KSRTC ಬಸ್-ಕಾರು ಡಿಕ್ಕಿ, ಕ್ರೈಸ್ಥ ಧರ್ಮಗುರು ಫಾ. ಆಂಥೋಣಿ ಪೀಟರ್ ಮೃತ್ಯು..

ಸುದ್ದಿಗಳು News

Posted by vidyamaana on 2024-07-24 17:11:55 |

Share: | | | | |


KSRTC ಬಸ್-ಕಾರು ಡಿಕ್ಕಿ, ಕ್ರೈಸ್ಥ ಧರ್ಮಗುರು ಫಾ. ಆಂಥೋಣಿ ಪೀಟರ್ ಮೃತ್ಯು..

ಶಿವಮೊಗ್ಗ : ಕೆಎಸ್‌ಆರ್‌ಟಿಸಿ ಬಸ್‌ ಮತ್ತು ಕಾರು ಡಿಕ್ಕಿಯಾದ ಪರಿಣಾಮ ಕ್ರೈಸ್ತ ಧರ್ಮಗುರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಶಿವಮೊಗ್ಗ ಸಮೀಪ ಸವಳಂಗ ಚಿನ್ನಿಕಟ್ಟೆ ಬಳಿ ಮಂಗಳವಾರ ಮಧ್ಯಾಹ್ನ ಸಂಭವಿಸಿದೆ.ಕೆಎಸ್‌ಆರ್‌ಟಿಸಿ ಬಸ್ಸು ಹಾನಗಲ್‌ನಿಂದ ಶಿವಮೊಗ್ಗ ಕಡೆಗೆ ಹೋಗುತ್ತಿತ್ತುಎನ್ನಲಾಗಿದೆ.

ಕ್ರೈಸ್ತ ಧರ್ಮಗುರು ಇದ್ದ ಕಾರು ಶಿವಮೊಗ್ಗ ಕಡೆಯಿಂದ ತೆರಳುತ್ತಿತ್ತು. ಚಿನ್ನಿಕಟ್ಟೆ ಬಳಿ ಕಾರು, ಬಸ್ಸು ಮುಖಾಮುಖಿ ಡಿಕ್ಕಿಯಾಗಿವೆ. ಅಪಘಾತದ ರಭಸಕ್ಕೆ ಕಾರು ರಸ್ತೆ ಪಕ್ಕದ ಜಮೀನಿಗೆ ಉರುಳಿ ಬಿದ್ದಿದ್ದು ಸಂಪೂರ್ಣ ನುಜ್ಜುಗುಜ್ಜಾಗಿದೆ. ಕಾರಿನಲ್ಲಿದ್ದ ಶಿಕಾರಿಪುರ ಧರ್ಮಕೇಂದ್ರದ ಧರ್ಮಗುರು ಆಂಥೋಣಿ ಪೀಟರ್‌ ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದ್ದು ನ್ಯಾಮತಿ ಠಾಣಾ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ ಪ್ರಕರಣ ದಾಖಲು ಮಾಡಿದ್ದಾರೆ.

 Share: | | | | |


BIG NEWS: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ; ಐವರು ಸಂತ್ರಸ್ತೆಯರು ಎಸ್ ಐಟಿ ವಿಚಾರಣೆಗೆ ಹಾಜರು

Posted by Vidyamaana on 2024-04-29 20:10:54 |

Share: | | | | |


BIG NEWS: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ; ಐವರು ಸಂತ್ರಸ್ತೆಯರು ಎಸ್ ಐಟಿ ವಿಚಾರಣೆಗೆ ಹಾಜರು

ಹಾಸನ: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ ಐಟಿ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದಾರೆ.ಪ್ರಕರಣ ಸಂಬಂಧ ಸಂತ್ರಸ್ತೆಯರ ದೂರು ಹಿನ್ನೆಲೆಯಲ್ಲಿ ಪ್ರಜ್ವಲ್ ರೇವಣ್ಣ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ವಿಡಿಯೋ ಕೇಸ್ ಗೆ ಸಂಬಂಧಿಸಿದಂತೆ ಎಸ್ ಐಟಿ ತಂಡ ತನಿಖೆ ತೀವ್ರಗೊಳಿಸಿದೆ.

ಚಂದ್ರಯಾನ-3ರ ಲಾಂಚ್ ಪ್ಯಾಡ್ ನಿರ್ಮಿಸಿದ್ದ ಟೆಕ್ನಿಷಿಯನ್ ಗಳ ಬದುಕು ಕ್ರ್ಯಾಶ್ ಲ್ಯಾಂಡಿಂಗ್!

Posted by Vidyamaana on 2023-09-20 12:23:59 |

Share: | | | | |


ಚಂದ್ರಯಾನ-3ರ ಲಾಂಚ್ ಪ್ಯಾಡ್ ನಿರ್ಮಿಸಿದ್ದ ಟೆಕ್ನಿಷಿಯನ್ ಗಳ ಬದುಕು ಕ್ರ್ಯಾಶ್ ಲ್ಯಾಂಡಿಂಗ್!

ನವದೆಹಲಿ: ಚಂದ್ರಯಾನ -3ರ ಯೋಜನೆಯಲ್ಲಿ ತನ್ನ ಸೇವೆ ನೀಡಿದ್ದ ಟೆಕ್ನಿಶಿಯನ್‌ ಒಬ್ಬರಿಗೆ ಸೂಕ್ತ ಸಂಬಳ ಸಿಗದೆ  ರಸ್ತೆಬದಿ ಇಡ್ಲಿ ಮಾರುವ ಸ್ಥಿತಿಗೆ ತಲುಪಿದ್ದಾರೆ ಎಂದು ವರದಿ ಮಾಡಿದ್ದ ʼಬಿಬಿಸಿʼ ಸುದ್ದಿಯನ್ನು ಪತ್ರಿಕಾ ಮಾಹಿತಿ ಬ್ಯೂರೋ ಫ್ಯಾಕ್ಟ್‌ ಚೆಕ್‌ ಮಾಡಿದೆ.



ಯಾವ ಸುದ್ದಿಯಿದು?


ಇಸ್ರೋ ಚಂದ್ರಯಾನ-3ರ ಯಶಸ್ಸಿನಲ್ಲಿ  ತಂತ್ರಜ್ಞರಾಗಿ ಕೆಲಸ ಮಾಡಿದ್ದ ಮಧ್ಯಪ್ರದೇಶದ ಹರ್ದಾ ಜಿಲ್ಲೆಯ ದೀಪಕ್ ಕುಮಾರ್ ಉಪ್ರಾರಿಯಾ ಅವರಿಂದು ಜೀವನ ಸಾಗಿಸಲು ರಸ್ತೆಬದಿಯಲ್ಲಿ ಇಡ್ಲಿ ಮಾರುವ ಸ್ಥಿತಿಗೆ ತಲುಪಿದ್ದಾರೆ ಎಂದು ವರದಿ ತಿಳಿಸಿತ್ತು.


ಯಾರು ಈ ದೀಪಕ್ ಕುಮಾರ್?: 


ಉಪ್ರಾರಿಯಾ ಅವರು ಮಧ್ಯಪ್ರದೇಶದ ಹರ್ದಾ ಜಿಲ್ಲೆಯವರು. 2012ರಲ್ಲಿ ಖಾಸಗಿ ಕಂಪನಿಯೊಂದರ ಕೆಲಸ ಬಿಟ್ಟು ₹ 8,000 ಸಂಬಳಕ್ಕೆ ಎಚ್‌ಇಸಿ(ಹೆವಿ ಇಂಜಿನಿಯರಿಂಗ್ ಕಾರ್ಪೊರೇಷನ್ ಲಿಮಿಟೆಡ್) ಕಂಪನಿಗೆ ಸೇರಿದ್ದರು ಎಂದು ವರದಿಯಲ್ಲಿ ಹೇಳಲಾಗಿತ್ತು.ಸರ್ಕಾರಿ ಕಂಪೆನಿಯಾದ ಹೆವಿ ಇಂಜಿನಿಯರಿಂಗ್ ಕಾರ್ಪೊರೇಷನ್ ಲಿಮಿಟೆಡ್ ಇಸ್ರೋದ ಚಂದ್ರಯಾನ-3ರ  ಉಡಾವಣಾ ಪ್ಯಾಡ್ ನಿರ್ಮಿಸಿದೆ. ಈ ಲಾಂಚ್‌ ಪ್ಯಾಡ್‌ ನಿರ್ಮಿಸಲು ಸುಮಾರು 2,800 ಟೆಕ್ನಿಶಿಯನ್‌ ಗಳು ಹಗಲು ಇರುಳು ಶ್ರಮವಹಿಸಿದ್ದಾರೆ. ಇದರಲ್ಲಿ ದೀಪಕ್ ಕುಮಾರ್ ಅವರು ಕೂಡ ಒಬ್ಬರಾಗಿದ್ದರು ಎಂದು ʼಬಿಬಿಸಿ ಹಿಂದಿʼ ಫೋಟೋ ಸಹಿತ ವರದಿ ಮಾಡಿತ್ತು.



“ಇಸ್ರೋ ಲಾಂಚ್‌ಪ್ಯಾಡ್ ನಿರ್ಮಿಸುತ್ತಿರುವ ಎಚ್‌ಇಸಿ ಜನರು ಟೀ, ಇಡ್ಲಿ ಮಾರುತ್ತಿದ್ದಾರೆ, 18 ತಿಂಗಳಿಂದ ಸಂಬಳ ಬಂದಿಲ್ಲ: ಗ್ರೌಂಡ್ ರಿಪೋರ್ಟ್” ಹೆಡ್‌ ಲೈನ್‌ ಹಾಕಿ ವರದಿ ಮಾಡಿತ್ತು. ಈ ಕುರಿತು ಪತ್ರಿಕಾ ಮಾಹಿತಿ ಬ್ಯೂರೋ ಫ್ಯಾಕ್ಟ್‌ ಚೆಕ್ ಮಾಡಿದ್ದು, ಈ ಸುದ್ದಿಯ ಹೆಡ್‌ ಲೈನ್‌ ಗೊಂದಲಮಯವಾಗಿದೆʼ ಎಂದಿದೆ.‌


ಹೆವಿ ಇಂಜಿನಿಯರಿಂಗ್ ಕಾರ್ಪೊರೇಷನ್ ಲಿಮಿಟೆಡ್ ಗೆ ಚಂದ್ರಯಾನ-3ರ ಯಾವುದೇ ಘಟಕಗಳ ತಯಾರಿಕೆಯನ್ನು ವಹಿಸಿಕೊಟ್ಟಿಲ್ಲ.


2003 ಮತ್ತು 2010 ರ ನಡುವೆ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) ಗೆ ಕೆಲವು ಮೂಲಸೌಕರ್ಯಗಳನ್ನು ಎಚ್‌ಇಸಿ ಪೂರೈಸಿದೆ ಎಂದು ಸರ್ಕಾರದ ಪಿಐಬಿ ಫ್ಯಾಕ್ಟ್‌ ಚೆಕ್‌ ಮಾಡಿ ಟ್ವೀಟ್‌ ಮಾಡಿದೆ.


ಕಂಪನಿಗಳ ಕಾಯಿದೆಯಡಿ ನೋಂದಾಯಿಸಲಾದ ಎಚ್‌ಇಸಿ, ಪ್ರತ್ಯೇಕ ಕಾನೂನು ಘಟಕವಾಗಿದೆ ಮತ್ತು BHEL ನಂತಹ ತನ್ನದೇ ಆದ ಸಂಪನ್ಮೂಲಗಳನ್ನು ಅದು ಉತ್ಪಾದಿಸುತ್ತದೆ ಎಂದು ಈ ಸಂಬಂಧ  ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಹಿರಿಯ ಸಲಹೆಗಾರ ಕಾಂಚನ್ ಗುಪ್ತಾ ಟ್ವೀಟ್‌ ಮಾಡಿದ್ದಾರೆ.


ಸಂಸತ್ತಿನಲ್ಲಿ ಬೃಹತ್ ಕೈಗಾರಿಕೆಗಳ ರಾಜ್ಯ ಸಚಿವ ಕ್ರಿಶನ್ ಪಾಲ್ ಗುರ್ಜರ್ ಚಂದ್ರಯಾನ -3ಕ್ಕೆ ಸಂಬಂಧಿಸಿದ ಯಾವುದೇ ಕೆಲಸವನ್ನು ಎಚ್‌ಇಸಿಗೆ ನಿಯೋಜಿಸಿಲ್ಲ ಎಂದಿರುವ ದಾಖಲೆಗಳ ಸ್ಕ್ರೀನ್‌ ಶಾಟ್‌ ಗಳನ್ನು ಕಾಂಚನ್ ಗುಪ್ತಾ ಹಂಚಿಕೊಂಡಿದ್ದಾರೆ.

ಚಂದ್ರಯಾನದ ಯಶಸ್ಸಿಗೆ ಮಸೀದಿ ಗಳಲ್ಲಿ ಪ್ರಾರ್ಥಿಸಲು ರಾಜ್ಯ ದಾರಿಮಿ ಉಲಮಾ ಒಕ್ಕೂಟ ಕರೆ

Posted by Vidyamaana on 2023-08-23 08:47:08 |

Share: | | | | |


ಚಂದ್ರಯಾನದ ಯಶಸ್ಸಿಗೆ ಮಸೀದಿ ಗಳಲ್ಲಿ ಪ್ರಾರ್ಥಿಸಲು ರಾಜ್ಯ ದಾರಿಮಿ ಉಲಮಾ ಒಕ್ಕೂಟ ಕರೆ

ಮಂಗಳೂರು :ದೇಶಕ್ಕೆ ದೇಶವೇ ಕಾತರದಿಂದ ಕಾಯುತ್ತಿರುವ ಚಂದ್ರಯಾನ -3 ರ ವಿಕ್ರಮ್ ಲ್ಯಾಂಡರ್ ಸುರಕ್ಷಿತವಾಗಿ ಗುರಿ ತಲುಪುವಂತಾಗಳು ಪ್ರತೀ ಮಸೀದಿಗಳಲ್ಲಿ ಇಂದು ಪ್ರಾರ್ಥನೆ ನಡೆಸುವಂತೆ ರಾಜ್ಯ ದಾರಿಮಿ ಒಕ್ಕೂಟ ಕರೆ ನೀಡಿದೆ.

ದೇಶದ ಕೀರ್ತಿ ಬಾನೆತ್ತರಕ್ಕೇರಿ ಆ ಮೂಲಕ ದೇಶದ ಪ್ರಜೆಗಳು ಅಭಿಮಾನ ಪಡುವಂತಾಗಲು ಚಂದ್ರಯಾನ ಯಶಸ್ಸು ಕಾಣ ಬೇಕಿರುವುದು ನಮ್ಮೆಲ್ಲರ ಅಗತ್ಯವಾಗಿದೆ.

ಇದಕ್ಕಾಗಿ ರಾತ್ರಿ ಹಗಲೆನ್ನದೇ ದುಡಿದ ವಿಜ್ಞಾನಿಗಳ ,ಸಿಬ್ಬಂದಿ ವರ್ಗದವರ ಒಳಿತಿಗಾಗಿ ಕೂಡಾ  ಪ್ರಾರ್ಥನೆ ನಡೆಸಲು ಸಂಘಟನೆ ಕರೆ ನೀಡಿದೆ.

ಉಳ್ಳಾಲ : ಕೊಂಡಾಣದ ಭಂಡಾರಮನೆ ಧ್ವಂಸ ಪ್ರಕರಣ

Posted by Vidyamaana on 2024-03-04 04:25:40 |

Share: | | | | |


ಉಳ್ಳಾಲ : ಕೊಂಡಾಣದ ಭಂಡಾರಮನೆ ಧ್ವಂಸ ಪ್ರಕರಣ

ಉಳ್ಳಾಲ, ಮಾ.4: ಕೋಟೆಕಾರು ಗ್ರಾಮದ ಕಾರಣಿಕ ಕೊಂಡಾಣ ಕ್ಷೇತ್ರದಲ್ಲಿ ಶ್ರೀ ಪಿಲಿಚಾಮುಂಡಿ, ಬಂಟ, ವೈದ್ಯನಾಥ ಪರಿವಾರ ದೈವಗಳಿಗೆ ನಿರ್ಮಾಣಗೊಳ್ಳುತ್ತಿದ್ದ ನೂತನ ಭಂಡಾರಮನೆಯ ಕಟ್ಟಡವನ್ನ ಜೆಸಿಬಿಯಲ್ಲಿ ನೆಲಸಮಗೊಳಿಸಿದ ಘಟನೆ ಬಗ್ಗೆ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಕೊಂಡಾಣ ಕ್ಷೇತ್ರದ ಗುತ್ತಿನ ಗುರಿಕಾರ ಮುತ್ತಣ್ಣ ಶೆಟ್ಟಿ ಮತ್ತು ಪಟಾಲಮನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿಗಳು ತಾವೇ ನಡೆಸಿರೋದಾಗಿ ಒಪ್ಪಿಕೊಂಡಿದ್ದಾರೆ. 

ಭಾನುವಾರ ಬೆಳಗ್ಗೆ ಮುಜರಾಯಿ ಇಲಾಖೆಗೆ ಒಳಪಟ್ಟ ಕೊಂಡಾಣ ಕ್ಷೇತ್ರದಲ್ಲಿ ನಿರ್ಮಾಣ ಹಂತದಲ್ಲಿದ್ದ ಭಂಡಾರ ಮನೆಯನ್ನ ಕಿಡಿಗೇಡಿಗಳು ಜೆಸಿಬಿ ಬಳಸಿ ಕೆಡವಿ ಹಾಕಿದ್ದರು. ಪ್ರಕರಣ ಸಂಬಂಧ ಕೋಟೆಕಾರು ಪಟ್ಟಣ ಪಂಚಾಯತ್ ಮುಖ್ಯ ಅಧಿಕಾರಿ ಆನಂದ್ ನೀಡಿದ ದೂರಿನ ಮೇಲೆ ಉಳ್ಳಾಲ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದ್ದು, ಪೊಲೀಸರು ಆರೋಪಿಗಳಾದ ಮುತ್ತಣ್ಣ ಶೆಟ್ಟಿ, ಧೀರಜ್ ಮತ್ತು ಶಿವರಾಜ್ ಎಂಬವರನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿಗಳು ಪೊಲೀಸರ ವಿಚಾರಣೆಯಲ್ಲಿ ತಾವೇ ದುಷ್ಕೃತ್ಯ ಎಸಗಿರುವುದಾಗಿ ಒಪ್ಪಿಕೊಂಡಿದ್ದಾರೆ. ಕೊಂಡಾಣ ಕ್ಷೇತ್ರವು 16 ಗುರಿಕಾರರನ್ನು ಹೊಂದಿದೆ. ಅನಧಿಕೃತ ಮತ್ತು ಯಾವುದೇ ಅನುಮತಿಯಿಲ್ಲದೆ ನಿರ್ಮಿಸುತ್ತಿರುವ ಹೊಸ ಭಂಡಾರ ಮನೆಗೆ ಕ್ಷೇತ್ರಕ್ಕೆ ಸಂಬಂಧಿಸಿದ ಯಾವುದೇ ಗುರಿಕಾರರು ಒಪ್ಪಿಗೆ ನೀಡಲಿಲ್ಲ. ಈ ಬಗ್ಗೆ ಈಗಾಗಲೇ ಮಂಗಳೂರು ಸಹಾಯಕ ಆಯುಕ್ತ ಹಾಗೂ ತಹಶೀಲ್ದಾರ್‌ಗೆ ದೂರು ನೀಡಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಹೀಗಾಗಿ ಕಟ್ಟಡವನ್ನು ತಾವೇ ಕೆಡವಲು ನಿರ್ಧರಿಸಿರುವುದಾಗಿ ಬಂಧಿತ ಆರೋಪಿಗಳು ಪೊಲೀಸರಿಗೆ ಹೇಳಿಕೆ ನೀಡಿದ್ದಾರೆಂದು ತಿಳಿದುಬಂದಿದೆ. ಕೊಂಡಾಣ ಕ್ಷೇತ್ರಕ್ಕೆ ಸಂಬಂಧಿಸಿದ ಪುರಾಣದ ಭಂಡಾರಮನೆಯು ಖಾಸಗಿ ಗುತ್ತಿನ ಮನೆಯ ಒಡೆತನದಲ್ಲಿದ್ದು ಅದರಲ್ಲಿ ಕ್ಷೇತ್ರದ ದೈವಗಳ ಹದಿನೈದು ಕೋಟಿಗೂ ಮಿಕ್ಕಿ ಬೆಲೆಬಾಳುವ ಒಡವೆಗಳಿವೆ. ಭಂಡಾರ ಮನೆಯನ್ನ ಮುಜರಾಯಿ ಇಲಾಖೆಗೆ ಸೇರಿಸಲು ಕ್ಷೇತ್ರದ ವ್ಯವಸ್ಥಾಪನಾ ಸಮಿತಿಯ ನಿಕಟಪೂರ್ವ ಅಧ್ಯಕ್ಷರಾದ ಕೃಷ್ಣ ಶೆಟ್ಟಿ ತಾಮಾರ್ ಅವರು ಪ್ರಯತ್ನಿಸಿದ್ದರು. ಆದರೆ ಇದಕ್ಕೆ ಭಂಡಾರ ಮನೆಯವರು ಸಮ್ಮತಿ ನೀಡಿರಲಿಲ್ಲ. ಕ್ಷೇತ್ರದ ದೈವಗಳಿಗೆ ಬೇರೆಯೇ ಭಂಡಾರಮನೆ ನಿರ್ಮಾಣವಾಗಬೇಕೆಂದು‌ ಪ್ರಶ್ನಾ ಚಿಂತನೆಯಲ್ಲಿ ಕಂಡುಬಂದ ಕಾರಣ ಕ್ಷೇತ್ರಕ್ಕೆ ತಾಗಿಕೊಂಡ ಜಮೀನನ್ನು ವ್ಯವಸ್ಥಾಪನಾ ಸಮಿತಿಯವರು ಖರೀದಿಸಿದ್ದರು. ಆ ಜಾಗದಲ್ಲಿ ಕಳೆದ ಜನವರಿ 8 ರಂದು ಕ್ಷೇತ್ರದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೃಷ್ಣ ಶೆಟ್ಟಿ ತಾಮಾರ್ ಮುಂದಾಳುತ್ವದಲ್ಲಿ ನೂತನ ಭಂಡಾರ ಮನೆಗೆ ಶಿಲಾನ್ಯಾಸ ಮಾಡಲಾಗಿತ್ತು. ದಾನಿಗಳ ದೇಣಿಗೆಯಿಂದ ಭಂಡಾರ ಮನೆಯ ಎಂಭತ್ತು ಶೇಕಡಾ ಕಾಮಗಾರಿ ಸಂಪೂರ್ಣಗೊಂಡಿತ್ತು. ವ್ಯವಸ್ಥಾಪನಾ ಸಮಿತಿಯ ಅಧಿಕಾರಾವಧಿ ಮುಗಿದಿದ್ದು, ಸಮಿತಿ ಅಧ್ಯಕ್ಷರಾದ ಕೃಷ್ಣ ಶೆಟ್ಟಿ ತಾಮಾರ್ ಅವರು ಕಳೆದ ಎರಡು ದಿವಸಗಳ ಹಿಂದಷ್ಟೇ ಅಧಿಕಾರವನ್ನ ಇಲಾಖೆಗೆ ಹಸ್ತಾಂತರಿಸಿದ್ದರು. ಕೃಷ್ಣ ಶೆಟ್ಟಿ ಅಧ್ಯಕ್ಷ ಸ್ಥಾನದಿಂದ ಮುಕ್ತರಾಗುತ್ತಿದ್ದಂತೆ ಭಾನುವಾರ ಬೆಳಗ್ಗೆ ಕಿಡಿಗೇಡಿಗಳು ಜೆಸಿಬಿಯಿಂದ ಏಕಾಏಕಿ ನಿರ್ಮಾಣ ಹಂತದ ಭಂಡಾರ ಮನೆಯನ್ನ ನೆಲಸಮ ಮಾಡಿದ್ದರು.

ಕ್ಷೇತ್ರದ ಭಕ್ತರಾದ ಕೆ.ಪಿ ಸುರೇಶ್ ಅವರು ನಾವು ಕಾನೂನು ಬಧ್ದವಾಗಿಯೇ ಭಂಡಾರ ಮನೆ ನಿರ್ಮಿಸುತ್ತಿದ್ದು , ಭಂಡಾರ ಮನೆ ಒಡೆಯಲು ಕ್ಷೇತ್ರದ ಗುರಿಕಾರರಾದ ಮುತ್ತಣ್ಣ ಶೆಟ್ಟಿಯೇ ಕಾರಣ ಎಂದು ಬೊಟ್ಟು ಮಾಡಿದ್ದರು. ಗುತ್ತು ಮತ್ತು ಗತ್ತಿನ ಒಣ ಪ್ರತಿಷ್ಠೆಯಲ್ಲಿ ಪುರಾಣ ಪ್ರಸಿದ್ಧ ಕಾರಣಿಕ ಕ್ಷೇತ್ರ ಕೊಂಡಾಣದ ಮಾನವನ್ನು ಊರ ಪ್ರಮುಖರೇ ಸೇರಿಕೊಂಡು ಹರಾಜು ಮಾಡುವಂತಾಗಿದೆ.

ಮೇ 13 ಮತ ಏಣಿಕೆ | ಸುರತ್ಕಲ್ ಎನ್ಐಟಿಕೆಯಲ್ಲಿ ಬಿಗಿ ಭದ್ರತೆ: ದ.ಕ. ಜಿಲ್ಲಾಧಿಕಾರಿ ರವಿಕುಮಾರ್

Posted by Vidyamaana on 2023-05-13 01:53:50 |

Share: | | | | |


ಮೇ 13 ಮತ ಏಣಿಕೆ | ಸುರತ್ಕಲ್ ಎನ್ಐಟಿಕೆಯಲ್ಲಿ ಬಿಗಿ ಭದ್ರತೆ: ದ.ಕ. ಜಿಲ್ಲಾಧಿಕಾರಿ ರವಿಕುಮಾರ್

ಮಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಯ ಮತ ಎಣಿಕೆ ಕಾರ್ಯ ಮೇ 13ರಂದು ಆರಂಭವಾಗಲಿದ್ದು, ಸುರತ್ಕಲ್ ಎನ್ ಐಟಿಕೆಯಲ್ಲಿ ಬಿಗಿ ಭದ್ರತೆ ಏರ್ಪಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ರವಿಕುಮಾರ್ ತಿಳಿಸಿದ್ದಾರೆ.ಈ ಬಗ್ಗೆ ಎನ್ಐಟಿಕೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೇ 10 ರಂದು ನಡೆದ ಚುನಾವಣೆಯಲ್ಲಿ ಜಿಲ್ಲೆಯಲ್ಲಿ 77.39% ಮತದಾನವಾಗಿದೆ. ಅಂಚೆ ಮತಗಳ ಎಣಿಕೆ ಬೆಳಿಗ್ಗೆ 8 ಗಂಟೆಗೆ ಪ್ರಾರಂಭವಾಗಲಿದ್ದು, ನಂತರ ಇವಿಎಂಗಳ ಎಣಿಕೆ ಬೆಳಿಗ್ಗೆ 8:30 ಕ್ಕೆ ನಡೆಯಲಿದೆ.ಅಭ್ಯರ್ಥಿಗಳು ಅಥವಾ ಅವರ ಏಜೆಂಟರು ರಿಟರ್ನಿಂಗ್ ಅಧಿಕಾರಿಗಳ ಪಕ್ಕದಲ್ಲಿ ಕುಳಿತುಕೊಳ್ಳಲು ಸಾಕಷ್ಟು ವ್ಯವಸ್ಥೆ ಮಾಡಲಾಗಿದೆ. ಮತ ಎಣಿಕೆ ಕೇಂದ್ರದ ಪ್ರತಿ ಟೇಬಲ್ ನ ಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದ್ದು, ಯಾವುದೇ ಅಕ್ರಮಗಳು ನಡೆಯದಂತೆ ಕೇಂದ್ರ ಮತ್ತು ರಾಜ್ಯ ಚುನಾವಣಾ ಆಯೋಗಗಳು ಮೇಲ್ವಿಚಾರಣೆ ನಡೆಸಲಿವೆ ಎಂದು ಜಿಲ್ಲಾಧಿಕಾರಿ ಹೇಳಿದರು.

ಮತ ಎಣಿಕೆ ಕೇಂದ್ರದಲ್ಲಿ 300 ಹೆಡ್ ಕಾನ್ಸ್ಟೇಬಲ್ ಗಳು, 14 ಇನ್ಸ್ಪೆಕ್ಟರ್ ಗಳು , 2 ಡಿಸಿಪಿಗಳು, 400 ಸಿವಿಲ್ ಪೊಲೀಸ್ ಸಿಬ್ಬಂದಿ, 39 ಸಹಾಯಕ ಸಬ್ಇನ್ಸ್ಪೆಕ್ಟರ್ ಗಳು, 200 ಗೃಹರಕ್ಷಕರು, 4 ತುಕಡಿಗಳು, ಕೆಎಸ್ ಆರ್ ಪಿ ತುಕಡಿಗಳು ಮತ್ತು ಸಿಎಪಿಎಫ್ ತುಕಡಿಗಳನ್ನು ನಿಯೋಜಿಸಲಾಗಿದೆ ಎಂದು ಹೇಳಿದ್ದಾರೆ.

ನಾನು ರಾಜಕೀಯಕ್ಕೆ ಬಂದಿರುವುದು ಬಡವರ ಸೇವೆ ಮಾಡಲು:ಅಶೋಕ್ ರೈ

Posted by Vidyamaana on 2023-05-03 10:05:42 |

Share: | | | | |


ನಾನು ರಾಜಕೀಯಕ್ಕೆ ಬಂದಿರುವುದು ಬಡವರ ಸೇವೆ ಮಾಡಲು:ಅಶೋಕ್ ರೈ

ಪುತ್ತೂರು: ನಾನು ರಾಜಕೀಯಕ್ಕೆ ಬಂದ ಮೇಲೆ ಯಾರನ್ನೂ ವೈಯುಕ್ತಿಕವಾಗಿ ದೂಷಿಸುವ ಕೆಲಸವನ್ನು ಮಾಡಿಲ್ಲ, ಈಗಲೂ ಮಾಡಿಲ್ಲ, ಮುಂದೆಯೂ  ಮಾಡುವುದಿಲ್ಲ, ನಾನು ರಾಜಕೀಯಕ್ಕೆ ಬಂದಿರುವುದು ಬಡವರ ಸೇವೆ ಮಾಡಲು ಕ್ಷೆತ್ರವನ್ನು ಅಭಿವೃದ್ದಿ ಮಡುವುದಕ್ಕೋಸ್ಕರವಾಗಿದ್ದು ನಾನು ಮಾಡಿದ ಭಾಷಣವನ್ನು ತಿರುಚುವ ಕೆಲಸವನ್ನು ಬಿಜೆಪಿಗರು ತೆರೆಮರೆಯಲ್ಲಿ ಮಾಡುತ್ತಿದ್ದು ನೀವು ಆ ಕೆಲಸವನ್ನು ಬಿಟ್ಟು ನೀವು ಅಭಿವೃದ್ದಿ ಕೆಲಸ ಮಡಿದ್ದರೆ ಅದನ್ನು ಚರ್ಚಿಸುವ ಬನ್ನಿ ಎಂದು ಬಿಜೆಪಿಗೆ ಪುತ್ತೂರು ಕಾಂಗ್ರೆಸ್ ಅಭ್ಯರ್ಥಿ ಸವಾಲು ಹಾಕಿದ್ದಾರೆ.

ವಿಟ್ಲದ ಚಂದಳಿಕೆಯಲ್ಲಿ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು ಪುತ್ತೂರಿನಲ್ಲಿ ಕಳೆದ ಐದು ವರ್ಷದಿಂದ ಯಾವುದೇ ಅಭಿವೃದ್ದಿ ಕೆಲಸಗಳು ನಡೆದಿಲ್ಲ. ಕಳೆದ ಚುನಾವಣೆಯ ಸಮಯದಲ್ಲಿ ಬಿಜೆಪಿ ನೀಡಿದ ಆಶ್ವಾಸನೆ ಈಡೇರಿಸಿಲ್ಲ. ಪುತ್ತೂರು ನಗರದಲ್ಲಿ ಒಳಚರಂಡಿ ವ್ಯವಸ್ಥೆ ಮಾಡುವುದಾಗಿ ಹೇಳಿದ್ದರು ಮಾಡಿಲ್ಲ, ಪುತ್ತೂರಿನಲ್ಲಿ ರಿಂಗ್ ರೋಡ್ ಮಾಡುವುದಾಗಿ ಹೇಳಿದ್ದರು, ಬ್ರಹ್ಮನಗರದಲ್ಲಿ ಫ್ಲ್ಯಾಟ್ ನಿರ್ಮಿಸಿವುದಾಗಿ ಹೇಳಿದ್ದರು, ಬಹುಗ್ರಾಮ ಕುಡಿಯುವ ನೀರಿನ ಯೋಜನೆಯನ್ನು ರೂಪಿಸುವುದಾಗಿ ಹೇಳಿದ್ದರು, ವಿಟ್ಲದಲ್ಲಿ ಸಮರ್ಪಕ ಒಳಚರಂಡಿ ವ್ಯವಸ್ಥೆ ಮಾಡುವುದಾಗಿ ಹೇಳಿದ್ದರು, ಉಪ್ಪಿನಂಗಡಿಯಲ್ಲಿ ಹೈಟೆಕ್ ಬಸ್ ನಿಲ್ದಾಣ ಮಾಡುವುದಾಗಿ ಮಾತುಕೊಟ್ಟಿದ್ದರು, ಮನೆ ಇಲ್ಲದ ಬಡವರಿಗೆ ಮನೆ ನಿರ್ಮಾಣ ಮಾಡುವುದಾಗಿ ಹೇಳಿದ್ದರು ಇದರಲ್ಲಿ ಯಾವುದನ್ನಾದರೂ ಮಾಡಿದ್ದಾರ? ಎಂದು ಪ್ರಶ್ನಿಸಿದ ಅಶೋಕ್ ರೈ ರಸ್ತೆಗೆ ಅಷ್ಟು ಲಕ್ಷ ಅನುದಾನ ಬಿಡುಗಡೆಯಾಗಿದೆ ಎಂದು ಫ್ಲೆಕ್ಸ್ ಹಾಕಿಸಿ ಕಳಪೆ ಕಾಮಗಾರಿ ನಡೆಸಿ ಅದರ ಮೂಲಕ ೬೦ % ಕಮಿಷನ್ ಹೊಡೆದದ್ದನ್ನು ಬಿಟ್ಟರೆ ಏನೂ ಮಾಡಿಲ್ಲ ಎಂದು ಹೇಳಿದರು.

ಸಿದ್ದರಾಮಯ್ಯ ಸರಕಾರದ ಅವಧಿಯಲ್ಲಿ ವರ್ಷಕ್ಕೆ ನೂರಾರು ಮನೆಗಳನ್ನು ಬಡವರಿಗೆ ನೀಡಲಾಗುತ್ತಿತ್ತು ಆದರೆ ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದ ಬಳಿಕ ಮನೆ ನೀಡಿಲ್ಲ. ಶಾಲಾ ಮಕ್ಕಳ ಶೂ ಭಾಗ್ಯ, ಕ್ಷೀರ ಭಾಗ್ಯ, ಮೊಟ್ಟೆ ಭಾಗ್ಯ , ಇಂದಿರಾ ಕ್ಯಾಂಟೀನ್ ಎಲ್ಲವನ್ನೂ ಬಂದ್ ಮಡಿದ್ದೇ ಬಿಜೆಪಿ ಸರಕಾರದ ಸಾಧನೆಯಾಗಿದೆ. ಕಾಂಗ್ರೆಸ್ ಸರಕಾರ ಬಡವರಿಗೆ ನೆರವು ನೀಡುವ ಯೋಜನೆಯನ್ನು ಕಾರ್ಯರೂಪಕ್ಕೆ ತಂದಿದ್ದು ಅದೆಲ್ಲವನ್ನೂ ಬಿಜೆಪಿ ಕೈ ಬಿಟ್ಟು ಕೇವಲ ಭಾಷಣದಲ್ಲಿ ಮಾತ್ರ ಬಡವರ ಬಾಯಿಗೆ ಸಿಹಿ ಹಂಚುವ ಕೆಲಸವನ್ನು ಮಾಡಿದೆ ಎಂದು ಅಶೋಕ್ ರೈ ಹೇಳಿದರು. ವೇದಿಕೆಯಲ್ಲಿ ಕೆಪಿಸಿಸಿ ಸಂಯೋಜಕರಾದ ಕಾವು ಹೇಮನಾಥ ಶೆಟ್ಟಿ, ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಅಧ್ಯಕ್ಷ ಡಾ. ರಾಜಾರಾಂ ಕೆ ಬಿ, ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ಎಂ ಎಸ್ ಮಹಮ್ಮದ್ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.

Recent News


Leave a Comment: