ಸಿಎಂ ಸಿದ್ದರಾಮಯ್ಯರನ್ನು‌ ಭೇಟಿಯಾದ ಶಾಸಕ ಆಶೋಕ್ ರೈ

ಸುದ್ದಿಗಳು News

Posted by vidyamaana on 2024-07-03 19:44:44 |

Share: | | | | |


ಸಿಎಂ ಸಿದ್ದರಾಮಯ್ಯರನ್ನು‌ ಭೇಟಿಯಾದ ಶಾಸಕ ಆಶೋಕ್ ರೈ

ಪುತ್ತೂರು: ಪುತ್ತೂರು ಶಾಸಕರಾದ ಅಶೋಕ್ ರೈ ಯವರು ಬುಧವಾರದಂದು ಬೆಂಗಳೂರಿನಲ್ಲಿ ಸಿ ಎಂ‌ನಿವಾಸದಲ್ಲಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಪುತ್ತೂರಿಗೆ‌ಮೆಡಿಕಲ್ ಕಾಲೇಜು ಮತ್ತು ಕ್ಷೇತ್ರಕ್ಕೆ ಹೆಚ್ಚು ಅನುದಾನ ನೀಡುವಂತೆ ಮನವಿ ಮಾಡಿದರು.

   ಸಿದ್ದರಾಮಯ್ಯ ಅವರೊಂದಿಗೆ ಮಾತುಕತೆ ನಡೆಸಿದ ಶಾಸಕರು ಪುತ್ತೂರಿಗೆ ಮೆಡಿಕಲ್ ಕಾಲೇಜು ಬೇಡಿಕೆಯನ್ನು ನೆನಪಿಸಿದರು. ಬಜೆಟ್ ನಲ್ಲಿ ಈ ಬಾರಿ ಅನುಮೋದನೆಯಾಗಬೇಕು ಮತ್ತು ತನ್ನ ಕ್ಷೇತ್ರದ ಜನರ ಬಹುಕಾಲದ ಬೇಡಿಕೆಯಾದ ಮೆಡಿಕಲ್ ಕಾಲೇಜನ್ನು ಮಂಜೂರು ಮಾಡುವಂತೆ ಮನವಿ ಮಾಡಿದರು. ಕಳೆದ ಬಜೆಟ್ ನಲ್ಲಿ ಅನುಮೋದನೆಯಾಗಬಹುದು ಎಂಬ ನಿರೀಕ್ಷೆ ಇತ್ತು ಆದರೆ ಗ್ಯಾರಂಟಿ ಯೋಜನೆಗೆ ಬಜೆಟ್ ನಲ್ಲಿ ಹೆಚ್ಚು ಅನುದಾನ ಇರಿಸಿದ ಕಾರಣ ನಾನು ಹೆಚ್ಚು ಒತ್ತಡ ಹಾಕಿರಲಿಲ್ಲ. ಮೆಡಿಕಲ್ ಕಾಲೇಜು ಆಗಬೇಕು‌ಎಂಬುದು‌ ನನ್ನ ಮತ್ತು ನನ್ನ ಕ್ಷೇತ್ರದ ಜನರ ಕನಸಾಗಿದೆ ಅದನ್ನು ನನಸು‌ಮಾಡಿಕೊಡಬೇಕು ಎಂದು ಸಿ ಎಂ ಅವರಲ್ಲಿ ಶಾಸಕರು ವಿನಂತಿಸಿದರು.

ಕಾಲೇಜು‌ನಿರ್ಮಾಣಕ್ಕೆ ಈಗಾಗಲೇ ಜಾಗ ಗುರುತಿಸಲಾಗಿದೆ ಎಂದೂ ಶಾಸಕರು ಸಿಎಂ ಅವರಲ್ಲಿ ತಿಳಿಸಿದರು.

ಹೆಚ್ಚು‌ಅನುದಾನ ಕೊಡಿ

ನನ್ನ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ದಿ ಕೆಲಸಗಳು ಆಗಬೇಕಿದೆ. ರಸ್ತೆ, ಸರಕಾರಿ ಕಟ್ಟಡಗಳು, ಶಾಲಾ ,ಕಾಲೇಜು ಕಟ್ಟಡಗಳು, ತಡೆಗೋಡೆ ,ಬೃಹತ್ ಅಣೆಕಟ್ಟುಗಳು ಸೇರಿದಂತೆ ಕ್ಷೇತ್ರದ ಜನರಿಂದ ದಿನದಿಂದ ದಿನಕ್ಕೆ ಕಾಮಗಾರಿಯ ಬೇಡಿಕೆಗಳು ಬರುತ್ತಿದ್ದು ಈಗ ಬರುತ್ತಿರುವ ಅನುದಾನವನ್ನು ಹೆಚ್ಚು ಪ್ರಮಾಣದಲ್ಲಿ ಹಂಚಿಕೆ ಮಾಡಲು ಸಾಧ್ಯವಾಗುತ್ತಿಲ್ಲ. ಅನೇಕ ವರ್ಷಗಳಿಂದ ಇರುವ ಕೆಲವೊಂದು ಕಾಮಗಾರಿ ಬೇಡಿಕೆಗಳಿಗೆ ಅನುದಾನವನ್ನು‌ನೀಡಬೇಕಿದೆ ಈ ಕಾರಣಕ್ಕೆ ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಹೆಚ್ಚು ಅನುದಾನ ನೀಡುವಂತೆ ಶಾಸಕರು‌ಮನವಿ ಸಲ್ಲಿಸಿದರು.

 Share: | | | | |


ಸಂಚಾರ ಠಾಣೆಯ ಪೋಲಿಸ್ ಕಾನ್ಸ್‌ಟೇಬಲ್ ಆತ್ಮಹತ್ಯೆ – ಸಾವಿಗೆ ಕಾರಣ ನಿಗೂಢ

Posted by Vidyamaana on 2023-09-15 04:39:31 |

Share: | | | | |


ಸಂಚಾರ ಠಾಣೆಯ ಪೋಲಿಸ್ ಕಾನ್ಸ್‌ಟೇಬಲ್ ಆತ್ಮಹತ್ಯೆ – ಸಾವಿಗೆ ಕಾರಣ ನಿಗೂಢ

ಮಂಗಳೂರು ಸಂಚಾರ ದಕ್ಷಿಣ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೋಲಿಸ್ ಕಾನ್ಸ್‌ಟೇಬಲ್ ಒಬ್ಬರು ಆತ್ಮಹತ್ಯೆಗೈದು ಸಾವಿಗೆ ಶರಣಾಗಿರುವ ಘಟನೆ ನಡೆದಿದೆ.


ಮೃತ ಪೋಲಿಸ್ ಕಾನ್ಸ್‌ಟೇಬಲ್ ನನ್ನು ಗದಗ ಜಿಲ್ಲೆಯ ರೋಣ ತಾಲೂಕಿನ ಯಾವಗಲ್ ನ ವೀರಣ್ಣ ಎಂಬವರ ಪುತ್ರ ಮಹೇಶ್ ಸವದತ್ತಿ (31) ಎಂದು ಗುರುತಿಸಲಾಗಿದೆ.


ಮೃತ ಮಹೇಶ್ 23-07-2018 ರಂದು ಪೊಲೀಸ್ ಇಲಾಖೆಗೆ ನೇಮಕಾತಿ ಹೊಂದಿ ಮೂಲ ತರಬೇತಿಯನ್ನು ಹಾಸನ ದಲ್ಲಿ ಪಡೆದು ದಿನಾಂಕ 07-05-2019 ರಂದು ಮಂಗಳೂರು ಸಂಚಾರ ದಕ್ಷಿಣ ಪೊಲೀಸ್ ಠಾಣೆಗೆ ಕರ್ತವ್ಯಕ್ಕೆ ಹಾಜರಾಗಿ ಪೋಲಿಸ್ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು.


ಆದರೆ ಇಂದು ಕಪಿತಾನಿಯೋ ಬಳಿಯ ಸೈಮಾನ್ ಲೈನ್ ನಲ್ಲಿರುವ ಬಾಡಿಗೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ‌ ಎನ್ನಲಾಗಿದೆ. ಮೃತರ ಪೋಷಕರು ಮಂಗಳೂರಿನತ್ತ ಪ್ರಯಾಣ ಬೆಳೆಸಿದ್ದು, ಮೃತರ ಸಾವಿಗೆ ಕಾರಣ ತಿಳಿದುಬಂದಿಲ್ಲ.

ರಾಜಸ್ಥಾನದಲ್ಲಿ ಭೀಕರ ರಸ್ತೆ ಅಪಘಾತ ; ಟ್ರಕ್ ಗೆ ಕಾರು ಡಿಕ್ಕಿ ಐವರು ಪೊಲೀಸರ ಸಾವು

Posted by Vidyamaana on 2023-11-20 15:27:41 |

Share: | | | | |


ರಾಜಸ್ಥಾನದಲ್ಲಿ ಭೀಕರ ರಸ್ತೆ ಅಪಘಾತ ; ಟ್ರಕ್ ಗೆ ಕಾರು ಡಿಕ್ಕಿ  ಐವರು ಪೊಲೀಸರ ಸಾವು

ಜೈಪುರ: ಭೀಕರ ರಸ್ತೆ ಅಪಘಾತದಲ್ಲಿ ಐವರು ಪೊಲೀಸ್‌ ಅಧಿಕಾರಿಗಳು  ಸಾವನ್ನಪ್ಪಿ ಇಬ್ಬರು ಗಾಯಗೊಂಡಿರುವ ಘಟನೆ ರಾಜಸ್ಥಾನದ ಚುರು ಎಂಬಲ್ಲಿ ಭಾನುವಾರ ನಡೆದಿದೆ.


ಇಂದು ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿ ಆಗಲಿದ್ದ ಕಾರಣ ಪೊಲೀಸರು ಕಾರಿನಲ್ಲಿ ನಗೌರ್‌ನಿಂದ ಜುಂಜುನುಗೆ ಕರ್ತವ್ಯಕ್ಕಾಗಿ ಪ್ರಯಾಣಿಸುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ ಎಂದು ವರದಿಯಾಗಿದೆ.




ಪೊಲೀಸರ ವಾಹನ ಅತೀ ವೇಗದಿಂದ ಪ್ರಯಾಣಿಸುತ್ತಿತ್ತು. ಈ ವೇಳೆ ಟ್ರಕ್‌ ವೊಂದು ಓವರ್‌ ಟೇಕ್‌ ಮಾಡಿ ಹೋಗಿದೆ. ಇದೇ ಸಂದರ್ಭದಲ್ಲಿ ಮುಂದೆ ಹೋಗುತ್ತಿದ್ದ ಟ್ರಕ್‌ ಅಚಾನಕ್‌ ಆಗಿ ಬ್ರೇಕ್‌ ಹಾಕಿದೆ. ಪರಿಣಾಮ ಪೊಲೀಸರ ವಾಹನ ಟ್ರಕ್‌ ಗೆ ಹೋಗಿ ಢಿಕ್ಕಿ ಹೊಡೆದಿದೆ. ಇದರಿಂದ ವಾಹನದಲ್ಲಿ ಐವರು ಪೊಲೀಸರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿರುವುದಾಗಿ ವರದಿ ತಿಳಿಸಿದೆ. 


ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದಾರೆ. ಮೃತ ಪೊಲೀಸರೆಲ್ಲ ರಾಜಸ್ಥಾನದ ನಾಗೌರ್ ಜಿಲ್ಲೆಯವರೆಂದು ವರದಿ ತಿಳಿಸಿದೆ.

ಪಡಿತರ ಚೀಟಿ ತಿದ್ದುಪಡಿ-ಪರಿಷ್ಕೃತ ದಿನಾಂಕ ಪ್ರಕಟ

Posted by Vidyamaana on 2023-09-06 07:05:24 |

Share: | | | | |


ಪಡಿತರ ಚೀಟಿ ತಿದ್ದುಪಡಿ-ಪರಿಷ್ಕೃತ ದಿನಾಂಕ ಪ್ರಕಟ

ಪುತ್ತೂರು : ಪಡಿತರ ಚೀಟಿ ತಿದ್ದುಪಡಿಗೆ ಅರ್ಜಿ ಸಲ್ಲಿಸುವ ದಿನಾಂಕವನ್ನು ಜಿಲ್ಲಾವಾರು ಬದಲಾವಣೆ ಮಾಡಿ ಆಹಾರ ಇಲಾಖೆ ಆದೇಶ ಹೊರಡಿಸಿದೆ.


ದಕ್ಷಿಣ ಕನ್ನಡ, ಉಡುಪಿ, ಕೊಡಗು, ಉತ್ತರ ಕನ್ನಡ ಸಹಿತ ವಿವಿಧ ಜಿಲ್ಲೆಗಳಲ್ಲಿ ಸೆ. 12ರಿಂದ ಸೆ. 14ರ ವರೆಗೆ ಬೆಳಗ್ಗೆ 10ರಿಂದ ಸಂಜೆ 6ರ ವರೆಗೆ ಅವಕಾಶ ಕಲ್ಪಿಸಲಾಗಿದೆ. ಈ ಮೊದಲು ಸೆ.1 ರಿಂದ ಸೆ. 10ರ ವರೆಗೆ ಪಡಿತರ ಚೀಟಿ ತಿದ್ದುಪಡಿಗೆ ನಿಗದಿಪಡಿಸಿದ್ದ ಆದೇಶವನ್ನು ಇಲಾಖೆ ಹಿಂಪಡೆದಿದೆ. ಪಡಿತರ ಚೀಟಿ ತಿದ್ದುಪಡಿಗೆ ಭರಪೂರ ಅರ್ಜಿ ಸಲ್ಲಿಕೆಯಾಗುತ್ತಿರುವ ಕಾರಣದಿಂದ ಆಹಾರ ಇಲಾಖೆಯ ಸರ್ವ‌್ರನಲ್ಲಿ ಸಮಸ್ಯೆ ಕಾಣಿಸಿಕೊಂಡಿದೆ 1 ಗಂಟೆಯಲ್ಲಿ ಸುಮಾರು 500ಕ್ಕೂ ಅಧಿಕ ಅರ್ಜಿ ಸಲ್ಲಿಕೆಯಾಗುತ್ತಿರುವ ಕಾರಣದಿಂದ ಸರ್ವರ್ ಸಮಸ್ಯೆ ಎದುರಾಗಿತ್ತು. ಇದರಿಂದಾಗಿ ಜನರು ಪಡಿತರ ಚೀಟಿ ತಿದ್ದುಪಡಿಗೆ ವಿವಿಧ ಕೇಂದ್ರಗಳನ್ನು ಸಂಪರ್ಕಿಸಿದರೂ ತಿದ್ದುಪಡಿ ಆಗುತ್ತಿರಲಿಲ್ಲ. ಈ ಸಮಸ್ಯೆಯನ್ನು ಗಮನಿಸಿದ ಆಹಾರ ಇಲಾಖೆ ಸರ್ವರ್ ನಿಭಾಯಿಸಲು ಇದೀಗ ಜಿಲ್ಲಾವಾರು ದಿನಾಂಕವನ್ನು ನಿಗದಿಪಡಿಸಿದೆ. ಅದರಂತೆ ದಕ್ಷಿಣ ಕನ್ನಡ, ಉಡುಪಿ, ಕೊಡಗು, ಉತ್ತರ ಕನ್ನಡ ಸಹಿತ ವಿವಿಧ ಜಿಲ್ಲೆಗಳಲ್ಲಿ ಸೆ. 12ರಿಂದ ಸೆ. 14ರ ವರೆಗೆ ಬೆಳಗ್ಗೆ 10ರಿಂದ ಸಂಜೆ 6ರ ವರೆಗೆ ಅವಕಾಶ ಮಾಡಲಾಗಿದೆ.

ಕೆಎಫ್‌ಡಿಸಿ ಕಾರ್ಮಿಕರಿಗೆ ಬೋನಸ್ ನೀಡಲು ಸರಕಾರದ ಒಪ್ಪಿಗೆ

Posted by Vidyamaana on 2023-08-25 14:42:10 |

Share: | | | | |


ಕೆಎಫ್‌ಡಿಸಿ ಕಾರ್ಮಿಕರಿಗೆ ಬೋನಸ್ ನೀಡಲು ಸರಕಾರದ ಒಪ್ಪಿಗೆ

ಪುತ್ತೂರು: ಕರ್ನಾಟಕ ರಬ್ಬರ್ ನಿಗಮದಲ್ಲಿ ದಿನಗೂಲಿ ಕಾರ್ಮಿಕರಿಗೆ ಬಾಕಿ ಇರುವ ಬೋನಸ್ ನ್ನು ವಾರದೊಳಗೆ ಪಾವತಿ ಮಾಡುವುದಾಗಿ ಅರಣ್ಯ ಸಚಿವ ಈಶ್ವರಖಂಡ್ರೆ ಒಪ್ಪಿಕೊಂಡಿದ್ದಾರೆ.

ಕಳೆದ ೫೦ ವರ್ಷಗಳಿಂದ ಕರ್ನಾಟಕ ರಬ್ಬರ್ ನಿಗಮದಲ್ಲಿ ದಿನಗೂಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿರುವ ಕಾರ್ಮಿಕರಿಗೆ ಪ್ರತೀ ದೀಪಾವಳಿ ಸಮಯದಸಲ್ಲಿ ೨೦ ಶೇ. ಬೋನಸ್ ನೀಡುವುದಾಗಿ ಸರಕಾರ ತಿಳಿಸಿತ್ತು. ಆದರೆ ಕಳೆದ ಸಾಲಿನಲ್ಲಿ ೨೦ ಶೇ. ಬೋನಸ್‌ನಲ್ಲಿ ಕೇವಲ೮.೬೭% ಮಾತ್ರ ನೀಡಲಾಗಿತ್ತು. ಉಳಿದ ೧೧.೩೩ ಬೋನಸ್ ಬಾಕಿ ಇರಿಸಲಾಗಿತ್ತು.

ಬೋನಸ್ ಬಾಕಿ ಇರಿಸಿರುವ ಬಗ್ಗೆ ಪುತ್ತೂರು, ಸುಳ್ಯ ಮತ್ತು ಕಡಬ ಭಾಗದ ಕಾರ್ಮಿಕರು ಪುತ್ತೂರು ಶಾಸಕರಾದ ಆಶೋಕ್ ರೈಯವರಲ್ಲಿ ಮನವಿ ಮಾಡಿ ಸರಕಾರದಿಂದ ಬೋನಸ್ ತೆಗೆಸಿಕೊಡುವಂತೆ ಕೇಳಿಕೊಂಡಿದ್ದರು. ಈ ಸಂದರ್ಭದಲ್ಲಿ ಭರವಸೆ ನೀಡಿದ್ದ ಶಾಸಕರು ಈ ಬಗ್ಗೆ ಅರಣ್ಯ ಸಚಿವರನ್ನು ಭೇಟಿಯಗಿ ಅವರ ಜೊತೆ ಖುದ್ದು ಮಾತುಕತೆ ನಡೆಸಿ ಬಾಕಿ ಇರುವ ಬೋನಸ್ ಪಾವತಿ ಮಾಡುವಂತೆ ಮನವಿ ಮಾಡುವುದಾಗಿಯೂ ಮತ್ತು ಈ ವಿಚಾರವನ್ನು ಸರಕಾರದ ಗಮನಕ್ಕೆ ತರುವುದಾಗಿ ಹೇಳಿದ್ದರು. ಕಾರ್ಮಿಕರ ಬೋನಸ್ ಬಾಕಿ ಇರಿಸಿರುವ ವಿಚಾರವನ್ನು ಶಾಸಕರಾದ ಅಶೋಕ್ ರೈ ಯವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಲ್ಲಿ ತಿಳಿಸಿದ್ದರು.

ಆ. ೨೫ ರಂದು ಈ ಬಗ್ಗೆ ಸಚಿವರನ್ನು ಭೇಟಿಯಾದ ಶಾಸಕ ಅಶೋಕ್ ರೈ ಬಾಕಿ ಇರುವ ಬೋನಸ್ ನ್ನು ಕಾರ್ಮಿಕರಿಗೆ ನೀಡುವ ಬಗ್ಗೆ ಅರಣ್ಯ ಸಚಿವರಾದ ಈಶ್ವರಖಂಡ್ರೆ ಜೊತೆ ಚರ್ಚೆ ನಡೆಸಿದ್ದು ಈ ವೇಳೆ ಮಾತನಾಡಿದ ಸಚಿವರು ಒಂದು ವಾರದೊಳಗೆ ಬಾಕಿ ಇರುವ ಬೋನಸನ್ನು ಕಾರ್ಮಿಕರಿಗೆ ನೀಡಲು ಹಣಕಾಸು ಇಲಾಖೆಯು ಅನುಮತಿ ನೀಡಿದ್ದು ಬೋನಸ್ ನೀಡುವುದಾಗಿ ತಿಳಿಸಿದ್ದಾರೆ.


ಎಷ್ಟು ಕಾರ್ಮಿಕರು?

ಪುತ್ತೂರು, ಸುಳ್ಯ ಮತ್ತು ಕಡಬ ತಾಲೂಕು ವ್ಯಾಪ್ತಿಯಲ್ಲಿ ಕರ್ನಾಟಕ ರಬ್ಬರ್ ನಿಗಮದಲ್ಲಿ ದಿನಗೂಲಿ ನೌಕರರಾಗಿ ಕೆಲಸ ಮಾಡುವ ಸುಮಾರು ೧೫ ಸಾವಿರ ಕಾರ್ಮಿಕರಿದ್ದಾರೆ. ಈ ಕಾರ್ಮಿಕರು ಹೆಚ್ಚು ದುಡಿಯಬೇಕು ಎಂಬ ಉದ್ದೇಶದಿಂದ ಸರಕಾರ ಇವರಿಗೆ ಬೋನಸ್ ನೀಡುವುದಾಗಿ ಹೇಳಿತ್ತು. ಪ್ರತೀ ದೀಪಾವಳಿ ಸಮಯದಲ್ಲಿ ಕಾರ್ಮಿಕರಿಗೆ ಅವರು ಮಾಡಿರುವ ಕೆಲಸದ ಆಧಾರದ ಮೇಲೆ ೨೦ ಶೇ ಬೋನಸ್ ನೀಡುತ್ತಿತ್ತು. ಆದರೆ ಕಳೆದ ಬಾರಿ ಪೂರ್ತಿ ಬೋನಸ್ ನೀಡಿರಲಿಲ್ಲ. ಇದೀಗ ಪುತ್ತೂರು ಶಾಸಕರಾದ ಅಶೋಕ್ ರೈಯವರ ಮುತುವರ್ಜಿಯಿಂದ ಸುಮಾರು ೧೫ ಸಾವಿರ ಕಾರ್ಮಿಕ ಕುಟುಂಬಗಳಿಗೆ ಬೋನಸ್ ಲಭಿಸುವಂತಾಗಿದೆ.


ಕೆಎಫ್‌ಡಿಸಿ ನಿಗಮದಲ್ಲಿ ದಿನಗೂಲಿ ನೌಕರರ ಬೋನಸ್ ಬಾಕಿ ಇರಿಸಿದ ಬಗ್ಗೆ ಕಾರ್ಮಿಕರು ನನ್ನ ಗಮನಕ್ಕೆ ತಂದಿದ್ದರು. ಈ ಬಗ್ಗೆ ನಾನು ಮುಖ್ಯಮಂತ್ರಿ ಮತ್ತು ಅರಣ್ಯ ಸಚಿವರಲ್ಲಿ ಮನವಿ ಮಾಡಿದ್ದೆ. ಆ. ೨೫ ರಂದು ಅರಣ್ಯ ಸಚಿವರು ಸೀಎಂ ಆದೇಶದ ಮೇರೆಗೆ ಬೋನಸ್ ನೀಡಲು ಒಪ್ಪಿಕೊಂಡಿದ್ದು ಮುಂದಿನ ವಾರ ಎಲ್ಲರಿಗೂ ಬಾಕಿ ಇರುವ ಬೋನಸ್ ಸಿಗಲಿದೆ. ಕಾರ್ಮಿಕರ ನೋವಿಗೆ ಸ್ಪಂದಿಸಿದ ಸೀಎಂ ಸಿದ್ದರಾಮಯ್ಯ ಅವರಿಗೆ ಈ ವಿಚಾರದಲ್ಲಿ ಅಭಿನಂದನೆಯನ್ನು ಸಲ್ಲಿಸುತ್ತೇನೆ

ಅಶೋಕ್‌ಕುಮಾರ್ ರೈ, ಶಾಸಕರು ಪುತ್ತೂರು

ಬಾಯಲ್ಲಿ ಬುರು ಬುರು ನೊರೆ ಎಲ್ಲಾ ಲೊಟ್ಟೆ! – ಚೈತ್ರಾ ಆಸ್ಪತ್ರೆಯಿಂದ ಡಿಸ್ಚಾರ್ಜ್

Posted by Vidyamaana on 2023-09-18 15:46:31 |

Share: | | | | |


ಬಾಯಲ್ಲಿ ಬುರು ಬುರು ನೊರೆ ಎಲ್ಲಾ ಲೊಟ್ಟೆ! – ಚೈತ್ರಾ ಆಸ್ಪತ್ರೆಯಿಂದ ಡಿಸ್ಚಾರ್ಜ್

ಬೆಂಗಳೂರು: ಬೈಂದೂರು ಮೂಲದ ಉದ್ಯಮಿಯೊಬ್ಬರಿಗೆ ಕಳೆದ ವಿಧಾನಸಭಾ ಚುನಾವಣಾ ಸಂದರ್ಭದಲ್ಲಿ ಬಿಜೆಪಿ ಟಿಕೆಟ್ ತೆಗಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂಪಾಯಿಗಳನ್ನು ಪಡೆದುಕೊಂಡು ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಸಿಸಿಬಿ ಪೊಲೀಸರಿಂದ ಬಂಧಿಸಲ್ಟಟ್ಟಿರುವ ಹಿಂದು ನಾಯಕಿ ಮತ್ತು ವಾಗ್ಮಿ ಚೈತ್ರ ಕುಂದಾಪುರ ಮತ್ತು ಆಕೆಯ ಸಹಚರರ ತೀವ್ರ ವಿಚಾರಣೆ ನಡೆಯುತ್ತಿದೆ.

ಈ ನಡುವೆ ವಿಚಾರಣೆ ಸಂದರ್ಭದಲ್ಲಿ ಬಾಯಲ್ಲಿ ನೊರೆ ಬಂದು ಕುಸಿದು ಬಿದ್ದಿದ್ದ ಚೈತ್ರಾ ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.

ಇದೀಗ ಚೈತ್ರಾ ಕುಂದಾಪುರ ಸಂಪೂರ್ಣವಾಗಿ ಚೇತರಿಸಿಕೊಂಡಿರುವ ಹಿನ್ನಲೆಯಲ್ಲಿ ಅವರನ್ನು ಇಂದು (ಸೆ.18) ಆಸ್ಪತ್ರೆಯಿಂದ ಬಿಡುಗಡೆ ಮಾಡಿ ಮತ್ತೆ ವಿಚಾರಣೆಗಾಗಿ ಸಿಸಿಬಿ ಕಚೇರಿಗೆ ಕರೆತರಲಾಗಿದೆ. ಇನ್ನು ಅವರ ಅಸಲಿ ವಿಚಾರಣೆ ಪ್ರಾರಂಭಗೊಳ್ಳಲಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಇನ್ನು, ಚೈತ್ರಾಳ ದೇಹಾರೋಗ್ಯ ಸ್ಥಿತಿ ನಾರ್ಮಲ್ ಆಗಿದ್ದು ಮಾಡಲಾಗಿರುವ ಎಲ್ಲಾ ಟೆಸ್ಟ್ ಗಳಲ್ಲಿಯೂ ಆಕೆಗೆ ಯಾವುದೇ ರೀತಿಯ ಗಂಭೀರ ಸಮಸ್ಯೆಗಳಿರಲಿಲ್ಲ ಎಂದು ತಿಳಿದು ಬಂದಿದೆ.

ಇನ್ನು ವಿಚಾರಣೆ ಸಂದರ್ಭದಲ್ಲಿ ಬಾಯಲ್ಲಿ ನೊರೆ ಬಂದಿರುವ ವಿಚಾರಕ್ಕೆ ಸಂಬಂಧಿಸಿದಂತೆ, ಇದು ಚೈತ್ರಾ ಆಡಿರುವ ಮಹಾ ಡ್ರಾಮಾ ಎಂಬ ಅಂಶವೂ ಇದೀಗ ಖಚಿತಗೊಂಡಿದ್ದು, ಇದೀಗ ಆಸ್ಪತ್ರೆಯಿಂದ ನೇರವಾಗಿ ವಿಚಾರಣಾ ಸ್ಥಳಕ್ಕೆ ಆಕೆಯನ್ನು ಅಧಿಕಾರಿಗಳು ಕರೆದೊಯ್ದಿರುವ ಕಾರಣ, ಸಿಸಿಬಿ ಪೊಲೀಸರ ಅಸಲೀ ವಿಚಾರಣೆ ಇನ್ನು ಶುರುವಾಗಲಿದೆ!

ಚೈತ್ರಾಳ ಆರೋಗ್ಯ ಸ್ಥಿತಿಯ ಬಗ್ಗೆ ಡಾ. ದಿವ್ಯ ಪ್ರಕಾಶ್ ಮಾಹಿತಿ ನೀಡಿದ್ದು, ‘ಎಲ್ಲಾ ಪರೀಕ್ಷೆಗಳನ್ನು ಮಾಡಲಾಗಿದ್ದು, ಎಲ್ಲವೂ ನಾರ್ಮಲ್ ಆಗಿದೆ..’ ಎಂದು ಅವರು ಮಾಹಿತಿ ನೀಡಿದ್ದಾರೆ. ಇನ್ನು ಬಾಯಲ್ಲಿ ನೊರೆ ಬಂದಿರುವ ವಿಚಾರಕ್ಕೆ ಸಂಬಂಧಿಸಿ ಮಾಹಿತಿ ನೀಡಿರುವ ವೈದ್ಯರು, ‘ಅದು ಫಂಕ್ಷನಲ್ ಆಗಿ ಆಗಿರುವಂತದ್ದು, ಅವರೇ ಅದನ್ನು ಮಾಡಿಕೊಂಡಿದ್ದಾರೆ. ಫಿಟ್ಸ್ ಸ್ಥಿತಿ ಏನೂ ಕಂಡುಬಂದಿಲ್ಲ, ಬಹುಷಃ ಅದು ಸಾಬೂನು ನೊರೆಯಾಗಿರಬಹುದು..’ ಎಂದು ಹೇಳಿದ್ದಾರೆ.

‘ಆಕೆಯಲ್ಲಿ ಫಿಟ್ಸ್ ಸಮಸ್ಯೆ ಪತ್ತೆಗಾಗಿ ಎಂ.ಆರ್.ಐ ಸ್ಕ್ಯಾನಿಂಗ್ ನಡೆಸಲಾಗಿದೆ ಮಾತ್ರವಲ್ಲದೇ ಇಸಿಜಿ  ಕೂಡ ಮಾಡಲಾಗಿದೆ. ಈ ಎಲ್ಲಾ ಟೆಸ್ಟ್ ರಿಪೋರ್ಟ್ ನಾರ್ಮಲ್ ಆಗಿದೆ. ಆದರೆ ನ್ಯೂರಾಲಜಿಸ್ಟ್ ಕೆಲವೊಂದು ಮಾತ್ರೆಗಳನ್ನು ಕೊಟ್ಟಿದ್ದಾರೆ..’ ಎಂದು ಡಾ. ದಿವ್ಯ ಪ್ರಕಾಶ್ ಮಾಹಿತಿ ನೀಡಿದ್ದಾರೆ.

ಆಸ್ಪತ್ರೆಯಿಂದ ಬಿಡುಗಡೆಗೊಂಡ ಚೈತ್ರಾ ಅವರನ್ನು ಸಿಸಿಬಿ ಅಧಿಕಾರಿಗಳು ವಿಕ್ಟೋರಿಯಾ ಆಸ್ಪತ್ರೆಯ ಹಿಂಬಾಗಿಲಿನ ಮೂಲಕ ಕರೆದೊಯ್ದಿದ್ದಾರೆ. ಇದೀಗ ಆಕೆಯ ವಿಚಾರಣೆ ಮತ್ತೆ ಪ್ರಾರಂಭಗೊಳ್ಳಲಿದ್ದು, ಯಾರಿಗೆಲ್ಲಾ ಹಣ ವರ್ಗಾವಣೆಯಾಗಿದೆ ಮತ್ತು ಈ ಪ್ರಕರಣದಲ್ಲಿ ಯಾರ್ಯಾರ ಕೈವಾಡ ಇದೆ ಎನ್ನುವ ವಿಚಾರಗಳಿಗೆ ಸಂಬಂಧಿಸಿ ಸಿಸಿಬಿ ಅಧಿಕಾರಿಗಳು ತೀವ್ರ ವಿಚಾರಣೆ ನಡೆಸುವ ಸಾಧ್ಯತೆಗಳಿವೆ.

ಉಪ್ಪಿನಂಗಡಿ : ಶಂಸುಲ್ ಉಲಮಾ ವುಮೆನ್ಸ್ ಶರೀಅತ್ ಕಾಲೇಜ್ ನಲ್ಲಿ ಟೈಲರಿಂಗ್ ತರಗತಿ ಉದ್ಘಾಟನೆ

Posted by Vidyamaana on 2023-07-19 16:03:08 |

Share: | | | | |


ಉಪ್ಪಿನಂಗಡಿ : ಶಂಸುಲ್ ಉಲಮಾ ವುಮೆನ್ಸ್ ಶರೀಅತ್ ಕಾಲೇಜ್ ನಲ್ಲಿ ಟೈಲರಿಂಗ್ ತರಗತಿ ಉದ್ಘಾಟನೆ

ಉಪ್ಪಿನಂಗಡಿ : ವಿದ್ಯೆ ಯಾವುದೇ ಇರಲಿ ಕಲಿತ ವಿದ್ಯೆಯನ್ನು ಬದುಕಿನಲ್ಲಿ ಉಪಯೋಗಕ್ಕೆ ತಂದರೆ ಮಾತ್ರ ಕಲಿಕೆಗೆ ಮಹತ್ವ ಬರುವುದು. ಕಲಿತಂತೆ  ಸರಳತೆಯಿಂದ ಬದುಕಿದರೆ ನೆಮ್ಮದಿಯ ಬದುಕು ಸಿಗುವುದು,ಕೆಲ ಮಹಿಳೆಯರು ಇಂದು ಆಡಂಬರದ ಬದುಕಿಗೆ ಜೋತು ಬಿದ್ದು ಕಡೆಗೆ ಕುಟುಂಬ ಕಲಹಕ್ಕೂ ಕಾರಣವಾಗುತ್ತಿರುವುದು ಕಾಣುತ್ತಿದ್ದೇವೆ. ಆದ್ದರಿಂದ ಶಿಸ್ತು ಹಾಗೂ ಸರಳತೆಯಿಂದ ಬದುಕುವ ಕಲೆಯನ್ನು ಪ್ರತಿಯೊಬ್ಬರೂ ಕಲಿತು ಕೊಳ್ಳಬೇಕು ಎಂದು ಕೆಮ್ಮಾರ ಶಂಸುಲ್ ಉಲಮಾ ವುಮೆನ್ಸ್ ಕಾಲೇಜ್ ಅಧ್ಯಕ್ಷ ಎಸ್.ಬಿ.ಮುಹಮ್ಮದ್ ದಾರಿಮಿ ಅವರು ಹೇಳಿದರು.

     ಅವರು ಕೆಮ್ಮಾರ ಶಕ್ತಿನಗರ ಶಂಸುಲ್ ಉಲಮಾ ವುಮೆನ್ಸ್ ಶರೀಅತ್ ಕಾಲೇಜ್ ನಲ್ಲಿ ವಿದ್ಯಾರ್ಥಿಗಳಿಗೆ ಟೈಲರಿಂಗ್ ತರಬೇತಿಯನ್ನು ಉದ್ಗಾಟಿಸಿ ಮಾತನಾಡುತ್ತಿದ್ದರು.

      ಮಹಿಳೆಯರು ವಿದ್ಯಾರ್ಥಿ ಜೀವನದಲ್ಲೇ ಟೈಲರಿಂಗ್ ನಂತಹ ಕೌಶಲ್ಯ ಆಧಾರಿತ ಶಿಕ್ಷಣವನ್ನು ಕಲಿತು ಕೊಂಡರೆ ಮುಂದೆ ಮನೆಯಲ್ಲಿದ್ದು ಕೊಂಡೇ ಕೈ ತುಂಬಾ ಸಂಪಾದಿಸಲು ಸಾಧ್ಯವಾಗುವುದು. ಎಂದು ಅವರು ಇದೇ ಸಂದರ್ಭದಲ್ಲಿ ಹೇಳಿದರು. 

    ಸಂಸ್ಥೆಯ ಉಸ್ತಾದರಾದ ಹನೀಫ್ ದಾರಿಮಿ ಪಡೀಲ್ ಮತ್ತು ಶೌಕತ್ತ್ ಫೈಝಿ ಗಂಡಿಬಾಗಿಲು ಸಮಾರಂಭದಲ್ಲಿ ಮಾತನಾಡಿದರು.ಶಿಕ್ಷಕಿಯರಾದ ಶಾಹಿರಾ ಮಾಹಿರ ಮತ್ತು ಸುಹೈಲಾ ಫಾಳಿಲಾ ಅವರು ವಿದ್ಯಾರ್ಥಿನಿಯರಿಗೆ ಟೈಲರಿಂಗ್ ತರಬೇತಿ ಯ ಬಗ್ಗೆ ಮಾಹಿತಿ ನೀಡಿದರು.



Leave a Comment: