ಚಾಲಕನ ನಿಯಂತ್ರಣ ತಪ್ಪಿ ಮನೆ ಮೇಲೆ ಬಿದ್ದ ಪಿಕಪ್ ವಾಹನ

ಸುದ್ದಿಗಳು News

Posted by vidyamaana on 2023-07-14 03:02:36 | Last Updated by Vidyamaana on 2023-09-05 09:08:10

Share: | | | | |


ಚಾಲಕನ ನಿಯಂತ್ರಣ ತಪ್ಪಿ ಮನೆ ಮೇಲೆ ಬಿದ್ದ ಪಿಕಪ್ ವಾಹನ

ವಿಟ್ಲ: ಪರಿಯಲ್ಲಡ್ಕ – ಸಾರಡ್ಕ ರಸ್ತೆಯ ಕೂರೇಲು ಎಂಬಲ್ಲಿ ಪಿಕಪ್ ರಸ್ತೆಯಿಂದ ಮನೆಯ ಮೇಲೆ ಬಿದ್ದಿದ್ದು, ಮನೆಯ ಒಳಗೆ ಮಹಿಳೆ ಸಿಲುಕಿ ಹಾಕಿಕೊಂಡಿದ್ದಾರೆ.ಕೂರೇಲು ಮಧ್ಯದ ಅಂಗಡಿಯ ಸಮೀಪದಲ್ಲಿ ರಸ್ತೆಯಿಂದ ಕೆಳಗಿದ್ದ ಮನೆಗೆ ಜು.14 ರ ಬೆಳಗ್ಗಿನ ಜಾವ ಚಾಲಕ ನಿಯಂತ್ರಣ ತಪ್ಪಿದ ಪಿಕಪ್ ಮನೆಯ ಮೇಲೆ ಬಿದ್ದಿದೆಅಪಘಾತದಿಂದ ಹಂಚಿನ ಮನೆ ಸಂಪೂರ್ಣ ಹಾನಿಯಾಗಿದೆ. ಪಿಕಪ್ ಕೋಳಿ ಸಾಗಟ ನಡೆಸುತಿತ್ತು. ಅಪಘಾತದಿಂದ ನೂರಾರು ಕೋಳಿಗಳು ಸತ್ತಿದೆ. ಅಪಘಾತ ನಡೆದಾಗ ಮನೆಯ ಒಳಗೆ ಮಹಿಳೆ ಮಲಗಿದ್ದರು, ಮಹಿಳೆಗೆ ಗಂಭೀರ ಗಾಯವಾದ ಪರಿಸ್ಥಿಯಲಿದ್ದಾರೆ.ಪಿಕಪ್ ವಾಹನವನ್ನು ತೆರವು ಮಾಡಡೆ, ಮಹಿಳೆಯನ್ನು ಹೊರಗೆ ತೆಗೆಯಲು ಸಾಧ್ಯವಿಲ್ಲದ ಸ್ಥಿತಿ ನಿರ್ಮಾಣವಾಗಿದೆ.

ಸ್ಥಳದಲ್ಲಿ ವಿಟ್ಲ ಪೊಲೀಸರು, ತುರ್ತು ಸೇವಾ ವಾಹನ ಬೀಡು ಬಿಟ್ಟಿದ್ದು, ಕ್ರೇನ್ ಬಳಸಿ ವಾಹನ ಮೇಲೆತ್ತುವ ಕಾರ್ಯಾಚರಣೆ ನಡೆಯುತ್ತಿದೆ.

 Share: | | | | |


ಬೆಳ್ತಂಗಡಿ : ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Posted by Vidyamaana on 2024-04-18 16:51:36 |

Share: | | | | |


ಬೆಳ್ತಂಗಡಿ : ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

ಬೆಳ್ತಂಗಡಿ : ತನ್ನ ಮನೆಯ ಸಾಕು ನಾಯಿ ಜೊತೆ ಮನೆ ಮಾಲಕಿ ಮುದ್ದಾಡುವಾಗ ಏಕಾಏಕಿ ದಾಳಿ ಮಾಡಿ ತಲೆ ಭಾಗವನ್ನು ಸೀಳಿ ಹಾಕಿ ಕೈಗೆ ಗಂಭೀರ ಗಾಯ ಮಾಡಿದ ಘಟನೆ ಎ.18 ರಂದು ಮಧ್ಯಾಹ್ನ ನಡೆದಿದೆ. ಗಾಯಗೊಂಡ ಮಹಿಳೆಯನ್ನು ತಕ್ಷಣ ಮಂಗಳೂರು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಬೆಳ್ತಂಗಡಿ ತಾಲೂಕಿನ ಮುಂಡಾಜೆ ಗ್ರಾಮದ ನಿಡಿಗಲ್ ಓಂಕಾರ್ ನಿವಾಸಿ ದಿ. ರಾಮ್ ದಾಸ್ ಪ್ರಭು ಅವರ ಪತ್ನಿ ಪೂರ್ಣಿಮಾ (49) ಎಂಬವರು ತನ್ನ ಮನೆಯ ಸಾಕು ನಾಯಿಯ ದಾಳಿಯಿಂದ ಗಂಭೀರ ಗಾಯಗೊಂಡ ಮಹಿಳೆಯಾಗಿದ್ದಾರೆ.

ಮಾತ್ರೆ ಪ್ಯಾಕೆಟ್ ಮೇಲೆ ಕೆಂಪು ಲೈನ್‌ ಏಕೆ? ಇದರ ಅರ್ಥ ಏನು? ನಿಮಗೆ ಗೊತ್ತಾ

Posted by Vidyamaana on 2024-03-13 17:14:47 |

Share: | | | | |


ಮಾತ್ರೆ ಪ್ಯಾಕೆಟ್ ಮೇಲೆ ಕೆಂಪು ಲೈನ್‌ ಏಕೆ? ಇದರ ಅರ್ಥ ಏನು? ನಿಮಗೆ ಗೊತ್ತಾ

ಸಾಮಾನ್ಯವಾಗಿ, ಅನೇಕ ಜನರು ಅನಾರೋಗ್ಯಕ್ಕೆ ಒಳಗಾದಾಗ, ಅವರು ವೈದ್ಯರ ಬಳಿಗೆ ಹೋಗದೆ ನೇರವಾಗಿ ಮೆಡಿಕಲ್ ಸ್ಟೋರ್‌ಗೆ ಹೋಗಿ ಮಾತ್ರೆಗಳನ್ನು ಖರೀದಿಸುತ್ತಾರೆ. ಕೆಲವೊಮ್ಮೆ ಔಷಧಿಯನ್ನು ವೈದ್ಯರಿಗೆ ತೋರಿಸಿದ ನಂತರ ತೆಗೆದುಕೊಳ್ಳಲಾಗುತ್ತದೆ.ನೀವು ನೇರವಾಗಿ ಮೆಡಿಕಲ್ ಸ್ಟೋರ್‌ಗೆ ಹೋಗಿ ನಿಮ್ಮ ಸಮಸ್ಯೆಯನ್ನು ಗುಣಪಡಿಸುವ ಔಷಧಿಯನ್ನು ಪಡೆದರೂ, ಕೆಲವೊಮ್ಮೆ ನೀವು ಗಂಭೀರ ಅಡ್ಡಪರಿಣಾಮಗಳನ್ನು ಅನುಭವಿಸಬೇಕಾಗುತ್ತದೆ. ನೋವು ನಿವಾರಕಗಳು, ಆಯಂಟಿಬಯೋಟಿಕ್‌ಗಳು ಮುಂತಾದ ತಕ್ಷಣದ ನೋವು ನಿವಾರಕ ಮಾತ್ರೆಗಳನ್ನು ಖರೀದಿಸುವಾಗ ಮಾತ್ರೆ ಪ್ಯಾಕೆಟ್‌ನಲ್ಲಿ ಕೆಂಪು ಗೆರೆಗಳನ್ನು ನೀವು ಗಮನಿಸಿರಬಹುದು. ಆದರೆ ಈ ಕೆಂಪು ರೇಖೆ ಏಕೆ ಇರುತ್ತದೆ ಎಂದು ನೀವೂ ಎಂದಾದರೂ ಯೋಚಿಸಿದ್ದೀರಾ..? ಹಾಗಾದರೆ ಇಲ್ಲಿ ತಿಳಿಯಿರಿ..


ಮಾತ್ರೆ ಪ್ಯಾಕೆಟ್‌ನಲ್ಲಿರುವ ಕೆಂಪು ರೇಖೆಯ ಅರ್ಥವೇನು?

ವಾಸ್ತವವಾಗಿ, ಮಾತ್ರೆ ಪ್ಯಾಕೆಟ್‌ನಲ್ಲಿ ಕೆಂಪು ರೇಖೆ ಎಂದರೆ ವೈದ್ಯರ ಪ್ರಿಸ್ಕ್ರಿಪ್ಷನ್ ಇಲ್ಲದೆ ಮಾತ್ರೆ ಮಾರಾಟ ಮಾಡಬೇಡಿ ಅಥವಾ ವೈದ್ಯರ ಸಲಹೆಯಿಲ್ಲದೆ ಬಳಸಬೇಡಿ. ಆದ್ದರಿಂದ, ಪ್ರತಿಜೀವಕಗಳ ದುರುಪಯೋಗವನ್ನು ತಡೆಗಟ್ಟಲು, ಔಷಧಿಗಳ ಮೇಲೆ ಕೆಂಪು ರೇಖೆಯನ್ನು ನೀಡಲಾಗುತ್ತದೆ. ಆರೋಗ್ಯ ಸಚಿವಾಲಯವು ತನ್ನ ಟ್ವಿಟರ್ ಖಾತೆಯಲ್ಲಿ ಪೋಸ್ಟ್ ಅನ್ನು ಹಂಚಿಕೊಂಡಿದೆ.ಔಷಧಿಗಳು, ವಿಶೇಷವಾಗಿ ಪ್ಯಾಕೇಜಿಂಗ್‌ನಲ್ಲಿ ಕೆಂಪು ಲಂಬ ರೇಖೆಯನ್ನು ಹೊಂದಿರುವ ಪ್ರತಿಜೀವಕಗಳನ್ನು ಅರ್ಹ ವೈದ್ಯರನ್ನು ಸಂಪರ್ಕಿಸದೆ ಎಂದಿಗೂ ಸೇವಿಸಬಾರದು. ಜಾಗೃತರಾಗಿರಿ, ಸುರಕ್ಷಿತವಾಗಿರಿಕೆಂಪು ರೇಖೆಯ ಹೊರತಾಗಿ, ಔಷಧದ ಮೇಲೆ ಅನೇಕ ಉಪಯುಕ್ತ ವಿಷಯಗಳನ್ನು ಬರೆಯಲಾಗಿದೆ. ಅವರ ಬಗ್ಗೆ ತಿಳಿದುಕೊಳ್ಳುವುದು ಮುಖ್ಯ. ಕೆಲವು ಔಷಧಿಗಳ ಪ್ಯಾಕೆಟ್ ಮೇಲೆ Rx ಎಂದು ಬರೆಯಲಾಗಿದೆ. ಅಂದರೆ ವೈದ್ಯರ ಸಲಹೆಯಂತೆ ಔಷಧಿಗಳನ್ನು ತೆಗೆದುಕೊಳ್ಳಬೇಕು. ಕೆಲವು ಔಷಧಿಗಳ ಪ್ಯಾಕೆಟ್ ಮೇಲೆ XRx ಎಂದು ಬರೆಯಲಾಗಿದೆ. ಇದರರ್ಥ ಔಷಧಿಯನ್ನು ವೈದ್ಯರು ಮಾತ್ರ ಸೂಚಿಸಬಹುದು. ವೈದ್ಯರು ಈ ಔಷಧಿಯನ್ನು ನೇರವಾಗಿ ರೋಗಿಗೆ ನೀಡಬಹುದು. ವೈದ್ಯರು ಬರೆದ ಪ್ರಿಸ್ಕ್ರಿಪ್ಷನ್ ಇದ್ದರೂ, ರೋಗಿಯು ಅದನ್ನು ಯಾವುದೇ ಮೆಡಿಕಲ್ ಸ್ಟೋರ್‌ನಿಂದ ಖರೀದಿಸಲು ಸಾಧ್ಯವಿಲ್ಲ.

15 ಐಪಿಎಸ್ ಅಧಿಕಾರಿಗಳ ವರ್ಗಾವಣೆ: ದಕ್ಷಿಣ ಕನ್ನಡ ಎಸ್ಪಿಯಾಗಿ ಸಿ ಬಿ ರಿಷ್ಯಂತ್ ನೇಮಕ

Posted by Vidyamaana on 2023-06-20 10:36:15 |

Share: | | | | |


15 ಐಪಿಎಸ್ ಅಧಿಕಾರಿಗಳ ವರ್ಗಾವಣೆ: ದಕ್ಷಿಣ ಕನ್ನಡ ಎಸ್ಪಿಯಾಗಿ ಸಿ ಬಿ ರಿಷ್ಯಂತ್ ನೇಮಕ

ಬೆಂಗಳೂರು: ಕಾಂಗ್ರೆಸ್ ಸರ್ಕಾರ ರಚನೆ ಬೆನ್ನಲ್ಲೇ ಪೊಲೀಸ್ ಇಲಾಖೆಗೆ ಭರ್ಜರಿ ಸರ್ಜರಿ ಮಾಡಲಾಗಿದ್ದು 15 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ. ಹೀಗಾಗಿ ದಕ್ಷಿಣ ಕನ್ನಡದ ಪೊಲೀಸ್ ವರಿಷ್ಠಾಧಿಕಾರಿಯಾಗಿ(ಎಸ್‌ಪಿ) ಐಪಿಎಸ್ ಅಧಿಕಾರಿ ಸಿ ಬಿ ರಿಷ್ಯಂತ್ ನೇಮಕ ಮಾಡಲಾಗಿದೆ.ಹಿಂದೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ ವಿಕ್ರಮ್ ಅಮತೆ ಅವರು ವೈದ್ಯಕೀಯ ರಜೆಯಲ್ಲಿ ತೆರಳಿದ ಹಿನ್ನಲೆಯಲ್ಲಿ ಸಿ ಬಿ ರಿಷ್ಯಂತ್ ಇತ್ತೀಚೆಗೆ ದಕ್ಷಿಣ ಕನ್ನಡ ಜಿಲ್ಲೆಯ ಪ್ರಭಾರ ಪೊಲೀಸ್ ವರಿಷ್ಠಾಧಿಕಾರಿಯಾಗಿ ನೇಮಕಗೊಂಡಿದ್ದರು.

2013ರ ಬ್ಯಾಚ್‌ನ ಐಪಿಎಸ್ ಅಧಿಕಾರಿಯಾಗಿದ್ದ ರಿಷ್ಯಂತ್ ಅವರು ಈ ಹಿಂದೆ ದಾವಣಗೆರೆಯ ಎಸ್‌ಪಿಯಾಗಿ ಸೇವೆ ಸಲ್ಲಿಸುತ್ತಿದ್ದರು ವಿಧಾನಸಭೆ ಚುನಾವಣೆಗೆ ಮುನ್ನ ಬೆಂಗಳೂರಿನಲ್ಲಿ ನಿಯೋಜನೆಗೊಂಡಿದ್ದರು.

ಬೆಂಗಳೂರಿನವರಾದ ರಿಷ್ಯಂತ್ ಅವರು ಈ ಹಿಂದೆ ದಕ್ಷಿಣ ಕನ್ನಡ, ಮೈಸೂರು, ಬಾಗಲಕೋಟೆ ಮತ್ತು ದಾವಣಗೆರೆಯ ಎಎಸ್‌ಪಿಯಾಗಿ ಸೇವೆ ಸಲ್ಲಿಸಿದ್ದಾರೆ.

ಇಡೀ ರಾಷ್ಟ್ರಕ್ಕೆ ಕರ್ನಾಟಕದ ಗ್ಯಾರಂಟಿ ಯೋಜನೆ ಮಾದರಿ : ಬಜೆಟ್ ಅಧಿವೇಶನದಲ್ಲಿ ಗವರ್ನರ್ ಗೆಹ್ಲೊಟ್ ಬಣ್ಣನೆ

Posted by Vidyamaana on 2024-02-12 15:49:37 |

Share: | | | | |


ಇಡೀ ರಾಷ್ಟ್ರಕ್ಕೆ ಕರ್ನಾಟಕದ ಗ್ಯಾರಂಟಿ ಯೋಜನೆ  ಮಾದರಿ : ಬಜೆಟ್ ಅಧಿವೇಶನದಲ್ಲಿ ಗವರ್ನರ್ ಗೆಹ್ಲೊಟ್ ಬಣ್ಣನೆ

ಬೆಂಗಳೂರು : ಇಂದಿನಿಂದ 10 ದಿನಗಳವರೆಗೆ ಕರ್ನಾಟಕ ವಿಧಾನ ಮಂಡಲದ ಬಜೆಟ್ ಅಧಿವೇಶನ ನಡೆಯತ್ತಿದ್ದು, ಅಧಿವೇಶನದ ಆರಂಭದ ದಿನ ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡಿದ ರಾಜ್ಯಪಾಲ ಥಾವರ್​ಚಂದ್​ ಗೆಹ್ಲೋಟ್, ಇಡೀ ದೇಶಕ್ಕೆ ಕರ್ನಾಟಕ ಸರ್ಕಾರದ ಗ್ಯಾರಂಟಿ ಯೋಜನೆಗಳು ಮಾದರಿಯಾಗಿವೆ ಎಂದು ಬಣ್ಣಿಸಿದರು.ಅಧಿವೇಶನದ ಆರಂಭದ ದಿನ ಜಂಟಿ ಅಧಿವೇಶನ ಉದ್ದೇಶಿಸಿ ಇಂದು ಮಾತನಾಡಿದ ಅವರು, ಸರ್ಕಾರವು ನಡೆ ನುಡಿಗಳಗಳನ್ನು ಒಂದಾಗಿಸಿಕೊಂಡು ಕೆಲಸ ಮಾಡುತ್ತಿದೆ. ಕರ್ನಾಟಕ ಮಾದರಿಯನ್ನು ಸರ್ಕಾರ ಅಧಿಕಾರಕ್ಕೆ ಬಂದ ಕ್ಷಣದಿಂದಲೇ ಅನುಸರಿಸುತ್ತಾ ಬಂದಿದೆ. ಹೆಚ್ಚುತ್ತಿರುವ ಆರ್ಥಿಕ ಅಸಮಾನತೆಯಿಂದಾಗಿ ಬಡವರಿಗೆ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಸಾಂತ್ವನವನ್ನು ಒದಗಿಸಿವೆ ಎಂದು ಹೇಳಿದರು.


ಇಡೀ ದೇಶಕ್ಕೆ ಕರ್ನಾಟಕ ಸರ್ಕಾರದ ಗ್ಯಾರಂಟಿ ಮಾದರಿಯಾಗಿವೆ. ಶಕ್ತಿ, ಅನ್ನಭಾಗ್ಯ, ಯುವನಿಧಿ, ಗೃಹಲಕ್ಷ್ಮೀ, ಗೃಹಜ್ಯೋತಿ ಯಶಸ್ವಿಯಾಗಿ ಜಾರಿಗೊಳಿಸಲಾಗಿದೆ. ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಬಡವರಿಗೆ ತೃಪ್ತಿ ನೀಡಿವೆ ಎಂದು ಅವರು ಹೇಳಿದರು.ಆರ್ಥಿಕ ಅಸಮಾನತೆಯಿಂದ ಅಶಕ್ತರಾಗಿರುವ ಜನತೆಯ ಬದುಕಿಗೆ ಕೇವಲ ಈ ಗ್ಯಾರಂಟಿಗಳು ಮಾತ್ರ ಸಾಕಾಗುವುದಿಲ್ಲ ಎನ್ನುವ ಅರಿವು ಸರ್ಕಾರಕ್ಕೆ ಇದೆ. ಸರ್ಕಾರವು ಜಾರಿಗೆ ತಂದ ಗ್ಯಾರಂಟಿ ಯೋಜನೆಗಳಿಂದ ಎರಡು ಕೋಟಿಗೂ ಅಧಿಕ ಕುಟುಂಬಗಳು ಬಡತನ ರೇಖೆಗಿಂತ ಹೊರಗೆ ಬಂದು ಮಧ್ಯಮ ವರ್ಗದ ಸ್ಥಿತಿಗೆ ಏರುತ್ತಿವೆ.


ಬರಗಾಲವಿದ್ದರೂ ರಸ್ತೆ ನೀರು ಶಿಕ್ಷಣ ಆರೋಗ್ಯ ಕೃಷಿ ತೋಟಗಾರಿಕೆ ಹೈನುಗಾರಿಕೆ ಕೈಗಾರಿಕೆ ಕ್ಷೇತ್ರಗಳಲ್ಲಿ ಅಭಿವೃದ್ಧಿ ನಡೆದಿದ್ದಾಗಿದ್ದು ಬಜೆಟ್ ನಲ್ಲಿ 97 ರಷ್ಟು ಘೋಷಣೆಗಳಿಗೆ ಅಧಿಸೂಚನೆ ಹೊರಡಿಸಿದೆ. ಬರಪೀಡಿತ ಪ್ರದೇಶಗಳ ನೆರವಿಗೆ ಸರ್ಕಾರ ಅನುದಾನ ನೀಡಿದೆ ಸರ್ಕಾರ ಕೊಬ್ಬರಿಗೆ ಬೆಂಬಲ ಬೆಲೆಯನ್ನು ಘೋಷಿಸಿದೆ ಅಲ್ಲದೆ ಬೆಳೆ ಹಾನಿಗೆ ಕೂಡ ಪರಿಹಾರ ನೀಡಿದೆ ಎಂದು ತಿಳಿಸಿದರು.


ಕರ್ನಾಟಕ ಉದಯವಾಗಿ ಐವತ್ತು ವರ್ಷಗಳಾಗಿವೆ ಕರ್ನಾಟಕ ಸಂಭ್ರಮ 50 ಆಚರಣೆ ಮಾಡಲಾಗುತ್ತಿದೆ ನಮ್ಮ ಭಾಷೆ ಸಂಸ್ಕೃತಿಯ ಮೇಲೆ ದಾಳಿಯನ್ನು ಸಹಿಸುವುದಿಲ್ಲ ಕನ್ನಡ ಸಂಸ್ಕೃತಿ ಕಾಪಾಡಲು ಸರ್ಕಾರ ಸೂಕ್ತವಾದಂತಹ ಕ್ರಮ ಕೈಗೊಂಡಿದೆ ಎಂದು ತಿಳಿಸಿದರು.ಅಧಿವೇಶನ ಆರಂಭಕ್ಕೂ ಮುನ್ನ ವಿಧಾನಸೌಧಕ್ಕೆ ಆಗಮಿಸಿದ ರಾಜ್ಯಪಾಲರಿಗೆ ಭವ್ಯ ಸ್ವಾಗತ ದೊರೆಯಿತು. ವಿಧಾನಸೌಧ ಗ್ರ್ಯಾಂಡ್ ಸ್ಟೆಪ್ ದ್ವಾರದಲ್ಲಿ ರಾಜ್ಯಪಾಲ ಥಾವರ್​ಚಂದ್​ ಗೆಹ್ಲೋಟ್ ಅವರಿಗೆ ಮೈಸೂರು ಕರ್ನಾಟಿಕ್ ಬ್ಯಾಂಡ್, ಮೈಸೂರು ಇಂಗ್ಲಿಷ್ ಬ್ಯಾಂಡ್, ಮೌಂಟೆಡ್ ಲ್ಯಾನ್ಸ್ ಮೇನ್, ಮೌಂಟೆಡ್ ಹಾರ್ಸ್ ಎಸ್ಕಾರ್ಟ್, ಸಿಎಆರ್ ಪೊಲೀಸ್ ಬ್ಯಾಂಡ್ ಮೂಲಕ ಸ್ವಾಗತ ಕೋರಲಾಯಿತು. ರಾಜ್ಯಪಾಲ ಗೆಹ್ಲೋಟ್​ರನ್ನು ಸಿಎಂ ಸಿದ್ದರಾಮಯ್ಯ ಸ್ವಾಗತಿಸಿದರು. ಈ ವೇಳೆ ವಿಧಾನಸಭೆ ಸ್ಪೀಕರ್ ಯುಟಿ ಖಾದರ್, ಸಭಾಪತಿ ಬಸವರಾಜ ಹೊರಟ್ಟಿ ಹಾಗೂ ಇತರರು ಹಾಜರಿದ್ದರು

ಕೆಮ್ಮಾರ ವುಮೆನ್ಸ್ ಶರೀಹತ್ ಕಾಲೇಜಿನಲ್ಲಿ ಮೀಲಾದ್ ಪ್ರಯುಕ್ತ ಹಮ್ಮಿಕೊಂಡ ಮನಾರ ಕಲಾ ಸಾಂಸ್ಕೃತಿಕ ಕಾರ್ಯಕ್ರಮ

Posted by Vidyamaana on 2023-10-17 20:10:42 |

Share: | | | | |


ಕೆಮ್ಮಾರ  ವುಮೆನ್ಸ್ ಶರೀಹತ್ ಕಾಲೇಜಿನಲ್ಲಿ ಮೀಲಾದ್ ಪ್ರಯುಕ್ತ ಹಮ್ಮಿಕೊಂಡ ಮನಾರ ಕಲಾ ಸಾಂಸ್ಕೃತಿಕ ಕಾರ್ಯಕ್ರಮ

ಉಪ್ಪಿನಂಗಡಿ; ಪ್ರತೀ ನಿಮಿಷವು ಜಗತ್ತು ಬದಲಾವಣೆಯತ್ತ ದಾಪುಗಾಲು ಹಾಕುತ್ತಿದ್ದು ಒಂದು ಸಮಾಜವು ಈ ಬದಲಾವಣೆಯನ್ನು ಅರ್ಥ ಮಾಡಿಕೊಂಡು ವಿನೂತನ ಆವಿಷ್ಕಾರಗಳ ಮೂಲಕ ಬದಲಾವಣೆಗೆ ಒಡ್ಡಿಕೊಂಡು ತಮ್ಮ ಸಮಾಜವನ್ನು ರಕ್ಷಿಸಿ ಕೊಳ್ಳಬೆಕಾದ ಅನಿವಾರ್ಯತೆ ನಮ್ಮ ಮುಂದಿದೆ ಎಂದು ಕೆಮ್ಮಾರ ಶಂಸುಲ್ ಉಲಮಾ ಎಜುಕೇಶನ್ ಟ್ರಸ್ಟ್ ಇದರ ಅಧ್ಯಕ್ಷ ಎಸ್ ಬಿ ದಾರಿಮಿ ಅಭಿಪ್ರಾಯ ಪಟ್ಟಿದ್ದಾರೆ.

ಅವರು  ಕೆಮ್ಮಾರ ಶಕ್ತಿ ನಗರದ ವುಮೆನ್ಸ್ ಶರೀಹತ್ ಕಾಲೇಜಿನ ವಿಧ್ಯಾರ್ಥಿನಿಯರಿಗಾಗಿ ಮೀಲಾದ್ ಪ್ರಯುಕ್ತ ಹಮ್ಮಿಕೊಂಡ "ಮನಾರ"ಕಲಾ ಸಾಂಸ್ಕೃತಿಕ ಕಾರ್ಯಕ್ರಮದ ಅದ್ಯಕ್ಷತೆ ವಹಿಸಿ ಮಾತಾನಾಡಿದರು. 

  ಹಿಂದಿನ ಕಾಲದಲ್ಲಿ ನಮ್ಮ ಮಹಿಳೆಯರು ಅಡಿಗೆ ಮನೆಗೆ ಸೀಮಿತವಾಗಿದ್ದರು.ಆದರೆ ಇಂದು ಸಮಸ್ತ ದ ಉಲಮಾಗಳ ಉತ್ತಮ ಕಾರ್ಯವೈಖರಿಯಿಂದಾಗಿ ಮುಸ್ಲಿಂ ಮಹಿಳೆಯರು ಕೂಡಾ ವೈಧ್ಯಕೀಯ ,ಶೈಕ್ಷಣಿಕ, ಸಾಮಾಜಿಕ ಸೇವಾ ಕ್ಷೇತ್ರದಲ್ಲಿ ಗಮನಾರ್ಹ ಸಾಧನೆಗೈದು ಪ್ರತಿಭಾವಂತರಾಗಿ ಮುಂದಿನ ತಲೆಮಾರನ್ನೂ ವಿದ್ಯಾವಂತರನ್ನಾಗಿಸುವಲ್ಲಿ ಸಫಲರಾಗುತ್ತಿದ್ದಾರೆ.ಇದು ಉತ್ತಮ ಬೆಳವಣಿಗೆಯಾಗಿದ್ದು,

ಮುಸ್ಲಿಮರು ಕಾಲದ ಕರೆಯನ್ನು ಸ್ವೀಕರಿಸುವುದಿಲ್ಲ ಎನ್ನುವವರಿಗೆ ಇದು ತಕ್ಕ ಉತ್ತರ ಕೂಡಾ ಆಗಿದೆ ಎಂದು ನುಡಿದರು.

ಕಾರ್ಯಕ್ರಮವನ್ನು ಪೆರಿಯಡ್ಕ ಖತೀಬರಾದ ಅಬ್ದುಲ್ ರಹಿಮಾನ್ ಪೈಝಿ ಉದ್ಗಾಟಿಸಿದರು.

ಟ್ರಸ್ಟಿ ಸದಸ್ಯರಾದ ಉಮರ್ ಹಾಜಿ ಕೋಡಿಯಾಡಿ,ಬಶೀರ್ ಹಾಜಿ ದಾರಂದಕುಕ್ಕು,ಹಸೈನಾರ್ ಹಾಜಿ ಕೊಯಿಲ,ರಶೀದ್ ಹಾಜಿ ಪರ್ಲಡ್ಕ,ಇಸಾಕ್  ಕೆಮ್ಮಾರ,ಅಬ್ದುಲ್ಲ ಉಸ್ತಾದ್ ಕೆಮ್ಮಾರ,ಇಬ್ರಾಹಿಂ ಬಡಿಲ, ಯುನಿಕ್ ಅಬ್ದುಲ್ ರಹಿಮಾನ್ ಮೊದಲಾದವರು ಉಪಸ್ಥಿತರಿದ್ದರು,ಕೆ ಎಂ ಎ ಕೊಡುಂಗೈ ಸ್ವಾಗತಿಸಿ, ಕೊನೆಗೆ ವಂದಿಸಿದರು.

ಬಿಜೆಪಿಗೆ ಗುಡ್​​ಬೈ ಹೇಳ್ತಾರಾ ಎಂಎಲ್​​ಸಿ ತೇಜಸ್ವಿನಿಗೌಡ?

Posted by Vidyamaana on 2024-03-22 21:43:15 |

Share: | | | | |


ಬಿಜೆಪಿಗೆ ಗುಡ್​​ಬೈ ಹೇಳ್ತಾರಾ ಎಂಎಲ್​​ಸಿ ತೇಜಸ್ವಿನಿಗೌಡ?

ಬೆಂಗಳೂರು : ವಿಧಾನಪರಿಷತ್ತಿನ ಬಿಜೆಪಿ ಸದಸ್ಯೆ ತೇಜಸ್ವಿನಿ ಗೌಡ ಕೂಡ ಬಿಜೆಪಿಗೆ ರಾಜೀನಾಮೆ ನೀಡಲು ಮುಂದಾಗಿದ್ದು, ಜೂನ್‌ ತಿಂಗಳಲ್ಲಿ ಅವರ ವಿಧಾನಪರಿಷತ್‌ ಸದಸ್ಯ ಸ್ಥಾನದ ಅವಧಿಯೂ ಮುಕ್ತಾಯಗೊಳ್ಳುತ್ತಿದೆ.ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಮೈಸೂರು ಅಥವಾ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಟಿಕೆಟ್‌ಗಾಗಿ ಬೇಡಿಕೆ ಇಟ್ಟಿದ್ದ ಅವರು ಎರಡೂ ಕ್ಷೇತ್ರಗಳ ಬಿಜೆಪಿ ಟಿಕೆಟ್‌ ಘೋಷಣೆ ಬೆನ್ನಲ್ಲೇ ರಾಜೀನಾಮೆ ನಿರ್ಧಾರಕ್ಕೆ ಬಂದಿದ್ದಾರೆ.ಕಾಂಗ್ರೆಸ್‌ ಮೂಲಕ ರಾಜಕೀಯ ಪ್ರವೇಶಿಸಿದ್ದ ತೇಜಸ್ವಿನಿ, ಕನಕಪುರದಲ್ಲಿ ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡರನ್ನು ಸೋಲಿಸಿ ಮುನ್ನೆಲೆಗೆ ಬಂದಿದ್ದರು.


ಈ ಸಂದರ್ಭದಲ್ಲಿ ಡಿ.ಕೆ. ಶಿವಕುಮಾರ್‌ ಹಾಗೂ ಡಿ.ಕೆ. ಸುರೇಶ್‌ ಅವರನ್ನೇ ರಾಜಕೀಯ ಗುರುಗಳೆಂದಿದ್ದ ತೇಜಸ್ವಿನಿ, ಕಾಂಗ್ರೆಸ್‌ ತೊರೆದು ಬಿಜೆಪಿ ಸೇರುವಾಗ ಡಿಕೆಶಿ ಸಹೋದರರ ವಿರುದ್ಧ ಕಟು ಶಬ್ದ ಬಳಸಿದ್ದರು. ಈಗ ಮತ್ತೆ ಕಾಂಗ್ರೆಸ್‌ ಸೇರುವ ಇಂಗಿತವನ್ನು ಆಪ್ತವಲಯದಲ್ಲಿ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ



Leave a Comment: