌ಟೇಬಲ್ ಆತ್ಮಹತ್ಯೆ – ಸಾವಿಗೆ ಕಾರಣ ನಿಗೂಢ

Posted by Vidyamaana on 2023-09-15 04:39:31 |

Share: | | | | |


ಸಂಚಾರ ಠಾಣೆಯ ಪೋಲಿಸ್ ಕಾನ್ಸ್‌ಟೇಬಲ್ ಆತ್ಮಹತ್ಯೆ – ಸಾವಿಗೆ ಕಾರಣ ನಿಗೂಢ

ಮಂಗಳೂರು ಸಂಚಾರ ದಕ್ಷಿಣ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೋಲಿಸ್ ಕಾನ್ಸ್‌ಟೇಬಲ್ ಒಬ್ಬರು ಆತ್ಮಹತ್ಯೆಗೈದು ಸಾವಿಗೆ ಶರಣಾಗಿರುವ ಘಟನೆ ನಡೆದಿದೆ.


ಮೃತ ಪೋಲಿಸ್ ಕಾನ್ಸ್‌ಟೇಬಲ್ ನನ್ನು ಗದಗ ಜಿಲ್ಲೆಯ ರೋಣ ತಾಲೂಕಿನ ಯಾವಗಲ್ ನ ವೀರಣ್ಣ ಎಂಬವರ ಪುತ್ರ ಮಹೇಶ್ ಸವದತ್ತಿ (31) ಎಂದು ಗುರುತಿಸಲಾಗಿದೆ.


ಮೃತ ಮಹೇಶ್ 23-07-2018 ರಂದು ಪೊಲೀಸ್ ಇಲಾಖೆಗೆ ನೇಮಕಾತಿ ಹೊಂದಿ ಮೂಲ ತರಬೇತಿಯನ್ನು ಹಾಸನ ದಲ್ಲಿ ಪಡೆದು ದಿನಾಂಕ 07-05-2019 ರಂದು ಮಂಗಳೂರು ಸಂಚಾರ ದಕ್ಷಿಣ ಪೊಲೀಸ್ ಠಾಣೆಗೆ ಕರ್ತವ್ಯಕ್ಕೆ ಹಾಜರಾಗಿ ಪೋಲಿಸ್ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು.


ಆದರೆ ಇಂದು ಕಪಿತಾನಿಯೋ ಬಳಿಯ ಸೈಮಾನ್ ಲೈನ್ ನಲ್ಲಿರುವ ಬಾಡಿಗೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ‌ ಎನ್ನಲಾಗಿದೆ. ಮೃತರ ಪೋಷಕರು ಮಂಗಳೂರಿನತ್ತ ಪ್ರಯಾಣ ಬೆಳೆಸಿದ್ದು, ಮೃತರ ಸಾವಿಗೆ ಕಾರಣ ತಿಳಿದುಬಂದಿಲ್ಲ.

ಮಂಗಳೂರು ನೂತನ ಪೊಲೀಸ್ ಆಯುಕ್ತರಾಗಿ ಕುಲದೀಪ್ ಕುಮಾರ್ - ಶಶಿಕುಮಾರ್ ವರ್ಗಾವಣೆ

Posted by Vidyamaana on 2023-02-23 11:49:48 |

Share: | | | | |


ಮಂಗಳೂರು ನೂತನ ಪೊಲೀಸ್ ಆಯುಕ್ತರಾಗಿ ಕುಲದೀಪ್ ಕುಮಾರ್ - ಶಶಿಕುಮಾರ್ ವರ್ಗಾವಣೆ

ಮಂಗಳೂರು:ಫೆ 23  ಮಂಗಳೂರು ಪೊಲೀಸ್ ಆಯುಕ್ತರಾಗಿದ್ದ ಎನ್. ಶಶಿಕುಮಾರ್ ಅವರನ್ನು ವರ್ಗಾವಣೆ ಮಾಡಲಾಗಿದ್ದು, ಬೆಂಗಳೂರು ಪಶ್ಚಿಮ ಸಂಚಾರ ವಿಭಾಗದ ಡಿಸಿಪಿಯಾಗಿರುವ ಕುಲದೀಪ್ ಕುಮಾರ್ ಆರ್.ಜೈನ್ ಅವರನ್ನು ಪೊಲೀಸ್ ಕಮೀಷನರ್ ಆಗಿ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಶಶಿಕುಮಾರ್ ಅವರನ್ನು ರೈಲ್ವೇ ಇಲಾಖೆ ಪೊಲೀಸ್ ಡಿಐಜಿಯಾಗಿ ವರ್ಗಾವಣೆ ಮಾಡಲಾಗಿದ್ದು, ಕುಲದೀಪ್ ಕುಮಾರ್ ಆರ್. ಜೈನ್ ಅವರನ್ನು ಮಂಗಳೂರು ಪೊಲೀಸ್ ಆಯುಕ್ತರಾಗಿ ನಿಯೋಜಿಸಿ ಸರ್ಕಾರ ಆದೇಶಿಸಿದೆ.

ರಾಜ್ಯದಲ್ಲಿ ಪೈಶಾಚಿಕ ಕೃತ್ಯ : ವಿದ್ಯಾರ್ಥಿನಿಗೆ ಮದ್ಯ ಕುಡಿಸಿ ಸಾಮೂಹಿಕ ಅತ್ಯಾಚಾರ

Posted by Vidyamaana on 2023-10-14 14:19:51 |

Share: | | | | |


ರಾಜ್ಯದಲ್ಲಿ ಪೈಶಾಚಿಕ ಕೃತ್ಯ : ವಿದ್ಯಾರ್ಥಿನಿಗೆ ಮದ್ಯ ಕುಡಿಸಿ ಸಾಮೂಹಿಕ ಅತ್ಯಾಚಾರ

ಬಳ್ಳಾರಿ : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದ್ದು, ಬಳ್ಳಾರಿಯ ಕಾಲೇಜೊಂದರ ವಿದ್ಯಾರ್ಥಿನಿಯನ್ನು ಅಪಹರಿಸಿದ ದುಷ್ಕರ್ಮಿಗಳು ಕೊಪ್ಪಳಕ್ಕೆ ಕರೆತಂದು ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ.ವಿದ್ಯಾರ್ಥಿನಿಯನ್ನು ಕಿಡ್ನ್ಯಾಪ್ ಮಾಡಿದ ಕಿರಾತಕರು ಕೊಪ್ಪಳದ ಸಣಾಪುರ ಬಳಿಯ ಹೋಟೆಲ್ ನಲ್ಲಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ.ಈ ಸಂಬಂಧ ನವೀನ್, ಸಾಕೀವ್, ತನು ಸೇರಿದಂತೆ ನಾಲ್ವರ ವಿರುದ್ಧ ಪ್ರಕರಣ ದಾಖಲಾಗಿದೆ.


ಯುವತಿ ಬಳ್ಳಾರಿಯ ಕಾಲೇಜೊಂದರಲ್ಲಿ ಬಿಕಾಂ ವ್ಯಾಸಂಗ ಮಾಡುತ್ತಿದ್ದು, ನಿಮ್ಮ ಅಣ್ಣ ಬಂದಿದ್ದಾನೆಂದು ವಿದ್ಯಾರ್ಥಿನಿಯನ್ನು ಕಾಲೇಜಿನಿಂದ ಹೊರಕ್ಕೆ ಕರೆಯಿಸಿ ನಂತರ ಆಟೋದಲ್ಲಿ ಕಿಡ್ನ್ಯಾಪ್ ಮಾಡಿಕೊಂಡು ಹೋಗಿದ್ದಾರೆ. ನಂತರ ಕೊಪ್ಪಳ ಜಿಲ್ಲೆಯ ಸಣಾಪುರ ಬಳಿಯ ಕೆಫೆ ಹೋಟೆಲ್ ಗೆ ಕರೆದೊಯ್ದು ಬಿಯರ್ ಕುಡಿಸಿ ಅತ್ಯಾಚಾರ ಎಸಗಿದ್ದಾರೆ ಎಂದು ತಿಳಿದು ಬಂದಿದೆ.

ನನ್ನ ಮಗನಿಗೆ ಕೊಡೋ ಶಿಕ್ಷೆ ಹೇಗಿರ್ಬೇಕಂದ್ರೆ ಮುಂದೆ ಇಂಥ ಕೆಲ್ಸಕ್ಕೆ ಯಾರೂ ಕೈ ಹಾಕ್ಬಾರ್ದು

Posted by Vidyamaana on 2024-04-20 09:47:56 |

Share: | | | | |


ನನ್ನ ಮಗನಿಗೆ ಕೊಡೋ ಶಿಕ್ಷೆ ಹೇಗಿರ್ಬೇಕಂದ್ರೆ ಮುಂದೆ ಇಂಥ ಕೆಲ್ಸಕ್ಕೆ ಯಾರೂ ಕೈ ಹಾಕ್ಬಾರ್ದು

ಹುಬ್ಬಳಿ : ಇಡೀ ರಾಜ್ಯವನ್ನೆ ಬೆಚ್ಚಿಬೀಳಿಸಿದ್ದ ಹುಬ್ಬಳ್ಳಿ(Hubballi) ನೇಹಾ ಹತ್ಯೆ ಪ್ರಕರಣ ಜನತೆಯನ್ನು ರೊಚ್ಚಿಗೆಬ್ಬಿಸಿದೆ. ಹಂತಕನ ವಿರುದ್ಧ ಜನ ಕೊತ ಕೊತ ಕುದಿಯುತ್ಯಿದ್ದಾರೆ. ಈ ಬೆನ್ನಲ್ಲೇ ನೇಹಾ ಹಂತಕ ಪಯಾಜ್ ತಂದೆ ಮಾಧ್ಯಮಗಳ ಮುಂದೆ ಮಾತನಾಡಿದ್ದಾರೆ.

ನನ್ನ ಮಗನಿಗೆ ಯಾವುದೇ ಶಿಕ್ಷೆ ನೀಡಿದರೂ ಸ್ವಾಗತಿಸುತ್ತೇನೆ. ಅವನಿಗೆ ಅತ್ಯಂತ ಕಠಿಣ ಶಿಕ್ಷೆಯಾಗಲಿ. ಆ ಶಿಕ್ಷೆ ಹೇಗಿರಬೇಕು ಅಂದ್ರೆ ಮುಂದೆ ಇಂಥ ಕ್ರೂರ ಕೆಲಸಕ್ಕೆ ಯಾರೂ ಕೈ ಹಾಕಬಾರದು. ಅಂಥ ಶಿಕ್ಷೆ ನನ್ನ ಮಗನಿಗೆ ಆಗಬೇಕು ಎಂದು ನೇಹಾ ಹಿರೇಮಠ (Neha Hiremath Murder Case) ಕೊಲೆ ಪ್ರಕರಣದ ಆರೋಪಿ ಫಯಾಜ್ (Fayaz) ತಂದೆ‌ ಬಾಬಾ ಸಾಹೇಬ್‌ ಸುಬಾನಿ ಮಾಧ್ಯಮಗಳ ಮುಂದೆ ಕಣ್ಣೀರು ಹಾಕಿದ್ದಾರೆ.

ಪುತ್ತೂರಿನ ಫ್ಯಾಶನ್ ಲೋಕದ ಮಹಾ ಉತ್ಸವ ರಾಧಾಸ್ ಮಾನ್ಸೂನ್ ಮೇಳಕ್ಕೆ ಭರ್ಜರಿ ರೆಸ್ಪಾನ್ಸ್

Posted by Vidyamaana on 2024-08-09 19:03:56 |

Share: | | | | |


ಪುತ್ತೂರಿನ ಫ್ಯಾಶನ್ ಲೋಕದ ಮಹಾ ಉತ್ಸವ ರಾಧಾಸ್ ಮಾನ್ಸೂನ್ ಮೇಳಕ್ಕೆ ಭರ್ಜರಿ ರೆಸ್ಪಾನ್ಸ್

ಪ್ರತ್ತೂರು: ಕಳೆದ 29 ವರ್ಷಗಳಿಂದ ಜವುಳಿ ಉದ್ಯಮದಲ್ಲಿ ಪುತ್ತೂರಿನ ಜನತೆಗೆ ಹೊಸತನವನ್ನು ಪರಿಚಯಿಸುತ್ತಾ ಮನೆ ಮಾತಾಗಿರುವ ಪ್ರತಿಷ್ಠಿತ ಜವುಳಿ ಮಳಿಗೆ ಕೋರ್ಟ್ ರಸ್ತೆಯ ರಾಧಾಸ್ನಲ್ಲಿ ಫ್ಯಾಶನ್ ಲೋಕದ ಮಹಾಉತ್ಸವ ಮಾನ್ಸೂನ್ ಮೇಳ ಆ.3ರಂದು ಪ್ರಾರಂಭಗೊಂಡಿದೆ. ಮದುವೆ ಜವುಳಿ ಸೇರಿದಂತೆ ಮಕ್ಕಳ, ಮಹಿಳೆಯರ ಹಾಗೂ ಪುರುಷರ ಎಲ್ಲಾ ರೀತಿಯ ರೆಡಿಮೇಡ್‌ ಉಡುಪುಗಳನ್ನು ಅತೀ ಕಡಿಮೆ ಬೆಲೆಯಲ್ಲಿ ತಮ್ಮದಾಗಿಸಿಕೊಳ್ಳುವ ಸುವರ್ಣಾವಕಾಶವನ್ನು ಗ್ರಾಹಕರಿಗೆ ಸಮರ್ಪಿಸಿದೆ.

ಗ್ರಾಹಕರಿಂದ ತುಂಬಿ ತುಳುಕಿದ ಮಳಿಗೆ:

ಪ್ರತಿ ವರ್ಷ ಮಳೆಗಾಲದಲ್ಲಿ ತನ್ನ ಗ್ರಾಹಕರಿಗಾಗಿ ಕಡಿಮೆ ಬೆಲೆಯಲ್ಲಿ ತಮ್ಮ ಮನದಿಚ್ಛೆಯ ಉಡುಪುಗಳನ್ನು ಕೊಂಡುಕೊಳ್ಳುವ ವಿಪುಲ ಅವಕಾಶಗಳನ್ನು ರಾಧಾಸ್‌ ಮಳಿಗೆಯು ಮಾನ್ಸೂನ್ ಮೇಳದ ಮೂಲಕ ನೀಡುತ್ತಿದೆ. ಪುತ್ತೂರಿನ ಫ್ಯಾಷನ್ ಲೋಕದ ಮಹಾಉತ್ಸವವೆಂದೇ ಖ್ಯಾತಿ ಪಡೆದ ಮಾನ್ಸೂನ್ ಮೇಳ ಈ ವರ್ಷವೂ ಪ್ರಾರಂಭಗೊಂಡಿದ್ದು ಈಗಾಗಲೇ ಗ್ರಾಹಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿ ಮಳಿಗೆಯು ಗ್ರಾಹಕರಿಂದ ತುಂಬಿ ತುಳುಕುತ್ತಿದೆ. ಬೆಳಗಿನಿಂದಲೇ ಗ್ರಾಹಕರು ಮಳಿಗೆಗೆ ಭೇಟಿ ನೀಡಿ ತಮ್ಮ ಇಚ್ಚೆಯ ಉಡುಪುಗಳನ್ನು ಖರೀದಿಸುವ ಭರಾಟೆಯಲ್ಲಿ ತೊಡಗಿದ್ದಾರೆ.

ಪ್ರತೀ ದಿನವೂ ಬಟ್ಟೆಗಳ ಹೊಸ ಸಂಗ್ರಹ, ಹೊಸ ವಿನ್ಯಾಸ:

ಗ್ರಾಹಕರಿಗಾಗಿ ಮಳಿಗೆಯಲ್ಲಿ ಪ್ರತೀ ದಿನವೂ ಹೊಸ ಹೊಸ ಬಟ್ಟೆಗಳ ಸಂಗ್ರಹ ಹಾಗೂ ಹೊಸ ವಿನ್ಯಾಸಗಳು ಲಭ್ಯವಿದೆ. ವಿನೂತನ ಶೈಲಿಯ, ಕಣ್ಮನ ಸೆಳೆಯುವ ನವನವೀಶ ಮಾದರಿಯ ಉಡುತ್ತುಗಳು, ಅತೀ ಕಡಿಮೆ ಬೆಲೆಗೆ ದೊರೆಯಲಿದ್ದು ಗ್ರಾಹಕರು ತಮಗೆ ಒಪ್ಪುದ ವಿವಿಧ ಉಡುಪುಗಳನ್ನು ಖರೀದಿಸಲು ಇದು ಸಕಾಲವಾಗಿದೆ. ಈ ಅವಕಾಶದ ಮೂಲಕ ತಮಗೆ ಬೇಕಾದ ಬಟ್ಟೆಗಳನ್ನು ಇಂದೇ ಖರೀದಿಸಿ ಇಟ್ಟುಕೊಳ್ಳಬಹುದು.

ಮೂರು ಅಂತಸ್ತಿನ ಮಳಿಗೆಯಲ್ಲಿ ವ್ಯವಹಾರ:

ರಾಧಾಸ್ ಮಳಿಗೆಯು ಮೂರು ಅಂತಸ್ತಿನಲ್ಲಿ ವ್ಯವಹರಿಸುತ್ತಿದ್ದು ಮಕ್ಕಳ, ಮಹಿಳೆಯರ ಹಾಗೂ ಪುರುಷರ ಉಡುಪಗಳು ಪ್ರತ್ಯೇಕ ವಿಭಾಗಗಳಲ್ಲಿ ಗ್ರಾಹಕರಿಗೆ ಲಭ್ಯವಿದೆ. ನೆಲ ಅಂತಸ್ತಿನಲ್ಲಿ ಮಕ್ಕಳ ಉಡುಪುಗಳು, ಪ್ರಥಮ ಅಂತಸ್ತಿನಲ್ಲಿ ಮಹಿಳೆಯರ ಎಲ್ಲಾ ತರಹದ ಉಡುಪುಗಳು, ಎರಡನೇ ಅಂತಸ್ತಿನಲ್ಲಿ ಮಹಿಳೆಯರ ಅಚ್ಚುಮೆಚ್ಚಿನ ಸೀರೆಗಳು ಹಾಗೂ ಮೂರನೇ ಅಂತಸ್ತಿನಲ್ಲಿ ಪುರುಷರ ವಿವಿಧ ಉಡುಪುಗಳ ಸಂಗ್ರಹವಿದೆ, ಕುಟುಂಬ ಸಮೇತ ಆಗಮಿಸಿ ಎಲ್ಲರಿಗೂ ಒಪ್ಪುವ ಬಟ್ಟೆಗಳನ್ನು ಖರೀದಿಸಲು ಸೂಕ್ತವಾದ ಮಳಿಗೆಯಾಗಿದೆ.

ಗ್ರಾಹಕರ ನಂಬಿಕೆ ವಿಶ್ವಾಸದಿಂದ ಮೇಲೆ ಬಂದಿದ್ದೇವೆ:ಪ್ರಥಮ್

ರೀಲ್ಸ್ ಮಾಡುವುದನ್ನು ವಿರೋಧಿಸಿದ್ದಕ್ಕೆ ಗಂಡನನ್ನೇ ಹತ್ಯೆ ಮಾಡಿದ ಪತ್ನಿ!

Posted by Vidyamaana on 2024-01-09 14:54:51 |

Share: | | | | |


ರೀಲ್ಸ್ ಮಾಡುವುದನ್ನು ವಿರೋಧಿಸಿದ್ದಕ್ಕೆ ಗಂಡನನ್ನೇ ಹತ್ಯೆ ಮಾಡಿದ ಪತ್ನಿ!

ಪಾಟ್ನಾ: ರೀಲ್ಸ್ ಮಾಡುವುದನ್ನು ವಿರೋಧಿಸಿದ್ದಕ್ಕೆ ಪತ್ನಿಯೊಬ್ಬಳು ಅಪ್ಪ- ಅಮ್ಮನೊಂದಿಗೆ ಸೇರಿ ಗಂಡನನ್ನೇ ಹತ್ಯೆ ಮಾಡಿರುವ ಘಟನೆ ನಡೆದಿದೆ.ಈ ಘಟನೆ ಬಿಹಾರದ (Bihar) ಬೇಗುಸರಾಯ್‌ನಲ್ಲಿ (Begusarai) ನಡೆದಿದೆ. ಮಹೇಶ್ವರ್ ಕುಮಾರ್ ಸಾವನ್ನಪ್ಪಿದ ದುರ್ದೈವಿ. ಈ ವ್ಯಕ್ತಿ ಕೋಲ್ಕತ್ತಾದಲ್ಲಿ (Kolkata) ಕೂಲಿ ಕೆಲಸ ಮಾಡುತ್ತಿದ್ದರು.ಪತ್ನಿ ರಾಣಿಕುಮಾರಿಗೆ ರೀಲ್ಸ್ ಮಾಡುವ ಹುಚ್ಚಿತ್ತು. ಆದರೆ, ಪತಿ ಅದನ್ನು ವಿರೋಧಿಸಿದ್ದರು. ಹೀಗಾಗಿ ಕೋಪಗೊಂಡ ಪತ್ನಿಯು ತನ್ನ ತಂದೆ-ತಾಯಿಯೊಂದಿಗೆ ಸೇರಿಕೊಂಡು ಹತ್ಯೆ ಮಾಡಿದ್ದಾಳೆ ಎನ್ನಲಾಗಿದೆ.


ಫಫೌತ್ ಗ್ರಾಮದ ರಾಣಿ ಕುಮಾರಿ ಸುಮಾರು 7 ವರ್ಷಗಳ ಹಿಂದೆ ಮಹೇಶ್ವರ್ ನನ್ನ ಮದುವೆಯಾಗಿದ್ದರು. ಮಹೇಶ್ವರ್ ಕೆಲಸಕ್ಕೆ ಹೋಗುವ ವೇಳೆ ಫಫೌತ್ ಗ್ರಾಮದಲ್ಲಿನ ತನ್ನ ಅತ್ತೆಯ ಮನೆಗೆ ಹೋಗಿದ್ದರು ಎನ್ನಲಾಗಿದೆ. ಇನ್ಸ್ಟಾಗ್ರಾಂ ರೀಲ್ಸ್ ವಿಚಾರವಾಗಿ ಮಹೇಶ್ವರ್ ಮತ್ತು ರಾಣಿ ಕುಮಾರಿ ನಡುವೆ ವಾಗ್ವಾದ ನಡೆದಿತ್ತು. ಆಗ ಜಗಳ ವಿಕೋಪಕ್ಕೆ ಹೋಗಿ ಕತ್ತು ಹಿಸುಕಿ ಕೊಲೆ ಮಾಡಿದ್ದಾಳೆ ಎನ್ನಲಾಗಿದೆ.

ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಪತ್ನಿ ಬಂಧಿಸಿ ತನಿಖೆ ಕೈಗೊಂಡಿದ್ದಾರೆ.



Leave a Comment: