ಅಪ್ರಾಪ್ತಗೆ ಲೈಂಗಿಕ ಕಿರುಕುಳ ಆರೋಪ. ಬೆಳಿಯೂರುಕಟ್ಟೆ ನಿವಾಸಿ ಪ್ರಸಾದ್ ಬಂಧನ

ಸುದ್ದಿಗಳು News

Posted by vidyamaana on 2024-07-24 10:52:54 |

Share: | | | | |


ಅಪ್ರಾಪ್ತಗೆ ಲೈಂಗಿಕ ಕಿರುಕುಳ ಆರೋಪ. ಬೆಳಿಯೂರುಕಟ್ಟೆ ನಿವಾಸಿ ಪ್ರಸಾದ್ ಬಂಧನ

ಪುತ್ತೂರು : ಅಪ್ರಾಪ್ತಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಬೆಳಿಯೂರುಕಟ್ಟೆ ನಿವಾಸಿಯೋರ್ವನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆಂದು ತಿಳಿದು ಬಂದಿದೆ.

ಬೆಳಿಯೂರುಕಟ್ಟೆ ನಿವಾಸಿ ಅಪ್ರಾಪ್ತೆಗೆ ವಿವಾಹಿತ ಪ್ರಸಾದ್ ಎಂಬ ವ್ಯಕ್ತಿ ಲೈಂಗಿಕ ಕಿರುಕುಳ ನೀಡಿದ್ದಾಗಿ ಆರೋಪಿಸಿ ಪೊಲೀಸರಿಗೆ ದೂರು ನೀಡಿದ್ದು, ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದುಕೊಂಡಿರುವುದಾಗಿ ತಿಳಿದು ಬಂದಿದೆ.

 Share: | | | | |


ಪುತ್ತೂರು ನಗರ ಠಾಣಾ ಪೊಲೀಸರ ಕಾರ್ಯಾಚರಣೆ : ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯ ಬಂಧನ ಸಾವಿರಾರು ರೂ. ಮೌಲ್ಯದ ಗಾಂಜಾ ವಶ

Posted by Vidyamaana on 2023-03-16 15:46:34 |

Share: | | | | |


ಪುತ್ತೂರು ನಗರ ಠಾಣಾ ಪೊಲೀಸರ ಕಾರ್ಯಾಚರಣೆ : ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯ ಬಂಧನ ಸಾವಿರಾರು ರೂ. ಮೌಲ್ಯದ ಗಾಂಜಾ ವಶ

ಪುತ್ತೂರು: ಮಾದಕ ಪದಾರ್ಥ ಗಾಂಜಾವನ್ನು ಮಾರಾಟ ಮಾಡುವ ಉದ್ದೇಶದಿಂದ ತನ್ನ ಬಳಿ ಇರಿಸಿಕೊಂಡಿದ್ದ ಆರೋಪಿಯನ್ನು ಪುತ್ತೂರು ನಗರ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಮತ್ತು ಎಸ್.ಐ ಅವರ ನೇತೃತ್ವದ ಕಾರ್ಯಾಚರಣೆಯಲ್ಲಿ ಬಂಧಿಸಿದ ಘಟನೆ ಮುಕ್ರಂಪಾಡಿಯ ಬಸ್ ತಂಗುದಾಣದಲ್ಲಿ ನಡೆದಿದೆ.

ಬಂಧಿತ ಆರೋಪಿಯಿಂದ 40 ಸಾವಿರ ರೂ. ಮೌಲ್ಯದ 1.020 ಕೆ.ಜಿ ತೂಕದ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ.

ಬಲ್ನಾಡು ಗ್ರಾಮದ ಬುಳ್ಳೇರಿಕಟ್ಟೆ ನಿವಾಸಿ ಅಬೂಬಕ್ಕರ್ ಎಂಬವರಪುತ್ರ ಇಕ್ಬಾಲ್ ಪಿ ಯಾನೆ ಇಕ್ಕು(35) ಬಂಧಿತ ಆರೋಪಿ.ಆರೋಪಿಯು ಪುತ್ತೂರು ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಮುಕ್ರಂಪಾಡಿ ಎಂಬಲ್ಲಿ ಬಸ್‌ತಂಗುದಾಣವೊಂದರಲ್ಲಿ 40 ಸಾವಿರ ರೂ. ಮೌಲ್ಯದ 1.020 ಕೆ.ಜಿ ತೂಕದ ಮಾದಕ ವಸ್ತು ಗಾಂಜಾವನ್ನು ಮಾರಾಟ ಮಾಡುವ ಉದ್ದೇಶದಿಂದ ತನ್ನ ಬಳಿ ಇಟ್ಟುಕೊಂಡಿದ್ದ.

ಮಾ.16 ರಂದು ದ.ಕ ಜಿಲ್ಲಾ ಎಸ್ಪಿ ಮತ್ತು ಎಡಿಷನಲ್ ಎಸ್ಪಿ ಹಾಗೂ ಡಿವೈಎಸ್ಪಿ ಮಾರ್ಗದರ್ಶನದಲ್ಲಿ ಪುತ್ತೂರು ನಗರ ಪೊಲೀಸ್ ಠಾಣೆ ಇನ್ ಸ್ಪೆಕ್ಟರ್ ಸುನಿಲ್ ಕುಮಾರ್ ಮತ್ತು ಎಸ್.ಐ ಶ್ರೀಕಾಂತ್ ರಾಥೋಡ್ ಅವರ ನೇತೃತ್ವದಲ್ಲಿ ಎ.ಎಸ್ ಐ ಲೋಕನಾಥ್, ಹೆಡ್ ಕಾನ್ಸ್ಟೇಬಲ್ ಸ್ಕರಿಯ, ಉದಯ, ಪ್ರಶಾಂತ್ ರೈ, ಜಗದೀಶ್, ಸುಬ್ರಹ್ಮಣ್ಯ, ಸಿಬ್ಬಂದಿಗಳಾದ ರೇವತಿ, ಶ್ರೀಮಂತ್ ಅವರು ರೌಂಡ್ಸ್ ಕರ್ತವ್ಯದಲ್ಲಿರುವಾಗ ಮುಕ್ರಂಪಾಡಿಯ ಬಸ್‌ತಂಗುದಾಣದಲ್ಲಿ ಅನುಮಾನಾಸ್ಪದವಾಗಿ ನಿಂತಿದ್ದ ವ್ಯಕ್ತಿಯನ್ನು ಮತ್ತು ಆತನ ಕೈ ಚೀಲವನ್ನು ಪರಿಶೀಲನೆ ನಡೆಸಿದಾಗ ಕೈ ಚೀಲದ ಒಳಗೆ ಒಂದು ಪ್ಲಾಸ್ಟಿಕ್ ಕವರಿನಲ್ಲಿ ಗಾಂಜಾದ ಒಣಗಿದ ಹೂ, ಎಲೆ, ಮೊಗ್ಗು ಮತ್ತು ಬೀಜಗಳು ಇರುವುದು ಕಂಡು ಬಂದಿದ್ದು, ಇದರ ದಟ್ಟವಾದ ವಾಸನೆಯಿಂದ ಇದು ಮಾದಕ ವಸ್ತು ಗಾಂಜಾ ಎಂದು ಖಚಿತ ಪಡಿಸಿ ಆರೋಪಿಯನ್ನು ಬಂಧಿಸಿದ್ದರು. ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಮನೆಯಿಂದ ಕಳವು: ಸೊತ್ತು ಸಹಿತ ಆರೋಪಿ ಸೆರೆ

Posted by Vidyamaana on 2024-09-03 06:52:35 |

Share: | | | | |


ಮನೆಯಿಂದ ಕಳವು: ಸೊತ್ತು ಸಹಿತ ಆರೋಪಿ ಸೆರೆ

ಕಾರ್ಕಳ: ಮುಡಾರು ಗ್ರಾಮದ ಗುರ್ಗಾಲ್‌ ಗುಡ್ಡೆ ಎಂಬಲ್ಲಿ ಆ. 30ರಂದು ಮನೆಯೊಂದರಲ್ಲಿ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂದಿಸಿ ಮಾಳ ಗ್ರಾಮದ ಸಂತೋಷ್‌ ಟಿ.(32) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ವಾಸ್ತವ್ಯದ ಮನೆಯ ಬೀಗವನ್ನು ಮನೆಯ ಹೊರಗಡೆ ಡಬ್ಬದಲ್ಲಿ ಇರಿಸಿದ್ದ ಬೀಗದ ಕೀಯನ್ನು ಬಳಸಿ ಬಾಗಿಲು ತೆರೆದು, ಮನೆಯ ಒಳಗಡೆ ಪ್ರವೇಶಿಸಿ ಮನೆಯ ಬೆಡ್‌ ರೂಮ್‌ನಲ್ಲಿದ್ದ ಗೋದ್ರೆಜ್‌ ಲಾಕರ್‌ ಅನ್ನು ಅಲ್ಲೇ ಇರಿಸಿದ್ದ ಕೀ ಸಹಾಯದಿಂದ ತೆರೆದು ಲಾಕರ್‌ನಲ್ಲಿರಿಸಿದ್ದ ಚಿನ್ನಾಭರಣಗಳ ಪೈಕಿ ಸುಮಾರು 33 ಪವನ್‌ ತೂಕದ 10.05 ಲಕ್ಷ ರೂ.

ಟಿ.ವಿ.9 ದ.ಕ. ಜಿಲ್ಲಾ ವರದಿಗಾರ ಅಶೋಕ್ ಬಡಾವು

Posted by Vidyamaana on 2023-09-30 22:58:20 |

Share: | | | | |


ಟಿ.ವಿ.9 ದ.ಕ. ಜಿಲ್ಲಾ ವರದಿಗಾರ ಅಶೋಕ್ ಬಡಾವು

ಪುತ್ತೂರು: ಕೃಷ್ಣನಗರ ಬಡಾವು ನಿವಾಸಿ ಮೋನಪ್ಪ ಪೂಜಾರಿ(63ವ ) ಸೆ. 30ರಂದು ಅನಾರೋಗ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಮೃತರು ಪತ್ನಿ ಕಮಲ, ಮಕ್ಕಳಾದ ಯಶೋದ, ಪ್ರಮೀಳಾ ಮತ್ತು ಟಿ.ವಿ.9 ದ.ಕ. ಜಿಲ್ಲಾ ವರದಿಗಾರ ಅಶೋಕ್ ಬಡಾವು ಅವರನ್ನು ಅಗಲಿದ್ದಾರೆ.

ಇಂದು ಪ್ರಗತಿ ಗ್ರೂಪ್ ಆಫ್ ಇನ್ ಸ್ಟಿಟ್ಯೂಷನ್ ನಲ್ಲಿ ಇನ್ ವಿಕ್ಟಾ

Posted by Vidyamaana on 2024-09-01 07:16:01 |

Share: | | | | |


ಇಂದು ಪ್ರಗತಿ ಗ್ರೂಪ್ ಆಫ್ ಇನ್ ಸ್ಟಿಟ್ಯೂಷನ್ ನಲ್ಲಿ ಇನ್ ವಿಕ್ಟಾ

ಪುತ್ತೂರು: ಪ್ರಗತಿ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ಸ್ ನ ಪ್ರಮುಖ ಪ್ರಗತಿ ಕಾಲೇಜ್ ಆಫ್ ಪ್ಯಾರಾ ಮೆಡಿಕಲ್ ಸೈನ್ಸಸ್, ಪ್ರಗತಿ ಇನ್ ಸ್ಟಿಟ್ಯೂಟ್ ಆಫ್ ಅಲೈಡ್ ಹೆಲ್ತ್ ಸೈನ್ಸಸ್ ಆಶ್ರಯದಲ್ಲಿ ಇನ್ ವಿಕ್ಟಾ ದ ಕಲ್ಚರಲ್ ಆ್ಯಂಡ್ ಸ್ಫೋರ್ಟ್ಸ್ ಫೆಸ್ಟ್ 2024 ಸೆ. 1ರಂದು ಬೆಳಿಗ್ಗೆ 9ರಿಂದ ಪುತ್ತೂರು ಪುರಭವನದಲ್ಲಿ ನಡೆಯಲಿದೆ.

ಕಾರ್ಯಕ್ರಮದ ಉದ್ಘಾಟಕರಾಗಿ ಬೆಂಗಳೂರು ಆರ್.ಜಿ.ಯು.ಎಚ್.ಎಸ್.ನ ಸೆನೆಟ್ ಸದಸ್ಯ ಡಾ. ಶರಣ್ ಜೆ. ಶೆಟ್ಟಿ, ಮುಖ್ಯ ಅತಿಥಿಯಾಗಿ 3181 ರೋಟರಿ ಜಿಲ್ಲಾ ಗವರ್ನರ್ ವಿಕ್ರಂ ದತ್ತ ಭಾಗವಹಿಸಲಿದ್ದಾರೆ.



ವಿರಾಟ್ ಕೊಹ್ಲಿ ಮನೆಗೆ ಜ್ಯೂನಿಯರ್ ವಿರಾಟ್ ಆಗಮನ

Posted by Vidyamaana on 2024-02-21 07:25:10 |

Share: | | | | |


ವಿರಾಟ್ ಕೊಹ್ಲಿ ಮನೆಗೆ ಜ್ಯೂನಿಯರ್ ವಿರಾಟ್ ಆಗಮನ

ವಿರುಷ್ಕಾ ದಂಪತಿ ಪುತ್ರ ‘ಅಕಾಯ್‌’ ಹೆಸರಿನ ಅರ್ಥವೇನು ಗೊತ್ತಾ?

ಮುಂಬೈ: ಟೀಂ ಇಂಡಿಯಾ (Team India) ಕ್ರಿಕೆಟ್ ಆಟಗಾರ ವಿರಾಟ್ ಕೊಹ್ಲಿ (Virat Kohli) ಅವರ ಮನೆಗೆ ಮತ್ತೊಬ್ಬ ಅತಿಥಿಯ ಆಗಮನವಾಗಿದೆ. ಬಾಲಿವುಡ್ ನಟಿ, ವಿರಾಟ್ ಕೊಹ್ಲಿ ಅವರ ಪತ್ನಿ ಅನುಷ್ಕಾ ಶರ್ಮಾ (Anushka Sharma) ಗಂಡು ಮಗುವಿಗೆ (Boy Baby) ಜನ್ಮ ನೀಡಿದ್ದಾರೆ.

ಅನುಷ್ಕಾ ಶರ್ಮಾ ಅವರು ಇನ್‌ಸ್ಟಾಗ್ರಾಮ್‌ನಲ್ಲಿ (Instagram) ಅಭಿಮಾನಿಗಳ ಜೊತೆ ಸಿಹಿಸುದ್ದಿ ಹಂಚಿಕೊಂಡಿದ್ದಾರೆ. ಫೆ.15 ರಂದು ವಿರುಷ್ಕಾ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಈ ಸುದ್ದಿಯನ್ನು ಮಂಗಳವಾರ (ಫೆ.20) ಹಂಚಿಕೊಂಡಿದ್ದಾರೆ. ವಮಿಕಾಳ ತಮ್ಮನನ್ನು ಈ ಜಗತ್ತಿಗೆ ಸ್ವಾಗತಿಸಿದ್ದೇವೆ ಎಂದು ಎಲ್ಲರಿಗೂ ತಿಳಿಸಲು ಸಂತೋಷವಾಗುತ್ತಿದೆ. ಈ ಸಂತಸದ ಸಮಯದಲ್ಲಿ ನಿಮ್ಮ ಆಶೀರ್ವಾದ ಮತ್ತು ಶುಭಹಾರೈಕೆಗಳನ್ನು ಬಯಸುತ್ತೇವೆ. ಈ ಸಮಯದಲ್ಲಿ ನಮ್ಮ ಗೌಪತ್ಯೆಯನ್ನು ಗೌರವಿಸಲು ವಿನಂತಿಸುತ್ತೇನೆ ಎಂದು ನಟಿ ಇನ್ಸ್ಟಾದಲ್ಲಿ ಬರೆದುಕೊಂಡಿದ್ದಾರೆ. ಮಗುವಿಗೆ ಈಗಾಗಲೇ ‘ಅಕಾಯ್‌’ ಎಂದು ಹೆಸರಿಟ್ಟಿದ್ದಾರೆ. ಕೊಹ್ಲಿ ಮನೆಯಲ್ಲಿ ಸಂಭ್ರಮ ಮನೆ ಮಾಡಿದೆ.


ರಾಜ್‌ಕೋಟ್‌ನಲ್ಲಿ ಇಂಗ್ಲೆಂಡ್‌-ಭಾರತ ಟೆಸ್ಟ್‌ ಸರಣಿ ನಡೆಯುತ್ತಿದೆ. ಐದು ಸರಣಿಯಲ್ಲಿ ಈಗಾಗಲೇ ಮೂರು ಪಂದ್ಯಗಳು ನಡೆದಿವೆ. ಭಾರತ 3-2 ಅಂತರದಲ್ಲಿ ಮುನ್ನಡೆ ಕಾಯ್ದುಕೊಂಡಿದ್ದು, ಸರಣಿ ಕೈವಶಕ್ಕೆ ಇನ್ನೊಂದೇ ಹೆಜ್ಜೆ ಬಾಕಿಯಿದೆ. ಟೆಸ್ಟ್‌ ಸರಣಿಗೆ ವಿರಾಟ್‌ ಕೊಹ್ಲಿ ಅಲಭ್ಯರಾಗಿದ್ದಾರೆ.


ಅಕಾಯ್‌ ಅಂದ್ರೇನು: ವಿರುಷ್ಕಾ ದಂಪತಿ ಮಗುವಿನ ಹೆಸರು ‘ಅಕಾಯ್‌’ ಅಕಾಯ್’ (Akaay) ಎಂಬ ವಿಶಿಷ್ಟ ಮತ್ತು ವಿಶೇಷ ಹೆಸರಿನ ಸುತ್ತ ಈಗ ಚರ್ಚೆ ನಡೆಯುತ್ತಿದೆ. ಅಕಾಯ್ ಎಂಬುದು ಹಿಂದಿ ಪದ ‘ಕಾಯ’ದಿಂದ ಬಂದಿದೆ. ಇದರ ಅರ್ಥ ‘ದೇಹ’. ಅಕಾಯ್ ಎಂದರೆ, ದೈಹಿಕ ಶಕ್ತಿಗಿಂತ ಮಿಗಿಲಾದವನು. ಟರ್ಕಿಶ್ ಮೂಲದಲ್ಲಿ, ‘ಅಕಾಯ್’ ಪದಕ್ಕೆ ‘ಹೊಳೆಯುವ ಚಂದ್ರ’ ಎಂದರ್ಥ.ಮಗುವಿಗೆ ಹೆಸರಿಡಲು ಯಾವ ಮೂಲದಿಂದ ಈ ಪದವನ್ನು ತೆಗೆದುಕೊಳ್ಳಲಾಗಿದೆ ಎಂಬುದನ್ನು ವಿರುಷ್ಕಾ ದಂಪತಿ ಇನ್ನೂ ಖಚಿತಪಡಿಸಿಲ್ಲ. ವಿರಾಟ್‌ ದಂಪತಿ ಮಗುವಿನ ಬಗ್ಗೆ ಮಾಹಿತಿ ಹಂಚಿಕೊಳ್ಳುತ್ತಿದ್ದಂತೆ ಅಭಿಮಾನಿಗಳು, ಸೆಲೆಬ್ರಿಟಿಗಳು, ಕ್ರಿಕೆಟ್‌ ತಾರೆಯರು ಶುಭಹಾರೈಸಿದ್ದಾರೆ.

ಫೆ. 24, 25: ನರಿಮೊಗರಿನಲ್ಲಿ ಟಿಪಿಎಲ್ ಟೈ ಬ್ರೇಕರ್ಸ್ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾಟ

Posted by Vidyamaana on 2024-02-23 18:47:27 |

Share: | | | | |


ಫೆ. 24, 25: ನರಿಮೊಗರಿನಲ್ಲಿ ಟಿಪಿಎಲ್ ಟೈ ಬ್ರೇಕರ್ಸ್ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾಟ

ಪುತ್ತೂರು: ಪುರುಷರಕಟ್ಟೆ ಟೈ ಬ್ರೇಕರ್ಸ್ ನೇತೃತ್ವದಲ್ಲಿ 25ನೇ ವರ್ಷದ ಹೊನಲು ಬೆಳಕಿನ ಟಿಪಿಎಲ್ ಟೈ ಬ್ರೇಕರ್ಸ್ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾಟ ನರಿಮೊಗರು ಶಾಲಾ ಮೈದಾನದಲ್ಲಿ ಫೆ. 24, 25ರಂದು ನಡೆಯಲಿದೆ.

ಪ್ರಕಾಶ್ ಪುರುಷರಕಟ್ಟೆ ನೇತೃತ್ವದಲ್ಲಿ ನಡೆಯುತ್ತಿರುವ ಈ ಪಂದ್ಯಾಟ ಬೆಳ್ಳಿಹಬ್ಬ ಸಂಭ್ರಮದಲ್ಲಿದೆ. ಫೆ. 24ರಂದು ಬೆಳಿಗ್ಗೆ ಪಂದ್ಯ ಉದ್ಘಾಟನೆಗೊಳ್ಳಲಿದೆ.

8 ತಂಡಗಳ ಕ್ರಿಕೆಟ್ ಪಂದ್ಯ ಇದಾಗಿದ್ದು, ಪ್ರಥಮ 50025 ರೂ. ಹಾಗೂ ದ್ವಿತೀಯ 25025 ರೂ. ನಗದು ಬಹುಮಾನ ನೀಡಲಾಗುವುದು. ವಿಜೇತ ತಂಡದ ಮಾಲಕರಿಗೆ ಫ್ರಿಡ್ಹ್ ಬಹುಮಾನವಾಗಿ ಲಭಿಸಲಿದೆ ಎಂದು ಪ್ರಕಟಣೆ ತಿಳಿಸಿದೆ.

Recent News


Leave a Comment: