ರೋಟರಿ ಕ್ಲಬ್ ಪುತ್ತೂರು ಸೆಂಟ್ರಲ್ - ಇಂದು ನೂತನ ಪದಾಧಿಕಾರಿಗಳ ಪದ ಪ್ರದಾನ ಸಮಾರಂಭ

ಸುದ್ದಿಗಳು News

Posted by vidyamaana on 2024-07-09 08:24:41 |

Share: | | | | |


ರೋಟರಿ ಕ್ಲಬ್ ಪುತ್ತೂರು ಸೆಂಟ್ರಲ್ - ಇಂದು ನೂತನ ಪದಾಧಿಕಾರಿಗಳ ಪದ ಪ್ರದಾನ ಸಮಾರಂಭ

ಪುತ್ತೂರು: ಅಂತರಾಷ್ಟ್ರೀಯ ರೋಟರಿ ಜಿಲ್ಲೆ 3181, ವಲಯ ಐದರ ರೋಟರಿ ಕ್ಲಬ್ ಪುತ್ತೂರು ಸೆಂಟ್ರಲ್ ಇದರ 2024-25ನೇ ಸಾಲಿನ ನೂತನ ಅಧ್ಯಕ್ಷರಾಗಿ ಸಹರಾ ಅರ್ಥಮೂವರ್ ಮತ್ತು ಬೋರ್ ವೆಲ್ ಮಾಲಕ ಪಿ.ಎಂ ಅಶ್ರಫ್, ಕಾರ್ಯದರ್ಶಿಯಾಗಿ ಕೊಂಕಣ್ ಗ್ಯಾಸ್ ನಲ್ಲಿ 22 ವರ್ಷ ಸೀನಿಯರ್ ಎಕೌಂಟೆಂಟ್ ಆಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಬಿ.ವಸಂತ್ ಶಂಕರ್, ಕೋಶಾಧಿಕಾರಿಯಾಗಿ ಯುನೈಟೆಡ್ ಇನ್ಸೂರೆನ್ನ ನಿವೃತ್ತ ಉದ್ಯೋಗಿ ನವೀನ್‌ಚಂದ್ರ  ರವರು ಆಯ್ಕೆಯಾಗಿದ್ದಾರೆ.

ಉಳಿದಂತೆ ಜೊತೆ ಕಾರ್ಯದರ್ಶಿ ಯಾಗಿ ನವ್ಯಶ್ರೀ , ನಿಯೋಜಿತ ಅಧ್ಯಕ್ಷರಾಗಿ ಚಂದ್ರಹಾಸ ರೈ ಬಿ, ಉಪಾಧ್ಯಕ್ಷರಾಗಿ ಪ್ರದೀಪ್‌ ಪೂಜಾರಿ, ನಿಕಟಪೂರ್ವ ಅಧ್ಯಕ್ಷರಾಗಿ ಡಾ.ರಾಜೇಶ್ ಬೆಜ್ಜಂಗಳ, ಕ್ಲಬ್ ಸರ್ವಿಸ್ ನಿರ್ದೇಶಕರಾಗಿ ಜಯಪ್ರಕಾಶ್ ಎ.ಎಲ್, ಕಮ್ಯೂನಿಟಿ ಸರ್ವಿಸ್ ನಿರ್ದೇಶಕರಾಗಿ ಬಿ.ಟಿ ಮಹೇಶ್ಚಂದ್ರ ಸಾಲಿಯಾನ್, ವೊಕೇಶನಲ್ ಸರ್ವಿಸ್ ನಿರ್ದೇಶಕರಾಗಿ ಲೋಕೇಶ್

ಎಂ.ಎಚ್, ಇಂಟರ್‌ನ್ಯಾಷನಲ್ ಸರ್ವಿಸ್ ನಿರ್ದೇತಕರಾಗಿ ಸನತ್ ರೈ, ಯೂತ್ ಸರ್ವಿಸ್ ನಿರ್ದೇಶಕರಾಗಿ ಜಗನ್ನಾಥ್ ಆರಿಯಡ್ಕ, ಸಾರ್ಜಂಟ್ ಎಟ್ ಆರ್ಮ್ಸ್ ಶಿವರಾಂ ಎಂ.ಎಸ್. ಚೀರ್‌ಮ್ಯಾನ್‌ಗಳಾಗಿ ಡಾ.ರಾಮಚಂದ್ರ ಕೆ(ವೆಬ್), ಡಾ.ನಮಿತಾ(ಪೋಲಿಯೋ ಪ್ಲಸ್),ಭಾರತಿ ಎಸ್.ರೈ(ಟೀಚ್), ಜಯಪ್ರಕಾಶ್ಅಮೈ(ಟಿಆ‌ರ್ ಎಫ್), ಲಾವಣ್ಯ  (ಮೆಂಬರ್‌ಶಿಪ್ ಡೆವಲಪ್‌ಮೆಂಟ್). ಪದ್ಮನಾಭ ಶೆಟ್ಟಿ(ಜಿಲ್ಲಾ ಪ್ರಾಜೆಕ್ಟ್), ಸಂತೋಷ್ ಶೆಟ್ಟಿ(ಕ್ರೀಡೆ), ಪ್ರಮೋದ್ ಕುಮಾರ್ ಕೆ.ಕೆ(ಸಾಂಸ್ಕೃತಿಕ), ಪ್ರದೀಪ್ ಬೊಳ್ಳಾರ್ (ಫೆಲೋಶಿಪ್), ಶಾಂತಕುಮಾರ್(ಹಾಜರಾತಿ ಸಮಿತಿ), ಮೊಹಮ್ಮದ್ ರಫೀಕ್ ದರ್ಜೆ (ಸಿಎಲ್‌ಸಿಸಿ), ಅಮಿತಾ ಶೆಟ್ಟಿ(ಎಥಿಕ್ಸ್), ಸಂತೋಷ್ ಶೆಟ್ಟಿ(ಕ್ಲಬ್ ಫೆಸಿಲಿಟೇಟರ್ )ರವರು ಆಯ್ಕೆಯಾಗಿದ್ದಾರೆ.

ಇಂದು ಪದ ಪ್ರದಾನ: ಜು.9 ರಂದು ಪರ್ಲಡ್ಕ-ಬೈಪಾಸ್ ಆಫ್ರಿ ಕಂಫರ್ಟ್‌ನಲ್ಲಿ ಕ್ಲಬ್‌ನ ನೂತನ ಪದಾಧಿಕಾರಿಗಳ ಪದ ಪ್ರದಾನ ಸಮಾರಂಭ ಜರಗಲಿದ್ದು, ರೋಟರಿ ಜಿಲ್ಲೆ 3181 ಇದರ ಪಿಡಿಜಿ ರಂಗನಾಥ್ ಭಟ್ ರವರು ನೂತನ ಪದಾಧಿಕಾರಿಗಳಿಗೆ ಪದ ಪ್ರದಾನವನ್ನು ನೆರವೇರಿಸಲಿದ್ದಾರೆ. ವಲಯ ಐದರ ಅಸಿಸ್ಟಂಟ್ ಗವರ್ನರ್ ಸೂರ್ಯನಾಥ ಆಳ್ವ, ವಲಯ ಸೇನಾನಿ ಮೊಹಮದ್ ರಫೀಕ್ ದರ್ಬೆ, ಮಾತೃಸಂಸ್ಥೆ ರೋಟರಿ ಕ್ಲಬ್ ಪುತ್ತೂರು ಸ್ವರ್ಣ ಅಧ್ಯಕ್ಷ ಸುರೇಶ್ ಪಿ.ರವರು ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

 Share: | | | | |


26ರ ಹರೆಯಕ್ಕೆ ಕೊನೆಯುಸಿರೆಳೆದ ಖ್ಯಾತ ನೀಲಿ ಚಿತ್ರತಾರೆ ಸೋಫಿಯಾ ಲಿಯೋನ್

Posted by Vidyamaana on 2024-03-10 09:10:52 |

Share: | | | | |


26ರ ಹರೆಯಕ್ಕೆ ಕೊನೆಯುಸಿರೆಳೆದ ಖ್ಯಾತ ನೀಲಿ ಚಿತ್ರತಾರೆ ಸೋಫಿಯಾ ಲಿಯೋನ್

ನ್ಯೂಯಾರ್ಕ್: 26 ವರ್ಷದ ವಯಸ್ಕ ಚಿತ್ರ ತಾರೆ ಸೋಫಿಯಾ ಲಿಯೋನ್ ಅವರು ಮೃತಪಟ್ಟಿದ್ದಾರೆ. ಅವರು ಈ ತಿಂಗಳ ಆರಂಭದಲ್ಲಿ ತನ್ನ ನಿವಾಸದಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದರು ಎಂದು ಆಕೆಯ ಮಲತಂದೆ ಮೈಕ್ ರೊಮೆರೊ ಶನಿವಾರ ತಿಳಿಸಿದ್ದಾರೆ.


ಮಾರ್ಚ್ 1 ರಂದು ಯುಎಸ್ ನಲ್ಲಿನ ತನ್ನ ಅಪಾರ್ಟ್ ಮೆಂಟ್ ನಲ್ಲಿ ಸೋಫಿಯಾಳನ್ನು ಆಕೆಯ ಕುಟುಂಬವು ಪ್ರತಿಕ್ರಿಯಿಸದ ರೀತಿಯಲ್ಲಿ ಪತ್ತೆ ಮಾಡಿದೆ.

“ಅವಳ ತಾಯಿ ಮತ್ತು ಕುಟುಂಬದ ಪರವಾಗಿ, ನಮ್ಮ ಪ್ರೀತಿಯ ಸೋಫಿಯಾ ಅವರ ನಿಧನದ ಸುದ್ದಿಯನ್ನು ನಾನು ಭಾರವಾದ ಹೃದಯದಿಂದ ಹಂಚಿಕೊಳ್ಳುತ್ತೇನೆ” ಎಂದು ರೊಮೆರೊ ಹೇಳಿದರು.

ಆಕೆಯ ಸಾವಿನ ಬಗ್ಗೆ ಸ್ಥಳೀಯ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಆಕೆಯ ಮಾಡೆಲ್ ಏಜೆನ್ಸಿಯಾದ 101 ಮಾಡೆಲಿಂಗ್ ಕೂಡಾ ಆಕೆಯ ಸಾವಿನ ವಿಚಾರವನ್ನು ಖಚಿತಪಡಿಸಿದೆ.ಸೋಫಿಯಾ ಲಿಯೋನ್ ಜೂನ್ 10, 1997 ರಂದು ಅಮೇರಿಕಾದ ಮಿಯಾಮಿಯಲ್ಲಿ ಜನಿಸಿದರು.


ಅವರು 18 ನೇ ವಯಸ್ಸಿನಲ್ಲಿ ವಯಸ್ಕ ಮನರಂಜನಾ ಉದ್ಯಮವನ್ನು ಪ್ರವೇಶಿಸಿದ್ದಾರೆ. ಆಕೆ ಸುಮಾರು 1 ಮಿಲಿಯನ್ ಯುಸ್ ಡಾಲರ್ ನಿವ್ವಳ ಮೌಲ್ಯವನ್ನು ಹೊಂದಿದ್ದಾರೆಂದು ವರದಿಯಾಗಿದೆ.

ಕಾಗ್ನಿ ಲಿನ್ ಕಾರ್ಟರ್, ಜೆಸ್ಸಿ ಜೇನ್ ಮತ್ತು ಥೈನಾ ಫೀಲ್ಡ್ಸ್ ನಂತರ ವಯಸ್ಕ ಉದ್ಯಮದಲ್ಲಿ ಈ ವರ್ಷ ಸೋಫಿಯಾ ಮರಣವು ನಾಲ್ಕನೇ ಅಕಾಲಿಕ ಸಾವು ಪ್ರಕರಣವಾಗಿದೆ.

ಮೃತ್ಯುಂಜಯೇಶ್ವರ ದೇವಸ್ಥಾನದ ಅಧ್ಯಕ್ಷರ ಆಯ್ಕೆ ವಿಚಾರದಲ್ಲಿ ದಾಖಲಾಗಿದ್ದ ಪ್ರಕರಣ.

Posted by Vidyamaana on 2023-08-25 15:26:30 |

Share: | | | | |


ಮೃತ್ಯುಂಜಯೇಶ್ವರ ದೇವಸ್ಥಾನದ ಅಧ್ಯಕ್ಷರ ಆಯ್ಕೆ ವಿಚಾರದಲ್ಲಿ ದಾಖಲಾಗಿದ್ದ ಪ್ರಕರಣ.

ಪುತ್ತೂರು : 2021ರಲ್ಲಿ ಮುಂಡೂರು ಶ್ರೀ ಮೃತ್ಯುಂಜಯೇಶ್ವರ ದೇವಸ್ಥಾನದ ಜಾತ್ರೋತ್ಸವ ವೇಳೆ ಅಧ್ಯಕ್ಷರ ನೇಮಕಾತಿಯ ವಿಚಾರದಲ್ಲಿ ನಡೆದ ಹಲ್ಲೆ ಮತ್ತು ಬೆದರಿಕೆ ವಿಚಾರದಲ್ಲಿ ದಾಖಲಾದ ಪ್ರಕರಣವನ್ನು ನ್ಯಾಯಲಯ ಖುಲಾಸೆಗೊಳಿಸಿ ಆದೇಶಿಸಿದೆ.


ಅರುಣ್ ಕುಮಾರ್ ಪುತ್ತಿಲ, ಅಶೋಕ್ ಕುಮಾರ್ ಪುತ್ತಿಲ, ಶ್ರೀಕಾಂತ್ ಆಚಾರ್ ಹಿಂದಾರ್ ದೋಷಮುಕ್ತರೆಂದು ನ್ಯಾಯಾಲಯ ಆದೇಶ ನೀಡಿದೆ.

ವಕೀಲರಾದ ದೇವಾನಂದ ಕೆ, ಚಿನ್ಮಯ್ ರೈ ಈಶ್ವರಮಂಗಲ,ಹರಿಣಿ ವಾದಿಸಿದರು.

2021ರಲ್ಲಿ ಮುಂಡೂರು ಶ್ರೀ ಮೃತ್ಯುಂಜಯೇಶ್ವರ ದೇವಸ್ಥಾನದ ಜಾತ್ರೋತ್ಸವ ವೇಳೆ ಅಧ್ಯಕ್ಷರ ನೇಮಕಾತಿಯ ವಿಚಾರದಲ್ಲಿ ಹಲ್ಲೆ ನಡೆಸಿದ್ದಾರೆಂದು ತಾಲೂಕು ರೈತ ಮೋರ್ಚಾ ಅಧ್ಯಕ್ಷ ಸುರೇಶ್ ಕಣ್ಣರಾಯ ರವರು ದೂರು ನೀಡಿದ್ದು, ನಳಿನೀ ಲೋಕಪ್ಪ ಗೌಡ ಮತ್ತು ಲೋಕಪ್ಪ ಗೌಡ ಮುಖ್ಯ ಸಾಕ್ಷಿದಾರರಾಗಿದ್ದರು.


ಇದು ಸತ್ಯ ಮತ್ತು ನ್ಯಾಯಕ್ಕೆ ಸಂದ ಗೌರವ ಎಂದು ಅರುಣ್ ಕುಮಾರ್ ಪುತ್ತಿಲ ಪ್ರತಿಕ್ರಿಯಿಸಿದ್ದಾರೆ.

ಮಾನಕ ಜ್ಯುವೆಲ್ಸ್ ನ ನೂತನ ಮಳಿಗೆ ಉದ್ಘಾಟನೆ

Posted by Vidyamaana on 2023-05-28 09:07:50 |

Share: | | | | |


ಮಾನಕ ಜ್ಯುವೆಲ್ಸ್ ನ ನೂತನ ಮಳಿಗೆ ಉದ್ಘಾಟನೆ

ಪುತ್ತೂರು: ಸ್ವರ್ಣೋದ್ಯಮಕ್ಕೆ ಸಮ್ಮಾನ ಮಾಡಿದಂತೆ ವ್ಯವಹಾರದಲ್ಲಿ ಯಶಸ್ಸನ್ನು ಗಿಟ್ಟಿಸಿಕೊಂಡಿರುವ ಮಾನಕ ಜ್ಯುವೆಲ್ಸ್ ಪುತ್ತೂರು ಮುಖ್ಯರಸ್ತೆಯಲ್ಲಿರುವ ಸಿಪಿಸಿ ಪ್ಲಾಜ್ಹಾದ ಮುಂಭಾಗದ ಸ್ವಂತ ಕಟ್ಟಡದಲ್ಲಿ ಶನಿವಾರ ಉದ್ಘಾಟನೆಗೊಂಡಿತು.

ಪುತ್ತೂರಿನ ಪ್ರಸಿದ್ಧ ಜವಳಿ ಮಳಿಗೆ ಸಂಜೀವ ಶೆಟ್ಟಿ ಪಾಲುದಾರರಾದ ಗಿರಿಧರ್ ಅವರು ಮಾನಕ ಜ್ಯುವೆಲ್ಸ್ ನ ನೂತನ ಮಳಿಗೆಯನ್ನು ಉದ್ಘಾಟಿಸಿದರು.


ಹೆಚ್ಚು ಶಾಖೆ ತೆರೆಯುವಂತಾಗಲಿ: ವಿದ್ಯಾ ಗಿರಿಧರ್

ಸಂಜೀವ ಶೆಟ್ಟಿ ಜವಳಿ ಮಳಿಗೆಯ ವಿದ್ಯಾ ಗಿರಿಧರ್ ಮಾತನಾಡಿ, ಉದ್ಯಮ ಬೆಳೆದಂತೆ ಪಟ್ಟಣ ಬೆಳೆಯುತ್ತದೆ. ಪಟ್ಟಣದ ಬೆಳವಣಿಗೆಗೆ ತಕ್ಕಂತೆ ಉದ್ಯಮವೂ ಅಭಿವೃದ್ಧಿ ಕಡೆ ಸಾಗಬೇಕು. ಇದಕ್ಕೆ ಪೂರಕ ಎಂಬಂತೆ ಮಾನಕ ಜ್ಯುವೆಲ್ಸ್ ಸಾಗುತ್ತಿದೆ. ಮಾನಕ ಜ್ಯುವೆಲ್ಸ್ ಸಂಸ್ಥೆಯ 2ನೇ ಶಾಖೆಯನ್ನು ಸಂಜೀವ ಶೆಟ್ಟಿ ಸಂಸ್ಥೆಯ ಸಹೋದರರೇ ಉದ್ಘಾಟಿಸಿದ್ದು, ಮಾನಕ ಜ್ಯುವೆಲ್ಸ್ ಇನ್ನಷ್ಟು ಎತ್ತರಕ್ಕೆ ಬೆಳೆಯಲಿ, ಹೆಚ್ಚು ಶಾಖೆಗಳನ್ನು ತೆರೆಯಲಿ ಎಂದು ಶುಭಹಾರೈಸಿದರು.

ಲಾಭದಲ್ಲಿ ಸಮಾಜಕ್ಕೆ ಒಂದಿಷ್ಟು: ರಾಜೇಶ್ ಬನ್ನೂರು

ಪುತ್ತೂರು ಪುರಸಭೆಯ ಮಾಜಿ ಅಧ್ಯಕ್ಷ ರಾಜೇಶ್ ಬನ್ನೂರು ಮಾತನಾಡಿ, ವ್ಯಾಪಾರ ಎಂದರೆ ಲಾಭವೇ ಉದ್ದೇಶ. ಆದರೆ ಲಾಭದ ಜೊತೆಗೆ ಸಮಾಜಕ್ಕೆ ಒಂದಿಷ್ಟು ನೀಡುವ ಶಕ್ತಿಯನ್ನು ಮಹಾಲಿಂಗೇಶ್ವರ ದೇವರು ನೀಡಿದ್ದಾನೆ. ಆದ್ದರಿಂದ ಪುತ್ತೂರಿಗೆ ಕಲಶಪ್ರಾಯದಂತಿರುವ ಮಾನಕ ಜ್ಯುವೆಲ್ಸ್ ಇನ್ನಷ್ಟು ಉತ್ತುಂಗಕ್ಕೆ ಏರಲಿ ಎಂದು ಹಾರೈಸಿದರು.

ಮಾನಕ ಜ್ಯುವೆಲ್ಸ್ ನ 2ನೇ ಮಳಿಗೆ : ಧೈರ್ಯವರ್ಧನ್ ಕದಮ್

ಧೈರ್ಯವರ್ಧನ್ ಕದಮ್ ಮಾತನಾಡಿ, ಕಲಾಯಿ ಕೆಲಸದಿಂದ ಪುತ್ತೂರಿನಲ್ಲಿ ಜೀವನ ಕಂಡುಕೊಂಡವರು ಶಂಕರ್ ಶೇಟ್. ಇಂದು ಅವರ ಮಕ್ಕಳು ತಾಯಿಯ ಆಶೀರ್ವಾದದಿಂದ 2ನೇ ಮಳಿಗೆಯನ್ನು ತೆರೆದಿದ್ದಾರೆ. ಕಳೆದ 18 ವರ್ಷಗಳಲ್ಲಿ ಮಾನಕ ಜ್ಯುವೆಲ್ಸ್ ಜನಪ್ರಿಯತೆಯನ್ನು ಗಳಿಸಿಕೊಂಡಿದ್ದು, ಸಂಸ್ಥೆ ಇನ್ನಷ್ಟು ಎತ್ತರಕ್ಕೆ ಏರಲಿ ಎಂದರು.

ಪುತ್ತೂರು ಅನ್ಸಾರುದ್ದೀನ್ ಜಮಾಅತ್ ಕಮಿಟಿ ಅಧ್ಯಕ್ಷ ಎಲ್.ಟಿ. ಅಬ್ದುಲ್ ರಜಾಕ್ ಮಾತನಾಡಿ, ಶುಭಹಾರೈಸಿದರು.

ಸಂಸ್ಥೆಯ ಮಾಲಕರ ಸಹೋದರ ಶಿವಶಂಕರ್, ಪುರಸಭೆ ಮಾಜಿ ಅಧ್ಯಕ್ಷ ಗಣೇಶ್ ರಾವ್, ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಪ್ರಧಾನ ಕಾರ್ಯದರ್ಶಿ ಉಲಾಸ್ ಪೈ, ಸಂಸ್ಥೆಯ ಮಾಲಕರ ತಾಯಿ ಮಾನಕ ಕಂದಾರೆ, ಮಾನಕ ಜ್ಯುವೆಲ್ಸ್ ಮಾಲಕರ ಸಹೋದರರಾದ ಸಿದ್ದನಾಥ್ ಕಂದಾರೆ ಹಾಗೂ ಪತ್ನಿ ಪದ್ಮಿನಿ, ಸಹದೇವ್ ಕಂದಾರೆ ಹಾಗೂ ಪತ್ನಿ ಅಪರ್ಣ, ಸನದ್ ಕುಮಾರ್ ಹಾಗೂ ಪತ್ನಿ ಮಧುರ ಮತ್ತು ಮಕ್ಕಳಾದ ಶ್ರೀವರ್ಧನ್, ಶೌರ್ಯವರ್ಧನ್, ಮನಸ್ವಿ, ಸಮರ್ಥ್ ಮೊದಲಾದವರು ಉಪಸ್ಥಿತರಿದ್ದರು.

ಅರ್ಚಕ ಜಗದೀಶ್ ಭಟ್ ಅವರು ವೈದಿಕ ವಿಧಿವಿಧಾನ ನೆರವೇರಿಸಿದರು.ಮಾನಕ ಜ್ಯುವೆಲ್ಲರ್ಸ್ ನ ನೂತನ ಸರ್ವಸುಸಜ್ಜಿತ ಶೋರೂಂ ಉದ್ಘಾಟನೆಯ ದಿನ ಬೆಳಿಗ್ಗಿನಿಂದಲೇ ಅಪಾರ ಪ್ರಮಾಣದ ಜನ ಭೇಟಿ ನೀಡಿ ಮಾಲಕರಿಗೆ ಶುಭ ಹಾರೈಸುತ್ತಿದ್ದ ದೃಶ್ಯ ಕಂಡುಬಂತು. ಬೆಳಿಗ್ಗಿನಿಂದ ಸಾಯಂಕಾಲದವರೆಗೆ ಸಾಲುಸಾಲಾಗಿ ಬರ್ತಿದ್ದ ಜನರಿಂದಾಗಿ ಜ್ಯುವೆಲ್ಲರ್ಸ್ ಶೋರೂಂ ಎದುರು ಅಪಾರ ಪ್ರಮಾಣದ ಜನಜಂಗುಳಿಯೇ ಉಂಟಾಗಿದ್ದು ವಿಶೇಷವಾಗಿತ್ತು ಮತ್ತು ತಮ್ಮ ಹೊಸ ವಿಸ್ತೃತ ಸಂಸ್ಥೆಗೆ ಸಿಕ್ಕ ಜನಬೆಂಬಲವನ್ನು ಕಂಡು ಮಾಲಕರು ಫುಲ್ ಖುಷ್ ಆಗಿದ್ದಾರೆ.


ಉದ್ಘಾಟನೆ ಹಿನ್ನೆಲೆಯಲ್ಲಿ ಆಫರ್ಗಳು:

ಮೇ 27ರಿಂದ ಜೂನ್ 31ರವರೆಗೆ 10 ಸಾವಿರ ರೂ. ಮಿಕ್ಕಿದ ಖರೀದಿಗೆ ಕೂಪನ್ ನೀಡಿ, ಅದರ ಮೂಲಕ ಬಹುಮಾನ ಘೋಷಿಸಲಾಗುವುದು. ಇದರಲ್ಲಿ ಪ್ರಥಮ ಬಹುಮಾನ ರೆಫ್ರಿಜರೇಟರ್, ದ್ವಿತೀಯ ಬಹುಮಾನ ವಾಷಿಂಗ್ಮೆಷಿನ್, ತೃತೀಯ ಬಹುಮಾನ ಸ್ಮಾರ್ಟ್ ಟಿವಿ ದೊರೆಯಲಿದೆ. ಐದು ಆಕರ್ಷಕ ಬಹುಮಾನ ಲಭ್ಯ. ಇದರೊಂದಿಗೆ ಗ್ರಾಹಕರಿಗೆ ಮಾಸಿಕ 500 ರೂ., 1000 ರೂ. ಹಾಗೂ 2000 ರೂ. ಪಾವತಿಯ ಕಂತುಗಳ ಮೂಲಕ ಚಿನ್ನ ಖರೀದಿಸುವ ಅವಕಾಶ ಇದೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.

ಕರ್ನಾಟಕದಲ್ಲಿ ಆ್ಯಸಿಡ್ ಮಾರಾಟ ನಿಷೇಧ: ಗೃಹ ಸಚಿವ ಪರಮೇಶ್ವರ್‌

Posted by Vidyamaana on 2024-03-07 09:09:19 |

Share: | | | | |


ಕರ್ನಾಟಕದಲ್ಲಿ ಆ್ಯಸಿಡ್ ಮಾರಾಟ ನಿಷೇಧ: ಗೃಹ ಸಚಿವ ಪರಮೇಶ್ವರ್‌

ಗಳೂರು(ಮಾ.07): ರಾಜ್ಯದಲ್ಲಿ  ಮಾರಾಟ ಆ್ಯಸಿಡ್ ನಿಷೇಧಿಸಲಾಗುವುದು ಎಂದು ಘೋಷಿಸಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್‌, ಆ್ಯಸಿಡ್ ದಾಳಿಗೆ ಒಳಗಾದ ಸಂತ್ರಸ್ತರಿಗೆ ನಿವೇಶನ ನೀಡಲಾಗುವುದು ಎಂದೂ ಹೇಳಿದ್ದಾರೆ.

ಇತ್ತೀಚೆಗೆ ಮಂಗಳೂರಿನಲ್ಲಿ ವ್ಯಕ್ತಿಯೊಬ್ಬ ಮೂವರು ಕಾಲೇಜು ವಿದ್ಯಾರ್ಥಿನಿಯರ ಮೇಲೆ  ಆ್ಯಸಿಡ್  ದಾಳಿ ಮಾಡಿದ್ದ.ಈ ಹಿನ್ನೆಲೆಯಲ್ಲಿ ಗೃಹ ಸಚಿವರು ಈ ಹೇಳಿಕೆ ನೀಡಿದ್ದಾರೆ.

ಮಹಿಳೆಯರ ಮೇಲಿನ ದೌರ್ಜನ್ಯ ಕುರಿತ ವಿಚಾರ ಸಂಕಿರಣದಲ್ಲಿ ಭಾಗವಹಿಸಿ ವಿವಿಧ ಮಹಿಳಾ ಸಂಘಟನೆಗಳು ಹಾಗೂ ಸರ್ಕಾರೇತರ ಸಂಸ್ಥೆಗಳ ಸಲಹೆಗಳನ್ನು ಆಲಿಸಿ ಮಾತನಾಡಿದ ಪರಮೇಶ್ವರ್‌, ರಾಜ್ಯದಲ್ಲಿ ಮಹಿಳಾ ಮತ್ತು ಮಕ್ಕಳ ಸುರಕ್ಷತೆಗೆ ಅಗತ್ಯ ಕ್ರಮ ಕೈಗೊಳ್ಳಲಾಗಿದ್ದು, ಅವರ ಮೇಲೆ ದೌರ್ಜನ್ಯ ನಡೆದರೆ ಸಹಿಸುವುದಿಲ್ಲ. ಮಹಿಳೆಯರು ಮತ್ತು ಮಕ್ಕಳು ತಮ್ಮ ಸಮಸ್ಯೆಗಳಿಗೆ ಪರಿಹಾರ ಸಿಗದಿದ್ದರೆ, ವಿಧಾನಸೌಧದ ಕಾರ್ಯಾಲಯ ಅಥವಾ ಗೃಹ ಕಚೇರಿಗೆ ಆಗಮಿಸಿ ನನ್ನನ್ನು ಭೇಟಿಯಾಗಿ ಸಮಸ್ಯೆಯನ್ನು ಹೇಳಿಕೊಳ್ಳಬಹುದು ಎಂದರು.ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್, ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್, ನಿಮ್ಹಾನ್ಸ್‌ ಸಂಸ್ಥೆಯ ಮನೋವೈದ್ಯಶಾಸ್ತ್ರ ಪ್ರಾಧ್ಯಾಪಕಿ ಡಾ.ಪ್ರಭಾ ಎಸ್‌.ಚಂದ್ರ, ವಕೀಲೆ ಸುಮಿತ್ರಾ ಆಚಾರ್ಯ ಮತ್ತಿತರರು ಉಪಸ್ಥಿತರಿದ್ದರು.

ಅನ್ ನ್ಯಾಚುರಲ್ ಸೆಕ್ಸ್ ಗೆ ಫೋರ್ಸ್ ಮಾಡಿದ ಪತಿಯ ಮ್ಯಾಟರ್ ಮೇಲೆ ದಾಳಿ ಮಾಡಿದ ಪತ್ನಿ

Posted by Vidyamaana on 2024-01-29 21:24:41 |

Share: | | | | |


ಅನ್ ನ್ಯಾಚುರಲ್ ಸೆಕ್ಸ್ ಗೆ ಫೋರ್ಸ್ ಮಾಡಿದ ಪತಿಯ ಮ್ಯಾಟರ್ ಮೇಲೆ ದಾಳಿ ಮಾಡಿದ ಪತ್ನಿ

ಲಕ್ನೋ: ಅಸ್ವಾಭಾವಿಕ ಲೈಂಗಿಕ ಕ್ರಿಯೆಗೆ ಬಲವಂತ ಪಡಿಸಿದ್ದಕ್ಕೆ ಸಿಟ್ಟಿನಲ್ಲಿ ಪತ್ನಿಯೇ ಪತಿಯ ಶಿಶ್ನವನ್ನು ಕಚ್ಚಿ ಗಾಯಗೊಳಿಸಿದ ಘಟನೆ ಉತ್ತರ ಪ್ರದೇಶದ ಹಮೀರ್‌ಪುರ ಜಿಲ್ಲೆಯಲ್ಲಿ ನಡೆದಿದೆ.‌


ತೀವ್ರ ಗಾಯಗೊಂಡಿದ್ದ ರಾಮು ನಿಶಾದ್ ಎಂಬಾತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಜ.28ರಂದು ಘಟನೆ ನಡೆದಿದ್ದು ರಾಮು ನಿಶಾದ್ ತನ್ನ ಪತ್ನಿಯೊಂದಿಗೆ ಅಸ್ವಾಭಾವಿಕ ಲೈಂಗಿಕ ಕ್ರಿಯೆ ನಡೆಸುವಂತೆ ಒತ್ತಾಯಿಸಿದ್ದ. ಇದಕ್ಕೆ ಪತ್ನಿ ಒಪ್ಪದೇ ಇದ್ದು ಇಬ್ಬರ ನಡುವೆ ಜಗಳ ಆಗಿತ್ತು. ಸಿಟ್ಟಿನಲ್ಲಿದ್ದ ಪತ್ನಿ ಪತಿಯ ಖಾಸಗಿ ಅಂಗವನ್ನು ಹಲ್ಲಿನಿಂದ ಕಚ್ಚಿದ್ದಾಳೆ. ಆಸ್ಪತ್ರೆಗೆ ದಾಖಲಾಗಿದ್ದಾರೆ. 


ಅಸ್ವಾಭಾವಿಕ ಲೈಂಗಿಕ ಕ್ರಿಯೆಗೆ ಪತಿ ಬೇಡಿಕೆ ಇಟ್ಟಿದ್ದಕ್ಕೆ ಬೇಸರಗೊಂಡು ಹೀಗೆ ಮಾಡಿರುವುದಾಗಿ ಪತ್ನಿ ಪೊಲೀಸರಿಗೆ ತಿಳಿಸಿದ್ದಾಳೆ. ಮಹಿಳೆ ವಿರುದ್ಧ ಸೆಕ್ಷನ್ 326 ರ ಅಡಿಯಲ್ಲಿ ಉದ್ದೇಶಪೂರ್ವಕ ತೀವ್ರ ಗಾಯವನ್ನು ಉಂಟುಮಾಡಿದ ಮತ್ತು ಸೆಕ್ಷನ್ 506 ರ ಅಡಿಯಲ್ಲಿ ಜೀವಕ್ಕೆ ಅಪಾಯ ಉಂಟು ಮಾಡಬಲ್ಲ ರೀತಿ ವರ್ತಿಸಿದ್ದಕ್ಕಾಗಿ ಪ್ರಕರಣ ದಾಖಲಿಸಲಾಗಿದೆ.

ಉಡುಪಿ: ತಾಯಿಯ ಶವದೊಂದಿಗೆ 3 ದಿನ ಕಳೆದಿದ್ದ ಮಾನಸಿಕ ಅಸ್ವಸ್ಥೆ ಪುತ್ರಿ ಪ್ರಗತಿ ಶೆಟ್ಟಿ ಆಸ್ಪತ್ರೆಯಲ್ಲಿ ನಿಧನ

Posted by Vidyamaana on 2024-05-19 15:28:02 |

Share: | | | | |


ಉಡುಪಿ: ತಾಯಿಯ ಶವದೊಂದಿಗೆ 3 ದಿನ ಕಳೆದಿದ್ದ ಮಾನಸಿಕ ಅಸ್ವಸ್ಥೆ ಪುತ್ರಿ ಪ್ರಗತಿ ಶೆಟ್ಟಿ ಆಸ್ಪತ್ರೆಯಲ್ಲಿ ನಿಧನ

ಉಡುಪಿ: ತಾಯಿಯ ಶವದೊಂದಿಗೆ ಮಾನಸಿಕ ಅಸ್ವಸ್ಥಳಾಗಿದ್ದ ಪುತ್ರಿ 3 ದಿನ ಕಳೆದಿರುವ ಮನ ಕಲಕುವ ಘಟನೆ ಕುಂದಾಪುರ ತಾಲೂಕಿನಲ್ಲಿ ನಡೆದಿದೆ.ತಾಯಿ ಮೃತಪಟ್ಟಿದ್ದ ಕಾರಣ ಅಹಾರ ಮತ್ತು ನೀರಿಲ್ಲದೇ ಮಗಳು ಕೂಡಾ ಅಸ್ವಸ್ಥಳಾಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಕುಂದಾಪುರ ತಾಲೂಕಿನ ಮೂಡುಗೋಪಾಡಿಯ ದಾಸನಹಾಡಿಯ ನಿವಾಸಿಗಳಾಗಿದ್ದ ತಾಯಿ ಜಯಂತಿ ಶೆಟ್ಟಿ (62) ಮತ್ತು ಮಗಳು ಪ್ರಗತಿ ಶೆಟ್ಟಿ (32) ಮೃತಪಟ್ಟವರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ತಾಯಿ ಜಯಂತಿ ಶೆಟ್ಟಿ

Recent News


Leave a Comment: