ಮಂಗಳೂರು- ಸುಬ್ರಹ್ಮಣ್ಯ ಮಧ್ಯೆ ಪ್ಯಾಸೆಂಜರ್ ರೈಲು ಆರಂಭಿಸಲು ಸಂಸತ್ತಿನಲ್ಲಿ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಒತ್ತಾಯ

ಸುದ್ದಿಗಳು News

Posted by vidyamaana on 2024-07-24 16:52:02 |

Share: | | | | |


ಮಂಗಳೂರು- ಸುಬ್ರಹ್ಮಣ್ಯ ಮಧ್ಯೆ ಪ್ಯಾಸೆಂಜರ್ ರೈಲು ಆರಂಭಿಸಲು ಸಂಸತ್ತಿನಲ್ಲಿ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಒತ್ತಾಯ

ವದೆಹಲಿ : ಮಂಗಳೂರು- ಸುಬ್ರಹ್ಮಣ್ಯ ಮಧ್ಯೆ ಪ್ಯಾಸೆಂಜರ್ ರೈಲು ಆರಂಭಿಸಲು ಸಂಸತ್ತಿನಲ್ಲಿ ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಒತ್ತಾಯಿಸಿದರು.


ಈ ಹಿಂದೆ ಮಂಗಳೂರು- ಸುಬ್ರಹ್ಮಣ್ಯ ನಡುವೆ ಮೀಟರ್ ಗೇಜ್ ಹಳಿ ಇದ್ದಾಗ ಪ್ಯಾಸೆಂಜರ್ ರೈಲು ಓಡಾಟ ಇತ್ತು. ಬ್ರಾಡ್ ಗೇಜ್ ಹಳಿ ಮಾಡುವ ಸಲುವಾಗಿ 2005ರಲ್ಲಿ ಈ ರೈಲಿನ ಸಂಚಾರವನ್ನು ನಿಲ್ಲಿಸಲಾಗಿತ್ತು. ಆನಂತರ, ಬ್ರಾಡ್ ಗೇಜ್ ಹಳಿಯಾಗಿ ಪರಿವರ್ತನೆ ಮಾಡಲಾಗಿದೆ. ಅಂದು ಓಡುತ್ತಿದ್ದ ಪ್ಯಾಸೆಂಜರ್ ರೈಲು ಮಂಗಳೂರಿನಿಂದ ಕಬಕ- ಪುತ್ತೂರು ನಡುವೆ ಓಡಾಟ ನಡೆಸುತ್ತಿದ್ದು, ಅದನ್ನು ಸುಬ್ರಹ್ಮಣ್ಯದವರೆಗೆ ವಿಸ್ತರಣೆ ಮಾಡಬೇಕು.

ಮಂಗಳೂರು – ಸುಬ್ರಹ್ಮಣ್ಯ ಮಧ್ಯೆ ರೈಲು ಓಡಾಟವಾದರೆ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲೆ, ಕಾಲೇಜಿಗೆ ಹೋಗುವವರಿಗೆ ಉಪಯೋಗವಾಗಲಿದೆ. ಗ್ರಾಮಾಂತರ ಪ್ರದೇಶವಾದ ಸುಳ್ಯದಿಂದ ಮಂಗಳೂರಿಗೆ ಪ್ರತಿದಿನ ಓಡಾಟ ಮಾಡುವವರಿದ್ದಾರೆ. ಅವರಿಗೂ ಉಪಯುಕ್ತ ಆಗಲಿದೆ. ಇದು ಸೌತ್ ವೆಸ್ಟರ್ನ್ ರೈಲ್ವೇ ವಿಭಾಗದಲ್ಲಿದ್ದು, ನಮ್ಮ ಜಿಲ್ಲೆಯ ಒಳಗೆ ಸಂಚರಿಸುವ ಏಕೈಕ ಪ್ಯಾಸೆಂಜರ್ ರೈಲಾಗಿದೆ.


ಜನಸಾಮಾನ್ಯರ ಹಿತದೃಷ್ಟಿಯಿಂದ ಈ ರೈಲನ್ನು ಸುಬ್ರಹ್ಮಣ್ಯದವರೆಗೂ ವಿಸ್ತರಣೆ ಮಾಡಬೇಕು ಎಂದು ರೈಲ್ವೇ ಸಚಿವರನ್ನು ಮನವಿ ಮಾಡಿದ್ದಾರೆ. ಇದಕ್ಕುತ್ತರಿಸಿದ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್, ಸೇನೆಯಿಂದ ನಿವೃತ್ತಿ ಪಡೆದು ಸಂಸದರಾಗಿರುವ ಕ್ಯಾಪ್ಟನ್ ಬ್ರಿಜೇಶ್ ಚೌಟ ಬಗ್ಗೆ ಗೌರವ ಹೊಂದಿದ್ದು, ರೈಲ್ವೇ ವಿಚಾರಗಳ ಬಗ್ಗೆ ಯಾವುದೇ ಮನವಿಯಿದ್ದರೂ ನನ್ನ ಕಚೇರಿಗೆ ಬಂದು ವೈಯಕ್ತಿಕವಾಗಿ ಚರ್ಚಿಸಬಹುದು. ಪರಿಹರಿಸಲು ಮುಕ್ತನಿದ್ದೇನೆ ಎಂದು ಹೇಳಿದರು.

 Share: | | | | |


ಭಾರತದ ಕನಸಿನ ತೇರು: ಚಂದ್ರಯಾನ-3 ಉಪಗ್ರಹ ಹೊತ್ತ ನೌಕೆ ಯಶಸ್ವಿ ಉಡಾವಣೆ

Posted by Vidyamaana on 2023-07-14 09:47:39 |

Share: | | | | |


ಭಾರತದ ಕನಸಿನ ತೇರು: ಚಂದ್ರಯಾನ-3 ಉಪಗ್ರಹ ಹೊತ್ತ ನೌಕೆ ಯಶಸ್ವಿ ಉಡಾವಣೆ

ಶ್ರೀಹರಿಕೋಟಾ: 9.8.7.6.5.4.3…2…1..0 ಅಗ್ನಿ ಜ್ವಾಲೆಯನ್ನು ಉಗುಳುತ್ತಾ ಕೋಟಿ ಕೋಟಿ ಭಾರತೀಯರ ಕನಸಾದ ಚಂದ್ರಯಾನ -3 ಉಪಗ್ರಹವನ್ನು ಹೊತ್ತ ಮಾರ್ಕ್ 3 ನೌಕೆ ನಭಕ್ಕೆ ಹಾರಿದೆ. ಆಂಧ್ರ ಪ್ರದೇಶದ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಇಸ್ರೋದ ಮಹಾತ್ವಕಾಂಕ್ಷೆಯ ಚಂದ್ರಯಾನ -3 ಶಶಾಂಕ ದಕ್ಷಿಣ ಧ್ರುವದತ್ತ ಪ್ರಯಾಣ ಬೆಳೆಸಿದೆಚಂದ್ರಯಾನ-3 ಗಗನನೌಕೆಯು ಪ್ರೊಪಲ್ಷನ್‌ ಮಾಡ್ಯೂಲ್‌, ಲ್ಯಾಂಡರ್‌, ರೋವರ್‌ ಹೊತ್ತೊಯ್ದಿದೆ. ಇದರ ಒಟ್ಟು ತೂಕ 3,926 ಕೆಜಿ. ಪ್ರೊಪಲ್ಷನ್‌ ಮಾಡ್ಯೂಲ್‌ ತೂಕವು 2,148 ಕೆಜಿ, ಲ್ಯಾಂಡರ್‌ (ರೋವರ್‌ ಸಹಿತ) 1,752 ಕೆಜಿ, ರೋವರ್‌ 26 ಕೆಜಿ ತೂಕವಿದೆ. ಪ್ರೊಪಲ್ಷನ್‌ ಮಾಡ್ಯೂಲ್‌ 3 ರಿಂದ 6 ತಿಂಗಳ ಜೀವಿತಾವಧಿ ಹೊಂದಿದೆ. ಲ್ಯಾಂಡರ್‌, ರೋವರ್‌ ಜೀವಿತಾವಧಿ 1 ಚಂದ್ರನ ದಿನ (14 ಭೂಮಿ ದಿನಗಳು) ಇರಲಿದೆ (ಚಂದ್ರನ ಹಗಲಿನಲ್ಲಿ ಚಾರ್ಜ್‌ ಆಗಲಿದೆ). ಈ ನೌಕೆ ಚಂದ್ರನಲ್ಲಿ ತಲುಪಲು 42 ದಿನಗಳನ್ನು ತೆಗೆದುಕೊಳ್ಳಲಿದೆ. ಅಂದರೆ ಆಗಸ್ಟ್ 23 ಅಥವಾ 24ರಂದು ಚಂದ್ರನಲ್ಲಿ ಇಳಿಯಲಿದೆ.


ಈವರೆಗೆ ಯಾವುದೇ ಉಪಕರಣಗಳು ಹೋಗದ ಚಂದ್ರನ ದಕ್ಷಿಣ ಧ್ರುವದಲ್ಲಿ ಇಸ್ರೋ ತನ್ನ ನೌಕೆಯನ್ನು ಇಳಿಸುವ ಸಾಹಸಕ್ಕೆ ಮುಂದಾಗಿದೆ. ಚಂದ್ರನ ಅಧ್ಯಯನಕ್ಕೆ 2019ರ ಜು.22ರಂದು ಇಸ್ರೋ ಕೈಗೊಂಡಿದ್ದ ಚಂದ್ರಯಾನ-2 ಯೋಜನೆ ವಿಫಲವಾದ ಕಾರಣ ಮತ್ತೊಂದು ಚಂದ್ರಯಾನ ಯೋಜನೆಯನ್ನು ಇಸ್ರೋ ಕೈಗೆತ್ತಿಕೊಂಡಿದೆ. ಈ ಬಾರಿ ನೌಕೆ ಇಳಿಸಲು 4 ಕಿ.ಮೀ. X 2.5 ಕಿ.ಮೀ.ನ ವಿಶಾಲ ಸ್ಥಳವನ್ನು ಗುರುತಿಸಲಾಗಿದೆ. ಚಂದ್ರನ ದಕ್ಷಿಣ ಧ್ರುವದಲ್ಲಿ ಉಷ್ಣಾಂಶ -230 ಡಿ.ಸೆ. ಗಿಂತ ಕಡಿಮೆ ಇದ್ದು, ಇಲ್ಲಿ ಬಹುಕಾಲದವರಗೆ ಹೆಪ್ಪುಗಟ್ಟಿದ ಸ್ಥಿತಿಯಲ್ಲಿ ಪಳೆಯುಳಿಕೆಗಳು ಇರುವ ಅಂದಾಜಿದೆ. ಅಲ್ಲದೆ, 2008ರಲ್ಲಿ ಕೈಗೊಂಡ ಚಂದ್ರಯಾನ-1 ಚಂದ್ರನ ದಕ್ಷಿಣ ಧ್ರುವದಲ್ಲಿ ನೀರಿದೆ ಎಂಬುದು ಪತ್ತೆ ಹಚ್ಚಿದ ಹಿನ್ನೆಲೆಯಲ್ಲಿ ದಕ್ಷಿಣ ಧ್ರುವವನ್ನೇ ಆಯ್ಕೆ ಮಾಡಿಕೊಳ್ಳಲಾಗಿದೆ. ಅಲ್ಲದೆ, ದಕ್ಷಿಣ ಧ್ರುವದಲ್ಲಿ ಈ ವರೆಗೂ ಬೆಳಕನ್ನೇ ಕಾಣದ ಹಲವು ಪ್ರದೇಶಗಳಿರುವ ಕಾರಣ ಇದು ವಿಜ್ಞಾನಿಗಳಲ್ಲಿ ಸಾಕಷ್ಟು ಕುತೂಹಲ ಮೂಡಿಸಿದೆ.

ಪುತ್ತೂರು : ನೆಹರುನಗರದಲ್ಲಿ ರೈಲ್ವೇ ಮೇಲ್ವೇತುವೆ ಪುನರ್‌ನಿರ್ಮಾಣ ಹಿನ್ನೆಲೆ

Posted by Vidyamaana on 2023-11-16 13:26:14 |

Share: | | | | |


ಪುತ್ತೂರು : ನೆಹರುನಗರದಲ್ಲಿ ರೈಲ್ವೇ ಮೇಲ್ವೇತುವೆ ಪುನರ್‌ನಿರ್ಮಾಣ ಹಿನ್ನೆಲೆ

ಪುತ್ತೂರು – ನೇರಳಕಟ್ಟೆ ರೈಲು ನಿಲ್ದಾಣಗಳ ನಡುವೆ ಇರುವ ಮೇಲ್ಲೇತುವೆ ಸಂಖ್ಯೆ 520 ಇದರ ಪುನರ್ ನಿರ್ಮಾಣಕ್ಕೆ ಸ೦ಬ೦ಧಿಸಿದ೦ತೆ ನೆಹರುನಗರ ವಿವೇಕಾನಂದ ಕಾಲೇಜು ರಸ್ತೆಯನ್ನು ತಾತ್ಕಾಲಿಕವಾಗಿ ಮುಚ್ಚಲಾಗುವುದು ಎಂದು ಸೌತ್ ವೆಸ್ಟರ್ನ್ ರೈಲ್ವೇ ಪ್ರಕಟಣೆಯಲ್ಲಿ ತಿಳಿಸಿದೆ.


ರೈಲ್ವೆ ಮೇಲೇತುವೆ ಪುನರ್ ನಿರ್ಮಾಣಕ್ಕೆ ಸಂಬಂಧಿಸಿ ನ.15ರಿಂದ ಕಾಮಗಾರಿ ಆರ೦ಭಿಸುವ ನಿಟ್ಟಿನಲ್ಲಿ ರಸ್ತೆ ಮುಚ್ಚಲು ಜಿಲ್ಲಾಧಿಕಾರಿಯವರು ಅನುಮತಿ ನೀಡಿದ್ದರು. ಆದರೆ ನ.16ರಂದು ಶಿಲಾನ್ಯಾಸ ಕಾರ್ಯಕ್ರಮ ನಡೆದ ಬಳಿಕ ನ.17ರಿಂದ ಮುಂದಿನ ಮೂರು ತಿಂಗಳು ನೆಹರುನಗರ ವಿವೇಕಾನಂದ ರಸ್ತೆಯನ್ನು ಮುಚ್ಚಲಾಗುವುದು ಎಂದು ರೈಲ್ವೇ ಸೌತ್ ವೆಸ್ಟರ್ನ್ ರೈಲ್ವೇಯ ಸಕಲೇಶಪುರ ವಿಭಾಗದ ಸಹಾಯಕ ವಿಭಾಗೀಯ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮುರದಿಂದ ಪರ್ಯಾಯ ರಸ್ತೆ:

ನೆಹರುನಗರ ವಿವೇಕಾನಂದ ಕಾಲೇಜು ರಸ್ತೆಯನ್ನು ತಾತ್ಕಾಲಿಕವಾಗಿ ಮುಚ್ಚಿದ ಬಳಿಕ ಲಘು ವಾಹನಗಳಿಗೆ ಪರ್ಯಾಯ ವ್ಯವಸ್ಥೆಯಾಗಿ ಮುರದಿಂದ ತೆರಳಲು ಅವಕಾಶವಿದೆ. ಉಳಿದಂತೆ ಹಾರಾಡಿ ಬನ್ನೂರು, ಪಡೀಲು ರಸ್ತೆಯಾಗಿಯೂ ಕಾಲೇಜು ರಸ್ತೆಯನ್ನು ಸಂಪರ್ಕಿಸಬಹುದು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ



ಉಪ್ಪಿನಂಗಡಿ: ಪೆರಿಯಡ್ಕ ಹಾಲು ಉತ್ಪಾದಕರ ಸೊಸೈಟಿಯಲ್ಲಿ ಕಳ್ಳತನ

Posted by Vidyamaana on 2024-03-21 20:40:14 |

Share: | | | | |


ಉಪ್ಪಿನಂಗಡಿ: ಪೆರಿಯಡ್ಕ ಹಾಲು ಉತ್ಪಾದಕರ ಸೊಸೈಟಿಯಲ್ಲಿ ಕಳ್ಳತನ

ಉಪ್ಪಿನಂಗಡಿ :ಪೆರಿಯಡ್ಕದ ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ನುಗ್ಗಿದ ಕಳ್ಳನೋರ್ವ ಹಣಕ್ಕಾಗಿ ತಡಕಾಡಿದ ಘಟನೆ ಮಾ. 20ರಂದು ಬೆಳಕಿಗೆ ಬಂದಿದೆ.

ಮಾ. 19ರ ಸಂಜೆ ಸಂಘದ ಕಚೇರಿಯನ್ನು ಬಂದ್‌ ಮಾಡಿ ಸಿಬಂದಿ ತೆರಳಿದ್ದು, ಬೆಳಗ್ಗೆ ಬರುವಾಗ ಕಚೇರಿಯ ಷಟರ್‌ನ ಬೀಗ ಮುರಿದು ಕಳ್ಳನೋರ್ವ ಒಳಗೆ ನುಗ್ಗಿದ್ದಾನೆ. . ಈತ ಹಣಕ್ಕಾಗಿ ಮೇಜಿನ ಡ್ರಾವರ್‌ಗಳನ್ನು ಮುರಿದು ಸುಮಾರು ಒಂದೂವರೆ ಸಾವಿರ ರೂ. ಎಗರಿಸಿ, ಪರಾರಿಯಾಗಿದ್ದಾನೆ.

ಸ್ಥಳೀಯ ಮನೆಯೊಂದರಿಂದ ಪಿಕ್ಕಾಸನ್ನು ತಂದು ಷಟರ್‌ನ ಬೀಗ ಮುರಿಯಲು ಬಳಸಿದ್ದ ಎಂದು ತಿಳಿದು ಬಂದಿದೆ. ಗುರುತು ಸಿಗದಂತೆ ಮುಖಕ್ಕೆ ಬಟ್ಟೆಯನ್ನು ಸುತ್ತಿಕೊಂಡಿದ್ದ ಈತನ ಚಲನವಲನಗಳು ಸಂಘದ ಸಿಸಿ ಕೆಮರಾದಲ್ಲಿ ಪತ್ತೆಯಾಗಿವೆ. ಉಪ್ಪಿನಂಗಡಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

KSRTC Bus: ರಾಜ್ಯದಲ್ಲಿ ರೋಡಿಗಿಳಿದ ಪಲ್ಲಕ್ಕಿ ಬಸ್‌ಗಳು- ಏನೇನು ವೈಶಿಷ್ಟ್ಯ? ಎಲ್ಲೆಲ್ಲಿ ಸಂಚಾರ? ಮಾಹಿತಿ ವಿವರ

Posted by Vidyamaana on 2023-10-08 08:40:51 |

Share: | | | | |


KSRTC Bus: ರಾಜ್ಯದಲ್ಲಿ ರೋಡಿಗಿಳಿದ ಪಲ್ಲಕ್ಕಿ ಬಸ್‌ಗಳು- ಏನೇನು ವೈಶಿಷ್ಟ್ಯ? ಎಲ್ಲೆಲ್ಲಿ ಸಂಚಾರ? ಮಾಹಿತಿ ವಿವರ

ಬೆಂಗಳೂರು: ಬಹುನಿರೀಕ್ಷಿತ ನಾನ್‌ ಎಸಿ ಪಲ್ಲಕ್ಕಿ ಬಸ್‌ಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಚಾಲನೆ ನೀಡಿದರು. 40 ನಾನ್‌ ಎಸಿ ಸ್ಲೀಪರ್ ಪಲ್ಲಕ್ಕಿ ಬಸ್‌ಗಳೊಂದಿಗೆ 100 ಹೊಸ ಬಸ್‌ಗಳನ್ನು ಕೆಎಸ್‌ಆರ್‌ಟಿಸಿ ಹೊರತಂದಿದೆ.ನೂತನ ಬಸ್‌ಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ವಿಧಾನಸೌಧದ ಮೆಟ್ಟಿಲುಗಳ ಬಳಿ ಚಾಲನೆ ನೀಡಿದರು. ಈ ವೇಳೆ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಹಾಗೂ ಕೆಎಸ್‌ಆರ್‌ಟಿಸಿ ಅಧಿಕಾರಿಗಳು ಹಾಜರಿದ್ದರು.

ಅಸಿಡಿಟಿಯ ಎದೆ ಉರಿಯನ್ನು ಮತ್ತು ಎದೆ ನೋವಿನ ಉರಿಯನ್ನು ಐಡೆಂಟಿಫೈ ಮಾಡೋದು ತುಂಬಾ ಸುಲಭ: ಡಾ. ಜೆ ಸಿ ಅಡಿಗ


ಪಲ್ಲಕ್ಕಿ ಎಂದು ಹೆಸರಿಸಲಾಗಿರುವ ಸ್ಲೀಪರ್ ಬಸ್‌ಗಳು ಅಂತರರಾಜ್ಯಗಳಿಗೆ ಹಾಗೂ ರಾಜ್ಯದ ಪ್ರಮುಖ ನಗರಗಳ ನಡುವೆ ಸಂಚರಿಸಲಿವೆ.ಪ್ರಸ್ತುತ ಕರ್ನಾಟಕದ ನಾಲ್ಕು ಬಸ್‌ ಘಟಕಗಳು ರಾಜ್ಯದಾದ್ಯಂತ 23,989 ಬಸ್‌ಗಳನ್ನು ನಿರ್ವಹಿಸುತ್ತವೆ. ದಿನಕ್ಕೆ ಸರಾಸರಿ 65.02 ಲಕ್ಷ ಕಿಲೋಮೀಟರ್ ಓಡುತ್ತವೆ.


ಸಿದ್ದರಾಮಯ್ಯ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಒದಗಿಸುವ ಶಕ್ತಿ ಯೋಜನೆಯನ್ನು ಪ್ರಾರಂಭಿಸಿದೆ. ಈ ಹಿನ್ನೆಲೆಯಲ್ಲಿ ಬಸ್‌ಗಳಿಗೆ ಹೆಚ್ಚು ಬೇಡಿಕೆ ಇದೆ. ಬಸ್‌ಗಳಲ್ಲಿ ಜನಸಂದಣಿಯನ್ನು ಕಡಿಮೆ ಮಾಡಲು ನೂರಾರು ಹೊಸ ಬಸ್‌ಗಳಿಗೆ ಚಾಲನೆ ನೀಡಲು ಸರ್ಕಾರ ಮುಂದಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದರು.ಈಗ ಬಿಡುಗಡೆಯಾಗಿರುವ ನಲವತ್ತು ಪಲ್ಲಕ್ಕಿ ಬಸ್‌ಗಳಲ್ಲಿ ಮೂವತ್ತು ಬಸ್‌ಗಳು ಕರ್ನಾಟಕದಲ್ಲಿಯೇ ಸಂಚಾರ ನಡೆಸಲಿವೆ. ಉಳಿದ ಹತ್ತು ಬಸ್‌ಗಳು ಬೇರೆ ರಾಜ್ಯಗಳಿಗೆ ತೆರಳಿವೆ ಎಂದು ಕೆಎಸ್‌ಆರ್‌ಟಿಸಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಸಿದ್ದರಾಮಯ್ಯ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಒದಗಿಸುವ ಶಕ್ತಿ ಯೋಜನೆಯನ್ನು ಪ್ರಾರಂಭಿಸಿದೆ. ಈ ಹಿನ್ನೆಲೆಯಲ್ಲಿ ಬಸ್‌ಗಳಿಗೆ ಹೆಚ್ಚು ಬೇಡಿಕೆ ಇದೆ. ಬಸ್‌ಗಳಲ್ಲಿ ಜನಸಂದಣಿಯನ್ನು ಕಡಿಮೆ ಮಾಡಲು ನೂರಾರು ಹೊಸ ಬಸ್‌ಗಳಿಗೆ ಚಾಲನೆ ನೀಡಲು ಸರ್ಕಾರ ಮುಂದಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದರು.


ಈಗ ಬಿಡುಗಡೆಯಾಗಿರುವ ನಲವತ್ತು ಪಲ್ಲಕ್ಕಿ ಬಸ್‌ಗಳಲ್ಲಿ ಮೂವತ್ತು ಬಸ್‌ಗಳು ಕರ್ನಾಟಕದಲ್ಲಿಯೇ ಸಂಚಾರ ನಡೆಸಲಿವೆ. ಉಳಿದ ಹತ್ತು ಬಸ್‌ಗಳು ಬೇರೆ ರಾಜ್ಯಗಳಿಗೆ ತೆರಳಿವೆ ಎಂದು ಕೆಎಸ್‌ಆರ್‌ಟಿಸಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಹೊಸ ಪಲ್ಲಕ್ಕಿ ಬಸ್‌ಗಳ ವೈಶಿಷ್ಟ್ಯ ತಿಳಿಯಿರಿ

- ಈ ಬಸ್‌ಗಳು 11.3 ಮೀಟರ್ ಉದ್ದವಾಗಿವೆ

- ಎಚ್ಪಿ ಕಂಪನಿಯ ಬಿಎಸ್-6 ತಂತ್ರಜ್ಞಾನವನ್ನು ಬಳಸಿ ಇಂಜಿನ್ ತಯಾರಿಸಲಾಗಿದೆ

- ಇವುಗಳಲ್ಲಿ 28 ಹೈಟೆಕ್ ಸ್ಲೀಪರ್ ಬರ್ತ್ ಸೀಟುಗಳು ಇವೆ

- ಪ್ರತಿ ಆಸನಕ್ಕೂ ಮೊಬೈಲ್ ಸ್ಟ್ಯಾಂಡ್‌ಗಳಿವೆ

- ಮೊಬೈಲ್ ಮತ್ತು ಲ್ಯಾಪ್‌ಟಾಪ್ ಚಾರ್ಜಿಂಗ್ ಸೌಲಭ್ಯಗಳನ್ನು ಈ ಬಸ್‌ಗಳು ಹೊಂದಿವೆ

- ರಾತ್ರಿ ವೇಳೆ ಸೀಟ್‌ಗಳ ಸಂಖ್ಯೆಗಳನ್ನು ಸುಲಭವಾಗಿ ಗುರುತಿಸಲು ಎಲ್ಇಡಿ ವ್ಯವಸ್ಥೆ ಮಾಡಲಾಗಿದೆ

- ಪ್ರಯಾಣದ ವೇಳೆ ಓದಲು ಸುಧಾರಿತ ಎಲ್ಇಡಿ ಬೆಳಕಿನ ವ್ಯವಸ್ಥೆ ಇದೆ

- ಪ್ರಯಾಣಿಕರ ಮಾಹಿತಿಗಾಗಿ ಆಡಿಯೋ ರಿಸೀವರ್‌ಗಳನ್ನು ಅಳವಡಿಸಲಾಗಿದೆ

- ಪಲ್ಲಕ್ಕಿ ಬಸ್‌ಗಳಲ್ಲಿ ಡಿಜಿಟಲ್ ಗಡಿಯಾರ ಮತ್ತು ಎಲ್ಇಡಿ ನೆಲಹಾಸಿನ ವ್ಯವಸ್ಥೆಯನ್ನು ಅಳವಡಿಸಲಾಗಿದೆ

- ಚಪ್ಪಲಿ ಅಥವಾ ಬೂಟ್‌ಗಳನ್ನು ಇಡಲು ಪ್ರತಿ ಪ್ರಯಾಣಿಕರಿಗೆ ಅನುಕೂಲಕರ ಸ್ಥಳವನ್ನು ಕಲ್ಪಿಸಲಾಗಿದೆ

- ಪ್ರತಿ ಸ್ಲೀಪರ್‌ ಸೀಟುಗಳಲ್ಲಿ ದಿಂಬಿನ ವ್ಯವಸ್ಥೆ ಮಾಡಲಾಗಿದೆ

- ಚಾಲಕನಿಗೆ ಸಹಾಯ ಮಾಡಲು ಬಸ್‌ನ ಹಿಂಭಾಗದಲ್ಲಿ ಹೈಟೆಕ್ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ

ಬನ್ನೂರು: ರೈ ಚಾರಿಟೇಬಲ್‌ಟ್ರಸ್ಟ್ ಫಲಾನುಭವಿಗಳ ಸಭೆ

Posted by Vidyamaana on 2023-11-02 18:15:15 |

Share: | | | | |


ಬನ್ನೂರು: ರೈ ಚಾರಿಟೇಬಲ್‌ಟ್ರಸ್ಟ್ ಫಲಾನುಭವಿಗಳ ಸಭೆ

ಪುತ್ತೂರು: ಕಳೆದ ಹತ್ತು ವರ್ಷಗಳ ಹಿಂದೆ ರೈ ಎಸ್ಟೇಟ್ ಎಜುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟನ್ನು ಸ್ತಾಪನೆ ಮಾಡಿದ್ದೇ ಬಡವರ ಸೇವೆಗಾಗಿ, ಇದರಲ್ಲಿ ಯಾವುದೇ ರಾಜಕೀಯವಿಲ್ಲ, ಅಶೋಕ್ ರೈಯವರು ಶಾಸಕರಾಗುವ ಮೊದಲೇ ಟ್ರಸ್ಟ್‌ನಿಂದ ಸಮಾಜ ಸೇವೆ ನಡೆಯುತ್ತಲೇ ಇದೆ ಎಂದು ಟ್ರಸ್ಟ್‌ನ ಪ್ರಮುಖರಾದ ನಿಹಾಲ್ ಶೆಟ್ಟಿ ಹೇಳಿದರು.


ಅವರು ಬನ್ನೂರು ನವೋದಯ ಯುವಕ ಮಂಡಲದ ಸಭಾಂಗಣದಲ್ಲಿ ನಡೆದ ರೈ ಚಾರಿಟೇಬಲ್ ಟ್ರಸ್ಟ್ ಫಲಾನುಭವಿಗಳ ಸಭೆಯಲ್ಲಿ ಮಾತನಾಡಿದರು.


ಕಳೆದ ಹತ್ತು ವರ್ಷಗಳಿಂದ ವಿವಿಧ ಸೇವೆಗಳನ್ನು ಟ್ರಸ್ಟ್ ನೀಡುತ್ತಾ ಬಂದಿದೆ. ಬಡ ಮಹಿಳೆಯರಿಗೆ ಹೊಲಿಗೆ ತರಬೇತಿ , ಚಾಲನಾ ತರಬೇತಿ, ಮೆಡಿಕಲ್ ಕ್ಯಾಂಪ್, ಬಡವರಿಗೆ ಆರ್ಥಿಕ ನೆರವು ಸೇರಿದಂತೆ ಅನೇಕ ಬಡವರ ಸಮಾಜಮುಖಿ ಕೆಲಸಗಳನ್ನು ಮಾಡಿಕೊಂಡು ಬರುತ್ತಿದೆ. ಟ್ರಸ್ಟ್ ಮೂಲಕ ತರಬೇತಿ ಪಡೆದ ಅನೇಕ ಮಂದಿ ಸ್ವ ಉದ್ಯೋಗದಲ್ಲಿ ತೊಡಗಿಸಿಕೊಂಡು ಸ್ವಾಭಿಮಾನಿಗಳಾಗಿದ್ದು ಅತ್ಯಂತ ಸಂತೋಷದ ವಿಚಾರವಾಗಿದೆ. ಬಡವರ ಮಕ್ಕಳ ವಿದ್ಯಾಬ್ಯಾಸಕ್ಕೆ ಟ್ರಸ್ಟ್‌ನಿಂದ ಆರ್ಥಿಕ ನೆರವು ನೀಡಲಾಗುತ್ತಿದೆ. ಈ ಬಾರಿಯ ದೀಪಾವಳಿಯಲ್ಲೂ ಬಡವರಿಗೆ ವಸ್ತ್ರ ವಿತರಣೆ ಹಾಗೂ ಸಹಭೋಜನ ಕಾರ್ಯಕ್ರಮ ನಡೆಯಲಿದ್ದು ಎಲ್ಲಾ ಗ್ರಾಮಸ್ಥರು ಇದರಲ್ಲಿ ಭಾಗವಹಿಸುವಂತೆ ಮನವಿ ಮಾಡಿದರು.


ವೇದಿಕೆಯಲ್ಲಿ ಟ್ರಸ್ಟ್‌ನ ಕಾರ್ಯಾಧ್ಯಕ್ಷರಾದ ಸುದೇಶ್ ಶೆಟ್ಟಿ, ಬನ್ನೂರು ನವೋದಯ ಯುವಕಮಂಡಲದ ಅಧ್ಯಕ್ಷರಾದ ರಾಧಾಕೃಷ್ಣ ರೈ, ಕಾರ್ಯದರ್ಶಿ ರೋಹಿತ್ ರೈ, ಚಂಧ್ರಾಕ್ಷ, ದಿನೇಶ್ ಸಾಲಿಯಾನ್, ಸಾಹಿರಾ ಬಾನು ಸೇರಿದಂತೆ ಟ್ರಸ್ಟ್‌ನ ಸದಸ್ಯರು ಹಾಗೂ ಗ್ರಾಮಸ್ಥರು ಉಪಸ್ತಿತರಿದ್ದರು.

8ನೇ ಸುತ್ತಿನ ಫಲಿತಾಂಶ ಮುನ್ನಡೆಯಲ್ಲಿ ಪುತ್ತಿಲ ರೈಗೆ ಪ್ರಬಲ ಪೈಪೋಟಿ ನೀಡುತ್ತಿರುವ ಪುತ್ತಿಲ

Posted by Vidyamaana on 2023-05-13 05:59:37 |

Share: | | | | |


8ನೇ ಸುತ್ತಿನ ಫಲಿತಾಂಶ  ಮುನ್ನಡೆಯಲ್ಲಿ ಪುತ್ತಿಲ  ರೈಗೆ ಪ್ರಬಲ ಪೈಪೋಟಿ ನೀಡುತ್ತಿರುವ ಪುತ್ತಿಲ

ಪುತ್ತೂರು : ಪುತ್ತೂರಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ರೈ – 31670, ಪಕ್ಷೇತರ ಅಭ್ಯರ್ಥಿ ಅರುಣ್ ಪುತ್ತಿಲ – 32,226 ಮತ ಪಡೆದಿದ್ದಾರೆ.


ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ಮುನ್ನಡೆ ಪಡೆದಿದ್ದಾರೆ.


ಅಶೋಕ್ ರೈ – 31670 ಮತಗಳು


ಆಶಾ ತಿಮ್ಮಪ್ಪ ಗೌಡ – 20,126 ಮತಗಳು


ಅರುಣ್ ಕುಮಾರ್ ಪುತ್ತಿಲ – 32,226 ಮತಗಳು

Recent News


Leave a Comment: