ನಕಲಿ ಚಿನ್ನ ದ ಆಸೆಗೆ ತುಮಕೂರಿನಲ್ಲಿ ಬಲಿಯಾದರೇ ಬೆಳ್ತಂಗಡಿಯ ಮೂವರು?

ಸುದ್ದಿಗಳು News

Posted by vidyamaana on 2024-03-23 10:38:46 |

Share: | | | | |


ನಕಲಿ ಚಿನ್ನ ದ ಆಸೆಗೆ ತುಮಕೂರಿನಲ್ಲಿ ಬಲಿಯಾದರೇ ಬೆಳ್ತಂಗಡಿಯ ಮೂವರು?

ಬೆಳ್ತಂಗಡಿ : ತುಮಕೂರಿನಲ್ಲಿ ಕಾರಿಗೆ ಬೆಂಕಿ ಹಚ್ಚಿ ಕೆರೆಗೆ ತಳ್ಳಿದ ಪ್ರಕರಣದಲ್ಲಿ ಮೂವರು ಸಾವನ್ನಪ್ಪಿದ ಸಂಬಂಧಪಟ್ಟಂತೆ ಆರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.ಪ್ರಕರಣದ‌ ಪ್ರಮುಖ ರೂವಾರಿ ತುಮಕೂರಿನ ಸ್ವಾಮಿ ಮತ್ತು ಐದು ಜನರನ್ನು ಕೋರಾ ಪೊಲೀಸರು ಮಾ.22 ರಂದು ರಾತ್ರಿ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ತುಮಕೂರಿಗೆ ಕಳೆದ ಹನ್ನೊಂದು ದಿನದ ಹಿಂದೆ ವ್ಯವಹಾರ ಸಂಬಂಧ ಮದಡ್ಕದ ರಫೀಕ್ ಎಂಬವರ ಮಾಲೀಕತ್ವದ ಎಸ್ ಪ್ರೆಸ್ ಕಾರಿನಲ್ಲಿ ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಟಿ.ಬಿ.ಕ್ರಾಸ್ ನಿವಾಸಿ ಆಟೋ ಚಾಲಕ ಸಾಹುಲ್ ಹಮೀದ್(45) , ಕುವೆಟ್ಟು ಗ್ರಾಮದ ಮದಡ್ಕ ನಿವಾಸಿ ಇಸಾಕ್(56) , ಶಿರ್ಲಾಲು ಗ್ರಾಮದ ಸಿದ್ದಿಕ್(34) ಮೂವರು ಬಾಡಿಗೆ ಮಾಡಿಕೊಂಡು ಹೋಗಿದ್ದರು ಎಂದು ಗುರುತಿಸಿದ್ದಾರೆ.

ಇನ್ನು ಮೂರು ಜನ ಮೃತರೆಲ್ಲಾ ನಕಲಿ ಚಿನ‌್ನದ ದಂಧೆಯ ಆಸೆಗೆ ಬಲಿಯಾಗಿದ್ದಾರೆ ಅನ್ನೋದು ಪ್ರಾಥಮಿಕ ವಿಚಾರಣೆ ವೇಳೆ ಗೊತ್ತಾಗಿದೆ. ನಮ್ಮ ಜಾಗದಲ್ಲಿ ಕೃಷಿ ಮಾಡುವಾಗ ಚಿನ್ನದ ಹಂಡೆ ಸಿಕ್ಕಿದೆ ಕಡಿಮೆ ಚಿನ್ನವನ್ನು ಬೆಲೆಗೆ ನೀಡುತ್ತೇವೆ ಎಂದು ಸುಳ್ಳು ಹೇಳಿ ಮೂವರನ್ನು ಕರೆಸಿ ಹಣ ದೋಚುವ ಪ್ಲ್ಯಾನ್ ಮಾಡಿ ಕರೆಸಿಕೊಂಡು ನಂತರ ಕೈಕಾಲು ಕಟ್ಟಿ ಹಾಕಿ ಕಾರಿಗೆ ಬೆಂಕಿ ಹಚ್ಚಿ ಕೊಲೆ ಮಾಡಲಾಗಿದೆ ಎನ್ನಲಾಗಿದೆ.

ಪ್ರಕರಣದ ಪ್ರಮುಖ ರೂವಾರಿ ತುಮಕೂರಿನ ಸ್ವಾಮಿ ಮತ್ತು ಇತರ ಐದು ಜನ ಸೇರಿ ಒಟ್ಟು ಆರು ಜನರನ್ನು ವಶಕ್ಕೆ ಪಡೆದಿರುವ ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ. 


ಕೋರಾ ಪೊಲೀಸ್ ಠಾಣೆಯಲ್ಲಿ ಮಾ.22 ರಂದು ಸುಮೊಟೋ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದು. ಇನ್ನು ಮೂವರ ಶವ ಸಂಪೂರ್ಣವಾಗಿ ಸುಟ್ಟಿರುವ ಕಾರಣ ಗುರುತು ಪತ್ತೆಹಚ್ಚಲು ಡಿಎನ್ಎ ಪರೀಕ್ಷೆ ಬಳಿಕ ಮನೆಮಂದಿಗೆ ಶವ ಬಿಟ್ಟು ಕೊಡಲಿದ್ದಾರೆ. ಡಿಎನ್ಎ ವರದಿ ಬರಲು ಸುಮಾರು ಒಂದು ವಾರ ಬೇಕಾಗುತ್ತದೆ ಎಂದು ಪೊಲೀಸರು ಮನೆಯವರಿಗೆ ತಿಳಸಿದ್ದಾರೆ.

 Share: | | | | |


ಬೆಳ್ತಂಗಡಿ ಕೊರಗಜ್ಜನ ಗುಡಿಗೆ ಬೆಂಕಿಯಿಟ್ಟ ಪ್ರಕರಣ ಹರೀಶ್ ಪೂಜಾರಿ ಬಂಧನ

Posted by Vidyamaana on 2023-07-12 16:53:38 |

Share: | | | | |


ಬೆಳ್ತಂಗಡಿ ಕೊರಗಜ್ಜನ ಗುಡಿಗೆ ಬೆಂಕಿಯಿಟ್ಟ ಪ್ರಕರಣ ಹರೀಶ್ ಪೂಜಾರಿ ಬಂಧನ

ಬೆಳ್ತಂಗಡಿ: ಬಜಿರೆ ಗ್ರಾಮದ ಕೊರಗಕಲ್ಲು ಸ್ವಾಮಿ ಕೊರಗಜ್ಜ ಚಪ್ಪರಕ್ಕೆ ಬೆಂಕಿ ಕೊಟ್ಟು ಆರಾಧನಾ ಕೇಂದ್ರಕ್ಕೆ ಹಾನಿ ಉಂಟು ಮಾಡಿದ ಆರೋಪದಲ್ಲಿ ವೇಣೂರು ಪೊಲೀಸರು ಐವರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದು, ಓರ್ವನನ್ನು ಬಂಧಿಸಿದ್ದಾರೆ.

ಹರೀಶ್ ಪೂಜಾರಿ ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ.ಕೊರಗಕಲ್ಲು ಸ್ವಾಮಿ ಕೊರಗಜ್ಜ ಸೇವಾ ಟ್ರಸ್ಟ್ ಬಾಡಾರು ಅಧ್ಯಕ್ಷ ಪ್ರದೀಪ್ ಕುಮಾರ್ ಹೆಗ್ಡೆ ನೀಡಿದ ದೂರಿನಲ್ಲಿ ಹರೀಶ್ ಪೂಜಾರಿ, ಡಾ.ರಾಜೇಶ್, ರಮೇಶ್ ಕುಡೇರು ಓಂ ಪ್ರಕಾಶ್, ಮತ್ತು ಪ್ರಶಾಂತ್ ರವರ ಕುಮ್ಮಕ್ಕಿನಿಂದ ಚಪ್ಪರಕ್ಕೆ ಬೆಂಕಿ ಕೊಟ್ಟು ಆರಾಧನಾ ಕೇಂದ್ರಕ್ಕೆ ಹಾನಿ ಉಂಟು ಮಾಡಿ ಧಾರ್ಮಿಕ ಭಾವನೆಗೆ ಧಕ್ಕೆ ಉಂಟುಮಾಡಿರುತ್ತಾರೆ ಎಂದು ತಿಳಿಸಿದ್ದಾರೆ.

ದೂರು ಸ್ವೀಕರಿಸಿದ ವೇಣೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಸ್ಥಳಕ್ಕೆ ಡಿವೈಎಸ್ಪಿ ಗಾನ ಕುಮಾರ್, ಬೆಳ್ತಂಗಡಿ ತಹಶೀಲ್ದಾರ್ ಸುರೇಶ್ ಕುಮಾರ್, ಎಸ್.ಐ ಸೌಮ್ಯ ಆಗಮಿಸಿ ಪರಿಶೀಲನೆ ನಡೆಸಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಹರೀಶ್ ಪೂಜಾರಿಯನ್ನು ಪೊಲೀಸರು ಬಂಧಿಸಿದ್ದರೆ. ಘಟನೆಯಲ್ಲಿ ಇತರ ಆರೋಪಿಗಳ ಪಾತ್ರದ ಬಗ್ಗೆ ತನಿಖೆ ನಡೆಯುತ್ತಿದೆ

ಹಿರಿಯ ನಟಿ ಲೀಲಾವತಿ ಆರೋಗ್ಯ ವಿಚಾರಿಸಿದ ಡಿಕೆ ಶಿವಕುಮಾರ್

Posted by Vidyamaana on 2023-11-28 17:00:51 |

Share: | | | | |


ಹಿರಿಯ ನಟಿ ಲೀಲಾವತಿ ಆರೋಗ್ಯ ವಿಚಾರಿಸಿದ ಡಿಕೆ ಶಿವಕುಮಾರ್

ಬೆಂಗಳೂರು: ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್​ ಅವರು ಹಿರಿಯ ನಟಿ ಲೀಲಾವತಿ ನಿವಾಸಕ್ಕೆ ಭೇಟಿ ನೀಡಿದ್ದಾರೆ.


ವಯೋಸಹಜ ಕಾಯಿಲೆಯಿಂದ ಬಳಲುತ್ತಿರುವ ಲೀಲಾವತಿ ಅವರ ಆರೋಗ್ಯದ ಬಗ್ಗೆ ಡಿಕೆಶಿ ವಿಚಾರಿಸಿದ್ದಾರೆ. ನೆಲಮಂಗಲ ತಾಲೂಕಿನ ಸೋಲದೇವನಹಳ್ಳಿಯಲ್ಲಿ ಲೀಲಾವತಿ ಅವರು ಪಶು ಆಸ್ಪತ್ರೆ ನಿರ್ಮಿಸಿದ್ದಾರೆ.


ಇಂದು (ನವೆಂಬರ್​ 28) ಅದರ ಉದ್ಘಾಟನೆ ಮಾಡುವ ಸಲುವಾಗಿ ಆಗಮಿಸಿರುವ ಡಿ.ಕೆ. ಶಿವಕುಮಾರ್​ ಅವರು ಹಿರಿಯ ಕಲಾವಿದೆಯ ಮನೆಗೆ ಭೇಡಿ ಕೊಟ್ಟಿದ್ದಾರೆ.

ಅಯೋಧ್ಯೆ ರಾಮ ಮಂದಿರ ದರ್ಶನದ ಸಮಯ ವಿಸ್ತರಣೆ : ಹೊಸ ವೇಳಾಪಟ್ಟಿ ಪರಿಶೀಲಿಸಿ

Posted by Vidyamaana on 2024-01-25 07:56:21 |

Share: | | | | |


ಅಯೋಧ್ಯೆ ರಾಮ ಮಂದಿರ ದರ್ಶನದ ಸಮಯ ವಿಸ್ತರಣೆ : ಹೊಸ ವೇಳಾಪಟ್ಟಿ ಪರಿಶೀಲಿಸಿ

ನವದೆಹಲಿ: ಅಯೋಧ್ಯೆಯ ರಾಮ ದೇವಾಲಯಕ್ಕೆ ಹೆಚ್ಚಿನ ಸಂಖ್ಯೆಯ ಭಕ್ತರು ಭೇಟಿ ನೀಡುವ ಹಿನ್ನೆಲೆಯಲ್ಲಿ, ದೇವಾಲಯದ ಆಡಳಿತವು ದರ್ಶನ ಸಮಯವನ್ನು ವಿಸ್ತರಿಸಲು ನಿರ್ಧರಿಸಿದೆ.ಸೀಮಿತ ಭೇಟಿಯ ಸಮಯದಿಂದಾಗಿ ದೇವಾಲಯಕ್ಕೆ ಭೇಟಿ ನೀಡಲು ಸಾಧ್ಯವಾಗದ ಭಕ್ತರಿಗೆ ಈ ನಿರ್ಧಾರವು ಪರಿಹಾರವಾಗಿದೆ.ಈಗ, ಭಕ್ತರು ರಾತ್ರಿ 10 ಗಂಟೆಯವರೆಗೆ ರಾಮ್ ಲಲ್ಲಾ ದರ್ಶನ ಪಡೆಯಬಹುದು.


ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ದೇವಾಲಯದ ಆಡಳಿತವು ಈ ನಿರ್ಧಾರವನ್ನು ತೆಗೆದುಕೊಂಡಿದೆ. ಅಧಿಕೃತ ಮೂಲಗಳ ಪ್ರಕಾರ, ಸುಮಾರು ಐದು ಲಕ್ಷ ಭಕ್ತರು ಪ್ರಸ್ತುತ ಅಯೋಧ್ಯೆಯಲ್ಲಿ ಕ್ಯಾಂಪ್ ಮಾಡುತ್ತಿದ್ದು, ದೇವಾಲಯದಲ್ಲಿ ದರ್ಶನ ಪಡೆಯಲು ತಮ್ಮ ಸರದಿಗಾಗಿ ಕುತೂಹಲದಿಂದ ಕಾಯುತ್ತಿದ್ದಾರೆ. ಹೆಚ್ಚುವರಿಯಾಗಿ, ನಿಯಮಿತವಾಗಿ ಭಕ್ತರ ಪ್ರವಾಹವೂ ಬರುತ್ತಿದೆ, ಇದು ಜನಸಂದಣಿಯನ್ನು ಮತ್ತಷ್ಟು ಹೆಚ್ಚಿಸುತ್ತದೆ.ರಾಮಮಂದಿರಹೊಸದರ್ಶನದಸಮಯ


ಭೇಟಿಯ ಸಮಯದ ದೃಷ್ಟಿಯಿಂದ, ದೇವಾಲಯವು ಎರಡು ಪಾಳಿಗಳಲ್ಲಿ ದರ್ಶನಕ್ಕಾಗಿ ತೆರೆದಿರುತ್ತದೆ. ಬೆಳಗ್ಗೆ 7ರಿಂದ 11.30ರವರೆಗೆ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಸಂಜೆ ಪಾಳಿಯಲ್ಲಿ, ವಿಸ್ತೃತ ಸಮಯವು ಭಕ್ತರಿಗೆ ರಾತ್ರಿ 10 ರವರೆಗೆ ದರ್ಶನ ಪಡೆಯಲು ಅನುವು ಮಾಡಿಕೊಡುತ್ತದೆ, ಇದು ದೇವಾಲಯಕ್ಕೆ ಭೇಟಿ ನೀಡಲು ಮತ್ತು ದೈವಿಕ ಆಶೀರ್ವಾದ ಪಡೆಯಲು ಸಾಕಷ್ಟು ಸಮಯವನ್ನು ಒದಗಿಸುತ್ತದೆ.


ಭಕ್ತರು ರಾಮ್ ಲಲ್ಲಾ ದರ್ಶನವನ್ನು ಸಂಜೆ 7 ರ ಬದಲು ರಾತ್ರಿ 10 ರವರೆಗೆ ಮಾಡಬಹುದು.


ಬೆಳಿಗ್ಗೆ 7 ರಿಂದ 11.30 ರವರೆಗೆ ದರ್ಶನ ತೆರೆದಿರುತ್ತದೆ.


ಸಂಜೆ ಪಾಳಿಯಲ್ಲಿ ದರ್ಶನವು ಮಧ್ಯಾಹ್ನ 3 ರಿಂದ ರಾತ್ರಿ 10 ರವರೆಗೆ ತೆರೆದಿರುತ್ತದೆ.

ಬಡಗನ್ನೂರು ದರೋಡೆ ಪ್ರಕರಣ

Posted by Vidyamaana on 2023-09-08 22:41:38 |

Share: | | | | |


ಬಡಗನ್ನೂರು ದರೋಡೆ ಪ್ರಕರಣ

ಪುತ್ತೂರು : ಪುತ್ತೂರು: ಬಡಗನ್ನೂರು ಗ್ರಾ.ಪಂ ಮಾಜಿ ಸದಸ್ಯ ಪಡುವನ್ನೂರು ಗ್ರಾಮದ ಕುದ್ಮಾಡಿ ಗುರುಪ್ರಸಾದ್ ರೈ ಯವರ ಮನೆಗೆ ಡಕಾಯಿತರ ತಂಡವೊಂದು ಮನೆ ಮಂದಿಯನ್ನು ಕಟ್ಟಿ ಹಾಕಿ ದರೋಡೆ ಮಾಡಿದ ಘಟನೆಗೆ ಸಂಬಂಧಿಸಿ ಮಾಜಿ ಶಾಸಕ ಸಂಜೀವ ಮಠಂದೂರು ಶುಕ್ರವಾರ ಭೇಟಿ ನೀಡಿ ಗುರುಪ್ರಸಾದ್ ಅವರ ತಾಯಿಗೆ ಧೈರ್ಯ ತುಂಬಿದರು.ಸಂಜೀವ ಮಠಂದೂರು ಘಟನೆ ಮಾಹಿತಿ ಪಡೆದು ದ.ಕ.ಜಿಲ್ಲಾ ಎಸ್ಪಿಗೆ ಪೋನಾಯಿಸಿ ಇನ್ನಷ್ಟು ಮಾಹಿತಿ ಪಡೆದು ಕೊಂಡು ಆದಷ್ಟು ಬೇಗ ಪ್ರಕರಣ ಡಕಾಯಿತರನ್ನು ಮಟ್ಟಹಾಕಬೇಕು. ಇಲ್ಲವಾದಲ್ಲಿ ಜನರಲ್ಲಿ ಇನ್ನಷ್ಟು ಭಯದ ವಾತಾವರಣ ಉಂಟಾಗುತ್ತದೆ. ಹಳ್ಳಿ ಪ್ರದೇಶದಲ್ಲಿ ಮನೆಗಳು ದೂರ ಇರುವುದರಿಂದ ರಾತ್ರಿ ಗಸ್ತು ವ್ಯವಸ್ಥೆ ಚುರುಕುಗೊಳಿಸುವಂತೆ ಹೇಳಿದರು.


ಈ ಸಂದರ್ಭದಲ್ಲಿ ಬಿಜೆಪಿ ಗ್ರಾಮಾಂತರ ಮಂಡಲ ಪ್ರಧಾನ ಕಾರ್ಯದರ್ಶಿ ನಿತೀಶ್ ಕುಮಾರ್ ಶಾಂತಿವನ, ಅರಿಯಡ್ಕ ಶಕ್ತಿ ಕೇಂದ್ರ ಪ್ರಮುಖ್ ಸಚಿನ್ ರೈ ಪಾಪೆಮಜಲು ಮಾಜಿ ಶಾಸಕರ ಜೊತೆಗಿದ್ದರು

ಪುತ್ತೂರು: ಅಕ್ರಮ ಗೋಸಾಟ – ತಡೆದ ಹಿಂದೂ ಸಂಘಟನೆಯ ಕಾರ್ಯಕರ್ತರು. ನೂತನ ಕಾಯ್ದೆಯಂತೆ ಮೂವರ ವಿರುದ್ಧ ಪ್ರಕರಣ ದಾಖಲು

Posted by Vidyamaana on 2023-02-13 02:54:01 |

Share: | | | | |


ಪುತ್ತೂರು: ಅಕ್ರಮ ಗೋಸಾಟ – ತಡೆದ ಹಿಂದೂ ಸಂಘಟನೆಯ ಕಾರ್ಯಕರ್ತರು.  ನೂತನ ಕಾಯ್ದೆಯಂತೆ ಮೂವರ ವಿರುದ್ಧ ಪ್ರಕರಣ ದಾಖಲು

ಪುತ್ತೂರು: ಅಕ್ರಮ ಗೋ ಸಾಗಾಟವನ್ನು ತಡೆದ ಹಿಂದೂ ಕಾರ್ಯಕರ್ತರು ಜಾನುವಾರುಗಳನ್ನು ಪೊಲೀಸರಿಗೊಪ್ಪಿಸಿದ ಘಟನೆ ಕರ್ನಾಟಕ ಕೇರಳ ಗಡಿಭಾಗದ ಆರ್ಲಪದವಿನಲ್ಲಿ ನಡೆದಿದೆ. ಕೂಡಲೇ ಸ್ಥಳಕ್ಕೆ ತೆರಳಿದ ಹಿಂದೂ ಸಂಘಟನೆಯ ಮುಖಂಡ ಅರುಣ್ ಕುಮಾರ್ ಪುತ್ತಿಲ (Arun Kumar Putthila) ನೂತನ ಕಾಯ್ದೆಯಂತೆ ಪ್ರಕರಣ ದಾಖಲಿಸಬೇಕೆಂದು ಒತ್ತಾಯಿಸಿದ್ದಾರೆಈ ಬಗ್ಗೆ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ನೂತನ ಗೋಹತ್ಯೆ ನಿಷೇಧ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.ಕೇರಳ ನೊಂದಾಣಿಯ ವಾಹನದಲ್ಲಿ ದನ ಹಾಗೂ ಗಂಡು ಕರುವನ್ನು ಅಕ್ರಮವಾಗಿ ಕೇರಳಕ್ಕೆ ಸಾಗಾಟ ಮಾಡುತ್ತಿದ್ದು, ಈ ಬಗ್ಗೆ ತಿಳಿದ ಹಿಂದೂ ಸಂಘಟನೆ ಕಾರ್ಯಕರ್ತರು ವಾಹನವನ್ನು ತಡೆದಿದ್ದಾರೆ.

ಕಾರ್ಯಕರ್ತರು ಈ ಬಗ್ಗೆ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ರವರಿಗೆ ಮಾಹಿತಿ ನೀಡಿದ್ದು, ತಕ್ಷಣ ಸ್ಪಂದಿಸಿದ ಅರುಣ್ ಕುಮಾರ್ ಪುತ್ತಿಲ ರವರು ಸ್ಥಳಕ್ಕೆ ಆಗಮಿಸಿ ಪೊಲೀಸರೊಂದಿಗೆ ಮಾತುಕತೆ ನಡೆಸಿ, ದನಗಳನ್ನು ಪೊಲೀಸರಿಗೊಪ್ಪಿಸಿದ್ದು, ಮುಂದೆ ಈ ಸ್ಥಳದಲ್ಲಿ ಚೆಕ್ ಪೋಸ್ಟ್ ನಿರ್ಮಾಣ ಮಾಡುವಂತೆ ಅಧಿಕಾರಿಗಳಲ್ಲಿ ಮನವಿ ಮಾಡಿದ್ದಾರೆ.ದನ ಸಾಗಾಟದ ಬಗ್ಗೆ ನರಿಮೊಗರು ಹಾಲು ಉತ್ಪಾದಕರ ಸಹಕಾರಿ ಸಂಘದಿಂದ ನೀಡಲಾದ ಒಪ್ಪಿಗೆ ಪತ್ರವೊಂದಿದ್ದು ಜಾನುವಾರುಗಳನ್ನು ಸಾಕಲು ತೆಗೆದುಕೊಂಡು ಹೋಗುವುದಾದರೆ ಪಶು ವೈದ್ಯರ ಸಹಿ ಆಗಬೇಕಿತ್ತು. ಆದರೇ ಅಕ್ರಮ ಗೋ ಸಾಗಾಟಕ್ಕೆ ಕುಮ್ಮಕ್ಕು ನೀಡಲು ನರಿಮೊಗರು ಹಾಲು ಉತ್ಪಾದಕರ ಸಹಕಾರಿ ಸಂಘದ ಕಾರ್ಯದರ್ಶಿ ಕೃಷ್ಣರಾಜ್ ಎಂಬವರು ಪರ್ಮಿಷನ್ ಕೊಟ್ಟು ಅಧಿಕಾರದ ದುರುಪಯೋಗ ಮಾಡಿರುವುದಾಗಿ ಹಾಗೂ ಗೋ ಹತ್ಯೆಗೆ ಪ್ರಚೋದನೆ ಕೊಟ್ಟದಕ್ಕಾಗಿ ಅವರ ಮೇಲೆ ಎಫ್.ಐ.ಆರ್ ಮಾಡಬೇಕು ಎಂದು ಸಾರ್ವಜನಿಕರು ಮತ್ತು ಕಾರ್ಯಕರ್ತರು ಆಗ್ರಹಿಸಿದ್ದಾರೆ.

ಪ್ರಕರಣ ದಾಖಲು: ಪುತ್ತೂರು ತಾಲೂಕು ಪಾಣಾಜೆ ಗ್ರಾಮದ ನೆಲ್ಲಿತ್ತಿಮಾರ್ ಎಂಬಲ್ಲಿ ಅಶೋಕ್‌ ಲೇಲ್ಯಾಂಡ್‌ ಮಿನಿ ಗೂಡ್ಸ್‌ ವಾಹನವೊಂದರಲ್ಲಿ ಅಕ್ರಮವಾಗಿ ದನ ಸಾಗಾಟ ಮಾಡುತ್ತಿದ್ದಾಗ ಪುತ್ತೂರು ಗ್ರಾಮಾಂತರ ಠಾಣಾ ಸಬ್ ಇನ್ಸ್ ಪೆಕ್ಟರ್ ಶ್ರೀನಾಥ ರೆಡ್ಡಿ ನೇತೃತ್ವದ ತಂಡ ಪರಿಶೀಲಿಸಲಾಗಿ ಜಾನುವಾರು ಸಾಗಾಟಕ್ಕೆ ಯಾವುದೇ ಪರವಾನಿಗೆ ಅಥವಾ ಪಶು ವೈದ್ಯಾಧಿಕಾರಿಯವರ ಪ್ರಮಾಣಪತ್ರ ಇಲ್ಲದೇ ಒಂದು ಹಸು ಮತ್ತು ಒಂದು ಗಂಡು ಕರುವನ್ನು ಸಾಗಿಸುತ್ತಿರುವುದು ಕಂಡುಬಂದಿದೆ.

ಈ ಬಗ್ಗೆ ಕೃತ್ಯದಲ್ಲಿ ತೊಡಗಿದ್ದ ವಿಲ್ಲಿ ಲೂಯಿಸ್ ಡಿ ಸೋಜಾ, ಸಂತೋಷ್ ಡಿ ಸೋಜಾ, ಸಿಲ್ವೆಸ್ಟರ್ ಡಿ ಸೋಜಾ ಎಂಬವರುಗಳನ್ನು ದಸ್ತಗಿರಿ ಮಾಡಿ, ಸದ್ರಿ ವಾಹನ ಹಾಗೂ ಜಾನುವಾರುಗಳನ್ನು ವಶಕ್ಕೆ ಪಡೆಯಲಾಗಿದೆ.

ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಅ.ಕ್ರ 013-2023 ಕಲಂ:- 5, 7, 12 ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯ್ದೆ 2020ಯಂತೆ ಪ್ರಕರಣ ದಾಖಲಿಸಲಾಗಿದೆ.

ಸುಳ್ಯ ಕಲ್ಲಪಳ್ಳಿ ಪಾಣತ್ತೂರು ರಸ್ತೆ ಮಧ್ಯೆ ಪೆರಿಯಾರಂ ಟ್ಯಾಂಕರ್ ಅಪಘಾತ

Posted by Vidyamaana on 2023-06-30 23:49:49 |

Share: | | | | |


ಸುಳ್ಯ  ಕಲ್ಲಪಳ್ಳಿ ಪಾಣತ್ತೂರು ರಸ್ತೆ ಮಧ್ಯೆ ಪೆರಿಯಾರಂ ಟ್ಯಾಂಕರ್ ಅಪಘಾತ

ಸುಳ್ಯ: ಕಲ್ಲಪಳ್ಳಿ ಪಾಣತ್ತೂರು ರಸ್ತೆ ಮಧ್ಯೆ ಪೆರಿಯಾರಂ ನಲ್ಲಿ ಸಂಭವಿಸಿದ ಟ್ಯಾಂಕರ್ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಚಾಲಕ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.


ಅಪಘಾತದಲ್ಲಿ ಚಾಲಕ ಮತ್ತು ಕ್ಲೀನರ್ ಗಂಭೀರ ಗಾಯಗೊಂಡಿದ್ದು ಅವರಿಬ್ಬರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಗಂಭೀರ ಗಾಯಗೊಂಡ ಲಾರಿ ಚಾಲಕ ಹಾಸನ ಮೂಲದ ಪ್ರವೀಣ್ ಅವರು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಟ್ಯಾಂಕರ್ ನಲ್ಲಿದ್ದ ಗಾಯಗೊಂಡ ವ್ಯಕ್ತಿಯ ಸ್ಥಿತಿಯು ಗಂಭೀರವಾಗಿದೆ ಎನ್ನಲಾಗಿದೆ.



Leave a Comment: