ಮಂಗಳೂರು- ಸುಬ್ರಹ್ಮಣ್ಯ ಮಧ್ಯೆ ಪ್ಯಾಸೆಂಜರ್ ರೈಲು ಆರಂಭಿಸಲು ಸಂಸತ್ತಿನಲ್ಲಿ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಒತ್ತಾಯ

ಸುದ್ದಿಗಳು News

Posted by vidyamaana on 2024-07-24 16:52:02 |

Share: | | | | |


ಮಂಗಳೂರು- ಸುಬ್ರಹ್ಮಣ್ಯ ಮಧ್ಯೆ ಪ್ಯಾಸೆಂಜರ್ ರೈಲು ಆರಂಭಿಸಲು ಸಂಸತ್ತಿನಲ್ಲಿ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಒತ್ತಾಯ

ವದೆಹಲಿ : ಮಂಗಳೂರು- ಸುಬ್ರಹ್ಮಣ್ಯ ಮಧ್ಯೆ ಪ್ಯಾಸೆಂಜರ್ ರೈಲು ಆರಂಭಿಸಲು ಸಂಸತ್ತಿನಲ್ಲಿ ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಒತ್ತಾಯಿಸಿದರು.


ಈ ಹಿಂದೆ ಮಂಗಳೂರು- ಸುಬ್ರಹ್ಮಣ್ಯ ನಡುವೆ ಮೀಟರ್ ಗೇಜ್ ಹಳಿ ಇದ್ದಾಗ ಪ್ಯಾಸೆಂಜರ್ ರೈಲು ಓಡಾಟ ಇತ್ತು. ಬ್ರಾಡ್ ಗೇಜ್ ಹಳಿ ಮಾಡುವ ಸಲುವಾಗಿ 2005ರಲ್ಲಿ ಈ ರೈಲಿನ ಸಂಚಾರವನ್ನು ನಿಲ್ಲಿಸಲಾಗಿತ್ತು. ಆನಂತರ, ಬ್ರಾಡ್ ಗೇಜ್ ಹಳಿಯಾಗಿ ಪರಿವರ್ತನೆ ಮಾಡಲಾಗಿದೆ. ಅಂದು ಓಡುತ್ತಿದ್ದ ಪ್ಯಾಸೆಂಜರ್ ರೈಲು ಮಂಗಳೂರಿನಿಂದ ಕಬಕ- ಪುತ್ತೂರು ನಡುವೆ ಓಡಾಟ ನಡೆಸುತ್ತಿದ್ದು, ಅದನ್ನು ಸುಬ್ರಹ್ಮಣ್ಯದವರೆಗೆ ವಿಸ್ತರಣೆ ಮಾಡಬೇಕು.

ಮಂಗಳೂರು – ಸುಬ್ರಹ್ಮಣ್ಯ ಮಧ್ಯೆ ರೈಲು ಓಡಾಟವಾದರೆ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲೆ, ಕಾಲೇಜಿಗೆ ಹೋಗುವವರಿಗೆ ಉಪಯೋಗವಾಗಲಿದೆ. ಗ್ರಾಮಾಂತರ ಪ್ರದೇಶವಾದ ಸುಳ್ಯದಿಂದ ಮಂಗಳೂರಿಗೆ ಪ್ರತಿದಿನ ಓಡಾಟ ಮಾಡುವವರಿದ್ದಾರೆ. ಅವರಿಗೂ ಉಪಯುಕ್ತ ಆಗಲಿದೆ. ಇದು ಸೌತ್ ವೆಸ್ಟರ್ನ್ ರೈಲ್ವೇ ವಿಭಾಗದಲ್ಲಿದ್ದು, ನಮ್ಮ ಜಿಲ್ಲೆಯ ಒಳಗೆ ಸಂಚರಿಸುವ ಏಕೈಕ ಪ್ಯಾಸೆಂಜರ್ ರೈಲಾಗಿದೆ.


ಜನಸಾಮಾನ್ಯರ ಹಿತದೃಷ್ಟಿಯಿಂದ ಈ ರೈಲನ್ನು ಸುಬ್ರಹ್ಮಣ್ಯದವರೆಗೂ ವಿಸ್ತರಣೆ ಮಾಡಬೇಕು ಎಂದು ರೈಲ್ವೇ ಸಚಿವರನ್ನು ಮನವಿ ಮಾಡಿದ್ದಾರೆ. ಇದಕ್ಕುತ್ತರಿಸಿದ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್, ಸೇನೆಯಿಂದ ನಿವೃತ್ತಿ ಪಡೆದು ಸಂಸದರಾಗಿರುವ ಕ್ಯಾಪ್ಟನ್ ಬ್ರಿಜೇಶ್ ಚೌಟ ಬಗ್ಗೆ ಗೌರವ ಹೊಂದಿದ್ದು, ರೈಲ್ವೇ ವಿಚಾರಗಳ ಬಗ್ಗೆ ಯಾವುದೇ ಮನವಿಯಿದ್ದರೂ ನನ್ನ ಕಚೇರಿಗೆ ಬಂದು ವೈಯಕ್ತಿಕವಾಗಿ ಚರ್ಚಿಸಬಹುದು. ಪರಿಹರಿಸಲು ಮುಕ್ತನಿದ್ದೇನೆ ಎಂದು ಹೇಳಿದರು.

 Share: | | | | |


ಬಾಯಿ ಹುಣ್ಣಿಗೆ ಮನೆಮದ್ದು ಹಾಗೂ ಆಯುರ್ವೇದ ಪರಿಹಾರಗಳು

Posted by Vidyamaana on 2023-02-05 02:44:35 |

Share: | | | | |


ಬಾಯಿ ಹುಣ್ಣಿಗೆ ಮನೆಮದ್ದು ಹಾಗೂ ಆಯುರ್ವೇದ ಪರಿಹಾರಗಳು

ಬಾಯಿ ಹುಣ್ಣು ಒಂದು ಸಾಮಾನ್ಯ ಸಮಸ್ಯೆ. ಬಾಯಿ ಹುಣ್ಣು ಇದ್ದರೆ ಯಾವುದೇ ಆಹಾರವನ್ನು ತಿನ್ನಲು ಆಗುವುದಿಲ್ಲ. ನಾವು ಸೇವಿಸುವ ಆಹಾರದಲ್ಲಿ ಸ್ವಲ್ಪ ಉಪ್ಪು ಮಸಾಲೆ ಇದ್ದರಂತೂ ಉರಿಯುತ್ತದೆ. ಆಹಾರವನ್ನು ಜಗಿಯಲೂ ಕಷ್ಟವಾಗುತ್ತದೆ, ಅಲ್ಲದೆ ಮಾತನಾಡಲೂ ಕಷ್ಟವಾಗುತ್ತದೆ. ಕೆಲವರಿಗೆ ಈ ಸಮಸ್ಯೆ ಕೆಲವರಿಗೆ ಪದೇ ಪದೇ ಕಾಡುತ್ತಿದ್ದರೆ ಮತ್ತೆ ಕೆಲವರಿಗೆ ಎರಡು-ಮೂರು ತಿಂಗಳಿಗೊಮ್ಮೆ ಕಾಣಿಸಿಕೊಳ್ಳುತ್ತದೆ.

ಬಾಯಿಯ ಹುಣ್ಣು ಏಕೆ ಬರುತ್ತದೆ?

ಬಾಯಿ ಹುಣ್ಣಿಗೆ ನಿರ್ದಿಷ್ಟ ಕಾರಣ ಏನೂ ಎಂಬುದು ಇನ್ನೂ ಸರಿಯಾಗಿ ತಿಳಿದಿಲ್ಲ. ಆದರೆ ಇದು ವ್ಯಕ್ತಿಯಿಂದ ವ್ಯಕ್ತಿಗೆ ವಿಭಿನ್ನವಾಗಿರುತ್ತದೆ. ಮತ್ತು ಬಾಯಿ ಹುಣ್ಣುಗಳು ಉಂಟಾಗಲು ವಿವಿಧ ಕಾರಣಗಳು ಇರುತ್ತವೆ. ಇದು ಸಾಮಾನ್ಯವಾಗಿ ಹಾರ್ಮೋನುಗಳ ಅಸಮತೋಲನ, ಆಮ್ಲೀಯತೆ, ಮಲಬದ್ಧತೆ, ವಿಟಮಿನ್ ಬಿ ಮತ್ತು ಸಿ ಕೊರತೆ, ಜೊತೆಗೆ ಕಬ್ಬಿಣ ಮತ್ತು ಇತರ ಪೋಷಕಾಂಶಗಳ ಕೊರತೆಯಿಂದ ಉಂಟಾಗುತ್ತದೆ. ಬಾಯಿ ಹುಣ್ಣು ಎಲ್ಲಾ ವಯಸ್ಸಿನ ಜನರ ಮೇಲೆ ಪರಿಣಾಮ ಬೀರಬಹುದು.ಕೆಲವರಿಗೆ ದೇಹದಲ್ಲಿ ಉಷ್ಣತೆ ಹೆಚ್ಚಾದಾಗ ಈ ಸಮಸ್ಯೆ ಹೆಚ್ಚಾಗಿ ಕಾಡುತ್ತದೆ. ಬಾಯಿಯನ್ನು ಸ್ವಚ್ಛವಾಗಿ, ಸರಿಯಾಗಿ ಇಟ್ಟುಕೊಳ್ಳದಿದ್ದರೂ ಕೂಡ ಈ ಸಮಸ್ಯೆ ಉಂಟಾಗಬಹುದು. ಕೆಲವರಿಗೆ ಒತ್ತಡ, ನಿದ್ರೆಯ ಕೊರತೆ ಅಥವಾ ಹಾರ್ಮೋನುಗಳ ಬದಲಾವಣೆಯಿಂದಲೂ ಬಾಯಿ ಹುಣ್ಣು ಉಂಟಾಗಬಹುದು. ಒಟ್ಟಿನಲ್ಲಿ ಹೇಳುವುದಾದರೆ ಎಲ್ಲರೂ ಒಮ್ಮೆಯಾದರೂ ಬಾಯಿ ಹುಣ್ಣಿನ ಸಮಸ್ಯೆಯನ್ನು ಎದುರಿಸಿರುತ್ತಾರೆ. ಆದ್ದರಿಂದಲೇ ಇದೊಂದು ಸಾಮಾನ್ಯ ಸಮಸ್ಯೆ ಎನಿಸಿದೆ.ಬಾಯಿ ಹುಣ್ಣು ಆದಾಗ ಏನು ಮಾಡಬೇಕು?

ಬಾಯಿಯ ಹುಣ್ಣುಗಳು ಒಸಡುಗಳ ಕೆಳಭಾಗದಲ್ಲಿ ಮತ್ತು ಬಾಯಿಯ ಇತರ ಸ್ಥಳಗಳಲ್ಲಿ ಕಂಡುಬರುವ ಸಣ್ಣ ಸಣ್ಣ ಗಾಯಗಳಾಗಿವೆ. ಬಾಯಿ ಹುಣ್ಣು ಸಾಮಾನ್ಯವಾಗಿ ಕೆಂಪು ಅಂಚಿನೊಂದಿಗೆ ಬಿಳಿಯ ಬಣ್ಣದ್ದಾಗಿರುತ್ತದೆ. ಇದು ಸಾಂಕ್ರಾಮಿಕವಲ್ಲ ಮತ್ತು ಸೂಕ್ತವಾದ ಕ್ರಮ ಕೈಗೊಂಡಲ್ಲಿ ಕೆಲವೇ ದಿನಗಳಲ್ಲಿ ಅಥವಾ ಒಂದೆರಡು ವಾರಗಳಲ್ಲಿ ವಾಸಿಯಾಗುತ್ತವೆ. ದೀರ್ಘಕಾಲದವರೆಗೆ ಬಾಯಿಯಲ್ಲಿ ಹುಣ್ಣು ಮತ್ತು ನೋವಿನ ಹುಣ್ಣುಗಳು ಗಂಭೀರವಾದ ವೈದ್ಯಕೀಯ ಸಮಸ್ಯೆಯ ಸಂಕೇತವಾಗಬಹುದು. ಉದಾಹರಣೆಗೆ ಸಣ್ಣ ಅಥವಾ ದೊಡ್ಡ ಕರುಳಿನ ಸೋಂಕುಗಳು, ಅಸಮರ್ಪಕ ಜೀರ್ಣಕ್ರಿಯೆ, ತೀವ್ರ ಆಮ್ಲೀಯತೆಯ ಇಂತಹ ಸಮಸ್ಯೆಗಳು ಇರಬಹುದು. ಆದ್ದರಿಂದ ಹೆಚ್ಚು ಕಾಲ ಬಾಯಿ ಹುಣ್ಣು ನೋವು ಕೊಡುತ್ತಿದ್ದು ದೀರ್ಘಕಾಲದವರೆಗೆ ಇದ್ದರೆ ವೈದ್ಯರನ್ನು ತಡಮಾಡದೇ ಕಾಣಬೇಕು.

ಬಾಯಿ ಹುಣ್ಣಿಗೆ ಮನೆಮದ್ದುಗಳು

ಬಾಯಿ ಹುಣ್ಣಿನ ನೋವಿನ ತಕ್ಷಣ ಕಡಿಮೆಯಾಗಲು ಸ್ವಚ್ಛವಾದ ಹತ್ತಿಯನ್ನು ಜೀನುತುಪ್ಪಕ್ಕೆ ಅದ್ದಿ ನೋವಿರುವ ಭಾಗಕ್ಕೆ ಇಟ್ಟುಕೊಳ್ಳಬೇಕು.ಹೀಗೆಯೇ ತುಪ್ಪವನ್ನು ಬಾಯಿ ಹುಣ್ಣಿಗೆ ಹಚ್ಚಿಕೊಂಡರೂ ನೋವು ಉಪಶಮನವಾಗುತ್ತದೆ. ತೆಂಗಿನ ಎಣ್ಣೆಯನ್ನು ಬಾಯಿ ಹುಣ್ಣಿಗೆ ಹಚ್ಚಿಕೊಂಡರೆ ನೋವು ಬೇಗ ತಣಿಯುತ್ತದೆ. ಹಾಗೆಯೇ ಸ್ವಲ್ಪ ಅಲೋವೆರಾದ ತಾಜಾ ತಿರುಳನ್ನು (ಲೋಳೆಸರ) ಹುಣ್ಣಿನ ಮೇಲೆ ದಿನವೂ ಹಚ್ಚುತ್ತಿದ್ದರೆ ಒಂದೆರಡು ದಿನಗಳಲ್ಲಿ ವಾಸಿವಾಗಬಹುದು. ಅಲೋವೆರಾ ಕೂಡ ದೇಹವನ್ನು ತಂಪಾಗಿರಿಸಲು ಸಹಕಾರಿ.ಬಾಯಿ ಹುಣ್ಣು ಆದಾಗ ಎಳನೀರು ಕುಡಿದರೆ ಬಹಳ ಒಳ್ಳೆಯದು. ದಿನಕ್ಕೆ ಎರಡು ಅಥವಾ ಮೂರು ಸಲ ತಾಜಾ ಮಜ್ಜಿಗೆಯನ್ನೂ ತೆಗೆದುಕೊಳ್ಳಬಹುದು. ಇದರಿಂದ ದೇಹದ ತಾಪಮಾನ ಕಡಿಮೆಯಾಗಿ ಬಾಯಿಯಲ್ಲಿನ ಹುಣ್ಣುಗಳು ವಾಸಿಯಾಗಲು ಸಹಾಯವಾಗುತ್ತದೆ.

ಬಾಯಿ ಹುಣ್ಣಿಗೆ ಆಯುರ್ವೇದ ಪರಿಹಾರಗಳು

ಹಲವಾರು ಆರೋಗ್ಯ ಸಮಸ್ಯೆಗಳ ವಿರುದ್ಧ ಹೋರಾಡುವ ಗುಣಲಕ್ಷಣಗಳನ್ನು ಹೊಂದಿರುವ ಅರಿಶಿನದಲ್ಲಿಯೂ ಕೂಡ ಬಾಯಿ ಹುಣ್ಣಿನ ಸಮಸ್ಯೆಯ ವಿರುದ್ಧ ಹೋರಾಡುವ ಗುಣವಿದೆ. ಒಂದು ಟೇಬಲ್ ಚಮಚ ಜೇನುತುಪ್ಪ, ಅರ್ಧ ಟೀ ಚಮಚ ಅರಿಶಿನವನ್ನು ಸೇರಿಸಿ ಮಿಶ್ರಣ ಮಾಡಿಕೊಂಡು ಬಾಯಿ ಹುಣ್ಣಿರುವ ಜಾಗಕ್ಕೆ ಈ ಮಿಶ್ರಣವನ್ನು ಹಚ್ಚಬೇಕು. ನಾಲ್ಕೈದು ದಿನಗಳ ಪ್ರತಿದಿನ ಹೀಗೆ ಮಾಡುತ್ತಾ ಬರುವುದರಿಂದ ಕೂಡಲೇ ಈ ಸಮಸ್ಯೆ ವಾಸಿಯಾಗುತ್ತದೆ.

ಪ್ರತಿದಿನ ತುಳಸಿ ಗಿಡದ ಎಲೆಗಳನ್ನು ಚೆನ್ನಾಗಿ ಜಗಿದು ಅದರ ರಸವನ್ನು ಹೀರಬೇಕು. ತುಳಸಿ ಎಲೆಗಳ ಚಹಾ ತಯಾರು ಮಾಡಿಕೊಂಡು ದಿನದಲ್ಲಿ ಎರಡು ಬಾರಿಯಾದರೂ ಕುಡಿದರೆ ಈ ಸಮಸ್ಯೆಯಿಂದ ಪಾರಾಗಬಹುದು. ಒಂದು ಚಮಚ ನೆಲ್ಲಿಕಾಯಿ ಪುಡಿ ಮತ್ತು ಒಂದು ಚಮಚ ಜೇನುತುಪ್ಪವನ್ನು ಬೆರೆಸಿ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ತೆಗೆದುಕೊಳ್ಳಬೇಕು.ಬಾಯಿ ಹುಣ್ಣು ಆದಾಗ ಆಮ್ಲೀಯ ಹಣ್ಣುಗಳಾದ ನಿಂಬೆ, ಕಿತ್ತಳೆ, ಅನಾನಸ್, ಚಿಪ್ಸ್ ಮತ್ತು ಮಸಾಲೆಯುಕ್ತ ಆಹಾರ ಸೇವಿಸಬಾರದು. ನಿಧಾನವಾಗಿ ಮೆದುವಾಗಿರುವ ಬ್ರಿಸಲ್ಲುಗಳಿರುವ ಬ್ರಶ್ ಉಪಯೋಗಿಸಿ ಹಲ್ಲು ಉಜ್ಜಬೇಕು. ಯಾವುದೇ ರೀತಿಯ ಮಾನಸಿಕ ಒತ್ತಡ ಇದ್ದರೆ ಧ್ಯಾನ ಮಾಡಲು ಪ್ರಯತ್ನಿಸಿ. ಒತ್ತಡವನ್ನು ನಿವಾರಿಸಲು ನೀವು ಮಾಡಲು ಇಷ್ಟಪಡುವ ಯಾವುದೇ ಚಟುವಟಿಕೆಯನ್ನು ತೊಡಗಿಸಿಕೊಳ್ಳಬೇಕು. ಪ್ರತಿದಿನ ಕನಿಷ್ಠ ಎಂಟು ಗಂಟೆಗಳ ಕಾಲ ಚೆನ್ನಾಗಿ ನಿದ್ರೆ ಮಾಡಬೇಕು. ಸಾಕಷ್ಟು ನೀರು ಕುಡಿಯುವುದು ಬಾಯಿ ಹುಣ್ಣುಗಳ ಸಮಸ್ಯೆ ಕಡಿಮೆ ಮಾಡಲು ಸಹಾಯ ಮಾಡುತ್ತದೆ.

ಪೋಷಕಾಂಶಗಳು ಇರುವಂತಹ ಸಮತೋಲಿತ ಆಹಾರ ಕ್ರಮವನ್ನು ಪಾಲಿಸಿಕೊಂಡು ಹೋದರೆ ಬಾಯಿಯ ಹುಣ್ಣು ಕಡಿಮೆ ಆಗುವುದು. ತಾಜಾ ಹಣ್ಣುಗಳು ಮತ್ತು ತರಕಾರಿಗಳನ್ನು ಆಹಾರದಲ್ಲಿ ನಿಯಮಿತವಾಗಿ ಸೇರಿಸಿಕೊಳ್ಳಬೇಕು. ಆಲ್ಕೋಹಾಲ್, ಕಾಫಿ ಮತ್ತು ತಂಪು ಪಾನೀಯಗಳ ಸೇವನೆ ಹೆಚ್ಚು ಬೇಡ. ಹಾಗೆಯೇ ಅತಿ ಮಸಾಲೆಯುಕ್ತ ಪದಾರ್ಥಗಳ ಸೇವನೆ ಸಲ್ಲ. ಪ್ರತಿದಿನ ಮೂರು ಲೀಟರ್ ನೀರನ್ನು ಕುಡಿಯಬೇಕು. ಹೀಗೆ ಮಾಡಿದರೆ ಬಾಯಿಯ ಹುಣ್ಣು ಸಮಸ್ಯೆ ಹತ್ತಿರವೂ ಸುಳಿಯುವುದಿಲ್ಲ.

ವಾಹನ ಸವಾರರೇ ಗಮನಿಸಿ : ಪ್ರಖರ ಬೆಳಕು ಸೂಸುವ, ಕಣ್ಣು ಕುಕ್ಕುವ LED ಲೈಟ್ ಅಳವಡಿಸಿದ್ರೆ ಕೇಸ್ ದಾಖಲು

Posted by Vidyamaana on 2024-06-19 13:49:15 |

Share: | | | | |


ವಾಹನ ಸವಾರರೇ ಗಮನಿಸಿ : ಪ್ರಖರ ಬೆಳಕು ಸೂಸುವ, ಕಣ್ಣು ಕುಕ್ಕುವ LED ಲೈಟ್ ಅಳವಡಿಸಿದ್ರೆ ಕೇಸ್ ದಾಖಲು

ಬೆಂಗಳೂರು : ಎಲ್ಲಾ ವಾಹನಗಳಿಗೆ ಸಿಎಂವಿ ಕಾಯ್ದೆಯಲ್ಲಿ ನಮೂದಿಸಿರುವ ಮಾನದಂಡದಂತೆ ಎಲ್‌ಇಡಿ ದೀಪಗಳನ್ನು ಅಳವಡಿಸುವ ಕುರಿತಂತೆ ಸಂಚಾರ ಮತ್ತು ರಸ್ತೆ ಸುರಕ್ಷತೆ ಹೆಚ್ಚುವರಿ ಪೊಲೀಸ್‌ ಮಹಾ ನಿರ್ದೇಶಕ ಆಲೋಕ್‌ ಕುಮಾರ್‌ ಸೂಚಿಸಿದ್ದಾರೆ.

ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಇತ್ತೀಚಿನ ದಿನಗಳಲ್ಲಿ ಹಲವಾರು ವಾಹನಗಳಲ್ಲಿ ಹೆಚ್ಚು ಬೆಳಕು ಹೊರಹಾಕುವ ಎಲ್‌ಇಡಿ ದೀಪಗಳನ್ನು ಅಳವಡಿಸುತ್ತಿದ್ದು ಇದರಿಂದ ಎದುರು ಮುಖದಲ್ಲಿ ಸಂಚರಿಸುವ ಇತರೆ ವಾಹನ ಸವಾರರಿಗೆ ತೀವು ತೊಂದರೆಯುಂಟಾಗುತ್ತಿದ್ದು ಇದರಿಂದ ಹೆಚ್ಚು ರಸ್ತೆ ಅಪಘಾತಗಳು ಸಂಭವಿಸುತ್ತಿರುವುದು ಕಂಡು ಬಂದಿರುತ್ತದೆ.

ನಾಪತ್ತೆಯಾದವನು ಅಕ್ರಮ ಸಂಬಂಧಕ್ಕೆ ಬಲಿ; ಶವವನ್ನು ತುಂಡು ತುಂಡಾಗಿ ಕತ್ತರಿಸಿ ಮೋರಿಗೆ ಬಿಸಾಡಿದ ಹಂತಕ!

Posted by Vidyamaana on 2024-06-08 17:17:10 |

Share: | | | | |


ನಾಪತ್ತೆಯಾದವನು ಅಕ್ರಮ ಸಂಬಂಧಕ್ಕೆ ಬಲಿ; ಶವವನ್ನು ತುಂಡು ತುಂಡಾಗಿ ಕತ್ತರಿಸಿ ಮೋರಿಗೆ ಬಿಸಾಡಿದ ಹಂತಕ!

ಬೆಂಗಳೂರು : ರಾಜಧಾನಿ ಬೆಂಗಳೂರಿ‌ನಲ್ಲಿ (Bengaluru News) ಭಯಂಕರ ಕೊಲೆ (Bengaluru Murder) ಪ್ರಕರಣವನ್ನು ಸಂಪಿಗೇಹಳ್ಳಿ ಪೊಲೀಸರು ಬಯಲು ಮಾಡಿದ್ದಾರೆ. ಮನೆಗೆ ಬಂದಿದ್ದ ವ್ಯಕ್ತಿಗೆ ಜಾಕ್‌ ರಾಡ್‌ನಿಂದ ಹೊಡೆದು ಕೊಂದು, ನಂತರ ಮೃತದೇಹವನ್ನು ತುಂಡು ತುಂಡಾಗಿ ಕತ್ತರಿಸಿ ಮೋರಿಗೆ ಎಸೆದಿದ್ದಾನೆ.

ಬೆಂಗಳೂರಿನ ರಾಮಮೂರ್ತಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ (Murder case) ಈ ಕೃತ್ಯ ನಡೆದಿದೆ. ಕೆ.ವಿ.ಶ್ರೀನಾಥ್ (34) ಕೊಲೆಯಾದವನು. ಮಾಧವ ರಾವ್ ಎಂಬಾತ ಕೊಲೆ ಆರೋಪಿಯಾಗಿದ್ದಾನೆ.

ಥಣಿಸಂದ್ರದ ಅಂಜನಾದ್ರಿ ಲೇಔಟ್ ನಿವಾಸಿಯಾದ ಕೆ.ವಿ. ಶ್ರೀನಾಥ್‌ ಬೆಂಗಳೂರಿನ ಬಸವೇಶ್ವರನಗರದಲ್ಲಿರುವ ಮಾರ್ಗದರ್ಶಿ ಚಿಟ್‌ ಫಂಡ್‌ನಲ್ಲಿ ಡೆವಲಪ್ಮೆಂಟ್ ಆಫೀಸರ್ ಆಗಿದ್ದ. ಹೀಗಿರುವಾಗ ಕಳೆದ ಮೇ.28ರ ಬೆಳಗ್ಗೆ ಮನೆಯಿಂದ ಹೊರಹೋಗಿದ್ದ ಶ್ರೀನಾಥ್‌ ವಾಪಸ್ ಆಗಿರಲಿಲ್ಲ. ಇದರಿಂದ ಹೆದರಿದ ಶ್ರೀನಾಥ್‌ ಪತ್ನಿ ಮೇ.29ರಂದು ಸಂಪಿಗೆಹಳ್ಳಿ ಪೊಲೀಸ್ ಠಾಣೆಯಲ್ಲಿ ಮಿಸ್ಸಿಂಗ್‌ ಕೇಸ್‌ ದಾಖಲಿಸಿದ್ದರು.

ದೂರು ದಾಖಲಿಸಿಕೊಂಡು ಪ್ರಕರಣದ ಕುರಿತು ತನಿಖೆ ನಡೆಸಿದ ಪೊಲೀಸರಿಗೆ ಕೆ.ವಿ.ಶ್ರೀನಾಥ್ ಮೇ.28ರಂದು ಆರೋಪಿ ಮಾಧವರಾವ್ ಮನೆಗೆ ಹೋಗಿದ್ದು ಗೊತ್ತಾಗಿತ್ತು. ಕೆ.ಆರ್.ಪುರಂನ ವಿಜಿನಪುರದಲ್ಲಿರುವ ಮಾಧವರಾವ್ ಮನೆಗೆ ಶ್ರೀನಾಥ್‌ ಹೋಗುವುದು ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಆದರೆ ಒಳಗೆ ಹೋದವನು ಹೊರಗೆ ಬಂದಿರಲಿಲ್ಲ. ಜತೆಗೆ ಮನೆಯ ಒಳಗಡೆ ಪರಿಶೀಲನೆ ಮಾಡಿದಾಗ ರಕ್ತದ ಕಲೆಗಳು ಪತ್ತೆಯಾಗಿದ್ವು. ಇದರಿಂದ ಮಾಧವರಾವ್ ಬಗ್ಗೆ ವಿಚಾರಿಸಿದಾಗ ಆತನೂ ನಾಪತ್ತೆಯಾಗಿದ್ದ.

ಬಳಿಕ ಆತನ ಮೊಬೈಲ್‌ ಲೋಕೇಶನ್‌ ಪತ್ತೆ ಮಾಡಿದ ಪೊಲೀಸರಿಗೆ ಆರೋಪಿ ಆಂಧ್ರಪ್ರದೇಶದಲ್ಲಿಇದ್ದಾನೆ ಎಂದು ಗೊತ್ತಾಗಿತ್ತು. ನಂತರ ಮಾಧವರಾವ್‌ನನ್ನು ಕರೆತಂದು ಪೊಲೀಸರು ವಿಚಾರಣೆಯನ್ನು ನಡೆಸಿದಾಗ ಅಸಲಿ ಕಥೆಯನ್ನು ತೆರೆದಿಟ್ಟಿದ್ದ.

ತೆಲಂಗಾಣದ ನೂತನ ಮುಖ್ಯಮಂತ್ರಿಯಾಗಿ ರೇವಂತ್ ರೆಡ್ಡಿ ಪ್ರಮಾಣ ವಚನ ಸ್ವೀಕಾರ

Posted by Vidyamaana on 2023-12-07 13:41:00 |

Share: | | | | |


ತೆಲಂಗಾಣದ ನೂತನ ಮುಖ್ಯಮಂತ್ರಿಯಾಗಿ ರೇವಂತ್ ರೆಡ್ಡಿ ಪ್ರಮಾಣ ವಚನ ಸ್ವೀಕಾರ

ಹೈದರಾಬಾದ್‌: ಹೈದರಾಬಾದಿನ ಎಲ್‌ಬಿ ಕ್ರೀಡಾಂಗಣದಲ್ಲಿ ಆಯೋಜಿಸಲಾದ ಅದ್ದೂರಿ ಕಾರ್ಯಕ್ರಮದಲ್ಲಿ ರೇವಂತ್ ರೆಡ್ಡಿ ತೆಲಂಗಾಣದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಕಾಂಗ್ರೆಸ್‌ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪ್ರಧಾನ ಕಾರ್ಯದರ್ಶಿ ಹಾಗೂ ತೆಲಂಗಾಣ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್, ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾ‌ರ್ ಉಪಸ್ಥಿತರಿದ್ದರು.


ಸುಮಾರು ಒಂದು ಲಕ್ಷ ಮಂದಿ ಈ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಸಾಕ್ಷಿಯಾದರು.

ಅಧಿಕಾರ ಖಚಿತವೆಂದು ನಂಬಿ 22 ಲ್ಯಾಂಡ್‌ ಕ್ರೂಸರ್ ಖರೀದಿಸಿದ್ದ ಕೆಸಿಆರ್: ರೇವಂತ್

Posted by Vidyamaana on 2023-12-28 12:07:33 |

Share: | | | | |


ಅಧಿಕಾರ ಖಚಿತವೆಂದು ನಂಬಿ 22 ಲ್ಯಾಂಡ್‌ ಕ್ರೂಸರ್ ಖರೀದಿಸಿದ್ದ ಕೆಸಿಆರ್: ರೇವಂತ್

ತೆಲಂಗಾಣ:ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿಯುತ್ತೇವೆ ಎಂಬ ಅತಿಯಾದ ಆತ್ಮವಿಶ್ವಾಸದಲ್ಲಿ ಮಾಜಿ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಅವರ ಸರ್ಕಾರ ಸುಮಾರು ₹66 ಕೋಟಿ ಖರ್ಚು ಮಾಡಿ 22 ಟೊಯೊಟಾ ಲ್ಯಾಂಡ್ ಕ್ರೂಸರ್‌ ಕಾರುಗಳನ್ನು ಖರೀದಿಸಿತ್ತು ಎಂದು ಮುಖ್ಯಮಂತ್ರಿ ರೇವಂತ್ ರೆಡ್ಡಿ ಆರೋಪಿಸಿದ್ದಾರೆ.ಇಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರೇವಂತ್‌, ಹಿಂದಿನ ಸರ್ಕಾರದ ದುಂದು ವೆಚ್ಚದಿಂದ ಜನರು ಸಮಸ್ಯೆ ಎದುರಿಸಬೇಕಾಯಿತು ಎಂದರು.


ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ನಂತರ ನನಗಾಗಿ ಹೊಸ ವಾಹನಗಳನ್ನು ಖರೀದಿಸದಂತೆ ಅಧಿಕಾರಿಗಳಿಗೆ ತಿಳಿಸಿದ್ದೆ. ಹಳೆ ಕಾರುಗಳನ್ನೇ ರಿಪೇರಿ ಮಾಡಿ ಬಳಸುವಂತೆ ಸೂಚಿಸಿದ್ದೆ. ಈ ವೇಳೆ ಅಧಿಕಾರಿಗಳು ಹೊಸ ಕಾರುಗಳನ್ನು ಈಗಾಗಲೇ ಖರೀದಿಸಿರುವ ಬಗ್ಗೆ ನನಗೆ ಮಾಹಿತಿ ನೀಡಿದರು ಎಂದು ಹೇಳಿದ್ದಾರೆ.


ಹಿಂದಿನ ಸರ್ಕಾರ 22 ಲ್ಯಾಂಡ್ ಕ್ರೂಸರ್ ವಾಹನಗಳನ್ನು ಖರೀದಿಸಿತ್ತು. ಅವೆಲ್ಲವೂ ವಿಜಯವಾಡದಲ್ಲಿವೆ. ನೂತನ ಮುಖ್ಯಮಂತ್ರಿ(ಕೆಸಿಆರ್) ಪ್ರಮಾಣ ವಚನ ಸ್ವೀಕರಿಸಿದ ಮೇಲೆ ಅವುಗಳನ್ನು ತರಲು ಆಲೋಚಿಸಿದ್ದೆವು ಎಂದು ಅಧಿಕಾರಿಗಳು ತಿಳಿಸಿದ್ದಾರೆ ಎಂದರು.ಇವುಗಳೆಲ್ಲವೂ ಬುಲೆಟ್ ಪ್ರೂಫ್‌ ಕಾರುಗಳಾಗಿದ್ದು, ಒಂದು ಕಾರಿನ ಬೆಲೆ ಸುಮಾರು ₹3 ಕೋಟಿ. ಈ ರೀತಿಯಲ್ಲಿ ಕೆಸಿಆರ್ ಸರ್ಕಾರ ರಾಜ್ಯದ ಸಂಪತ್ತನ್ನು ಕೊಳ್ಳೆ ಹೊಡೆಯಲು ಹೊರಟಿತ್ತು ಎಂದರು.

ಪೆರ್ನೆ ಕಾಂಗ್ರೆಸ್ ಚುನಾವಣಾ ಪ್ರಚಾರ ಸಭೆ

Posted by Vidyamaana on 2023-04-29 15:04:31 |

Share: | | | | |


ಪೆರ್ನೆ ಕಾಂಗ್ರೆಸ್ ಚುನಾವಣಾ ಪ್ರಚಾರ ಸಭೆ

ಪುತ್ತೂರು: ಪುತ್ತೂರಿನ ಜನತೆಯ ಆಶೀರ್ವಾದದಿಂದ ನಾನು ಈ ಬಾರಿಯ ಚುನಾವಣೆಯಲ್ಲಿ ಗೆದ್ದು ಶಾಸಕನಾಗಿ ಆಯ್ಕೆಯಾದಲ್ಲಿ ಶಾಸಕನಾದವನಿಗೆ ಸಿಗುವ ಸರಕರಿ ವೇತನ ಹಾಗೂ ಎಲ್ಲಾ ಭತ್ಯೆಯನ್ನು ತಾನು ಸಮಾಜ ಸೇವೆಗೆ ಬಳಸುತ್ತೇನೆ, ಜನರು ಮತ ಹಾಕಿ ನನ್ನನ್ನು ಗೆಲ್ಲಿಸಿದ್ದರಿಂದ ನನಗೆ ಸಿಗುವ ಆ ಮೊತ್ತವನ್ನು ಜನರಿಗೆ ಬಳಸುತ್ತೇನೆ, ಬಡವರಿಗಾಗಿಯೇ ಖರ್ಚು ಮಾಡುತ್ತೇನೆ ಅದರಲ್ಲಿ ಒಂದು ರುಪಾಯಿಯನ್ನೂ ತನ್ನ ಸ್ವಂತ ಬಳಕೆಗೆ ಬಳಸುವುದೇ ಇಲ್ಲ ಎಂದು ಪುತ್ತೂರು ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ರೈ ಹೇಳಿದರು.

Recent News


Leave a Comment: