Posted by vidyamaana on 2024-07-08 08:23:43 |
ಮಂಗಳೂರು : ಮಂಗಳೂರಿನಲ್ಲಿ ಒಂದೆಡೆ ಮುಂಗಾರು ಮಳೆ ಅಬ್ಬರವಿದ್ದರೆ ಇನ್ನೊಂದೆಡೆ ಕಳ್ಳರ ಭಯ ಪ್ರಾರಂಭವಾಗಿದ್ದು, ಕಳ್ಳತನಕ್ಕೆ ಹೆಸರು ಮಾಡಿರುವ ಚೆಡ್ಡಿ ಗ್ಯಾಂಗ್ ನಗರದಲ್ಲಿ ಕಾಣಿಸಿಕೊಂಡಿದೆ. ಅಲ್ಲದೆ ಕೋಡಿಕಲ್ ನಲ್ಲಿ ನಿನ್ನೆ ರಾತ್ರಿ ಮನೆಯೊಂದರ ಕಿಟಕಿ ಗ್ರಿಲ್ಸ್ ಕತ್ತರಿಸಿ ಕಳ್ಳರು ಮನೆಗೆ ನುಗ್ಗಿ ಕಳ್ಳತನಕ್ಕೆ ವಿಫಲ ಯತ್ನ ನಡೆಸಿದ ಘಟನೆ ನಡೆದಿದೆ.ಈ ಕೃತ್ಯವನ್ನು ಹೊರ ರಾಜ್ಯದ ಚಡ್ಡಿ ಗ್ಯಾಂಗ್ ನಡೆಸಿರುವ ಬಗ್ಗೆ ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ.
ಕಳ್ಳರು ಮನೆಯ ಕಿಟಕಿ ಕತ್ತರಿಸುವುದಕ್ಕೂ ಮುನ್ನ ಕೋಡಿಕಲ್ ಪರಿಸರದಲ್ಲಿ ಅಡ್ಡಾಡುವುದು ಸಿಸಿಟಿವಿಯಲ್ಲಿ ದಾಖಲಾಗಿದೆ. ಐವರಿದ್ದ ಕಳ್ಳರ ತಂಡ ಮೆಲ್ಲನೆ ಹೆಜ್ಜೆ ಇಡುತ್ತಾ ಕೈಯಲ್ಲಿ ಟಾರ್ಚ್ ಬೆಳಕು ಹರಿಸಿ ಕಳವಿಗೆ ಮನೆ ಹುಡುಕುತ್ತಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಚಡ್ಡಿ ಹಾಕಿದ್ದ ಕಳ್ಳರ ಗ್ಯಾಂಗ್ ಸದಸ್ಯರು ಬರುತ್ತಿದ್ದಾಗಲೇ ನಾಯಿಗಳು ಜೋರಾಗಿ ಬೊಗಳಿದ್ದು ಅವುಗಳತ್ತ ಕಳ್ಳರು ಕಲ್ಲೆಸೆದು ಓಡಿಸಿದ್ದಾರೆ.
ಕಿಟಕಿ ಕತ್ತರಿಸಿ ಒಂದು ಮನೆಯ ಒಳಗೆ ನುಗ್ಗಿದ್ದ ಕಳ್ಳರು ಬೆಲೆಬಾಳುವ ವಸ್ತುಗಳಿಗಾಗಿ ಜಾಲಾಡಿದ್ದಾರೆ. ಆದರೆ ಅವರಿಗೆ ಚಿಲ್ಲರೆ ನಗದು ಬಿಟ್ಟರೆ ಯಾವುದೇ ವಸ್ತುಗಳು ಸಿಕ್ಕಿಲ್ಲ. ವಿಶೇಷ ಅಂದ್ರೆ, ಮನೆಮಂದಿ ಮಲಗಿದ್ದಾಗಲೇ ಕಳ್ಳರು ನುಗ್ಗಿ ಹುಡುಕಾಟ ಮುಗಿಸಿ ಸದ್ದಿಲ್ಲದೆ ಹೊರಕ್ಕೆ ತೆರಳಿದ್ದಾರೆ. ಮನೆಯವರಿಗೆ ಬೆಳಗಾದಾಗಲೇ ಕಳವು ಕೃತ್ಯ ತಿಳಿದುಬಂದಿತ್ತು.
Posted by Vidyamaana on 2023-08-27 01:52:31 |
ಪುತ್ತೂರು: ದೇಶದಲ್ಲಿ ಕಾನೂನು ಕಠಿಣವಾಗಬೇಕಾದ ಅವಶ್ಯಕತೆಯಿದ್ದು ದುಬೈ ಮಾದರಿಯ ಕಾನೂನು ಇಲ್ಲಿ ಜಾರಿಗೆ ಬರಬೇಕಾದ ಅನಿವಾರ್ಯತೆಯಿದೆ ಎಂದು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು. ಎರಡು ದಿನಗಳ ಹಿಂದೆ ಪುತ್ತೂರಿನಲ್ಲಿ ಪದ್ಮರಾಜ ಎಂಬಾತನಿಂದ ಕೊಲೆಯಾದ ವಿಟ್ಲ ಕುದ್ದುಪದವು ಸಮೀಪದ ಗೌರಿ ಅವರ ಮನೆಗೆ ಭೇಟಿ ನೀಡಿದ ವೇಳೆ ಅವರು ಮಾತನಾಡಿದರುನಮ್ಮಲ್ಲಿ ನಡೆದಂತಹ ಘಟನೆ ದುಬೈಯಲ್ಲಿ
ನಡೆಯುತ್ತಿದ್ದರೆ ಒಂದು ವಾರದಲ್ಲಿ ಇಲ್ಲವೇ ಹತ್ತು
ವಿಧಿಸುತ್ತಿದ್ದರು. ಕೊಲೆಗಾರರಿಗೆ,
ದಿನದೊಳಗೆ ಅವರಿಗೆ ಮರಣ ದಂಡನೆ ಶಿಕ್ಷೆ ಅತ್ಯಾಚಾರಿಗಳಿಗೆ ಅದೇ ರೀತಿಯ ಶಿಕ್ಷೆ ಇಲ್ಲೂ ಜಾರಿಯಾಗಬೇಕು. ಅಂತಹ ಶಿಕ್ಷೆ ಜಾರಿಯಾದಾಗಲೇ ಇಂತಹ ದುಷ್ಟ ಕೃತ್ಯಗಳನ್ನು, ಸಮಾಜ ವಿದ್ರೋಹಿ ಕೆಲಸಗಳನ್ನು ಮಟ್ಟ ಹಾಕಲು ಸಾಧ್ಯ ಎಂದು ಅವರು ಹೇಳಿದರುಕಾನೂನಿನ ಭಯ ಇಲ್ಲದೆ ಇರುವುದೇ ಎಂದು ಅನೇಕ ಕೆಟ್ಟ ಚಟುವಟಿಕೆಗಳಿಗೆ ಕಾರಣವಾಗುತ್ತಿದೆ. ಕೊಲೆ ಮಾಡಿ ಜೈಲಿಗೆ ಹೋದವರು ವಾಪಸ್ ಬಂದು ರಾಜಾರೋಷವಾಗಿ ತಿರುಗಾಡುತ್ತಾರೆ. ಅವರಿಗೆ ಸಮಾಜದಲ್ಲಿ ವಿಶೇಷ ಗೌರವ ಸಿಗುವ ಕಾರ್ಯಗಳು ಕೆಲವು ನಡೆಯುತ್ತಿದೆ. ಹಾಗಾಗಿ ಇಂತಹ ಕೃತ್ಯ ಎಸಗಿದವರಿಗೆ ಮರಣ ದಂಡನೆ ಶಿಕ್ಷೆ ಆಗಬೇಕು ಎಂದು ಅಶೋಕ್ ರೈ ಹೇಳಿದರು.
ಆರೋಪಿಗೆ ಹೇಗಾದರೂ ಶಿಕ್ಷೆ ಕೊಡಿಸಲೇಬೇಕು, ಆತನನ್ನು ಬಿಟ್ರೆ ಇನ್ನೂ ಹೀಗೆಯೇ ಮಾಡುತ್ತಾನೆ. ಇಷ್ಟು ಸಣ್ಣ ಹುಡುಗಿ ಸತ್ತ ಮೇಲೆ ಆತನೂ ಹೋಗಬೇಕು ಎಂದು ಶಾಸಕರಿಗೆ ಮೃತ ಗೌರಿಯವರತಾಯಿ ಸೀತಾ ಅವರು ಮನವಿ ಸಲ್ಲಿಸಿದರು. ಈ ವೇಳೆ ಅವರಿಗೆ ಉತ್ತರಿಸಿದ ಶಾಸಕರು, ನಮಲ್ಲಿರುವುದು ಹಳೆಯ ಕಾನೂನು. ಕೊಲೆ ಮಾಡಿದವರು 6 ತಿಂಗಳಲ್ಲಿ ಹೊರಗೆ ಬರುತ್ತಾರೆ.ಹಾಗೆ ಬರುವಾಗ ಪದ್ಮರಾಜೆ ಎಂದಿರುವವನು ಪದ್ಮಣ್ಣೆ ಆಗುತ್ತಾನೆ. ಇದು ನಮ್ಮ ಜನರ ಪರಿಸ್ಥಿತಿ. ಇದು ಕಡಿಮೆಯಾಗಬೇಕು. ಒಂದೆರಡು ಜನರಿಗೆ ಮರಣದಂಡನೆ ಶಿಕ್ಷೆಯಾದರೆ ಇದೆಲ್ಲವೂ ನಿಲ್ಲುತ್ತದೆ. ಕೆಲವೊಂದು ಬೇರೆ ಕೇಸ್ಗಳಲ್ಲಿ ಶಿಕ್ಷೆ ಆಗಲು 15 ವರ್ಷ ಬೇಕಾಗುತ್ತದೆ. ಆದರೆ ಇಂತಹ ಕೇಸ್ಗಳಲ್ಲಿ 1 ವರ್ಷದ ಒಳಗೆ ಶಿಕ್ಷೆ ನೀಡಿದರೆ ಕಾನೂನಿನ
ಬಗ್ಗೆ ಭಯ ಬರುತ್ತದೆ. ಕಾನೂನು ಮಾಡುವುದು ನಾವೇ ಜನಪ್ರತಿನಿಧಿಗಳು, ಕಾನೂನು ಬದಲಾವಣೆ ಮಾಡುವ ಅವಶ್ಯ ಕತೆ ಇದೆ ಎಂದು ಶಾಸಕರು ಉತ್ತರಿಸಿದರು
ಈ ಸಂದರ್ಭದಲ್ಲಿ ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ.ರಾಜಾರಾಮ್ ಕೆ.ಬಿ., ಮಾಜಿ ಜಿ.ಪಂ. ಉಪಾಧ್ಯಕ್ಷ ಎಂ.ಎಸ್. ಮಹಮ್ಮದ್, ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಫಾರೂಕ್ ಪೆರ್ನೆ, ಜಿಲ್ಲಾ ಅಲ್ಪಸಂಖ್ಯಾತ ಘಟಕದ ಜಿಲ್ಲಾ ಕಾರ್ಯದರ್ಶಿ ನಝೀರ್ ಮಠ, ಪುತ್ತೂರು ಯುವ ಕಾಂಗ್ರೆಸ್ ಅಧ್ಯಕ್ಷ ಶ್ರೀಪ್ರಸಾದ್ ಪಾಣಾಜೆ, ಕಾಂಗ್ರೆಸ್ ಮುಖಂಡರಾದ ಪ್ರಹ್ಲಾದ್ ಬೆಳ್ಳಿಪ್ಪಾಡಿ ಸೇರಿದಂತೆ ಸ್ಥಳೀಯ ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.
Posted by Vidyamaana on 2024-05-06 17:19:29 |
ಬೆಂಗಳೂರು, ಮೇ 06: ನಮ್ಮ ಮೆಟ್ರೋ (Namma Metro) ರಾಜಧಾನಿ ಬೆಂಗಳೂರಿನ (Bengaluru) ಅತಿ ವೇಗದ ಸಂಪರ್ಕ ಸಾರಿಗೆಯಾಗಿದೆ. ಈ ನಮ್ಮ ಮೆಟ್ರೋ ರೈಲಿನಲ್ಲಿ ಅಸಭ್ಯ ವರ್ತಿಸಿದ ಯುವಕ-ಯುವತಿಯ ವಿರುದ್ಧ ಪ್ರಯಾಣಿಕರೋರ್ವರು ಸಾಮಾಜಿಕ ಜಾಲತಾಣದ ಮೂಲಕ ಬೆಂಗಳೂರು ಮೆಟ್ರೋ ರೈಲು ಸಂಚಾರ ನಿಗಮ (BMRCL) ಗೆ ದೂರು ನೀಡಿದ್ದಾರೆ. ನಮ್ಮ ಮೆಟ್ರೋದ ಬಾಗಿಲು ಬಳಿ ಯುವಕ-ಯುವತಿ ನಿಂತು ತಬ್ಬಿಕೊಂಡಿದ್ದು, ಯುವತಿ ಯುವಕನಿಗೆ ಮುತ್ತು ನೀಡುತ್ತಿರುವ ದೃಶ್ಯವನ್ನು ಪ್ರಯಾಣಿಕ ವಿಡಿಯೋ ಮಾಡಿದ್ದಾರೆ.
Posted by Vidyamaana on 2023-02-10 03:26:59 |
ಉಪ್ಪಿನಂಗಡಿ: ಇಲ್ಲಿನ ಸರಕಾರಿ ಶಾಲೆಯ ಇಬ್ಬರು ಅಪ್ರಾಪ್ತ ವಿದ್ಯಾರ್ಥಿಗಳು ಚಲಾಯಿಸುತ್ತಿದ್ದ ಡಿಯೋ ಸ್ಕೂಟರ್ ಸ್ಕಿಡ್ ಆಗಿ ಬಿದ್ದ ದುರ್ಘಟನೆ ಕಲ್ಲೇರಿ ಸಮೀಪದ ಶಿವಗಿರಿ ಎಂಬಲ್ಲಿ ಫೆ. 1 ರಂದು ಸಂಭವಿಸಿದ್ದು, ಇಬ್ಬರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಂದರ್ಭದಲ್ಲಿಯೇ ಓರ್ವ ವಿದ್ಯಾರ್ಥಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟ ಘಟನೆ ಗುರುವಾರ ರಾತ್ರಿ ಸಂಭವಿಸಿದೆ.ತಲೆಗೆ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕುಪ್ಪೆಟ್ಟಿಯ ಅಬೂಬಕ್ಕರ್ ಸಿದ್ದೀಕ್ ಎಂಬಾತ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.ಫೆಬ್ರವರಿ 1 ರಂದು ಕಲ್ಲೇರಿ ಸಮೀಪದ ಶಿವಗಿರಿ ಎಂಬಲ್ಲಿ ಅಜಾಗರೂಕತೆ ಮತ್ತು ನಿರ್ಲಕ್ಷ್ಯ ದಿಂದ ಉಪ್ಪಿನಂಗಡಿಯಿಂದ ಕುಪ್ಪೆಟ್ಟಿ ಕಡೆಗೆ ಅತೀ ವೇಗದಿಂದ ಚಲಾಯಿಸಿಕೊಂಡು ಬಂದ ಡಿಯೋ ಸ್ಕೂಟರ್ ಸವಾರನ ನಿಯಂತ್ರಣ ತಪ್ಪಿ ಸ್ಕಿಡ್ ಆಗಿ ಉಪ್ಪಿನಂಗಡಿಯಿಂದ ಕಲ್ಲೇಗಿ ಕಡೆಗೆ ಚಲಿಸುತ್ತಿದ್ದ ಜೀತೋ ಟೆಂಪೊಗೆ ಹಿಂಬದಿಯಿಂದ ಡಿಕಿ ಹೊಡೆದಿದೆ ಎನಲಾಗಿದೆ. ಆದರೆ ಸ್ಕೂಟರ್ ಜೀತೋ ಟೆಂಪೊಗೆ ಡಿಕ್ಕಿ ಹೊಡೆದಿರುವ ಬಗ್ಗೆ ಜೀತೋ ಟೆಂಪೋದಲ್ಲಿ ಯಾವುದೇ ಕುರುಹುಗಳು ಪತ್ತೆ ಆಗಿಲ್ಲ ಎನ್ನಲಾಗಿದೆ.ಅಪ್ರಾಪ್ತ ಸ್ಕೂಟರ್ ಸವಾರರು ಹೆಲ್ಮಟ್ ಧರಿಸದ ಕಾರಣ ಸ್ಕೂಟರ್ ಸ್ಕಿಡ್ ಆಗಿ ಬಿದ್ದ ಸಂದರ್ಭದಲ್ಲಿ ಸವಾರ ಮತ್ತು ಸಹ ಸವಾರನ ತಲೆಗೆ ಗಂಭೀರವಾದ ಗಾಯಗಳಾಗಿದ್ದು, ಸಹ ಸವಾರ ಕುಪ್ಪೆಟ್ಟಿಯ ಅಬೂಬಕ್ಕರ್ ಸಿದ್ದೀಕ್ ಎಂಬಾತ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.ಅಪ್ರಾಪ್ತ ಬಾಲಕರು ಚಲಾಯಿಸುತ್ತಿದ್ದ KA 53 ER 6958 ಡಿಯೋ ಸ್ಕೂಟರಿನ ನಂಬರ್ ಪ್ಲೇಟ್ ನಕಲಿಯಾಗಿದ್ದು, ಈ ಬಗ್ಗೆ ಬಂಟ್ವಾಳದ ಸಾರಿಗೆ ಅಧಿಕಾರಿಗಳು ಪೊಲೀಸರಿಗೆ ದೂರನ್ನು ನೀಡಿದ್ದು, ಅಪ್ರಾಪ್ತ ಬಾಲಕರು ಚಲಾಯಿಸುತ್ತಿದ್ದಡಿಯೋ ಸ್ಕೂಟರಿನ ಅಸಲಿ ಮಾಲಕನ ಮೇಲೆ ಪ್ರಕರಣ ದಾಖಲಿಸಿದ್ದಾರೆ.
ಅಜಾಗರೂಕತೆ ಮತ್ತು ನಿರ್ಲಕ್ಷ್ಯತನ, ಹೆಲ್ಮಟ್ ಧರಿಸದೆ, ಇನ್ಸುರೆನ್ಸ್ ಇಲ್ಲದೆ,ಡ್ರೈವಿಂಗ್ ಲೈಸನ್ಸ್ ಇಲ್ಲದ ಅಪ್ರಾಪ್ತ ಮಕ್ಕಳಿಂದ ಸ್ಕೂಟರ್ ಚಲಾವಣೆ ಎಂಬ ಕಾರಣದಿಂದ ಪುತ್ತೂರು ಸಂಚಾರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
Posted by Vidyamaana on 2024-02-02 11:29:07 |
ಪುತ್ತೂರು : ಎರಡು ತಂಡಗಳ ನಡುವೆ ಹೊಡೆದಾಟ ನಡೆದ ಘಟನೆ ಫೆ.1 ರಂದು ರಾತ್ರಿ ಪುತ್ತೂರು ಬಸ್ ನಿಲ್ದಾಣದ ಸಮೀಪದ ಹೂವಿನ ಮಾರುಕಟ್ಟೆ ಬಳಿ ನಡೆದಿದೆ.
ಪುತ್ತೂರು ಬಸ್ ನಿಲ್ದಾಣ ಸಮೀಪದ ಗಾಂಧಿಕಟ್ಟೆ ಸಮೀಪ ಹಣ್ಣು-ಹಂಪಲು ವಿತರಣೆಯ ಪಿಕಪ್ ವಾಹನದವರು ಹಾಗೂ ಮಾರುತಿ 800 ಕಾರಿನಲ್ಲಿದ್ದವರ ನಡುವೆ ಹೂವಿನ ಮಾರುಕಟ್ಟೆ ಮುಂಭಾಗ ನಡುರಸ್ತೆಯಲ್ಲೇ ಹೊಡೆದಾಟ ನಡೆದಿದೆ ಎಂದು ವರದಿಯಾಗಿದೆ.
ಹೊಡೆದಾಟದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ಯಾವ ಕಾರಣಕ್ಕೆ ಹೊಡೆದಾಟ ನಡೆದಿದೆ ಎಂಬ ಮಾಹಿತಿ ಲಭ್ಯವಾಗಿಲ್ಲ.
Posted by Vidyamaana on 2024-05-24 05:44:32 |
ಬೆಂಗಳೂರು :10ನೇ ತರಗತಿ ಪರೀಕ್ಷೆಯಲ್ಲಿ ಶೇ.99.7ರಷ್ಟು ಅಂಕಗಳನ್ನು ಗಳಿಸಿದ್ದ 23 ವರ್ಷದ ಪ್ರಭು ಲಕ್ಷ್ಮೀಕಾಂತ್ ಲೋಕರೆ ಎಂಬ ಜವಾನನಿಗೆ ಓದಲು ಅಥವಾ ಬರೆಯಲು ಬರುವುದಿಲ್ಲ ಎಂದು ಇಂಡಿಯಾ ಟುಡೇ ವರದಿ ಮಾಡಿದೆ.ಈ ಬಹಿರಂಗಪಡಿಸುವಿಕೆಯು ಆರೋಪದ ಬಗ್ಗೆ ತನಿಖೆಯನ್ನು ಮಾಡಲಾಗುತ್ತಿದೆ.
ಹೆಚ್ಚಿನ ಅಂಕಗಳನ್ನು ಗಳಿಸಿದ ನಂತರ, ಲೋಕರೆ ಕೊಪ್ಪಳ ಜಿಲ್ಲೆಯ ಸ್ಥಳೀಯ ನ್ಯಾಯಾಲಯದಲ್ಲಿ ಜವಾನನಾಗಿ ಕೆಲಸ ಪಡೆದರು. ವರದಿಯ ಪ್ರಕಾರ, ಲೋಕರೆ ಅವರ 10 ನೇ ತರಗತಿಯ ಅಂಕಗಳ ಆಧಾರದ ಮೇಲೆ ಜವಾನರ ನೇಮಕಾತಿ ಪರೀಕ್ಷೆಯ ಅಂತಿಮ ಮೆರಿಟ್ ಪಟ್ಟಿಯಲ್ಲಿ ಏಪ್ರಿಲ್ 22, 2024 ರಂದು ಅವರ ಹೆಸರು ಕಾಣಿಸಿಕೊಂಡಾಗ ಅವರನ್ನು ಕೆಲಸಕ್ಕೆ ಆಯ್ಕೆ ಮಾಡಲಾಯಿತು. ಲೋಕರೆ ಅವರ ಶೈಕ್ಷಣಿಕ ದಾಖಲೆಗಳ ಬಗ್ಗೆ ತನಿಖೆ ನಡೆಸುವಂತೆ ನ್ಯಾಯಾಲಯ ಆದೇಶಿಸಿದೆ.
Posted by Vidyamaana on 2023-11-15 13:54:05 |
ಶಿವಮೊಗ್ಗ, ನ.15: ಯುವಕನೋರ್ವನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಶಿವಮೊಗ್ಗ ನಗರದ ಗುಡ್ಡೆಕಲ್ ಫ್ಲೈಓವರ್ ಬಳಿ ನಡೆದಿದೆ.
ಮಲ್ಲೇಶ್(35) ಕೊಲೆಯಾದ ಯುವಕ. ಹತ್ಯೆ ನಂತರ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ.
ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಶಿವಮೊಗ್ಗದ ಕೋಟೆ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡ ಮುಂದಿನ ಕ್ರಮ ಕೈಗೊಂಡಿದ್ದಾರೆ.
ಶಿವಮೊಗ್ಗ ಎಸ್ಪಿ ಮಿಥುನ್ ಕುಮಾರ್ ಕೂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮಲ್ಲೇಶ್ ಕೊಲೆಗೆ ಕಾರಣ ಇನ್ನೂ ತಿಳಿದುಬಂದಿಲ್ಲ ಎಂದು ಪೊಲೀಸರು ಹೇಳಿದ್ದಾರೆ