ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ

ಸುದ್ದಿಗಳು News

Posted by vidyamaana on 2024-07-03 08:24:56 |

Share: | | | | |


ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ

ಬೆಂಗಳೂರು : ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸೋ ಕೆಲಸ ಮಾಡಲಾಗಿದೆ. ನಾಲ್ವರು ಕೆಎಎಸ್ ಅಧಿಕಾರಿ ಹಾಗೂ 25 ಮಂದಿ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶಿಸಿದೆ.

ಕರ್ನಾಟಕ ಆಡಳಿತ ಸೇವೆಗೆ ಸೇರಿದ ಈ ಕೆಳಕಂಡ ಅಧಿಕಾರಿಗಳನ್ನು ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಠಿಯಿಂದ ಈ ಕೂಡಲೇ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅವರುಗಳ ಹೆಸರಿನ ಮುಂದೆ ನಮೂದಿಸಿರುವ ಹುದ್ದೆಗಳಿಗೆ ವರ್ಗಾಯಿಸಿ / ಸ್ಥಳನಿಯುಕ್ತಿಗೊಳಿಸಿ ಆದೇಶಿಸಿದೆ.

ವರ್ಗಾವಣೆಗೊಂಡ ಕೆಎಎಸ್‌ ಅಧಿಕಾರಿಗಳು

ಡಾ. ಜಗದೀಶ್‌ ಕೆ. ನಾಯಕ್‌

ರಘುನಂದನ್‌ ಎ.ಎನ್‌

ಪ್ರಸನ್ನ ಕುಮಾರ್‌ ವಿ.ಕೆ

ಹುಲ್ಲುಮನಿ ತಿಮ್ಮಣ್ಣ

ವರ್ಗಾವಣೆಗೊಂಡ ಐಪಿಎಸ್‌ ಅಧಿಕಾರಿಗಳು

ಬಿ. ರಮೇಶ -ಡಿಐಜಿಪಿ, ಪೂರ್ವ ವಲಯ, ದಾವಣಗೆರೆ

ಎನ್. ವಿಷ್ಣು ವರ್ಧನ್ -ಎಸ್.ಪಿ. ಮೈಸೂರು ಜಿಲ್ಲೆ

ಸೀಮಾ ಲಾಟ್ಕರ್ -ಪೊಲೀಸ್ ಆಯುಕ್ತರು, ಮೈಸೂರು ನಗರ

ರೇಣುಕಾ ಸುಕುಮಾರ -ಎಐಜಿಪಿ ಬೆಂಗಳೂರು ಡಿಜಿ ಕಚೇರಿ

ಸಿ.ಕೆ. ಬಾಬಾ -ಎಸ್.ಪಿ. ಬೆಂಗಳೂರು ಗ್ರಾಮಾಂತರ

ಸುಮನ್ ಡಿ. ಪೆನ್ನೇಕರ್ -ಎಸ್‌ ಪಿ, ಬಿಎಂಟಿಎಫ್

ಸಿ.ಬಿ. ರಿಷ್ಯಂತ್ -ಎಸ್.ಪಿ

ಚನ್ನಬಸವಣ್ಣ - ಎಐಜಿಪಿ, ಆಡಳಿತ, ಡಿಜಿ ಕಚೇರಿ

ಲಾಬೂ ರಾಮ್ -ಐಜಿಪಿ ಕೇಂದ್ರ ವಲಯ

ರವಿಕಾಂತೇಗೌಡ -ಐಜಿಪಿ ಕೇಂದ್ರ ಕಚೇರಿ- ಒಂದು ಬೆಂಗಳೂರು ಡಿಜಿ ಕಚೇರಿ

ಕೆ. ತ್ಯಾಗರಾಜನ್ -ಐಜಿಪಿ, ಐ.ಎಸ್.ಡಿ.

ಎನ್. ಶಶಿಕುಮಾರ್ -ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರ್

ಪ್ರದೀಪ್‌ ಗುಂಡಿ - ಎಸ್‌ ಪಿ. ಬೀದರ್‌ ಜಿಲ್ಲೆ

ಯತೀಶ್‌ ಎನ್. - ಎಸ್‌ ಪಿ ದಕ್ಷಿಣ ಕನ್ನಡ ಜಿಲ್ಲೆ

ಮಲ್ಲಿಕಾರ್ಜುನ ಬಾಲದಂಡ ಎಸ್‌ ಪಿ ಮಂಡ್ಯ ಜಿಲ್ಲೆ

ಡಾ.ಟಿ. ಕವಿತಾ ಎಸ್.ಪಿ. ಚಾಮರಾಜನಗರ ಜಿಲ್ಲೆ

ಬಿ. ನಿಖಿಲ್‌ ಎಸ್‌ ಪಿ ಕೋಲಾರ ಜಿಲ್ಲೆ

 Share: | | | | |


ವಿಟ್ಲದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆ

Posted by Vidyamaana on 2023-07-30 02:11:27 |

Share: | | | | |


ವಿಟ್ಲದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆ

ಪುತ್ತೂರು: ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಬಳಿಕ ಜನ ನೆಮ್ಮದಿಯಲ್ಲಿದ್ದಾರೆ, ಸರಕಾರದ ಐದು ಗ್ಯಾರಂಟಿ ಯೋಜನೆಗಳು ಪ್ರತೀ ಕುಟುಂಬಕ್ಕೂ ದೊರೆಯುತ್ತಿದೆ, ಈ ಯೋಜನೆಗಳು ಜನರಿಗೆ ಪ್ರಯೋಜನವಾಗಿದ್ದು ಜನ ಸರಕರದ ಯೋಜನೆಗೆ ಬೆಂಬಲ ನೀಡುತ್ತಿದ್ದಾರೆ, ಕಾರ್ಯಕರ್ತರು ಪ್ರತೀ ಮನೆಗೆ ತೆರಳಿ ಕಾಂಗ್ರೆಸ್ ಸಾಧನೆಯನ್ನು ತಿಳಿಸಿ ಅದನ್ನು ಮತವಾಗಿ ಪರಿವರ್ತನೆ ಮಾಡಬೇಕಾಗಿದೆ ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಹೇಳಿದರು.

ಅವರು ವಿಟ್ಲ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಜು.೨೯ ರಂದು ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು.

ಬೆಲೆ ಏರಿಕೆಯಿಂದ ಕಂಗಾಲಾಗಿದ್ದ ಜನರು ಈಗ ನೆಮ್ಮದಿಯ ನಿಟ್ಟುಸಿರು ಬಿಡುತ್ತಿದ್ದಾರೆ. ಮುಂದಿನ ತಿಂಗಳು ಪ್ರತೀ ಮನೆ ಯಜಮನಿಯ ಖಾತೆಗೆ ೨ ಸಾವಿರ ಜಮೆಯಾಗಲಿದೆ, ವಿದ್ಯುತ್ ಉಚಿತವಾಗಲಿದೆ, ೫ ಕೆ ಜಿ ಅಕ್ಕಿ ಮತ್ತು ೫ ಕೆ ಜಿ ಅಕ್ಕಿಯ ಹಣ ಖಾತೆಗೆ ಜಮಾವಣೆಯಗಿದೆ. ಉಚಿತವಾಗಿ ಸರಕಾರಿ ಬಸ್ಸುಗಳಲ್ಲಿ ಮಹಿಳೆಯರು ಸಂಚಾರ ಮಾಡುತ್ತಿದ್ದಾರೆ ಇದೆಲ್ಲವೂ ಕಾಂಗ್ರೆಸ್ ಬಡವರಿಗಾಗಿ ಮಾಡಿದ ಯೋಜನೆಗಳಾಗಿದೆ ಎಂದು ಶಾಸಕರು ಹೇಳಿದರು. ಸರಕಾರ ಒಳ್ಳೆಯ ಯೋಜನೆಗಳನ್ನು ಇನ್ನೂ ಜಾರಿ ಮಾಡಲಿದ್ದು ಪ್ರತೀಯೊಬ್ಬ ಕಾರ್ಯಕರ್ತನೂ ಪಕ್ಷ ಕಟ್ಟುವಲ್ಲಿ ಮುತವರ್ಜಿವಹಿಸಿಕೊಳ್ಳಬೇಕು ಎಂದು ಕಾರ್ಯಕರ್ತರಿಗೆ ತಿಳಿಸಿದರು.


ನಾನು ಯಾಕೆ ಕಾರ್ಯಕ್ರಮಕ್ಕೆ ತಡವಾಗಿ ಬರುತ್ತೇನೆ ಗೊತ್ತುಂಟಾ?

ಶಾಸಕರು ಸಮಯಕ್ಕೆ ಸರಿಯಾಗಿ ಕಾರ್ಯಕ್ರಮಗಳಿಗೆ ಬರುತ್ತಿಲ್ಲ, ಒಂದು ಗಂಟೆ ಎರಡು ಗಂಟೆ ತಡವಾಗಿ ಬರುತ್ತಿದ್ದಾರೆ ಎಂದು ಕಾರ್ಯಕರ್ತರು ಶಾಸಕರಲ್ಲಿ ಹೇಳಿದರು. ಇದಕ್ಕೆ ಉತ್ತರಿಸಿದ ಶಾಸಕರು ನಾನು ಕಾರ್ಯಕ್ರಮಕ್ಕೆ ತಡವಾಗಿ ಬರುವುದು ಸತ್ಯ ಯಾಕೆಂಧರೆ ನಾನು ಒಂದು ಕಾರ್ಯಕ್ರಮಕ್ಕೆ ಹೋದಾಗ ಕಾರ್ಯಕ್ರಮ ಮುಗಿಸಿ ಹೊರಡುವ ವೇಳೆ ಒಂದಷ್ಟು ಮಂದಿ ನನ್ನ ಕ್ಷೇತ್ರದ ಮತದಾರರು ಅರ್ಜಿ ಹಿಡಿದುಕೊಂಡು ಅಥವಾ ತಮ್ಮ ಸಂಕಷ್ಟವನ್ನು ಹೇಳಲು ಕಾಯುತ್ತಿರುತ್ತಾರೆ ಅವರನ್ನು ಬಿಟ್ಟು ಬರುವುದು ಹೇಗೆ? ನನಗೆ ಜನ ಮತ ಹಾಕಿದ್ದು ಅವರ ಸಂಕಷ್ಟಗಳಿಗೆ, ನೋವುಗಳಿಗೆ ಸ್ಪಂದಿಸಲು, ನಾನು ಅವರ ನೋವಿಗೆ ಸ್ಪಂದಿಸದೇ ಇದ್ದರೆ ಅದು ನಾನು ಮಾಡುವ ದೊಡ್ಡ ಅನ್ಯಾಯವಲ್ಲವೇ ಎಂದು ಪ್ರಶ್ನಿಸಿದರು. ತನ್ನ ಕ್ಷೇತ್ರದ ಯಾವುದೇ ಒಬ್ಬ ವ್ಯಕ್ತಿ ನನ್ನನ್ನು ಹುಡುಕಿಕೊಂಡು ಸಂಕಷ್ಟ ಹೇಳಲು ಬಂದಲ್ಲಿ ನಾನು ಅವರಿಗೆ ಸಮಾಧಾನ ಹೇಳಿಯೇ ಬರುತ್ತೇನೆ ಅದು ನನ್ನ ಕರ್ತವ್ಯವಾಗಿದೆ. ತಡವಾಗಿ ಬಂದರೆ ಕ್ಷಮೆ ಇರಲಿ ನಾನು ಜನರಿಗೋಸ್ಕರ ಇರುವವನಾಗಿದ್ದೇನೆ, ಅವರಿಗೋಸ್ಕರ ಕೆಲಸವನ್ನು ಮಾಡುತ್ತೇನೆ ಎಂದು ಶಾಸಕರು ಹೇಳಿದರು.


ಕಚೇರಿ ಆದ ಮೇಲೆ ಎಲ್ಲಾ ಸಮಸ್ಯೆ ಇತ್ಯರ್ಥ

ಶಾಸಕರ ನೂತನ ಕಚೇರಿ ಕೆಲಸ ಪ್ರಾರಂಭವಾಗಿದ್ದು ಕಚೇರಿ ಆದ ಮೇಲೆ ಎಲ್ಲವೂ ಪರಿಹಾರವಾಗಲಿದೆ. ಕಚೇರಿ ಆರಂಭವಾದ ಬಳಿಕ ವಿವಿಧ ಸೆಕ್ಷನ್‌ಗಳನ್ನು ತೆರೆಯುತ್ತೇನೆ. ಫಲಾನುಭವಿಗಳು ಕಚೇರಿಗೆ ತೆರಳಿ ಅಲ್ಲಿ ಅರ್ಜಿ ನೀಡಬಹುದಾಗಿದ್ದು ನಿಮ್ಮ ಕೆಲವೊಂದು ಸಮಸ್ಯೆಗಳಿಗೆ ಕಚೇರಿಯಲ್ಲೇ ಪರಿಹಾರವೂ ದೊರೆಯಲಿದೆ ಎಂದು ಶಾಸಕರು ಹೇಳಿದರು. ಕಾಮಗಾರಿಗೆ ಸಂಬಂಧಪಟ್ಟ ಅರ್ಜಿಗಳನ್ನು ವಲಯ ಮತ್ತು ಬೂತ್ ಅಧ್ಯಕ್ಷರ ಮೂಲಕ ನನ್ನಲ್ಲಿ ನೀಡಬಹುದಾಗಿದೆ ಎಂದು ಹೇಳಿದರು.

ವಲಯ, ಬೂತ್ ಅಧ್ಯಕ್ಷರೇ ಮುಖ್ಯ

ಪ್ರತೀ ಗ್ರಾಮಮಟ್ಟದಲ್ಲಿ ವಲಯ ಮತ್ತು ಬೂತ್ ಅಧ್ಯಕ್ಷರಿದ್ದಾರೆ. ಕಟ್ಟಕಡೇಯ ಕಾರ್ಯಕರ್ತರ ಸಂಪರ್ಕ ಇರುವುದು ಅವರಿಗೆ ಯಾವುದೇ ಅರ್ಜಿಗಳನ್ನು ನೀಡುವಾಗ ವಲಯ ಮತ್ತು ಬೂತ್ ಅಧ್ಯಕ್ಷರನ್ನು ಸಂಪರ್ಕಿಸಿಯೇ ಬರಬೇಕು. ನೀವು ಅರ್ಜಿ ನೀಡಿ ಹೋದರೆ ಅದನ್ನು ಗ್ರಾಮದ ಅಧ್ಯಕ್ಷರುಗಳಿಗೆ ಮಾಹಿತಿ ನೀಡಲಾಗುತ್ತದೆ. ವಲಯ , ಬೂತ್ ಮತ್ತು ಕಾರ್ಯಕರ್ತರನ್ನು ಕಡೆಗಣಿಸಿ ಯಾವುದೇ ಕೆಲಸ ಕಾರ್ಯಗಳು ನಡೆಯವುದೇ ಇಲ್ಲ ಎಂದು ಶಾಸಕರು ಹೇಳಿದರು.

ಎರಡೇ ತಿಂಗಳಲ್ಲಿ ೯೬೦ ಕೋಟಿ ತಂದಿದ್ದೇನೆ

ಶಾಸಕನಾಗಿ ಎರಡೇ ತಿಂಗಳಲ್ಲಿ ೯೬೦ ಕೋಟಿ ತಂದಿದ್ದೇನೆ. ಕ್ಷೇತ್ರ ವ್ಯಾಪ್ತಿಯಲ್ಲಿ ೨೪ ಗಂಟೆಯೂ ಕುಡಿಯುವ ನೀರಿನ ವ್ಯವಸ್ಥೆ ಮಾಡುವ ಯೋಜನೆಗೆ ಸರಕಾರದಿಂದ ೯೬೦ ಕೋಟಿ ಮಂಜೂರು ಮಾಡಿಸಿದ್ದು ಟೆಂಡರ್ ಕರೆದ ಬಳಿಕ ಕಾಮಗಾರಿ ಆರಂಭವಾಗಲಿದೆ. ಪುತ್ತೂರು ತಾಲೂಕು ಮತ್ತು ಸುಳ್ಯದ ೩೦ ಗ್ರಾಮಗಳನ್ನು ಈ ವ್ಯಾಪ್ತಿಗೆ ಒಳಪಡಿಸಲಾಗಿದೆ ಎಂದು ಶಾಸಕರು ಹೇಳಿದರು.


೧೪ ದಿನದ ಅಧಿವೇಶನದಲ್ಲಿ ೧೧ ಪ್ರಶ್ನೆ ಹಾಕಿದ್ದೇನೆ

ಶಾಸಕನಗಿ ಚೊಚ್ಚಲ ಅಧಿವೆಶನದಲ್ಲಿ ಭಾಗವಹಿಸಿದ್ದೇನೆ. ೧೪ ದಿನಗಳ ಅಧಿವೇಶನದಲ್ಲಿ ೧೧ ಪ್ರಶ್ನೆಗಳನ್ನು ಕೇಳಿದ್ದೇನೆ. ಕರಾವಳಿಯ ಕೃಷಿಕರಿಗೆ, ಬಡವರಿಗೆ, ನಿರುದ್ಯೋಗಿಗಳಿಗೆ, ತುಳುಭಾಷೆಗೆ, ತುಳಿತಕ್ಕೊಳಗಾದವರ ಪರ ಮಾತನಾಡಿದ್ದೇನೆ. ಮುಂದೆಯೂ ಮತನಾಡುತ್ತೇನೆ. ತನ್ನ ಕ್ಷೇತ್ರದ ಜನರಿಗಾಗಿ ತಾನು ಸರಕಾರದ ಜೊತೆ ಗಲಾಟೆ ಮಾಡಿಯಾದರೂ ಅನುದಾನವನ್ನು ತರುತ್ತೇನೆ, ಕೊಟ್ಟ ಮಾತನ್ನು ಉಳಿಸಿಯೇ ಉಳಿಸುತ್ತೇನೆ.



ಮಲಗಿದ್ದಲ್ಲೇ ಇರುವವರಿಗೆ ಮಸಾಶನ ಕೊಡಿಸುವೆ

ಮರದಿಂದ ಬಿದ್ದು, ಪಾರ್ಶ್ವವಾಯು ಪೀಡಿತರಾಗಿ, ಅಪಘಾತದಿಂದ ಅಥವ ಇನ್ನಾವುದಾದರೂ ಕಾಯಿಲೆಯಿಂದ ಮನೆಯಲ್ಲೇ ಮಲಗಿದ ಸ್ಥಿತಿಯಲ್ಲಿ ಇರುವವರಿಗೆ ಸರಕಾರದಿಂದ ತಿಂಗಳಿಗೆ ೫ ಸಾವಿರ ಮಾಸಾಶನ ನೀಡುವಂತೆ ಮನವಿ ಮಾಡಿದ್ದೇನೆ. ಅದನ್ನು ನೀಡುವವರೆಗೂ ನಾನು ಸುಮ್ಮನಿರುವುದಿಲ್ಲ ಹೋರಾಟ ಮಾಡಿಯಾದರೂ ತಂದೇ ತರುತ್ತೇನೆ. ಬಡವರ ಕಣ್ಣೀರೊರೆಸಲು ಶಾಸಕನಾಗಿದ್ದೇನೆ ಆ ಕೆಲಸವನ್ನು ಮಾಡಿಯೇ ಮಾಡುತ್ತೇನೆ ಎಂದು ಶಾಸಕರು ಹೇಳಿದರು.


ಮಹಿಳಾ ತಂಡವನ್ನು ಕಟ್ಟಬೇಕಿದೆ

ಪಕ್ಷವನ್ನು ಕಟ್ಟಲು ಮಹಿಳೆಯರ ತಂಡವನ್ನು ಕಾರ್ಯಕರ್ತರು ಕಟ್ಟಬೇಕು. ಈಗಾಗಲೇ ಸರಕರದ ಗ್ಯಾರಂಟಿ ಯೋಜನೆಗಳು ಮಹಿಳೆಯರ ಪರವಾಗಿದ್ದು ಇದನ್ನು ಬಳಸಿಕೊಂಡು ಪ್ರತೀ ಬೂತ್‌ನಲ್ಲಿ ಮಹಿಳೆಯರ ತಂಡವನ್ನು ಕಟ್ಟುವ ಮೂಲಕ ಪಕ್ಷದ ಪರ ಪ್ರಚಾರವನ್ನು ನಡೆಸಬೇಕು. ಮುಂದಿನ ದಿನಗಳಲ್ಲಿ ಮಹಿಳಾ ಕಾಂಗ್ರೆಸ್ ಸಮಾವೇಶವನ್ನು ನಡೆಸಬೇಕಾಗಿದ್ದು ಇದಕ್ಕಾಗಿ ಈಗಿಂದಲೇ ಎಲ್ಲರೂ ಸಜ್ಜಾಗಬೇಕು ಎಂದು ಶಾಸಕರು ಹೇಳಿದರು.



ಅಧ್ಯಕ್ಷರುಗಳಿಗೆ ಪವರ್ ಇದೆ

ಸಣ್ಣ ವಿಚಾರಗಳನ್ನು ತನ್ನ ಬಳಿ ಹೇಳಬೇಡಿ ಅದನ್ನು ಪಕ್ಷದ ವಿವಿಧ ವಲಯಗಳ ಅಧ್ಯಕ್ಷರುಗಳೇ ಪರಿಹರಿಸಬೇಕು. ನಿಮ್ಮಿಂದ ಪರಿಹಾರ ಮಾಡಲು ಸಾಧ್ಯವಾಗುವ ಜನರ ಸಮಸ್ಯೆಗಳನ್ನು ನೀವೇ ಪರಿಹಾರ ಮಾಡಬೇಕು ಕಾಂಗ್ರೆಸ್ ಶಾಸಕ ಮತ್ತು ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಇರುವ ಕಾರಣ ಅಧ್ಯಕ್ಷರುಗಳಿಗೆ ಪವರ್ ಇದೆ ಅದನ್ನು ಪಕ್ಷಕ್ಕಾಗಿ , ಜನರಿಗಾಗಿ ಬಳಸಿಕೊಳ್ಳಿ. ನಿಮ್ಮಿಂದ ಸಾಧ್ಯವೇ ಇಲ್ಲವಾದರೆ ಮಾತ್ರ ನನ್ನ ಗಮನಕ್ಕೆ ತನ್ನಿ ಎಂದು ಸಭೆಯಲ್ಲಿ ಶಾಸಕರು ತಿಳಿಸಿದರು.


ಮೂರು ತಿಂಗಳ ಬಳಿಕ ಹೊಸ ಪಡಿತರ ಕಾರ್ಡು

ಹೊಸ ಪಡಿತರ ಚೀಟಿ ಸಿಗುತ್ತಿಲ್ಲ ಎಂಬ ದೂರುಗಳಿವೆ ಎಂದು ಶಾಸಕರ ಗಮನಕ್ಕೆ ತಂದಾಗ ಹೊಸ ಪಡಿತರ ಚೀಟಿಯನ್ನು ಮೂರು ತಿಂಗಳ ಬಳಿಕ ನೀಡಲಾಗುತ್ತದೆ. ಸುಮಾರು ೧ ಕೋಟಿ ಅರ್ಜಿಗಳು ಬಾಕಿ ಇದೆ. ಆರೋಗ್ಯ ಸಮಸ್ಯೆಗಳಿದ್ದವರು ಆಸ್ಪತ್ರೆಗೆ ಅಥವಾ ವಿಮೆ ಪಡೆದುಕೊಳ್ಳಲು ರೇಶನ್ ಕಾರ್ಡು ಬೇಕಾದಲ್ಲಿ ಅದನ್ನು ಸಂಬಂದಿಸಿದವರ ಗಮನಕ್ಕೆ ತಂದರೆ ತುರ್ತು ಪರಿಗಣಿಸಿ ವ್ಯವಸ್ಥೆ ಮಾಡಲಾಗುತ್ತದೆ ಎಂದು ಶಾಸಕರು ಹೇಳಿದರು.

ವೇದಿಕೆಯಲ್ಲಿ ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಅಧ್ಯಕ್ಷರಾದ ಡಾ. ರಾಜಾರಾಂ ಕೆ ಬಿ, ಜಿಪಂ ಮಾಜಿ ಸದಸ್ಯ ಎಂ ಎಸ್ ಮಹಮ್ಮದ್, ವಿಟ್ಲ ಉಪ್ಪಿನಂಗಡಿ ಬ್ಲಾಕ್ ಮಾಜಿ ಅಧ್ಯಕ್ಷರಾದ ಪ್ರವೀಣ್ ಚಂದ್ರ ಆಳ್ವ, ಮುರಳೀಧರ್ ರೈ ಮಠಂತಬೆಟ್ಟು, ಪಟ್ಟಣ ಪಂಚಾಯತ್ ಸದಸ್ಯ ವಿಕೆಎಂ ಅಶ್ರಫ್, ಬ್ಲಾಕ್ ಅಲ್ಪಸಂಖ್ಯತ ಘಟಕದ ಅಧ್ಯಕ್ಷರಾದ ಅಬ್ದುಲ್ ಕರೀಂ ಕುದ್ದುಪದವು, ವಿಟ್ಲ ಬ್ಲಾಕ್ ಸಂಘಟನಾ ಕಾರ್ಯದರ್ಶಿ ರಮಾನಾಥ ವಿಟ್ಲ, ನಗರ ಕಾಂಗ್ರೆಸ್ ಅಧ್ಯಕ್ಷ ಶ್ರೀನಿವಾಸ ಪ್ರಹ್ಲಾದ್ ಉಪ್ಪಿನಂಗಡಿ, ಬ್ಲಾಕ್ ಉಪಾಧ್ಯಕ್ಷರಾದ ಜಯರಾಂ ಬಳ್ಳಾಲ್ ಬೀಡು, ಬ್ಲಾಕ್ ಪ್ರಧಾನ ಕಾರ್ಯದರ್ಶಿ ರಶೀದ್ ವಿ ಎಂ, ಕಾರ್ಯದರ್ಶಿ ಸುನಿತಾ ಕೋಟ್ಯಾನ್, ಬ್ಲಾಕ್ ಕಾರ್ಯದರ್ಶಿ ಅಬ್ದುಲ್‌ರಹಿಮಾನ್ ಯುನಿಕ್, ಎಸ್ ಸಿ ಘಟಕದ ಅಧ್ಯಕ್ಷ ರಾಮಣ್ಣ ಪಿಲಿಂಜ, ಮಾಜಿ ಬ್ಲಾಕ್ ಅಧ್ಯಕ್ಷ ಪದ್ಮನಾಭ ಪೂಜಾರಿ, ಯೂತ್ ಬ್ಲಾಕ್ ಅಧ್ಯಕ್ಷರಾದ ಫಾರೂಕ್ ಪೆರ್ನೆ ಮೊದಲಾದವರು ಉಪಸ್ಥಿತರಿದ್ದರು.


ಪುತ್ತೂರು : ನೆಹರುನಗರದಲ್ಲಿ ರೈಲ್ವೇ ಮೇಲ್ವೇತುವೆ ಪುನರ್‌ನಿರ್ಮಾಣ ಹಿನ್ನೆಲೆ

Posted by Vidyamaana on 2023-11-16 13:26:14 |

Share: | | | | |


ಪುತ್ತೂರು : ನೆಹರುನಗರದಲ್ಲಿ ರೈಲ್ವೇ ಮೇಲ್ವೇತುವೆ ಪುನರ್‌ನಿರ್ಮಾಣ ಹಿನ್ನೆಲೆ

ಪುತ್ತೂರು – ನೇರಳಕಟ್ಟೆ ರೈಲು ನಿಲ್ದಾಣಗಳ ನಡುವೆ ಇರುವ ಮೇಲ್ಲೇತುವೆ ಸಂಖ್ಯೆ 520 ಇದರ ಪುನರ್ ನಿರ್ಮಾಣಕ್ಕೆ ಸ೦ಬ೦ಧಿಸಿದ೦ತೆ ನೆಹರುನಗರ ವಿವೇಕಾನಂದ ಕಾಲೇಜು ರಸ್ತೆಯನ್ನು ತಾತ್ಕಾಲಿಕವಾಗಿ ಮುಚ್ಚಲಾಗುವುದು ಎಂದು ಸೌತ್ ವೆಸ್ಟರ್ನ್ ರೈಲ್ವೇ ಪ್ರಕಟಣೆಯಲ್ಲಿ ತಿಳಿಸಿದೆ.


ರೈಲ್ವೆ ಮೇಲೇತುವೆ ಪುನರ್ ನಿರ್ಮಾಣಕ್ಕೆ ಸಂಬಂಧಿಸಿ ನ.15ರಿಂದ ಕಾಮಗಾರಿ ಆರ೦ಭಿಸುವ ನಿಟ್ಟಿನಲ್ಲಿ ರಸ್ತೆ ಮುಚ್ಚಲು ಜಿಲ್ಲಾಧಿಕಾರಿಯವರು ಅನುಮತಿ ನೀಡಿದ್ದರು. ಆದರೆ ನ.16ರಂದು ಶಿಲಾನ್ಯಾಸ ಕಾರ್ಯಕ್ರಮ ನಡೆದ ಬಳಿಕ ನ.17ರಿಂದ ಮುಂದಿನ ಮೂರು ತಿಂಗಳು ನೆಹರುನಗರ ವಿವೇಕಾನಂದ ರಸ್ತೆಯನ್ನು ಮುಚ್ಚಲಾಗುವುದು ಎಂದು ರೈಲ್ವೇ ಸೌತ್ ವೆಸ್ಟರ್ನ್ ರೈಲ್ವೇಯ ಸಕಲೇಶಪುರ ವಿಭಾಗದ ಸಹಾಯಕ ವಿಭಾಗೀಯ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮುರದಿಂದ ಪರ್ಯಾಯ ರಸ್ತೆ:

ನೆಹರುನಗರ ವಿವೇಕಾನಂದ ಕಾಲೇಜು ರಸ್ತೆಯನ್ನು ತಾತ್ಕಾಲಿಕವಾಗಿ ಮುಚ್ಚಿದ ಬಳಿಕ ಲಘು ವಾಹನಗಳಿಗೆ ಪರ್ಯಾಯ ವ್ಯವಸ್ಥೆಯಾಗಿ ಮುರದಿಂದ ತೆರಳಲು ಅವಕಾಶವಿದೆ. ಉಳಿದಂತೆ ಹಾರಾಡಿ ಬನ್ನೂರು, ಪಡೀಲು ರಸ್ತೆಯಾಗಿಯೂ ಕಾಲೇಜು ರಸ್ತೆಯನ್ನು ಸಂಪರ್ಕಿಸಬಹುದು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ



ಮಾಜಿ ಸಿಎಂ ಡಿ.ವಿ. ಇಂದು ಪುತ್ತೂರಿಗೆ

Posted by Vidyamaana on 2023-05-02 02:27:38 |

Share: | | | | |


ಮಾಜಿ ಸಿಎಂ ಡಿ.ವಿ. ಇಂದು ಪುತ್ತೂರಿಗೆ

ಪುತ್ತೂರು:ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಅವರ ಪರ ಮತಯಾಚನೆಗೆ ಮಾಜಿ ಮುಖ್ಯಮಂತ್ರಿ, ಮಾಜಿ ಕೇಂದ್ರ ಸಚಿವರೂ ಆಗಿರುವ ಸಂಸದ, ಪುತ್ತೂರಿನ ಮಾಜಿ ಶಾಸಕ ಡಿ.ವಿ.ಸದಾನಂದ ಗೌಡ ಅವರು ಮೇ 2ರಂದು ಪುತ್ತೂರುಗೆ ಭೇಟಿ ನೀಡಲಿದ್ದಾರೆ.

ಬೆಳಿಗ್ಗೆ ಪುತ್ತೂರು ಬಿಜೆಪಿ ಚುನಾವಣಾ ಕಾರ್ಯಾಲಯಕ್ಕೆ ಭೇಟಿ ನೀಡಿ ಅಲ್ಲಿ ಪತ್ರಿಕಾಗೋಷ್ಠಿ ನಡೆಸಲಿದ್ದಾರೆ.ಬಳಿಕ ಬಿಜೆಪಿ ಅಭ್ಯರ್ಥಿ ಆಶಾತಿಮ್ಮಪ್ಪ ಅವರ ಪರವಾಗಿ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಲಿದ್ದಾರೆ.ಸಂಜೆ ಸುಳ್ಯಕ್ಕೆ ತೆರಳಲಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ.

ಒಂದು ವಾಟ್ಸಪ್ ಖಾತೆಯನ್ನು 4 ಫೋನ್‍ ಗಳಲ್ಲೂ ಬಳಸಬಹುದು

Posted by Vidyamaana on 2023-04-30 01:38:50 |

Share: | | | | |


ಒಂದು ವಾಟ್ಸಪ್ ಖಾತೆಯನ್ನು 4 ಫೋನ್‍ ಗಳಲ್ಲೂ ಬಳಸಬಹುದು

ಬೆಂಗಳೂರು :200 ಕೋಟಿಗೂ ಅಧಿಕ ಬಳಕೆದಾರರನ್ನು ಹೊಂದಿರುವ ಜನಪ್ರಿಯ ಮೆಸೆಜಿಂಗ್ ಆಪ್ ವಾಟ್ಸಪ್ ಇದೀಗ ಹೊಸ ಫೀಚರ್ ಅನ್ನು ಹೊರತಂದಿದೆ. ಒಂದೇ ವಾಟ್ಸಪ್ ಖಾತೆಯನ್ನು ಇದೀಗ ಹೊಸ ತಂತ್ರಜ್ಞಾನದಂತೆ ಒಂದಕ್ಕಿಂತಲೂ ಅಧಿಕ ಫೋನ್‍ ಗಳಲ್ಲಿ ಲಾಗ್ ಇನ್ ಮಾಡಲು ಅನುಮತಿ ನೀಡಿದೆ.

ಈ ಬಗ್ಗೆ ಮೆಟಾ ಸಿಇಒ ಮಾರ್ಕ್ ಜುಕರ್‍ಬರ್ಗ್ ಫೇಸ್‍ಬುಕ್ ಹಾಗೂ ಇನ್ ಸ್ಟಾಗ್ರಾಮ್ ಗಳಲ್ಲಿ ಮಾಹಿತಿ ನೀಡಿದ್ದಾರೆ. ಇನ್ನು ಮುಂದೆ ನೀವು 4 ಫೋನ್ ಗಳಲ್ಲಿ ವಾಟ್ಸಪ್‍ನ ಒಂದೇ ಖಾತೆಯನ್ನು ಲಾಗ್ ಇನ್ ಮಾಡಿಕೊಳ್ಳಬಹುದು ಎಂದು ಅವರು ತಿಳಿಸಿದ್ದಾರೆ.

ಈ ಹಿಂದೆ ವಾಟ್ಸಪ್ ನ ಒಂದು ಖಾತೆಯನ್ನು ನಾವು ಒಂದು ಫೋನ್ ಹಾಗೂ ಒಂದು ಡೆಸ್ಕ್ ಟಾಪ್ ಸಾಧನಗಳಲ್ಲಷ್ಟೇ ಬಳಸಲು ಸಾಧ್ಯವಾಗುತ್ತಿತ್ತು. ಈ ಮಿತಿ ಇದೀಗ ವಿಸ್ತರಣೆಯಾಗಿದ್ದು, ಒಂದೇ ಖಾತೆಯನ್ನು 4 ಫೋನ್ ಗಳಲ್ಲಿ ಬಳಸಲು ಸಾಧ್ಯವಾಗುತ್ತಿದೆ. ಈ ಫೀಚರ್ ಮುಂದಿನ ವಾರಗಳಲ್ಲಿ ಎಲ್ಲಾ ಬಳಕೆದಾರರಿಗೂ ಲಭ್ಯವಾಗಲಿದೆ ಎಂದು ವಾಟ್ಸಪ್ ತಿಳಿಸಿದೆ. 

ವಾಟ್ಸಪ್ ನ ಈ ಹೊಸ ಫೀಚರ್ ಇದೀಗ ಬಳಕೆದಾರರು ತಮ್ಮ ಖಾತೆಗಳನ್ನು ಇತರ ಫೋನ್ ಹಾಗೂ ಸಾಧನಗಳಲ್ಲಿ ಸಿಂಕ್ ಮಾಡಲು ಸಾಧ್ಯವಾಗಲಿದೆ. ಇದು ನಿಮ್ಮ ಫೋನ್ ಸ್ವಿಚ್ ಆಫ್ ಅಥವಾ ಹಾಳಾಗಿದ್ದಾಗ ಇತರರ ಫೋನ್‍ ನಲ್ಲಿ ನಿಮ್ಮ ಖಾತೆಯನ್ನು ಪರಿಶೀಲಿಸಲು ಅಥವಾ ಬಳಸಲು ಸಹಕಾರಿಯಾಗಲಿದೆ. ಎಂಡ್ ಟು ಎಂಡ್ ಎನ್‍ಕ್ರಿಪ್ಶನ್ ನ ರಕ್ಷಣೆಯನ್ನು ಉಳಿಸಿಕೊಂಡು ಬೇರೆ ಬೇರೆ ಸಾಧನಗಳಲ್ಲಿ ಸಂದೇಶಗಳನ್ನು ಸಿಂಕ್ ಮಾಡಲು ವಾಟ್ಸಪ್ ನ ಹೊಸ ತಂತ್ರಜ್ಞಾನದ ಅಭಿವೃದ್ಧಿಯಿಂದ ಇದು ಸಾಧ್ಯವಾಗಿದೆ.

ತಾತನ ಅಂತ್ಯಕ್ರಿಯೆಗೆ ಬರ್ತಿದ್ದ ಪುಳ್ಳಿ ಅಪಘಾತಕ್ಕೆ ಬಲಿ

Posted by Vidyamaana on 2023-11-29 11:38:52 |

Share: | | | | |


ತಾತನ ಅಂತ್ಯಕ್ರಿಯೆಗೆ ಬರ್ತಿದ್ದ ಪುಳ್ಳಿ ಅಪಘಾತಕ್ಕೆ ಬಲಿ

ಕುಂದಾಪುರ: ಇಲ್ಲಿನ ಶೇಡಿಮನೆ ಗ್ರಾಮದ ಪಾಟ್ಲಮಕ್ಕಿಯಲ್ಲಿನ ನಾರಾಯಣ ಪೂಜಾರಿ (70) ಅವರು ಮೃತಪಟ್ಟ ಸುದ್ದಿ ಕೇಳಿ

ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಬೈಕಿನಲ್ಲಿ ಆಗಮಿಸುತ್ತಿದ್ದ ಮೊಮ್ಮಗ ಅಪಘಾತದಲ್ಲಿ ಮೃತಪಟ್ಟ ಘಟನೆ ಸೋಮವಾರ ಸಂಭವಿಸಿದೆ. ಮಾನಂಜೆ ವ್ಯವಸಾಯ ಸೇವಾ ಸಹಕಾರಿ ಸಂಘದ ಅಸಿಸ್ಟೆಂಟ್‌ ಜನರಲ್‌ ಮ್ಯಾನೇಜರ್‌, ಆಜ್ರಿ ಗ್ರಾಮದ ಚೌಕುಳಮಕ್ಕಿ ನಿವಾಸಿ ಚೆನ್ನ ಪೂಜಾರಿ ಹಾಗೂ ಇಂದಿರಾ ಅವರ ಏಕೈಕ ಪುತ್ರ ನಿತೀಶ್‌ ಪೂಜಾರಿ (20) ಮೃತ ಯುವಕ.



ಚಾಮರಾಜನಗರದ ಸರಕಾರಿ ವೈದ್ಯಕೀಯ ಕಾಲೇಜಿನಲ್ಲಿ 2ನೆ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದು ತಾಯಿ ಮನೆಯಲ್ಲಿ ಅಜ್ಜ ಮೃತಪಟ್ಟ ಸುದ್ದಿ ಕೇಳಿ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಆಗಮಿಸುವುದಾಗಿ ಹೇಳಿದ್ದ. ಅವಸರದಲ್ಲಿ ಊರಿಗೆ ಬರುವುದು ಬೇಡ ಎಂದು ಮನೆಯವರು ಹೇಳಿದ್ದರೂ ಎತ್ತಿ ಆಡಿಸಿದ ಅಜ್ಜನ ಮೇಲಿನ ಮೋಹದಿಂದ ತನ್ನ ಬೈಕಿನಲ್ಲಿ ಕುಂದಾಪುರಕ್ಕೆ ಹೊರಟಿದ್ದರು.


ರಸ್ತೆಗೆ ಬಿದ್ದು ಸಾವು

ಈ ಸಂದರ್ಭ ಚಾಮರಾಜನಗರ ತಾಲೂಕಿನ ಪಣ್ಯದಹಂಡಿ ಬಳಿ ರಸ್ತೆ ಮಧ್ಯದ ಹಂಪ್‌ ಅನ್ನು ಗಮನಿಸದೇ ಅಕಸ್ಮಾತ್ತಾಗಿ ರಸ್ತೆಗೆ ಬಿದ್ದು ಮೃತಪಟ್ಟಿದ್ದರು.


ಚಾಮರಾಜನಗರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಳಿಕ ಯುವಕನ ಮೃತದೇಹವನ್ನು ತಂದು ಶೇಡಿ ಮನೆಯಲ್ಲಿ (ತಾಯಿಯ ತಂದೆ ಮನೆ)ಅಜ್ಜ ಮೊಮ್ಮಗನ ಶವಸಂಸ್ಕಾರವನ್ನು ಜತೆಯಾಗಿ ನಡೆಸಲಾಯಿತು.

ಅಸಭ್ಯ ವಾಗಿ ವರ್ತಿಸಿ ವಿದ್ಯಾರ್ಥಿನಿಗೆ ಚೂರಿ ಇರಿದವನಿಗೆ 18 ವರ್ಷ ಜೈಲು

Posted by Vidyamaana on 2024-01-13 06:26:14 |

Share: | | | | |


ಅಸಭ್ಯ ವಾಗಿ ವರ್ತಿಸಿ ವಿದ್ಯಾರ್ಥಿನಿಗೆ ಚೂರಿ ಇರಿದವನಿಗೆ 18 ವರ್ಷ ಜೈಲು

ಮಂಗಳೂರು: ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಬಗಂಬಿಲ ಬಳಿ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವಿದ್ಯಾರ್ಥಿನಿಯನ್ನು ಹಿಂಬಾಲಿಸಿಕೊಂಡು ಅಸಭ್ಯ ವಾಗಿ ವರ್ತಿಸಿ ಆಕೆಗೆ ಚೂರಿಯಿಂದ ಇರಿದು ಗಂಭೀರ ಗಾಯಗೊಳಿಸಿದ ಆರೋಪಿಗೆ ಮಂಗಳೂರಿನ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ( ವಿಶೇಷ) ನ್ಯಾಯಾಲಯ18 ವರ್ಷ 1 ತಿಂಗಳ ಸಜೆ ಪ್ರಕಟಿಸಿದೆ.ಸುಶಾಂತ್ ಯಾನೇ ಶಾನ್ (31) ಎಂಬಾತ ಶಿಕ್ಷೆಗೊಳಗಾದ ಅಪರಾಧಿಯಾಗಿದ್ದಾನೆ. ವಿದ್ಯಾರ್ಥಿನಿಯನ್ನು ಹಿಂಬಾಲಿಸಿಕೊಂಡು ಅಸಭ್ಯ ವಾಗಿ ವರ್ತಿಸಿ ಚೂರಿಯಿಂದ ಇರಿದು ಗಂಭೀರ ಗಾಯಗೊಳಿಸಿದ ಬಳಿಕ ತಾನೂ ಕುತ್ತಿಗೆ ಹಾಗೂ ಕೈಗೆ ಇರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ.2019 ರ ಜೂ.28ರಂದು ಘಟನೆ‌ ನಡೆದಿತ್ತು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಇಬ್ಬರೂ ಚೇತರಿಕೆ ಕಂಡಿದ್ದರು. ಪ್ರಕರಣದಲ್ಲಿ ಅಭಿಯೋಜನೆಯ ಪರವಾಗಿ ಒಟ್ಟು 21 ಸಾಕ್ಷಿದಾರರನ್ನು ವಿಚಾರಣೆ ನಡೆಸಲಾಗಿತ್ತು. ಸುಶಾಂತ್ ಮೇಲೆ‌ ಹೊರಿಸಲಾದ ಎಲ್ಲ ಶಿಕ್ಷಾರ್ಹ ಕಲಂಗೆ ಅಪರಾಧಿ ಎಂದು ನ್ಯಾಯಾಧೀಶರಾದ ಪ್ರೀತಿ ಕೆ.ಪಿ. ಅವರು ತೀರ್ಪು ಪ್ರಕಟಿಸಿದ್ದಾರೆ. ದಂಡ ರೂಪದಲ್ಲಿ ವಸೂಲಾಗುವ 2 ಲಕ್ಷ ರೂ‌. ಮೊತ್ತವನ್ನು ಸಂತ್ರಸ್ತೆಗೆ ನೀಡುವಂತೆ ಆದೇಶಿಸಲಾಗಿದೆ.ಸಂತ್ರಸ್ತೆ ಪರ ಸರಕಾರಿ ಅಭಿಯೋಜಕಿ ಜ್ಯೋತಿ‌ ಪ್ರಮೋದ ನಾಯಕ ಅವರು ವಾದ ಮಂಡನೆ ಮಾಡಿದ್ದಾರೆ.



Leave a Comment: