Posted by vidyamaana on 2024-07-03 19:23:39 |
ಪುತ್ತೂರು: ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕರ ಸೇವಾಂಜಲಿ ಟ್ರಸ್ಟ್ ಗೆ ಪುತ್ತೂರು ಶಾಸಕರಾದ ಅಶೋಕ್ ರೈಯವರು ರೂ. ೫೦ ಸಾವಿರ ಸಹಾಯಧನವನ್ನು ನೀಡಿದರು. ಮಂಗಳೂರು ಕೇಂದ್ರ ಕಚೇರಿಯನ್ನು ಹೊಂದಿರುವ ಈ ಟ್ರಸ್ಟ್ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಈ ಟ್ರಸ್ಟ್ನಲ್ಲಿ ಸದಸ್ಯರಾಗಿರುತ್ತಾರೆ.
ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಕ್ಷೇಮಾಭಿವೃದ್ದಿ ಟ್ರಸ್ಟ್ ಇದಾಗಿರುತ್ತದೆ. ಈ ಸಂದರ್ಭದಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಜಿಲ್ಲಾಧ್ಯಕ್ಷೆ ತಾರಾಬಲ್ಲಾಲ್, ಪುತ್ತೂರು ತಾಲೂಕು ಅಧ್ಯಕ್ಷೆ ಕಮಲ, ತಾಲೂಕು ಕಾರ್ಯದರ್ಶಿ ಪುಷ್ಪಾವತಿ, ಸೇವಾಂಜಲಿ ಟ್ರಸ್ಟ್ ಉಪಾಧ್ಯಕ್ಷೆ ಅರುಣಾ ಡಿ, ನಿರ್ದೇಶಕಿ ಮೀನಾಕ್ಷಿ ಉಪಸ್ಥಿತರಿದ್ದರು.
Posted by Vidyamaana on 2023-11-14 16:25:10 |
ಪುತ್ತೂರು : ನೀರಿಗಿಳಿದಿದ್ದ ವೇಳೆ ಹೃದಯಾಘಾತ ಸಂಭವಿಸಿ ಯುವಕನೋರ್ವ ಮೃತಪಟ್ಟ ಘಟನೆ ಇರ್ದೆ ಬೇಂದ್ರ್ ತೀರ್ಥ ಬಳಿ ನಡೆದಿದೆ.
ದೇವಸ್ಯ ನಿವಾಸಿ ಸುಜಿತ್ (27) ಮೃತ ಯುವಕ.
ಸುಜಿತ್ ರವರು ಇರ್ದೆ ಬೇಂದ್ರ್ ತೀರ್ಥ ಬಳಿ ಇರುವ ಸಂಬಂಧಿಕರ ಮನೆಗೆ ತೆರಳಿದ್ದು, ಈ ವೇಳೆ ನೀರಿಗಿಳಿದಿದ್ದು, ಹೃದಯಾಘಾತ ಸಂಭವಿಸಿ ಮೃತಪಟ್ಟಿದ್ದಾರೆನ್ನಲಾಗಿದೆ.
ಸುಜಿತ್ ಬೊಳುವಾರಿನ ಗ್ಯಾರೇಜ್ ವೊಂದರಲ್ಲಿ ಮೆಕ್ಯಾನಿಕ್ ಆಗಿ ಕೆಲಸ ನಿರ್ವಹಿಸುತ್ತಿದ್ದರು.
ಮೃತರು ಮನೆಯವರು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.
Posted by Vidyamaana on 2024-01-09 14:54:51 |
ಪಾಟ್ನಾ: ರೀಲ್ಸ್ ಮಾಡುವುದನ್ನು ವಿರೋಧಿಸಿದ್ದಕ್ಕೆ ಪತ್ನಿಯೊಬ್ಬಳು ಅಪ್ಪ- ಅಮ್ಮನೊಂದಿಗೆ ಸೇರಿ ಗಂಡನನ್ನೇ ಹತ್ಯೆ ಮಾಡಿರುವ ಘಟನೆ ನಡೆದಿದೆ.ಈ ಘಟನೆ ಬಿಹಾರದ (Bihar) ಬೇಗುಸರಾಯ್ನಲ್ಲಿ (Begusarai) ನಡೆದಿದೆ. ಮಹೇಶ್ವರ್ ಕುಮಾರ್ ಸಾವನ್ನಪ್ಪಿದ ದುರ್ದೈವಿ. ಈ ವ್ಯಕ್ತಿ ಕೋಲ್ಕತ್ತಾದಲ್ಲಿ (Kolkata) ಕೂಲಿ ಕೆಲಸ ಮಾಡುತ್ತಿದ್ದರು.ಪತ್ನಿ ರಾಣಿಕುಮಾರಿಗೆ ರೀಲ್ಸ್ ಮಾಡುವ ಹುಚ್ಚಿತ್ತು. ಆದರೆ, ಪತಿ ಅದನ್ನು ವಿರೋಧಿಸಿದ್ದರು. ಹೀಗಾಗಿ ಕೋಪಗೊಂಡ ಪತ್ನಿಯು ತನ್ನ ತಂದೆ-ತಾಯಿಯೊಂದಿಗೆ ಸೇರಿಕೊಂಡು ಹತ್ಯೆ ಮಾಡಿದ್ದಾಳೆ ಎನ್ನಲಾಗಿದೆ.
ಫಫೌತ್ ಗ್ರಾಮದ ರಾಣಿ ಕುಮಾರಿ ಸುಮಾರು 7 ವರ್ಷಗಳ ಹಿಂದೆ ಮಹೇಶ್ವರ್ ನನ್ನ ಮದುವೆಯಾಗಿದ್ದರು. ಮಹೇಶ್ವರ್ ಕೆಲಸಕ್ಕೆ ಹೋಗುವ ವೇಳೆ ಫಫೌತ್ ಗ್ರಾಮದಲ್ಲಿನ ತನ್ನ ಅತ್ತೆಯ ಮನೆಗೆ ಹೋಗಿದ್ದರು ಎನ್ನಲಾಗಿದೆ. ಇನ್ಸ್ಟಾಗ್ರಾಂ ರೀಲ್ಸ್ ವಿಚಾರವಾಗಿ ಮಹೇಶ್ವರ್ ಮತ್ತು ರಾಣಿ ಕುಮಾರಿ ನಡುವೆ ವಾಗ್ವಾದ ನಡೆದಿತ್ತು. ಆಗ ಜಗಳ ವಿಕೋಪಕ್ಕೆ ಹೋಗಿ ಕತ್ತು ಹಿಸುಕಿ ಕೊಲೆ ಮಾಡಿದ್ದಾಳೆ ಎನ್ನಲಾಗಿದೆ.
ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಪತ್ನಿ ಬಂಧಿಸಿ ತನಿಖೆ ಕೈಗೊಂಡಿದ್ದಾರೆ.
Posted by Vidyamaana on 2023-09-19 21:21:50 |
ನವದೆಹಲಿ: ಟ್ವಿಟ್ಟರ್ ಎಕ್ಸ್ ಆಗಿ ಬದಲಾವಣೆ ಮಾಡಲಾಗಿತ್ತು. ಈ ಬಳಿಕ ಎಕ್ಸ್ ಅನ್ನು ಪಾವತಿ ವ್ಯವಸ್ಥೆ ಜಾರಿಗೊಳಿಸೋದಾಗಿ ಎಲೋನ್ ಮಸ್ಕ್ ಘೋಷಣೆ ಮಾಡಿದ್ದರು. ಆ ಬೆನ್ನಲ್ಲೇ ಜನಪ್ರಿಯ ಸಾಮಾಜಿಕ ಮಾಧ್ಯಮ ಎಕ್ಸ್ ಡೌನ್ ಆಗಿದೆ. ಬಳಕೆದಾರರು ಈಗ ಪರದಾಡುತ್ತಿರೋದಾಗಿ ತಿಳಿದು ಬಂದಿದೆ.ಈ ಹಿಂದೆ ಟ್ವಿಟರ್ ಎಂದು ಕರೆಯಲ್ಪಡುತ್ತಿದ್ದ ಪ್ಲಾಟ್ ಫಾರ್ಮ್ ಎಕ್ಸ್ ಕೆಲಸ ಮಾಡುವುದನ್ನು ನಿಲ್ಲಿಸಿದೆ. ಎಲೋನ್ ಮಸ್ಕ್ ಅವರು ಸೈಟ್ಗೆ ಪ್ರವೇಶಕ್ಕಾಗಿ ಎಲ್ಲರಿಗೂ ಪಾವತಿಸಲು ಒತ್ತಾಯಿಸಲು ಯೋಜಿಸುತ್ತಿದ್ದಾರೆ ಎಂದು ಹೇಳಿದ ಕೆಲವೇ ಗಂಟೆಗಳ ನಂತರ ಸೈಟ್ ಡೌನ್ ಆಗಿದೆ.
ಎಕ್ಸ್ ಕೆಲವು ಬಳಕೆದಾರರಿಗೆ ಕೈಕೊಟ್ಟ ಕಾರಣ, ಸರ್ವರ್ ಡೌನ್ ಆಗಿ, ಬಳಕೆದಾರರು ಪರದಾಡುವಂತೆ ಆಗಿದೆ. ಟ್ರ್ಯಾಕಿಂಗ್ ವೆಬ್ಸೈಟ್ ಡೌನ್ ಡಿಟೆಕ್ಟರ್ ಮಂಗಳವಾರ ಮಧ್ಯಾಹ್ನ ವಿಶ್ವದಾದ್ಯಂತ ಸಮಸ್ಯೆಗಳ ವರದಿಗಳ ದೊಡ್ಡ ಒಳಹರಿವನ್ನು ತೋರಿಸಿದೆ. ಆ ಸೈಟ್ X ನ ವರದಿಗಳ ಮೇಲೆ ಅವಲಂಬಿತವಾಗಿರುತ್ತದೆ, ಮತ್ತು ಆದ್ದರಿಂದ ಸಮಸ್ಯೆಗಳನ್ನು ಸ್ವತಃ ಅನುಭವಿಸಬಹುದು.
Posted by Vidyamaana on 2023-05-31 03:01:17 |
ಪುತ್ತೂರು: ಸಾಮಾಜಿಕ ಜಾಲತಾಣದಲ್ಲಿ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಸಿಬ್ಬಂದಿಯೋರ್ವರು ಪಕ್ಷದ ಪರವಾಗಿ ಪೋಸ್ಟ್ ಹಾಕಿರುವ ವಿರುದ್ಧ ಎನ್.ಎಸ್.ಯು.ಐ. ವಿದ್ಯಾರ್ಥಿ ಒಕ್ಕೂಟ ಪ್ರತಿಭಟನೆ ಹಮ್ಮಿಕೊಂಡಿದೆ.
ಬೆಳಿಗ್ಗೆ 9.30ಕ್ಕೆ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಮುಂಭಾಗದಲ್ಲಿ ಪ್ರತಿಭಟನೆ ನಡೆಯಲಿದೆ ಬಳಿಕ ಪ್ರಾಂಶುಪಾಲರಿಗೆ ಮನವಿ ಸಲ್ಲಿಸಲಾಗುವುದು. ನಂತರ ಶಾಸಕರಿಗೆ ಹಾಗೂ ಪೊಲೀಸ್ ಇಲಾಖೆಗೆ ಮನವಿ ನೀಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ.
Posted by Vidyamaana on 2024-04-23 21:56:48 |
ಪುತ್ತೂರು : ಮಹಿಳೆಯರ ಪ್ರಗತಿಯನ್ನು ದೃಷ್ಟಿಯಲ್ಲಿಟ್ಟುಕೊಂಡು ಕರ್ನಾಟಕಲ್ಲಿ ಕಾಂಗ್ರೆಸ್ ಸರಕಾರ ಜಾರಿಗೊಳಿಸಿದ 5 ಗ್ಯಾರಂಟಿಗಳು ಮಹಿಳೆಯರಿಗೆ ಶಕ್ತಿ ತುಂಬಿದೆ. ಪ್ರಚಾರದ ಸಂದರ್ಭದಲ್ಲಿ ಪ್ರತಿ ಮನೆ ಮನೆಗಳ ಮಹಿಳೆಯರಲ್ಲಿ ಖುಷಿ ಕಾಣಿಸುತ್ತಿದೆ. ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಅತ್ಯಧಿಕ ಸ್ಥಾನಗಳನ್ನು ಗೆಲ್ಲಲಿದೆ ಎಂದು ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ಅನಿತಾ ಹೇಮನಾಥ ಶೆಟ್ಟಿ ಹೇಳಿದ್ದಾರೆ.